Tag: lecture

  • ಹುಟ್ಟುಹಬ್ಬದಂದೇ ಡೆತ್‍ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ

    ಹುಟ್ಟುಹಬ್ಬದಂದೇ ಡೆತ್‍ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ

    ಚಾಮರಾಜನಗರ: ತಮ್ಮ ಹುಟ್ಟುಹಬ್ಬದ ದಿನವೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

    ಚಂದನಾ(26) ಆತ್ಮಹತ್ಯೆ ಮಾಡಿಕೊಂಡವರು. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ ಡೆತ್‍ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ:  ಮೈಸೂರು ಉದ್ಯಮಿಯ ಕೊಲೆಗೆ ಕೇಸ್‍ಗೆ ಟ್ವಿಸ್ಟ್ – ತಂದೆಯನ್ನೇ ಬರ್ಬರ ಹತೈಗೈದ 16ರ ಮಗ!

    ಚಂದನಾ ಅವರು ಜೆಎಸ್‍ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಇವರು ಚಾಮರಾಜನಗರದ ಜೆಎಸ್‍ಎಸ್ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

    ಡೆತ್ ನೋಟ್‍ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಎಂದು ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

    ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಎಂದು ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ

    ಶಿವಮೊಗ್ಗ: ಪರೀಕ್ಷೆಯಲ್ಲಿ‌ ವಿದ್ಯಾರ್ಥಿಯೊಬ್ಬ ನಕಲು ಮಾಡುತ್ತಿದ್ದ ಎಂಬ ಕಾರಣಕ್ಕೆ ಉಪನ್ಯಾಸಕರೊಬ್ಬರು ವಿದ್ಯಾರ್ಥಿಯ ಕೈ ಕಚ್ಚಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ಮಂಗಳವಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಅಂತಿಮ‌ ಬಿ.ಎ ಪದವಿ ವಿದ್ಯಾರ್ಥಿ ಕಿರ್ತೇಶ್ ಎಂಬಾತ ಮೊಬೈಲ್ ಮೂಲಕ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ. ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಕಾಲೇಜಿನ ಉಪನ್ಯಾಸಕ ಅಂಜನ್ ಕುಮಾರ್ ವಿದ್ಯಾರ್ಥಿ ನಕಲು ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಅಲ್ಲದೇ ನಕಲು ಮಾಡಲು ಬಳಸಿದ್ದ ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ

    ಈ ವೇಳೆ ವಿದ್ಯಾರ್ಥಿ ಹಾಗೂ ಉಪನ್ಯಾಸಕರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ವಿದ್ಯಾರ್ಥಿ, ಉಪನ್ಯಾಸಕರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಉಪನ್ಯಾಸಕ, ವಿದ್ಯಾರ್ಥಿಯ ಕೈ ಕಚ್ಚಿದ್ದಾರೆ.

    ಘಟನೆ ನಂತರ ವಿದ್ಯಾರ್ಥಿ ಉಪನ್ಯಾಸಕರ ವಿರುದ್ದ ಹೊಸನಗರ ಠಾಣೆಗೆ ದೂರು ನೀಡಿದ್ದಾನೆ. ಇದಕ್ಕೆ ಪ್ರತಿಯಾಗಿ ಉಪನ್ಯಾಸಕ ಕೂಡ ವಿದ್ಯಾರ್ಥಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಂದು ಆರೋಪಿಸಿ ಪ್ರತಿ ದೂರು ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿಯ ಭವಿಷ್ಯ ಹಾಳಾಗುತ್ತದೆ ಎಂಬುದನ್ನು ಅರಿತ ಕಾಲೇಜು ಆಡಳಿತ ಮಂಡಳಿ ಇಬ್ಬರ ನಡುವೆ ಸಂಧಾನ ನಡೆಸಿ ಪ್ರಕರಣ ಇತ್ಯರ್ಥಗೊಳಿಸಿದೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ

  • ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಲು ಮುಂದಾದ ಪ್ರಾಧ್ಯಾಪಕ

    ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಲು ಮುಂದಾದ ಪ್ರಾಧ್ಯಾಪಕ

    ಕಲಬುರಗಿ: ಸಹಾಯಕ ಪ್ರಾಧ್ಯಾಪಕನೋರ್ವ ಕಾಲೇಜಿನ ಪ್ರಿನ್ಸಿಪಾಲ್ ಮೇಲೆ ಆ್ಯಸಿಡ್ ಎರಚಿ ಹಲ್ಲೆ ಮಾಡಲು ಯತ್ನಿಸಿರುವ ಘಟನೆಯೊಂದು ನಗರದಲ್ಲಿ ಬೆಳಕಿಗೆ ಬಂದಿದೆ.

    ಹೆಚ್‍ಕೆಇ ಸೊಸೈಟಿಯ ಫಾರ್ಮಸಿ ಕಾಲೇಜ್‍ನ ಪ್ರಿನ್ಸಿಪಾಲ್ ಡಾ.ಅರುಣ್ ಕುಮಾರ್ ಬೆನಕಳ ಮೇಲೆ ಇದೇ ಫಾರ್ಮಸಿ ಕಾಲೇಜ್‍ನ ಸಹಾಯಕ ಪ್ರಾಧ್ಯಾಪಕನಾಗಿರುವ ಶಾಂತವೀರ ಸಲಗಾರ ಆ್ಯಸಿಡ್ ಎರಚಿ ಹಲ್ಲೆಗೆ ಯತ್ನ ನಡೆಸಿದ್ದಾರೆ. ಈ ಘಟನೆ ಮಾರ್ಚ್ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಶಾಂತವೀರ ಪರೀವಿಕ್ಷಣಾ ಇನ್ಸ್‌ಪೆಕ್ಟರ್ ಆಗಿ ನೇಮಕವಾಗಬೇಕಾಗಿತ್ತು. ಆದರೆ ಪ್ರಿನ್ಸಿಪಾಲ್ ಅರುಣ್ ಕುಮಾರ್ ತಮ್ಮ ಕೈವಾಡದಿಂದ ಹುದ್ದೆ ತಪ್ಪಿಸಿದ್ದಾರೆ ಎಂದು ಗ್ರಹಿಸಿಕೊಂಡು ಶಾಂತವೀರ ಆ್ಯಸಿಡ್ ದಾಳಿ ನಡೆಸಲು ಮುಂದಾಗಿದ್ದಾರೆ. ಎಚ್‍ಕೆಇ ಫಾರ್ಮಸಿ ಕಾಲೇಜ್ ಆವರಣದಲ್ಲಿಯೇ ಆ್ಯಸಿಡ್ ಎರಚಲು ಮುಂದಾಗಿದ್ದ ಶಾಂತವೀರ, ಅವಾಚ್ಯ ಶಬ್ದಗಳಿಂದ ಪ್ರಿನ್ಸಿಪಾಲ್‍ರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ ತನ್ನ ಕಾರಿನಿಂದ ಡಿಕ್ಕಿ ಹೊಡೆದು ಅಪಘಾತಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಕೆಲ ಪ್ರಾಧ್ಯಾಪಕರು ಪ್ರಿನ್ಸಿಪಾಲ್‍ರನ್ನು ರಕ್ಷಣೆ ಮಾಡಿ ಮನೆಗೆ ಸುರಕ್ಷಿತವಾಗಿ ತಲುಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯೇತರ ಪ್ರತಿಪಕ್ಷಗಳ ಆಧಾರ ಸ್ತಂಭ ಮಮತಾ ಬ್ಯಾನರ್ಜಿ: ಕಾಂಗ್ರೆಸ್‌ ಸಂಸದ ಬಣ್ಣನೆ

    POLICE JEEP

    ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಶಾಂತವೀರ ಸಲಗಾರ ಆ್ಯಸಿಡ್ ಎರಚಲು ಪ್ರಯತ್ನ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಈ ಕುರಿತು ಬ್ರಹ್ಮಪೂರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕಿದ್ದ ಪ್ರಾಧ್ಯಾಪಕ ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

  • ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ

    ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ

    ಶಿವಮೊಗ್ಗ: ಅವರದ್ದು ಕಳೆದ ನಾಲ್ಕೈದು ವರ್ಷಗಳ ಪ್ರೇಮ್‍ಕಹಾನಿ. ಜಾತಿ ಬೇರೆಯದ್ದಾದರೂ ಪ್ರೀತಿಗೇನೂ ಕೊರತೆಯಿರಲಿಲ್ಲ. ವೃತ್ತಿಯಲ್ಲೂ ಸಮಾನತೆ ಕಾಯ್ದುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಬ್ಬರ ವಿವಾಹವಾಗಿ ಯುವತಿ, ಪಿಎಚ್‍ಡಿ ಪದವೀಧರೆಯೂ ಆಗಿರುತ್ತಿದ್ದಳು. ಆದರೆ, ಪ್ರೀತಿಸಿದ ಯುವಕ ಕೈಕೊಟ್ಟ ವಿಷಯ ತಿಳಿದ ಯುವತಿ ಅವನ ಮದುವೆ ದಿನದಂದೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಹೌದು. ಪ್ರೀತಿಸಿದ ಯುವಕ ಕೈಕೊಟ್ಟಕಾರಣದಿಂದ ಮನನೊಂದ ಯುವತಿ ಪ್ರಿಯಕರನ ಮದುವೆ ದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ರೂಪ (28) ಎಂಬವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮ ಬದುಕಿರುವಾಗ ಮಕ್ಕಳು ಆಸ್ತಿ ಲಾಭ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

    ಏನಿದು ಕಹಾನಿ?
    ಶಿವಮೊಗ್ಗದವರೇ ಆಗಿದ್ದ ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಜಾತಿಯಲ್ಲಿ ಇಬ್ಬರು ಬೇರೆಯಾದರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು. ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು. ಇದರೊಂದಿಗೆ ಪಿಎಚ್.ಡಿ ಯನ್ನು ಮಾಡುತ್ತಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇನ್ನೆರಡು ತಿಂಗಳಿನಲ್ಲಿ ಪಿಎಚ್‍ಡಿ ಪದವಿಧರೆಯಾಗುತ್ತಿದ್ದರು. ಅಷ್ಟರಲ್ಲೇ ಪ್ರೀತಿಯಲ್ಲಿ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಇದರಿಂದ ಪಿಎಚ್‍ಡಿ ಡಾಕ್ಟರೇಟ್ ಪಡೆಯುವ ಕನಸೂ ನುಚ್ಚುನೂರಾಗಿದೆ.

    ಹಿಂದೊಮ್ಮೆ ವಿಷ ಸೇವಿಸಿದ್ದ ರೂಪ
    ಹಿಂದೆಯೇ ರೂಪಾಳಿಗೆ ಮದುವೆ ಮಾಡಲು ಪೋಷಕರು ಗಂಡು ಹುಡುಕಲು ಪ್ರಾರಂಭಿಸಿದ್ದರು. ಅಲ್ಲದೇ, ಸಾಕಷ್ಟು ಕಡೆಯಿಂದಲೂ ಸಂಬಂಧಗಳು ಬಂದಿದ್ದವು. ಆದರೆ ರೂಪ ಯಾವುದನ್ನೂ ಒಪ್ಪಿಕೊಂಡಿರಲಿಲ್ಲ. ಪಿಎಚ್‍ಡಿ ಮುಗಿದ ಬಳಿಕ ಪ್ರೀತಿಯ ವಿಷಯವನ್ನು ಮನೆಯವರಿಗೆ ತಿಳಿಸಿ, ಮದುವೆಯಾಗೋಣವೆಂದು ಮುಂದೂಡುತ್ತಾ ಬಂದಿದ್ದರು. 2 ತಿಂಗಳ ಹಿಂದೆ ಮಗಳ ಪ್ರೀತಿ ವಿಷಯ ಮನೆಯಲ್ಲಿ ಗೊತ್ತಾಗಿ ಗಲಾಟೆಯೂ ನಡೆದಿತ್ತು. ಇದರಿಂದ ಮನನೊಂದಿದ್ದ ರೂಪಾ ಫೆಬ್ರವರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೂ ಯತ್ನಿಸಿದ್ದಳು. ನಂತರ ಚಿಕಿತ್ಸೆ ಪಡೆದು ಆರೋಗ್ಯವಾದರು ಎಂದು ರೂಪಾಳ ಸೋದರಮಾವ ರಾಘವೇಂದ್ರ ಹಾಗೂ ಸಹೋದರ ರಾಕೇಶ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್ ನೋಡಿ ಸ್ಥಳದಿಂದ ಕಾಲ್ಕಿತ್ತ ಪತಿ- ಮಕ್ಕಳ ಮುಂದೆಯೇ ದಲಿತ ಮಹಿಳೆ ಮೇಲೆ ಸಾಮೂಹಿಕ ರೇಪ್

    ನಂತರ ರೂಪಾ ಪೋಷಕರೇ ಜಾತಿ ಬೇರೆಯಾಗಿದ್ದರೂ ಪರವಾಗಿಲ್ಲ. ಮಗಳು ಚೆನ್ನಾಗಿದ್ದರೆ ಸಾಕು ಎಂದು ಮುರಳಿ ಜೊತೆ ವಿವಾಹ ಮಾಡಲು ನಿರ್ಧರಿಸಿದ್ದರು. ಆದರೆ ಮುರಳಿ ರೂಪಾಳಿಗೆ ಕೈಕೊಟ್ಟು ಇಂದು (ಭಾನುವಾರ) ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿ ಎಂಬ ಯುವತಿಯೊಂದಿಗೆ ಮದುವೆ ಮಾಡಿಕೊಂಡಿದ್ದಾನೆ. ಇದರಿಂದ ಮನನೊಂದ ರೂಪ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಜಡ್ಜ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

    ರೂಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿ ಕಟ್ಟುತ್ತಿದ್ದಂತೆ ಮುರಳಿ ಕಲ್ಯಾಣ ಮಂಟಪದಿಂದಲೇ ಪರಾರಿಯಾಗಿದ್ದಾನೆ. ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

     

  • ಕೋವಿಡ್ ಬಂದರೂ ಕಾಲೇಜಿಗೆ ಹಾಜರಾದ ಪ್ರಾಧ್ಯಾಪಕ – 13 ಮಂದಿ ವಿದ್ಯಾರ್ಥಿಗಳಿಗೆ ಸೋಂಕು

    ಕೋವಿಡ್ ಬಂದರೂ ಕಾಲೇಜಿಗೆ ಹಾಜರಾದ ಪ್ರಾಧ್ಯಾಪಕ – 13 ಮಂದಿ ವಿದ್ಯಾರ್ಥಿಗಳಿಗೆ ಸೋಂಕು

    ಕಾರವಾರ: ಕೋವಿಡ್ ಪಾಸಿಟಿವ್ ಇದ್ದರೂ ಅದನ್ನು ಮುಚ್ಚಿಟ್ಟು ಪದವಿ ಕಾಲೇಜಿನಲ್ಲಿ ಪಾಠ ಮಾಡಿದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕನಿಂದಾಗಿ 13 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಗೋಖುಲೆ ಸೆಂಟಿನರಿ ಪದವಿ ಕಾಲೇಜಿನಲ್ಲಿ ನಡೆದಿದೆ.

    ಕೆಲವು ದಿನದ ಹಿಂದೆ ಖಾಸಗಿ ಕಾರ್ಯಕ್ರಮಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳಿದ್ದ ಪ್ರಾಧ್ಯಾಪಕನಿಗೆ ಕೋವಿಡ್ ಪಾಸಿಟಿವ್ ವರದಿಯಾಗಿತ್ತು. ಪಾಸಿಟಿವ್ ಬಂದಿದ್ದರಿಂದ ಹೋಮ್ ಐಸೋಲೇಷನ್‍ಗೆ ಸೂಚಿಸಲಾಗಿತ್ತು. ಆದರೆ ರಜೆ ಹಾಕಿದರೆ ಗಳಿಕೆ ರಜೆ ವ್ಯರ್ಥವಾಗುತ್ತದೆ ಎನ್ನುವ ಕಾರಣದಿಂದ ರಜೆ ಹಾಕದೆ ಉಪನ್ಯಾಸಕ ಕಾಲೇಜಿಗೆ ಹಾಜರಾಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ಇದರಿಂದ 13 ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿಯಾಗಿದೆ.

    ಸದ್ಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತ ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ 320 ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಇಂದು ಕೊವಿಡ್ ತಪಾಸಣೆ ನಡೆಸಿದೆ.

    ಕಾಲೇಜಿಗೆ ಗೈರಾದ ವಿದ್ಯಾರ್ಥಿಗಳು: ಗೋಖುಲೆ ಸೆಂಟಿನರಿ ಪದವಿ ಕಾಲೇಜಿನಲ್ಲಿ ಹಾಗೂ ಕೆಲವು ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ವರದಿ ಬರುತ್ತಿದ್ದಂತೆ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಇದರಿಂದ ವಿದ್ಯಾರ್ಥಿಗಳು ಕಾಲೇಜುಗಳಿಗೆ ಗೈರಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ವಿದ್ಯಾರ್ಥಿಗಳಲ್ಲಿ ಶೀತ, ಜ್ವರ: ಅಂಕೋಲಾದ ಕಾಲೇಜುಗಳಲ್ಲಿ ಹಲವು ಮಕ್ಕಳಲ್ಲಿ ಶೀತ, ಜ್ವರ ಕಾಣಿಸಿಕೊಂಡಿದೆ. ಆದರೆ ಹಲವು ಮಕ್ಕಳು ಕೋವಿಡ್ ತಪಾಸಣೆಗೆ ಹಿಂಜರಿಯುತ್ತಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತಿದ್ದಾರೆ. ಇನ್ನು ಹಲವು ವಿದ್ಯಾರ್ಥಿಗಳು ಕೋವಿಡ್ ಲಕ್ಷಣವಿದ್ದರೂ, ತರಗತಿಗೆ ಹಾಜುರಾಗುತ್ತಿದ್ದಾರೆ. ಇದರಿಂದಾಗಿ ಮತ್ತಷ್ಟು ಸೋಂಕು ಹೆಚ್ಚಾಗುವ ಭೀತಿ ಆವರಿಸಿದೆ. ಇದನ್ನೂ ಓದಿ: ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಯ್ತು ಅಪರೂಪದ ಕಪ್ಪು ವಜ್ರ

  • ಇಂದಿನಿಂದ ಮೇ 15ರ ವರೆಗೆ ಪಾಸಿಟಿವಿಟಿ ಅನ್‍ಲಿಮಿಟೆಡ್ ಉಪನ್ಯಾಸ

    ಇಂದಿನಿಂದ ಮೇ 15ರ ವರೆಗೆ ಪಾಸಿಟಿವಿಟಿ ಅನ್‍ಲಿಮಿಟೆಡ್ ಉಪನ್ಯಾಸ

    ಬೆಂಗಳೂರು: ನಾವು ಗೆದ್ದೇ ಗೆಲ್ಲುತ್ತೇವೆ ಕೋವಿಡ್ ರೆಸ್ಪಾನ್ಸ್ ಟೀಮ್ ವತಿಯಿಂದ ‘ಪಾಸಿಟಿವಿಟಿ ಅನ್‍ಲಿಮಿಟೆಡ್’ ಕುರಿತು ಉಪನ್ಯಾಸ ಮಾಲಿಕೆ ಏರ್ಪಡಿಸಿದ್ದು, ಸಂವಾದ ಸಾಮಾಜಿಕ ಜಾಲತಾಣದ ವಾಹಿನಿ ಮೂಲಕ ಶ್ರೀ ಜಗ್ಗಿ ವಾಸುದೇವ್ ಹಾಗೂ ಜೈನ ಮುನಿ ಶ್ರೀ ಪ್ರಮಾಣ ಸಾಗರ ಜೀ ಮಹಾರಾಜ್ ಉಪನ್ಯಾಸ ನೀಡಲಿದ್ದಾರೆ.

    ಮೇ 11ರಿಂದ 15ರ ವರೆಗೆ ಉಪನ್ಯಾಸ ಮಾಲಿಕೆ ನಡೆಯಲಿದ್ದು, ಇಂದು ಸಂಜೆ 4.30ಕ್ಕೆ ಆರಂಭವಾಗಲಿದೆ. ಸದ್ಗುರು ಶ್ರೀ ಜಗ್ಗಿ ವಾಸುದೇವ್ ಹಾಗೂ ಜೈನ ಮುನಿ ಶ್ರೀ ಪ್ರಮಾಣ ಸಾಗರ ಜೀ ಮಹಾರಾಜ್ ಅವರು ಉಪನ್ಯಾಸ ನೀಡಲಿದ್ದಾರೆ.

    ಕೊರೊನಾ ಕಾಲದಲ್ಲಿ ಧನಾತ್ಮಕ ಆಲೋಚನೆಗಳನ್ನು ರೂಢಿಸಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ 5 ದಿನಗಳ ಕಾಲ ಉಪನ್ಯಾಸ ನೀಡಲಿದ್ದಾರೆ. ಸಂವಾದ ಸಾಮಾಜಿಕ ಜಾಲತಾಣದ ವಾಹಿನಿ ಮೂಲಕ ಉಪನ್ಯಾಸವನ್ನು ಕೇಳಬಹುದಾಗಿದೆ.

  • ಪ್ರಧಾನಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕಿಲ್ವಾ: ಕನ್ನಯ್ಯ ಪ್ರಶ್ನೆ

    ಪ್ರಧಾನಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕಿಲ್ವಾ: ಕನ್ನಯ್ಯ ಪ್ರಶ್ನೆ

    – ಉಪನ್ಯಾಸ ತಡೆದು ಮತ್ತಷ್ಟು ಪ್ರಚಾರ ಕೊಟ್ರು
    – ಮೋದಿ, ಬಿಜೆಪಿ ವಿರುದ್ಧ ಕನ್ನಯ್ಯ ಕಿಡಿ

    ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ ಎಂದು ಜೆಎನ್‍ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅಣ್ಣನ ಪುತ್ರಿ ದಮಯಂತಿ ಬೆನ್ ಮೋದಿ ಅವರ ಪರ್ಸ್ ಅನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದರು. ಆ ಕಳ್ಳರಿಗಾಗಿ ಏಳು ನೂರು ಪೊಲೀಸರು ಶೋಧ ಕಾರ್ಯ ನಡೆಸಿ ಬಂಧಿಸಿದ್ದಾರೆ. ಆದರೆ ಜೆಎನ್‍ಯು ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿ ವರ್ಷಗಳೇ ಕಳೆದರೂ ಹುಡುಕುವ ಕೆಲಸ ಆಗುತ್ತಿಲ್ಲ.  ನಜೀಬ್ ತಾಯಿ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾದರೆ ಆ ವಿದ್ಯಾರ್ಥಿಯ ಜೀವಕ್ಕೆ ಬೆಲೆ ಇಲ್ವಾ ಎಂದು ಕಿರಿಕಾರಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸಹೋದರನ ಪುತ್ರಿಯ ಪರ್ಸ್ ಎಗರಿಸಿದ ಖದೀಮರು

    ನಜೀಬ್ ನಾಪತ್ತೆ ಪ್ರಕರಣ ಸಂಬಂಧ ಯಾವುದೇ ಮಾಹಿತಿ ಸಿಗುತ್ತಿಲ್ಲ ಅಂತ ಸಿಬಿಐ ಹೇಳುತ್ತಿದೆ. ಒಂದು ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಧ್ಯವಾಗದ ಸಿಬಿಐ ಯಾಕಿದೆ? ಬಿಜೆಪಿ ವಿರುದ್ಧ ಮಾತನಾಡುವವರ ಮನೆಯ ಮೇಲೆ ದಾಳಿ ಮಾಡಲು ಸಿಬಿಐ ಇದೇಯಾ ಎಂದು ಗುಡುಗಿದರು.

    ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿನ ಉಪನ್ಯಾಸ ಕಾರ್ಯಕ್ರಮ ರದ್ದು ಪಡಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕನ್ನಯ್ಯ, ಕಾನೂನು ಸುವ್ಯವಸ್ಥೆ ಕಾಪಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಕುಲಪತಿ ತಿಳಿಸಿದ್ದಾರೆ. ಹಾಗಾದರೆ ಪೊಲೀಸರು ಯಾಕಿದ್ದಾರೆ? ಅವರ ಸಹಾಯದಿಂದ ಉಪನ್ಯಾಸ ಕಾರ್ಯಕ್ರಮ ನಡೆಸಬಹುದಿತ್ತು. ಬಲ ಪಂಥೀಯರ ಬೆದರಿಕೆಗೆ ಹೆದರಿ ಅನುಮತಿ ನಿರಾಕರಿಸಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದರು.

    ರಾಜ್ಯ ಸರ್ಕಾರ ನನ್ನ ಕಾರ್ಯಕ್ರಮ ರದ್ದು ಪಡಿಸಬಹುದೇ ಹೊರತು ನನ್ನ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಸಂಶೋಧನಾ ವಿಷಯದ ಮೇಲೆ ನಾನು ಮಾತನಾಡುವುದಿಲ್ಲ ಎನ್ನುವ ಕಾರಣವೊಡ್ಡಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ. ನಾನು ಸಂಶೋಧನೆ ಮಾಡಿಯೇ ಪಿಎಚ್.ಡಿ ಪೂರ್ಣಗೊಳಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಶೋಧನೆ ಆಧಾರಿಸಿದ ಭಾಷಣ ಮಾಡಲು ಆಗುತ್ತಾ? ಅವರ ಭಾಷಣದಲ್ಲಿ ಎಷ್ಟು ಸತ್ಯವಿದೆ. ಪದವಿ ಶಿಕ್ಷಣ ಪಡೆಯದವರು ದೇಶ ನಡೆಸುತ್ತಿದ್ದಾರೆ. ಅವರು ಉಪ ಕುಲಪತಿಗಳ ಮೂಲಕ ನನ್ನ ಉಪನ್ಯಾಸ ಕಾರ್ಯಕ್ರಮ ರದ್ದುಪಡಿಸಿದ್ದಾರೆ ಎಂದು ಗುಡುಗಿದರು.

    ಇದು ವಿಶ್ವ ಗುರು ಬಸವಣ್ಣನವರ ಭೂಮಿ. ವಿದ್ಯಾರ್ಥಿಗಳಿಂದ ಆಮಂತ್ರಣ ನೀಡಿದ್ದಕ್ಕೆ ನಾನು ಬಂದಿದ್ದೇನೆ. ಆದರೆ ರಾಜಕೀಯದವರ ಒತ್ತಡಕ್ಕೆ ಮಣಿದು ನನ್ನ ಉಪನ್ಯಾಸ ರದ್ದುಗೊಳಿಸಲಾಗಿದೆ. ವಿಶ್ವವಿದ್ಯಾಲಯಕ್ಕೆ ರಾಜಕಾರಣಿಗಳು ಬಂದು ರಾಜಕೀಯ ಭಾಷಣ ಮಾಡುತ್ತಾರೆ. ಹಾಗಾದರೆ ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಇದೇ ಮೊದಲ ಬಾರಿಗೆ ಕಲಬುರಗಿಗೆ ಬಂದಿದ್ದೇನೆ. ನನ್ನ ಉಪನ್ಯಾಸ ರದ್ದುಗೊಳಿಸಿದರೂ ಪ್ರಚಾರ ಸಿಗುತ್ತದೆ. ನನ್ನ ಉಪನ್ಯಾಸದಿಂದ ವಂಚಿತರಾದ ವಿದ್ಯಾರ್ಥಿಗಳು ಗೂಗಲ್, ಯೂಟ್ಯೂಬ್‍ನಲ್ಲಿ ನನ್ನ ಬಗ್ಗೆ ತಿಳಿದುಕೊಳ್ಳುತ್ತಾರೆ. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಸೇರುತ್ತಾರೆ. ತಮ್ಮ ಮೊಬೈಲ್‍ನಲ್ಲಿ ಉಪನ್ಯಾಸವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ ಎಂದು ತಿಳಿಸಿದರು.

    ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನನ್ನ ಉಪನ್ಯಾಸ ಕಾರ್ಯಕ್ರಮವನ್ನು ಕೆಲವರು ಕುತಂತ್ರಿ ಬುದ್ಧಿಯಿಂದ ತಡೆದಿರಬಹುದು. ಆದರೆ ಸಾಮಾಜಿಕ ಜಾಲತಾಣದಲ್ಲಿ ಯಾರಿಂದಲೂ ನಮ್ಮ ಭಾಷಣವನ್ನು ತಡೆಯಲು ಸಾಧ್ಯವಿಲ್ಲ. ನನ್ನ ಭಾಷಣ, ವಿಚಾರಧಾರೆಗಳು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಲುಪುತ್ತವೆ ಎಂದರು.

  • ಇಂಟರ್ನಲ್ ಮಾರ್ಕ್ಸ್ ಕೇಳಿದ್ರೆ ಸರಸಕ್ಕೆ ಕರೀತಾನೆ ಶಿಕ್ಷಕ!

    ಇಂಟರ್ನಲ್ ಮಾರ್ಕ್ಸ್ ಕೇಳಿದ್ರೆ ಸರಸಕ್ಕೆ ಕರೀತಾನೆ ಶಿಕ್ಷಕ!

    – ಕಾಲೇಜು ಬಿಟ್ಟು ವಿದ್ಯಾರ್ಥಿನಿಯರ ಪ್ರತಿಭಟನೆ

    ಕಲಬುರಗಿ: ಇಂಟರ್‍ನಲ್ ಮಾರ್ಕ್ಸ್ ಕೊಡಲು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ, ಕಲಬುರಗಿ ನಗರದ ಎಚ್‍ಕೆಇ ಸಂಸ್ಥೆಯ ಮಲಕರೆಡ್ಡಿ ಹೋಮಿಯೊಪತಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

    ಕಾಲೇಜಿನ ಫಿಜಿಯಾಲಾಜಿ ಉಪನ್ಯಾಸಕ ಸಿದ್ದಲಿಂಗ ಮಾಲಿಪಾಟೀಲ್ ಇಂತಹ ಹೀನ ಕೆಲಸ ಮಾಡಿದ್ದಾನೆ. ಇದರಿಂದ ನೊಂದ ವಿದ್ಯಾರ್ಥಿನಿ ಕಾಲೇಜಿನ ಪ್ರಾಂಶುಪಾಲರಿಗೆ ಲಿಖಿತ ದೂರು ನೀಡಿದ್ದಾರೆ.

    ನಿತ್ಯ ಮದ್ಯಪಾನ ಮಾಡಿ ಬರುವ ಈ ಕಾಮಿ ಶಿಕ್ಷಕ ಪ್ರತಿ ವಿದ್ಯಾರ್ಥಿನಿಯನ್ನೂ ಸಹ ಕಾಮದ ದೃಷ್ಟಿಯಿಂದ ನೋಡುತ್ತಾನಂತೆ. ಉಪನ್ಯಾಸಕನ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿಗಳು ಮೂರು ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಆಡಳಿತ ಮಂಡಳಿಯ ಒತ್ತಡಕ್ಕೆ ಮಣಿದ ಶಿಕ್ಷಣ ಸಂಸ್ಥೆ ಕಾಮುಕ ಉಪನ್ಯಾಕನ ವಿರುದ್ಧ ಕ್ರಮ ಜರುಗಿಸಿಲ್ಲ ಎನ್ನುವ ಮಾತು ಕೇಳಿ ಬಂದಿದೆ.