Tag: Legislative Assembly

  • ವಿಧಾನಸಭೆ ಚುನಾವಣೆ 2023 : ಮೊದಲ ಮತದಾನ ಮಾಡಿದ ನಟಿ ಲೀಲಾವತಿ

    ವಿಧಾನಸಭೆ ಚುನಾವಣೆ 2023 : ಮೊದಲ ಮತದಾನ ಮಾಡಿದ ನಟಿ ಲೀಲಾವತಿ

    ರ್ನಾಟಕ ವಿಧಾನಸಭೆ ಚುನಾವಣೆ (Legislative Assembly) ಕಣ ರಂಗೇರಿದೆ. ಸುದೀಪ್ ಸೇರಿದಂತೆ ಹಲವು ನಟರು ನಾನಾ ಪಕ್ಷಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಟಿ ಲೀಲಾವತಿ (Leelavathi) ಮತದಾನ (Voting) ಮಾಡುವ ಮೂಲಕ ಮಾದರಿಯಾಗಿದ್ದಾರೆ. ಮೇ 10ರಂದು ಮತದಾನ ದಿನಾಂಕ ಘೋಷಣೆ ಆಗಿದ್ದರೂ, ಚುನಾವಣೆ ಆಯೋಗ ಹಿರಿಯ ನಾಗರಿಕರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಇಂದು ಲೀಲಾವತಿ ಅವರು ಮತದಾನ ಮಾಡಿದ್ದಾರೆ. ಈ ಬಾರಿಯ ಮತದಾನ ಮಾಡಿದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಎಂಭತ್ತು ವರ್ಷ ತುಂಬಿದ ನಾಗರಿಕರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ ಚುನಾವಣೆ (Election) ಆಯೋಗ. ಇದರ ಅಡಿಯಲ್ಲಿ ಹಿರಿಯ ನಟಿ ಲೀಲಾವತಿ, ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಮನೆಯಲ್ಲಿ ಮತದಾನ ಮಾಡಿದ್ದಾರೆ. ಮಗ ವಿನೋದ್ ರಾಜ್ (Vinod) ಸಹಾಯದಿಂದ ಅವರು ಮನೆಯಲ್ಲಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಪತಿ ಜೊತೆ ವಿದೇಶಕ್ಕೆ ಹಾರಿದ ‘ಬಿಗ್ ಬಾಸ್’ ಬೆಡಗಿ ಅಕ್ಷತಾ ಕುಕಿ

    ಈ ಸಂದರ್ಭದಲ್ಲಿ ಮಾತನಾಡಿದ ಲೀಲಾವತಿ, ‘ಚುನಾವಣೆ ಆಯೋಗ ಈ ಅವಕಾಶ ಕಲ್ಪಿಸಿದ್ದು ನನ್ನಂತಹ ಹಿರಿಯರಿಗೆ ಅನುಕೂಲವಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ’ ಎಂದು ಹೇಳಿದರು. ಮತದಾನ ಮನೆಯಲ್ಲೇ ಮಾಡಿದ್ದು ಸಂಭ್ರಮ ತಂದಿದೆ ಎಂದಿದ್ದಾರೆ. ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದೆ.

  • ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸದೊಂದಿಗೆ ಹೋಗುತ್ತಿದ್ದೇನೆ: ಬಿಎಸ್‌ವೈ ವಿದಾಯ ಭಾಷಣ

    ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸದೊಂದಿಗೆ ಹೋಗುತ್ತಿದ್ದೇನೆ: ಬಿಎಸ್‌ವೈ ವಿದಾಯ ಭಾಷಣ

    ಬೆಂಗಳೂರು: ಪಕ್ಷದ ಏಳಿಗೆಗಾಗಿ, ಪಕ್ಷವನ್ನು ಬೆಳೆಸಲು ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ಆ ವಿಶ್ವಾಸದೊಂದಿಗೆ ಇಲ್ಲಿಂದ ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ವಿಧಾನಸಭೆಯಲ್ಲಿ ವಿದಾಯ ಭಾಷಣ (Farewell Speech) ಮಾಡಿದ್ದಾರೆ.

    ವಿಧಾನ ಸಭೆಯಲ್ಲಿ ಮಾತನಾಡಿದ ಅವರು, ಈ ಸದನದವನ್ನು ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು ಎಂದು ನುಡಿದರು.

    ಶಿಕಾರಿಪುರದ ಜನರಿಗೆ ಧನ್ಯವಾದ ತಿಳಿಸಿದ ಯಡಿಯೂರಪ್ಪ, ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಪ್ರಧಾನಿ ನರೇಂದ್ರ ಮೋದಿ ನನ್ನ ಹುಟ್ಟು ಹಬ್ಬಕ್ಕೆ ಬರಲಿದ್ದಾರೆ. ಅಂದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದರು.

    ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ ಬಿಎಸ್‌ವೈ, ಅವರು ನಮಗೆ ಆದರ್ಶ. ಅವರನ್ನು ನೋಡಿ ಕಲಿಯುವಂತದ್ದು ತುಂಬಾ ಇದೆ. ಈ ವಯಸ್ಸಿನಲ್ಲೂ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡುತ್ತಾರೆ, ಚಿಂತನೆ ಮಾಡುತ್ತಾರೆ. ಅವರು ನಮಗೆ ಆದರ್ಶ ಎಂದರು. ಇದೇ ವೇಳೆ ವಾಜಪೇಯಿಯವರನ್ನು ಯಡಿಯೂರಪ್ಪ ಅವರು ನೆನೆಸಿಕೊಂಡಾಗ ಪಕ್ಷಭೇದ ಮರೆತು ಶಾಸಕರು ಚಪ್ಪಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಟಿ ರವಿಗೆ ಮೂಳೆ ಬಿರಿಯಾನಿ, ಚಿಕನ್ ಪಾರ್ಸೆಲ್ ಮಾಡಿದ ಕೈ ಪಡೆ

    ಸಿಎಂ ಬಸವರಾಜ ಬೊಮ್ಮಾಯಿ ಜನರು ಮರೆಯಲಾಗದ ರೀತಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಕೊಡುಗೆ ಕೊಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಅದರ ಫಲ ಅವರಿಗೆ ಸಿಗಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಎಟಿ ರಾಮಸ್ವಾಮಿ ಸೇರಿದಂತೆ ಹಲವರು ಉತ್ತಮ ಕೆಲಸ ಮಾಡಿದ್ದಾರೆ ಎಂದರು.

    ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣ ಆರ್‌ಎಸ್‌ಎಸ್. ಅಲ್ಲಿ ಸಿಕ್ಕಿದ ತರಬೇತಿಯಿಂದ ನನಗೆ ಇಷ್ಟೆಲ್ಲಾ ಸ್ಥಾನಮಾನಗಳು ಸಿಕ್ಕಿದೆ. ನಾನು ಇನ್ನು ಚುನಾವಣೆಗೆ ನಿಲ್ಲಲ್ಲ ಎಂಬ ತೀರ್ಮಾನ ಮಾಡಿದ್ದೇನೆ. ಮತ್ತೆ ರಾಜ್ಯದಲ್ಲಿ ಓಡಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ನೀವೆಲ್ಲರೂ ಮತ್ತೆ ಆಯ್ಕೆಯಾಗಿ ಬರಬೇಕು. ಆಡಳಿತ ಪಕ್ಷದ ಯಾರೂ ವಿಚಲಿತರಾಗಬೇಕಿಲ್ಲ. ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ನನಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ – ಬೊಮ್ಮಾಯಿ ಭಾವುಕ

    ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ – ಬೊಮ್ಮಾಯಿ ಭಾವುಕ

    ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಂಪುಟದಲ್ಲಿ (Legislative Assembly) ಪೌರ ಕಾರ್ಮಿಕರ (Civic Workers) ಕಾಯಂ ಮಾಡುವ ತೀರ್ಮಾನ ತೆಗೆದುಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪೌರಕಾರ್ಮಿರ ದಿನಾಚರಣೆಯ ಪ್ರಯುಕ್ತ ಉಪಾಹಾರ ಸವಿದಿದ್ದಾರೆ.

    ರೇಸ್‌ಕೋರ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ 500ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಿದ್ದರು. ಬೆಳಿಗ್ಗೆ 9.30ಕ್ಕೆ ಸಿಎಂ ಸಹ ಪೌರ ಕಾರ್ಮಿಕರೊಂದಿಗೆ ಇಡ್ಲಿ, ವಡೆ, ಉಪ್ಪಿಟ್ಟು, ಕೇಸರಿಬಾತ್ ಉಪಹಾರ ಸವಿದಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಹಿಂಸಾಚಾರ – PFI ವಿರುದ್ಧ ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಕೇಸ್‌

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪೌರಕಾರ್ಮಿಕರು ಯಾವ ರೀತಿ ಕೆಲಸ ಮಾಡ್ತಾರೆ ಅಂತಾ ನೋಡಿದ್ರೆ ಕಣ್ಣೀರು ಬರುತ್ತೆ ಎಂದು ಭಾವುಕರಾಗಿದ್ದಾರೆ.

    ಬಹಳ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗಾಗಿ ಒಂದು ಸಮಿತಿ ಮಾಡಿದ್ದೇವೆ. ಅಲ್ಲದೇ 11,133 ಪೌರ ಕಾರ್ಮಿಕರ ಕಾಯಂ ನೇಮಕಾತಿಯನ್ನು ತಕ್ಷಣ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ 43 ಸಾವಿರ ಪೌರಕಾರ್ಮಿಕರನ್ನೂ ಕಾಯಂ ಮಾಡಲಾಗುತ್ತದೆ. ಪೌರಕಾರ್ಮಿಕರಿಗೆ ಸೇವೆ ಮಾಡಲು ಭಗವಂತ ಅವಕಾಶ ಕೊಟ್ಟಿದ್ದಾನೆ. ಈ ವಿಚಾರದಲ್ಲಿ ಯಾರೂ ಗೊಂದಲ ಮಾಡಿಕೊಳ್ಳುವ ಅಗತ್ಯ ಇಲ್ಲ. ನಾನು ಸಿಎಂ ಆಗಿ ನನ್ನ ಕರ್ತವ್ಯ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: Bigg Boss 9- ‘ಕೆಂಡಸಂಪಿಗೆ’ ಧಾರಾವಾಹಿಯಲ್ಲಿ ದಿಢೀರ್ ಅಂತ ರಾಜೇಶ್ ಸಾವು: ಬಿಗ್ ಬಾಸ್ ಮನೆಗೆ ಬರ್ತಾರಾ ನಟ ಸುನೀಲ್?

    ಪೌರಕಾರ್ಮಿಕರು ಯಾವ ರೀತಿ ಕೆಲಸ ಮಾಡ್ತಾರೆ ಅಂತಾ ನೋಡಿದ್ರೆ ಕಣ್ಣೀರು ಬರುತ್ತೆ, ಯಾರಾದ್ರು ಸೇವೆ ಮಾಡಬೇಕು ಅಂದ್ರೆ ಮೊದಲು ನಿಮ್ಮ ಸೇವೆ ಮಾಡಬೇಕು. ನಮ್ಮ ಸರ್ಕಾರದಲ್ಲಿ ಎಲ್ಲರಿಗೂ ಸೇವಾ ಭದ್ರತೆ ಕೊಟ್ಟೆ ಕೊಡ್ತೀವಿ. ಹಿಂದಿನ ಸರ್ಕಾರಗಳು ಮಾಡದೇ ಇರೋದನ್ನ ನಮ್ಮ ಸರ್ಕಾರ ಮಾಡಿದೆ. ಇತರೆ ಸೌಲಭ್ಯ ಏನೇ ಇದ್ರು ನಮ್ಮ ಗಮನಕ್ಕೆ ತನ್ನಿ, ಅದನ್ನೂ ಮಾಡುವ ಕೆಲಸ ಮಾಡ್ತೀನಿ ಎಂಬ ಭರವಸೆ ನೀಡಿದ್ದಾರೆ.

    ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ (Govind Karjol), ಕೋಟಾ ಶ್ರೀನಿವಾಸ ಪೂಜಾರಿ, ಸಿಸಿ ಪಾಟೀಲ್ ಪರಿಷತ್ ಸದಸ್ಯರಾದ ಚಲವಾದಿ ನಾರಾಯಣ ಸ್ವಾಮಿ, ಶಾಸಕ ಎನ್.ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

    ತವರು ಕ್ಷೇತ್ರದಲ್ಲೇ ಗ್ರಾಮವಾಸ್ತವ್ಯ:
    ಮುಂದಿನ ವಾರದಿಂದ ಸಿಎಂ ಬೊಮ್ಮಾಯಿ 52 ವಿಧಾನಸಭಾ ಕ್ಷೇತ್ರಗಳ ಪ್ರವಾಸದ ಸಂದರ್ಭದಲ್ಲಿ ಗ್ರಾಮ ವಾಸ್ತವ್ಯ ಹೂಡಲು ಸಿದ್ಧತೆ ನಡೆಸಿದ್ದಾರೆ. ತವರು ಕ್ಷೇತ್ರದಿಂದಲೇ ಗ್ರಾಮ ವಾಸ್ತವ್ಯಕ್ಕೆ ಚಿಂತಿಸಿರುವ ಸಿಎಂ, ಗ್ರಾಮವಾಸ್ತವ್ಯ ಮೂಲಕ ಶಿಗ್ಗಾಂವಿ ಮತದಾರರತ್ತಲೂ ಗಮನಹರಿಸಲು ಸಜ್ಜಾಗಿದ್ದಾರೆ. ರಾಜಕೀಯ ಒತ್ತಡದ ಮಧ್ಯೆಯೂ ಸ್ವಂತ ಕ್ಷೇತ್ರದತ್ತ ಹೆಚ್ಚು ಸುಳಿಯದ ಸಿಎಂ, ಇದೀಗ ಗ್ರಾಮ ವಾಸ್ತವ್ಯದ ಮೂಲಕ ಮತದಾರರ ವಿಶ್ವಾಸ ಹೆಚ್ಚಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು ಇವತ್ತೇ ಮದುವೆ ಗಂಡು ಆಗೋಕೆ ತಯಾರಿದ್ದೇನೆ: ಕೆ.ಎಸ್. ಈಶ್ವರಪ್ಪ

    ನಾನು ಇವತ್ತೇ ಮದುವೆ ಗಂಡು ಆಗೋಕೆ ತಯಾರಿದ್ದೇನೆ: ಕೆ.ಎಸ್. ಈಶ್ವರಪ್ಪ

    ಶಿವಮೊಗ್ಗ: ನಾನು ಇವತ್ತೇ ಮದುವೆ ಗಂಡು (Groom) ಆಗಲು ತಯಾರಾಗಿದ್ದೇನೆ ಎಂದು ಹೇಳುವ ಮೂಲಕ ತಾವು ಮಂತ್ರಿಯಾಗಲು(Minister) ಸಿದ್ಧರಿರುವುದಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ(KSEshwarappa) ಹೇಳಿದ್ದಾರೆ.

    Eshwarappa

    ಶಿವಮೊಗ್ಗದಲ್ಲಿ ಮಾಧ್ಯಮದವರು ಮಂತ್ರಿ ಸ್ಥಾನ ನೀಡದಿದ್ದಕ್ಕೆ ನೀವು ಅಸಮಾಧಾನಗೊಂಡಿದ್ದಾರಾ? ಇದಕ್ಕಾಗಿಯೇ ಸದನಕ್ಕೆ ಹಾಜರಾಗುತ್ತಿಲ್ಲವಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು, ಈ ಬಗ್ಗೆ ನಮ್ಮ ನಾಯಕರಾದ ಯಡಿಯೂರಪ್ಪ (Yediyurappa) ಹಾಗೂ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಕೇಳಬೇಕು. ನನ್ನನ್ನು ಕೇಳಿದರೆ ನಾನು ಏನು ಹೇಳುವುದಕ್ಕೆ ಆಗುತ್ತದೆ. ಇವತ್ತು ಬಂದು ಮಂತ್ರಿ ಆಗು ಅಂದರೆ ಇವತ್ತೆ ಆಗುತ್ತೇನೆ ಇದೆಲ್ಲಾ ನನ್ನ ಕೈಯಲ್ಲಿ ಇಲ್ಲ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavraj Bommai), ಯಡಿಯೂರಪ್ಪ, ಕಟೀಲ್ ಹಾಗೂ ಕೇಂದ್ರದ ನಾಯಕರು ಚರ್ಚೆ ಮಾಡಬೇಕು. ಆದರೆ ಏಕೆ ಅವರು ಯಾಕೆ ಹಿಂದೆ ಮುಂದೆ ನೋಡುತ್ತಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.

    ಎಷ್ಟು ಖಾಲಿ ಇದೆಯೋ ಅದೆಲ್ಲಾ ಭರ್ತಿ ಮಾಡಲಿ ಎನ್ನುವುದು ನನ್ನ ಅಪೇಕ್ಷೆ. ಆರೋಪ ಮುಕ್ತರಾದ ಮೇಲೆ ಅವಕಾಶ ಕೊಡುತ್ತೇವೆ ಅಂದಿದ್ದರು. ಹಾಗಾಗಿ ನೀವು ಈ ಪ್ರಶ್ನೆಯನ್ನು ಈಗ ಅವರಿಗೆ ಹೋಗಿ ಕೇಳಿ. ನಾನು ಇವತ್ತು ಮದುವೆ ಗಂಡು ಆಗುವುದಕ್ಕೆ ತಯಾರಿದ್ದೇನೆ. ತೀರ್ಮಾನ ಮಾಡಬೇಕಾದವರು ಹಿರಿಯರು. ಅವರೇನು ಮಾಡಲಿಲ್ಲ ಅಂದರೆ ನಾನೇನು ಮಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

    ನನ್ನ ಮನೆ ದೇವರು ಚೌಡೇಶ್ವರಿ ಈ ಆರೋಪದಿಂದ ನನ್ನನ್ನು ಮುಕ್ತ ಮಾಡಿದ್ದಾಳೆ. ನಾನು ಆರೋಪ ಮುಕ್ತ ಆಗಿರುವುದರಿಂದ ಸಿಎಂ, ಯಡಿಯೂರಪ್ಪ, ಕಟೀಲ್ ಬೇಗ ತೀರ್ಮಾನ ತೆಗೆದುಕೊಳ್ಳಬೇಕು. ನನ್ನ ಪ್ರಕರಣವೇ ಬೇರೆ, ಬೇರೆಯವರ ಪ್ರಕರಣವೇ ಬೇರೆ ಹೀಗಾಗಿ ನಮ್ಮ ನಾಯಕರು ನಿರ್ಧರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನೇಪಾಳದಲ್ಲಿ ಭೂಕುಸಿತ – 14 ಸಾವು, 10 ಮಂದಿ ನಾಪತ್ತೆ

    Live Tv
    [brid partner=56869869 player=32851 video=960834 autoplay=true]

  • ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ – ಸುಳಿವು ಕೊಟ್ಟ ಸಂಜಯ್ ರಾವತ್

    ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ – ಸುಳಿವು ಕೊಟ್ಟ ಸಂಜಯ್ ರಾವತ್

    ಮುಂಬೈ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡುವ ಮೂಲಕ ಹೊಸ ತಿರುವನ್ನು ಕೊಟ್ಟಿದ್ದಾರೆ.

    ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿ ಸರ್ಕಾರಕ್ಕೆ ಸಂಕಟ ಬಂದಿದೆ. ಈ ಹಿನ್ನೆಲೆ ನಿನ್ನೆಯಿಂದ ಈ ಕುರಿತು ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಸಂಜಯ್ ರಾವತ್ ಟ್ವೀಟ್ ಮಾಡಿದ್ದು, ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣೆಗೆಗಳ ಪಯಣ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಶಾಸಕಾಂಗ ಸಭೆಯನ್ನು ವಿಸರ್ಜನೆ ಸುಳಿವು ಕೊಟ್ಟಿದ್ದಾರೆ. ಇದನ್ನೂ ಓದಿ:  ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ

    ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಏಕನಾಥ್ ಶಿಂಧೆ ಅವರೊಂದಿಗಿರುವ ಮಾತುಕತೆ ನಡೆಸಲಾಗುತ್ತಿದೆ. ಎಲ್ಲರೂ ಶಿವಸೇನೆಯಲ್ಲಿಯೇ ಇರುತ್ತಾರೆ. ನಮ್ಮ ಪಕ್ಷ ಸತತ ಹೋರಾಟ ಮಾಡುತ್ತೆ. ಹೆಚ್ಚೆಂದರೆ ಅಧಿಕಾರ ಕಳೆದುಕೊಳ್ಳಬಹುದು ಆದರೆ ಹೋರಾಟ ಮುಂದುವರಿಸುತ್ತೇವೆ ಎಂದಿದ್ದರು.

    ಈ ಮಧ್ಯೆ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕ್ಷಣಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಸರ್ಕಾರ ಮುಂದುವರೆಯುತ್ತಾ? ಪತನಗೊಳ್ಳುತ್ತಾ ಎಂಬ ಪ್ರಶ್ನೆಗೆ ಕೆಲ ದಿನಗಳಲ್ಲಿ ಉತ್ತರ ಸಿಗಲಿದೆ. ಇದನ್ನೂ ಓದಿ: ಇಬ್ಭಾಗದತ್ತ ಶಿವಸೇನೆ – ಮಹಾರಾಷ್ಟ್ರದಲ್ಲಿ ಮುಂದೇನಾಗಬಹುದು? ಅಂಕಿ ಸಂಖ್ಯೆ ಲೆಕ್ಕಾಚಾರ ಏನು?

    Live Tv

  • ಸದನದಲ್ಲೇ ಅಶಿಸ್ತಿನ ವರ್ತನೆ ತೋರಿದ್ದ 7 ಬಿಜೆಪಿ ಶಾಸಕರ ಅಮಾನತು ವಾಪಸ್

    ಸದನದಲ್ಲೇ ಅಶಿಸ್ತಿನ ವರ್ತನೆ ತೋರಿದ್ದ 7 ಬಿಜೆಪಿ ಶಾಸಕರ ಅಮಾನತು ವಾಪಸ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಅಮಾನತುಗೊಂಡಿದ್ದ 7 ಬಿಜೆಪಿ ಶಾಸಕರ ಅಮಾನತನ್ನು ವಾಪಸ್ ಪಡೆಯಲಾಗಿದೆ.

    ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 7 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಮಾರ್ಚ್ 9ರಂದು ಸುದೀಪ್ ಮುಖೋಪಾಧ್ಯಾಯ, ಮಿಹಿರ್ ಗೋಸ್ವಾಮಿ ಹಾಗೂ ಮಾರ್ಚ್ 28ರಂದು ಸುವೆಂದು ಅಧಿಕಾರಿ, ಮನೋಜ್ ತಿಗ್ಗಾ, ನರಹರಿ ಮಹತೋ, ಮಿಹಿರ್ ಗೋಸ್ವಾಮಿ ಮತ್ತು ಶಂಕರ್ ಘೋಷ್ ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ: ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    bjP

    ಬಿಜೆಪಿ ಶಾಸಕರು ತಮ್ಮ ಅಮಾನತು ಹಿಂಪಡೆಯಲು ಸ್ಪೀಕರ್ ಬಿಮನ್ ಬಂಧೋಪಾಧ್ಯಾಯ ಅವರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ತಾಂತ್ರಿಕ ದೋಷದ ಕಾರಣ ಉಲ್ಲೇಖಿಸಿ ಸ್ಪೀಕರ್ ಅವರು ಮನವಿಯನ್ನು ಮರುಸಲ್ಲಿಸುವಂತೆ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕರು ವಿಧಾನಸಭೆಯ ಮುಂಭಾಗವೇ ಪ್ರತಿಭಟನೆ ನಡೆಸಿದ್ದರು. ಮಂಗಳವಾರ ಸುವೇಂದು ಅಧಿಕಾರಿ ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ವಿಷಯವನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಮಾತನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಜೆಡಿಎಸ್‌ ಸೋಲಿನಿಂದ ಸಂತಸವಾಗಿದೆ: ತಮ್ಮ ಪಕ್ಷದ ವಿರುದ್ಧವೇ ಮರಿತಿಬ್ಬೇಗೌಡ ಹೇಳಿಕೆ 

    ಏನಿದು ಘಟನೆ?
    ವಿಧಾನಸಭಾ ಅಧಿವೇಶನದಲ್ಲಿ ಪಶ್ಚಿಮ ಬಂಗಾಳದ ಬಿರ್ಭುಮ್ ಹಿಂಸಾಚಾರದ ಬಗ್ಗೆ ಚರ್ಚಿಸುವ ವೇಳೆ ಪ್ರತಿಪಕ್ಷಗಳ ಬೇಡಿಕೆಯ ನಂತರ ಉಂಟಾದ ಗದ್ದಲದಲ್ಲಿ ಭಾಗಿಯಾಗಿದ್ದಾರೆ ಶಾಸಕರು ಭಾಗಿಯಾಗಿದ್ದರು. ಹಾಗಾಗಿ ಅಶಿಸ್ತಿನ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿತ್ತು.

    Live Tv

  • ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

    ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

    ಉಡುಪಿ: 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಬೇಡಿಕೆಯಿದೆ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ಗೆ 20 ಕಡೆ ಒಬ್ಬನೇ ವ್ಯಕ್ತಿಯನ್ನು ದಾರಿದ್ರ್ಯ ಬಂದಿದೆ ಎಂದು ಟಾಂಗ್ ನೀಡಿದ್ದಾರೆ.

    sunil kumar

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಕಳೆದ ಬಾರಿ ಎರಡು ಕಡೆ ಚುನಾವಣೆಗೆ ನಿಂತಿದ್ದರು. ಒಂದು ಕಡೆ ಸೋತು ಮತ್ತೊಂದು ಕಡೆ ಕಷ್ಟಪಟ್ಟು ಗೆದ್ದಿದ್ದರು. ಈಗ 20 ಕಡೆ ನಿಲ್ಲಲು ಯಾರು ಸಲಹೆ ಕೊಡುತ್ತಾರೋ ಗೊತ್ತಿಲ್ಲ. ಎಷ್ಟು ಕಡೆಯಿಂದ ಅವಕಾಶ ಕೊಡಬೇಕು ಎಂದು ಚುನಾವಣಾ ಆಯೋಗ ನಿರ್ಧಾರ ಮಾಡಲಿ ಎಂದಿದ್ದಾರೆ. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

    H VISHWANSTH SIDDARAMAIAH

    20 ಕಡೆ ಒಬ್ಬನೇ ವ್ಯಕ್ತಿಯನ್ನು ನಿಲ್ಲಿಸುವ ದಾರಿದ್ರ‍್ಯತೆ ಕಾಂಗ್ರೆಸ್ಸಿಗೆ ಬಂದಿದೆ. ಅಲ್ಲಿಗೆ ಕಾಂಗ್ರೆಸ್‌ಗೆ ಬೇರೆ ಅಭ್ಯರ್ಥಿಗಳೇ ಇಲ್ಲದಂತಾಗಿದೆ. ಅಭ್ಯರ್ಥಿಗಳ ಕೊರತೆ ಇದೆ ಎನ್ನುವುದು ಸ್ಪಷ್ಟವಾಗಿದೆ. ಆ ಪಕ್ಷವನ್ನು ಭಗವಂತನೇ ಕಾಪಾಡಬೇಕು ಎಂದು ಸಚಿವ ಸುನಿಲ್‌ಕುಮಾರ್ ವ್ಯಂಗ್ಯವಾಡಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದೇನು?: ಬಿಜೆಪಿ ಆಪರೇಷನ್ ಕಮಲ ಶುರು ಮಾಡುತ್ತಿದ್ದಂತೆಯೇ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 20 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬೇಡಿಕೆಯಿದೆ ಎಂಬ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

    SIDDARAMAIAH

    ಕಳೆದ ಬಾರಿ ಪ್ರತಿಷ್ಠೆಯ ಕಣವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಪ್ರತಿಸ್ಪರ್ಧಿಯಾಗಿದ್ದ ಹಾಲಿ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ 36 ಸಾವಿರ ಮತಗಳ ಅಂತರದಿಂದ ಸೋತು ತೀವ್ರ ಮುಖಭಂಗ ಅನುಭವಿಸಿದ್ದರು. ಅಲ್ಲದೆ, ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲ್ಲುವುದಾಗಿ ಘೋಷಿಸಿದ್ದ ಬಾದಾಮಿ ಕ್ಷೇತ್ರದಲ್ಲಿ ಕೇವಲ 1696 ಮತಗಳ ಅಂತರದಿಂದ ಜಯಗಳಿಸಿದ್ದರು. ಇದರಿಂದ ಆರಂಭದ ಒಂದೂವರೆ ವರ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಸರ್ಕಾರ ರಚಿಸಬೇಕಾದ ಅನಿವಾರ್ಯತೆ ಉಂಟಾಗಿತ್ತು.

    SUNILKUMAR

    ಇದೀಗ 2023ರ ಚುನಾವಣೆಗೆ ತಮಗೆ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬೇಡಿಕೆ ಇರುವುದಾಗಿ ಅವರು ಹೇಳಿದ್ದರು. ನನಗೆ ಆಕ್ಷೇತ್ರ, ಈ ಕ್ಷೇತ್ರ ಅಂತಲ್ಲ. ಬಾದಾಮಿ ಇಲ್ವಾ? ಅಲ್ಲಿಂದಲೇ ಮತ್ತೆ ಸ್ಪರ್ಧಿಸಿದರೂ ಸ್ಪರ್ಧಿಸಬಹುದು. ಸುಮಾರು 20 ಕ್ಷೇತ್ರಗಳಲ್ಲಿ ಜನ ಕರೆಯುತ್ತಿದ್ದಾರೆ. ವರುಣಾ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಕೋಲಾರ ಸೇರಿದಂತೆ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಚುನಾವಣೆಗೆ ತುಂಬಾ ದಿನ ಇದೆ. ಹತ್ತಿರ ಬಂದಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ

    ವಿಶ್ವನಾಥ್ ಮತ್ತೆ ಆಹ್ವಾನ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಹ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಹ್ವಾನ ನೀಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ. ಅವರು ಸ್ಪರ್ಧಿಸಿದರೆ, ನಾವೇ ಗೆಲ್ಲಿಸುತ್ತೇವೆ ಎಂದು ಇಂದೂ ಮತ್ತೆ ಆಹ್ವಾನ ನೀಡಿದ್ದಾರೆ.

  • ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ: ಕೋಡಿಹಳ್ಳಿ

    ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ: ಕೋಡಿಹಳ್ಳಿ

    ಹಾವೇರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ರಾಜ್ಯದಲ್ಲಿ ತತ್ವ ಸಿದ್ಧಾಂತಗಳಿಲ್ಲದ ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸದಿರುವ ಪಕ್ಷಗಳಿವೆ ಎಂದು ರಾಜ್ಯ ರೈತಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಹಾವೇರಿಯಲ್ಲಿ ಮಾತನಾಡಿದ ಚಂದ್ರಶೇಖರ್, ಇದೇ ತಿಂಗಳು 21ರಂದು ಬೆಂಗಳೂರಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ಪರ್ಯಾಯ ರಾಜಕಾರಣದ ಬಗ್ಗೆ ಘೋಷಣೆ ಮಾಡಲಾಗುವುದು. ಈಗಾಗಲೇ ಮಮತಾ ಬ್ಯಾನರ್ಜಿ, ದೆಹಲಿಯಿಂದ ಎಎಪಿ ಪಕ್ಷದ ಮುಖಂಡರು ಸಂಪರ್ಕ ಮಾಡಿದ್ದಾರೆ. ನಾವು ಯಾರ ಜೊತೆಗೂ ಕೈ ಜೋಡಿಸಬೇಕು ಎಂದೇನಿಲ್ಲ. ಏಪ್ರಿಲ್ 11 ರಂದು ರಾಜ್ಯ ಕೋರ ಕಮಿಟಿ ಸಭೆ ಇದೆ. ಸಾಧಕ ಬಾಧಕಗಳನ್ನು ಚರ್ಚಿಸಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಲವ್ ಜಿಹಾದ್ ಕೇಸ್‍ಗೆ ಟ್ವಿಸ್ಟ್ – ನನ್ನನ್ನು ಯಾರು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದಿಲ್ಲ ಅಂದ ಯುವತಿ

    ನಾವು ಈಗ ಸ್ವತಂತ್ರ್ಯರಾಗಿದ್ದು, ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿದ್ದೇವೆ. ಸಿದ್ಧಾಂತಕ್ಕೆ ದಕ್ಕೆ ಬಾರದಂತೆ ಭ್ರಷ್ಟಾಚಾರ ಮುಕ್ತವಾಗಿ ಚುನಾವಣೆ ಮಾಡುತ್ತೇವೆ ಹಾಗೂ ಗೆಲ್ಲುತ್ತೇವೆ ಕೂಡ. ಬೇರೆಯವರಂತೆ ಇಪ್ಪತ್ತು-ಮೂವತ್ತು ಕೋಟಿ ಹೆಂಡ ಇಟ್ಟುಕೊಂಡು ಚುನಾವಣೆ ಮಾಡುವುದಾದರೆ ನಾವು ಕಳ್ಳರೆ ಆಗಬೇಕಾಗುತ್ತದೆ. ಬೊಮ್ಮಾಯಿಯವರ ಶೇ.40 ರಷ್ಟು ಸರ್ಕಾರಕ್ಕೆ ನಾವು ಪರ್ಯಾಯ ಆಗುತ್ತೇವೆ ಎಂದು ತಿಳಿಸಿದರು.

    ಮಾವು ಮಾರಾಟದಲ್ಲಿ ಹಿಂದೂ ಮುಸ್ಲಿಂ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಮನಗರದಲ್ಲಿ ರಾಜ್ಯದಲ್ಲೇ ಅತೀ ಹೆಚ್ಚು ಮಾವು ಉತ್ಪಾದನೆ ಮಾಡಲಾಗುತ್ತದೆ. ಅಲ್ಲಿ ಮಾರುಕಟ್ಟೆ ನಡೆಯುವುದೇ ಮುಸ್ಲಿಮರ ಕೈಯಲ್ಲಿ. ಅವರು ಬೆಲೆ ಸರಿಯಾಗಿ ಕೊಡುವುದಿಲ್ಲ ಅಥವಾ ಮುಸ್ಲಿಮರು ಎನ್ನುವುದು ಒಂದೇ ಟಾರ್ಗೆಟಾ? ಸಿಎಂ ಬೊಮ್ಮಾಯಿಯವರೇ, ಮಾವು ವಾರ್ಷಿಕ ಬೆಳೆ ಈ ಬಾರಿ ಫಸಲು ಕಡಿಮೆ ಇದೆ. ಮಾವಿಗೆ ವೈಜ್ಞಾನಿಕ ದರ ನೀಡಿ. ಮಾವಿನ ದರ ಕಡಿಮೆಯಾದರೆ ಸರ್ಕಾರದವರು ಖರೀದಿ ಮಾಡುತ್ತೀವಿ ಎಂದು ಘೋಷಣೆ ಮಾಡಿ. ಅದು ಬಿಟ್ಟು ಇಂತಹ ಕನಿಷ್ಠವಾದ ಕಾರ್ಯಕ್ರಮಗಳನ್ನು ಮಾಡಬೇಡಿ. ಸರ್ಕಾರ ಜನರ ಸಂಕಷ್ಟಕ್ಕೆ ಪರಿಹಾರ ಸೂಚಿಸಬೇಕೆ ಹೊರತು ನೀವೇ ಸಮಸ್ಯೆ ಸೃಷ್ಟಿ ಮಾಡಿ ಅಲ್ಲೋಲ ಕಲ್ಲೋಲ ಮಾಡಬೇಡಿ ಎಂದು ಗುಡುಗಿದರು. ಇದನ್ನೂ ಓದಿ: ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್

    ಮನುಷ್ಯ ದ್ವೇಷವನ್ನು ಹುಟ್ಟು ಹಾಕುವುದಾದರೆ ಸರ್ಕಾರವನ್ನು ನೀವೇ ಮಾಡ್ತಾ ಇದ್ದೀರಾ? ಅಥವಾ ವಿರೋಧ ಪಕ್ಷದವರು ಸರ್ಕಾರ ನಡೆಸುತ್ತಿದ್ದರಾ? ಸರ್ಕಾರದ ವಿರುದ್ಧ ಜನರನ್ನು ಸಂಘಟಿಸುವುದು ವಿರೋಧ ಪಕ್ಷದವರ ಕೆಲಸ. ಆದರೆ ಸರ್ಕಾರದವರೇ ಈ ಕೆಲಸಕ್ಕೆ ಇಳಿದುಬಿಟ್ಟಿದ್ದೀರಿ. ವೋಟ್ ಪರ್ಸಂಟೇಜ್ ಹೆಚ್ಚಾಗುತ್ತದೆ ಎಂದೋ? ಇದರಿಂದ ವೋಟ್ ಪರ್ಸಂಟೇಜ್ ಜಾಸ್ತಿ ಆಗುವುದಿಲ್ಲ. ನಿಮ್ಮ ಬಳಿ ಇಂತಹ ಅಜೆಂಡಾಗಳು ಬಹಳ ಇವೆ ಎಂದು ಕೇಳಿದ್ದೇನೆ. ಚುನಾವಣೆ ಬರುವವರೆಗೂ ಇದನ್ನು ಟ್ರಯಲ್ ಮಾಡುತ್ತಾ ಇರುತ್ತೀರಿ ಎಂದು ಕೇಳಿದ್ದೇನೆ ಎಂದು ಟೀಕಿಸಿದರು.

    ನಿಮ್ಮ ಪಕ್ಷದ ಮಾನ ಮರ್ಯಾದೆ ಕಡಿಮೆ ಮಾಡಿಕೊಳ್ಳುವುದಕ್ಕೆ ಇಂತಹ ಕಾರ್ಯಕ್ರಮಗಳನ್ನು ಮುಂದುವರೆಸಿ. ಜನರು ಒಂದು-ಎರಡು ಸುಳ್ಳುಗಳನ್ನು ನಂಬುತ್ತಾರೆ. ಸುಳ್ಳು ಹೇಳುವುದೇ ನಿಮ್ಮ ಜಾಯಮಾನ ಆಗಿಬಿಟ್ರೆ ನಿಮ್ಮನ್ನು ಡಸ್ಟ್ ಬಿನ್‌ಗೆ ಎಸೆದುಬಿಡುತ್ತಾರೆ. ಇದರ ಬಗ್ಗೆ ಬಿಜೆಪಿಯವರಿಗೆ ಎಚ್ಚರಿಕೆ ಇರಲಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.

  • ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಬೆಲೆ ಇಲ್ಲ: ಬೊಮ್ಮಾಯಿ

    ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಬೆಲೆ ಇಲ್ಲ: ಬೊಮ್ಮಾಯಿ

    ಬೆಂಗಳೂರು: ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಖಂಡಿಸಿದ್ದಾರೆ.

    ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಮೇಕೆದಾಟು ಯೋಜನೆ ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಿದ್ದೇವೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡಿನವರು ತಕರಾರು ಮಾಡುತ್ತಿದ್ದಾರೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಚುನಾವಣೆವರಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ

    ರಾಷ್ಟ್ರೀಯ ಹಸಿರು ನ್ಯಾಯಮಂಡಲಿ ನಮ್ಮ ಪರವಾಗಿ ಆದೇಶ ನೀಡಿದೆ. ತಮಿಳುನಾಡು ಅದರ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಯಾವುದೇ ಬೆಲೆ ಇಲ್ಲ ಹಾಗೂ ಕಾನೂನಿನ ಪ್ರಕಾರವೂ ಇಲ್ಲ. ರಾಜಕೀಯ ತಂತ್ರವಷ್ಟೇ. ಈ ರೀತಿಯ ಹತ್ತು ಹಲವಾರು ನಿರ್ಣಯಗಳಾಗಿವೆ. ಅದಕ್ಕೆ ಬೆಲೆ ಇಲ್ಲ. ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರ್ಕಾರ ತೆಗೆದುಗೊಳ್ಳಲಿದೆ ಎಂದಿದ್ದಾರೆ.

    ಇದೇ ವೇಳೆ ಬೆಳಗಾವಿ ಫೈಲ್ಸ್ ಸಿನಿಮಾ ಬರಲಿ ಎಂಬ ಶಿವಸೇನೆ ಮುಖಂಡ ಸಂಜಯ್ ರಾವತ್ ಟ್ವೀಟ್ ಪೋಸ್ಟ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ವಿಷಯದ ಬಗ್ಗೆ ಈಗಾಗಲೇ ತೀರ್ಪು ನೀಡಲಾಗಿದೆ. 1956ರಲ್ಲಿ ರಾಜ್ಯ ಪುನರ್ ವಿಂಗಡಣೆ ಆಯೋಗದ ಅನುಗುಣವಾಗಿ ಆಗಿದೆ. ಕನ್ನಡ ಮಾತನಾಡುವ ಸೊಲ್ಲಾಪುರ, ಅಕ್ಕಲ್ ಕೋಟೆ ಭಾಗಗಳು ಮಹಾರಾಷ್ಟ್ರದಲ್ಲಿ ಉಳಿದಿವೆ. ಸಂಜಯ್ ರಾವತ್ ಈ ರೀತಿ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಬೆಳಗಾವಿ ಹೆಸರಿನಲ್ಲಿ ಅಲ್ಲಿರುವ ಸಮಸ್ಯೆಗಳ ದಿಕ್ಕು ಬದಲಾಯಿಸಲು ಈ ಕೆಲಸವನ್ನು ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಿಎಂಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ತಮಿಳುನಾಡಿಗೆ ಪಾದಯತ್ರೆ ಯಾವಾಗ: ಡಿಕೆಶಿಗೆ ಬಿಜೆಪಿ ಪ್ರಶ್ನೆ

  • ಬೆಂಗಳೂರು ರಸ್ತೆಗಳಲ್ಲಿ ಸಂಚಾರ ಮಾಡಿದ್ರೆ ಹೆಚ್ಚಿನ ಅಪಾಯ: ಸಿಎಜಿ ವರದಿಯಲ್ಲಿ ಬಹಿರಂಗ

    ಬೆಂಗಳೂರು ರಸ್ತೆಗಳಲ್ಲಿ ಸಂಚಾರ ಮಾಡಿದ್ರೆ ಹೆಚ್ಚಿನ ಅಪಾಯ: ಸಿಎಜಿ ವರದಿಯಲ್ಲಿ ಬಹಿರಂಗ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ರಸ್ತೆಗಳು ಸಂಚಾರ ಮಾಡಲು ಯೋಗ್ಯ ಅಲ್ಲ ಎಂದು ಮಹಾಲೇಖಪಾಲರ(ಸಿಎಜಿ) ವರದಿ ತಿಳಿಸಿದೆ.

    ವಿಧಾನಸಭೆಯಲ್ಲಿ ಇವತ್ತು ರಸ್ತೆ ಸುರಕ್ಷತಾ ವಿಚಾರಗಳಿಗೆ ಸಂಬಂಧಿಸಿದ ಸಿಎಜಿ ವರದಿ ಮಂಡನೆ ಮಾಡಲಾಯಿತು. ಕೆಟ್ಟ ದುರಸ್ಥಿಗಳು ಮತ್ತು ರಸ್ತೆಯಲ್ಲಿನ ಅಪಾಯದ ಗುಂಡಿಗಳು ರಸ್ತೆ ಅಪಘಾತಗಳಿಗೆ ಕಾರಣವಾಗಿವೆ ಎಂದು ಸಿಎಜಿ ತನ್ನ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ.

    ವರದಿಯಲ್ಲಿ ಏನಿದೆ?
    ರಸ್ತೆ ವಿಸ್ತರಣೆಗಳ ಅತಿಕ್ರಮಣವೂ ಸೇರಿದಂತೆ ವಿವಿಧ ರೀತಿಯ ರಸ್ತೆ ಅಪಾಯಗಳಲ್ಲಿ ಇವೆ. ಅದರಲ್ಲೂ ಬಿಬಿಎಂಪಿ ರಸ್ತೆಗಳಲ್ಲಿ ಹೆಚ್ಚಿನ ಅಪಾಯಗಳು ಎದುರಾಗುತ್ತಿವೆ. ಅಂದರೆ ಪ್ರತಿ ಕಿಲೋಮೀಟರ್‍ಗೆ 19 ರಿಂದ 20 ಅಪಾಯಗಳು ಎದುರಾಗುತ್ತಿವೆ. ಇದನ್ನೂ ಓದಿ: ಯಡಿಯೂರಪ್ಪ, ಸಿಎಂ ಏನೇ ಮಾತಾಡಲಿ, ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ: ಡಿಕೆಶಿ

    ರಾಜ್ಯದೆಲ್ಲೆಡೆ ಹೆಚ್ಚಿನ ಸಂಖ್ಯೆಯ ವಾಹನಗಳು ತಮ್ಮ ನೋಂದಣಿ ಪ್ರಮಾಣಪತ್ರ ಅಥವಾ ಅರ್ಹತಾ ಪ್ರಮಾಣಪತ್ರಗಳನ್ನು ನವೀಕರಿಸದೇ ರಸ್ತೆಗಳಲ್ಲಿ ಸಂಚರಿಸುತ್ತಿವೆ. 22 ಜಿಲ್ಲೆಗಳಲ್ಲಿ ಆಘಾತ ಆರೈಕೆ ಕೇಂದ್ರಗಳನ್ನು (ಟಿಸಿಸಿ) ಸ್ಥಾಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿಲ್ಲ. ಇದನ್ನೂ ಓದಿ: ಹಿಜಬ್ ವಿವಾದ, ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂಕೋರ್ಟ್ – ಹೋಳಿ ರಜೆ ಬಳಿಕ ವಿಚಾರಣೆ

    ಅಂಬುಲೆನ್ಸ್‍ಗಳ ಮೂಲ ಸ್ಥಳವು ದೂರದಲ್ಲಿದ್ದುದರಿಂದ ಅಥವಾ ಪ್ರೀ-ಟ್ರಿಪ್ ವಿಳಂಬ 30 ನಿಮಿಷಗಳಿಗಿಂತ ಹೆಚ್ಚಾಗಿದ್ದರಿಂದ ಅಪಘಾತಗೊಂಡವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಸುಮಾರು 90,000 ಪ್ರಕರಣಗಳಲ್ಲಿ ಸಮಯೋಚಿತ ವೈದ್ಯಕೀಯ ಆರೈಕೆಯನ್ನು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅಪಘಾತಗಳನ್ನ, ಸಾವುಗಳನ್ನ ಕಡಿಮೆ ಮಾಡುವ ರಸ್ತೆ ಸುರಕ್ಷತಾ ಕ್ರಮಗಳು ಸಾಕಾರವಾಗಿಲ್ಲ.

    ಶಿಫಾರಸು ಏನು?
    – ಯಾವುದೇ ವಿಳಂಬವಿಲ್ಲದೆ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕಾಯ್ದೆ-2017 ರ ಅಡಿಯಲ್ಲಿ ನಿಯಮಗಳನ್ನು ಅಂತಿಮಗೊಳಿಸಬೇಕು
    – ಎಲ್ಲಾ ರಸ್ತೆ ಬಳಕೆದಾರರಿಗಾಗಿ ವಿವಿಧ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಬಹುದು.
    – ಅಪಘಾತಕ್ಕೊಳಗಾದವರು ಗೋಲ್ಡನ್ ಅವರ್‍ನಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ತಜ್ಞರನ್ನೊಳಗೊಂಡಂತೆ ಅಪಘಾತ ಆರೈಕೆ ಕೇಂದ್ರಗಳನ್ನು ಸ್ಥಾಪಿಸಬೇಕು.

    – ರಸ್ತೆ ಬಳಕೆದಾರರ ಅಗತ್ಯತೆಗಳನ್ನು ಪೂರೈಸಲು ಹೆದ್ದಾರಿ ಗಸ್ತು ವ್ಯವಸ್ಥೆಯನ್ನು ಬಲಪಡಿಸಬೇಕು.
    – ಆರ್‍ಟಿಒಗಳನ್ನು ಬಲಪಡಿಸಲು ಕ್ರಮ ತೆಗೆದುಕೊಳ್ಳಬೇಕು, ವೈಜ್ಞಾನಿಕ ಪರೀಕ್ಷಾ ಟ್ರ್ಯಾಕ್‍ಗಳನ್ನು ಒದಗಿಸಬೇಕು.
    – ವಿಳಂಬವನ್ನ ತಪ್ಪಿಸಲು ಅಂಬುಲೆನ್ಸ್‍ಗಳ ಮೂಲ ಸ್ಥಳಗಳನ್ನು ಸಮರ್ಪಕವಾಗಿ ಗುರುತಿಸಬೇಕು. ಅಂಬುಲೆನ್ಸ್ ಸಂಖ್ಯೆ ಹೆಚ್ಚಿಸಬೇಕು.