Tag: letter

  • ಪ್ರಿಯತಮೆಗೆ ರಕ್ತದಲ್ಲಿ ಪತ್ರ ಬರೆದು ದೇವ್ರ ಹುಂಡಿಗೆ ಹಾಕ್ದ!

    ಪ್ರಿಯತಮೆಗೆ ರಕ್ತದಲ್ಲಿ ಪತ್ರ ಬರೆದು ದೇವ್ರ ಹುಂಡಿಗೆ ಹಾಕ್ದ!

    – ಸರ್ಕಾರದ ಮುಖ್ಯಕಾರ್ಯದರ್ಶಿಗೂ ಪತ್ರ

    ಚಿಕ್ಕಬಳ್ಳಾಪುರ: ಪ್ರಿಯಕರನೊಬ್ಬ ರಕ್ತದಲ್ಲಿ ತನ್ನ ಪ್ರೇಮಿಗೆ ಪತ್ರ ಬರೆದು ಅದನ್ನು ದೇವರ ಹುಂಡಿಗೆ ಹಾಕಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಶ್ರೀ ಭೋಗನಂಧೀಶ್ವರಸ್ವಾಮಿ ದೇವಸ್ಥಾನ ತುಂಬಾ ಪ್ರಸಿದ್ಧ. ಅಲ್ಲದೇ ಪುರಾಣ ಪ್ರಸಿದ್ಧ ಮುಜರಾಯಿ ಇಲಾಖೆಯ ಪ್ರಥಮ ದರ್ಜೆ ದೇವಸ್ಥಾನ ಕೂಡ ಆಗಿದೆ. ಹೀಗಾಗಿ ಇಲ್ಲಿಗೆ ಬಂದು ಭಕ್ತಿಯಿಂದ ಪ್ರಾರ್ಥಿಸಿ ಇಷ್ಟಾರ್ಥ ಕೋರಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ. ಇದರಿಂದ ಪ್ರಿಯಕರನೊಬ್ಬ ರಕ್ತದಲ್ಲಿ ಪತ್ರ ಬರೆದು, ತನ್ನ ಪ್ರಿಯತಮೆಗೆ ಹುಟ್ಟು ಹಬ್ಬದ ಶುಭ ಕೋರಿ ಹುಂಡಿಗೆ ಹಾಕಿದ್ದಾನೆ.

    ಮತ್ತೊಬ್ಬ ಭಕ್ತನೊಬ್ಬ ದೇವರ ಹುಂಡಿ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಗೆ ಇಂಗ್ಲಿಷ್ ನಲ್ಲಿ ಪತ್ರ ಬರೆದು ಮನವಿ ಮಾಡಿದ್ದಾನೆ.

    ಪತ್ರದಲ್ಲಿ ಏನಿದೆ?
    ವಿಷಯ: ಬಾಗೇಪಲ್ಲಿ, ಶಿಡ್ಲಘಟ್ಟ, ಚಿಂತಾಮಣಿ ತಾಲೂಕಿಗೆ ಮೂಲಭೂತ ಸೌಲಭ್ಯಗಳನ್ನ ಓದಗಿಸುವಂತೆ ಕೋರಿ.

    22 ವರ್ಷದ ನಾನು ಹೆಸರು ವಿಳಾಸವನ್ನ ಬಹಿರಂಗಪಡಿಸುವುದಿಲ್ಲ. ಜಿಲ್ಲೆಯ ಬಾಗೇಪಲ್ಲಿ ಶಿಡ್ಲಘಟ್ಟ, ಚಿಂತಾಮಣಿ ತಾಲೂಕಿನಲ್ಲಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆಗಳ ಸಮಸ್ಯೆಯಿದೆ. ಜಿಲ್ಲಾಡಳಿತದ ಅಧಿಕಾರಿಗಳ ಮೂಲಕ ಈ ಸಮಸ್ಯೆಗಳಿಗೆ ಮುಕ್ತಿ ಕೊಡಿಸಿ ಎಂದು ಮನವಿ ಮಾಡಿಕೊಂಡಿದ್ದಾನೆ.

    ಹುಂಡಿಯಲ್ಲಿ ಮಕ್ಕಳು ಆಟ ಆಡಲು ಬಳಸುವ ಎರಡು ಸಾವಿರ ಮುಖ ಬೆಲೆಯ ನಕಲಿ ನೋಟುಗಳು ಹಾಗೂ ಅಮಾನ್ಯ ಮಾಡಲಾದ ಚಲಾವಣೆ ಇಲ್ಲದ 500 ಮುಖ ಬೆಲೆಯ ನೋಟುಗಳು ಕೂಡ ಕಂಡು ಬಂದಿದೆ. ಈ ರೀತಿಯ ಚಿತ್ರ ವಿಚಿತ್ರ ಹರಕೆಗಳಿಗೆ ಹಾಕಿರೋದಕ್ಕೆ ದೇವಸ್ಥಾನದ ಅರ್ಚಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಹುಂಡಿಯಲ್ಲಿ 15 ಲಕ್ಷ ರೂಪಾಯಿ ಹಣ ಸಂಗ್ರಹವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಂಗ್ರಹವಾಗಿದೆ.

  • ಸಿಎಎ ಬೆಂಬಲಿಸಿ ಗಚ್ಚಿನ ಹಿರೇಮಠ ಸ್ವಾಮೀಜಿಯಿಂದ ಮೋದಿಗೆ ಪತ್ರ

    ಸಿಎಎ ಬೆಂಬಲಿಸಿ ಗಚ್ಚಿನ ಹಿರೇಮಠ ಸ್ವಾಮೀಜಿಯಿಂದ ಮೋದಿಗೆ ಪತ್ರ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬೆಂಬಲಿಸಿ ಜಿಲ್ಲೆಯ ಮಸ್ಕಿಯ ಗಚ್ಚಿನ ಹಿರೇಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನಾ ಪತ್ರ ಬರೆದಿದ್ದಾರೆ.

    ಗಚ್ಚಿನ ಹಿರೇಮಠದ ಸ್ವಾಮೀಜಿಗಳು ಸಂಸ್ಕೃತದಲ್ಲಿ ಪತ್ರ ಬರೆದಿದ್ದು, ಪ್ರಧಾನಿ ಮೋದಿ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಜನ ಆತಂಕ ಪಡುವ ಅಗತ್ಯವಿಲ್ಲ. ಪ್ರಧಾನಿಗಳು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆಯನ್ನು ಸಲ್ಲಿಸಿ, ಪತ್ರ ಬರೆದಿದ್ದೇನೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

    ದೇಶದೆಲ್ಲೆಡೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪರ, ವಿರೋಧ ಸಮಾವೇಶ, ಪ್ರತಿಭಟನೆಗಳು ನಡೆಯುತ್ತಿವೆ. ಕಾಂಗ್ರೆಸ್ ಹಾಗೂ ಕೆಲ ಸಂಘಟನೆಗಳು ನಿರಂತರವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಹಿರಂಗ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಗಚ್ಚಿನ ಹಿರೇಮಠದ ಸ್ವಾಮಿಜಿ ಪ್ರಧಾನಿ ಮೋದಿಗೆ ಪತ್ರ ಬರೆದು ಅಭಿನಂದಿಸಿರುವುದು ಮಹತ್ವ ಪಡೆದುಕೊಂಡಿದೆ.

  • ಅಧಿಕಾರಿಗಳು ಕೈಕೊಟ್ರೂ ಕೈಹಿಡಿದ ದೇವರು- ಚಾಮುಂಡೇಶ್ವರಿಗೆ ಪತ್ರ ಬರೆದೊಡನೆ ಸಿಕ್ತು ನೆರವು

    ಅಧಿಕಾರಿಗಳು ಕೈಕೊಟ್ರೂ ಕೈಹಿಡಿದ ದೇವರು- ಚಾಮುಂಡೇಶ್ವರಿಗೆ ಪತ್ರ ಬರೆದೊಡನೆ ಸಿಕ್ತು ನೆರವು

    ಕೊಪ್ಪಳ: ಜಿಲ್ಲೆಯ ಗಂಗಾವತಿಯ ಲಿಂಗರಾಜ ಕಾಲೋನಿಯಲ್ಲಿ ಬಡ ಕುಟುಂಬವೊಂದು ನಮಗೆ ಮನೆ ಕಟ್ಟಲು ಸ್ವಲ್ಪ ಸಹಾಯ ಮಾಡಿ ಎಂದು ಅಧಿಕಾರಗಳ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಯಾವುದೇ ಅಧಿಕಾರಿಗಳು ಇವರ ಸಹಾಯಕ್ಕೆ ಮುಂದೆ ಬಂದಿರಲಿಲ್ಲ. ಇದೀಗ ಚಾಮುಂಡೇಶ್ವರಿಗೆ ಪತ್ರ ಬರೆದ ತಕ್ಷಣ ಬಡ ಕುಟುಂಬಕ್ಕೆ ನೆರವು ಸಿಕ್ಕಿದೆ.

    ಇದು ಲಿಂಗರಾಜ ಕಾಲೋನಿಯ ಗಾಯಿತ್ರಿ-ಮಲ್ಲಿಕಾರ್ಜುನ ಕುಟುಂಬದ ಕರುಣಾಜನಕ ಕಥೆ. ಅಂಗವಿಕಲರಾಗಿರುವ ಗಾಯಿತ್ರಿ ಪತಿ ರಿಕ್ಷಾ ಓಡಿಸುತ್ತಿದ್ದು, ಅದರಲ್ಲಿ ಬಂದ ಅಲ್ಪ ಸ್ವಲ್ಪ ಹಣವೇ ಇವರಿಗೆ ಆಧಾರವಾಗಿದೆ. ಗಾಯಿತ್ರಿ ಕುಟುಂಬಕ್ಕೆ ಹಿರಿಯರಿಂದ ಬಳುವಳಿಯಾಗಿ ಒಂದು ಪುಟ್ಟ ಮನೆ ಬಂದಿತ್ತು. ಆ ಮನೆಯಲ್ಲೇ ತನ್ನಿಬ್ಬರು ಮಕ್ಕಳೊಂದಿಗೆ ಈ ಕುಟುಂಬ ವಾಸವಾಗಿದೆ. ಈ ಮನೆಯ ಪರಿಸ್ಥಿತಿಯನ್ನೊಮ್ಮೆ ನೋಡಿದರೆ ಎಂತವರಿಗೂ ಭಯ ಹುಟ್ಟಿಸುತ್ತೆ. ಹೆಗ್ಗಣಗಳ ಕಾಟದಿಂದ ಇಡೀ ಮನೆ ಬಿರುಕು ಬಿಟ್ಟಿದ್ದು, ತಗಡಿನ ಮೇಲ್ಚಾವಣಿ ಸಂಪೂರ್ಣವಾಗಿ ಸೋರುತ್ತಿದೆ. ಇದರಲ್ಲೇ ಈ ಕುಟುಂಬ ಆಸರೆ ಪಡೆಯುತ್ತಿದೆ.

    ನಮಗೆ ಮನೆ ಕಟ್ಟಿಕೊಳ್ಳಲು ಸ್ವಲ್ಪ ಅನುಕೂಲ ಮಾಡಿ ಕೊಡಿ ಅಂತಾ ಅಧಿಕಾರಿಗಳು, ಜನಪ್ರತಿನಿಧಿಗಳನ್ನ ಕೇಳಿದರೆ ಯಾರೊಬ್ಬರೂ ತಲೆ ಕೆಡಿಸಿಕೊಂಡಿಲ್ಲ. ನಂತರ ನಾವು ರಾಮನಗರ ಜಿಲ್ಲೆ ಚನ್ನಪಟ್ಟಣದ ಗೌಡಗೇರೆ ಗ್ರಾಮದಲ್ಲಿರುವ ಚಾಮುಂಡೇಶ್ವರಿ ಅಮ್ಮನ್ನವರ ಮೊರೆ ಹೋದೆವು. ಈ ದೇವಾಲಯಕ್ಕೆ ಪತ್ರ ಬರೆದು ನಮ್ಮ ನೋವುಗಳನ್ನು ಪತ್ರದ ಮೂಲಕ ಹೇಳಿಕೊಂಡಿದ್ದೆವು. ನಮ್ಮ ಪತ್ರಕ್ಕೆ ಸ್ಪಂದಿಸಿದ ದೇವಾಲಯ ಆಡಳಿತ ಮಂಡಳಿ, ಸ್ಥಳೀಯ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಕುಟುಂಬದ ಮಾಹಿತಿ ಪಡೆದುಕೊಂಡು ಸಹಾಯ ಮಾಡುವ ಭರವಸೆ ನೀಡಿದೆ ಎಂದು ಪತ್ರ ಬರೆದಿದ್ದ ಗಾಯಿತ್ರಿ ಹೇಳಿದ್ದಾರೆ.

     

  • ರಾಜಿಗೆ ಒಂದೆಜ್ಜೆ ಮುಂದೆ ಇಟ್ಟ ಸಂಜನಾ ಗಲ್ರಾನಿ?

    ರಾಜಿಗೆ ಒಂದೆಜ್ಜೆ ಮುಂದೆ ಇಟ್ಟ ಸಂಜನಾ ಗಲ್ರಾನಿ?

    ಬೆಂಗಳೂರು: ನಟಿ ಸಂಜನಾ ಗಲ್ರಾನಿ ಮತ್ತು ವಂದನಾ ಜೈನ್ ನಡುವಿನ ಗಲಾಟೆ ಪ್ರಕರಣ ಠಾಣೆಯ ಮೆಟ್ಟಿಲು ಹತ್ತಿದ್ದಾಗಿದೆ. ಹೋಟೆಲ್ ನಲ್ಲಿ ನಡೆದ ಗಲಾಟೆಗೆ ವಂದನಾ ಜೈನ್ ನೀಡಿದ್ದ ದೂರಿಗೆ, ಸಂಜನಾ ಪ್ರತಿದೂರು ನೀಡಿದ್ದು ಈಗ ರಾಜಿಯಾಗಲು ಮುಂದಾಗಿದ್ದಾರೆ.

    ಡಿಸಿಪಿಯವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಂಜನಾ, ನನಗೆ ಇದನ್ನೆಲ್ಲಾ ಮುಂದುವರಿಸಬೇಕು ಎಂಬ ಆಸೆಯಿಲ್ಲ. ಆಕೆ ಕೊಟ್ಟಿರುವ ದೂರನ್ನು ವಾಪಸ್ ತೆಗೆದುಕೊಂಡರೆ ನಾನು ವಾಪಸ್ ತೆಗೆದುಕೊಳ್ಳುತ್ತೇನೆ. ನಾನು ವಿಸ್ಕಿ ಬಾಟಲ್ ನಲ್ಲಿ ಹೊಡೆದೆ ಎಂದರೆ ನಮ್ಮ ನಿರ್ಮಾಪಕರು, ನಿರ್ದೇಶಕರು ನನ್ನ ಬಗ್ಗೆ ಏನೆಂದುಕೊಳ್ಳಬೇಕು ಎಂದು ಹೇಳುವ ಮೂಲಕ ನಾನು ರಾಜಿಗೆ ರೆಡಿ ಎಂದು ಪರೋಕ್ಷವಾಗಿ ಹೇಳಿದ್ದಾರೆ.

    ಆಕೆಯೇ ಗಲಾಟೆ ಶುರು ಮಾಡಿ ಬಾಯಿಗೆ ಬಂದಂತೆ ಬೈದಿರೋದು. ನನ್ನ ರಕ್ಷಣೆಗೆ ಇರಲಿ ಎಂದು ಏಳು ನಿಮಿಷದ ವಿಡಿಯೋ ಮಾಡಿಟ್ಟುಕೊಂಡಿದ್ದೇನೆ. ಫೋಟೋ ತೆಗೆಯಬೇಕು ಎಂದು ಬಂದು ಗಲಾಟೆ ಮಾಡಿದ್ದಾಳೆ. ಅವಳ ಜೊತೆ ನಾನು ಯಾವತ್ತೂ ಹೋಟೆಲ್‍ಗೂ ಹೋಗಿಲ್ಲ. ನನಗೆ ಇದೆಲ್ಲವನ್ನೂ ಮುಂದುವರಿಸಿ ಪ್ರಚಾರ ತೆಗೆದುಕೊಳ್ಳಬೇಕು ಎಂದು ಇಷ್ಟವಿಲ್ಲ. ಒಂದು ಪಕ್ಷ ವಂದನಾ ದೂರು ವಾಪಸ್ ಪಡೆದರೆ ನಾನು ದೂರು ವಾಪಸ್ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ವಂದನಾ ಪ್ರಚಾರಕ್ಕಾಗಿ ಗಲಾಟೆ ಮಾಡ್ತಿದ್ದಾಳೆ: ನಟಿ ಸಂಜನಾ ಆರೋಪ

    ಪತ್ರ ಬರೆದು ಮನವಿ
    ಹೋಟೆಲ್ ನಲ್ಲಿ ನಡೆದಿರುವ ಘಟನೆಯನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ನನಗೆ ಇಷ್ಟ ಇಲ್ಲ. ದಯವಿಟ್ಟು ಮಾಧ್ಯಮ ಮಿತ್ರರು ಪ್ರಕರಣವನ್ನು ದೊಡ್ಡದು ಮಾಡುವ ಆಗತ್ಯ ಇಲ್ಲ. ಪ್ರಕರಣವನ್ನ ಇಲ್ಲೇ ಬಿಟ್ಟು ಬಿಡುವಂತೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಸಂಜನಾ ಗರ್ಲಾನಿ ನನ್ನನ್ನ ದೂಷಿಸುತ್ತಿರುವ ಮಹಿಳೆಯ ಬಳಿ ಯಾವುದೇ ಪುರಾವೆಗಳಿಲ್ಲ. ಪತ್ರದಲ್ಲಿ ವಿವರಿಸಲು ಆಗದೇ ಇರುವಂತಹ ಪದಗಳನ್ನು ಬಳಸಿ ನನ್ನ ತಾಯಿ ಹಾಗೂ ಕುಟುಂಬಕ್ಕೆ ನಿಂದನೆ ಮಾಡಿದ್ದಾಳೆ. ನನ್ನ ಜೀವನ ಹಾಳು ಮಾಡುವುದಕ್ಕೆ ಅವಳು ಹವಣಿಸುತ್ತಿದ್ದಾಳೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

    ಭಾರತದ ಪ್ರಮುಖ ಸ್ಪಿನ್ನರ್ ಅಮಿತ್ ಮಿಶ್ರಾ ಅವರನ್ನು ಮದುವೆ ಆಗುವುದಾಗಿ ಬ್ಲಾಕ್ ಮೇಲ್ ಮಾಡಿ ಪ್ರಚಾರ ಗಿಟ್ಟಿಸಿಕೊಂಡ ಹಾಗೇ ನನ್ನ ಗುರಿಯಾಗಿ ಪ್ರಚಾರ ಮಾಡುತ್ತಿದ್ದಾಳೆ ಎಂದು ವಂದನಾ ಹೆಸರು ಹೇಳದೆ ಕಿಡಿಕಾರಿದರು. ಇದನ್ನು ಓದಿ: ಗಲಾಟೆಯಾದಾಗ ಕುಡಿದಿರಲಿಲ್ಲ, ಕೆಪಿಎಲ್ ಅಂದ್ರೇನು ಗೊತ್ತಿಲ್ಲ: ಸಂಜನಾ ಗಲ್ರಾನಿ

    ಘಟನೆಯಿಂದ ನನ್ನ ತಾಯಿ ನೊಂದು ಹೋಗಿದ್ದಾರೆ. ನನಗೆ ಮುಂದಿನ ವರ್ಷ ಸ್ಯಾಂಡಲ್‍ವುಡ್ ಸೇರಿದಂತೆ ಮೂರ್ನಾಲ್ಕು ಸಿನಿಮಾಗಳಿವೆ. ಅವುಗಳನ್ನು ನೋಡಿಕೊಂಡರೆ ಸಾಕು ಈ ರೀತಿ ಅಗ್ಗದ ಕೊಳಕು ಪ್ರಚಾರ ಬೇಡ. ನಾನು ಈ ಮಹಿಳೆಯೊಂದಿಗೆ ಸಿಕ್ಕಿಬಿದ್ದಿದ್ದೇನೆ. ದಯವಿಟ್ಟು ನನ್ನನ್ನ ಬೆಂಬಲಿಸಿ ಎಂದು ಪತ್ರದ ಮೂಲಕ ಸಂಜನಾ ಗಲ್ರಾನಿ ಮನವಿ ಮಾಡಿಕೊಂಡಿದ್ದಾರೆ.

  • ಪ್ರಧಾನಿ ಮೋದಿಗೆ ಪ್ರಾಣೇಶ್ ಅಭಿನಂದನೆ

    ಪ್ರಧಾನಿ ಮೋದಿಗೆ ಪ್ರಾಣೇಶ್ ಅಭಿನಂದನೆ

    ಕೊಪ್ಪಳ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದ್ದಕ್ಕೆ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನಾ ಪತ್ರ ಬರೆದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರೇ ಯಾವುದೇ ಸ್ವಾರ್ಥವಿಲ್ಲದೆ ರಾಷ್ಟ್ರದ ಏಳಿಗೆಯ ಪಣತೊಟ್ಟು ಕಾಯ್ದೆ ಜಾರಿ ಮಾಡಿದ್ದೀರಿ. ಇದಕ್ಕಾಗಿ ನಿಮಗೆ ಅಭಿನಂದನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ದೇಶದಲ್ಲಿ ಸಮಾನತೆ, ಮಾನವೀಯ ಮೌಲ್ಯಗಳನ್ನು ನಿರಂತರವಾಗಿ ತಲುಪಿಸಲುವಲ್ಲಿ ಯಶಸ್ವಿಯಾಗಿದ್ದೀರಿ. ಇದೊಂದು ರೀತಿಯ ತಪಸ್ಸು ಎಂದು ಪ್ರಾಣೇಶ್ ಅವರು ಅಭಿನಂದನಾ ಪತ್ರದಲ್ಲಿ ಕೊಂಡಾಡಿದ್ದಾರೆ. ಅಲ್ಲದೆ ಇನ್ನೂ ಬಾಕಿ ಉಳಿದಿರುವ ಕಾನೂನುಗಳನ್ನೂ ಜಾರಿಗೆ ತರಲು ತಮಗೆ ಶಕ್ತಿ, ಆರೋಗ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಪತ್ರದಲ್ಲೇನಿದೆ?
    ನಮ್ಮ ನಾಡು, ದೇಶ ಮಹಾತ್ಮರ, ಸಂತರ, ಯೋಗಿಗಳ ತಪೋಭೂಯಾಗಿದ್ದು, ಇಂತಹ ಪುಣ್ಯಭೂಮಿಯ ಭದ್ರತೆಯ ಬೆಳವಣಿಗೆಗೆ ಸ್ವಾರ್ಥ ದುರಾಸೆಗಳಿಲ್ಲದೆ ಸೇವೆಗೈದು ರಾಷ್ಟ್ರದ ರಕ್ಷಣೆಗೆ ಪಣತೊಟ್ಟು, ದೇಶದ ಐಕ್ಯತೆ, ಭದ್ರತೆಗೆ ಪೌರತ್ವ ತಿದ್ದುಪಡಿ ಕಾಯ್ದೆ 2019 ಜಾರಿಗೆ ತಂದಿದ್ದೀರಿ ನಿಮಗೆ ಅಭಿನಂದನೆಗಳು.

    ಭಾರತ ಸ್ವಾತಂತ್ರ್ಯ ಪಡೆದ ನಂತರ ದೇಶದ ಭದ್ರತೆಗಾಗಿ ಯೋಜನೆ ರೂಪಿಸದೇ ದೇಶ ಬಲಹೀನತೆಯಿಂದ ಕೂಡಿತ್ತು. ಈ ವ್ಯವಸ್ಥೆಯನ್ನು ಸರಿಪಡಿಸಲು ತಮ್ಮ ಅವಿರತ ಪರಿಶ್ರಮದಿಂದ ಭಾರತವು ಪ್ರಪಂಚದಲ್ಲೇ ಭದ್ರತೆಯಲ್ಲಿ ಅಗ್ರಸ್ಥಾನ ಪಡೆಯುವಂತಾಯಿತು. ಜನಸಾಮಾನ್ಯರ ಆಶೋತ್ತರ ಈಡೇರಿಸಲು ಸತತ ಪ್ರಯತ್ನದಿಂದ ಜಮ್ಮು-ಕಾಶ್ಮೀರದ 370ನೇ ವಿಧಿ ಹಾಗೂ 35ಎ ರದ್ದುಗೊಳಿಸುವ ಮೂಲಕ ಡಾ.ಶ್ಯಾಮ್‍ಪ್ರಸಾದ್ ಮುಖರ್ಜಿಯವರ ಆಶಯವನ್ನು ಈಡೇರಿಸಿದ ಕೀರ್ತಿ ತಮಗೆ ಸಲ್ಲುತ್ತದೆ.

    ಈ ದೇಶದ ಕೋಟ್ಯಂತರ ಜನರ ಭಾವನೆಗಳ ಆರಾಧ್ಯ ದೈವವಾಗಿದ್ದ, ಶ್ರೀರಾಮ ಮಂದಿರದ ಕನಸು ಕೂಡ ನಿಮ್ಮ ಸರ್ಕಾರದ ಅವಧಿಯಲ್ಲಿ ಈಡೇರಿದ್ದು ಸಂತಸದ ವಿಷಯವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದು ಅಖಂಡ ಭಾರತದ ಪರಿಕಲ್ಪನೆಗೆ ಸಾಕ್ಷಿಯಾಗಿದೆ. ರಾಜಕೀಯ ದುರುದ್ದೇಶ, ಮತಾಂಧತೆ, ಭಯೋತ್ಪಾದನೆ ರಾಷ್ಟ್ರದ ಶಾಂತಿಗೆ ಭಂಗ ತರಲು ಯತ್ನಿಸಿದ ನೆರೆ ರಾಷ್ಟ್ರಗಳ ಕಿರುಕುಳಗಳಿಗೆ ತಾವು ತಕ್ಕ ಉತ್ತರ ನೀಡಿದ್ದೀರಿ. ಈ ಮೂಲಕ ದೇಶದ ಶಾಂತಿ ಸಹನೆ ಕಾಪಾಡುವುದರ ಜೊತೆಗೆ ದೇಶದ ಸಂಪತ್ತನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಪಥದತ್ತ ಸಾಗುವಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಂಡಿರುವುದು ಶ್ಲಾಘನೀಯವಾಗಿದೆ.

  • ಮಕ್ಕಳು ತಪ್ಪು ಮಾಡುವುದು ಸಹಜ, ಬಂಧಿತರನ್ನು ಬಿಡುಗಡೆ ಮಾಡಿ – ಕ್ಷಮೆ ಕೇಳಿದ ವಿದ್ಯಾರ್ಥಿಗಳು

    ಮಕ್ಕಳು ತಪ್ಪು ಮಾಡುವುದು ಸಹಜ, ಬಂಧಿತರನ್ನು ಬಿಡುಗಡೆ ಮಾಡಿ – ಕ್ಷಮೆ ಕೇಳಿದ ವಿದ್ಯಾರ್ಥಿಗಳು

    – ಜಿಲ್ಲಾಧಿಕಾರಿ ಹೆಸರಲ್ಲಿ 2 ದಿನ ರಜೆ ಘೋಷಿಸಿದ ವಿದ್ಯಾರ್ಥಿಗಳು

    ಲಕ್ನೋ: ಡಿಸೆಂಬರ್ 23 ಹಾಗೂ 24ರಂದು ರಜೆ ಘೋಷಿಸಲಾಗಿದೆ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ನಂತರ ಕ್ಷಮೆ ಕೇಳಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವುದು ಅವರ ಸಹಪಾಠಿಗಳಿಗೆ ತಿಳಿದಿದ್ದು, ತಕ್ಷಣ ಇತರ ವಿದ್ಯಾರ್ಥಿಗಳು ಇಬ್ಬರು ಸಹಪಾಠಿಗಳ ರಕ್ಷಣೆಗೆ ಧಾವಿಸಿದ್ದಾರೆ. ನೋಯ್ಡಾ ಸೆಕ್ಟರ್ 27ರಲ್ಲಿರುವ ಜಿಲ್ಲಾಧಿಕಾರಿ ಬಿ.ಎನ್.ಸಿಂಗ್ ಅವರ ಕಚೇರಿಗೆ ಧಾವಿಸಿ ಕ್ಷಮೆಯಾಚಿಸಿ ಇಬ್ಬರು ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳು ನಮ್ರತೆಯಿಂದ ಕ್ಷಮೆಯಾಚಿಸಿದ್ದು, ಮಂಡಿಯೂರಿ ಕುಳಿತು, ಎರಡೂ ಕೈಗಳಿಂದ ಕಿವಿ ಹಿಡಿದು ಕುಳಿತುಕೊಳ್ಳುವ ಮೂಲಕ ಕ್ಷಮೆಯಾಚಿಸಿದ್ದಾರೆ.

    ನಾವು ಮಕ್ಕಳು ತಪ್ಪು ಮಾಡುವುದು ಸಹಜ. ಹಿರಿಯರು ಇದನ್ನು ತಿಳಿದು ನಮ್ಮನ್ನು ಕ್ಷಮಿಸಬೇಕು ಎಂದು ನೋಯ್ಡಾ ಸೆಕ್ಟರ್ 12ರ ಶಾಲೆಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೇಳಿಕೊಂಡಿದ್ದಾರೆ.

    ಅಲ್ಲದೆ ಈ ಕುರಿತು ವಿದ್ಯಾರ್ಥಿಗಳು ಸೆಕ್ಟರ್ 20ರಲ್ಲಿ ಪೊಲೀಸ್ ಠಾಣೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪಥಸಂಚಲನ ನಡೆಸಿದ್ದಾರೆ. ನಮ್ಮ ಸ್ನೇಹಿತರ ಪರವಾಗಿ ನಾವು ಕ್ಷಮೆಯಾಚಿಸುತ್ತೇವೆ. ಅವರು ತಪ್ಪು ಮಾಡಿದ್ದಾರೆ, ಆದರೆ ಈ ಕುರಿತು ಅವರಿಗೆ ಅರಿವಾಗಿದೆ. ಅವರ ಕುಟುಂಬದವರು ಸಹ ಈ ಕುರಿತು ಎಚ್ಚರಿಕೆ ವಹಿಸಿದ್ದಾರೆ. ವಿವಾದ ಸೃಷ್ಟಿಸುವುದು ಅವರ ಉದ್ದೇಶವಾಗಿರಲಿಲ್ಲ ಎಂದು 12ನೇ ತರಗತಿ ವಿದ್ಯಾರ್ಥಿ ತಿಳಿಸಿದ್ದಾನೆ.

    ಈ ವೇಳೆ ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಬಳಿ ಕುಳಿತುಕೊಳ್ಳದಂತೆ ತಿಳಿಸಿದ್ದಾರೆ. ಆಗ ವಿದ್ಯಾರ್ಥಿನಿ ಉತ್ತರಿಸಿ, ನಾವು ನಿಮ್ಮೊಂದಿಗೆ ವಾದ ಮಾಡುತ್ತಿಲ್ಲ. ಕೇವಲ ಕ್ಷಮೆಯಾಚಿಸಲು ಬಂದಿದ್ದೇವೆ ಅಷ್ಟೇ ಎಂದು ವಿದ್ಯಾರ್ಥಿನಿ ಅಳುತ್ತಲೇ ತಿಳಿಸಿದ್ದಾಳೆ. ಅಲ್ಲದೆ ಅವರನ್ನು ಬಿಡುಗಡೆ ಮಾಡದಿದ್ದರೆ ಅಂತಿಮ ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡಬೇಕು ಎಂದು ವಿದ್ಯಾರ್ಥಿಗಳು ಕೇಳಿಕೊಂಡಿದ್ದಾರೆ.

    ಈ ಕುರಿತು ಜಿಲ್ಲಾಧಿಕಾರಿ ಸಿಂಗ್ ಪ್ರತಿಕ್ರಿಯಿಸಿ, ತಪ್ಪು ಮಾಡಿದವರು ವಿದ್ಯಾರ್ಥಿಗಳೆಂದು ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ದೂರು ದಾಖಲಿಸಲಾಗಿದೆ. ಕಾನೂನು ವಿಚಾರವಾಗಿದ್ದರಿಂದ ಎಫ್‍ಐಆರ್ ಕೂಡ ದಾಖಲಾಗಿದೆ, ತನಿಖೆ ನಡೆಯುತ್ತಿದೆ. ಎಫ್‍ಐಆರ್ ದಾಖಲಾಗಿದ್ದರಿಂದ ಹಿಂಪಡೆಯುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾ ವ್ಯಾಪ್ತಿಯ ಎಲ್ಲ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 23 ಹಾಗೂ 24ರಂದು ರಜೆ ಘೋಷಿಸಲಾಗಿದೆ ಎಂಬ ಜಿಲ್ಲಾಧಿಕಾರಿ ಬಿ.ಎನ್.ಸಿಂಗ್ ನಕಲಿ ಸಹಿ ಇರುವ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳು ವೈರಲ್ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪತ್ರ ವೈರಲ್ ಆಗುತ್ತಿದ್ದಂತೆ, ಸಿಂಗ್ ಈ ವದಂತಿ ಕುರಿತು ಸ್ಪಷ್ಟನೆ ನೀಡಿದ್ದು, ಯಾವುದೇ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿಲ್ಲ, ಇಂತಹ ಯಾವುದೇ ಆದೇಶ ಹೊರಡಿಸಿಲ್ಲ. ನನ್ನ ಸಹಿ ಇರುವ ನಕಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ್ದೇನೆ. ಇದು ನನ್ನ ಪತ್ರವಲ್ಲ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದರು.

  • ಹೃದಯದ ಚಿಕಿತ್ಸೆಗೆ ಸಹಾಯ ಕೋರಿ ಮೋದಿಗೆ ಬಾಲಕ ಪತ್ರ

    ಹೃದಯದ ಚಿಕಿತ್ಸೆಗೆ ಸಹಾಯ ಕೋರಿ ಮೋದಿಗೆ ಬಾಲಕ ಪತ್ರ

    ಕೊಪ್ಪಳ: ಹೃದಯ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕನೊಬ್ಬ ಚಿಕಿತ್ಸೆಗೆ ಹಣವಿಲ್ಲದೆ ಸಹಾಯ ಕೋರಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾನೆ.

    ಕೊಪ್ಪಳ ತಾಲೂಕಿನ ಬೋಚನಳ್ಳಿ ಗ್ರಾಮದ ಭೀಮಪ್ಪ, ಪ್ರಧಾನಿಗೆ ಪತ್ರ ಬರೆದು ತನ್ನ ಹೃದಯ ಚಿಕಿತ್ಸೆಗೆ ಸಹಾಯ ಕೋರಿದ್ದಾನೆ. ಕಡು ಬಡವರಾಗಿರುವ ಭೀಮಪ್ಪ ಕುಟುಂಬ ಕೂಲಿ ನಾಲಿ ಮಾಡಿಕೊಂಡೆ ಜೀವನ ನಡೆಸುತ್ತಿದೆ.

    ಭೀಮಪ್ಪ ಒಂದು ವರ್ಷ ಇರುವಾಗಲೇ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿದೆ. ಈಗಾಗಲೇ ಭೀಮಪ್ಪ ತಂದೆ-ತಾಯಿ ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಅಲ್ಲದೆ ತಮ್ಮ ಬಳಿ ಇದ್ದ ಜಮೀನು ಮಾರಿಕೊಂಡಿದ್ದಾರೆ. ಜೊತೆಗೆ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದಾರೆ.

    ಇನ್ನೂ ಭೀಮಪ್ಪ ಹೃದಯ ಚಿಕಿತ್ಸೆಗೆ 31 ಲಕ್ಷ ಹಣ ಬೇಕಾಗಿದೆ. ಹೃದಯ ಬದಲಾವಣೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದು ಅದಕ್ಕಾಗಿ 31 ಲಕ್ಷ ಖರ್ಚಾಗುತ್ತೆ. ಆದರೆ ಚಿಕಿತ್ಸೆಗೆ ಹಣ ಇಲ್ಲದೆ ಭೀಮಣ್ಣ ಕುಟುಂಬಸ್ಥರು ಕಂಗಾಲಾಗಿದ್ದಾರೆ.

    ಹಾಗಾಗಿ ಭೀಮಪ್ಪ ತನ್ನ ಚಿಕಿತ್ಸೆಗೆ ಸಹಾಯ ಕೋರಿ ಪ್ರಧಾನಿಗೆ ಪತ್ರ ಬರೆದು ಸ್ಪಂದಿಸುವಂತೆ ಮನವಿ ಮಾಡಿಕೊಂಡಿದ್ದಾನೆ.

  • ರಾಜಧಾನಿಯಲ್ಲಿ ಕನ್ನಡ ನಾಮಫಲಕದ ಕುರಿತು ಬಿಬಿಎಂಪಿಗೆ ಎಫ್‍ಕೆಸಿಸಿಐ ಪತ್ರ

    ರಾಜಧಾನಿಯಲ್ಲಿ ಕನ್ನಡ ನಾಮಫಲಕದ ಕುರಿತು ಬಿಬಿಎಂಪಿಗೆ ಎಫ್‍ಕೆಸಿಸಿಐ ಪತ್ರ

    ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವ ವಿಚಾರವಾಗಿ ಎಫ್‍ಕೆಸಿಸಿಐ(ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಬಿಬಿಎಂಪಿಗೆ ಪತ್ರ ಬರೆದಿದೆ.

    ಸದ್ಯ ಸಿಲಿಕಾನ್ ಸಿಟಿಯಲ್ಲಿ 10 ಸಾವಿರ ಕೈಗಾರಿಕೋದ್ಯಮ ಮತ್ತು 20 ಸಾವಿರ ವ್ಯಾಪಾರೋದ್ಯಮಿಗಳು ಈ ನಿಯಮಕ್ಕೆ ಒಳಪಡಲಿದ್ದಾರೆ. ಹೀಗಾಗಿ ವಾಣಿಜ್ಯ ಮಳಿಗೆಗಳು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಏಪ್ರಿಲ್ 30ರವರೆಗೂ ಸಮಯಾವಕಾಶ ಬೇಕಾಗಿದೆ ಎಂದು ಬಿಬಿಎಂಪಿಗೆ ಎಫ್‍ಕೆಸಿಸಿಐ ಪತ್ರ ಬರೆದಿದೆ.

    ಈ ಪತ್ರದಲ್ಲಿ ಸಮಯಾವಕಾಶದ ಜೊತೆಗೆ ಬಿಬಿಎಂಪಿಗೆ ಚುರುಕು ಸಹ ಮುಟ್ಟಿಸಿದೆ. ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ, ಕಸ ನಿರ್ವಹಣೆ, ಟ್ರಾಫಿಕ್ ಸಮಸ್ಯೆ, ಕಳಪೆ ಕಾಮಗಾರಿ ಒತ್ತಡ, ಮಳೆ ನೀರು ನಿರ್ವಹಣೆ ಹೀಗೆ ಸಮಸ್ಯೆಗಳ ಪಟ್ಟಿ ಮಾಡಿ, ಇದನ್ನು ಬಿಬಿಎಂಪಿ ಸೂಕ್ತವಾಗಿ ನಿರ್ವಹಿಸ ಬೇಕಾಗಿದೆ. ಅಲ್ಲದೆ ಬಿಬಿಎಂಪಿ ಕನ್ನಡ ನಾಮಫಲಕ ಅಳವಡಿಕೆ ಹೆಸರಲ್ಲಿ ಕಿರುಕುಳ ಸೃಷ್ಟಿಸಬಾರದೆಂದು ಎಫ್‍ಕೆಸಿಸಿಐ ಪತ್ರದಲ್ಲಿ ಉಲ್ಲೇಖಿಸಿದೆ.

  • ಸೈಕಲ್ ರಿಪೇರಿ ತಡವಾಗಿದೆ ಎಂದು ಪತ್ರ ಬರೆದ ಮಕ್ಕಳು – ಸಹಾಯಕ್ಕೆ ಬಂದ ಪೊಲೀಸ್

    ಸೈಕಲ್ ರಿಪೇರಿ ತಡವಾಗಿದೆ ಎಂದು ಪತ್ರ ಬರೆದ ಮಕ್ಕಳು – ಸಹಾಯಕ್ಕೆ ಬಂದ ಪೊಲೀಸ್

    ತಿರುವನಂತಪುರಂ: ಸೈಕಲ್ ರಿಪೇರಿ ಮಾಡಿಕೊಡಲು ತಡಮಾಡುತ್ತಿದ್ದಾರೆ ಎಂದು ಪುಟ್ಟ ಸಹೋದರರು ಬರೆದ ಪತ್ರಕ್ಕೆ ಸ್ಪಂದಿಸಿದ ಕೇರಳ ಪೊಲೀಸರಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತದೆ.

    ಕೇರಳದ ಕೋಜಿಕೋಡ್‍ನ ಐದನೇ ತರಗತಿ ಓದುತ್ತಿರುವ ಅಬಿನ್ ಪೊಲೀಸರಿಗೆ ಪತ್ರ ಬರೆದಿದ್ದು, ಈ ಪತ್ರದಲ್ಲಿ ನಾನು ಮತ್ತು ನನ್ನ ಸಹೋದರನ ಸೈಕಲ್ ಅನ್ನು ಎರಡು ತಿಂಗಳ ಹಿಂದೆ ರಿಪೇರಿಗೆ ಕೊಟ್ಟಿದ್ದೆವು. ಆದರೆ ಅವರು ನಮಗೆ ಸೈಕಲ್ ವಾಪಸ್ ಮಾಡುತ್ತಿಲ್ಲ ನಮಗೆ ಸಹಾಯ ಮಾಡಿ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾನೆ.

    https://www.facebook.com/keralapolice/photos/a.135262556569242/2504084799686994/?type=3

    ಇದೇ ತಿಂಗಳ 25 ರಂದು ಮಲಯಾಳಂ ಭಾಷೆಯಲ್ಲಿ ಬರೆದಿರುವ ಪತ್ರದಲ್ಲಿ, ನಾನು ಮತ್ತು ನನ್ನ ಸಹೋದರನ ಸೈಕಲ್ ಅನ್ನು ರಿಪೇರಿ ಮಾಡಿಸಲು ಶಾಪ್‍ಗೆ ನೀಡಿದ್ದೇವೆ. ಆದರೆ ನಾವು ಶಾಪ್ ಬಳಿ ಹೋಗಿ ಅನೇಕ ಬಾರಿ ಸೈಕಲ್ ಕೇಳಿದರೆ ಮಾಲೀಕರು ನೀಡುತ್ತಿಲ್ಲ. ಇನ್ನೂ ನಿಮ್ಮ ಸೈಕಲ್ ಸರಿಯಾಗಿಲ್ಲ ಎನ್ನುತ್ತಿದ್ದಾರೆ. ಈ ವಿಚಾರವಾಗಿ ನಮ್ಮ ಮನೆಯವರು ನಮಗೆ ಸಹಾಯ ಮಾಡುತ್ತಿಲ್ಲ ಎಂದು ಪತ್ರ ಬರೆದಿದ್ದಾರೆ.

    ಪತ್ರ ಬಂದು ತಲುಪಿದ ನಂತರ ಈ ಪತ್ರವನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಶೇರ್ ಮಾಡಿರುವ ಕೇರಳ ಪೊಲೀಸರು, ನಾವು ದೂರನ್ನು ದಾಖಲಿಸಿಕೊಂಡಿದ್ದೇವೆ. ನಮ್ಮ ಪೊಲೀಸ್ ಅಧಿಕಾರಿ ರಾಧಿಕಾ ಎನ್‍ಪಿ ಸೈಕಲ್ ಶಾಪ್‍ಗೆ ಹೋಗಿ ವಿಚಾರಣೆ ಮಾಡಿದ್ದಾರೆ. ಮಾಲೀಕರು ಅನಾರೋಗ್ಯ ಮತ್ತು ಅವರ ಮಗನ ಮದುವೆಯಲ್ಲಿ ಬ್ಯುಸಿ ಇದ್ದ ಕಾರಣ ರಿಪೇರಿ ಮಾಡಲು ಆಗಿಲ್ಲ. ಆದರೆ ಅದಷ್ಟೂ ಬೇಗ ಸೈಕಲ್ ಗಳನ್ನು ರೆಡಿ ಮಾಡಿಕೊಡುವುದಾಗಿ ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    https://www.facebook.com/keralapolice/photos/p.2504086796353461/2504086796353461/?type=3

    ಇದಾದ ನಂತರ ಇನ್ನೊಂದು ಫೇಸ್ ಬುಕ್ ಪೋಸ್ಟ್ ಹಾಕಿರುವ ಕೇರಳ ಪೊಲೀಸರು, ಈ ಇಬ್ಬರು ಪುಟ್ಟ ಸಹೋದರರ ಸೈಕಲ್ಸ್ ವಾಪಸ್ ಬಂದಿವೆ ಎಂದು ಬರೆದುಕೊಂಡು, ಅಬಿನ್ ಮತ್ತು ಆತನ ಸಹೋದರ ಸೈಕಲ್ ಬಳಿ ನಿಂತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ.

    ಪೊಲೀಸರ ಈ ಸಹಾಯಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದು, ಈ ಪೋಸ್ಟ್ ಅನ್ನು 70 ಸಾವಿರ ಜನ ಲೈಕ್ ಮಾಡಿದ್ದರೆ ಮತ್ತು 4 ಸಾವಿರ ಜನ ಶೇರ್ ಮಾಡಿದ್ದಾರೆ. ಪೊಲೀಸರು ಈ ಕೆಲಸವನ್ನು ಶ್ಲಾಘಿಸಿ ಸಾವಿರಕ್ಕೂ ಹೆಚ್ಚು ಜನರು ಕಮೆಂಟ್ ಮಾಡಿದ್ದು, ಪುಟ್ಟು ಸಹೋದರರಿಗೆ ಸಹಾಯ ಮಾಡಿದ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ.

  • ಸುಳ್ಳು ಹೇಳಿ ಕಣ್ಣಿರು ಹಾಕಬೇಡಿ- ಎಚ್‍ಡಿಕೆಗೆ ಕೈಮುಗಿದ ನಾರಾಯಣಗೌಡ

    ಸುಳ್ಳು ಹೇಳಿ ಕಣ್ಣಿರು ಹಾಕಬೇಡಿ- ಎಚ್‍ಡಿಕೆಗೆ ಕೈಮುಗಿದ ನಾರಾಯಣಗೌಡ

    ಮಂಡ್ಯ: ಕಣ್ಣೀರು ಹಾಕುತ್ತಾ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಡಿದ ಆರೋಪಕ್ಕೆ ಕೆ.ಆರ್ ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ತಿರುಗೇಟು ನೀಡಿದ್ದಾರೆ. ಭಗವಂತನ ಆಣೆಗೂ ನಾನು ಯಾವುದೇ ಪತ್ರ ಬರೆದಿಲ್ಲ. ಕುಮಾರಣ್ಣ ಮೊದಲು ಸುಳ್ಳು ಹೇಳುವುದನ್ನು ಬಿಡಿ ಎಂದು ಎಚ್‍ಡಿಕೆ ವಿರುದ್ಧ ಕಿಡಿಕಾರಿದ್ದಾರೆ.

    ಜಿಲ್ಲೆಯ ಕಿಕ್ಕೇರಿಯಲ್ಲಿ ಎಚ್‍ಡಿಕೆ ಕಣ್ಣೀರು ಹಾಕಿದ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಣ್ಣ ಕಣ್ಣೀರು ಹಾಕಿದ್ದಾರೆ. ಯಾಕೆಂದರೆ ಅವರಿಗೆ ಅವರ ಕುಟುಂಬ ಬಿಟ್ಟರೆ ಬೇರೆ ಒಕ್ಕಲಿಗರು ಯಾರು ಬೆಳೆಯಬಾರದು. ಅವರು ನನ್ನ ಕತ್ತು ಹಿಸುಕಲು ಹೊರಟಿದ್ದಾರೆ. ಕತ್ತು ಹಿಸುಕೋದಾದರೆ ಅವರ ಮನೆಗೆ ಕರೆಸಿಕೊಂಡು ಹಿಸುಕಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ನಾನೇನು ತಪ್ಪು ಮಾಡಿದೆ, ನನ್ನನ್ನು ಯಾಕೆ ಕೈ ಬಿಟ್ಟಿರಿ – ಮಂಡ್ಯದಲ್ಲಿ ಎಚ್‍ಡಿಕೆ ಮತ್ತೆ ಕಣ್ಣೀರು

    ಎಚ್‍ಡಿಕೆ ಅವರು ನಾನು ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ. ಭಗವಂತನ ಆಣೆಗೂ ನಾನು ಅವರಿಗೆ ಪತ್ರ ಬರೆದಿಲ್ಲ. ಯಾರು ಬರೆದಿದ್ದಾರೆ? ಯಾಕೆ ಬರೆದಿದ್ದಾರೆ ಎಂದು ಅವರೇ ಸೃಷ್ಟಿಸುತ್ತಿರುವ ಕಥೆಯಿದು. ಅವರು ಮತ ಕೇಳಲಿ ಪಕ್ಷ ಬೆಳೆಸಲಿ. ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ದಯಮಾಡಿ ಕುಮಾರಣ್ಣ ಸುಳ್ಳು ಹೇಳುವುದನ್ನು ಬಿಡಿ ಎಂದು ಕೈ ಮುಗಿದಿದ್ದಾರೆ.

    ಸುಳ್ಳು ಹೇಳಿ ಹೇಳಿ ನಮ್ಮ ಸ್ಥಿತಿ ಈ ರೀತಿ ಆಯ್ತು. ನಿಮ್ಮನ್ನು ನಾವು ದೂರ ಮಾಡಿಕೊಂಡು ಬರೋದಕ್ಕೆ ನೀವು ಸುಳ್ಳು ಹೇಳಿದ್ದೇ ಕಾರಣ. ದಯವಿಟ್ಟು ಸತ್ಯ ಹೇಳಿ, ಸುಳ್ಳು ಹೇಳಿ ನಮ್ಮ ಕತ್ತು ಯಾಕೆ ಹಿಸುಕಲು ಹೊರಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.