Tag: Lingayat separate religion

  • ಜಾತಿ ವಿಚಾರಕ್ಕೆ ಕೈಹಾಕಿದ್ದಕ್ಕೆ ಜನ್ರು ನಮ್ಮ ಕಪಾಳಕ್ಕೆ ಬಾರಿಸಿದ್ರು: ಡಿಕೆಶಿ

    ಜಾತಿ ವಿಚಾರಕ್ಕೆ ಕೈಹಾಕಿದ್ದಕ್ಕೆ ಜನ್ರು ನಮ್ಮ ಕಪಾಳಕ್ಕೆ ಬಾರಿಸಿದ್ರು: ಡಿಕೆಶಿ

    – ಬಹಿರಂಗವಾಗಿ ಕ್ಷಮೆಯಾಚಿಸಿದ ಸಚಿವರು
    – ಇನ್ನು ಯಾವುದೇ ಕಾರಣಕ್ಕೆ ಜಾತಿ ವಿಚಾರದಲ್ಲಿ ಕೈ ಹಾಕಲ್ಲ

    ಬಳ್ಳಾರಿ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕೈಹಾಕಿದ್ವಿ. ಆದರೆ ಜನರು ನಮ್ಮ ಕಪಾಳಕ್ಕೆ ಬಾರಿಸಿದರು ಎಂದು ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಹೂವಿನಹಡಗಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಬಿಜೆಪಿಯವರು ಒಂದು ಧರ್ಮದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಯಾರೋ ಏನೋ ಹೇಳಿದರೂ ಅಂತ ನನ್ನ ಸೇರಿದಂತೆ ನಮ್ಮ ಪಕ್ಷದ ಕೆಲವರು ವೀರಶೈವರ ವಿಚಾರಕ್ಕೆ ಕೈ ಹಾಕಿದ್ವಿ. ಈ ಮೂಲಕ ಪ್ರತ್ಯೇಕ ಧರ್ಮ ಮಾಡಲು ತೀರ್ಮಾನ ಮಾಡಿದ್ವಿ. ಅದಕ್ಕೆ ಜನ ನಮ್ಮ ಕಪಾಳಕ್ಕೆ ಹೊಡೆದರು. ಹೀಗಾಗಿ ನಿಮಗೂ ಹಾಗೂ ರಾಜ್ಯದ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಕ್ಷಮೆಯಾಚಿಸಿದರು.

    ಇನ್ನೆಂದೂ ಕಾಂಗ್ರೆಸ್ ಜಾತಿ, ಧರ್ಮದ ವಿಚಾರದಲ್ಲಿ ಕೈಹಾಕುವುದಿಲ್ಲ. ನಿಮ್ಮ ಕ್ಷಮೆ ಇರಲಿ. ರಾಜಕೀಯದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂಬ ನಿರ್ಧಾರವನ್ನು ಕೈಗೊಂಡಿದ್ದೇನೆ. ಹೀಗಾಗಿ ಈ ಹಿಂದೆ ಆಗಿರುವುದನ್ನು ಮರೆತು ಎಲ್ಲರೂ ಒಟ್ಟಾಗಿ ಹೋಗಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.

    ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿಯಾಗಿದೆ. ದೇಶದಲ್ಲಿ ಜಾತ್ಯಾತೀತತೆ ತತ್ವ ಉಳಿಸಲು ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದ್ದೇವೆ. ನಾನು ಹೋಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಜೊತೆಗೆ ಮಾತನಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಟ್ಟೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 22ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಈ ಮೂಲಕ ಬಿಜೆಪಿ ಒಂದು ಅಂಕಿ ದಾಟದಂತೆ ಕಟ್ಟಿ ಹಾಕುತ್ತೇವೆ ಎಂದು ಹೇಳಿದರು.

    ಈಶ್ವರಪ್ಪ ಅಂತ ಒಬ್ಬರಿದ್ದಾರೆ. ಅವರು ವಿರೋಧ ಪಕ್ಷ ನಾಯಕರಾಗಿದ್ದು, ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣೆಯ ನಂತರ ನೆಗೆದು ಬೀಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ ಸಂಸ್ಕಾರ, ಸಂಸ್ಕೃತಿ ಇದೆಯಾ ಎಂದು ಪ್ರಶ್ನಿಸಿ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

    ಬಳ್ಳಾರಿ ಜನರು ಬಿಜೆಪಿ ಶಾಸಕರಾದ ಶ್ರೀರಾಮುಲು, ಕರುಣಾಕರ ರೆಡ್ಡಿ, ಜೆ.ಶಾಂತಾ ಅವರನ್ನು ಮೂರು ಬಾರಿ ಗೆಲ್ಲಿಸಿ ಕಳಿಸಿದಿರಿ. ಅವರು ಜಿಲ್ಲೆಗೆ ಯಾವ ಕೊಡುಗೆ ನೀಡಿದ್ದಾರೆ? ಈಗ ಶ್ರೀರಾಮುಲು ಅವರು ಕುಸ್ತಿ ಆಡುವುದನ್ನು ಬಿಟ್ಟು ದೇವೇಂದ್ರಪ್ಪ ಅವರನ್ನು ಕಣಕ್ಕೆ ಇಳಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

    ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಹೊರಾಟ ಮಾಡಿದ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಅವರಿಗೆ ರೆಸ್ಟ್ ನೀಡಿದ್ದಾರೆ. ಅವರಂತೆ ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೂ ರೆಸ್ಟ್ ನೀಡಿದ್ದಾರೆ. ಅವರು ಮುಖ್ಯಮಂತ್ರಿಯಾಗುತ್ತೇನೆ ಅಂತ ಕನಸು ಕಾಣುತ್ತಿದ್ದಾರೆ. ನಾವೇನು ಕಡ್ಲೆಕಾಯಿ ತಿನ್ನುತ್ತೇವಾ? ಈ ರಾಜ್ಯದಲ್ಲಿ ಇನ್ನೂ ಐದು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದರು.

    ಡಿಕೆ ಶಿವಕುಮಾರ್ ಹೇಳಿದ್ದು ಏನು?
    2018ರ ಬಳ್ಳಾರಿ ಲೋಕಸಭಾ ಉಪಚುನಾವಣೆಯ ಸಮಯದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶರನ್ನವರಾತ್ರಿ ಅಂಗವಾಗಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ನಡೆದ ಧರ್ಮಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ನಮ್ಮ ಸರ್ಕಾರದಲ್ಲಿ ನಾವು ದೊಡ್ಡ ತಪ್ಪನ್ನು ಮಾಡಿದ್ದೇವೆ. ಸರ್ಕಾರದವರು, ರಾಜಕೀಯದವರು ಧರ್ಮದ ವಿಚಾರದಲ್ಲಿ ಜಾತಿಯ ವಿಚಾರದಲ್ಲಿ ಕೈ ಹಾಕಬಾರದು. ನಮ್ಮ ಸರ್ಕಾರದಿಂದ ದೊಡ್ಡ ಅಪರಾಧವಾಗಿದೆ. ನಾನೂ ಸಹ ಆ ಸರ್ಕಾರದಲ್ಲಿ ಮಂತ್ರಿಯಾಗಿದ್ದೆ. ನಮ್ಮ ಬೇರೆ ಸಚಿವರು ವಿಭಿನ್ನವಾಗಿ ಮಾತನಾಡಿದರು. ಆದ್ರೆ ಸರ್ಕಾರದ ತೀರ್ಮಾನ ಆ ಸಂದರ್ಭದಲ್ಲಿ ಬೇಕಾದಷ್ಟು ಅಲ್ಲೋಲ ಕಲ್ಲೋಲ ಸೃಷ್ಟಿಯಾಯ್ತು. ರಾಜಕೀಯದಲ್ಲಿ ಅನೇಕ ವಿಭಿನ್ನವಾದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಯಾವುದೇ ಸರ್ಕಾರ ಧರ್ಮದಲ್ಲಿ ಕೈ ಹಾಕಬಾರದು ಎನ್ನೋದಕ್ಕೆ ವಿಧಾನಸಭಾ ಚುನಾವಣೆಯಲ್ಲಿ ನಡೆದ ಜನಾಭಿಪ್ರಾಯವೇ ಸಾಕ್ಷಿ ಎಂದಿದ್ದರು.

  • ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆ: ಡಾ.ಸಿದ್ದರಾಮ ಶ್ರೀ

    ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆ: ಡಾ.ಸಿದ್ದರಾಮ ಶ್ರೀ

    – ಮೂರು ಪ್ರಶ್ನೆಗಳಿಗೆ ಪಂಚಪೀಠ ಶ್ರೀಗಳು ಉತ್ತರಿಸಿಲಿ: ಎಸ್.ಎಂ ಜಾಮದಾರ್ ಸವಾಲು

    ಗದಗ: ಹಿಂದುತ್ವವಾದಿ ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆಯಾಗಿದೆ ಎಂದು ಗದಗ ತೋಂಟದಾರ್ಯ ಮಠದ ಡಾ.ಸಿದ್ದರಾಮ ಶ್ರೀಗಳು ಆರೋಪಿಸಿದ್ದಾರೆ.

    ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಲಿಂಗಾಯತ ಧರ್ಮ ಮತ್ತು ಚಿಂತನಾ ಗೋಷ್ಠಿ ಬಳಿಕ ಮಾತನಾಡಿದ ಶ್ರೀಗಳು, ಬಿಜೆಪಿ ಹಿಂದುತ್ವ ರಕ್ಷಕ ಪಕ್ಷ. ಲಿಂಗಾಯತರು ಹಿಂದೂ ಧರ್ಮದಿಂದ ಹೊರಗೆ ಹೋಗಬಾರದು ಎನ್ನುವುದು ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ದೂರಿದರು.

    ಜೈನರು ಹಾಗೂ ಬೌದ್ಧರು ಮೊದಲು ಹಿಂದೂಗಳಾಗಿದ್ದರು. ಆದರ ಈಗ ಹಿಂದೂ ಧರ್ಮದಿಂದ ಹೊರಗೆ ಹೋಗಿದ್ದಾರೆ. ಇದರಿಂದ ಹಿಂದೂ ಧರ್ಮಕ್ಕೆ ಏನು ಹಾನಿಯಾಗಿದೆ? ಲಿಂಗಾಯತರು ದೇಶಪ್ರೇಮಿಗಳು ದೇಶದ್ರೋಹಿಗಳಲ್ಲ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಯಾವತ್ತೂ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದರು.

    ಲಿಂಗಾಯತ ಮಹಾಸಭಾ ಮಹಾಪ್ರಧಾನ ಕಾರ್ಯದರ್ಶಿ ಎಸ್.ಎಂ ಜಾಮದಾರ್ ಅವರು ಮಾತನಾಡಿ, ಲಿಂಗಾಯತ ಧರ್ಮ ಹಾಳಾಗಿದ್ದೇ ಪಂಚಪೀಠದ ಶ್ರೀಗಳಿಂದ ಎಂದು ಗಂಭೀರ ಆರೋಪ ಮಾಡಿದರು. ಪಂಚಪೀಠ ಶ್ರೀಗಳಿಗೆ ಜಾಮದಾರ್ 3 ಪ್ರಶ್ನೆಗಳನ್ನು ಉತ್ತರಿಸುವಂತೆ ಕೇಳಿದ್ದಾರೆ.

    ಪಂಚಪೀಠ ಶ್ರೀಗಳು ತಮ್ಮ ಮಠಗಳಲ್ಲಿ ಬಸವಣ್ಣನವರ ಫೋಟೋ ಹಾಕಿಕೊಂಡಿದ್ದಾರೆ. ಕಳೆದ 200 ವರ್ಷಗಳಿಂದ ಸುಮಾರು 160ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆಸಿದ್ದಾರೆ. ಆ ಪುಸ್ತಕಗಳ ಮೂಲಕ ಬಸವಣ್ಣನವರ ಹಾಗೂ ಅವರ ಜೊತೆಗಿದ್ದ ಶರಣದ ಚಾರಿತ್ರ್ಯವದೆಯನ್ನು ಮಾಡಿದ್ದಾರೆ. ನೀವು ಹೀಗೆ ಮಾಡಿದ್ದು ಯಾಕೆ? ಇದಕ್ಕೆ ಪಂಚಪೀಠ ಶ್ರೀಗಳು ಉತ್ತರ ನೀಡಿಲಿ ಎಂದು ಆಗ್ರಹಿಸಿದರು.

    ನಿಮ್ಮ ಧರ್ಮ ಪ್ರಚಾರಕ್ಕಾಗಿ ಲಿಂಗಾಯತ ಧರ್ಮವನ್ನು ಭ್ರಷ್ಟಗೊಳಿಸಿದ್ದಿರಿ. ಆದರೆ ಈಗ ವೀರಶೈವ ಹಾಗೂ ಲಿಂಗಾಯತ ಧರ್ಮ ಒಂದೇ ಆಗಬೇಕೆಂದು ಯಾಕೆ ಹೇಳುತ್ತಿರಿ? ಎಂದ ಅವರು, ನನ್ನ ಮೂರನೇ ಪ್ರಶ್ನೆ ನೀವು ಬ್ರಾಹ್ಮಣರೋ, ವೀರಶೈವ ಬ್ರಾಹ್ಮಣರೋ? ಲಿಂಗಾಯತರೋ? ಎನ್ನುದನ್ನು ಸ್ಪಷ್ಟಪಡಿಸಿ ಎಂದು ಪಂಚಪೀಠ ಶ್ರೀಗಳಿಗೆ ಕೇಳಿದರು.

    ನೀವು ಲಿಂಗಾಯತರು ಬಸವಾದಿ ಶರಣರ ತತ್ವ ಒಪ್ಪುವುದಾದರೆ ನಾವು ಗೌರವಯುತವಾಗಿ ಸ್ವಾಗತಿಸುತ್ತೇವೆ. ಆದರೆ ಬಸವಣ್ಣನವರ ಚಾರಿತ್ರ್ಯವದೆ ಮಾಡಿ ಅಮಾಯಕ ಜನರ ದಾರಿತಪ್ಪಿಸುವ ಕೆಲವನ್ನು ಮಾಡಬಾರದು ಎಂದು ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಿಂಗಾಯತ ಧರ್ಮದ ಬಗ್ಗೆ ಪ್ರಶ್ನೆ: ಸಿಎಂ ಕೈಗೆ ಮೈಕ್ ಕೊಟ್ಟ ರಾಹುಲ್ ಗಾಂಧಿ

    ಲಿಂಗಾಯತ ಧರ್ಮದ ಬಗ್ಗೆ ಪ್ರಶ್ನೆ: ಸಿಎಂ ಕೈಗೆ ಮೈಕ್ ಕೊಟ್ಟ ರಾಹುಲ್ ಗಾಂಧಿ

    ದಾವಣಗೆರೆ: ಮಧ್ಯ ಕರ್ನಾಟಕದ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂವಾದ ಕಾರ್ಯಕ್ರಮವೊಂದಲ್ಲಿ ಮಹಿಳೆಯೊಬ್ಬರು ಲಿಂಗಾಯತ ಧರ್ಮದ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೇ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಕ್ ನೀಡಿದ ಘಟನೆ ನಡೆದಿದೆ.

    ದಾವಣಗೆರೆ ಜಿಲ್ಲೆಯಲ್ಲಿ ಎರಡನೇ ದಿನ ಪ್ರವಾಸ ಕೈಗೊಂಡ ರಾಹುಲ್ ಗಾಂಧಿ, ಬಿಐಇಟಿ ಸಭಾಂಗಣ ದಲ್ಲಿ ಏರ್ಪಡಿಸಿದ್ದ ವರ್ತಕರ ಜೊತೆಗಿನ ಜಿಎಸ್‍ಟಿ ಕುರಿತ ಸಂವಾದದಲ್ಲಿ ಪಾಲ್ಗೊಂಡಿದ್ದರು. ಸಂವಾದದಲ್ಲಿ ವರ್ತಕರು ಕೇಳುವ ಪ್ರಶ್ನೆಗೆ ಉತ್ತರಿಸಿ ಜಿಎಸ್‍ಟಿ ಬಗ್ಗೆ ಇರುವ ತೊಂದರೆಗಳು ಲಾಭ ನಷ್ಟದ ಬಗ್ಗೆ ಸಂವಾದ ನಡೆಸಿದ್ರು.

    ಈ ವೇಳೆ ಸಂವಾದದಲ್ಲಿ ಮಹಿಳೆಯೊಬ್ಬರು ರಾಹುಲ್ ಗೆ ಲಿಂಗಾಯಿತ ಪ್ರತ್ಯೇಕ ಧರ್ಮದ ಬಗ್ಗೆ ಪ್ರಶ್ನೆ ಮಾಡಿದ್ದರು. ಲಿಂಗಾಯಿತ ಧರ್ಮದ ವಿಚಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಿರಾ? ಎಂಬ ಪ್ರಶ್ನೆಗೆ ರಾಹುಲ್ ಇದು ನನಗೆ ಸಂಬಂಧಿಸಿದಲ್ಲ. ಸಿದ್ದರಾಮಯ್ಯನವರು ಉತ್ತರ ಹೇಳುತ್ತಾರೆ ಎಂದು ಹೇಳಿ ಸಿಎಂ ಕೈಗೆ ಮೈಕ್ ಕೊಟ್ಟಿದ್ದಾರೆ. ಬಳಿಕ ಮಹಿಳೆಯ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ನೀಡಿದರು.

    ಇದಕ್ಕೂ ಮುನ್ನ ರಾಹುಲ್ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೊತೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಚರ್ಚೆಯಲ್ಲಿ ಯುವಕರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಾವ ಮಟ್ಟದಲ್ಲಿ ವಿಫಲವಾಗಿದೆ. ಬೂತ್ ಮಟ್ಟದಲ್ಲಿ ಯಾವ ಯಾವ ತೊಂದರೆಗಳು ಇವೆ. ಪಕ್ಷದ ಬಲ ವರ್ಧನೆಗೆ ಯಾವ ರೂಪರೇಷೆಗಳನ್ನು ಮಾಡಿಕೊಳ್ಳಬೇಕು ಎಂದು ಪದಾಧಿಕಾರಿಗಳ ಜೊತೆ ಸುಧೀರ್ಘ ಚರ್ಚೆ ನಡೆಸಿದರು. ಚರ್ಚೆಯಲ್ಲಿ ಎಲ್ಲಾ ಕಡೆ ಮುಖಂಡರ ನಡುವೆ ಭಿನ್ನಮತವಿದೆ ಎಲ್ಲವನ್ನು ಸರಿದೂಗಿಸಿಕೊಂಡು ಕೆಲಸ ಮಾಡಿದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ಎಚ್ಚರಿಕೆ ಸಂದೇಶ ನೀಡಿದರು.

    ಬೆಣ್ಣೆ ದೋಸೆ ಸವಿದ ರಾಹುಲ್: ಸಂವಾದ ಮುಗಿದ ನಂತರ ಧಾರವಾಡದ ರಾಮ್ ಅಂಡ್ ಕೋ ಸರ್ಕಲ್ ನಲ್ಲಿರುವ ವಿಜಿ ಬೆಣ್ಣೆ ದೋಸೆ ಹೋಟೆಲ್ ಗೆ ಹೋಗಿ ಎರಡು ಬೆಣ್ಣೆದೋಸೆ ಸವಿದರು. ರಾಹುಲ್ ಜೊತೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಜಿ ಪರಮೇಶ್ವರ್ ಸೇರಿದಂತೆ ವಿವಿಧ ಮುಖಂಡರು ಸಾಥ್ ನೀಡಿದರು.