Tag: Lingadevaru

  • ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸ್ಪರ್ಧೆಗೆ ‘ವಿರಾಟಪುರ ವಿರಾಗಿ’ ಆಯ್ಕೆ

    ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಸ್ಪರ್ಧೆಗೆ ‘ವಿರಾಟಪುರ ವಿರಾಗಿ’ ಆಯ್ಕೆ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (B.S. Lingadevaru) ನಿರ್ದೇಶನದ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಮಾರ್ಚ್ 23 ರಿಂದ ನಡೆಯುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಏಷಿಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾಗಿದೆ. ಏಷಿಯನ್ ಸ್ಪರ್ಧೆಯಲ್ಲಿ ಇರಾನ್, ಇಸ್ರೆಲ್, ಜಪಾನ್, ಶ್ರೀಲಂಕಾ, ಬಾಂಗ್ಲಾದೇಶ, ಮರಾಠಿ ಸೇರಿದಂತೆ 14 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದ್ದು, ಈ ಹದಿನಾಲ್ಕು ಸಿನಿಮಾಗಳಲ್ಲಿ ವಿರಾಟಪುರ ವಿರಾಗಿ ಸಿನಿಮಾ ಕೂಡ ಒಂದು. ಚಿತ್ರೋತ್ಸವದಲ್ಲಿ ಇದೊಂದು ಮಹತ್ವದ ವಿಭಾಗ ಆಗಿರುವುದು ವಿಶೇಷ.

    ಹಾನಗಲ್ಲ  ಕುಮಾರಸ್ವಾಮಿಗಳ (Hanagal Kumaraswamy)  ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಇದನ್ನೂ ಓದಿ: ಜಿನಿವಾದಲ್ಲಿ ನಾಳೆ ‘ಕಾಂತಾರ’ ಸಿನಿಮಾ ಪ್ರದರ್ಶನ : ರಿಷಬ್ ಶೆಟ್ಟಿ ಭಾಗಿ

    ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ  ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.

    ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.

  • ಬಿಡುಗಡೆಗೂ ಮುನ್ನ‘ವಿರಾಟಪುರ ವಿರಾಗಿ’ ಚಿತ್ರದ 75 ಸಾವಿರ ಟಿಕೆಟ್ ಸೋಲ್ಡ್ ಔಟ್

    ಬಿಡುಗಡೆಗೂ ಮುನ್ನ‘ವಿರಾಟಪುರ ವಿರಾಗಿ’ ಚಿತ್ರದ 75 ಸಾವಿರ ಟಿಕೆಟ್ ಸೋಲ್ಡ್ ಔಟ್

    ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾ ಜನವರಿ 13 ರಂದು ದೇಶದಾದ್ಯಂತ ಬಿಡುಗಡೆ ಆಗುತ್ತಿದೆ. ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ 75 ಸಾವಿರಕ್ಕೂ ಹೆಚ್ಚು ಟಿಕೆಟ್ ಗಳು ಮಾರಾಟವಾಗಿವೆ. ಬಿಡುಗಡೆಯ ಹೊತ್ತಿಗೆ ಈ ಸಂಖ್ಯೆ ಒಂದು ಲಕ್ಷ ದಾಟಬಹುದು ಎಂದು ನಿರ್ದೇಶಕ ಬಿ.ಎಸ್.ಲಿಂಗದೇವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಈ ರೀತಿಯ ಸಿನಿಮಾಗಳಿಗೆ ಇಂತಹ ಬೆಂಬಲ ಸಿಕ್ಕಿದ್ದು ನಿಜಕ್ಕೂ ಅಚ್ಚರಿ ತಂದಿದೆ ಎನ್ನುವುದು ಅವರ ಮಾತು.

    ಮೊನ್ನೆಯಷ್ಟೇ ಈ ಸಿನಿಮಾದ ಟ್ರೈಲರ್ ಗದಗನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಯಿತು. ಈ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದರು. ಅವರ ಸಮ್ಮುಖದಲ್ಲಿ ರಿಲೀಸ್ ಆಗಿರುವ ಟ್ರೈಲರ್ ಗೂ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇಂಥದ್ದೊಂದು ಸಿನಿಮಾ ಈ ಹೊತ್ತಿಗೆ ತುರ್ತಾಗಿ ಬೇಕಿತ್ತು ಎನ್ನುವ ಮಾತುಗಳನ್ನು ಅನೇಕರು ಆಡಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಎಂಟ್ರಿಯಿಂದ ವಿಜಯ್- ಸಂಗೀತಾ ದಾಂಪತ್ಯದಲ್ಲಿ ಕಲಹ?

    ವಿರಾಟಪುರ ವಿರಾಗಿ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ್ದ ಜನಪ್ರಿಯ ಯುವ ನಾಯಕ ಬಿ.ವೈ ವಿಜಯೇಂದ್ರ ‘ಇಂಥದ್ದೊಂದು ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು’ ಎಂದಿದ್ದರು.

    ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿ ವಿನೂತನವಾಗಿ ರಥೆಯಾತ್ರೆ ಆರಂಭಿಸಿತ್ತು ಚಿತ್ರತಂಡ.  20-12-22 ರಂದು 6 ರಥಗಳು  ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆ ನಡೆಸಿ ಸುಮಾರು ಒಂದು ಕೋಟಿ ಜನರಿಗೆ ಹಾನಗಲ್ ಶ್ರೀಗಳು ಮತ್ತು ವಿರಾಟಪುರ ವಿರಾಗಿ ಸಿನಿಮಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೈಸೂರಿನಲ್ಲಿ ‘ವಿರಾಟಪುರ ವಿರಾಗಿ’ ಸಿನಿಮಾ ರಥಯಾತ್ರೆಗೆ ಚಾಲನೆ ನೀಡಿದ ಸುತ್ತೂರುಶ್ರೀ

    ಮೈಸೂರಿನಲ್ಲಿ ‘ವಿರಾಟಪುರ ವಿರಾಗಿ’ ಸಿನಿಮಾ ರಥಯಾತ್ರೆಗೆ ಚಾಲನೆ ನೀಡಿದ ಸುತ್ತೂರುಶ್ರೀ

    ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾದ ಧ್ವನಿ ಸುರುಳಿ ಬಿಡುಗಡೆ ಸಮಾರಂಭ ಮತ್ತು ರಥಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಿತು. ಮೈಸೂರು ಸುತ್ತೂರಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ನಿಂಬಾಳ ಶಾಂತಲಿಂಗೇಶ್ವರ ವಿರಕ್ತಮಠದ ಜಡೆಯ ಶಾಂತಲಿಂಗೇಶ್ವರ ಸ್ವಾಮಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನಡೆದವು. ಗೊ.ರು ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕ ಲಿಂಗದೇವರು, ಹಲವು ಮಠಗಳ ಮಠಾಧೀಶರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ.

    ಸಿನಿಮಾ ಕುರಿತು ಮತ್ತೋರ್ವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ‘ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು’ ಎಂದು ಮಾತನಾಡಿದ್ದಾರೆ.

    ಕನ್ನಡದ ಖ್ಯಾತ ನಟ ಸುಚೇಂದ್ರ ಪ್ರಸಾದ್ ಹಾನಗಲ್ ಕುಮಾರ ಶ್ರೀಗಳ ಪಾತ್ರವನ್ನು ನಿರ್ವಹಿಸಿದ್ದು, ಕರ್ನಾಟಕದ ನಾನಾ ಮಠಗಳಿ ಮಠಾಧೀಶರು ಕೂಡ ಪಾತ್ರ ಮಾಡಿರುವುದು ವಿಶೇಷ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಅಶೋಕ್ ವಿ ರಾಮನ್ ಅವರ ಸಿನಿಮಾಟೋಗ್ರಫಿ ಹಾಗೂ ಎಸ್. ಗುಣಶೇಖರನ್ ಅವರು ಸಂಕಲನ ಚಿತ್ರಕ್ಕಿದೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ

    ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾಗಾಗಿ 7000 ಕಿಲೋಮೀಟರ್ ರಥಯಾತ್ರೆ

    ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ, ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನಚರಿತ್ರೆ ಆಧರಿತ ಸಿನಿಮಾ ‘ವಿರಾಟಪುರ ವಿರಾಗಿ’ ಸಿದ್ಧವಾಗಿದೆ. ಸಮಾಧಾನ ಸಂಸ್ಥೆ ನಿರ್ಮಾಣದಲ್ಲಿ ಮೂಡಿ ಬಂದಿರುವ ಈ ಸಿನಿಮಾದ  ಹಿನ್ನೆಲೆಯನ್ನು ಸಾರುವುದಕ್ಕಾಗಿ ಕುಮಾರ ಶಿವಯೋಗಿಗಳ ನೆನಪಿನಲ್ಲಿ ‘ವಿರಾಗಿ ಶ್ರೀ ಕುಮಾರೇಶ್ವರ ರಥಯಾತ್ರೆ’ ನಡೆಸಲು ಉದ್ದೇಶಿಸಲಾಗಿದೆ.

    ರಾಜ್ಯಾದ್ಯಂತ ಆರು ರಥಗಳು, ಹದಿಮೂರು ದಿನಗಳ ಕಾಲ, ಏಳು ಸಾವಿರ ಕಿಲೋ ಮೀಟರ್ ಪಯಣವನ್ನು ಮಾಡಲಿವೆ. ಈ ರಥಯಾತ್ರೆಯಲ್ಲಿ ಒಟ್ಟು 360 ಸಭೆಗಳನ್ನೂ ಆಯೋಜನೆ ಮಾಡಲಾಗಿದ್ದು, ಒಂದು ಕೋಟಿ ಜನರನ್ನು ಮುಟ್ಟುವ ಗುರಿಯನ್ನು ಹೊಂದಲಾಗಿದೆ ಎಂದು ಲಿಂಗದೇವರು ತಿಳಿಸಿದ್ದಾರೆ. ಡಿಸೆಂಬರ್ 20ರಂದು ಶುರುವಾಗಲಿರುವ ಈ ರಥಯಾತ್ರೆಯು ಜನವರಿ 1 ರಂದು ಗದಗನಲ್ಲಿ ಮುಕ್ತಾಯಗೊಳ್ಳಲಿದೆ. ಇದನ್ನೂ ಓದಿ: ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಸಿನಿಮಾ ಕುರಿತು ಮತ್ತೋರ್ವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ‘ಕುಮಾರ ಶಿವಯೋಗಿಗಳು ಒಂದು ದಂತಕಥೆ. ಒಬ್ಬ ಮನುಷ್ಯ ತನ್ನ ಜೀವಿತಾಧಿಯಲ್ಲಿ ಏನೇನು ಮಾಡಲು ಅಸಾಧ್ಯವೋ ಅದನ್ನೆಲ್ಲಾ ಸಾಧ್ಯ ಮಾಡಿದ್ದಾರೆ. ಗಾಂಧೀಜಿಯವರು ಭಾರತಕ್ಕೆ ಬರುವ ಕೆಲವು ವರ್ಷಗಳ ಮೊದಲೇ ಗಾಂಧೀಜಿ ಅವರು ಆದರ್ಶ ಅಂದುಕೊಂಡಿದ್ದ ಬಹುತೇಕ ಕೆಲಸಗಳನ್ನು ಮಾಡಿ ತೋರಿಸಿದವರು ಹಾನಗಲ್ಲ ಗುರುಕುಮಾರ ಶಿವಯೋಗಿಗಳು’ ಎಂದು ಮಾತನಾಡಿದ್ದಾರೆ.

    ಹಾನಗಲ್ಲ  ಕುಮಾರೇಶ್ವರನನ್ನು 2ನೇ ಬಸವಣ್ಣ ಎಂದು ಕರೆಯಲಾಗುತ್ತದೆ. ಸ್ವಾತಂತ್ರ್ಯ ಪೂರ್ವದ ವಿಪರ್ಯಾಸದ ದಿನಗಳಲ್ಲಿ ನಾಡಿನ ಹಿತಕ್ಕಾಗಿ ನಿಂತವರು ಹಾನಗಲ್ಲ ಶ್ರೀಗಳು. ಮಠದಿಂದ ಘಟ ಬೆಳಗಬಾರದು – ಘಟದಿಂದ ಮಠ ಬೆಳಗಬೇಕೆಂದು ಸಾಧಿಸಿ ತೋರಿಸಿದವರು. 19ನೇ ಶತಮಾನದ ಆದಿಯಲ್ಲಿಯೇ ಅವರು ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದವರು. ಸಮ ಸಮಾಜ ನಿರ್ಮಾಣದ ರೂವಾರಿಗಳು. ಸರ್ವರಿಗೂ ಶಿಕ್ಷಣ. ಅಂಧರ ಬಾಳಿಗೆ ಸಂಗೀತ ಶಿಕ್ಷಣ. ಅಖಿಲ ಭಾರತ ವೀರಶೈವ (ಲಿಂಗಾಯತ) ಮಹಾಸಭಾ ಸ್ಥಾಪನೆ. ಮಹಿಳಾ ಶಿಕ್ಷಣ ಮತ್ತು ಸ್ತ್ರೀ ಸಬಲೀಕರಣ. ಶಿವಯೋಗ ಮಂದಿರ ಸ್ಥಾಪನೆ. ವಚನ ತಾಡೋಲೆಗಳ ಸಂಗ್ರಹ ಮತ್ತುಗ್ರಂಥಾಲಯ ಸ್ಥಾಪನೆ. ಅಧುನಿಕ ಕೃಷಿ ಪದ್ಧತಿ ಮತ್ತು ಗೋಶಾಲೆ ಸ್ಥಾಪನೆ. ವಿಭೂತಿ ಹಾಗೂ ಇಷ್ಟ ಲಿಂಗದ ನಿರ್ಮಾಣ, ಹತ್ತಿ ಕಾರ್ಖಾನೆಯ ಸ್ಥಾಪನೆ. ಆಯುರ್ವೇದಚಿಕಿತ್ಸಾಲಯ ಸ್ಥಾಪನೆ. ಚಿತ್ರಮಂದಿರಗಳ ಪ್ರಾರಂಭ, ಪ್ರಾಣಿ ಬಲಿ ನಿಷೇಧ. ಹೀಗೆ ಹತ್ತು ಹಲವಾರು ಸಾಧ್ಯತೆಗಳನ್ನು ಸಾಧ್ಯವಾಗಿಸಿದವರು  ಇವೆಲ್ಲವುಗಳನ್ನೂ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರಂತೆ ಲಿಂಗದೇವರು.

    ಕನ್ನಡದ ಖ್ಯಾತ ನಟ ಸುಚೇಂದ್ರ ಪ್ರಸಾದ್ ಹಾನಗಲ್ ಕುಮಾರ ಶ್ರೀಗಳ ಪಾತ್ರವನ್ನು ನಿರ್ವಹಿಸಿದ್ದು, ಲೇಖಕಿ ಕುಸುಮಾ ಆಯರಹಳ್ಳಿ ಅವರ ಪುತ್ರ ಸಮರ್ಥ ಆಯರಹಳ್ಳಿ ಹಾನಗಲ್ ಕುಮಾರ ಶ್ರೀಗಳ ಬಾಲ್ಯದ ಪಾತ್ರ ಮಾಡಿದ್ದಾರೆ. ಕರ್ನಾಟಕದ ನಾನಾ ಮಠಗಳ ಮಠಾಧೀಶರು ಕೂಡ ಪಾತ್ರ ಮಾಡಿರುವುದು ವಿಶೇಷ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಅಶೋಕ್ ವಿ ರಾಮನ್ ಅವರ ಸಿನಿಮಾಟೋಗ್ರಫಿ ಹಾಗೂ ಎಸ್. ಗುಣಶೇಖರನ್ ಅವರು ಸಂಕಲನ ಚಿತ್ರಕ್ಕಿದೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು ಮೆಚ್ಚುಗೆ ವ್ಯಕ್ತವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ಲಿಂಗದೇವರು ನಿರ್ದೇಶನದ ‘ವಿರಾಟಪುರ ವಿರಾಗಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ಧುನಿಕ ಬಸವಣ್ಣ ಎಂದೇ ಖ್ಯಾತರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ “ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಇತ್ತೀಚಿಗೆ ಬಿಡುಗಡೆಯಾಯಿತು.  ಶ್ರೀಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳು, ಶ್ರೀ ಸದಾಶಿವ ಮಹಾಸ್ವಾಮಿಗಳು ಹಾವೇರಿ, ಶ್ರೀ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಘನಬಸವ ಅಮರೇಶ್ವರ ಮಹಾಸ್ವಾಮಿಗಳು ಶಿವಮೊಗ್ಗ, ಕರ್ನಾಟಕ ಚಲನಚಿತ್ರ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ಪದ್ಮಶ್ರೀ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಮಾಜಿ ಸಚಿವರಾದ ಅಲ್ಲಮ ವೀರಭದ್ರಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು‌.‌ ಬಿ.ಎಸ್ ಲಿಂಗದೇವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.‌ ಸಮಾಧಾನ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

    ಎರಡೂ ವರೆ ವರ್ಷಗಳ ಹಿಂದೆ ಜಡೆಯ ಮಹಾಸ್ವಾಮಿಗಳು ನನಗೆ ಹಾನಗಲ್ ಕುಮಾರ ಶಿವಯೋಗಿಗಳ ಕುರಿತು ಸಿನಿಮಾ ಮಾಡಲು ಹೇಳಿದರು. ಆನಂತರ ನನ್ನ ಆಪ್ತರ ಬಳಿ ಈ ವಿಷಯವನ್ನು ಸಮಾಲೋಚನೆ ಮಾಡಿದೆ.  ಅವರೆಲ್ಲರೂ ನೀವು ಈ ಚಿತ್ರವನ್ನು ನಿರ್ದೇಶನ ಮಾಡಿ ಎಂದು ಧೈರ್ಯ ತುಂಬಿದರು. ನಾನು ನಿರ್ದೇಶನಕ್ಕೆ ಮುಂದಾದೆ.  ಅನೇಕ ಮಠಾಧೀಶರನ್ನು ಹಾಗೂ ವಿದ್ವಾಂಸರನ್ನು ಸಂಪರ್ಕಿಸಿ ಸ್ಕ್ರಿಪ್ಟ್ ಸಿದ್ದ ಮಾಡಿದೆ. “ಸಮಧಾನ” ತಂಡದಿಂದ ಚಿತ್ರ ನಿರ್ಮಾಣವಾಗಿದೆ. ಇದನ್ನೂ ಓದಿ: ರೂಪೇಶ್ ಶೆಟ್ಟಿ ವಿಚಾರವಾಗಿ, ಬಿಗ್ ಬಾಸ್ ವಿರುದ್ಧ ಸಾನ್ಯ ಅಯ್ಯರ್ ಗರಂ

    ಕುಮಾರ ಶಿವಯೋಗಿಗಳ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಆಭಿನಯಿಸಿದ್ದಾರೆ. ಈಗ ಚಿತ್ರ ಸಿದ್ದವಾಗಿದೆ. ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರರಾದ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರದ ಮೊದಲ ನೋಟ ಪರಮಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಗಿರುವುದು ತುಂಬಾ ಸಂತೋಷವಾಗಿದೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಶೋಕ್  ವಿ ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ಬಿ.ಎಸ್ ಲಿಂಗದೇವರು ಚಿತ್ರದ ಕುರಿತು ಮಾಹಿತಿ ನೀಡಿದರು.

    ಇಂತಹ ಪಾತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಪುಣ್ಯ ಎಂದರು ನಟ ಸುಚೇಂದ್ರ ಪ್ರಸಾದ್. ನೂರು ವರ್ಷಗಳ ಹಿಂದೆ ಸಮಾಜ ಈ ರೀತಿ ಇರಲಿಲ್ಲ. ಅಂತಹ ಸಮಯದಲ್ಲಿ ಅನೇಕ ಸುಧಾರಣೆಗೆ ಮುಂದಾದ, ಆಧುನಿಕ ಬಸವಣ್ಣ ಎಂದೇ ಎಲ್ಲರಿಂದಲೂ ಕರೆಯಲ್ಪಡುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರವನ್ನು ಪ್ರತಿಯೊಬ್ಬರೂ ನೋಡಬೇಕು. ಲಿಂಗ ದೇವರು  ನಿರ್ದೇಶನದ ಈ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ರಾಜ್ಯದ ಐದು ಕಡೆಗಳಿಂದ ರಥಯಾತ್ರೆ ನಡೆಯಲಿದೆ ಎಂದು ಜಡೆ ಅಮರೇಶ್ವರ ಶ್ರೀಗಳು ತಿಳಿಸಿದರು. ಶಾಮನೂರು ಶಿವಶಂಕರಪ್ಪ, ನಿರ್ದೇಶಕ ಗಿರೀಶ್ ಕಾಸರವಳ್ಳಿ ಹಾಗೂ ಅಲ್ಲಮ ವೀರಭದ್ರಪ್ಪ ಮುಂತಾದ ಗಣ್ಯರು ಮಾತನಾಡಿ, ಚಿತ್ರಕ್ಕೆ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]