Tag: Legends League Cricket

  • ಗಂಭೀರ್ ವಿರುದ್ಧ ಆರೋಪ – ಶ್ರೀಶಾಂತ್‍ಗೆ ಲೀಗಲ್ ನೋಟಿಸ್ ಜಾರಿ

    ಗಂಭೀರ್ ವಿರುದ್ಧ ಆರೋಪ – ಶ್ರೀಶಾಂತ್‍ಗೆ ಲೀಗಲ್ ನೋಟಿಸ್ ಜಾರಿ

    ಸೂರತ್: ಇಂಡಿಯಾ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವೇಳೆ ಭಾರತದ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ಹಾಗೂ ವೇಗದ ಬೌಲರ್ ಶ್ರೀಶಾಂತ್ (Sreesanth) ನಡುವಿನ ಗಲಾಟೆ ವಿಚಾರವಾಗಿ ಶ್ರೀಶಾಂತ್‍ಗೆ ನೋಟಿಸ್‍ನ ಬಿಸಿ ತಟ್ಟಿದೆ.

    ಗೌತಮ್ ಗಂಭೀರ್ ಫಿಕ್ಸರ್ ಎಂದು ಕರೆದಿದ್ದಾರೆ ಎಂದು ಶ್ರೀಶಾಂತ್ ಆರೋಪಿಸಿದ್ದರು. ಈಗ ಅವರಿಗೆ ಲೆಜೆಂಡ್ಸ್ ಲೀಗ್ ಕ್ರಿಕೆಟ್ (Legends League Cricket) ಕಮಿಷನರ್ ಲೀಗಲ್ ನೋಟಿಸ್ ನೀಡಿದ್ದಾರೆ. ಟಿ20 ಟೂರ್ನಿಯಲ್ಲಿ ಆಡುವ ವೇಳೆ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶ್ರೀಶಾಂತ್ ತಪ್ಪಿತಸ್ಥರು ಎಂದು ನೋಟಿಸ್‍ನಲ್ಲಿ ಹೇಳಲಾಗಿದೆ. ಆಟಗಾರನನ್ನು ಟೀಕಿಸುವ ವೀಡಿಯೊಗಳನ್ನು ತೆಗೆದುಹಾಕಿದರೆ ಮಾತ್ರ ಅವರೊಂದಿಗೆ ಮಾತುಕತೆ ಮಾಡಲಾಗುವುದು ಎಂದು ಹೇಳಲಾಗಿದೆ. ಇದನ್ನೂ ಓದಿ: KSCA ಟೂರ್ನಿಗಳಲ್ಲಿ 1,400 ರನ್‌ – ಟೀಂ ಇಂಡಿಯಾ ಸೇರಲು ಕನಸು ಕಾಣುತ್ತಿದ್ದಾನೆ ಬೆಂಗಳೂರಿನ ಬಾಲಕ

    ಇಬ್ಬರ ಗಲಾಟೆ ವಿಚಾರವಾಗಿ ಅಂಪೈರ್‌ಗಳು ತಮ್ಮ ವರದಿಯನ್ನು ಕಳಿಸಿದ್ದು, ಶ್ರೀಶಾಂತ್ ಅವರನ್ನು ಫಿಕ್ಸರ್ ಎಂದು ಕರೆದ ಬಗ್ಗೆ ಅದರಲ್ಲಿ ಮಾಹಿತಿ ಇಲ್ಲ. ಶ್ರೀಶಾಂತ್ ಅವರು ಒಂದೆರಡು ವೀಡಿಯೋಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಗಂಭೀರ್ ಅವರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಈ ಇಬ್ಬರ ಜಗಳ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಇಬ್ಬರು ಆಟಗಾರರ ಗಲಾಟೆ ವಿಚಾರವಾಗಿ ಶ್ರೀಶಾಂತ್ ಅವರ ಪತ್ನಿ ಸಹ ಸಾಮಾಜಿಕ ಜಾಲತಾಣದಲ್ಲಿ ಗಂಭೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಟಿ20ಯಲ್ಲಿ ರವಿ ಬಿಷ್ಣೋಯ್‌ಗೆ ಅಗ್ರ ಸ್ಥಾನ – ಐಸಿಸಿ ರ‍್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಕಮಾಲ್‌

  • ಅಭಿಮಾನಿಗಾಗಿ ಭಾರತದ ಬಾವುಟದ ಮೇಲೆ ಆಟೋಗ್ರಾಫ್ ಹಾಕಿದ ಅಫ್ರಿದಿ!

    ಅಭಿಮಾನಿಗಾಗಿ ಭಾರತದ ಬಾವುಟದ ಮೇಲೆ ಆಟೋಗ್ರಾಫ್ ಹಾಕಿದ ಅಫ್ರಿದಿ!

    ಬೆಂಗಳೂರು: ಶನಿವಾರ ನಡೆದ ಲೆಜೆಂಡ್ಸ್ ಲೀಗ್ (Legends League Cricket) ಎಲಿಮಿನೇಟರ್ ಪಂದ್ಯದಲ್ಲಿ ಏಷ್ಯಾ ಲಯನ್ಸ್, ಇಂಡಿಯಾ ಮಹಾರಾಜಾಸ್ (India Maharajas) ವಿರುದ್ಧ 85 ರನ್‌ಗಳ ಭರ್ಜರಿ ಜಯ ಸಾಧಿಸಿತು.

    ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕ್ರಿಕೆಟ್ ದಂಥಕತೆ ಶಾಹಿದ್ ಅಫ್ರಿದಿ (Shahid Afridi) ನಾಯಕತ್ವದ ಏಷ್ಯಾ ಲಯನ್ಸ್ (Asia Lions) ತಂಡವು 20 ಓವರ್‌ಗಳಲ್ಲಿ 191 ರನ್ ಬಾರಿಸಿತ್ತು. ಉಪುಲ್ ತರಂಗ 31 ಎಸೆತಗಳಲ್ಲಿ 50 ರನ್, ಮೊಹಮ್ಮದ್ ಹಫೀಜ್ 24 ಎಸೆತಗಳಲ್ಲಿ 38 ರನ್ ಗಳಿಸಿ ಮಿಂಚಿದ್ದರು. ಈ ಗುರಿ ಬೆನ್ನತ್ತಿದ್ದ ಇಂಡಿಯಾ ಮಹಾರಾಜಾಸ್ 106 ರನ್‌ಗಳಿಗೆ ಆಲೌಟ್ ಆಯಿತು. ಪರಿಣಾಮ ಏಷ್ಯಾ ಲಯನ್ಸ್ ತಂಡವು 85 ರನ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಪಂದ್ಯದ ಬಳಿಕ ಅಭಿಮಾನಿಯೊಬ್ಬರು ಅಫ್ರಿದಿ ಬಳಿಬಂದು ಆಟೋಗ್ರಾಫ್ ಕೇಳಿದರು. ಒಂದು ಕ್ಷಣವೂ ಯೋಚಿಸದ ಅಫ್ರಿದಿ, ಗೌರವದಿಂದಲೇ ಅಭಿಮಾನಿಯಿಂದ ಭಾರತದ ರಾಷ್ಟ್ರಧ್ವಜ (Indian Flag) ಪಡೆದು ಅದರ ಮೇಲೆ ಆಟೋಗ್ರಾಫ್ ಹಾಕಿಕೊಟ್ಟರು. ಈ ವೀಡಿಯೋ ಇದೀಗ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಳಪೆ ಬ್ಯಾಟಿಂಗ್‌ – ಸೂರ್ಯನ ವಿರುದ್ಧ ಸಿಡಿದ ಅಭಿಮಾನಿಗಳು

    2022ರ ಏಷ್ಯಾಕಪ್ ಸಂದರ್ಭದಲ್ಲಿ ಏಷ್ಯಾಕಪ್ ಟೂರ್ನಿ ಕುರಿತು ಮಾತನಾಡಿದ್ದ ಅಫ್ರಿದಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2022ರ ಪಂದ್ಯದ ವೇಳೆ ನನ್ನ ಮಗಳು ಪಾಕಿಸ್ತಾನ ಧ್ವಜಕ್ಕಿಂತ ಭಾರತ ಧ್ವಜವನ್ನೇ ಹಿಡಿದು ಬೀಸುತ್ತಿದ್ದಳು ಎಂದು ಹೇಳಿಕೊಂಡಿದ್ದರು.

  • ಲೆಜೆಂಡ್ಸ್ ಕ್ರಿಕೆಟ್ ಲೀಗ್‍ನಲ್ಲಿ ಗಮನಸೆಳೆದ ಮಹಿಳಾ ಅಂಪೈರ್

    ಲೆಜೆಂಡ್ಸ್ ಕ್ರಿಕೆಟ್ ಲೀಗ್‍ನಲ್ಲಿ ಗಮನಸೆಳೆದ ಮಹಿಳಾ ಅಂಪೈರ್

    ಮುಂಬೈ: ವಿಶ್ವ ಕ್ರಿಕೆಟ್‍ನಲ್ಲಿ ಮೆರೆದು ನಿವೃತ್ತಿಯಾದ ಆಟಗಾರರು ಮತ್ತೆ ಮೈದಾನಕ್ಕಿಳಿದು ಆಡಿದ ಲೆಜೆಂಡ್ಸ್ ಕ್ರಿಕೆಟ್ ಲೀಗ್‍ನಲ್ಲಿ ಮಹಿಳಾ ಅಂಪೈರ್‌ಗಳು ಗಮನಸೆಳೆದಿದ್ದಾರೆ.

    ನಿವೃತ್ತಿ ಬಳಿಕ ಇದೀಗ ಹಿರಿಯ ಆಟಗಾರರು ಮತ್ತೆ ಕ್ರಿಕೆಟ್ ಆಡಿ ಸಂಭ್ರಮಿಸಿದ್ದಾರೆ. ದಿಗ್ಗಜ ಆಟಗಾರರು ಮೂರು ತಂಡಗಳ ಪರ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಟೂರ್ನಿಯನ್ನು ಜನವರಿ 20ರಂದು ಆರಂಭಗೊಂಡು ಇದೀಗ ಫೈನಲ್ ಹಂತಕ್ಕೆ ತಲುಪಿದೆ. ಈ ಟೂರ್ನಿಯಲ್ಲಿ ಹಿರಿಯ ಆಟಗಾರರು ಈಗಿರುವ ಯುವ ಆಟಗಾರರು ನಾಚುವಂತೆ ಪ್ರದರ್ಶನವನ್ನು ನೀಡಿ ಕ್ರಿಕೆಟ್ ಪ್ರಿಯರ ಮನಗೆದ್ದಿದ್ದಾರೆ. ಈ ಟೂರ್ನಿಯ ಇನ್ನೊಂದು ವಿಶೇಷವೆಂದರೆ ಈ ಟೂರ್ನಿಯಲ್ಲಿ ಮಹಿಳಾ ಅಂಪೈರ್‌ಗಳು ಕಾರ್ಯ ನಿರ್ವಹಿಸಿದ್ದಾರೆ. ಉತ್ತಮವಾಗಿ ಅಂಪೈರಿಂಗ್ ಮಾಡಿರುವ ಕಾರಣ ಎಲ್ಲೆಡೆಯಿಂದ ಈ ಮಹಿಳಾ ಅಂಪೈರ್‌ಗಳಿಗೆ ಶ್ಲಾಘನೆ ಕೇಳಿಬರುತ್ತಿದೆ. ಇದನ್ನೂ ಓದಿ: ಪತ್ನಿಯ ಹುಟ್ಟುಹಬ್ಬಕ್ಕೆ ಬುರ್ಜ್ ಖಲಿಫಾದಲ್ಲಿ ಫೋಟೋ ಹಾಕಿ ಶುಭ ಕೋರಿದ ರೊನಾಲ್ಡೊ

    ಲೆಜೆಂಡ್ಸ್ ಲೀಗ್‍ನಲ್ಲಿ ಇಂಡಿಯಾ ಮಹಾರಾಜಾಸ್, ಏಷ್ಯಾ ಲಯನ್ಸ್ ಮತ್ತು ವರ್ಲ್ಡ್ ಜೈಂಟ್ಸ್ ತಂಡಗಳು ಆಡಿದ್ದವು ಇದರಲ್ಲಿ ಇಂಡಿಯಾ ಮಹಾರಾಜಾಸ್ ತಂಡ ಭಾರತೀಯ ಆಟಗಾರರನ್ನು ಒಳಗೊಂಡ ತಂಡವಾದಗಿದ್ದರೆ, ಏಷ್ಯಾ ಲಯನ್ಸ್ ಭಾರತವನ್ನು ಹೊರತು ಪಡಿಸಿ ಉಪಖಂಡದ ಉಳಿದ ದೇಶಗಳ ಆಟಗಾರನ್ನು ಒಳಗೊಂಡ ದಂಡವಾಗಿದೆ, ವರ್ಲ್ಡ್ ಜೈಂಟ್ಸ್ ತಂಡ ವಿಶ್ವದ ಇತರ ದೇಶಗಳ ದಿಗ್ಗಜ ಕ್ರಿಕೆಟಿಗರ ತಂಡವಾಗಿದೆ. ಇದೀಗ ಟೂರ್ನಿ ಫೈನಲ್ ಹಂತಕ್ಕೆ ತಲುಪಿದ್ದು, ವರ್ಲ್ಡ್ ಜೈಂಟ್ಸ್ ಮತ್ತು ಏಷ್ಯಾ ಲಯನ್ಸ್ ತಂಡಗಳು ಫೈನಲ್ ಹಣಾಹಣಿಗೆ ತಯಾರಾಗಿದೆ. ಇದನ್ನೂ ಓದಿ: ಮಾಜಿ ಆರ್‌ಸಿಬಿ ಆಟಗಾರನ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ

    ಕ್ರಿಕೆಟ್ ಅಭಿಮಾನಿಗಳ ನೆಚ್ಚಿನ ಹಳೆಯ ಸ್ಟಾರ್‌ಗಳ ಕ್ರಿಕೆಟ್ ಆಟವನ್ನು ನೋಡಿ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ಇದರೊಂದಿಗೆ ಈ ಮಹಿಳಾ ಅಂಪೈರ್‌ಗಳನ್ನು ಐಪಿಎಲ್‍ನಲ್ಲಿ ಕಾಣಲು ಬಯಸಿದ್ದೇವೆ ಎಂಬ ಅಭಿಪ್ರಾಯ ನೆಟ್ಟಿಗರಿಂದ ಕೇಳಿ ಬರುತ್ತಿದೆ.