Tag: Lawrence Bishnoi gang

  • ಗುರುಗ್ರಾಮ್ ಬಾಂಬ್ ಸ್ಫೋಟದ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್

    ಗುರುಗ್ರಾಮ್ ಬಾಂಬ್ ಸ್ಫೋಟದ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್

    ಚಂಡೀಗಢ: ಗುರುಗ್ರಾಮ್‌ನಲ್ಲಾದ (Gurugram) ಬಾಂಬ್ ಸ್ಫೋಟದ (Bomb Attack) ಹಿಂದೆ ತಮ್ಮ ಕೈವಾಡವಿರುವುದಾಗಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ (Lawrence Bishnoi Gang) ಸಹಚರರು ಹೊಣೆ ಹೊತ್ತುಕೊಂಡಿದ್ದಾರೆ.

    ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಹಚರರಾದ ರೋಹಿತ್ ಗೋಡಾರಾ ಹಾಗೂ ಗೋಲ್ಡಿ ಬ್ರಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಗುರುಗ್ರಾಮ್ ಸೆಕ್ಟರ್ 29ರ ಬಾರ್‌ನ ಹೊರಗೆ ಬಾಂಬ್ ಸ್ಫೋಟ್‌ದ ಬಗ್ಗೆ ತಿಳಿಸಿದ್ದಾರೆ.ಇದನ್ನೂ ಓದಿ: ವಿದ್ಯುತ್‌ ಕಂಬವನ್ನೂ ಸೇರಿಸಿ ಕಟ್ಟಡ ನಿರ್ಮಾಣ – ಅಧಿಕಾರಿಗಳಿಂದ ಬುಲ್ಡೋಜರ್‌ ಅಸ್ತ್ರ ಪ್ರಯೋಗ

    ಪೋಸ್ಟ್ನಲ್ಲಿ ಇದು ಕೇವಲ ಸಣ್ಣ ಮಟ್ಟದ ಸ್ಫೋಟ, ಇನ್ನೂ ದೊಟ್ಟ ಮಟ್ಟದಲ್ಲಿ ಸ್ಫೋಟಗೊಳಿಸುವ ನಮ್ಮ ಬಳಿ ಇದೆ. ಬಾರ್‌ನ ಮಾಲೀಕ ಅಕ್ರಮವಾಗಿ ಕೋಟಿಗಟ್ಟಲೆ ಹಣ ಸಂಪಾದಿಸಿದ್ದಾನೆ. ಜೊತೆಗೆ ತೆರಿಗೆಯಿಂದ ವಂಚಿಸುವ ಮೂಲಕ ದೇಶದ ಸ್ಥಿತಿಗೆ ಹಾನಿಯುಂಟು ಮಾಡುತ್ತಿದ್ದಾನೆ ಎಂದು ಬಿಷ್ಣೋಯ್ ಗ್ಯಾಂಗ್ ಆರೋಪಿಸಿದೆ. ಘಟನೆಗೆ ಸಂಬಂಧಿಸಿದಂತೆ ಸಚಿನ್ ಎಂಬಾತನನ್ನು ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಮಂಗಳವಾರ (ಡಿ.10) ಬಾರ್‌ನ ಹೊರಗೆ ಆರೋಪಿ ಎರಡು ಬಾಂಬ್‌ಗಳನ್ನ ಸ್ಫೋಟಿಸಿದ್ದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದರು. ಆರೋಪಿ ಘಟನೆಯ ವೇಳೆ ಅಮಲಿನಲ್ಲಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

    ಐಪಿಎಸ್ ಅಧಿಕಾರಿ ವಿಕಾಸ್ ಅರೋರಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಹಾಗೂ ಭದ್ರತೆಗಾಗಿ ಬಾಂಬ್ ನಿಷ್ಕ್ರೀಯ ತಂಡವನ್ನು ಕರೆಯಿಸಲಾಯಿತು. ಘಟನೆಯಿಂದ ಅಲ್ಲಿದ್ದ ವಾಹನ ಹಾಗೂ ಬೋರ್ಡ್ಗೆ ಸಣ್ಣಪುಟ್ಟ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೃತ್ಯದ ಹಿಂದಿನ ಮೂಲ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ತುಮಕೂರು | ಕಾಂಗ್ರೆಸ್‌ನ ಮಾಜಿ ಶಾಸಕ ಆರ್. ನಾರಾಯಣ ನಿಧನ

     

  • ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ನವದೆಹಲಿ: 2022 ರಲ್ಲಿ ತನ್ನ ಲಿವ್ ಇನ್ ಪಾಲುದಾರ ಶ್ರದ್ಧಾ ವಾಕರ್ (Shraddha Walkar) ಅವರನ್ನು ಕೊಲೆ ಮಾಡಿದ ಆರೋಪಿ ಅಫ್ತಾಬ್ ಪೂನಾವಾಲಾ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ (Lawrence Bishnoi Gang) ಹಿಟ್ ಲಿಸ್ಟ್‌ನಲ್ಲಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ಹೇಳಿವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯ ತನಿಖೆಯ ಸಮಯದಲ್ಲಿ ಈ ಮಾಹಿತಿ ಹೊರ ಬಂದಿದೆ.

    ಸದ್ಯ ತಿಹಾರ್ ಜೈಲಿನಲ್ಲಿರುವ ಆರೋಪಿ ಅಫ್ತಾಬ್ ಪೂನಾವಾಲಾ (Aftab Poonawalla) ಕೊಠಡಿಯ ಸುತ್ತ ಭದ್ರತೆಯನ್ನು ಹೆಚ್ಚಿಸಿದೆ ಎಂದು ವರದಿಯಾಗಿದೆ. ಆದರೆ ಮುಂಬೈ ಪೊಲೀಸರಿಂದ ತಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್

    ದೆಹಲಿಯಲ್ಲಿ 27 ವರ್ಷದ ಶ್ರದ್ಧಾ ವಾಕರ್ ಅವರನ್ನು ಕತ್ತು ಹಿಸುಕಿ, ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದ. ಶ್ರದ್ಧಾ ಮದುವೆಯಾಗುವಂತೆ ಒತ್ತಡ ಹೇರಿದ ನಂತರ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಭಯಾನಕ ಘಟನೆಯು ದೇಶಾದ್ಯಂತ ಆಘಾತ ಮೂಡಿಸಿತ್ತು.

    ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ, ಬಿಷ್ಣೋಯ್ ಗ್ಯಾಂಗ್ ತನ್ನ ಅಪರಾಧ ಚಟುವಟಿಕೆಗಳ ಭಾಗವಾಗಿ ಹಲವಾರು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿದೆ. ಇದು ಸೇಡು ಮತ್ತು ಪೈಪೋಟಿಯಿಂದ ಪ್ರೇರೇಪಿಸಲ್ಪಟ್ಟಿದೆ. ಅವರ ಪ್ರಾಥಮಿಕ ಗುರಿಗಳಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸೇರಿದ್ದಾರೆ. ಇದನ್ನೂ ಓದಿ: ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    ಇನ್ನು ಅಫ್ತಾಬ್ ಜೊತೆಗೆ ಹಿಟ್ ಲಿಸ್ಟ್‌ನಲ್ಲಿರುವ ಇತರರಲ್ಲಿ ಬಿಷ್ಣೋಯ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಮ್ಯಾನೇಜರ್ ಶಗನ್‌ಪ್ರೀತ್ ಸಿಂಗ್ ಸೇರಿದ್ದಾರೆ. ಪ್ರಸ್ತುತ ಗುರುಗ್ರಾಮ್‌ನಲ್ಲಿ ಜೈಲಿನಲ್ಲಿರುವ ದರೋಡೆಕೋರ ಕೌಶಲ್ ಚೌಧರಿ ಮತ್ತು ಪ್ರತಿಸ್ಪರ್ಧಿ ದರೋಡೆಕೋರ ಅಮಿತ್ ದಾಗರ್ ಕೂಡ ಬಿಷ್ಣೋಯಿ ತನ್ನ ಶತ್ರುಗಳ ಲಿಸ್ಟ್‌ನಲ್ಲಿ ಇಟ್ಟುಕೊಂಡಿದೆ.

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್‌ – ಬಿಷ್ಣೋಯ್‌ ಗ್ಯಾಂಗ್‌ ಜೊತೆ ನಂಟು ಸಾಬೀತು!

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್‌ – ಬಿಷ್ಣೋಯ್‌ ಗ್ಯಾಂಗ್‌ ಜೊತೆ ನಂಟು ಸಾಬೀತು!

    – ನೇಪಾಳಕ್ಕೆ ಎಸ್ಕೇಪ್‌ ಆಗಲು ಪ್ಲ್ಯಾನ್‌ ಮಾಡಿದ್ದ ಆರೋಪಿ

    ಲಕ್ನೋ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಪ್ರಮುಖ ಆರೋಪಿ ಹಾಗೂ ಆರೋಪಿಗೆ ಆಶ್ರಯ ನೀಡಿದ್ದ ಇತರ ನಾಲ್ವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಕುಮಾರ್‌ (Shivakumar) ಎಂದು ಗುರುತಿಸಲಾಗಿದೆ.

    ಸಿದ್ದಿಕಿ ಹತ್ಯೆ ಬಳಿಕ ಪರಾರಿಯಾಗಿದ್ದ ಪ್ರಮುಖ ಆರೋಪಿ ನೇಪಾಳಕ್ಕೆ (Nepal) ಪಲಾಯನ ಮಾಡಲು ಪ್ಲ್ಯಾನ್‌ ಮಾಡಿಕೊಂಡಿದ್ದ. ಅಷ್ಟರಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (UP STF) ಹಾಗೂ ಮುಂಬೈ ಅಪರಾಧ ವಿಭಾಗದ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

    ಅ.12 ರಂದು, ಬಾಂದ್ರಾದಲ್ಲಿರುವ ಪುತ್ರ ಶಾಸಕ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಸಿದ್ದಿಕಿ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಸಿದ್ದಿಕಿ ಹತ್ಯೆಗೆ 9.9 ಎಂಎಂ ಪಿಸ್ತೂಲ್‌ ಬಳಸಲಾಗಿತ್ತು, ಒಟ್ಟು 6 ಸುತ್ತುಗಳಲ್ಲಿ ಗುಂಡು ಹಾರಿಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯುಪಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಭಾನುವಾರ ಪ್ರಮುಖ ಆರೋಪಿ ಹಾಗೂ ಆರೋಪಿ ನೇಪಾಳಕ್ಕೆ ಪರಾರಿಯಾಗಲು ಸಹಕರಿಸಿದ್ದ ಇತರ ನಾಲ್ವರನ್ನು ಬಂಧಿಸಲಾಗಿದೆ.

    ಬಳಿಕ ವಿಚಾರಣೆ ವೇಳೆ ಆರೋಪಿ ಶಿವಕುಮಾರ್‌ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಜೊತೆ ಸಂಬಂಧ ಇದೆ. ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್‌ನ ಸೂಚನೆಯ ಮೇರೆಗೆ ಕೊಲೆ ಮಾಡಲಾಗಿದೆ. ಲಾರೆನ್ಸ್‌ನ ಆಪ್ತ ಸಹಾಯಕನಾಗಿದ್ದ ಶುಭಂ ಲೋಂಕರ್ ಎಂಬುವವನು ಅನ್ಮೋಲ್ ಬಿಷ್ಣೋಯ್ ಜೊತೆಗೆ ಸಂಪರ್ಕ ಸಾಧಿಸಲು ಸಕರಿಸಿದ್ದ ಎಂಬುದಾಗಿಯೂ ಒಪ್ಪಿಕೊಂಡಿದ್ದಾನೆ. ಬಾಬಾ ಸಿದ್ದಿಕಿ ಹತ್ಯೆ ನಡೆದ ಒಂದು ದಿನದ ನಂತರ ಗ್ಯಾಂಗ್‌ನ ಸದಸ್ಯರೊಬ್ಬರು ಹತ್ಯೆ ಹೊಣೆ ಹೊತ್ತುಕೊಂಡಿದ್ದರು.

    ಬಾಬಾ ಸಿದ್ದಿಕಿ ಹತ್ಯೆಯ ಆರೋಪಿಗಳಾದ ಮೂವರು ಶೂಟರ್‌ಗಳು ಮುಂಬೈನ ಕುರ್ಲಾ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು. ಈ ವೇಳೆ ಯೂಟ್ಯೂಬ್‌ನಲ್ಲಿ ಟ್ಯುಟೋರಿಯಲ್‌ ವೀಡಿಯೊಗಳನ್ನು ನೋಡಿ ಬಂದೂಕುಗಳನ್ನು ಹೇಗೆ ಬಳಸಬೇಕೆಂದು ಕಲಿತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಆರೋಪಿಗಳು ಸುಮಾರು 4 ವಾರಗಳ ಕಾಲ ಅಂತಹ ವೀಡಿಯೊಗಳನ್ನು ವೀಕ್ಷಿಸಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿತ್ತು.

  • ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಬಿಷ್ಣೋಯ್‌ ಗ್ಯಾಂಗ್‌ನಿಂದ 5 ಕೋಟಿಗೆ ಬೇಡಿಕೆ

    ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಬಿಷ್ಣೋಯ್‌ ಗ್ಯಾಂಗ್‌ನಿಂದ 5 ಕೋಟಿಗೆ ಬೇಡಿಕೆ

    ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನಿಂದ ಮುಂಬೈ ಪೊಲೀಸರಿಗೆ ಕೊಲೆ ಬೆದರಿಕೆಯ ಸಂದೇಶ ಬಂದಿದೆ.

    ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಂದೇಶ ಕಳುಹಿಸಿದವರು ನಟನಿಗೆ ಬೆದರಿಕೆ ಹಾಕಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇದನ್ನು ಬಿಷ್ಣೋಯ್ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದಲ್ಲದೆ, ವ್ಯಕ್ತಿಯು ‘ಮೈ ಸಿಕಂದರ್ ಹೂನ್’ ಹಾಡಿನ ಗೀತರಚನೆಕಾರನಿಗೂ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಸಂಚಾರ ಅಧಿಕಾರಿಗಳ ದೂರಿನ ಮೇರೆಗೆ ವರ್ಲಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳೆದ ಕೆಲವು ವಾರಗಳಲ್ಲಿ, ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಸಲ್ಮಾನ್ ಖಾನ್‌ಗೆ ಹಲವು ಬೆದರಿಕೆ ಸಂದೇಶಗಳು ಬಂದಿವೆ. ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಖಾನ್‌ಗೆ ಜೀವ ಬೆದರಿಕೆ ಇತ್ತು.

    ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ ಪ್ರಕರಣಗಳಲ್ಲಿ ಬಿಷ್ಣೋಯ್ ಸ್ವತಃ ಅಹಮದಾಬಾದ್‌ನ ಸಾಬರಮತಿ ಜೈಲಿನಲ್ಲಿದ್ದರೆ, ಆತನ ತಂಡದ ಶಂಕಿತ ಸದಸ್ಯರು ಏಪ್ರಿಲ್‌ನಲ್ಲಿ ನಟನ ಬಾಂದ್ರಾ ಮನೆಯ ಹೊರಗೆ ಗುಂಡು ಹಾರಿಸಿದ್ದು.

  • Canada | ಗಾಯಕ ಎಪಿ ಧಿಲ್ಲೋನ್ ಮನೆ ಎದುರು ಗುಂಡು ಹಾರಿಸಿದ್ದ ವಿಡಿಯೋ ವೈರಲ್

    Canada | ಗಾಯಕ ಎಪಿ ಧಿಲ್ಲೋನ್ ಮನೆ ಎದುರು ಗುಂಡು ಹಾರಿಸಿದ್ದ ವಿಡಿಯೋ ವೈರಲ್

    ಒಟ್ಟಾವಾ: ಭಾರತ (India) ಮತ್ತು ಕೆನಡಾದ (Canada) ನಡುವೆ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಬೆನ್ನಲ್ಲೇ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ವಂದಿದೆ. ಕೆನಡಾದಲ್ಲಿರುವ ಪಂಜಾಬಿ ಗಾಯಕ (Punjabi Singer) ಎ.ಪಿ ಧಿಲ್ಲೋನ್ (AP Dhillon) ಅವರ ಮನೆಯ ಎದುರು ಎರಡು ತಿಂಗಳ ಹಿಂದೆ ದುಷ್ಕರ್ಮಿಗಳು ಗುಂಡು ಹಾರಿಸಲಾಗಿತ್ತು. ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಕೆನಡಾದ ವ್ಯಾಂಕೋವರ್‌ನ  (Vancouver) ವಿಕ್ಟೋರಿಯಾ ದ್ವೀಪದಲ್ಲಿ (Victoria Island) ವಾಸವಾಗಿದ್ದ ಗಾಯಕ ಎಪಿ ಧಿಲ್ಲೋನ್ ಅವರ ಮನೆಯ ಸುತ್ತಲೂ ಕಳೆದ ಸೆ.2 ರಂದು ಗುಂಡು ಹಾರಿಸಲಾಗಿತ್ತು. ಆದರೆ ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಇದಕ್ಕೆ ಸಂಬಂಧಿಸಿದಂತಹ ವಿಡಿಯೋವೊಂದು ತಿಂಗಳುಗಳ ಬಳಿಕ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಗಾಯಕನ ಮನೆಯ ಸುತ್ತಲೂ ದುಷ್ಕರ್ಮಿಗಳು ಗುಂಡು ಹಾರಿಸುತ್ತಿರುವುದು ಹಾಗೂ ಎರಡು ವಾಹನಗಳಿಗೆ ಬೆಂಕಿ ಹಚ್ಚಿರುವುದು ಕಂಡುಬಂದಿದೆ.ಇದನ್ನೂ ಓದಿ: ಹಾಸನಾಂಬೆ ದೇವಿ ದರ್ಶನ ಮುಗಿಸಿ ಹಿಂತಿರುಗುವ ವೇಳೆ ಕಾರು ಡಿಕ್ಕಿ- ತಂದೆ, ಮಗಳು ಸಾವು

    ಈ ಘಟನೆಗೆ ಸಂಬಂಧಿಸಿದಂತೆ, ಕೆನಡಾ ಪೊಲೀಸರು ಒಂಟಾರಿಯೊದಲ್ಲಿದ್ದ ಭಾರತೀಯ ಮೂಲದ ಆರೋಪಿ ಅಭಿಜೀತ್ ಕಿಂಗ್ರಾನನ್ನು ಬಂಧಿಸಿದ್ದಾರೆ ಹಾಗೂ ಇನ್ನೋರ್ವ ಆರೋಪಿ ವಿಕ್ರಮ್ ಶರ್ಮಾಗೆ ಬಂಧನ ವಾರಂಟ್ ಕಳುಹಿಸಿದ್ದಾರೆ.

    ಕೆನಡಾ ಪೊಲೀಸರ ಮಾಹಿತಿ ಪ್ರಕಾರ, ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಆರೋಪದ ಮೇಲೆ ಕಿಂಗಾನ್ರನ್ನು ಬಂಧಿಸಲಾಗಿದೆ ಹಾಗೂ ಒಂಟಾರಿಯೊ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇನ್ನೂ ಆರೋಪಿ ಶರ್ಮಾ ಗುರುತು ಪತ್ತೆಯಾಗಿದ್ದು, ಫೋಟೋ ಸಿಕ್ಕಿಲ್ಲ ಆದರೆ ಭಾರತದಲ್ಲಿರುವುದಾಗಿ ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸೆಪ್ಟೆಂಬರ್‌ನಲ್ಲಿ ನಡೆದ ಗುಂಡಿನ ದಾಳಿಯ ಬಳಿಕ, ಸಿಧು ಮೂಸೆವಾಲಾ (Sidhu Moose Wala) ಮತ್ತು ಬಾಬಾ ಸಿದ್ದಿಕಿ ಹತ್ಯೆ (Baba Siddique) ಪ್ರಕರಣದ ಹಿಂದೆಯಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi gang) ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು ಎನ್ನಲಾಗಿತ್ತು. ನಟ ಸಲ್ಮಾನ್ ಖಾನ್ ಅವರ ಕಾರ್ಯಕ್ರಮವೊಂದರ ವಿಡಿಯೋದಲ್ಲಿ ಎಪಿ ಧಿಲ್ಲೋನ್ ಕಾಣಿಸಿಕೊಂಡಿದ್ದು, ಅದೇ ಕಾರಣದಿಂದ ಗುಂಡಿನ ದಾಳಿ ನಡೆಸಲಾಗಿದೆ. ಇನ್ನೂ ಕೆನಡಾದ ಆಭರಣ ವ್ಯಾಪಾರಿಯ ಮನೆಯ ಮೇಲೆ ನಡೆದ ಗುಂಡಿನ ದಾಳಿಯಲ್ಲಿದ್ದ ದರೋಡೆಕೋರ ರೋಹಿತ್ ಗೋಡಾರಾ ಲಾರೆನ್ಸ್ ಬಿಷ್ಣೋಯ್‌ನೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಬರೆದುಕೊಂಡಿದ್ದರು. ಇನ್ನೂ ಕಳೆದ ವರ್ಷ ನವೆಂಬರ್‌ನಲ್ಲಿ ಕೆನಡಾದಲ್ಲಿ ಗಾಯಕ ಗಿಪ್ಪಿ ಗ್ರೆವಾಲ್ ಮನೆಯ ಮುಂದೆ ನಡೆದಿದ್ದ ಗುಂಡಿನ ದಾಳಿಯ ಹೊಣೆಯನ್ನು ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು.

    ಗುಂಡಿನ ದಾಳಿಯ ಬಳಿಕ ಗಾಯಕ ಧಿಲ್ಲೋನ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನಾನು ಸುರಕ್ಷಿತವಾಗಿದ್ದೇನೆ. ಕಾಳಜಿ ವಹಿಸಿದ್ದಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದರು.ಇದನ್ನೂ ಓದಿ: ಬೆಳಗಾವಿಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ – 30 ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದು!

  • ಸಂಸದ ಪಪ್ಪು ಯಾದವ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ

    ಸಂಸದ ಪಪ್ಪು ಯಾದವ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ

    ಪಾಟ್ನಾ: ಬಿಹಾರದ (Bihar) ಪುರ್ನಿಯಾದ (Purnia) ಸ್ವತಂತ್ರ ಪಕ್ಷದ ಸಂಸದ ಪಪ್ಪು ಯಾದವ್‌ಗೆ (Pappu Yadav) ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ (Lawrence Bishnoi Gang) ಕೊಲೆ ಬೆದರಿಕೆ ಸಂದೇಶ ಬಂದಿದೆ.

    ಗ್ಯಾಂಗಸ್ಟರ್ ಲಾರೆನ್ಸ್ ಬಿಷ್ಣೋಯ್‌ನಂತಹ ಕ್ರಿಮಿನಲ್‌ನ ಜಾಲವನ್ನು 24 ಗಂಟೆಗಳ ಒಳಗೆ ಕೆಡವುದಾಗಿ ಸಂಸದ ಪಪ್ಪು ಯಾದವ್‌ಗೆ ಸವಾಲು ಹಾಕಿದ್ದರು. ಸವಾಲ್ ಹಾಕಿದ ಬೆನ್ನಲ್ಲೇ ಈ ಬೆದರಿಕೆ ಸಂದೇಶ ಬಂದಿದೆ.ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌, ಜಮೀರ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಆರ್.ಅಶೋಕ್

    ಬಾಬಾ ಸಿದ್ದಿಕಿ ಹತ್ಯೆ (Baba Siddique case) ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಮಾತನಾಡಿದ್ದ ಪಪ್ಪು ಯಾದವ್, ಸರ್ಕಾರದ ಬೆಂಬಲಿತ ಮಾಜಿ ಸಚಿವರ ಹತ್ಯೆಯು ಮಹಾರಾಷ್ಟ್ರದಲ್ಲಿ ಸಂಪೂರ್ಣ ಕಾನೂನು ಸುವ್ಯವಸ್ಥೆ ಹಾಳಾಗಿರುವುದು ಎತ್ತಿ ತೋರಿಸುತ್ತದೆ. ಬಿಹಾರದ ಮಗ ಬಾಬಾ ಸಿದ್ದಿಕ್ ಹತ್ಯೆ ಇದೊಂದು ದುರಂತವಾಗಿದೆ. ಬಿಜೆಪಿ ನೇತೃತ್ವದ ಸರ್ಕಾರವು ತನ್ನ ಪ್ರಭಾವಿ ನಾಯಕರನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಸಾಮಾನ್ಯ ಜನರಿನ್ನು ರಕ್ಷಿಸುವ ಭರವಸೆ ಇದೆಯಾ? ನಾನು ಈ ಕ್ರಿಮಿನಲ್ ಜಾಲವನ್ನು 24 ಗಂಟೆಗಳ ಒಳಗೆ ಕೆಡವುದಾಗಿ ಹೇಳಿದ್ದರು.

    ಈ ಹೇಳಿಕೆ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಆಡಿಯೋ ಸಂದೇಶದ ಮೂಲಕ ವ್ಯಾಟ್ಸಪ್‌ಗೆ ಬೆದರಿಕೆ ಬಂದಿದೆ. ನಿಮ್ಮ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ನಟ ಸಲ್ಮಾನ್ ಖಾನ್‌ನ ಸಮಸ್ಯೆಗಳಿಂದ ದೂರವಿರಬೇಕು, ಇದನ್ನು ನಿರ್ಲಕ್ಷ್ಯಿಸಿದರೆ ಕೊಲ್ಲುವುದಾಗಿ ಆಡಿಯೋದಲ್ಲಿ ಬೆದರಿಕೆ ಹಾಕಿದ್ದಾರೆ.

    ಆದಷ್ಟು ಬೇಗ ವಿಷಯವನ್ನು ಇತ್ಯರ್ಥಪಡಿಸಿ. ನಾನು ನಿನ್ನನ್ನು ಅಣ್ಣ ಎಂದು ಪರಿಗಣಿಸಿದ್ದೆ. ಆದರೆ ನೀವು ನನಗೆ ಮುಜುಗರವನ್ನುಂಟು ಮಾಡಿದ್ದೀರಿ. ಮತ್ತೆ ಕರೆ ಮಾಡಿ ಮತ್ತು ನಾನು ನಿಮ್ಮನ್ನು `ಭಾಯ್’ ನೊಂದಿಗೆ ಸಂಪರ್ಕಿಸುತ್ತೇನೆ. ಜೈಲಿನ ಸಿಗ್ನಲ್ ಜಾಮರ್‌ಗಳನ್ನು ನಿಷ್ಕ್ರಿಯಗೊಳಿಸಲು ಲಾರೆನ್ಸ್ ಬಿಷ್ಣೋಯ್ ಗಂಟೆಗೆ 1 ಲಕ್ಷ ರೂ.ಯನ್ನು ಪಾವತಿಸುತ್ತಿದ್ದೇವೆ ಎಂದು ಆಡಿಯೋದಲ್ಲಿ ಉಲ್ಲೇಖಿಸಿದೆ. ಬೆದರಿಕೆ ಬೆನ್ನಲ್ಲೇ ಪಪ್ಪು ಯಾದವ್ ಅವರು ತಕ್ಷಣ ಬಿಹಾರದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಕ್ರಮಕ್ಕೆ ಒತ್ತಾಯಿಸಿದ್ದಾರೆ.ಇದನ್ನೂ ಓದಿ:BBK 11: ಕಿಚ್ಚನ ಶೋನಲ್ಲಿ ದರ್ಶನ್ ನಟನೆಯ ‘ನವಗ್ರಹ’ ರೀ ರಿಲೀಸ್ ವಿಚಾರ ಚರ್ಚೆ

  • 700 ಶಾರ್ಪ್‌ ಶೂಟರ್ಸ್‌.. ಸ್ಟಾರ್‌ ನಟ, ಜನಪ್ರಿಯ ವ್ಯಕ್ತಿಗಳೇ ಟಾರ್ಗೆಟ್‌ – ಮುಂಬೈ ಭೂಗತ ಜಗತ್ತಿಗೆ ಬಿಷ್ಣೋಯ್‌ ಗ್ಯಾಂಗ್‌ ಎಂಟ್ರಿ?

    700 ಶಾರ್ಪ್‌ ಶೂಟರ್ಸ್‌.. ಸ್ಟಾರ್‌ ನಟ, ಜನಪ್ರಿಯ ವ್ಯಕ್ತಿಗಳೇ ಟಾರ್ಗೆಟ್‌ – ಮುಂಬೈ ಭೂಗತ ಜಗತ್ತಿಗೆ ಬಿಷ್ಣೋಯ್‌ ಗ್ಯಾಂಗ್‌ ಎಂಟ್ರಿ?

    – ಯಾರು ಈ ಲಾರೆನ್ಸ್‌ ಬಿಷ್ಣೋಯ್‌? – ಪಾತಕ ಲೋಕಕ್ಕೆ ಎಂಟ್ರಿ ಕೊಟ್ಟಿದ್ಹೇಗೆ?
    – ಜೈಲಿನಿಂದಲೇ ಬಿಷ್ಣೋಯ್‌ ಆಪರೇಷನ್‌ ಮಾಡೋದು ಹೇಗೆ?
    – ಟಾರ್ಗೆಟ್‌ ಲಿಸ್ಟ್‌ನಲ್ಲಿ ಇರೋದ್ಯಾರು?

    ದುವರೆಗೆ ತಣ್ಣಗಾಗಿದ್ದ ಮುಂಬೈ ಭೂಗತಲೋಕ ಮತ್ತೆ ಸಕ್ರಿಯವಾಗಿದೆ. 90ರ ದಶಕದಲ್ಲಿ ದಾವೂದ್ ಇಬ್ರಾಹಿಂ ಭಯದಲ್ಲಿದ್ದ ಮುಂಬೈ ಈಗ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಹೆದರುವಂತಾಗಿದೆ. ಇತ್ತೀಚೆಗೆ ನಗರದಲ್ಲಿ ನಡೆದ ಎನ್‌ಸಿಪಿ ನಾಯಕ ಹಾಗೂ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರೇ ಈ ಕೊಲೆ ಮಾಡಿದ್ದಾರೆಂಬುದನ್ನು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ. ಮುಂಬೈನಲ್ಲಿ ಮತ್ತೊಂದು ಭೂಗತ ಗ್ಯಾಂಗ್ ಹುಟ್ಟಿಕೊಂಡಿತೇ ಎಂಬ ಪ್ರಶ್ನೆಯನ್ನು ಈ ಪ್ರಕರಣ ಹುಟ್ಟುಹಾಕಿದೆ.

    90ರ ದಶಕದಲ್ಲಿ ಇಡೀ ಮುಂಬೈ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಭಯದಲ್ಲಿತ್ತು. ಸರಣಿ ಬಾಂಬ್ ಸ್ಫೋಟ ಹಾಗೂ ಇನ್ನಿತರೆ ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೃತ್ಯಗಳನ್ನು ನಡೆಸುತ್ತಾ ದಾವೂದ್ ಗ್ಯಾಂಗ್ ನಗರದಲ್ಲಿ ಸಕ್ರಿಯವಾಗಿತ್ತು. ಈತನ ಭೂಗತ ಚಟುವಟಿಕೆಗಳನ್ನು ಹಂತಹಂತವಾಗಿ ನಿಯಂತ್ರಣಕ್ಕೆ ತರುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿದ್ದ. ನಂತರ ವಿದೇಶದಲ್ಲೇ ಕುಳಿತು ಮುಂಬೈನಲ್ಲಿ ಪಾತಕ ಕೃತ್ಯಗಳನ್ನು ನಡೆಸುತ್ತಿದ್ದ. ಈಗ ಆತನ ಪ್ರಭಾವ ಕ್ಷೀಣಿಸಿದೆ. ಮುಂಬೈ ಈಗ ಶಾಂತಿವಾಗಿದೆ ಎನ್ನುವಷ್ಟರಲ್ಲೇ ಮತ್ತೊಂದು ಗ್ಯಾಂಗ್ ಎಂಟ್ರಿ ಕೊಟ್ಟಿರುವುದು ಆತಂಕ ಮೂಡಿಸಿದೆ. ಸದ್ಯ ದೇಶದಲ್ಲೆಡೆ ಚರ್ಚೆಯಲ್ಲಿರುವ ವಿಷಯವೆಂದರೆ ಅದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್. ಮಾಜಿ ಸಚಿವರ ಹತ್ಯೆ ಕಾರಣಕ್ಕಷ್ಟೇ ಅಲ್ಲ, ಬಾಲಿವುಡ್ ಸ್ಟಾರ್ ನಟ ಸೇರಿದಂತೆ ಅನೇಕ ಸೆಲೆಬ್ರಿಟಿಗಳನ್ನು ಟಾರ್ಗೆಟ್ ಮಾಡಿರುವುದಕ್ಕೆ ಈ ಗ್ಯಾಂಗ್ ದೇಶದ ಗಮನ ಸೆಳೆದಿದೆ.

    ಅಷ್ಟಕ್ಕೂ ಯಾರೀ ಲಾರೆನ್ಸ್ ಬಿಷ್ಣೋಯ್? ಏನಿದು ಆತನ ಗ್ಯಾಂಗ್? ಮಹಾರಾಷ್ಟ್ರದ ಮಾಜಿ ಸಚಿವನ ಹತ್ಯೆಗೂ ಈ ಗ್ಯಾಂಗ್‌ಗೂ ಏನು ಸಂಬಂಧ? ಇವರು ಟಾರ್ಗೆಟ್ ಮಾಡಿರುವ ಆ ಬಾಲಿವುಡ್ ಸ್ಟಾರ್ ಯಾರು? ಗ್ಯಾಂಗ್‌ನ ಹಿಟ್ ಲಿಸ್ಟ್‌ನಲ್ಲಿರುವ ಖ್ಯಾತನಾಮರು ಯಾರು?… ಇತ್ಯಾದಿ ಹಲವು ಪ್ರಶ್ನೆಗಳಿಗೆ ಇಲ್ಲಿದೆ ನೋಡಿ ವಿವರ.

    ಯಾರು ಈ ಲಾರೆನ್ಸ್ ಬಿಷ್ಣೋಯ್?
    31 ವಯಸ್ಸಿನ ಲಾರೆನ್ಸ್ ಬಿಷ್ಣೋಯ್ ಉತ್ತರ ಭಾರತ ಭಾಗದವನು. ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಧತ್ತರನ್‌ವಾಲಿ ಗ್ರಾಮದವನು. 1993ರ ಫೆಬ್ರವರಿ 12 ರಂದು ಉತ್ತಮ ಕೃಷಿಕ ಕುಟುಂಬವೊಂದರಲ್ಲಿ ಜನಿಸಿದ. ಈತನ ತಂದೆ ಒಬ್ಬ ಪೊಲೀಸ್ ಕಾನ್‌ಸ್ಟೇಬಲ್. ಲಾರೆನ್ಸ್, ಬಿಷ್ಣೋಯ್ ಸಮುದಾಯಕ್ಕೆ ಸೇರಿದವ. ಈ ಸಮುದಾಯದ ಜನರು ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ ಹಲವು ಭಾಗಗಳಲ್ಲಿ ನೆಲೆಸಿದ್ದಾರೆ. ಬಿಷ್ಣೋಯ್ 12 ನೇ ತರಗತಿಯವರೆಗೆ ಅಧ್ಯಯನ ಮಾಡಿದ್ದ. ನಂತರ ಕಾಲೇಜು ಶಿಕ್ಷಣವನ್ನು ಮುಂದುವರಿಸಲು 2010 ರಲ್ಲಿ ಚಂಡೀಗಢಕ್ಕೆ ಬಂದ. ವಿದ್ಯಾರ್ಥಿ ದಿಸೆಯಲ್ಲೇ ರಾಜಕೀಯವಾಗಿ ಸಕ್ರಿಯನಾಗಿದ್ದ. 2011 ಮತ್ತು 2012 ರ ನಡುವೆ ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷನಾಗಿದ್ದ.

    ವಿದ್ಯಾರ್ಥಿ ದಿಸೆಯಲ್ಲೇ ಭೂಗತ ಲೋಕಕ್ಕೆ ಎಂಟ್ರಿ
    ಲಾರೆನ್ಸ್ ಬಿಷ್ಣೋಯ್ ವಿದ್ಯಾರ್ಥಿಯಾಗಿದ್ದಾಗಲೇ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ. ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ದಾಖಲಾದ ಮೊದಲ ಎಫ್‌ಐಆರ್. ನಂತರ ಏಪ್ರಿಲ್ 2010 ರಲ್ಲಿ ಅತಿಕ್ರಮಣಕ್ಕಾಗಿ ಮತ್ತೊಂದು ಎಫ್‌ಐಆರ್ ದಾಖಲಾಯಿತು. ಫೆಬ್ರವರಿ 2011 ರಲ್ಲಿ ಆತನ ವಿರುದ್ಧ ಹಲ್ಲೆ ಮತ್ತು ಸೆಲ್‌ಫೋನ್ ದರೋಡೆ ಪ್ರಕರಣವನ್ನು ದಾಖಲಿಸಲಾಯಿತು. ಈ ಮೂರೂ ಪ್ರಕರಣಗಳು ವಿದ್ಯಾರ್ಥಿ ಬಿಷ್ಣೋಯ್ ರಾಜಕೀಯಕ್ಕೆ ಸಂಬಂಧಿಸಿದವು. ಕೊನೆಗೆ, ಜಸ್ವಿಂದರ್ ಸಿಂಗ್ ಅಲಿಯಾಸ್ ರಾಕಿ ಗ್ಯಾಂಗ್‌ಗೆ ಬಿಷ್ಣೋಯ್ ಸೇರಿದ. ರಾಕಿ ಎಂಬಾತ ಪಂಜಾಬ್‌ನ ಫಾಜಿಲ್ಕಾದಲ್ಲಿ ದರೋಡೆಕೋರನಾಗಿದ್ದ. ನಂತರ ರಾಜಕಾರಣಿಯಾದ. ಈತನ ಗ್ಯಾಂಗ್ ರಾಜಸ್ಥಾನದ ಕೆಲವು ಭಾಗಗಳು, ರಾಜಸ್ಥಾನ-ಪಂಜಾಬ್ ಗಡಿಯಲ್ಲಿರುವ ಶ್ರೀ ಗಂಗಾ ನಗರ ಮತ್ತು ಭರತ್‌ಪುರದಲ್ಲಿ ಸಕ್ರಿಯವಾಗಿತ್ತು. ಕ್ರಿಮಿನಲ್ ಹಿನ್ನೆಲೆಯುಳ್ಳ ರಾಕಿಯನ್ನು ಮೇ 2016 ರಲ್ಲಿ ಹಿಮಾಚಲ ಪ್ರದೇಶದ ಪರ್ವಾನೂ ಬಳಿ ಹತ್ಯೆ ಮಾಡಲಾಗಿತ್ತು. ಕುಖ್ಯಾತ ದರೋಡೆಕೋರ ಜೈಪಾಲ್ ಭುಲ್ಲಾರ್ ಕೊಲೆಯ ಹೊಣೆಯನ್ನು ಹೊತ್ತುಕೊಂಡ. ನಂತರ ಜೂನ್ 2020 ರಲ್ಲಿ ಕೋಲ್ಕತ್ತಾದಲ್ಲಿ ಭುಲ್ಲಾರ್‌ನನ್ನು ಗುಂಡಿಕ್ಕಿ ಕೊಲ್ಲಲಾಯಿತು.

    ಹಲವು ವರ್ಷಗಳು ಪೈಪೋಟಿಯ ಭಾಗವಾಗಿ ಪ್ರತೀಕಾರದ ಹತ್ಯೆಗಳ ಪ್ರಕರಣಗಳಲ್ಲಿ ಈ ಗ್ಯಾಂಗ್‌ನ್ನು ಹೆಸರಿಸಲಾಯಿತು. ಬಿಷ್ಣೋಯ್ ಕೊಲೆ, ಕೊಲೆ ಯತ್ನ, ಸುಲಿಗೆ ಮತ್ತು ಇತರೆ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಪ್ರಸ್ತುತ ಆತನನ್ನು ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಸದ್ಯ ಜೈಲಿನಲ್ಲಿದ್ದರೂ ಅಲ್ಲಿಂದಲೇ, ತನ್ನ ಗ್ಯಾಂಗ್ ಅನ್ನು ನಿರ್ವಹಿಸುತ್ತಿದ್ದಾನೆ ಎನ್ನಲಾಗಿದೆ. ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಿ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸಬರಮತಿ ಕಾರಾಗೃಹದಲ್ಲಿರಿಸಿದೆ.

    ಬಿಷ್ಣೋಯ್ ಗ್ಯಾಂಗ್‌ನಲ್ಲಿ 700 ಶಾರ್ಪ್ ಶೂಟರ್ಸ್‌?
    2022 ರಲ್ಲಿ ಪಂಜಾಬಿನ ಮಾನ್ಸಾ ಜಿಲ್ಲೆಯಲ್ಲಿ ನಡೆದ ಜನಪ್ರಿಯ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಕೊಲೆಯು ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿ ತಂದಿತು. ಅದಾದ ಒಂದೆರಡು ವರ್ಷಗಳಲ್ಲಿ ಮತ್ತೆ ಈತನ ಗ್ಯಾಂಗ್ ಸುದ್ದಿಯಲ್ಲಿದೆ. ಅದೇ, ಮುಂಬೈನ ಹಿರಿಯ ರಾಜಕೀಯ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆ. ಸಿದ್ದಿಕಿ ಅವರ ಹತ್ಯೆ ಮಾರನೇ ದಿನವೇ ಕೃತ್ಯದ ಹೊಣೆಯನ್ನು ಈತನ ಗ್ಯಾಂಗ್ ಹೊತ್ತುಕೊಂಡಿತು.

    ಬಿಷ್ಣೋಯ್ ಗ್ಯಾಂಗ್ ಯಾವುದೋ ಒಂದು ಪ್ರದೇಶ ಅಥವಾ ರಾಜ್ಯಕ್ಕೆ ಸೀಮಿತವಾಗಿಲ್ಲ. ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹಲವು ಭಾರತೀಯ ರಾಜ್ಯಗಳಲ್ಲಿ ಗ್ಯಾಂಗ್ ಹರಡಿಕೊಂಡಿದೆ. ಹೊರದೇಶಗಳ ಗ್ಯಾಂಗ್‌ಗಳ ನಂಟು ಕೂಡ ಬಿಷ್ಣೋಯ್‌ಗೆ ಇದೆ. ಜಾಗತಿಕ ಕುಖ್ಯಾತ ಪಾತಕಿ ಗೋಲ್ಡಿ ಬ್ರಾರ್ ಕೂಡ ಈತನಿಗೆ ಸಾಥ್ ನೀಡುತ್ತಾನೆ. ಕೆನಡಾದಲ್ಲೂ ಈತನ ಗ್ಯಾಂಗ್ ಜಾಲ ವಿಸ್ತರಿಸಿದೆ. ಎನ್‌ಐಎ ಪ್ರಕಾರ, ಬಿಷ್ಣೋಯ್ ಗ್ಯಾಂಗ್‌ನಲ್ಲಿ 700 ಶೂಟರ್ಸ್ ಇದ್ದಾರೆ. ಈ ಪೈಕಿ 300 ಶೂಟರ್ಸ್ ಪಂಜಾಬ್‌ನಲ್ಲಿದ್ದಾರೆ. ಸುಲಿಗೆ, ಕೊಲೆ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಬಿಷ್ಣೋಯ್ ಗ್ಯಾಂಗ್ ಸಕ್ರಿಯವಾಗಿದೆ. ಪಂಜಾಬಿ ಗಾಯಕರು, ಮದ್ಯದ ಮಾಫಿಯಾ, ಉದ್ಯಮಿಗಳು ಮತ್ತು ಪ್ರಸಿದ್ಧ ವ್ಯಕ್ತಿಗಳೇ ಈ ಗ್ಯಾಂಗ್‌ನ ಟಾರ್ಗೆಟ್. ಅಪರಾಧ ಕೃತ್ಯಗಳಿಗೆ ವೃತ್ತಿಪರ ಶೂಟರ್‌ಗಳನ್ನು ಬಳಸಿಕೊಳ್ಳುತ್ತಿದೆ.

    ಜೈಲಿನಿಂದಲೇ ಭೂಗತ ಕಾರ್ಯಾಚರಣೆ!
    ಅದು ಗುಜರಾತ್‌ನ ಸಬರಮತಿ ಜೈಲೇ ಆಗಿರಲಿ ಅಥವಾ ದೆಹಲಿಯ ತಿಹಾರ್ ಜೈಲೇ ಆಗಿರಲಿ, ಲಾರೆನ್ಸ್ ಬಿಷ್ಣೋಯ್ ಜೈಲಿನಿಂದಲೇ ಭೂಗತ ಕಾರ್ಯಾಚರಣೆಗಳನ್ನು ನಡೆಸುತ್ತಾನೆ. ಸಂವಹನಕ್ಕಾಗಿ ಮೊಬೈಲ್ ಫೋನ್‌ಗಳನ್ನು ಬಳಸುತ್ತಾನೆ. ಅದಕ್ಕಾಗಿ ಈತನನ್ನು ಒಂದು ಜೈಲಿನಿಂದ ಇನ್ನೊಂದಕ್ಕೆ ಸ್ಥಳಾಂತರಿಸಲಾಯಿತು. ಏಕಾಂತ ಸೆರೆಮನೆಯಲ್ಲಿ ಇರಿಸಲಾಗಿದೆ. ಈತ ಕಾರ್ಯಾಚರಣೆಗಳಿಗಾಗಿ ಉನ್ನತ ಮಟ್ಟದ ವಿಪಿಎನ್ ನೆಟ್‌ವರ್ಕ್‌ಗಳನ್ನು ಬಳಸುತ್ತಾನೆ. ಸಿಗ್ನಲ್ ಮತ್ತು ಟೆಲಿಗ್ರಾಮ್‌ನಂತಹ ಅಪ್ಲಿಕೇಶನ್‌ಗಳನ್ನು ಬಳಸಿ ದೇಶ-ವಿದೇಶಗಳಲ್ಲಿರುವ ತನ್ನ ಸಹವರ್ತಿಗಳೊಂದಿಗೆ ಸಂವಹನ ನಡೆಸುತ್ತಾನೆ. ಬಿಷ್ಣೋಯ್ ಗ್ಯಾಂಗ್ ಸ್ಥಳೀಯ ದರೋಡೆಕೋರರೊಂದಿಗೆ ಸಂಪರ್ಕದಲ್ಲಿರುತ್ತದೆ. ಈ ಸ್ಥಳೀಯ ಗುಂಪುಗಳು ಶಸ್ತ್ರಾಸ್ತ್ರ ತರಬೇತಿ ಪಡೆಯುವ ಶೂಟರ್‌ಗಳನ್ನು ನೇಮಿಸಿಕೊಳ್ಳುತ್ತವೆ. ಬಿಷ್ಣೋಯ್ ಗ್ಯಾಂಗ್ ಆದೇಶದ ಯಾವುದೇ ಒಪ್ಪಂದದ ಹತ್ಯೆ ಬಳಿಕ ಹಣವನ್ನು ಪಡೆಯುತ್ತವೆ.

    ಬಡವರು, ಅಪ್ರಾಪ್ತ ವಯಸ್ಸಿನ ಹುಡುಗರು, ತುರ್ತಾಗಿ ಹಣದ ಅವಶ್ಯಕತೆ ಇರುವವರನ್ನೇ ಗುರುತಿಸಿ ಗ್ಯಾಂಗ್‌ಗೆ ಸೇರಿಸಿಕೊಳ್ಳಲಾಗುತ್ತದೆ. ಶೂಟರ್‌ಗಳಿಗೆ ತಾವು ಯಾರಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದೇ ತಿಳಿದಿರುವುದಿಲ್ಲ. ಅವರಿಗೆ ಒಂದು ಟಾರ್ಗೆಟ್ ನೀಡಲಾಗಿರುತ್ತದೆ. ಅದನ್ನು ಮುಗಿಸಬೇಕಷ್ಟೆ. ಅದರಾಚೆಗೆ ಬೇರೆ ಯಾವುದೇ ರೀತಿಯ ಒಡನಾಟ ಅವರೊಂದಿಗೆ ಇರುವುದಿಲ್ಲ. ದಾವೂದ್ ಇಬ್ರಾಹಿಂನ ಡಿ-ಕಂಪನಿ ಹೇಗೆ ಕಾರ್ಯನಿರ್ವಹಿಸುತ್ತದೆಯೋ ಹಾಗೆಯೇ ಬಿಷ್ಣೋಯ್ ಗ್ಯಾಂಗ್ ಕಾರ್ಪೊರೇಟ್ ಕಂಪನಿಯಂತೆ ಕಾರ್ಯನಿರ್ವಹಿಸುತ್ತದೆ ಎನ್ನುತ್ತಾರೆ ಪೊಲೀಸರು. ಬಿಷ್ಣೋಯ್ ಗ್ಯಾಂಗ್ ಶಾರ್ಪ್‌ಶೂಟರ್ಸ್‌ ಅಷ್ಟೇ ಅಲ್ಲ, ಲಾಜಿಸ್ಟಿಕ್ಸ್, ಕಾನೂನು ಮತ್ತು ಮಾಹಿತಿ ಸಂಗ್ರಹಣೆಯನ್ನು ನೋಡಿಕೊಳ್ಳುವ ಪ್ರತ್ಯೇಕ ವಿಭಾಗಗಳನ್ನೂ ಹೊಂದಿದೆ.

    ಸಲ್ಮಾನ್ ಖಾನ್ ಟಾರ್ಗೆಟ್ ಯಾಕೆ?
    ಬಿಷ್ಣೋಯ್ ಸಮುದಾಯಕ್ಕೂ ಕೃಷ್ಣಮೃಗಕ್ಕೂ ಅವಿನಾಭಾವ ಸಂಬಂಧ. ಇವರು ಕೃಷ್ಣಮೃಗವನ್ನು ದೇವರೆಂದೇ ಪರಿಗಣಿಸುತ್ತಾರೆ. ಅಂತಹ ಪ್ರಾಣಿಯನ್ನು ಸಲ್ಮಾನ್ ಖಾನ್ ಬೇಟೆಯಾಡಿದ ಎಂಬುದು ಬಿಷ್ಣೋಯ್ ಆಕ್ರೋಶ. ಕೃಷ್ಣಮೃಗ ಬೇಟೆಯಾಡಿದ ಆರೋಪದಲ್ಲಿ 2018ರಲ್ಲಿ ರಾಜಸ್ಥಾನದ ಸ್ಥಳೀಯ ಕೋರ್ಟ್ ಸಲ್ಮಾನ್ ಖಾನ್‌ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿತು. ಬಾಲಿವುಡ್ ನಟ ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ ನಟನ ಮೇಲೆ ಲಾರೆನ್ಸ್ ಬಿಷ್ಣೋಯ್ ಹಗೆ ಸಾಧಿಸುತ್ತಿದ್ದಾನೆ. ಕೃಷ್ಣಮೃಗ ಬೇಟೆಯಾಡಿದ್ದಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳುವವರೆಗೆ ನಿನ್ನನ್ನು ಬಿಡಲ್ಲ ಎಂದು ಬಿಷ್ಣೋಯ್ ಶಪಥ ಮಾಡಿದ್ದಾನೆ. ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್ ಹತ್ಯೆಗೆ ಹಲವು ಬಾರಿ ಯತ್ನಗಳು ನಡೆದಿವೆ. ಅದೃಷ್ಟವಶಾತ್ ನಟ ಪಾರಾಗಿದ್ದಾನೆ. ಆತಂಕದಲ್ಲಿರುವ ಖಾನ್ ರಕ್ಷಣೆಗಾಗಿ ಹೆಚ್ಚಿನ ಭದ್ರತೆ ತೆಗೆದುಕೊಂಡಿದ್ದಾರೆ. ಈ ಹೊತ್ತಿನಲ್ಲೇ ಸಲ್ಮಾನ್ ಖಾನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯಾಗಿದೆ. ಇದು ಸಹಜವಾಗಿ ನಟನಲ್ಲಿ ಆತಂಕ ಹೆಚ್ಚಿಸಿದೆ. ಸಿನಿಮಾ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಸಂಬAಧ ಅಷ್ಟಾಗಿ ಚೆನ್ನಾಗಿರಲಿಲ್ಲ. ವೈಮನಸ್ಸು ಮರೆತು ಇಬ್ಬರು ಒಂದಾಗುವAತೆ ಮಾಡಿದವರೇ ಬಾಬಾ ಸಿದ್ದಿಕಿ. ಇವರು ಸಲ್ಮಾನ್ ಖಾನ್ ಜೊತೆಗೆ ಹೆಚ್ಚು ಒಡನಾಟ ಹೊಂದಿದ್ದರು. ಅದೇ ಕಾರಣಕ್ಕೆ ಅವರ ಹತ್ಯೆ ಮಾಡಲಾಗಿದೆ ಎಂದು ಈಗ ಬಿಷ್ಣೋಯ್ ಗ್ಯಾಂಗ್ ಬಹಿರಂಗಪಡಿಸಿದೆ. ಖಾನ್ ಜೊತೆಗೆ ಒಡನಾಟ ಇರುವವರನ್ನು ಯಾರೂ ಬಿಡಲ್ಲ ಎಂದು ಕೂಡ ಎಚ್ಚರಿಕೆ ನೀಡಿದೆ.

    ಬಿಷ್ಣೋಯ್ ಗ್ಯಾಂಗ್ ಹಿಟ್‌ಲಿಸ್ಟ್‌ನಲ್ಲಿ ಯಾರಿದ್ದಾರೆ?
    ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹಿಟ್‌ಲಿಸ್ಟ್‌ನಲ್ಲಿರುವ ಹೆಸರುಗಳನ್ನು ಬಹಿರಂಗಪಡಿಸಲಾಗಿದೆ. ಈ ಪಟ್ಟಿಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು, ಹಾಸ್ಯನಟರು, ರಾಜಕಾರಣಿಗಳು ಮತ್ತು ಇತರರು ಇದ್ದಾರೆ.

    ಸಲ್ಮಾನ್ ಖಾನ್
    ಬಿಷ್ಣೋಯ್ ಸಮುದಾಯವು ಪ್ರಾಣಿಯನ್ನು ಪವಿತ್ರ ಎಂದು ಪರಿಗಣಿಸಿದೆ. ಕೃಷ್ಣಮೃಗ ಬೇಟೆಯ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಸಲ್ಮಾನ್ ಖಾನ್ ಅವರು ಮೊದಲು ಬಿಷ್ಣೋಯ್ ಕೋಪಕ್ಕೆ ಗುರಿಯಾದರು. ಬಿಷ್ಣೋಯ್, ಖಾನ್ ಅವರನ್ನು ಮೇಲ್ವಿಚಾರಣೆ ಮಾಡಲು ತನ್ನ ಸಹಾಯಕ ಸಂಪತ್ ನೆಹ್ರಾನನ್ನು ಕಳುಹಿಸಿದ್ದ. ಆದರೆ ಆತನನ್ನು ಪೊಲೀಸರು ಬಂಧಿಸಿದರು. ಈ ನಡುವೆ ಬಾಲಿವುಡ್ ಸ್ಟರ್ ನಟನ ಹತ್ಯೆಗೆ ಹಲವು ವಿಫಲ ಯತ್ನಗಳು ನಡೆದಿವೆ.

    ಜೀಶನ್ ಸಿದ್ದಿಕಿ
    ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ ಮತ್ತು ಶಾಸಕ ಜೀಶಾನ್ ಕೂಡ ಬಿಷ್ಣೋಯ್ ಗ್ಯಾಂಗ್‌ನ ಟಾರ್ಗೆಟ್ ಲಿಸ್ಟ್‌ನಲ್ಲಿದ್ದಾರೆ. ಬಾಬಾ ಸಿದ್ದಿಕ್ಕಿ ಅವರನ್ನು ಹತ್ಯೆ ಮಾಡಿದ ಶೂಟರ್‌ ಫೋನ್‌ನಲ್ಲಿ ಸಿದ್ದಿಕಿ ಪುತ್ರನ ಫೋಟೊ ಪತ್ತೆಯಾಗಿದ್ದು, ಅವರಲ್ಲಿ ಆತಂಕ ಮೂಡಿಸಿದೆ.

    ಮುನಾವರ್ ಫಾರುಕಿ
    ಹಾಸ್ಯನಟ ಕೂಡ ಬಿಷ್ಣೋಯ್ ಅವರ ಹಿಟ್ ಲಿಸ್ಟ್‌ನಲ್ಲಿದ್ದಾರೆ. ದೆಹಲಿಯಲ್ಲಿ ನಡೆದ ಮದುವೆಯೊಂದರಲ್ಲಿ ಆತನ ವಿರುದ್ಧ ದಾಳಿ ನಡೆಸಲು ಯೋಜಿಸಲಾಗಿತ್ತು. ಆದರೆ ಗುಪ್ತಚರ ಸಂಸ್ಥೆಗಳು ಮಧ್ಯಪ್ರವೇಶಿಸಿ, ಹೆಚ್ಚಿನ ಭದ್ರತೆಯಲ್ಲಿ ಅವರನ್ನು ಮುಂಬೈಗೆ ಸ್ಥಳಾಂತರಿಸಿದವು. ಸಮಾರಂಭವೊಂದರಲ್ಲಿ ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡಿದ ಎಂಬ ಕಾರಣಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗಿದೆ.

    ಶಗನ್‌ಪ್ರೀತ್ ಸಿಂಗ್
    ದಿವಂಗತ ಗಾಯಕ ಸಿದು ಮೂಸೆವಾಲಾ ಅವರ ಮ್ಯಾನೇಜರ್ ಶಗನ್‌ಪ್ರೀತ್ ಕೂಡ ಬಿಷ್ಣೋಗ್ ಗ್ಯಾಂಗ್ ಟಾರ್ಗೆಟ್‌ನಲ್ಲಿದ್ದಾರೆ. ಇವರು ಆಗಸ್ಟ್ 2021 ರಲ್ಲಿ ಮೊಹಾಲಿಯಲ್ಲಿ ಕೊಲೆಯಾದ ಬಿಷ್ಣೋಯ್ ಅವರ ನಿಕಟ ಸಹವರ್ತಿ ವಿಕ್ಕಿ ಮಿದ್ದುಖೇರಾ ಅವರ ಹಂತಕರಿಗೆ ಆಶ್ರಯ ನೀಡಿದ್ದರು ಎನ್ನಲಾಗಿದೆ.

    ಕೌಶಲ್ ಚೌಧರಿ
    ಬಿಷ್ಣೋಯ್ ಗ್ಯಾಂಗ್‌ನ ಪ್ರತಿಸ್ಪರ್ಧಿ ಬಂಬಿಹಾ ಗ್ಯಾಂಗ್‌ನ ಸದಸ್ಯ ಈತ. ಮಿದ್ದುಖೇರಾನನ್ನು ಕೊಂದ ವ್ಯಕ್ತಿಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಆರೋಪ ಚೌಧರಿ ಮೇಲಿದೆ.

    ಅಮಿತ್ ಡಾಗರ್
    ಕೌಶಲ್ ಚೌಧರಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಡಾಗರ್, ಮಿದ್ದುಖೇರಾನ ಕೊಲೆಯಲ್ಲಿ ಭಾಗಿಯಾಗಿದ್ದ. ಈತ ಕೂಡ ಬಿಷ್ಣೋಯ್ ಗ್ಯಾಂಗ್‌ನ ಟಾರ್ಗೆಟ್‌ ಲಿಸ್ಟ್‌ನಲ್ಲಿದ್ದಾನೆ.

  • ಸಲ್ಮಾನ್ ಖಾನ್ ಹತ್ಯೆಗೆ ಮತ್ತೊಂದು ಸಂಚು – ಬಿಷ್ಣೋಯ್ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್

    ಸಲ್ಮಾನ್ ಖಾನ್ ಹತ್ಯೆಗೆ ಮತ್ತೊಂದು ಸಂಚು – ಬಿಷ್ಣೋಯ್ ಸೇರಿ 17 ಮಂದಿ ವಿರುದ್ಧ ಎಫ್‌ಐಆರ್

    ಮುಂಬೈ: ಲಾರೆನ್ಸ್ ಬಿಷ್ಣೋಯ್  (Lawrence Bishnoi) ತಂಡದ ನಾಲ್ವರು ಸದಸ್ಯರು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಹತ್ಯೆಗೆ ಸಂಚು ರೂಪಿಸಿದ್ದರು. ಅವರನ್ನು ಬಂಧಿಸಲಾಗಿದೆ ಎಂದು ನವಿ ಮುಂಬೈ ಪೊಲೀಸರು ಹೇಳಿದ್ದಾರೆ.

    ಬಂಧಿತ ಆರೋಪಿಗಳನ್ನು ಧನಂಜಯ್ ಅಲಿಯಾಸ್ ಅಜಯ್ ಕಶ್ಯಪ್, ಗೌರವ್ ಭಾಟಿಯಾ ಅಲಿಯಾಸ್ ನಹ್ವಿ, ವಾಸ್ಪಿ ಖಾನ್ ಅಲಿಯಾಸ್ ವಾಸಿಂ ಚಿಕ್ನಾ ಮತ್ತು ರಿಜ್ವಾನ್ ಖಾನ್ ಅಲಿಯಾಸ್ ಜಾವೇದ್ ಖಾನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಇಂಡಿಗೋ ವಿಮಾನಕ್ಕೆ ಮತ್ತೆ ಬಾಂಬ್ ಬೆದರಿಕೆ

    ಆರೋಪಿಗಳು ಪನ್ವೇಲ್‌ನಲ್ಲಿರುವ ಫಾರ್ಮ್ಹೌಸ್‌ನಲ್ಲಿ ಸಲ್ಮಾನ್ ಖಾನ್ ಅವರ ಕಾರಿನ ಮೇಲೆ ದಾಳಿ ನಡೆಸಲು ಯೋಜಿಸಿದ್ದರು. ಇದಕ್ಕಾಗಿ ಪಾಕಿಸ್ತಾನದ (Pakistan) ಪೂರೈಕೆದಾರರಿಂದ ಶಸ್ತಾçಸ್ತçಗಳನ್ನು ಸಂಗ್ರಹಿಸುವ ಸಂಚು ಕೂಡ ರೂಪಿಸಲಾಗಿತ್ತು. ವಿಚಾರಣೆ ವೇಳೆ ಆರೋಪಿ ಅಜಯ್ ಕಶ್ಯಪ್ ಪಾಕಿಸ್ತಾನದಲ್ಲಿ ಡೋಗಾ ಎಂಬ ವ್ಯಕ್ತಿಯೊಂದಿಗೆ M-16, AK-47 ಮತ್ತು AK-92 ಅನ್ನು ಖರೀದಿಸಲು ಸಂಪರ್ಕದಲ್ಲಿದ್ದರು ಎಂದು ಬಹಿರಂಗಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ

    ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್, ಅನ್ಮೋಲ್ ಬಿಷ್ಣೋಯ್, ಗೋಲ್ಡಿ ಬ್ರಾರ್, ಸಂಪತ್ ನೆಹ್ರಾ ಸೇರಿದಂತೆ 17 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇದಕ್ಕೂ ಮುನ್ನ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಮುಂದೆ ಏಪ್ರಿಲ್ 14 ರಂದು ಬೆಳಿಗ್ಗೆ 5 ಗಂಟೆಗೆ ಗುಂಡಿನ ದಾಳಿ ನಡೆದಿತ್ತು. ಎರಡು ಬೈಕ್‌ಗಳಲ್ಲಿ ಬಂದ ದಾಳಿಕೋರರು ಐದು ಸುತ್ತು ಗುಂಡು ಹಾರಿಸಿದ್ದರು. ಗುಂಡಿನ ದಾಳಿ ವೇಳೆ ಸಲ್ಮಾನ್ ಮನೆಯಲ್ಲಿದ್ದರು. ಘಟನೆಯ ನಂತರ ಸಲ್ಮಾನ್ ಮನೆಯ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಎರಡು ದಿನಗಳ ನಂತರ ಗುಂಡು ಹಾರಿಸಿದ ಆರೋಪಿಗಳಿಬ್ಬರೂ ಸಿಕ್ಕಿಬಿದ್ದರು. ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ನಿಂದ ಖಾನ್‌ಗೆ ಕೊಲೆ ಬೆದರಿಕೆಗಳು ಬಂದಿದ್ದವು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್ ಎಸ್‌ಐಟಿ ತನಿಖೆಗೆ – ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ತನಿಖಾ ತಂಡ

  • ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್

    ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್

    ನವದೆಹಲಿ: ಪೊಲೀಸರು ಹಾಗೂ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ (Lawrence bishnoi gang) ಸಹಚರನ ನಡುವೆ ಗುಂಡಿನ ಚಕಮುಕಿ ನಡೆದ ಘಟನೆ ದೆಹಲಿಯ (Delhi) ಕುತುಬ್ ಮಿನಾರ್ ಮೆಟ್ರೋ ನಿಲ್ದಾಣದ (Qutub Minar metro station) ಬಳಿ ನಡೆದಿದೆ.

    ಹರಿಯಾಣದ (Haryana) ಜಜ್ಜರ್‍ನ ನಿರಜ್ ಅಲಿಯಾಸ್ ಕತಿಯಾ (30) ಪೊಲೀಸರ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಪ್ರತಿಯಾಗಿ ಪೊಲೀಸರು ಆತ್ಮರಕ್ಷಣೆಗಾಗಿ (Self defence) ಎರಡು ಬಾರಿ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ:  ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

    ಆರೋಪಿಯ ಮೇಲೆ ಕೊಲೆ, ಅಪಹರಣ, ದರೋಡೆ ಸೇರಿದಂತೆ 25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿದ್ದು, ತಲೆಮರೆಸಿಕೊಂಡಿದ್ದ. ಭಾನುವಾರ ಮುಂಜಾನೆ 3 ಗಂಟೆಗೆ ಆರೋಪಿ ಮೆಟ್ರೋ ನಿಲ್ದಾಣದ ಬಳಿ ಬರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.

    ಬಂಧಿತನಿಂದ ಅರೆ ಸ್ವಯಂ ಚಾಲಿತ ಪಿಸ್ತೂಲ್ (Semi automatic pistol) ಹಾಗೂ ಎರಡು ಕಾಟ್ರಿಡ್ಜ್‌ಗಳನ್ನು (Cartridges) ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಡೆಲಿವರಿಯಾದ ತಕ್ಷಣ ಹೆಣ್ಣು ಶಿಶುವನ್ನು ಕೊಂದ 15ರ ಬಾಲಕಿ