Tag: Lie

  • ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತೀನಿ, ಎರಡನೇ ಮದುವೆ ಸುಳ್ಳು : ನಟಿ ಪ್ರೇಮಾ

    ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತೀನಿ, ಎರಡನೇ ಮದುವೆ ಸುಳ್ಳು : ನಟಿ ಪ್ರೇಮಾ

    ವಾರದ ಹಿಂದೆಯಷ್ಟೇ ಉಡುಪಿಯ ಕಾಪುನಲ್ಲಿರುವ ಕೊರಗಜ್ಜ (Koragajja) ದೇವಸ್ಥಾನಕ್ಕೆ ನಟಿ ಪ್ರೇಮಾ (Prema) ಭೇಟಿ ನೀಡಿ, ದೈವದ ದರ್ಶನ ಪಡೆದಿದ್ದರು. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ಹಿನ್ನೆಲೆಯಲ್ಲಿ ನಟಿ ಪ್ರೇಮಾ ಅಲ್ಲಿಗೆ ಹೋಗಿದ್ದು ತಮ್ಮ ಎರಡನೇ ಮದುವೆ (second marriage) ವಿಚಾರವಾಗಿ ಎನ್ನುವ ಸುದ್ದಿ ಹರಡಿತ್ತು. ಪ್ರೇಮಾ ಸದ್ಯ ಎರಡನೇ ಮದುವೆ ತಯಾರಿಯಲ್ಲಿದ್ದಾರೆ ಎಂದೂ ಹೇಳಲಾಗಿತ್ತು. ಈ ಎಲ್ಲ ವಿಷಯಗಳ ಕುರಿತು ಸ್ವತಃ ಪ್ರೇಮಾ ಅವರೇ ಸ್ಪಷ್ಟನೆ (clarification) ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಪ್ರೇಮಾ, ‘ಮದುವೆ ಬಗ್ಗೆ ಹಬ್ಬಿರುವ ಸುದ್ದಿ ಕೇವಲ ಗಾಸಿಪ್. ಎರಡನೇ ಮದುವೆ ವಿಚಾರ ಎಲ್ಲವೂ ಸುಳ್ಳು. ನಾನು ಹೊಸ ಹೊಸ ಕೆಲಸಗಳ ಬಗ್ಗೆ ಯೋಚನೆ ಮಾಡ್ತಿದ್ದಿನಿ. ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತಿನಿ. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದು ಮದುವೆ ವಿಚಾರವಾಗಿ ಅಲ್ಲ. ಸ್ನೇಹಿತೆಯ ಮದುವೆಗೆ ಹೋಗಿ ಅಲ್ಲಿಂದ ದೇವರ ದರ್ಶನ ಮಾಡಿ ಬಂದೆ. ಮದುವೆ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ಪ್ರೇಮಾ ಅವರ ಮದುವೆ ವಿಚಾರವಾಗಿ ಈ ರೀತಿ ಸುಳ್ಳು ಸುದ್ದಿ ಹರಡುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಇಂಥದ್ದೊಂದು ಸುದ್ದಿ ಆಗಿತ್ತು. ರೇಡಿಯೋ ಜಾಕಿ ಜೊತೆ ಅವರು ಮದುವೆ ಆಗಲಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿತ್ತು. ಅದೆಲ್ಲವೂ ಸುಳ್ಳು ಎಂದು ರೇಡಿಯೋ ಜಾಕಿ ಅವರೇ ಉತ್ತರ ಕೊಟ್ಟಿದ್ದರು. ಇದೀಗ ಮತ್ತೆ ಎರಡನೇ ಮದುವೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಕುರಿತು ಪ್ರೇಮಾ ಸ್ಪಷ್ಟನೆಯನ್ನೂ ಕೊಟ್ಟೂ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು

    ಬೆಂಗಳೂರು: ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

    1. ನಿಮ್ಮ ಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:
    ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್‍ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್‍ಪ್ಯಾಕ್‍ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

    2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ:
    ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್‍ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

    3. ಸ್ಕ್ರಬ್ ಹಾಗೂ ಫೇಶಿಯಲ್‍ನಿಂದ ಪಿಂಪಲ್ ಫ್ರೀ:
    ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

    4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ:
    ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್‍ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

    5. ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು:
    ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್‍ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.

    ಈ ಎಲ್ಲಾ ಟಿಪ್ಸ್ ಜನರು ನಿಜವೆಂದು ನಂಬಿದ್ದರು. ಆದರೆ ಇದು ಶುದ್ಧ ಸುಳ್ಳು ಎಂಬುದು ಈಗ ಗೊತ್ತಾಗಿದೆ. ಸದ್ಯ ನೀವು ಕೂಡ ಈ ಟಿಪ್ಸ್ ನನ್ನು ಅನುಸರಿಸಿದರೆ ಸುಂದರವಾಗಿ ಕಾಣಿಸಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರಿಹಾರಕ್ಕಾಗಿ ಮಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆಂದು ಸುಳ್ಳು ಹೇಳಿದ ದಂಪತಿ

    ಪರಿಹಾರಕ್ಕಾಗಿ ಮಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆಂದು ಸುಳ್ಳು ಹೇಳಿದ ದಂಪತಿ

    ಮಡಿಕೇರಿ: ಪರಿಹಾರಕ್ಕಾಗಿ ತಮ್ಮ ಮಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆಂದು ಸುಳ್ಳು ಹೇಳಿ ದಂಪತಿ ಸಿಕ್ಕಿಬಿದ್ದ ಘಟನೆ ಮಡಿಕೇರಿ ನಗರದ ಮೈತ್ರಿ ಭವನದಲ್ಲಿ ನಡೆದಿದೆ.

    ಭೂ ಕುಸಿತದ ಸಂದರ್ಭ ಮನೆಯಿಂದ ಓಡಿ ಬರುವಾಗ ಕೈಯಲ್ಲಿದ್ದ ಏಳು ವರ್ಷದ ಮಗ ಪ್ರವಾಹದಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾನೆ ಎಂದು ಪರಿಹಾರದ ಆಸೆಗಾಗಿ ಮಾಧ್ಯಮಗಳಿಗೆ ಸುಳ್ಳು ಹೇಳಿರುವುದು ಬಹಿರಂಗವಾಗಿದ್ದು, ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದಿದ್ದಾರೆ.

    ಮಹಾಮಳೆ ಹಾಗೂ ಭೂ ಕುಸಿತದಿಂದಾಗಿ ಜಿಲ್ಲೆಯಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಪುನರ್ ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಪರಿಹಾರಕ್ಕಾಗಿ ಹಲವು ಮಂದಿ ನಿರಾಶ್ರಿತರೆಂದು ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಮಗನೇ ಬಲಿಯಾಗಿದ್ದಾನೆ ಎಂದು ಹಾಗೂ ತಾವು ನೋಡದ ಕಾಲೂರಿನ ನಿವಾಸಿಗಳೆಂದು ಇವರು ವಂಚಿಸಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

    ಆಗಸ್ಟ್ 23ರಂದು ಮಡಿಕೇರಿಯ ಮೈತ್ರಿ ಭವನದಲ್ಲಿರುವ ನಿರಾಶ್ರಿತರ ಶಿಬಿರಕ್ಕೆ ಸೋಮಶೇಖರ್ ಹಾಗೂ ಸುಮಾ ಆಗಮಿಸಿದರು. ತಾವು ಕಾಲೂರು ಗ್ರಾಮದವರಾಗಿದ್ದು, ಭೂ ಕುಸಿತಕ್ಕೆ ಸಿಲುಕಿ ತಮ್ಮ ಮನೆ ಕೊಚ್ಚಿಕೊಂಡು ಹೋಗಿದೆ. ನಾವು ಮನೆಯಿಂದ ಹೊರಗೋಡಿ ಬಂದಿದ್ದು, ತಪ್ಪಿಸಿಕೊಂಡು ಬರುವ ಸಂದರ್ಭ ಕೈಯಲ್ಲಿದ್ದ ಏಳು ವರ್ಷದ ಮಗ ಗಗನ್ ಗಣಪತಿ ನೀರಿನಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಿದರು. ನಿಮ್ಮ ಪಬ್ಲಿಕ್ ಟಿವಿ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಆದರೆ ಅದು ಈಗ ಸುಳ್ಳು ಆಗಿದ್ದು, ಇಬ್ಬರು ಪೊಲೀಸರ ಅತಿಥಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv