Tag: law

  • ಮೋದಿ ತವರಲ್ಲಿ `ಏಕರೂಪ ನಾಗರಿಕ ಸಂಹಿತೆ’ಗೆ ಸಿದ್ಧತೆ – ಜಾರಿಯಾದ್ರೆ ಎಲ್ಲಾ ಧರ್ಮಗಳಿಗೂ ಒಂದೇ ಕಾನೂನು

    ಮೋದಿ ತವರಲ್ಲಿ `ಏಕರೂಪ ನಾಗರಿಕ ಸಂಹಿತೆ’ಗೆ ಸಿದ್ಧತೆ – ಜಾರಿಯಾದ್ರೆ ಎಲ್ಲಾ ಧರ್ಮಗಳಿಗೂ ಒಂದೇ ಕಾನೂನು

    ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಮೋದಿ (Narendra Modi) ತವರು ಗುಜರಾತ್‌ನಲ್ಲಿ `ಏಕರೂಪದ ನಾಗರಿಕ ಸಂಹಿತೆ’ (UCC) ಜಾರಿ ಸಂಬಂಧ ಬಿಜೆಪಿ ಸರ್ಕಾರ (BJP Government) ಮಹತ್ವದ ತೀರ್ಮಾನ ಪ್ರಕಟಿಸಿದೆ.

    ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಲುವಾಗಿ ಸವಿಸ್ತಾರ ಅಧ್ಯಯನ ನಡೆಸಲು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸವುದಾಗಿ ಘೋಷಿಸಿದೆ. ಇದನ್ನೂ ಓದಿ: ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನ – ತುಮಕೂರಿಗೂ ಲಗ್ಗೆ ಇಟ್ಟ ನಕಲಿ ಭಗವದ್ಗೀತೆ ಪುಸ್ತಕ ಜಾಲ

    ಬಿಜೆಪಿ 2019ರ ಲೋಕಸಭಾ ಚುನಾವಣೆಯ (Elections) ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರೋದಾಗಿ ಭರವಸೆ ನೀಡಿತ್ತು. ಇತ್ತೀಚೆಗೆ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರಗಳೂ ಸಂಹಿತೆ ಜಾರಿಗೊಳಿಸಲು ಸಮಿತಿಗಳನ್ನು ರಚನೆ ಮಾಡಿದ್ದವು. ಈ ರಾಜ್ಯಗಳ ಸಾಲಿಗೆ ಇದೀಗ ಗುಜರಾತ್ ಸಹ ಸೇರ್ಪಡೆಯಾಗಿದೆ. ಇದನ್ನೂ ಓದಿ: ಶಾಸಕ ಬೆಲ್ಲದ್‌ ಹೆಸರಿನಲ್ಲಿ ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಸಮಿತಿ ರಚನೆ:
    ಏಕರೂಪ ನಾಗರಿಕ ಸಂಹಿತೆ ಅನುಷ್ಠಾನಕ್ಕಾಗಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಸಮುತಿಯು 3 ರಿಂದ 4 ಸದಸ್ಯರನ್ನ ಹೊಂದಿರಲಿದೆ. ಚುನಾವಣೆ ನೀತಿ ಸಂಹಿತೆಗೂ ಮುನ್ನವೇ ಈ ಸಂಹಿತೆ ಜಾರಿಯಾಗಲಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ, ಕೇಂದ್ರ ಸಚಿವ ಪುರುಷೋತ್ತಮ ರೂಪಾಲಾ ತಿಳಿಸಿದ್ದಾರೆ. ಇದನ್ನೂ ಓದಿ:  ದೇಗುಲ ಸ್ಫೋಟಿಸಲು ಬಂದಿದ್ದ ಬಾಂಬರ್ – ಸಾಹಿತ್ಯ ಓದಿಕೊಂಡೇ ISIS ಮೂಲಭೂತವಾದಿಯಾಗಿದ್ದ

    ಏನಿದು ಏಕರೂಪ ನಾಗರಿಕ ಸಂಹಿತೆ?
    ಹಿಂದೂ (Hindu), ಮುಸ್ಲಿಂ (Muslims), ಸಿಖ್ಖರು ಸೇರಿದಂತೆ ದೇಶದ ವಿವಿಧ ಧರ್ಮಗಳ ಜನರು ವಿವಾಹ, ಆಸ್ತಿ ಹಂಚಿಕೆ ಸೇರಿ ವಿವಿಧ ಉದ್ದೇಶಗಳೊಗೆ ತಮ್ಮ ಸಮುದಾಯದ ವೈಯಕ್ತಿಕ ಕಾನೂನುಗಳನ್ನು ಪಾಲಿಸುತ್ತಿದ್ದಾರೆ. ಹಾಗಾಗಿ ಎಲ್ಲ ಧರ್ಮದವರಿಗೂ ವಿವಾಹ ವಿಚ್ಛೇದನ, ಅಸ್ತಿ ದತ್ತುಗೆ ಸಂಬಂಧಿಸಿದ ವಿಚಾರಗಳಿಗೆ ಒಂದೇ ಕಾನೂನು ರೂಪಿಸುವುದೇ ಏಕರೂಪ ನಾಗರಿಕ ಸಂಹಿತೆಯಾಗಿದೆ.

    ಸಂಹಿತೆ ಏಕೆ?
    ರಾಜ್ಯದಲ್ಲಿ ಹಿಂದೂ ವಿವಾಹ ಕಾನೂನುಗಳು ಬೇರೆ-ಬೇರೆಯಾಗಿದ್ದು, ವಿವಿಧ ಸಮಸ್ಯೆಗಳಿಗೆ ಕಾರಣವಾಗಿದೆ. ಅಲ್ಲದೇ ಆಯಾ ವೈಯಕ್ತಿಕ ಧರ್ಮಗಳಲ್ಲಿ (Relegions) ಪ್ರತ್ಯೇಕ ನಿಯಮ ಇರುವ ಕಾರಣ. ಆಸ್ತಿ ವ್ಯಾಜ್ಯಗಳೂ ಹೆಚ್ಚಾಗಿವೆ. ಮಹಿಳೆಯರಿಗೆ ಪತಿ ಅಥವಾ ತಂದೆಯ ಆಸ್ತಿಯಲ್ಲಿ ಪಾಲು ಸಿಗುತ್ತಿಲ್ಲ ಎನ್ನುವ ದೂರುಗಳು ಬರುತ್ತಲೇ ಇರುತ್ತವೆ. ಇದೆಲ್ಲದಕ್ಕೂ ಅಂತ್ಯವಾಡಲು ಒಂದೇ ಕಾನುನು ರೂಪಿಸಿ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರಲು ಮುಂದಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನ್ಯಾಯ ಸಿಗೋದು ವಿಳಂಬವಾಗ್ತಿರೋದೇ ಜನರಿಗೆ ಬಹುದೊಡ್ಡ ಸಮಸ್ಯೆ: ಮೋದಿ ವಿಷಾದ

    ನ್ಯಾಯ ಸಿಗೋದು ವಿಳಂಬವಾಗ್ತಿರೋದೇ ಜನರಿಗೆ ಬಹುದೊಡ್ಡ ಸಮಸ್ಯೆ: ಮೋದಿ ವಿಷಾದ

    ನವದೆಹಲಿ: ನ್ಯಾಯ (Justice) ಸಿಗುವುದರಲ್ಲಿ ವಿಳಂಬವಾಗುತ್ತಿರೋದೇ ದೇಶದ ಜನರು ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಷಾದ ವ್ಯಕ್ತಪಡಿಸಿದ್ದಾರೆ.

    ಗುಜರಾತ್‌ನ ಎಕ್ತಾ ನಗರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಕಾನೂನು ಸಚಿವರು (Law Minister) ಹಾಗೂ ಕಾನೂನು ಕಾರ್ಯದರ್ಶಿಗಳ ಎರಡು ದಿನಗಳ ಸಮ್ಮೇಳನವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನುಗಳನ್ನು ಸ್ಪಷ್ಟ ರೀತಿಯಲ್ಲಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ (Regional Language) ಬರೆಯಬೇಕು. ಇದರಿಂದ ಬಡವರು, ಅನಕ್ಷರಸ್ಥರು ಕಾನೂನನ್ನು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಫೇಲ್‌ ಆಗಿರೋ ರಾಹುಲ್‌ ಗಾಂಧಿ ಮಿಸೈಲ್‌ನ್ನು ಭಾರತ್‌ ಜೋಡೋ ಮೂಲಕ ರೀ ಲಾಂಚ್‌ ಮಾಡ್ತಿದ್ದಾರೆ – ಬೊಮ್ಮಾಯಿ

    ಕಾನೂನುಗಳು ಸರಳ ಮತ್ತು ಪ್ರಾದೇಶಿಕ ಭಾಷೆಯಲ್ಲಿರಬೇಕು. ಕಾನೂನು ಮತ್ತು ಸುವ್ಯವಸ್ಥೆಯು ಸಮಾಜದ ಪ್ರಗತಿಯೊಂದಿಗೆ ಅಭಿವೃದ್ಧಿಗೊಂಡಾಗ, ನ್ಯಾಯ ಸುಲಭವಾಗಿ ಲಭ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

    ನಮ್ಮ ದೇಶವು ಅಭಿವೃದ್ಧಿಯ ಪಥದಲ್ಲಿ ಸಾಗುವಾಗ ಆಂತರಿಕ ಸುಧಾರಣೆಗಳನ್ನು ಕೂಡ ಜೊತೆಗೆ ಕೊಂಡೊಯ್ದಿದೆ. ನಮ್ಮ ಸಮಾಜವು ಬಳಕೆಯಲ್ಲಿಲ್ಲದ ಕಾನೂನುಗಳು, ಕೆಟ್ಟ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಸ್ವಯಂಪ್ರೇರಣೆಯಿಂದ ತೊಡೆದುಹಾಕಿದೆ. ಕಳೆದ 8 ವರ್ಷಗಳಲ್ಲಿ ಜೀವನ ಮಟ್ಟ ಸುಧಾರಿಸಲು ನಾವು 32,000 ಅನುಸರಣೆಗಳನ್ನು ತೆಗೆದುಹಾಕಿದ್ದೇವೆ. ಆದರೆ ನ್ಯಾಯ ವಿತರಣೆ ಮಾಡುವುದರಲ್ಲಿ ವಿಳಂಬವಾಗುತ್ತಿರುವುದೇ ಸಮಸ್ಯೆಯಾಗಿದೆ. ಅದಕ್ಕಾಗಿ ಕಾನೂನನ್ನು ಶೀಘ್ರದಲ್ಲೇ ಪರಿಹರಿಸುವ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.  ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ಮುಂದುವರಿದ ದಾಳಿ- ಉಗ್ರರ ಗುಂಡಿಗೆ ಓರ್ವ ಬಲಿ

    ತಂತ್ರಜ್ಞಾನವು ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ. ವರ್ಚುವಲ್ ಹಿಯರಿಂಗ್ ಮತ್ತು ಇ-ಫೈಲಿಂಗ್‌ನಂತಹ ಕಾನೂನು ಸೇವೆಗಳಲ್ಲಿ ಡಿಜಿಟಲ್ ಆವಿಷ್ಕಾರಗಳನ್ನು ಈಗಾಗಲೇ ಭಾರತದಲ್ಲಿ ಪ್ರಾರಂಭಿಸಲಾಗಿದೆ. 5G ಸೇವೆಗಳು (5G Technology) ಈ ತಂತ್ರಜ್ಞಾನಗಳನ್ನು ಇನ್ನಷ್ಟು ಬಲಪಡಿಸುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

    ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

    ನವದೆಹಲಿ: ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶರು ಚರ್ಚಿಸಿ ಪರಿಹರಿಸದಿದ್ದರೆ, ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಎಚ್ಚರಿಸಿದ್ದಾರೆ.

    ನವದೆಹಲಿಯ ವಿಜ್ಞಾನ ಭವನದಲ್ಲಿಂದು ಅಖಿಲ ಭಾರತ ಜಿಲ್ಲಾ ಕಾನೂನು ಸೇವೆಗಳ ಅಧಿಕಾರಿಗಳ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್

    ನ್ಯಾಯಾಂಗ ತನ್ನ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನು ಮರೆಮಾಚದೆ, ಮುಚ್ಚಿಡದೇ ಚರ್ಚಿಸಬೇಕು. ಇದರಿಂದ ಜನರಿಗೆ ಉತ್ತಮ ಸೇವೆ ಒದಗಿಸಬಹುದು ಎಂದು ಸಿಜೆಐ ರಮಣ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಲಂಕಾ ಅಧ್ಯಕ್ಷರ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ

    ಜನರಿಗೆ ಉತ್ತಮ ಸೇವೆ ಸಲ್ಲಿಸುವ ಉದ್ದೇಶ ನಮಗಿದ್ದರೆ, ನಮ್ಮ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನೂ ನಾವು ಎತ್ತಿ ತೋರಿಸಬೇಕು. ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಅಥವಾ ಬಚ್ಚಿಡುವುದರಲ್ಲಿ ಯಾವುದೇ ಅರ್ಥವಿಲ್ಲ. ನಾವು ಈ ಸಮಸ್ಯೆ ಚರ್ಚಿಸದಿದ್ದರೆ, ಬಿಕ್ಕಟ್ಟುಗಳನ್ನು ಪರಿಹರಿಸದಿದ್ದರೆ, ಆಗ ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ. ನಮ್ಮ ಸಾಂವಿಧಾನಿಕ ಆಶಯವಾದ ಸಾಮಾಜಿಕ ನ್ಯಾಯವನ್ನು ಪೂರೈಸಲು ಸಾಧ್ಯವಾಗದಿರಬಹುದು ಎಂದು ನನಗೆ ಭಯವಾಗುತ್ತಿದೆ. ಹಾಗಾಗಿ ನಾನು ಚರ್ಚಿಸಿ(ಡಿಸ್ಕಸ್), ಸಂವಾದಿಸಿ (ಡಿಬೇಟ್) ನಂತರ ನಿರ್ಧರಿಸಿ (ಡಿಸೈಡ್) ಎಂದು ಹೇಳುತ್ತೇನೆ. ನಾನೂ ಇದೇ ತತ್ವವನ್ನು ಅನುಸರಿಸುತ್ತಿದ್ದೇನೆ ಎಂದು ಅವರು ವಿವರಿಸಿದ್ದಾರೆ.

    ಜಿಲ್ಲಾ ನ್ಯಾಯಾಧೀಶರು ಬಹುಮುಖಿ ಪಾತ್ರ ನಿರ್ವಹಿಸಬೇಕು. ಜನರ ಮತ್ತು ಸಾಮಾಜಿಕ ಸಮಸ್ಯೆ ಅರ್ಥ ಮಾಡಿಕೊಳ್ಳುವ ಉತ್ತಮ ಹುದ್ದೆಯಲ್ಲಿ ನೀವು (ಜಿಲ್ಲಾ ನ್ಯಾಯಾಧೀಶರು) ಇದ್ದೀರಿ. ಭಾರತದಲ್ಲಿ ಕಾನೂನು ನೆರವು ಆಂದೋಲನಕ್ಕೆ ಜಿಲ್ಲಾ ನ್ಯಾಯಾಂಗವೇ ಪ್ರೇರಕ ಶಕ್ತಿ. ಜಿಲ್ಲಾ ನ್ಯಾಯಾಂಗವನ್ನು ಬಲಪಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಡಿ.ವೈ.ಚಂದ್ರಚೂಡ್ ಹಾಗೂ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪ್ರಚೋದನಕಾರಿ ಹೇಳಿಕೆ ನೀಡ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ: ಅಲೋಕ್ ಕುಮಾರ್ ಎಚ್ಚರಿಕೆ

    ಪ್ರಚೋದನಕಾರಿ ಹೇಳಿಕೆ ನೀಡ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ: ಅಲೋಕ್ ಕುಮಾರ್ ಎಚ್ಚರಿಕೆ

    ಬೆಳಗಾವಿ: ರಾಜ್ಯದಲ್ಲಿ ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ನಾವು ಕ್ರಮ ಜರಗಿಸುತ್ತಿದ್ದು, ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ. ಯಾರು ಹೇಳಿಕೆ ಕೊಡುತ್ತಿದ್ದಾರೆ ಅದನ್ನು ರೆಕಾರ್ಡ್ ಮಾಡುತ್ತಾ ಇದ್ದೇವೆ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಹೇಳಿಕೆ ನೀಡ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ. ಯಾರು, ಯಾರು ಹೇಳಿಕೆ ಕೊಡುತ್ತಿದ್ದಾರೋ ಅದನ್ನು ರೆಕಾರ್ಡ್ ಮಾಡುತ್ತಾ ಇದ್ದೇವೆ ಎಂದರು. ಇದನ್ನೂ ಓದಿ: ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ಯಾವ ಒಂದು ವರ್ಗಕ್ಕೆ ಮಾತ್ರ ಅಲ್ಲಾ ಎಲ್ಲಾ ಸಮುದಾಯದಯಕ್ಕೂ ಒಂದೇ ಕಾನೂನು ಇರುತ್ತದೆ. ಯಾವ ರೀತಿ ಮಾತನಾಡುತ್ತಾರೆ ಅದನ್ನು ರೆಕಾರ್ಡ್ ಬಿಲ್ಡ್ ಮಾಡಿಕೊಂಡು ಕ್ರಮಜರಗಿಸುತ್ತೇವೆ. ಕೆಲವು ಕಡೆ ಪ್ರಮೋದ್ ಮುತಾಲಿಕ್ ಹೋಗಬಾರದು ಅಲ್ಲಿ 144 ಸೆಕ್ಷನ್ ಹಾಕಿಸಿದ್ದೇವೆ. ಇಂದು ಬೀದರ್ ಹೋಗುತ್ತಿದ್ದರು ಅಲ್ಲಿ ಎಂಟ್ರಿಯಾಗಬಾರದು. ಅನುಭವ ಮಂಟಪ ವಿಚಾರಕ್ಕೆ ಕಾಲಿಡಬಾರದು. ಎಲ್ಲೇಲ್ಲಿ ಏನೂ ಕ್ರಮಜರುಗಿಸಬೇಕು. ಅದನ್ನು ನಾವು ಮಾಡುತ್ತಿದ್ದೇವೆ. ಪೊಲೀಸ್ ಇಲಾಖೆ ಏನೂ ಕೆಲಸ ಮಾಡಬೇಕು. ಅದನ್ನು ಮಾಡುತ್ತಿದೆ. ಸಂಘಟನೆಗಳ ಮೇಲೆ ಕಣ್ಣಿಟ್ಟಿದ್ದೇವೆ. ಆ ಸಂಘಟನೆಗಳ ವಿರುದ್ಧ ರೆಕಾರ್ಡ್ ಬಿಲ್ಡ್ ಮಾಡುತ್ತಿದ್ದೇವೆ. ಸಮಯ ಬಂದಾಗ ಏನು ಮಾಡೋದಿದೆ ಅದನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

    HIJAB (1)

    ಶ್ರೀರಂಗಪಟ್ಟಣ ಚಲೋ ವಿಚಾರಕ್ಕೆ, ಕಾನೂನು ಸುವ್ಯವಸ್ಥೆ ಉಲ್ಲಂಘನೆ ಆಗಲು, ಹದಗೆಡಲು ನಾವು ಆಸ್ಪದ ಕೊಡುವುದಿಲ್ಲ. ಯಾರು ಏನೇ ಹೇಳಿಕೆ ಚಾನಲ್‍ನಲ್ಲಿ ಕೊಡಲಿ ಅಥವಾ ಬೇರೆ ಕಡೆ ಎಲ್ಲಿಯಾದರೂ ಕೊಡಲಿ. ಫೀಲ್ಡನಲ್ಲಿ ಕಾನೂನು ಏನಿದೆ ಅದಕ್ಕೆ ಬದ್ಧವಾಗಿರಬೇಕು. ಯಾರು ಉಲ್ಲಂಘನೆ ಮಾಡಬಾರದು. ಇವತ್ತು ಶ್ರೀರಂಗಪಟ್ಟಣದಲ್ಲಿ ಬಂದೋಬಸ್ತ್ ನಡೆಯುತ್ತಿದೆ. ನಾವು ಅಲ್ಲಿಯೂ ಕೂಡ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಅಲ್ಲಿ ಕಾನೂನು ಅವಹೇಳನ ಮಾಡಿದರೆ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

    ಹಿಜಾಬ್‍ಗೆ ಪೊಲೀಸ್ ಇಲಾಖೆಗೆ ನೇರವಾಗಿ ಯಾವುದೇ ಸಂಬಂಧ ಇಲ್ಲ. ಹಿಜಾಬ್ ವಿಚಾರ ಸ್ಕೂಲ್ ಮ್ಯಾನೆಜ್‍ಮೆಂಟ್‍ಗೆ ಇದೆ. ಶಿಕ್ಷಣ ಇಲಾಖೆಗೆ, ಡಿಸಿ ಅವರಿಗೆ ಸಂಬಂಧ ಇದೆ. ಪೊಲೀಸರಿಗೆ ಅದು ನೇರವಾಗಿ ಯಾವುದೇ ಸಂಬಂಧ ಇಲ್ಲ. ಕಾನೂನು ಸುವ್ಯವಸ್ಥೆ ಭಂಗ ಮಾಡಲು ಪ್ರಯತ್ನಪಟ್ಟರೆ ಅವರ ಮೇಲೆ ನಾವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಆ ಸಮಯದಲ್ಲಿ ಅವರ ಮುಖ ಕೂಡ ನಾವು ನೋಡುವುದಿಲ್ಲ ಎಂದು ತಿಳಿಸಿದ್ದಾರೆ.

    ಮಾಧ್ಯಮದವರು ತಾಂಬೂಲ ಪ್ರಶ್ನೆಯಂತಹ ಸುದ್ದಿಗಳನ್ನು ಹೆಚ್ಚಾಗಿ ತೋರಿಸಬೇಡಿ. ನಿಮಗೂ ಕೂಡ ಜವಾಬ್ದಾರಿ ಇರುತ್ತದೆ. ಹೀಗಾಗಿ ಕೆಲವು ಜನರು ಪ್ರಚಾರ ಬಯಸಿ ಮಾಧ್ಯಮಗಳಲ್ಲಿ ಹೆಚ್ಚಾಗಿ ಮಾತನಾಡ್ತಿದ್ದಾರೆ. ಅವರ ಕವರೇಜ್ ಬಂದ್ ಮಾಡಿದರೆ ಮಾರನೇ ದಿನ ಮಾತನಾಡುವುದನ್ನು ತಾವೇ ಬಂದ್ ಮಾಡ್ತಾರೆ. ಎಷ್ಟು ಕವರೇಜ್ ಮಾಡಬೇಕು ಅಷ್ಟು ಮಾತ್ರ ಕವರ್ ಮಾಡಿ ಎಂದರು.

     

  • ಸ್ವಂತ ಮಾವನಿಂದಲೇ ಸೊಸೆಯ ಮೇಲೆ ರೇಪ್‌ – ಸುಳ್ಳು ಆರೋಪವೆಂದು ಜಾಮೀನು ಕೊಟ್ಟ ಕೋರ್ಟ್‌

    ಸ್ವಂತ ಮಾವನಿಂದಲೇ ಸೊಸೆಯ ಮೇಲೆ ರೇಪ್‌ – ಸುಳ್ಳು ಆರೋಪವೆಂದು ಜಾಮೀನು ಕೊಟ್ಟ ಕೋರ್ಟ್‌

    ಲಕ್ನೋ: ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಮಾವನೊಬ್ಬ ತನ್ನ ಸ್ವಂತ ಸೊಸೆಯ ಮೇಲೆಯೇ ಅತ್ಯಾಚಾರ ನಡೆಸಿರುವುದಾಗಿ ಆರೋಪ ಕೇಳಿಬಂದಿತ್ತು. ಆದರೆ ಭಾರತೀಯ ಸಂಸ್ಕೃತಿಯಲ್ಲಿ ಸ್ವಂತ ಮಾವ ಸೊಸೆಯ ಮೇಲೆ ಅತ್ಯಾಚಾರ ನಡೆಸುವುದು ಅಸಹಜ, ಇತ್ತೀಚೆಗೆ ವ್ಯಕ್ತಿಯ ಪ್ರತಿಷ್ಠೆ ಘಾಸಿಗೊಳಿಸುವ ಉದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ ಎಂಬುದನ್ನು ಪರಿಗಣಿಸಿ, ಆರೋಪಿ ಸ್ಥಾನದಲ್ಲಿದ್ದ ಮಾವನಿಗೆ ಅಲಹಾಬಾದ್‌ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ.

    Law

    ಸೊಸೆಯು ತನ್ನ ಸ್ವಂತ ಮಾವ ಹಾಗೂ ಮತ್ತೊಬ್ಬ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಬಳಿಕ ನ್ಯಾಯಮೂರ್ತಿ ಅಜಿತ್ ಸಿಂಗ್ ಅವರು ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಿದ್ದಾರೆ.  ಇದನ್ನೂ ಓದಿ: ವಿಮಾನ ಪತನದ ಸ್ಥಳದಲ್ಲಿ 16 ಮೃತದೇಹ ಪತ್ತೆ- ಪ್ರಯಾಣಿಕರೆಲ್ಲರೂ ಮೃತಪಟ್ಟಿರುವ ಶಂಕೆ

    ಅರ್ಜಿದಾರರ ಪೂರ್ವಾಪರ ಹಾಗೂ ಆರೋಪಗಳ ಸ್ವರೂಪವನ್ನು ಪರಿಗಣಿಸಿ, ಮಾವ ತನ್ನ ಸ್ವಂತ ಸೊಸೆಯ ಮೇಲೆ ಅತ್ಯಾಚಾರ ಎಸಗುವುದು ಅಸಹಜ ಎಂದು ಪರಿಗಣಿಸಿ ಈ ಆದೇಶ ನೀಡಿದೆ. ಅಲ್ಲದೆ ಭಾರತೀಯ ಸಂಸ್ಕೃತಿಯಲ್ಲಿ ಇನ್ನೊಬ್ಬ ವ್ಯಕ್ತಿ ಸಮಾಜದಲ್ಲಿ ತನ್ನ ಪ್ರತಿಷ್ಠೆಯನ್ನು ಘಾಸಿಗೊಳಿಸುವ ಉದ್ದೇಶದಿಂದ ಸುಳ್ಳು ಆರೋಪ ಮಾಡಿರುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟು ಕೋರ್ಟ್‌ ಜಾಮೀನು ನೀಡಿದೆ.

    court order law

    ಈ ಪ್ರಕರಣದಲ್ಲಿ ಅವರ 25 ಸಾವಿರ ವೈಯಕ್ತಿಕ ಬಾಂಡ್‌ ಇಬ್ಬರ ಶ್ಯೂರಿಟಿ, ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಷರತ್ತು ವಿಧಿಸಿದೆ. ಅರ್ಜಿದಾರರು ತನ್ನ ಮಾನವ ವಿರುದ್ಧ IPC ಸೆಕ್ಷನ್ 376 (ಅತ್ಯಾಚಾರ), 511 (ದಂಡನೀಯ ಅಪರಾದ), 504 (ಶಾಂತಿಭಂಗ, ಉದ್ದೇಶ ಪೂರ್ವಕ ಅವಮಾನ), 506 (ಅಪರಾಧಿ ಭಯೋತ್ಪಾದನೆಗೆ ದಂಡನೆ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

    2018ರ ಪ್ರಕರಣ: ತಾನೂ ಒಬ್ಬಳೇ ಇದ್ದಾಗ ತನ್ನ ಮಾವ ಮತ್ತೊಬ್ಬ ವ್ಯಕ್ತಿಯೊಂದಿಗೆ ಮನೆಗೆ ಬಂದಿದ್ದರು. ಸಹೋದರ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಮಾವ ನಿಂದಿಸಲು ಆರಂಭಿಸಿದ್ದರು. ಬಳಿಕ ಇಬ್ಬರೂ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದಾರೆ ಎಂದು 2018ರಲ್ಲಿ ಅರ್ಜಿದಾರರು ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ನಾಪತ್ತೆಯಾದ ವಿಮಾನ 6 ಗಂಟೆಗಳಲ್ಲಿ ಪತ್ತೆ – ಸಾವು ನೋವಿನ ಬಗ್ಗೆ ತನಿಖೆ

    STOP RAPE

    ಈ ಸಂಬಂಧ ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಜೊತೆಗೆ ಸಮಾನತೆಯನ್ನೂ ಕೋರಿದ್ದರು. ರಾಜ್ಯದ ವಕೀಲರು ನಿರೀಕ್ಷಣಾ ಜಾಮೀನನ್ನು ವಿರೋಧಿಸಿದ್ದರೇ ಹೊರತು ಸಮಾನತೆಯ ಹಕ್ಕನ್ನು ಪರಿಗಣಿಸಿರಲಿಲ್ಲ. ನಂತರ ಕಕ್ಷಿದಾರರ ವಾದವನ್ನೂ ಆಲಿಸಿದ ನಂತರ ನ್ಯಾಯಾಲಯವು ಷರತ್ತುಗಳಿಗೆ ಒಳಪಟ್ಟು 25 ಸಾವಿರ ಮೊತ್ತದ 2 ಶ್ಯೂರಿಟಿಗಳೊಂದಿಗೆ ವೈಯಕ್ತಿಕ ಬಾಂಡ್‌ ಅನ್ನು ಆಧರಿಸಿ ಅರ್ಜಿದಾರರಿಗೆ ಶರತ್ತು ಬದ್ಧ ಜಾಮೀನು ನೀಡಿದೆ.

    ಅರ್ಜಿದಾರರ ಪರ ವಕೀಲ ಆದಿತ್ಯ ಪ್ರಸಾದ್‌ ಮಿಶ್ರಾ ವಾದಿಸಿದರು. ಸರ್ಕಾರಿ ವಕೀಲ ಅನಯ್ ಕುಮಾರ್ ಶ್ರೀವಾಸ್ತವ ಪ್ರತಿವಾದಿಯಾಗಿದ್ದರು.

  • ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ನವದೆಹಲಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್‌ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.

    ಜ್ಞಾನವ್ಯಾಪಿ ಮಸೀದಿಯಲ್ಲಿ ಸರ್ವೆ ನಡೆಸಲು ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ ನ್ಯಾ. ಚಂದ್ರಚೂಡ್‌ ಮತ್ತು ನ್ಯಾ. ಪಿ.ಎಸ್‌ ನರಸಿಂಹ ಅವರಿದ್ದ ಪೀಠದಲ್ಲಿ ನಡೆಯಿತು.

    ವಿಚಾರಣೆ ಸಂದರ್ಭದಲ್ಲಿ ಶಿವಲಿಂಗ ನಿಜವಾಗಿ ಎಲ್ಲಿ ಪತ್ತೆಯಾಗಿದೆ ಎಂದು ಕೋರ್ಟ್‌ ಪ್ರಶ್ನಿಸಿತು. ಇದನ್ನೂ ಓದಿ: ಶ್ರೀಲಂಕನ್ ಏರ್‌ಲೈನ್ಸ್ ಮಾರಾಟಕ್ಕೆ ಮುಂದಾದ ಸರ್ಕಾರ

    GYANVAPI MOSQUE

    ಈ ಪ್ರಶ್ನೆಗೆ ಉತ್ತರ ನೀಡಿದ ಉತ್ತರಪ್ರದೇಶ ಸರ್ಕಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನಾವು ನೋಡಿಲ್ಲ ಎಂದು ಉತ್ತರಿಸಿದರು. ವರದಿಯನ್ನು ನೋಡಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

    ವಿಚಾರಣೆ ನಡೆಸಿದ ಕೋರ್ಟ್‌, ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು. ನಮಾಜ್‌ ಮಾಡಲು ಆಗಮಿಸುವ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್‌ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿತು.  ಕೋರ್ಟ್‌ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಿದೆ.

    ಸೋಮವಾರ ಏನಾಗಿತ್ತು?
    ವಾರಣಾಸಿ ಕೋರ್ಟ್ ಸೂಚನೆ ಮೇರೆಗೆ ಕೋರ್ಟ್ ಕಮೀಷನರ್ ನೇತೃತ್ವದಲ್ಲಿ ಮೂರು ದಿನ ನಡೆದ ಜ್ಞಾನವ್ಯಾಪಿ ಮಸೀದಿ ವಿಡಿಯೋ ಸರ್ವೇ ಸೋಮವಾರಕ್ಕೆ ಮುಕ್ತಾಯವಾಗಿತ್ತು. ಮಸೀದಿಯ ಕೊಳದಲ್ಲಿ 12 ಅಡಿ ಎತ್ತರದ ಶಿವಲಿಂಗ ಪತ್ತೆಯಾಗಿತ್ತು. ಇದು ತಿಳಿಯುತ್ತಲೇ ಶಿವಲಿಂಗಕ್ಕೆ ರಕ್ಷಣೆ ಕಲ್ಪಿಸಬೇಕೆಂದು ಕೋರಿ ವಕೀಲರೊಬ್ಬರು ಕಾಶಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗಿದ್ದರು.

    ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಈ ಕೂಡಲೇ ಸೀಲ್ ಮಾಡುವಂತೆ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೇ, ಶಿವಲಿಂಗ ಪತ್ತೆಯಾದ ಪ್ರದೇಶಕ್ಕೆ ಯಾರು ಹೋಗದಂತೆ ನಿಷೇಧ ವಿಧಿಸುವಂತೆಯೂ ಆದೇಶ ನೀಡಿದೆ. ಅಗತ್ಯ ಭದ್ರತೆ ಒದಗಿಸುವಂತೆಯೂ ಸೂಚನೆ ನೀಡಿತ್ತು.

    ಆದೇಶದ ಬೆನ್ನಲ್ಲೇ 30*30 ಅಳತೆಯ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಆ ಪ್ರದೇಶದ ಮೂರು ದ್ವಾರಗಳನ್ನು ಬಂದ್ ಮಾಡಲಾಗಿದೆ. ಈ ಕೊಳದ ನೀರನ್ನು ಮುಸ್ಲಿಮರು ಪ್ರಾರ್ಥನೆಗೆ ಬಂದ ಸಂದರ್ಭದಲ್ಲಿ ಕೈಕಾಲು ತೊಳೆಯಲು ಬಳಸ್ತಿದ್ದರು. ಪ್ರಾರ್ಥನೆಗೆ ಬರುವವರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ.

  • ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ನವದೆಹಲಿ: ಕೇಂದ್ರ ಸರ್ಕಾರದ ಮರುಪರಿಶೀಲನೆ ಪೂರ್ಣಗೊಳ್ಳುವವರೆಗೆ ದೇಶದ್ರೋಹದ ಅಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

    ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದೆ.

    ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣ ದಾಖಲಾಗಿ ಜೈಲಿನಲ್ಲಿರುವವರು ಜಾಮೀನು ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೀಠ ಜುಲೈಗೆ ಮುಂದೂಡಿಕೆ ಮಾಡಿದೆ.

    ಕೇಂದ್ರ ಹೇಳಿದ್ದೇನು?
    ಸೋಮವಾರ ದೇಶದ್ರೋಹದ ಕಾನೂನನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ತಿಳಿಸಿತ್ತು ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿತ್ತು.

    court order law

    ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಕಾನೂನು ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾಯ್ದೆಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿತ್ತು.

    ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

  • ದೇಶದ್ರೋಹ ಕಾಯ್ದೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ: ಸುಪ್ರೀಂಗೆ ಕೇಂದ್ರ

    ದೇಶದ್ರೋಹ ಕಾಯ್ದೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ: ಸುಪ್ರೀಂಗೆ ಕೇಂದ್ರ

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 124ಎ (ದೇಶದ್ರೋಹ)  ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‍ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

    ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್‌ ಸಲ್ಲಿಸಿದೆ. ಇದನ್ನೂ ಓದಿ: ಶಾಹೀನ್‌ ಬಾಗ್‌ ತೆರವು ಕಾರ್ಯಾಚರಣೆ – ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ: ಸಿಪಿಐ(ಎಂ)ಗೆ ಸುಪ್ರೀಂ ಪ್ರಶ್ನೆ

    ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ದೇಶದ್ರೋಹ ಪರಿಶೀಲನೆ ಮಾಡುತ್ತಿದ್ದೇವೆ. ದೇಶದ್ರೋಹ ಕಾನೂನಿಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದೆ.

    ಸ್ವಾತಂತ್ರ್ಯ ಸಿಕ್ಕಿದ ಬಳಿಕವೂ 75 ವರ್ಷದ ಹಿಂದಿನ ಕಾನೂನು ಅಗತ್ಯವಿದೆಯೇ ಎಂದು 2021ರ ಜುಲೈನಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಇದನ್ನೂ ಓದಿ: ಭಾಷಣದ ವೇಳೆ ನೀರು ಕೇಳಿದ್ದ ಅಧಿಕಾರಿಯ ನೆರವಿಗೆ ಬಂದ ನಿರ್ಮಲಾ ಸೀತಾರಾಮನ್

    ಸದ್ಯ ಈಗ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸಂವಿಧಾನ ಪೀಠದಲ್ಲಿ ನಡೆಸಬೇಕೇ ಅಥವಾ ಐದಕ್ಕಿಂತ ಹೆಚ್ಚಿನ ನ್ಯಾಯಾಧೀಶರ ಪೀಠದಲ್ಲಿ ನಡೆಸಬೇಕೇ ಎಂಬುದರ ಬಗ್ಗೆ ಕೋರ್ಟ್‌ ಪರಿಶೀಲಿಸುತ್ತಿದೆ.

  • ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ: ಸಿಪಿಐ(ಎಂ)ಗೆ ಸುಪ್ರೀಂ ಪ್ರಶ್ನೆ

    ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ: ಸಿಪಿಐ(ಎಂ)ಗೆ ಸುಪ್ರೀಂ ಪ್ರಶ್ನೆ

    ನವದೆಹಲಿ: ದೆಹಲಿಯ ಶಾಹೀನ್‌ ಬಾಗ್‌ ಪ್ರದೇಶದಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆ ಪ್ರಕರಣದಲ್ಲಿ ತಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

    ತೆರವು ಕಾರ್ಯಾಚರಣೆಯನ್ನು ಪ್ರಶ್ನಿಸಿ ಸಿಪಿಐ(ಎಂ) ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿತ್ತು. ಇಲ್ಲಿ ನೆಲೆಸಿರುವ ನಿವಾಸಿಗಳು ಅನಧಿಕೃತ ನಿವಾಸಿಗಳಲ್ಲ. ಈ ಆಸ್ತಿಗಳ ನೆಲಸಮ ಪ್ರಕ್ರಿಯೆ ನೈಸರ್ಗಿಕ ನ್ಯಾಯ ಮತ್ತು ಭಾರತದ ಸಂವಿಧಾನದ ತತ್ವಗಳನ್ನು ಸಂಪೂರ್ಣವಾಗಿ ಉಲ್ಲಂಘಿಸುವ ಕಾನೂನುಬಾಹಿರ ಮತ್ತು ಅಮಾನವೀಯ ಕ್ರಮವಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿತ್ತು.

    ಈ ಅರ್ಜಿಯ ವಿಚಾರಣೆ ನಡೆಸಿದ ನಾ. ನಾಗೇಶ್ವರ್‌ ರಾವ್‌ ಮತ್ತು ನ್ಯಾ.ಬಿಆರ್‌ ಘವಿ ಅವರಿದ್ಧ ದ್ವಿಸದಸ್ಯ ಪೀಠ, ಇದರಲ್ಲಿ ರಾಜಕೀಯ ಪಕ್ಷದ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ಖಾರವಾಗಿ ಪ್ರಶ್ನಿಸಿತು. ಇದನ್ನೂ ಓದಿ: ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

    ಸಿಪಿಐ(ಎಂ) ಪಕ್ಷವು ಏಕೆ‌ ಅರ್ಜಿಯನ್ನು ಸಲ್ಲಿಸಿದೆ. ಸಂತ್ರಸ್ತ ವ್ಯಕ್ತಿ ಇಲ್ಲಿಗೆ ಅರ್ಜಿ ಸಲ್ಲಿಸಿದರೆ ನಾವು ಅದನ್ನು ಅರ್ಥಮಾಡಿಕೊಳ್ಳಬಹುದು. ಈ ಪ್ರಕರಣಕ್ಕೆ ಸಂಬಂಧಿಸಿದದಂತೆಯಾವುದೇ ವ್ಯಕ್ತಿ ಇಲ್ಲವೇ? ಸಂತ್ರಸ್ತ ವ್ಯಕ್ತಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿ. ಈ ಅರ್ಜಿಯನ್ನು ನಾವು ಮಾನ್ಯ ಮಾಡುವುದಿಲ್ಲ ಎಂದು ಹೇಳಿತು.

    ಏನಿದು ಪ್ರಕರಣ?
    ದೆಹಲಿಯ ಬಿಜೆಪಿ ಮುಖ್ಯಸ್ಥ ಅದೇಶ್‌ ಸಿಂಗ್‌ ಅವರು ದಕ್ಷಿಣ ದೆಹಲಿಯ ಮಹಾನಗರ ಪಾಲಿಕೆಗೆ ಪತ್ರ ಬರೆದು, ರೋಹಿಂಗ್ಯಾ, ಬಾಂಗ್ಲಾದೇಶಿಯರು ಮತ್ತು ಸಮಾಜ ವಿರೋಧಿ ಶಕ್ತಿಗಳು ಶಾಹೀನ್‌ ಬಾಗ್‌ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಇವುಗಳನ್ನು ತೆರವು ಮಾಡಬೇಕು ಎಂದು ಮನವಿ ಮಾಡಿದ್ದರು.

    ಈ ಪತ್ರದ ಬೆನ್ನಲ್ಲೇ ಯಾವುದೇ ಗಲಾಟೆಗಳು ಆಗದೇ ಇರಲು ದಕ್ಷಿಣ ದೆಹಲಿಯ ಜಿಲ್ಲಾಡಳಿತ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಇಂದು ಬೆಳಗ್ಗೆಯಿಂದ ಅಕ್ರಮ ಕಟ್ಟಡಗಳನ್ನು ತೆರವು ಮಾಡಲು ಮುಂದಾಗಿತ್ತು. ತೆರವು ಮಾಡಲು ಮುಂದಾದಾಗ ಸ್ಥಳಿಯ ನಿವಾಸಿಗಳು ಪ್ರತಿಭಟನೆ ಮಾಡಲು ಆರಂಭಿಸಿದರು. ಈ ಪ್ರತಿಭಟನೆಗೆ ಆಪ್‌ ಮತ್ತು ಕಾಂಗ್ರೆಸ್‌ ನಾಯಕರು ಸಾಥ್‌ ನೀಡಿದ್ದರು. ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.  ಇದನ್ನೂ ಓದಿ: ದಾವುದ್ ಇಬ್ರಾಹಿಂನ ಸಹಚರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಎನ್‍ಐಎ ದಾಳಿ

    ದಕ್ಷಿಣ ದೆಹಲಿ ಪಾಲಿಕೆ 10 ದಿನಗಳ ಕಾಲ ಶಾಹೀನ್‌ ಬಾಗ್‌ ವಲಯದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸಿದೆ. ಸಿಎಎ ವಿರೋಧಿಸಿ ಶಾಹೀನ್‌ಬಾಗ್‌ನಲ್ಲಿ 2019ರ ಡಿಸೆಂಬರ್‌ 15 ರಿಂದ 2020ರ ಮಾರ್ಚ್‌ 24ರವರೆಗೆ ಭಾರೀ ಪ್ರತಿಭಟನೆ ನಡೆದಿತ್ತು.

  • ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ, ಹಿಜಬ್ ಧರಿಸಲು ಅವಕಾಶ ಕೊಡಬಹುದು: ರಘುಪತಿ ಭಟ್

    ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ, ಹಿಜಬ್ ಧರಿಸಲು ಅವಕಾಶ ಕೊಡಬಹುದು: ರಘುಪತಿ ಭಟ್

    ಉಡುಪಿ: ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಬ್ ಧರಿಸಲು ಅವಕಾಶ ಕೊಡಬಹುದು ಎಂದು ಶಾಸಕ ರಘುಪತಿ ಭಟ್ ಕಿಡಿಕಾರಿದರು.

    ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲಾ ಬಿಜೆಪಿಯಿಂದ ಕೊಲೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ವೇಳೆ ನಾನು ಸಹ ಉಗ್ರ ಭಾಷಣ ಮಾಡಿದ್ದೇನೆ. ಕಠೋರ ಮುಸ್ಲಿಮರು ಷರಿಯತ್ ಕಾನೂನು ಪಾಲಿಸಲು ತಯಾರು ಇರಲಿ. ಹರ್ಷನನ್ನು ಕೊಂದವರನ್ನು ಸಾರ್ವಜನಿಕವಾಗಿ ಕಲ್ಲು ಹೊಡೆದು ಸಾಯಿಸಲು ಅವಕಾಶ ಕೊಡಬೇಕು. ಕೊಲೆಗಡುಕರಿಗೆ ಷರಿಯತ್ ಕಾನೂನು ಪ್ರಕಾರ ಶಿಕ್ಷೆ ನೀಡುತ್ತೀರಾ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ:  ಮಾಲೀಕ ಯುದ್ಧಕ್ಕೆ ಹೋಗಿದ್ದಾರೆ, ಅವರ ಮಕ್ಕಳನ್ನು ಬಿಟ್ಟು ನಾನು ಬರಲ್ಲ ಎಂದ ವಿದ್ಯಾರ್ಥಿನಿ!

    ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಬ್ ಧರಿಸಲು ಅವಕಾಶ ಕೊಡಬಹುದು. ಕಠಿಣ ಶಿಕ್ಷೆ ಬೇಡ ತರಗತಿಯಲ್ಲಿ ಹಿಜಬ್ ಬೇಕು ಎಂದರೆ ಅದು ಆಗೂದಿಲ್ಲ. ಭಾರತ ದೇಶದ ಗಾಳಿ ನೀರು ಅನ್ನ ತಿನ್ನುತ್ತಿದ್ದೀರಿ. ಕಾಂಗ್ರೆಸ್ ಪಕ್ಷ ಪಲಾಯನ ಮಾಡಬೇಡಿ, ನಿಮ್ಮ ನಿಲುವು ಸ್ಪಷ್ಟಪಡಿಸಿ. ಹಿಜಬ್ ವಿಚಾರದ ನಿಲುವೇನು? ಹರ್ಷ ಕೊಲೆಯಲ್ಲಿ ನಿಲುವೇನು? ಎಂದು ಪ್ರಶ್ನೆ ಕೇಳಿದರು.

    ದುಬೈ ಸೌದಿಗಳಲ್ಲಿ ಷರಿಯತ್ ಕಾನೂನು ಇದ್ದರೂ ಆಧುನಿಕತೆಯನ್ನು ಒಪ್ಪಿಕೊಳ್ಳಲಾಗುತ್ತಿದೆ. ಹಿಂದೂಗಳ ಕೆಲ ಪದ್ಧತಿ ಕಾಲ-ಕಾಲಕ್ಕೆ ಬದಲಾವಣೆಯಾಗಿದೆ. ನಮ್ಮ ವಿದ್ವಾಂಸರು ಸತಿ ಸಹಗಮನ, ಬಾಲ್ಯವಿವಾಹ, ಅಸ್ಪೃಶ್ಯತೆ ಅಸಮಾನತೆಯನ್ನು ತೊಡೆದುಹಾಕಿದ್ದಾರೆ. ಷರಿಯತ್ ಕಾನೂನು ಒಪ್ಪುವುದಾದರೆ ಎಲ್ಲವನ್ನೂ ಮುಸ್ಲೀಮರಿಗೆ ಕಡ್ಡಾಯ ಮಾಡಿ ಎಂದು ಮನವಿ ಮಾಡಿದರು.

    ನಾವು ಭಾರತದ ಸಂವಿಧಾನ ಒಪ್ಪುವವರು. ಸಾಕಷ್ಟು ಒಳ್ಳೆಯ ಮುಸ್ಲಿಮರು ಸಂವಿಧಾನ ಒಪ್ಪುತ್ತಾರೆ. ಕ್ಲಾಸ್ ರೂಂನಲ್ಲಿ ಹಿಜಬ್ ಬೇಕು ಎನ್ನುವವರಿಗೆ ಷರಿಯತ್ ಕಾನೂನು ಜಾರಿಗೆ ತನ್ನಿ. ಕೊಲೆ, ಅತ್ಯಾಚಾರ, ಭಯೋತ್ಪಾದನೆ ಮಾಡಿದಾಗ ಶರಿಯತ್ ಬೇಡ್ವಾ? ಕಠೋರ ಮುಸ್ಲಿಮರು ಈಗಲೇ ಹೇಳಿಕೆಯನ್ನು ನೀಡಬೇಕು. ಅಪರಾಧ ಮಾಡಿದಾಗ ಭಾರತದ ಸಂವಿಧಾನ ಸುಪ್ರೀಂ ಕೋರ್ಟ್ ನೆನಪಾಗುತ್ತದೆ. ಕಾಲೇಜಿನ, ತರಗತಿಯ ಶಿಸ್ತು ಪಾಲಿಸುವ ಮುಸಲ್ಮಾನರಿಗೆ ನಾನು ಈ ಮಾತನ್ನು ಹೇಳುತ್ತಿಲ್ಲ ಎಂದು ಸಿಡಿದರು. ಇದನ್ನೂ ಓದಿ: ಹರ್ಷನ ಕೊಲೆಗೆ ಹಂತಕರು ಸ್ವತಃ ಕುಳಿತು ಮಚ್ಚು ರೆಡಿ ಮಾಡಿಸಿದ್ರು!