Tag: license

  • ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದ್ರೆ ಅಂಗಡಿ ಲೈಸೆನ್ಸ್ ರದ್ದು: ಈಶ್ವರ್ ಖಂಡ್ರೆ

    ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದ್ರೆ ಅಂಗಡಿ ಲೈಸೆನ್ಸ್ ರದ್ದು: ಈಶ್ವರ್ ಖಂಡ್ರೆ

    ಬೆಂಗಳೂರು: ದೀಪಾವಳಿ (Deepavali) ಹಬ್ಬಕ್ಕೆ ಹಸಿರು ಪಟಾಕಿ (Green Firecrackers) ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ (License)  ಕ್ಯಾನ್ಸಲ್ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಎಚ್ಚರಿಕೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ. ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಅಧಿಕಾರಿಗಳಿಗೆ ಸೂಚನೆ ಕೊಡುತ್ತಿದ್ದೇನೆ. ಯಾವುದೇ ಹಸಿರು ಪಟಾಕಿ ಬಿಟ್ಟು ಬೇರೆಯದಕ್ಕೆ ಅವಕಾಶ ಕೊಡಬಾರದು. ಮಳಿಗೆಗಳಿಗೆ ಹೋಗಿ ಪರಿಶೀಲನೆ ಮಾಡಬೇಕು. ಪರಿಸರ ಸ್ನೇಹಿ ಪಟಾಕಿ ಮಾಡುತ್ತೇವೆ ಅಂತ ಮುಚ್ಚಿಳಿಕೆ ಬರೆದು ಕೊಟ್ಟಿದ್ದಾರೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಪಟಾಕಿ ಮಾರಿದರೆ ಅವರ ಲೈಸೆನ್ಸ್ ರದ್ದು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?

    ಮಾಲಿನ್ಯ ನಿಯಂತ್ರಣ ಮಂಡಳಿಯವರು ಒಟ್ಟಾಗಿ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಲು ಮನವಿ ಮಾಡುತ್ತೇನೆ. ಅಧಿಕಾರಿಗಳು ಪರಿಸರ, ಪ್ರಕೃತಿಯನ್ನ ಕಟ್ಟುನಿಟ್ಟಾಗಿ ಸಂರಕ್ಷಣೆ ಮಾಡಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ, ಪರಿಸರ ಕೊಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.  ಇದನ್ನೂ ಓದಿ: ಕೊಪ್ಪಳದ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್

  • ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ

    ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ

    ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳ ಕಳ್ಳಸಾಗಣೆ (Child Trafficking) ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು (License) ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ಅಲ್ಲದೇ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕೋರ್ಟ್ ನಿಗದಿಪಡಿಸಿದೆ.

    ಉತ್ತರಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾ.ಜೆ.ಬಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ನಿರ್ದೇಶನಗಳನ್ನು ನೀಡಿದೆ. ಈ ಪ್ರಕರಣವನ್ನು ನಿಭಾಯಿಸಿದ ರೀತಿಗೆ ಅಲಹಾಬಾದ್ ಹೈಕೋರ್ಟ್ ಮತ್ತು ಉತ್ತರಪ್ರದೇಶ ಸರ್ಕಾರ ಎರಡನ್ನೂ ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: Gadag | ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ

    ಬಳಿಕ ಈ ಬಗ್ಗೆ ನಿರ್ದೇಶನಗಳನ್ನು ನೀಡಿದ ಪೀಠ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳ ವಿಚಾರಣೆಯನ್ನು ಆರು ತಿಂಗಳಲ್ಲಿ ಪೂರ್ಣಗೊಳಿಸಲು ಕೆಳ ನ್ಯಾಯಾಲಯಗಳಿಗೆ ನಿರ್ದೇಶನಗಳನ್ನು ನೀಡುವಂತೆ ದೇಶಾದ್ಯಂತದ ಹೈಕೋರ್ಟ್ಗಳಿಗೆ ನಿರ್ದೇಶನ ನೀಡಿತು. ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ನ್ಯಾಯಾಲಯದ ತಿರಸ್ಕಾರವೆಂದು ಪರಿಗಣಿಸಲಾಗುತ್ತದೆ ಎಂದು ಪೀಠ ತಿಳಿಸಿದೆ. ಇದನ್ನೂ ಓದಿ: ವರದಿಯೇ ಹೊರಗೆ ಬಾರದೇ ಜಾತಿಗಣತಿ ವಿರೋಧ ಮಾಡೋದು ಸರಿಯಲ್ಲ: ಸಂತೋಷ್ ಲಾಡ್

    ರಾಜ್ಯ ಸರ್ಕಾರಗಳು ನಮ್ಮ ವಿವರವಾದ ಶಿಫಾರಸುಗಳನ್ನು ಪರಿಶೀಲಿಸಿ, ಭಾರತೀಯ ಸಂಸ್ಥೆ ಸಲ್ಲಿಸಿದ ವರದಿಯನ್ನು ಅಧ್ಯಯನ ಮಾಡಿ, ಆದಷ್ಟು ಬೇಗ ಅದನ್ನು ಜಾರಿಗೆ ತರಬೇಕು. ಮಕ್ಕಳ ಕಳ್ಳಸಾಗಣೆ ಪ್ರಕರಣಗಳಲ್ಲಿ ಬಾಕಿ ಇರುವ ವಿಚಾರಣೆಯ ಸ್ಥಿತಿಗತಿಯನ್ನು ತಿಳಿಸಲು ದೇಶಾದ್ಯಂತದ ಹೈಕೋರ್ಟ್ಗಳಿಗೆ ನಿರ್ದೇಶನ ನೀಡಲಾಗಿದೆ. 6 ತಿಂಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ದಿನನಿತ್ಯದ ವಿಚಾರಣೆಯನ್ನು ನಡೆಸಲು ನಿರ್ದೇಶನಗಳನ್ನು ನೀಡಬೇಕು ಎಂದು ಪೀಠ ಆದೇಶಿಸಿತು. ಇದನ್ನೂ ಓದಿ: Chitradurga | ಗಂಜಲಗುಂಟೆ ಗ್ರಾಮದಲ್ಲಿ 3 ತಿಂಗಳಿಂದ ನೀಗದ ನೀರಿನ ಬವಣೆ – ಗ್ರಾಮಸ್ಥರು ಕಂಗಾಲು

    ಕಠಿಣ ಕಾನೂನುಗಳ ಹೊರತಾಗಿಯೂ ಭಾರತದಲ್ಲಿ ಮಕ್ಕಳ ಕಳ್ಳಸಾಗಣೆ ಮತ್ತು ಬಲವಂತದ ಬಾಲ ಕಾರ್ಮಿಕ ಪದ್ಧತಿ ಹೆಚ್ಚುತ್ತಿದೆ. 2020ರಿಂದ ಸುಮಾರು 36,000 ಮಕ್ಕಳು ಪತ್ತೆಯಾಗುತ್ತಿಲ್ಲ ಎಂದು ಕೇಂದ್ರವು ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಮುಂಬೈ ಪೊಲೀಸ್

  • ನಟ ನರೇಶ್-ಪವಿತ್ರಾಗೆ ಶಾಕ್ : ಗನ್ ಲೈಸೆನ್ಸ್ ಕೇಳಿದ ನಟ

    ನಟ ನರೇಶ್-ಪವಿತ್ರಾಗೆ ಶಾಕ್ : ಗನ್ ಲೈಸೆನ್ಸ್ ಕೇಳಿದ ನಟ

    ತೆಲುಗಿನ ನಟ ನರೇಶ್ (Naresh) ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್ (Pavitra Lokesh) ಒಟ್ಟಾಗಿ ನಟಿಸಿದ್ದ ಮತ್ತೆ ಮದುವೆಗೆ ಬ್ರೇಕ್ ಬಿದ್ದಿದೆ. ಮೊನ್ನೆಯಷ್ಟೇ ಈ ಸಿನಿಮಾ ಪ್ರೈಮ್ ನಲ್ಲಿ ರಿಲೀಸ್ ಆಗಿತ್ತು. ಇದೀಗ ದಿಢೀರ್ ಅಂತ ನಾಪತ್ತೆಯಾಗಿದೆ. ಈ ನಡುವೆಯೇ ನರೇಶ್ ತಮ್ಮ ಆತ್ಮ ರಕ್ಷಣೆಗಾಗಿ ಗನ್ (Gun) ಲೈಸೆನ್ಸ್ ನೀಡುವಂತೆ ಅರ್ಜಿ ಹಾಕಿಕೊಂಡಿದ್ದಾರೆ.

    ತನ್ನನ್ನೇ ಗುರಿಯಾಗಿರಿಸಿಕೊಂಡು ಮತ್ತೆ ಮದುವೆ ಸಿನಿಮಾ ಮಾಡಿದ್ದಾರೆ ಎಂದು ನರೇಶ್ ಪತ್ನಿ ರಮ್ಯಾ ರಘುಪತಿ (Ramya Raghupathi) ಕೋರ್ಟ್ ಮೆಟ್ಟಿಲು ಏರಿದ್ದರು. ತನ್ನ ಸಂಸಾರದ ಬಗ್ಗೆ ಅವಹೇಳನ ಮಾಡುವಂತಹ ದೃಶ್ಯಗಳನ್ನು ಅದರಲ್ಲಿ ಹಾಕಿದ್ದಾರೆ ಎಂದು ರಮ್ಯಾ ಮಾತನಾಡಿದ್ದರು. ಈ ಸಿನಿಮಾ ಬಿಡುಗಡೆ ಆಗದಂತೆ ತಡೆಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಮಾನ್ಯವಾಗಿರಲಿಲ್ಲ.

    ಅಮೆಜಾನ್ ಪ್ರೈಮ್ ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಆಗುತ್ತಿದ್ದಂತೆಯೇ ಮತ್ತೆ ಕೋರ್ಟ್ ಮೆಟ್ಟಿಲು ಏರಿದ್ದ ರಮ್ಯಾ, ಓಟಿಟಿಯಿಂದ ಆ ಸಿನಿಮಾವನ್ನು ತೆಗೆದುಹಾಕುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಓಟಿಟಿಯಲ್ಲಿ ಮತ್ತೆ ಮದುವೆ ಸಿನಿಮಾವನ್ನು ತೆಗೆದುಹಾಕಲಾಗಿದೆ. ಈ ಮೂಲಕ ನರೇಶ್ ಅವರಿಗೆ ಹಿನ್ನೆಡೆಯಾಗಿದೆ. ಇದನ್ನೂ ಓದಿ:ಪ್ಯಾರಿಸ್‌ನ ರೊಮ್ಯಾಂಟಿಕ್‌ ಫೋಟೋ ಹಂಚಿಕೊಂಡ ಅದಿತಿ ಪ್ರಭುದೇವ

    ಇತ್ತ ಥಿಯೇಟರ್ ನಲ್ಲೂ ಸಿನಿಮಾ ಓಡಲಿಲ್ಲ. ಅಂದುಕೊಂಡಷ್ಟು ಕಾಸೂ ಮಾಡಲಿಲ್ಲ. ಹಲವಾರು ಕೋಟಿ ಖರ್ಚು ಮಾಡಿ ತಯಾರಿಸಿದ್ದ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಳ್ಳಲಿಲ್ಲ. ತೆಲುಗು ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ರಿಲೀಸ್ ಮಾಡಿದ್ದರೂ, ಎರಡೂ ಭಾಷೆಗಳ ಪ್ರೇಕ್ಷಕರು ಸಿನಿಮಾ ನೋಡಲಿಲ್ಲ. ಹಾಗಾಗಿ ನರೇಶ್ ಅವರಿಗೆ ಭಾರೀ ಪೆಟ್ಟು ಬಿದ್ದಿತ್ತು.

    ಸಿನಿಮಾ ಸೋತ ನೋವು ಒಂದು ಕಡೆಯಾದರೆ, ರಮ್ಯಾ ಅವರು ನಿರಂತರ ಬೆನ್ನುಬಿದ್ದಿದ್ದಾರೆ. ಹಾಗಾಗಿ ತಮಗೆ ಭಯದ ವಾತಾವರಣ ಕಾಡುತ್ತಿದೆ ಎನ್ನುವುದು ನರೇಶ್ ವಾದ. ಹೀಗಾಗಿಯೇ ತಮಗೆ ಜೀವ ಬೆದರಿಕೆಯಿದೆ ಎಂದೂ, ಆತ್ಮರಕ್ಷಣೆಗಾಗಿ ಗನ್ ಪರವಾನಿಗೆ ನೀಡುವಂತೆ ಶ್ರೀಸತ್ಯಸಾಯಿ ಜಿಲ್ಲಾ ಎಸ್ಪಿ ಮಾಧವರೆಡ್ಡಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ತಾವು ನಕ್ಸಲ್ಸ್ ಹಿಟ್ ಲಿಸ್ಟ್ ನಲ್ಲಿ ಇದ್ದೆ ಎನ್ನುವುದನ್ನು ನೆನಪಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾನ್ಸನ್ ಬೇಬಿ ಪೌಡರ್ ಪರವಾನಗಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ

    ಜಾನ್ಸನ್ ಬೇಬಿ ಪೌಡರ್ ಪರವಾನಗಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ

    ಮುಂಬೈ: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಅಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್‌ನ ಬೇಬಿ ಪೌಡರ್(Johnson’s Baby Powder) ಉತ್ಪಾದನಾ ಪರವಾನಗಿಯನ್ನು(License) ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ(FDA) ರದ್ದುಗೊಳಿಸಿದೆ.

    ಜಾನ್ಸನ್ ಕಂಪನಿಯ ಉತ್ಪನ್ನವಾದ ಬೇಬಿ ಪೌಡರ್ ಮಕ್ಕಳ ಚರ್ಮದ ಮೇಲೆ ಪರಿಣಾಮ ಬೀರಬಹುದು. ಪ್ರಯೋಗಾಲಯದ ಪರೀಕ್ಷೆಯ ಸಮಯದಲ್ಲಿ ಇದರ ಪುಡಿಯ ಮಾದರಿ ಮಕ್ಕಳ ಚರ್ಮದ ಪಿಹೆಚ್ ಮೌಲ್ಯಕ್ಕೆ ಅನುಗುಣವಾಗಿಲ್ಲ ಎಂದು ಶುಕ್ರವಾರ ತಿಳಿಸಿದೆ. ಇದನ್ನೂ ಓದಿ: ತಿರುಮಲಕ್ಕೆ ಭಾವಿ ಸೊಸೆಯೊಂದಿಗೆ ಮುಖೇಶ್ ಅಂಬಾನಿ ಭೇಟಿ – ದೇವಾಲಯಕ್ಕೆ 1.5 ಕೋಟಿ ದೇಣಿಗೆ

     

    ಉತ್ಪನ್ನದ ಗುಣಮಟ್ಟದ ತಪಾಸಣೆಯ ಉದ್ದೇಶಕ್ಕಾಗಿ ಪುಣೆ ಹಾಗೂ ನಾಸಿಕ್‌ನಿಂದ ಎಫ್‌ಡಿಎ ಜಾನ್ಸನ್ ಬೇಬಿ ಪೌಡರ್‌ನ ಮಾದರಿಗಳನ್ನು ಪಡೆದುಕೊಂಡಿದೆ. ಗುಣಮಟ್ಟದ ಪರೀಕ್ಷೆ ವೇಳೆ ಅದು ಐಎಸ್ 5339:2004 ರಷ್ಟು ನಿರ್ದಿಷ್ಟತೆಯನ್ನು ಪಡೆದುಕೊಂಡಿರದ ಕಾರಣ ಅದು ಮಕ್ಕಳ ತ್ವಚೆಗೆ ಯೋಗ್ಯವಾಗಿಲ್ಲ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಮಕ್ಕಳಲ್ಲಿ ವಿಪರೀತ ಜ್ವರ – ಸೆ.25 ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

    ಇದೀಗ ಎಫ್‌ಡಿಎ ಡ್ರಗ್ಸ್ ಕಾಸ್ಮೆಟಿಕ್ಸ್ ಆಕ್ಟ್ 1940 ಹಾಗೂ ನಿಯಮಗಳ ಅಡಿಯಲ್ಲಿ ಕಂಪನಿಗೆ ಶೋಕಾಸ್ ನೋಟಿಸ್ ನೀಡಿದೆ. ಮಾತ್ರವಲ್ಲದೇ ಮಾರುಕಟ್ಟೆಯಲ್ಲಿರುವ ಉತ್ಪನ್ನಗಳ ಸ್ಟಾಕ್ ಅನ್ನು ಹಿಂಪಡೆಯುವಂತೆ ಸೂಚನೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಮದ್ಯಪ್ರಿಯರಿಗೆ ಶಾಕ್‌ – ಇಂದಿನಿಂದ ಮದ್ಯ ಕೊರತೆ ಸಾಧ್ಯತೆ

    ಮದ್ಯಪ್ರಿಯರಿಗೆ ಶಾಕ್‌ – ಇಂದಿನಿಂದ ಮದ್ಯ ಕೊರತೆ ಸಾಧ್ಯತೆ

    ನವದೆಹಲಿ: ದೆಹಲಿಯ ಬಹುತೇಕ ಖಾಸಗಿ ಮದ್ಯದಂಗಡಿಗಳ ಪರವಾನಗಿ ಅವಧಿಯು ಮುಕ್ತಾಯಗೊಳ್ಳಲಿದ್ದು, ಅವುಗಳನ್ನು ಬಂದ್‌ ಮಾಡಲು ನಿರ್ಧರಿಸಿರುವುದರಿಂದ ರಾಷ್ಟ್ರರಾಜಧಾನಿಯಲ್ಲಿ ಮದ್ಯದ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ದೆಹಲಿ ಸರ್ಕಾರದ ಮೂಲಗಳು ತಿಳಿಸಿರುವ ಪ್ರಕಾರ, ಮದ್ಯದ ಅಂಗಡಿಗಳು ಆಗಸ್ಟ್‌ ಅಂತ್ಯದ ವರೆಗೆ ತೆರೆದಿರಲು ಅವಕಾಶ ನೀಡುತ್ತವೆ ಎಂದು ಹೇಳಲಾಗಿದೆ. ಹಳೆಯ ಅಬಕಾರಿ ನೀತಿಯ ಆಡಳಿತಕ್ಕೆ ಮರಳಲು ನಿರ್ಧರಿಸಿರುವ ಸರ್ಕಾರ ತನ್ನದೇ ಏಜೆನ್ಸಿಗಳ ಮೂಲಕ ಮಳಿಗೆಗಳನ್ನು ನಡೆಸಲು ನಿರ್ಧರಿಸಿದೆ. ಈ ಪ್ರಕ್ರಿಯೆಯಿಂದಾಗಿ ಹೊಸ ಅಂಗಡಿಗಳನ್ನು ತೆರೆಯಲು ಸ್ವಲ್ಪ ಕಾಲ ತೆಗೆದುಕೊಳ್ಳುತ್ತದೆ. ಹಾಗಾಗಿ ಮದ್ಯದ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ದೊಡ್ಡಗೌಡರ ಮೇಲೆ ಯಾರದ್ದೋ ಕೆಟ್ಟ ಕಣ್ಣು ಬಿದ್ದಿದೆ – ಹೆಚ್‌ಡಿಕೆ, ರೇವಣ್ಣ ಕಣ್ಣೀರು

    ದೆಹಲಿ ಸರ್ಕಾರ ಹಳೆಯ ಅಬಕಾರಿ ನೀತಿಗೆ ಮರಳುವ ಮೂಲಕ 6 ತಿಂಗಳ ಕಾಲ ಸ್ವತಃ ಮಳಿಗೆಗಳನ್ನು ನಡೆಸುವುದಾಗಿ ಶನಿವಾರ ಹೇಳಿತ್ತು. 2021-22ರ ಅಬಕಾರಿ ನೀತಿ ಅಡಿಯಲ್ಲಿ ದೆಹಲಿಯಲ್ಲಿ 468 ಚಿಲ್ಲರೆ ಮದ್ಯದಂಗಡಿಗಳು ನಡೆಯುತ್ತಿದ್ದು, ಜುಲೈ 31ರ ನಂತರ ಪರವಾನಗಿ ಅವಧಿ ಮುಕ್ತಾಯವಾಗಲಿದೆ. ಇನ್ನೂ ಕೆಲ ಅಂಗಡಿಗಳಲ್ಲಿ ಬಿಯರ್‌ಗಳು ಮಾತ್ರವೇ ಲಭ್ಯವಾಗುತ್ತಿದ್ದು, ಜನರು ಅಗತ್ಯವಿದ್ದಷ್ಟು ಪಡೆದುಕೊಳ್ಳುತ್ತಿದ್ದಾರೆ. ಆದರೆ ತಮ್ಮ ನೆಚ್ಚಿನ ಬ್ರ್ಯಾಂಡ್‌ ಕೇಳಿಕೊಂಡು ಬರುವವರು ಮಾತ್ರ ನಿರಾಶೆಯಿಂದ ಹಿಂದಿರುಗುತ್ತಿದ್ದಾರೆ ಎಂದು ಮದ್ಯದಂಗಡಿ ಮಾಲೀಕರು ಹೇಳುತ್ತಿದ್ದಾರೆ. ಇದನ್ನೂ ಓದಿ: Commonwealth Cricket: ಮಂದಾನ ಬ್ಯಾಟಿಂಗ್‌ಗೆ ಮಂಕಾದ ಪಾಕ್ – ಭಾರತದ ವನಿತೆಯರಿಗೆ ಸುಲಭ ಜಯ

    ದೆಹಲಿಯ ಹಳೆಯ ಮದ್ಯ ನೀತಿ ಏನು?
    ದೆಹಲಿಯ ಮೂಲ ಮದ್ಯ ನೀತಿ ಪ್ರಕಾರ, ಮದ್ಯ ಮಾರಾಟದಲ್ಲಿ ಯಾರೂ ಕೂಡ ರಿಯಾಯಿತಿ ಕೊಡುವಂತಿಲ್ಲ ಎಂದಿತ್ತು. ಮದ್ಯ ಮಾರಾಟದಲ್ಲಿ ಖಾಸಗಿಗಿಂತ ಸರ್ಕಾರಿ ಮಳಿಗೆಗಳೇ ಹೆಚ್ಚಿದ್ದವು. ಕರ್ನಾಟಕದಲ್ಲಿ ಎಂಎಸ್‌ಐಎಲ್ ಇದ್ದಂತೆ ದೆಹಲಿಯಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರಿ ಸ್ವಾಮ್ಯದ 4 ನಿಗಮಗಳಿವೆ. 2021ಕ್ಕೆ ಮುನ್ನ ದೆಹಲಿಯಲ್ಲಿ 864 ಮದ್ಯದಂಗಡಿಗಳಿದ್ದವು. ಅದರಲ್ಲಿ ಸರ್ಕಾರಿ ಸಂಸ್ಥೆಗಳ ಮಳಿಗೆಗಳೇ 475 ಇದ್ದವು. ದೆಹಲಿಯಲ್ಲಿ ಸಮರ್ಪಕವಾದ ಮದ್ಯ ನೀತಿ ಇರಲಿಲ್ಲ. ಆದ ಕಾರಣ ಸರ್ಕಾರಿ ಸ್ವಾಮ್ಯದ ಲಿಕ್ಕರ್ ಶಾಪ್‌ಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಲ್ಮೆಟ್ ಧರಿಸದಿದ್ರೆ 3 ತಿಂಗಳು ಲೈಸನ್ಸ್ ರದ್ದು

    ಹೆಲ್ಮೆಟ್ ಧರಿಸದಿದ್ರೆ 3 ತಿಂಗಳು ಲೈಸನ್ಸ್ ರದ್ದು

    ಮುಂಬೈ: ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲಿದ್ದರೆ 500 ರೂ. ದಂಡ ವಿಧಿಸುವ ಜೊತೆಗೆ 3 ತಿಂಗಳು ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಮುಂಬೈ ಪೊಲೀಸ್ ಇಲಾಖೆ ಮುಂದಾಗಿದೆ.

    helmet isi mark

    ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಪ್ರಕಾರ ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಇನ್ನೂ 15 ದಿನಗಳಲ್ಲಿ ಈ ನಿಯಮ ಅನುಷ್ಠಾನಕ್ಕೆ ಬರಲಿದೆ ಎಂದು ಮುಂಬೈ ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟ್ವೀಟ್ ಮೂಲಕವೂ ಪ್ರಕಟಣೆಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪ್ರೇಮಕ್ಕೆ ವಿರೋಧ – ಥಳಿಸಿ, ವಿಷಕುಡಿಸಿ ಯುವಕನನ್ನು ಕೊಂದೇ ಬಿಟ್ರು

    ಸಾಂದರ್ಭಿಕ ಚಿತ್ರ

    ಇಂದು ನಡೆದ ಫೇಸ್‌ಬುಕ್ ಲೈವ್ ಕಾರ್ಯಕ್ರಮದಲ್ಲಿ ಮಾತನಾಡಿದ ಮುಂಬೈ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ, ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸ್ಟೇರಿಂಗ್ ಕಟ್ ಆಗಿ ಕೆರೆಗೆ ಉರುಳಿದ ಗೂಡ್ಸ್ ವಾಹನ

    ಈಗಾಗಲೇ ಹೆಲ್ಮೆಟ್ ಧರಿಸದೇ ನಿಯಮ ಉಲ್ಲಂಘಿಸಿದವರ ವಿರುದ್ಧ 75 ಸಾವಿರ ಚಲನ್‌ಗಳು ಬಾಕಿ ಉಳಿದಿವೆ. ಹಾಗಾಗಿ ಹೊಸ ನಿಯಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

  • ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

    ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

    ತುಮಕುರು: ಜನರ ಜೀವವನ್ನು ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಪಾವಗಡದಿಂದ ತುಮಕೂರು ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್‍ಗಳನ್ನು ರದ್ದು ಮಾಡುತ್ತೇವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳನ್ನು ನಾನು ತನಿಖೆಗೆ ಕಳುಹಿಸಿಕೊಟ್ಟಿದ್ದೆ. ತನಿಖೆಯ ಪ್ರಾಥಮಿಕ ಹಂತದಲ್ಲಿ ನನಗೆ ಬಂದಿರುವ ವರದಿಯ ಪ್ರಕಾರ ಲೋಡ್ ಹೆಚ್ಚಾಗಿತ್ತು ಎನ್ನಲಾಗಿದೆ. ಬಸ್ ಟಾಪ್ ಮೇಲೆ ಕೂಡಾ ಜನರು ಕುಳಿತುಕೊಂಡಿದ್ದರು. ಈ ವೇಳೆ ಬಸ್ ಯಾವ ಸ್ಪೀಡ್‍ನಲ್ಲಿ ಓಡಿಸಬೇಕು ಎನ್ನುವ ಜ್ಞಾನ ಚಾಲಕನಿಗೆ ಇರಬೇಕಾಗಿತ್ತು. ಚಾಲಕನೊಬ್ಬನಿಗೆ ಶಿಕ್ಷೆ ಆಗಬೇಕಾದದ್ದು ಅಲ್ಲ, ಖಾಸಗಿ ಬಸ್ ಮಾಲೀಕರು ಇದಕ್ಕೆ ಹೊಣೆಯಾಗಿರುತ್ತಾರೆ. ಆ ಭಾಗದಲ್ಲಿ ಸಂಚರಿಸುವ ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡಿದರೆ ಮಾತ್ರ ಅವರಿಗೆ ಬುದ್ದಿ ಬರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

    ಇಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಹೊಣೆ ಯಾರು? ಬೇಜವಬ್ದಾರಿತನದಿಂದ ಕಾನೂನನ್ನು ಉಲ್ಲಂಘಿಸಲು ಅವರಿಗೆ ಯಾರು ಅಧಿಕಾರ ಕೊಟ್ಟಿದ್ದಾರೆ. ನಾನು ಆ ಭಾಗದಲ್ಲಿ ಸಂಚರಿಸುವ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇನೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

    ಖಾಸಗಿ ಅವರು ಬದುಕಬೇಕು. ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದ ಭಾಗಗಳಿಗೆ ಸಂಚರಿಸಬೇಕು. ಅವರು ಸರ್ಕಾರದ ನಿಯಮಾನುಸಾರ ಸಂಚರ ಮಾಡಬೇಕು. ಆದರೆ ಕೇವಲ ಲಾಭದಾಯಕ ಕಾರಣದಿಂದ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಜನರ ಪ್ರಾಣಕ್ಕೆ ಕುತ್ತು ತರುವಂತೆ ಮಾಡಿದರೆ, ಕ್ಷಮಿಸುವ ಮಾತಿಲ್ಲ ಎಂದು ಖಾಸಗಿ ಬಸ್ ಮಾಲೀಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಡ್ರೈವಿಂಗ್ ಲೈಸನ್ಸ್ ಪಡೆದ ದೇಶದ ಮೊದಲ ಕುಬ್ಜ ವ್ಯಕ್ತಿ

    ಡ್ರೈವಿಂಗ್ ಲೈಸನ್ಸ್ ಪಡೆದ ದೇಶದ ಮೊದಲ ಕುಬ್ಜ ವ್ಯಕ್ತಿ

    ಹೈದರಾಬಾದ್: 3 ಅಡಿ ಎತ್ತರದ ವ್ಯಕ್ತಿ ಡ್ರೈವಿಂಗ್ ಲೈಸನ್ಸ್ ಪಡೆದಿದ್ದು, ಈ ಮೂಲಕ ದೇಶದ ಮೊದಲ ಕುಬ್ಜವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಹೈದರಾಬಾದ್ ಮೂಲದ 42 ವರ್ಷದ ಗಟ್ಟಿಪಲ್ಲಿ ಶಿವಪಾಲ್ ಎಂಬಾತ ಕೇವಲ 3 ಅಡಿ ಎತ್ತರವಿದ್ದರೂ ಚಾಲನಾ ಪರವಾನಿಗೆ ಪಡೆದಿದ್ದಾರೆ. ಚಾಲನಾ ಪರವಾನಿಗೆ ಪಡೆಯಲು ಎಷ್ಟೆಲ್ಲಾ ನಿಮಯಗಳಿವೆ. ಇಷ್ಟು ಎತ್ತರ, ಇಷ್ಟು ವಯಸ್ಸು ಈ ಎಲ್ಲಾ ನಿಯಮಗಳನ್ನು ಪಾಲಿಸಿದರೂ ಪರವಾನಿಗೆ ಸಿಗುವುದು ಕಷ್ಟವಿರುವಾಗ ಇವರು ಪಡೆದುಕೊಳ್ಳುವ ಮೂಲಕವಾಗಿ ಲೈಸನ್ಸ್ ಪಡೆದ ದೇಶದ ಮೊದಲ ಕುಬ್ಜ ಎನ್ನುವ ಹೆಗ್ಗಳಿಕೆ ಮತ್ತು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಈ ವಿಚಾರವಾಗಿ ಮಾತನಾಡಿದ ಶಿವಪಾಲ್, 2004ರಲ್ಲಿ ಪದವಿ ಶಿಕ್ಷಣವನ್ನು ಮುಗಿಸಿದೆ. ಜನರು ನನ್ನ ಎತ್ತರದ ಬಗ್ಗೆ ವ್ಯಂಗ್ಯವಾಡುತ್ತಿದ್ದರು. ನನ್ನ ಹೆಂಡತಿ ಜೊತೆ ಹೊರಗೆ ಹೋದಾಗ ಕೆಟ್ಟದಾಗಿ ಮಾತನಾಡುತ್ತಿದ್ದರು. ಇದರಿಂದ ನೋವಾಗಿ ಸ್ವತಃ ಕಾರು ತೆಗೆದುಕೊಳ್ಳಲು ನಿರ್ಧರಿಸಿದೆ. ಕುಬ್ಜರು ಕಾರು ಚಲಾಯಿಸುವುದು ಹೇಗೆಂದು ಸೋಶಿಯಲ್ ಮೀಯಾದಲ್ಲಿ ಕೆಲವು ವೀಡಿಯೋಗಳನ್ನು ನೋಡಿದೆ. ನನ್ನ ಎತ್ತರಕ್ಕೆ ತಕ್ಕಂತೆ ಕಾರಿನ ಭಾಗಗಳನ್ನು ಮಾರ್ಪಡಿಸಿಕೊಂಡೆ. ಬಳಿಕ ಸ್ನೇಹಿತನ ಸಹಾಯದಿಂದ ಕಾರು ಚಲಾಯಿಸಲು ಕಲಿತುಕೊಂಡೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

    ಚಾಲನಾ ಪರವಾನಿಗೆಗಾಗಿ ಸಾರಿಗೆ ಇಲಾಖೆಗೆ ಅರ್ಜಿ ಹಾಕಿ, ಅಧಿಕಾರಿಗಳ ಸಮ್ಮುಖದಲ್ಲೇ ಕಾರು ಚಲಾಯಿಸಿದೆ. ಬಳಿಕ 3 ತಿಂಗಳ ಕಲಿಕಾ ಪರವಾನಿಗೆ ಪಡೆದುಕೊಂಡೆ. ಈಗ ಚಾಲನಾ ಪರವಾನಿಗೆ ಗಿಟ್ಟಿಸಿಕೊಂಡಿದ್ದೇನೆ. ಹೈದರಾಬಾದ್‍ನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೇನೆ. ಕಾರನ್ನು ನಾನೇ ಚಲಾಯಿಸಿಕೊಂಡು ಹೋಗುತ್ತೇನೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್‍ಗೆ ನಾಮಿ ನಿರ್ದೇಶನಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕುಬ್ಜರಿಗಾಗಿ ಡ್ರೈವಿಂಗ್ ಶಾಲೆಯನ್ನು ತೆರೆಯುವ ಯೋಚನೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

    ನಮ್ಮ ಕುಟುಂಬದಲ್ಲಿ ನಾನು ಹಿರಿಯ ಮಗಬಾಗಿದ್ದು, ನಾನು ಮಾತ್ರ ಕುಬ್ಜನಾಗಿದ್ದೇನೆ. ನಾನು ಅಂಗವಿಕಲನಾಗಿದ್ದರಿಂದ ನನಗೆ ಯಾರೂ ಕೆಲಸ ನೀಡಲು ಜನರು ಸಿದ್ಧರಿರಲಿಲ್ಲ. ಸ್ನೇಹಿತರೊಬ್ಬರ ಮೂಲಕ ಖಾಸಗಿ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಂಡು ಈಗ ಕಳೆದ 20 ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.

  • ಪಾಕಿಸ್ತಾನದಲ್ಲಿ ಮಹಿಳೆಯರು ಬೈಕ್ ಓಡ್ಸಂಗಿಲ್ಲ- ಲೈಸೆನ್ಸ್ ನೀಡದ ಅಧಿಕಾರಿ ವಿರುದ್ಧ ಮಹಿಳೆ ಗರಂ

    ಪಾಕಿಸ್ತಾನದಲ್ಲಿ ಮಹಿಳೆಯರು ಬೈಕ್ ಓಡ್ಸಂಗಿಲ್ಲ- ಲೈಸೆನ್ಸ್ ನೀಡದ ಅಧಿಕಾರಿ ವಿರುದ್ಧ ಮಹಿಳೆ ಗರಂ

    – ಟ್ವಿಟ್ಟರ್ ನಲ್ಲಿ ಇಮ್ರಾನ್ ಖಾನ್ ತರಾಟೆಗೆ ತೆಗೆದುಕೊಂಡ ಮಹಿಳೆ

    ಇಸ್ಲಾಮಾಬಾದ್: ಬೈಕ್ ಓಡಿಸಲು ಲೈಸೆನ್ಸ್ ಕೇಳಿದ್ದಕ್ಕೆ ಕಿರಿಕ್ ಮಾಡಿದ ಅಧಿಕಾರಿ ವಿರುದ್ಧ ಮಹಿಳೆಯೊಬ್ಬರು ಪಾಕ್ ಪ್ರಧಾನಿಗೆ ದೂರು ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಬೈಕ್ ಓಡಿಸಲು ಲೈಸೆನ್ಸ್ ಕೇಳಿದ್ದಕ್ಕೆ ಮಹಿಳೆಯಾಗಿ ಬೈಕ್ ಓಡಿಸುತ್ತಿಯಾ ಎಂದು ಪಾಕಿಸ್ತಾನ ಅಧಿಕಾರಿ ಅಧಿಕಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಮಹಿಳೆ ಗರಂ ಆಗಿದ್ದು, ಟ್ವೀಟ್ ಮಾಡಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ.

    ವಿಶ್ವಾದ್ಯಂತ ಮಹಿಳಾ ಹಕ್ಕುಗಳಿಗಾಗಿ ಹೋರಾಟ ನಡೆಯುತ್ತಿರುವಾಗ, ಬದಲಾವಣೆಯಾಗುತ್ತಿರುವಾಗ ಪಾಕಿಸ್ತಾನದಲ್ಲಿ ಇನ್ನೂ ಶಿಲಾಯುಗದ ರೀತಿಯ ಸಂಸ್ಕೃತಿ ಇದೆ. ಈ ಘಟನೆಯಿಂದಾಗಿ ಇದೀಗ ಹೊರ ಬಿದ್ದಿದೆ. ಇತ್ತೀಚೆಗೆ ಕರಾಚಿಯಲ್ಲಿ ಮಹಿಳೆಯೊಬ್ಬರು ಲೈಸೆನ್ಸ್ ಪಡೆಯಲು ಸರ್ಕಾರಿ ಕಚೇರಿಗೆ ತೆರಳಿದಾಗ ಅಲ್ಲಿನ ಅಧಿಕಾರಿ ಮಹಿಳೆಯಾಗಿ ಬೈಕ್ ಓಡಿಸುತ್ತೀಯಾ ಎಂದು ಬೈದು ಕಳುಹಿಸಿದ್ದಾರೆ. ಗೆಟ್ ಔಟ್, ಮಹಿಳೆಯರಿಗೆ ಪರವಾನಗಿ ನೀಡುವುದಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ.

    ಮಹಿಳೆಯನ್ನು ಶಿರೀನ್ ಫೆರೋಝಿಪುರ್ವಾಲ್ಲಾ ಎಂದು ಗುರುತಿಸಲಾಗಿದ್ದು, ಘಟನೆ ಕುರಿತು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ಪಾಕಿಸ್ತಾನದಲ್ಲಿ ಒಬ್ಬ ಮಹಿಳೆ ಬೈಕ್ ಓಡಿಸಬಾರದೇ? ಸರ್ಕಾರಿ ಕಚೇರಿಗೆ ಹೋಗಿ ಬೈಕ್ ಓಡಿಸಲು ಪರವಾನಗಿ ಕೇಳಿದರೆ, ಮಹಿಳೆಯರಿಗೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ನಾನು ಉತ್ತರಿಸಿ ಹುಡುಗಿಯರಿಗೆ ಬೈಕ್ ಲೈಸೆನ್ಸ್ ನೀಡುವುದಿಲ್ಲವೇ, ನೀವು ಮಾತ್ರ ಗಾಡಿ ಓಡಿಸಬೇಕೆ? ಇದ್ಯಾವ ರೀತಿಯ ನಿಯಮ? ದಯವಿಟ್ಟು ಪ್ರತಿಕ್ರಿಯಿಸಿ ಎಂದು ಬರೆದುಕೊಂಡಿದ್ದಾರೆ.

    ಅಧಿಕಾರಿಗಳು ನಿರಾಕರಿಸುತ್ತಿದ್ದಂತೆ ಮಹಿಳೆ ಹೊರ ಬಂದಿದ್ದು, ಇದನ್ನು ಖಚಿತಪಡಿಸಿಕೊಳ್ಳಲು ಲೈಸೆನ್ಸ್ ಆಫೀಸ್‍ನಲ್ಲಿ ಕೆಲಸ ಮಾಡುವ ಮತ್ತೊಬ್ಬ ತನ್ನ ಪರಿಚಿತನಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರೂ ಇದೇ ಉತ್ತರ ನೀಡಿದ್ದು, ನಾವು ಮಹಿಳೆಯರಿಗೆ ಬೈಕ್ ಲೈಸೆನ್ಸ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಅಧಿಕಾರಿಗಳ ಈ ಪುರಾತನ ವರ್ತನೆ ವಿರುದ್ಧ ಫೆರೋಝಿಪುರ್ವಾಲ್ಲಾ ಟ್ವಿಟ್ಟರ್ ಬರೆದುಕೊಂಡ ನಂತರ ಅನೇಕ ಮಹಿಳೆಯರು ಒತ್ತಡ ಹೇರಿದ ಬಳಿಕ ಬೈಕ್ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ತಮ್ಮ ಕೆಲಸವನ್ನು ಯಾಕೆ ಮಾಡುತ್ತಿಲ್ಲ ಎಂದು ಮಹಿಳೆ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಫೆರೋಝಿಪುರ್ವಾಲ್ಲಾ ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡ ಎರಡು ದಿನದ ಬಳಿಕ ಕ್ಲಿಫ್ಟೋನ್ ಡಿಎಸ್‍ಪಿ ಅವರನ್ನು ಸಂಪರ್ಕಿಸಿದ್ದಾರೆ. ಅಲ್ಲದೆ ಅವರನ್ನು ಲೈಸೆನ್ಸ್ ಆಫೀಸ್‍ಗೆ ಕರೆಸಿಕೊಂಡಿದ್ದಾರೆ. ಕೊನೆಗೂ ಹೆಚ್ಚಿನ ಸಮಸ್ಯೆಯಾಗದಂತೆ ಲೈಸೆನ್ಸ್ ಪಡೆದುಕೊಂಡೆ. ಸಮಸ್ಯೆ ಬಗೆಹರಿಸುವಂತೆ ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.

  • ಎರಡಕ್ಕಿಂತ ಹೆಚ್ಚು ಬಂದೂಕು ಹೊಂದಿರುವವರು ಹಿಂದಿರುಗಿಸಿ

    ಎರಡಕ್ಕಿಂತ ಹೆಚ್ಚು ಬಂದೂಕು ಹೊಂದಿರುವವರು ಹಿಂದಿರುಗಿಸಿ

    – ಲೈಸೆನ್ಸ್ ಶಸ್ತ್ರಾಸ್ತ್ರ ಪಡೆದವರು ಹಿಂದಿರುಗಿಸಲು ಸೂಚನೆ

    ಧಾರವಾಡ: ಶಸ್ತ್ರಾಸ್ತ್ರ ತಿದ್ದುಪಡಿ ಕಾಯ್ದೆ 2019ರ ಅನ್ವಯ ಕೇವಲ ಎರಡು ಬಂದೂಕುಗಳನ್ನು ಮಾತ್ರ ಹೊಂದಬಹುದಾಗಿದ್ದು, ಪರವಾನಗಿ ಮೂಲಕ ಎರಡಕ್ಕಿಂತ ಹೆಚ್ಚು ಬಂದೂಕು ಪಡೆದವರು ಹಿಂದಿರುಗಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

    ಈ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದು, ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆ 2019ರ ಕಲಂ 3ರ ಅನ್ವಯ ಇತ್ತೀಚೆಗೆ ತಿದ್ದುಪಡಿ ಮಾಡಿದ ನಿಬಂಧನೆಯಡಿಯಲ್ಲಿ ಬಂದೂಕು ಪರವಾನಿಗೆಯಲ್ಲಿ ಲೇಸೆನ್ಸ್ ದಾರರು ಎರಡು ಆಯುಧಗಳನ್ನು ಮಾತ್ರ ಹೊಂದಲು ಅವಕಾಶವಿದೆ. ಮೂರನೇ ಬಂದೂಕಿಗೆ ಅವಕಾಶವಿಲ್ಲ. ಹೀಗಾಗಿ ಪರವಾನಿಗೆದಾರರು ಮೂರನೇ ಆಯುಧವನ್ನು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಜಮೆ ಮಾಡಲು ನಿರ್ದೇಶನ ನೀಡಲಾಗಿದೆ.

    ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಿಂದ ಲೈಸೆನ್ಸ್ ಪಡೆದಿರುವ ಲೈಸೆನ್ಸ್ ದಾರರು ಮೂರು ಆಯುಧಗಳನ್ನು ಹೊಂದಿದ್ದರೆ ಅಂತಹವರು ಡಿಸೆಂಬರ್ 13, 2020 ರೊಳಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಹಸ್ತಾಂತರಿಸಲು ಸೂಚಿಸಲಾಗಿದೆ.