Tag: legislator

  • ಸತತ 8 ಬಾರಿ ಶಾಸಕರಾಗಿದ್ದ ಹರ್ಬನ್ಸ್ ಕಪೂರ್ ನಿಧನ

    ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಸಚಿವ ಹಾಗೂ 8 ಬಾರಿ ಶಾಸಕರಾಗಿದ್ದ ಹರ್ಬನ್ಸ್ ಕಪೂರ್(75) ನಿಧನರಾಗಿದ್ದಾರೆ.

    ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದ ಬಿಜೆಪಿ ನಾಯಕನಿಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹರ್ಬನ್ಸ್ ಕಪೂರ್ ಸರಳ ಹಾಗೂ ಮೃದು ಸ್ವಭಾವದವರು. ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಯಾವಾಗಲೂ ಧ್ವನಿ ಎತ್ತುತ್ತಿದ್ದರು ಎಂದು ಹೇಳಿದರು.

    ಹರ್ಬನ್ಸ್ ಕಪೂರ್ ಅವರು ರಾಜ್ಯದ ವಿಧಾನಸಭೆಯಲ್ಲಿ ಡೆಹ್ರಾಡೂನ್ ಕ್ಯಾಂಟ್ ಕ್ಷೇತ್ರವನ್ನು ಪ್ರತಿನಿಧಿಸಿದ್ದು, 2007 ರಿಂದ 2012ರ ವರೆಗೆ ಸ್ಪೀಕರ್ ಆಗಿದ್ದರು. ಇವರು ಉತ್ತರಾಖಂಡ್ ರಚನೆಗೂ ಮೊದಲೇ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ 4 ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಉತ್ತರಾಖಂಡ್ ರಚನೆಯ ಬಳಿಕವೂ ರಾಜಕೀಯದಲ್ಲಿ ಒಬ್ಬ ಯಶಸ್ವಿ ವ್ಯಕ್ತಿಯಾಗಿ ಮತ್ತೆ 4 ಬಾರಿ ಶಾಸಕರಾಗಿದ್ದರು. ಇದನ್ನೂ ಓದಿ: ಕನ್ನಡ ಕಾರ್ಯಕರ್ತರಿಂದ MES ಮುಖಂಡನ ಮುಖಕ್ಕೆ ಮಸಿ

    ಹರ್ಬನ್ಸ್ ಕಪೂರ್ ತಮ್ಮ ರಾಜಕೀಯ ಜೀವನದಲ್ಲಿ 4 ದಶಕಗಳನ್ನು ಪೂರೈಸಿದ್ದಾರೆ. ಇವರು 1991ರಲ್ಲಿ ಉತ್ತರ ಪ್ರದೇಶದ ಕಾರ್ಮಿಕ ಹಾಗೂ ಗ್ರಾಮೀಣಾಭಿವೃದ್ಧಿಯ ಸಚಿವರಾಗಿದ್ದರು. ಹಾಗೂ 1001ರಲ್ಲಿ ಉತ್ತರಾಖಂಡದ ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ಸಲ್ಲಿಸಿದ್ದಾರೆ. ಇತ್ತೀಚೆಗೆ ಅಂದರೆ ಡಿಸೆಂಬರ್ 9 ರಂದು ಉತ್ತರಾಖಂಡದ ಮೂರು ದಿನಗಳ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದು: ಓವೈಸಿ

  • ದಲಿತ ಶಾಸಕಿಯಿಂದ ಪ್ರತಿಭಟನೆ- ಸೆಗಣಿ ಸಾರಿ ಸ್ಥಳ ಶುದ್ಧಿಗೊಳಿಸಿದ ಕಾಂಗ್ರೆಸ್

    ದಲಿತ ಶಾಸಕಿಯಿಂದ ಪ್ರತಿಭಟನೆ- ಸೆಗಣಿ ಸಾರಿ ಸ್ಥಳ ಶುದ್ಧಿಗೊಳಿಸಿದ ಕಾಂಗ್ರೆಸ್

    ತಿರುವನಂತಪುರಂ: ದಲಿತ ಶಾಸಕಿರೊಬ್ಬರು ಪಿಡಬ್ಲ್ಯುಡಿ ಕಚೇರಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ ಎಂದು ಅಲ್ಲಿನ ಯುವ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಯನ್ನು ಸೆಗಣಿ ಸಾರುವ ಮೂಲಕ ಶುದ್ಧೀಕರಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.

    ಈ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. ನಾಟಿಕಾ ಕ್ಷೇತ್ರದ ಸಿಪಿಐ ಪಕ್ಷದ ದಲಿತ ಶಾಸಕಿ ಗೀತಾ ಗೋಪಿ ಅವರು ಪ್ರತಿಭಟನೆ ಮಾಡಿದ್ದಾರೆ. ಈ ಸ್ಥಳವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ದನದ ಸೆಗಣಿಯ ಮೂಲಕ ಶುದ್ಧೀಕರಣ ಮಾಡಿದ್ದಾರೆ. ಈ ಮೂಲಕ ಜಾತಿ ತಾರತಮ್ಯ ಮೆರೆದಿದ್ದಾರೆ ಎಂದು ದೂರು ನೀಡಲಾಗಿದೆ.

    ಗೀತಾ ಗೋಪಿ ಅವರು ತಮ್ಮ ಕ್ಷೇತ್ರದಲ್ಲಿ ರಸ್ತೆಗಳು ಸರಿ ಇಲ್ಲ ತುಂಬ ಕಳಪೆ ಕಾಮಗಾರಿ ನಡೆದಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಂಬಂಧ ಪಟ್ಟ ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ನಂತರ ಗೀತಾ ಅವರು ಪ್ರತಿಭಟನೆ ನಿಲ್ಲಿಸಿದರು. ಈ ವೇಳೆ ಅವರು ದಲಿತ ಮಹಿಳೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಅವರು ಕುಳಿತ ಜಾಗಕ್ಕೆ ಸೆಗಣಿ ಸಾರಿ ಸ್ವಚ್ಛ ಮಾಡುವ ಮೂಲಕ ಜಾತಿ ನಿಂದನೆ ಮಾಡಿದ್ದಾರೆ.

    ಗೀತಾ ಗೋಪಿ ಅವರ ವಿರುದ್ಧ ಪ್ರತಿಭಟನೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಗೀತಾ ಗೋಪಿ ಅವರು ಜನರಿಗೆ ಮೋಸ ಮಾಡಲು ಈ ಪ್ರತಿಭಟನೆಯ ನಾಟಕ ಆಡುತ್ತಿದ್ದಾರೆ ಎಂದು ಆರೋಪ ಮಾಡಿದರು. ನಂತರ ಅವರು ಕುಳಿತು ಪ್ರತಿಭಟನೆ ಮಾಡಿದ ಸ್ಥಳವನ್ನು ನೀರು ಮತ್ತು ದನದ ಸಗಣಿ ಚುಮುಕಿಸಿ ಶುದ್ಧೀಕರಣ ಮಾಡಿದ್ದಾರೆ.

    ಈ ವಿಚಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಗಮನಕ್ಕೆ ಗೀತಾ ಗೋಪಿ ಅವರು ತಂದಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಈ ಕೃತ್ಯವನ್ನು ನಾವು ಒಪ್ಪುವುದಿಲ್ಲ ಎಂದು ಖಂಡಿಸಿದ್ದಾರೆ.

    ಶಾಸಕಿ ಗೀತಾ ಗೋಪಿ ಅವರು ಈ ವಿಚಾರವಾಗಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಎಸ್‍ಸಿ/ಎಸ್‍ಟಿ ಜಾತಿ ನಿಂದನೆ ಕಾಯ್ದೆಯ ಆಡಿಯಲ್ಲಿ ಚೆರ್ಪುರ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

  • ಆತ್ಮೀಯ ಗೆಳೆಯನ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ – ಸಿದ್ದು ಸಂತಾಪ

    ಆತ್ಮೀಯ ಗೆಳೆಯನ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ – ಸಿದ್ದು ಸಂತಾಪ

    ಬೆಂಗಳೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ (75) ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಇದಕ್ಕೆ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅತ್ಮೀಯ ಗೆಳೆಯನ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಸತ್ಯನಾರಾಯಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ದಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

    ಇದಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕರಾದ ಮುತ್ಸದ್ದಿ ರಾಜಕಾರಣಿ ಎಂ.ಸತ್ಯನಾರಾಯಣ ಅವರ ನಿಧನದಿಂದ ನಾನು ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬದವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

    ಮಾಜಿ ಶಾಸಕರಾದ ಸತ್ಯನಾರಾಯಣ ಅವರು ದೀರ್ಘಕಾಲದ ನನ್ನ ರಾಜಕೀಯ ಸಹಪಾಠಿ. 1977 ರಲ್ಲಿ ಇಬ್ಬರೂ ಏಕಕಾಲದಲ್ಲಿ ರಾಜಕೀಯ ಪ್ರವೇಶ ಮಾಡಿದ್ದೆವು. ಬಹಳ ಸೌಮ್ಯ ಸ್ವಭಾವದ ಸರಳ-ಸಜ್ಜನ ರಾಜಕಾರಣಿ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿಯಷ್ಟೇ ಅಲ್ಲ ರಾಜ್ಯ ರಾಜಕಾರಣ ಹಾಗೂ ಈ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    2008ರಲ್ಲಿ ನಾನೇ ದೂರವಾಣಿ ಕರೆಮಾಡಿ ನೀವು ಚಾಮುಂಡೇಶ್ವರಿಯಿಂದ ಸ್ಪರ್ಧೆಮಾಡಿ ಎಂದು ಹೇಳಿ ಸತ್ಯಣ್ಣನವರಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ಈ ಸಂದರ್ಭದಲ್ಲಿ ಅವರಿಗೆ ತಾವು ಚುನಾವಣೆಗೆ ಸ್ಪರ್ಧಿಸುತ್ತೇನೆಂದೆ ತಿಳಿದಿರಲಿಲ್ಲ. 5 ವರ್ಷಗಳ ಕಾಲ ಶಾಸಕರಾಗಿ ಕ್ಷೇತ್ರಕ್ಕೆ ಸಾಕಷ್ಟು ದುಡಿದಿದ್ದರು. ಈಗವರು ಇಲ್ಲ ಎಂಬುದನ್ನು ನಂಬಲಾಗುತ್ತಿಲ್ಲ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ವಿಶ್ವನಾಥ್, ಸಚಿವರಾದ ಜಿ.ಟಿ.ದೇವೆಗೌಡ ಮತ್ತು ಪುಟ್ಟರಂಗಶೆಟ್ಟಿ ಅವರು ಸತ್ಯನಾರಾಯಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಸತ್ಯನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದರು.

  • ಪತ್ರಕರ್ತೆಯ ಸ್ಟೈಲ್ ನಲ್ಲೇ ತನ್ನೂರಿನ ಸಮಸ್ಯೆ ಬಿಚ್ಚಿಟ್ಟ ಬಾಲಕಿ!

    ಪತ್ರಕರ್ತೆಯ ಸ್ಟೈಲ್ ನಲ್ಲೇ ತನ್ನೂರಿನ ಸಮಸ್ಯೆ ಬಿಚ್ಚಿಟ್ಟ ಬಾಲಕಿ!

    ಬಳ್ಳಾರಿ: ಮೊನ್ನೆಯಷ್ಟೇ ಕೊಡಗಿನ ಬಾಲಕನೊಬ್ಬ ತನ್ನೂರಿನ ಸಮಸ್ಯೆಗಳ ಬಗ್ಗೆ ಮಾತನಾಡಿ ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೆ ತಂದಿದ್ದನು. ಇದೀಗ ಅದೇ ರೀತಿಯಾಗಿ ಮತ್ತೊಬ್ಬ ಬಾಲಕಿ ತನ್ನೂರಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪತ್ರಕರ್ತೆಯ ರೀತಿಯಲ್ಲೇ ವರದಿ ಮಾಡಿದ್ದಾಳೆ.

    ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತಳಕಲ್ ಗ್ರಾಮದ 7ನೇ ತರಗತಿಯಲ್ಲಿ ಓದುತ್ತಿರುವ ರೋಜಾ ಎಂಬ ಬಾಲಕಿ ತನ್ನೂರಿನ ಕೆರೆಯ ಸಮಸ್ಯೆ ಬಗ್ಗೆ ವಿವರಿಸಿದ್ದಾಳೆ. ಈ ಭಾಗದ ರೈತರ ಪ್ರಮುಖ ಜೀವನಾಧಾರವಾದ ಕೆರೆಗೆ ನೀರು ತುಂಬಿಸುವ ಯೋಜನೆಗೆ ಪೂಜೆ ಮಾಡಿ ಎರಡು ವರ್ಷವಾಗಿದೆ. ಆದರೆ ಇದುವರೆಗೂ ಕೆರೆಗೆ ಹನಿ ನೀರುಬ ಸಹ ಬಂದಿಲ್ಲ ಎಂದು ಹೇಳಿದ್ದಾಳೆ.

    ಶಾಸಕ ಪರಮೇಶ್ವರ ನಾಯ್ಕ್ ಭರವಸೆ ನೀಡಿ ಪೂಜೆ ಮಾಡಿ ಹೋದ ಕೆರೆಗೆ ಇನ್ನೂ ನೀರು ಬಂದಿಲ್ಲ. ಅಲ್ಲದೇ ಶಿಂಗಟಾಲೂರ ಬ್ಯಾರೇಜ್ ನಿಂದ ನಿತ್ಯ 40 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿದುಹೋಗುತ್ತಿದೆ. ಆ ನೀರನ್ನ ಕೆರೆ ತುಂಬಿಸುವ ಯೋಜನೆಗೆ ಬಳಸಬೇಕಾದ ರಾಜಕಾರಣಿಗಳು, ಅಧಿಕಾರಿಗಳ ನಿರ್ಲಕ್ಷ್ಯತನ ಇದಕ್ಕೆ ಸಾಕ್ಷಿಯಾಗಿದೆ. ಈಗಾಗಲೇ ಶಿಂಗಟಲೂರ ಬ್ಯಾರೇಜ್ ಬಳಿಯಿಂದ ಪೈಪ್ ಲೈನ್ ಕಾರ್ಯ ಆಳವಡಿಕೆ ಕಾರ್ಯ ನಡೆದಿದ್ದರು ಕೂಡ ಕೆರೆಗೆ ನೀರು ಹರಿದಿಲ್ಲ. ಅಲ್ಲದೇ ಕೆರೆಯ ನಿರ್ವಹಣೆ ಇಲ್ಲದೇ ಮುಳ್ಳುಗಂಟೆಗಳೇ ಹರಡಿಕೊಂಡಿದೆ ಎಂದು ಮಾಹಿತಿ ನೀಡಿದ್ದಾಳೆ.

  • ಮೊದಲ ಪತ್ನಿಯನ್ನು ಬಿಟ್ಟು ಕಾಲೇಜು ಯುವತಿಯನ್ನು ಮದ್ವೆಯಾದ ಬಿಜೆಪಿ ಶಾಸಕ!

    ಮೊದಲ ಪತ್ನಿಯನ್ನು ಬಿಟ್ಟು ಕಾಲೇಜು ಯುವತಿಯನ್ನು ಮದ್ವೆಯಾದ ಬಿಜೆಪಿ ಶಾಸಕ!

    – ಬಿಜೆಪಿ ಶಿಸ್ತು ಸಮಿತಿಗೆ ಪತ್ನಿಯಿಂದ ದೂರು

    ಶ್ರೀನಗರ: ಜಮ್ಮು ಕಾಶ್ಮೀರ ಬಿಜೆಪಿ ಶಾಸಕರೊಬ್ಬರ ಪತ್ನಿ ತಮ್ಮ ಪತಿ ಕಾಲೇಜು ಯುವತಿಯೊಂದಿಗೆ ಮದುವೆಯಾಗಿರುವುದಾಗಿ ಆರೋಪ ಮಾಡಿ, ಬಿಜೆಪಿ ಶಿಸ್ತು ಸಮಿತಿಗೆ ದೂರು ನೀಡಿದ್ದಾರೆ.

    ಜಮ್ಮು ಜಿಲ್ಲೆಯ ಶಾಸಕ ಗಗನ್ ಭಗತ್ ವಿರುದ್ಧ ಪತ್ನಿ ಮೋನಿಕಾ ಶರ್ಮಾ ಈ ಆರೋಪ ಮಾಡಿದ್ದು, 19 ವರ್ಷದ ಕಾಲೇಜು ಯುವತಿಯೊಂದಿಗೆ ಮದುವೆಯಾಗಿ ಆಕೆಯೊಂದಿಗೆ ವಾಸಿಸುತ್ತಿದ್ದಾರೆ ಎಂದು ದೂರಿದ್ದಾರೆ.

    ಸದ್ಯ ಶಾಸಕ ಪತ್ನಿ ಆರೋಪದೊಂದಿಗೆ ಕಾಲೇಜು ಯುವತಿಯ ತಂದೆಯೂ ಸಹ ತಮ್ಮ ಮಗಳನ್ನು ಪಂಜಾಬ್ ಕಾಲೇಜಿನಿಂದ ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈ ಆರೋಪಗಳನ್ನು ಯುವತಿ ಹಾಗೂ ಶಾಸಕ ಗಗನ ಭಗತ್ ನಿರಾಕರಿಸಿದ್ದು, ತಮ್ಮ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ತರಲು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಅಂದಹಾಗೇ 13 ವರ್ಷಗಳ ಹಿಂದೆ ಶಾಸಕ ಗಗನ್ ಭಗತ್ ಹಾಗೂ ಮೋನಿಕಾ ಶರ್ಮಾ ಮದುವೆಯಾಗಿರುವುದಾಗಿ ತಿಳಿಸಿದ್ದು, ಸದ್ಯ ಶಾಸಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಶರ್ಮಾ ದೂರು ನೀಡಿದ್ದಾರೆ. ಅಲ್ಲದೇ ಈ ಹಿಂದೆ ತಮ್ಮ ದೈನಂದಿನ ಜೀವನ ನಿರ್ವಹಣೆಗಾಗಿ ಮಾಸಿಕ 1 ಲಕ್ಷ ರೂ. ಹಣ ನೀಡುವುದಾಗಿ ಗಗನ್ ಭಗತ್ ಹೇಳಿದ್ದರು. ಆದರೆ ಇದುವರೆಗೂ ಯಾವುದೇ ಹಣವನ್ನು ನೀಡಿಲ್ಲ. ಇದರಿಂದ ನನಗೆ ಹಾಗೂ ಮಕ್ಕಳಿಗೆ ತೀವ್ರ ಸಮಸ್ಯೆಯಾಗಿದೆ ಎಂದು ದೂರಿದ್ದಾರೆ.

    ಜಮ್ಮು ಕಾಶ್ಮೀರದ ಬಿಜೆಪಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿರುವ ನಾನು ತನ್ನ ಕುಟುಂಬ ಒಳಿತಿಗಾಗಿ ಒಂದು ವರ್ಷದಿಂದ ಈ ಕುರಿತು ಮಾಹಿತಿ ಬಹಿರಂಗ ಪಡಿಸಿಲ್ಲ. ತನಗೆ 12 ವರ್ಷದ ಮಗ ಹಾಗೂ 4 ವರ್ಷದ ಮಗಳು ಇದ್ದಾರೆ. ಪತಿ ವಿರುದ್ಧ ಆರೋಪದ ಕುರಿತು ಸಾಕ್ಷಿ ನೀಡಲು ತಮ್ಮ ಬಳಿ ಆಧಾರಗಳು ಇದ್ದು, ಅವುಗಳನ್ನು ಬಿಜೆಪಿ ಶಿಸ್ತು ಸಮಿತಿಗೆ ನೀಡಿದ್ದಾಗಿ ಹೇಳಿದ್ದಾರೆ. ಅಲ್ಲದೇ ಕಳೆದ ಎರಡು ದಿನಗಳ ಹಿಂದೆ ಈ ಆಧಾರಗಳನ್ನು ಸಮಿತಿಗೆ ನೀಡದಿರಲು ಗಗನ್ ಭಗತ್ ತಮ್ಮ ಬಳಿ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.

    ತಮ್ಮ ಪತಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದು, ಅವರು ಇಂತಹ ಕೆಲಸ ಮಾಡಿ ಸಮಾಜಕ್ಕೆ ಯಾವ ಸಂದೇಶ ನೀಡುತ್ತಾರೆ. ಆದರೆ ಅವರು ಮದುವೆಯಾಗುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಅದನ್ನು ಬಹಿರಂಗ ಪಡಿಸಲಿ ಎಂದು ತಿಳಿಸಿದ್ದಾರೆ.

  • ನಡುರಸ್ತೆಯಲ್ಲಿ ಕಾರಿನಲ್ಲಿದ್ದ ಚಾಲಕನನ್ನು ಹೊರಗೆಳೆದು ಬಿಜೆಪಿ ಶಾಸಕನ ಪುತ್ರನಿಂದ ಹಲ್ಲೆ! -ವಿಡಿಯೋ ವೈರಲ್

    ನಡುರಸ್ತೆಯಲ್ಲಿ ಕಾರಿನಲ್ಲಿದ್ದ ಚಾಲಕನನ್ನು ಹೊರಗೆಳೆದು ಬಿಜೆಪಿ ಶಾಸಕನ ಪುತ್ರನಿಂದ ಹಲ್ಲೆ! -ವಿಡಿಯೋ ವೈರಲ್

    ಬನ್ಸ್ವಾರ: ರಾಜಸ್ಥಾನದ ಬಿಜೆಪಿ ಶಾಸಕರ ಪುತ್ರನೊಬ್ಬ ನಡು ರಸ್ತೆಯಲ್ಲಿ ಕಾರಿನಿಂದ ಹೊರಗೆಳೆದು ಚಾಲಕನಿಗೆ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬನ್ಸ್ವಾರ ಕ್ಷೇತ್ರದ ಶಾಸಕ ಧನ್ ಸಿಂಗ್ ರಾವತ್ ಪುತ್ರ ರಾಜ ಎಂಬಾತ ಕಾರು ಚಾಲಕ ನೀರವ್ ಉಪಾಧ್ಯಾಯ ಎಂಬವರ ಮೇಲೆ ಹಲ್ಲೆ ನಡೆಸಿದ್ದು, ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ದೃಶ್ಯಗಳು ಸೆರೆಯಾಗಿದೆ. ಅಂದಹಾಗೇ ಶಾಸಕ ಪುತ್ರ ಕಾರು ಆಗಮಿಸುವ ವೇಳೆ ಹಲ್ಲೆಗೊಳಗಾದ ವ್ಯಕ್ತಿ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಕೃತ್ಯ ನಡೆಸಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.

    ಜೂನ್ 1 ರಂದು ಬನ್ಸ್ವಾರದ ವಿದ್ಯಾತ್ ಕಲೋನಿ ಬಳಿ ಘಟನೆ ನಡೆಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಲ್ಲೆಗೆ ಒಳಗಾದ ನೀರವ್ ಉಪಾಧ್ಯಾಯ, ಜೂನ್ 1 ರಂದು ಘಟನೆ ನಡೆದಿದ್ದು, ನಾನು ಏಕಮುಖ ಸಂಚಾರದ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದೆ. ಅಲ್ಲಿ ಬಂದಂತಹ ಇನ್ನೊಂದು ಕಾರಿಗೆ ಮುಂದೆ ಹೋಗಲೂ ಆಗಿಲ್ಲ. ಈ ವಿಚಾರವಾಗಿ ಕೆಲವರೊಂದಿಗೆ ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಅವರು ಏಳು ಎಂಟು ಜನರಿದ್ದ ಕಾರಣ ನಾನು ಅಸಹಾಯಕನಾಗಿದ್ದೆ. ಆದರೆ ಈ ಕುರಿತು ಯಾವುದೇ ದೂರು ನೀಡಲು ಇಚ್ಛಿಸುವುದಿಲ್ಲ ಎಂದು ತಿಳಿಸಿದ್ದಾರೆ.

    ಸಿಸಿಟಿವಿ ವಿಡಿಯೋನ ಪ್ರಕಾರ ಸ್ಕಾರ್ಪಿಯೋ ಕಾರಿನಲ್ಲಿ ಬಂದಂತಹ ಶಾಸಕರ ಪುತ್ರ ರಾಜ ಹಾಗೂ ಅವರ ಸ್ನೇಹಿತರು ಸ್ವಿಫ್ಟ್ ಕಾರೊಂದನ್ನು ಮುಂದೆ ಹೋಗದಂತೆ ನಡುರಸ್ತೆಯಲ್ಲಿ ತಡೆದು, ಕಾರಿನಲ್ಲಿದ್ದ ನೀರವ್ ಅವರನ್ನು ಹೊರಗೆಳೆದು ಹಲ್ಲೆ ನಡೆಸಿದ್ದಾರೆ.

    ಸದ್ಯ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಪೊಲೀಸ್ ಠಾಣಾ ಎಸ್‍ಪಿ ಚಂದನ್ ಸಿಂಗ್, ಶಾಸಕರ ಪುತ್ರ ಅಥವಾ ಯಾವುದೇ ವ್ಯಕ್ತಿ ಹಲ್ಲೆ ನಡೆಸಿರುವ ಕುರಿತು ನಮಗೇ ಯಾವುದೇ ದೂರು ಬಂದಿಲ್ಲ. ಅದ್ದರಿಂದ ಘಟನೆ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ ಹೇಳಿದ್ದಾರೆ.

  • ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಸರ್ಕಾರ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಲೇ ಇರು ಎಂದು ಪತ್ನಿಗೆ ಹೇಳಿದ್ದೀನಿ: ಬಿಜೆಪಿ ಶಾಸಕ

    ಮುಜಾಫರ್ ನಗರ್ : ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರ ನಿರ್ದಿಷ್ಟ ಕಾನೂನು ರೂಪಿಸುವವರೆಗೂ ನೀನು ಮಕ್ಕಳನ್ನು ಹಡೆಯುವುದನ್ನು ನಿಲ್ಲಿಸಬೇಡ ಎಂದು ಪತ್ನಿಗೆ ಹೇಳಿದ್ದೇನೆ ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು ವಿವಾದಕ್ಕೆ ಕಾರಣರಾಗಿದ್ದಾರೆ.

    ಖತೌಲಿ ಕ್ಷೇತ್ರದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಶುಕ್ರವಾರ ಈ ಹೇಳಿಕೆಯನ್ನು ನೀಡಿದ್ದಾರೆ. ಮುಜಾಫರ್ ನಗರದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮಗೆ ಇಬ್ಬರು ಮಕ್ಕಳು ಸಾಕು ಎಂದು ನನ್ನ ಪತ್ನಿ ಹೇಳಿದ್ದಾಳೆ. ಆದರೆ ಸರ್ಕಾರ ಜನಸಂಖ್ಯಾ ನಿಯಂತ್ರಣ ಕಾನೂನು ರೂಪಿಸುವವರೆಗೂ ಮಕ್ಕಳನ್ನು ಹಡೆಯುತ್ತಾ ಇರಲು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ನಾವು ಇಬ್ಬರು ಮಕ್ಕಳು ಸಾಕು ಎಂಬ ನಿಯಮವನ್ನು ಒಪ್ಪಿಕೊಂಡಿದ್ದೇವೆ. ಆದರೆ ಇತರರು ಅದನ್ನು ಒಪ್ಪಿಕೊಂಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಹಿಂದೂಗಳು ಮಕ್ಕಳಿಗೆ ಜನ್ಮ ನೀಡುವುದನ್ನು ನಿಲ್ಲಿಸಬಾರದು. ನನ್ನ ಪತ್ನಿ ನಮಗೆ ಮೂರನೇ ಮಗು ಬೇಡವೆಂದು ಹೇಳಿದ್ದಳು. ಆದರೆ ನಾನು 4 ರಿಂದ 5 ಮಕ್ಕಳನ್ನು ಪಡೆಯೋಣವೆಂದು ಹೇಳಿದ್ದೇನೆ ಎಂದು ಜನಸಂಖ್ಯಾ ನಿಯಂತ್ರಣ ವಿಷಯದ ಕುರಿತು ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

    ಶಾಸಕರು ವಿವಾದತ್ಮಾಕ ಹೇಳಿಕೆ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದು, ಕಳೆದ ವರ್ಷ ಜನವರಿಯಲ್ಲಿ ಹಿಂದೂಸ್ತಾನ ಹಿಂದೂಗಳದ್ದು ಮಾತ್ರ, ಇತರರು ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದರು. ಅಲ್ಲದೇ ಹೊಸ ವರ್ಷದ ಆಚರಣೆ ಕ್ರೈಸ್ತ ಸಮುದಾಯದ ಹಬ್ಬ. ಇದರಿಂದ ಹಿಂದೂಗಳು ದೂರವಿರಿ ಎಂದು ಹೇಳಿದ್ದರು. ಫೆಬ್ರವರಿ 14ರ ಪ್ರೇಮಿಗಳ ದಿನವನ್ನು ಆಚರಿಸಬೇಡಿ ಎಂದು ಯುವಕರಿಗೆ ಕರೆ ನೀಡಿದ್ದರು.