Tag: law

  • ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು – ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು

    ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು – ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು

    – ಕೇರಳ, ಯುಪಿ ಮಾದರಿಯಲ್ಲಿ ಕಾನೂನು ಕ್ರಮ ಜಾರಿ
    – ಶೀಘ್ರವೇ ಸುಗ್ರೀವಾಜ್ಞೆ ಸಾಧ್ಯತೆ

    ಬೆಂಗಳೂರು: ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಕೇರಳ ಮತ್ತು ಉತ್ತರಪ್ರದೇಶ ರಾಜ್ಯಗಳ ಮಾದರಿಯಲ್ಲಿ ಕಾನೂನು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ಮಾಡಿದ್ದು, ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ.

    ಸರ್ಕಾರದ ತರಲಿರುವ ಹೊಸ ಕಾನೂನಿನಲ್ಲಿ ಏನೇನು ಇರಲಿದೆ?
    * ಯುಪಿ ಹಾಗೂ ಕೇರಳ ರಾಜ್ಯಗಳ ಸುಗ್ರೀವಾಜ್ಞೆಯಲ್ಲಿನ ಉಪಯುಕ್ತ ಅಂಶಗಳು ರಾಜ್ಯದ ಕಾನೂನಿನಲ್ಲಿ ತರಲಾಗುತ್ತಿದೆ.
    * ಸರ್ಕಾರದ ಸಿಬ್ಬಂದಿ ಕರ್ತವ್ಯಕ್ಕೆ ಧಕ್ಕೆ ಉಂಟು ಮಾಡಿದರೆ ಕನಿಷ್ಠ ಎರಡು ವರ್ಷ ಜೈಲು.
    * ಆಶಾ ಕಾರ್ಯಕರ್ತೆಯರಿಗೆ, ಪೊಲೀಸರಿಗೆ, ವೈದ್ಯರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಗುಂಡಾ ಕಾಯ್ದೆ ಪ್ರಯೋಗ.
    * ಸೋಂಕು ಹರಡುವವರಿಗೆ ಹಾಗೂ ಪ್ರಚೋದನೆ ನೀಡುವವರ ವಿರುದ್ಧ ಗೂಂಡಾ ಕಾಯ್ದೆ ಬಳಕೆ.
    * ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ನಷ್ಟ ಭರಿಸಿಕೊಳ್ಳುವುದು.
    * ಸೋಶಿಯಲ್ ಮಿಡಿಯಾದಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ.

    ಹೊಸ ಕಾನೂನಿನ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇರಳ, ಉತ್ತರಪ್ರದೇಶ ಮಾದರಿಯಲ್ಲಿ ಸುಗ್ರೀವಾಜ್ಞೆ ಅಂತಿಮವಾಗಿದೆ. ಕಾನೂನು ಇಲಾಖೆ ಜೊತೆ ಚರ್ಚೆ ಮಾಡಿ ಆದೇಶ ಹೊರಡಿಸುತ್ತೇವೆ. ಹೆಚ್ಚು ಸೆಕ್ಷೆನ್‍ಗಳನ್ನು ಹಾಕುವುದು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದನ್ನ ಸುಗ್ರೀವಾಜ್ಞೆಯಲ್ಲಿ ಸೇರಿಸುತ್ತೇವೆ ಎಂದು ತಿಳಿಸಿದರು.

    ಪಾದರಾಯನಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ಪಾದರಾಯನಪುರ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ. ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ನಡೆಸಲು ಸೂಚಿಸಿದ್ದೇನೆ. ವರದಿ ಬಂದ ಬಳಿಕ ಮತ್ತಷ್ಟು ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

    ರಂಜಾನ್ ಹಿನ್ನೆಯೆಯಲ್ಲಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ. ವಕ್ಫ್ ಬೋರ್ಡ್ ಕೂಡ ನಿರ್ದೇಶನ ನೀಡಿದೆ. ಹೀಗಾಗಿ ವಕ್ಫ್ ಬೋರ್ಡ್ ನಿರ್ದೇಶನ ಪಾಲಿಸಬೇಕು. ಇದನ್ನ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

    ಕೊರೊನಾಗೆ ಬಲಿಯಾದ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಶಾಸಕ ಜಮೀರ್ ಅಹ್ಮದ್ ಭಾಗವಹಿಸಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಜನಪ್ರತಿನಿಧಿಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯೂ ಜಮೀರ್ ಮೇಲಿದೆ. ಈ ಕಾರ್ಯಕ್ರಮದಲ್ಲಿ ಗರಿಷ್ಠ 20 ಮಂದಿ ಭಾಗವಹಿಸಲು ಅನುಮತಿಯಿದೆ. ಹೀಗಾಗಿ ಶವಸಂಸ್ಕಾರದಲ್ಲಿ ಜಮೀರ್ ಪಾಲ್ಗೊಂಡಿದ್ದಾರೆ ಎಂದು ಉತ್ತರಿಸಿದರು.

  • ಉಡುಪಿಯಲ್ಲಿ ವಿನಾಯಿತಿ ದುರುಪಯೋಗ ಮಾಡಿದ ಮೀನುಗಾರರು, ಮತ್ಸಪ್ರೀಯರು

    ಉಡುಪಿಯಲ್ಲಿ ವಿನಾಯಿತಿ ದುರುಪಯೋಗ ಮಾಡಿದ ಮೀನುಗಾರರು, ಮತ್ಸಪ್ರೀಯರು

    ಉಡುಪಿ: ಸರ್ಕಾರ ಮೀನುಗಾರರಿಗೆ ಕೊಟ್ಟ ವಿನಾಯಿತಿ ಉಡುಪಿಯಲ್ಲಿ ದುರುಪಯೋಗವಾಗುತ್ತಿದೆ. ಬೈಂದೂರಲ್ಲಿ ಮೀನುಗಾರರು ಮತ್ತು ಸಾರ್ವಜನಿಕರು ಕಾನೂನನ್ನು ಗಾಳಿಗೆ ತೂರಿದ್ದಾರೆ.

    ದೇಶಾದ್ಯಂತ ಕೊರೊನಾ ಎಮರ್ಜೆನ್ಸಿ ಇದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಮೀನುಗಾರರಿಗೆ ಕಸುಬು ಮಾಡಲು ವಿನಾಯಿತಿಯನ್ನು ಕೊಟ್ಟಿತ್ತು. ನಾಡದೋಣಿ ಮೂಲಕ ಸಮುದ್ರಕ್ಕೆ ತೆರಳಿ ಕಸುಬು ಮಾಡಬಹುದು ಎಂದು ಆದೇಶ ನೀಡಲಾಗಿತ್ತು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿ ಮತ್ತು ತ್ರಾಸಿ ಭಾಗದಲ್ಲಿ ಈ ವಿನಾಯಿತಿಯನ್ನು ಕಡಲ ಮಕ್ಕಳು ದುರುಪಯೋಗ ಮಾಡಿಕೊಂಡಿದ್ದಾರೆ. ಸಾರ್ವಜನಿಕರು ಕೂಡ ಸಮುದ್ರ ತೀರಕ್ಕೆ ತೆರಳಿ ಮುಗಿಬಿದ್ದು ಮೀನು ಖರೀದಿ ಮಾಡುತ್ತಿದ್ದಾರೆ.

    ಸಮುದ್ರ ತೀರದಲ್ಲಿ ಮೀನು ಮಾರಾಟ ಮಾಡುವಂತಿಲ್ಲ ಎಂಬುದು ಸರ್ಕಾರ ನಿಯಮ. ಸಾರ್ವಜನಿಕರು ಕಡಲ ತೀರಕ್ಕೆ ಹೋಗಬಾರದು. ಆದರೆ ಬೈಂದೂರಿನಲ್ಲಿ ಈ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತನ್ನು ಜನ ಕೊಡುತ್ತಿಲ್ಲ. ಕಂಟ್ರೋಲ್ ಮಾಡಬೇಕಾದ ಪೊಲೀಸರು ಅತ್ತ ಗಮನವನ್ನೇ ಕೊಡುತ್ತಿಲ್ಲ. ಸಾಮಾಜಿಕ ಶಿಸ್ತು ಕಾಪಾಡಬೇಕಾದ ಕಂದಾಯ ಇಲಾಖೆ ಅಧಿಕಾರಿಗಳು ಅಸಡ್ಡೆ ತೋರಿಸುತ್ತಿದ್ದಾರೆ.

    ಕಡಲ ತಡಿಯಲ್ಲಿ, ಬಂದರಿನಲ್ಲಿ ಮೀನನ್ನು ಹರಾಜು ಹಾಕಬಾರದು. ಗ್ರಾಹಕರಿಗೆ ನೇರವಾಗಿ ಮನೆಗೆ ಮೀನನ್ನು ಸರಬರಾಜು ಮಾಡಬೇಕು. ಇಲ್ಲದಿದ್ದರೆ ಜನ ಮುಗಿ ಬೀಳದಂತೆ ಮಾರುಕಟ್ಟೆ ವ್ಯವಸ್ಥೆಯನ್ನು ಮಾಡಬೇಕು. ಇದು ಎರಡೂ ಕೂಡ ಬೈಂದೂರಿನಲ್ಲಿ ಪಾಲನೆ ಆಗುತ್ತಿಲ್ಲ. ಬೈಂದೂರಿನ ಶಾಸಕ ಸುಕುಮಾರ್ ಶೆಟ್ಟಿ ಏನು ಮಾಡುತ್ತಿದ್ದಾರೆ. ಮೀನುಗಾರಿಕಾ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಗಮನ ಕೊಡಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

  • ನಕಲಿ, ಕಳಪೆ ಕೀಟನಾಶಕ ಮಾರಿದ್ರೆ 5 ವರ್ಷ ಜೈಲು ಶಿಕ್ಷೆ

    ನಕಲಿ, ಕಳಪೆ ಕೀಟನಾಶಕ ಮಾರಿದ್ರೆ 5 ವರ್ಷ ಜೈಲು ಶಿಕ್ಷೆ

    – ರೈತರ ರಕ್ಷಣೆಗೆ ಮಂಡನೆಯಾಗಲಿದೆ ಮಸೂದೆ
    – ನಷ್ಟವಾದರೆ ಕಂಪನಿಗಳಿಂದಲೇ ಪರಿಹಾರ
    – ಕೀಟನಾಶಕಗಳ ಬೆಲೆ ನಿಯಂತ್ರಿಸಲು ಪ್ರಾಧಿಕಾರ ರಚನೆ

    ನವದೆಹಲಿ: ನಕಲಿ, ಕಳಪೆ ಕೀಟನಾಶಕ ಮಾರಿದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ‘ಕೀಟನಾಶಕ ನಿರ್ವಹಣಾ ಮಸೂದೆ -2020’ಕ್ಕೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

    ನಕಲಿ ಕೀಟನಾಶಕ ಬಳಸಿ ನಷ್ಟ ಉಂಟಾದಲ್ಲಿ ರೈತರಿಗೆ ಪರಿಹಾರ ನೀಡುವ ಮಸೂದೆಯನ್ನು ಬಜೆಟ್ ಅಧಿವೇಶನದ ಎರಡನೇ ಅವಧಿಯಲ್ಲಿ ಮಂಡಿಸುವುದಕ್ಕೆ ಕ್ಯಾಬಿನೆಟ್ ಬುಧವಾರ ಒಪ್ಪಿಗೆ ನೀಡಿತು.

    ಕೀಟನಾಶಕ ಕಾಯ್ದೆ -1968ರ ಜಾಗವನ್ನು ಈ ಮಸೂದೆ ತುಂಬಲಿದೆ. ಪ್ರಸ್ತಾವಿತ ಮಸೂದೆಯಲ್ಲಿ ರೈತರ ಹಾದಿ ತಪ್ಪಿಸಿ ಮೋಸ ಆಗದೇ ಇರಲು ಕೀಟನಾಶಕಗಳ ಜಾಹೀರಾತುಗಳ ಮೇಲೂ ನಿಗಾ ವಹಿಸಲಿದೆ.

    ಮಸೂದೆಯಲ್ಲಿ ಏನಿದೆ?
    ಕೀಟನಾಶಕಗಳಿಗೆ ನಿರ್ಧಿಷ್ಟ ಬೆಲೆಯನ್ನು ನಿಗದಿ ಪಡಿಸಲು ಪ್ರಾಧಿಕಾರ ರಚನೆ ಮಾಡಲಾಗುತ್ತದೆ. ಎಲ್ಲ ಕೀಟನಾಶಕ ಕಂಪನಿಗಳು ಹೊಸ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಬೇಕು. ಕಳಪೆ ಅಥವಾ ನಕಲಿ ಕೀಟನಾಶಕಗಳಿಂದ ರೈತರಿಗೆ ಮೋಸವಾದರೆ ಪರಿಹಾರ ನೀಡಲಾಗುತ್ತದೆ. ಕಂಪನಿಗಳ ಮೇಲೆ ಹಾಕಲಾದ ದಂಡ ಸಂಗ್ರಹಿಸಲು ಕೇಂದ್ರೀಯ ನಿಧಿಯನ್ನು ಸ್ಥಾಪಿಸಲಾಗುತ್ತದೆ. ಸಂಗ್ರಹಗೊಂಡ ಹಣದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ.

    ಶಿಕ್ಷೆ ಏನು?
    ಷರತ್ತು, ನಿಯಮಗಳನ್ನು ಉಲ್ಲಂಘಿಸಿದರೆ ಕನಿಷ್ಠ 25 ಸಾವಿರ ರೂಪಾಯಿಯಿಂದ ಗರಿಷ್ಠ 50 ಲಕ್ಷ ರೂಪಾಯಿ ತನಕ ದಂಡವನ್ನೂ ಮತ್ತು ಗರಿಷ್ಠ 5 ವರ್ಷ ಜೈಲು ಶಿಕ್ಷೆಯನ್ನೂ ವಿಧಿಸುವ ಅಂಶವನ್ನು ಮಸೂದೆಯಲ್ಲಿ ಸೇರಿಸಲಾಗಿದೆ.

    ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಪ್ರತಿಕ್ರಿಯಿಸಿ, ರೈತರ ಅಭಿವೃದ್ಧಿ ನಮ್ಮ ಸರ್ಕಾರದ ಪ್ರಾಥಮಿಕ ಆಧ್ಯತೆಯಾಗಿದ್ದು, ಯಾವುದೇ ರೀತಿಯಲ್ಲೂ ಕೃಷಿಕರಿಗೆ ವಂಚನೆ ಆಗಬಾರದು. ಈ ನಿಟ್ಟಿನಲ್ಲಿ ಕೀಟನಾಶಕ ಕಂಪನಿಗಳ ಮೋಸವನ್ನು ತಪ್ಪಿಸಲು ಈ ಮಸೂದೆಯನ್ನು ಮಂಡಿಸಲಾಗುತ್ತಿದೆ. ಕೃಷಿಕರಿಗೆ ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ಬಗ್ಗೆ ವಿವರ ನೀಡಿ ಅದರ ಅಪಾಯದ ಕುರಿತು ಮಾಹಿತಿ ನೀಡಲಾಗುತ್ತದೆ. ಅಷ್ಟೇ ಅಲ್ಲದೇ ಕೀಟನಾಶಕಕ್ಕೆ ಪರ್ಯಾಯ ಯಾವುದು ಎಂಬ ಮಾಹಿತಿಯೂ ಸಾರ್ವಜನಿಕವಾಗಿ ಡಿಜಿಟಲ್ ಮಾದರಿಯಲ್ಲಿ ಎಲ್ಲ ಭಾಷೆಗಳಲ್ಲಿ ಲಭ್ಯವಿರುತ್ತದೆ. ಇದನ್ನು ನೋಡಿಕೊಂಡು ರೈತರು ತಮ್ಮ ಬೆಳೆಗೆ ಯಾವ ಕೀಟನಾಶಕ ಉತ್ತಮ ಎಂಬ ನಿರ್ಧಾರಕ್ಕೆ ಬರಬಹುದು ಎಂದು ಅವರು ತಿಳಿಸಿದರು.

    ರೈತರಿಗೆ ಮೋಸ ಮಾಡುವ ಕಂಪನಿಗಳಿಗೆ ದಂಡ ವಿಧಿಸುವುದು ಈ ಮಸೂದೆಯ ವಿಶೇಷ ಅಂಶವಾಗಿದೆ. ತಯಾರಕರು ಮತ್ತು ಡೀಲರ್ ಗಳಿಂದ ದಂಡವನ್ನು ಸಂಗ್ರಹಿಸಿ ಕೇಂದ್ರೀಯ ನಿಧಿಯ ಮೂಲಕ ರೈತರಿಗೆ ಪರಿಹಾರ ನೀಡಲಾಗುವುದು. ಕೀಟನಾಶಕಗಳ ಬಲ ಮತ್ತು ದೌರ್ಬಲ್ಯಗಳ ವಿವರವನ್ನು ಕೃಷಿಕರು ಡೀಲರ್ ಬಳಿಯಿಂದ ಪಡೆಯಬಹುದು ಎಂದು ಅವರು ವಿವರಿಸಿದರು.

    ಈಗ ಯಾಕೆ?
    ಸಾವಯವ ಕೀಟನಾಶಕಗಳಿಗೆ ಉತ್ತೇಜನ ನೀಡುವುದು ಈ ಮಸೂದೆಯ ಮುಖ್ಯ ಉದ್ದೇಶವಾಗಿದೆ. ಈ ಮಸೂದೆ 2008ರಲ್ಲಿ ರಾಜ್ಯಸಭೆಯಲ್ಲಿ ಮಂಡನೆಯಾಗಿತ್ತು. ಆದರೆ ಮಸೂದೆ ಕೃಷಿ ಸ್ಥಾಯಿ ಸಮಿತಿ ಪರಿಶೀಲನೆಗೆ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಮಂಡನೆಯಾಗಿರಲಿಲ್ಲ. ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ 2017-18ರಲ್ಲಿ ಈ ಸಂಬಂಧ ಕರಡು ಮಸೂದೆಯನ್ನು ರಚಿಸಲಾಗಿತ್ತು.

    ವಿಶ್ವದಲ್ಲೇ ಅತಿ ಹೆಚ್ಚು ಕೀಟನಾಶಕಗಳ ಗ್ರಾಹಕ ದೇಶ ಭಾರತವಾಗಿದ್ದು, ದೇಶದಲ್ಲಿ ಅಂದಾಜು 292 ಕೀಟನಾಶಕಗಳು ನೋಂದಣಿಯಾಗಿವೆ.

  • ಎನ್‍ಕೌಂಟರ್ ಸಮಾಧಾನ ತಂದಿದೆ- ಪೊಲೀಸರ ಬೆಂಬಲಕ್ಕೆ ನಿಂತ ಯದುವೀರ್

    ಎನ್‍ಕೌಂಟರ್ ಸಮಾಧಾನ ತಂದಿದೆ- ಪೊಲೀಸರ ಬೆಂಬಲಕ್ಕೆ ನಿಂತ ಯದುವೀರ್

    ಮೈಸೂರು: ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ನಡೆಸಿದ ಪೊಲೀಸರನ್ನು ಟೀಕಿಸುವುದು ಸರಿಯಲ್ಲ ಎಂದು ಯದುವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಅತ್ಯಾಚಾರಿಗಳನ್ನು ಹೈದರಾಬಾದ್ ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದ ಬಗ್ಗೆ ಬಹುತೇಕರು ಹರ್ಷ ವ್ಯಕ್ತಪಡಿಸುತ್ತಿದ್ದರೆ ಕೆಲವರು ಈ ಎನ್‍ಕೌಂಟರ್ ಬಗ್ಗೆ ಅಪಸ್ವರ ಎತ್ತಿದ್ದಾರೆ. ಈ ವಿಚಾರದ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅತ್ಯಾಚಾರದ ಪ್ರಕರಣಗಳು ಯಾರಿಗೂ ಸಂತೋಷ ತರಲ್ಲ. ಈಗ ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ನಡೆದಿರುವುದು ಸಮಾಧಾನ ತಂದಿದೆ ಎಂದು ಹೇಳುವ ಮೂಲಕ ಪೊಲೀಸರ ಪರ ಧ್ವನಿ ಎತ್ತಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಹೈದರಾಬಾದ್ ಪೊಲೀಸರು ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ನಡೆದುಕೊಂಡಿದ್ದಾರೆ. ಪ್ರಕರಣ ಮರುಸೃಷ್ಟಿ ವೇಳೆ ಈ ಘಟನೆ ನಡೆದಿದೆ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಮುಂದಾದಾಗ ಪೊಲೀಸರು ಸಹಜವಾಗಿಯೇ ಆ ಸಂದರ್ಭದಲ್ಲಿ ಅವರು ಎನ್‍ಕೌಂಟರ್ ಮಾಡಿದ್ದಾರೆ. ಇದರಲ್ಲಿ ತಪ್ಪು ಹುಡುಕುವುದು ಬೇಡ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ನಮ್ಮೆಲ್ಲರಿಗೂ ಕಾನೂನಿನ ಮೂಲಕವೇ ಎಲ್ಲವು ಬಗೆಹರಿಯಬೇಕು ಎಂಬ ಆಸೆ ಇದೆ. ಈಗ ಆಗಿರುವ ಎನ್‍ಕೌಂಟರ್ ಕೂಡ ಕಾನೂನು ಪ್ರಕಾರ ಆಗಿದ್ದರೆ ಅದರಲ್ಲಿ ತಪ್ಪಿಲ್ಲ. ಅತ್ಯಾಚಾರದಂಥ ಪ್ರಕರಣಗಳಲ್ಲಿ ಕಾನೂನು ಬದಲಾವಣೆಗಿಂತ ತ್ವರಿತವಾಗಿ ಕಾನೂನಿನ ಮೂಲಕ ಶಿಕ್ಷೆಯಾಗಬೇಕು. ಇದು ಎಲ್ಲ ಜನರ ಭಾವನೆ ಎಂದು ಹೇಳಿದರು. ಇದನ್ನೂ ಓದಿ: ಎನ್‍ಕೌಂಟರ್ ‘ಯೋಜಿತ ಕೊಲೆ’, ಅಂಗಾಂಗಳ ಮೇಲೆ ಶೂಟ್ ಮಾಡಿದ್ದು ಯಾಕೆ – 4 ಪ್ರಶ್ನೆ ಮುಂದಿಟ್ಟ ಮಾನವಹಕ್ಕುಗಳ ಸಂಸ್ಥೆ

    ಎನ್‍ಕೌಂಟರ್ ಮಾಡಿರುವುದು ತಪ್ಪು ಎಂದವರ ವಿರುದ್ಧ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಮೈಸೂರು ಕನ್ನಡ ವೇದಿಕೆಯ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಮನೇಕಾ ಗಾಂಧಿ, ಕಾರ್ತಿ ಚಿದಂಬರಂ, ಕೇಜ್ರಿವಾಲ್ ವಿರುದ್ಧ ಪ್ರತಿಭಟಿಸಿ ಧಿಕ್ಕಾರ ಕೂಗಿದರು. ಈ ಮೂಲಕ ಹೈದರಾಬಾದ್ ಪೊಲೀಸರ ಕ್ರಮ ಸರಿಯಾಗಿಯೇ ಇದೆ ಎಂದು ಘೋಷಣೆ ಕೂಗಿದರು. ಇದನ್ನೂ ಓದಿ: 2008 ವಾರಂಗಲ್ ಎನ್‌ಕೌಂಟರ್‌ನಂತೆ ದಿಶಾ ‘ಹತ್ಯಾಚಾರಿ’ಗಳ ಹುಟ್ಟಡಗಿಸಿದ ವಿ.ಸಿ ಸಜ್ಜನರ್

  • ಡೊನಾಲ್ಡ್ ಟ್ರಂಪ್‍ಗೆ 20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್

    ಡೊನಾಲ್ಡ್ ಟ್ರಂಪ್‍ಗೆ 20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್

    ವಾಷಿಂಗ್ಟನ್: ನ್ಯೂಯಾರ್ಕ್ ಕೋರ್ಟ್ ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 20 ಲಕ್ಷ ಡಾಲರ್(ಅಂದಾಜು 14.25 ಕೋಟಿ ರೂ.) ದಂಡ ವಿಧಿಸಿ ಆದೇಶ ಪ್ರಕಟಿಸಿದೆ.

    ರಾಜಕೀಯ ಮತ್ತು ವ್ಯವಹಾರಿಕ ಲಾಭಕ್ಕಾಗಿ ತಮ್ಮ ಚಾರಿಟೇಬಲ್ ಟ್ರಸ್ಟ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಟ್ರಂಪ್ ಅವರಿಗೆ ದಂಡ ವಿಧಿಸಿದೆ.

    ಸರ್ಕಾರೇತರ ಸಂಸ್ಥೆಗಳನ್ನು ಯಾವುದೇ ದುರುದ್ದೇಶಕ್ಕಾಗಲೀ, ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುವಂತಿಲ್ಲ. ಆದರೆ ಟ್ರಂಪ್ ಈ ಸಂಸ್ಥೆಯನ್ನು ವ್ಯವಹಾರ ಮತ್ತು ರಾಜಕೀಯ ಲಾಭಕ್ಕಾಗಿ ಬಳಸಿ ಕಾನೂನು ಉಲ್ಲಂಘಿಸಿದ್ದಕ್ಕೆ 20 ಲಕ್ಷ ಡಾಲರ್ ದಂಡ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

    ವಿಶೇಷ ಏನೆಂದರೆ ಡೊನಾಲ್ಡ್ ಟ್ರಂಪ್ ಪ್ರತಿನಿಧಿಸುತ್ತಿರುವ ಡೆಮಾಕ್ರಟಿಕ್ ಪಕ್ಷದ ನ್ಯೂಯಾರ್ಕ್ ಅಟಾರ್ನಿ ಜನರಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಲೆಟಿಟಿಯಾ ಜೇಮ್ಸ್ ಅವರು ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿದ್ದರು.

    ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನಮ್ಮ ಹೋರಾಟಕ್ಕೆ ಅತಿ ದೊಡ್ಡ ಜಯ ಸಿಕ್ಕಿದೆ ಎಂದು ಲೆಟಿಟಿಯಾ ಜೇಮ್ಸ್ ಪ್ರತಿಕ್ರಿಯಿಸಿದ್ದಾರೆ.

  • ಉಪ್ಪು ತಿಂದವರು ನೀರು ಕುಡಿಯಬೇಕು, ಇದು ಈ ನೆಲದ ಸಂಸ್ಕೃತಿ: ಸಿಟಿ ರವಿ

    ಉಪ್ಪು ತಿಂದವರು ನೀರು ಕುಡಿಯಬೇಕು, ಇದು ಈ ನೆಲದ ಸಂಸ್ಕೃತಿ: ಸಿಟಿ ರವಿ

    ರಾಮನಗರ: ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು, ಉಪ್ಪು ತಿಂದವರು ನೀರು ಕುಡಿಯಬೇಕು. ಇದು ಈ ನೆಲದ ಸಂಸ್ಕೃತಿ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಹೇಳಿದ್ದಾರೆ

    ಇಂದು ಬಿಡದಿಯಲ್ಲಿ ಮಾತನಾಡಿದ ಅವರು ಡಿಕೆಶಿಯನ್ನು ಬಂಧನಕ್ಕೆ ಒಳಪಡಿಸಿದ್ದು ನ್ಯಾಯಾಲಯ, ಬಿಜೆಪಿ ಪಕ್ಷವಲ್ಲ. ಅವರ ಬಂಧನಕ್ಕೆ ಕಾರಣ ಎಲ್ಲರಿಗೂ ಗೊತ್ತಿದೆ ಅವರ ಆದಾಯ ಹೆಚ್ಚಿದೆ. ಅವರ ಮನೆಯಲ್ಲಿ 8.5 ಕೋಟಿ ಹಣ ಸಿಕ್ಕಿದೆ. ಈವಾಗ 800 ಕೋಟಿಗೂ ಅಧಿಕ ಆದಾಯ ಪತ್ತೆ ಆಗಿದೆ. ಏನೇ ಆದರೂ ಜಗತ್ತಿಗೆ ನಂಬಿಸಬಹುದು. ಆದರೆ ಆತ್ಮಸಾಕ್ಷಿ ಸತ್ಯವನ್ನು ಹೇಳುತ್ತದೆ ಎಂದು ತಿಳಿಸಿದರು.

    ತಪ್ಪು ಮಾಡಿದವರು ಶಿಕ್ಷೆ ಆಗಬಾರದು ಎಂದು ಕಾಂಗ್ರೆಸ್ ಬಯಸಿದರೆ ಅದು ಈ ನೆಲದ ಕಾನೂನಿನ ವಿರುದ್ಧವಾಗುತ್ತದೆ. ತಪ್ಪು ಮಾಡಿ ಎಲ್ಲರಿಗೂ ಒಂದೇ ಕಾನೂನು, 132 ಕೋಟಿ ಜನರಿಗೂ ಇದು ಅನ್ವಯಿಸುತ್ತದೆ. ಇದರಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಪಾತ್ರವಿಲ್ಲ. ಯಾರೇ ತಪ್ಪು ಮಾಡಿದರು ಶಿಕ್ಷೆ ಅನುಭವಿಸಬೇಕು ಆದರೆ ರಾಜಕೀಯದಿಂದ ಬಂಧಿಸಿದ್ದಾರೆ ಎಂದು ಹೇಳುವುದು ಹಾಸ್ಯಾಸ್ಪದವಾಗಿದೆ ಎಂದರು.

    ಐಟಿಗೆ ಸಿಎಂ ಯಡಿಯೂರಪ್ಪ ಎರಡು ವರ್ಷಗಳ ಹಿಂದೆ ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪ ಮಾತ್ರ ಪತ್ರ ಬರೆಯಬೇಕಿಲ್ಲ. ನೀವು ಬೇಕಾದರೂ ಯಾರೇ ಬೇಕಾದರೂ ಪತ್ರ ಬರೆಯಬಹುದಾಗಿದ್ದು ದೇಶದ ಎಲ್ಲ ನಾಗರಿಕರಿಗೂ ಪ್ರಶ್ನಿಸುವ ಹಕ್ಕಿದೆ. ಯಾರೇ ಅಕ್ರಮ ಆಸ್ತಿ ಗಳಿಕೆ ಮಾಡಿದರೆ ಅದನ್ನು ಪ್ರಶ್ನಿಸುವ ಅಧಿಕಾರ ದೇಶದ ಎಲ್ಲರಿಗೂ ಇದೆ. ನಾನು ತಪ್ಪು ಮಾಡಿದರೂ ಕೂಡಾ ಜೈಲಿಗೆ ಕಳುಹಿಸುವ ವ್ಯವಸ್ಥೆ ಬಂದರೆ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದು ತಿಳಿಸಿದರು.

  • ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ

    ಕರ್ನಾಟಕದಲ್ಲಿ ಟ್ರಾಫಿಕ್ ದಂಡದ ಮೊತ್ತ ಇಳಿಯುವುದು ಅನುಮಾನ

    – ಕಾನೂನು ಸಚಿವಾಲಯದ ಮೊರೆ ಹೋದ ಕೇಂದ್ರ ಸಾರಿಗೆ ಇಲಾಖೆ
    – ಬಿಜೆಪಿ ರಾಜ್ಯಗಳಿಂದ ಭಾರೀ ವಿರೋಧ

    ನವದೆಹಲಿ: ಹೊಸ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗುತ್ತಿರುವ ದಂಡದ ಮೊತ್ತವನ್ನು ಒಂದೊಂದು ರಾಜ್ಯಗಳು ಕಡಿಮೆ ಮಾಡುತ್ತಿರುವ ಬೆನ್ನಲ್ಲೇ ಕೇಂದ್ರ ಸಾರಿಗೆ ಸಚಿವಾಲಯ ಈಗ ಕಾನೂನು ಸಚಿವಾಲಯದ ಮೊರೆ ಹೋಗಿದೆ.

    ಹೌದು, ಆರಂಭದಲ್ಲಿ ಗುಜರಾತ್ ಸರ್ಕಾರ ಇಳಿಸಿದ ಬೆನ್ನಲ್ಲೇ ಉತ್ತರಾಖಂಡ್ ಸರ್ಕಾರ ಸಹ ಇಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ಬಿಜೆಪಿ ರಾಜ್ಯಗಳು ಸಹ ದರವನ್ನು ಇಳಿಕೆ ಮಾಡಲು ಚಿಂತಿಸಿವೆ. ಹೀಗಾಗಿ ಸಾರಿಗೆ ಸಚಿವಾಲಯ ತಿದ್ದುಪಡಿಯಾದ ಕಾಯ್ದೆಯಲ್ಲಿ ನಿಗದಿಯಾದ ದಂಡದ ಪ್ರಮಾಣಕ್ಕಿಂತಲೂ ಕಡಿಮೆ ಮೊತ್ತದ ದಂಡವನ್ನು ವಿಧಿಸುತ್ತಿರುವ ರಾಜ್ಯಗಳ ನಡೆಯ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಿದೆ.

    ಈ ಸಂಬಂಧ ಸಾರಿಗೆ ಸಚಿವಾಲಯದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ದಂಡ ಇಳಿಸುವ ಬಗ್ಗೆ ಕಾನೂನು ಸಚಿವಾಲಯದ ಜೊತೆ ಸಲಹೆ ಕೇಳಲಾಗಿದೆ. ಸಚಿವಾಲಯದ ಉತ್ತರ ಬಂದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ರಾಜ್ಯಗಳಿಗೆ ಇದೆ ಅಧಿಕಾರ:
    ಭಾರತದ ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಮೂರು ಪ್ರತ್ಯೇಕ ಪಟ್ಟಿಯನ್ನು ರಚಿಸಿ ವಿಷಯಗಳ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ಹಂಚಿಕೆ ಮಾಡಲಾಗಿದೆ. ರಕ್ಷಣೆ, ವಿದೇಶಾಂಗ ಸೇರಿದಂತೆ 97 ವಿಷಯಗಳು ಕೇಂದ್ರ ಪಟ್ಟಿಯಲ್ಲಿ ಬಂದರೆ ಪೊಲೀಸ್, ರಾಜ್ಯ ಲೋಕಸಭಾ ಆಯೋಗ ಸೇರಿದಂತೆ 61 ವಿಷಯಗಳು ರಾಜ್ಯ ಪಟ್ಟಿಯಲ್ಲಿ ಹಂಚಿಕೆಯಾಗಿದೆ. ಆದರೆ ರಸ್ತೆ ಸಾರಿಗೆ, ಶಿಕ್ಷಣ, ಅರಣ್ಯದಂತಹ ವಿಚಾರಗಳು ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

    ಸಮವರ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ವಿಷಯಗಳ ಮೇಲೆ ಅಧಿಕಾರ ಚಲಾಯಿಸುವ ಸಮಾನ ಹಕ್ಕು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಂವಿಧಾನ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರಗಳು ಈ ಅಧಿಕಾರವನ್ನು ಬಳಸಿಕೊಂಡು ಕೇಂದ್ರ ವಿಧಿಸಿದ ದಂಡದ ದರಕ್ಕಿಂತ ಕಡಿಮೆ ದರವನ್ನು ವಿಧಿಸುತ್ತಿದೆ. ಇದನ್ನೂ ಓದಿ: ನಾಯಕರ ‘ದಂಡ’ಯಾತ್ರೆ – ಟ್ರಾಫಿಕ್ ನಿಯಮಕ್ಕೆ ಸಿಎಂ ಡೋಂಟ್‍ಕೇರ್

    ಕೆಂದ್ರಕ್ಕೆ ಸಿಟ್ಟು?
    ಬಿಜೆಪಿ ರಾಜ್ಯಗಳೇ ಈಗ ದಂಡದ ದರ ಇಳಿಸುತ್ತಿರುವ ವಿಚಾರ ಕೇಂದ್ರದ ಸಿಟ್ಟಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಒಂದೊಂದು ರಾಜ್ಯ ಸರ್ಕಾರಗಳು ಒಂದೊಂದು ದರವನ್ನು ನಿಗದಿ ಪಡಿಸಿದರೆ ಕಾಯ್ದೆಯ ಮೂಲ ಸ್ವರೂಪವೇ ಬದಲಾಗುತ್ತದೆ. ಹೀಗಾಗಿ ಕಾನೂನು ಸಚಿವಾಲಯದ ಮೊರೆ ಹೋಗಿದೆ. ಆದರೆ ಅನಿವಾರ್ಯ ಸಂದರ್ಭದಲ್ಲಿ ರಾಜ್ಯಗಳ ಆದೇಶದ ವಿರುದ್ಧ ಕೇಂದ್ರದ್ದೇ ಮೇಲುಗೈ ಆಗಲಿದ್ದು ಅಂತಿಮವಾಗಿ ಕೇಂದ್ರ ಸರ್ಕಾರದ ಆದೇಶವನ್ನೇ ಪಾಲಿಸಬೇಕಾಗುತ್ತದೆ.

    ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ದಂಡದ ಮೊತ್ತ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದೆ.

    ಜೀವ ಮುಖ್ಯವಲ್ಲವೇ?
    ದೇಶದಲ್ಲಿ ಪ್ರತಿ ವರ್ಷ 1.5 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಶೇ.65 ರಷ್ಟು 18-35 ವಯಸ್ಸಿನವರೇ ಇದ್ದಾರೆ. ಅಷ್ಟೇ ಅಲ್ಲದೆ ಪ್ರತಿ ವರ್ಷ 2 ಲಕ್ಷ ಜನರು ರಸ್ತೆ ಅಪಘಾತಗಳಿಂದ ಅಂಗವಿಕಲರಾಗುತ್ತಿದ್ದಾರೆ. ಹೀಗಾಗಿ ಕಠಿಣ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ.

    ದಂಡದ ಮೊತ್ತ ದುಬಾರಿ ಆಗಿಲ್ಲವೇ ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಜೀವಕ್ಕಿಂತ ಹಣ ಮುಖ್ಯವೇ ಎಂದು ಮರು ಪ್ರಶ್ನೆ ಹಾಕಿದ ಗಡ್ಕರಿ, ಯುವಕರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಲು ಹಾಗೂ ಅಪಘಾತದಿಂದ ಅಂಗವಿಕಲತೆಗೆ ತುತ್ತಾಗುವುದನ್ನು ತಪ್ಪಿಸುವ ಉದ್ದೇಶದಿಂದ ಹೊಸ ಟ್ರಾಫಿಕ್ ದಂಡವನ್ನು ಜಾರಿಗೆ ತರಲಾಗಿದೆ. ದಂಡವನ್ನು ಯಾವ ರೀತಿ ಅಳವಡಿಸಿಕೊಳ್ಳಬೇಕು ಎನ್ನುವುದು ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದೆ. ಸಂಗ್ರಹವಾದ ದಂಡದ ಮೊತ್ತವು ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಟ್ರಾಫಿಕ್ ದಂಡ ಏರಿಕೆ ಉದ್ದೇಶ ಜನರ ಜೀವ ರಕ್ಷಣೆಗಾಗಿಯೇ ಹೊರತು ಸರ್ಕಾರಕ್ಕೆ ಆದಾಯ ತರುವುದಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದ್ಯ ಸೇವಿಸಿ ಕಾರು ಓಡಿಸಿ ಆಟೋಗೆ ಡಿಕ್ಕಿ ಹೊಡೆದ ಆರ್‌ಟಿಓ ಇನ್ಸ್‌ಪೆಕ್ಟರ್

    ಸಂಚಾರ ನಿಯಮ ಉಲ್ಲಂಘಿಸುವ ಚಾಲಕರು, ಸವಾರರಿಗೆ 30 ವರ್ಷಗಳ ಹಿಂದೆ 100 ರೂ. ದಂಡ ವಿಧಿಸಲಾಗುತ್ತಿತ್ತು. ಆಗ 100 ರೂ.ಗೆ ಇದ್ದ ಮೌಲ್ಯವು ಈಗ ಎಷ್ಟಾಗಬಹುದು ನೀವೇ ಯೋಚನೆ ಮಾಡಿ. ಸಂಚಾರ ನಿಮಯವನ್ನು ಸರಿಯಾಗಿ ಜನರು ಪಾಲಿಸಿದರೆ ಯಾವುದೇ ದಂಡ ಪಾವತಿಸುವ ಅಗತ್ಯವಿರಲ್ಲ. ಟ್ರಾಫಿಕ್ ನಿಯಮ ಉಲ್ಲಂಘನೆಗೆ ವಿಧಿಸುತ್ತಿದ್ದ ದಂಡದ ಮೊತ್ತವು ಹೆಚ್ಚಾದ ಬಳಿಕ ಅನೇಕ ಬದಲಾವಣೆಗಳಾಗಿವೆ. ಅನೇಕರು ಲೈಸನ್ಸ್, ಹೆಲ್ಮೆಟ್ ಪಡೆಯುತ್ತಿದ್ದಾರೆ. ತಮ್ಮ ವಾಹನಗಳ ದಾಖಲೆಗಳನ್ನು ಸರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿದ್ದಾರೆ.

  • ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ: ಬೊಮ್ಮಾಯಿ

    ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ: ಬೊಮ್ಮಾಯಿ

    ಬೆಂಗಳೂರು: ಇಂದು ಒಕ್ಕಲಿಗ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

    ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತಿನ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ. ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ. ಪ್ರತಿಭಟನೆಗೆ ಕರೆ ಕೊಟ್ಟವರು ಸಹ ಶಾಂತಿ ಕಾಪಾಡಿದ್ದಾರೆ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

    ನಮ್ಮ ನಗರದ ಪೊಲೀಸ್ ಇಲಾಖೆ ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ನೋಡಿಕೊಂಡಿದೆ. ಇದು ನಮ್ಮ ಪೊಲೀಸ್ ಇಲಾಖೆಯ ದಕ್ಷತೆಯನ್ನು ತೋರಿಸುತ್ತದೆ. ಅಶೋಕ ಪಿಲ್ಲರ್ ಬಳಿ ಕಲ್ಲೆಸೆತ ಆಗಿದೆ ಎನ್ನುತ್ತಾರೆ. ಆದರ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಒಟ್ಟಿನಲ್ಲಿ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಇದೇ ವೇಳೆ ಬಿಜೆಪಿಯಿಂದ ಒಕ್ಕಲಿಗ ನಾಯಕರ ಟಾರ್ಗೆಟ್ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಸಮುದಾಯದವರೂ ಈಗ ಮೆಚ್ಯೂರ್ ಆಗಿದ್ದಾರೆ. ಯಾವ ಸಮುದಾಯವನ್ನೂ ತಪ್ಪು ದಾರಿಗೆ ಎಳೆಯಕ್ಕಾಗಲ್ಲ. ಸಮುದಾಯಗಳನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನಗಳು ಆಗುತ್ತಿರುತ್ತವೆ. ಆದರೆ ಸಮಾಜ ಜಾಗೃತವಾಗಿದೆ. ಈ ರೀತಿಯ ಪ್ರಯತ್ನಗಳಿಗೆ ಸಮಾಜ ಬಲಿಯಾಗಲ್ಲ. ಸಮಾಜ ಎಲ್ಲವನ್ನೂ ಎದುರಿಸುವ ಶಕ್ತಿ ಹೊಂದಿದೆ. ಯಾರೂ ಯಾರನ್ನೂ ಯಾರ ಮೇಲೂ ಎತ್ತಿ ಕಟ್ಟೋಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಗುಜರಾತ್‍ನಲ್ಲಿ ಸಂಚಾರಿ ನಿಯಮಗಳಿಗೆ ದಂಡದ ಪ್ರಮಾಣ ಇಳಿಕೆ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಚಾರ ಸಿಎಂ ಗಮನದಲ್ಲಿದೆ. ಆ ಎಲ್ಲದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಾರೆ. ದುಬಾರಿ ದಂಡ ಕಡಿತದ ಬಗ್ಗೆ ಸಿಎಂ ಚಿಂತನೆ ಮಾಡುತ್ತಿದ್ದಾರೆ. ಅದರ ಬಗ್ಗೆ ಅವರೇ ಸ್ಪಷ್ಟನೆ ಕೊಡಲಿದ್ದಾರೆ ಎಂದು ತಿಳಿಸಿದರು.

  • ಡಿಕೆಶಿ ಕಾನೂನು ಮುರಿದಿದ್ರೆ ಕ್ರಮಕೈಗೊಳ್ಳಲಿ, ನಮ್ಮ ತಕರಾರಿಲ್ಲ- ಪರಮೇಶ್ವರ್

    ಡಿಕೆಶಿ ಕಾನೂನು ಮುರಿದಿದ್ರೆ ಕ್ರಮಕೈಗೊಳ್ಳಲಿ, ನಮ್ಮ ತಕರಾರಿಲ್ಲ- ಪರಮೇಶ್ವರ್

    ತುಮಕೂರು: ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ನಮೆಲ್ಲರಿಗೂ ಗೊತ್ತು. ಡಿ.ಕೆ.ಶಿವಕುಮಾರ್ ಏನಾದರೂ ಕಾನೂನು ಮುರಿದಿದ್ದರೆ ಕಾನೂನಿನ ವಿಧಿವಿಧಾನ ಪ್ರಕಾರ ಕ್ರಮಕೈಗೊಳ್ಳಲು ನಮ್ಮದು ಯಾವುದೇ ತಕರಾರಿಲ್ಲ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಎಲ್ಲರೂ ದೇಶದ ಕಾನೂನಿಗೆ ಗೌರವ ಕೊಡುತ್ತೇವೆ. ಸುಮಾರು ದಿನಗಳಿಂದ ಡಿಕೆಶಿ ಅವರಿಗೆ ಐಟಿ ಮತ್ತು ಇಡಿ ಕೊಟ್ಟಿರುವ ತೊಂದರೆ ನೋಡಿದರೆ ನಮಗೆ ಸರಿ ಕಾಣುವುದಿಲ್ಲ. ಅವರಿಗೆ ಕಾನೂನು ನ್ಯಾಯ ಕೊಡುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

    ಬಿಜೆಪಿ ದೇಶದಲ್ಲಿ ಸೇಡಿನ ರಾಜಕಾರಣ ಮಾಡುತ್ತಿದೆ. ಪಿ. ಚಿದಂಬರಂ ಅವರನ್ನು ನಡೆಸಿಕೊಂಡ ರೀತಿ ನೋಡಿದರೆ ಬಿಜೆಪಿಯ ಸೇಡಿನ ರಾಜಕಾರಣ ಇದು ಎನ್ನುವುದು ತಿಳಿಯುತ್ತದೆ. ಇದೇ ವೇಳೆ ಡಿಕೆ ಶಿವಕುಮಾರ್ ನಾರ್ಮಲ್ ಮೆಡಿಕಲ್ ರಿಪೋರ್ಟ್ ಕೊಡುವಂತೆ ಇಡಿ ಅಧಿಕಾರಿಗಳು ವೈದ್ಯರಿಗೆ ಒತ್ತಡ ಹಾಕಿದ ವಿಚಾರವಾಗಿ ಮಾತನಾಡಿದ ಅವರು, ನನಗೆ ಗೊತ್ತಿರುವ ಹಾಗೆ ಡಿಕೆಶಿಗೆ ಬಿಪಿ ಮತ್ತು ಶುಗರ್ ಇದೆ. ಅದಕ್ಕೆಲ್ಲಾ ಅವರು ಔಷಧ ತೆಗೆದುಕೊಳ್ಳುತ್ತಿದ್ದರು ಎಂದು ಪ್ರತಿಕ್ರಿಯಿಸಿದರು.

    ಈ ರೀತಿಯ ಸಮಯದಲ್ಲಿ ಎಂಥವರಿಗೂ ಕೂಡ ಆರೋಗ್ಯ ಏರುಪೇರಾಗುತ್ತದೆ. ಆದರೆ ಇಡಿ ಅಧಿಕಾರಿಗಳು ಯಾವ ರೀತಿಯಲ್ಲಿ ವೈದ್ಯರಿಗೆ ಒತ್ತಡ ಹಾಕಿದರು ಎಂಬುದು ನನಗೆ ಗೊತ್ತಿಲ್ಲ. ಒಂದು ವೇಳೆ ಹಾಗೇನಾದರೂ ಇಡಿ ಅಧಿಕಾರಿಗಳು ಮಾಡಿದ್ದರೆ ಅದು ಅವರ ಮಾಡಿದ ದೊಡ್ಡ ಅಪರಾಧ ಎಂದು ಬೇಸರ ವ್ಯಕ್ತಪಡಿಸಿದರು.

  • ಸರ್ಕಾರ ಹೇಗೆ ಉಳಿಯುತ್ತೆ ಅನ್ನೋ ಚಿಂತೆ ನಿಮಗೆ ಬೇಡ – ಕ್ಯಾಬಿನೆಟ್‍ನಲ್ಲಿ ಸಿಎಂ

    ಸರ್ಕಾರ ಹೇಗೆ ಉಳಿಯುತ್ತೆ ಅನ್ನೋ ಚಿಂತೆ ನಿಮಗೆ ಬೇಡ – ಕ್ಯಾಬಿನೆಟ್‍ನಲ್ಲಿ ಸಿಎಂ

    ಬೆಂಗಳೂರು: ಸ್ಪೀಕರ್ ಮತ್ತು ಕಾನೂನಿನ ಮೂಲಕ ನಾವು ಸರ್ಕಾರವನ್ನು ಉಳಿಸುತ್ತೇವೆ ಎಂದು ಸಿಎಂ ಕ್ಯಾಬಿನೆಟ್ ಸಭೆಯಲ್ಲಿ ಭರವಸೆ ನೀಡಿದ್ದಾರೆ.

    ಸಚಿವರು ಆದಷ್ಟು ತಮ್ಮ ವ್ಯಾಪ್ತಿಯ ಶಾಸಕರ ಜೊತೆ ಸಂಪರ್ಕದಲ್ಲೇ ಇರಿ. ಹೇಗೆ ಸರ್ಕಾರ ಉಳಿಯುತ್ತದೆ ಎಂಬ ಚಿಂತೆ ನಿಮಗೆ ಬೇಡ. ಅತೃಪ್ತರ ಓಲೈಕೆಯನ್ನು ಎರಡು ಪಕ್ಷದವರು ಮಾಡುವುದು ಬೇಡ ಎಂದು ಹೇಳಿರುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಸ್ಪೀಕರ್ ಮತ್ತು ಕಾನೂನಿನಿಂದ ಸರಕಾರಕ್ಕೆ ದೊಡ್ಡ ರಿಲೀಫ್ ಸಿಗಲಿದೆ. ಯಾವುದೇ ಸಮಸ್ಯೆ ಆಗದ ರೀತಿ ಅಧಿವೇಶನ ನಡೆಯುತ್ತದೆ. ಬಿಜೆಪಿಯವರ ಜೊತೆ ಆಕ್ರೋಶಕ್ಕೆ ಯಾರು ಇಳಿಯಬೇಡಿ. ಎಲ್ಲರೂ ಒಗ್ಗಟ್ಟಾಗಿ ಇರಿ. ಇದೇ ನೀವು ಮಾಡುವ ದೊಡ್ಡ ಸಹಾಯ ಎಂದು ಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಬಹಳ ಮಂದಿಗೆ ಇದೇ ಕೊನೆಯ ಕ್ಯಾಬಿನೆಟ್ ಎಂದುಕೊಂಡಿದ್ದೀರಲ್ಲ ಎಂದು ಸಚಿವರನ್ನು ನಗುತ್ತಲೇ ಪ್ರಶ್ನಿಸಿದ ಸಿಎಂ, ಇದು ಕೊನೆ ಸಭೆ ಅಲ್ಲ. ಸರ್ಕಾರ ಸೇಫ್ ಆಗಿ ಇನ್ನೂ ಬಹಳಷ್ಟು ಕ್ಯಾಬಿನೆಟ್ ಸಭೆ ನಡೆಸುತ್ತೇನೆ ಎಂದು ತಮ್ಮದೇ ಧಾಟಿಯಲ್ಲಿ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.