Tag: letter

  • 10 ವರ್ಷದಿಂದ ಪತ್ರಗಳನ್ನೇ ಹಂಚದೇ ತನ್ನಲ್ಲೇ ಉಳಿಸಿಕೊಂಡ ಪೋಸ್ಟ್ ಮ್ಯಾನ್

    10 ವರ್ಷದಿಂದ ಪತ್ರಗಳನ್ನೇ ಹಂಚದೇ ತನ್ನಲ್ಲೇ ಉಳಿಸಿಕೊಂಡ ಪೋಸ್ಟ್ ಮ್ಯಾನ್

    ಭುವನೇಶ್ವರ್: 10 ವರ್ಷಗಳಿಂದ ಪೋಸ್ಟ್ ಆಫೀಸ್ ಗೆ ಬಂದಿದ್ದ ಸುಮಾರು 1 ಸಾವಿರಕ್ಕೂ ಹೆಚ್ಚು ಪತ್ರಗಳನ್ನು ಮತ್ತು ಪ್ಯಾಕೇಜ್ ಗಳನ್ನು ಸಂಬಂಧಿಸಿದವರಿಗೆ ನೀಡದೆ ಇರುವ ಘಟನೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಕರ್ತವ್ಯ ಲೋಪದ ಆರೋಪದಲ್ಲಿ ಅಂಚೆ ಕಚೇರಿ ಉದ್ಯೋಗಿಯನ್ನು ಅಮಾನತು ಮಾಡಲಾಗಿದೆ.

    ಜಗನ್ನಾಥ್ ಪುಹನ್ ಅಮಾನತುಗೊಂಡ ಉದ್ಯೋಗಿ. ಈತ ಭದ್ರಾಕ್ ನ ಒಡಂಗಾ ಶಾಖೆಯ ಅಂಚೆ ಕಚೇರಿಯಲ್ಲಿ, ಸಹಾಯಕ ಶಾಖೆಯ ಪೋಸ್ಟ್ ಮ್ಯಾನ್(ಎಬಿಪಿಎಂ) ಆಗಿ ಕೆಲಸ ಮಾಡುತ್ತಿದ್ದನು. ಈತ ತನ್ನ ನಿರ್ಲಕ್ಷ್ಯದಿಂದ ಕಚೇರಿಗೆ ಸುಮಾರು 2008 ರಿಂದ 2017 ರವರೆಗಿನ ಬಂದಂತಹ ಪತ್ರಗಳನ್ನು ಕೊಡದೆ ತನ್ನ ಬಳಿಯೇ ಉಳಿಸಿಕೊಂಡಿದ್ದಾನೆ.

    ಕಚೇರಿಗೆ ಬಂದಿದ್ದ ಪತ್ರಗಳಲ್ಲಿ ಸರ್ಕಾರದ ಅಧಿಕೃತ ಪ್ರಕಟಣೆಗಳು, ಪರೀಕ್ಷಾ ಪ್ರವೇಶ ಪತ್ರಗಳು, ಕೆಲಸದ ನೇಮಕ ಪತ್ರ ಹಾಗೂ ಬಹುಮುಖ್ಯವಾದ ಮಾಹಿತಿಯ ಪತ್ರಗಳು ಸೇರಿದೆ. ಸುಮಾರು 1,500 ಪತ್ರ ಹಾಗೂ ವಸ್ತುಗಳು ಬಂದಿದೆ. ಈತನ ಕರ್ತವ್ಯ ಲೋಪದಿಂದ ಈ ಭಾಗದ ನೂರಾರು ಜನರು ಮುಖ್ಯವಾದ ಮಾಹಿತಿಗಳನ್ನು ತಿಳಿದುಕೊಳ್ಳಲಾಗದೆ ಸಮಸ್ಯೆ ಎದುರಿಸಿದ್ದಾರೆ.

    ಘಟನೆ ಬೆಳಕಿಗೆ ಬಂದಿದ್ದು ಹೇಗೆ?
    ಅಂಚೆ ಕಚೇರಿಯ ಆವರಣದಲ್ಲಿ ಮಕ್ಕಳ ಆಟವಾಡುತ್ತಿದ್ದಾಗ ಅವರಿಗೆ ಚೀಲದಲ್ಲಿ ತುಂಬಿದ್ದ ಪತ್ರಗಳು ದೊರೆತಿದೆ. ಬಳಿಕ ಆ ಚೀಲದಿಂದ ಹೊರ ಬಂದಿದ್ದ ಕೆಲವು ಪತ್ರಗಳನ್ನು ಗಮನಿಸಿದ್ದಾರೆ. ಅವುಗಳಲ್ಲಿ ಎಟಿಎಂ ಕಾರ್ಡ್ ಗಳು, ಬ್ಯಾಂಕ್ ಪಾಸ್ ಬುಕ್ ಮತ್ತು ಪ್ಯಾನ್ ಕಾರ್ಡ್ ಗಳು ಕಂಡಿದೆ. ಇವುಗಳನ್ನು ಅವರು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಆತನ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ ಎಂದು ಓಡಾಂಗ ಪಂಚಾಯಿತಿಯ ಅಧ್ಯಕ್ಷ ಕಿಶೋರ್ ಪಡಿಯಾರಿ ಎಂಬವರು ಮಾಹಿತಿ ನೀಡಿದ್ದಾರೆ.

    ಅಂದಹಾಗೇ ಜಗನ್ನಾಥ್ ಅಂಚೆ ಇಲಾಖೆಯ ಪೂರ್ಣಾವಧಿ ಸಮಯದ ನೌಕರನಲ್ಲ ಎಂದು ತಿಳಿದು ಬಂದಿದ್ದು, ಗುತ್ತಿಗೆ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಆದರೆ ಈತನ ನಿರ್ಲಕ್ಷ್ಯದಿಂದ ಸರಿಯಾದ ವೇಳೆಗೆ ಪತ್ರಗಳನ್ನು ಕೊಡದೆ ಕರ್ತವ್ಯ ಲೋಪ ಮಾಡಿದ್ದಾನೆ. ಮೊದಲು ಪುಹಾನ್ ಗ್ರಾಮೀಣ್ ಡಾಕ್ ಸೇವಕ್ ನೌಕರನಾಗಿ ಜಗನ್ನಾಥ್ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಳಿಕ ಈತನನ್ನು ಹೆಚ್ಚುವರಿ ಇಲಾಖೆಯ ಉದ್ಯೋಗಿಯಾಗಿ ವರ್ಗೀಕರಿಸಲಾಗಿ ಜುಲೈನಲ್ಲಿ ಎಬಿಪಿಎಮ್ ಎಂದು ಗೊತ್ತುಪಡಿಸಲಾಗಿತ್ತು ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಒಡಿಶಾ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಸಂತೋಷ್ ಕುಮಾರ್ ಕಮಿಲ್ಲಾ, ಕರ್ತವ್ಯ ಲೋಪದ ಆರೋಪದ ಮೇಲೆ ಜಗನ್ನಾಥ್‍ ನನ್ನು ಅಮಾನತು ಮಾಡಲಾಗಿದೆ. 10 ವರ್ಷಗಳಿಂದ ತನ್ನ ಕರ್ತವ್ಯವನ್ನು ಏಕೆ ನಿರ್ಲಕ್ಷಿಸಿದ್ದಾನೆ ಎಂಬುದರ ಕುರಿತು ಮಾಹಿತಿ ಪಡೆಯಲಾವುದು ಎಂದು ತಿಳಿಸಿದ್ದಾರೆ.

    ಜಗನ್ನಾಥ್ ಕಾರ್ಯನಿರ್ವಹಿಸುವ ಪ್ರದೇಶದಲ್ಲಿ ಸಾರ್ವಜನಿಕರು ಯಾವುದೇ ದೂರು ನೀಡಿಲ್ಲ. ಆದ್ದರಿಂದ ಈ ಮಾಹಿತಿ ಲಭಿಸಿಲ್ಲ. ಪ್ರತಿ ಅಂಚೆ ಕಚೇರಿಗೂ ಇಲಾಖೆಯ ಉನ್ನತ ಅಧಿಕಾರಿಗಳು ಪ್ರತಿವರ್ಷ ಒಮ್ಮೆಯಾದರೂ ಶಾಖಾ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆದರೆ ಈ ಕಾರ್ಯವೂ ನಡೆದಿಲ್ಲ. ಆದ್ದರಿಂದ ಈತ ಕರ್ತವ್ಯ ನಿರ್ವಹಿಸದೆ ಕರ್ತವ್ಯ ಲೋಪವೆಸಗಿದ್ದಾನೆ ಎಂದು ಅಂಚೆ ಉದ್ಯೋಗಿಯೊಬ್ಬರು ಹೇಳಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ ಜಗನ್ನಾಥ್ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ತಪಿಸ್ಥನಿಗೆ ಶಿಕ್ಷೆ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಿರಾಡಿ ಘಾಟ್‍ ನಲ್ಲಿ ಆ.23ರವರೆಗೆ ಲಘುವಾಹನ, ಆ.25 ವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧ

    ಶಿರಾಡಿ ಘಾಟ್‍ ನಲ್ಲಿ ಆ.23ರವರೆಗೆ ಲಘುವಾಹನ, ಆ.25 ವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧ

    ಹಾಸನ: ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್‍ ನಲ್ಲಿ ಗುಡ್ಡ ಕುಸಿದಿದ್ದು, ಆಗಸ್ಟ್ 20ರವರೆಗೆ ಲಘು ವಾಹನಗಳ ಸಂಚಾರ ಹಾಗೂ 25ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ರಸ್ತೆ ಮೇಲೆ ಬಿದ್ದಿರುವ ಮಣ್ಣಿನ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದ್ದರಿಂದ ಕಾರ್ಯಾಚರಣೆಗಾಗಿ ಹತ್ತು ದಿನಗಳ ಕಾಲ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಆಗಸ್ಟ್ 20ರವರೆಗೆ ಎಲ್ಲಾ ವಾಹನ ಹಾಗೂ ಆಗಸ್ಟ್ 25 ರವರೆಗೆ ರಾಷ್ಟ್ರೀಯ ಹೆದ್ದಾರಿ-75 ಶಿರಾಡಿಘಾಟ್ ರಸ್ತೆಯಲ್ಲಿ ಭಾರಿ ವಾಹನಗಳು ನಿಷೇಧ ಮಾಡಿ ಈ ಬಗ್ಗೆ ಸಕಲೇಶಪುರ ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ.

    ಪತ್ರದಲ್ಲಿ ಏನಿದೆ?:
    ಜಿಲ್ಲೆಯಾದ್ಯಂತ ಮುಂದಿನ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಅರಬ್ಬಿ ಸಮುದ್ರದ ಅಲೆಗಳು 3 ರಿಂದ 4 ಮೀಟರ್ ಗಳಷ್ಟು ಎತ್ತರವಿದ್ದು, ಮೀನುಗಾರರು ಸುಮುದ್ರಕ್ಕೆ ಇಳಿಯಬಾರದು. ಸಂಪಾಜೆ, ಶಿರಾಡಿ ಘಾಟ್ ಬಂದ್ ಆಗಿದ್ದು ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಸಂಚರಿಸಬಹುದು.

    ನೇತ್ರಾವತಿ, ಕುಮಾರಧಾರ ನದಿ ಪಾತ್ರದ ತಗ್ಗು ಪ್ರದೇಶದ ಜನರು ಎತ್ತರ ಪ್ರದೇಶಗಳಿಗೆ ತೆರಳುವುದು. ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ. (ಮಳೆಯ ಪ್ರಮಾಣ ಹೆಚ್ಚಾದಲ್ಲಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರು ರಜೆ ಫೋಷಿಸಬಹುದು ಎಂದು ಜಿಲ್ಲಾ ವಿಪತ್ತು ಮಿರ್ವಹಣಾ ಪ್ರಾಧಿಕಾರ ಇಲಾಖೆಯಿಂದ ಪತ್ರದ ಮೂಲಕ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

    ಚಾರ್ಮಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ದೊಡ್ಡತಪ್ಲು ಬಳಿ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದ್ದು, ಲಾರಿಯಲ್ಲಿದ್ದ ಕೆ.ಆರ್.ಪೇಟೆ ಮೂಲದ ಸಂದೀಪ್ ಹಾಗು ಮಾನ್ವಿ ಮೂಲದ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ನೋಡಲು ಹೋದ ಮಂಗಳೂರು ಮೂಲದ ರಾಮದೇವ್ ಅಪಘಾತದಲ್ಲಿ ಸಾವನ್ನಪ್ಪಿದ್ದರು.

    ಘಟನೆ ನಡೆದ ಸ್ಥಳಕ್ಕೆ ಸಚಿವ ರೇವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇತ್ತ ಹೆತ್ತೂರು ಹೋಬಳಿ ಪಟ್ಲ ಗ್ರಾಮದ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ಗುಡ್ಡ ಕುಸಿತಕ್ಕೆ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನನ್ನ ಅವಧಿಯಲ್ಲಿ ಆರಂಭಿಸಲಾದ ಕೆಲ್ಸಗಳನ್ನು ಪೂರ್ಣಗೊಳಿಸಿ: ಸಿಎಂಗೆ ರಾಯರೆಡ್ಡಿ ಪತ್ರ

    ನನ್ನ ಅವಧಿಯಲ್ಲಿ ಆರಂಭಿಸಲಾದ ಕೆಲ್ಸಗಳನ್ನು ಪೂರ್ಣಗೊಳಿಸಿ: ಸಿಎಂಗೆ ರಾಯರೆಡ್ಡಿ ಪತ್ರ

    ಬೆಂಗಳೂರು: ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರು ಸಿಎಂ ಕುಮಾರಸ್ವಾಮಿ ಅವರಿಗೆ ನನ್ನ ಅವಧಿಯಲ್ಲಿ ಮಾಡಲಾದ ಶೈಕ್ಷಣಿಕ ಕೆಲಸಗಳನ್ನ ಪೂರ್ಣ ಮಾಡುವಂತೆ ಪತ್ರವನ್ನು ಬರೆದಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕಾರಿಗಳಿಂದ ಕೂಡಲೇ ನಿಂತಿರುವ ಕೆಲಸ ಪ್ರಾರಂಭ ಮಾಡಿಸಬೇಕು. ಸಚಿವ ಜಿಟಿ ದೇವೇಗೌಡರಿಗೂ ಈ ಬಗ್ಗೆ ಪತ್ರ ಬರೆದು ಮಾತನಾಡುತ್ತೇನೆ. ಈ ಎಲ್ಲಾ ಕೆಲಸಗಳು ವಿದ್ಯಾರ್ಥಿಗಳ ಪರವಾಗಿದೆ. ಈ ಕೆಲಸಗಳನ್ನ ಮುಂದುವರಿಸಿದರೆ ಕುಮಾರಸ್ವಾಮಿ ಅವರಿಗೆ ಹೆಸರು ಬರುತ್ತೆ. ಕೂಡಲೇ ಕೆಲಸಗಳನ್ನ ಮುಕ್ತಾಯ ಮಾಡಬೇಕು ಎಂದು ಹೇಳಿದರು.

    ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯ ಬದಲಾವಣೆ ವಿಚಾರ ಕುರಿತು ಅಂತಹ ಕೆಲಸ ಜಿಟಿ ದೇವೇಗೌಡರು ಮಾಡಬಾರದಿತ್ತು. ಈ ಬಗ್ಗೆ ಸಿದ್ದರಾಮಯ್ಯ ಮಾತಾಡೋದಾಗಿ ಹೇಳಿದ್ದಾರೆ. ನಮ್ಮ ಅವಧಿಯಲ್ಲಿ ಅರ್ಹರನ್ನ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಆದ್ರು ಅನರ್ಹರನ್ನ ನೇಮಕ ಮಾಡಿದ್ದಾರೆ ಅಂತ ಆರೋಪ ಮಾಡಲಾಗುತ್ತಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ದೇವೇಗೌಡ ವಿರುದ್ಧ ರಾಯರೆಡ್ಡಿ ಕಿಡಿಕಾರಿದರು.

    ಉನ್ನತ ಶಿಕ್ಷಣ ಸಚಿವರು ಒಂದು ಡಿಗ್ರಿ ಮಾಡಿಕೊಳ್ಳಲಿ ನಾನೇ ಅವರಿಗೆ ಸಲಹೆ ನೀಡುತ್ತೇನೆ. ಕೆಎಸ್ ಓಯುಗೆ ಮರು ಮಾನ್ಯತೆ ಸಿಕ್ಕಿದೆ. ನಿಮ್ಮ ಊರಲ್ಲೆ ಕೋರ್ಸ್ ಮಾಡಿ ಅಂತ ನಾನೇ ಸಲಹೆ ಕೊಡ್ತೀನಿ. ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದ್ರೆ ಒಳ್ಳೆಯದು. ಬರೋ ಸ್ವಲ್ಪ ಇಂಗ್ಲೀಷ್ ನಲ್ಲಿ ಯಾಕೆ ಮಾತಾಡಬೇಕು. ಸಚಿವರು ಕನ್ನಡದಲ್ಲೆ ಮಾತಾಡಿದ್ರೆ ತಪ್ಪಿಲ್ಲ. ಎಕ್ಸಾಂ ಬರೆದು ಡಿಗ್ರಿ ಮಾಡಿಕೊಂಡ್ರೆ ದೇವೇಗೌಡರಿಗೆ ಒಳ್ಳೆಯದು ಎಂದು ಉನ್ನತ ಶಿಕ್ಷಣ ಸಚಿವರಿಗೆ ರಾಯರೆಡ್ಡಿ ಟಾಂಗ್ ನೀಡಿದರು.

    ಸಿಎಂಗೆ ಬರೆದ ಪತ್ರದ 17 ಅಂಶದ ಕಾರ್ಯಕ್ರಮಗಳು
    * ಸಮಗ್ರ ವಿಶ್ವವಿದ್ಯಾಲಯ ಕಾಯ್ದೆ ರಾಜ್ಯಪಾಲರ ಅಂಕಿತ ಪಡೆಯಲು ಸರ್ಕಾರ ಮುಂದಾಗಬೇಕು.
    * ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ ನಿರ್ದೇಶಕರು, ಪ್ರಾಧ್ಯಾಪಕರನ್ನ ನೇಮಕ ಮಾಡಲು ಕ್ರಮವಹಿಸಬೇಕು.
    * ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ ಹಾಸ್ಟಲ್ ನಿರ್ಮಾಣಕ್ಕೆ 50 ಕೋಟಿ ಬಿಡುಗಡೆ ಮಾಡಬೇಕು.

    * ರಾಯಚೂರು ಹೊಸ ವಿಶ್ವವಿದ್ಯಾಲಯ, ಮಂಡ್ಯದಲ್ಲಿ ಯೂನಿಟರಿ ವಿಶ್ವವಿದ್ಯಾಲಯ, ಮಹಾರಾಣಿ ಕಾಲೇಜ್ ಕ್ಲಸ್ಟರ್ ವಿವಿ ಪ್ರಾರಂಭಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ 55 ಕೋಟಿ ರೂ. ಅನುದಾನ ನೀಡಿದೆ. ಇದಕ್ಕೆ ರಾಜ್ಯಪಾಲರಿಂದ ಅನುಮೋದನೆ ನೀಡಿಸಬೇಕು.
    * ಬೆಳಗಾವಿ ರಾಣಿ ಚೆನ್ನಮ್ಮ ವಿವಿ, ತುಮಕೂರು ವಿವಿ, ಮೈಸೂರು ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಮ್ಮ ಸಂಪುಟ ಅನುದಾನ ನೀಡಿತ್ತು. ವಿವಿಗಳ ಕಟ್ಟಡ ನಿರ್ಮಾಣ ಕೆಲಸ ಪ್ರಾರಂಭ ಮಾಡಬೇಕು.
    * ಧಾರವಾಡ ಕರ್ನಾಟಕ ವಿವಿಯ ಅಧೀನದ ಕರ್ನಾಟಕ ಕಾಲೇಜು ಶತಮಾನೋತ್ಸವಕ್ಕೆ ಸಂಪುಟ ಹಣ ಬಿಡುಗಡೆ ಮಾಡಿತ್ತು. ಆದ್ರೆ ಕೆಲಸ ಪ್ರಾರಂಭವಾಗಿಲ್ಲ. ಕೂಡಲೇ ಕೆಲಸ ಪ್ರಾರಂಭ ಮಾಡಬೇಕು.

    * ಕೆಎಸ್‍ಓಯು ಗೆ ಮರು ಮಾನ್ಯತೆ ಸಿಕ್ಕಿದೆ. ಹಿಂದೆ ಹಲವು ಜಿಲ್ಲೆಯಲ್ಲಿ ಇದ್ದ ಪ್ರಾದೇಶಿಕ ಕಚೇರಿ ಕಟ್ಟಡಗಳನ್ನ ಆಯಾ ಜಿಲ್ಲೆಯಲ್ಲಿರುವ ವಿಶ್ವವಿದ್ಯಾಲಯಗಳಿಗೆ ಹಸ್ತಾಂತರ ಮಾಡಬೇಕು.
    * ಬೆಂಗಳೂರು ಉತ್ತರ ವಿವಿ ಉಳಿಕೆ ಜಮೀನು ಕೊಡಿಸುವ ಕೆಲಸ ಸರ್ಕಾರ ಮಾಡಬೇಕು.
    * ವಿಟಿಯು ಐಟಿ ಸೀಜ್ ಮಾಡಿದ ಹಣ ವಾಪಸ್ ಬಂದಿದೆ. ಇದನ್ನ ವಿದ್ಯಾರ್ಥಿಗಳ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು.

    * ಕೆಇಎಯ 350 ಕೋಟಿ ಹಣ ಇದೆ. ಇದನ್ನ ಮೆಡಿಕಲ್, ಎಂಜಿನಿಯರ್ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳಿಗೆ ಬಳಸಿಕೊಳ್ಳಲು ಕ್ರಮವಹಿಸಬೇಕು.
    * ಬಿಎ, ಬಿಕಾಂ, ಬಿಎಸ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡಲು 250 ಕೋಟಿ ಅನುದಾನ ನೀಡಲಾಗಿತ್ತು. ಆದ್ರೆ ಕೆಲಸ ಕಾರಣಗಳಿಂದ ಲ್ಯಾಪ್ ಟಾಪ್ ವಿತರಣೆ ಆಗಿಲ್ಲ. ಕೂಡಲೇ ಟೆಂಡರ್ ಕರೆದು ಲ್ಯಾಪ್ ಟಾಪ್ ಹಂಚಿಕೆ ಮಾಡಬೇಕು.
    * 310 ಪದವಿ ಕಾಲೇಜುಗಳಲ್ಲಿ ಪ್ರಾಂಶುಪಾಲರು ಇಲ್ಲ. ನಾವು ಯುಜಿಸಿ ನಿಯಮ ಬದಲಾವಣೆಗೆ ಮುಂದಾಗಿದ್ದೆವು ಆದರೆ ಅದು ಆಗಲಿಲ್ಲ. ಕೂಡಲೇ ಪ್ರಾಂಶುಪಾಲರ ನೇಮಕ ಸರ್ಕಾರ ಮಾಡಬೇಕು.

    * ಪದವಿ ಕಾಲೇಜುಗಳ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪ್ರಕ್ರಿಯೆ ಮಾಡಬೇಕು.
    * ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಆದಷ್ಟು ಬೇಗ ತುಂಬಬೇಕು.
    * ಸಂಸ್ಕೃತ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಸರ್ಕಾರ ಕ್ರಮವಹಿಸಬೇಕು.
    * ಎಸ್ ಸಿಪಿ ಯೋಜನೆಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಹಣ ನೀಡಲಾಗಿದೆ. ಈ ಕೆಲಸ ಪ್ರಕ್ರಿಯೆ ಮುಂದುವರೆಸಬೇಕು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಏರ್ ಶೋ ಉಳಿಸಿಕೊಳ್ಳಲು ಅಖಾಡಕ್ಕೆ ಇಳಿದ ಎಚ್‍ಡಿಕೆ-ಮೋದಿಗೆ ಪತ್ರ

    ಏರ್ ಶೋ ಉಳಿಸಿಕೊಳ್ಳಲು ಅಖಾಡಕ್ಕೆ ಇಳಿದ ಎಚ್‍ಡಿಕೆ-ಮೋದಿಗೆ ಪತ್ರ

    ಬೆಂಗಳೂರು: ಬೆಂಗಳೂರಿನಿಂದ ಲಖ್ನೋಗೆ ಏರ್ ಶೋ ಸ್ಥಳಾಂತರ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಧ್ಯೆ ಸಂಘರ್ಷ ಏರ್ಪಟ್ಟಿದ್ದು, ಬೆಂಗಳೂರಿಗೆ ಆದರ್ಶಪ್ರಾಯವಾಗಿರೋ ಏರ್ ಶೋ ಉಳಿಸಲು ಇದೀಗ ಸ್ವತಃ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಖಾಡಕ್ಕೆ ಇಳಿಸಿದ್ದಾರೆ.

    ಕಳೆದ 12 ವರ್ಷಗಳಿಂದ ನಡೆಸುತ್ತಿರುವ ಏರ್ ಶೋವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು. ನೀವೇ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಬೆಂಗಳೂರಿನಲ್ಲಿಯೇ ಏರ್ ಶೋ ನಡೆಸಲು ಅನುವು ಮಾಡಿಕೊಡಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

    ಕುಮಾರಸ್ವಾಮಿ ಪತ್ರದಲ್ಲಿ ಏನಿದೆ?
    ಬೆಂಗಳೂರಿನಲ್ಲಿ ಏರ್ ಇಂಡಿಯಾ ಶೋ ಆಯೋಜನೆ ಸೂಕ್ತವಾದ ಸ್ಥಳವಾಗಿದೆ. ಇಲ್ಲಿ ನಡೆದಿರುವ ಏರ್ ಶೋ ಜಗತ್ತಿನ ಬಹುದೊಡ್ಡ ಉದ್ಯಮಿಗಳನ್ನು, ಕೈಗಾರಿಕೋದ್ಯಮಿಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಕಂಪನಿಗಳು ಸಹ ಬೆಂಗಳೂರಿನಲ್ಲಿ ಏರ್ ಶೋ ಆಯೋಜನೆಗೆ ಇಷ್ಟ ಪಡುತ್ತವೆ. ಕಳೆದ 11 ವರ್ಷಗಳಿಂದ ಯಶಸ್ವಿಯಾಗಿ ಏರ್ ಶೋ ನಡೆಸಿಕೊಂಡು ಬರಲಾಗಿದೆ. 51 ದೇಶಗಳ 500ಕ್ಕೂ ಹೆಚ್ಚು ರಾಷ್ಟ್ರೀಯ, ಅಂತರಾಷ್ಟ್ರೀಯ ಕಂಪನಿಗಳು ಪಾಲ್ಗೊಳ್ಳಲಿವೆ.

    ಬೆಂಗಳೂರು ರಕ್ಷಣಾ ಮತ್ತು ವಾಯು ಸೇನೆಯ ಕೇಂದ್ರವಾಗಿದೆ. ರಾಜ್ಯ ಸರ್ಕಾರ ಕೂಡ ಕೆಂದ್ರ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಟ್ಟಿದೆ. ಮೂಲಸೌಕರ್ಯ, ರಸ್ತೆ, ಸೇರಿದಂತೆ ಎಲ್ಲ ಸೌಲಭ್ಯವನ್ನು ಒದಗಿಸುವ ಮೂಲಕ ಯಶಸ್ವಿಗೊಳಿಸಿದ್ದೇವೆ. ಹೀಗಾಗಿ ಬೆಂಗಳೂರು ಏರ್ ಶೋ ಆಯೋಜನೆಗೆ ಸೂಕ್ತವಾಗಿದೆ.

    ಕಳೆದ ಬಾರಿ ಸಹ ಏರ್ ಶೋ ಯಶಸ್ವಿಯಾಗಿದೆ. ಬೆಂಗಳೂರಿನ ಹವಾಮಾನವೂ ಕೂಡ ಏರ್ ಶೋ ಪ್ರದರ್ಶನಕ್ಕೆ ಸೂಕ್ತವಾಗಿದೆ. ಮುಖ್ಯಮಂತ್ರಿಯಾಗಿ ಉತ್ತಮ ರೀತಿಯಲ್ಲಿ ಆಯೋಜಿಸಬೇಕೆಂಬ ಬಯಕೆಯಿದ್ದು, ಎಲ್ಲ ರೀತಿಯ ಸಹಕಾರ ನಿಡುತ್ತೇನೆ. ಈ ಹಿನ್ನೆಲೆಯಲ್ಲಿ ಏರ್ ಶೋ ಸ್ಥಳಾಂತರಿಸದೆ ನಿಮ್ಮ ಮಧ್ಯಸ್ಥಿಕೆಯಲ್ಲಿ ಬೆಂಗಳೂರಿನಲ್ಲಿಯೇ ಆಯೋಜಿಸುವಂತೆ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಬರೆದು ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ನೀರು ಇಲ್ಲವೇ ದಯಾಮರಣ ನೀಡಿ- ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಹಾಸನ ರೈತರು

    ನೀರು ಇಲ್ಲವೇ ದಯಾಮರಣ ನೀಡಿ- ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಹಾಸನ ರೈತರು

    ಹಾಸನ: ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾಸನದಿಂದ ರೈತರು ದಯಾಮರಣ ಕೋರಿ ಸಿಎಂ ಎಚ್‍ಡಿ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರವನ್ನು ಬರೆದಿದ್ದಾರೆ.

    ಕೆರೆ ಕಟ್ಟೆಗೆ, ದನ ಕರುಗಳಗಳಿಗೆ ನೀರು ನೀಡಿ ಇಲ್ಲಾ ದಯಾಮರಣ ನೀಡಿ ಅಂತ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಪಂಚಾಯಿತಿ ವ್ಯಾಪ್ತಿಯ ರೈತರು ಈ ರೀತಿ ಮುಖ್ಯಮಂತ್ರಿಗಳ ಗಮನ ಸೆಳೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ತಾಲೂಕಿನ ಬಾಗೂರು ಹೋಬಳಿ ವ್ಯಾಪ್ತಿಯಲ್ಲಿ ಮಳೆ ಪ್ರಮಾಣವೂ ಕಡಿಮೆ ಆಗಿದ್ದು, ಅಂತರ್ಜಲ ಸಂಪೂರ್ಣ ಕುಸಿದಿದೆ. ಈ ಸಮಸ್ಯೆ ಕಳೆದ ಮೂರು ದಶಕಗಳಿಂದ ಮುಂದುವರಿದಿದೆ.

    ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ನೀರು ಹರಿಯುವ ಬಾಗೂರು ಸುರಂಗ ಮಾರ್ಗ ಇಲ್ಲಿ ಹಾದು ಹೋಗಿದ್ದು ಹಲವು ಗ್ರಾಮಗಳಲ್ಲಿ ಅಂತರ್ಜಲ ಕುಸಿಯಲು ಕಾರಣವಾಗಿದೆ. ಸುತ್ತಮುತ್ತಲ ಗ್ರಾಮಗಳಲ್ಲಿ ನೀರಿಗಾಗಿ ಸಾಕಷ್ಟು ಹೋರಾಟಗಳೂ ನಡೆದಿದೆ. ಈ ಭಾಗದ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ನೀರಿಗಾಗಿ ಮನವಿ ಮಾಡುತ್ತಲೆ ಇರುವ ಈ ರೈತರ ಮನವಿಗಳು ಈಗಲೂ ಮುಂದುವರೆದಿದೆ.

    ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆಯಾಗ್ತಿದ್ರೂ ಇಲ್ಲಿನ ಜನ ಮಾತ್ರ ಬೆಳೆ ಬೆಳೆಯಲು ಆಗ್ತಿಲ್ಲ, ಈಗಾಗಿ ಬದಕಲು ಆಗದ ಸ್ಥಿತಿಯನ್ನು ತಲುಪಿದ್ದೇವೆ. ಈಗಲಾದ್ರೂ ಇತ್ತ ಗಮನ ಹರಿಸಿ ಸಮಸ್ಯೆ ಬಗೆಹರಿಸುವಂತೆ ರೈತರು ಕೋರಿದ್ದಾರೆ. ಇತ್ತೀಚೆಗೆ ರೈತನೊರ್ವ ಮುಖ್ಯಮಂತ್ರಿಗಳಿಗೆ ಮನವಿ ಮಾಡುವ ವೀಡಿಯೋ ಕೂಡ ವೈರಲ್ ಆಗಿತ್ತು. ಇದನ್ನೂ ಓದಿ: ಸಾಲಮನ್ನಾ ಬೇಡ, ನಮ್ಗೆ ನೀರು ಕೊಡಿ ಸ್ವಾಮಿ- ಹಾಸನದಲ್ಲಿ ನೀರಿಗಾಗಿ ರೈತನ ಅಳಲು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • 70 ವರ್ಷಗಳಿಗೆ ಹೋಲಿಸಿದರೆ ಮೋದಿ ಅವಧಿಯಲ್ಲೇ ಮುಸ್ಲಿಮರಿಗೆ ಭಯದ ವಾತಾವರಣ: ರಾಹುಲ್‍ಗೆ ಬುಖಾರಿ ಪತ್ರ

    70 ವರ್ಷಗಳಿಗೆ ಹೋಲಿಸಿದರೆ ಮೋದಿ ಅವಧಿಯಲ್ಲೇ ಮುಸ್ಲಿಮರಿಗೆ ಭಯದ ವಾತಾವರಣ: ರಾಹುಲ್‍ಗೆ ಬುಖಾರಿ ಪತ್ರ

    ನವದೆಹಲಿ: ಮೋದಿ ಸರ್ಕಾರದ ಅವಧಿಯಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆಗಳ ಕುರಿತು ನಿಮ್ಮ ಅಭಿಪ್ರಾಯ ತಿಳಿಸುವಂತೆ ದೆಹಲಿಯ ಜಮ್ಮಾ ಮಸೀದಿಯ ಇಮಾಮ್ ಬುಖಾರಿಯವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

    ಇಮಾಮ್ ಬುಖಾರಿಯವರ ಪತ್ರದಲ್ಲಿ, ಭಾರತದಲ್ಲಿ ಕಳೆದ 70 ವರ್ಷಗಳಿಗೆ ಹೋಲಿಸಿದರೆ, ಮೋದಿ ಸರ್ಕಾರದಲ್ಲಿ ಮುಸ್ಲಿಮರು ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ದೇಶದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಮಾರಣಾಂತಿಕ ಹಲ್ಲೆಗಳಿಂದ 64 ಮಂದಿ ಅಮಾಯಕ ಮುಸ್ಲಿಮರು ಸಾವನ್ನಪ್ಪಿದ್ದಾರೆ. ಈ ಘಟನೆಗಳ ಕುರಿತು ನೀವೇಕೆ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿಲ್ಲವೆಂದು ರಾಹುಲ್ ಗಾಂಧಿಯವರಿಗೆ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

    ಮುಸ್ಲಿಂ ಯುವಕರು ಮನೆಯಿಂದ ಹೊರಗೆ ಟೋಪಿ ಧರಿಸಿ ಹಾಗೂ ಗಡ್ಡ ಬಿಟ್ಟು ಓಡಾಡುವುದೂ ಸಹ ಕಷ್ಟವಾಗಿದೆ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ಮುಸ್ಲಿಮರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಗಟ್ಟುವುದಕ್ಕಾಗಿ ಸರ್ಕಾರದ ಮೇಲೆ ನೀವು ಒತ್ತಡ ಹಾಕಬೇಕು. ಈ ವಿಚಾರದಲ್ಲಿ ನಿಮ್ಮ ನಿಲುವು ಸ್ಪಷ್ಟಪಡಿಸಿ ಎಂದು ಬರೆದಿದ್ದಾರೆ.

    ಕೆಲ ದಿನಗಳ ಹಿಂದೆ ಮುಸ್ಲಿಮ್ ಬುದ್ಧಿಜೀವಿಗಳ ಜೊತೆಗಿನ ಸಂವಾದ ವೇಳೆ ರಾಹುಲ್ ಗಾಂಧಿ “ಕಾಂಗ್ರೆಸ್ ಮುಸ್ಲಿಮರ ಪಕ್ಷ” ಎಂದು ಹೇಳಿದ್ದಾಗಿ ಉರ್ದು ಪತ್ರಿಕೆಯೊಂದು ವರದಿ ಮಾಡಿತ್ತು. ರಾಹುಲ್ ಈ ಹೇಳಿಕೆ ಪ್ರಕಟಗೊಂಡ ಬೆನ್ನಲ್ಲೇ ಬುಖಾರಿಯವರು ಭಾರತದಲ್ಲಿನ ಮುಸ್ಲಿಂ ಮೇಲಿನ ದಾಳಿಗಳ ಕುರಿತು ಸಮಗ್ರವಾದ ಪತ್ರ ಬರೆದಿದ್ದಾರೆ.

  • ನಾನು ಮತ್ತೆ ಭತ್ಯೆ ವಾಪಸ್ ನೀಡುವಂತೆ ಕೇಳಿದ್ದು ಯಾಕೆ: ಕಾರಣ ತಿಳಿಸಿದ ಬಸವರಾಜ ರಾಯರೆಡ್ಡಿ

    ನಾನು ಮತ್ತೆ ಭತ್ಯೆ ವಾಪಸ್ ನೀಡುವಂತೆ ಕೇಳಿದ್ದು ಯಾಕೆ: ಕಾರಣ ತಿಳಿಸಿದ ಬಸವರಾಜ ರಾಯರೆಡ್ಡಿ

    ಬೆಂಗಳೂರು: ನನಗೆ ಈಗ ಆರ್ಥಿಕ ಸಮಸ್ಯೆ ಇರುವುದರಿಂದ ಈ ಹಿಂದೆ ಬೇಡ ಎಂದಿದ್ದ ಸಚಿವ ಸ್ಥಾನದ ಭತ್ಯೆಯನ್ನು ವಾಪಸ್ ನೀಡಲು ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾಗಿ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

    ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಶಾಸಕನಾಗಿ, ಸಚಿವನಾಗಿ ಯಾವುದೇ ಭತ್ಯೆ ಪಡೆದಿಲ್ಲ. ಅಲ್ಲದೆ ವಸತಿ ಸಚಿವನಾಗಿದ್ದಾಗಲೂ ಯಾವುದೇ ಭತ್ಯೆ ಪಡೆದಿಲ್ಲ. ಆದರೆ ಚುನಾವಣೆಯಲ್ಲಿ ಸೋತ ಬಳಿಕ ಹೆಚ್ಚಿನ ನೋವುಂಟಾಗಿದೆ. ಸದ್ಯ ನನ್ನ ವೈಯಕ್ತಿಕ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಕಾರಣ 23 ತಿಂಗಳ ಅವಧಿಯ ಸಚಿವ ಸ್ಥಾನದ ಭತ್ಯೆಯನ್ನು ಮಾತ್ರ ವಾಪಸ್ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದೇನೆ. ಆದರೆ ಈ ಹಣ ನೀಡಲು ಕಾನೂನು ಸಮಸ್ಯೆ ಎದುರಾಗಿದೆ ಎಂಬ ಮಾಹಿತಿ ಇದ್ದು, ಏನಾಗಲಿದೆ ಎಂಬುವುದನ್ನು ಕಾದು ನೋಡುತ್ತೇನೆ ಎಂದರು.

    ಹಲವು ವರ್ಷಗಳಿಂದ ಈ ಆದರ್ಶವನ್ನು ಪಾಲಿಸಿಕೊಂಡು ಬರುತ್ತಿದ್ದೆ. ಆದರೆ ಆರ್ಥಿಕ ಸಂಕಷ್ಟದಿಂದ ಮನಸ್ಸಿಗೆ ಸ್ವಲ್ಪ ನೋವಾಗಿದೆ. ಅಲ್ಲದೇ ಈ ಹಿಂದೆ ಚುನಾವಣೆಯಗಳಲ್ಲಿ ಹಣ ವೆಚ್ಚ ಮಾಡುವ ಅಗತ್ಯವಿರಲಿಲ್ಲ. ಆದರೆ ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಹಣವೂ ವೆಚ್ಚವಾಗಿದೆ. ಆದರೆ ಆದರ್ಶಗಳನ್ನು ಪಾಲಿಸುವುದರಿಂದ ಹೀಗೆ ಆಗುತ್ತದೆ ಎಂದು ಹೇಳುವುದಿಲ್ಲ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

    ಎಷ್ಟು ಬಾಕಿಯಿದೆ?
    ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ 23 ತಿಂಗಳ ಕಾಲ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಸರ್ಕಾರದಿಂದ ಬರುವ ಮನೆ ಬಾಡಿಗೆ, ಟಿಎ, ಡಿಎ ಯಾವುದನ್ನು ಪಡೆದಿರಲಿಲ್ಲ. ಅಲ್ಲದೇ ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆಯೂ ನೀಡುವ ಹೆಚ್ಚುವರಿ ಮೊತ್ತದ ಭತ್ಯೆಯನ್ನು ಪಡೆದಿರಲಿಲ್ಲ. ಸರ್ಕಾರ ನೀಡುವ ನಿವಾಸವನ್ನು ತೆಗೆದುಕೊಳ್ಳದೆ ಮಾಜಿ ಸಚಿವರು ಸ್ವತಃ ಹಣದಲ್ಲಿ ಕಾರ್ಯನಿರ್ವಹಿಸಿದ್ದರು. ರೆಡ್ಡಿಯವರ ಈ ನಡೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು. ಸದ್ಯ ಅವರೇ ಹೇಳಿರುವಂತೆ 23 ತಿಂಗಳ ಮೊತ್ತ ಸುಮಾರು 46 ಲಕ್ಷ ರೂ.ಗಿಂತಲೂ ಹೆಚ್ಚಾಗಿದೆ.

    ಕಾನೂನು ಸಮಸ್ಯೆ: ಸದ್ಯ ಮಾಜಿ ಸಚಿವರು ಸದನದ ಸ್ಪೀಕರ್ ಅವರಿಗೆ ಬರೆದಿರುವ ಪತ್ರವನ್ನು ಹಣಕಾಸು ಇಲಾಖೆಗೆ ವರ್ಗಾಯಿಸಲಾಗಿದೆ. ಆದರೆ ಸದನದ ನಿಯಮಗಳ ಪ್ರಕಾರ ಯಾವುದೇ ಸಚಿವರು ಭತ್ಯೆ ಬೇಡ ಎಂದು ನಿರಾಕರಿಸಿದ ಬಳಿಕ ಮತ್ತೊಮ್ಮೆ ಭತ್ಯೆಯ ಹಣ ಪಡೆಯಲು ಆಡಳಿತ ಸರ್ಕಾರದ ಅವಧಿಯ ವೇಳೆವರೆಗೂ ಮಾತ್ರ ಸಾಧ್ಯವಿದೆ. ಈ ಅಂಶವನ್ನು ಸ್ಪೀಕರ್ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದು, ಹೊಸ ವಿಧಾನಸಭೆ ರಚನೆಯಾದ ಕಾರಣ ಭತ್ಯೆ ವಾಪಸ್ ನೀಡಲು ಸಾಧ್ಯವಿಲ್ಲ ಎಂದು ಹಣಕಾಸು ಇಲಾಖೆಗೆ ತಿಳಿಸಿದೆ. ಹೀಗಾಗಿ ರಾಯರೆಡ್ಡಿ ಅವರಿಗೆ ಹಣ ಸಿಗುತ್ತಾ ಸಿಗುವುದಿಲ್ಲವೇ ಎನ್ನುವುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

    ಕೊಪ್ಪಳದ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಆಯ್ಕೆಯಾಗಿದ್ದ ಬಸವರಾಜರಾಯ ರೆಡ್ಡಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಹಾಲಪ್ಪ ಆಚಾರ್ ವಿರುದ್ಧ ಸೋತಿದ್ದರು.

  • ಸುದ್ದಿಯಲ್ಲಿದೆ ಶಿರೂರು ಶ್ರೀಗಳು ಸಾವಿಗೂ ಮುನ್ನ ಬರೆದ ಪತ್ರ

    ಸುದ್ದಿಯಲ್ಲಿದೆ ಶಿರೂರು ಶ್ರೀಗಳು ಸಾವಿಗೂ ಮುನ್ನ ಬರೆದ ಪತ್ರ

    ಉಡುಪಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಕುರಿತಂತೆ ದಿನಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಈಗ ಶಿರೂರು ಸ್ವಾಮೀಜಿ ಸಾವಿಗೂ ಮುನ್ನ ಬರೆದಿದ್ದ ಪತ್ರ ಈಗ ಸುದ್ದಿಯಲ್ಲಿದೆ.

    ಜೂನ್ 24 ರಂದು ಶಿರೂರು ಸ್ವಾಮೀಜಿ ಎಸ್ಪಿಗೆ ಒಂದು ಪತ್ರ ಬರೆದಿದ್ದರು. 7 ಮಠಾಧೀಶರ ಜೊತೆ ಮನಸ್ತಾಪವಾದಾಗ ಜೂನ್ 24 ರಂದು ಬರೆದ ಪತ್ರ ಇದಾಗಿದ್ದು, ಪತ್ರದ ಕೊನೆಯಲ್ಲಿ ಪಟ್ಟದ ದೇವರು ಸಿಗದೇ ಹೋದರೆ ಮುಂದಿನ ಅನಾಹುತಕ್ಕೆ ಉಳಿದ ಮಠಾಧೀಶರೇ ಹೊಣೆ ಎಂದು ಶಿರೂರು ಶ್ರೀ ಉಲ್ಲೇಖಿಸಿದ್ದಾರೆ.

    ಪಟ್ಟದ ದೇವರು ಕೈಗೆ ಸಿಗುವ ತನಕ ಉಪವಾಸ ನಡೆಸುವೆ. ದೇವರ ಪ್ರಸಾದ ಸ್ವೀಕರಿಸದೆ ಅನಾಹುತವಾದರೆ ಸಪ್ತ ಮಠಾಧೀಶರೇ ಹೊಣೆ, ಪಟ್ಟದ ದೇವರನ್ನು ಆದಷ್ಟು ಬೇಗ ನಮಗೆ ನೀಡುವಂತೆ ತಾವು ಸಹಕರಿಸುತ್ತೀರಿ ಅಂತಾ ನಂಬಿದ್ದೆನೆ ಎಂದು ಬರೆದಿದ್ದರು. ಆದರೆ ಈ ಪತ್ರದ ಸ್ವೀಕೃತಿ ಜುಲೈ 25ಕ್ಕೆ ಆಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂಶಯ ವ್ಯಕ್ತಪಡಿಸಲಾಗಿತ್ತು. ಆದರೆ ಪೊಲೀಸ್ ವರಿಷ್ಟಾಧಿಕಾರಿಗಳು ಈಗ ಪತ್ರದ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ.

    ಜೂನ್ 24ಕ್ಕೆ ಈ ಪತ್ರ ಸಿಕ್ಕಿತ್ತು. ಆದರೆ ಸಿವಿಲ್ ವಿಚಾರ ಆದ ಕಾರಣ ಕೋರ್ಟ್ ನಲ್ಲಿ ನೋಡಿಕೊಳ್ಳಲು ಹಿಂಬರಹ ನೀಡಲಾಗಿತ್ತು. ಸ್ವಾಮೀಜಿ ಸಾವಿನ ನಂತರ ಅದೇ ಪತ್ರದ ಜೆರಾಕ್ಸ್ ಪ್ರತಿ ನಮ್ಮ ಕೈ ಸೇರಿತ್ತು. ಅದಕ್ಕೆ ಜುಲೈ 25 ರಂದು ಸ್ವೀಕೃತಿ ನೀಡಿದ್ದೇವೆ ಎಂದು ವರಿಷ್ಟಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಇಂದು ಶಿರೂರು ಸ್ವಾಮೀಜಿ ಅವರ ಮರಣೋತ್ತರ ಪರೀಕ್ಷೆ ಪೊಲೀಸರ ಕೈಗೆ ಸೇರಿದೆ. ಈ ವರದಿಯ ಪ್ರಕಾರ ಶ್ರೀಗಳ ಹೊಟ್ಟೆಯಲ್ಲಿ ವಿಷವಿರಲಿಲ್ಲ ಎಂದು ತಿಳಿಸಲಾಗಿದೆ. ಆದರೆ ಇದು ಪ್ರಾಥಮಿಕ ವರದಿಯಾಗಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್.ಎಸ್.ಎಲ್) ವರದಿ ಬರುವವರೆಗೆ ಕಾಯುವುದು ಅನಿವಾರ್ಯ ಎಂದು ಪೊಲೀಸರು ಹೇಳಿದ್ದಾರೆ.

    ಪೊಲೀಸರ ಕೈ ಸೇರಿರುವ ವೈದ್ಯಕೀಯ ವರದಿಯಲ್ಲಿ ಶಿರೂರು ಶ್ರೀಗಳ ಸ್ವಾಮೀಜಿಯ ಲಿವರ್ (ಯಕೃತ್) ಸಂಪೂರ್ಣ ಹಾನಿಯಾಗಿದ್ದು, ಎರಡೂ ಮೂತ್ರಕೋಶಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲವಂತೆ. ಅಷ್ಟೇ ಅಲ್ಲದೆ ಅನ್ನನಾಳದಲ್ಲಿ ಹಲವು ರಂಧ್ರಗಳಿದ್ದವು, ಹೊಟ್ಟೆಯಲ್ಲಿ ರಕ್ತನಾಳಗಳು ಒಡೆದು ರಕ್ತಸ್ರಾವವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಜುಲೈ 19ರಂಂದು ಶ್ರೀಗಳು ಅನುಮಾನಾಸ್ಪದ ರೀತಿಯಲ್ಲಿ ಹರಿಪಾದ ಸೇರಿದ್ದರು. ಶ್ರೀಗಳ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಶಿರೂರು ಮೂಲ ಮಠದಲ್ಲಿ ಕಾಂಡೋಮ್ ಗಳು, ಮಹಿಳೆಯರ ಬಟ್ಟೆಗಳು ಮತ್ತು ಬಾವಿಯಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಇತ್ತ ಶಿರೂರು ಶ್ರೀಗಳು ಪರಸ್ತ್ರೀ ವ್ಯಾಮೋಹಕ್ಕೆ ಸಿಲುಕಿ ಸಾವನ್ನಪ್ಪಿದ್ರಾ ಎಂಬ ಪ್ರಶ್ನೆಯೂ ಭಕ್ತಾದಿಗಳಲ್ಲಿ ಮನೆ ಮಾಡಿದೆ. ಪ್ರಾಥಮಿಕ ಮರಣೋತ್ತರ ವರದಿಯಲ್ಲಿ ಶಿರೂರು ಶ್ರೀಗಳಿಗೆ ವಿಷ ಪ್ರಾಷಾನ ಆಗಿಲ್ಲ ಎಂದು ಹೇಳಲಾಗುತ್ತಿದೆ. ಆದ್ರೆ ಎಫ್‍ಎಸ್‍ಎಲ್ ವರದಿ 6 ವಾರಗಳ ಬಳಿಕ ಪೊಲೀಸರ ಕೈ ಸೇರುವ ಸಾಧ್ಯತೆಗಳಿವೆ.

  • ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ಬಿಸಿ ಮುಟ್ಟಿಸಿದ ರೋಹಿಣಿ ಸಿಂಧೂರಿ

    ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ಬಿಸಿ ಮುಟ್ಟಿಸಿದ ರೋಹಿಣಿ ಸಿಂಧೂರಿ

    ಹಾಸನ: ಭ್ರಷ್ಟ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಬಿಗಿ ಕ್ರಮ ಮುಂದುವರಿದಿದ್ದು, ಅಕ್ರಮ ಸಾಗುವಳಿ ಚೀಟಿ ಮಂಜೂರಾತಿಗೆ ಸಹಕರಿಸಿದ ಆರೋಪ ಹೊತ್ತಿರುವ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದಾರೆ.

    ಅರಕಲಗೂಡು ತಹಶೀಲ್ದಾರ್ ಪ್ರಸನ್ನಮೂರ್ತಿ ವಿರುದ್ಧ ರಾಜ್ಯ ಮುಖ್ಯಕಾರ್ಯದರ್ಶಿಗೆ ರೋಹಿಣಿ ಸಿಂಧೂರಿ ಪತ್ರ ಬರೆದಿದ್ದಾರೆ. ಪ್ರಸನ್ನಮೂರ್ತಿ ಹಾಲಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದರು. ಜುಲೈ 4 ರಂದೇ ಪ್ರಸನ್ನಮೂರ್ತಿ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದರು.

    ಮಾಜಿ ಸಚಿವ ಬಗರ್ ಹುಕುಂ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವಾಗ, ಸಾಗುವಳಿ ಚೀಟಿ ಫಲಾನುಭವಿಗಳ ಆಯ್ಕೆ ವಿಚಾರವಾಗಿ ಸಭೆ ನಡೆಸದೇ ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕು ಪತ್ರ ನೀಡುವ ಕಡತಕ್ಕೆ ಸಹಿ ಮಾಡಿದ್ದರು. ಈ ವೇಳೆ ಪ್ರಸನ್ನಮೂರ್ತಿ ಕೂಡ ಸಹಾಯ ಮಾಡಿದ್ದರು. ಸಚಿವರಿಗೆ ತಹಶೀಲ್ದಾರ್ ಪ್ರಸನ್ನಮೂರ್ತಿ ಸಹಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಸಿಂಧೂರಿ ಅವರು ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

    ಮಾಜಿ ಉಸ್ತುವಾರಿ ಸಚಿವ ಎ.ಮಂಜುರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿತ್ತು. ಅಧಿಕಾರಿ ವಿರುದ್ಧ ಆರೋಪ ಸಾಬೀತಾಗಿರೋದು ಇದೀಗ ಮಾಜಿ ಸಚಿವರಿಗೂ ಸಂಕಷ್ಟ ತಂದೊಡ್ಡುವ ಆತಂಕ ಶುರುವಾಗಿ. ಸಚಿವ ಎ. ಮಂಜು ಮೇಲೂ ಕಾನೂನು ಕ್ರಮ ಸಾಧ್ಯತೆ ಇದೆ.

    ವಾರದ ಹಿಂದೆಯಷ್ಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೌಕರನನ್ನ ಅಮಾನತು ಮಾಡಿ ಓರ್ವ ಅಧಿಕಾರಿ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದರು. ಇದೀಗ ನಿಯಮ ಮೀರಿ ಕೆಲಸಮಾಡುವ ಅಧಿಕಾರಿಗೆ ರೋಹಿಣಿ ಬಿಸಿ ಮುಟ್ಟಿಸಿದ್ದಾರೆ.

  • ಮತ್ತೊಮ್ಮೆ ಮೋದಿ ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜನ ಖರ್ಗೆ

    ಮತ್ತೊಮ್ಮೆ ಮೋದಿ ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜನ ಖರ್ಗೆ

    ನವದೆಹಲಿ: ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಪಾಲ ರಚನೆಯ ಚರ್ಚೆ ಕುರಿತ ಸಭೆಗೆ ಪ್ರಧಾನಿ ಮೋದಿ ಆಹ್ವಾನವನ್ನು ತಿರಸ್ಕರಿಸಿದ್ದು, ಸಭೆಗೆ ಗೈರು ಹಾಜರಾಗುವ ಕುರಿತು ಪತ್ರ ಬರೆದಿದ್ದಾರೆ.

    ತಮ್ಮ ಗೈರು ಹಾಜರಿಗೆ ಕಾರಣವನ್ನು ತಿಳಿಸಿರುವ ಖರ್ಗೆ ಪೂರ್ಣ ಪ್ರಮಾಣದಲ್ಲಿ ಲೋಕಪಾಲ ಆಯ್ಕೆ ಸಮಿತಿ ನೇಮಕವಾಗುವರೆಗೂ, ಕಾಂಗ್ರೆಸ್ ವಿರೋಧಿ ಪಕ್ಷವಾಗಿ ಯಾವುದೇ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ತಮಗೆ ನೀಡಿದ ವಿಶೇಷ ಆಹ್ವಾನದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅವರು, ತಮಗೆ ವಿಶೇಷ ಆಹ್ವಾನಿತ ಎಂಬ ಮನ್ನಣೆ ಬೇಡ, ಅತಿ ದೊಡ್ಡ ವಿರೋಧಿ ಪಕ್ಷದ ನಾಯಕನಿಗೆ ಸಮಿತಿಯಲ್ಲಿ ಸ್ಥಾನ ನೀಡಬೇಕು. ವಿಶೇಷ ಆಹ್ವಾನದ ಮೇರೆಗೆ ಯಾವುದೇ ಅಧಿಕಾರವಿರುವುದಿಲ್ಲ. 2013 ರ ಲೋಕಪಾಲ ಕಾಯ್ದೆಯ ಸಮಿತಿ ರಚನೆಯಾಗಬೇಕು ಎಂದು ತಿಳಿಸಿದ್ದಾರೆ.

    ಒಂದೊಮ್ಮೆ ಸರ್ಕಾರಕ್ಕೆ ಲೋಕಪಾಲ ರಚನೆ ಕುರಿತು ನಿಜವಾದ ಇಚ್ಛಾಶಕ್ತಿ ಹೊಂದಿದ್ದರೆ, ವಿರೋಧ ಪಕ್ಷದ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಅಧಿಕಾರಿದಲ್ಲಿದ್ದು, ಲೋಕಪಾಲ ರಚನೆ ಮಾಡುವ ಯಾವುದೇ ಆಸಕ್ತಿಯನ್ನು ಬಿಜೆಪಿ ಹೊಂದಿಲ್ಲ ಎಂದು ಆರೋಪಿಸಿದರು.

    ಪ್ರಧಾನಿ ಮೋದಿ ನೇತೃತ್ವದ ಸಭೆ ಗುರುವಾರ ನಿಗದಿಯಾಗಿತ್ತು. ಈ ಹಿಂದೆಯೂ ಇದೇ ಕಾರಣ ನೀಡಿ ಮಾರ್ಚ್ 1 ಹಾಗೂ ಏಪ್ರಿಲ್ 10 ರಂದು ನಿಗದಿಯಾಗಿದ್ದ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದರು.