Tag: Life Insurance

  • ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ

    ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ

    ಸಿನಿಮಾ ತಾರೆಯರು ಕೇವಲ ರೀಲ್‌ನಲ್ಲಿ ಮಾತ್ರವಲ್ಲ, ರಿಯಲ್ ಲೈಫ್‌ನಲ್ಲೂ ಹೀರೋ ಆಗಿ ಮಾಡಿದ ಕಾರ್ಯಗಳು ಸಮಾಜಕ್ಕೆ ಮಾದರಿಗಳಾದ ಅದೆಷ್ಟೋ ಉದಾಹರಣೆಗಳಿವೆ. ಇದೀಗ ಬಾಲಿವುಡ್ ನಟ ಅಕ್ಷಯ್‌ಕುಮಾರ್ (Akshay Kumar) ಕೂಡಾ ಮಹತ್ವದ ಕೆಲಸ ಮಾಡಿದ್ದಾರೆ. ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿ ಅವರ ಈ ಮಹತ್ತರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ನಟ ಅಕ್ಷಯ್‌ಕುಮಾರ್, 650-700 ಜನ ಸ್ಟಂಟ್ ಮಾಸ್ಟರ್‌ಗಳಿಗೆ ಲೈಫ್ ಇನ್ಶುರೆನ್ಸ್, ಹೆಲ್ತ್ ಇನ್ಶುರೆನ್ಸ್ ಮಾಡಿಸಿಕೊಟ್ಟಿದ್ದಾರೆ.

    ಸಿನಿಮಾದ (Cinema) ಸಾಹಸ ದೃಶ್ಯಗಳನ್ನ ಮಾಡುವಾಗ ಸಾಕಷ್ಟು ಏಟುಗಳನ್ನ ಮಾಡಿಕೊಳ್ಳುತ್ತಾರೆ. ಕೆಲವೊಂದು ಬಾರಿ ಜೀವಕ್ಕೆ ಕುತ್ತು ಬರುವಂತಹ ರಿಸ್ಕಿ ದೃಶ್ಯಗಳಲ್ಲಿ ಸಾಹಸ ನಿರ್ದೇಶಕರು, ಸ್ಟಂಟ್ (Stunt) ಕೆಲಸದಲ್ಲಿ ತೊಡಗಿದವರು ಭಾಗಿಯಾಗುವಂತಹ ಸನ್ನಿವೇಶಗಳು ಎದುರಾಗುತ್ತವೆ. ಕೆಲದಿನಗಳ ಹಿಂದಷ್ಟೇ ತಮಿಳು ಸಿನಿಮಾದ ಚಿತ್ರೀಕರಣದ ವೇಳೆ ಮೋಹನ್ ರಾಜ್ ಎನ್ನುವ ಹಿರಿಯ ಸ್ಟಂಟ್‌ಮ್ಯಾನ್ ಮೃತಪಟ್ಟಿದ್ದರು. ಆ ವೇಳೆ ಚಿತ್ರತಂಡಕ್ಕೆ ಸಂಕಷ್ಟ ಕೂಡಾ ಎದುರಾಗಿತ್ತು. ಇದನ್ನೂ ಓದಿ: ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್

    ಸ್ಟಂಟ್ ಮಾಸ್ಟರ್ ಮೋಹನ್ ರಾಜ್ (Mohan Raj) ನಿಧನದ ಘಟನೆ ಬಳಿಕ ಇದೀಗ ಬಾಲಿವುಡ್ ನಟ ಅಕ್ಷಯ್‌ಕುಮಾರ್ ಲಕ್ಷಾಂತರ ರೂಪಾಯಿ ಖರ್ಚು ಮಾಡಿ 650 ಮಂದಿಗೆ ಜೀವ ವಿಮೆ ಮಾಡಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಸಿನಿಮಾ ಶೂಟಿಂಗ್ ವೇಳೆ ಅವಘಡ ನಡೆಯುತ್ತವೆ ಈ ಸಂದರ್ಭದಲ್ಲಿ ಅವರಿಗೆ ಚಿಕಿತ್ಸೆ ಪಡೆಯಲು ಸಹಾಯಕವಾಗಲಿ ಎನ್ನುವ ದೂರದೃಷ್ಟಿಯಿಂದ ಈ ಮಹತ್ತರ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ

    ಹಿರಿಯ ಸ್ಟಂಟ್‌ಮ್ಯಾನ್ ಹಾಗೂ ಸ್ಟಂಟ್‌ಮ್ಯಾನ್ ಅಸೋಸಿಯೇಷನ್ ಮುಖಂಡ ವಿಕ್ರಮ್ ಸಿಂಗ್ ದಹಿಯಾ ಅವರು ನಟ ಅಕ್ಷಯ್‌ಕುಮಾರ್ ಸಹಾಯವನ್ನ ಕೊಂಡಾಡಿದ್ದಾರೆ. ಸ್ವತಃ ತಾವೇ ಆ್ಯಕ್ಷನ್ ನಟರಾದ ಅಕ್ಷಯ್‌ಕುಮಾರ್ ಆ ದೃಶ್ಯಗಳನ್ನ ಕಣ್ಣಾರೆ ಕಂಡವರು ಹೀಗಾಗಿ 650 ಸ್ಟಂಟ್‌ಮ್ಯಾನ್‌ಗಳಿಗೆ ವಿಮೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ಮತ್ತೊಬ್ಬರಿಗೂ ಮಾದರಿಯಾಗಿದ್ದಾರೆ ಎಂದಿದ್ದಾರೆ.

  • ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

    ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

    ಬೆಂಗಳೂರು: ಸ್ವಿಗ್ಗೀ, ಝೋಮ್ಯಾಟೋ  (Food Delivery Boys) ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ (Gig Worker) 4 ಲಕ್ಷ ರೂ. ವಿಮೆ (Life Insurance) ಘೋಷಣೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    2 ಲಕ್ಷ ರೂ. ಅಪಘಾತ ವಿಮೆ, 2 ಲಕ್ಷ ರೂ. ಜೀವವಿಮೆ ಸೇರಿದಂತೆ 4 ಲಕ್ಷ ರೂ. ವಿಮೆ ಘೋಷಣೆ ಮಾಡಿ ಕರ್ನಾಟಕ ಸರ್ಕಾರ (Karnataka Government) ಅಧಿಸೂಚನೆ ಹೊರಡಿಸಿದೆ. ಈ ಯೋಜನೆಗೆ ಕರ್ನಾಟಕ ರಾಜ್ಯ ಗಿಗ್‌ ಕಾರ್ಮಿಕರ ವಿಮಾ ಯೋಜನೆಯನ್ನು ರೂಪಿಸಲಾಗಿದೆ.  ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಈ ರೀತಿ ಮಾತಾಡೋದು ಸರಿಯಲ್ಲ: ದಿನೇಶ್ ಗುಂಡೂರಾವ್

     

    Swiggy, Zomato ಮತ್ತು Amazon ನಂತಹ ಎಲ್ಲಾ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದರು.

    ಗಿಗ್‌ ಕಾರ್ಮಿಕರು ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯಬೇಕಾಗುತ್ತದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 60 ವರ್ಷದ ಎಲ್ಲ ಪ್ಲಾಟ್‌ಫಾರಂ ಆಧಾರಿತ ಗಿಗ್‌ ಕಾರ್ಮಿಕರು ಯೋಜನೆಗೆ ಒಳಪಡುತ್ತಾರೆ. ಆದಾಯ ತೆರಿಗೆ ಪಾವತಿದಾರರಾಗಿಬಾರದು. ಇಎಸ್‌ಐ ಮತ್ತು ಇಪಿಎಫ್‌ ಸೌಲಭ್ಯ ಹೊಂದಿರಬಾರದು. ನೋಂದಣಿಗೆ ಅರ್ಜಿ ಸಲ್ಲಿಸುವ ವೇಳೆ ಉದ್ಯೋಗದಾತರಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ/ಗುರುತಿನ ಚೀಟಿ, ಆಧಾರ ಸಂಖ್ಯೆ, ಇ-ಶ್ರಮ ಗುರುತಿನ ಚೀಟಿ ಸಂಖ್ಯೆ, ಪಾಸ್‌ ಪೋರ್ಚ್‌ ಅಳತೆಯ ಇತ್ತೀಚಿನ ಭಾವಚಿತ್ರ , ವಿಳಾಸ ಪುರಾವೆಗಾಗಿ ಯಾವುದಾದರೂ ದಾಖಲೆ (ಮತದಾರರ ಗುರುತಿನ ಚೀಟಿ, ಚಾಲನ ಪರವಾನಗಿ/ ಆಧಾರ್‌/ ಪಾಸ್‌ ಪೋರ್ಚ್‌/ ಬ್ಯಾಂಕ್‌ ಪಾಸ್‌ ಬುಕ್‌ ಇತ್ಯಾದಿ) ಸಲ್ಲಿಸಬೇಕು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 50 ಲಕ್ಷದ ವಿಮೆ ಆಸೆಗಾಗಿ ಅಮಾಯಕ ಯುವಕನನ್ನು ಕೊಲೆಗೈದು ಸೀನ್ ಕ್ರಿಯೆಟ್ ಮಾಡ್ದ!

    50 ಲಕ್ಷದ ವಿಮೆ ಆಸೆಗಾಗಿ ಅಮಾಯಕ ಯುವಕನನ್ನು ಕೊಲೆಗೈದು ಸೀನ್ ಕ್ರಿಯೆಟ್ ಮಾಡ್ದ!

    ಹುಬ್ಬಳ್ಳಿ: ಅಪಘಾತ ಪ್ರಕರಣವೊಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. 50 ಲಕ್ಷದ ಜೀವವಿಮೆ ಆಸೆಗಾಗಿ ಅಮಾಯಕ ಯುವಕನೊಬ್ಬನ ಕೊಲೆ ಮಾಡಿರುವ ಆಘಾತಕಾರಿ ಅಂಶ ಪೊಲೀಸ್ ತನಿಖೆ ವೇಳೆ ಹೊರಬಂದಿದೆ.

    ಬುಧವಾರ ರಾತ್ರಿ ಹುಬ್ಬಳ್ಳಿಯ ಗೋಕುಲ್ ರಸ್ತೆಯ ರೇವಡಿ ಹಾಳ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದನೆನ್ನಲಾದ ಸಂಜೀವಕುಮಾರ್ ಬೆಂಗೇರಿ ತನ್ನ ಹೆಸರಿನಲ್ಲಿ ಎಚ್‍ಡಿಎಫ್‍ಸಿ ಬ್ಯಾಂಕ್ ನಲ್ಲಿ ವಿಮೆ ಹೊಂದಿದ್ದನು. ಆದರೆ ಆ ಹಣವನ್ನು ಪಡೆಯಬೇಕು ಎನ್ನುವ ಆಸೆಯಿಂದ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ, ಶವದ ಪಕ್ಕದಲ್ಲಿ ತನ್ನ ಬೈಕ್, ಚಪ್ಪಲಿ ಬಿಟ್ಟು ತಾನೇ ಸತ್ತಿರುವುದಾಗೆ ಸೀನ್ ಕ್ರಿಯೇಟ್ ಮಾಡಿದ್ದ. ಈ ಅಪಘಾತದ ಸುದ್ದಿ ಮನೆಯವರಿಗೆ ತಲುಪಿತ್ತು ಬಳಿಕ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದರು.

    ಪೊಲೀಸರು ಸಹ ಸತ್ತ ವ್ಯಕ್ತಿಯನ್ನು ಸಂಜೀವಕುಮಾರ್ ಬೆಂಗೇರಿ ಎಂದೆ ತಿಳಿದುಕೊಂಡಿದ್ದರು. ಆದರೆ ಸಂಜೀವ್ ಸಹೋದರ ಮಂಜುನಾಥ್ ಬೆಂಗೇರಿ ತನ್ನ ಅಣ್ಣನ ಕೈ ಮೇಲೆ ಶ್ರೀ ರಾಮನ ಹಚ್ಚೆ ಇರುವುದಾಗಿ ಹೇಳಿಕೆ ನೀಡಿದ್ದನು. ಬಳಿಕ ಪೊಲೀಸರು ಶವ ಪರೀಕ್ಷೆ ಮಾಡಿದಾಗ ಕೈ ಮೇಲೆ ಯಾವುದೇ ಹಚ್ಚೆ ಇರಲಿಲ್ಲ. ಅಲ್ಲದೇ ಅದೊಂದು ಮುಸ್ಲಿಂ ವ್ಯಕ್ತಿಯ ಶವ ಎಂಬುದು ಗೊತ್ತಾಗಿದೆ. ಹೀಗಾಗಿ ಇದೊಂದು ಹಣ ಹೊಡೆಯಲು ಆಡಿದ ನಾಟಕ ಎಂಬುದು ಬೆಳಕಿಗೆ ಬಂದಿದೆ.

    ತಕ್ಷಣ ಕಾರ್ಯ ಪ್ರವೃತ್ತರಾದ ಗೋಕುಲ್ ರೋಡ್ ಠಾಣಾ ಪೊಲೀಸರು, ಮಹಾಂತೇಶ ದುಗ್ಗಾಣಿ ಹಾಗೂ ಅಮೀರ್ ಶೇಖ್ ರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸಂಜೀವಕುಮಾರ್ ಬೆಂಗೇರಿ ತಲೆ ಮರೆಸಿಕೊಂಡಿದ್ದಾನೆ. ಈ ಘಟನೆ ಇದೇ ಮೊದಲೇ ಅಲ್ಲ ಈ ಹಿಂದೆ ಈ ರೀತಿಯ ಪ್ರಯತ್ನಗಳು ನಡೆದಿತ್ತು ಎಂದು ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜೀವವಿಮಾ ಸಂಸ್ಥೆಯಲ್ಲಿ ಕೊಳೆಯುತ್ತಿದೆ ವಾರಸುದಾರರಿಲ್ಲದ 15,167 ಕೋಟಿ ರೂಪಾಯಿ

    ಜೀವವಿಮಾ ಸಂಸ್ಥೆಯಲ್ಲಿ ಕೊಳೆಯುತ್ತಿದೆ ವಾರಸುದಾರರಿಲ್ಲದ 15,167 ಕೋಟಿ ರೂಪಾಯಿ

    ನವದೆಹಲಿ: ದೇಶದ ಒಟ್ಟು 23 ವಿಮಾ ಸಂಸ್ಥೆಗಳಲ್ಲಿ ವಾರಸುದಾರರಿಲ್ಲದೆ ಬರೋಬ್ಬರಿ 15, 167 ಕೋಟಿ ರೂ. ಕೊಳೆಯುತ್ತಾ ಬಿದ್ದಿದೆ ಎಂದು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್ ಡಿಎ) ವರದಿ ನೀಡಿದೆ.

    ಐಆರ್ ಡಿಎ ವರದಿಯ ಪ್ರಕಾರ, ವಿಮೆ ಮಾಡಿದ ಬಳಿಕ ಅದನ್ನು ಮರೆತು ಬಿಟ್ಟಿದ್ದರಿಂದ ಮತ್ತು ವಾರಸುದಾರರಿಗೆ ವಿಮೆಯ ಮಾಹಿತಿಯಿಲ್ಲದೇ ಇರುವುದರಿಂದ 15,167 ಕೋಟಿ ರೂಪಾಯಿ ವಾರಸುದಾರರಿಲ್ಲದ ಹಣ ಜಮೆಯಾಗಿದೆ ಎಂದು ತಿಳಿಸಿದೆ.

    2018ರ ಮಾರ್ಚ್ 31ರವರೆಗೂ 15,166 ಕೋಟಿ ರೂ. ಬಾಕಿ ಉಳಿದಿದ್ದು ಈ ಪೈಕಿ ಎಲ್‍ಐಸಿ 10,509 ಕೋಟಿ ರೂ. ಉಳಿದ 22 ಖಾಸಗಿ ಸಂಸ್ಥೆಗಳು 4,657.47 ಕೋಟಿ ರೂ. ಜಮೆ ಆಗಿದೆ ಎಂದು ವರದಿ ನೀಡಿದೆ.

    ಖಾಸಗಿ ವಿಮಾಸಂಸ್ಥೆಗಳಾದ ಐಸಿಐಸಿಐ ಪ್ರೋಡೆನ್ಷಿಯಲ್ ಲೈಫ್ ಇನ್ಸೂರೆನ್ಸ್ ಕಂಪೆನಿ 807.4 ಕೋಟಿ ರೂ. ರಿಲಯಲ್ಸ್ ನಿಪ್ಪಾನ್ ಲೈಫ್ ಇನ್ಸೂರೆನ್ಸ್ ಕಂಪೆನಿ 696.12 ಕೋಟಿ ರೂ., ಎಸ್‍ಬಿಐ ಲೈಫ್ ಇನ್ಸೂರೆನ್ಸ್ ನಿಗಮ 678.59 ಕೋಟಿ ರೂ. ಹಾಗೂ ಹೆಚ್‍ಡಿಎಫ್‍ಸಿ ಸ್ಟ್ಯಾಂಡರ್ಡ್ ಲೈಫ್ ಇನ್ಸೂರೆನ್ಸ್ ಕಂಪೆನಿ 659.3 ಕೋಟಿ ರೂ. ಮೊತ್ತ ಜಮೆಯಾಗಿದೆ ಎಂದು ಐಆರ್ ಡಿಐ ತಿಳಿಸಿದೆ.

    ಈ ಸಂಬಂಧ ಜಮೆಯಾದ ಹಣವನ್ನು ಶೀಘ್ರವೇ ವಿಮಾ ಪಾಲಿಸಿದಾರರನ್ನು ಖುದ್ದು ಪತ್ತೆಹಚ್ಚಿ, ಮರು ಪಾವತಿಸುವಂತೆ ದೇಶದ 23 ವಿಮಾ ಸಂಸ್ಥೆಗಳಿಗೆ ಐಆರ್‍ಡಿಎ ಆದೇಶ ನೀಡಿದೆ.