Tag: letter

  • ಸಚಿವ ಹೆಗ್ಡೆ ಮಾತುಗಳಿಗೆ ಕಡಿವಾಣ ಹಾಕಿ – ಬಿಎಸ್‍ವೈಗೆ ಯುವಮೋರ್ಚಾದಿಂದ ದೂರು

    ಸಚಿವ ಹೆಗ್ಡೆ ಮಾತುಗಳಿಗೆ ಕಡಿವಾಣ ಹಾಕಿ – ಬಿಎಸ್‍ವೈಗೆ ಯುವಮೋರ್ಚಾದಿಂದ ದೂರು

    ಬೆಂಗಳೂರು: ತಮ್ಮ ವಿವಾದಾತ್ಮಕ ಹೇಳಿಕೆ ಮೂಲಕವೇ ಹೆಚ್ಚು ಪ್ರಚಲಿತದಲ್ಲಿರುವ ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಯುವಮೋರ್ಚಾ ಉಪಾಧ್ಯಕ್ಷ ಭೀಮಾ ಶಂಕರ್ ಪಾಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ದೂರು ನೀಡಿದ್ದಾರೆ.

    ಈ ಕುರಿತು ಯಡಿಯೂರಪ್ಪಗೆ ಪತ್ರ ಬರೆದ ಭೀಮಾ ಶಂಕರ್ ಪಾಟೀಲ್, ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಿ ಎಂದು ತಿಳಿಸಿದ್ದಾರೆ.

    ಅನಂತ್ ಕುಮಾರ್ ಹೆಗ್ಡೆ ಅವರು ಕನ್ನಡ ಸಾಹಿತಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ. ಸಚಿವರು ಕುವೆಂಪು ಅವರಿಗೂ ಅಪಮಾನ ಮಾಡಿದ್ದಾರೆ. ಮುಂದೆ ಕನ್ನಡ ಭಾಷೆ, ಸಾಹಿತಿಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚನೆ ನೀಡಿ ಎಂದು ಬಿಎಸ್‍ವೈ ಗೆ ಬರೆದ ಪತ್ರದದಲ್ಲಿ ಉಲ್ಲೇಖಿಸಿದ್ದಾರೆ.

    ಮಾನ್ಯ ಸಚಿವರು ಬನವಾಸಿ ಕದಂಬ ನೆಲೆ ಬೀಡಾದ ಉತ್ತರ ಕನ್ನಡ ಜಿಲ್ಲೆ ಸಂಸದರು. ಆದರೆ ಕನ್ನಡ ಸಾಹಿತಿಗಳ ಕುರಿತು ತೀರಾ ಲಘುವಾಗಿ ಮಾತನಾಡಿರುವ ಸಚಿವ ಅನಂತ ಕುಮಾರ್ ಹೆಗ್ಡೆ ಅವರ ಕನ್ನಡ ಸಾಹಿತ್ಯ ವಿರೋಧಿ ನಡೆಯನ್ನು ಪಕ್ಷದ ಪದಾಧಿಕಾರಿಯಾಗಿ, ಸ್ವಾಭಿಮಾನಿ ಕನ್ನಡಿಗನಾಗಿ ತೀವ್ರವಾಗಿ ಖಂಡಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇತಿಹಾಸಕಾರರು ಬ್ರಿಟಿಷ್ ಮನಸ್ಥಿತಿಯವರು- ಅನಂತ್ ಕುಮಾರ್ ಹೆಗ್ಡೆ

    ಕುವೆಂಪು ಅವರ ವಿಶ್ವ ಮಾನವ ಸಂದೇಶವನ್ನು ಅಪಮಾನ ಮಾಡಿದ್ದಾರೆ. ಕನ್ನಡ ಸಾಹಿತ್ಯದ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇವರನ್ನು ಮಣ್ಣಿನ ಮಗ ಎಂದು ಕರೆಯಲು ಸಾಧ್ಯವಿಲ್ಲ. ಅಲ್ಲದೆ ಪಕ್ಷದ ಅನೇಕ ಮುಖಂಡರು ಹಿಂದುತ್ವದ ಪ್ರತಿಪಾದನೆ ರಭಸದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಇದರಿಂದ ಚುನಾವಣೆ ಸಂದರ್ಭದ ಸಮಯದಲ್ಲಿ ಸಚಿವರ ಹೇಳಿಕೆಗಳು ಪಕ್ಷದ ಮೇಲೆ ಹೆಚ್ಚಿನ ಪರಿಣಾಮ ಉಂಟುಮಾಡಲಿದೆ ಎಂದು ಹೇಳಿದ್ದಾರೆ.

    ಪದ್ಮಾವತ್ ಸಿನಿಮಾ ವಿಚಾರದಲ್ಲಿ ರಾಣಿ ಚೆನ್ನಮ್ಮ, ಒನಕೆ ಓಬವ್ವವರನ್ನು ಸಾಮಾಜಿಕ ಜಾಲತಾಣದಲ್ಲಿ ತೀರ ಕೆಟ್ಟದಾಗಿ ಅವಮಾನ ಮಾಡಲಾಗಿದೆ. ಅಲ್ಲದೇ ಈ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುವವರು ನ್ಯಾಯಾಲಯದಿಂದ ನಿರೀಕ್ಷಿತ ಜಾಮೀನು ಪಡೆದುಕೊಂಡಿದ್ದಾರೆ. ಈ ಎಲ್ಲಾ ಕನ್ನಡ ವಿರೋಧಿ ಹೇಳಿಕೆ, ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಈ ಕೂಡಲೇ ಅವರು ಕ್ಷಮೆ ಕೋರುವಂತೆ ಸೂಚಿಸಬೇಕು ಎಂದು ಬಿಎಸ್‍ಬೈ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬುದ್ಧಿಜೀವಿಗಳು ಬರೆದ ಸಾಹಿತ್ಯಕ್ಕೆ ಅರ್ಥ, ತಲೆಬುಡ ಇರಲ್ಲ: ಅನಂತ್ ಕುಮಾರ್ ಹೆಗ್ಡೆ ಕಿಡಿ

  • ಬೆಂಗಳೂರನ್ನು ದೇಶದ 2ನೇ ರಾಜಧಾನಿ ಮಾಡಿ- ಮೋದಿ ಸರ್ಕಾರಕ್ಕೆ ಕರ್ನಾಟಕದ ಪತ್ರ

    ಬೆಂಗಳೂರನ್ನು ದೇಶದ 2ನೇ ರಾಜಧಾನಿ ಮಾಡಿ- ಮೋದಿ ಸರ್ಕಾರಕ್ಕೆ ಕರ್ನಾಟಕದ ಪತ್ರ

    ಬೆಂಗಳೂರು: ನಮ್ಮ ಹೆಮ್ಮೆಯ ಬೆಂಗಳೂರನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಘೋಷಿಸುವಂತೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

    ಭಾರತದಲ್ಲಿ ಎಲ್ಲಾ ಭಾಷೆಗಳನ್ನೂ ಆಡುವ ಜನರು ಸಿಲಿಕಾನ್ ಸಿಟಿಯಲ್ಲಿ ನೆಲೆಸಿದ್ದಾರೆ. ತಾಂತ್ರಿಕ, ವೈದ್ಯಕೀಯ, ಏರೋಸ್ಪೇಸ್, ಮಾಹಿತಿ-ತಂತ್ರಜ್ಞಾನ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರಗಳ ಸಾಧಕರು ಇಲ್ಲಿದ್ದಾರೆ. ದೇಶದ 2ನೇ ರಾಜಧಾನಿಗೆ ಬೆಂಗಳೂರಿಗಿಂತ ಒಳ್ಳೆಯ ನಗರ ಮತ್ತೊಂದಿಲ್ಲ ಅಂತ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

    ಬೆಂಗಳೂರು 2ನೇ ರಾಜಧಾನಿಯಾದರೆ ದಕ್ಷಿಣದ ರಾಜ್ಯಗಳಿಗೆ ನೆರವಾಗುತ್ತದೆ. ಅಷ್ಟೇ ಅಲ್ಲದೇ ಇಲ್ಲೇ ಚಳಿಗಾಲದ ಸಂಸತ್ ಅಧಿವೇಶನ ನಡೆಸಬಹುದು. ಸುಪ್ರೀಂಕೋರ್ಟ್ ಪೀಠ, ಯುಪಿಎಸ್‍ಸಿ ಕಚೇರಿ, ವಿದೇಶಗಳ ವೀಸಾ ಕಚೇರಿಗಳನ್ನು ತೆರೆಯಬಹುದು ಎಂದು ದೇಶಪಾಂಡೆ ಪತ್ರದಲ್ಲಿ ಹೇಳಿದ್ದಾರೆ.

  • ದೇಶದಲ್ಲೇ ಫಸ್ಟ್ ಟೈಂ – ಸುಪ್ರೀಂನಲ್ಲಿ ಎಲ್ಲವೂ ಸರಿಯಿಲ್ಲ ಎಂದ ನಾಲ್ವರು ಜಡ್ಜ್ ಗಳು

    ದೇಶದಲ್ಲೇ ಫಸ್ಟ್ ಟೈಂ – ಸುಪ್ರೀಂನಲ್ಲಿ ಎಲ್ಲವೂ ಸರಿಯಿಲ್ಲ ಎಂದ ನಾಲ್ವರು ಜಡ್ಜ್ ಗಳು

    ನವದೆಹಲಿ: ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿ, ನ್ಯಾಯಾಂಗ ವ್ಯವಸ್ಥೆಯ ಕುರಿತು ಅಸಮಾಧಾನವನ್ನು ಹೊರಹಾಕಿದ್ದಾರೆ.

    ನ್ಯಾಯಮೂರ್ತಿಗಳು ಪ್ರತಿಕಾಗೋಷ್ಠಿ ನಡೆಸಿ ತಮ್ಮ ಅಸಮಾಧಾನವನ್ನು ಹೊರಹಾಕಿದ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಅವರ ಜೊತೆ ಮಾತುಕತೆ ನಡೆಸಿ ವಿವರ ನೀಡುವಂತೆ ಕೇಳಿದ್ದಾರೆ.

    ಸುಪ್ರೀಂ ಕೋರ್ಟ್ ನ ನ್ಯಾಯಾಮೂರ್ತಿಗಳಾದ ಚಲಮೇಶ್ವರ್, ಗೊಗೋಯಿ, ಮದನ್ ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಅವರು ಪ್ರತಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಕಳೆದ ಒಂದು ತಿಂಗಳ ಹಿಂದೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಬರೆದ ಪತ್ರ ಸಾರಾಂಶವನ್ನು ಬಹಿರಂಗ ಪಡಿಸಿದ್ದಾರೆ. ಪತ್ರದಲ್ಲಿ ನ್ಯಾಯಾಂಗ ವ್ಯವಸ್ಥೆಯ ಸ್ವಾತಂತ್ರ್ಯದ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ನಾಲ್ವರು ನ್ಯಾಯಮೂರ್ತಿಗಳು ಪತ್ರಕ್ಕೆ ಸಹಿ ಮಾಡಿದ್ದಾರೆ.

    ನ್ಯಾ. ಚಲಮೇಶ್ವರ್ ಮಾತನಾಡಿ, ನಾವು ಭಾರತ ಮುಖ್ಯ ನ್ಯಾಯಮೂರ್ತಿ (ಸಿಐಜೆ)ಗಳಿಗೆ ಪತ್ರ ಬರೆದಿದ್ದು, ನ್ಯಾಯಾಂಗ ವ್ಯವಸ್ಥೆಯಲ್ಲಿನ ಸ್ವಾತಂತ್ರ್ಯದ ಕುರಿತು ನಮ್ಮ ಕಾಳಜಿಯನ್ನು ತಿಳಿಸಿದ್ದೇವು, ಆದರೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಈ ಕುರಿತು ಮನವರಿಕೆ ಮಾಡಿಕೊಡಲು ವಿಫಲವಾಗಿದ್ದೇವೆ. ನ್ಯಾಯಾಂಗ ವ್ಯವಸ್ಥೆಯು ನಿಸ್ಪಕ್ಷಪಾತವಿಲ್ಲದೇ ಇದ್ದರೆ ಪ್ರಜಾಪ್ರಭುತ್ವ ಬದುಕುಳಿಯಲು ಸಾಧ್ಯವಿಲ್ಲ. ಅದ್ದರಿಂದ ಅನಿವಾರ್ಯವಾಗಿ ಸುದ್ದಿಗೋಷ್ಠಿ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    ಸಿಐಜೆ ಬರೆದ ಪತ್ರದಲ್ಲಿ ನ್ಯಾಯಾಲಯದ ಆಡಳಿತದಲ್ಲಿ ಕೆಲವು ಬಯಸದ ಘಟನೆ ನಡೆಸಯುತ್ತಿರುವ ಕುರಿತು ಮಾಹಿತಿ ನೀಡಿದ್ದೇವು, ಆದರೆ ಸಿಐಜೆ ಗೆ ಬರೆದ ಪತ್ರದಿಂದ ಯಾವುದೇ ಪ್ರಯೋಜನ ಉಂಟಾಗಿಲ್ಲ ಈ ಪತ್ರದಲ್ಲಿ ದೇಶದ ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಮೂರ್ತಿಗಳ ನೇಮಕಾತಿ ವಿಚಾರದ ಬಗ್ಗೆ ಅಸಮಾಧಾನಗೊಂಡಿರುವ ಕುರಿತು ಮಾಹಿತಿ ನೀಡಲಾಗಿದೆ.

    ಜಡ್ಜ್ ಗಳ ಆರೋಪ ಏನು?
    ಸುಪ್ರೀಂ ಕೋರ್ಟಿನ ಆಡಳಿತ ಸರಿಯಾಗಿ ನಡೆಯುತ್ತಿಲ್ಲ. ಕಳೆದ ಕೆಲವು ತಿಂಗಳಲ್ಲಿ ನಡೆದ ಹಲವು ಸಂಗತಿಗಳು ಅಪೇಕ್ಷಣೀಯ ಮಟ್ಟಕ್ಕಿಂತ ಕೆಳಗಿವೆ. ದೇಶದ ಋಣವನ್ನು ನಾವು ಪಾವತಿಸಬೇಕಿದೆ. ಅದಕ್ಕಾಗಿಯೇ ನಾವು ಇಲ್ಲಿದ್ದೇವೆ. ಸುಪ್ರೀಂಕೋರ್ಟಿಗೆ ಹಾಗೂ ದೇಶಕ್ಕೆ ನಾವು ಸಲ್ಲಿಸಬೇಕಾದ ಹೊಣೆಗಾರಿಕೆಯಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಇಷ್ಟಾದರೂ ಮಾಡಲೇಬೇಕೆಂಬುದು ನಾಲ್ಕು ಮಂದಿಗೆ ಮನವರಿಕೆಯಾಗಿದೆ.

    ನಿಷ್ಪಕ್ಷಪಾತ ನ್ಯಾಯಾಧೀಶ ಮತ್ತು ನ್ಯಾಯಾಂಗದ ಅಗತ್ಯವಿದೆ. ಮುಖ್ಯ ನ್ಯಾಯಮೂರ್ತಿಯವರನ್ನು ಮಹಾಭಿಯೋಗಕ್ಕೆ ಒಳಪಡಿಸುವ ಬಗ್ಗೆ ದೇಶವೇ ನಿರ್ಧರಿಸಲಿ. ಸುಪ್ರೀಂ ಕೋರ್ಟಿನ ಆಡಳಿತದಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ. ಅದನ್ನು ಸರಿಪಡಿಸಿ ಎಂದು ನಾವು ಒಟ್ಟಾಗಿ ಸಿಜೆಐ ಅವರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿ ವಿಫಲರಾದೆವು. ಸುಪ್ರೀಂ ಕೋರ್ಟ್ ಒಳಗೆ ಹಲವಾರು ಅಕ್ರಮಗಳು ನಡೆಯುತ್ತಿವೆ. ಮುಖ್ಯ ನ್ಯಾಯಮೂರ್ತಿಗಳು ನಾಲ್ವರು ಹಿರಿಯ ನ್ಯಾಯಮೂರ್ತಿಗಳ ಕೋರಿಕೆಗಳಿಗೆ ಉತ್ತರದಾಯಿತ್ವ ಪ್ರದರ್ಶಿಸುತ್ತಿಲ್ಲ. ನ್ಯಾಯಾಂಗ ಹಾಗೂ ಪ್ರಜಾಸತ್ತೆಯ ಉಳಿವಿಗಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆಂಬ ಆರೋಪ ಮುಕ್ತಕ್ಕೆ ಈ ಸುದ್ದಿಗೋಷ್ಠಿ. ಕೊಲೀಜಿಯಂ ಒಳಗೆ ಏನು ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸಲು ಈ ಸುದ್ದಿಗೋಷ್ಠಿ ನಡೆಸುತ್ತಿದ್ದು ನಮಗೆ ಬೇರೆ ಆಯ್ಕೆಯೇ ಉಳಿದಿಲ್ಲ. ಸಿಜಿಐ ನಮಗೆ ಬೇರೆ ಅವಕಾಶವನ್ನೇ ನೀಡಿಲ್ಲ.

  • ಪ್ರಧಾನಿ ಮೋದಿಗೆ ಪತ್ರ ಬರೆಯಲು ಮುಂದಾದ 8ನೇ ತರಗತಿಯ ವಿದ್ಯಾರ್ಥಿನಿ

    ಪ್ರಧಾನಿ ಮೋದಿಗೆ ಪತ್ರ ಬರೆಯಲು ಮುಂದಾದ 8ನೇ ತರಗತಿಯ ವಿದ್ಯಾರ್ಥಿನಿ

    ಯಾದಗಿರಿ: ಜಿಲ್ಲೆಯ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆಯಲು ಮುಂದಾಗಿದ್ದಾಳೆ.

    8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಕೃತಿಕಾ ಪತ್ರ ಬರೆಯಲು ಮುಂದಾಗಿದ್ದು, ತನ್ನ ಮನೆ ಎದುರು ಇರುವ ಪಾರ್ಕ್ ಸ್ವಚ್ಛಗೊಳಿಸಿಲ್ಲ ಎಂದು ಪ್ರಧಾನಿ ಮೋದಿಗೆ ದೂರಲು ನಿರ್ಧರಿಸಿದ್ದಾಳೆ. ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ ಯೋಜನೆಗೆ ಮಹತ್ವ ಕೊಟ್ಟಿದ್ದಾರೆ. ಆದರೆ ಯಾದಗಿರಿಯಲ್ಲಿ ನಗರಸಭೆ ಅಧಿಕಾರಿಗಳು ಸ್ವಚ್ಛ ಭಾರತ ಯೋಜನೆ ಕೈಗೊಳ್ಳದೆ ಕೈಕಟ್ಟಿ ಕುಳಿತಿದ್ದಾರೆ. ಈಗಾಗಲೇ ನಗರಸಭೆ ಅಧಿಕಾರಿಗಳಿಗೆ ಸ್ವಚ್ಛಗೊಳಿಸುವಂತೆ ಹಿಂದೆ ಪತ್ರ ಬರೆದಿದ್ದೆ. ಆದರೆ ಅವರು ನಿಗಾ ವಹಿಸಿಲ್ಲ. ಅವರು ನನ್ನ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ನಾನು ಉದ್ಯಾನವನ ರಕ್ಷಿಸಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುವೆ ಎಂದು ಕೃತಿಕಾ ಹೇಳುತ್ತಿದ್ದಾಳೆ.

    ಯಾದಗಿರಿಯ ವಾರ್ಡ್ ನಂ 31ರ ಚಿರಂಜೀವಿ ನಗರದ ನಮ್ಮ ಮನೆ ಎದುರು ಇರುವ ಉದ್ಯಾನವನವು ಯಾದಗಿರಿ ನಗರಸಭೆ ವ್ಯಾಪ್ತಿಗೆ ಬರುತ್ತದೆ. ನಗರಸಭೆಯು ಲಕ್ಷಾಂತರ ರೂ ವೆಚ್ಚ ಮಾಡಿ ಉದ್ಯಾನವನ ನಿರ್ಮಿಸಿದೆ. ಆದರೆ ಸ್ವಚ್ಛತೆ ಕಡೆ ಗಮನ ಹರಿಸಿದ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದಿದ್ದಾಳೆ.

    ಅಕ್ಟೋಬರ್ ತಿಂಗಳಲ್ಲಿ ಯಾದಗಿರಿ ನಗರಸಭೆ ಪೌರಾಯುಕ್ತ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದು ಕೊರಿಯರ್ ಮೂಲಕ ಕಳುಹಿಸಿದ್ದೇನೆ. ಆದರೆ ಈ ವರಗೂ ಯಾವುದೇ ಅಧಿಕಾರಿಗಳಿಂದ ಉತ್ತರ ಸಿಕ್ಕಿಲ್ಲ. ಪತ್ರ ಮುಟ್ಟಿದ ಮೇಲೆ ಅಧಿಕಾರಿಗಳು ಭೇಟಿ ನೀಡಿ ಉದ್ಯಾನವನ ಸ್ವಚ್ಛಗೊಳಿಸಿ ಸಮಸ್ಯೆಗೆ ಮುಕ್ತಿ ಕಾಣುವ ಕೆಲಸ ಮಾಡಿಲ್ಲ. ಇದರಿಂದ ಮತ್ತೆ ನಾನು ಗುರುವಾರ ಜ್ಞಾಪನ ಪತ್ರವನ್ನು ಅಧಿಕಾರಿಗಳಿಗೆ ಕೋರಿಯರ್ ಮೂಲಕ ಕಳುಹಿಸಿದ್ದೇನೆ ಎಂದು ಕೃತಿಕಾ ಹೇಳಿದ್ದಾಳೆ.

  • ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್

    ಮದರಸಾಗಳಿಂದ ಎಂಜಿನಿಯರ್, ಡಾಕ್ಟರ್ ತಯಾರಾಗ್ತಿಲ್ಲ, ಭಯೋತ್ಪಾದಕರ ಉತ್ಪಾದನೆ ಆಗ್ತಿದೆ: ಶಿಯಾ ವಕ್ಫ್ ಬೋರ್ಡ್

    ನವದೆಹಲಿ: ದೇಶದಲ್ಲಿರುವ ಮದರಸಾಗಳಿಂದ ಎಂಜಿನಿಯರ್ ಹಾಗೂ ಡಾಕ್ಟರ್ ಗಳು ತಯಾರಾಗುತ್ತಿಲ್ಲ. ಬದಲಾಗಿ ಭಯೋತ್ಪಾದಕರ ಉತ್ಪಾದನೆ ಕೇಂದ್ರವಾಗುತ್ತಿದೆ ಎಂದು ಶಿಯಾ ವಕ್ಫ್ ಬೋರ್ಡ್ ಹೇಳಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

    ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಶಿಯಾ ಕೇಂದ್ರ ವಕ್ಫ್ ಬೋರ್ಡ್ ಮುಖ್ಯಸ್ಥ ವಾಸೀಂ ರಿಜ್ವಿ ಈ ವಿಚಾರವಾಗಿ ಪತ್ರ ಬರೆದಿದ್ದು, ಎಲ್ಲ ಮದರಸಾಗಳನ್ನು ಶಿಕ್ಷಣ ಇಲಾಖೆಯ ಅಡಿಯಲ್ಲಿ ತರುವಂತೆ ಮನವಿ ಮಾಡಿದ್ದಾರೆ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಾಸೀಂ ರಿಜ್ವಿ, ದೇಶದಲ್ಲಿರುವ ಎಷ್ಟು ಮದರಸಾಗಳು ಎಂಜಿನಿಯರ್, ಡಾಕ್ಟರ್, ಐಎಎಸ್ ಅಧಿಕಾರಗಳನ್ನು ತಯಾರಿಸಿವೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಕೆಲ ಮದರಸಾಗಳು ಭಯೋತ್ಪಾದಕರನ್ನು ಮಾತ್ರ ಉತ್ಪಾದಿಸುತ್ತಿವೆ ಎಂದು ಆರೋಪಿಸಿದ್ದಾರೆ. ತಮ್ಮ ಪತ್ರದಲ್ಲಿ ಅವರು ಮದರಸಾಗಳು ಸಿಬಿಎಸ್‍ಸಿ, ಐಸಿಎಸ್‍ಸಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಬೇಕು. ಮುಸ್ಲಿಂಯೇತರ ವಿದಾರ್ಥಿಗಳಿಗೆ ಧಾರ್ಮಿಕ ಶಿಕ್ಷಣವನ್ನು ಐಚ್ಛಿಕ ವಿಷಯವನ್ನಾಗಿ ಓದಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದ್ದಾರೆ.

    ಮುಂದೆ ದೇಶವನ್ನು ಸದೃಢಗೊಳಿಸಲು ನಾನು ಈ ವಿಚಾರದ ಬಗ್ಗೆ ಪ್ರಧಾನಿ ಮೋದಿ ಮತ್ತು ಯೋಗಿಗೆ ಪತ್ರ ಬರೆದಿದ್ದೇನೆ ಎಂದು ರಿಜ್ವಿ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಪತ್ರದಲ್ಲಿ ಭಯೋತ್ಪದಕರನ್ನು ತಯಾರಿಸುತ್ತಿರುವ ಕೆಲವು ಮದರಸಾಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ವಾಸೀಂ ರಿಜ್ವಿ ಅವರ ಈ ಪತ್ರ ಹಲವು ಮುಸ್ಲಿಂ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್(ಎಐಎಂಐಎಂ) ಸಂಘಟನೆ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ರಿಜ್ವಿ ಅವರನ್ನು ಅವಕಾಶವಾದಿ ಹಾಗೂ ಮೂರ್ಖ ವ್ಯಕ್ತಿ ಎಂದು ಟೀಕಿಸಿದ್ದಾರೆ. ಅವಕಾಶವಾದಿಯಾಗಿರುವ ರಿಜ್ವಿ ತನ್ನನ್ನು ಆರ್ ಎಸ್‍ಎಸ್ ಗೆ ಮಾರಾಟ ಮಾಡಿಕೊಂಡಿದ್ದಾರೆ. ಒಂದು ವೇಳೆ ರಿಜ್ವಿ ಬಳಿ ಸಾಕ್ಷ್ಯವಿದ್ದರೆ ಅದನ್ನು ಗೃಹ ಇಲಾಖೆ ನೀಡಲಿ. ಅದನ್ನು ಬಿಟ್ಟು ಈ ರೀತಿ ಮೂರ್ಖ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ಉತ್ತರಾಖಂಡ ಸರ್ಕಾರ ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಹಾಕುವಂತೆ ಆದೇಶ ನೀಡಿತ್ತು. ಆದರೆ ಸರ್ಕಾರದ ಆದೇಶ ಷರಿಯಾ ಕಾನೂನಿಗೆ ವಿರುದ್ಧ ಎಂದು ಮುಸ್ಲಿಂ ಸಂಸ್ಥೆಗಳನ್ನು ವಿರೋಧಿಸಿತ್ತು. ಅಷ್ಟೇ ಅಲ್ಲದೇ ಯಾವುದೇ ಸರ್ಕಾರವು ಈ ರೀತಿಯ ಆದೇಶವನ್ನು ನೀಡಿಲ್ಲ ಎಂದು ಹೇಳಿತ್ತು.

    ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಮೋದಿ ದೇಶದ ಪ್ರಧಾನಿಯಾಗಿದ್ದಾರೆ. ನಮ್ಮ ಪುಸ್ತಕಗಳಲ್ಲಿಯೂ ಮಹಾನ್ ವ್ಯಕ್ತಿಗಳ ಭಾವಚಿತ್ರಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಅದ್ದರಿಂದ ಸರ್ಕಾರ ಆದೇಶಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ ಎಂದು ಪ್ರಶ್ನಿಸಿ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

  • ಯಡಿಯೂರಪ್ಪಗೆ ವಯಸ್ಸಾಗಿದೆ ಏನೇನೋ ಮಾತಾಡ್ತಾರೆ: ರಾಮಲಿಂಗಾರೆಡ್ಡಿ

    ಯಡಿಯೂರಪ್ಪಗೆ ವಯಸ್ಸಾಗಿದೆ ಏನೇನೋ ಮಾತಾಡ್ತಾರೆ: ರಾಮಲಿಂಗಾರೆಡ್ಡಿ

    ಚಿಕ್ಕಬಳ್ಳಾಪುರ: ಮಾಜಿ ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ಹೀಗಾಗಿ ಅವರು ಏನೇನೋ ಮಾತಾಡುತ್ತಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಮಹದಾಯಿ ವಿಚಾರದಲ್ಲಿ ನೀರು ಬಿಡದಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಒತ್ತಡ ಇದೆ ಎನ್ನುವ ಯಡಿಯೂರಪ್ಪನವರ ಆರೋಪ ಸಂಬಂಧ ಪ್ರತಿಕ್ರಿಯಿಸಿದ ಅವರು ಯಡಿಯೂರಪ್ಪನವರಿಗೆ ವಯಸ್ಸಾಗಿದೆ. ಹೀಗಾಗಿ ಏನೇನೋ ಮಾತಾಡ್ತಾರೆ. ಅವರ ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ತಿಳಿಸಿದರು.

    ಇದೇ ವೇಳೆ ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ನಾಟಕ ಮಾಡುತ್ತಿದ್ದು, ಅವರದ್ದು ಡ್ರಾಮಾ ಟ್ರೂಪ್ ಇದ್ದಂತೆ. ರಾಜ್ಯದ ನಾಯಕರು ಕೇವಲ ಪಾತ್ರಧಾರಿಗಳು. ಡ್ರಾಮಾ ಟ್ರೂಪ್ ನ ಹೆಡ್ ದೆಹಲಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

    ಮಹದಾಯಿ ವಿಚಾರದಲ್ಲಿ ಸದ್ಯ ಗೋವಾ ಸಿಎಂ ಪರಿಕ್ಕರ್ ಗೆ ಸಿದ್ದರಾಮಯ್ಯ ಪತ್ರ ಬರೆದರೆ ಪ್ರತ್ಯುತ್ತರ ಇಲ್ಲ. ಆದರೆ ಯಡಿಯೂರಪ್ಪ ಪತ್ರ ಬರೆದ ಮಾರನೇ ದಿನವೇ ಪತ್ರ ಬರುತ್ತೆ. ಇದೆಲ್ಲಾ ಅಮಿತ್ ಶಾ ಹಾಗೂ ರಾಜ್ಯದ ಬಿಜೆಪಿ ನಾಯಕರು ನಡೆಸಿರೋ ಚುನಾವಣಾ ಗಿಮಿಕ್ ಎಂದು ವಾಗ್ದಾಳಿ ನಡೆಸಿದರು.

  • ಮಹದಾಯಿ ಸಂಧಾನಕ್ಕೆ ಸಮಯ, ಸ್ಥಳ ನಿಗದಿ ಮಾಡಿ ಹೇಳಿ – ಫಡ್ನವಿಸ್‍ಗೆ ಸಿಎಂ ಪತ್ರ

    ಮಹದಾಯಿ ಸಂಧಾನಕ್ಕೆ ಸಮಯ, ಸ್ಥಳ ನಿಗದಿ ಮಾಡಿ ಹೇಳಿ – ಫಡ್ನವಿಸ್‍ಗೆ ಸಿಎಂ ಪತ್ರ

    ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ಸಂಧಾನ ಚರ್ಚೆ ನಡೆಸಲು ಸಮಯ ಹಾಗೂ ಸ್ಥಳವನ್ನು ನಿಗದಿ ಮಾಡಿ ತಿಳಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

    ಮಹದಾಯಿ ಸಮಸ್ಯೆ ಕುರಿತು ಚರ್ಚೆ ನಡೆಸಲು ಈಗಾಗಲೇ ಗೋವಾ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಪತ್ರದಲ್ಲಿ ಸ್ಪಷ್ಟಪಡಿಸಿಲಾಗಿದ್ದು, ಮಾತುಕತೆ ಮೂಲಕ ಮಹದಾಯಿ ವಿವಾದ ಬಗೆಹರಿಸಿಕೊಳ್ಳುವ ಅಗತ್ಯತೆ ಇದೆ. ನ್ಯಾಯಾಧಿಕರಣದ ವಿಚಾರಣೆಯು 2018 ಫೆಬ್ರವರಿ 06 ರಿಂದ 21 ರ ಒಳಗೆ ನಡೆಯಲಿದ್ದು ಈ ಅವಧಿಗೂ ಮುನ್ನ ವಿವಾದ ಬಗೆಹರಿಸಿಕೊಳ್ಳಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಉತ್ತರ ಕನ್ನಡದ ನೀರಿನ ಸಮಸ್ಯೆ ಬಗೆ ಹರಿಸುವ ಮಹದಾಯಿ ನದಿ ಹಂಚಿಕೆ ವಿವಾದ ಕುರಿತು ಗೋವಾ ಸಿಎಂ ಮನೋಹರ್ ಪರಿಕ್ಕರ್ ಸಂಧಾನ ಮಾತುಕತೆ ನಡೆಸಲು ಸಿದ್ಧವಿರುವುದಾಗಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದರು. ಈ ಹೇಳಿಕೆ ಉತ್ತರವಾಗಿ ಸಿಎಂ ಸಿದ್ದರಾಮಯ್ಯ ಅವರು ಗೋವಾ ಸರ್ಕಾರಕ್ಕೆ ಮಾತುಕತೆ ನಡೆಸುವಂತೆ ಪತ್ರ ಬರೆದಿದ್ದರು.

  • ಪ್ರತ್ಯೇಕ ತಾಲೂಕು ರಚನೆಗೆ ಪತ್ರ ಚಳುವಳಿ ಆರಂಭಿಸಿದ ಶಾಲಾ ಮಕ್ಕಳು

    ಪ್ರತ್ಯೇಕ ತಾಲೂಕು ರಚನೆಗೆ ಪತ್ರ ಚಳುವಳಿ ಆರಂಭಿಸಿದ ಶಾಲಾ ಮಕ್ಕಳು

    ಬಾಗಲಕೋಟೆ: ತಮ್ಮ ಗ್ರಾಮವನ್ನು ನೂತನ ತಾಲೂಕನ್ನಾಗಿ ರಚನೆ ಮಾಡುವಂತೆ ಆಗ್ರಹಿಸಿ ಪ್ರಾಥಮಿಕ ಶಾಲೆಯ ನೂರಾರು ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಪತ್ರ ಚಳುವಳಿಯನ್ನ ನಡೆಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಗ್ರಾಮದಲ್ಲಿ ಭಾನುವಾರದಿಂದ ಗ್ರಾಮಸ್ಥರು ಸಾವಳಗಿ ನೂತನ ತಾಲೂಕು ರಚನೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಲಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳು ಸಿಎಂಗೆ ಪತ್ರ ಬರೆದಿದ್ದಾರೆ.

    ಇನ್ನು ವಿಶೇಷ ಅಂದರೆ ಡಿಸೆಂಬರ್ 19 ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಹೀಗಾಗಿ ಸಿಎಂ ಗಮನ ಸೆಳೆಯುವ ಕಾರಣದಿಂದ ಸಾಮೂಹಿಕ ಪತ್ರ ಚಳುವಳಿಗೆ ಮುಂದಾಗಿದ್ದಾರೆ. ಪ್ರತಿಯೊಬ್ಬ ಮಕ್ಕಳು ಸಹ ಪತ್ರ ಬರೆದು ಸಿಎಂ ಅವರ ಬೆಂಗಳೂರ ವಿಳಾಸಕ್ಕೆ ಪೋಸ್ಟ್ ಮಾಡಿದ್ದಾರೆ. ತಮ್ಮ ಗ್ರಾಮ ನೂತನ ತಾಲೂಕಾಗಿ ರಚನೆಯಾಗಿ ಇನ್ನಷ್ಟು ಅಭಿವೃದ್ಧಿ ಕಾಣಬೇಕೆಂಬ ಉದ್ದೇಶದಿಂದ ಸಿಎಂಗೆ ಪತ್ರ ಬರೆಯುವ ಮೂಲಕ ಪತ್ರ ಚಳುವಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

  • ಕರುಣೆ ಇಲ್ವಾ? ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ- 3 ಪುಟಗಳ ಪತ್ರ ಬರೆದು ಬಿಎಸ್‍ವೈರನ್ನ ಪ್ರಶ್ನಿಸಿದ ವಿನಯ್ ಪತ್ನಿ ಶೋಭಾ

    ಕರುಣೆ ಇಲ್ವಾ? ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ- 3 ಪುಟಗಳ ಪತ್ರ ಬರೆದು ಬಿಎಸ್‍ವೈರನ್ನ ಪ್ರಶ್ನಿಸಿದ ವಿನಯ್ ಪತ್ನಿ ಶೋಭಾ

    ಬೆಂಗಳೂರು: ಬಿಜೆಪಿ ಮಾಧ್ಯಮ ಸಹಸಂಚಾಲಕ ವಿನಯ್ ಅವರ ಪತ್ನಿ ಶೋಭಾ 3 ಪುಟಗಳ ಪತ್ರ ಬರೆದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರನ್ನು ಪ್ರಶ್ನೆ ಮಾಡಿದ್ದಾರೆ.

    ಯಡಿಯೂರಪ್ಪನವರೇ ಕರುಣೆ ಇಲ್ವಾ? ಹೆಣ್ಣು ಮಕ್ಕಳ ಶಾಪ ಒಳ್ಳೆಯದಲ್ಲ. ನಿಮಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಸೊಸೆಯರಿದ್ದಾರೆ. ಅವರಿಗೂ ಹೀಗೆ ಆದರೆ ಸುಮ್ಮನಿರುತ್ತೀರಾ? ನನ್ನ ಜಾಗದಲ್ಲಿ ನಿಮ್ಮ ಮನೆ ಹೆಣ್ಣು ಮಕ್ಕಳಿದ್ದಿದ್ದರೆ ಏನು ಮಾಡುತ್ತಿದ್ರಿ, ಉತ್ತರ ಕೊಡಿ? ಎಂದು ಶೋಭಾ ಕೋಪದಿಂದ ಕೇಳಿದ್ದಾರೆ.

    ನನ್ನ ಗಂಡನ ಸ್ನೇಹ ಬೆಳೆಸಿ ಸಂತೋಷ್ ರಾಜಕೀಯವಾಗಿ ಬೆಳೆದರು. ನಮ್ಮ ಮನೆಯಲ್ಲೇ ಅನ್ನ ತಿಂದು ನನ್ನ ಗಂಡನ ಕೊಲೆಗೆ ಪ್ರಯತ್ನಿಸಿದರು. ಅನ್ನ ಹಾಕಿದ ಮನೆಗೆ ಕನ್ನ ಹಾಕಿದವರ ಪರವಾಗಿ ನಿಂತಿದ್ದೀರ ನೀವು. ಸಂತೋಷನನ್ನು ಪೊಲೀಸರು ಹಿಡಿಯಲು ಬಂದಾಗ ತಪ್ಪಿಸಿಕೊಳ್ಳಲು ಸಹಾಯ ಮಾಡಿ ಬೇಲ್ ಕೊಡಿಸಿದ್ದೀರಿ. ಇದೇನಾ ನೀವು ಕಾನೂನಿಗೆ ಕೊಡುವ ಗೌರವ? ಏನೂ ತಪ್ಪು ಮಾಡದ ನನ್ನ ಗಂಡನನ್ನ ನೀವು, ನಿಮ್ಮ ಪಕ್ಷ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ. ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುತ್ತಿದ್ದೀರಾ. ನಿಮ್ಮ ಹೋರಾಟ ಪ್ರಾಮಾಣಿಕ ಹೋರಾಟವಾಗಿರಬೇಕೆ ಹೊರತು ರಾಜಕೀಯ ಹೋರಾಟವಾಗಿರಬಾರದು ಎಂದು ಹೇಳಿದ್ದಾರೆ.

    ನಿಮ್ಮ ಹತ್ರ ಅಧಿಕಾರವಿದೆ, ಹಣಬಲವಿದೆ. ಆದರೆ ನಾವು ಬಡವರು. ನೀವು ಕೋರ್ಟ್, ಕಚೇರಿಗೆ ದಿನ ಅಲೆದಾಡಿ ಅಭ್ಯಾಸ ಇದೆ. ಆದರೆ ನಮ್ಮ ಪ್ರಮಾಣಿಕತೆಗೆ ನ್ಯಾಯ ಸಿಕ್ಕೆ ಸಿಗುತ್ತದೆ. ಹೋರಾಡುವ ಹಾಗಿದ್ರೆ ಮುಂದೆಯಿಂದ ಹೋರಾಡಿ, ಪ್ರಾಣ ತೆಗೆಯೋ ಕೆಲಸ ಮಾಡಬೇಡಿ. ಇಂದಿನಿಂದ ಯಾವುದಕ್ಕೂ ಹೆದರಲ್ಲ. ಒಳ್ಳೆಯದು, ಕೆಟ್ಟದನ್ನ ಆ ದೇವರು ನೋಡಿಕೊಳ್ಳುತ್ತಾನೆ ಎಂದು ಶೋಭಾ ಆಕ್ರೋಶದಿಂದ ಪತ್ರದಲ್ಲಿ ಬರೆದಿದ್ದಾರೆ.

    ಇಲ್ಲಿವರೆಗೂ ನಿಮ್ಮ ಬಗ್ಗೆ ರಾಜ್ಯದ ಹೆಣ್ಣುಮಕ್ಕಳಿಗೆ ತಿಳಿದಿರಲಿಲ್ಲ. ಆದರೆ ಇನ್ನು ಮುಂದೇ ನಿಮ್ಮ ಬಗ್ಗೆ ತಿಳಿಯುತ್ತದೆ. ನನ್ನ ಗಂಡನ ಪ್ರಮಾಣಿಕ ಹೋರಾಟದ ಬೆಂಬಲಕ್ಕೆ ನಿಮ್ಮ ಪಕ್ಷದಿಂದ ಯಾರೂ ಬರಲಿಲ್ಲ ಎಂದು ಹೇಳಿದ್ದಾರೆ.

     

     

     

  • ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದ ದಲಿತ ಮುಖಂಡ

    ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದ ದಲಿತ ಮುಖಂಡ

    ತುಮಕೂರು: ದಲಿತರೆಲ್ಲಾ ಒಂದಾಗಿದ್ದೇವೆ. ನಮ್ಮಲ್ಲಿ ಒಡಕಿಲ್ಲ ಎಂದು ದಲಿತ ಮುಖಂಡರೊಬ್ಬರು ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದ ಘಟನೆ ತುಮಕೂರಿನಲ್ಲಿ ನಡೆದಿದೆ.

    ಕುಣಿಗಲ್ ದಲಿತ ಮುಖಂಡ ನಗುತಾ ರಂಗನಾಥ್ ರಾಹುಲ್ ಗಾಂಧಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ಡಿಕೆ ಬ್ರದರ್ಸ್ ದಲಿತರನ್ನು ಕುಣಿಗಲ್ ನಲ್ಲಿ ಕಡೆಗಣಿಸುತ್ತಿದ್ದಾರೆ ಎನ್ನುವ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.

    ದಲಿತರೆಲ್ಲಾ ಒಂದಾಗಿದ್ದೇವೆ. ನಮ್ಮಲ್ಲಿ ಒಡಕಿಲ್ಲ ಹಾಗೂ ಡಿ.ಕೆ ಬ್ರದರ್ಸ್ ನಮ್ಮನ್ನು ಕಡೆಗಣಿಸಿಲ್ಲ. ನಮ್ಮ ರಕ್ತದಲ್ಲಿ ಬರೆದು ನಿಮಗೆ ಕಳುಹಿಸುತ್ತಿದ್ದೇವೆ ಎಂದು ದಲಿತ ಮುಖಂಡ ರಂಗನಾಥ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಡಿಕೆ ಬ್ರದರ್ಸ್ ದಲಿತರನ್ನು ಕಡೆಗಣಿಸಿದ್ದಾರೆ ಎಂದು ಮಾಜಿ ಶಾಸಕ ರಾಮಸ್ವಾಮಿ ಗೌಡ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದಲಿತ ಮುಖಂಡ ರಕ್ತದಲ್ಲಿ ಪತ್ರ ಬರೆದಿದ್ದಾರೆ.