Tag: legislative council Election

  • ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿಎಸ್‌ವೈ

    ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ: ಬಿಎಸ್‌ವೈ

    -ಪರಿಷತ್ ಚುನಾವಣೆಗೆ ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು, ಬಿಜೆಪಿ 4 ಸ್ಥಾನದಲ್ಲಿ ಸ್ಪರ್ಧೆ

    ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.

    ಈ ಕುರಿತು ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ (Legislative Council Elections) ಮೈತ್ರಿ ಇರುತ್ತದೆ. ಜೆಡಿಎಸ್‌ಗೆ (JDS) 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾರವರು ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಕ್ಕೆ ಮುಂದಿನ 6 ದಿನಗಳ ಕಾಲ ಮಳೆಯ ಮುನ್ಸೂಚನೆ

    ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು (Narendra Modi) ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ? ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು. ಇದನ್ನೂ ಓದಿ:‌ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕಿದೆ: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌ ಪ್ರತಿಕ್ರಿಯೆ

    ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿಹೋಗಿದೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು. ಸಾಲಮನ್ನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಇನ್ನೂ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣ ಪಾರದರ್ಶಕವಾಗಿ ನಡೆಯಬೇಕಿದ್ದರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೆ. ಸಿಎಂ ಅಭಿಪ್ರಾಯ ಅವರದ್ದು. ಇದರಿಂದ ಸಿಬಿಐಗೆ ತನಿಖೆ ವಹಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕೊಡಗು: ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌ – ಇನ್ನೂ ಪತ್ತೆಯಾಗದ ರುಂಡ

    ಈಶ್ವರಪ್ಪರ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸಲು ನಕಾರ ಮಾಡಿದ ಅವರು, ಈ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಲೀಡ್‌ಗಳಿಂದ ಗೆಲ್ಲುತ್ತಾರೆ ಎಂದರು. ಇದನ್ನೂ ಓದಿ: ಇಂದು ನ್ಯಾಯಾಧೀಶರ ಮುಂದೆ ದೇವರಾಜೇಗೌಡ

  • ಆಗ್ನೇಯ ಪದವೀಧರ ಕ್ಷೇತ್ರದಿಂದ ಚಿದಾನಂದ್.ಎಂ.ಗೌಡ ಜಯ- ಭಾರತ ಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆ

    ಆಗ್ನೇಯ ಪದವೀಧರ ಕ್ಷೇತ್ರದಿಂದ ಚಿದಾನಂದ್.ಎಂ.ಗೌಡ ಜಯ- ಭಾರತ ಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆ

    ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದಿಂದ ಜಯಗಳಿಸಿದ ಚಿದಾನಂದ್.ಎಂ.ಗೌಡ (ಪ್ರೆಸಿಡೆನ್ಸಿ) ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಹಿರಿಯ ನ್ಯಾಯವಾದಿ ವಿವೇಕ್ ಸುಬ್ಬಾ ರೆಡ್ಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಮತ್ತು ಇತರ ಪ್ರಮುಖರು ಉಪಸ್ಥಿತರಿದ್ದರು.

    ಇಂದು ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎಲ್ಲ 4 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಆಗ್ನೇಯ ಪದವಿಧರ ಕ್ಷೇತ್ರದ ಚಿದಾನಂದಗೌಡ.ಎಂ.ಗೌಡ ಅವರು ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಅವರನ್ನು ಸೋಲಿಸಿದ್ದಾರೆ. ಚಿದಾನಂದ್.ಎಂ.ಗೌಡ ಅವರು 30,976(ಬಿಜೆಪಿ), ಡಿ.ಟಿ.ಶ್ರೀನಿವಾಸ್ 23,851(ಪಕ್ಷೇತರ), ಚೌಡರೆಡ್ಡಿ ತೂಪಲ್ಲಿ 18,810(ಜೆಡಿಎಸ್), ರಮೇಶ್ ಬಾಬು(ಕಾಂಗ್ರೆಸ್) ಮತಗಳನ್ನು ಪಡೆದಿದ್ದಾರೆ.