Tag: leelavathi

  • ಲೀಲಾವತಿ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ದರ್ಶನ್

    ಲೀಲಾವತಿ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ದರ್ಶನ್

    ಹಿರಿಯ ನಟಿ ಲೀಲಾವತಿ (Leelavathi) ಅವರ ಮನೆಗೆ ಇಂದು (ನ.26) ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಭೇಟಿ ನೀಡಿದ್ದಾರೆ. ನಟಿ ಲೀಲಾವತಿ ಅವರನ್ನ ದರ್ಶನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

    ವಯಸ್ಸಿನ ಕಾರಣದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಮನೆಗೆ ನಟ ದರ್ಶನ್ ಭೇಟಿ ನೀಡಿ ವಿನೋದ್ ರಾಜ್ (Vinod Raj) ಬಳಿ ಯೋಗಕ್ಷೇಮ ವಿಚಾರಿಸಿದ್ದಾರೆ. ಕೆಲ ಹೊತ್ತು ಲೀಲಾವತಿ ಅವರ ಮನೆಯಲ್ಲಿದ್ದು ವಿನೋದ್ ರಾಜ್ ಬಳಿ ಸಾಕಷ್ಟು ವಿಚಾರಗಳ ಬಗ್ಗೆ ದರ್ಶನ್ ಮಾತನಾಡಿದ್ದಾರೆ. ಇದನ್ನೂ ಓದಿ:ರಿವೀಲ್‌ ಆಯ್ತು ‘ಅಧಿಪತ್ರ’ ಸಿನಿಮಾದಲ್ಲಿನ ರೂಪೇಶ್‌ ಶೆಟ್ಟಿ ಲುಕ್‌

    ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಅರ್ಜುನ್ ಸರ್ಜಾ ಕೂಡ ಇತ್ತೀಚೆಗೆ ಅದೇ ಕೆಲಸ ಮಾಡಿದ್ದರು. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ:ಬಾತ್‌ರೂಂ ಬಿಟ್ಟು ಕೊಡದೇ ಡ್ರೋನ್‌ಗೆ ಕಾಡಿಸಿದ ಸ್ನೇಹಿತ್‌ಗೆ ಸುದೀಪ್‌ ಕ್ಲಾಸ್‌

    ಅಂದಹಾಗೆ ಇಂದು (ನ.26) ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ ಆಗಿದೆ. ಸರಳವಾಗಿ ಈ ಸಮಾರಂಭ ಜರುಗಿದೆ.

  • ಹಿರಿಯ ನಟಿ ಲೀಲಾವತಿ ಮನೆಗೆ ಉಮಾಶ್ರೀ- ಪದ್ಮಾವಾಸಂತಿ ಭೇಟಿ

    ಹಿರಿಯ ನಟಿ ಲೀಲಾವತಿ ಮನೆಗೆ ಉಮಾಶ್ರೀ- ಪದ್ಮಾವಾಸಂತಿ ಭೇಟಿ

    ನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರ(Leelavathi) ಆರೋಗ್ಯವನ್ನು (Health) ವಿಚಾರಿಸಿಕೊಳ್ಳುವ ಸಲುವಾಗಿ ನಟಿ ಉಮಾಶ್ರೀ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಸೊಲದೇವನಹಳ್ಳಿಯಲ್ಲಿ ವಾಸವಾಗಿರುವ ನಟಿ ಲೀಲಾವತಿ, ವಿನೋದ್ ರಾಜ್ (Vinod Raj) ಅವರ ತೋಟದ ಮನೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

    ಅನೇಕ ಮಕ್ಕಳು ದೊಡ್ಡವರಾದ ಮೇಲೆ ತಂದೆ ತಾಯಿಯನ್ನು ಮರೆತು ಬೇರೆ ಇದ್ದು, ತಮ್ಮ ಜೀವನವನ್ನು ನೋಡಿ ಕೊಳ್ಳುತ್ತಾರೆ. ಆದರೆ ನಟ ವಿನೋದ್ ರಾಜ್ ತಮ್ಮ ತಾಯಿ, ಹಿರಿಯ ನಟಿ ಎಂ.ಲೀಲಾವತಿಯವರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕಳೆದ ವಾರ ವ್ಯಾಯಾಮಕ್ಕೆ ಹಾಡಿನ ಜೊತೆಯಲ್ಲಿ ಹೆಜ್ಜೆ ಹಾಕಿದ್ದು, ಅಭಿಮಾನಿಗಳ ಗಮನ ಸೆಳೆದಿತ್ತು. ಇದಾದ ಬಳಿಕ, ಲೀಲಾವತಿ ಅವರ ಮನೆಗೆ ಪೂಜಾ ಗಾಂಧಿ ಸೇರಿದಂತೆ ಹಲವು ಕಲಾವಿದರು ಭೇಟಿ ನೀಡಿ, ಲೀಲಾವತಿ ಆರೋಗ್ಯ ವಿಚಾರಿಸಿದ್ದರು. ಈಗ ನಟಿ ಉಮಾಶ್ರೀ(Umashree), ಪದ್ಮಾ ವಾಸಂತಿ (Padmavasanthi) ಅವರು ಲೀಲಾವತಿ ಅವರ ಮನೆಗೆ ಭೇಟಿ ನೀಡಿದ್ದಾರೆ.

    ಲೀಲಾವತಿಯವರು ಕೆಲ ಕಾಲ ಉಮಾಶ್ರೀ ಹಾಗೂ ನಟಿ ಪದ್ಮವಾಸಂತಿಯವರ ಜೊತೆಗೆ ಹಿಂದಿನ ಚಿತ್ರರಂಗ ಹೇಗಿತ್ತು, ಮತ್ತು ಆಗಿನ ಊಟ ಉಪಚಾರಗಳು ಎಷ್ಟು ದೇಹಕ್ಕೆ ಚೈತನ್ಯ ನೀಡುತ್ತಿದ್ದವು ಹಾಗು ಇನ್ನೂ ಹಲವು ಹಳೆಯ ವಿಚಾರಗಳನ್ನು ನಟಿಯರು ಮೆಲುಕು ಹಾಕಿದ್ದಾರೆ. ನಂತರ ನಟಿಯರು, ಹಿರಿಯ ನಟಿ ಜೊತೆ ಆಟವಾಡಿ ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ:ಕನ್ನಡತಿ ಶ್ರೀಲೀಲಾ ಹಿಂದಿಕ್ಕಿದ ‘ಸೀತಾರಾಮಂ’ ಬೆಡಗಿ ಮೃಣಾಲ್

    ನಟ ವಿನೋದ್ ರಾಜ್-ಲೀಲಾವತಿ (Leelavathi) ಅವರ ಯೋಗಕ್ಷೇಮ ವಿಚಾರಿಸಿ, ಉಮಾಶ್ರೀ- ಪದ್ಮವಾಸಂತಿ ಅವರು ಒಳ್ಳೆಯ ಸಮಯ ಕಳೆದಿದ್ದಾರೆ. ಅವರ ಭೇಟಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರೋಗ್ಯಕ್ಕಾಗಿ ತಾಯಿ ಲೀಲಾವತಿ ಜೊತೆ ಸ್ಟೆಪ್ ಹಾಕಿದ ನಟ ವಿನೋದ್ ರಾಜ್

    ಆರೋಗ್ಯಕ್ಕಾಗಿ ತಾಯಿ ಲೀಲಾವತಿ ಜೊತೆ ಸ್ಟೆಪ್ ಹಾಕಿದ ನಟ ವಿನೋದ್ ರಾಜ್

    ನೇಕ ಮಕ್ಕಳು ದೊಡ್ಡವರಾದ ಮೇಲೆ ತಂದೆ ತಾಯಿಯನ್ನು ಮರೆತು ಬೇರೆ ಇದ್ದು ತಮ್ಮ ಜೀವನವನ್ನು ಕೊಳ್ಳುತ್ತಾರೆ.  ಆದರೆ ನಟ ವಿನೋದ್ ರಾಜ್ (Vinod Raj) ತಮ್ಮ ತಾಯಿ, ಹಿರಿಯ ನಟಿ ಎಂ.ಲೀಲಾವತಿಯವರ (Leelavathi) ಆರೋಗ್ಯವನ್ನು ಕಾಪಾಡುವ ಸಲುವಾಗಿ  ಬೆಳಗಿನ ವ್ಯಾಯಾಮಕ್ಕೆ (Exercise) ಹಾಡಿನ ಜೊತೆಯಲ್ಲಿ ಹೆಜ್ಜೆ  ಹಾಕಿಸಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಸಾಕಷ್ಟು ವರ್ಷಗಳಿಂದ ತಾಯಿ-ಮಗ ಜೀವನ ನಡೆಸುತಿದ್ದಾರೆ. ಈ ನಡುವೆ ಜನರಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಅವರು ನಿರ್ಮಿಸಿದ್ದಾರೆ. ಈಗ ಮತ್ತೊಂದು ಪಶು ಆಸ್ಪತ್ರೆ ನಿರ್ಮಾಣ ಕಾರ್ಯದಲ್ಲೂ ಬ್ಯುಸಿಯಾಗಿದ್ದಾರೆ.  ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

    ಸಮಾಜಮುಖಿ ಕೆಲಸಗಳುಮತ್ತು ಕೃಷಿ ಜೊತೆಗೆ ವಿನೋದ್ ರಾಜ್ ಅವರಿಗೆ ತಾಯಿಯ ಯೋಗಕ್ಷೇಮವೂ ಅಷ್ಟೇ ಮುಖ್ಯ. ಹೀಗಾಗಿ ಪ್ರತಿನಿತ್ಯ ಬೆಳಿಗ್ಗೆ ತಾಯಿಯ ಆಸೆಯಂತೆ ವಿನೋದ್ ರಾಜ್ ಅಮ್ಮನ ಆರೋಗ್ಯವನ್ನು (Health) ನೋಡಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಪ್ರತಿದಿನವೂ ಬೇರೆ ಬೇರೆ ಹಾಡುಗಳಿಗೆ ಹೆಜ್ಜೆ (Dance) ಹಾಕುತ್ತಾರೆ.

     

    ಎಂದಿನಂತೆ ಇಂದೂ ಕೂಡ ತಾಯಿಯ ಜೊತೆ ಜೊತೆಯಲೇ ಹಾಡಿಗೆ ಹೆಜ್ಜೆ ಹಾಕಿಸಿ ವ್ಯಾಯಾಮ ಮಾಡಿದ್ದಾರೆ. ಇನ್ನೂ ಈ ಇಳಿ ವಯಸ್ಸಿನಲ್ಲಿ ಅಮ್ಮನ ಉತ್ಸಾಹವನ್ನು ನೋಡಿದ ಮಗ ವಿನೋದ್ ರಾಜ್  ಖುಷ್ ಹಾಗಿದ್ದಾರೆ. ಸದಾ ಕಾಲ ಅಮ್ಮ ಆರೋಗ್ಯವಂಥಳಾಗಿ ಇರಬೇಕು ಎಂದು ನಿತ್ಯ ಪ್ರಾರ್ಥನೆ ಮಾಡುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಧಾನಸಭೆ ಚುನಾವಣೆ 2023 : ಮೊದಲ ಮತದಾನ ಮಾಡಿದ ನಟಿ ಲೀಲಾವತಿ

    ವಿಧಾನಸಭೆ ಚುನಾವಣೆ 2023 : ಮೊದಲ ಮತದಾನ ಮಾಡಿದ ನಟಿ ಲೀಲಾವತಿ

    ರ್ನಾಟಕ ವಿಧಾನಸಭೆ ಚುನಾವಣೆ (Legislative Assembly) ಕಣ ರಂಗೇರಿದೆ. ಸುದೀಪ್ ಸೇರಿದಂತೆ ಹಲವು ನಟರು ನಾನಾ ಪಕ್ಷಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಟಿ ಲೀಲಾವತಿ (Leelavathi) ಮತದಾನ (Voting) ಮಾಡುವ ಮೂಲಕ ಮಾದರಿಯಾಗಿದ್ದಾರೆ. ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಚುನಾವಣೆ ಆಯೋಗ ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಇಂದು ಲೀಲಾವತಿ ಅವರು ಮತದಾನ ಮಾಡಿದ್ದಾರೆ. ಈ ಬಾರಿಯ ಮತದಾನ ಮಾಡಿದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ ಚುನಾವಣೆ (Election) ಆಯೋಗ. ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ (Vinod) ಸಹಾಯದಿಂದ ಅವರು ಮನೆಯಲ್ಲಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಪತಿ ಜೊತೆ ವಿದೇಶಕ್ಕೆ ಹಾರಿದ ‘ಬಿಗ್ ಬಾಸ್’ ಬೆಡಗಿ ಅಕ್ಷತಾ ಕುಕಿ

    ಈ ಸಂದರ್ಭದಲ್ಲಿ ಮಾತನಾಡಿದ ಲೀಲಾವತಿ, ‘ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ’ ಎಂದು ಹೇಳಿದರು. ಮತದಾನ ಮನೆಯಲ್ಲೇ ಮಾಡಿದ್ದು ಸಂಭ್ರಮ ತಂದಿದೆ ಎಂದಿದ್ದಾರೆ. ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದೆ.

  • ಪತ್ನಿ, ಪುತ್ರನ ಜೊತೆ ವಿನೋದ್ ರಾಜ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಿರ್ದೇಶಕ

    ಪತ್ನಿ, ಪುತ್ರನ ಜೊತೆ ವಿನೋದ್ ರಾಜ್? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಿರ್ದೇಶಕ

    ಸ್ಯಾಂಡಲ್‌ವುಡ್‌ನಲ್ಲಿ (Sandalwood) ಡ್ಯಾನ್ಸ್‌ಗೆ ಹೆಸರುವಾಸಿಯಾಗಿದ್ದ ವಿನೋದ್ ರಾಜ್ (Vinodraj) ಕಾರಣಾಂತರಗಳಿಂದ ನಟನೆಯಿಂದ ದೂರ ಸರಿದು ತಮ್ಮ ತಾಯಿ ಲೀಲಾವತಿ ಜೊತೆ ಜೀವನ ಸಾಗಿಸುತ್ತಿದ್ದಾರೆ. ವಿನೋದ್ ರಾಜ್‌ಗೆ ಮದುವೆಯಾಗಿಲ್ಲ. ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ ಎಂದು ಫ್ಯಾನ್ಸ್‌ ಅಂದುಕೊಂಡಿದ್ದರು. ಇದೀಗ ವಿನೋದ್ ರಾಜ್‌ಗೆ ಮದುವೆಯಾಗಿ ಮಗನಿರುವ ಬಗ್ಗೆ ‘ಡಿಎನ್‌ಎ’ ಖ್ಯಾತಿಯ ನಿರ್ದೇಶಕ ಪ್ರಕಾಶ್ ಮೆಹು (Director Prakash Mehu) ಸೋಷಿಯಲ್ ಮೀಡಿಯಾದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

    ಹಿರಿಯ ನಟಿ ಲೀಲಾವತಿ (Leelavathi) ಮತ್ತು ಅವರ ಪುತ್ರ ವಿನೋದ್‌ರಾಜ್‌ಗೆ ಸಂಬಂಧಿಸಿದಂತೆ ಸ್ಫೋಟಕ ಸುದ್ದಿಯೊಂದನ್ನು ನಿರ್ದೇಶಕ ಪ್ರಕಾಶ್ ರಾಜ್ ಮೆಹು ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ರಿವೀಲ್ ಮಾಡಿದ್ದಾರೆ. ಇದರ ಬಗ್ಗೆ ಅಸಲಿ ಸತ್ಯವನ್ನ ಸ್ವತಃ ನಟಿ ಲೀಲಾವತಿ- ಪುತ್ರ ವಿನೋದ್ ರಾಜ್ ಅವರೇ ಬಹಿರಂಗಪಡಿಸಬೇಕಿದೆ.

    ಸದ್ಯ ವಯೋಸಹಜ ಅನಾರೋಗ್ಯದಿಂದ (Health Issue) ಇರುವ ಲೀಲಾವತಿ ಅವರನ್ನು ಅವರ ಪುತ್ರ ವಿನೋದ್ ರಾಜ್ ನೋಡಿಕೊಳ್ಳುತ್ತಿದ್ದು, ಇದರ ಜೊತೆಗೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡು ನೆಲಮಂಗಲ ಹತ್ತಿರ ನೆಲೆಸಿದ್ದಾರೆ. ವಿನೋದ್ ರಾಜ್ ಅವರಿಗೆ ಈವರೆಗೆ ಮದುವೆಯಾಗಿಲ್ಲ ಎಂದೇ ಹೇಳಲಾಗಿತ್ತು. ಅವರೇಕೆ ಇನ್ನೂ ಮದುವೆಯಾಗಿಲ್ಲ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಇದೀಗ ನಿರ್ದೇಶಕ ಪ್ರಕಾಶ್ ರಾಜ್ ಮೆಹು ತಮ್ಮ Facebook ಪುಟದಲ್ಲಿ ವಿನೋದ್ ರಾಜ್‌ಗೆ ಮದುವೆಯಾಗಿ ಓರ್ವ ಮಗನಿದ್ದಾನೆ ಎಂಬ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

    ವಿನೋದ್ ರಾಜ್ ಅವರಿಗೆ ಮದುವೆಯಾಗಿ ಪುತ್ರನಿದ್ದು, ಚೆನ್ನೈನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ವಿನೋದ್ ಪತ್ನಿ ಮತ್ತು ಮಗ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಫೇಸ್‌ಬುಕ್‌ನಲ್ಲಿ ನಿರ್ದೇಶಕ ಪ್ರಕಾಶ್ ಮೆಹು ಪ್ರಕಟಿಸಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಬರೆದುಕೊಂಡಿದ್ದಾರೆ. ವಿನೋದ್ ಪುತ್ರನ ಹೆಸರು ಯುವರಾಜ್ ಎಂದು ಇದ್ದು, ಈ ಸಂಬಂಧ ಆತನ ಅಂಕಪಟ್ಟಿಯ ಫೋಟೋವನ್ನು ಕೂಡ ಹಾಕಿದ್ದಾರೆ. ಅದರಲ್ಲಿ ತಾಯಿ ಹೆಸರು ಅನು ಬಿ ಎಂದಿದೆ. ತಂದೆ/ಗಾರ್ಡಿಯನ್ ಜಾಗದಲ್ಲಿ ವಿನೋದ್ ರಾಜ್ ಎಂದಿದೆ.

    ಕಳೆದ ಎರಡು ದಿನಗಳಿಂದ ವಿನೋದ್ ರಾಜ್ ಮದುವೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಯಾಗುತ್ತುದ್ದರು. ಲೀಲಾವತಿ- ವಿನೋದ್ ರಾಜ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವಿಚಾರ ಅದೆಷ್ಟರ ಮಟ್ಟಿಗೆ ನಿಜಾ ಎಂಬುದನ್ನ ಕಾದುನೋಡಬೇಕಿದೆ.

  • ಲೀಲಾವತಿ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು

    ಲೀಲಾವತಿ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ

    ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ

    ನ್ನಡ ಚಿತ್ರರಂಗದ ಮಹಾನ್ ನಟಿ ಲೀಲಾವತಿ (Leelavathi) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿದ್ದಾರೆ.

    ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ನಿವಾಸಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ (Bama harish) ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದ್ದಾರೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್

    ಇನ್ನು ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆಯನ್ನ ಲೀಲಾವತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ಕುಮಾರ್ (Vinod rajkumar) ಅವರ ಬಳಿ ನಟಿಯ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ

    ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ

    ನೆಲಮಂಗಲ: ಗಡಿ ಭಾಗದ ಹಳ್ಳಿಗಳಿಗೆ ಮೂಲ ಸೌಕರ್ಯದ ಕೊರತೆ ಎಂದು ಮೂಗು ಮುರಿಯುವ ಕಾಲದಲ್ಲಿ ತಮ್ಮ ಸ್ವಂತ ಜಮೀನು ಮಾರಿ, ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಎಂ.ಲೀಲಾವತಿ ಮುಂದಾಗಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಸುಮಾರು 10 ವರ್ಷಗಳ ಹಿಂದೆ ಸಣ್ಣದೊಂದು ಆಸ್ಪತ್ರೆ ನಿರ್ಮಾಣ ಮಾಡಿದ್ದ ಡಾ.ಎಂ.ಲೀಲಾವತಿಯವರು, ಇಂದು ಮತ್ತೊಂದು ಪ್ರಾಥಮಿಕ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.ಇದನ್ನೂ ಓದಿ: ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್

    ತಾಯಿ ಲೀಲಾವತಿ ಅಮ್ಮನವರ ಆಸೆಯಂತೆ ಚೆನ್ನೈ ನಲ್ಲಿರುವ ತಮ್ಮ ಸ್ವಂತ ಜಮೀನನ್ನು ಮಾರಿದ ನಟ ವಿನೋದ್ ರಾಜ್ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಡಾ.ಲೀಲಾವತಿಯವರ ಆರೋಗ್ಯ ಕ್ಷೀಣವಾಗಿದ್ದು, ಅವರ ಅನುಪಸ್ಥಿತಿಯಲ್ಲಿ, ಮಗ ನಟ ವಿನೋದ್ ರಾಜ್ ಚಾಲನೆ ನೀಡಿದರು. ಇದನ್ನೂ ಓದಿ: ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್

    ಭೂಮಿ ಪೂಜೆಗೆ ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ಕೂಡ ಭಾಗಿಯಾಗಿ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಹಾಗೂ ಅವರ ಹೆಸರಿನ ಆಸ್ಪತ್ರೆಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನ ಒದಗಿಸುವ ಭರವಸೆ ನೀಡಿದರು. ಈ ವೇಳೆ ಟಿಎಚ್ಓ ಡಾ. ಹರೀಶ್, ಡಾ.ಮಂಜುಳ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ಕೃಷ್ಣಪ್ಪ, ಸದಸ್ಯ ಶ್ರೀನಿವಾಸ್, ರಾಮಕೃಷ್ಣಪ್ಪ, ಸಂತೋಷ ನಾಯಕ, ಗೋಪಾಲ್, ವೆಂಕಟೇಶ್ ಗ್ರಾಮದ ಜನರು ಉಪಸ್ಥಿತರಿದ್ದರು.

  • ನಟಿ ಲೀಲಾವತಿ ಮನೆಗೆ ಭೇಟಿ ಕೊಟ್ಟ ನಟಿಯರು

    ನಟಿ ಲೀಲಾವತಿ ಮನೆಗೆ ಭೇಟಿ ಕೊಟ್ಟ ನಟಿಯರು

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ಕಲಾವಿದೆ ಲೀಲಾವತಿ ಅವರ ಮನೆಗೆ ಸ್ಯಾಂಡಲ್‍ವುಡ್ ಸ್ಟಾರ್ ನಟಿಯರು ಭೇಟಿ ಕೊಟ್ಟಿದ್ದಾರೆ.

    ಮತ್ತೊಂದು ಅವಿಸ್ಮರಣೆಯ ದಿನ ಎಂದು ಬರೆದುಕೊಂಡು ಹಿರಿಯ ನಟಿ ಜೊತೆಗೆ ಕೆಲವು ಸಮಯ ಕಳೆದಿರುವ ಸುಂದರ ಕ್ಷಣಗಳನ್ನು ನಟಿ ಶ್ರುತಿ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಾದಕ ನೋಟದಿಂದ ನಿದ್ದೆಗೆಡಿಸಿದ ನಟಿ ಶುಭ್ರ ಅಯ್ಯಪ್ಪ

    ಕಳೆದ ಕೆಲವು ದಿನಗಳ ಹಿಂದೆ ನಟಿ ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್ ಲೀಲಾವತಿ ಅವರ ಮನೆಗೆ ಭೇಟಿಕೊಟ್ಟಿದ್ದರು. ಇದೀಗ ಮತ್ತೊಮ್ಮೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ಭಾರತಿ ವಿಷ್ಣು ವರ್ಧನ್, ಹೇಮಾ ಚೌಧರಿ, ಶ್ರುತಿ ಮೂವರು ಸೇರಿ ಹೋಗಿದ್ದಾರೆ ಪಾರ್ಟಿ ಮಾಡಿದ್ದಾರೆ.

     

    View this post on Instagram

     

    A post shared by Shruthi (@shruthi__krishnaa)

    ಹೇಮಾ ಚೌಧರಿ, ಲೀಲಾವತಿ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ಶ್ರುತಿ, ಲೀಲಾವತಿ ಅವರ ಮನೆಯಲ್ಲಿ ಬಿರಿಯಾನಿ ಮಾಡಿ, ಊಟವನ್ನು ಬಡಿಸಿದ್ದಾರೆ. ನಂತರ ಲೀಲಾವತಿ ಅವರು ಒಂದು ಹಾಡನ್ನು ಹಾಡಿದ್ದಾರೆ. ಕೊನೆಯಲ್ಲಿ ಎಲ್ಲರೂ ಒಟ್ಟಿಗೆ ಕುಳಿತು ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

  • ಲಸಿಕೆ ಪಡೆದು ಜನರಲ್ಲಿ ಜಾಗೃತಿ ಮೂಡಿಸಿದ ನಟಿ ಲೀಲಾವತಿ, ವಿನೋದ್ ರಾಜ್

    ಲಸಿಕೆ ಪಡೆದು ಜನರಲ್ಲಿ ಜಾಗೃತಿ ಮೂಡಿಸಿದ ನಟಿ ಲೀಲಾವತಿ, ವಿನೋದ್ ರಾಜ್

    ನೆಲಮಂಗಲ: ಇತ್ತೀಚೆಗಷ್ಟೇ ಮನೆಯ ಶೌಚಾಲಯದಲ್ಲಿ ಕಾಲು ಜಾರಿಬಿದ್ದು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದ, ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಎಂ ಲೀಲಾವತಿ,ಎರಡನೇ ಕೊರೊನಾ ಲಸಿಕೆ ಪಡೆದು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

    ಗುರುವಾರ ಡಾ.ಎಂ.ಲೀಲಾವತಿ, ನಟ ಪುತ್ರ ವಿನೋದ್ ರಾಜ್ ಜೊತೆಗೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಸರ್ಕಾರಿ ಆಸ್ಪತ್ರೆಯ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆದರು. ಮಹಾಮಾರಿ ಕೊರೊನಾ ಮೂರನೇ ಅಲೆ ಬರುವ ಬಗ್ಗೆ ಹೀಗಾಗಲೇ ತಜ್ಞರ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಎಲ್ಲಾ ಜನರು ಲಸಿಕೆ ಪಡೆಯಿರಿ ಯಾರು ಮೈಮರೆಯದಂತೆ ಲಸಿಕೆ ಪಡೆಯಿರಿ ಎಂದು ಹಿರಿಯ ನಟಿ ಜಾಗೃತಿ ಮೂಡಿಸಿದ್ದಾರೆ. ಇದನ್ನೂ ಓದಿ:ಕಾಲು ಜಾರಿ ಬಿದ್ದು ಹಿರಿಯ ನಟಿ ಲೀಲಾವತಿಗೆ ಗಾಯ

    ಜನರಲ್ಲಿ ಜಾಗೃತಿ ಮೂಡಿಸಿದ ಹಿರಿಯ ನಟಿ ಡಾ.ಲೀಲಾವತಿ, ಲಸಿಕೆಯಿಂದ ಮಹಾಮಾರಿ ಕೊರೊನಾ ದೂರವಿಡಿ ಎಂದಿದ್ದಾರೆ. ಅಲ್ಲದೇ ಲವಲವಿಕೆಯಿಂದ ಲಸಿಕೆ ಪಡೆದು ಜನರಲ್ಲಿ ಜಾಗೃತಿ ಮೂಡಿಸಿದ್ದಲ್ಲದೆ, ನಾಗರಿಕರಿಗೆ ಅರಿವು ಮೂಡಿಸಿದ್ದಾರೆ. ಇದನ್ನೂ ಓದಿ:ಉಗ್ರರಿಗೆ ತಕ್ಕ ಪಾಠ ಕಲಿಸಿ- ಕಣ್ಣೀರು ಹಾಕಿದ ಹಿರಿಯ ನಟಿ ಲೀಲಾವತಿ