Tag: lightings

  • ಕೊರೋನಾ ಬಳಿಕ ಅದ್ದೂರಿ ದಸರಾ- ವಿದ್ಯುತ್ ದೀಪಾಲಂಕಾರದ ಬೆಳಕಲ್ಲಿ ಸಾಗಲಿದೆ ಅಂಬಾರಿ

    ಕೊರೋನಾ ಬಳಿಕ ಅದ್ದೂರಿ ದಸರಾ- ವಿದ್ಯುತ್ ದೀಪಾಲಂಕಾರದ ಬೆಳಕಲ್ಲಿ ಸಾಗಲಿದೆ ಅಂಬಾರಿ

    ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ (Mysuru Dasara-2022) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಗೆ ದಿನ ಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿ ಮೆರವಣಿಗೆ ವಿದ್ಯುತ್ ದೀಪಾಲಂಕಾರದ ನಡುವೆ ಸಾಗಲಿರುವುದು ವಿಶೇಷ. ಮೆರವಣಿಗೆಗಾಗಿ ಕ್ಯಾಪ್ಟನ್ ಅಭಿಮನ್ಯು (Abhimanyu) ಮತ್ತು ಟೀಂ ಭರ್ಜರಿ ತಾಲೀಮು ನಡೆಸುತ್ತಿವೆ.

    ಹೌದು. ಕಳೆದ 2 ವರ್ಷಗಳ ಹಿಂದೆ ಇಡೀ ರಾಷ್ಟ್ರವನ್ನು ಬಿಟ್ಟು ಬಿಡದೇ ಕಾಡುತ್ತಿದ್ದ ಕೊರೋನಾದಿಂದ ದಸರಾ ಮಹೋತ್ಸವದ ಸಂಭ್ರಮ ಮಂಕಾಗಿ ಹೋಗಿತ್ತು. ದಸರಾ ಮಹೋತ್ಸವದ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾಗಿದ್ದವು. ಅಲ್ಲದೇ ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆ ಕೇವಲ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈ ಬಾರಿ ಕೊರೋನಾ (Corona Virus) ಮಹಾಮಾರಿಯಿಂದ ನಾವುಗಳು ದೂರವಾಗಿರುವ ಕಾರಣ ದಸರಾ ಮಹೋತ್ಸವ ಎಂದಿನಂತೆ ವಿಜೃಂಭಣೆಯಿಂದ ಜರುಗಲಿದೆ.

    ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯ ಆವರಣದಿಂದ ಬನ್ನಿಮಂಟಪದವರೆಗೆ ಸಾಗಲಿದೆ. ಮೂರನೇ ಬಾರಿಗೆ ಅಂಬಾರಿ ಹೊರುತ್ತಿರುವ ಅಭಿಮನ್ಯು 6.30 ಕಿಲೋಮೀಟರ್ ಜಂಬೂಸವಾರಿ ಮೆರವಣಿಗೆಯಲ್ಲಿ ಗಾಂಭೀರ್ಯದ ರಾಜನಡಿಗೆ ಹಾಕಲಿದ್ದಾನೆ. ಇದನ್ನೂ ಓದಿ: ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ

    ಅಕ್ಟೋಬರ್ 5ರಂದು ಇಡೀ ವಿಶ್ವವೇ ಸಾಂಸ್ಕೃತಿಕ ನಗರಿ ಮೈಸೂರಿನ ಕಡೆಗೆ ತಿರುಗಿ ನೋಡಲಿದೆ. ಯಾಕಂದ್ರೆ ಅಂದು ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಜರುಗಲಿದೆ. ಅಂದು ಸಂಜೆ 5 ಗಂಟೆ 7ನಿಮಿಷದಿಂದ 5.18ರ ವರೆಗೆ ಸಲ್ಲುವ ಶುಭ ಮೀನಾ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಗಣ್ಯರು ಅಂಬಾರಿಯಲ್ಲಿ ಕೂತ ನಾಡದೇವತೆ ಚಾಮುಂಡೇಶ್ವರಿ (Chamundeshwari)ಗೆ ಪುಷ್ಪಾರ್ಚಾನೆ ಸಲ್ಲಿಸಿ, ಜಂಬೂ ಸವಾರಿ ಮೆರವಣಿಗೆ ಚಾಲನೆ ನೀಡಲಿದ್ದಾರೆ.

    6.30 ಕಿಲೋಮೀಟರ್ ದೂರವನ್ನು ಕ್ರಮಿಸಲು ಅಭಿಮನ್ಯು & ಟೀಮ್‍ಗೆ 2 ಗಂಟೆಗಳು ಬೇಕಾಗುತ್ತದೆ. ಅಂದ್ರೆ 5.20 ರಿಂದ 7.30ರ ವರೆಗೆ ಜಂಬೂ ಸವಾರಿ ಮೆರವಣಿಗೆ ಜರುಗಲಿದೆ. ಅಷ್ಟೊತ್ತಿಗೆ ಸೂರ್ಯ ಮುಳುಗಿದ ಕಾರಣ ಕತ್ತಲು ಆವರಿಸಿರುತ್ತದೆ. ಹೀಗಾಗಿ ಜಂಬೂ ಸವಾರಿ ಮೆರವಣಿಗೆ ವಿದ್ಯುತ್ ದೀಪಾಲಂಕಾರದ ನಡುವೆ ಸಾಗಬೇಕಾಗಿದೆ. ಅಂದು ದಸರಾ ಗಜಪಡೆಗೆ ವಿದ್ಯುತ್ ದೀಪಾಲಂಕಾರಕ್ಕೆ ಬೆದರಬಾರದೆಂದು ಸದ್ಯ ವಿದ್ಯುತ್ ದೀಪಾಲಂಕಾರದ ನಡುವೆ ತಾಲೀಮು ಮಾಡಿಸಲಾಗುತ್ತಿದೆ.

    ಒಟ್ಟಾರೆ ಕೊರೋನಾ ರಣಕೇಕೆಯಿಂದ ಮಂಕಾಗಿದ್ದ ಕಳೆದ ಎರಡು ವರ್ಷದ ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಈ ಬಾರಿ ವಿದ್ಯುತ್ ದೀಪಾಲಂಕಾರದ ನಡುವೆ ಇಡೀ ವಿಶ್ವವನ್ನೇ ತನ್ನತ್ತ ಸೆಳೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಸೇವಂತಿ ಗಿಡ ಬೆಳೆಯೋಕೆ ರೈತನ ಸ್ಮಾರ್ಟ್ ಐಡಿಯಾ

    ಸೇವಂತಿ ಗಿಡ ಬೆಳೆಯೋಕೆ ರೈತನ ಸ್ಮಾರ್ಟ್ ಐಡಿಯಾ

    ಚಿಕ್ಕಬಳ್ಳಾಪುರ: ರಾತ್ರಿಯಾದರೆ ಸಾಕು ಆ ರೈತನ ಹೂದೋಟ ವಿದ್ಯುತ್ ದೀಪಗಳ ಬೆಳಕಿನಿಂದ ಪಳಪಳ ಅಂತ ಝಗಮಗಿಸಿರುತ್ತದೆ. ಈ ಹೂದೋಟದ ತುಂಬಾ ನೂರಾರು ದೀಪಗಳನ್ನು ಆಳವಡಿಸಲಾಗಿದ್ದರಿಂದ ರಾತ್ರಿಯಿಡೀ ಹೂದೋಟ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುತ್ತದೆ. ಅರೇ ಈ ರೈತನು ಜಮೀನಿಗೆ ಏಕೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ್ದಾನೆ ಎಂಬುದು ಹಲವರ ಪ್ರಶ್ನೆಯಾಗಿದೆ.

    ಚಿಕ್ಕಬಳ್ಳಾಪುರ ನಗರ ಶಿಡ್ಲಘಟ್ಟ ಮಾರ್ಗದ ಜಿಲ್ಲಾಡಳಿತ ಭವನದ ಎದುರು ಪಟ್ರೇನಹಳ್ಳಿ ಗ್ರಾಮದ ಗಿರೀಶ್ ಎಂಬ ರೈತ ತನ್ನ ಎರಡೂವರೆ ಎಕರೆ ಸೇವಂತಿಗೆ ಹೂದೋಟಕ್ಕೆ ವಿದ್ಯುತ್ ದೀಪಗಳನ್ನ ಅಳವಡಿಸಿದ್ದಾರೆ. ರಾತ್ರಿಯಾದರೆ ಸಾಕು ವಿದ್ಯುತ್ ದೀಪಗಳಿಂದ ಸೇವಂತಿಗೆ ಹೂದೋಟ ಝಗಮಗಿಸುತ್ತಾ, ನೋಡುಗರ ಕಣ್ಣು ಕುಕ್ಕುವಂತೆ ಕಾಣಿಸುತ್ತದೆ. ಅಷ್ಟಕ್ಕೂ ಈ ಹೂ ದೋಟದ ತುಂಬಾ ಸಾಲು ಸಾಲು ವಿದ್ಯುತ್ ದೀಪಗಳನ್ನ ಅಳವಡಿಸಿರುವುದು ಸೇವಂತಿ ತೋಟದ ಅಲಂಕಾರಕ್ಕಾಗಿ ಅಲ್ಲ. ಬದಲಾಗಿ ಸೇವಂತಿ ಹೂ ಸೂಪರ್ ಕಲರ್ ಬಂಪರ್ ಇಳುವರಿ ಪಡೆಯುವುದಕ್ಕೆ ರೈತ ಗಿರೀಶ್ ಮಾಡಿರುವ ಸ್ಮಾರ್ಟ್ ಯೋಜನೆಯಾಗಿದೆ.

    ಎರಡೂವರೆ ಎಕರೆಯಲ್ಲಿ ರೈತ ಗಿರೀಶ್ ಸೇವಂತಿ ಗಿಡ ನಾಟಿ ಮಾಡಿದ್ದು, ಚಳಿಗಾಲದ ಸಂದರ್ಭದಲ್ಲಿ ಸೂರ್ಯನ ಶಾಖ ಕಡಿಮೆ ಜೊತೆಗೆ ಮಂಜು ಜಾಸ್ತಿ ಇರುತ್ತದೆ. ಹೀಗಾಗಿ ಗಿಡದ ಬೆಳವಣಿಗೆ ಕಡಿಮೆ ಆಗುತ್ತದೆ ಎಂದು ಸೇವಂತಿ ಗಿಡಕ್ಕೆ ಶಾಖ ಉಂಟು ಮಾಡುವ ಸಲುವಾಗಿ ಭಿನ್ನ ಭಿನ್ನವಾಗಿ ಯೋಚಿಸಿ ತಮ್ಮ ಎರಡೂವರೆ ಎಕರೆಗೆ ಸರಿ ಸುಮಾರು 500-600 ವಿದ್ಯುತ್ ದೀಪಗಳನ್ನು 10-ರಿಂದ 12 ಅಡಿ ದೂರ ದೂರ ಅಳವಡಿಸಿದ್ದಾರೆ.

    ಬೇರೆ ರೈತರು ಮಾಡಿದ್ದನ್ನು ತಿಳಿದಿದ್ದ ಗಿರೀಶ್ ಅವರ ಈ ಐಡಿಯಾ ಇದೀಗ ಸಕ್ಸಸ್ ಆಗಿದೆ. ಲೈಟಿಂಗ್ಸ್ ಹಾಕಿ ಗಿರೀಶ್ ಬೆಳೆದಿರುವ ಸೇವಂತಿ ಹೂ ಗಿಡ ಬಣ್ಣದಿಂದ ಕೂಡಿದ್ದು ಉತ್ತಮ ಗುಣಮಟ್ಟದ್ದಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಗಿರೀಶ್ ಬೆಳೆದ ಹೂಗೆ ಭಾರೀ ಬೇಡಿಕೆ ಜೊತೆಗೆ ಬಂಪರ್ ಬೆಲೆಯೂ ಸಿಗುತ್ತಿದೆ. ಒಟ್ಟಿನಲ್ಲಿ ಭಿನ್ನ ವಿಭಿನ್ನ ಆಲೋಚನೆ ಮಾಡಿ ರೈತ ಗಿರೀಶ್ ಸ್ಮಾರ್ಟ್ ಐಡಿಯಾದಿಂದ ಬಂಪರ್ ಸೇವಂತಿ ಬೆಳೆದು ಬಂಪರ್ ಲಾಭನೂ ಮಾಡುತ್ತಿರುವುದು ಇತರೇ ರೈತರು ಮಾಡವಂತೆ ಪ್ರೇರಣೆಯಾಗಿಯಾಗಿ ಇತರೆ ರೈತರು ಲೈಟಿಂಗ್ಸ್ ಐಡಿಯಾ ಮಾಡುವುದಕ್ಕೆ ಮುಂದಾಗುತ್ತಿದ್ದಾರೆ.

    ಇನ್ನೂ ಈ ಲೈಟಿಂಗ್ಸ್ ಗೆ ಎಂದು ಬೆಸ್ಕಾಂ ಇಲಾಖೆಯಿಂದ ಪ್ರತ್ಯೇಕ ಪವರ್ ಕನೆಕ್ಷನ್ ಪಡೆದಿದ್ದು, ಪ್ರತಿ ತಿಂಗಳು ಅಂದಾಜು 10,000 ರೂಪಾಯಿ ಕರೆಂಟ್ ಬಿಲ್ ಬರುತ್ತದೆ ಎಂದು ಗಿರೀಶ್ ತಿಳಿಸಿದ್ದಾರೆ.

  • ಸಿಡಿಲು ತಾಗಿ ಹೊತ್ತಿ ಉರಿದ ತೆಂಗಿನ ಮರ

    ಸಿಡಿಲು ತಾಗಿ ಹೊತ್ತಿ ಉರಿದ ತೆಂಗಿನ ಮರ

    ಉಡುಪಿ: ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ.

    ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಾರ ಯಶವಂತ ಕಾಮತ್ ಮನೆ ತೆಂಗಿನ ತೋಟದ ಮರವೊಂದಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಹಸಿ ತೆಂಗಿನ ಮರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇನ್ನು ಮರಕ್ಕೆ ಬೆಂಕಿ ಹತ್ತಿರುವ ಫೋಟೋ ಮತ್ತು ವಿಡಿಯೋಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಉಡುಪಿಯ ಕುಂದಾಪುರ, ಕಾರ್ಕಳ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನಕ್ಕೆ ವರುಣದೇವ ತಂಪು ನೀಡಿದ್ದಾನೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ರಾತ್ರಿ ಸಹ ಮಳೆಯಾಗುವ ಸಾಧ್ಯತೆಗಳಿವೆ.

    ಚಿಕ್ಕಮಗಳೂರುಇ ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರದಲ್ಲಿ ಮಳೆಯಾಗಿದೆ. ಮೂಡಿಗೆರೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು, ಜಾವಳಿಯಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಾಸನ, ವಿಜಯಪುರ, ಧಾರವಾಡ, ಯಾದಗಿರಿಯಲ್ಲಿಯೂ ಮಳೆಯಾಗಿದೆ.

  • ಕಣ್ಮನ ಸೆಳೀತಿದೆ ಮಂಗಳೂರು ದಸರಾದ ಲೈಟಿಂಗ್ಸ್

    ಕಣ್ಮನ ಸೆಳೀತಿದೆ ಮಂಗಳೂರು ದಸರಾದ ಲೈಟಿಂಗ್ಸ್

    ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಎಲ್ಲಿ ನೋಡಿದರೂ ಈಗ ಬೆಳಕಿನ ಚಿತ್ತಾರ. ರಸ್ತೆ ಬದಿಯೆಲ್ಲಾ ವಿದ್ಯುತ್ ದೀಪಗಳು ರಂಗು ಮೂಡಿಸಿದೆ. ನಗರದ ಸುಮಾರು 7 ಕಿಲೋ ಮೀಟರ್ ಉದ್ದಕ್ಕೆ ಬರೋಬ್ಬರಿ 22 ಲಕ್ಷ ಬಲ್ಬ್ ಗಳು ಪ್ರಕಾಶಮಾನವಾಗಿ ಬೆಳಗುತ್ತಿದೆ.

    ಹಿಂದೆಲ್ಲಾ ದಸರಾ ಎಂದರೆ ನೆನಪಾಗುತ್ತಿದ್ದದ್ದು ಮೈಸೂರು ದಸರಾ ಮಾತ್ರ. ಆದರೆ ಈಗ ಹಾಗಲ್ಲ, ಮಂಗಳೂರು ದಸರಾ ಕೂಡ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆಯುತ್ತಿದೆ. ದಸರಾ ಇಷ್ಟರ ಮಟ್ಟಿಗೆ ಖ್ಯಾತಿ ಗಳಿಸಲು ಪ್ರಮುಖ ಕಾರಣ ಇಲ್ಲಿನ ವಿದ್ಯುತ್ ದೀಪಗಳ ವರ್ಣಮಯ ಶೃಂಗಾರ. ಮಂಗಳೂರು ದಸರಾ ನಡೆಯುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಸಂಜೆಯಾಗುತ್ತಿದ್ದಂತೆ ಭೂಲೋಕದ ಸ್ವರ್ಗದಂತೆ ಕಂಗೊಳಿಸುತ್ತದೆ.

    ಕ್ಷೇತ್ರ ಮಾತ್ರವಲ್ಲದೆ ದಸರಾದ ಪ್ರಯುಕ್ತ ದಸರಾ ಮೆರವಣಿಗೆ ಹಾದುಹೋಗುವ ನಗರದ ಸುಮಾರು 7 ಕಿಲೋ ಮೀಟರ್ ರಸ್ತೆಯುದ್ದಕ್ಕೂ ಕ್ಷೇತ್ರದ ವತಿಯಿಂದ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಈ ಬಾರಿಯ ದಸರಾಕ್ಕಾಗಿ 10 ಲಕ್ಷ ದೊಡ್ಡ ಪ್ರಮಾಣದ ಬಲ್ಬ್ ಗಳು ಸೇರಿದಂತೆ ಒಟ್ಟು 22 ಲಕ್ಷ ಬಲ್ಬ್ ಗಳಿಂದ ಶೃಂಗರಿಸಲಾಗಿದೆ. ಇಡೀ ನಗರ ಮತ್ತು ಕುದ್ರೋಳಿ ಕ್ಷೇತ್ರದ ಆವರಣ ಝಗಮಗಿಸುವ ಸೌಂದರ್ಯವನ್ನು ನೋಡುವುದೇ ಕಣ್ಣಿಗೆ ಹಬ್ಬವಾಗಿದೆ.

    ದಸರಾ ಹಿನ್ನೆಲೆಯಲ್ಲಿ ನವರಾತ್ರಿ ಆರಂಭಗೊಂಡ ದಿನದಿಂದ 9 ದಿನಗಳ ಕಾಲ ಸಂಜೆ 6 ಗಂಟೆಯಾಗುತ್ತಿದ್ದಂತೆ ನಗರದೆಲ್ಲೆಲ್ಲಾ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಸದಾ ಜನಜಂಗುಳಿ ವಾಹನಗಳಿಂದ ತುಂಬಿರುವ ನಗರದ ರಸ್ತೆಗಳೆಲ್ಲಾ ಈ ಸಂದರ್ಭದಲ್ಲಿ ಬೆಳಕಿನ ಚಿತ್ತಾರದಿಂದ ಮಧುವಣಗಿತ್ತಿಯಂತೆ ಅಲಂಕೃತವಾಗುತ್ತದೆ. ದೇಶದ ಬೇರೆಲ್ಲೂ ಇಷ್ಟು ಪ್ರಮಾಣದಲ್ಲಿ ಬೆಳಕಿನ ಸಂಯೋಜನೆ ಕಾಣಸಿಗದು. ಇಷ್ಟೊಂದು ಪ್ರಮಾಣದ ಬೆಳಕಿನ ಚಿತ್ತಾರಕ್ಕಾಗಿ ಕ್ಷೇತ್ರದಿಂದ ಬರೋಬ್ಬರಿ 75 ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತದೆ. ಸರ್ಕಾರದ ಅಥವಾ ಇನ್ಯಾವುದೇ ಅನುದಾನ ಇಲ್ಲದೆ ಕ್ಷೇತ್ರದ ವತಿಯಿಂದಲೇ ಈ ಬೆಳಕಿನ ಸಂಯೋಜನೆ ಮತ್ತು ಉತ್ಸವ ಮಾಡುವುದು ಇಲ್ಲಿನ ವಿಶೇಷ. ಅಂದಹಾಗೆ, ಈ ದಸರಾ ಸಂದರ್ಭದಲ್ಲಿ ದೇಶ- ವಿದೇಶದ ಅಸಂಖ್ಯಾತ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಾರೆ. ರಾಜ್ಯದ ವಿವಿಧ ಕಡೆಯಿಂದ ಆಸಕ್ತರೂ ಈ ಉತ್ಸವಕ್ಕೆ ಆಗಮಿಸಿ, ಸಂಭ್ರಮಿಸುತ್ತಾರೆ.

    ಹತ್ತು ದಿನಗಳ ಮಂಗಳೂರು ದಸರಾ ಉತ್ಸವ ಈ ಬಾರಿ ಇಂದು(ಅಕ್ಟೋಬರ್ 8) ಕೊನೆಗೊಳ್ಳುತ್ತದೆ. ಹತ್ತು ದಿನಗಳ ಕಾಲ ಪೂಜಿಸಿದ ನವದುರ್ಗೆಯರು ಮತ್ತು ಗಣಪತಿ, ಶಾರದಾ ಮಾತೆಯ ವಿಗ್ರಹವನ್ನು ಶೋಭಾಯಾತ್ರೆಯಲ್ಲಿ ನಗರ ಪ್ರದಕ್ಷಿಣೆ ಬರಲಾಗುವುದು. ವಿದ್ಯುತ್ ದೀಪಗಳ ಆಕರ್ಷಣೆಯ ಜೊತೆಗೆ ನೂರಾರು ಸ್ತಬ್ಧಚಿತ್ರಗಳ ಜೊತೆ ಸಾಗುವ ಮೆರವಣಿಗೆ ಚಿತ್ತಾಕರ್ಷಕ. ಹೀಗಾಗಿ ಕೊನೆಯ ದಿನದ ವಿಜಯದಶಮಿಯ ಈ ವೈಭವದಲ್ಲಿ ಪಾಲ್ಗೊಳ್ಳುವುದಕ್ಕಾಗಿಯೇ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕುದ್ರೋಳಿ ಕ್ಷೇತ್ರದ ರೂವಾರಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಕನಸಿನಂತೆ ಮಂಗಳೂರು ದಸರಾ ನಡೆಯುತ್ತಿದ್ದು ಪ್ರತಿ ವರ್ಷವೂ ಅಭೂತಪೂರ್ವ ಎನ್ನುವಂತೆ ಜನಾಕರ್ಷಣೆ ಪಡೆಯುತ್ತಿದೆ.