Tag: LIC

  • ಎಲ್‌ಐಸಿ ಹಣಕ್ಕಾಗಿ ತಂದೆಯನ್ನೆ ಕೊಂದ ಮಗ – ಸಾವಿನ ಸುದ್ದಿ ತಿಳಿದು ಇನ್ನೊಬ್ಬ ಮಗ ಆತ್ಮಹತ್ಯೆ!

    ಎಲ್‌ಐಸಿ ಹಣಕ್ಕಾಗಿ ತಂದೆಯನ್ನೆ ಕೊಂದ ಮಗ – ಸಾವಿನ ಸುದ್ದಿ ತಿಳಿದು ಇನ್ನೊಬ್ಬ ಮಗ ಆತ್ಮಹತ್ಯೆ!

    ಮೈಸೂರು: ಎಲ್‌ಐಸಿ ಹಣಕ್ಕಾಗಿ (LIC Fund) ಮಗ ತಂದೆಯನ್ನೇ ಕೊಂದಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಸಮೀಪದ ಗೆರೋಸಿ ಕಾಲೋನಿಯಲ್ಲಿ ನಡೆದಿದೆ.

    ಅಪ್ಪ ಕೊಲೆಯಾದ ವಿಚಾರ ತಿಳಿದು ಇನ್ನೊಬ್ಬ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪ್ಪ ಅಣ್ಣಪ್ಪನ ಹೆಸರಿನಲ್ಲಿ ಮಗ ಪಾಂಡು ವಿಮೆ ಮಾಡಿಸಿದ್ದ. ಈ ವಿಮೆ ಹಣಕ್ಕಾಗಿ ಹಿಂಬದಿಯಿಂದ ತಲೆಗೆ ದೊಣ್ಣೆಯಲ್ಲಿ ಹೊಡೆದು ಕೊಂದಿದ್ದಾನೆ. ಇದನ್ನೂ ಓದಿ: ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ

    ಬಳಿಕ ಅಪರಿಚಿತ ವಾಹನ ಡಿಕ್ಕಿಯಾಗಿ ತಮ್ಮ ತಂದೆ ಸಾವನ್ನಪ್ಪಿದ್ದಾರೆ ಪಾಂಡು ಕಥೆ ಕಟ್ಟಿದ್ದ. ಬೈಲುಕುಪ್ಪೆ ಪೊಲೀಸರಿಗೂ ಪಾಂಡು ದೂರು ಕೊಟ್ಟಿದ್ದ. ಅಪರಿಚಿತ ವಾಹನ ಡಿಕ್ಕಿ ಓರ್ವ ಸಾವು ಅಂತಾ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡು ಅನುಮಾನ ಬಂದ ಹಿನ್ನಲೆಯಲ್ಲಿ ಪಾಂಡುನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡಿದ್ದಾಗ ಇನ್ಸೂರೆನ್ಸ್ ಪಾಲಿಸಿ ಹಣಕ್ಕಾಗಿ ಕೊಂದಿರೋದಾಗಿ ತಪ್ಪೊಪ್ಪಿಗೆ ನೀಡಿದ್ದಾನೆ. ಇದನ್ನೂ ಓದಿ: ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಕೇಸ್ – ಚಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ

  • 4ನೇ ತ್ರೈಮಾಸಿಕದಲ್ಲಿ ಎಲ್‌ಐಸಿಗೆ ಬರೋಬ್ಬರಿ 13,762 ಕೋಟಿ ರೂ. ಲಾಭ

    4ನೇ ತ್ರೈಮಾಸಿಕದಲ್ಲಿ ಎಲ್‌ಐಸಿಗೆ ಬರೋಬ್ಬರಿ 13,762 ಕೋಟಿ ರೂ. ಲಾಭ

    ಮುಂಬೈ: ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮವೂ (LIC) 2024ರ ಮಾರ್ಚ್‌ 31ಕ್ಕೆ ಅಂತ್ಯಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ 13,762 ಕೋಟಿ ರೂ. ನಿವ್ವಳ ಲಾಭ (Net Profit) ಗಳಿಸಿದೆ.

    ಕಳೆದ ಹಣಕಾಸು ವರ್ಷದ ಈ ಅವಧಿಯಲ್ಲಿ ಎಲ್‌ಐಸಿ 13,191 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಕಳೆದ ಅವಧಿಗೆ ಹೋಲಿಸಿದರೆ ನಿವ್ವಳ ಲಾಭದ ಪ್ರಮಾಣದಲ್ಲಿ 4.5% ಏರಿಕೆ ಕಂಡಿದೆ. ಲಾಭ ಬಂದ ಹಿನ್ನೆಲೆಯಲ್ಲಿ ಒಂದು ಷೇರಿಗೆ (Share) 6 ರೂ. ಮಧ್ಯಂತರ ಡಿವಿಡೆಂಡ್ (Dividend) ನೀಡುವುದಾಗಿ ಘೋಷಿಸಿದೆ. ಇದನ್ನೂ ಓದಿ: ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ದರ್ಶನ್ ಹೆಸರ‍್ಹೇಳಿ ಲಕ್ಷಾಂತರ ರೂ. ದೋಖಾ

    ಮಾರ್ಚ್ 31, 2023 ಕ್ಕೆ ಕೊನೆಗೊಂಡ ವರ್ಷದಲ್ಲಿ ವೈಯಕ್ತಿಕ ವಿಭಾಗದಲ್ಲಿ ಒಟ್ಟು 2,04,28,937 ಪಾಲಿಸಿಗಳು ಮಾರಾಟವಾದರೆ ಮಾರ್ಚ್ 31,2024ಕ್ಕೆ ಕೊನೆಗೊಂಡ ವರ್ಷದಲ್ಲಿ ಒಟ್ಟು 2,03,92,973 ಪಾಲಿಸಿಗಳನ್ನು ಮಾರಾಟ ಮಾಡಿದೆ.

    ಇಂದು ಎಲ್‌ಐಸಿ ಷೇರು ಬೆಲೆ 7.90 ರೂ. ಏರಿಕೆಯಾಗಿ 1,037.65 ರೂ.ಗೆ ಕೊನೆಯಾಗಿದೆ. ಬೆಳಗ್ಗೆ 10:45ಕ್ಕೆ ವೇಳೆಗೆ 1,054 ರೂ.ಗೆ ಏರಿಕೆಯಾಗಿ ನಂತರ ಇಳಿಕೆಯಾಗಿತ್ತು. ಇದನ್ನೂ ಓದಿ: ಚನ್ನಗಿರಿ ಗಲಭೆ ಕೇಸ್‌ – ಮತ್ತೆ 3 ಎಫ್‌ಐಆರ್‌ ಸೇರ್ಪಡೆ, ಎಸ್‌ಐ ಸಸ್ಪೆಂಡ್‌

     

  • ಎಲ್‌ಐಸಿಗೆ ಬರೋಬ್ಬರಿ 9544 ಕೋಟಿ ರೂ. ಲಾಭ

    ಎಲ್‌ಐಸಿಗೆ ಬರೋಬ್ಬರಿ 9544 ಕೋಟಿ ರೂ. ಲಾಭ

    ನವದೆಹಲಿ: ದೇಶದ ಅತಿ ದೊಡ್ಡ ವಿಮಾ ಕಂಪನಿ ಭಾರತೀಯ ಜೀವ ವಿಮಾ ನಿಗಮ (LIC) ಜೂನ್‌ ತ್ರೈಮಾಸಿಕದಲ್ಲಿ ಬರೋಬ್ಬರಿ 9,544 ಕೋಟಿ ರೂ. ನಿವ್ವಳ ಲಾಭಗಳಿಸಿದೆ.

    ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ಸಂಸ್ಥೆಯ ಲಾಭದ (Net Profit ) ಪ್ರಮಾಣ 14 ಪಟ್ಟು ಏರಿಕೆಯಾಗಿದೆ. ಕಳೆದ ವರ್ಷದ ಈ ಅವಧಿಯಲ್ಲಿ ಎಲ್‌ಐಸಿ 682 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಇದನ್ನೂ ಓದಿ: PublicTV Explainer: ನೀಲಿ ಆರ್ಥಿಕತೆ ಎಂದರೇನು? – ಭಾರತದಲ್ಲಿ ಹೇಗೆ ಕೆಲಸ ಮಾಡುತ್ತಿದೆ; ಕರ್ನಾಟಕದಲ್ಲಿ ನಿರೀಕ್ಷೆ ಏನು?

    ಏಪ್ರಿಲ್‌ – ಜೂನ್ ಅವಧಿಯಲ್ಲಿ ತನ್ನ ಹೂಡಿಕೆಗಳಿಂದ 90,309 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಸಂಸ್ಥೆ 69,570 ಕೋಟಿ ರೂ. ಆದಾಯ ಗಳಿಸಿತ್ತು. ಇದನ್ನೂ ಓದಿ: ರಿಲಯನ್ಸ್‌ ಹಿಂದಿಕ್ಕಿ ಲಾಭಾಂಶದಲ್ಲಿ ದೇಶದಲ್ಲಿ ನಂ.1 ಕಂಪನಿಯಾಗಿ ಹೊರಹೊಮ್ಮಿದ ಎಸ್‌ಬಿಐ

    ಭರ್ಜರಿ ನಿವ್ವಳ ಲಾಭಗಳಿಸಿದರೂ ತ್ರೈಮಾಸಿಕದಲ್ಲಿ ಕಂಪನಿಯ ಮೊದಲ ವರ್ಷದ ಪ್ರೀಮಿಯಂ ಮೊತ್ತ 8.3% ರಷ್ಟು ಕುಸಿತ ಕಂಡು 6,810 ಕೋಟಿ ರೂ.ಗೆ ಇಳಿಕೆಯಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ ಪ್ರೀಮಿಯಂ ಮೊತ್ತ 7,429 ಕೋಟಿ ರೂ.ನಷ್ಟಿತ್ತು.  ಇದನ್ನೂ ಓದಿ: ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

    ಜೂನ್ ತ್ರೈಮಾಸಿಕದಲ್ಲಿ ಒಟ್ಟು ಆದಾಯ 1,88,749 ಕೋಟಿ ರೂ.ಗೆ ಏರಿಕೆಯಾಗಿದ್ದು, ಹಿಂದಿನ ವರ್ಷದ ಅವಧಿಯಲ್ಲಿ 1,68,881 ಕೋಟಿ ರೂ. ಇತ್ತು. ಎಲ್‌ಐಸಿಯ ನಿರ್ವಹಣೆಯಲ್ಲಿರುವ ಒಟ್ಟು ಆಸ್ತಿ ಕಳೆದ ವರ್ಷ ಜೂನ್ 30 ರಂದು 41.02 ಲಕ್ಷ ಕೋಟಿ ರೂ. ಇದ್ದರೆ ಈ ಬಾರಿ 5.09 ಲಕ್ಷ ಕೋಟಿ ರೂ. ವೃದ್ಧಿಸಿ 46.11 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ.


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂಡನ್‍ಬರ್ಗ್ ವರದಿ ವಿವಾದ – ತನಿಖೆಗೆ 3 ತಿಂಗಳ ಗಡುವು ನೀಡಿದ ಸುಪ್ರೀಂ

    ಹಿಂಡನ್‍ಬರ್ಗ್ ವರದಿ ವಿವಾದ – ತನಿಖೆಗೆ 3 ತಿಂಗಳ ಗಡುವು ನೀಡಿದ ಸುಪ್ರೀಂ

    ನವದೆಹಲಿ: ಅದಾನಿ ಗ್ರೂಪ್ ಆಫ್ ಕಂಪನಿಗಳ (Adani Group) ವಿರುದ್ಧದ ಹಿಂಡೆನ್‍ಬರ್ಗ್ (Hindenburg Research) ಸಂಶೋಧನಾ ವರದಿಯಲ್ಲಿನ ಆರೋಪಗಳ ಬಗ್ಗೆ ನಡೆಸುತ್ತಿರುವ ತನಿಖೆಯನ್ನು ಪೂರ್ಣಗೊಳಿಸಲು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಗೆ (Securities and Exchange Board of India) ಮೂರು ತಿಂಗಳ ಕಾಲಾವಕಾಶವನ್ನು ಸುಪ್ರೀಂ (Supreme Court)‌ ವಿಸ್ತರಿಸಿ ಶುಕ್ರವಾರ ಆದೇಶ ನೀಡಿದೆ.

    ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಈ ಆದೇಶವನ್ನು ನೀಡಿದೆ. ಸೆಬಿಯ (SEBI) ಬೇಡಿಕೆಯಂತೆ ಆರು ತಿಂಗಳ ವಿಸ್ತರಣೆಯನ್ನು ನೀಡಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಅದಾನಿ – ಹಿಂಡನ್‌ಬರ್ಗ್‌ : ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ

    ತನ್ನ ತನಿಖಾ ವರದಿಯನ್ನು ಸಲ್ಲಿಸಲು ಆರು ತಿಂಗಳ ಕಾಲ ವಿಸ್ತರಣೆ ಕೋರಿ ಸೆಬಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಿಚಾರಣೆ ನಡೆಸಿತು. ಈ ವೇಳೆ ಸುಪ್ರೀಂ, ಕೆಲಸದಲ್ಲಿ ಸ್ವಲ್ಪ ಚುರುಕುತನದ ಅಗತ್ಯವಿದೆ. 6 ತಿಂಗಳುಗಳ ಕಾಲವಕಾಶ ನೀಡಲು ಸಾಧ್ಯವಿಲ್ಲ. ಒಂದು ತಂಡವನ್ನು ರಚಿಸಿ ಶೀಘ್ರ ತನಿಖೆ ಮುಗಿಸಿ. ಆಗಸ್ಟ್ ಮಧ್ಯದಲ್ಲಿ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಮೇ 15ರಂದು ಆದೇಶ ಪ್ರಕಟಿಸುವುದಾಗಿ ಹೇಳಿದೆ.

    ಮಾ.2ರ ಸುಪ್ರೀಂ ಆದೇಶದಂತೆ ಮೇ 2ಕ್ಕೆ ತನಿಖೆ ಪೂರ್ಣಗೊಳ್ಳಬೇಕಿತ್ತು. ಆದರೆ ಹಿಂಡೆನ್‍ಬರ್ಗ್ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳಿಗೆ ಕನಿಷ್ಠ 15 ತಿಂಗಳ ತನಿಖೆ ಅಗತ್ಯವಿದೆ. ಆದರೆ ಆರು ತಿಂಗಳು ಅವಕಾಶ ವಿಸ್ತರಿಸಿದರೆ ತನಿಖೆ ಪೂರ್ಣಗೊಳಿಸುವುದಾಗಿ ಕಳೆದ ತಿಂಗಳು ಸೆಬಿ ಸಲ್ಲಿಸಿದ್ದ ಮನವಿಯಲ್ಲಿ ಹೇಳಿತ್ತು.

    ತನಿಖೆಗೆ ಬಹು ದೇಶೀಯ ಮತ್ತು ಅಂತರರಾಷ್ಟ್ರೀಯ ಬ್ಯಾಂಕ್‍ಗಳಿಂದ ಬ್ಯಾಂಕ್ ಸ್ಟೇಟ್‍ಮೆಂಟ್‍ಗಳನ್ನು ಪಡೆಯುವುದು ಅಗತ್ಯವಾಗಿರುತ್ತದೆ. ಬ್ಯಾಂಕ್ ಸ್ಟೇಟ್‍ಮೆಂಟ್‍ಗಳು 10 ವರ್ಷಗಳ ಹಿಂದೆ ಕೈಗೊಂಡ ವಹಿವಾಟುಗಳಿಗೆ ಸಹ ಸಂಬಂಧಿಸಿದೆ. ಇದು ಸಮಯ ತೆಗೆದುಕೊಳ್ಳುತ್ತದೆ ಎಂದು ಸೆಬಿ ನ್ಯಾಯಾಲಯಕ್ಕೆ ತಿಳಿಸಿತ್ತು.

    ಷೇರು ಬೆಲೆಗಳನ್ನು ಕೃತಕವಾಗಿ ಹೆಚ್ಚಿಸುವ ಮೂಲಕ ಅದಾನಿ ಸಮೂಹದಿಂದ ವಂಚನೆಯಾಗಿದೆ ಎಂದು ಆರೋಪಿಸಿ ಹಿಂಡೆನ್‍ಬರ್ಗ್ ರಿಸರ್ಚ್ ವರದಿ ಪ್ರಕಟಿಸಿತ್ತು. ಇದಾದ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತ ಕಂಡಿದ್ದವು.

    ಇನ್ನೊಂದೆಡೆ, ಹಿಂಡೆನ್‍ಬರ್ಗ್ ರಿಸರ್ಚ್‍ನ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅದರ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು. ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಸೆಬಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲ ಮನೋಹರ್ ಲಾಲ್ ಶರ್ಮಾ ಮನವಿ ಮಾಡಿದ್ದಾರೆ.

    ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಅವರು ಹಿಂಡನ್‍ಬರ್ಗ್ ವರದಿ ಉಲ್ಲೇಖಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಜೀವ ವಿಮಾ ನಿಗಮ (LIC) ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ ನಿರ್ಧಾರವನ್ನು ಪ್ರಶ್ನಿಸಿ ತನಿಖೆ ನಡೆಸಬೇಕು ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಸಂಶೋಧನಾ ವರದಿ ಸುಳ್ಳು, ಆಧಾರ ರಹಿತ: ಮಾರಿಷಸ್‌ ಸಂಸತ್ತಿಗೆ ಸರ್ಕಾರ ಉತ್ತರ

  • ಶೇ.8.62 ಡಿಸ್ಕೌಂಟ್‌ – ಷೇರು ಮಾರುಕಟ್ಟೆಯಲ್ಲಿ ಎಲ್‌ಐಸಿ ಲಿಸ್ಟಿಂಗ್‌

    ಶೇ.8.62 ಡಿಸ್ಕೌಂಟ್‌ – ಷೇರು ಮಾರುಕಟ್ಟೆಯಲ್ಲಿ ಎಲ್‌ಐಸಿ ಲಿಸ್ಟಿಂಗ್‌

    ಮುಂಬೈ: ದೇಶದ ಅತಿ ದೊಡ್ಡ ವಿಮಾ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮದ(ಎಲ್‌ಐಸಿ) ಷೇರು ಪೇಟೆಯಲ್ಲಿ ಲಿಸ್ಟಿಂಗ್‌ ಆಗಿದೆ.

    ಬಾಂಬೆ ಷೇರು ಮಾರಕಟ್ಟೆಯಲ್ಲಿ ಶೇ.8.62 ರಷ್ಟು ರಿಯಾಯಿತಿ ದರದೊಂದಿಗೆ 867.2 ರೂ. ಬೆಲೆಯಲ್ಲಿ ಲಿಸ್ಟ್‌ ಆಗಿದೆ. ಇಂದು ಲಿಸ್ಟ್‌ ಆಗುವ ಮೂಲಕ ಹೂಡಿಕೆದಾರರು ಷೇರುಗಳನ್ನು ಖರೀದಿ ಮಾಡಬಹುದು.

    ಆರಂಭದಲ್ಲಿ ಎಲ್‌ಐಸಿ ಷೇರುಗಳು ಭಾರೀ ಏರಿಕೆ ಆಗಲಿದೆ ಎಂದು ಗ್ರೇ ಮಾರ್ಕೆಟ್‌ ಸುಳಿವು ನೀಡಿತ್ತು. ಆದರೆ ಕಳೆದ ಒಂದು ವಾರದಿಂದ ಗ್ರೇ ಮಾರ್ಕೆಟ್‌ನಲ್ಲಿ ಎಲ್‌ಐಸಿ ಷೇರುಗಳ ಬೇಡಿಕೆ ಕುಸಿತ ಕಂಡಿದ್ದರಿಂದ ಈಗ ಕಡಿಮೆ ಬೆಲೆಯಲ್ಲಿ ಷೇರು ಲಿಸ್ಟ್‌ ಆಗಿದೆ. ಇಂದು ಮಧ್ಯಾಹ್ನದ ವೇಳೆಗೆ 890 ರೂ. ಬೆಲೆಯಲ್ಲಿ ಎಲ್‌ಐಸಿ ಷೇರು ಮಾರಾಟವಾಗುತ್ತಿದೆ. ಇದನ್ನೂ ಓದಿ: ಸಂಕಷ್ಟದಲ್ಲಿರುವ ಲಂಕಾಕ್ಕೆ ಭಾರತದಿಂದ ಪೆಟ್ರೋಲ್

    ಕೇಂದ್ರ ಸರ್ಕಾರ ಮೇ 4 ರಂದು ಎಲ್‌ಐಸಿ ಷೇರನ್ನು ಬಿಡುಗಡೆ ಮಾಡಿತ್ತು. ಐಪಿಒ ವೇಳೆ ಒಂದು ಷೇರಿಗೆ 949 ರೂ. ದರವನ್ನು ನಿಗದಿ ಮಾಡಲಾಗಿತ್ತು. ಈ ಸರ್ಕಾರ ಪಾಲಿಸಿದಾರರಿಗೆ ಮತ್ತು ರಿಟೇಲ್‌ ಹೂಡಿಕೆದಾರರಿಗೆ ರಿಯಾಯಿತಿ ದರವನ್ನು ಪ್ರಕಟಿಸಿತ್ತು. ಪಾಲಿಸಿದಾರರು 889 ರೂ. ರಿಟೇಲ್‌ ಹೂಡಿಕೆದಾರರು 904 ರೂ. ರಿಯಾಯಿತಿ ದರದಲ್ಲಿ ಷೇರನ್ನು ಖರೀದಿ ಮಾಡಿದ್ದರು. ಐಪಿಒ ಮೂಲಕ 20,557 ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ.

    ಅಸ್ಥಿರ ಮಾರುಕಟ್ಟೆ ಪರಿಸ್ಥಿತಿಗಳಿಂದಾಗಿ ಎಲ್ಐಸಿ ಕಳೆದ ತಿಂಗಳು ತನ್ನ ಐಪಿಒ ಗಾತ್ರವನ್ನು ಶೇ. 5 ರಿಂದ ಶೇಕಡ 3.5 ಕ್ಕೆ ಇಳಿಸಿತ್ತು. ಎಲ್‌ಐಸಿಯ ಐಪಿಒ ಗಾತ್ರವನ್ನು ಇಳಿಕೆ ಮಾಡಿದರೂ ಇದು ದೇಶದ ಅತೀ ದೊಡ್ಡ ಐಪಿಒ ಆಗಿ ದಾಖಲೆ ಬರೆದಿದೆ.

    ಕಳೆದ ನವೆಂಬರ್‌ನಲ್ಲಿ ಷೇರು ಮಾರುಕಟ್ಟೆ ಪ್ರವೇಶಿಸಿದ್ದ ಪೇಟಿಎಂ 18,300 ಕೋಟಿ ರೂ. ಸಂಗ್ರಹಿಸಿದ್ದೇ ಈವರೆಗೆನ ದೇಶದ ದೊಡ್ಡ ಐಪಿಒ ಆಗಿದೆ. ಕೋಲ್‌ ಇಂಡಿಯಾ 2010 ರಲ್ಲಿ 15,500 ಕೋಟಿ ಮತ್ತು ರಿಲಯನ್ಸ್‌ ಪವರ್‌ 2008ರಲ್ಲಿ 11,700 ಕೋಟಿ ರೂ. ಐಪಿಒ ಮೂಲಕ ಸಂಗ್ರಹಿಸಿತ್ತು.

    ಕೇಂದ್ರ ಸರ್ಕಾರ 2021-22ರ ಹಣಕಾಸು ವರ್ಷದಲ್ಲಿ ಎಲ್‌ಐಸಿಯ 31.6 ಕೋಟಿ ಅಥವಾ ಶೇ.5 ರಷ್ಟು ಪಾಲನ್ನು ಮಾರಾಟ ಮಾಡಿ 60 ಸಾವಿರ ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಹಾಕಿಕೊಂಡಿತ್ತು. ಆದರೆ ಕೊರೊನಾ ಕಾರಣದಿಂದ ಇದು ಮುಂದೂಡಿಕೆಯಾಗಿತ್ತು.

  • ಮೇ 4 ರಿಂದ ಎಲ್‌ಐಸಿ ಐಪಿಒ?

    ಮೇ 4 ರಿಂದ ಎಲ್‌ಐಸಿ ಐಪಿಒ?

    ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಆರಂಭಿಕ ಸಾರ್ವಜನಿಕ ಕೊಡುಗೆಯು (ಐಪಿಒ) ಮೇ 4ರಿಂದ 9ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ ಎಂದು ಮೂಲಗಳು ತಿಳಿಸಿವೆ.

    ದೇಶದ ಅತಿದೊಡ್ಡ ವಿಮಾ ಕಂಪನಿಯಾಗಿರುವ ಎಲ್‌ಐಸಿಯಲ್ಲಿರುವ ಶೇ.3.5 ರಷ್ಟು ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸಕಾರ ಮುಂದಾಗಿದೆ. ಮಾರಾಟದಿಂದ ಬೊಕ್ಕಸಕ್ಕೆ 21 ಸಾವಿರ ಕೋಟಿ ರೂ. ಬರಲಿದೆ. ಎಲ್‌ಐಸಿ ಮಾರುಕಟ್ಟೆ ಮೌಲ್ಯವು 6 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ.

    ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಲ್‌ಐಸಿಯ ಶೇ. 5-7ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ 50 ರಿಂದ 65 ಸಾವಿರ ಕೋಟಿ ರೂ. ಸಂಗ್ರಹಿಸಲು ಮುಂದಾಗಿತ್ತು. ಆದರೆ ರಷ್ಯಾ–ಉಕ್ರೇನ್‌ ಯುದ್ಧ ಮತ್ತು ಹೂಡಿಕೆದಾರರಿಂದ ಹೆಚ್ಚಿನ ಬೇಡಿಕೆ ಇಲ್ಲದ ಹಿನ್ನೆಲೆಯಲ್ಲಿ ಐಪಿಒ ಬಿಡುಗಡೆ ಮುಂದೂಡಿಕೆಯಾಗಿತ್ತು. ಇದನ್ನೂ ಓದಿ: ಭಾರತದ 10, ಪಾಕಿಸ್ತಾನದ 6 ಯೂಟ್ಯೂಬ್ ಚ್ಯಾನೆಲ್‌ಗಳು ಬ್ಯಾನ್

    ಎಲ್‌ಐಸಿಯ ಐಪಿಒ ಗಾತ್ರವನ್ನು ಇಳಿಕೆ ಮಾಡಿದರೂ ಇದು ದೇಶದ ಅತೀ ದೊಡ್ಡ ಐಪಿಒ ಆಗಿ ದಾಖಲೆ ಬರೆಯಲಿದೆ. ಕಳೆದ ನವೆಂಬರ್‌ನಲ್ಲಿ ಷೇರು ಮಾರುಕಟ್ಟೆ ಪ್ರವೇಶಿಸಿದ್ದ ಪೇಟಿಎಂ 18,300 ಕೋಟಿ ರೂ. ಸಂಗ್ರಹಿಸಿದ್ದೇ ಈವರೆಗೆನ ದೇಶದ ದೊಡ್ಡ ಐಪಿಒ ಆಗಿದೆ. ಕೋಲ್‌ ಇಂಡಿಯಾ 2010 ರಲ್ಲಿ 15,500 ಕೋಟಿ ಮತ್ತು ರಿಲಯನ್ಸ್‌ ಪವರ್‌ 2008ರಲ್ಲಿ 11,700 ಕೋಟಿ ರೂ. ಐಪಿಒ ಮೂಲಕ ಸಂಗ್ರಹಿಸಿತ್ತು.

    ಕೇಂದ್ರ ಸರ್ಕಾರ 2021-22ರ ಹಣಕಾಸು ವರ್ಷದಲ್ಲಿ ಎಲ್‌ಐಸಿಯ 31.6 ಕೋಟಿ ಅಥವಾ ಶೇ.5 ರಷ್ಟು ಪಾಲನ್ನು ಮಾರಾಟ ಮಾಡಿ 60 ಸಾವಿರ ಕೋಟಿ ರೂ. ಸಂಗ್ರಹಿಸುವ ಗುರಿಯನ್ನು ಹಾಕಿಕೊಂಡಿತ್ತು. ಆದರೆ ಕೊರೊನಾ ಕಾರಣದಿಂದ ಇದು ಮುಂದೂಡಿಕೆಯಾಗಿತ್ತು.

  • ಎಲ್‍ಐಸಿ ಖಾಸಗೀಕರಣವಿಲ್ಲ – ಆಶೀಶ್‍ಕುಮಾರ್ ಸ್ಪಷ್ಟನೆ

    ಎಲ್‍ಐಸಿ ಖಾಸಗೀಕರಣವಿಲ್ಲ – ಆಶೀಶ್‍ಕುಮಾರ್ ಸ್ಪಷ್ಟನೆ

    ತುಮಕೂರು: ಎಲ್‍ಐಸಿ ಖಾಸಗೀಕರಣವಿಲ್ಲವೆಂದು ಬೆಂಗಳೂರು ಭಾರತೀಯ ಜೀವ ವಿಮಾ ನಿಗಮದ ಸೀನಿಯರ್ ಡಿವಿಜನಲ್ ಮ್ಯಾನೇಜರ್ ಆಶೀಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಇತ್ತೀಚೆಗೆ ಕೇಂದ್ರ ಸರ್ಕಾರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಸರ್ಕಾರದ ಆಯವ್ಯಯ ಮುಂಗಡ ಪತ್ರದಲ್ಲಿ ಎಲ್‍ಐಸಿಯ ಸರ್ಕಾರಿ ಸ್ವಾಮ್ಯದ ಬಂಡವಾಳದಲ್ಲಿ ಆರಂಭಿಕ ಸಾರ್ವಜನಿಕ ಕೊಡುಗೆಯಲ್ಲಿ ಶೇ. 10ರಷ್ಟು ಷೇರುಗಳನ್ನು ತೊಡಗಿಸಲಿದೆ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆ ಭಾನುವಾರ ತುಮಕೂರಿನ ಬಿ.ಹೆಚ್.ರಸ್ತೆಯಲ್ಲಿರುವ ಭಾರತೀಯ ಜೀವ ವಿಮಾ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆಶೀಶ್‍ಕುಮಾರ್ ಅವರು, ಎಲ್‍ಐಸಿಯನ್ನು ಖಾಸಗೀಕರಣಗೊಳಿಸುತ್ತಾರೆ ಎಂಬ ಸುಳ್ಳು ವದಂತಿ ಸಾರ್ವಜನಿಕರಲ್ಲಿ ಹರಿದಾಡುತ್ತಿದ್ದು ಇದು ತಪ್ಪು ಮಾಹಿತಿಯಾಗಿದೆ, ಎಲ್‍ಐಸಿ ಖಾಸಗೀಕರಣವಿಲ್ಲವೆಂದು ತಿಳಿಸಿದರು.

    ವಿತ್ತ ಸಚಿವರು ಎಲ್‍ಐಸಿಯ 100ರಷ್ಟು ಷೇರುಗಳಲ್ಲಿ ಶೇ. 10ರಷ್ಟು ಷೇರುಗಳನ್ನು ಆಸಕ್ತರಿಗೆ ಮಾರಾಟ ಮಾಡುತ್ತದೆ ಎಂದು ಹೇಳಿದ್ದಾರಷ್ಟೆ. ಆದರೆ ಖಾಸಗೀಕರಣದ ಬಗ್ಗೆ ಸಚಿವರು ಮಾತನಾಡಿರುವುದಿಲ್ಲ. ಭಾರತೀಯ ಜೀವ ವಿಮಾ ನಿಗಮ ಬೆಂಗಳೂರು ವಿಭಾಗ 1ರ ವ್ಯಾಪ್ತಿಯಲ್ಲಿ 20 ಶಾಖೆಗಳು ಮತ್ತು 10 ಉಪಶಾಖೆಯನ್ನು ಹೊಂದಿದ್ದು, ಪ್ರಸಕ್ತ ವರ್ಷದ ಈವರೆಗೂ 1,48,703 ಪಾಲಿಸಿಗಳನ್ನು ಪೂರ್ಣಗೊಳಿಸಿ 518.10 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣವನ್ನು ಸಂಗ್ರಹಿಸಿರುತ್ತದೆ ಎಂದರು.

    ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಖೆಗಳಿಂದ 51,878 ಪಾಲಿಸಿಗಳನ್ನು ಪೂರ್ಣಗೊಳಿಸಿ 72.44 ಕೋಟಿಯಷ್ಟು ಪ್ರಥಮ ಪ್ರೀಮಿಯಂ ಹಣವನ್ನು ಸಂಗ್ರಹಿಸಿರುತ್ತದೆ. ಕಳೆದ ವರ್ಷ ಭಾರತೀಯ ಜೀವ ವಿಮಾ ನಿಗಮ 53 ಸಾವಿರ ಕೋಟಿ ಲಾಭ ಗಳಿಸಿದ್ದು, ಅದರಲ್ಲಿ ಶೇ. 95ರಷ್ಟು ಲಾಭವನ್ನು ನಿಗಮದ ಪಾಲಿಸಿದಾರರಿಗೆ ಬೋನಸ್ ರೂಪದಲ್ಲಿ ವಿತರಿಸಲಾಗಿದೆ. ನಿಗಮವು ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯಾಗಿರುವುದರಿಂದ ಶೇ. 5ರಷ್ಟು ಅಂದರೆ 2,600 ಕೋಟಿ ರೂ. ಲಾಭದ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ಚೆಕ್ ಮೂಲಕ ನೀಡಲಾಗಿದೆ ಎಂದು ಅವರು ಹೇಳಿದರು.

    ನಿಗಮದಿಂದ ಸರ್ವೈವಲ್ ಬೆನಿಫಿಟ್ 79,649 ಪಾಲಿಸಿಗಳ 349.80ಕೋಟಿ ರೂ. ಪಾಲಿಸಿದಾರರಿಗೆ ಸಂದಾಯ ಮಾಡಲಾಗಿದೆ, 66,503 ಮೆಚ್ಯುರಿಟಿ ದಾವೆಯಲ್ಲಿ 718.30ಕೋಟಿ ಪಾಲಿಸಿದಾರರಿಗೆ ಸಂದಾಯ ಮಾಡಲಾಗಿದೆ. 5,850 ಮರಣ ದಾವೆಯಲ್ಲಿ 106.14 ಕೋಟಿ ಪಾಲಿಸಿಯ ನಾಮಿನಿಗೆ ಹಣ ಸಂದಾಯ ಮಾಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು 30 ಕೋಟಿಗೂ ಹೆಚ್ಚಿನ ಪಾಲಿಸಿದಾರರನ್ನು ಹೊಂದಿರುವ ಕೇಂದ್ರ ಸರ್ಕಾರ ಸ್ವಾಮ್ಯದ ಬಹುದೊಡ್ಡ ಸಂಸ್ಥೆಯಾಗಿದ್ದು, ಇದರಲ್ಲಿ 11,79,229 ಪ್ರತಿನಿಧಿಗಳು ಕಾರ್ಯನಿರ್ವಹಿಸುತ್ತಿದ್ದು, 1,08,684 ಉದ್ಯೋಗಿಗಳು ಕ್ಷಮತೆ ಹಾಗೂ ದಕ್ಷತೆಯಿಂದ ಪಾಲಿಸಿದಾರರ ಹಿತಾಸಕ್ತಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

    ನಿಗಮವು 31,11,84,728 ಕೋಟಿಯಷ್ಟು ಮೌಲ್ಯದ ಸ್ವತ್ತನ್ನು ಹೊಂದಿದ್ದು, 28,28,32,012 ಕೋಟಿ ಮೊತ್ತದ ಲೈಫ್ ಫಂಡ್ ಹೊಂದಿರುವ ಸದೃಢ ಸಂಸ್ಥೆಯಾಗಿದೆ. ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮದಿಂದ ನೀಡುವ ಹಣದಲ್ಲಿ ಸಾಮಾಜಿಕ ಕಳಕಳಿ ದೃಷ್ಟಿಯಿಂದ ಕುಡಿಯುವ ನೀರು, ವಿದ್ಯುತ್, ರಸ್ತೆ, ರೈಲ್ವೆ ಹಾಗೂ ಗೃಹ ನಿರ್ಮಾಣದಂತಹ ಸಾರ್ವಜನಿಕ ಯೋಜನೆಗಳಲ್ಲಿ ಗರಿಷ್ಠ ಪ್ರಮಾಣದ ಹೂಡಿಕೆ ಮಾಡುತ್ತಿದೆ. ಇದರಿಂದ ಸಾರ್ವಜನಿಕ ಹಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ರುಜುವಾತು ಮಾಡಿದೆ ಎಂದರು.

    ಕಳೆದ 63 ವರ್ಷಗಳಿಂದ ಜನರ ವಿಶ್ವಾಸ ಗಳಿಸಿರುವ ಭಾರತೀಯ ಜೀವ ವಿಮಾ ನಿಗಮವು ಭೂಮಿಯ ಮೇಲೆ ಜನರಿರುವವರೆಗೂ ಶಾಶ್ವತವಾಗಿ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ವಿಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಮುರಳಿ ಮನೋಹರ್, ಸೇಲ್ಸ್ ಮ್ಯಾನೇಜರ್ ಮುರಳೀಧರ್ ಉಪಸ್ಥಿತರಿದ್ದರು.

  • ಜೀವವಿಮಾ ಸಂಸ್ಥೆಯಲ್ಲಿ ಕೊಳೆಯುತ್ತಿದೆ ವಾರಸುದಾರರಿಲ್ಲದ 15,167 ಕೋಟಿ ರೂಪಾಯಿ

    ಜೀವವಿಮಾ ಸಂಸ್ಥೆಯಲ್ಲಿ ಕೊಳೆಯುತ್ತಿದೆ ವಾರಸುದಾರರಿಲ್ಲದ 15,167 ಕೋಟಿ ರೂಪಾಯಿ

    ನವದೆಹಲಿ: ದೇಶದ ಒಟ್ಟು 23 ವಿಮಾ ಸಂಸ್ಥೆಗಳಲ್ಲಿ ವಾರಸುದಾರರಿಲ್ಲದೆ ಬರೋಬ್ಬರಿ 15, 167 ಕೋಟಿ ರೂ. ಕೊಳೆಯುತ್ತಾ ಬಿದ್ದಿದೆ ಎಂದು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ ಡಿಎ) ವರದಿ ನೀಡಿದೆ.

    ಐಆರ್ ಡಿಎ ವರದಿಯ ಪ್ರಕಾರ, ವಿಮೆ ಮಾಡಿದ ಬಳಿಕ ಅದನ್ನು ಮರೆತು ಬಿಟ್ಟಿದ್ದರಿಂದ ಮತ್ತು ವಾರಸುದಾರರಿಗೆ ವಿಮೆಯ ಮಾಹಿತಿಯಿಲ್ಲದೇ ಇರುವುದರಿಂದ 15,167 ಕೋಟಿ ರೂಪಾಯಿ ವಾರಸುದಾರರಿಲ್ಲದ ಹಣ ಜಮೆಯಾಗಿದೆ ಎಂದು ತಿಳಿಸಿದೆ.

    2018ರ ಮಾರ್ಚ್ 31ರವರೆಗೂ 15,166 ಕೋಟಿ ರೂ. ಬಾಕಿ ಉಳಿದಿದ್ದು ಈ ಪೈಕಿ ಎಲ್‍ಐಸಿ 10,509 ಕೋಟಿ ರೂ. ಉಳಿದ 22 ಖಾಸಗಿ ಸಂಸ್ಥೆಗಳು 4,657.47 ಕೋಟಿ ರೂ. ಜಮೆ ಆಗಿದೆ ಎಂದು ವರದಿ ನೀಡಿದೆ.

    ಖಾಸಗಿ ವಿಮಾಸಂಸ್ಥೆಗಳಾದ ಐಸಿಐಸಿಐ ಪ್ರೋಡೆನ್ಷಿಯಲ್ ಲೈಫ್ ಇನ್ಸೂರೆನ್ಸ್ ಕಂಪೆನಿ 807.4 ಕೋಟಿ ರೂ. ರಿಲಯಲ್ಸ್ ನಿಪ್ಪಾನ್ ಲೈಫ್ ಇನ್ಸೂರೆನ್ಸ್ ಕಂಪೆನಿ 696.12 ಕೋಟಿ ರೂ., ಎಸ್‍ಬಿಐ ಲೈಫ್ ಇನ್ಸೂರೆನ್ಸ್ ನಿಗಮ 678.59 ಕೋಟಿ ರೂ. ಹಾಗೂ ಹೆಚ್‍ಡಿಎಫ್‍ಸಿ ಸ್ಟ್ಯಾಂಡರ್ಡ್ ಲೈಫ್ ಇನ್ಸೂರೆನ್ಸ್ ಕಂಪೆನಿ 659.3 ಕೋಟಿ ರೂ. ಮೊತ್ತ ಜಮೆಯಾಗಿದೆ ಎಂದು ಐಆರ್ ಡಿಐ ತಿಳಿಸಿದೆ.

    ಈ ಸಂಬಂಧ ಜಮೆಯಾದ ಹಣವನ್ನು ಶೀಘ್ರವೇ ವಿಮಾ ಪಾಲಿಸಿದಾರರನ್ನು ಖುದ್ದು ಪತ್ತೆಹಚ್ಚಿ, ಮರು ಪಾವತಿಸುವಂತೆ ದೇಶದ 23 ವಿಮಾ ಸಂಸ್ಥೆಗಳಿಗೆ ಐಆರ್‍ಡಿಎ ಆದೇಶ ನೀಡಿದೆ.

  • ವಿಡಿಯೋ: ಕೋಲ್ಕತ್ತಾದ ಎಲ್‍ಐಸಿ ಕಚೇರಿಯಲ್ಲಿ ಅಗ್ನಿ ಅವಘಡ

    ವಿಡಿಯೋ: ಕೋಲ್ಕತ್ತಾದ ಎಲ್‍ಐಸಿ ಕಚೇರಿಯಲ್ಲಿ ಅಗ್ನಿ ಅವಘಡ

    ಕೋಲ್ಕತ್ತ: ಗುರುವಾರ ಬೆಳಗ್ಗೆ ಕೋಲ್ಕತ್ತಾದ ಜವಾಹರ್ ಲಾಲ್ ನೆಹರೂ ರೋಡ್ ನಲ್ಲಿರೋ ಎಲ್‍ಐಸಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

    ಇಂದು ಬೆಳಗ್ಗೆ ಸುಮಾರು 10:20ಕ್ಕೆ ಈ ಅವಘಡ ಸಂಭವಿಸಿದೆ. 16ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವೇಗವಾಗಿ 17ನೇ ಮಹಡಿಗೂ ಆವರಿಸಿದೆ. ಘಟನಾ ಸ್ಥಳಕ್ಕೆ ಹತ್ತು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಘಟನೆಯಲ್ಲಿ ಪ್ರಾಣಹಾನಿ ಆಗಿರೋ ಬಗ್ಗೆ ಈವರೆಗೆ ಯಾವುದೇ ವರದಿಯಾಗಿಲ್ಲ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ಲೋಬಲ್ ಮಾರ್ಕೆಟ್ ಕಚೇರಿಯ ಸರ್ವರ್ ರೂಮ್ ಕೂಡ ಇದೇ ಮಹಡಿಯಲ್ಲಿದೆ. ಆ ಮಹಡಿಯಲ್ಲಿ ಯಾರೂ ಸಿಲುಕಿರುವ ಬಗ್ಗೆ ಸುದ್ದಿ ಇಲ್ಲ ಎಂದು ಎಸ್‍ಬಿಐನ ಮುಖ್ಯ ವ್ಯವಸ್ಥಾಪಕರಾದ ಪಿ.ಪಿ ಸೇನ್ ಗುಪ್ತಾ ತಿಳಿಸಿದ್ದಾರೆ.

    ಜೀವನ್ ಸುಧಾ ಕಟ್ಟಡದ 17ನೇ ಮಹಡಿಯಲ್ಲಿ ಅವರಿಸಿರೋ ಬೆಂಕಿಯನ್ನು ನಂದಿಸಲು ಹತ್ತು ಅಗ್ನಿಶಾಮಕ ವಾಹನಗಳನ್ನ ಬಳಸಿಕೊಳ್ಳಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ವೇಗವಾಗಿ ಬೇರೆ ಕಟ್ಟಡದ ಇತರೆ ಮಹಡಿಗಳಿಗೂ ಆವರಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

    19 ಮಹಡಿಯ ಈ ಕಟ್ಟಡದಲ್ಲಿ ಎಸ್‍ಬಿಐನ ಕಚೇರಿ, ಎಲ್‍ಐಸಿ ಬ್ರಾಂಚ್ ಹಾಗೂ ಇತರೆ ಹಣಕಾಸು ಸಂಸ್ಥೆಗಳ ಕಚೇರಿಗಳು ಇವೆ.

  • ಎಲ್‍ಐಸಿ ಹಣದ ಆಸೆಗಾಗಿ ನಾದಿನಿ ವರಿಸಲು ಮುಂದಾಗಿ ನಾಪತ್ತೆ- ಪತಿಗಾಗಿ ಪತ್ನಿ ಕಣ್ಣೀರು

    ಎಲ್‍ಐಸಿ ಹಣದ ಆಸೆಗಾಗಿ ನಾದಿನಿ ವರಿಸಲು ಮುಂದಾಗಿ ನಾಪತ್ತೆ- ಪತಿಗಾಗಿ ಪತ್ನಿ ಕಣ್ಣೀರು

    ಹಾವೇರಿ: ಪ್ರೀತಿ ಹೆಸರಲ್ಲಿ ತಲೆಕೆಡಿಸಿದ ಭೂಪ ಮೂರು ಬಾರಿ ಮದುವೆಯಾಗಿ ಸಂಸಾರ ಮಾಡಿದ್ದ. ಆದ್ರೀಗ, ತಮ್ಮನ ಎಲ್‍ಐಸಿ ಹಣ ಬರುತ್ತೆ ಅಂತ ನಾದಿನಿಯನ್ನ ಮದುವೆಯಾಗಲು ಹೆಂಡತಿಯನ್ನೇ ದೂರ ಮಾಡಿದ್ದಾನೆ. ಆದ್ರೆ, ಹೆಂಡತಿ ಮಾತ್ರ ನನಗೆ ಗಂಡ ಬೇಕು ಅಂತ ಪಟ್ಟು ಹಿಡಿದಿದ್ದಾರೆ.

    ಹೌದು. ಹಾವೇರಿಯ ಕಾಟೇನಹಳ್ಳಿ ಗ್ರಾಮದ ಯಲ್ಲವ್ವ ಮತ್ತು ನಿಂಗಪ್ಪ ಕಳ್ಳಿಹಾಳ ಪ್ರೀತಿಸಿ 2007ರಲ್ಲಿ ಮದ್ವೆಯಾಗಿದ್ರು. ಅಂತರ್ಜಾತಿಯವರಾಗಿದ್ದರಿಂದ ಮನೆಯವರ ವಿರೋಧದಿಂದ 2010ರಲ್ಲಿ ಮತ್ತೆ ರಿಜಿಸ್ಟರ್ ಮದ್ವೆಯಾದ್ರು. ಇನ್ನೊಮ್ಮೆ ದೇವಸ್ಥಾನದಲ್ಲಿಯೂ ವಿವಾಹವಾದ್ರು. ಆದ್ರೆ, ಮೊದಲಿಗೆ ಕೆಲದಿನ ಚೆನ್ನಾಗಿದ್ದ ನಿಂಗಪ್ಪ ನಿನ್ನ ನಡತೆ ಸರಿಯಿಲ್ಲ ಅಂತ ಕುಟುಂಬದವರ ಜೊತೆ ಸೇರಿ ಯಲ್ಲವ್ವಳಿಗೆ ಕಿರುಕುಳ ಕೊಡಲು ಆರಂಭಿಸಿದ್ದಾನೆ.

    ಎಲ್‍ಐಸಿ ಏಜೆಂಟರ್ ಆಗಿರೋ ಪತಿ ನಿಂಗಪ್ಪ ತನ್ನ ತಮ್ಮ ಸತ್ತ ಮೇಲೆ, ಎಲ್‍ಐಸಿ ಹಣದ ಆಸೆಗೆ ತಮ್ಮನ ಪತ್ನಿಯನ್ನೇ ಮದ್ವೆಯಾಗಲು ಯತ್ನಿಸಿದ್ದಾನೆ. ರಾಜಿ ಪಂಚಾಯ್ತಿ ಬಳಿಕ ಹೊಂದಿಕೊಂಡು ಹೋಗ್ತಿದ್ದ ನಿಂಗಪ್ಪ ಒಂದು ವಾರದಿಂದ ನಾಪತ್ತೆಯಾಗಿದ್ದಾನೆ. ಹೀಗಾಗಿ ನನಗೆ ನನ್ನ ಪತಿಬೇಕು, ಹುಡಿಕಿಕೊಡಿ ಅಂತ ಗ್ರಾಮೀಣ ಪೊಲಿಸ್ ಠಾಣೆ ಮೆಟ್ಟಿಲೇರಿದ್ದಾರೆ. ಪತಿ ನಿಂಗಪ್ಪ ಬೇರೊಬ್ಬರಿಗೆ ಮೋಸ ಮಾಡಬಾರದು. ತನ್ನ ಗತಿ ಬೇರೆ ಯಾರಿಗೂ ಬರಬಾರದು ಅಂತ ಯಲ್ಲವ್ವ ಕಣ್ಣೀರಿಡುತ್ತಿದ್ದಾರೆ.