ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಕೂಡು ಒಕ್ಕಲಿಗ ಸಮುದಾಯ ಒಕ್ಕಲಿಗರೋ? ಲಿಂಗಾಯತರೋ? ಎಂಬ ಹೊಸ ಗೊಂದಲ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಜಾತಿ ರಾಜಕಾರಣದ ಜಟಾಪಟಿಗೆ ಕಾರಣವಾಗಿದೆ.
ಶನಿವಾರ ಡಿ.ಕೆ.ಶಿವಕುಮಾರ್ ಉತ್ತರ ಕರ್ನಾಟಕ ಭಾಗದ ಕೂಡು ಒಕ್ಕಲಿಗ ಮುಖಂಡರನ್ನು ಭೇಟಿ ಮಾಡಿದ್ದರು. ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕೂಡು ಒಕ್ಕಲಿಗ ಮುಖಂಡರನ್ನು ಡಿಕೆಶಿ ಬಳಿ ಕರೆದುಕೊಂಡು ಹೋಗಿದ್ದರು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ ನಮ್ಮನ್ನು ಒಕ್ಕಲಿಗ 3ಂ ಸೇರಲು ಸಹಕಾರ ನೀಡುವಂತೆ ಡಿಕೆಶಿಗೆ ನಿಯೋಗ ಮನವಿ ಮಾಡಿತ್ತು. ಇದರ ಮಾಹಿತಿ ತಿಳಿಯುತ್ತಿದ್ದಂತೆ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್, ಡಿಕೆಶಿ ಬಳಿ ಕೂಡು ಒಕ್ಕಲಿಗರ ನಿಯೋಗ ಕರೆದೊಯ್ದಿದ್ದೇಕೆ? ಉತ್ತರ ಕರ್ನಾಟಕ ಭಾಗದಲ್ಲಿ 15 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಕೂಡು ಒಕ್ಕಲಿಗರು ಲಿಂಗಾಯತರ ಉಪ ಪಂಗಡ ಎಂದು ಎಂಬಿಪಿ ಪ್ರಿಯಾಂಕ ಖರ್ಗೆ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ. ಇದನ್ನೂ ಓದಿ: ವ್ಯಾಕ್ಸಿನೇಟ್ ಕರ್ನಾಟಕ ಸ್ಪರ್ಧೆಯ ವಿಜೇತರಿಗೆ ಕೆಪಿಸಿಸಿಯಿಂದ ಬಹುಮಾನ ವಿತರಣೆ
ಈ ಹಿನ್ನೆಲೆಯಲ್ಲಿ ಇಂದು ಕೂಡು ಒಕ್ಕಲಿಗ ಮುಖಂಡರ ನಿಯೋಗವನ್ನು ಪ್ರಿಯಾಂಕ್ ಖರ್ಗೆ ಎಂ.ಬಿ.ಪಾಟೀಲ್ ನಿವಾಸಕ್ಕೆ ಕರೆತಂದಿದ್ದಾರೆ. ಕೂಡು ಒಕ್ಕಲಿಗರು ಲಿಂಗಾಯತ ಸಮುದಾಯದ ಜೊತೆ ಗುರುತಿಸಿಕೊಂಡರೆ ಮುಂದೆ 2ಂ ಮೀಸಲಾತಿ ಸಿಕ್ಕಾಗ ಸಹಾಯವಾಗಲಿದೆ ಎಂದು ಮುಖಂಡರ ಮನವೊಲಿಸುವ ಪ್ರಯತ್ನವನ್ನು ಎಂಬಿಪಿ ಮಾಡಿದ್ದಾರೆ. ಕೂಡು ಒಕ್ಕಲಿಗ ಸಮುದಾಯದ ಐಡೆಂಟಿಟಿ ಗೊಂದಲದ ನಡುವೆ ಡಿಕೆಶಿ ವರ್ಸಸ್ ಎಂ.ಬಿ.ಪಾಟೀಲ್ ನಡುವೆ ಶೀತಲ ಸಮರ ಆರಂಭವಾದಂತಿದೆ.
ಕೂಡು ಒಕ್ಕಲಿಗರನ್ನು ಒಕ್ಕಲಿಗರ ಪಟ್ಟಿಗೆ ಸೇರಿಸಲು ಡಿಕೆಶಿ ಕಸರತ್ತು ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಕೂಡು ಒಕ್ಕಲಿಗರು ಲಿಂಗಾಯತರ ಉಪ ಪಂಗಡ ಎಂದು ಎಂ.ಬಿ.ಪಾಟೀಲ್ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ಆಂತರಿಕ ವಲಯದಲ್ಲಿ ಇದೀಗ ಒಕ್ಕಲಿಗ, ಲಿಂಗಾಯತ ಹೊಸ ರಾಜಕೀಯ ಜಟಾಪಟಿ ಆರಂಭವಾಗಿದೆ.
ರಾಯಚೂರು: ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿಮುರುಘಾ ಶರಣರಿಂದ ಆರಂಭವಾದ ವೀರಶೈವ ಲಿಂಗಾಯತ ವೆಬ್ ಸೈಟ್ಗೆ ರಾಯಚೂರಿನ ಬಸವ ಕೇಂದ್ರದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಲಿಂಗಾಯತರೇ ಬೇರೆ ವೀರಶೈವರೇ ಬೇರೆ. ಇಬ್ಬರೂ ಒಂದೇ ಅನ್ನೋ ರೀತಿಯಲ್ಲಿ ಒಟ್ಟಾಗಿ ವೆಬ್ಸೈಟ್ ಬಿಡುಗಡೆ ಮಾಡಿರುವುದರು ಸರಿಯಲ್ಲ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿಂತಿಲ್ಲ, ನಿರಂತರವಾಗಿ ನಡೆದಿದೆ. ಬಸವ ತತ್ವಕ್ಕೆ ಬದ್ಧವಾಗಿರುವವರು ಲಿಂಗಾಯತರು. ಮುರುಘಾಶ್ರೀಗಳು ಲಿಂಗಾಯತರು, ವೀರಶೈವರು ಒಂದೇ ಎನ್ನುವಂತ ವೆಬ್ ಸೈಟ್ ಆರಂಭಿಸಬಾರದಿತ್ತು ಅಂತ ಬಸವ ಕೇಂದ್ರದ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ.
ಸ್ವಪ್ರತಿಷ್ಠೆಗಾಗಿ ವೆಬ್ ಸೈಟ್ ಆರಂಭಿಸಿದ್ದು, ಇದಕ್ಕೆ ನಮ್ಮ ವಿರೋಧವಿದೆ ಅಂತ ಬಸವ ಕೇಂದ್ರದ ಸದಸ್ಯರು ಹೇಳಿದ್ದಾರೆ. ಜಿಲ್ಲಾ ಬಸವಕೇಂದ್ರದ ಅಧ್ಯಕ್ಷ ಕುರಕುಂದಿ ವೀರಭದ್ರಪ್ಪ, ಕಾರ್ಯದರ್ಶಿ ಚನ್ನಬಸವಣ್ಣ ಮಹಾಜನಶಟ್ಟಿ ,ಹಿರಿಯ ಸದಸ್ಯ ಬಸವರಾಜದೇವರು ಅರಿವಿನಮನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಕಾರ್ ಕಿಟಕಿಯ ಮೇಲೆ ಕುಳಿತು ಸ್ಟಂಟ್ – ಪೊಲೀಸರು ಕೊಟ್ರು 20-20ಯ ತ್ರಿಪಲ್ ಶಾಕ್!
– ಯಡಿಯೂರಪ್ಪನವರೇ ಬರೀ ಭಾಷಣದಿಂದ ಆಗಲ್ಲ
– ನಾನು ಹಿಂದುತ್ವದ ಮೇಲೆ ಬಂದವನು
ಬಾಗಲಕೋಟೆ: ಲಿಂಗಾಯತ ಸಮಾಜ ನನ್ನ ಕೈ ಬಿಟ್ಟಿತು ಎಂದು ಅವರಿಗೆ ನಿದ್ದೆ ಬಂದಿಲ್ಲ ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಕೂಡಲಸಂಗಮದಲ್ಲಿ ನಡೆದ ಮೀಸಲಾತಿ ಹೋರಾಟದ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮನ್ನ ದೆಹಲಿಗೆ ಕರೆದೊಯ್ದು, ನನ್ನ ತಗೆದರೆ ಹಿಂದೆ ಲಿಂಗಾಯತ ಸಮುದಾಯ ಇದೆ ಎಂದು ಪೋಸ್ ಕೊಡ್ತೀರಾ ಎಂದು ಪರೋಕ್ಷವಾಗಿ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.
ವೀರಶೈವ ಲಿಂಗಾಯತರು ಹಿಂದುಳಿದವರು ಅಂತಾ ಹೇಳಿ ಅದನ್ನ ಅರ್ಧಕ್ಕೆ ಯಾಕೆ ನಿಲ್ಲಿಸಿದಿರಿ. ಯಡಿಯೂರಪ್ಪನವರೇ ಬರೀ ಭಾಷಣದಿಂದ ಆಗಲ್ಲ. ಪಂಚಮಸಾಲಿ ಸಮಾಜದ ಋಣ ಇದೆ ಅಂದಿದ್ರಿ. ಈ ಪಾದಯಾತ್ರೆ ಬೆಂಗಳೂರು ಮುಟ್ಟುವುದರೊಳಗಾಗಿ, ಮೀಸಲಾತಿ ಕೊಟ್ಟುಬಿಡಿ ಎಂದು ಪ್ರಧಾನಿಯಿಂದಲೇ ಆದೇಶ ಬರುತ್ತೆ ಎಂದು ಹೇಳಿದರು.
ನಮ್ಮ ಸಮುದಾಯದ ನಾಯಕರಿಗೆ ಮಂತ್ರಿ ಕೊಡಲಿಲ್ಲ ಎಂದರೆ ಪಂಚಮಸಾಲಿ ಸಮುದಾಯ ಕೈ ಬಿಡುತ್ತೆ ಎಂದು ಹೇಳಿಬಿಡೋದು. ಇಬ್ಬರು ಮೂವರನ್ನ ಮಂತ್ರಿ ಮಾಡಿದರೆ ಸಮಾಜ ಉದ್ಧಾರ ಆಗುತ್ತಾ ಎಂದು ಪರೋಕ್ಷವಾಗಿ ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ ಟಾಂಗ್ ನೀಡಿದರು. ಅಲ್ಲದೆ ಪಾದಯಾತ್ರೆ ಅಂದ್ರೆ ಸುಲಭವಲ್ಲ, ಕಾಲಲ್ಲಿ ಗುಳ್ಳೆ ಏಳುತ್ತವೆ. ತೊಡೆಗಳು ನೋವಾಗುತ್ತವೆ ಎಂದರು.
ಸ್ವಲ್ಪ ಬಾಯಿ ಕಡಿಮೆ ಮಾಡಿದರೆ ಮುಖ್ಯಮಂತ್ರಿ ಅಕ್ಕೀರಿ ಎಂದು ಕೆಲವರು ನನಗೆ ಹೆಳಿದರು. ಆದರೆ ಮುಖ್ಯಮಂತ್ರಿ ಆಗಿ ಕಿಸಿಯುದು ಏನ್ ಐತಿ. ಬಸನಗೌಡ ಪಾಟೀಲ್ ಯತ್ನಾಳ್ ಸ್ವಲ್ಪ ಜಾಸ್ತಿ ಮಾತಾಡಿದ್ರೆ ಅವ್ರನ್ನ ಮುಗಿಸಬೇಕು ಎನ್ನುತ್ತಾರೆ. ಏನ್ ತಲೆ ಮುಗಿಸೋದಾಗತ್ತ. ನಾಳೆ ನನ್ನ ಮುಖ್ಯಮಂತ್ರಿ ಮಾಡ್ತೀನಿ ಅಂದರೂ ನಾನು ಹೋಗಲ್ಲ, ಸಮಾಜಕ್ಕೆ ಮೀಸಲಾತಿ ಸಿಗಲಿ, ಉದ್ಧಾರ ಆಗಲಿ. ನಾನು ಮುಖ್ಯಮಂತ್ರಿ ಆಗುತ್ತೇನೋ ಇಲ್ಲೋ ಗೊತ್ತಿಲ್ಲ. ಆದರೆ ಸಮುದಾಯಕ್ಕೆ ಅನ್ಯಾಯ ಆಗುವ ಕೆಲಸ ಮಾಡುವುದಿಲ್ಲ. ಈ ಹಿಂದೆ ನನ್ನನ್ನು ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ಆಗಿ ಎಂದರು. ಆದರೆ ನಾನೇ ಬೇಡ ಎಂದೆ. ನಾನು ಹಿಂದುತ್ವದ ಮೇಲೆ ಬಂದವನು. ಸಮುದಾಯಕ್ಕೆ ಕೆಟ್ಟತನ ಮಾಡಿ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ನನಗಿಲ್ಲ ಎಂದು ಯತ್ನಾಳ್ ಹೇಳಿದರು.
ಶಾಸಕರು ರಾಜೀನಾಮೆ ನೀಡಿ ಹೋರಾಟ ಮಾಡಿ ಎಂದ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಗೆ ಯತ್ನಾಳ್ ಟಾಂಗ್ ಕೊಟ್ಟಿದ್ದು, ನೀನು ಮಾಜಿ, ನಾನು ಹಾಲಿ. ನಾನು ರಾಜೀನಾಮೆ ನೀಡಿ ಹೋರಾಟ ಮಾಡುವವನಲ್ಲ. ಅಧಿಕಾರದಲ್ಲಿದ್ದೇ ಹೋರಾಡುತ್ತೇನೆ. ಈ ಪಾದಯಾತ್ರೆಯಲ್ಲಿ ನಮ್ಮ ಸಮುದಾಯದ ಭವಿಷ್ಯವಿದೆ. ನಮಗೆ ಸಿಗಬೇಕಾದ ಸೌಲಭ್ಯದ ಬಗ್ಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಆದರೆ ಅವರು ಸುಮ್ಮನೆ ಭರವಸೆ ನೀಡುತ್ತಾರೆ. ಅಲ್ಲದೆ ನಮ್ಮ ಹೋರಾಟ ವಿಫಲಗೊಳಿಸಬೇಕೆಂಬ ದೊಡ್ಡ ಷಡ್ಯಂತ್ರ ನಡೆದಿದೆ. ಪಂಚಮಸಾಲಿ ಸ್ವಾಮೀಜಿ ಅವರ ಬೆನ್ನು ಹತ್ತಿ, ನಿಮ್ಮ ಹೋರಾಟಕ್ಕೆ ವೈಯಕ್ತಿಕವಾಗಿ 5 ಲಕ್ಷ ರೂ. ನೀಡುತ್ತೇನೆ. ನಾನು ಪಾದಯಾತ್ರೆಗೆ ಬಂದು ಐದೈದು ಕಿಲೋಮೀಟರ್ ನಡೆಯುತ್ತೇನೆ. 108 ಕೆ.ಜಿ. ತೂಕವಿದ್ದೇನೆ. ನನ್ನ ಕೈಲಾದಷ್ಟು ಪಾದಯಾತ್ರೆ ಮಾಡುತ್ತೇನೆ ಎಂದರು.
ಸಮುದಾಮಯದ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ವರೆಗೆ ನಡೆಯುತ್ತಿರುವ ಪಾದಯಾತ್ರೆ ಇದು. ಇವತ್ತಿನ ಕಾರ್ಯಕ್ರಮ ಇತಿಹಾಸದಲ್ಲಿ ದಾಖಲಾಗಲಿದೆ. ಇತ್ತೀಚಿನ ಪೂರ್ವಭಾವಿ ಸಭೆಯಲ್ಲಿ ಸಿಸಿ ಪಾಟೀಲ್ ಬಂದಿದ್ರು. ನಮ್ಮ ಸ್ವಾಮೀಜಿಗಳ ಮಠ ಹಳ್ಳಿ ಮನೆ ರೀತಿ ಇದೆ. ಮಠಗಳ ಕೆಲಸಕ್ಕಾಗಿ ರಾಜಕಾರಣಿಯ ಬೆನ್ನು ಹತ್ತಿ, ಯಡಿಯೂರಪ್ಪನವರನ್ನು ಹೆದರಿಸಿ 2 ಕೋಟಿ ರೂಪಾಯಿ ತೆಗೆದುಕೊಳ್ಳಲು ಪಾದಾಯತ್ರೆ ಮಾಡುತ್ತಿದ್ದೇವೆ ಎಂದು ತಿಳಿದಿದ್ದೀರಾ, 20 ಲಕ್ಷ ರೂ. ನೀಡಿ ಮಠ ಖರೀದಿ ಮಾಡಬೇಕಂತಿದ್ದಾರೆ. ಸರ್ಕಾರದ ದುಡ್ಡು ತೆಗೆದುಕೊಳ್ಳಬೇಡಿ ಎಂದು ನಾನು ಮೊದಲೇ ಹೇಳಿದ್ದೆ ಎಂದು ಕಿಡಿಕಾರಿದರು.
ಬಿಜೆಪಿಯಲ್ಲಿ ಜಮಖಾನ ಹಾಸಿದ್ದೇನೆ. ಅಟಲ್ ಬಿಹಾರಿ ವಾಜಪೇಯಿ ಆಡಳಿತದಲ್ಲಿ ಮಂತ್ರಿ ಆಗಿದ್ದೆ. ಪಾಜಪೇಯಿ ಪುಣ್ಯಾತ್ಮ, ದೇವರು ಅವರು. ಹಿಂದೆ ನಿಯೋಗ ಕೊಂಡೊಯ್ದಾಗ, ವಾಜಪೇಯಿ, ಅಡ್ವಾಣಿ ಖುಷಿಯಾಗಿದ್ದರು. ದೆಹಲಿಯಲ್ಲಿ ರೈತರ ಹೆಸರಲ್ಲಿ ದಲ್ಲಾಳಿಗಳು ಹೋರಾಟ ನಡೆಸುತ್ತಿದ್ದಾರೆ. ಬ್ರಹ್ಮಚಾರಿಗಳಿಗೆ ಆಸೆಗಳು ಇರಲ್ಲ. ಪ್ರಧಾನಿ ಮೋದಿ ಬ್ರಹ್ಮಚಾರಿ, ಅವರಿಗೆ ಯಾವುದೇ ಆಸೆ ಇಲ್ಲ.
ಹುಬ್ಬಳ್ಳಿ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ನನ್ನ ತಂದೆಗೆ ಸಮಾನ. ನಾನು ಯಾರಿಗೂ ಹೆದರುವ ಮಾತಿಲ್ಲ. ನನ್ನ ಮೈಯಲ್ಲಿ ಹರಿಯುವುದು ನನ್ನ ತಂದೆಯ ರಕ್ತ. ನನಗೆ ಯಾರದ್ದು ಅಂಜಿಕೆ ಇಲ್ಲ. ಈ ವಿವಾದವನ್ನು ಇಲ್ಲಿಗೆ ನಿಲ್ಲಿಸಿದ್ರೆ ಉತ್ತಮ. ನನಗೆ ಎಲ್ಲವೂ ಗೊತ್ತಿದೆ. ಅವರ ಬಗ್ಗೆ ಎಲ್ಲವನ್ನೂ ಮಾತನಾಡಬೇಕಾದಿತು. ಇಲ್ಲವಾದರೆ ನಾನು ಮುಂದುವರಿಯುವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಎಚ್ಚರಿಸಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಲಿಂಗಾಯತ ಧರ್ಮ ನಮ್ಮ ಅಸ್ಮಿತೆ. ಲಿಂಗಾಯತ ಧರ್ಮ ಒಂದು ಮೇಲು ಕೀಳು ಎಂದು ವಿಭಿನ್ನವಾಗಿದೆ. ಲಿಂಗಾಯತ ಧರ್ಮದ ಮೇಲೆ ನನ್ನ ಅಧಿಕಾರದ ಪ್ರಭಾವ ಬೀರುವುದಿಲ್ಲ ಹೇಳಿದರು.
ಲಿಂಗಾಯತ ಧರ್ಮಕ್ಕೆ ಹೋರಾಟ ಮಾಡುವವರು ಇದ್ದಾರೆ. ಅವರು ಹೋರಾಟವನ್ನ ಮುಂದುವರಿಸುತ್ತಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರಿಗೆ ವೀರಶೈವ ರತ್ನ ಪ್ರಶಸ್ತಿ ಕೊಟ್ಟಿದ್ದಾರೆ. ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೆನೆ. ಶಿವಶಂಕರಪ್ಪನವರು ನಮ್ಮ ತಂದೆಯ ಸಮನಾದವರು. ಅವರು ಸ್ವಾರ್ಥಿಗಳು, ಕೀಳು ಮಟ್ಟದ ಹೇಳಿಕೆ ಕೊಡುತ್ತಿದ್ದಾರೆ. ಅವರಿಗೆ ತಮ್ಮ ಕುಟುಂಬದ ಏಳಿಗೆ ಬಗ್ಗೆ ಯೋಚನೆ ಮಾಡುತ್ತಾರೆ. ಮತ್ತೊಬ್ಬರ ಬಗ್ಗೆ ಅಸಹ್ಯವಾಗಿ ಮಾತನಾಡುತ್ತಾರೆ. ಅವರು ಸ್ವಾರ್ಥ ಜೀವನ ನಡೆಸಿದವರು. ಅವರು ಇಲ್ಲಿಯವರೆಗೆ ಯಾರಿಗೆ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲು ಹಾಕಿದರು.
ಲಂಚದ ಹಣದಿಂದ ಲಿಂಗಾಯತ ಸಮಾವೇಶ ನಡೆಸಿದ್ದಾರೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬೀದರ್ ಮತ್ತು ಬೆಳಗಾವಿಯಲ್ಲಿ ಲಿಂಗಾಯತ ಹೋರಾಟ ಪ್ರಾರಂಭವಾದಾಗ ನಾನು ಇರಲೇ ಇಲ್ಲ. ಶಿವಶಂಕರಪ್ಪ ಮೊದಲು ಏನಾಗಿದ್ದರು ಎಂಬುದು ಅರ್ಥ ಮಾಡಿಕೊಳ್ಳಬೇಕು. ಮೊದಲು ಕಿರಾಣಿ ಅಂಗಡಿ ಮತ್ತು ದಲ್ಲಾಳಿ ಮಾಡಿದವರು. ಬೇರೊಬ್ಬರ ಬಿ ಫಾರ್ಮ್ ಹರಿದು ಚುನಾವಣೆ ಗೆದ್ದವರಾಗಿದ್ದಾರೆ. ಮತ್ತೊಬ್ಬರನ್ನ ತುಳಿದು ಬಾಪೂಜಿ ಶಿಕ್ಷಣ ಸಂಸ್ಥೆ ಕಟ್ಟಿದ್ದಾರೆ. ಇವರು ಬೇರೆಯವರು ಸೋತ ಬಗ್ಗೆ ಮಾತನಾಡುತ್ತಾರೆ. ಅವರ ಮಗ ಸೋತಾಗ ಇವರ ವೀರಶೈವ ಹೋರಾಟ ಎಲ್ಲಿ ಹೋಗಿತ್ತು. ಅವರು ಸ್ಪರ್ಧೆ ಮಾಡುವ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದೆ. ಈ ಬಾರಿ ಮುಸ್ಲಿಂ ಸಮುದಾಯದ ಅತಿ ಹೆಚ್ಚು ಮತ ಕಾಂಗ್ರೆಸ್ಗೆ ಬಂದಿರುವುದರಿಂದ ಗೆದ್ದಿದ್ದಾರೆ. ಕೀಳು ಮಟ್ಟದ ರಾಜಕಾರಣ ಮಾಡಬಾರದು. ಇವರ ಜನ್ಮ ದಾಖಲೆಗಳನ್ನ ತೆಗೆದು ನೋಡಿದ್ರೆ ಹಿಂದೂ ಲಿಂಗಾಯತ ಅಂತಾ ಇದೆ. ನೀವು ಮಾತಾನಾಡಿದ್ರೆ ಪರವಾಗಿಲ್ಲ, ನಾನು ಮಾತಾನಾಡಿದರೆ ನಿಮ್ಮ ಮರ್ಯಾದೆ ಹೋಗುತ್ತದೆ ಅಂತ ವಾಗ್ದಾಳಿ ನಡೆಸಿದ್ರು.
ಲಿಂಗಾಯತ ಧರ್ಮದ ಬಗ್ಗೆ ಹೋರಾಟದ ಹಾದಿ ಅಲ್ಲ. ನಮ್ಮ ಮುಂದೆ ಇರುವುದು ಕಾನೂನು ಹೋರಾಟ. ಎಲ್ಲಾ ನಿರ್ಣಯಗಳನ್ನ ನಮ್ಮ ಲಿಂಗಾಯತ ಜಾಗತಿಕ ಸಮಾವೇಶ ತೆಗೆದುಕೊಳ್ಳುತ್ತದೆ. ಕೆಲವೊಂದು ಶಕ್ತಿಗಳು ಇದನ್ನ ವಿರೋಧಿಸುತ್ತವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ನಮಗೆ ಬೆಂಬಲ ನೀಡುತ್ತದೆ. ಪ್ರಧಾನಮಂತ್ರಿಗಳು ಈ ಘಟಬಂಧನ್ ಮುರಿದು ಬೀಳಬೇಕು ಎಂದು ಕಾಯ್ತಾ ಇದ್ದಾರೆ ಎಂದು ಅವರು ಹೇಳಿದ್ರು.
ರಾಯಚೂರು: ಸಚಿವರಾದ ಎಂ.ಬಿ.ಪಾಟೀಲ್, ವಿನಯ ಕುಲಕರ್ಣಿ ಖಾದಿ ಬಿಟ್ಟು ಖಾವಿ ತೊಟ್ಟು ಲಿಂಗಾಯತ ಧರ್ಮ ಸ್ಥಾಪಿಸಲು ಮುಂದಾಗಲಿ ಅಂತ ಕಾಂಗ್ರೆಸ್ ಉಚ್ಚಾಟಿತ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ರಾಯಚೂರಿನಲ್ಲಿ ಹೇಳಿದ್ದಾರೆ.
ರಾಯಚೂರಿನಿಂದ ಬೆಳಗಾವಿವರೆಗೆ ಜೆಡಿಎಸ್ ವತಿಯಿಂದ ಹೈದ್ರಾಬಾದ್ ಕರ್ನಾಟಕ ಸಮಗ್ರ ಅಭಿವೃದ್ದಿಗಾಗಿ ಸ್ವಾಭಿಮಾನಿ ಕನ್ನಡಿಗರ ಬೃಹತ್ ಜಾಥ ಹಮ್ಮಿಕೊಂಡಿರುವ ನಡಹಳ್ಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಜಯಮೃತ್ಯುಂಜಯ ಸ್ವಾಮೀಜಿ ವೀರಶೈವರ ಬಗೆಗೆ ಕೀಳು ಮಟ್ಟದಲ್ಲಿ ಮಾತನಾಡಿದ್ದು, ಹೇಳಿಕೆಯನ್ನ ಖಂಡಿಸುವುದಾಗಿ ಹೇಳಿದ ನಡಹಳ್ಳಿ, ಸ್ವಾಮೀಜಿಗಳು ಬಹಿರಂಗ ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದ್ದಾರೆ.
70 ವರ್ಷದ ಆಡಳಿತದಲ್ಲಿ ನೆನಪಾಗದ ಲಿಂಗಾಯತ ಧರ್ಮ ಈಗ ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಗೆ ನೆನಪಾಗಿದೆ. ಚುನಾವಣೆ ಹಿನ್ನೆಲೆ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ತಾಕತ್ತಿದ್ದರೆ ಕ್ಯಾಬಿನೆಟ್ನಲ್ಲಿ ನಿರ್ಧಾರ ತೆಗೆದುಕೊಳ್ಳಲಿ ಅಂತ ಸವಾಲೆಸೆದರು. ಇನ್ನೂ ಬೆಳಗಾವಿ ಅಧಿವೇಶನ 30 ದಿನ ಕಾಲ ನಡೆಯಬೇಕು ಟೂರಿಂಗ್ ಟಾಕೀಸ್ ಆಗಬಾರದು. ಈ ಅಧಿವೇಶನದಲ್ಲಿ ಕೇವಲ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಾಗಿ ಚರ್ಚೆ ನಡೆಯಬೇಕು ಅಂತ ಎಸ್.ಪಾಟೀಲ್ ನಡಹಳ್ಳಿ ಆಗ್ರಹಿಸಿದ್ದಾರೆ.