Tag: leak

  • ‘ಕಲ್ಕಿ’ ಸಿನಿಮಾ ಫೋಟೋ ಲೀಕ್: ಗಂಭೀರ ಪ್ರಕರಣ ಎಂದ ನಿರ್ಮಾಪಕರು

    ‘ಕಲ್ಕಿ’ ಸಿನಿಮಾ ಫೋಟೋ ಲೀಕ್: ಗಂಭೀರ ಪ್ರಕರಣ ಎಂದ ನಿರ್ಮಾಪಕರು

    ತ್ತೀಚೆಗೆ ಪ್ರಭಾಸ್ ನಟನೆಯ ಕಲ್ಕಿ (Kalki) ಸಿನಿಮಾದ ಫೋಟೋವೊಂದು ಲೀಕ್ ಆಗಿತ್ತು. ಸಿನಿಮಾದ ಪ್ರಮುಖ ಗೆಟಪ್ ಒಳಗೊಂಡಿದ್ದ ಆ ಫೋಟೋವನ್ನು ಯಾರು ಲೀಕ್ ಮಾಡಿದ್ದಾರೆ ಎಂದು ನಿರ್ಮಾಣ ಸಂಸ್ಥೆ ತಲೆಕೆಡಿಸಿಕೊಂಡಿತ್ತು. ಸಿನಿಮಾ ರಿಲೀಸ್ ಗೂ ಮುನ್ನ ಹೀಗೆ ಪಾತ್ರಗಳ ಬಗ್ಗೆ ರಿವಿಲ್ ಮಾಡುತ್ತಿರುವುದು ಕೋಪ ತರಿಸಿತ್ತು. ಇದೀಗ ನಿರ್ಮಾಪಕರು ಈ ಕುರಿತು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ.

    ಕಲ್ಕಿ ಸಿನಿಮಾದ ವಿಎಫ್ಎಕ್ಷ್  ಮಾಡುತ್ತಿರುವ ಸಂಸ್ಥೆಯೇ ಫೋಟೋವನ್ನು ಲೀಕ್ ಮಾಡಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಸ್ಥೆಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಿರ್ಮಾಪಕರು ಪೊಲೀಸ್ ಮೊರೆ ಹೋಗಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

    ಭಾರೀ ಬಜೆಟ್ ನಲ್ಲಿ ರೆಡಿ ಆಗಿರುವ ಕಲ್ಕಿ ಚಿತ್ರಕ್ಕೆ ಈ ಹಿಂದೆ ಪ್ರಾಜೆಕ್ಟ್ ಕೆ (Project K) ಹೆಸರಿನಿಂದ ಕರೆಯಲಾಗುತ್ತಿತ್ತು. ಸಿನಿಮಾದ ಗ್ಲಿಂಪ್ಸ್  (Glimpse) ರಿಲೀಸ್ ದಿನ ಅಸಲಿ ಹೆಸರನ್ನು ಅನೌನ್ಸ್ ಮಾಡಲಾಯಿತು. ಈ ಗ್ಲಿಂಪ್ಸ್ ನಲ್ಲಿ ಸಾಕಷ್ಟು ಸಂಗತಿಗಳನ್ನು ನಿರ್ದೇಶಕರು ಹೇಳಿದ್ದರು. ಇದನ್ನೂ ಓದಿ:‘ಕುದ್ರು’ ಸಿನಿಮಾದಲ್ಲಿ ಕ್ಲಾಸ್ ಬಂಕ್ ಹಾಡು

    ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್ (Kamal Haasan),  ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ (First Look) ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

     

    `ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ (Deepika Padukone) `ಪ್ರಾಜೆಕ್ಟ್ ಕೆ’ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. `ಪಠಾಣ್’ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಅವತಾರ್ 2′ ಚಿತ್ರಕ್ಕೆ ಸಂಕಷ್ಟ: ಸಿನಿಮಾ ಲೀಕ್

    `ಅವತಾರ್ 2′ ಚಿತ್ರಕ್ಕೆ ಸಂಕಷ್ಟ: ಸಿನಿಮಾ ಲೀಕ್

    ವಿಶ್ವದ ಎಲ್ಲಾ ಕಡೆ `ಅವತಾರ್ 2′ (Avatara 2) ಸಿನಿಮಾ ಅಬ್ಬರ ಜೋರಾಗಿದೆ. ಹೀಗಿರುವಾಗ ರಿಲೀಸ್ ಆಗುವ ಮೊದಲೇ `ಅವತಾರ್ 2′ ಚಿತ್ರ ಪೈರಸಿ ಆಗಿದ್ದು, ಇಂಟರ್‌ನೆಟ್‌ನಲ್ಲಿ ಸಿನಿಮಾ ಸದ್ದು ಮಾಡ್ತಿದೆ.

     

    View this post on Instagram

     

    A post shared by Avatar (@avatar)

    ಕನ್ನಡ ಚಿತ್ರರಂಗದಿಂದ (Kannada Film Industry) ಹಿಡಿದು ಹಾಲಿವುಡ್‌ವರೆಗೂ (Hollywood) ಸಿನಿಮಾಗಳಿಗೆ ಪೈರೆಸಿ ಕಾಟವಿದೆ. ಇದೀಗ `ಅವತಾರ್ 2′ ಚಿತ್ರವನ್ನು ಟೆಲಿಗ್ರಾಂ ಸೇರಿದಂತೆ ಹಲವು ಕಡೆ ಕಿಡಿಗೇಡಿಗಳು ಸಿನಿಮಾ ಅಪ್‌ಲೋಡ್ ಮಾಡಿದ್ದಾರೆ. ಇನ್ನೂ ಡಿ.6ರಂದು ಲಂಡನ್‌ನಲ್ಲಿ (London) ಈ ಮೊದಲೇ ರಿಲೀಸ್ ಆಗಿತ್ತು. ಕಳೆದ ಒಂದು ವಾರದಿಂದ ವಿದೇಶದಲ್ಲಿ ವಿಶೇಷ ಪ್ರದರ್ಶನ ಕೂಡ ಇತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಸಿನಿಮಾ ಶೂಟ್ ಮಾಡಿ, ಇಂಟರ್‌ನೆಟ್‌ನಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ನಾರಾ ಲೋಕೇಶ್ ಭೇಟಿಯಾದ ನಟ ಯಶ್

     

    View this post on Instagram

     

    A post shared by Avatar (@avatar)

    ಇನ್ನೂ ಭಾರತದಲ್ಲಿ ಇಂದು ಸಿನಿಮಾ ತೆರೆಕಂಡಿದ್ದು, ಹಾಲಿವುಡ್‌ನ `ಅವತಾರ್ 2′ ನೋಡಲು ಕಾತರದಿಂದ ಕಾಯುತ್ತಿದ್ದರು. ಈ ಬೆನ್ನಲ್ಲೇ ಸಿನಿಮಾ ಪೈರಸಿ ಆಗಿರೋದು ಚಿತ್ರತಂಡಕ್ಕೆ ಮತ್ತು ವಿತರಕರಿಗೆ ದೊಡ್ಡ ತಲೆನೋವಾಗಿದೆ. ಭಾರತದಲ್ಲಿ ಇಂಗ್ಲೀಷ್ ಸೇರಿದಂತೆ ಆರು ಭಾಷೆಗಳಲ್ಲಿ `ಅವತಾರ್ 2′ ಚಿತ್ರ ತೆರೆಗೆ ಅಪ್ಪಳಿಸಿದೆ.

     

    View this post on Instagram

     

    A post shared by Avatar (@avatar)

    ಜೇಮ್ಸ್ ಕ್ಯಾಮರೂನ್ ನಿರ್ದೇಶನದ ಅವತಾರ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈಗ ಪೈರಸಿ ಕಾಟದ ಮಧ್ಯೆ ಅವತಾರ್ 2 ಅದೆಷ್ಟರ ಮಟ್ಟಿಗೆ ಕಲೆಕ್ಷನ್ ಮಾಡುತ್ತದೆ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಐಟಿ ಸೆಲ್‍ನಿಂದ ಫೋನ್ ನಂಬರ್ ಲೀಕ್, ಅತ್ಯಾಚಾರ, ಕೊಲೆ ಬೆದರಿಕೆ ಕರೆಗಳು ಬರುತ್ತಿವೆ- ಸಿದ್ಧಾರ್ಥ್ ಆಕ್ರೋಶ

    ಬಿಜೆಪಿ ಐಟಿ ಸೆಲ್‍ನಿಂದ ಫೋನ್ ನಂಬರ್ ಲೀಕ್, ಅತ್ಯಾಚಾರ, ಕೊಲೆ ಬೆದರಿಕೆ ಕರೆಗಳು ಬರುತ್ತಿವೆ- ಸಿದ್ಧಾರ್ಥ್ ಆಕ್ರೋಶ

    ಚೆನ್ನೈ: ನನ್ನ ಫೋನ್ ನಂಬರ್ ನ್ನು ತಮಿಳುನಾಡು ಬಿಜೆಪಿ ಹಾಗೂ ತಮಿಳುನಾಡು ಬಿಜೆಪಿ ಐಟಿ ಸೆಲ್‍ನವರು ಲೀಕ್ ಮಾಡಿದ್ದು, ನೂರಾರು ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಮಿಳು ನಟ ಸಿದ್ಧಾರ್ಥ್ ಆರೋಪಿಸಿದ್ದಾರೆ. ಈ ಬಗ್ಗೆ ಇದೀಗ ಟ್ವಿಟ್ಟರ್ ನಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ.

    ಈ ಕುರಿತು ಟ್ವೀಟ್ ಮಾಡಿರುವ ಸಿದ್ಧಾರ್ಥ್, ನನ್ನ ಫೋನ್ ನಂಬರ್ ನ್ನು ತಮಿಳುನಾಡು ಬಿಜೆಪಿ ಹಾಗೂ ತಮಿಳುನಾಡು ಬಿಜೆಪಿ ಐಟಿ ಸೆಲ್‍ನವರು ಲೀಕ್ ಮಾಡಿದ್ದಾರೆ. ಸುಮಾರು 500ಕ್ಕೂ ಹೆಚ್ಚು ನಿಂದನೆ, ಅತ್ಯಾಚಾರ ಹಾಗೂ ಕೊಲೆ ಬೆದರಿಕೆಯ ಕರೆಗಳು ಬರುತ್ತಿವೆ. ಕಳೆದ 24 ಗಂಟೆಗಳಿಂದ ನನಗೆ ಹಾಗೂ ನನ್ನ ಕುಟುಂಬದವರಿಗೆ ಬೆರಿಕೆ ಕರೆಗಳು ಬರುತ್ತಿವೆ. ಬಿಜೆಪಿಯ ಲಿಂಕ್ ಹಾಗೂ ಡಿಪಿಗಳೊಂದಿಗೆ ಎಲ್ಲ ನಂಬರ್‍ಗಳನ್ನು ದಾಖಲಿಸಿದ್ದೇನೆ ಹಾಗೂ ಪೊಲೀಸರಿಗೆ ಹಸ್ತಾಂತರಿಸುತ್ತಿದ್ದೇನೆ. ನಾನು ಸುಮ್ಮನಿರುವುದಿಲ್ಲ, ಪ್ರಯತ್ನಿಸುತ್ತಲೇ ಇರುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಟ್ವೀಟ್‍ನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ತಮಿಳುನಾಡು ಬಿಜೆಪಿಯ ಹಲವು ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಅವುಗಳಲ್ಲಿ ಇದೂ ಒಂದು. ಬಿಜೆಪಿ ಸದಸಯರು ನಿನ್ನೆ ನನ್ನ ಫೋನ್ ನಂಬರ್ ಲೀಕ್ ಮಾಡಿದ್ದಾರೆ. ನನ್ನ ಮೇಲೆ ದಾಳಿ ನಡೆಸಿ, ಕಿರುಕುಳ ನೀಡುವಂತೆ ಜನರಿಗೆ ಹೇಳಿದ್ದಾರೆ.

    ಈ ವ್ಯಕ್ತಿ ಇನ್ನೆಂದೂ ಇನ್ನೆಂದೂ ಬಾಯ್ಬಿಡಬಾರದು ಬರೆದಿದ್ದಾರೆ. ಕೋವಿಡ್‍ನಿಂದ ನಾವು ಬದುಕಬಹುದು, ಇಂತಹ ಜನರಿಂದ ನಾವು ಉಳಿಯಲು ಸಾಧ್ಯವೇ ಎಂದು ಸಿದ್ಧಾರ್ಥ್ ಟ್ವೀಟ್‍ನಲ್ಲಿ ಪ್ರಶ್ನಿಸಿದ್ದಾರೆ.

    ಈ ಕುರಿತು ಇದೀಗ ಟ್ವಿಟ್ಟರ್ ನಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಟ್ರೆಂಡಿಂಗ್‍ನಲ್ಲಿದೆ. ಕೋವಿಡ್ ನಿರ್ವಹಣೆ ವಿಚಾರವಾಗಿ ಸಿದ್ಧಾರ್ಥ್ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

  • ಪ್ರಭಾಸ್- ಶ್ರದ್ಧಾ ಕಪೂರ್‌ರ ರೊಮ್ಯಾಂಟಿಕ್ ಫೋಟೋ ಲೀಕ್

    ಪ್ರಭಾಸ್- ಶ್ರದ್ಧಾ ಕಪೂರ್‌ರ ರೊಮ್ಯಾಂಟಿಕ್ ಫೋಟೋ ಲೀಕ್

    ಹೈದಾರಾಬಾದ್: ಟಾಲಿವುಡ್ ನಟ ಪ್ರಭಾಸ್ ಹಾಗೂ ಬಾಲಿವುಡ್ ಬೆಡಗಿ ಶ್ರದ್ಧಾ ಕಪೂರ್ ನಟಿಸುತ್ತಿರುವ ‘ಸಾಹೋ’ ಚಿತ್ರದ ರೊಮ್ಯಾಂಟಿಕ್ ಫೋಟೋ ಲೀಕ್ ಆಗಿದೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಲೀಕ್ ಆಗಿರುವ ಫೋಟೋದಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಪ್ರೀತಿಯಿಂದ ಒಬ್ಬರನೊಬ್ಬರು ರೊಮ್ಯಾಂಟಿಕ್ ಆಗಿ ನೋಡುತ್ತಿದ್ದಾರೆ. ಈ ಫೋಟೋದಲ್ಲಿ ಶ್ರದ್ಧಾ ಗುಲಾಬಿ ಬಣ್ಣದ ಉಡುಪು ಧರಿಸಿದರೆ, ಪ್ರಭಾಸ್ ಬಿಳಿ ಬಣ್ಣದ ಟಿ-ಶರ್ಟ್ ಧರಿಸಿದ್ದಾರೆ.

    ಸಾಹೋ ಆ್ಯಕ್ಷನ್ ಚಿತ್ರವಾಗಿದ್ದು, ನಿರ್ದೇಶಕ ಸುಜೀತ್ ನಿರ್ದೇಶನ ಮಾಡುತ್ತಿದ್ದಾರೆ. ವಂಶಿ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಈ ಚಿತ್ರದಲ್ಲಿ ನೀಲ್ ನಿತಿನ್ ಮುಖೇಶ್, ಮಂದಿರಾ ಬೇಡಿ, ಅರುಣ್ ವಿಜಯ್ ಹಾಗೂ ಜಾಕಿ ಶ್ರಾಫ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

    ಹೈದರಾಬಾದ್, ಮುಂಬೈ, ಅಬುಧಾಬಿ, ದುಬೈ, ರೋಮಾನಿಯಾ ಹಾಗೂ ಯೂರೋಪ್‍ನ ಕೆಲವು ಭಾಗಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಇದೇ ವರ್ಷ ಅಗಸ್ಟ್ 15 ಸ್ವತಂತ್ರ್ಯ ದಿನಾಚರಣೆಯಂದು ಸಾಹೋ ಚಿತ್ರ ಬಿಡುಗಡೆ ಆಗಲಿದೆ.

  • ಸಿನಿಮಾದಲ್ಲಿ ಬಿಕಿನಿ ಧರಿಸಿದ್ದೇನೆ, ಲೀಕ್ ಮಾಡುವ ಅವಶ್ಯಕತೆ ಇಲ್ಲ: ಹನ್ಸಿಕಾ

    ಸಿನಿಮಾದಲ್ಲಿ ಬಿಕಿನಿ ಧರಿಸಿದ್ದೇನೆ, ಲೀಕ್ ಮಾಡುವ ಅವಶ್ಯಕತೆ ಇಲ್ಲ: ಹನ್ಸಿಕಾ

    ಹೈದರಾಬಾದ್: ಟಾಲಿವುಡ್ ನಟಿ ಹನ್ಸಿಕಾ ಮೋಟ್ವಾನಿ ಬಿಕಿನಿಯಲ್ಲಿರುವ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಬ್ಲಿಸಿಟಿಗಾಗಿ ಹನ್ಸಿಕಾ ಈ ರೀತಿ ಮಾಡಿದ್ದಾರೆ ಎಂಬ ಮಾತುಗಳು ಈಗ ಕೇಳಿ ಬರುತ್ತಿದ್ದು, ಈ ಹೇಳಿಕೆಗೆ ನಟಿ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಫೋಟೋ ಲೀಕ್ ಆಗಿದ್ದರ ಬಗ್ಗೆ ಮಾತನಾಡಿದ ಹನ್ಸಿಕಾ, “ನಾನು ಅಮೆರಿಕಾದಲ್ಲಿದ್ದಾಗ ನನ್ನ ಮೊಬೈಲಿನಲ್ಲಿ ಕೆಲ ಸಮಸ್ಯೆ ಆಗುತ್ತಿರುವುದನ್ನು ಗಮನಿಸಿದೆ. ಬಳಿಕ ನನ್ನ ಪ್ರೈವೇಟ್ ಫೋಟೋ ಲೀಕ್ ಆಗಿರುವುದನ್ನು ನೋಡಿ ನಾನು ಶಾಕ್ ಆದೆ. ಈ ಫೋಟೋಗಳು ನಾನು ನಾಲ್ಕು ವರ್ಷಗಳ ಹಿಂದೆ ಕ್ಲಿಕ್ಕಿಸಿದೆ. ಆದರೆ ಈ ಫೋಟೋಗಳಲ್ಲಿ ಕೆಲವು ಫೋಟೋಗಳನ್ನು ಹ್ಯಾಕರ್ಸ್ ಎಡಿಟಿಂಗ್ ಮಾಡಿದ್ದಾರೆ. ಆಗ ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ ಎಂದು ನನಗೆ ತಿಳಿಯಿತು. ಬಳಿಕ ನನ್ನ ತಂಡಕ್ಕೆ ತಕ್ಷಣ ಇದರ ಬಗ್ಗೆ ಮಾಹಿತಿ ನೀಡಿದೆ” ಎಂದು ಹೇಳಿದ್ದಾರೆ.

    ನನ್ನ ಪ್ರೈವೇಟ್ ಫೋಟೋ ಲೀಕ್ ಆಗಿದ್ದು ನನಗೆ ತುಂಬಾ ಮುಜುಗರ ಆಯಿತು. ಅಲ್ಲದೇ ಆ ಫೋಟೋಗಳಿಗೆ ಬರುತ್ತಿದ್ದ ಕಮೆಂಟ್ ನೋಡಿ ತುಂಬಾ ಬೇಸರವಾಗುತ್ತಿತ್ತು. ಕೆಲವರು ಸಿನಿಮಾದಲ್ಲಿ ಬಿಕಿನಿ ಧರಿಸುವಾಗ ಆಗದಿರುವ ಮುಜುಗರ ಈಗ ಯಾಕೆ ಎಂದು ಪ್ರಶ್ನಿಸುತ್ತಿದ್ದಾರೆ. ಮೊದಲಿಗೆ ಲೀಕ್ ಆಗಿರುವ ಫೋಟೋಗಳಲ್ಲಿ ಕೆಲವು ಫೋಟೋಗಳನ್ನು ಎಡಿಟಿಂಗ್ ಮಾಡಿದ್ದಾರೆ. ನಾನು ನನ್ನ ಇಚ್ಛೆಯಿಂದ ಸಿನಿಮಾಗಳಲ್ಲಿ ಬಿಕಿನಿ ಧರಿಸಿದೆ. ಆದರೆ ಇಲ್ಲಿ ನನ್ನ ಅನುಮತಿ ಇಲ್ಲದೇ ಫೋಟೋ ವೈರಲ್ ಆಗುತ್ತಿದೆ ಎಂದು ಹೇಳಿದ್ದಾರೆ. ಇದನ್ನು ಓದಿ: ಹನ್ಸಿಕಾ ಮೊಬೈಲ್ ಹ್ಯಾಕ್- ನಟಿಯ ಪ್ರೈವೇಟ್ ಫೋಟೋ ವೈರಲ್

    ಹನ್ಸಿಕಾ ಅವರ ಪ್ರೈವೇಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗುತ್ತಿದ್ದಂತೆ ನನ್ನ ಮೊಬೈಲ್ ಹ್ಯಾಕ್ ಆಗಿದೆ ಎಂದು ಹೇಳಿದ್ದರು. ಹನ್ಸಿಕಾ ತಮ್ಮ ಟ್ವಿಟ್ಟರಿನಲ್ಲಿ, “ನನ್ನ ಫೋನ್ ಹಾಗೂ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ. ದಯವಿಟ್ಟು ಯಾರು ಮೆಸೇಜ್‍ಗಳಿಗೆ ಪ್ರತಿಕ್ರಿಯಿಸಬೇಡಿ. ನನ್ನ ತಂಡ ಇದಕ್ಕಾಗಿ ಕೆಲಸ ಮಾಡುತ್ತಿದೆ. ಎಲ್ಲವು ಸರಿ ಹೋಗುತ್ತದೆ” ಎಂದು ಟ್ವೀಟ್ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ

    ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ

    ಬೆಂಗಳೂರು: ಇತ್ತೀಚೆಗಷ್ಟೇ ಪೊಲೀಸ್ ಪೇದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಲೀಕ್ ಮಾಡಿದ್ದ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸ್ವಾಮೀಜಿಯೊಬ್ಬರ ಹೆಸರು ಹೊರಬಂದಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ.

    ಕಲ್ಮಠ ಸ್ವಾಮಿಯ ಹೆಸರು ಕೇಳಿ ಬಂದಿದೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುವುದರಲ್ಲಿ ಎಕ್ಸ್ ಪರ್ಟ್ ಆಗಿರುವ ಶಿವಕುಮಾರ ಸ್ವಾಮೀಜಿಯನ್ನು ಸಿಸಿಬಿ ವಿಚಾರಣೆಯನ್ನು ಮಾಡುತ್ತಿದ್ದು, ಸಾಕಷ್ಟು ಅಂಶಗಳು ಬೆಳಕಿಗೆ ಬರುತ್ತಿವೆ. ಕಲ್ಮಠ ಸ್ವಾಮಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಅಭ್ಯರ್ಥಿಗಳಿಗೆ ಟ್ರೈನಿಂಗ್ ಕೊಡುತ್ತಿದ್ದ ಎಂದು ಗೊತ್ತಾಗಿದೆ.

    6 ಲಕ್ಷ ಕೊಟ್ಟವರಿಗೆ ನೂರು ಪ್ರಶ್ನೆ ಉಚಿತ ಎಂದು ಹೇಳುತ್ತಾ 15 ಕೋಟಿ ಹಣ ವಸೂಲಿ ಮಾಡಿ ಅಭ್ಯರ್ಥಿಗಳಿಗೆ ಶಿವಕುಮಾರ್ ಟ್ರೈನಿಂಗ್ ಕೊಡುತ್ತಿದ್ದನು. ಈತ ಪ್ರಶ್ನೆ ಪತ್ರಿಕೆಯ ಮುಖ್ಯ ಪೇಜ್‍ನ್ನೇ ಕದಿಯುತ್ತಿದ್ದನು. ಬಳಿಕ ಜನರಿಲ್ಲದ ರೆಸಾರ್ಟ್ ಒಂದರಲ್ಲಿ ಟ್ರೈನಿಂಗ್ ಕೊಡುತ್ತಿದ್ದನು ಎಂದು ತಿಳಿದು ಬಂದಿದೆ.

    ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದ ಹಿಂದೆ ಶಾಸಕ ಸ್ಥಾನದ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡನ ನಂಟು ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಬಸವರಾಜ್ ಅಲಿಯಾಸ್ ಬಸವ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದವನಾಗಿದ್ದು, 110 ಜನ ಹುಡುಗರು, 10 ಜನ ಹುಡುಗಿಯರು ಕೂಡ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಹಿಂದೆ ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಕಲ್ಮಠ ಸ್ವಾಮಿ ಈಗ ಮತ್ತೆ ಪ್ರಶ್ನೆ ಪತ್ರಿಕೆಯ ಉರುಳು ಸಿಕ್ಕಿಬಿದ್ದಿದೆ. ಪ್ರಶ್ನೆ ಪತ್ರಿಕೆಯ ಲೀಕ್ ದಂಧೆ ಗೊತ್ತಿದ್ದೇ ಸ್ವಾಮಿಜಿ ಜಾಗವನ್ನು ಬಿಟ್ಟುಕೊಟ್ಟಿದ್ರಾ.? ಅಥವಾ ಹಣವನ್ನು ಪಡೆದುಕೊಂಡಿದ್ರಾ ಅನ್ನೋ ಅನುಮಾನವನ್ನೂ ಕೂಡ ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರು 7 ದಿನಗಳ ಕಾಲ ಲೀಕ್ ಕಿಂಗ್‍ಪಿನ್ ಶಿವಕುಮಾರಸ್ವಾಮಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಕ್ಷರಾ ಹಾಸನ್ ಅರೆಬೆತ್ತಲೆ ಫೋಟೋ ಲೀಕ್ – ಮಾಜಿ ಪ್ರಿಯಕರ ತನುಜ್ ವಿರ್ವಾನಿ ವಿಚಾರಣೆ?

    ಅಕ್ಷರಾ ಹಾಸನ್ ಅರೆಬೆತ್ತಲೆ ಫೋಟೋ ಲೀಕ್ – ಮಾಜಿ ಪ್ರಿಯಕರ ತನುಜ್ ವಿರ್ವಾನಿ ವಿಚಾರಣೆ?

    ಮುಂಬೈ: ಕಳೆದ ಕೆಲ ದಿನಗಳ ಹಿಂದೆ ನಟ ಕಮಲ್ ಹಾಸನ್ ಅವರ 2ನೇ ಪುತ್ರಿ ಅಕ್ಷರಾ ಹಾಸನ್‍ರ ಕೆಲ ಅರೆಬೆತ್ತಲೆ ಖಾಸಗಿ ಫೋಟೋ ಲೀಕ್ ಆಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಅಕ್ಷರಾ ಅವರ ಮಾಜಿ ಪ್ರಿಯಕರ ತನುಜ್ ವಿರ್ವಾನಿ ಅವರನ್ನ ವಿಚಾರಣೆ ನಡೆಸಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಫೋಟೋ ಲೀಕ್ ಆಗಿದ್ದ ಘಟನೆಗೆ ಸಂಬಂಧಿಸಿದಂತೆ ಅಕ್ಷರಾ ಅವರು ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಬಳಿಕ ಪ್ರಕರಣದಲ್ಲಿ ಮುಂಬೈ ಸೈಬರ್ ಕ್ರೈಂ ಪೊಲೀಸರು ಹಲವರನ್ನು ತನಿಖೆ ನಡೆಸಿದ್ದರು. ಇದರ ಭಾಗವಾಗಿಯೇ ಸದ್ಯ ತನುಜ್ ವಿರ್ವಾನಿ ಅವರ ಮೇಲಿನ ಶಂಕೆಯಿಂದ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

    ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ತನುಜ್ ವಿರ್ವಾನಿ, ಪೊಲೀಸ್ ವಿಚಾರಣೆಯನ್ನು ಅಲ್ಲಗೆಳೆದಿದ್ದಾರೆ. ತಾವು ಯಾವುದೇ ವಿಚಾರಣೆಗೆ ಸಿದ್ಧ. ನಾನು ಇಂದಿಗೂ ಕೂಡ ಅಕ್ಷರಾ ಅವರ ಕ್ಷೇಮವನ್ನೇ ಬಯಸುತ್ತೇನೆ. ನಮ್ಮ ಪ್ರೀತಿಯ ವೇಳೆ ಇಂತಹ ಸಂಗತಿಗಳಿಗೆ ಅವಕಾಶ ನೀಡಿರಲಿಲ್ಲ. ಸ್ವತಃ ಬಯಕೆಗಳಿಗೆ ಅವುಗಳನ್ನು ಬಳಕೆ ಮಾಡಿಕೊಳ್ಳುವುದಿಲ್ಲ. ಇಂದಿಗೂ ನಾನು ಅವರ ಉತ್ತಮ ಸ್ನೇಹಿತನಾಗಿದ್ದು, ನಾನು ಇಂತಹ ತಾಂತ್ರಿಕ ಕಳ್ಳತನಗಳ ಬಗ್ಗೆ ಎಚ್ಚರಿಕೆ ವಹಿಸುತ್ತೇನೆ. ಯಾವುದೇ ಫೋಟೋಗಳನ್ನೂ ಕೂಡ ನಾನು ನನ್ನ ಮೊಬೈಲ್ ಫೋನ್‍ನಲ್ಲಿ ಸೇವ್ ಮಾಡುವುದಿಲ್ಲ. ಸತ್ಯ ನನ್ನ ಪರ ಇದ್ದು, ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಇದನ್ನು ಓದಿ: ಕಮಲಹಾಸನ್ ಪುತ್ರಿ ಒಳಉಡುಪಿನಲ್ಲಿದ್ದ ಫೋಟೋ ಲೀಕ್: ಅಕ್ಷರಾ ಹೇಳಿದ್ದೇನು?  

    ಲೀಕ್ ಆದ ಚಿತ್ರಗಳು ಅಕ್ಷರಾ ಹಾಸನ್ ತಮ್ಮ ಬೆಡ್ ರೂಮ್ ನಲ್ಲಿ ತೆಗೆದುಕೊಂಡಿದ್ದ ಖಾಸಗಿ ಫೋಟೋಗಳಾಗಿದ್ದು, ಅವುಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. 2013ರ ವರೆಗೂ ಅಕ್ಷರಾ ಬಳಕೆ ಮಾಡುತ್ತಿದ್ದ ಐಫೋನ್ ನಲ್ಲಿ ಇದ್ದ ಫೋಟೋಗಳು ಇವು ಎನ್ನಲಾಗಿದೆ. ಈ ಹಿಂದೆಯು ಕೂಡ ಕಮಲ್ ಹಾಸನ್ ಅವರ ಮೊದಲ ಪುತ್ರಿ ಶೃತಿ ಹಾಸನ್ ಅವರು ಚಿತ್ರವೊಂದರಲ್ಲಿ ನಟನೆ ಮಾಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವೇಳೆಯೂ ಕೂಡ ಕಮಲ್ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಉಂಟಾಗಿತ್ತು.

    https://www.instagram.com/p/BppAsI1BOi5/?utm_source=ig_embed

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಆಂಬಿಡೆಂಟ್ ಡೀಲ್ ಕೇಸ್: ವಿಡಿಯೋ ಲೀಕ್ ಆಗಿದ್ದಕ್ಕೆ ಅಲೋಕ್ ಕುಮಾರ್ ಗರಂ

    ಆಂಬಿಡೆಂಟ್ ಡೀಲ್ ಕೇಸ್: ವಿಡಿಯೋ ಲೀಕ್ ಆಗಿದ್ದಕ್ಕೆ ಅಲೋಕ್ ಕುಮಾರ್ ಗರಂ

    ಬೆಂಗಳೂರು: ಆಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದ್ ಪಂಚನಾಮೆಯ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಗರಂ ಆಗಿದ್ದಾರೆ ಎನ್ನಲಾಗಿದೆ.

    ಪ್ರಕರಣದಲ್ಲಿ ಪ್ರಮುಖ ಆಧಾರವಾಗಿರುವ ತಾಜ್ ವೆಸ್ಟ್ ಅಂಡ್ ಹೋಟೆಲ್ ಸ್ಥಳದ ಪರಿಶೀಲನೆ ವಿಡಿಯೋ ಲೀಕ್ ಆಗಿರುವುದು ಸಿಸಿಬಿ ತನಿಖೆ ಮೇಲೆ ಅನುಮಾನ ಉಂಟಾಗುವಂತೆ ಮಾಡಿದೆ.

    ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಅಲೋಕ್ ಕುಮಾರ್ ಅವರು ಪ್ರಕರಣದ ಆರೋಪಿ ಫರೀದ್ ಸ್ಥಳ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಆಲಿಖಾನ್ ಹಾಗೂ ಜನಾರ್ದನ ರೆಡ್ಡಿ ಇದ್ದರು ಎಂಬ ಅಂಶ ಸ್ಪಷ್ಟವಾಗಿದೆ ಎಂದು ತಿಳಿಸಿದ್ದರು.

    ಲೀಕ್ ಆಗಿರುವ ವಿಡಿಯೋ ಬಗ್ಗೆ ಹಲವು ಅನುಮಾನಗಳು ಕಾರಣವಾಗಿದ್ದು, ಜನಾರ್ದನ ರೆಡ್ಡಿ ಪರ ಪೊಲೀಸರೆ ಇದ್ದರಾ? ಎಂಬ ಸಂಶಯಕ್ಕೂ ಕಾರಣವಾಗಿದೆ. ಲೀಕ್ ಆಗಿರುವ ವಿಡಿಯೋ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಅಲೋಕ್ ಕುಮಾರ್ ಪ್ರಶ್ನೆ ಮಾಡಿದ್ದು, ನ್ಯಾಯಾಲಯಕ್ಕೆ ನೀಡಬೇಕಾದ ವಿಡಿಯೋ ಮೊದಲೇ ಮಾಧ್ಯಮಗಳಿಗೆ ಹೇಗೆ ಲಭ್ಯವಾಗಿದೆ ಎಂದು ಪ್ರಶ್ನಿಸಿ ಗರಂ ಆಗಿದ್ದಾರೆ. ಅಲ್ಲದೇ ಈ ವಿಡಿಯೋ ಲೀಕ್ ಆಗಲು ತಮ್ಮ ಕಚೇರಿಯಲ್ಲೇ ಕೆಲ ಕಠಿಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಅಲೋಕ್ ಕುಮಾರ್ ಅವರು ವಿಡಿಯೋ ಲೀಕ್ ಆಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಯಾವ ಕ್ರಮಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

    ಯಾವುದೇ ಪ್ರಕರಣದಲ್ಲಿ ಆರೋಪಿಯ ಹೇಳಿಕೆ ಪಡೆದ ಬಳಿಕ ಸ್ಥಳ ಮಹಜರು ಮಾಡುವುದು ಕಾನೂನು ಕ್ರಮವಾಗಿದೆ. ಇದರಂತೆ ಫರೀದ್ ಹೇಳಿಕೆ ಪಡೆದಿದ್ದ ಸಿಸಿಬಿ ಪೊಲೀಸರು ಅದರಂತೆ ಮಹಜರು ನಡೆಸಿದ್ದರು. ಈ ಪ್ರಕ್ರಿಯೆನ್ನು ಸಂಪೂರ್ಣವಾಗಿ ಚಿತ್ರೀಕರಣ ಮಾಡಲಾಗುತ್ತದೆ. ಮಹಜರು ವಿಡಿಯೋವನ್ನು ಪೊಲೀಸರು ಪ್ರಕರಣದ ಪ್ರಮುಖ ಸಾಕ್ಷಿಯಾಗಿ ನ್ಯಾಯಾಲಕ್ಕೆ ಸಲ್ಲಿಸಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಮಲ್ ಹಾಸನ್ ಪುತ್ರಿಯ ಒಳಉಡುಪಿನಲ್ಲಿರುವ ಖಾಸಗಿ ಫೋಟೋ ಲೀಕ್

    ಕಮಲ್ ಹಾಸನ್ ಪುತ್ರಿಯ ಒಳಉಡುಪಿನಲ್ಲಿರುವ ಖಾಸಗಿ ಫೋಟೋ ಲೀಕ್

    ಮುಂಬೈ: ಖ್ಯಾತ ನಟ ಕಮಲ್ ಹಾಸನ್ ಅವರ ಎರಡನೇ ಪುತ್ರಿ ಅಕ್ಷರಾ ಹಾಸನ್ ಅವರ ಖಾಸಗಿ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಅಕ್ಷರಾ ಹಾಸನ್ ತನ್ನ ಪ್ರೈವೇಟ್ ಫೋಟೋ ಲೀಕ್ ಆಗಿ ವೈರಲ್ ಆಗುತ್ತಿದ್ದಂತೆಯೇ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಅಕ್ಷರಾ ಒಳಪಡುಪಿನಲ್ಲಿರುವ ಫೋಟೋಗಳು ವೈರಲ್ ಆಗಿದೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.

    ಅಕ್ಷರಾ ಅವರ ಈ ಫೋಟೋವನ್ನು ಎಡಿಟ್ ಮಾಡಲಾಗಿದ್ದೀಯಾ ಅಥವಾ ಇದು ಸ್ವತಃ ಆಕೆಯ ಫೋಟೋನಾ ಎಂಬುದು ಖಚಿತವಾಗಿಲ್ಲ. ಆದರೆ ಅಕ್ಷರಾ ಅವರ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಶೇರ್ ಆಗುತ್ತಿದೆ.

    ಅಕ್ಷರಾ ಹಾಸನ್ 2015ರಲ್ಲಿ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ನಟ ಧನುಷ್ ಜೊತೆ ‘ಶಮಿತಾಬ್’ ಚಿತ್ರದಲ್ಲಿ ನಟಿಸಿದ್ದರು. ಈ ಹಿಂದೆ ‘ದಿ-ವಿಲನ್’ ಸಿನಿಮಾದ ನಟಿ ಆ್ಯಮಿ ಜಾಕ್ಸನ್ ಅವರ ಫೋನ್ ಹ್ಯಾಕ್ ಆಗಿ ಅವರ ಖಾಸಗಿ ಫೋಟೋಗಳು ಲೀಕ್ ಆಗಿ ವೈರಲ್ ಆಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗೀತಾ ಗೋವಿಂದಂ ಚಿತ್ರದಲ್ಲಿ ಲಿಪ್‍ಲಾಕ್ ಸೀನ್ ಕಟ್- ಸೀಕ್ರೆಟ್ ರಿವೀಲ್ ಮಾಡಿದ್ರು ರಶ್ಮಿಕಾ

    ಗೀತಾ ಗೋವಿಂದಂ ಚಿತ್ರದಲ್ಲಿ ಲಿಪ್‍ಲಾಕ್ ಸೀನ್ ಕಟ್- ಸೀಕ್ರೆಟ್ ರಿವೀಲ್ ಮಾಡಿದ್ರು ರಶ್ಮಿಕಾ

    ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೊನೆಗೂ ತಮ್ಮ ಗೀತಾ ಗೋವಿಂದಂ ಚಿತ್ರದಲ್ಲಿ ಲಿಪ್‍ಲಾಕ್ ಸೀನ್ ಏಕೆ ಇರಲಿಲ್ಲ ಎಂಬುದರ ಸೀಕ್ರೆಟ್ ರಿವೀಲ್ ಮಾಡಿದ್ದಾರೆ.

    ರಶ್ಮಿಕಾ ಅಭಿನಯಿಸಿದ ಗೀತಾ ಗೋವಿಂದಂ ಚಿತ್ರ ತೆರೆ ಕಾಣುವ ಮೂರು ದಿನದ ಹಿಂದೆ ವಿಜಯ್ ಜೊತೆಗಿನ ಲಿಪ್‍ಲಾಕ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 40 ಸೆಕೆಂಡ್ ಇರುವ ಈ ದೃಶ್ಯ ನೋಡಿ ಕೆಲವರು ಖುಷಿಪಟ್ಟರೆ, ಮತ್ತೆ ಹಲವರು ಕಿಡಿಕಾರಿದ್ದರು.

    ರಶ್ಮಿಕಾಗೆ ಈಗಾಗಲೇ ನಿಶ್ಚಿತಾರ್ಥ ಆಗಿದೆ. ಹೀಗಿರುವಾಗ ಇಂಥ ದೃಶ್ಯಗಳಲ್ಲಿ ನಟಿಸುವುದು ಅಪರಾಧ ಎಂದು ಸಿಡಿಮಿಡಿಗೊಂಡಿದ್ದರು. ಈ ಹಿನ್ನೆಲೆಯಲ್ಲಿ ವಿಜಯ್ ದೇವರಕೊಂಡ ಜೊತೆಗಿನ ಲಿಪ್‍ಲಾಕ್ ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಿರ್ದೇಶಕ ಮತ್ತು ನಿರ್ಮಾಪಕರ ಮೇಲೆ ಸ್ವತಃ ರಶ್ಮಿಕಾ ಅವರೇ ಒತ್ತಡ ತಂದಿದ್ದರಂತೆ. ಹೀಗಾಗಿಯೇ ಆ ದೃಶ್ಯ ಗೀತ ಗೋವಿಂದಂ ಚಿತ್ರದಲ್ಲಿ ಕಾಣಿಸಲಿಲ್ಲ. ನನ್ನ ಮಾತಿಗೆ ಸಿನಿಮಾ ನಿರ್ದೇಶಕ ಪರಶುರಾಮ್ ಕೂಡ ಕೈ ಜೋಡಿಸಿದ್ರು ಅಂತ ರಶ್ಮಿಕಾ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

    ರಶ್ಮಿಕಾ ಮತ್ತು ವಿಜಯ್ ನಡುವಿನ ಲಿಪ್‍ಲಾಕ್ ದೃಶ್ಯ ಶೂಟ್ ಆಗಿತ್ತು. ಆದರೆ ಫೈನಲ್ ಕಾಪಿ ನೋಡಿದಾಗ ಅದು ಅನಗತ್ಯ ಎನ್ನಿಸಿತು. ಹೀಗಾಗಿ ನಾವೇ ಆ ದೃಶ್ಯಗಳಿಗೆ ಕತ್ತರಿ ಹಾಕಿದೆವು. ನಮಗೆ ಯಾರಿಂದಲೂ ಈ ದೃಶ್ಯಗಳನ್ನು ತೆಗೆಯಬೇಕೆಂದು ಫೋನ್ ಬಂದಿಲ್ಲ. ಯಾರೂ ಒತ್ತಾಯ ಕೂಡ ಮಾಡಿಲ್ಲ ಅಂತ ಚಿತ್ರದ ನಿರ್ದೇಶಕ ಪರಶುರಾಮ್ ತಿಳಿಸಿದ್ದಾರೆ.

    ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ಗಾಸಿಪ್ ಬಗ್ಗೆ ರಶ್ಮಿಕಾ ಅವರನ್ನು ಕೇಳಿದ್ದಾಗ ಅವರು, “ಅದು ನನ್ನ ವೈಯಕ್ತಿಕ ವಿಚಾರ. ಅದನ್ನು ನಾನು ಸಾರ್ವಜನಿಕವಾಗಿ ಚರ್ಚೆ ಮಾಡುವ ಅಗತ್ಯ ಇಲ್ಲ” ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv