ಬೆಂಗಳೂರು: ವಿಧಾನ ಮಂಡಲಗಳಲ್ಲಿ (Legislative Assembly) ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅಭಿಮತ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ನಡೆಯುತ್ತಿರುವ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದಲ್ಲಿ ವಿಧಾನ ಮಂಡಲದ ಚರ್ಚೆಗಳು ಜನರ ವಿಶ್ವಾಸಗಳಿಸುವುದರೊಂದಿಗೆ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿಯ ಪಾತ್ರ ಕುರಿತ ವಿಚಾರ ಮಂಡಿಸಿದ ಬಸವರಾಜ ಹೊರಟ್ಟಿ, ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಕಾಳಜಿಗಳನ್ನು ಚರ್ಚಿಸಲು ಸರ್ಕಾರಿ ನೀತಿಗಳನ್ನು ಪರಿಶೀಲಿಸಲು ಮತ್ತು ಕಾನೂನು ರಚನೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಧಾನ ಮಂಡಲ ಪರಿಣಾಮಕಾರಿ ವೇದಿಕೆಯಾಗಿದ್ದು, ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದರು. ಇದನ್ನೂ ಓದಿ: ಹಾಸನ ಟ್ರಕ್ ದುರಂತಕ್ಕೆ 10 ಬಲಿ – ಗಾಯಾಳುಗಳ ಆರೋಗ್ಯ ವಿಚಾರಿಸಲು ವ್ಹೀಲ್ಚೇರ್ನಲ್ಲೇ ಆಸ್ಪತ್ರೆಗೆ ಬಂದ ಹೆಚ್ಡಿಡಿ
ಸದನವು ಕ್ರಮಬದ್ಧವಾಗಿಲ್ಲದಿದ್ದಾಗ ಮತ್ತು ಅರ್ಥಪೂರ್ಣ ಚರ್ಚೆಯಿಲ್ಲದೆ ಕಾನೂನುಗಳನ್ನು ಅಂಗೀಕರಿಸಿದಾಗ ನಮ್ಮ ಮೇಲಿನ ಜನರ ನಂಬಿಕೆಗಳು ಕ್ಷೀಣಿಸುವ ಸಂದರ್ಭ ಬರಬಹುದೆನ್ನುವ ಎಚ್ಚರಿಕೆ ಜನಪ್ರತಿನಿಧಿಗಳಿಗಿರಬೇಕು ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋಕೆ ಬಿಡಲ್ಲ: ಮಧು ಬಂಗಾರಪ್ಪ
ಸದನ ಕಲಾಪಗಳ ಪ್ರಧಾನ ಅಂಶಗಳಾದ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ ಚರ್ಚೆ, ಅರ್ಧಗಂಟೆಯ ಚರ್ಚೆ, ಕಿರುಸೂಚನೆ ಪ್ರಶ್ನೆಗಳು ಮತ್ತು ಸದನದ ಗಮನ ಸೆಳೆಯುವ ಪ್ರಸ್ತಾವಗಳ ಮೂಲಕ ಪ್ರತಿಯೊಬ್ಬ ಸದಸ್ಯರು ಸದನದಲ್ಲಿನ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಮೂಲಕ ಸುಗಮ ಮತ್ತು ರಾಜತಾಂತ್ರಿಕ ಮಾರ್ಗಗಳನ್ನು ಪ್ರತಿನಿಧಿಗಳು ಯಾವಾಗಲೂ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಇದನ್ನೂ ಓದಿ: ಭಾರತ-ಪಾಕ್ ಪಂದ್ಯ ಬಾಯ್ಕಾಟ್ಗೆ ಕರೆ – ಪಾಕ್ ಜೆರ್ಸಿ ಇರುವ ಪ್ರತಿಕೃತಿ ದಹಿಸಿ ಎಎಪಿ ಪ್ರತಿಭಟನೆ
ಶಾಸಕಾಂಗ ಸದನಗಳಲ್ಲಿ ನನ್ನ 45 ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ತಿನ ಸಭಾಪತಿಯಾಗಿ 3ನೇ ಬಾರಿಗೆ ಪಡೆದ ಅನುಭವದ ಮೂಲಕ ಹೇಳುವುದಾದರೆ, ಸಾರ್ವಜನಿಕ ಪ್ರತಿನಿಧಿಗಳು ಜನಪರ ಮಹತ್ವದ ವಿಷಯಗಳಿಗೆ ಮಹತ್ವ ನೀಡುವುದರ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದು ನುಡಿದರು. ಇದನ್ನೂ ಓದಿ: ಧಾರವಾಡ ಕೃಷಿ ವಿವಿಯ ಮೇಳದಲ್ಲಿ ಟ್ರ್ಯಾಕ್ಟರ್ ಮೈಮೇಲೆ ಬಿದ್ದು ವ್ಯಕ್ತಿ ಸಾವು
ಬೆಂಗಳೂರು: ವಿಧಾನಸಭೆಯಲ್ಲಿ ಡಿಕೆಶಿ (DK Shivakumar) ಆರ್ಎಸ್ಎಸ್ (RSS) ಗೀತೆ ಹಾಡಿದ್ದೇ ಬಿಜೆಪಿಗೆ ಬ್ರಹ್ಮಾಸ್ತ್ರ. ರಾಹುಲ್ ಗಾಂಧಿ ಬಿಟ್ಟು ಎಲ್ಲರೂ ಆರ್ಎಸ್ಎಸ್ ಗೌರವಿಸುತ್ತಾರೆ ಎಂದು ಬಿಜೆಪಿ ಟಕ್ಕರ್ ಕೊಟ್ಟಿದೆ. ಇದಕ್ಕೆ, ನಾನು ಕಮ್ಯುನಿಸ್ಟ್, ಆರ್ಎಸ್ಎಸ್ ಎಲ್ಲ ಸ್ಟಡಿ ಮಾಡಿದ್ದೇನೆ ಎಂದು ಡಿಕೆಶಿ (DK Shivakumar) ತಿರುಗೇಟು ನೀಡಿದ್ದಾರೆ.
ಗುರುವಾರ (ಆ.21) ರಾತ್ರಿ ವಿಧಾನಸಭೆಯಲ್ಲಿ ಡಿಕೆಶಿ ಆರ್ಎಸ್ಎಸ್ ಗೀತೆಯ ಸಾಲುಗಳನ್ನು ಹಾಡಿದರು. ಇದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ರಾಹುಲ್ ವಿರುದ್ಧ ಬಳಸುವ ಬ್ರಹ್ಮಾಸ್ತ್ರವಾಗಿ ಬಿಟ್ಟಿದೆ, ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಪರಮೇಶ್ವರ್ ಉತ್ತರ ಕೊಡುತ್ತಿದ್ದ ವೇಳೆ ಸ್ವಾರಸ್ಯಕರ ಚರ್ಚೆ ನಡೆಯಿತು. ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದರ ಬಗ್ಗೆ ಸ್ಪಷ್ಟನೆ ಕೊಡುವಾಗ ಡಿಕೆಶಿ ಬಾಯಲ್ಲಿ ಆರ್ಎಸ್ಎಸ್ ಗೀತೆ ಸಾಲುಗಳು ಬಂತು. ನನ್ನ ಹತ್ರನೂ ವಿದ್ಯೆಗಳಿವೆ ಉತ್ತರ ಕೊಡ್ತೇನೆ, ನಾನು ನಿಮ್ಮ ಗರಡಿಯಲ್ಲಿ ಬೆಳೆಯದೇ ಇರಬಹುದು, ಆದ್ರೆ ಪರಮೇಶ್ವರ್ ಗರಡಿಯಲ್ಲಿ ಸ್ವಲ್ಪ ಬೆಳೆದಿದ್ದೇನೆ ಎಂದು ಹೇಳಿದರು. ಆಗ ಆರ್.ಅಶೋಕ್ ಮಧ್ಯಪ್ರವೇಶ ಮಾಡಿ, ನೀವು ಒಂದು ಸಾರಿ ಆರ್ಎಸ್ಎಸ್ ಚಡ್ಡಿ ಹಾಕಿದ್ದೆ ಅಂದಿದ್ರಿ ಎಂದು ತಿರುಗೇಟು ನೀಡಿದರು. ಆಗ ಡಿಕೆಶಿ, ನಮಸ್ತೇ ಸದಾ ವತ್ಸಲೇ ಮಾತೃಭೂಮೇ ತ್ವಯಾ ಹಿಂದುಭೂಮೇ ಸುಖಂ ಎಂದು ಹಾಡಿ, ಈಗ ಅದೆಲ್ಲ ಚರ್ಚೆ ಬೇಡ ಎಂದು ಟಾಂಗ್ ಕೊಟ್ಟರು.ಇದನ್ನೂ ಓದಿ:9ನೇ ಕ್ಲಾಸ್ನಲ್ಲಿದ್ದಾಗಲೇ ಸುಜಾತ ಬಸುರಿಯಾಗಿದ್ದಳು, ತಂದೆ ಅಬಾರ್ಷನ್ ಮಾಡಿಸಿದ್ದರು: ಸಹೋದರ ಸ್ಫೋಟಕ ಹೇಳಿಕೆ
ಇನ್ನು ಡಿಕೆಶಿ ಹೇಳಿಕೆಯನ್ನ ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ರಾಹುಲ್ ಗಾಂಧಿಯತ್ತ ಟೀಕೆಗೆ ಬಳಸಿಕೊಳ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಬಂಡಾರಿ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ನ ಗಾಂಧಿ ಕುಟುಂಬ ಬಿಟ್ಟು ಪ್ರತಿಯೊಬ್ಬ ನಾಯಕರು ಆರ್ಎಸ್ಎಸ್ ಅನ್ನು ಗೌರವಿಸುತ್ತಾರೆ. ಆರ್ಎಸ್ಎಸ್ ಸಮಾಜಮುಖ ಕೆಲಸ ಗೊತ್ತಿದೆ. ಹೀಗಾಗಿ ಅವರು ಕೂಡ ಆರ್ಎಸ್ಎಸ್ನ್ನು ಗೌರವಿಸುತ್ತಾರೆ. ರಾಹುಲ್ ಗಾಂಧಿಯನ್ನು ಯಾರು ಗಂಭೀರವಾಗಿ ಸ್ವೀಕರಿಸುವುದಿಲ್ಲ. ಡಿಕೆಶಿ ಕೂಡಾ ತಮಾಷೆಯಾಗಿ ಹೇಳಿರಬಹುದು. ಕಾಂಗ್ರೆಸ್ನಲ್ಲಿ ಮುಂದುವರಿಬೇಕಿರುವ ಕಾರಣ ಅವರು ಉದ್ದೇಶಪೂರ್ವಕವಾಗಿ ತಮಾಷೆಯಾಗಿ ಹೇಳಿರಬಹುದು ಎಂದು ಟಾಂಗ್ ಕೊಟ್ಟರು. ಆದರೆ ಬಿಜೆಪಿ ಅಸ್ತ್ರಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ನಾನು ಕಮ್ಯುನಿಸ್ಟ್, ಆರ್ಎಸ್ಎಸ್ ಅಧ್ಯಯನ ಮಾಡಿದ್ದೇನೆ, ಕೆಲವರ ವಿಚಾರಗಳನ್ನ ಗ್ರ್ಯಾಬ್ ಮಾಡಲು ರಿಸರ್ಚ್ ಮಾಡ್ತೀನಿ ಅಂತಾ ಸಮರ್ಥಿಸಿಕೊಂಡರು.
ಒಟ್ಟಿನಲ್ಲಿ ಆರ್ಎಸ್ಎಸ್ ನಾಯಕರು, ಅವರ ಸಿದ್ಧಾಂತದ ಬಗ್ಗೆ ರಾಹುಲ್ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರು ಕಿಡಿಕಾರುತ್ತಿರುವಾಗಲೇ ಡಿಕೆಶಿ ಹೇಳಿಕೆಯನ್ನ ಬಿಜೆಪಿ ಗುರಾಣಿಯಾಗಿಸಿಕೊಂಡಿದೆ. ಡಿಕೆಶಿ ಫ್ಲೋನಲ್ಲಿ ಹೇಳಿ ವ್ಯಂಗ್ಯ ಮಾಡಿದ್ರೂ ಆರ್ಎಸ್ಎಸ್ ಬಗ್ಗೆ ಇರುವ ಗೌರವ ಎಂದು ತಿರುಗುಬಾಣವಾಗಿಸಿ ಬಿಜೆಪಿ ಕ್ಯಾಂಪೇನ್ ಮಾಡುತ್ತಿದ್ದರೆ, ಡಿಕೆಶಿ ಎಂದಿನಂತೆ ಅರಗಿಸಿಕೊಂಡು ಡೋಂಟ್ ಕೇರ್ ಎಂಬ ರೀತಿ ರಿಯಾಕ್ಟ್ ಮಾಡಿರುವುದು ಅಷ್ಟೇ ಚರ್ಚೆಗೆ ಗ್ರಾಸವಾಗಿದೆ.ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟ ಘಟನೆ – ಸಿಎಂ ಭಾವುಕ
– ಕಾಲ್ತುಳಿತದಲ್ಲಿ ಸರ್ಕಾರದ ತಪ್ಪಿಲ್ಲ, ತಪ್ಪು ಮಾಡಿದವರ ವಿರುದ್ಧ ಕ್ರಮ ವಹಿಸಿದ್ದೇವೆ ಎಂದ ಸಿದ್ದರಾಮಯ್ಯ
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತದಿಂದ (Chinnaswamy Stampede) ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟಂತಹ ಘಟನೆಯಿದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾವುಕರಾದರು.
ಮುಂಗಾರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ (ಆ.22) ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಪ್ರತಿಧ್ವನಿಸಿತು. ಈ ಬಗ್ಗೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಿ, ಪ್ರಕರಣದಲ್ಲಿ ಸರ್ಕಾರದ ಪಾತ್ರ ಇಲ್ಲ, ಇದಕ್ಕೆ ಸರ್ಕಾರ ಕಾರಣ ಅಲ್ಲ, ಯಾರೂ ರಾಜೀನಾಮೆ ಕೊಡಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು. ಬಿಜೆಪಿಯವರ (BJP) ಸಾರ್ವಜನಿಕ ಕ್ಷಮಾಪಣೆಯ ಆಗ್ರಹ ತಳ್ಳಿಹಾಕಿದ ಸಿಎಂ ಸದನದಲ್ಲಿ ಮತ್ತೊಮ್ಮೆ ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಇದೇ ವೇಳೆ ಆರ್.ಅಶೋಕ್ (R.Ashok) ಮಾತನಾಡಿ, ನಿಮಗೆ ಹೃದಯ, ಮನುಷ್ಯತ್ವ ಇದ್ದಿದ್ರೆ ಕ್ಷಮೆ ಕೇಳಬೇಕಿತ್ತು ಎಂದಿದ್ದಾರೆ.ಇದನ್ನೂ ಓದಿ: ಹೈದ್ರಾಬಾದ್ನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರ ನಿಗೂಢ ಸಾವು
ಸಿಎಂ ಅವರು, ನನಗೆ ಈ ಘಟನೆ ತುಂಬಾ ಡಿಸ್ಟರ್ಬ್ ಮಾಡಿದೆ. ಇಂಥ ದುರಂತ ಆಗಬಾರದಿತ್ತು, ಆಗಿಹೋಗಿದೆ. ನಾನು ಘಟನೆ ನಡೆದ ದಿನವೇ ವಿಷಾದ ವ್ಯಕ್ತಪಡಿಸಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಇಂಥ ಕಹಿ ಘಟನೆ ಯಾವತ್ತೂ ಆಗಿರಲಿಲ್ಲ. ಕಾಲ್ತುಳಿತದಿಂದ 11 ಜನರ ಸಾವನ್ನು ನಾನು ನೋಡೇ ಇರಲಿಲ್ಲ. ದುರ್ಘಟನೆಗೆ ನಾನು ತುಂಬಾ ದು:ಖಪಟ್ಟಿದ್ದೇನೆ. ವಿಷಾದ ವ್ಯಕ್ತಪಡಿಸಿದ್ದೇನೆ. ಮನುಷ್ಯತ್ವ ಇರೋರಿಗೆ ದು:ಖ ಆಗೇ ಆಗುತ್ತೆ, ನನಗೂ ಆಗಿದೆ ಎಂದು ಭಾವುಕರಾಗಿ ನುಡಿದರು.
ಇನ್ನೂ ನಾವು ಪ್ರಕರಣದಲ್ಲಿ ಕ್ರಮ ತಗೊಂಡಿದ್ದೇವೆ, ಐವರು ಅಧಿಕಾರಿಗಳ ಅಮಾನತು ಮಾಡಿದ್ದೇವೆ. ಆರ್ಸಿಬಿ, ಕೆಎಸ್ಸಿಎ, ಡಿಎನ್ಎ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಅವರನ್ನು ಅರೆಸ್ಟ್ ಮಾಡಿಸಿದ್ದೀವಿ. ಮ್ಯಾಜಿಸ್ಟ್ರಿಯಲ್, ಕುನ್ಹಾ ನೇತೃತ್ವದಲ್ಲಿ ತನಿಖೆ ಮಾಡಿಸಿದ್ದೇವೆ. ಕಾಲ್ತುಳಿತ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ತಗೊಂಡಿದ್ದೀವಿ. ನ್ಯಾಯ ಕೊಡುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಿದ್ದೀವಿ. ನಾವು ಏನೆಲ್ಲ ಕ್ರಮ ತೆಗೊಳ್ಳಬೇಕೋ ಅದೆಲ್ಲವನ್ನು ಮಾಡಿದ್ದೇವೆ. ಹೈಕೋರ್ಟ್ನವರು ಕೂಡ ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಕೋರ್ಟ್ ಹೇಳಿದ ಕೂಡಲೇ ಜಾರ್ಜ್ಶೀಟ್ ಸಲ್ಲಿಕೆ ಮಾಡ್ತೀವಿ ಎಂದು ತಿಳಿಸಿದರು. ಮುಂದುವರೆದು, ಕಾಲ್ತುಳಿತ ಘಟನೆ ನಡೆಯಬಾರದಾಗಿತ್ತು, ನಡೆದುಹೋಗಿದೆ. ಇದಕ್ಕೆ ಸರ್ಕಾರ ಕಾರಣ, ಸಿಎಂ, ಡಿಸಿಎಂ, ಹೋಮ್ ಮಿನಿಸ್ಟರ್ ಕಾರಣ, ರಾಜೀನಾಮೆ ಕೊಡಬೇಕು ಎಂದು ಹೇಳೋದು ಸರಿಯಲ್ಲ. ನಿಮ್ಮ ಅವಧಿಯಲ್ಲಿ ಆದ ಘಟನೆಗಳಿಗೆ ನೀವು ಕ್ಷಮೆ ಕೇಳಿಲ್ಲ, ವಿಷಾದ ವ್ಯಕ್ತಪಡಿಸಲಿಲ್ಲ, ರಾಜೀನಾಮೆ ಕೊಡಲಿಲ್ಲ, ತನಿಖೆಯೂ ಮಾಡಿಸಲಿಲ್ಲ ಅಂತ ಸಿಎಂ ಕೌಂಟರ್ ಕೊಟ್ಟರು.
ಕಾಲ್ತುಳಿತ ಪ್ರಕರಣ ನಡೆದಾಗ ಸಿಎಂ ಜನಾರ್ದನ ಹೊಟೇಲ್ಗೆ ಹೋಗಿದ್ದರು ಎಂಬ ಬಿಜೆಪಿ ಆರೋಪಕ್ಕೂ ಪ್ರತಿಕ್ರಿಯೆ ನೀಡಿ, ನಾನು ಜನಾರ್ದನ ಹೊಟೇಲ್ಗೆ ಆ ದಿನ 5:30ಕ್ಕೆ ಹೋಗಿದ್ದು ನಿಜ, ನಾನು ಸುಳ್ಳು ಹೇಳಲ್ಲ. ನನ್ನ ಮೊಮ್ಮಗ ಹಿಂದಿನ ದಿನ ಲಂಡನ್ನಿಂದ ಬೆಂಗಳೂರಿಗೆ ಬಂದಿದ್ದ. ಗ್ರ್ಯಾಂಡ್ ಸ್ಟೆಪ್ಸ್ಗೆ ಅವನೂ ಬಂದಿದ್ದ, ದೋಸೆ ತಿನ್ನೋಣ ಅಂದಿದ್ದಕ್ಕೆ ಜನಾರ್ದನ ಹೊಟೇಲ್ಗೆ ಹೋಗಿದ್ವಿ. ಆ ದಿನ 5:30ರವರೆಗೂ ನನಗೆ ಕಾಲ್ತುಳಿತ ಸಾವು ಬಗ್ಗೆ ಗೊತ್ತಾಗಿರಲಿಲ್ಲ. ಪೊನ್ನಣ್ಣ ಹೇಳೋವರೆಗೂ ನನಗೆ ಗೊತ್ತಾಗಿರಲಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಟೀಂ ಇಂಡಿಯಾಗೆ ಅಯ್ಯರ್ ಒನ್ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ
ಬಿಜೆಪಿ ಅವಧಿಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ನಡೆದ ದುರಂತಗಳನ್ನು ಅಂಕಿಅಂಶದೊಂದಿಗೆ ಸಿಎಂ ಉಲ್ಲೇಖಿಸಿದರು. ಕಾಲ್ತುಳಿತ ಪ್ರಕರಣಗಳಲ್ಲಿ ಯಾವ ಸಿಎಂ ಸಹ ರಾಜೀನಾಮೆ ಕೊಟ್ಟಿಲ್ಲ. ಪ್ರಯಾಗ್ರಾಜ್ ಕಾಲ್ತುಳಿತಕ್ಕೆ (Prayagraj Stampede) ಯೋಗಿ ಆದಿತ್ಯನಾಥ್ (Yogi Adityanath) ರಾಜೀನಾಮೆ ಕೊಟ್ರಾ? ಅಹಮದಾಬಾದ್ ವಿಮಾನ ದುರಂತಕ್ಕೆ (Ahmedabad Plane Crash) ಗುಜರಾತ್ (Gujarat) ಸಿಎಂ ರಾಜೀನಾಮೆ ಕೊಟ್ರಾ? ಹಾವೇರಿ ಗೋಲಿಬಾರ್ಗೆ ಯಡಿಯೂರಪ್ಪ (Yediyurappa) ರಾಜೀನಾಮೆ ಕೊಟ್ರಾ? 2006ರಲ್ಲಿ ಡಾ.ರಾಜ್ ನಿಧನ ವೇಳೆ 7 ಜನ ಸಾವನ್ನಪ್ಪಿದ್ದರು. ಹೆಚ್ಡಿಕೆ ಆಗ ಸಿಎಂ, ಬಿಎಸ್ವೈ ಡಿಸಿಎಂ. ಆಗ ಕುಮಾರಸ್ವಾಮಿ (HD Kumaraswamy) ರಾಜೀನಾಮೆ ಕೊಟ್ರಾ? ರಾಜೀನಾಮೆ ಕೇಳಿದ್ರಾ? ಗೋಲಿಬಾರ್ನಲ್ಲಿ ಸತ್ತ ರೈತರ ಬಗ್ಗೆ ವಿಷಾದ ವ್ಯಕ್ತಪಡಿಸಿಲ್ಲ, ಕ್ಷಮೆ ಕೋರಲಿಲ್ಲ, ರಾಜೀನಾಮೆ ಕೊಡಲಿಲ್ಲ. ಸುರೇಶ್ ಕುಮಾರ್ ನಮ್ಮನ್ನೇ ಕುಮ್ಮಕ್ಕು ಕೊಟ್ಟವರು ಅಂದುಬಿಟ್ಟಿದ್ದಾರೆ. ಕೊರೋನಾ ಇದ್ದಾಗ ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೇ 36 ಜನ ಸಾವನ್ನಪ್ಪಿದ್ದರು. ಆಗ ಸುಧಾಕರ್ ಆರೋಗ್ಯ ಮಂತ್ರಿ, ಬೊಮ್ಮಾಯಿ ಸಿಎಂ. ಆಗ ನೀವು ಅಬೇಟ್ಟರ್ (ಪ್ರೇರಣೆ) ಅಂತ ಸುಧಾಕರ್ಗೆ, ಬೊಮ್ಮಾಯಿಗೆ ಕರೆದ್ರಾ? ಇಲ್ಲ. ಈಗ ನನಗೆ ಮಾತ್ರ ಅಬೇಟ್ಟರ್ ಅಂತ ಕರೆಯುತ್ತಿದ್ದೀರಿ. ಕಾಲ್ತುಳಿತ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ. ಇಂಥ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಬಿಜೆಪಿ ನಾಯಕರಿಗೆ ಸಿಎಂ ತಿವಿದರು.
ಆರ್ಸಿಬಿ ಆಟಗಾರರ ತೆರೆದ ವಾಹನ ಮೂಲಕ ಮೆರವಣಿಗೆ ಸಂಬಂಧ ಬಿಜೆಪಿ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದನ್ನೂ ಉಲ್ಲೇಖಿಸಿ ಸಿಎಂ ಟಾಂಗ್ ಕೊಟ್ಟರು. ನಾವು ಸಂಭ್ರಮಕ್ಕೆ ಅವಕಾಶ ಕೊಡದೇ ಇದ್ದಿದ್ರೆ ಬಿಜೆಪಿಯವ್ರು ಅದನ್ನೇ ದೊಡ್ಡದಾಗಿ ಬಿಂಬಿಸಿ ಚಳುವಳಿ ಮಾಡ್ತಿದ್ರು ಎಂದು ಟಕ್ಕರ್ ಕೊಟ್ಟರು. ಜು.3ರಂದೇ ಸಂಭ್ರಮಾಚರಣೆಗೆ ಕೆಎಸ್ಸಿಎ ಪತ್ರ ಕೊಡ್ತಾರೆ. ಇನ್ಸ್ಪೆಕ್ಟರ್ ಗಿರೀಶ್ ಪರ್ಮಿಶನ್ ಕೊಡಲಿಲ್ಲ. ಮಧ್ಯಾಹ್ನ 1 ಗಂಟೆಗೆ ಆರ್ಸಿಬಿ, ಕೆಎಸ್ಸಿಎ ಟ್ವೀಟ್ ಮಾಡ್ತಾರೆ. ಅವರ ಟ್ವೀಟ್ನ್ನು ಲಕ್ಷಾಂತರ ಜನ ನೋಡ್ತಾರೆ. ಇಷ್ಟೆಲ್ಲಾ ಇದ್ರೂ ಪೊಲೀಸರು ಕ್ರಮವೇಕೆ ತೆಗೆದುಕೊಳ್ಳಲಿಲ್ಲ. ಟ್ವೀಟ್ಗಳನ್ನು ಡೀಲಿಟ್ ಮಾಡಿಸಲಿಲ್ಲ ಎಂದು ದುರಂತಕ್ಕೆ ಸರ್ಕಾರ ಕಾರಣ ಅಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಉತ್ತರಕ್ಕೆ ಒಪ್ಪದೇ ಬಿಜೆಪಿ, ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು. ಕಾಲ್ತುಳಿತಕ್ಕೆ, 11 ಜನರ ಸಾವಿಗೆ ಸರ್ಕಾರವೇ ಕಾರಣ. ಸಿಎಂ ಇನ್ನೂ ಕ್ಷಮಾಪಣೆ ಕೇಳಿಲ್ಲ. ಸಿಎಂ ಉತ್ತರ ಖಂಡಿಸಿ ಸಭಾತ್ಯಾಗ ಮಾಡ್ತೇವೆ ಎಂದು ಅಶೋಕ್ ಹೇಳಿದರು.
ಒಟ್ಟಿನಲ್ಲಿ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಮಣಿಸುವ ವಿಚಾರದಲ್ಲಿ ಬಿಜೆಪಿಗೆ ಹಿನ್ನಡೆ ಆಗಿದೆ. ಸರ್ಕಾರದ ತಪ್ಪು ಯಾವತ್ತೂ ಒಪ್ಪಿಕೊಳ್ಳುವಂತೆ ಕಾಣದ ಸಿಎಂ ಬಿಜೆಪಿಯನ್ನೇ ತಮ್ಮ ಮಾತುಗಳಿಂದ ಇಕ್ಕಟ್ಟಿಗೆ ಸಿಲುಕಿಸುವಲ್ಲಿ ಯಶಸ್ವಿಯಾದರು.ಇದನ್ನೂ ಓದಿ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆ: ಸಿಎಂ ಘೋಷಣೆ
ಬೆಂಗಳೂರು: ಆರ್ಸಿಬಿ (RCB) ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಪೊಲೀಸ್ ಆಯುಕ್ತರು ನನಗೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ನಾನು ಆ ಕಾರ್ಯಕ್ರಮಕ್ಕೆ ಹೋಗಿ ಸೂಚನೆ ನೀಡಿದ್ದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.
ವಿಧಾನಸಭೆಯಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಮಾತನಾಡಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲವಾದರೆ ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ ಎಂದು ಪ್ರಶ್ನೆ ಮಾಡಿದರು.ಇದನ್ನೂ ಓದಿ: Video | RCB ನಮ್ಮ ಟೀಮೇ ಅಲ್ಲ, ಅವ್ರು ಕರ್ನಾಟಕದವ್ರೇ ಅಲ್ಲ, ಕಾರ್ಯಕ್ರಮಕ್ಕೆ ಬರಲ್ಲ ಅಂದಿದ್ದೆ: ಸಿಎಂ
ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿ, ನನ್ನನ್ನು ಪದೇ ಪದೇ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ, ನಿಮ್ಮ ಪಕ್ಷದವರಿಗೆ ಖುಷಿ ಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ ಎಂದು ಛೇಡಿಸಿದರು.
ಆರ್ಸಿಬಿ ವಿಜಯೋತ್ಸವದಂದ ವಿಧಾನಸೌಧದ ಎದುರು ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು. ಇನ್ನೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು. ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ. 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸುವಂತೆ ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ. ಇದೇ ಮಾತನ್ನು ನಾನು ನ್ಯಾ.ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ. ನಾನು ಅಲ್ಲಿಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ ಎಂದರು.ಇದನ್ನೂ ಓದಿ: ಸುದೀಪ್ ಕನಸಿನ ವಿಷ್ಣು ಸ್ಮಾರಕ – ಪುತ್ಥಳಿ ನಿರ್ಮಾಣಕ್ಕೆ ಚಾಲನೆ
ಬೆಂಗಳೂರು: ವಿಧಾನಸಭೆಯಲ್ಲಿ (Legislative Assembly) ಮಂಡನೆಯಾಗಿದ್ದ ಜನಸಂದಣಿ ನಿಯಂತ್ರಣ ವಿಧೇಯಕ-2025ಕ್ಕೆ ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ವಿಧೇಯಕದ ಪರಿಶೀಲನೆಗೆ ಸದನ ಸಮಿತಿ ರಚಿಸುವುದಾಗಿ ರೂಲಿಂಗ್ ಕೊಟ್ಟಿದ್ದಾರೆ. ವಿಧೇಯಕದ ಕೆಲ ಅಂಶಗಳನ್ನು ವಿರೋಧಿಸಿದ ಬಿಜೆಪಿ, ಜೆಡಿಎಸ್ ಶಾಸಕರು ಸದನ ಸಮಿತಿ ರಚಿಸುವಂತೆ ಒತ್ತಾಯಿಸಿದ್ದರು. ಹಾಗಾಗಿ ಬಿಲ್ ಅಂಗೀಕಾರ ಮಾಡದೇ ಸದನ ಸಮಿತಿ ಪರಿಶೀಲನೆಗೆ ವಹಿಸಲಾಗಿದೆ.
ಬುಧವಾರವಷ್ಟೇ (ಆ.20) ವಿಧೇಯಕ ಮಂಡಿಸಿ ಗುರುವಾರ (ಆ.21) ಅಂಗೀಕಾರಕ್ಕೆ ಗೃಹ ಸಚಿವ ಪರಮೇಶ್ವರ್ (G.Parameshwar) ಪ್ರಸ್ತಾಪಿಸಿದ್ದರು. ಕೌಟುಂಬಿಕ ಕಾರ್ಯಕ್ರಮಗಳಾದ ಮದುವೆ ಸೇರಿ ಇತರೆ ಖಾಸಗಿ ಕಾರ್ಯಕ್ರಮಗಳಿಗೆ ಈ ನಿಯಮಗಳು ಅನ್ವಯ ಆಗಲ್ಲ. ಖಾಸಗಿ ಆವರಣಗಳೊಳಗೆ ನಡೆಸುವ ಕೌಟುಂಬಿಕ ಸಮಾರಂಭಗಳಿಗೆ ಈ ನಿಯಮಗಳು ಅನ್ವಯ ಆಗಲ್ಲ. ಬಾಡಿಗೆ, ಭೋಗ್ಯ, ಗುತ್ತಿಗೆಗೆ ಪಡೆದ ಸ್ಥಳಗಳಲ್ಲಿ ನಡೆಸುವ ಖಾಸಗಿ ಆವರಣಗಳೊಳಗೆ ನಡೆಸುವ ಕಾರ್ಯಕ್ರಮಗಳಿಗೆ ಈ ನಿಯಮಗಳು ಅನ್ವಯ ಆಗಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.ಇದನ್ನೂ ಓದಿ: ಗಣಿ ನಷ್ಟ ವಸೂಲಾತಿಗೆ ಸರ್ಕಾರದಿಂದ ಹೊಸ ಕಾಯ್ದೆ – ಆಯುಕ್ತರ ನೇಮಕಕ್ಕೆ ಮುಂದಾದ ಸರ್ಕಾರ
ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ಮಾತನಾಡಿ, ರಾಜಕೀಯ ಸಮಾವೇಶಗಳಿಗೂ ಅನ್ವಯ ಆಗುತ್ತದೆ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕಾನೂನು ಮಾಡಿ ಅಂತಾ ಆಗ್ರಹಿಸಿದರು. ಶಾಸಕರಾದ ಸುರೇಶ್ ಕುಮಾರ್ ಮಾತನಾಡಿ, ಪೋಸ್ಟ್ ಮಾರ್ಟಮ್ ವಿಧೇಯಕ ಇದು. ಧಾರ್ಮಿಕ ಉತ್ಸವಗಳಿಗೂ ಲಕ್ಷಾಂತರ ಜನ ಸೇರುತ್ತಾರೆ. ಕಾಯ್ದೆ ತರದೇ ನಿಯಮ ರೂಪಿಸಿ ಎಂದು ಆಕ್ರೋಶ ಹೊರಹಾಕಿದರು. ಶಾಸಕ ಸುನೀಲ್ ಕುಮಾರ್ ಮಾತನಾಡಿ, ಪೊಲೀಸರು ಈ ನಿಯಮಗಳನ್ನ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ, ಪ್ರತಿಭಟನೆ, ಕಾರ್ಯಕ್ರಮಗಳನ್ನು ಹತ್ತಿಕ್ಕುವ ಪ್ರಯತ್ನ ಎಂದರು. ಅಂತಿಮವಾಗಿ ವಿರೋಧ ಪಕ್ಷಗಳ ಆಕ್ಷೇಪದ ಹಿನ್ನೆಲೆಯಲ್ಲಿ ಬಿಲ್ ಅಂಗೀಕಾರಕ್ಕೆ ಹಾಕದೇ ಸದನ ಸಮಿತಿಗೆ ವಹಿಸಲಾಗಿದೆ.
ಜನಸಂದಣಿ ನಿಯಂತ್ರಣ ವಿಧೇಯಕದಲ್ಲಿ ಏನಿದೆ?
-ಜನಸಂದಣಿ 7 ಸಾವಿರಕ್ಕಿಂತ ಕಮ್ಮಿ ಇದ್ದರೆ ಪೊಲೀಸ್ ಠಾಣೆ ಅಧಿಕಾರಿಯು ಆಯೋಜಕರ ಅರ್ಜಿಯ ಮೇರೆಗೆ ವಿಚಾರಣೆ ನಡೆಸಿ ಅನುಮತಿ ನೀಡಬಹುದು.
-ಜನಸಂದಣಿ 7 ಸಾವಿರಕ್ಕಿಂತ ಹೆಚ್ಚು 50 ಸಾವಿರಕ್ಕಿಂತ ಕಡಿಮೆ ಇದ್ದಾಗ ಡಿಸಿಪಿ ಅವರು ಪರಿಶೀಲಿಸಿ ಅನುಮತಿ ಕೊಡಲು ಅವಕಾಶ.
-ಜನಸಂದಣಿ 50 ಸಾವಿರಕ್ಕೂ ಹೆಚ್ಚಿದ್ದರೆ ಎಸ್ಪಿ ಅಥವಾ ಪೊಲೀಸ್ ಆಯುಕ್ತರು ಆಯೋಜಕರ ಅರ್ಜಿ ಮೇರೆಗೆ ಪರಿಶೀಲಿಸಿ ಅನುಮತಿ ಕೊಡಬಹುದು.
-ಸಮಾರಂಭದ ಆಯೋಜಕರು ಸಮಾರಂಭದ ಹತ್ತು ದಿನಗಳ ಮೊದಲು ಪೂರ್ಣ ವಿವರವನ್ನು ಲಿಖಿತ ಅರ್ಜಿ ಸಲ್ಲಿಸಬೇಕು.
-ಕಾರ್ಯಕ್ರಮದಲ್ಲಿ ಆಸ್ತಿ ಮತ್ತು ಪ್ರಾಣ ಹಾನಿ ಆದರೆ ಕಾರ್ಯಕ್ರಮದ ಆಯೋಜಕರೇ ಹೊಣೆಗಾರರು.
-ಕಾರ್ಯಕ್ರಮಗಳಿಗೆ ಅರ್ಜಿ ಹಾಕಿದ ನಾಲ್ಕು ದಿನಗಳ ಒಳಗೆ ಪರಿಶೀಲಿಸಿ, ಅನುಮತಿ ಕೊಡುವ ಅಥವಾ ಕೊಡದಿರುವ ಬಗ್ಗೆ ಸಕ್ಷಮ ಪ್ರಾಧಿಕಾರಗಳು ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಇದನ್ನು ಲಿಖಿತವಾಗಿ ಆಯೋಜಕರಿಗೆ ತಿಳಿಸಬೇಕು.
-ಅನುಮತಿ ಪಡೆಯುವ ವೇಳೆ ಆಯೋಜಕರು 1 ಕೋಟಿ ರೂ. ಮೌಲ್ಯದ ನಷ್ಟ ಭರ್ತಿ ಬಾಂಡ್ ಸಲ್ಲಿಸಬೇಕು.
-ಅನುಮತಿ ಪಡೆಯದೇ ಕಾರ್ಯಕ್ರಮ ಆಯೋಜಿಸಿದರೆ 3 ವರ್ಷದಿಂದ 7 ವರ್ಷದವರೆಗೆ ಕಾರಾಗೃಹ ವಾಸ ಹಾಗೂ 1 ಕೋಟಿ ರೂ.ವರೆಗೆ ದಂಡ.
-ಕಾರ್ಯಕ್ರಮದಲ್ಲಿ ಸುಳ್ಳು ವದಂತಿ ಹಬ್ಬಿಸಿ, ಹಿಂಸಾಚಾರ, ಕುಕೃತ್ಯ ಎಸಗಲು ಪ್ರೇರೆಪಿಸಿದರೆ, ಅದರಿಂದ ನಾಗರಿಕರಿಗೆ ತೊಂದರೆ, ಶಾಂತಿಭಂಗ ಉಂಟಾದರೆ 3 ವರ್ಷದವರೆಗೆ ಜೈಲು ಶಿಕ್ಷೆ, 50 ಸಾವಿರ ರೂ.ವರೆಗೆ ದಂಡ
-ಜನಸಂದಣಿ ವಿಪತ್ತಿಗೆ ಕಾರಣವಾದರೆ, ವ್ಯಕ್ತಿಯ ದುಷ್ಕೃತ್ಯದಿಂದ ನಾಗರಿಕರಿಗೆ ದೈಹಿಕ ಆಸ್ತಿ ಹಾನಿಯಾದರೆ 3 ವರ್ಷದಿಂದ 7 ವರ್ಷದವರೆಗೆ ಜೈಲುಶಿಕ್ಷೆ, ಪ್ರಾಣ ಹಾನಿಯಾದರೆ ಕನಿಷ್ಟ 10 ವರ್ಷದಿಂದ ಜೀವಾವಧಿವರೆಗೆ ಶಿಕ್ಷೆ.
-ಪೊಲೀಸರ ನಿರ್ದೇಶನಗಳನ್ನು ಪಾಲಿಸದಿದ್ದರೆ, ಉಲ್ಲಂಘಿಸಿದರೆ 1 ತಿಂಗಳವರೆಗೆ ಸಮುದಾಯ ಸೇವೆ ಮಾಡಬೇಕು ಮತ್ತು 50 ಸಾವಿರ ರೂ. ಜುಲ್ಮಾನೆ ಭರಿಸಬೇಕು.ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ ಸಂಬಂಧ ಎಂಸಿಡಿ ಅಧಿಸೂಚನೆ – ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ
ಬೆಂಗಳೂರು: ವಿಧಾನ ಪರಿಷತ್ನಲ್ಲಿ (Legislative Council) ಬುಧವಾರ (ಆ.20) ಸೋಲಾಗಿದ್ದ ಕರ್ನಾಟಕ ಸೌಹಾರ್ದ ಸಹಕಾರ ತಿದ್ದುಪಡಿ ವಿಧೇಯಕಕ್ಕೆ ಗುರುವಾರ (ಆ.21) ವಿಧಾನಸಭೆಯಲ್ಲಿ (Legislative Assembly) ಅಂಗೀಕಾರ ಪಡೆದುಕೊಳ್ಳಲಾಗಿದೆ.
ಬುಧವಾರ ಪರಿಷತ್ನಲ್ಲಿ ಮತ ಹಾಕಿದಾಗ ಸಂಖ್ಯಾಬಲದ ಕಾರಣದಿಂದಾಗಿ ಈ ವಿಧೇಯಕ 3 ಮತಗಳಿಂದ ಸೋತಿತ್ತು. ಸೌಹಾರ್ದ ಸಹಕಾರ ಸಂಘಗಳ ಸದಸ್ಯರ ಕುಟುಂಬ ಪ್ರತೀ ವರ್ಷ ಆಸ್ತಿ ಘೋಷಿಸಿಕೊಳ್ಳುವ ಮತ್ತು ಮೂರು ವರ್ಷಕ್ಕೊಮ್ಮೆ ಲೆಕ್ಕಪರಿಶೋಧನೆ ನಡೆಸುವ ಅಂಶಗಳಿಗೆ ಪರಿಷತ್ನಲ್ಲಿ ವಿರೋಧ ವ್ಯಕ್ತವಾಗಿತ್ತು. ಆದರೆ ಈ ವಿವಾದಿತ ಅಂಶಗಳ ಸಹಿತ ವಿಧಾನಸಭೆಯಲ್ಲಿ ವಿಧೇಯಕಕ್ಕೆ ಸರ್ಕಾರ ಅಂಗೀಕಾರ ಪಡೆದುಕೊಂಡಿದೆ.ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ ಸಂಬಂಧ ಎಂಸಿಡಿ ಅಧಿಸೂಚನೆ – ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ
ಇನ್ನೂ ಅಕ್ರಮ ಗಣಿಗಾರಿಕೆ ಮತ್ತು ಅಪರಾಧ ಉತ್ಪತ್ಪಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕಕ್ಕೂ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಅಕ್ರಮ ಗಣಿಗಾರಿಕೆಗಳಿಂದಾದ ನಷ್ಟ ವಸೂಲಾತಿ ಮತ್ತು ಆಸ್ತಿಗಳ ಜಪ್ತಿಗಾಗಿ ಸರ್ಕಾರ ಹೊಸ ಕಾಯ್ದೆ ರಚಿಸಿದೆ. ಗಣಿ ಅಕ್ರಮ ಪ್ರಕರಣಗಳಿಂದ ಸರ್ಕಾರಕ್ಕಾಗಿರುವ ನಷ್ಟ ವಸೂಲಿ ಮಾಡಲು ವಸೂಲಿ ಆಯುಕ್ತರನ್ನು ನೇಮಿಸಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಮಧ್ಯವರ್ತಿಗಳು ಸೇರಿದಂತೆ ಬಹುವಹಿವಾಟುಗಳಿಂದ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ನಡೆದಿವೆ. ಅದು ವ್ಯವಸ್ಥಿತ ಒಳಸಂಚು ಹೊಂದಿರುವ ಸಂಘಟಿತ ಅಪರಾಧ. ಇದರಿಂದ ಸರ್ಕಾರಕ್ಕಾಗಿರುವ ನಷ್ಟವನ್ನು ವಸೂಲಿಗೆ ವಿಧೇಯಕ ಜಾರಿಗೊಳಿಸಲಾಗುತ್ತಿದೆ.
ಗಣಿ ನಷ್ಟ ವಸೂಲಾತಿಗಾಗಿ ವಸೂಲಾತಿ ಆಯುಕ್ತರ ನೇಮಕಕ್ಕೆ ವಿಧೇಯಕದಲ್ಲಿ ಅವಕಾಶವಿದೆ. ಎಸಿಎಸ್ ದರ್ಜೆಯ ಸೇವೆಯಲ್ಲಿ ಇರುವ ಅಥವಾ ನಿವೃತ್ತ ಅಧಿಕಾರಿಯನ್ನು ವಸೂಲಾತಿ ಆಯುಕ್ತರಾಗಿ ನೇಮಿಸಬಹುದು. ವಸೂಲಾತಿ ಆಯುಕ್ತರಿಗೆ ಸಿವಿಲ್ ನ್ಯಾಯಾಲಯದ ಅಧಿಕಾರ ಸಿಗಲಿದ್ದು, ಗಣಿ ಪ್ರದೇಶಗಳ ಪರಿಶೀಲಿಸುವ, ಶೋಧನೆ ಮಾಡುವ, ಅಕ್ರಮ ಗಣಿಗಾರಿಕೆಯಿಂದ ಗಳಿಸಿದ ಆಸ್ತಿಗಳ ತಾತ್ಕಾಲಿಕ ಜಪ್ತಿ ಮಾಡುವ ಅಧಿಕಾರ ಇದೆ.ಇದನ್ನೂ ಓದಿ: ಸು ಫ್ರಂ ಸೋ ರೀತಿ ಈ ಸರ್ಕಾರ ಬಿ ಫ್ರಂ ಸಿ – ಕಾಂಗ್ರೆಸ್ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ
ಬೆಂಗಳೂರು: ಸು ಫ್ರಂ ಸೋ (Su From So) ಸಿನಿಮಾ ಹೆಸರಿನ ಹಾಗೆ ಈ ಸರ್ಕಾರ ಬಿ ಫ್ರಂ ಸಿ (B From C) ಅಂತ ಬಿಜೆಪಿ ಶಾಸಕ ಸುನೀಲ್ ಕುಮಾರ್ (SunilKumar) ವಿಧಾನಸಭೆಯಲ್ಲಿ ವಾಗ್ದಾಳಿ ನಡೆಸಿದರು.
ವಿಪಕ್ಷ ಶಾಸಕರಿಗೆ ಈಗಲೇ ಅನುದಾನ ಕೊಡ್ತೀರೋ? ಅಥವಾ ನವೆಂಬರ್ ಕ್ರಾಂತಿಯ ಬಳಿಕ ಕೊಡ್ತೀರೋ? ಹೊಸ ಸಿಎಂ ಬಂದ ಮೇಲೆ ಕೊಡ್ತೀರೋ? ವಯನಾಡಿಗೆ 10 ಕೋಟಿ ಕೊಟ್ಟಿದ್ದೀರಿ. ವಯನಾಡು ಭೂಕುಸಿತಕ್ಕೆ ಹತ್ತು ಕೋಟಿ ಕೊಡುವಷ್ಟು ನಾಡಿಮಿಡಿತ ಇದೆ ಸರ್ಕಾರಕ್ಕೆ. ಮಲೆನಾಡಿನ ಪ್ರಾಕೃತಿಕ ವಿಕೋಪಕ್ಕೆ ಸರ್ಕಾರ ಯಾಕೆ ಸ್ಪಂದಿಸಲ್ಲ. ವಯನಾಡಿಗೆ ಇರುವ ನಾಡಿಮಿಡಿತ ಮಲೆನಾಡಿಗೆ ಯಾಕಿಲ್ಲ? ಇಲ್ಲಿಯವರೆಗೆ ಮಳೆ ವಿಕೋಪಕ್ಕೆ ಸರ್ಕಾರ ಅನುದಾನ ಕೊಟ್ಟಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭ
ಬೆಂಗಳೂರು: ರಾಜ್ಯದ ದಲಿತ ಸಮುದಾಯದ ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿ (Internal Reservation) ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ (Legislative Assembly) ಅಧಿಕೃತವಾಗಿ ಘೋಷಿಸಿದ್ದಾರೆ.
ಎಡಗೈ-ಬಲಗೈ ಸಮೂಹದ ಉಪ ಜಾತಿಗಳಿಗೆ ತಲಾ 6% ಕೊಟ್ಟಿದ್ದೇವೆ. ಅದೇ ರೀತಿ, ಸ್ಪೃಶ್ಯ ಸಮೂಹಗಳಿಗೆ ಆದಿ ಕರ್ನಾಟಕ/ದ್ರಾವಿಡ/ಆಂಧ್ರ ಉಪಜಾತಿಗಳನ್ನು ಸೇರಿಸಿ 5% ಮೀಸಲಾತಿ ಕೊಡಲು ತೀರ್ಮಾನಿಸಿದ್ದೇವೆ ಅಂತ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಅಂತ ಪಂಜಾಬ್ ಹೈಕೋರ್ಟ್ ಆದೇಶ ಇದೆ. 1.05 ಕೋಟಿ ಜನರ ಸಮೀಕ್ಷೆ ಮಾಡಲಾಗಿದೆ. ನಾಗಮೋಹನದಾಸ್ ಶಿಫಾರಸುಗಳನ್ನು ಕೆಲವು ಮಾರ್ಪಾಡುಗಳೊಂದಿಗೆ ಅಂಗೀಕರಿಸಿದ್ದೇವೆ. ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಗಮನದಲ್ಲಿರಿಸಿಕೊಂಡು ಒಳಮೀಸಲಾತಿ ಒದಗಿಸಲಾಗಿದೆ ಅಂತ ವಿವರಣೆ ನೀಡಿದರು. ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗ ರಚನೆ, ಒಳ ಮೀಸಲಾತಿ ಹೋರಾಟಗಾರರ ವಿರುದ್ಧ ದಾಖಲಿಸಿದ ಮೊಕದ್ದಮೆಗಳನ್ನು ವಾಪಸ್ ಪಡೆಯಲು ಸರ್ಕಾರ ತೀರ್ಮಾನಿಸಿದೆ ಅಂತ ಸಿಎಂ ಹೇಳಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – 22 ದಿನಗಳಲ್ಲೇ 3.35 ಕೋಟಿ ಒಡೆಯರಾದ ರಾಯರು
ಇನ್ನು, ಒಳಮೀಸಲಾತಿ ಚರ್ಚೆಗೆ ವಿಪಕ್ಷಗಳು ಆಗ್ರಹಿಸಿದ್ದವು. ಆದರೆ ಸ್ಪೀಕರ್ ಅವಕಾಶ ನೀಡಲಿಲ್ಲ. ಸಿಎಂ ಪಲಾಯನವಾದ ಮಾಡ್ತಿದ್ದಾರೆ ಅಂತ ಅಶೋಕ್ ಹೇಳಿದರು. 42 ವರ್ಷದ ರಾಜಕೀಯದಲ್ಲಿ ಪಲಾಯನ ಮಾಡಿಲ್ಲ. ನಿಮ್ಮನ್ನು ಕಂಡ್ರೆ ನಮಗೆ ಭಯನೇ ಇಲ್ಲ ಅಂತ ಸಿಎಂ ಕೌಂಟರ್ ಕೊಟ್ಟು ಹೊರ ನಡೆದರು. ಆಗ, ಸಿದ್ದರಾಮಯ್ಯ ನಮ್ಮ ಸಿಎಂ ಅಲ್ಲ, ಡಿಕೆಶಿಯೇ ನಮ್ಮ ಸಿಎಂ ಅಂತ ಅಶೋಕ್ ಕಿಚಾಯಿಸಿದರು. ಇದನ್ನೂ ಓದಿ: ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
– ಬೆಂಗಳೂರು ವಿವಿಗೆ ಡಾ.ಮನಮೋಹನ್ ಸಿಂಗ್ ಹೆಸರು; ವಿಧೇಯಕ ಅಂಗೀಕಾರ
ಬೆಂಗಳೂರು: ವಿಭಜಿತ ಬಿಬಿಎಂಪಿಯ (BBMP) ಪಂಚ ಪಾಲಿಕೆಗಳಿಗೆ ಆಯುಕ್ತರನ್ನು ನೇಮಿಸಲು ಅವಕಾಶ ಕೊಡುವ ಗ್ರೇಟರ್ ಬೆಂಗಳೂರು (Greater Bengaluru) ಆಡಳಿತ ತಿದ್ದುಪಡಿ ವಿಧೇಯಕಕ್ಕೆ (Governance Amnedment Bill 2025) ವಿಧಾನಸಭೆಯಲ್ಲಿ (Legislative Assembly) ವಿಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ಅಂಗೀಕಾರ ಪಡೆದುಕೊಂಡಿತು.
ವಿಧೇಯಕ ಬಗ್ಗೆ ಸದನದಲ್ಲಿ ವಿವರ ನೀಡಿದ ಡಿಸಿಎಂ ಡಿಕೆಶಿ, ಪಾಲಿಕೆಗಳಿಗೆ ಆಯುಕ್ತರನ್ನು ನೇಮಿಸಿ ಸಮನ್ವಯ ಸಮಿತಿಯಂತೆ ಐದೂ ಪಾಲಿಕೆಗಳು ಕೆಲಸ ಮಾಡಲು ತಿದ್ದುಪಡಿ ತರಲಾಗಿದೆ. ಐದೂ ಪಾಲಿಕೆಗಳ ಆಡಳಿತಾತ್ಮಕ ಹಾಗೂ ನೇಮಕಾತಿ ನಿಯಮಗಳ ರಚನೆ, ನೌಕರರ ನೇಮಕಾತಿ ಹೊಣೆ ಜಿಬಿಎಗೆ ಕೊಡಲು ಅವಕಾಶ ಇದೆ ಎಂದರು. ಇದನ್ನೂ ಓದಿ: ಫೋಟೋದಲ್ಲಿರುವವಳೇ ನನ್ನ ಮಗಳು: ಸುಜಾತ ಭಟ್ ಪ್ರತಿಕ್ರಿಯೆ
ಆದರೆ ಈ ವಿಧೇಯಕ್ಕೆ ಬಿಜೆಪಿ ಸದಸ್ಯರು ತೀವ್ರವಾಗಿ ವಿರೋಧಿಸಿದರು. ಶಾಸಕ ಅಶ್ವಥ್ ನಾರಾಯಣ್ ಮಾತಾಡಿ, ಸ್ಥಳೀಯ ಸಂಸ್ಥೆಗಳ ಅಧಿಕಾರ ಕಿತ್ತುಕೊಳ್ತಿದ್ದೀರಿ ಎಂದರು. ವಿಪಕ್ಷ ನಾಯಕ ಆರ್ ಅಶೋಕ್ ಮಾತಾಡಿ, ಗ್ರೇಟರ್ ಬೆಂಗಳೂರು ಹೆಸರನ್ನು ಕನ್ನಡದಲ್ಲಿಡುವಂತೆ ಆಗ್ರಹಿಸಿದರು. ಆದರೆ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಪರ ಬಿಜೆಪಿ ಉಚ್ಛಾಟಿತ ಶಾಸಕ ಎಸ್ಟಿ ಸೋಮಶೇಖರ್ ಬ್ಯಾಟಿಂಗ್ ನಡೆಸಿದರು. ಸದನದಲ್ಲೇ ಡಿಕೆಶಿಗೂ ಸೋಮಶೇಖರ್ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಷ್ಣು ಸಮಾಧಿ ತೆರವು; ಹೈಕೋರ್ಟ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಕೆ
ಈ ಮಧ್ಯೆ, ಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣಗೊಳ್ಳಲಿದೆ. ಈ ಸಂಬಂಧ ವಿಧಾನಸಭೆಯಲ್ಲಿ ಇಂದು ಬಿಜೆಪಿಯವರ ವಿರೋಧದ ಮಧ್ಯೆಯೂ ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯಗಳ ತಿದ್ದುಪಡಿ ವಿಧೇಯಕಕ್ಕೆ ಸರ್ಕಾರ ಅಂಗೀಕಾರ ಪಡೆದುಕೊಂಡಿತು. ಇದನ್ನೂ ಓದಿ: ಸುಜಾತಾ ಭಟ್ಗೆ ಮಗಳೇ ಇರಲಿಲ್ಲ ಎಂದ ನೆರೆಹೊರೆಯವರು
– ಇದರ ಹಿಂದೆ ಒಬ್ಬ ಮುಸುಕುಧಾರಿ ಇಲ್ಲ, ಹತ್ತಾರು ಮಂದಿ ಮುಸುಕುಧಾರಿಗಳಿದ್ದಾರೆ ಎಂದ ಬಿಜೆಪಿ ಶಾಸಕ – ವಿಧಾನಸಭೆ ಸದನದಲ್ಲಿ ಭಾರೀ ಗದ್ದಲ, ಕೋಲಾಹಲ
ಬೆಂಗಳೂರು: ಧರ್ಮಸ್ಥಳ (Dharmasthala) ಹೆಸರಿಗೆ ಕೆಸರು ಎರಚುವ ಹುನ್ನಾರದಲ್ಲಿ ಸರ್ಕಾರವೂ (Congress) ಶಾಮೀಲಾಗಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್ (Sunil Kumar) ಗಂಭೀರ ಆರೋಪ ಮಾಡಿದ್ದಾರೆ. ಇದು ವಿಧಾನಸಭೆ ಸದನದಲ್ಲಿ ಭಾರೀ ಗದ್ದಲ ಕೋಲಾಹಲಕ್ಕೆ ಎಡೆಮಾಡಿಕೊಟ್ಟಿತು.
ಪರಮೇಶ್ವರ್ (G Parameshwar) ಉತ್ತರಕ್ಕೆ ಸದನದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಅವರು, ಎಸ್ಐಟಿಗೆ (SIT) ನಮ್ಮ ವಿರೋಧ ಇಲ್ಲ. ಯೂಟ್ಯೂಬರ್ಗಳ ಮೂಲಕ ಅಪಪ್ರಚಾರ ನಡೀತಿದೆ, ಅವರ ಮೇಲೆ ಕ್ರಮ ಯಾಕಿಲ್ಲ ಅನ್ನೋದು ಮೊನ್ನೆ ಸದನದಲ್ಲಿ ಚರ್ಚೆ ಮಾಡಿದ್ದು. ಇದರ ಹಿಂದೆ ಒಬ್ಬ ಮುಸುಕುಧಾರಿ ಅಲ್ಲ, ಹತ್ತಾರು ಜನ ಮುಸುಕು ಹಾಕಿಕೊಂಡು ಇದರ ಹಿಂದೆ ಪಿತೂರಿ ಮಾಡಿದ್ದಾರೆ. ಅವರ ವಿರುದ್ಧ ಏನು ತನಿಖೆ? ಹಿಂದೆ ಯಾರಿದ್ದಾರೆ ಅವರನ್ನು ಬಯಲಿಗೆಳೆಯಿರಿ. ಧರ್ಮಸ್ಥಳ ಹೆಸರಿಗೆ ಕೆಸರು ಎರಚುವ ಹುನ್ನಾರ ನಡೀತಿದೆ. ಸತ್ಯ ಹೊರಗೆ ಬರೋದಕ್ಕಿಂತಲೂ ಧರ್ಮಸ್ಥಳ ಹೆಸರಿಗೆ ಕೆಸರು ಎರಚೋದೇ ಇವರಿಗೆ ಮುಖ್ಯವಾಗಿದೆ. ಸರ್ಕಾರದ ಉದ್ದೇಶವೂ ಅದೇ ಆಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಟ್ರಂಪ್ ಜೊತೆ ಅಲಾಸ್ಕ ಸಭೆ ಬಳಿಕ ಮೋದಿಗೆ ಫೋನ್ ಮಾಡಿದ ಪುಟಿನ್
ಸುನಿಲ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ಸದಸ್ಯರು ಕಿಡಿಕಾರಿದರು, ಅಲ್ಲದೇ ಕ್ಷಮೆಗೆ ಆಗ್ರಹಿಸಿದರು. ಆದರೆ ತಮ್ಮ ಆರೋಪ ಸಮರ್ಥಿಸಿಕೊಂಡ ಸುನಿಲ್ ಕುಮಾರ್, ನಿಮ್ಮ ಹೈಕಮಾಂಡ್ ಸೂಚನೆ ಮೇರೆಗೆ ಧರ್ಮಸ್ಥಳದ ಮೇಲೆ ಕಾಂಗ್ರೆಸ್ನಿಂದ ಅಪಪ್ರಚಾರ ಎಂದರು. ಇದು ಮತ್ತಷ್ಟು ವಾಗ್ವಾದಕ್ಕೆ ಕಾರಣವಾಯಿತು. ಸದನದ ಬಾವಿಗಿಳಿದು ಪ್ರತಿಭಟನೆ, ಕ್ಷಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿ, ಧಿಕ್ಕಾರ ಘೋಷಣೆ ಕೂಗಿದರು. ಸರ್ಕಾರವೇ ಹುನ್ನಾರ ಮಾಡಿದೆ ಎಂಬ ಪದ ತೆಗೆಯಿರಿ ಎಂದ ಸ್ಪೀಕರ್, ಗದ್ದಲ ಹಿನ್ನೆಲೆ ಕಲಾಪ ಹತ್ತು ನಿಮಿಷ ಮುಂದೂಡಿದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗಕ್ಕೆ ವಿಪಕ್ಷಗಳ ಸಿದ್ಧತೆ