ಹಾವೇರಿ: ಸಿಡಿಲು ಬಡಿದು(Lightning strikes) ಇಬ್ಬರು ವೃದ್ಧರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಹಾವೇರಿ(Haveri) ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹಾನಗಲ್(Hanagal) ತಾಲೂಕಿನ ಕೊಂಡೊಜಿ ಗ್ರಾಮದ ಮರಿಯವ್ವ ನಾಯ್ಕರ್(60) ಮೃತರು. ಮೂಲತಃ ಗದಗ(Gadag) ಜಿಲ್ಲೆ ಬಸಾಪುರ ಗ್ರಾಮದ ನಿವಾಸಿಯಾದ ಮರಿಯವ್ವ ಕಳೆದ ಕೆಲವು ತಿಂಗಳಿನಿಂದ ಮಾವಿನ ತೋಟದಲ್ಲಿ ಕೆಲಸ ಮಾಡಿಕೊಂಡಿಕೊಂಡಿದ್ದರು. ಇಂದು ಸಂಜೆ ಸಿಡಿಲು ಬಡಿದು ಮರಿಯವ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಪಾಕ್ ಜೊತೆ ಮಾತುಕತೆ ನಡೆದ್ರೆ ಭಯೋತ್ಪಾದನೆ, POK ಬಗ್ಗೆ ಮಾತ್ರ: ಮೋದಿ ಖಡಕ್ ಮಾತು
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರೇಕೆರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜಿಲ್ಲೆಯ ಹಲವೆಡೆ ಬಿರುಗಾಳಿ ಸಮೇತ ಮಳೆಯಾಗಿದ್ದು, ಜಿಲ್ಲೆಯಲ್ಲಿ ಮಳೆರಾಯ ತಂಪೆರೆದಿದ್ದಾನೆ.
ಕೊಪ್ಪಳ: ಸಿಡಿಲು ಬಡಿದು (Lightning strikes) ಇಬ್ಬರು ಸಾವಿಗೀಡಾದ ಘಟನೆ ಕೊಪ್ಪಳದ (Koppal) ಚುಕ್ಕನಕಲ್ ಬಳಿ ನಡೆದಿದೆ.
ಮೃತರನ್ನು ಮಂಜುನಾಥ ಗಾಳಿ (48) ಗೋವಿಂದಪ್ಪ ಮ್ಯಾಗಲಮನಿ (62) ಎಂದು ಗುರುತಿಸಲಾಗಿದೆ. ಇಬ್ಬರೂ ಗುರುವಾರ ಸಂಜೆ ಗ್ರಾಮದ ತೋಟದ ಮನೆಯಲ್ಲಿದ್ದರು. ಈ ವೇಳೆ ಮಳೆ (Rain) ಬಂದಿದ್ದು, ತೋಟದ ಮನೆಯ ಕಿಟಕಿ ಬಾಗಿಲು ಹಾಕಲು ಹೋದಾಗ ಸಿಡಿಲು ಬಡಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಸಿಡಿಲು ಬಡಿದು ಯುವಕ ಸಾವು
ಭುವನೇಶ್ವರ: ಒಡಿಶಾದ (Odisha) ಐದು ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದು (Lightning Strikes) 6 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ರಾಜ್ಯದ ವಿವಿಧ ಭಾಗಗಳಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕೇಂದ್ರಪಾರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರೆ, ಬಾಲಸೋರ್, ಭದ್ರಕ್, ಜಾಜ್ಪುರ ಮತ್ತು ಸುವರ್ಣಪುರದಲ್ಲಿ ಸಿಡಿಲು ಬಡಿದು ತಲಾ ಒಬ್ಬರು ಬಲಿಯಾಗಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೇ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಇತರ ರಾಜ್ಯಗಳಿಗೆ ಹೋಲಿಸಿದರೆ ಒಡಿಶಾದಲ್ಲಿ ಸಿಡಿಲು ಸಾವಿನ ಸಂಖ್ಯೆ ಹೆಚ್ಚು. ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 300 ಜನ ಸಿಡಿಲು ಬಡಿದು ಸಾವನ್ನಪ್ಪುತ್ತಿದ್ದಾರೆ. ಇದನ್ನು ತಪ್ಪಿಸಲು `ಮಿಂಚಿನ ಬಂಧನಕಾರರು’ ಎಂದು ಕರೆಯಲ್ಪಡುವ 20 ಲಕ್ಷ ತಾಳೆ ಮರಗಳನ್ನು ರಾಜ್ಯಾದ್ಯಂತ ಶೀಘ್ರದಲ್ಲೇ ನೆಡಲು ಸರ್ಕಾರ ಮುಂದಾಗಿದೆ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ತಿಳಿಸಿದ್ದಾರೆ.
ಒಡಿಶಾದಲ್ಲಿ ಮಿಂಚಿನ ಸಾವಿನ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಒಡಿಶಾ (Odisha) ಸರ್ಕಾರವು 2015 ರಲ್ಲಿ ಗೊತ್ತುಪಡಿಸಿದ ಕೆಲವು ಪ್ರದೇಶಗಳಲ್ಲಿ ಸಿಡಿಲಿನ ಹೊಡೆತಗಳಿಂದ (Lightning Strikes) ಉಂಟಾಗುವ ಸಾವಿನ ವಿರುದ್ಧ ಹೋರಾಡಲು 19 ಲಕ್ಷ ತಾಳೆ ಮರಗಳನ್ನು (Palm Trees) ನೆಡುವ ಪ್ರಸ್ತಾಪವನ್ನು ಅನುಮೋದಿಸಿತ್ತು. ಇದೀಗ ಆ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲು ಒಡಿಶಾ ಸರ್ಕಾರ ಮುಂದಾಗಿದೆ.
ಒಡಿಶಾದಲ್ಲಿ ಸಿಡಿಲಿಗೆ ಎಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ?
ಕಳೆದ 11 ವರ್ಷಗಳಲ್ಲಿ ಒಟ್ಟು 3,790 ಜನರು ಸಿಡಿಲು ಬಡಿದು ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನ ಮೂರು ವರ್ಷಗಳಲ್ಲಿ 791 ಮಂದಿ ಸಿಡಿಲಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಸೆಪ್ಟೆಂಬರ್ 2, 2023 ರಂದು 2 ಗಂಟೆಗಳ ಮಧ್ಯಂತರದಲ್ಲಿ 61,000 ಸಿಡಿಲುಗಳು ಒಡಿಶಾದಲ್ಲಿ ಬಡಿದಿವೆ. ಇದರಲ್ಲಿ ಕನಿಷ್ಠ 12 ಜನ ಸಾವಿಗೀಡಾಗಿದ್ದಾರೆ ಎಂದು ಸರ್ಕಾರ ವರದಿ ಬಿಡುಗಡೆ ಮಾಡಿದೆ.
2021-22ರಲ್ಲಿ ಸಿಡಿಲು ಬಡಿದು 282, 2022-23ರಲ್ಲಿ 297 ಮತ್ತು 2023-24ರಲ್ಲಿ 212 ಮಂದಿ ಸಾವನ್ನಪ್ಪಿದ್ದಾರೆ. ಮಯೂರ್ಭಂಜ್, ಕಿಯೋಂಜರ್, ಬಾಲಸೋರ್, ಭದ್ರಕ್, ಗಂಜಾಂ, ಧೆಂಕನಲ್, ಕಟಕ್, ಸುಂದರ್ಗಢ, ಕೊರಾಪುಟ್ ಮತ್ತು ನಬರಂಗಪುರದಂತಹ ಜಿಲ್ಲೆಗಳಲ್ಲಿ ಸಿಡಿಲು-ಸಂಬಂಧಿತ ಸಾವುನೋವುಗಳು ಹೆಚ್ಚು ವರದಿಯಾಗಿವೆ.
ಒಡಿಶಾದಲ್ಲಿ ಮಿಂಚಿನ ದಾಳಿ ಏಕೆ ಹೆಚ್ಚು?
ವೈಜ್ಞಾನಿಕವಾಗಿ, ಮಿಂಚು ವಾತಾವರಣದಲ್ಲಿನ ವಿದ್ಯುಚ್ಛಕ್ತಿಯ ಕ್ಷಿಪ್ರ ಮತ್ತು ಬೃಹತ್ ಶಕ್ತಿಯಾಗಿದೆ. ಇದು ಭೂಮಿಯ ಕಡೆಗೆ ಚಲಿಸಿ ಅಪ್ಪಳಿಸಿದಾಗ ಸಿಡಿಲಿನ ಅವಘಡಗಳು ಸಂಭವಿಸುತ್ತವೆ. ಒಡಿಶಾ ಉಷ್ಣವಲಯದ ವಲಯದಲ್ಲಿ ನೆಲೆಗೊಂಡಿರುವ ಪೂರ್ವ ಕರಾವಳಿ ರಾಜ್ಯವಾಗಿದ್ದು, ಅದರ ಬಿಸಿ, ಶುಷ್ಕ ಹವಾಮಾನವು ಮಿಂಚಿನ ಹೊಡೆತಗಳು ಹೆಚ್ಚಾಗಲು ಕಾರಣವಾಗಿದೆ.
ಬಾಲಸೋರ್ನ ಫಕೀರ್ ಮೋಹನ್ ವಿಶ್ವವಿದ್ಯಾನಿಲಯದ ಭೌಗೋಳಿಕ ಪ್ರಾಧ್ಯಾಪಕ ಮನೋರಂಜನ್ ಮಿಶ್ರಾ ಅವರು, ಪ್ರತಿಕೂಲ ಹವಾಮಾನದಿಂದ ಒಡಿಶಾ ಮಿಂಚಿನ ದಾಳಿಗೆ ಒಳಗಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಮುದ್ರದ ತಾಪಮಾನ ಮತ್ತು ಸೈಕ್ಲೋನ್ನಿಂದಾಗಿ ಮಿಂಚಿನ ದಾಳಿ ಹೆಚ್ಚಾಗಲು ಕಾರಣ ಎಂದು ಹೇಳಿಕೊಂಡಿದ್ದಾರೆ.
ಹವಾಮಾನ ಬದಲಾವಣೆಯ ಪಾತ್ರವೇನು?
IMD ಯ ʻ ಕ್ಲೈಮೇಟ್ ಚೇಂಜ್ & ಇನ್ಸಿಡೆನ್ಸ್ ಆಫ್ ಲೈಟ್ನಿಂಗ್ ಇನ್ ಒಡಿಶಾ: ಆನ್ ಎಕ್ಸ್ಪ್ಲೋರೇಟರಿ ರಿಸರ್ಚ್ʼ ಎಂಬ ಸಂಶೋಧನಾ ಪ್ರಬಂಧವು ಹವಾಮಾನ ಬದಲಾವಣೆಯು ಮಿಂಚಿನ ಹೊಡೆತಗಳನ್ನು ತೀವ್ರಗೊಳಿಸುತ್ತಿದೆ ಎಂದು ಉಲ್ಲೇಖಿಸಿದೆ. ದೀರ್ಘಾವಧಿಯ ಉಷ್ಣತೆಯ ಪ್ರತಿ ಒಂದು ಡಿಗ್ರಿ ಸೆಲ್ಸಿಯಸ್ಗೆ, ಮಿಂಚಿನ ಚಟುವಟಿಕೆಯಲ್ಲಿ ಸುಮಾರು 10% ಹೆಚ್ಚಳ ಮಾಡುವ ಶಕ್ತಿ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.ಗಮನಾರ್ಹ ವಿಚಾರವೆಂದರೆ ಕಳೆದೆರಡು ವರ್ಷಗಳಿಂದ ವಿಶ್ವದಾದ್ಯಂತ ತಾಪಮಾನ ಹೆಚ್ಚುತ್ತಿವೆ.
ಸಿಡಿಲಿನಿಂದ ಯಾರು ಅಪಾಯದಲ್ಲಿದ್ದಾರೆ?
ಗ್ರಾಮೀಣ ಪ್ರದೇಶಗಳಲ್ಲಿ 96% ರಷ್ಟು ಮಿಂಚಿನ ದಾಳಿಯಿಂದ ರೈತರು ಮತ್ತು ಕೃಷಿ ಕಾರ್ಮಿಕರಂತಹ ದಿನಗೂಲಿ ಕಾಮಿಕರು ಅಪಾಯ ಎದುರಿಸುತ್ತಿದ್ದಾರೆ. ಒಡಿಶಾ ಜನಸಂಖ್ಯೆಯ 80% ಕ್ಕಿಂತ ಹೆಚ್ಚು ಜನರು ಕೃಷಿ ಮತ್ತು ಇತರ ಸಂಬಂಧಿತ ಚಟುವಟಿಕೆಗಳ ಮೇಲೆ ಅವಲಂಬಿತರಾಗಿದ್ದಾರೆ. ಅವರೆಲ್ಲ ತೆರೆದ ಮೈದಾನದಲ್ಲಿ ದೀರ್ಘಕಾಲ ಕೆಲಸ ಮಾಡುತ್ತಾರೆ. ಇದರಿಂದಾಗಿ ಅವರು ಮಿಂಚಿನ ದಾಳಿಗೆ ಗುರಿಯಾಗುತ್ತಾರೆ. ಏಪ್ರಿಲ್ ಮತ್ತು ಅಕ್ಟೋಬರ್ ನಡುವೆ ಹೆಚ್ಚಿನ ಮಿಂಚಿನ ಹೊಡೆತಗಳು ಸಂಭವಿಸಿದರೂ, ಹೆಚ್ಚಿನ ಸಾವುಗಳು ಜೂನ್ ಮತ್ತು ಅಕ್ಟೋಬರ್ ನಡುವಿನ ಗರಿಷ್ಠ ಕೃಷಿ ಋತುವಿನಲ್ಲಿ ವರದಿಯಾಗಿದೆ.
ಸಿಡಿಲಿನ ಹೊಡೆತದಿಂದ ಒಡಿಶಾ ತನ್ನನ್ನು ಹೇಗೆ ರಕ್ಷಿಸಿಕೊಳ್ಳಲು ಮುಂದಾಗಿದೆ?
ತಾಳೆ ಮರಗಳು ಮಿಂಚಿನ ವಾಹಕಗಳಾಗಿದ್ದು, ಅವುಗಳನ್ನು ಬೆಳೆಸುವ ಮೂಲಕ ಸಿಡಿಲಿನಿಂದ ಜನರನ್ನು ರಕ್ಷಿಸುವ ಕಾರ್ಯಕ್ಕೆ ಒಡಿಶಾ ಮುಂದಾಗಿದೆ. ತಾಳೆ ಮರಗಳು ಅವುಗಳ ಎತ್ತರ, ಹೆಚ್ಚಿನ ತೇವಾಂಶದಿಂದ ಮಿಂಚನ್ನು ಹೀರಿಕೊಳ್ಳುತ್ತವೆ ಮತ್ತು ನೆಲದ ಮೇಲೆ ಅದರ ನೇರ ಪರಿಣಾಮವನ್ನು ಕಡಿಮೆ ಮಾಡಬಹುದು.
ಇದೇ ಕಾರಣಕ್ಕೆ ಸರ್ಕಾರ ಪಾಮ್ ಗಿಡಗಳನ್ನು ನೆಡಲು ಉದ್ದೇಶಿತ ಯೋಜನೆಗೆ 7 ಕೋಟಿ ರೂ. ಮೀಸಲಿಟ್ಟಿದೆ. ಅಲ್ಲದೇ ರಾಜ್ಯವು ಈಗಿರುವ ತಾಳೆ ಮರಗಳನ್ನು ಮತ್ತು ಎತ್ತರದ ಮರಗಳನ್ನು ಕಡಿಯುವುದನ್ನು ನಿಷೇಧಿಸಿದೆ. ಆರಂಭದಲ್ಲಿ 19 ಲಕ್ಷ ತಾಳೆ ಮರಗಳನ್ನು ಅರಣ್ಯಗಳ ಗಡಿಯಲ್ಲಿ ನೆಡಲು ಮುಂದಾಗಿದೆ.
ಯೋಜನೆಗೆ ತಜ್ಞರು ಕಳವಳವೇನು?
ಈ ಯೋಜನೆ ಬಗ್ಗೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ಒಂದು ತಾಳೆ ಮರವು 20 ಅಡಿ ಎತ್ತರವನ್ನು ತಲುಪಲು ಕನಿಷ್ಠ 15 ರಿಂದ 20 ವರ್ಷಗಳು ಬೇಕಾಗುತ್ತದೆ. ಅಲ್ಲದೇ ಸಿಡಿಲು ಬಡಿದ ನಂತರ ಕೆಲವು ಮರಗಳಿಗೆ ಬೆಂಕಿ ಬೀಳುವ ಆತಂಕವೂ ಇದೆ. ಇದೊಂದೆ ಯೋಜನೆಯಲ್ಲದೇ ಬೇರೆ ಮಾರ್ಗಗಳನ್ನು ಸರ್ಕಾರ ಕಂಡುಕೊಳ್ಳಲು ಮುಂದಾಗಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
ಗಾಂಧಿನಗರ: ಗುಜರಾತ್ನಲ್ಲಿ (Gujarat) ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು (Lightning Strikes) ಬಡಿದು 20 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗುಜರಾತ್ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕರು ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಅತೀವ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತುಂಬಲಾರದ ನಷ್ಟವಾಗಿದೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಸೋಮವಾರ (ನ.27) ರಂದು ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ. ಗುಜರಾತ್ನ 252 ತಾಲೂಕುಗಳ ಪೈಕಿ 234 ತಾಲೂಕುಗಳಲ್ಲಿ ಭಾನುವಾರ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ (ಎಸ್ಇಒಸಿ) ದತ್ತಾಂಶ ತಿಳಿಸುತ್ತದೆ.
ಗದಗ: ಬನಶಂಕರಿ ದೇವಸ್ಥಾನದ (Banashankari temple) ನೂತನ ಗೋಪುರಕ್ಕೆ ಸಿಡಿಲು ಬಡಿದು ಸ್ಥಳದಲ್ಲಿದ್ದ 8 ಜನ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Lakshmeshwara) ತಾಲೂಕಿನ ಶಿಗ್ಲಿ (Shigli) ಗ್ರಾಮದಲ್ಲಿ ನಡೆದಿದೆ.
ಶಿಗ್ಲಿ ಗ್ರಾಮದ ಐತಿಹಾಸಿಕ ಬನಶಂಕರಿ ದೇವಸ್ಥಾನ ಗೋಪುರಕ್ಕೆ ಸಿಡಿಲು ಬಡಿದು ಗೋಪುರ ಜಖಂ ಆಗಿದೆ. ಈ ವೇಳೆ ಸ್ಥಳದಲ್ಲಿದ್ದ 8 ಜನ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಓರ್ವನ ಕೈಗೆ ಗೋಪುರದ ಸಿಮೆಂಟ್ ತುಣುಕುಗಳು ಬಡಿದು ಗಾಯವಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ಪುಣ್ಯಸ್ಮರಣೆ – ತಂದೆಯ ಸಮಾಧಿಗೆ ಹೆಲಿಕಾಪ್ಟರ್ನಲ್ಲಿ ಪುಷ್ಪಾರ್ಚನೆ ಮಾಡಿಸಿದ ಮಗ
8 ತಿಂಗಳ ಹಿಂದೆಯಷ್ಟೇ ಸುಮಾರು 1.20 ಕೋಟಿ ರೂ. ವೆಚ್ಚದಲ್ಲಿ ಈ ಗೋಪುರ ಜೀರ್ಣೋದ್ಧಾರ ಮಾಡಲಾಗಿತ್ತು. ಸಾವಿರಾರು ಜನ ದಾನಿಗಳ ದೇಣಿಗೆ ಸಹಾಯದಿಂದ ಸುಂದರ ಗೋಪುರ ನಿರ್ಮಿಸಲಾಗಿತ್ತು. ಈಗ ಏಕಾಏಕಿ ಸಿಡಿಲು ಬಡಿದಿರುವುದರಿಂದ ಗ್ರಾಮದ ಜನರಲ್ಲಿ ಆತಂಕ ಮನೆಮಾಡಿದೆ. ಐತಿಹಾಸಿಕ ದೇವಸ್ಥಾನ ಗೋಪುರಕ್ಕೆ ಅಪಚಾರ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಪ್ರೀತಿಸಿದವಳಿಂದ ಕಪಾಳಮೋಕ್ಷ – ಅವಮಾನ ಸಹಿಸಲಾರದೇ ಪ್ರಿಯಕರ ಆತ್ಮಹತ್ಯೆ
Live Tv
[brid partner=56869869 player=32851 video=960834 autoplay=true]
ಶಿಯೋಪುರದ ಅಜ್ನೋಯಿ ಅರಣ್ಯದಲ್ಲಿ ವಿಹಾರಕ್ಕೆ (ಪಿಕ್ನಿಕ್) ತೆರಳಿದ್ದ ಆರು ಸ್ನೇಹಿತರಿಗೆ ಸಿಡಿಲು ಬಡಿದಿದೆ. ಇವರಲ್ಲಿ 20ರ ಹರೆಯದ ರಾಮಭಾರತ್ ಆದಿವಾಸಿ, ದಿಲೀಪ್ ಆದಿವಾಸಿ ಮತ್ತು ಮುಖೇಶ್ ಆದಿವಾಸಿ ಸ್ಥಳದಲ್ಲೇ ಮೃತಪಟ್ಟರೆ, ದಯಾರಾಮ್ ಆದಿವಾಸಿ, ಸತೀಶ್ ಆದಿವಾಸಿ ಮತ್ತು ಸೋಮದೇವ್ ಆದಿವಾಸಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಛತ್ತರ್ಪುರ, ಮಹಾರಾಜ್ಗಂಜ್ ಗ್ರಾಮದಲ್ಲಿ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿ ಮತ್ತು ಅವರ ಮಗ ಸಿಡಿಲು ಬಡಿತಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಮರವಾನ್ ಗ್ರಾಮದಲ್ಲಿ ರಾಧಾ ಅಹಿರ್ವಾರ್ (50) ಎಂಬ ಮತ್ತೊಬ್ಬ ರೈತ ಇದೇ ರೀತಿ ಮೃತಪಟ್ಟಿದ್ದಾರೆ.
ಬೆಂಗಳೂರು: ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗುಡುಗು ಮಿಂಚು ಸಹಿತ ಮಳೆಗೆ ಸಾವು-ನೋವು ಸಂಭವಿಸಿವೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಬುಧವಾರವು ಕೂಡ ವರುಣನ ಅಬ್ಬರಿಸಿದ್ದಾನೆ. ಯಶವಂತಪುರ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಗೊರಗುಂಟೆ ಪಾಳ್ಯ, ಯಶವಂತಪುರ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ. ವರುಣನ ಆರ್ಭಟ ಹಿನ್ನೆಲೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ.
ಸಿಡಿಲಿಗೆ ಮಹಿಳೆ ಬಲಿ:
ಮನೆಯ ಕಟ್ಟೆಯ ಮೇಲೆ ಕುಳಿತ್ತಿದ್ದಾಗ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ನಡೆದಿದೆ. ಶಾಂತಾಬಾಯಿ ಶಿವಪಾದಯ್ಯ ಆಹೇರಿಮಠ (36) ಸಿಡಿಲಿಗೆ ಬಲಿಯಾದ ಮಹಿಳೆ. ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿಯಲ್ಲಿ ಧಾರಾಕಾರ ಮಳೆಯಿಂದಾಗಿ ಐದು ಕುರಿಗಳು ಸಾವನ್ನಪ್ಪಿವೆ. ನಗರದ ಜಾನುವಾರು ಮಾರುಕಟ್ಟೆಯಲ್ಲಿ ಪ್ರತಿ ಗುರುವಾರ ಕುರಿ ಸಂತೆ ನಡೆಯುತ್ತದೆ. ಹೀಗಾಗಿ ಕುರಿಗಾಯಿಗಳು ಕುರಿಗಳನ್ನು ಮಾರಾಟ ಮಾಡಲು ತಂದಿದ್ದರು. ಆದರೆ ಮಳೆರಾಯನ ಅಬ್ಬರಕ್ಕೆ ಕುರಿಗಳು ಬಲಿಯಾಗಿವೆ.
ಹಾವೇರಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಸಂಜೆ ಆಗುತ್ತಿದ್ದಂತೆ ಎಂಟ್ರಿ ಕೊಡುವ ವರುಣ ಗುಡುಗು, ಸಿಡಿಲಿನೊಂದಿಗೆ ಆರ್ಭಟಿಸುತ್ತಿದ್ದಾನೆ. ಮಳೆ ಆರ್ಭಟಕ್ಕೆ ಜಿಲ್ಲೆಯ ಹಾನಗಲ್, ಸವಣೂರು ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಮನೆಗೆ ನುಗ್ಗಿದ ನೀರು ಹೊರಹಾಕಲು ಜನರ ಹರಸಾಹಸ ಮಾಡಿದ್ದಾರೆ. ಮತ್ತೊಂದೆಡೆ ಧಾರಾಕಾರ ಮಳೆಯಿಂದ ರಸ್ತೆಗಳ ತುಂಬ ಭರಪೂರ ನೀರು ತುಂಬಿ ಹರಿದು ಹರಿಯುತ್ತಿದೆ. ಧಾರಾಕಾರ ಮಳೆಗೆ ಜಿಲ್ಲೆಯ ಅನ್ನದಾತರು ಆತಂಕಕ್ಕೆ ಸಿಲುಕಿದ್ದಾರೆ. ಶೇಂಗಾ ಮತ್ತು ಮೆಕ್ಕೆಜೋಳ ನಿರಂತರ ಮಳೆಯಿಂದ ಸಂಪೂರ್ಣ ನಾಶವಾಗುವ ಹಂತಕ್ಕೆ ಬಂದಿದೆ.
ಕುರಿಗಳ ಮಾರಣ ಹೋಮ:
ಬಳ್ಳಾರಿ ಜಿಲ್ಲೆಯ ಸೊಂಡೂರು ತಾಲೂಕಿನ ಭುಜಂಗ ನಗರದ ಬಳಿ ಭಾರೀ ಮಳೆಯಾಗುತ್ತಿತ್ತು. ಹೀಗಾಗಿ 43 ಕುರಿಗಳು ಲಾರಿ ಕೆಳಗೆ ಆಶ್ರಯ ಪಡೆದಿದ್ದವು. ಈ ವೇಳೆ ಲಾರಿಗೆ ಸಿಡಿಲು ಪಡಿದು ಕುರಿಗಳು ಮೃತಪಟ್ಟಿವೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲೀನರ್ ಮತ್ತು ಇಬ್ಬರು ಕುರಿಗಾಯಿಗಳು ಪ್ರಣಾಪಾಯದಿಂದ ಪಾರಾಗಿದ್ದಾರೆ.
ಕೋಲಾರ ಜಿಲ್ಲೆಯ ಹಲವೆಡೆ ಮಳೆರಾಯನ ಆರ್ಭಟ ಮುಂದುವರಿದಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ಸಣ್ಣ ಸಣ್ಣ ಕೆರೆ ಕುಂಟೆಗಳು ತುಂಬಿ ಹರಿಯುತ್ತಿವೆ. ನಗರದ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿದ ಪರಿಣಾಮ ವಾಹನ ಸವಾರರ ಪರದಾಡುವಂತಾಯಿತು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣ ಅಬ್ಬರವನ್ನು ಮುಂದುವರಿಸಿದ್ದಾನೆ. ತರೀಕೆರೆ ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗಿದ್ದು, ರಸ್ತೆ ಮೇಲೆ ಅಡಿಯಷ್ಟು ನೀರು ನಿಂತಿದ್ದರಿಂದ ಸವಾರರು ಪರದಾಡುವಂತಾಗಿದೆ. ಅಷ್ಟೇ ಅಲ್ಲ ಅಂಗಡಿ-ಮಳಿಗೆಗಳಿಗೆ ಮಳೆ ನೀರು ನುಗ್ಗಿದೆ.
ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಬಾಗಲಕೋಟೆ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಜಮಖಂಡಿ ಬಸ್ ನಿಲ್ದಾಣ ಜಲಾವೃತವಾಗಿದ್ದು, ಪ್ರಯಾಣಿಕರು, ಚಾಲಕರು ಪರದಾಡುವಂತಾಗಿದೆ.
ಲಕ್ನೋ: ಉತ್ತರ ಪ್ರದೇಶದ ಹಲವು ಕಡೆ ನಿರಂತರ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಸುಮಾರು 35 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾನುವಾರದಂದು ರಾಜ್ಯದ ವಿವಿಧೆಡೆಯಲ್ಲಿ ಸಿಡಿಲು ಬಡಿದು 35 ಮಂದಿ ಪ್ರಾಣಬಿಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಒಂದೇ ದಿನದಲ್ಲಿ ಕಾನ್ಪುರ್ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸಾವನ್ನಪ್ಪ್ದಿದ್ದಾರೆ.
ವರದಿ ಪ್ರಕಾರ ಕಾನ್ಪುರದಲ್ಲಿ 7 ಮಂದಿ ಹಾಗೂ ಫತೇಪುರದಲ್ಲಿ 7 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಝಾನ್ಸಿಯಲ್ಲಿ 5, ಜಾಲೌನ್ ನಲ್ಲಿ 4, ಹಮೀರ್ಪುರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ, ಗಾಜಿಪುರದಲ್ಲಿ 2 ಮತ್ತು ಜಾನ್ಪುರದಲ್ಲಿ 1 ಮತ್ತು ಪ್ರತಾಪಗಢದಲ್ಲಿ ಓರ್ವ ವ್ಯಕ್ತಿ ಜೀವಬಿಟ್ಟಿದ್ದಾನೆ.
#UPCM श्री @myogiadityanath ने विभिन्न जनपदों में आकाशीय बिजली गिरने से हुई 9 लोगों की मृत्यु पर गहरा शोक व्यक्त किया। मुख्यमंत्री ने दिवंगत लोगों की आत्मा की शान्ति की कामना की व उनके परिजनों के प्रति संवेदनाएं व्यक्त की और कहा कि इस कठिन घड़ी में @UPGovt पीड़ितों के साथ है।
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಡಿಲು ಬಡಿದು ಹಾಗೂ ಹಾವು ಕಚ್ಚಿ ಸಾವನ್ನಪ್ಪಿರುವ ಕುಟುಂಬಕ್ಕೆ ಸಂತಾಪ ಸೂಚಿಸಿ, ರಾಜ್ಯದಲ್ಲಿ ಮಳೆಯಿಂದಾಗಿ ಆಗಿರುವ ಸಾರ್ವಜನಿಕ ನಷ್ಟದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ಅಷ್ಟೇ ಅಲ್ಲದೆ ಸಿಡಿಲ ಬಡಿತಕ್ಕೆ ಗಾಯಗೊಂಡಿರುವ ಮಂದಿಗೂ ಕೂಡ ಸರ್ಮಪಕವಾಗಿ ಚಿಕಿತ್ಸೆ ಒದಗಿಸಿ. ಸಂತ್ರಸ್ತರಿಗೆ ನೀಡುವ ಪರಿಹಾರ ಕಾರ್ಯದಲ್ಲಿ ಲೋಪವಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.