Tag: leelavathi

  • ಹಿರಿಯ ನಟಿ ಡಾ. ಲೀಲಾವತಿ ಆರೋಗ್ಯದಲ್ಲಿ ಚೇತರಿಕೆ

    ಹಿರಿಯ ನಟಿ ಡಾ. ಲೀಲಾವತಿ ಆರೋಗ್ಯದಲ್ಲಿ ಚೇತರಿಕೆ

    ನೆಲಮಂಗಲ: ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ. ಲೀಲಾವತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

    ಕನ್ನಡ ಚಿತ್ರೋದ್ಯಮದ ಹಿರಿಯ ಜೀವ 60 – 70 ರ ದಶಕದಲ್ಲಿ ಕನ್ನಡ ಸಿಮಾದ ಬೆಳ್ಳಿತೆರೆಯಲ್ಲಿ ಮಿಂಚಿದ ತಾರೆ ಡಾ.ಲೀಲಾವತಿ. ನೆನ್ನೆ ತಮ್ಮ ತೋಟದ ಮನೆಯ ಸ್ನಾನದ ಗೃಹದಲ್ಲಿ ಜಾರಿಬಿದ್ದು ಪೆಟ್ಟು ಮಾಡಿಕೊಂಡಿದ್ದರು. 83 ವಯಸ್ಸಿನ ಹಿರಿಯ ಜೀವ ಪೆಟ್ಟಿನಿಂದ ಇಂದು ಸ್ವಲ್ಪ ಚೇತರಿಕೆ ಪಡೆದಿದ್ದಾರೆ. ಸ್ಯಾಂಡಲ್‍ವುಡ್ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಭೇಟಿಯಾಗಿರುವ ಕೆಲವು ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಲೀಲಾವತಿ ಅಮ್ಮ, ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಕಲಾವಿದೆ ಇವರು. ನೂರಾರು ಸಿನಿಮಾಗಳಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳ ಮೂಲಕ ನಮ್ಮೆಲ್ಲರನ್ನು ರಂಜಿಸಿದ್ದಾರೆ. ಲೀಲಾವತಿ ಎನ್ನುವುದು ದುರ್ಗಾದೇವಿಯ ಮತ್ತೊಂದು ಹೆಸರು ಕನ್ನಡದಲ್ಲಿ ಲೀಲಾ ಎನ್ನುವ ಪದಕ್ಕೆ ಮತ್ತೊಂದು ಅರ್ಥ ವಿನೋದ. ಲೀಲಾವತಿ ಅಮ್ಮ ದುರ್ಗೆಯ ಅವತಾರವಾದರು, ಜೀವನದ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಇಂದು ಎಲ್ಲಾ ಹೆಣ್ಣುಮಕ್ಕಳಿಗೆ ಮಾದರಿಯಾಗಿ ನಿಂತಿದ್ದಾರೆ. ಅವರು ವಾಸವಿರುವ ಊರಿನಲ್ಲಿ ಬಡಜನರಿಗಾಗಿ ಆಸ್ಪತ್ರೆ ಕಟ್ಟಿಸಿದ್ದಾರೆ. ಹಸು ಕರುಗಳಿಗೆ ನೀರಿನ ಟ್ಯಾಂಕ್ ಕಟ್ಟಿಸಿ ಅವುಗಳಿಗೆ ಮೇವು ನೀಡಿದ್ದಾರೆ. ಎಷ್ಟೋ ಜನರಿಗೆ ಊಟ ನೀಡಿ ಸಹಾಯ ಮಾಡುತ್ತಾ ಇರುವ ಇವರನ್ನು ಅನ್ನಪೂರ್ಣೇಶ್ವರಿಯ ಸ್ವರೂಪ ಎಂದು ಕರೆಯುವುದೋ ಅಥವಾ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದೆಲ್ಲವನ್ನು ಭೂಮಿ ತಾಯಿಯ ಹಾಗೆ ತನ್ನಲ್ಲಿಯೇ ಹೊತ್ತು, ತಾಳ್ಮೆಯಿಂದ ಎಲ್ಲವನ್ನು ಸಹಿಸಿ ಲೀಲಾಜಾಲವಾಗಿ ನಿಭಾಯಿಸಿರವ ಇವರನ್ನು ಭೂಮಿ ತಾಯಿಯ ಸ್ವರೂಪ ಎಂದು ಕರೆಯುವುದೋ ಎಂದು ಬರೆದಿದ್ದಾರೆ.

     

    View this post on Instagram

     

    A post shared by Sudharani (@sudharanigovardhan)

    ಇಂತಹ ವ್ಯಕ್ತಿತ್ವ ಹೊಂದಿರುವ ಲೀಲಾವತಿ ಅಮ್ಮನವರ ಜೊತೆ ಬಾಲನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶ ನನಗೆ ಸಿಕ್ಕಿತ್ತು, ನಾಯಕಿಯಾದ ಮೇಲು ಲೀಲಾವತಿ ಅಮ್ಮನವರ ಜೊತೆ ಸುಮಾರು ಸಿನಿಮಾಗಳಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟ. ಇಲ್ಲಿರುವ ಎರಡು ಫೋಟೋಗಳಲ್ಲಿ ಮೊದಲನೆಯದು ನಾನು ಬಾಲನಟಿಯಾಗಿ ನಟಿಸಿದ ಮೊದಲ ಸಿನಿಮಾ “ಕಿಲಾಡಿ ಕಿಟ್ಟು” ಚಿತ್ರೀಕರಣದ ಸಮಯದ ಫೋಟೋ ಮತ್ತೊಂದು ಇಂದು ಲೀಲಾವತಿ ಅಮ್ಮನವರನ್ನು ಭೇಟಿ ಮಾಡಿದ ಸಂದರ್ಭದ ಫೋಟೋ. ವರ್ಷಗಳು ಉರುಳಿವೆ ಹೊರತು ನಮ್ಮ ನಡುವೆ ಇರುವ ಬಾಂಧವ್ಯವಲ್ಲ ಎಂದು ಬರೆದುಕೊಂಡು ಕೆಲವು ಫೋಟೋವನ್ನು ಹಂಚಿಕೊಂಡಿದ್ದಾರೆ.

    ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಮಗ ನಟ ವಿನೋದ್ ರಾಜ್ ಜೊತೆ ವಾಸವಿರುವ ಲೀಲಾವತಿ ಅವರನ್ನ ಇಂದು, ನೆಲಮಂಗಲ ಆರ್.ಟಿ.ಓ ಹಿರಿಯ ಅಧಿಕಾರಿ ಡಾ.ಧನ್ವಂತರಿ ಎಸ್ ಒಡೆಯರ್ ಹಾಗೂ ಸಿಬ್ಬಂದಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ನೆನ್ನೆ ನೆಲಮಂಗಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮನೆಯಲ್ಲಿ ಸಲ್ಪ ಸಮಯದ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದರು. ಹೀಗಾಗಿ ಅಭಿಮಾನಿಯಾಗಿರುವ ನೆಲಮಂಗಲ ಆರ್ ಟಿ ಓ ಅಧಿಕಾರಿ ಒಡೆಯರ್ ಲೀಲಾವತಿ ಅವರ ಆರೋಗ್ಯದಿಂದ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ.

  • ಕೋವಿಡ್ ಲಸಿಕೆ ಪಡೆದ ಹಿರಿಯ ನಟಿ ಡಾ.ಲೀಲಾವತಿ, ಪುತ್ರ ವಿನೋದ್ ರಾಜ್

    ಕೋವಿಡ್ ಲಸಿಕೆ ಪಡೆದ ಹಿರಿಯ ನಟಿ ಡಾ.ಲೀಲಾವತಿ, ಪುತ್ರ ವಿನೋದ್ ರಾಜ್

    ಬೆಂಗಳೂರು: ಹಿರಿಯ ನಟಿ ಡಾ.ಲೀಲಾವತಿ ಮತ್ತು ಪುತ್ರ ನಟ ವಿನೋದ್ ರಾಜ್ ಇಂದು ಕೋವಿಡ್ ಲಸಿಕೆಯನ್ನ ಪಡೆದರು.

    ಬೆಂಗಳೂರು ಹೊರವಲಯ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು. ಬಳಿಕ ಎಲ್ಲರೂ ಕಡ್ಡಾಯ ಕೊರೊನಾ ಲಸಿಕೆಯನ್ನ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

    ಯಾವ ಅಲೆಯಾದರೂ ಬರಲಿ ನಮ್ಮ ಎಚ್ಚರಿಕೆಯಲ್ಲಿರಬೇಕು. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ, ಲಸಿಕೆಗೂ ಒತ್ತು ನೀಡಿ ಎಂದರು. ಈ ವೇಳೆ ಆರೋಗ್ಯ ನಿರೀಕ್ಷಕ ನಾಗೇಶ್ ಇದ್ದರು.

  • ಸಂಕಷ್ಟದಲ್ಲಿರೋ ಕಲಾವಿದರ ಕುಟುಂಬಕ್ಕೆ ನಟ ಉಪೇಂದ್ರ ನೆರವು

    ಸಂಕಷ್ಟದಲ್ಲಿರೋ ಕಲಾವಿದರ ಕುಟುಂಬಕ್ಕೆ ನಟ ಉಪೇಂದ್ರ ನೆರವು

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದ ಇಡೀ ದೇಶ ತತ್ತರಿಸಿ ಹೋಗಿದೆ. ಜನ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇತ್ತ ಲಾಕ್ ಡೌನ್ ಪರಿಣಾಮ ಚಿತ್ರೀಕರಣ ಕೂಡ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಚಿತ್ರರಂಗದ ಕಾರ್ಮಿಕರು ಹಾಗೂ ಕಲಾವಿದರ ನೆರವಿಗೆ ನಟ ಉಪೇಂದ್ರ ಮುಂದಾಗಿದ್ದಾರೆ.

    ಈ ಸಂಬಂಧ ಸ್ವತಃ ಉಪೇಂದ್ರ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ. ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

    ಟ್ವೀಟ್‍ನಲ್ಲೇನಿದೆ..?
    ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ ಎಂದು ಬರೆದುಕೊಂಡಿದ್ದಾರೆ.

    ನಿನ್ನಯಷ್ಟೇ ನಟಿ ಲೀಲಾವತಿ ಹಾಗೂ ಅವರ ಮಗ ನಟ ವಿನೋದ್ ಕುಮಾರ್ ಕೂಡ ನೂರಾರು ಕುಟುಂಬಗಳಿಗೆ ನೆರವಾಗಿದ್ದಾರೆ. ಬೆಂಗಳೂರಿನ ಸುಮ್ಮನಹಳ್ಳಿಯ ಬಳಿ ಕಲಾವಿದರ ಕುಟುಂಬಕ್ಕೆ ದಿನಸಿ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸಿನಿಮಾದ ಹಿರಿಯ ಕಲಾವಿದರ ನೂರಾರು ಕುಟುಂಬಕ್ಕೆ 14 ದಿನಕ್ಕೆ ಆಗುವಂತೆ ದಿನಸಿ ಹಾಗೂ ತರಕಾರಿ ವಿತರಣೆ ಮಾಡಿದ್ದಾರೆ.

    ಇಳಿ ವಯಸ್ಸಿನಲ್ಲಿ ಸಿನಿಮಾ ಕಲಾವಿದರ ನೆರವಿಗೆ ನಿಂತ ನಟಿ ಲೀಲಾವತಿ ಮಗ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ಸ್ವತಃ ಬೆಳೆದ ತರಕಾರಿ ಹಣ್ಣುಗಳ ವಿತರಣೆ ಮಾಡಿದ್ದಾರೆ. ಜೀವನದುದ್ದಕ್ಕೂ ನೆರವಿನ ಸಹಾಯವನ್ನು ತಾಯಿ-ಮಗ ಮಾಡುತ್ತಿದ್ದಾರೆ.

  • ಸ್ಯಾಂಡಲ್‍ವುಡ್ ಕಿರಿಯ ಕಲಾವಿದರಿಗೆ ಮಿಡಿದ ಹಿರಿ ಜೀವ- ಅಮ್ಮನಿಗೆ ಮಗ ಸಾಥ್

    ಸ್ಯಾಂಡಲ್‍ವುಡ್ ಕಿರಿಯ ಕಲಾವಿದರಿಗೆ ಮಿಡಿದ ಹಿರಿ ಜೀವ- ಅಮ್ಮನಿಗೆ ಮಗ ಸಾಥ್

    ನೆಲಮಂಗಲ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಾಲೇ ಅನೇಕ ಕೂಲಿ ಕಾರ್ಮಿಕರು ನಿರಾಶ್ರಿತರು ಊಟವಿಲ್ಲದೆ ಅಸಹಾಯಕರಾಗಿದ್ದಾರೆ. ಅಲ್ಲದೆ ಅನೇಕ ವರ್ಗದ ಕೆಲಸಗಾರರು ಕೂಡ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿದ್ದಂತು ನಿಜ. ಈ ಕೊರೊನಾ ಎಫೆಕ್ಟ್ ನಮ್ಮ ಸ್ಯಾಂಡಲ್‍ವುಡ್ ಮಂದಿಗೂ ತಟ್ಟದೇ ಬಿಟ್ಟಿಲ್ಲ.

    ಕನ್ನಡ ಚಿತ್ರರಂಗದ ಕಿರಿಯ ಕಲಾವಿದರು ಕೂಡ ಕೊರೊನಾದಿಂದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಂತವರಿಗೆ ಕನ್ನಡ ಚಿತ್ರರಂಗದ ಹಿರಿಯ ಜೀವ ನಟಿ ಡಾ.ಲೀಲಾಲವತಿ ಹಾಗೂ ಪುತ್ರ ವಿನೋದ್ ರಾಜ್ ಸಹಾಯ ಹಸ್ತವನ್ನು ಚಾಚಿದ್ದಾರೆ.

    ಇಂದು ಬೆಂಗಳೂರಿನ ಸುಮ್ಮನಹಳ್ಳಿಯ ಜೂನಿಯರ್ ಕಲಾವಿದ ಸಂಘಕ್ಕೆ ದಿನಿನಿತ್ಯ ಬಳಕೆ ಮಾಡುವ ದಿನಸಿ ಪದಾರ್ಥಗಳನ್ನು ಕೊಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಮ್ಮ ತೋಟದಲ್ಲಿ ಬೆಳೆದ ಪದಾರ್ಥಗಳ ಜೊತೆಗೆ ನೆಲಮಂಗಲ ದಿನಸಿ ಅಂಗಡಿಯಲ್ಲಿ ಸಾಮಗ್ರಿಗಳನ್ನು ತೆಗೆದುಕೊಂಡ ವಿನೋದ್ ರಾಜ್, ನೂರಾರು ಜನರಿಗೆ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ.

    ನಾಲ್ಕು ದಿನದ ಹಿಂದೆ ನಟ ವಿನೋದ್ ರಾಜ್ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಗ್ರಾಮದಲ್ಲಿ ಕೊರೋನ ವೈರಸ್ ಭೀತಿಯ ಪರಿಣಾಮ ಸ್ವತಃ ಯಾರಿಂದಲೂ ಸಹಾಯ ಪಡೆಯದೆ ತಾವೇ ಗ್ರಾಮದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿ ಮಾದರಿಯಾಗಿದ್ದರು. ಇಂದು ಅಮ್ಮ ಮಗ ಇಬ್ಬರು ಚಿತ್ರರಂಗದ ಕಿರಿಯ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಿ ತಮ್ಮ ಹೃದಯ ಶ್ರೀಮಂತಿಕೆಗೆ ಪಾತ್ರರಾಗಿದ್ದಾರೆ. ಕಿರಿಯ ಕಲಾವಿದರು ಕೂಡ ಇವರ ಕಾರ್ಯಕ್ಕೆ ಚಿರರುಣಿಯಾಗಿ ಸಂತಸವನ್ನ ವ್ಯಕ್ತಪಡಿಸಿದ್ದಾರೆ.

  • ಅತ್ಯಾಚಾರಿಗಳ ಎನ್‍ಕೌಂಟರ್ – ಪಶುವೈದ್ಯೆಯನ್ನು ನೆನೆದು ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ

    ಅತ್ಯಾಚಾರಿಗಳ ಎನ್‍ಕೌಂಟರ್ – ಪಶುವೈದ್ಯೆಯನ್ನು ನೆನೆದು ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ

    ಬೆಂಗಳೂರು: ಹಿರಿಯ ನಟಿ ಲೀಲಾವತಿ ಹಾಗೂ ಪುತ್ರ ನಟ ವಿನೋದ್ ರಾಜ್ ಅವರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರಿಗೆ ಬಿಗ್ ಸೆಲ್ಯೂಟ್ ಹೊಡೆಯುವ ಮೂಲಕ ಆನಂದಬಾಷ್ಪ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲದ ಮನೆಯಲ್ಲಿ ಮಾತನಾಡುವಾಗ ಲೀಲಾವತಿ ಅವರು ಪಶುವೈದ್ಯೆ ಮೇಲಾದ ಅತ್ಯಾಚಾರಕ್ಕೆ ಕಣ್ಣೀರು ಹಾಕಿದ್ದಾರೆ. ಅಲ್ಲದೆ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಒಂದು ವೇಳೆ ಪೊಲೀಸರು ಅವರನ್ನು ಎನ್‍ಕೌಂಟರ್ ಮಾಡದಿದ್ದರೆ, ಆರೋಪಿಗಳು ಭಯ ಪಡುತ್ತಿರಲಿಲ್ಲ. ಕಾಮುಕರಿಗೆ ಸರಿಯಾದ ಪಾಠವನ್ನು ಪೊಲೀಸರು ಕಲಿಸಿದ್ದಾರೆ. ದೇಶದಲ್ಲಿ ಇಂತಹವರಿಗೆ ಇನ್ನಷ್ಟು ಕಠಿಣ ಕಾನೂನು ಜಾರಿಗೆ ಬರಬೇಕು. ಅಲ್ಲದೆ ಸೂಕ್ತವಾದ ಶಿಕ್ಷೆಯಾಗಬೇಕು ಎಂದು ಅತ್ಯಾಚಾರಿಗಳಿಗೆ ಪೊಲೀಸರು ಕಲಿಸಿದ ಪಾಠದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಿಶಾ ಆರೋಪಿಗಳ ಎನ್‍ಕೌಂಟರ್- ಪೊಲೀಸರ ದಿಟ್ಟ ಕ್ರಮಕ್ಕೆ ಅದಿತಿ ಸೆಲ್ಯೂಟ್

    ಇದೇ ವೇಳೆ ಈ ಪ್ರಕರಣದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ ವೈದ್ಯೆಯ ಆತ್ಮಕ್ಕೆ ದೇವರು ಶಾಂತಿ ಕೊಡಲಿ. ಅವರ ಪೋಷಕರಿಗೆ ದೇವರು ದುಃಖ ಬರಿಸುವ ಶಕ್ತಿ ನೀಡಲಿ ಎಂದು ಪಶುವೈದ್ಯೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ನಟ ವಿನೊದ್ ರಾಜ್ ಅವರು ಕೂಡ ಎನ್‍ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿ, ಅತ್ಯಾಚಾರ ಪ್ರಕರಣದಿಂದ ದುಃಖವಾಗಿದೆ. ಇಂತಹ ಪ್ರಕರಣಗಳು ನಡೆಯಬಾರದಾಗಿತ್ತು. ಪೊಲೀಸರು ಸರಿಯಾದ ಪ್ರತೀಕಾರ ಮಾಡಿದ್ದಾರೆ. ಅಂತಹ ಪೊಲೀಸರಿಗೆ ನನ್ನದೊಂದು ಸೆಲ್ಯೂಟ್. ಇಂತಹ ಪ್ರಕರಣಗಳು ಜರುಗದಂತೆ ಪೊಲೀಸರ ಬೀಟ್ ಹೆಚ್ಚಾಗಬೇಕು. ಪೊಲೀಸರಿಗೆ ಎಲ್ಲಾ ರೀತಿಯ ಅಧಿಕಾರ ಇದೆ. ಹೀಗಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಪಶುವೈದ್ಯೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದರು.

  • ನಾಳೆ ಬಿಡುಗಡೆಗೊಳ್ಳಲಿದೆ ನಟಭಯಂಕರನ ಮತ್ತೊಂದು ಹಾಡು!

    ನಾಳೆ ಬಿಡುಗಡೆಗೊಳ್ಳಲಿದೆ ನಟಭಯಂಕರನ ಮತ್ತೊಂದು ಹಾಡು!

    ಬೆಂಗಳೂರು: ಪ್ರಥಮ್ ನಿರ್ದೇಶನ ಮಾಡೋದರ ಜೊತೆಗೆ ನಾಯಕನಾಗಿಯೂ ನಟಿಸಿರುವ ಚಿತ್ರ ‘ನಟ ಭಯಂಕರ’. ನಿರ್ದೇಶನವನ್ನೇ ಪ್ರಧಾನ ಆಸಕ್ತಿಯಾಗಿಸಿಕೊಂಡಿದ್ದರೂ ನಟನೆಯನ್ನು ನೆಚ್ಚಿಕೊಂಡಿದ್ದ ಪ್ರಥಮ್ ಈ ಸಿನಿಮಾ ಮೂಲಕ ತಮ್ಮ ಪ್ರತಿಭೆಯನ್ನು ಸಾಣೆ ಹಿಡಿಯಲು ಮುಂದಾಗಿದ್ದಾರೆ. ಈ ಸಿನಿಮಾ ಆರಂಭವಾದಾಗಿಂದ ಚಿತ್ರಮಂದಿರದ ಹೊಸ್ತಿಲು ತಲುಪಿಕೊಳ್ಳೋವರೆಗೆ ಪ್ರತೀ ಹೆಜ್ಜೆಯೂ ಹೊಸತನದಿಂದ ಕೂಡಿರಬೇಕೆಂಬ ಇಂಗಿತ ಅವರಲ್ಲಿದೆ. ಆದ್ದರಿಂದಲೇ ಹಂತ ಹಂತವಾಗಿ ನಟ ಭಯಂಕರ ಸದ್ದು ಮಾಡುತ್ತಾ ಬಂದಿದ್ದಾನೆ.

    ಇತ್ತೀಚೆಗಷ್ಟೇ ರಿಯಲ್ ಸ್ಟಾರ್ ಉಪೇಂದ್ರ ಹಾಡಿದ್ದ ಟೈಟಲ್ ಟ್ಯ್ರಾಕ್ ಲಾಂಚ್ ಆಗಿತ್ತು. ಅದು ಟ್ರೆಂಡ್ ಸೆಟ್ ಮಾಡಿರುವಾಗಲೇ ಪ್ರಥಮ್ ಮತ್ತೊಂದು ಹಾಡು ಬಿಡುಗಡೆಗೊಳಿಸಲು ತಯಾರಾಗಿದ್ದಾರೆ. ನಾಳೆ ನಟಭಯಂಕರ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಪ್ರತಿಯೊಂದನ್ನೂ ಕಣ್ಣಲ್ಲಿ ಕಣ್ಣಿಟ್ಟು ಮುಂದಡಿ ಇಡುತ್ತಿರೋ ಪ್ರಥಮ್ ಈ ಹಾಡನ್ನೂ ಕೂಡಾ ಟ್ರೆಂಡ್ ಸೆಟ್ ಮಾಡುವಂತೆಯೇ ರೂಪಿಸಿದ್ದಾರಂತೆ. ಆದರೆ ಅದರ ರೂಪುರೇಷೆಗಳನ್ನು ಮಾತ್ರ ಗೌಪ್ಯವಾಗಿಟ್ಟಿದ್ದಾರೆ. ಅದೆಲ್ಲವೂ ನಾಳೆ ಎಲ್ಲರೆದುರು ಅನಾವರಣಗೊಳ್ಳಲಿದೆ.

    ಪ್ರಥಮ್ ಪಾಲಿಗೆ ಇದು ನಾಯಕನಾಗಿ ಅನ್ನೋದಕ್ಕಿಂತಲೂ ನಿರ್ದೇಶಕನಾಗಿ ಅತ್ಯಂತ ಮಹತ್ವದ ಚಿತ್ರ. ಈ ಕಾರಣದಿಂದಲೇ ಎಲ್ಲ ನೀಲ ನಕ್ಷೆಯನ್ನು ರೆಡಿ ಮಾಡಿಕೊಂಡೇ ಅವರು ನಟಭಯಂಕರನ ಸಾರಥ್ಯ ವಹಿಸಿಕೊಂಡಿದ್ದರು. ಎಲ್.ಕೆ.ಅಡ್ವಾಣಿ ಅವರಿಂದ ಕ್ಲಾಪ್ ಮಾಡಿಸೋ ಮೂಲಕ ನಟಭಯಂಕರನಿಗೆ ಚಾಲನೆ ಕೊಟ್ಟಿದ್ದ ಪ್ರಥಮ್ ಈ ವರೆಗೂ ತಿರುಗಿ ನೋಡಿಯೇ ಇಲ್ಲ. ಅಷ್ಟಕ್ಕೂ ಈ ಸಿನಿಮಾ ಸುಖಾ ಸುಮ್ಮನೆ ಸದ್ದು ಮಾಡುತ್ತಿಲ್ಲ. ಇದರಲ್ಲಿ ಮಹತ್ವದ್ದೇನೋ ಕಂಟೆಂಟ್ ಇದೆ ಎಂಬ ಸುಳಿವು ಗಾಂಧಿನಗರದ ಗುಂಟ ಪಸರಿಸಿಕೊಂಡಿದೆ. ಆದ್ದರಿಂದಲೇ ಸ್ಟಾರ್ ನಟರೆಲ್ಲರೂ ಪ್ರಥಮ್‍ರನ್ನು ಬೆನ್ತಟ್ಟಿ ಪ್ರೋತ್ಸಾಹಿಸುತ್ತಿದ್ದಾರೆ.

    ರಿಯಲ್ ಸ್ಟಾರ್ ಉಪೇಂದ್ರ ಟೈಟಲ್ ಟ್ರ್ಯಾಕ್ ಹಾಡಿ ಸಾಥ್ ಕೊಡುವ ಮೂಲಕ ನಟ ಭಯಂಕರನಿಗೆ ಮತ್ತಷ್ಟು ಮೈಲೇಜು ಸಿಕ್ಕಿತ್ತು. ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಕೂಡಾ ಪ್ರಥಮ್ ಕಸುಬುದಾರಿಕೆ ಕಂಡು ಬೆರಗಾಗಿದ್ದಾರೆ. ಇನ್ನು ಹೆಚ್ಚಾಗಿ ಯಾವ ಸಿನಿಮಾ ಸೆಟ್‍ಗಳಿಗೂ ಭೇಟಿ ನೀಡದ ಗೋಲ್ಡನ್ ಸ್ಟಾರ್ ಗಣೇಶ್ ನಟ ಭಯಂಕರ ಸೆಟ್ಟಿಗಾಗಮಿಸಿ ಎಲ್ಲ ಕೆಲಸ ಕಾರ್ಯಗಳ ಮಾಹಿತಿ ಪಡೆದುಕೊಂಡಿದ್ದರು. ಪ್ರಥಮ್‍ಗೆ ಬೆನ್ತಟ್ಟಿ ಪ್ರೋತ್ಸಾಹಿಸುತ್ತಲೇ ಸಿನಿಮಾ ಮೂಡಿ ಬಂದಿರೋ ರೀತಿಯನ್ನು ಮೆಚ್ಚಿಕೊಂಡಿದ್ದರು. ಒಟ್ಟಾರೆಯಾಗಿ ಚಿತ್ರಂಗವೇ ನಟಭಯಂಕರನ ಬೆನ್ನಿಗೆ ನಿಂತಿದೆ. ನಾಳೆ ಬಿಡುಗಡೆಯಾಗಲಿರೋ ಹಾಡು ಈ ಸಿನಿಮಾದ ಕ್ರೇಜ್ ಅನ್ನು ಮತ್ತಷ್ಟು ಮಿರುಗಿಸಲಿದೆ.

  • ಸಂತ್ರಸ್ತರಿಗೆ ಲೀಲಾವತಿ, ವಿನೋದ್ ರಾಜ್ ನೆರವು – ಜಾನುವಾರುಗಳಿಗೆ 1 ಲೋಡ್ ಮೇವು ರವಾನೆ

    ಸಂತ್ರಸ್ತರಿಗೆ ಲೀಲಾವತಿ, ವಿನೋದ್ ರಾಜ್ ನೆರವು – ಜಾನುವಾರುಗಳಿಗೆ 1 ಲೋಡ್ ಮೇವು ರವಾನೆ

    ಬೆಂಗಳೂರು: ರಾಜ್ಯದಲ್ಲಿ ಉಂಟಾದ ಪ್ರವಾಹದ ಸಂತ್ರಸ್ತರಿಗೆ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಹಲವು ಕಡೆಗಳಿಂದ ನೆರವಿನ ಮಹಾಪೂರವೇ ಹರಿದುಬರುತ್ತಿದೆ. ಈ ಮಧ್ಯೆ ಸ್ಯಾಂಡಲ್‍ವುಡ್ ಹಿರಿಯ ನಟಿ ಡಾ. ಲೀಲಾವತಿ ಹಾಗೂ ಪುತ್ರ ವಿನೋದ್ ರಾಜ್  ಕೂಡ  ಸ್ಪಂದಿಸಿದ್ದು, ತಾವೇ ಸ್ವತಃ ಮುಸುಕಿನ ಜೋಳದ ಮೇವನ್ನು ಖರೀದಿಸಿ ಜಾನುವಾರುಗಳಿಗೆ ಕಳುಹಿಸಿಕೊಟ್ಟಿದ್ದಾರೆ.

    ಲೀಲಾವತಿ ಅವರು ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಾವು ನೆಲೆಸಿರುವ ಸೋಲದೇವನಹಳ್ಳಿ ಗ್ರಾಮದ ಬಳಿಯ ರೈತರಿಂದ ಮೇವು ಖರೀದಿ ಮಾಡಿದ್ದಾರೆ. ಈ ಮೂಲಕ ಪ್ರವಾಹ ಪೀಡಿತ ಜನ ಹಾಗೂ ಮೂಕ ಪ್ರಾಣಿಗಳ ಸಹಾಯಕ್ಕೆ  ಅವರ ಕುಟುಂಬ ಮುಂದಾಗಿದ್ದು, ಶ್ಲಾಘನೀಯವಾಗಿದೆ.

    ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೋವಿಗೆ ಸ್ಪಂದನೆ ಮಾಡಿರುವ ಲೀಲಾವತಿ, ಪ್ರಾಣಿಗಳ ಮೂಕರೋಧನೆ ನೋಡಲಾರದೇ, ಜಾನುವಾರುಗಳಿಗೆ ಒಂದು ಲೋಡ್ ಮುಸುಕಿನ ಜೋಳದ ಮೇವು ಸ್ವತಃ ಲಾರಿಗೆ ತುಂಬುವ ಮೂಲಕ ನೆರವಾಗಿದ್ದಾರೆ. ಅಮ್ಮನಿಗೆ ಮಗ ವಿನೋದ್ ರಾಜ್ ಅವರು ಕೂಡ ಸಾಥ್ ನೀಡಿದ್ದಾರೆ. ಸ್ವತಃ ಲೀಲಾವತಿ ಕುಟುಂಬ ಜೋಳವನ್ನು ಕೊಂಡು ಕಟಾವು ಮಾಡಿಸಿ ರವಾನಿಸಿದ್ದಾರೆ. ಪ್ರಾಣಿ ಪ್ರಿಯರಾಗಿರುವ ಹಿರಿಯ ನಟಿ ಡಾ.ಲೀಲಾವತಿರ ನೆರವು ಇತರಿರಿಗೂ ಮಾದರಿಯಾಗಿದೆ.

    ಈ ಬಗ್ಗೆ ಮಾತನಾಡಿದ ಲೀಲಾವತಿ ಅವರು, ನನ್ನ ಮನಸ್ಸಿನ ನೋವು ತಡೆಯಲಾರದೇ ಬೆಳಗ್ಗೆ 5 ಗಂಟೆಗೆ ಎದ್ದು ಬಂದು ಜನರನ್ನು ಕರೆದುಕೊಂಡು ಬಂದು ಜೋಳದ ಮೇವು ಖರೀದಿ ಮಾಡಿದ್ದೇನೆ. ನಾನು ಕೃಷಿಯಲ್ಲಿದ್ದ ಕಾರಣ ಪ್ರಾಣಿಗಳ ಕಷ್ಟ ಏನು ಎಂದು ನಮಗೆ ಗೊತ್ತಿದೆ. ಹೊಳೆಯಲ್ಲಿ ಮೃತಪಟ್ಟ ಪ್ರಾಣಿಯನ್ನು ನೋಡಿ ಎಲ್ಲರೂ ಸಹಾಯ ಮಾಡಬೇಕು ಎಂಬುದು ನನ್ನ ಆಸೆ. ಎಲ್ಲರೂ ಮನಸ್ಸು ಮಾಡಿ ಪ್ರಾಣಿಗಳ ಮೇಲೆಯೂ ಕನಿಕರ ತೋರಿಸಿ. ನಾನು ತೋರಿಕೆಗಾಗಿ ಇದನ್ನು ಮಾಡಿಲ್ಲ, ಮನಸ್ಸಿನಲ್ಲಿ ನೋವಾಗಿ ಈ ಕೆಲಸ ಮಾಡಿದ್ದೇನೆ. ಬೆಳಗ್ಗೆಯಿಂದ ಕಾದು ಕುಳಿತು ನಾನು ಈ ಕೆಲಸ ಮಾಡಿಸಿದ್ದೇನೆ ಎಂದು ಲೀಲಾವತಿ ಅವರು ಕಣ್ಣೀರು ಹಾಕಿದ್ದಾರೆ.

    ಬಳಿಕ ಮಾತನಾಡಿದ ವಿನೋದ್ ರಾಜ್ ಅವರು, ಮಾಧ್ಯಮದವರು ಒಳ್ಳೆದು, ಕೆಟ್ಟದ್ದು, ಎಲ್ಲದ್ದಕ್ಕೂ ನಿಂತು ಅವಮಾನ ಸಹಿಸಿಕೊಂಡು ಕೆಲಸ ಮಾಡುತ್ತಾರೆ. ಮಾಧ್ಯಮಕ್ಕೆ ನಾನು ಅಭಾರಿಯಾಗಿದ್ದೇನೆ. ಏಕೆಂದರೆ ಸರ್ಕಾರಕ್ಕೂ ಮೊದಲು ನಾವು ಇದ್ದೇವೆ ಎಂದು ಹೇಳಿ ಪ್ರಾಣ ಬೇಕಾದರೂ ಕೊಡುತ್ತಾರೆ. ಇಂತಹ ಮಾಧ್ಯಮದವರ ಬಗ್ಗೆ ನನಗೆ ಹೆಮ್ಮೆ ಇದೆ ಹಾಗೂ ಸಂತೋಷ ಕೂಡ ಇದೆ. ಪೊಲೀಸ್ ಅಧಿಕಾರಿ ಕೂಡ ಲಾರಿ ತೆಗೆದುಕೊಂಡು ಬಂದು ನಮಗೆ ಸಹಾಯ ಮಾಡಿದ್ದಾರೆ. ಈ ಸಾಮಾಜಿಕ ಕಳಕಳಿ ಪತ್ರಿ ಕನ್ನಡಿಗ ಹಾಗೂ ಭಾರತೀಯರಿಗೆ ಇರಬೇಕು ಎಂದು ಹೇಳಿದ್ದಾರೆ.

  • ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ – ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಜಿಲ್ಲಾ ವೈದ್ಯಾಧಿಕಾರಿ

    ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ – ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಜಿಲ್ಲಾ ವೈದ್ಯಾಧಿಕಾರಿ

    ಬೆಂಗಳೂರು: ಗ್ರಾಮೀಣ ಭಾಗದ ರೈತಾಪಿ ಹಾಗೂ ಬಡ ಜನರ ಅನುಕೂಲಕ್ಕಾಗಿ ಹಿರಿಯ ಚಿತ್ರನಟಿ ಡಾ. ಲೀಲಾವತಿ ನಿರ್ಮಾಣ ಮಾಡಿದ ಆಸ್ಪತ್ರೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿದ ಬಳಿಕ ಜಿಲ್ಲಾ ವೈದ್ಯಾಧಿಕಾರಿ ಎಚ್ಚೆತ್ತುಕೊಂಡಿದ್ದಾರೆ.

    ಡಾ. ಲೀಲಾವತಿ ಆಸ್ಪತ್ರೆಗೆ ವೈದ್ಯರ ಕೊರತೆಯಿಂದ ಬೀಗ ಹಾಕಲಾಗಿತ್ತು. ಈ ಬಗ್ಗೆ ನಟ ವಿನೋದ್ ರಾಜ್ ಜಿಲ್ಲಾ ವೈದ್ಯಾಧಿಕಾರಿ ಯೋಗೀಶ್ ಗೌಡಗೆ ದೂರು ನೀಡಿ, ವೈದ್ಯರ ನೇಮಕ ಮಾಡುವಂತೆ ಮನವಿ ಮಾಡಿಕೊಂಡರು. ಬಳಿಕ ಪಬ್ಲಿಕ್ ಟಿವಿ ವರದಿಗೆ ಜಿಲ್ಲಾ ವೈದ್ಯಾಧಿಕಾರಿ ಯೋಗೀಶ್ ಗೌಡ ಸ್ಪಂದಿಸಿ “ಆಸ್ಪತ್ರೆಗೆ ಕೂಡಲೇ ವೈದ್ಯರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಮತ್ತೆ ಈ ರೀತಿಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಹಿರಿಯ ನಟಿ ಡಾ. ಲೀಲಾವತಿ ನಿರ್ಮಾಣ ಮಾಡಿರೋ ಆಸ್ಪತ್ರೆಗೆ ಮತ್ತೆ ಸಂಕಷ್ಟ

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ 2009ರಲ್ಲಿ ಲೀಲಾವತಿಯವರು ತಮ್ಮ ಸ್ವಂತ ಜಮೀನಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದ್ದರು. ನಂತರ ಆಸ್ಪತ್ರೆಯನ್ನು ಸರ್ಕಾರದ ಸ್ವಾಧೀನಕ್ಕೆ ನೀಡಿ, ನೆಲಮಂಗಲ ಆಡಳಿತ ವೈಧ್ಯಾಧಿಕಾರಿ ಹೆಸರಿಗೆ ದಾಖಲಾತಿಗಳನ್ನು ವರ್ಗಾವಣೆ ಮಾಡಿದ್ದರು. ಆದರೆ ಆಸ್ಪತ್ರೆ ನಿರ್ಮಾಣ ಮಾಡಿ ಸರ್ಕಾರದ ಸ್ವಾಧೀನಕ್ಕೆ ನೀಡಿದ್ದರೂ ಇದುವರೆಗೂ ಸೂಕ್ತ ವೈದ್ಯರಿಲ್ಲದೆ ಆಸ್ಪತ್ರೆ ಸದಾ ಕಾಲ ಬಾಗಿಲು ಮುಚ್ಚಿರುವ ಸ್ಥಿತಿಯಲ್ಲೇ ಇರುತ್ತಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿರಿಯ ನಟಿ ಡಾ. ಲೀಲಾವತಿ ನಿರ್ಮಾಣ ಮಾಡಿರೋ ಆಸ್ಪತ್ರೆಗೆ ಮತ್ತೆ ಸಂಕಷ್ಟ

    ಹಿರಿಯ ನಟಿ ಡಾ. ಲೀಲಾವತಿ ನಿರ್ಮಾಣ ಮಾಡಿರೋ ಆಸ್ಪತ್ರೆಗೆ ಮತ್ತೆ ಸಂಕಷ್ಟ

    ಬೆಂಗಳೂರು: ಗ್ರಾಮೀಣ ಭಾಗದ ರೈತಾಪಿ ಹಾಗೂ ಬಡ ಜನರ ಅನುಕೂಲಕ್ಕಾಗಿ ಹಿರಿಯ ಚಿತ್ರನಟಿ ಡಾ. ಲೀಲಾವತಿ ನಿರ್ಮಾಣ ಮಾಡಿರುವ ಆಸ್ಪತ್ರೆಗೆ ಮತ್ತೆ ಸಂಕಷ್ಟ ಎದುರಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ 2009ರಲ್ಲಿ ಲೀಲಾವತಿಯವರು ತಮ್ಮ ಸ್ವಂತ ಜಮೀನಿನಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿದ್ದರು. ನಂತರ ಆಸ್ಪತ್ರೆಯನ್ನು ಸರ್ಕಾರದ ಸ್ವಾಧೀನಕ್ಕೆ ನೀಡಿ, ನೆಲಮಂಗಲ ಆಡಳಿತ ವೈದ್ಯಾಧಿಕಾರಿ ಹೆಸರಿಗೆ ದಾಖಲಾತಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಆಸ್ಪತ್ರೆ ನಿರ್ಮಾಣ ಮಾಡಿ ಸರ್ಕಾರದ ಸ್ವಾಧೀನಕ್ಕೆ ನೀಡಿದ್ದರು. ಇದುವರೆಗೂ ಸೂಕ್ತ ವೈದ್ಯರಿಲ್ಲದೆ ಆಸ್ಪತ್ರೆ ಸದಾ ಕಾಲ ಬಾಗಿಲು ಮುಚ್ಚಿರುವ ಸ್ಥಿತಿಯಲ್ಲೇ ಇರುತ್ತದೆ.

    ಕಳೆದ ವರ್ಷ ದುಷ್ಕರ್ಮಿಗಳ ಗುಂಪೊಂದು ಆಸ್ಪತ್ರೆಯ ಮೇಲ್ಚಾವಣಿ ಸೇರಿದಂತೆ ಪೀಠೋಪಕರಣಗಳನ್ನು ಧ್ವಂಸಗೊಳಿಸಿತ್ತು. ಇಂತಹ ಘಟನೆಗಳನ್ನು ನಿಯಂತ್ರಿಸಲು ನೆಲಮಂಗಲ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು ಲೀಲಾವತಿ ಅವರಿಗೆ ಹಾಗೂ ಆಸ್ಪತ್ರೆಗೆ ಸೆಕ್ಯೂರಿಟಿ ಗಾರ್ಡ್ ನೇಮಿಸುವಂತೆ ತಿಳಿಸಿತ್ತು. ಆದರೆ ಇದುವರೆಗೂ ಅವರಿಗೆ ಸಂಬಳ ನೀಡದೆ ಆರೋಗ್ಯ ಇಲಾಖೆ ಸತಾಯಿಸುತ್ತಲೆ ಬಂದಿದೆ. ಸೆಕ್ಯೂರಿಟಿ ಗಾರ್ಡ್‍ಗಳನ್ನೂ ಸ್ವತಃ ಲೀಲಾವತಿ ಅವರೇ ನಿಭಾಯಿಸಿಕೊಳ್ಳುತ್ತಾ ಬಂದಿದ್ದಾರೆ.

    ಈ ಹಿಂದಿನ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಯು.ಟಿ ಖಾದರ್ ಹಾಗೂ ರಮೇಶ್ ಕುಮಾರ್ ಸಹ ಆಸ್ಪತ್ರೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ಎಲ್ಲಾ ಭರವಸೆಗಳು ಇತ್ತೀಚೆಗೆ ಹುಸಿಯಾಗಿದೆ. ಕಳೆದ ಕೆಲ ದಿನಗಳಿಂದ ಮಂಜುಳಾ ಎನ್ನುವ ವೈದ್ಯೆ ಆಸ್ಪತ್ರೆಗೆ ಬರುತ್ತಿದ್ದರು. ಆದರೆ ತಾಲೂಕು ಆಸ್ಪತ್ರೆ ಮುಖ್ಯ ವ್ಯವಸ್ಥಾಕ ಅಧಿಕಾರಿ ನರಸಿಂಹಯ್ಯ ಆಸ್ಪತ್ರೆಗೆ ಬಾಗಿಲು ಹಾಕಿಕೊಂಡು ಬರುವಂತೆ ಸೂಚನೆ ನೀಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಗ್ರರಿಗೆ ತಕ್ಕ ಪಾಠ ಕಲಿಸಿ- ಕಣ್ಣೀರು ಹಾಕಿದ ಹಿರಿಯ ನಟಿ ಲೀಲಾವತಿ

    ಉಗ್ರರಿಗೆ ತಕ್ಕ ಪಾಠ ಕಲಿಸಿ- ಕಣ್ಣೀರು ಹಾಕಿದ ಹಿರಿಯ ನಟಿ ಲೀಲಾವತಿ

    ಬೆಂಗಳೂರು: ಉಗ್ರರ ದಾಳಿಯಲ್ಲಿ ವೀರ ಯೋಧರ ಹುತಾತ್ಮ ಹಿನ್ನೆಲೆಯಲ್ಲಿ ಹಿರಿಯ ನಟಿ ಡಾ.ಲೀಲಾವತಿ ಉಗ್ರರಿಗೆ ತಕ್ಕ ಪಾಠ ಕಲಿಸಿ ಎಂದು ಕಣ್ಣೀರು ಹಾಕಿದ್ದಾರೆ.

    ಡಾ. ಲೀಲಾವತಿ ತಮ್ಮ ತೋಟದ ಮನೆಯಲ್ಲಿ ಯೋಧರಿಗೆ ಮೊಂಬತ್ತಿ ಹಚ್ಚಿ ನಮನ ಸಲ್ಲಿಸಿದ್ದು, ವಿಡಿಯೋ ರೆಕಾರ್ಡ್ ಮಾಡಿ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಿಂದ ಮಾಹಿತಿ ರವಾನೆ ಮಾಡಿದ್ದಾರೆ. ಯೋಧರ ಮನೆಯವರ ಗೋಳಾಟ ನೋಡಿದರೆ ಏನು ಹೇಳಲು ಸಾಧ್ಯವಾಗುತ್ತಿಲ್ಲ. ಯೋಧ ಮಂಡ್ಯಕ್ಕೆ ಮಾತ್ರ ಗುರು ಅಲ್ಲ, ಇಡೀ ದೇಶಕ್ಕೆ ಶ್ರೇಷ್ಠ ಗುರುವಾಗಿದ್ದಾರೆ. ಅವರ ಪಾದ ಕಮಲಗಳಿಗೆ ನನ್ನ ನಮಸ್ಕಾರ ಎಂದು ಬಿಕ್ಕಿ ಬಿಕ್ಕಿ ಅತ್ತು ಕಣ್ಣೀರು ಹರಿಸಿದ್ದಾರೆ.

    ನಾವು ಇರುವುದು ಪುಣ್ಯಭೂಮಿಯಲ್ಲಿ, ಈ ಭೂಮಿಯಲ್ಲಿ ಮೊದಲು ಪಾಪಿಗಳನ್ನು ಹೋಗಲಾಡಿಸಿ. ಇಲ್ಲವಾದರೆ ನಾವು ಇನ್ನೂ ಎಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ. ಉಗ್ರರಿಗೆ ತಕ್ಕ ಪಾಠ ಕಲಿಸಿ. ಅವರನ್ನು ಸುಮ್ಮನೆ ಬಿಡಬಾರದು ಎಂದು ಕಳಕಳಿಯಿಂದ ಮನವಿ ಮಾಡಿಕೊಂಡಿದ್ದಾರೆ.

    ಯೋಧರು ಹೋಗುವಾಗ ಸರಿಯಾದ ಭದ್ರತೆ ಸಿಕ್ಕಿದಿದ್ದರೆ ಅವರು ಸಾಯುತ್ತಿರಲಿಲ್ಲವೇನೋ, ಯಾರು ಉದಾಸೀನ ಮಾಡಿದ್ದಾರೋ ಗೊತ್ತಿಲ್ಲ. ಆದರೆ ನಾವು ಅವರನ್ನು ಕಳೆದುಕೊಂಡಿದ್ದೇವೆ. ತ್ಯಾಗ ಮಾಡಿದ ಅವರಿಗೆ ದೇವರು ಕೊಡುವ ಶಿಕ್ಷೆ ಇದೇನಾ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಅವರ ಪತ್ನಿ, ಕುಟುಂಬದವರು ಕೊನೆಯವರೆಗೂ ಇದನ್ನು ನೆನಪಿಸಿಕೊಂಡು ಜೀವನ ಮಾಡಬೇಕಾಗುತ್ತದೆ ಎಂದು ದುಃಖ ವ್ಯಕ್ತಪಡಿಸಿದರು.

    https://www.youtube.com/watch?v=H41kg81Fhgg

    https://www.youtube.com/watch?v=Rkj4iQSjQN0

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv