Tag: Lawyers

  • ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಬಿಡುಗಡೆ- ವಕೀಲರ ಆಕ್ರೋಶ

    ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಬಿಡುಗಡೆ- ವಕೀಲರ ಆಕ್ರೋಶ

    ಹುಬ್ಬಳ್ಳಿ: ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾಗಿದೆ. ಹುಬ್ಬಳ್ಳಿಯ ಜೆಎಂಎಫ್‍ಸಿ-2 ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ.

    ಪೊಲೀಸರ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಯುವ ವಕೀಲರ ಸಂಘದ ಅಧ್ಯಕ್ಷ ಅಶೋಕ್ ಅಣವೇಕರ ಆರೋಪಿಸಿದ್ದಾರೆ.

    ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಜ್ ಶೀಟ್ ಸಲ್ಲಿಸದೇ ಇರುವುದರಿಂದ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 90 ದಿನದಲ್ಲಿ ಚಾರ್ಜ್ ಶೀಟ್ ದಾಖಲಿಸಬೇಕಾದ ಗ್ರಾಮೀಣ ಪೊಲೀಸರು 109 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿರುವುದರಿಂದ ಆರೋಪಿಗಳು ಜಾಮೀನಿನ ಮೇಲೆ ಹೊರ ಬರುವಂತಾಯಿತು ಎಂದು ದೂರಿದ್ದಾರೆ.

    ಈ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸುವುದರಿಂದ ಹಿಡಿದು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಪೊಲೀಸರು ವೈಫಲ್ಯ ಹಾಗೂ ನಿರ್ಲಕ್ಷ್ಯದಿಂದ ವರ್ತಿಸಿದ್ದು ಉದ್ದೇಶಪೂರ್ವಕವಾಗಿ ಒಂದು ಕಡೆ ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಯುತ್ತಿದೆ. ಗೃಹ ಸಚಿವರು ಕರ್ತವ್ಯ ಲೋಪ ಎಸಗಿದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಯುವ ವಕೀಲರ ಸಂಘ ಒತ್ತಾಯಿಸಿದೆ.

  • ಕೊರೊನಾ ಭೀತಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕಕ್ಷಿದಾರರಿಗೆ ವಿನಾಯಿತಿ

    ಕೊರೊನಾ ಭೀತಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕಕ್ಷಿದಾರರಿಗೆ ವಿನಾಯಿತಿ

    ಚಾಮರಾಜನಗರ: ಎಲ್ಲೆಡೆ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ಬಿಸಿ ನ್ಯಾಯಾಲಯ ಕಲಾಪಗಳಿಗೂ ತಟ್ಟಿದೆ. ಗಡಿ ಜಿಲ್ಲೆ ಚಾಮರಾಜನಗರದ ನ್ಯಾಯಾಲಯಗಳಲ್ಲಿ ಜನರು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ವಿಚಾರಣೆಗೆ ಕಕ್ಷಿದಾರರ ಹಾಜರಾತಿ ಕಡ್ಡಾಯವಲ್ಲ ಎಂದು ಕೋರ್ಟ್ ಸೂಚನೆ ನೀಡಿದೆ.

    ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ವಕೀಲರ ಸಂಘ, ತೀರಾ ಅವಶ್ಯಕತೆ ಇದ್ದಲ್ಲಿ ಮಾತ್ರ ಕಕ್ಷಿದಾರರು ಕೋರ್ಟಿಗೆ ಹಾಜರಾಗಲು ಅವಕಾಶ ನೀಡಲಾಗಿದ್ದು, ಮಾರ್ಚ್ 21ರವರೆಗೆ ಕಕ್ಷಿದಾರರು ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ವಿನಾಯ್ತಿ ನೀಡಲಾಗುತ್ತಿದೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಹಾಗೂ ನೆರೆಯ ಕೇರಳ ರಾಜ್ಯದ ಕಕ್ಷಿದಾರರು ಸಹ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೊರೊನಾ ಹರಡುವ ಸಾಧ್ಯತೆಗಳಿದೆ ಎಂದು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

    ಈಗಾಗಲೇ ರಾಜ್ಯಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ 11 ಮಂದಿಗೆ ತಗುಲಿದ್ದು, ಈಗಾಗಲೇ ಕಲಬುರಗಿಯಲ್ಲಿ ಓರ್ವ ವೃದ್ಧರನ್ನು ಬಲಿ ಪಡೆದಿದೆ. ಇತ್ತ ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಕೊರೊನಾ ರಣಕೇಕೆ ಹಾಕುತ್ತಿದ್ದು, 39 ಮಂದಿಗೆ ಸೋಂಕು ತಟ್ಟಿರುವುದು ದೃಢಪಟ್ಟಿದೆ. ಕೇರಳದಲ್ಲಿ 24 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಈವರೆಗೆ ವಿಶ್ವದಾದ್ಯಂತ ಬರೋಬ್ಬರಿ 7,171 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸುಮಾರು 1,82,605 ಮಂದಿಗೆ ಕೊರೊನಾ ತಗುಲಿದೆ ಎಂದು ವರದಿಯಾಗಿದೆ.

  • ತೀವ್ರ ವಿರೋಧ ನಡುವೆಯೂ ದೇಶದ್ರೋಹಿಗಳ ಜಾಮೀನು ಅರ್ಜಿ ಸಲ್ಲಿಕೆ

    ತೀವ್ರ ವಿರೋಧ ನಡುವೆಯೂ ದೇಶದ್ರೋಹಿಗಳ ಜಾಮೀನು ಅರ್ಜಿ ಸಲ್ಲಿಕೆ

    – ನ್ಯಾಯಾಲಯಕ್ಕೆ ವಕೀಲರನ್ನ ಕರೆತರಲು ಹರಸಾಹಸ ಪಟ್ಟ ಪೊಲೀಸ್ರು

    ಧಾರವಾಡ: ಹುಬ್ಬಳ್ಳಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪಾಕ್ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತೂ ಆರೋಪಿಗಳ ಪರ ಜಾಮೀನಿಗೆ ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

    ಬೆಂಗಳೂರು ಹೈಕೋರ್ಟ್ ಮಧ್ಯಸ್ಥಿಕೆಯ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆರೋಪಿಗಳ ಪರ ವಕಾಲತ್ತು ವಹಿಸಲು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಆಗಮಿಸಿದ್ದ ವಕೀಲರಿಗೆ ಭಾರಿ ಭದ್ರತೆ ನೀಡಲಾಗಿತ್ತು. ಕೋರ್ಟ್ ಆವರಣ ಹಾಗೂ ಸುತ್ತಮುತ್ತ ಐದು ನೂರು ಪೊಲೀಸರನ್ನು ನಿಯೋಜಿಸಲಾಗಿತ್ತು.

    ಬೆಳಿಗ್ಗೆಯಿಂದಲೇ ಭದ್ರತೆ ಇದ್ದರೂ ವಕೀಲರು ಬೆಳಗಾವಿಯಿಂದ ಮಧ್ಯಾಹ್ನ 2:25ಕ್ಕೆ ಬಂದರು. ಪೊಲೀಸರು ಕೋರ್ಟಿನ ಹಿಂಬಾಗಿಲಿನಿಂದ ಕರೆ ತಂದು ಹತ್ತೇ ನಿಮಿಷಗಳಲ್ಲಿ ಪ್ರಕ್ರಿಯೆ ಮುಗಿಸಿ ಬಳಿಕ ಮತ್ತೆ ಅದೇ ಬಾಗಿಲಿನಿಂದ ಕರೆದುಕೊಂಡು ಹೋದರು. ಈ ಮಧ್ಯೆ ಬೆಂಗಳೂರಿನ ವಕೀಲರು ಬಂದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಕೋರ್ಟ್ ಆವರಣದ ಹೊರಗೆ ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ಕೂಡಾ ನಡೆಯಿತು.

    ಕೋಟಿ9ನಲ್ಲಿ ಮಧ್ಯಾಹ್ನ 2 ರಿಂದ 2:45 ರವರೆಗೆ ಊಟದ ಸಮಯ. ಈ ವೇಳೆ ಯಾವುದೇ ಅರ್ಜಿ ಸ್ವೀಕರಿಸುವುದಿಲ್ಲ. ಆದರೆ ಈ ವೇಳೆ ಹೇಗೆ ಅರ್ಜಿಯನ್ನು ಸ್ವೀಕರಿಸಲಾಯಿತು ಎಂಬ ಪ್ರಶ್ನೆ ಮುನ್ನೆಲೆಗೆ ಬಂತು. ಸಣ್ಣ ಪ್ರಕ್ರಿಯೆಯೊಂದಕ್ಕೆ ಇಡೀ ಸರ್ಕಾರಿ ವ್ಯವಸ್ಥೆಯನ್ನು ದುರುಪಯೋಗಗೊಂಡಿದ್ದಲ್ಲದೇ ಇದೀಗ ಮತ್ತೆ ನಿಯಮ ಬಿಟ್ಟು ಅರ್ಜಿ ಸ್ವೀಕರಿಸಿದ್ದಕ್ಕೆ ಧಾರವಾಡದ ವಕೀಲರು ಅಸಮಾಧಾನ ವ್ಯಕ್ತಪಡಿಸಿದರು.

    ಫೆಬ್ರವರಿ 24 ರಂದು ಮೂವರು ವಕೀಲರು ಜಾಮೀನು ಅರ್ಜಿ ಸಲ್ಲಿಸಲು ಧಾರವಾಡದ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಆಗಮಿಸಿದಾಗ ಸ್ಥಳೀಯ ವಕೀಲರು ವಿರೋಧ ವ್ಯಕ್ತಪಡಿಸಿ ಸಾಕಷ್ಟು ಗಲಾಟೆ ನಡೆದಿತ್ತು. ಈ ಹಿನ್ನೆಲೆ ಬೆಂಗಳೂರಿನಿಂದ ಬಂದಿದ್ದ ವಕೀಲರು ಧಾರವಾಡ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸದೇ ವಾಪಸಾಗಿದ್ದರು. ಇದಾದ ಬಳಿಕ ಬೆಂಗಳೂರು ಹೈಕೋರ್ಟ್ ಮಧ್ಯಸ್ಥಿಕೆ ವಹಿಸಿ, ಆರೋಪಿಗಳ ಹಕ್ಕನ್ನು ರಕ್ಷಿಸುವಂತೆ ವಕೀಲರು ಹಾಗೂ ಪೊಲೀಸರಿಗೆ ಕೆಲವು ಸೂಚನೆ ನೀಡಿತ್ತು. ಈ ಹಿನ್ನೆಲೆ ಇವತ್ತು ಆರೋಪಿ ಪರ ಅರ್ಜಿ ಸಲ್ಲಿಸಲು ಬಂದ ವಕೀಲರಿಗೆ ಭಾರಿ ಭದ್ರತೆ ನೀಡಲಾಗಿತ್ತು.

  • ‘ಕಸಬ್‍ಗೆ ನ್ಯಾಯಸಮ್ಮತ ಅವಕಾಶ ನೀಡಿದ ದೇಶ ನಮ್ಮದು’ – ಹುಬ್ಬಳ್ಳಿ ಕೇಸ್ ಬೆಂಗ್ಳೂರಿಗೆ ವರ್ಗಾಯಿಸಿ

    ‘ಕಸಬ್‍ಗೆ ನ್ಯಾಯಸಮ್ಮತ ಅವಕಾಶ ನೀಡಿದ ದೇಶ ನಮ್ಮದು’ – ಹುಬ್ಬಳ್ಳಿ ಕೇಸ್ ಬೆಂಗ್ಳೂರಿಗೆ ವರ್ಗಾಯಿಸಿ

    ಬೆಂಗಳೂರು: ಕಸಬ್‍ಗೆ ನ್ಯಾಯಸಮ್ಮತ ಅವಕಾಶ ನೀಡಿದ ದೇಶ ನಮ್ಮದು, ಹಾಗಾಗಿ ಹುಬ್ಬಳ್ಳಿಯಲ್ಲಿ ವಕಾಲತ್ತು ವಹಿಸಲು ಭದ್ರತೆ ಕೊಡಿ ಇಲ್ಲ ಆ ಕೇಸ್ ಅನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವರ್ಗಾಯಿಸುತ್ತೇವೆ ಎಂದು ಹೈಕೋರ್ಟ್ ನ್ಯಾಯಾಧೀಶರು ಸರ್ಕಾರಕ್ಕೆ ಸೂಚಿಸಿದ್ದಾರೆ.

    ಕಾಶ್ಮೀರಿ ಯುವಕರು ಪಾಕ್ ಪರ ಘೋಷಣೆ ಕೂಗಿ ಜೈಲು ಪಾಲಾದ ಆರೋಪಿಗಳ ಪರ ವಕಾಲತ್ತು ವಹಿಸೋದಕ್ಕೆ ಹುಬ್ಬಳ್ಳಿ ಧಾರವಾಡ ವಕೀಲರು ನಿರಾಕರಣೆ ಮಾಡಿದ್ದರು. ಅದಕ್ಕಾಗಿ ಬೆಂಗಳೂರಿನಿಂದ ಆರೋಪಿಗಳ ಪರ ವಕಾಲತ್ತು ಹಾಕೋದಕ್ಕೆ ವಕೀಲರು ತೆರಳಿದ್ದಾಗ ಗಲಾಟೆ ನಡೆದು ಬೆಂಗಳೂರು ವಕೀಲರ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ವಕೀಲರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

    ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಆರೋಪಿಗಳ ಪರ ವಕಾಲತ್ತು ಹಾಕೋದಕ್ಕೆ ಅವಕಾಶ ಮಾಡಿಕೊಡಬೇಕು. ಮುಂಬೈನಲ್ಲಿ ನರಮೇಧ ಮಾಡಿದ ಕಸಬ್‍ಗೆ ನ್ಯಾಯ ಸಮ್ಮತವಾದ ಮಂಡಿಸಲು ಅವಕಾಶ ಮಾಡಿಕೊಟ್ಟ ದೇಶ ನಮ್ಮದು. ನಮ್ಮ ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದೆ. ಆ ಹಿನ್ನೆಲೆಯಲ್ಲಿ ಎಲ್ಲರಿಗೂ ಅವಕಾಶ ಸಿಗಬೇಕು ಎಂದು ಅಭಿಪ್ರಾಯಪಟ್ಟರು.

    ಮೊನ್ನೆ ಆದೇಶ ಮಾಡುವಾಗ ಭದ್ರತೆ ವಹಿಸಬೇಕು ಎಂದು ಹೇಳಿದ್ದೆವು. ಆದರೆ ಅದು ಆಗಿಲ್ಲ. ಹೀಗೆ ಮಾಡಿದರೆ ಪ್ರಕರಣ ಹುಬ್ಬಳ್ಳಿಯಲ್ಲಿ ಮುಂದುವರಿಸಲು ಸಾಧ್ಯವಾಗುವುದಿಲ್ಲ. ನಾವೇ ಈ ಪ್ರಕರಣವನ್ನು ಬೆಂಗಳೂರಿಗೆ ವರ್ಗಾವಣೆ ಮಾಡುತ್ತೇವೆ. ಸರ್ಕಾರ ಈ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತೆ ಅನ್ನೋದನ್ನು ನಾಳೆ ನ್ಯಾಯಾಲಯಕ್ಕೆ ತಿಳಿಸಿ ಎಂದು ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಿಗಿಗೆ ಮುಖ್ಯನ್ಯಾಯಮೂರ್ತಿಗಳು ಸೂಚಿಸಿದರು.

  • ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶನ ಕೇಸ್- ವಕಾಲತ್ತಿಗೆ ವಕೀಲರ ಸಹಿ ದುರ್ಬಳಕೆ ಆರೋಪ

    ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶನ ಕೇಸ್- ವಕಾಲತ್ತಿಗೆ ವಕೀಲರ ಸಹಿ ದುರ್ಬಳಕೆ ಆರೋಪ

    ಮೈಸೂರು: ಮಾನಸಗಂಗೋತ್ರಿ ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶನ ಪ್ರಕರಣದಲ್ಲಿ ಆರೋಪಿ ಪರ ವಕಾಲತ್ತಿನಿಂದ ಇಬ್ಬರು ಮೈಸೂರು ವಕೀಲರು ಹಿಂದೆ ಸರಿದಿದ್ದು, ವಕಾಲತ್ತು ಅರ್ಜಿ ದುರ್ಬಳಕೆ ಮಾಡಲಾಗಿದೆ ಎಂದು ಮೈಸೂರು ವಕೀಲರ ಸಂಘಕ್ಕೆ ದೂರು ನೀಡಿದ್ದಾರೆ.

    ವಕೀಲರಾದ ಶ್ರೀಕೃಷ್ಣ ಹಾಗೂ ನಾಗರಾಜು ಅವರು ದೂರು ನೀಡಿದ್ದಾರೆ. ನಿನ್ನೆ ಮೈಸೂರು ಜಿಲ್ಲಾ ನ್ಯಾಯಾಲಯದ ವಕೀಲರಿಂದ ವಕಾಲತ್ತು ಸಲ್ಲಿಕೆ ಆಗಿತ್ತು. ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಕಾಲತ್ತು ಸ್ವೀಕರಿಸಿದ್ದರು. ಆದರೆ, ವಕೀಲರಿಗೆ ವಕಾಲತ್ತಿನ ವಿಚಾರವೇ ತಿಳಿಸದೆ ಸಹಿ ಪಡೆಯಲಾಗಿದೆ ಎಂದು ಈ ಇಬ್ಬರು ವಕೀಲರು ಆರೋಪಿಸಿದ್ದಾರೆ.

    ‘ಫ್ರೀ ಕಾಶ್ಮೀರ’ ನಾಮಫಲಕ ಪ್ರದರ್ಶನ ಪ್ರಕರಣದ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಣಯ ಕೈಗೊಂಡಿದೆ. ಸಂಘದ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ. ಕೆಲವರು ನಮ್ಮ ಸಹಿ ಪಡೆದು ಅದನ್ನು ದುರುಪಯೋಗಪಡಿಸಿಕೊಂಡು ದುರ್ಬಳಕೆ ಮಾಡಿದ್ದಾರೆ. ಸಂಘದ ನಿರ್ಣಯಕ್ಕೆ ಬದ್ಧರಾಗಿ ವಕಾಲತ್ತಿನಿಂದ ಹಿಂದೆ ಸರಿಯುತ್ತೇವೆ ಎಂದು ಈ ಇಬ್ಬರು ವಕೀಲರು ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದಕುಮಾರ್ ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಜೊತೆ ವಕಾಲತ್ತು ವಾಪಸ್ಸು ಪಡೆಯುವ ಅರ್ಜಿಯನ್ನು ಲಗತ್ತಿಸಿದ್ದಾರೆ.

    ಮೈಸೂರು ಜಿಲ್ಲಾ ನ್ಯಾಯಾಲಯದ ಯುವ ವಕೀಲರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣದಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸಬೇಡಿ. ಈ ಹಿಂದೆ ಸಹ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಪರ ಜಿಲ್ಲಾ ನ್ಯಾಯಾಲಯದ ವಕೀಲರು ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಹೀಗಾಗಿ ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಗೆ ಮನವಿ ಸಲ್ಲಿಸಿದ್ದರು.

  • ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಮಫಲಕ ಪ್ರದರ್ಶಿದ ನಳಿನಿ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸದೇ ಇರಲು ಮೈಸೂರು ವಕೀಲರ ಸಂಘ ನಿರ್ಣಯಿಸಿದೆ.

    ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೊಲೀಸರು ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ವಕಾಲತ್ತು ವಹಿಸದಂತೆ ವಕೀಲರಿಗೆ ಸೂಚನೆ ನೀಡಲಾಗಿದೆ.

    ಮೈಸೂರು ಜಿಲ್ಲಾ ನ್ಯಾಯಾಲಯದ ಯುವ ವಕೀಲರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣದಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸಬೇಡಿ. ಈ ಹಿಂದೆ ಸಹ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಪರ ಜಿಲ್ಲಾ ನ್ಯಾಯಾಲಯದ ವಕೀಲರು ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಹೀಗಾಗಿ ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಗೆ ಮನವಿ ಸಲ್ಲಿಸಿದ್ದರು.

    ಮನವಿಗೆ ಸ್ಪಂದಿಸಿದ ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ, ಆರೋಪಿ ನಳಿನಿ ಪರ ವಕಾಲತ್ತು ವಹಿಸದಿರುವ ಕುರಿತು ನಿರ್ಣಯ ಕೈಗೊಂಡಿದೆ.

    ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಗೆ ಪೊಲೀಸರು ಇತ್ತೀಚೆಗೆ ಸತತ 7 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿತ್ತು. ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾಳೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಳು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದಿದ್ದಳು.

  • ಹೈಕೋರ್ಟ್ ಆವರಣದಲ್ಲಿ ಸಿಎಎ ಬೆಂಬಲಿಸಿ ಸಮರ್ಥನಾ ಸಭೆ

    ಹೈಕೋರ್ಟ್ ಆವರಣದಲ್ಲಿ ಸಿಎಎ ಬೆಂಬಲಿಸಿ ಸಮರ್ಥನಾ ಸಭೆ

    ಬೆಂಗಳೂರು: ಇಂದು ಮಧ್ಯಾಹ್ನ ಬೆಂಗಳೂರು ಉಚ್ಚ ನ್ಯಾಯಾಲಯದ ದ್ವಾರದ ಬಳಿ ಹಿಂದೂ ವಿದಿಜ್ಞ ಪರಿಷತ್ ಮತ್ತು ಅದಿವಕ್ತಾ ಪರಿಷತ್ ಜಂಟಿಯಾಗಿ ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಸಮರ್ಥನಾ ಸಭೆಯನ್ನು ಆಯೋಜನೆ ಮಾಡಲಾಗಿತ್ತು.

    ಈ ಸಭೆಯಲ್ಲಿ ಹಿಂದೂ ವಿದಿಜ್ಞ ಪರಿಷತ್ ವಕೀಲರಾದ ಜಿ. ಎಮ್ ನಟರಾಜ, ಪ್ರಸನ್ನ ಡಿ.ಪಿ, ರುದ್ರಪ್ಪ, ಆದಿತ್ಯ ಮತ್ತು ಅಧಿವಕ್ತಾ ಪರಿಷತ್‍ನ ವಿವೇಕ ರೆಡ್ಡಿ ಸೇರಿ ನೂರಾರು ವಕೀಲರು ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಘೋಷಣೆಯನ್ನು ಕೂಗಿ ಬೆಂಬಲ ಸೂಚಿಸಿದರು.

    ಈ ಬಗ್ಗೆ ವಿವೇಕ ರೆಡ್ಡಿಯವರು ಮಾತನಾಡಿ, ಇದು ಕೇಂದ್ರ ಸರ್ಕಾರದ ಮಹತ್ವದ ಕಾಯ್ದೆ ಇದಾಗಿದ್ದು, ಇದು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಪಘಾನಿಸ್ಥಾನದಲ್ಲಿ ಇರುವ ದಲಿತರಿಗೆ, ನೊಂದ ಮಹಿಳೆಯರಿಗೆ ಮಾನವೀಯತೆಯ ಆಧಾರದ ಮೇಲೆ ಪೌರತ್ವ ನೀಡುವ ಕಾಯ್ದೆಯಾಗಿದೆ. ಪ್ರತಿಯೊಬ್ಬರು ಇದನ್ನು ಗೌರವಿಸಬೇಕೇ ವಿನಃ ಇದನ್ನು ವಿರೋಧ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸಿದರು.

  • ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಉಳಿಸಿ ಬೆಳೆಸುತ್ತಿರುವವರಿಗೆ ಪ್ರಶಸ್ತಿ ಪ್ರದಾನ

    ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಉಳಿಸಿ ಬೆಳೆಸುತ್ತಿರುವವರಿಗೆ ಪ್ರಶಸ್ತಿ ಪ್ರದಾನ

    ಬೆಂಗಳೂರು: ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳೆಯಬೇಕು ಎನ್ನುವುದು ಸರ್ಕಾರದ ನಿಲುವು. ಇದಕ್ಕಾಗಿ ಕಾಲಕಾಲಕ್ಕೆ ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಕೆಗೆ ಉತ್ತೇಜನ ಕೊಡುವಂಥ ಕೆಲಸ ಆಗಬೇಕಿದೆ. ಈ ಕೆಲಸವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ 2016-17 ನೇ ಸಾಲಿನಿಂದ ಮಾಡಿಕೊಂಡು ಬರುತ್ತಿದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರವು ಕನ್ನಡದಲ್ಲೇ ತೀರ್ಪು ಕೊಡುವ ನ್ಯಾಯಾಧೀಶರು, ಕನ್ನಡದಲ್ಲಿ ವಾದ ಮಂಡಿಸುವ ಅಭಿಯೋಜಕರು ಮತ್ತು ವಕೀಲರನ್ನು ಗುರುತಿಸಿ “ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ” ನೀಡಿ ಸನ್ಮಾನಿಸುವ ಪರಿಪಾಠವನ್ನು ಯಶಸ್ವಿಯಾಗಿ ಬೆಳೆಸಿಕೊಂಡು ಬರುತ್ತಿದೆ.

    ಇದೀಗ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2017-18 ಮತ್ತು 2018-19 ನೇ ಸಾಲಿನ “ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ” ಪ್ರದಾನ ಮಾಡಲಾಗಿದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಕೆ ಮಾಡಿದ 102 ಗಣ್ಯರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು.

    ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ತೀರ್ಪು ನೀಡಿದ 72 ಜನ ನ್ಯಾಯಾಧೀಶರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೊತೆಗೆ ಕನ್ನಡದಲ್ಲಿ ವಾದ ಮಂಡನೆ ಮಾಡಿದ 10 ಸರ್ಕಾರಿ ಅಭಿಯೋಜಕರು ಹಾಗೂ 20 ಜನ ವಕೀಲರಿಗೂ “ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಪ್ರಶಸ್ತಿ ಪುರಸ್ಕೃತರಿಗೆ ಶಾಲು ಹೊದಿಸಿ, ಪ್ರಶಸ್ತಿ ಫಲಕ, ಗೌರವಧನ ಕೊಟ್ಟು ಪುರಸ್ಕರಿಸಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಅಲ್ಲದೇ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸಿ ಟಿ ರವಿ, ಹೈಕೋರ್ಟ್ ನ್ಯಾಯಮೂರ್ತಿ ಫಣೀಂದ್ರ ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಉಪಸ್ಥಿತರಿದ್ದರು.

  • ನ್ಯಾಯಾಧೀಶ ಪರೀಕ್ಷಾರ್ಥಿಗಳಿಗೆ ನ್ಯಾಯಾಧೀಶರ ಉಚಿತ ತರಬೇತಿ

    ನ್ಯಾಯಾಧೀಶ ಪರೀಕ್ಷಾರ್ಥಿಗಳಿಗೆ ನ್ಯಾಯಾಧೀಶರ ಉಚಿತ ತರಬೇತಿ

    ರಾಮನಗರ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ ಜಿಲ್ಲಾ ಒಂದನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರುಳ ಸಿದ್ದರಾಮರವರು ಉಚಿತವಾಗಿ ನ್ಯಾಯಾಧೀಶ ಹುದ್ದೆಯ ಆಕಾಂಕ್ಷಿ ವಕೀಲರಿಗೆ ಭಾನುವಾರ ನ್ಯಾಯಾಲಯದ ಆವರಣದಲ್ಲಿ ವಿಶೇಷ ತರಬೇತಿಯನ್ನು ನಡೆಸುವ ಮೂಲಕ ಭೋಧನೆ ನೀಡಿದ್ರು.

    ಕಳೆದ ಎರಡು ವಾರಗಳಿಂದ ಪ್ರತಿ ಭಾನುವಾರ ಜಿಲ್ಲೆಯ ಆಸಕ್ತ ವಕೀಲರಿಗೆ ಉಚಿತವಾಗಿ ತರಬೇತಿ ನೀಡುತ್ತಿದ್ದಾರೆ. ಭಾನುವಾರ ಬೆಳಗ್ಗೆ 10ಕ್ಕೆ ಆರಂಭವಾದ ತರಗತಿಯೂ, ಸಂಜೆ 5ರವರೆಗೂ ನಡೆಯಿತು. ನ್ಯಾಯಾಧೀಶ ಮರುಳ ಸಿದ್ದರಾಮರವರ ಭೋಧನ ತರಗತಿಗೆ ರಾಮನಗರ ಜಿಲ್ಲೆಯ ವಕೀಲರಲ್ಲದೇ ತುಮಕೂರು, ಮೈಸೂರು, ಹಾಸನ ಜಿಲ್ಲೆಯ 40ಕ್ಕೂ ಹೆಚ್ಚು ವಕೀಲರು ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

    ಭಾನುವಾರ ನಡೆದ ತರಗತಿಯಲ್ಲಿ ದಿವಾಣಿ ಪ್ರಕ್ರಿಯಾ ಸಂಹಿತೆ(ಸಿಪಿಸಿ) ಕುರಿತು ನ್ಯಾಯಾಧೀಶರು ವಕೀಲರಿಗೆ ಮನದಟ್ಟಾಗುವಂತೆ ಬೋಧನೆ ಮಾಡಿದರು. ಸಿಪಿಸಿ ಕಾಯ್ದೆ ಯಾವ ಕೇಸ್‍ಗಳಿಗೆಲ್ಲ ಅನ್ವಯವಾಗಲಿದೆ. ಅದರಿಂದ ಯಾವ ರೀತಿಯ ಕೇಸ್‍ಗಳಿಗೆ ಪರಿಹಾರ ನೀಡಬಹುದು. ಅಲ್ಲದೇ ಕೇಸ್ ಪರಿಗಣಿಸುವ ಸಂದರ್ಭದಲ್ಲಿ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನ್ಯಾಯಾಧೀಶರು ಭೋಧನೆ ಮಾಡಿದರು. ಅದರಲ್ಲೂ ಪರೀಕ್ಷಾರ್ಥಿಗಳಿಗೆ ಬಹುಬೇಗನೆ ಅರ್ಥವಾಗಲೆಂದು ದಿವಾಣಿ ಪ್ರಕ್ರಿಯಾ ಸಂಹಿತೆಯ ಕುರಿತು ಸರಳವಾಗಿ ಅರ್ಥವಾಗುವಂತೆ ವಿವರಿಸಿದರು.

    ನ್ಯಾಯಾಧೀಶರ ಈ ಉಚಿತ ತರಬೇತಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ವಕೀಲರಾದ ಎಸ್.ವೀರಭದ್ರಯ್ಯ, ಜಿಲ್ಲೆಗೆ ನ್ಯಾಯಾಧೀಶರಾಗಿ ಆಗಮಿಸಿರುವ ಮರುಳ ಸಿದ್ದರಾಮ ಅವರು ಯುವ ಹಾಗೂ ನ್ಯಾಯಾಧೀಶರಾಗಬೇಕೆಂದು ಕನಸು ಕಾಣುತ್ತಿರುವ ವಕೀಲರಿಗೆ ಸ್ಫೂರ್ತಿ ತುಂಬುತ್ತಿದ್ದಾರೆ. ತಮ್ಮ ಭಾನುವಾರದ ಬಿಡುವಿನ ವೇಳೆಯಲ್ಲಿ ವಿಶೇಷ ತರಗತಿ ಆಯೋಜನೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

    ಕಳೆದ ಭಾನುವಾರವೂ ನ್ಯಾಯಾಲಯದ ಆವರಣದಲ್ಲಿ ವಿಶೇಷ ತರಗತಿ ಹಮ್ಮಿಕೊಳ್ಳಲಾಗಿತ್ತು. ಅದು ಈ ವಾರವೂ ಸಹ ಮುಂದುವರಿದಿದೆ. ನ್ಯಾಯಾಧೀಶರ ಈ ನಿಸ್ವಾರ್ಥ ಹಾಗೂ ಯುವ ಸಮುದಾಯಕ್ಕೆ ಅನುಕೂಲವಾಗಲೆಂದು ನಡೆಸುತ್ತಿರುವ ಉಚಿತ ತರಬೇತಿಯ ಬಗ್ಗೆ ಇದೀಗ ರಾಜ್ಯದ ಹಲವೆಡೆಗಳಿಂದಲೂ ಸಹ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.

  • ವಿಧಾನಸೌಧದ ಮುಂದೆ NRC ಗೆಜೆಟ್ ಕಾಪಿ ಸುಟ್ಟುಹಾಕಿದ ವಕೀಲರು

    ವಿಧಾನಸೌಧದ ಮುಂದೆ NRC ಗೆಜೆಟ್ ಕಾಪಿ ಸುಟ್ಟುಹಾಕಿದ ವಕೀಲರು

    ಬೆಂಗಳೂರು: ಎನ್‍.ಆರ್.ಸಿ ಕಾಯ್ದೆ ವಿರೋಧಿಸಿ ವಕೀಲರು ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಯ ಗೆಜೆಟ್ ಪ್ರತಿಯನ್ನು ಸುಟ್ಟು ಹಾಕಿದ ವಕೀಲರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

    ವಿಧಾನಸೌಧ ಸುತ್ತ ಮುತ್ತ 144 ಸೆಕ್ಷನ್ ಜಾರಿಯಲ್ಲಿದೆ. ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು ಹೇಳಿದ್ದರು ಕೂಡ ಕ್ಷಣಾರ್ಧದಲ್ಲಿ ಗೆಜೆಟ್ ಕಾಪಿ ಸುಟ್ಟು ಹಾಕಿದರು. ಪೊಲೀಸರು ಪ್ರತಿಭಟನಾ ನಿರತ ವಕೀಲರನ್ನು ಬಲವಂತವಾಗಿ ಅಲ್ಲಿಂದ ಸಾಗಹಾಕಿದರು. ಅಲ್ಪಸಂಖ್ಯಾತರ ವಿರೋಧಿಯಾದ ಈ ಕಾಯ್ದೆ ವಿರುದ್ಧ ಸಾಂಕೇತಿವಾಗಿ ಗೆಜೆಟ್ ಪ್ರತಿ ಸುಟ್ಟು ಪ್ರತಿಭಟನೆ ಮಾಡಿದ್ದೇವೆ ಎಂದು ವಕೀಲರು ಹೇಳಿದರು.

    ಈ ಕಾಯ್ದೆ ಜಾರಿಗೆ ತರುವ ಮೂಲಕ ಅಂಬೇಡ್ಕರ್ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. 144 ಸೆಕ್ಷನ್ ಜಾರಿಯಲ್ಲಿದೆ ಎಂದು ಸುಮ್ಮನಿರೋಕೆ ಆಗೊಲ್ಲ. ಅನ್ಯಾಯವನ್ನು ಸಹಿಸಿಕೊಂಡು ಇರೋದು ದೇಶದ್ರೋಹದ ಕೆಲಸವಾಗುತ್ತೆ ಎಂದು ಗಾಂಧಿಜೀಯೇ ಹೇಳಿದ್ದಾರೆ. ನಾನು ದೇಶದ್ರೋಹಿಯಾಗಲಾರೆ ಹಾಗಾಗಿ ಅನ್ಯಾಯವನ್ನ ಪ್ರತಿಭಟಿಸಿದ್ದೇನೆಂದು ಹಿರಿಯ ವಕೀಲ ಎಸ್ ಬಾಲನ್ ತಿಳಿಸಿದ್ದಾರೆ.