Tag: Legislative Election

  • ವಿರೋಧಿಗಳ ಒತ್ತಡ, ಧಮ್ಕಿಗೆ ಹೆದರದೇ ಮತ ಚಲಾಯಿಸಿ: ಲಕ್ಷ್ಮೀ ಹೆಬ್ಬಾಳ್ಕರ್

    ವಿರೋಧಿಗಳ ಒತ್ತಡ, ಧಮ್ಕಿಗೆ ಹೆದರದೇ ಮತ ಚಲಾಯಿಸಿ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ನಾನು ಯಾರನ್ನೂ ಟೂರ್‌ಗೆ ಕಳಿಸುತ್ತಿಲ್ಲ, ವಿರೋಧಿಗಳ ಒತ್ತಡ, ಧಮ್ಕಿಗೆ ಹೆದರದೇ ಮತ ಚಲಾಯಿಸಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

     

    ವಿಧಾನಪರಿಷತ್ ಚುನಾವಣೆ ಡಿಸೆಂಬರ್ 10 ರಂದು ನಡೆಯುತ್ತಿದೆ. ಕೆಲವು ಜನರು ಲಕ್ಷ್ಮೀ ಹೆಬ್ಬಾಳ್ಕರ್ ಟೂರ್‌ಗೆ ಕರೆದಿದ್ದಾರೆ ಎಂದು ಹೇಳಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಾನು ಯಾವ ಜನರನ್ನು ಟೂರ್‌ಗೆ ಕಳಿಸುತ್ತಿಲ್ಲ. ತಾವು ಕೂಡ ಯಾಮಾರಬೇಡಿ. ಇಲ್ಲಿಯೇ ಇದ್ದು, ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಕೊಟ್ಟಿರುವ ತಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ಚಂದ್ರನ ಮೇಲೆ ಗುಡಿಸಲು? – ಫೋಟೋ ಶೇರ್ ಮಾಡಿದ ವಿಜ್ಞಾನಿಗಳು

    ಮಾಧ್ಯಮಗಳಿಗೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಯಾವುದೇ ಒತ್ತಡಕ್ಕೆ, ಧಮ್ಕಿಗೆ ತಾವು ಹೆದರುವ ಅವಶ್ಯಕತೆ ಇಲ್ಲ. ನ್ಯಾಯಯುತವಾದ ಚುನಾವಣೆಯನ್ನು ನಾವು ಮಾಡೋಣ. ಎಲ್ಲರೂ ನನಗೆ ಸಹಾಯ, ಸಹಕಾರ, ಆಶೀರ್ವಾದ ಮಾಡಿ. ನಿಮ್ಮ ಜೊತೆಗೆ ಮನೆ ಮಗಳಾಗಿ ಯಾವತ್ತೂ ಇರುತ್ತೇನೆ. ನನ್ನ ತಮ್ಮ, ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಮುಖಂಡರು ತಮ್ಮ ಜೊತೆಗೆ ಯಾವಾಗಲೂ ಇರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: UAEಯಲ್ಲಿ ನಾಲ್ಕೂವರೆ ದಿನ ಮಾತ್ರ ಕೆಲಸ – ಶನಿವಾರ, ಭಾನುವಾರ ವೀಕೆಂಡ್

  • ರಾಜಸ್ಥಾನದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಹೇಗೆ?

    ರಾಜಸ್ಥಾನದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಹೇಗೆ?

    ಜೈಪುರ: ಆಡಳಿತಾರೂಢ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ತೀವ್ರ ಮುಜುಗರಕ್ಕೆ ಉಂಟುಮಾಡುವತ್ತಾ ಫಲಿತಾಂಶ ಸಾಗುತ್ತಿದ್ದು, ಕಾಂಗ್ರೆಸ್ ಮತ್ತೆ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಏರಿದೆ.

    ಬಿಜೆಪಿಯ ಮಹಾರಾಣಿ ವಸುಂಧರಾ ರಾಜೇ ರಾಜ್ಯವನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿ ಎಂದು ಇಂದಿನ ಫಲಿತಾಂಶಗಳು ತೋರಿಸುತ್ತಿವೆ. ಆಡಳಿತಾರೂಢ ಬಿಜೆಪಿ ಸರ್ಕಾರದ ವೈಫಲ್ಯ  ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವಾಗಿ ಪರಿವರ್ತನೆಯಾಗುತ್ತಿದೆ.

    ಬಿಜೆಪಿ ಎಡವಿದ್ದೆಲ್ಲಿ?
    – ಮುಖ್ಯಮಂತ್ರಿ ವಸುಂಧರಾ ರಾಜೇ ರವರ ಸರ್ವಾಧಿಕಾರಿ ಮನೋವೃತ್ತಿಯನ್ನು ವಿರೋಧಿಸಿ, ಹಲವಾರು ಬಿಜೆಪಿ ಮುಖಂಡರೇ ಚುನಾವಣೆಗೂ ಮುನ್ನವೇ ಬಂಡಾಯ ಎದ್ದಿದ್ದರು. ಟಿಕೆಟ್ ಸಿಗದ ಕಾರಣ 21 ಶಾಸಕರು ಮುಖ್ಯಮಂತ್ರಿ ವಿರುದ್ಧವೇ ಪ್ರಚಾರ ಕೈಗೊಂಡಿದ್ದರು. ರಾಜ್ಯದಲ್ಲಿ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆಯಿತ್ತು. ಅದನ್ನು ಕಾಂಗ್ರೆಸ್ ಸರಿಯಾಗಿಯೇ ಬಳಸಿಕೊಂಡಿತ್ತು.

    – ಸಚಿನ್ ಪೈಲಟ್ ಕಾಂಗ್ರೆಸ್ ಯುವನಾಯಕರಾಗಿ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ರೈತರ ಸಮಸ್ಯೆಗಳನ್ನು ಪರಿಹರಿಸಲು ವಸುಂಧರಾ ರಾಜೆ ಸರ್ಕಾರ ವಿಫಲವಾಗಿದ್ದು.

    – ವಸುಂಧರಾ ಧೋರಣೆಯಿಂದ ಬೇಸತ್ತ ಬಿಜೆಪಿಯ ರಾಷ್ಟ್ರೀಯ ಮುಖಂಡರು ಕೂಡ ಪ್ರಚಾರಕ್ಕೆ ರಾಜ್ಯದತ್ತ ಹೆಚ್ಚಾಗಿ ಬಂದಿರಲಿಲ್ಲ. ಗುರ್ಜರ ಸಮುದಾಯದ ಸಚಿನ್ ಪೈಲಟ್ ಹಾಗೂ ಮಾಲಿ ಸಮುದಾಯದ ಅಶೋಕ್ ಗೆಹ್ಲೋಟ್ ಒಟ್ಟಾಗಿದ್ದು ಕಾಂಗ್ರೆಸ್ ಗೆಲುವಿಗೆ ಸಹಕಾರಿ ಆಗಿದೆ.

    – ರಾಜಸ್ಥಾನದಲ್ಲಿ ಒಂದು ಬಾರಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಮತ್ತೊಂದು ಬಾರಿ ಬಿಜೆಪಿ ಅಧಿಕಾರಕ್ಕೆ ಏರುತ್ತದೆ. ಹೀಗಾಗಿ ಈ ಬಾರಿಯೂ ಮತದಾರ ಕಾಂಗ್ರೆಸ್ ಬೆಂಬಲಿಸಿದ್ದಾನೆ.

    2013ರಲ್ಲಿ ಏನಾಗಿತ್ತು?
    2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಪಡೆದುಕೊಂಡಿತ್ತು. ಕಾಂಗ್ರೆಸ್ 21 ಸ್ಥಾನ ಗೆದಿದ್ದರೆ, ಇತರೆ 16 ಸ್ಥಾನಗಳನ್ನು ಗೆದ್ದಿದ್ದರು. ರಾಜಸ್ಥಾನ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 200 ಸ್ಥಾನಗಳಿದ್ದು, ಬಹುಮತಕ್ಕೆ 100 ಸ್ಥಾನಗಳು ಬೇಕಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?

    ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?

    ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‏ಎಸ್) ನಿರೀಕ್ಷೆಯಂತೆ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಹಾಲಿ ಅಧಿಕಾರದಲ್ಲಿರುವ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್‏ಎಸ್ ಮತ್ತೆ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಾವುದೇ ಸಂದೇಹವಿಲ್ಲವೆನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿಯಾಗಿವೆ.

    ಟಿಆರ್‏ಎಸ್ ಮುನ್ನಡೆಗೆ ಕಾರಣಗಳೇನು?
    – ರಾಷ್ಟ್ರೀಯ ಪಕ್ಷಗಳನ್ನು ಒಳಬಿಟ್ಟುಕೊಳ್ಳಲು ತೆಲಂಗಾಣ ಮತದಾರರು ಸಿದ್ಧರಿಲ್ಲ. ಹೀಗಾಗಿ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಜನ ತಿರಸ್ಕರಿಸಿದ್ದಾರೆ.
    – ಮತದಾರರ ಸಾಂಪ್ರದಾಯಿಕ ಮನಸ್ಥಿತಿಯ ಮೇಲೆ ಸ್ಥಳೀಯ ನಾಯಕರಾದ ಚಂದ್ರಶೇಖರ್ ರಾವ್ ಬಿಗಿಹಿಡಿತ ಹೊಂದಿರುವುದು.
    – ಟಿಆರ್‏ಎಸ್ ಜೊತೆಗೆ ತನ್ನದು ಸ್ನೇಹಮಯ ಕದನ ಎಂದು ಬಿಜೆಪಿ ಹೇಳಿಕೊಂಡಿದ್ದು ಮಾತ್ರವಲ್ಲದೇ ಅದೇ ರೀತಿ ನಡೆದುಕೊಂಡಿತ್ತು. ಹೀಗಾಗಿ ಬಿಜೆಪಿ ತಾನಾಗಿಯೇ ಟಿಆರ್‍ಎಸ್ ಪರ ಪ್ರಚಾರ ಮಾಡಿದಂತಾಗಿತ್ತು.

    – ಚುನಾವಣೆಗೂ ಮೊದಲೇ ಚಂದ್ರಬಾಬು ನಾಯ್ಡು ಪ್ರಭಾವ ಕಡಿಮೆ ಇದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿತ್ತು. ನಾಯ್ಡು ಜೊತೆ ಕಾಂಗ್ರೆಸ್ ಸೇರಿದರೆ ಲಾಭಕ್ಕಿಂತಲೂ ಕಾಂಗ್ರೆಸ್ಸಿಗೆ ನಷ್ಟವೇ ಹೆಚ್ಚು ಎನ್ನುವ ಮಾತು ಕೇಳಿ ಬಂದಿತ್ತು. ಈ ವಿಶ್ಲೇಷಣೆ ನಿಜವಾಗಿದ್ದು ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡರೂ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಡಿಎಸ್-ಕಾಂಗ್ರೆಸ್ ಮೈತ್ರಿ ಟಿಆರ್‍ಎಸ್ ಅನ್ನು ಮುಗಿಸುವಷ್ಟು ಬಲಿಷ್ಠವಾಗಿರಲಿಲ್ಲ.

    – ಚಂದ್ರಶೇಖರ್ ರಾವ್ ಅವರಿಗೆ ಪ್ರತಿಪಕ್ಷದಲ್ಲಿ ಪ್ರತಿಸ್ಪರ್ಧಿಗಳು, ಸಿಎಂ ಅಭ್ಯರ್ಥಿಗಳು ಇರಲಿಲ್ಲ. ಜನಪ್ರಿಯವಾದ ಹಲವಾರು ಯೋಜನೆಗಳನ್ನು ಕೆಸಿ ರಾವ್ ಜಾರಿಗೆ ತಂದಿದ್ದರು. ಈ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಏರಲಿದೆ ಎನ್ನುವ ಖಚಿತ ವಿಶ್ವಾಸದ ಹಿನ್ನೆಲೆಯಲ್ಲಿ ಚಂದ್ರಶೇಖರ್ ವಿಧಾನಸಭೆಯನ್ನು ವಿಸರ್ಜಿಸಿದ ತಂತ್ರ ಫಲ ನೀಡಿದೆ.

    11.30ರ ವೇಳೆಗೆ ಟಿಆರ್‏ಎಸ್ 91 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಹಾಗೂ ಟಿಡಿಪಿ ಮೈತ್ರಿ ಕೂಟ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 03 ಹಾಗೂ ಎಐಎಂಎಂ 05 ಸ್ಥಾನಗಳಲ್ಲಿ ಮುನ್ನಡೆ ಹೊಂದಿವೆ.

    2013ರಲ್ಲಿ ಏನಾಗಿತ್ತು?
    2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಆರ್‏ಎಸ್ 63 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ 21, ಟಿಡಿಪಿ 15, ಬಿಜೆಪಿ 5 ಹಾಗೂ ಇತರೆ 7 ಸ್ಥಾನಗಳು ಬಂದಿದ್ದವು. ಒಟ್ಟು 119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಬಹುಮತಕ್ಕೆ 60 ಸ್ಥಾನಗಳು ಅಗತ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv