Tag: law

  • ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ 19 ವರ್ಷದ ಯುವತಿಗೆ 10 ವರ್ಷ ಜೈಲು

    ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ 19 ವರ್ಷದ ಯುವತಿಗೆ 10 ವರ್ಷ ಜೈಲು

    ನವದೆಹಲಿ: ಹಾಲಿವುಡ್ ನಟಿ ಏಂಜಲೀನಾ ಜೋಲಿಯನ್ನು ಹೋಲುವ ಇರಾನಿಯನ್ ಯುವತಿ ಸಹರ್ ತಬಾರ್‍ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

    ಸಹರ್ ತಬಾರ್ (19)ಹಲವಾರು ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗಳಿಂದ ಖ್ಯಾತಿ ಗಳಿಸಿದ್ದಾಳೆ. ಸೋಶಿಯಲ್ ಮೀಡಿಯಾದಲ್ಲಿ ಹಲವಾರು ವಿಕೃತ ಚಿತ್ರಗಳನ್ನು ಪೋಸ್ಟ್ ಮಾಡಿದ್ದ ಸಹರ್ ತಬರ್ ಳನ್ನು ಸಾಮಾಜಿಕ ಮಾಧ್ಯಮ ಚಟುವಟಿಕೆಗಳಲ್ಲಿ ಆರೋಪದ ಮೇಲೆ ಬಂಧಿಸಲಾಗಿತ್ತು. ಈಗ ಆಕೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಆಕೆಯ ವಕೀಲರು ತಿಳಿಸಿದ್ದಾರೆ.

    ಸಹರ್ ತಬಾರ್ ಅವರ ನಿಜವಾದ ಹೆಸರು ಫಾತಿಮೆ ಖಿಶ್ವಾಂಡ್ ಮತ್ತು ಅವಳು ಟೆಹ್ರಾನ್ ಮೂಲದವಳು. ಹಾಲಿವುಡ್ ಸೆಲೆಬ್ರಿಟಿ ಏಂಜಲೀನಾ ಜೋಲಿಯ ಜೊಂಬಿ ಆವೃತ್ತಿಯಂತೆ ಕಾಣುವ ತನ್ನ ವಿಲಕ್ಷಣ ಮುಖದ ಮಾರ್ಫಡ್ ಚಿತ್ರಗಳನ್ನುಪೋಸ್ಟ್ ಮಾಡಿದ ನಂತರ ಅವರು ಖ್ಯಾತಿಗೆ ಏರಿದಳು.

    ಹಾಲಿವುಡ್ ನಟಿ ಏಂಜಲೀನಾ ಜೋಲಿಯಂತೆ ಕಾಣಲು ಈಕೆ 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದರು. ಕಳೆದ ವರ್ಷ ಅಕ್ಟೋಬರ್‍ನಲ್ಲಿ ಸಾಂಸ್ಕøತಿಕ ಅಪರಾಧಗಳು ಮತ್ತು ಸಾಮಾಜಿಕ ಮತ್ತು ನೈತಿಕ ಭ್ರಷ್ಟಾಚಾರ ಆರೋಪದ ಮೇಲೆ ಸಹರ್ ತಬಾರ್‍ನನ್ನು ಬಂಧಿಸಲಾಗಿತ್ತು ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

     

    ತನ್ನ ನೆಚ್ಚಿನ ನಟಿ ಏಂಜಲೀನಾಳಂತೆ ಕಾಣಲು ಏನು ಬೇಕಾದ್ರೂ ಮಾಡ್ತೀನಿ ಅಂತ ಈ ಯುವತಿ ಹೇಳಿದ್ದಾಳೆಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇನ್‍ಸ್ಟಾಗ್ರಾಮ್‍ನಲ್ಲಿ ಯುವತಿಯ ಪೋಟೋಗಳನ್ನ ನೋಡಿದ ನಂತರ ಆಕೆಯ ಫಾಲೋವರ್ ಗಳ ಸಂಖ್ಯೆಯೂ ಹೆಚ್ಚಾಗಿದೆ. ಇನ್ನು ಈಕೆಯ ಹಳೆಯ ಪೋಟೋಗಳು ಕೂಡ ಹರಿದಾಡ್ತಿದ್ದು, ಅದನ್ನ ನೋಡಿ ಇವಳಿಗ್ಯಾಕೆ ಬೇಕಿತ್ತು ಇದೆಲ್ಲಾ ಅಂತಲೂ ಜನ ಮಾತನಾಡಿಕೊಂಡಿದ್ದರು.

    ಈಕೆಗೆ ಇನ್‍ಸ್ಟಾಗ್ರಾನಲ್ಲಿ 6 ಲಕ್ಷಕ್ಕಿಂತಲೂ ಅಧಿಕ ಫಾಲೋವರ್‍ಗಳಿದ್ದು ಪೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡುತ್ತಿದ್ದಳು. ಆದರೆ ಇತರೆ ಬಳಕೆದಾರರು ಈಕೆಯ ಪೋಟೋಗೆ ದೆವ್ವ, ಭೂತ ಎಂದೆಲ್ಲಾ ಪದಗಳನ್ನ ಬಳಸಿ ಕಮೆಂಟ್ ಮಾಡಿದ್ದರು. ಇನ್ನೂ ಕೆಲವರು ಇದು ಮೇಕಪ್ ಮಹಿಮೆ, ಫೆÇೀಟೋಶಾಪ್ ಮಾಡಿರಬಹುದು ಎಂದು ಕೂಡ ಹೇಳಿದ್ದರು. ಈ ಯುವತಿ ಏಂಜಲೀನಾಳಂತೆ ಕಾಣಲು ಕಠಿಣ ಡಯಟ್ ಕೂಡ ಮಾಡಿದ್ದಾಳೆ.

  • ಕಟ್ಟಡ ನೆಲಸಮ ಕೇಸ್‌ – ಕಂಗನಾಗೆ ಗೆಲುವು, ಬಿಎಂಸಿಗೆ ಹೈಕೋರ್ಟ್‌ ಚಾಟಿ

    ಕಟ್ಟಡ ನೆಲಸಮ ಕೇಸ್‌ – ಕಂಗನಾಗೆ ಗೆಲುವು, ಬಿಎಂಸಿಗೆ ಹೈಕೋರ್ಟ್‌ ಚಾಟಿ

    – ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ
    – ವಿಲನ್‌ಗಳಿಗೆ ಕಂಗನಾ ಧನ್ಯವಾದ
    – ಕಂಗನಾ ಪರಿಹಾರ ಪಡೆಯಲು ಅರ್ಹರು

    ಮುಂಬೈ: ಬೃಹನ್‌ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ವಿರುದ್ಧದ ಕಾನೂನು ಹೋರಾಟದಲ್ಲಿ ಬಾಂಬೆ ಹೈಕೋರ್ಟ್‌ ನಟಿ ಕಂಗನಾ ರಾಣಾವತ್‌ ಪರವಾಗಿ ತೀರ್ಪು ನೀಡಿದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ.

    ಕಂಗನಾ ರಣಾವತ್‌ ಅವರ ಕಟ್ಟಡವನ್ನು ಒಡೆದಿರುವ ಬಿಎಂಸಿ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ ಕೋರ್ಟ್‌ ಕಂಗನಾ ಸರ್ಕಾರದಿಂದ ಪರಿಹಾರ ಪಡೆಯಲು ಅರ್ಹರು ಎಂದು ಹೇಳಿದೆ.

    ನ್ಯಾ.ಎಸ್.ಜೆ.ಕಾತಾವಾಲ ಮತ್ತು ಆರ್.ಐ.ಚಾಗ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ವ್ಯಕ್ತಿಯ ವಿರುದ್ಧ ಅಧಿಕಾರಿಗಳು ತೋಳ್ಬಲವನ್ನು ಪ್ರದರ್ಶಿಸುವುದನ್ನು ಒಪ್ಪಲಾಗದು. ಇದು ಕಾನೂನಿನ ದುರುಪಯೋಗ ಅಲ್ಲದೇ ಬೇರೇ ಏನೂ ಅಲ್ಲ ಎಂದು ಅಭಿಪ್ರಾಯಪಟ್ಟು ಬಿಎಂಸಿಗೆ ಚಾಟಿ ಬೀಸಿದೆ.

    ಅರ್ಜಿಯಲ್ಲಿ ಕಂಗನಾ 2 ಕೋಟಿ ರೂ.ಪರಿಹಾರ ಕೇಳಿದ ವಿಚಾರಕ್ಕೆ ಕೋರ್ಟ್‌, ಈ ಸಂಬಂಧವಾಗಿ ಕೋರ್ಟ್‌ ಓಬ್ಬರು ಮೌಲ್ಯಮಾಪಕರನ್ನು ನೇಮಿಸುತ್ತದೆ. ಇವರು ಕಟ್ಟಡಕ್ಕೆ ಆಗಿರುವ ಹಾನಿಯನ್ನು ಅಂದಾಜಿಸಿ 2021ರ ಮಾರ್ಚ್‌ ಒಳಗಡೆ ಸೂಕ್ತ ಆದೇಶವನ್ನು ಹೊರಡಿಸಬೇಕು ಎಂದು ಸೂಚಿಸಿದೆ. ತನ್ನ ಆದೇಶದಲ್ಲಿ ಕೋರ್ಟ್‌ ಅರ್ಜಿದಾರರು ಸರ್ಕಾರದ ಬಗ್ಗೆಅಭಿಪ್ರಾಯಗಳನ್ನು ಹೇಳುವಾಗ ಸಂಯಮವನ್ನು ತೋರಿಸಬೇಕು ಎಂದು ಹೇಳಿದೆ.

    ಕೋರ್ಟ್‌ ಆದೇಶಕ್ಕೆ ಪ್ರತಿಕ್ರಿಯಿಸಿದ ಕಂಗನಾ ಸತ್ಯಕ್ಕೆ ಜಯವಾಗಿದೆ. ಈ ಹೋರಾಟದಲ್ಲಿ ನನಗೆ ಧೈರ್ಯ ತುಂಬಿ ಪ್ರೋತ್ಸಾಹಿಸಿದ ಎಲ್ಲರಿಗೂ ಧನ್ಯವಾದಗಳು. ತೀರ್ಪು ಬರಲು ಕಾರಣರಾದ ʼವಿಲನ್‌ʼಗಳಿಗೂ ಧನ್ಯವಾದ ಎಂದು ಹೇಳಿದ್ದಾರೆ.

    ಏನಿದು ಪ್ರಕರಣ?
    ಸುಶಾಂತ್‌ ಸಿಂಗ್‌ ಪ್ರಕರಣದ ತನಿಖೆಯನ್ನು ಸರಿಯಾಗಿ ಮಾಡುತ್ತಿಲ್ಲ ಎಂದು ಆರೋಪಿಸಿ ಕಂಗನಾ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಈ ಪ್ರಕರಣ ಚರ್ಚೆ ಆಗುತ್ತಿದ್ದಾಗಲೇ ಬಿಎಂಸಿ ಏಕಾಏಕಿ ಮುಂಬೈಯಲ್ಲಿದ್ದ ಕಂಗನಾ ಬಂಗಲೆಯನ್ನು ಕೆಡವಲು ಆದೇಶ ನೀಡಿತ್ತು.

    ಬಿಎಂಸಿ ಕಂಗನಾ ಅವರು ಅಕ್ರಮವಾಗಿ ಈ ಕಟ್ಟಡವನ್ನು ನಿರ್ಮಿಸಿದ್ದಾರೆ ಎಂದು ಹೇಳಿದ್ದರೆ, ಕಂಗನಾ ನಾನು ಅಕ್ರಮ ಎಸಗಿಲ್ಲ ಎಂದು ಹೇಳಿ ಕಂಗನಾ ಕೋರ್ಟ್‌ ಮೊರೆ ಹೋಗಿದ್ದರು.

    ಕೋರ್ಟ್‌ ಏನು ಹೇಳಿತ್ತು?
    ಬಾಂಬೆ ಹೈಕೋರ್ಟ್ 26 ಮಾರ್ಚ್ 2020ರಂದು ರಾಜ್ಯ ಸರ್ಕಾರ, ಬಿಎಂಸಿ ಮತ್ತು ಸಂಬಂಧಿತ ವಿಭಾಗಗಳು ಯಾರ ವಿರುದ್ಧವೂ ಆತುರದ ನಿರ್ಧಾರಗಳನ್ನ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶ ನೀಡಿತ್ತು. ಮಾರ್ಚ್ 26ರ ಆದೇಶಕ್ಕೆ ಸಂಬಂಧಿಸಿದಂತೆ ಕೋವಿಡ್‌ 19 ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 30ರವರೆಗೆ ವಿಚಾರಣೆಯನ್ನು ವಿಸ್ತರಿಸಿತ್ತು. ಈ ಕಾಲಾವಧಿಯಲ್ಲಿ ಯಾರೇ ಸಮಸ್ಯೆ ಅನುಭವಿಸಿದ್ದರೂ ಹೈಕೋರ್ಟ್ ಬಾಗಿಲು ತಟ್ಟಬಹುದು ಎಂದು ನ್ಯಾಯಾಲಯ ಹೇಳಿತ್ತು. ಈ ನಡುವೆ ನೋಟಿಸ್‌ ನೀಡಿದ 24 ಗಂಟೆಯ ಒಳಗಡೆ ಸೆಪ್ಟೆಂಬರ್‌ 9ರಂದು ಬಾಂದ್ರಾದಲ್ಲಿರುವ ಕಂಗನಾ ಅವರಿಗೆ ಸೇರಿದ ಪಲಿಹಿಲ್ ಬಂಗಲೆ ಅಕ್ರಮವಾಗಿದೆ ಎಂದು ಆರೋಪಿಸಿ ಬಿಎಂಸಿ ಕಟ್ಟಡದ ಒಂದು ಭಾಗವನ್ನು ತೆರವುಗೊಳಿಸಿತ್ತು.

    ನ್ಯಾಯಾಲಯದ ಆದೇಶವಿದ್ದರೂ ಬಿಎಂಸಿ ಉದ್ದೇಶಪೂರ್ವಕವಾಗಿ ತನ್ನ ವಿರುದ್ಧ ಸೇಡು ಕೈಗೊಳ್ಳಲು ಬಂಗಲೆಯನ್ನು ಕೆಡವಿದೆ ಎಂದು ಕಂಗನಾ ವಾಗ್ದಾಳಿ ನಡೆಸಿದ್ದರು.

  • ಅತ್ಯಾಚಾರಿಗಳ ಪುರುಷತ್ವ ಹರಣ – ಪಾಕಿಸ್ತಾನದಲ್ಲಿ ಕಠಿಣ ಕಾನೂನು ಜಾರಿ

    ಅತ್ಯಾಚಾರಿಗಳ ಪುರುಷತ್ವ ಹರಣ – ಪಾಕಿಸ್ತಾನದಲ್ಲಿ ಕಠಿಣ ಕಾನೂನು ಜಾರಿ

    ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರ ಅತ್ಯಾಚಾರ ಮಾಡಿದವರ ವಿರುದ್ಧ ಕಠಿಣ ಕಾನೂನು ಜಾರಿಗೆ ತಂದಿದೆ ಎಂದು ಅಲ್ಲಿನ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಮಂಗಳವಾರ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದವರ ಪುರುಷತ್ವ ಹರಣ (Chemical Castration) ಮಾಡುವ ಕಾನೂನನ್ನು ಜಾರಿಗೆ ತರಲು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಪಾಕ್ ಮಾಧ್ಯಮಗಳು ಸುದ್ದಿ ಮಾಡಿವೆ. ಅತ್ಯಾಚಾರ ಮಾಡಿದವರಿಗೆ ಕೆಮಿಕಲ್ ಕ್ಯಾಸ್ಟ್ರೇಶನ್ ಎಂಬ ರಾಸಾಯನಿಕ ಬಳಿಸಿ ಅವರು ಮುಂದೆ ಮತ್ತೆ ಸೆಕ್ಸ್ ಮಾಡದಂತೆ ಮಾಡಲು ನಿಯಮ ರೂಪಿಸಿದೆ.

    ಕೇಂದ್ರ ಸಂಪುಟ ಸಭೆಯಲ್ಲಿ ಪಾಕ್ ಕಾನೂನು ಸಚಿವರು ಅತ್ಯಾಚಾರ ವಿರೋಧಿ ಕರುಡನ್ನು ಮಂಡನೆ ಮಾಡಿದ್ದು, ಇದಕ್ಕೆ ಪ್ರಧಾನಿ ಇಮ್ರಾನ್ ಖಾನ್ ಸುಗ್ರೀವಾಜ್ಞೆಗೆ ಅನುಮೋದನೆ ಸೂಚಿಸಿದ್ದಾರೆ. ಜೊತೆಗೆ ಈ ಕಾಯ್ದೆಯ ಪ್ರಕಾರ ದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ತ್ವರಿತ ರೀತಿಯಲ್ಲಿ ವಿಚಾರಣೆ ಮಾಡಬೇಕು. ಪೊಲೀಸರು ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳಬೇಕು. ಅತ್ಯಾಚಾರ ಪ್ರಕರಣದಲ್ಲಿ ಹೆಚ್ಚು ಮಹಿಳಾ ಪೊಲೀಸರು ಭಾಗವಹಿಸಬೇಕು ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ.

    ಇದೇ ಸಂಪುಟ ಸಭೆಯಲ್ಲಿ ಕೆಲ ಸಚಿವರು ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ಕಾನೂನು ತನ್ನಿ ಎಂದು ಒತ್ತಾಯ ಮಾಡಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಮಾಡಿವೆ. ಆದರೆ ಇಮ್ರಾನ್ ಖಾನ್ ಸದ್ಯ ಅತ್ಯಾಚಾರಿಗಳಿಗೆ ಕೆಮಿಕಲ್ ಕ್ಯಾಸ್ಟ್ರೇಶನ್ ರಾಸಾಯನಿಕ ನೀಡುವ ಮೂಲಕ ಅವರೆಂದು ಸೆಕ್ಸ್ ಮಾಡದಂತೆ ಮಾಡಲಾಗುವುದು. ಈ ಕಾನೂನು ಜಾರಿಗೆ ಬರಲಿ ನಂತರ ಮುಂದಿನ ಕಾನೂನಿನ ಬಗ್ಗೆ ಯೋಚಿಸೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಹೇಳಿಕೆಯನ್ನು ಪಾಕ್ ಸರ್ಕಾರ ನೀಡಲ್ಲ.

    ಕಳೆದ 2018ರ ಜನವರಿಯಲ್ಲಿ ನಡೆದ ಏಳು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ನಂತರ, ಪಾಕಿಸ್ತಾನದಲ್ಲಿ ಈ ಕಾನೂನು ತರಬೇಕು ಎಂದು ಒತ್ತಾಯ ಕೇಳಿಬಂದಿತ್ತು. ಆದರೆ ಈಗ ಮತ್ತೆ ಲಹೋರ್‍ನಲ್ಲಿ ಒಂದು ಗ್ಯಾಂಗ್ ರೇಪ್ ನಡೆದಿದ್ದು, ಈ ವಿಚಾರ ಮತ್ತೆ ಮುನ್ನಲೆಗೆ ಬಂದಿತ್ತು. ಹೀಗಾಗಿ ಪಾಕಿಸ್ತಾನದ ಸರ್ಕಾರ ಈ ಕಾನೂನನ್ನು ಜಾರಿಗೆ ತಂದಿದೆ ಎನ್ನಲಾಗಿದೆ.

  • ಯುಪಿಯಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ

    ಯುಪಿಯಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ

    – ಸಂಪುಟ ಸಭೆಯಲ್ಲಿ ನಿರ್ಧರಿಸಿ ಸುಗ್ರೀವಾಜ್ಞೆ

    ಲಕ್ನೋ: ಲವ್ ಜಿಹಾದ್ ಕುರಿತು ಹೆಚ್ಚು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದಿದ್ದು, ಒಂದು ವೇಳೆ ಆರೋಪ ಸಾಬೀತಾದಲ್ಲಿ 5 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ರೂಪಿಸಲಾಗಿದೆ.

    ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕಾನೂನು ಸಚಿವಾಲಯದ ಬಳಿ ಈ ಕುರಿತು ಯುಪಿ ಸರ್ಕಾರ ಚರ್ಚಿಸಿತ್ತು. ಇದೀಗ ಸುಗ್ರೀವಾಜ್ಞೆ ಹೊರಡಿಸಿ ‘ಲವ್ ಜಿಹಾದ್’ ಕಾನೂನನ್ನು  ಜಾರಿಗೆ ತರಲಾಗಿದೆ.

    ಸುಗ್ರೀವಾಜ್ಞೆ ಹೊರಡಿಸುವ ಮುನ್ನ ಉತ್ತರ ಪ್ರದೇಶ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸುವುದಕ್ಕೂ ಮುನ್ನ ನಾವು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ಪರೀಕ್ಷೆ ಮಾಡಿದ್ದೇವೆ. ಬಳಿಕ ಕಾನೂನು ಜಾರಿಗೆ ತಂದಿದ್ದೇವೆ. ವಿವಾಹಕ್ಕಾಗಿ ಬಲವಂತವಾಗಿ ಮತಾಂತರ ನಡೆಸಿದರೆ ಅಪರಾಧಿಗಳಿಗೆ ಒಂದರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಕಾನೂನಿನಲ್ಲಿ ತಿಳಿಸಿದೆ.

    ಮುಂದಿನ ವಿಧಾನ ಸಭೆ ಅಧಿವೇಶನದಲ್ಲಿ ‘ಲವ್ ಜಿಹಾದ್’ ಎದುರಿಸಲು ಕಾನೂನು ರೂಪಿಸಲಿದ್ದೇವೆ ಎಂಬ ಆಡಳಿತ ಪಕ್ಷದ ಹೇಳಿಕೆಗೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಲವ್ ಜಿಹಾದ್ ಬಿಜೆಪಿಯವರೇ ಹುಟ್ಟು ಹಾಕಿರುವ ಪದ ಎಂದು ವಾಗ್ದಾಳಿ ನಡೆಸಿದ್ದವು.

    ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ನಾಯಕ ಕೈಲಾಶ್ ವಿಜಯ್‍ವರ್ಗಿಯಾ, ಲವ್ ಜಿಹಾದ್‍ನ ಅರ್ಥವನ್ನು ನಾವು ಅರಿಯಬೇಕಿದೆ. ಅಂತರ್ ಧರ್ಮ ವಿವಾಹಗಳ ಹಿಂದಿನ ಪಿತೂರಿಯನ್ನು ಅರಿತು ಕಾನೂನು ರೂಪಿಸಲಾಗಿದೆ. ಪ್ರೀತಿ, ಪ್ರೇಮ ಹಿಂದಿನಿಂದಲೂ ಇದೆ. ಅದು ಧರ್ಮ ಅಥವಾ ಜಾತಿಯನ್ನು ನೋಡುವುದಿಲ್ಲ. ಆದರೆ ಯಾರಾದರೂ ಮತಾಂತರದ ಉದ್ದೇಶದಿಂದ ಮತ್ತೊಬ್ಬರನ್ನು ಪ್ರೀತಿಸಿ ಮದುವೆಯಾದರೆ ಅದು ತಪ್ಪು. ಇದಕ್ಕಾಗಿ ಕಾನೂನು ರೂಪಿಸಲಾಗಿದೆ ಎಂದು ವಿವರಿಸಿದ್ದಾರೆ.

  • ಉತ್ತರ ಪ್ರದೇಶದ ಬಳಿಕ ಕರ್ನಾಟಕದಲ್ಲೂ ಲವ್‌ ಜಿಹಾದ್‌ ನಿಯಂತ್ರಣಕ್ಕೆ ಕ್ರಮ – ಕಾನೂನಿನಲ್ಲಿ ಏನಿರಲಿದೆ?

    ಉತ್ತರ ಪ್ರದೇಶದ ಬಳಿಕ ಕರ್ನಾಟಕದಲ್ಲೂ ಲವ್‌ ಜಿಹಾದ್‌ ನಿಯಂತ್ರಣಕ್ಕೆ ಕ್ರಮ – ಕಾನೂನಿನಲ್ಲಿ ಏನಿರಲಿದೆ?

    ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ವಿಚಾರ ಮತ್ತೆ ಸದ್ದು ಮಾಡ್ತಿದೆ. ಬಿಜೆಪಿ ಆಳ್ವಿಕೆಯ ಉತ್ತರಪ್ರದೇಶ ಹಾಗೂ ಹರ್ಯಾಣ ರಾಜ್ಯಗಳಲ್ಲಿ ಹೊಸ ಕಾನೂನು ಜಾರಿಗೆ ಬರುತ್ತಿರುವ ಹೊತ್ತಲ್ಲೇ, ರಾಜ್ಯದಲ್ಲೂ ಕಠಿಣ ಕಾನೂನು ಜಾರಿಗೆ ಒತ್ತಡ ಜಾಸ್ತಿಯಾಗಿದೆ.

    ರಾಜ್ಯದಲ್ಲಿ ಲವ್ ಜಿಹಾದ್ ನಿಯಂತ್ರಣಕ್ಕೆ ಉತ್ತರಪ್ರದೇಶ ಮಾದರಿಯಲ್ಲೇ ಸುಗ್ರೀವಾಜ್ಞೆ ಜಾರಿಗೊಳಿಸುವಂತೆ ಬಿಜೆಪಿ ನಾಯಕರು ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಮಂಗಳೂರಿನಲ್ಲಿ ನಾಳೆ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದ್ದು, ಕಠಿಣ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇವೆ.

    ಹೊಸ ಕಾನೂನಿನಲ್ಲಿ ಲವ್ ಜಿಹಾದ್‍ಗೆ ಮಟ್ಟ ಹಾಕುವುದರ ಜೊತೆಗೆ ಮತಾಂತರಗೊಳ್ಳುವ ಸಲುವಾಗಿ ಮದುವೆ ಆಗುವುದನ್ನು ತಡೆಯಲು ನಿರ್ಬಂಧ ಹೇರುವ ಸಾಧ್ಯತೆ ಇವೆ.

     

    ಕಾನೂನಿನಲ್ಲಿ ಏನಿರಲಿದೆ?
    ಲವ್ ಜಿಹಾದ್ ಸಾಬೀತಾದರೆ ಶಿಕ್ಷಾರ್ಹ ಅಪರಾಧವಾಗಿದ್ದು 1 ರಿಂದ 3 ವರ್ಷ ಜೈಲು ಶಿಕ್ಷೆ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ 10 ಸಾವಿರ ರೂ. ದಿಂದ ಆರಂಭಗೊಂಡು 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ. ಡಿಸಿ ನೇತೃತ್ವದಲ್ಲಿ ಬಲವಂತ ಮತಾಂತರ ಪ್ರಕರಣಗಳ ವಿಚಾರಣೆ ನಡೆಸಲು ಅವಕಾಶ ನೀಡುವ ಅಂಶ ಇರುವ ಸಾಧ್ಯತೆಯಿದೆ.

    ಅಲಹಾಬಾದ್‌ ಹೈಕೋರ್ಟ್‌ ಏನು ಹೇಳಿದೆ?
    ಲವ್ ಜಿಹಾದ್ ಸಂಬಂಧ ಸೆಪ್ಟೆಂಬರ್ 23ರಂದು ಅಲಹಾಬಾದ್ ಹೈಕೋರ್ಟ್ ತೀರ್ಪೋಂದನ್ನು ನೀಡಿತ್ತು. ಖುರಾನ್‍ನಲ್ಲಿನ ಒಂದು ಅಂಶವನ್ನು ಉಲ್ಲೇಖಿಸಿ, ಮದುವೆಯ ಉದ್ಧೇಶಕ್ಕಾಗಿ ಮತಾಂತರವಾದರೆ ಅದು ಸ್ವೀಕೃತವಲ್ಲ ಎಂದು ಹೇಳಿತ್ತು. ಈ ಆದೇಶವನ್ನೇ ಮುಂದಿಟ್ಟುಕೊಂಡು ಉತ್ತರಪ್ರದೇಶ ಸರ್ಕಾರ ಹೊಸ ಕಾನೂನಿಗೆ ಮುಂದಾಗಿದೆ.

    ಕೇರಳದ ಹಾದಿಯಾ ಪ್ರಕರಣ ಉಲ್ಲೇಖಿಸಿದ ಕೋರ್ಟ್‌ ಕೇವಲ ಮದುವೆಗಾಗಿ ಮತಾಂತರ ಆಗುವಂತಿಲ್ಲ. ಮಹಿಳೆಯು ಮತಾಂತರಗೊಂಡ ಒಂದು ತಿಂಗಳಲ್ಲೇ ವಿವಾಹ ನಡೆದಿದೆ. ವಿವಾಹದ ಉದ್ದೇಶದಿಂದಲೇ ಮಹಿಳೆ ಮತಾಂತರವಾಗಿದ್ದಾಳೆ. ಇಸ್ಲಾಂ ಬಗ್ಗೆ ಜ್ಞಾನವಿಲ್ಲದೆ, ನಂಬಿಕೆ ಇಲ್ಲದೆ ಮತಾಂತರವಾಗುವಂತಿಲ್ಲ. ವಿವಾಹದ ಉದ್ದೇಶಕ್ಕಾಗಿ ಮತಾಂತರವದರೆ ಸ್ವೀಕೃತವಲ್ಲ ಎಂದು ಖುರಾನ್‍ನಲ್ಲಿ ಉಲ್ಲೇಖವಾಗಿರುವ ಈ ಮದುವೆ ಹೇಗೆ ಸ್ವೀಕೃತವಾಗುತ್ತದೆ ಎಂದು ಪ್ರಶ್ನಿಸಿದೆ.

  • ಪ್ರೀತಿಸುವಾಗ ಅಡ್ಡ ಬಾರದ ಧರ್ಮ ಮದುವೆ ಬಳಿಕ ಅಡ್ಡ ಯಾಕೆ ಬರುತ್ತೆ – ಪ್ರತಾಪ್ ಸಿಂಹ

    ಪ್ರೀತಿಸುವಾಗ ಅಡ್ಡ ಬಾರದ ಧರ್ಮ ಮದುವೆ ಬಳಿಕ ಅಡ್ಡ ಯಾಕೆ ಬರುತ್ತೆ – ಪ್ರತಾಪ್ ಸಿಂಹ

    ಮಡಿಕೇರಿ: ಪ್ರೀತಿಸುವಾಗ ಅಡ್ಡ ಬಾರದ ಧರ್ಮ ಮದುವೆಯಾಗುವಾಗ ಅಡ್ಡಬರುವುದೇಕೆ ಎಂದು ಪ್ರಶ್ನಿಸುವ ಮೂಲಕ ಲವ್ ಜಿಹಾದ್ ಕಾನೂನು ಅನುಷ್ಠಾನಕ್ಕೆ ತರುವ ಶಾಸಕ ಸಿ.ಟಿ.ರವಿ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಉತ್ತರ ಪ್ರದೇಶದಲ್ಲಿ ವಿವಾಹವಾಗುವ ಮೊದಲು ಮತಾಂತರಕ್ಕೆ ಒತ್ತಡ ಹೇರುವಂತಿಲ್ಲ. ಒಂದು ವೇಳೆ ಹಾಗೆ ಮಾಡಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ನಮ್ಮಲ್ಲಿ ಕೂಡ ಆ ಕಾನೂನು ಜಾರಿ ಮಾಡುವುದಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ ಎಂದರು.

    ಮದುವೆಯಾಗಲು ಮತಾಂತರ ಆಗುವುದು ಕಡ್ಡಾಯ ಎನ್ನುವವರು ನಿಜವಾಗಿ ಧರ್ಮಾಂಧರು. ಕೆಲವರಲ್ಲಿ ರಕ್ತಗತವಾಗಿಯೇ ಮತಾಂಧತೆ ಅಡಗಿದೆ. ಸಿಎಂ ಯಡಿಯೂರಪ್ಪ ಅವರು ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ರದ್ದುಪಡಿಸಿದಂತೆ ಮುಂದಿನ ದಿನಗಳಲ್ಲಿ ಲವ್ ಜಿಹಾದ್‍ಗೆ ಕಠಿಣವಾದ ಕಾನೂನು ರೂಪಿಸುತ್ತಾರೆ ಎನ್ನುವ ಭರವಸೆ ಇದೆ ಎಂದು ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಅವರಿಂದಾಗಿ ನೀವು ಇಲ್ಲಿದ್ದೀರಿ ಎಂಬುದನ್ನು ಮರೆಯಬೇಡಿ – ತಂದೆಯನ್ನು ಹೊರಹಾಕಿದ ಪುತ್ರರಿಗೆ ಸುಪ್ರೀಂ ಚಾಟಿ

    ಅವರಿಂದಾಗಿ ನೀವು ಇಲ್ಲಿದ್ದೀರಿ ಎಂಬುದನ್ನು ಮರೆಯಬೇಡಿ – ತಂದೆಯನ್ನು ಹೊರಹಾಕಿದ ಪುತ್ರರಿಗೆ ಸುಪ್ರೀಂ ಚಾಟಿ

    ನವದೆಹಲಿ:ಜನ್ಮ ಕೊಟ್ಟ ತಂದೆಯನ್ನೇ ಮನೆಯಿಂದ ಹೊರ ಹಾಕಿದ್ದಕ್ಕೆ ಇಬ್ಬರು ಪುತ್ರರಿಗೆ ಸುಪ್ರೀಂ ಕೋರ್ಟ್‌ ಚಾಟಿ ಬೀಸಿ ವೃದ್ಧಾಪ್ಯದಲ್ಲಿ ಅವರನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂದು ಖಾರವಾಗಿ ಪ್ರಶ್ನಿಸಿದೆ.

    ವಯೋ ವೃದ್ಧನಾಗಿರುವ ನನಗೆ ನಿರ್ವಹಣೆಯ ವೆಚ್ಚವನ್ನೂ ನೀಡದೇ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ದುಡಿಯುತ್ತಿರುವ ಇಬ್ಬರು ಪುತ್ರರು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಮೂಲದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

    ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ, ನೀವು ತಂದೆಯವರಿಗೆ ಸಹಾಯ ಮಾಡುವುದಿಲ್ಲ ಯಾಕೆ? ಇವರು ನಿಮ್ಮ ತಂದೆ. ವೃದ್ಧಾಪ್ಯದಲ್ಲಿ ಅವರನ್ನು ಕಡೆಗಣಿಸಿದ್ದು ಎಷ್ಟು ಸರಿ? ನೀವು ಈ ಹಂತಕ್ಕೆ ಬರಲು ನಿಮ್ಮ ತಂದೆ ಕಾರಣ ಎಂಬುದನ್ನು ಮರೆಯಬೇಡಿ ಎಂದು ಹೇಳಿ ಇಬ್ಬರು ಸಹೋದರರ ನಿರ್ಲಕ್ಷ್ಯದ ನಡೆಯನ್ನು ಕಟು ಪದಗಳಲ್ಲಿ ಟೀಕಿಸಿತು.

    ಅವರ ಶ್ರಮದಿಂದ ಈಗ ನೀವು ಉನ್ನತ ಶಿಕ್ಷಣ ಕಲಿತು ಉದ್ಯೋಗ ಪಡೆದುಕೊಂಡಿದ್ದೀರಿ. ನಿಮಗೆ ಆಸ್ತಿ ಬಂದಿರುವುದೇ ನಿಮ್ಮ ತಂದೆಯಿಂದ. ಹೀಗಿರುವಾಗ ಈ ಸಮಯದಲ್ಲೂ ಮನೆಯಿಂದ ಹೊರಹಾಕಿದ್ದು ಎಷ್ಟು ಸರಿ ಎಂದು ನ್ಯಾಯಪೀಠ ಖಾರವಾಗಿ ಪ್ರಶ್ನಿಸಿತು.

    ವಯೋವೃದ್ದ ತಂದೆಯನ್ನು ಮನೆ ಬಿಟ್ಟು ಹೊರಹೋಗುವಂತೆ ಒತ್ತಾಯಿಸುವುದು ಮತ್ತು ಹಣಕಾಸಿನ ನೆರವು ನೀಡಲು ನಿರಾಕರಿಸುವುದು ಕ್ಷಮಾರ್ಹವಲ್ಲ. ತಂದೆಯ ಪೂರ್ವಜರಿಂದ ಬಂದಿರುವ ಆಸ್ತಿಯನ್ನು ನೀವು ಪಡೆದುಕೊಂಡಿದ್ದೀರಿ. ಆದರೆ ಬಾಡಿಗೆಯ ಸ್ವಲ್ಪ ಭಾಗವನ್ನೂ ತಂದೆಗೆ ಯಾಕೆ ನೀಡುವುದಿಲ್ಲ? ಪೂರ್ವಜರ ಆಸ್ತಿಯ ಮೇಲಿರುವ ತಂದೆಯ ಹಕ್ಕನ್ನು ಕಸಿಯಲಾಗದು ಎಂದು ಕೋರ್ಟ್‌ ಈ ವೇಳೆ ಅಭಿಪ್ರಾಯಪಟ್ಟಿತು.

    ನನ್ನನ್ನು ಇಬ್ಬರು ಗಂಡು ಮಕ್ಕಳು ಮನೆಯಿಂದ ಹೊರ ಹಾಕಿದ್ದಾರೆ ಎಂದು ಆರೋಪಿಸಿ ವಯೋ ವೃದ್ಧ ತಂದೆ ಟ್ರಿಬ್ಯುನಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌ ಇಬ್ಬರು ಪುತ್ರರಿಗೆ ತಂದೆಯ ನಿರ್ವಹಣಾ ವೆಚ್ಚವಾಗಿ ಪ್ರತಿ ತಿಂಗಳು 7 ಸಾವಿರ ರೂ. ಪಾವತಿಸುವಂತೆ ಆದೇಶಿಸಿತ್ತು. ತಂದೆ-ತಾಯಿ ನಿರ್ವಹಣೆ, ಕಲ್ಯಾಣಕ್ಕೆ ಸಬಂಧಿಸಿದಂತೆ 2007ರ ಹಿರಿಯ ನಾಗರಿಕರ ಕಾಯ್ದೆಯ ಅಡಿ ಈ ಆದೇಶವನ್ನು ಪುತ್ರರು ಪ್ರಶ್ನಿಸಿದ್ದರಿಂದ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

    ಹೈಕೋರ್ಟ್‌ ತಡೆ ನೀಡಿದ್ದನ್ನು ಪ್ರಶ್ನಿಸಿ ವೃದ್ಧ ತಂದೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಈ ಕಾಲದಲ್ಲಿ ಜೀವನ ನಿರ್ವಹಣೆಗೆ ಪ್ರತಿ ತಿಂಗಳು 10 ಸಾವಿರ ರೂ. ಪಾವತಿಸುವಂತೆ ಆದೇಶ ನೀಡಬೇಕೆಂದು ತಂದೆಯ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗಳಿಗೆ ಒಂದು ವಾರದೊಳಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಇಬ್ಬರೂ ಮಕ್ಕಳಿಗೆ ನೋಟಿಸ್ ಜಾರಿ ಮಾಡಿದೆ.

  • ಸುಶಾಂತ್ ಕೇಸ್‌, ರಿಯಾಗೆ ಹಿನ್ನಡೆ – ಸಿಬಿಐ ತನಿಖೆಗೆ ಅಸ್ತು

    ಸುಶಾಂತ್ ಕೇಸ್‌, ರಿಯಾಗೆ ಹಿನ್ನಡೆ – ಸಿಬಿಐ ತನಿಖೆಗೆ ಅಸ್ತು

    ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ತನಿಖೆಯನ್ನು ಸಿಬಿಐಗೆ ಹಸ್ತಾರಿಸುವಂತೆ ಮುಂಬೈ ಪೊಲೀಸರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಮಾಜಿ ಗೆಳತಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಹೃಷಿಕೇಶ್ ನೇತೃತ್ವದ ಏಕ ಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಈ ಮಹತ್ವದ ತೀರ್ಪು ನೀಡಿದೆ.

    ಕಳೆದ ಒಂದು ತಿಂಗಳಿನಿಂದ ಯಾವ ರಾಜ್ಯದ ಪೊಲೀಸರು ಸಾವಿನ ಪ್ರಕರಣದ ತನಿಖೆ ಯಾರು ನಡೆಸಬೇಕು ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್‌ ಈಗ ಮಹತ್ವದ ಆದೇಶವನ್ನು ಪ್ರಕಟಿಸುವ ಮೂಲಕ ಪೂರ್ಣವಿರಾಮ ಹಾಕಿದೆ.

    ಆದೇಶದಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಕುರಿತು ಕೇಂದ್ರೀಯ ತನಿಖಾ ದಳದ ತನಿಖೆ ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಇಂದು ಅಭಿಪ್ರಾಯಪಟ್ಟಿದೆ. ಜೊತೆಗೆ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ದಾಖಲಾದ ಇತರ ಯಾವುದೇ ಪ್ರಕರಣಗಳನ್ನು ಪರಿಶೀಲಿಸುವಂತೆ ನ್ಯಾಯಾಲಯ ಸಿಬಿಐಗೆ ನಿರ್ದೇಶನ ನೀಡಿತು. ತನಿಖೆಯಲ್ಲಿ ಸಿಬಿಐಗೆ ಸಹಾಯ ಮಾಡಲು ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶಿಸಲಾಗಿದೆ.

    ಆತ್ಮಹತ್ಯೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಪಾಟ್ನಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ಪೋಷಕರು ದೂರು ಸಲ್ಲಿಸಿದ್ದರು. ಈ ಪ್ರಕರಣದಿಂದ ತಮ್ಮ ಹೆಸರು ಕೈ ಬಿಡುವಂತೆ ಮತ್ತು ಪ್ರಕರಣದ ಎಲ್ಲ ವಿಚಾರಣೆ ಮುಂಬೈಗೆ ವರ್ಗಾಯಿಸಲು ಕೋರಿ ರಿಯಾ ಚಕ್ರವರ್ತಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

    ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಪ್ರಕರಣ ವರ್ಗಾವಣೆಗೆ ಎರಡು ರಾಜ್ಯದ ಪೊಲೀಸರು ವಿರೋಧ ವ್ಯಕ್ತಪಡಿಸಿದರು. ಕಾನೂನು ವ್ಯಾಪ್ತಿಯ ಬಗ್ಗೆ ಪ್ರಸ್ತಾಪಿಸಿದ್ದರು. ಮುಂಬೈಗೆ ಪ್ರಕರಣ ವರ್ಗಾವಣೆ ಸಾಧ್ಯವಿಲ್ಲ ಎಂದು ಪಾಟ್ನಾ ಪೊಲೀಸರು ವಾದಿಸಿದ್ದರು.

    ಈ ನಡುವೆ ಪ್ರಕರಣ ವಿಚಾರಣೆ ಸಿಬಿಐ ನಡೆಸಲಿ ಎಂದು ಸುಶಾಂತ್ ಸಿಂಗ್ ಪೋಷಕರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಬಿಹಾರದಲ್ಲಿ ದೂರು ದಾಖಲಾಗುವ ಮುನ್ನ ಸಿಬಿಐ ನಲ್ಲಿ ಪ್ರಕರಣ ತನಿಖೆ ಆರಂಭವಾದ ಹಿನ್ನಲೆ ಇಡೀ ಪ್ರಕರಣ ವಿಚಾರಣೆಯನ್ನು ಸಿಬಿಐ ನಡೆಸಲಿ ಎನ್ನುವ ಅಭಿಪ್ರಾಯಕ್ಕೆ ಸುಪ್ರೀಂಕೋರ್ಟ್ ಬಂದಿದೆ.

    ರಿಯಾ ಚಕ್ರವರ್ತಿ ಆರಂಭದಲ್ಲಿ ಸಿಬಿಐ ತನಿಖೆಯನ್ನು ಕೋರಿದ್ದರು. ನಂತರ ಆಕ್ಷೇಪಿಸಿದ್ದರು. ಕೊನೆಗೆ ಸುಪ್ರೀಂ ಕೋರ್ಟ್‌ ಆದೇಶಿಸಿದರೆ ಸಿಬಿಐ ತನಿಖೆಗೆ ಒಪ್ಪಿಕೊಳ್ಳುವುದಾಗಿ ಹೇಳಿದ್ದರು.

  • ಕೋಲಾ, ಥಮ್ಸ್‌ ಅಪ್‌ ನಿಷೇಧಿಸಲು ಆಗ್ರಹಿಸಿದ ವ್ಯಕ್ತಿಗೆ 5 ಲಕ್ಷ ದಂಡ

    ಕೋಲಾ, ಥಮ್ಸ್‌ ಅಪ್‌ ನಿಷೇಧಿಸಲು ಆಗ್ರಹಿಸಿದ ವ್ಯಕ್ತಿಗೆ 5 ಲಕ್ಷ ದಂಡ

    ನವದೆಹಲಿ: ಕೋಕಾ-ಕೋಲಾ ಮತ್ತು ಥಮ್ಸ್‌ ಅಪ್‌ ಪಾನೀಯವನ್ನು ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ಸುಪ್ರೀಂ ಕೋರ್ಟ್‌ 5 ಲಕ್ಷ ರೂ. ದಂಡವನ್ನು ವಿಧಿಸಿದೆ.

    ಉಮೇದ್‌ಸಿನ್ಹಾ ಎಂಬವರು ಕೋಕಾ-ಕೋಲಾ ಮತ್ತು ಥಮ್ಸ್‌ ಅಪ್‌ ಪಾನೀಯವನ್ನು ನಿಷೇಧಿಸುವಂತೆ ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್‌, ಹೇಮಂತ್‌ ಗುಪ್ತಾ, ಅಜಯ್‌ ರಸ್ತೋಗಿ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು.

    ಈ ವೇಳೆ ಪಾನೀಯ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಸಾಕ್ಷ್ಯಗಳು ಪರಿಪೂರ್ಣವಾಗಿಲ್ಲ. ಅಷ್ಟೇ ಅಲ್ಲದೇ ಈ ಎರಡೂ ಬ್ರಾಂಡ್‌ ಗಳನ್ನು ಮಾತ್ರ ಗುರಿಯಾಗಿಸಿದ್ದು ಯಾಕೆ ಎಂದು ಪೀಠ ಪ್ರಶ್ನಿಸಿ ಅರ್ಜಿಯನ್ನು ವಜಾಗೊಳಿಸಿದೆ.

    ಪರಿಚ್ಚೇಧ 32ರ ಅಡಿ ಹಕ್ಕು ಇದೆ ಎಂದು ಎಲ್ಲ ವಿಚಾರಕ್ಕೂ ಪಿಐಎಲ್‌ ಸಲ್ಲಿಸುವುದು ಸರಿಯಲ್ಲ. ಯಾವುದೇ ತಾಂತ್ರಿಕ ಜ್ಞಾನ ಇಲ್ಲದೇ ಈ ರೀತಿಯ ಅರ್ಜಿ ಸಲ್ಲಿಸಿ ಕೋರ್ಟ್‌ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದ್ದಕ್ಕೆ 5 ಲಕ್ಷ ರೂ. ದಂಡವನ್ನು ವಿಧಿಸುತ್ತಿದ್ದೇವೆ. ಒಂದು ತಿಂಗಳ ಒಳಗಡೆ ದಂಡವನ್ನು ಸುಪ್ರೀಂ ಕೋರ್ಟ್‌ಗೆ ಪಾವತಿಸಬೇಕು ಎಂದು ಪೀಠ ಸೂಚಿಸಿದೆ.

    ಅರ್ಜಿದಾರರು ಕೋಕಾ-ಕೋಲಾ ಮತ್ತು ಥಮ್ಸ್‌ ಅಪ್‌ ಕಂಪನಿಗಳ ಪಾನೀಯ ಮಾರಾಟಕ್ಕೆ ಕೇಂದ್ರ ಸರ್ಕಾರ ನೀಡಿರುವ ವೈಜ್ಞಾನಿಕ ವರದಿಯನ್ನು ಸಲ್ಲಿಸುವಂತೆ ಕೋರ್ಟ್‌ ಆದೇಶಿಸಬೇಕೆಂದು ಮನವಿ ಮಾಡಿದ್ದರು.

  • ಲಾಕ್‍ಡೌನ್ ಎಫೆಕ್ಟ್- ಅಕ್ರಮ ಸಂಬಂಧ ಬ್ಯಾನ್

    ಲಾಕ್‍ಡೌನ್ ಎಫೆಕ್ಟ್- ಅಕ್ರಮ ಸಂಬಂಧ ಬ್ಯಾನ್

    – ಇಬ್ಬರಿಗಿಂತ ಹೆಚ್ಚು ಜನ ಸೇರುವಂತಿಲ್ಲ

    ಲಂಡನ್: ಕೊರೊನಾ ವೈರಸ್ ಹಿನ್ನೆಲೆ ಜೀವನ ಕ್ರಮದಲ್ಲಿ ಈಗಾಗಲೇ ಹಲವು ಬದಲಾವಣೆಗಳಾಗಿದ್ದು, ಇದೀಗ ಇಂಗ್ಲೆಂಡ್ ಲಾಕ್‍ಡೌನ್‍ಗೆ ಸಂಬಂಧಿಸಿದಂತೆ ಮತ್ತೊಂದು ಬದಲಾವಣೆ ತಂದಿದೆ.

    ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಹೊಸ ಮಾರ್ಗಸೂಚಿ ರಚಿಸಿದ್ದು, ಅಕ್ರಮ ಸಂಬಂಧವನ್ನು ಬ್ಯಾನ್ ಮಾಡಿ ಆದೇಶಿಸಿದೆ. ಈ ನಿಯಮದ ಪ್ರಕಾರ ಮನೆಯಲ್ಲಿ ಜೊತೆಯಾಗಿದ್ದರೆ ಮಾತ್ರ ಲೈಂಗಿಕ ಕ್ರಿಯೆ ನಡೆಸಬೇಕು. ಹೊರಗಿನ ವ್ಯಕ್ತಿ ಅಥವಾ ಹೆಚ್ಚು ಜನರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದರೆ ಕಾನೂನಿಗೆ ವಿರುದ್ಧವಾಗಲಿದೆ. ಇದನ್ನೂ ಓದಿ: ಲಾಕ್‍ಡೌನ್ ವೇಳೆ ಸೆಕ್ಸ್​ಗಾಗಿ ಸಂಗಾತಿಯನ್ನ ಹುಡುಕಿಕೊಳ್ಳಿ: ಆರ್‍ಐವಿಎಂ ಸಲಹೆ

    ಈ ಹಿಂದೆ ಸೂಕ್ತ ಕಾರಣವಿಲ್ಲದೆ ಪ್ರಯಾಣಿಸುವುದು ಶಿಕ್ಷಾರ್ಹ ಅಪರಾಧ ಎಂದು ಅಲ್ಲಿನ ಸರ್ಕಾರ ಹೇಳಿತ್ತು. ಆದರೆ ಮತ್ತೊಬ್ಬ ವ್ಯಕ್ತಿ ಭೇಟಿ ಕುರಿತು ಪ್ರಸ್ತಾಪಿಸಿರಲಿಲ್ಲ. ಇದೀಗ ಇದಕ್ಕೂ ಸರ್ಕಾರ ಬ್ರೇಕ್ ಹಾಕಿದೆ. ಒಂದು ವೇಳೆ ಇಬ್ಬರಿಗಿಂತ ಹೆಚ್ಚು ಜನ ಒಟ್ಟಿಗೆ ಸೇರಿದರೆ, ಹೊಸ ಮಾರ್ಗಸೂಚಿಗಳ ನಿಯಮದಂತೆ ಇಬ್ಬರನ್ನೂ ವಿಚಾರಣೆಗೊಳಪಡಿಸಲಾಗುವುದು ಎಂದಿದೆ. ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ವೀರ್ಯ ಕುಡಿಯುತ್ತಿದ್ದಾಳೆ ಮಹಿಳೆ

    ಸೋಮವಾರ ಈ ಕಾನೂನನ್ನು ಪರಿಚಯಿಸಲಾಗಿದ್ದು, ಇದರನ್ವಯ ಸೂಕ್ತ ಕಾರಣವಿಲ್ಲದೆ ಇಬ್ಬರಿಗಿಂತ ಅಧಿಕ ಜನ ಮನೆಯೊಳಗೆ ವಾಸಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಅಥವಾ ಖಾಸಗಿ ಸ್ಥಳಗಳಲ್ಲಿ ಎರಡಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಯಾವುದೇ ಕೂಟಗಳಲ್ಲಿ ಭಾಗವಹಿಸುವಂತಿಲ್ಲ. ಅಲ್ಲದೆ ಮನೆಯಲ್ಲಿರುವವರೊಂದಿಗೇ ಲೈಂಗಿಕ ಕ್ರಿಯೆ ನಡೆಸಬೇಕು, ಹೊರಗಿನವರೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತಿಲ್ಲ ಎಂದು ನಿಯಮದಲ್ಲಿ ತಿಳಿಸಿದೆ.