Tag: Lingayat community

  • ಕ್ಯಾಬಿನೆಟ್ ಸಭೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಆಗೋ ಸಮಸ್ಯೆ ಬಗ್ಗೆ ಚರ್ಚೆ: ಎಂ.ಬಿ ಪಾಟೀಲ್

    ಕ್ಯಾಬಿನೆಟ್ ಸಭೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಆಗೋ ಸಮಸ್ಯೆ ಬಗ್ಗೆ ಚರ್ಚೆ: ಎಂ.ಬಿ ಪಾಟೀಲ್

    ಬೆಂಗಳೂರು: ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಜಾತಿಗಣತಿ (Caste Census) ಗೊಂದಲದ ಬಗ್ಗೆ ಚರ್ಚೆ ಮಾಡುತ್ತೇವೆ. ನಮಗೆ ಆಗುವ ಸಮಸ್ಯೆ ಬಗ್ಗೆ ಕ್ಯಾಬಿನೆಟ್‌ನಲ್ಲಿ ನಮ್ಮ ಆತಂಕದ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ತಿಳಿಸಿದ್ದಾರೆ.

    ಜಾತಿಗಣತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾವ ಲಿಂಗಾಯತ (Lingayats) ಮುಖಂಡರು ಸಭೆ ಮಾಡುತ್ತಿಲ್ಲ. ನಾಳೆ ಕ್ಯಾಬಿನೆಟ್ ಇದೆ, ಅಲ್ಲಿ ಚರ್ಚೆ ಮಾಡುತ್ತೇವೆ. ಶಾಮನೂರು ಶಿವಶಂಕರಪ್ಪನವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಇದೆಲ್ಲವೂ ಪ್ರಾಥಮಿಕ ಹಂತದಲ್ಲಿ ಇದೆ. ಕ್ಯಾಬಿನೆಟ್ ಇದೆ, ಅಲ್ಲಿ ಚರ್ಚೆ ಆಗಲಿದೆ. ಚರ್ಚೆ ಆಗದೇ ಏನೂ ಆಗಲ್ಲ. ಚರ್ಚೆ ಆಗದೇ ಏನೂ ನಿರ್ಣಯ ಆಗಲ್ಲ. ಅನೇಕ ಸಚಿವರು ಇದ್ದಾರೆ, ನಾನು ಈಶ್ವರ್ ಖಂಡ್ರೆ ಹೀಗೆ ಅನೇಕರು ಇದ್ದಾರೆ. ನಮ್ಮ ನಿಲುವು ಆತಂಕ ಏನು ಒಳ್ಳೆಯದಾಗಿದೆ ಅದನ್ನು ಹೇಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರು ಹಿಂದೂ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಾ – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ಲಿಂಗಾಯತರಲ್ಲೂ ಅನೇಕ ಸಮಸ್ಯೆ ಇದೆ. ಅದು ಕಾಂತರಾಜುರಿಂದ ಅಥವಾ ಸರ್ಕಾರದಿಂದ ಆಗಿದೆ ಎಂದು ಹೇಳಲ್ಲ. ಲಿಂಗಾಯತದ ಅನೇಕ ಉಪಪಂಗಡಗಳು ಇವೆ. ಮೀಸಲಾತಿ ಸಿಗುತ್ತದೆ ಎಂದು ಅವರು ಬೇರೆ ಬರೆಸಿದ್ದಾರೆ. ಅದನ್ನ ಹೇಗೆ ಬಗೆಹರಿಸಬೇಕು ಎಂದು ನೋಡುತ್ತೇವೆ. ಆ ಉಪಪಂಗಡ ಸೇರಿದರೆ ಜಾಸ್ತಿಯೇ ಆಗುತ್ತದೆ. ಟೆಕ್ನಿಕಲಿ ಸಮಸ್ಯೆ ಇದ್ದಾವೆ, ಅದೇನು ಸರಳ ಇಲ್ಲ. ಮೀಸಲಾತಿ ಬಿಡಿ ಎಂದು ಉಪಪಂಗಡಗಳಿಗೆ ಹೇಳಲು ಆಗಲ್ಲ. ಅದನ್ನು ಅವರು ಬಿಡೋದು ಇಲ್ಲ. ಅವರ ಮಕ್ಕಳಿಗೆ ಮೀಸಲಾತಿ ಸಿಗುತ್ತದೆ ಅಂತ ನಾವು ಟೀಕೆ ಟಿಪ್ಪಣಿ ಮಾಡಿದರೆ ಸರಿಯಲ್ಲ. ಕಾಂತರಾಜು ಮಾಡಿರೋದೆ ಇಷ್ಟು. ಸಮುದಾಯ ಗಣತಿ ಮಾಡಿ ಏನು ಪ್ರಯೋಜನ. 99% ಕ್ಯಾಬಿನೆಟ್‌ನಲ್ಲೇ ಸಮಸ್ಯೆ ಬಗೆಹರಿಯಲಿದೆ ಎಂದರು. ಇದನ್ನೂ ಓದಿ: ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ ಕೊಚ್ಚಿ ಹೋಗ್ತಾರೆ: ಕುಮಾರಸ್ವಾಮಿ ಆಕ್ರೋಶ

    ನಮ್ಮ ಸಮಸ್ಯೆ ವಿಭಿನ್ನವಾಗಿದೆ, ಹಾಗಾಗಿ ಇಲ್ಲೇ ಬಗೆಹರಿಸಬೇಕಾಗುತ್ತದೆ. ನಾವು ಲಿಂಗಾಯತರು ಬಸವ ತತ್ವದವರು. ಬೇರೆ ಸಮುದಾಯ ಅವರವರು ಸಭೆ ಮಾಡಿಕೊಳ್ಳುತ್ತಾರೆ. ನಾವು ಯಾರಿಗೂ ಸಮಸ್ಯೆ ಆಗಲಿ ಎಂದು ಮಾತಾಡಲ್ಲ. ನಮಗೆ ಸಮಸ್ಯೆ ಆಗೋದನ್ನು ನಾವು ಹೇಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳು ಇದ್ವು, ಆದ್ರೆ 180 ಜಾತಿ ಸೇರಿಸಿದ್ದಾರೆ: ಮಾದಾರ ಚೆನ್ನಯ್ಯ ಸ್ವಾಮೀಜಿ

  • ಹಿಂದೂ ವಿರೋಧಿ ನೀತಿಯಿಂದ್ಲೇ ಲಿಂಗಾಯತರ ಕಡೆಗಣನೆ – ಉನ್ನತ ಹುದ್ದೆಯಲ್ಲಿ ಅಲ್ಪಸಂಖ್ಯಾತರೇ ಇದ್ದಾರೆ: ಯತ್ನಾಳ್‌ ಕಿಡಿ

    ಹಿಂದೂ ವಿರೋಧಿ ನೀತಿಯಿಂದ್ಲೇ ಲಿಂಗಾಯತರ ಕಡೆಗಣನೆ – ಉನ್ನತ ಹುದ್ದೆಯಲ್ಲಿ ಅಲ್ಪಸಂಖ್ಯಾತರೇ ಇದ್ದಾರೆ: ಯತ್ನಾಳ್‌ ಕಿಡಿ

    – ಶಾಮನೂರು ಶಿವಶಂಕರಪ್ಪ ಪರ ಬ್ಯಾಟ್ ಬೀಸಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

    ವಿಜಯಪುರ:‌ ಪ್ರಸ್ತುತ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಹಾಗೂ ಲಿಂಗಾಯತ ವಿರೋಧಿ ನೀತಿಯಿಂದ ಲಿಂಗಾಯತರ ಕಡೆಗಣನೆ ಆಗಿದೆ. ಉನ್ನತ ಹುದ್ದೆಗಳಲ್ಲಿ ಅಲ್ಪಸಂಖ್ಯಾತರನ್ನೇ ಕೂರಿಸಿ ಲಿಂಗಾಯತ ಅಧಿಕಾರಿಗಳಿಗೆ (lingayat Officers) ಅವಮಾನ ಮಾಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

    ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತರು ಸಿಎಂ ಆಗಬೇಕು ಎಂಬ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಹೇಳಿಕೆಯನ್ನ ಸ್ವಾಗತಿಸಿದ್ದಾರೆ. ಈ ಬಾರಿ ಲಿಂಗಾಯತರು ಸಪೋರ್ಟ್‌ ಮಾಡಿದ್ದರಿಂದಲೇ ಕಾಂಗ್ರೆಸ್‌ಗೆ (Congress) 135 ಸ್ಥಾನ ಬಂದಿದೆ. ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಲಿಂಗಾಯತ ಅಧಿಕಾರಿಗಳಿಗೆ ಅವಮಾನ ಆಗಿರೋದು ನಿಜ. ಡಿಸಿ, ಎಸ್ಪಿ ಅಂತಹ ಉನ್ನತ ಹುದ್ದೆಗಳಲ್ಲಿ ಲಿಂಗಾಯತರು ಯಾರೂ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಸರ್ಕಾರದ ಹಿಂದೂ ವಿರೋಧಿ ಹಾಗೂ ಲಿಂಗಾಯತ ವಿರೋಧಿ ನೀತಿಯೇ ಇದಕ್ಕೆ ಕಾರಣ. ಎಲ್ಲ ಉನ್ನತ ಹುದ್ದೆಗಳನ್ನ ಅಲ್ಪಸಂಖ್ಯಾತರಿಗೆ ನೀಡಿ, ಲಿಂಗಾಯತ ಅಧಿಕಾರಿಗಳನ್ನ ಮೂಲೆಗುಂಪು ಮಾಡಿದ್ದಾರೆ. ಹಣಕಾಸು ಕಾರ್ಯದರ್ಶಿಯಿಂದ ಹಿಡಿದು ಸಿದ್ದರಾಮಯ್ಯನವರ ಮುಖ್ಯಮಂತ್ರಿ ಕಚೇರಿಯನ್ನೆಲ್ಲಾ ಅವರಿಗೇ ಕೊಟ್ಟಿದ್ದಾರೆ. ಅಲ್ಪಸಂಖ್ಯಾತರಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎನ್ನವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಲಿಂಗಾಯತ ಶಾಸಕರು ಕಾಂಗ್ರೆಸ್‌ನಲ್ಲಿ ಇದ್ದರೂ ಅವರಿಗೆ ಮಾತನಾಡಲು ಧಮ್‌ ಇಲ್ಲ, ಧೈರ್ಯ ಮಾಡೋದು ಇಲ್ಲ ಎಂದು ಲೇವಡಿ ಮಾಡಿದ್ದಾರೆ.

    ಬಿ.ಆರ್ ಪಾಟೀಲ್‌ ಆಳಂದ, ಬಸವರಾಜ ರಾಯರೆಡ್ಡಿ ಮಾತನಾಡಿ ಸುಮ್ಮನಾದರು. ನಮ್ಮಂತೆ ಮಾತನಾಡಿದ್ರೆ ಯಾಕೆ ಕೊಡೋದಿಲ್ಲ? ಶಾಮನೂರು ಶಿವಶಂಕರಪ್ಪನವರು ಸೋನಿಯಾಗಾಂಧಿ ಅವರ ಬಳಿ ಹೋಗಬೇಕು ಎಂದರಲ್ಲದೇ ಲಿಂಗಾಯತರಿಗೆ ಸ್ಥಾನಮಾನ ಕೊಡದೇ ಇದ್ದರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಳಮೀಸಲಾತಿ ಹಂಚಿಕೆ; ಪ್ರತ್ಯೇಕ ಮೀಸಲಾತಿ ರದ್ದು – EWS ಕೋಟಾ ವ್ಯಾಪ್ತಿಗೆ ಮುಸ್ಲಿಮರು

    ಒಳಮೀಸಲಾತಿ ಹಂಚಿಕೆ; ಪ್ರತ್ಯೇಕ ಮೀಸಲಾತಿ ರದ್ದು – EWS ಕೋಟಾ ವ್ಯಾಪ್ತಿಗೆ ಮುಸ್ಲಿಮರು

    ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದೆ. ಲಿಂಗಾಯತರಿಗೆ 2D ಮೀಸಲಾತಿ, ಒಕ್ಕಲಿಗರಿಗೆ 2C ಮೀಸಲಾತಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಮುಸ್ಲಿಮರಿಗೆ 2B ಮೀಸಲಾತಿ ರದ್ದುಗೊಳಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗದ ಅಡಿಯಲ್ಲೇ ಮೀಸಲಾತಿ ನೀಡುವ ಬಗ್ಗೆ ಚರ್ಚೆ ನಡೆದಿದೆ. ಆದ್ರೆ, ಈ ಬಗ್ಗೆ ತೀರ್ಮಾನ ಹೊರಬೀಳಬೇಕಿದೆ.

    ಮೀಸಲಾತಿ ಗಿಫ್ಟ್ – ಸರ್ಕಾರದ ನಿರ್ಣಯಗಳೇನು?
    ಲಿಂಗಾಯತ ಸಮುದಾಯಕ್ಕೆ ಶೇ.2 ಹೆಚ್ಚುವರಿ ಮೀಸಲಾತಿ ಕಲ್ಪಿಸುವ ನಿರ್ಣಯ ಕೈಗೊಂಡಿದೆ. 2D ಪ್ರವರ್ಗದಲ್ಲಿ ಲಿಂಗಾಯತರಿಗೆ ಇದ್ದ ಶೇ.5ರಷ್ಟು ಇದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲಾಗಿದೆ. ಒಕ್ಕಲಿಗ ಸಮುದಾಯಕ್ಕೆ ಶೇ.2 ಹೆಚ್ಚುವರಿ ಮೀಸಲಾತಿ ಕಲ್ಪಿಸಲಾಗಿದೆ. ಈ ಮೂಲಕ 2C ಪ್ರವರ್ಗದಲ್ಲಿ ಒಕ್ಕಲಿಗರಿಗೆ ಶೇ.4ರಷ್ಟು ಇದ್ದ ಮೀಸಲಾತಿಯನ್ನು ಶೇ.6ಕ್ಕೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

    ಮುಸ್ಲಿಮರಿಗೆ ಇದ್ದ ಪ್ರತ್ಯೇಕ 2B ಮೀಸಲಾತಿ ರದ್ದುಗೊಳಿಸಲಾಗಿದೆ. EWS (ಆರ್ಥಿಕ ದುರ್ಬಲ ವರ್ಗ) ಕೋಟಾ ವ್ಯಾಪ್ತಿಗೆ ಮುಸ್ಲಿಮರನ್ನು ಸೇರಿಸಿದ್ದು, ಅದೇ ಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ಕಾಡು ಕುರುಬ, ಗೊಂಡ ಕುರುಬರನ್ನ ಎಸ್‌ಟಿಗೆ ಸೇರಿಸಿ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರಕ್ಕೆ ಭೇಟಿ ಕೊಟ್ರೆ ಅಧಿಕಾರ ಹೋಗುತ್ತೆ – ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ, ಬೊಮ್ಮಾಯಿ‌

  • ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

    ಲಿಂಗಾಯತರಿಗೆ ಶೇ.7, ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ – SC ಒಳ ಮೀಸಲಾತಿಗೆ ಸಂಪುಟ ಅಸ್ತು

    ಬೆಂಗಳೂರು: ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವ ಹೊತ್ತಿನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಕ್ಕಲಿಗರು, ಲಿಂಗಾಯತ ಪಂಚಮಸಾಲಿ, ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿಯ ಗಿಫ್ಟ್‌ ಕೊಟ್ಟಿದ್ದಾರೆ.

    ಸಂಪುಟ ಸಭೆಯ ಬಳಿಕ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದು, ಈಗ ಅದು ಅನುಷ್ಟಾನದಲ್ಲಿ ಇದೆ. 9 ಶೆಡ್ಯೂಲ್ ಗೆ ಕಳುಹಿಸಿ ಕೊಟ್ಟಿದ್ದೇವೆ. ಒಳ ಮೀಸಲಾತಿಗೆ ಸಾಕಷ್ಟು ಹೋರಾಟ ನಡೆದಿತ್ತು. ಸ್ಪೃಶ್ಯರು, ಅಸ್ಪೃಶ್ಯರು ಸೇರಿ ಒಳಗೊಂಡಂತೆ ಎಸ್ಸಿಗಳಲ್ಲಿ 101 ಪಂಗಡಗಳಿವೆ. ಭೋವಿ, ಲಂಬಾಣಿ, ಕೊರಚ, ಕೊರ್ಮ ಮೂಲ ಪರಿಶಿಷ್ಟ ಜಾತಿಯಲ್ಲಿದ್ದಾರೆ. ಎಸ್ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಆರ್ಟಿಕಲ್ 341/2 ಅನ್ವಯ ನಾಲ್ಕು ಗುಂಪುಗಳಿಗೂ ಎಸ್ಸಿ ಲೆಫ್ಟ್, ರೈಟ್, ಅಸ್ಪೃಶ್ಯರು, ಇತರರು, ಎಡ‌ಕ್ಕೆ ಶೇ.6, ಬಲಕ್ಕೆ ಶೇ.5.5, ಸ್ಪೃಶ್ಯರು ಶೇ.4.5 ಹಾಗೂ ಇತರರಿಗೆ ಶೇ.1 ರಷ್ಟು ಮೀಸಲಾತಿ ನೀಡಲಾಗಿದೆ.  ಇದನ್ನೂ ಓದಿ: ವಿಜಯಪುರ ಲಾಡ್ಜ್‌ನಲ್ಲಿ ಎರಡು ಶವ ಪತ್ತೆ: ಸ್ಥಳಕ್ಕೆ ಎಸ್ಪಿ ಭೇಟಿ

    ರಾಜ್ಯದಲ್ಲಿ ಸ್ವತಂತ್ರ ಬಂದ ನಂತರ ಸಾಮಾಜಿಕವಾಗಿ ಅನೇಕ ನಿರ್ಣಯಗಳನ್ನ ಪ್ರಮುಖವಾಗಿ ತಗೆದುಕೊಳ್ಳಲಾಗಿದೆ. ಎಲ್ಲಾ ಸಮುದಾಯದಲ್ಲೂ ನಿರೀಕ್ಷೆಗಳು ಜಾಸ್ತಿ ಆಗಿದೆ. ನಾವು ವಿದ್ಯಾವಂತರಾಗಬೇಕು, ಉದ್ಯೋಗ ಪಡೆಯಬೇಕು ಎಂಬ ಆಕಾಂಕ್ಷೆ ಹೆಚ್ಚಿದೆ. ಬಹಳಷ್ಟು ಬೇಡಿಕೆಗಳೊಂದಿಗೆ ಹೋರಾಟಗಳು ನಡೆಯುತ್ತಿವೆ. ಎಲ್ಲಾ ಸಮುದಾಯಗಳ ಆಶೋತ್ತರಗಳನ್ನ ಈಡೇರಿಸಲು ಮುಂದಾದರೆ ಜೇನುಗೂಡಿಗೆ ಕೈ ಹಾಕಿದಂತೆ ಎಂಬ ಭಾವನೆ ಇದೆ. ಈಗಾಗಲೇ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಅದು ಅನುಷ್ಟಾನದಲ್ಲಿ ಇದೆ. ಇದನ್ನೂ ಓದಿ:  ಬಿಜೆಪಿಯವರು ಅವಹೇಳನಕಾರಿ ಭಾಷಣ ಮಾಡಿಲ್ವಾ: ದಿನೇಶ್ ಗುಂಡೂರಾವ್ ಪ್ರಶ್ನೆ

    3A 3B ನಲ್ಲಿ ಒಕ್ಕಲಿಗ ಅಂಡ್ ಹಾಗೂ ಇತರರು, ಲಿಂಗಾಯತ ಪಂಚಮಸಾಲಿ ಹಾಗೂ ಇತರರಿದ್ದು, ಒಕ್ಕಲಿಗರ ಮೀಸಲಾತಿಯನ್ನು 4 ರಿಂದ ಶೇ.6ಕ್ಕೆ, ಲಿಂಗಾಯತ ಪಂಚಮಸಾಲಿಗೆ ಇದ್ದ ಶೇ.5 ಮೀಸಲಾತಿ ಶೇ.7ಕ್ಕೆ ಹೆಚ್ಚಾಗಲಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕಾಡು ಕುರುಬ, ಗೊಂಡ ಕುರುಬ ಈಗಾಗಲೇ ಹೋಗಿದೆ. ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

    ಗುಂಪು 1 – ರಲ್ಲಿ
    ಎಡಗೈ ಸಮುದಾಯದ ಗುಂಪಿಗೆ ಶೇ 6 ಒಳ ಮೀಸಲಾತಿ
    (ಮಾದಿಗ, ಆದಿದ್ರಾವಿಡ, ಬಂಬಿ ಮತ್ತು ಇತರ ಸಂಬಂಧಿತ ಜಾತಿಗಳು)

    ಗುಂಪು 2-ರಲ್ಲಿ
    ಬಲಗೈ ಸಮುದಾಯದ ಗುಂಪಿಗೆ ಶೇ.5.5 ಒಳ ಮೀಸಲಾತಿ
    (ಹೊಲೆಯ, ಆದಿಕರ್ನಾಟಕ, ಛಲವಾದಿ ಮತ್ತು ಇತರೆ ಸಂಬಂಧಿಸಿದ ಜಾತಿಗಳು)

    ಗುಂಪು 3-ರಲ್ಲಿ
    ಬಂಜಾರ, ಭೋವಿ, ಕೊರಚ, ಕೊರಮ (ಅಸ್ಪಶ್ಯರಲ್ಲದ) ಗುಂಪಿಗೆ ಶೇ.4.5 ಒಳ ಮೀಸಲಾತಿ

    ಗುಂಪು 4-ರಲ್ಲಿ
    ಅಲೆಮಾರಿ, ಅರೆ ಅಲೆಮಾರಿ, ಇತರೆ ಸಮುದಾಯಕ್ಕೆ ಶೇ.1 ಒಳ ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

  • ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ (Panchamsali) 2C, 2D ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.

    ಈ ಹಿಂದೆ ಹೈಕೋರ್ಟ್ (Karnataka Highcourt) ಮುಖ್ಯ ನ್ಯಾಯಪೀಠ ನೀಡಿದ್ದ ಯಥಾಸ್ಥಿತಿ ಆದೇಶವನ್ನು ತೆರವುಗೊಳಿಸಿದೆ. ಪಂಚಮಸಾಲಿಗೆ 2A ಮೀಸಲಾತಿ ನೀಡದಂತೆ ಡಿ.ಜಿ ರಾಘವೇಂದ್ರ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.

    ಈ ಸಂಬಂಧ ಗುರುವಾರ ಮತ್ತೆ ವಿಚಾರಣೆ ನಡೆಸಿದಾಗ, 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಭರವಸೆ ನೀಡಿದರು. ಇದನ್ನೂ ಓದಿ: 2ಎ ಮೀಸಲಾತಿ ನೀಡಿ, ಕೊಟ್ಟಮಾತು ಉಳಿಸಿಕೊಳ್ಳಿ ಸಿಎಂ ಬೊಮ್ಮಾಯಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

    ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ತೆರವು ಮಾಡಿದೆ. ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಆದೇಶ ತೆರವು ಮಾಡಿದೆ. ಇದರಿಂದಾಗಿ ಪಂಚಮಸಾಲಿಗೆ 2C, 2D ಮೀಸಲಾತಿ ಕಲ್ಪಿಸಲು ಯಾವುದೇ ಅಡ್ಡಿ ಇಲ್ಲದಂತೆ ಆಗಿದೆ. ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸದಿದ್ದರೆ ಮತ್ತೆ ಹೋರಾಟ: ಜಯಮೃತ್ಯುಂಜಯ ಸ್ವಾಮೀಜಿ

    ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದ್ದು, 2A ಮೀಸಲಾತಿಯಲ್ಲಿ ಬದಲಾವಣೆ ಮಾಡದಂತೆ ಲಿಖಿತ ಹೇಳಿಕೆ ನೀಡಿತು. ಕೇಂದ್ರ ಸರ್ಕಾರ ನೀಡಿದ ಭರವಸೆಯಿಂದಾಗಿ ಮಧ್ಯಂತರ ಆದೇಶ ತೆರವು ಮಾಡಿದೆ. ಇದರೊಂದಿಗೆ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು ಎಂದು ಸೂಚಿಸಿದೆ.

  • ಬಿಎಸ್‍ವೈ ರಾಜೀನಾಮೆ ನೀಡಿದ್ರೆ ಬಿಜೆಪಿಯಿಂದ ಲಿಂಗಾಯತ ಸಮುದಾಯ ದೂರಾಗುತ್ತೆ: ಸಿದ್ದಲಿಂಗ ಸ್ವಾಮೀಜಿ

    ಬಿಎಸ್‍ವೈ ರಾಜೀನಾಮೆ ನೀಡಿದ್ರೆ ಬಿಜೆಪಿಯಿಂದ ಲಿಂಗಾಯತ ಸಮುದಾಯ ದೂರಾಗುತ್ತೆ: ಸಿದ್ದಲಿಂಗ ಸ್ವಾಮೀಜಿ

    ವಿಜಯಪುರ: ರಾಜ್ಯ ರಾಜಕಾರಣದ ಪ್ರಸ್ತುತ ಬೆಳವಣಿಗೆಯಿಂದ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುವ ಸಾಧ್ಯತೆ ಕಂಡು ಬರುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಲ್ಲಿ ಲಿಂಗಾಯತ ಸಮುದಾಯದವರು ಬಿಜೆಪಿಯಿಂದ ದೂರಾಗುತ್ತಾರೆ ಎಂದು ವಿಜಯಪುರದ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ವಚನಶಿಲಾ ಮಂಟಪ ವಿರಕ್ತಮಠದ ಸಿದ್ದಲಿಂಗ ಮಹಾಸ್ವಾಮೀಜಿ ಹೇಳಿದರು.

    ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು 40-50 ವರ್ಷಗಳವರೆಗೆ ಅಲೆದಾಡಿ ಪಕ್ಷ ಸಂಘಟಿಸುವ ಜೊತೆಗೆ ಬಿಜೆಪಿ ಅಧಿಕಾರಕ್ಕೆ ತಂದಿದ್ದಾರೆ. ಇದೀಗ ಅವರನ್ನು ನಡೆಸಿಕೊಳ್ಳುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಈ ಹಿಂದೆ ವಿರೇಂದ್ರ ಪಾಟೀಲರು 185ಕ್ಕೂ ಹೆಚ್ಚು ಶಾಸಕರನ್ನು ಗೆಲ್ಲಿಸಿ ಮುಖ್ಯಮಂತ್ರಿಯಾದ ನಂತರ ಕೇಂದ್ರದವರು ಸರಿಯಾಗಿ ನಡೆಸಿಕೊಳ್ಳದ ಕಾರಣದಿಂದ ಲಿಂಗಾಯತರು ಹಾಗೂ ಲಿಂಗಾಯತ ಬೆಂಬಲಿತ ಸಮಾಜದವರು ಕಾಂಗ್ರೆಸ್ ಪಕ್ಷದಿಂದ ದೂರಾದರು ಎಂದರು.

    ಹಿರಿಯ ಹಾಗೂ ಪ್ರಾಮಾಣಿಕ ವ್ಯಕ್ತಿಯಾದ ಎಸ್.ಆರ್.ಪಾಟೀಲರಿಗೆ ಕಾರಣವಿಲ್ಲದೆ ಸಚಿವ ಸ್ಥಾನದಿಂದ ಕಾಂಗ್ರೆಸ್ ತೆಗೆದು ಹಾಕಿದೆ. ಯಡಿಯೂರಪ್ಪನವರು ಲಿಂಗಾಯತ ಸರ್ವ ಸಮಾಜದ ಪ್ರಶ್ನಾತೀತ ಪ್ರಭಾವಿ ನಾಯಕರಾಗಿದ್ದು, ಕೇಂದ್ರದವರು ಇಲ್ಲವೆ ಶಾಸಕರು ರಾಜೀನಾಮೆ ಪಡೆಯುವ ಕಾರ್ಯಕ್ಕೆ ಮುಂದಾಗಬಾರದು. ಇಲ್ಲದಿದ್ದರೆ ಲಿಂಗಾಯತರು ಬಿಜೆಪಿಯಿಂದ ದೂರ ಸರಿಯುತ್ತಾರೆ ಎನ್ನುವುದನ್ನು ಅರಿತುಕೊಳ್ಳಬೇಕೆಂದು ಹೇಳಿದರು.

    ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತರಿಗೆ ಮುಖ್ಯಮಂತ್ರಿ ಪದವಿ ದೂರದ ಮಾತಾಗಿದ್ದು, ಮಂತ್ರಿ ಪದವಿಗೆ ತೃಪ್ತರಾಗಬೇಕಿದೆ. ಜೆಡಿಎಸ್‍ನಲ್ಲಿ ಮುಖ್ಯಮಂತ್ರಿ ಪದವಿ ಒಕ್ಕಲಿಗರಿಗೆ ಫಿಕ್ಸ್ ಆಗಿದೆ. ಯಡಿಯೂರಪ್ಪನವರು ರಾಜ್ಯದಲ್ಲಿ 25 ಸಂಸದರನ್ನು ಗೆಲ್ಲಿಸುವ ಮುಖಾಂತರ ಕೇಂದ್ರ ಸರ್ಕಾರಕ್ಕೆ ಕೊಡುಗೆ ನೀಡಿದ್ದಾರೆ. ಕೇಂದ್ರದವರು ಇದನ್ನು ಅರಿತುಕೊಳ್ಳಬೇಕು. ಈ ಹಿಂದೆ ಬಿಎಸ್‍ವೈ ಮುಖ್ಯಮಂತ್ರಿಯಾಗಿದ್ದಾಗ ಸದಾನಂದಗೌಡರು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾಗ ವ್ಯತಿರಿಕ್ತವಾಗಿ ಹೇಳಿಕೆ ನೀಡುವವರ ಮೇಲೆ ತಕ್ಷಣ ಕ್ರಮ ಕೈಗೊಳ್ಳುತ್ತಿದ್ದರು. ಪಕ್ಷಕ್ಕೆ ಹಾನಿಯಾಗದಂತೆ ನಿಗಾವಹಿಸುತ್ತಿದ್ದರು ಎಂದರು.

    ಇಂದಿನ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಉಳಿದ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು. ಮುಂದಿನ ಬಾರಿಯೂ ಯಡಿಯೂರಪ್ಪನವರ ನೇತೃತ್ವದಲ್ಲಿ ಚುನಾವಣೆ ನಡೆದಾಗ ಬಿಜೆಪಿ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಿದೆ. ಮುಂದಿನ ಅವಧಿಯಲ್ಲಿ ನೇತೃತ್ವ ತೆಗೆದುಕೊಂಡವರು ಮುಖ್ಯಮಂತ್ರಿ ಆಗಬಹುದು ಎಂದು ಶ್ರೀಗಳು ಹೇಳಿದರು.

    ಯಡಿಯೂರಪ್ಪನವರಿಗೆ ವಯಸ್ಸಾಗಿದೆ ಎನ್ನುವ ಕಾರಣ ಮುಂದೆ ಮಾಡಲಾಗುತ್ತಿದೆ. ಅವರಲ್ಲಿನ ಸಕಾರಾತ್ಮಕ ಕಾರ್ಯಗಳನ್ನು ಲೆಕ್ಕಕ್ಕಿಲ್ಲ ಇಲ್ಲದಂತೆ ಮಾಡಲಾಗುತ್ತಿದೆ. ಇದರಿಂದ ಬಿಜೆಪಿ ಹಾಗೂ ರಾಜ್ಯಕ್ಕೆ ಲಾಭವಾಗುತ್ತದೆ. ಬಿ.ವೈ ವಿಜಯೇಂದ್ರ ಹಾಗೂ ಬಿ.ವೈ ರಾಘವೇಂದ್ರ ಕೂಡ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಬಿಜೆಪಿ ಎಲ್ಲ ನಾಯಕರೂ ಒಂದು ಕುಟುಂಬದಂತೆ ಯೋಚಿಸಿ ಮುಂದಾಗಬೇಕು. ಚುನಾವಣೆಯಲ್ಲಿ ಕೇವಲ 20ರಷ್ಟು ಕೇಂದ್ರದ ಪ್ರಭಾವ ಬೀರುತ್ತದೆ. ಆದರೆ ಯಡಿಯೂರಪ್ಪನವರಿಗೆ ಎಲ್ಲರನ್ನು ಒಗ್ಗೂಡಿಸಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಸಾಮರ್ಥ್ಯವಿದೆ. ಕೆಲವರು ತಾವೇ ಪ್ರಭಾವಿ ಎಂದು ಕೊಂಡಿದ್ದಾರೆ. ಆದರೆ ಸ್ವಂತ ಶಕ್ತಿ ಮೇಲೆ ಗೆದ್ದು ಬರುವ ಸಾಮರ್ಥ್ಯವಿಲ್ಲದಿರುವುದು ವಾಸ್ತವಿಕ ಸಂಗತಿಯಾಗಿದೆ. ಮಂತ್ರಿ ಆಗದ ಶಾಸಕರು ಪಕ್ಷ ಹಾಗೂ ರಾಜ್ಯಕ್ಕೆ ತ್ಯಾಗ ಮಾಡಬೇಕು ಎಂದು ಶ್ರೀಗಳು ಒತ್ತಾಯಿಸಿದರು.

    ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮುಂಬೈ, ಕಲ್ಯಾಣ ಹಾಗೂ ಉತ್ತರ ಕರ್ನಾಟಕ, ಮೈಸೂರು ಭಾಗದ ಜನತೆ ಸಾಥ್ ನೀಡಿದ್ದಾರೆ. ಯಡಿಯೂರಪ್ಪನವರು ಲಿಂಗಾಯತ ಸಮುದಾಯಕ್ಕೆ ಹೇಳದೇ ಮುಖ್ಯಮಂತ್ರಿ ಹುದ್ದೆಯಿಂದ ಹಿಂದೆ ಸರಿಯಬಾರದು. ಅಲ್ಲದೇ ಮುಖ್ಯಮಂತ್ರಿಗಳು ಎಲ್ಲ ಸಮುದಾಯದ ಜನತೆಯೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ನಗುನಗುತ್ತಾ ಮಾತನಾಡಿ ಸ್ಪಂದಿಸಬೇಕು. ಲಿಂಗಾಯತ ಸಮುದಾಯದ ಭವಿಷ್ಯಕ್ಕಾಗಿ ನಾಯಕರು ಯಡಿಯೂರಪ್ಪನವರಿಗೆ ಸಹಕರಿಸಬೇಕು. ಯಡಿಯೂರಪ್ಪನವರು ಇಲ್ಲದ ಬಿಜೆಪಿ ಸಂಘಟನೆ ಕಷ್ಟಕರವಾಗಿದೆ. ಬಿಜೆಪಿ ನಾಯಕರು ಅವರಿಗೆ ಸಹಕಾರ ನೀಡಿ ನಾಡಿನ ಒಳತಿಗೆ ಸ್ಪಂದಿಸಬೇಕು ಎಂದು ಶ್ರೀಗಳು ಮನವಿ ಮಾಡಿದರು.

    ಸ್ವಾಮೀಜಿಗಳು ದಕ್ಷಿಣೆಗಾಗಿ ಯಡಿಯೂರಪ್ಪನವರನ್ನು ಬೆಂಬಲಿಸುತ್ತಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದು ಸರಿಯಲ್ಲ. ಬಹುತೇಕ ಮಠಾಧೀಶರು ನಯಾ ಪೈಸೆ ಅನುದಾನ ತೆಗೆದುಕೊಳ್ಳದೆ ಲಿಂಗಾಯತ ಸೇರಿ ಸರ್ವ ಸಮಾಜಕ್ಕೆ ಹಾಗೂ ನಾಡಿನ ಶ್ರೇಯೋಭಿವೃದ್ಧಿಗೆ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪನವರು ಮುಂದುವರಿಯಬೇಕು ಎನ್ನುತ್ತಿರುವುದನ್ನು ಅರಿತುಕೊಳ್ಳಬೇಕೆಂದು ಹೇಳಿದರು. ಇದನ್ನೂ ಓದಿ:ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ: ಹೆಬ್ಬಾರ್

  • ಲಿಂಗಾಯತರ ಪಟ್ಟಿಗೆ ‘ಶಾ’ ಕತ್ತರಿ! – ಬಿಎಸ್‍ವೈ ಆಪ್ತರಿಗೆ ಬಿಗ್ ಶಾಕ್

    ಲಿಂಗಾಯತರ ಪಟ್ಟಿಗೆ ‘ಶಾ’ ಕತ್ತರಿ! – ಬಿಎಸ್‍ವೈ ಆಪ್ತರಿಗೆ ಬಿಗ್ ಶಾಕ್

    ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬೆನ್ನಲ್ಲೇ ಉದ್ದವಿದ್ದ ಲಿಂಗಾಯತರ ಪಟ್ಟಿಗೆ ಕತ್ತರಿ ಹಾಕಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಸಚಿವ ಸಂಪುಟ ಪಟ್ಟಿಯಲ್ಲಿದ್ದ ಐದು ಲಿಂಗಾಯತ ನಾಯಕರಿಗೆ ಮಾತ್ರ ಮಣೆ ಹಾಕಲಾಗಿದೆ. ಅದರಲ್ಲೂ ಹಿರಿಯರಿಗೆ ಮಾತ್ರ ಮಂತ್ರಿಗಿರಿ ನೀಡಲು ಅಮಿತ್ ಶಾ ನಿರ್ಧರಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಲಿಂಗಾಯತ ಶಾಸಕರಿಗೆ ಬಿಗ್ ಶಾಕ್ ಉಂಟಾಗಿದೆ.

    ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಶಾಸಕ ಜಗದೀಶ್ ಶೆಟ್ಟರ್, ಗೋವಿಂದರಾಜ ನಗರದ ಶಾಸಕ ವಿ.ಸೋಮಣ್ಣ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಚಿಕ್ಕನಾಯಕನಹಳ್ಳಿ ಶಾಸಕ ಮಾಧುಸ್ವಾಮಿ ಹಾಗೂ ನಿಪ್ಪಾಣಿಯ ಶಾಸಕಿ ಶಶಿಕಲಾ ಜೊಲ್ಲೆ ಅವರು ಲಿಂಗಾಯತ ಸಮುದಾಯದ ನಾಯಕರಾಗಿದ್ದು, ಅವರಿಗೆ ಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಎಸ್ಸಿ/ಎಸ್ಟಿ ಸಮುದಾಯಕ್ಕೆ ಬಂಪರ್!
    ಬಿ.ಎಸ್.ಯಡಿಯೂರಪ್ಪ ಅವರ ಕ್ಯಾಬಿನೆಟ್‍ನಲ್ಲಿ ಲಿಂಗಾಯತರಿಗಿಂತ ಎಸ್‍ಸಿ-ಎಸ್‍ಟಿಗೆ ಹೆಚ್ಚು ಸಚಿವ ಸ್ಥಾನ ಸಾಧ್ಯತೆ ಇದೆ. ಪಕ್ಷೇತರ ನಾಗೇಶ್ ಸೇರಿದಂತೆ 6 ಮಂದಿಗೆ ಮಂತ್ರಿಗಿರಿ ಪಕ್ಕಾ ಆಗಿದ್ದು, ಎಸ್‍ಸಿಗೆ 4 ಹಾಗೂ ಎಸ್‍ಟಿಗೆ 2 ಸಚಿವ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ.

    ಎಸ್‍ಸಿ ಕೋಟಾದಲ್ಲಿ ಮುಳಬಾಗಿಲು ಪಕ್ಷೇತರ ಶಾಸಕ ನಾಗೇಶ್, ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ, ಮುಧೋಳದ ಶಾಸಕ ಗೋವಿಂದ ಕಾರಜೋಳ ಹಾಗೂ ಸುಳ್ಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಎಸ್‍ಟಿ ಕೋಟಾದಲ್ಲಿ ಮೊಳಕಾಳ್ಮೂರು ಶಾಸಕ ಶ್ರೀರಾಮುಲು ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಂತ್ರಿಗಿರಿ ನೀಡಲು ನಿರ್ಧರಿಸಲಾಗಿದೆ.

    ಹಿಂದುಳಿದ ವರ್ಗದ ಮೂವರಿಗೆ ಸಚಿವ ಸ್ಥಾನ ನೀಡುವಂತೆ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ. ಹೀಗಾಗಿ ಕುರುಬ ಸಮುದಾಯದ ಕೆ.ಎಸ್.ಈಶ್ವರಪ್ಪ, ಬಂಟ ಸಮುದಾಯದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹಾಗೂ ಬಿಲ್ಲವ ಸಮುದಾಯದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಮಂತ್ರಿಗೆ ಸಿಗಲಿದೆ ಎಂದು ಹೇಳಲಾಗುತ್ತಿದೆ.

    ಇಬ್ಬರು ಒಕ್ಕಲಿಗರಿಗಷ್ಟೇ ಮಂತ್ರಿ ಭಾಗ್ಯ!
    ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಒಕ್ಕಲಿಗರೇ ಹೆಚ್ಚಾಗಿದ್ದರು. ಆದರೆ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಇಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತಿದೆ. ಅದರಲ್ಲೂ ಬೆಂಗಳೂರಿನ ಇಬ್ಬರು ಒಕ್ಕಲಿಗ ಶಾಸಕರಿಗಷ್ಟೇ ಮಂತ್ರಿ ಭಾಗ್ಯ ಸಿಗಲಿದೆ. ಈ ಪಟ್ಟಿಯಲ್ಲಿ ಆರ್.ಅಶೋಕ್ ಹಾಗೂ ಅಶ್ವಥ್‍ನಾರಾಯಣ್ ಇದ್ದಾರೆ. ಈ ಮೂಲಕ ಆಪರೇಷನ್ ಕಮಲದ ಆಪರೇಟರ್ ಗೆ ಬಿಜೆಪಿ ಹೈಕಮಾಂಡ್ ಮಂತ್ರಿಗಿರಿ ಬಂಪರ್ ಆಫರ್ ನೀಡಿದೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

    ಬ್ರಾಹ್ಮಣ ಕೋಟಾದಲ್ಲಿ ಸುರೇಶ್ ಕುಮಾರ್, ಕೊಡವ ಕೋಟಾದಲ್ಲಿ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನ ನೀಡಲು ಅಮಿತ್ ಶಾ ಸೂಚನೆ ನೀಡಿದ್ದಾರಂತೆ. ಆದರೆ ಬಿಎಸ್‍ವೈ ಆಪ್ತರಾದ ಬಸವರಾಜ ಬೊಮ್ಮಾಯಿ, ಎಂ.ಪಿ.ರೇಣುಕಾಚಾರ್ಯ, ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಸಚಿವ ಸ್ಥಾನದಿಂದ ಸಿ.ಟಿ. ರವಿ ಅವರನ್ನು ಹೊರಗಿಟ್ಟಿರುವ ಅಮಿತ್ ಶಾ ಅವರು, ಬಿಜೆಪಿಯಲ್ಲಿ ಉನ್ನತ ಸ್ಥಾನ ನೀಡಲು ಚಿಂತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

    ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

    ವಿಜಯಪುರ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿರುದ್ಧ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಮತ್ತೆ ಗುಡುಗಿದ್ದಾರೆ.

    ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರಶ್ರೀ ತೆಗೆಯಲಿ. ನಮ್ಮನ್ನು ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ ಇದು ಸರಿಯಲ್ಲ. ಹೀಗೆ ಮುಂದುವರಿದರೆ ಧಕ್ಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ನಮ್ಮ ಆತ್ಮಸಾಕ್ಷಿ ಶ್ರೇಷ್ಠವಾಗಿದೆ. ಪೇಜಾವರ ಸ್ವಾಮೀಜಿ ಸವಾಲನ್ನು ಬದ್ಧತೆಯಿಂದ ಸ್ವೀಕರಿಸುತ್ತೇವೆ. ಅವರು ಧೈರ್ಯದ ಬಗ್ಗೆ ಮಾತನಾಡಿದ್ದಾರೆ. ಆ ರೀತಿ ಮಾತನಾಡಬಾರದು. ಬಸವಧರ್ಮದ ಬಗ್ಗೆ ನಮಗಿರುವ ಹೆಮ್ಮೆ, ನಂಬಿಕೆಯನ್ನು ಪೇಜಾವರ ಸ್ವಾಮೀಜಿ ಮುಂದಿಡುತ್ತೇವೆ. ಈ ಮೂಲಕ ಅವರನ್ನು ಕೂಡ ಬಸವ ಧರ್ಮದ ಕಡೆಗೆ ಸೆಳೆದುಕೊಳ್ಳುತ್ತೇವೆ. ಅವರು ಬಸವ ಧರ್ಮವನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

    ಪೇಜಾವರ ಸ್ವಾಮೀಜಿಗಳಿಗೆ ಒಂದು ಕನಿಷ್ಠ ಅರಿವು ಇರಬೇಕಿತ್ತು. ಹಿಂದೂ ಎನ್ನುವುದು ಧರ್ಮವಲ್ಲ. ಅದೊಂದು ಸನ್ಮಾರ್ಗ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಹೇಳಿದ್ದಾರೆ. ಅದನ್ನು ಪೇಜಾವರ ಶ್ರೀ ತಿಳಿದುಕೊಳ್ಳಬೇಕು. ಅದನ್ನು ಬಿಟ್ಟು ಪ್ರಧಾನಿಯಂತೆ ವರ್ತಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

    ಕಳೆದ ತಿಂಗಳು ವೀರಶೈವ ಮತ್ತು ಲಿಂಗಾಯತ ಹಿಂದೂ ಧರ್ಮದ ಅಂಗ ಎಂದು ಪೇಜಾವರ ಶ್ರೀಗಳು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಂಬಿ ಪಾಟೀಲ್, ನಮ್ಮ ಸಮಾಜಕ್ಕೆ ಸಂಬಂಧಿಸಿದ ವಿಷಯದಲ್ಲಿ ಲಿಂಗಾಯತ ಮುಖಂಡರು, ಸ್ವಾಮೀಜಿಗಳು ನಿರ್ಧಾರ ಮಾಡುತ್ತಾರೆ. ಇದರಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದರು.

    ಈ ವಿಚಾರ ಸಂಬಂಧ ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ್ದ ಪೇಜಾವರ ಸ್ವಾಮೀಜಿ, ಎಂ.ಬಿ.ಪಾಟೀಲ್ ಅವರು ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೇ. ಎಂ.ಬಿ.ಪಾಟೀಲ್ ಅವರ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದರು.

    ಎಂ.ಬಿ.ಪಾಟೀಲ್ ಅವರ ಉದ್ವೇಗ, ಆಕ್ರೋಶ ಸರಿಯಲ್ಲ. ನಾನು ಲಿಂಗಾಯತ ಮತವನ್ನು ಸರಿಪಡಿಸಲು ಹೋಗುತ್ತಿಲ್ಲ, ಅವರಲ್ಲಿರುವ ಹುಳುಕು ಹೇಳಿಲ್ಲ, ದೋಷಾರೋಪ ಮಾಡಿಲ್ಲ. ಸ್ನೇಹದಿಂದ ಸಹೋದರತ್ವದಿಂದ ನಮ್ಮಲ್ಲೇ ಇರಿ ಎಂದು ಹೇಳುತ್ತಿದ್ದೇನೆ. ನಾನು ಸೌಜನ್ಯದಿಂದ ಕೇಳಿದರೆ ಅವರು ಅಷ್ಟೊಂದು ಆಕ್ರೋಶಭರಿತವಾಗಿ ಹೇಳಲು ಕಾರಣವೇನು ಎಂದು ಪ್ರಶ್ನಿಸಿದ್ದರು.

    ಬಸವಣ್ಣನವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಧರ್ಮದ ಕುರಿತಾಗಿಯೂ ಯಾವುದೇ ದೋಷಾರೋಪ ಮಾಡಿಲ್ಲ. ಅವರಿಗೆ ಧೈರ್ಯವಿದ್ದರೆ ಬಹಿರಂಗ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ. ಇಂತಹ ಭಿನ್ನಾಪ್ರಾಯಗಳಿಗೆ ಸಂವಾದ ನಡೆಸುವುದು ಸೂಕ್ತ ಎಂದು ತಿಳಿಸಿದ್ದರು.

  • ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

    ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

    – ಮಾಜಿ ಸಚಿವರ ಉದ್ವೇಗ, ಆಕ್ರೋಶ ಸರಿಯಲ್ಲ

    ಮೈಸೂರು: ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ ಎಂಬ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆಗೆ ಪೇಜಾವರ ಶ್ರೀಗಳು ಮರು ಪ್ರಶ್ನೆ ಹಾಕಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಅದನ್ನು ಮಾಜಿ ಸಚಿವರು ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟುಹೋಗಬೇಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೇ. ಎಂ.ಬಿ.ಪಾಟೀಲ್ ಅವರ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

    ಎಂ.ಬಿ.ಪಾಟೀಲ್ ಅವರ ಉದ್ವೇಗ, ಆಕ್ರೋಶ ಸರಿಯಲ್ಲ. ನಾನು ಲಿಂಗಾಯತ ಮತವನ್ನು ಸರಿಪಡಿಸಲು ಹೋಗುತ್ತಿಲ್ಲ, ಅವರಲ್ಲಿ ಹುಳುಕು ಹೇಳಿಲ್ಲ, ದೋಷಾರೋಪ ಮಾಡಿಲ್ಲ. ಸ್ನೇಹದಿಂದ ಸಹೋದರತ್ವದಿಂದ ನಮ್ಮಲ್ಲೇ ಇರಿ ಎಂದು ಹೇಳುತ್ತಿದ್ದೇನೆ. ನಾನು ಸೌಜನ್ಯದಿಂದ ಕೇಳಿದರೆ ಅವರು ಅಷ್ಟೊಂದು ಆಕ್ರೋಶ ಬರಿತವಾಗಿ ಹೇಳಲು ಕಾರಣವೇನು ಎಂದು ಪ್ರಶ್ನಿಸಿದರು.

    ಬಸವಣ್ಣನವರ ಬಗ್ಗೆ ನನಗೆ ಬಹಳ ಗೌರವವಿದೆ. ಅವರ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಧರ್ಮದ ಕುರಿತಾಗಿಯೂ ಯಾವುದೇ ದೋಷಾರೋಪ ಮಾಡಿಲ್ಲ. ಅವರು ಬಹಿರಂಗ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

  • ಸಿಎಂ ಬಿಎಸ್‍ವೈಗೆ ಡಜನ್ ‘ಧರ್ಮ’ ಸಂಕಟ

    ಸಿಎಂ ಬಿಎಸ್‍ವೈಗೆ ಡಜನ್ ‘ಧರ್ಮ’ ಸಂಕಟ

    ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿ, ಸೋಮವಾರ ಬಹುಮತವನ್ನು ಸಾಬೀತು ಪಡಿಸಿದ್ದಾರೆ. ಆದರೆ ಇದೂವರೆಗೂ ಸಂಪುಟ ರಚನೆಯಾಗಿಲ್ಲ. ಸಂಪುಟ ರಚನೆಯಲ್ಲಿ ಮುಖ್ಯಮಂತ್ರಿಗಳಿಗೆ ‘ಧರ್ಮ’ ಸಂಕಟ ಎದುರಾಗಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕೆಂಬ ಗೊಂದಲದಲ್ಲಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

    ಸಿಎಂ ಯಡಿಯೂರಪ್ಪಗೆ ಅವರಿಗೆ ಡಜನ್ ಗಟ್ಟಲೆ ಸಂಕಟ ಎದುರಿಸುತ್ತಿದ್ದು, ತಮ್ಮದೇ ಸಮುದಾಯದ ಆಪ್ತರ ತಲೆನೋವಾಗಿದೆ. ಯಡಿಯೂರಪ್ಪ ಕ್ಯಾಬಿನೆಟ್ ಸೇರಲು ಲಿಂಗಾಯತ ಸಮುದಾಯದ ಡಜನ್ ಗಟ್ಟಲೆ ಆಂಕಾಕ್ಷಿಗಳು ಇದ್ದಾರೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ಕೊಡುವುದು, ಯಾರಿಗೆ ಬಿಡುವುದು ಅನ್ನೋ ಧರ್ಮ ಸಂಕಟದಲ್ಲಿ ಬಿಎಸ್‍ವೈ ಎದುರಾಗಿದೆ. ಇದನ್ನೂ ಓದಿ: ಎಲ್ಲಾ ಸಚಿವಸ್ಥಾನ ಲಿಂಗಾಯತರಿಗೆ ಕೊಟ್ರೆ ಅತೃಪ್ತರು ವಿಷ ಕುಡಿಬೇಕಾ: ಮುಖಂಡರಿಗೆ ಬಿಎಸ್‍ವೈ ಪ್ರಶ್ನೆ

    ಸಚಿವ ಸ್ಥಾನ ಆಂಕಾಕ್ಷಿಗಳು: ಜಗದೀಶ್ ಶೆಟ್ಟರ್, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಎಂ.ಉದಾಸಿ, ಜೆ.ಸಿ.ಮಾಧುಸ್ವಾಮಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಬಸನಗೌಡಪಾಟೀಲ್ ಯತ್ನಾಳ್, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ದತ್ತಾತ್ರೇಯ ಪಾಟೀಲ್ ರೇವೂರ್.

    ಈ 12 ಮಂದಿ ಸಚಿವ ಸ್ಥಾನದ ರೇಸಿನ ಮುಂಚೂಣಿಯಲ್ಲಿ ಇದ್ದಾರೆ. 12 ಮಂದಿ ಲಿಸ್ಟನ್ನು ಯಡಿಯೂರಪ್ಪ ಅವರು ಕನಿಷ್ಠ 5 ಸ್ಥಾನ, ಗರಿಷ್ಠ 7ಕ್ಕೆ ಇಳಿಸಬೇಕಿದೆ. ಒಂದೇ ಸಮುದಾಯದ ಡಜನ್ ಗಟ್ಟಲೆ ಶಾಸಕರನ್ನ ಸಚಿವರನ್ನಾಗಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಯಡಿಯೂರಪ್ಪ ಅವರು ಧರ್ಮಸಂಕಟದಲ್ಲಿ ಸಿಲುಕಿದ್ದಾರೆ.

    ನಿಗಮ ಮಂಡಳಿ, ಸಂಸದೀಯ ಕಾರ್ಯದರ್ಶಿ ಸ್ಥಾನಗಳನ್ನ ಸಚಿವ ಸ್ಥಾನದಿಂದ ವಂಚಿತರಾದ ಆಪ್ತರಿಗೆ ಕೊಡುತ್ತಾರ? ಈ ಧರ್ಮಸಂಕಟವನ್ನ ಹೇಗೆ ಪರಿಹಾರ ಮಾಡುತ್ತಾರೆ ಎಂಬ ಕುತೂಹಲ ಮೂಡಿದೆ.