ಬ್ಯಾಂಕಾಕ್: ಥಾಯ್ಲೆಂಡ್ನ (Thailand) ಮೃಗಾಲಯದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಸಫಾರಿ (Safari) ಜೀಪ್ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ (Lions) ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿವೆ.
ಬ್ಯಾಂಕಾಕ್ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭೀಕರ ಘಟನೆ ನಡೆದಿದೆ. ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಪಾಲಕ ಜಿಯಾನ್ ರಂಗ್ಖರಸಾಮೀ ಎಂಬಾತನ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ. ಸುಮಾರು 15 ನಿಮಿಷಗಳ ಕಾಲ ನಡೆದ ಈ ಭೀಕರ ಘಟನೆಗೆ ನೂರಾರು ಪ್ರವಾಸಿಗರು ಸಾಕ್ಷಿಯಾಗಿದ್ದರು. ಅಲ್ಲದೆ ಕೆಲವರು ತಮ್ಮ ಮೊಬೈಲ್ನಲ್ಲಿ ಈ ಭೀಕರ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಧಿಕಾರದ ಆಸೆಯಿಂದ ಬಂದಿಲ್ಲ, 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ: ನೇಪಾಳ ಪ್ರಧಾನಿ
ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಈ ಕುರಿತು ಆಘಾತ ವ್ಯಕ್ತಪಡಿಸಿರುವ ಸಫಾರಿ ವರ್ಲ್ಡ್ ಆಡಳಿತ ಮಂಡಳಿ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಅಲ್ಲದೆ ಮೃಗಾಲಯದಲ್ಲಿನ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್ನಲ್ಲೂ ಕಂಪನ
– ಗುಜರಾತ್ನ ಗಿರ್ನಲ್ಲಿ ಸಿಂಹಗಳ ಸಂಖ್ಯೆ ಏರಿಕೆ – ಮನ್ ಕಿ ಬಾತ್ನಲ್ಲಿ ಪ್ರಧಾನಿ ಸಂತಸ
ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ. ಇದು ನಮ್ಮ ದೃಢ ನಿಶ್ಚಯ, ಧೈರ್ಯ ಮತ್ತು ಪರಿವರ್ತನೆಗೊಳ್ಳುತ್ತಿರುವ ಭಾರತದ ಚಿತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.
ಭಾನುವಾರ ಮನ್ ಕಿ ಬಾತ್ನ (Mann Ki Baat) 122ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಇಂದು ಇಡೀ ರಾಷ್ಟ್ರವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ. ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವು ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದು. ನಮ್ಮ ಪಡೆಗಳು ಗಡಿಯಾಚೆಗಿನ ಭಯೋತ್ಪಾದಕರ ಅಡಗುತಾಣಗಳನ್ನು ನಾಶಪಡಿಸಿದೆ ಎಂದು ಸೇನೆಯ ಪರಾಕ್ರಮವನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!
ಆಪರೇಷನ್ ಸಿಂಧೂರ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ. ಇದು ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಪರಿವರ್ತನೆಗೊಳ್ಳುತ್ತಿರುವ ಭಾರತದ ಚಿತ್ರವಾಗಿದೆ. ಈ ಚಿತ್ರವು ಇಡೀ ದೇಶವನ್ನು ದೇಶಭಕ್ತಿಯ ಭಾವನೆಯಿಂದ ತುಂಬಿದೆ ಮತ್ತು ಅದನ್ನು ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಚಿತ್ರಿಸಿದೆ. ಆಪರೇಷನ್ ಸಿಂಧೂರ ಸಮಯದಲ್ಲಿ ನಮ್ಮ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಭಾರತೀಯನನ್ನು ಹೆಮ್ಮೆ ಪಡುವಂತೆ ಮಾಡಿದೆ ಎಂದು ಎಂದಿದ್ದಾರೆ. ಇದನ್ನೂ ಓದಿ: ಜಪಾನ್ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ
ಆಪರೇಷನ್ ಸಿಂಧೂರ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಉತ್ಸಾಹವನ್ನು ನೀಡಿದೆ. ಆಪರೇಷನ್ ಸಿಂಧೂರ ದೇಶದ ಜನರ ಮೇಲೆ ಎಷ್ಟು ಪ್ರಭಾವ ಬೀರಿದೆ ಎಂದರೆ ಅನೇಕ ಕುಟುಂಬಗಳು ಆ ಹೆಸರನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಂಡಿವೆ. ಬಿಹಾರದ ಕತಿಹಾರ್, ಉತ್ತರಪ್ರದೇಶದ ಖುಷಿನಗರ ಮತ್ತು ಇತರ ಹಲವು ನಗರಗಳಲ್ಲಿ ಆ ಅವಧಿಯಲ್ಲಿ ಜನಿಸಿದ ಮಕ್ಕಳಿಗೆ `ಸಿಂಧೂರ’ ಎಂದು ಹೆಸರಿಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಮಾರ್ನಮಿ’ಗೆ ಮೋಹಕ ತಾರೆ ರಮ್ಯಾ ಸಾಥ್ – ರಿವೀಲಾಯ್ತು ಚೈತ್ರಾ ಆಚಾರ್ ರೋಲ್
ದೇಶದ ಅನೇಕ ನಗರಗಳು, ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ತಿರಂಗ ಯಾತ್ರೆಗಳನ್ನು ಆಯೋಜಿಸಿರುವುದನ್ನು ನೀವು ನೋಡಿರಬಹುದು. ಸಾವಿರಾರು ಜನರು ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ದೇಶದ ಸಶಸ್ತ್ರ ಪಡೆಗಳಿಗೆ ಗೌರವ ಸಲ್ಲಿಸಲು ಬಂದರು. ಅನೇಕ ನಗರಗಳಲ್ಲಿ, ನಾಗರಿಕ ರಕ್ಷಣಾ ಸ್ವಯಂಸೇವಕರಾಗಲು ಹೆಚ್ಚಿನ ಸಂಖ್ಯೆಯ ಯುವಕರು ಜಮಾಯಿಸಿದರು. ಚಂಡೀಗಢದ ವೀಡಿಯೋಗಳು ವೈರಲ್ ಆಗಿರುವುದನ್ನು ನಾವು ನೋಡಿದ್ದೇವೆ ಎಂದು ಹೇಳಿದ್ದಾರೆ.
ಇದೇ ವೇಳೆ, ಸಿಂಹಗಳಿಗೆ ಸಂಬಂಧಿಸಿದ ಒಂದು ಒಳ್ಳೆಯ ಸುದ್ದಿಯನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ. ಕಳೆದ 5 ವರ್ಷಗಳಲ್ಲಿ, ಗುಜರಾತ್ನ (Gujarat) ಗಿರ್ನಲ್ಲಿ ಸಿಂಹಗಳ (Lions) ಸಂಖ್ಯೆ 674ರಿಂದ 891ಕ್ಕೆ ಏರಿದೆ. ಸಿಂಹ ಗಣತಿಯ ನಂತರ ಈ ಸಿಂಹಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ಪ್ರಾಣಿ ಗಣತಿಯನ್ನು ಹೇಗೆ ನಡೆಸಲಾಗುತ್ತದೆ ಎಂದು ನಿಮ್ಮಲ್ಲಿ ಹಲವರು ಆಶ್ಚರ್ಯ ಪಡುತ್ತಿರಬೇಕು. ಇದು ತುಂಬಾ ದೊಡ್ಡ ಸವಾಲಿನ ಸಂಗತಿ. ಸಿಂಹ ಗಣತಿಯನ್ನು 11 ಜಿಲ್ಲೆಗಳಲ್ಲಿ, 35 ಸಾವಿರ ಚದರ ಕಿಲೋಮೀಟರ್ ಪ್ರದೇಶದಲ್ಲಿ ನಡೆಸಲಾಗಿದೆ. ಸಿಂಹಗಳ ಗಣತಿಗಾಗಿ ತಂಡಗಳು ಈ ಪ್ರದೇಶಗಳನ್ನು 24 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿದವು. 24 ಗಂಟೆಗಳ ಕಾಲ ಸಂಪೂರ್ಣ ಅಭಿಯಾನದೊಂದಿಗೆ ಪರಿಶೀಲನೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ತೊಡೆದು ಹಾಕಲು ನಾವು ಸಿದ್ಧ: ಪಾಕ್ ವಿರುದ್ಧ ಅಮೆರಿಕದಲ್ಲಿ ಗುಡುಗಿದ ಶಶಿ ತರೂರ್
ಅಂತರರಾಷ್ಟ್ರೀಯ ಯೋಗ ದಿನ ಹತ್ತಿರ ಬರುತ್ತಿದೆ. ನೀವು ಇನ್ನೂ ಯೋಗದಿಂದ ದೂರವಿದ್ದರೆ, ಈಗಲೇ ಯೋಗಕ್ಕೆ ಸೇರಿಕೊಳ್ಳಬೇಕು. ಯೋಗವು ನಿಮ್ಮ ಜೀವನವನ್ನು ನಡೆಸುವ ವಿಧಾನವನ್ನು ಬದಲಾಯಿಸುತ್ತದೆ. ಜೂನ್ 21, 2015ರಂದು `ಯೋಗ ದಿನ’ ಪ್ರಾರಂಭವಾದಾಗಿನಿಂದ, ಅದರ ಕಡೆಗೆ ಆಕರ್ಷಣೆ ನಿರಂತರವಾಗಿ ಹೆಚ್ಚುತ್ತಿದೆ. ಹಲವಾರು ಸಂಸ್ಥೆಗಳು ಯೋಗ ದಿನಕ್ಕೆ ತಮ್ಮ ಸಿದ್ಧತೆಗಳನ್ನು ನಡೆಸುತ್ತಿವೆ. ಹಿಂದಿನ ವರ್ಷಗಳ ಯೋಗ ದಿನಾಚರಣೆಯ ಚಿತ್ರಗಳು ಬಹಳ ಸ್ಫೂರ್ತಿದಾಯಕವಾಗಿವೆ ಎಂದಿದ್ದಾರೆ.
ಸಿಂಗಾಪುರ : ವಿದೇಶದ ಮೃಗಾಲಯವೊಂದಕ್ಕೆ ಸಾಗಿಸಲು ಕಂಟೈನರ್ನಲ್ಲಿ ಇರಿಸಲಾಗಿದ್ದ 2 ಸಿಂಹಗಳು ವಿಮಾನ ನಿಲ್ದಾಣದಲ್ಲಿ ತಪ್ಪಿಸಿಕೊಂಡ ಆತಂಕಕಾರಿ ಘಟನೆ ಸಿಂಗಾಪುರದಲ್ಲಿ ನಡೆದಿದೆ.
ಸಿಂಗಾಪುರದಿಂದ ವಿದೇಶದ ಮೃಗಾಲಯಗಳಿಗೆ ಸಿಂಹಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಚಾಂಗಿ ವಿಮಾನ ನಿಲ್ದಾಣದಲ್ಲಿ 2 ಸಿಂಹಗಳು ತಪ್ಪಿಸಿಕೊಂಡು ಕಟ್ಟಡದ ಸುತ್ತಲೂ ತಿರುಗಾಡುತ್ತಿದ್ದವು. ಇದರಿಂದಾಗಿ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ನಂತರ ವಿಮಾನ ನಿಲ್ದಾಣದಲ್ಲಿದ್ದ ಅಧಿಕಾರಿಗಳು ಅವುಗಳನ್ನು ಸೆರೆ ಹಿಡಿಯಲು ಮಾಂಡೈ ವನ್ಯಜೀವಿ ತಜ್ಞರಿಗೆ ತಿಳಿಸಿದರು. ಸ್ವಲ್ಪ ಸಮಯದ ನಂತರ ಆಗಮಿಸಿದ ಪಶುವೈದ್ಯರ ಗುಂಪು 2 ಸಿಂಹಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತ!
ಮಾಂಡೈ ವನ್ಯಜೀವಿ ತಜ್ಞರ ಸಹಾಯದಿಂದ ಅವುಗಳಿಗೆ ಅರವಳಿಕೆ ಚುಚ್ಚುಮದ್ದನ್ನು ಗನ್ ಮೂಲಕ ಗುಂಡು ಹಾರಿಸಿ ನೀಡಿದರು. ನಂತರ ಆ 2 ಸಿಂಹಗಳನ್ನು ಸೆರೆ ಹಿಡಿಯಲಾಯಿತು. ಪ್ರಸ್ತುತ 2 ಸಿಂಹಗಳಿಗೆ ಮಾಂಡೈ ಅಭಯಾರಣ್ಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 7 ಸಿಂಹಗಳನ್ನು ವಿದೇಶದ ಮೃಗಾಲಯಕ್ಕಾಗಿ ಸಿಂಗಾಪುರ್ ಏರ್ಲೈನ್ಸ್ ಮುಖಾಂತರ ಸಾಗಿಸಲಾಗುತ್ತಿತ್ತು. ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!
ಬೆಂಗಳೂರು: ಇಂದು ವಿಶ್ವಾದ್ಯಂತ ಹುಲಿ ದಿನಾಚರಣೆಯನ್ನು ಆಚರಿಸಲಾಗಿತ್ತು. ಅದೇ ರೀತಿ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಹ ವಿಶ್ವ ಹುಲಿ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಅರಿವಿನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಬನ್ನೇರುಘಟ್ಟದಲ್ಲಿ ಹುಲಿ ದಿನಾಚರಣೆ ವೈವಿಧ್ಯಮಯವಾಗಿ ಆಚರಣೆ ಮಾಡಲಾಯಿತು. ಲಯನ್ಸ್ ಕ್ಲಬ್ ಹಾಗೂ ಎಸ್ಒಎಸ್ ಚಿಲ್ಡ್ರನ್ಸ್ ವಿಲೇಜಸ್ ಇಂಡಿಯಾದ 55ಕ್ಕೂ ಹೆಚ್ಚು ಮಕ್ಕಳಿಗೆ ಹುಲಿ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಪಡಿಸಲಾಗಿತ್ತು. ಮಕ್ಕಳು ಹುಲಿ ಮುಖವಾಡ ಧರಿಸಿ ಉದ್ಯಾನದಲ್ಲಿ ಜಾಥಾ ಮಾಡುವ ಮೂಲಕ ಸಂಭ್ರಮಿಸಿದರು. ಹಾಗೆ ಪಾರ್ಕಿಗೆ ಬಂದಿದ್ದ ಸಾರ್ವಜನಿಕರು ಸಹ ಭಾಗವಹಿಸಿ ಹುಲಿಗಳು ಹಾಗೂ ಅವುಗಳ ವಾಸಸ್ಥಾನ ಎಂಬ ವಿಷಯವನ್ನು ಆಧರಿಸಿ ನಡೆಸಿದ ಕಾರ್ಯಕ್ರಮದಲ್ಲಿ ಅನೇಕ ಬಗೆಯ ಮಾಹಿತಿಯನ್ನು ಪಡೆದುಕೊಂಡರು. ಇದನ್ನೂ ಓದಿ: ಬನ್ನೇರುಘಟ್ಟದಲ್ಲಿದೆ ಆರು ತಿಂಗಳ ‘ಹಿಮಾದಾಸ್’ ಹುಲಿಮರಿ
ಹುಲಿಗಳ ಚಲನ, ವಲನಗಳ ಬಗ್ಗೆ ಸಾರ್ವಜನಿಕರಿಗೆ ಅರಣ್ಯ ಅಧಿಕಾರಿಗಳು ಶಿಬಿರದಲ್ಲಿ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಓರ್ವ ವಿದ್ಯಾರ್ಥಿ ನಾವು ಹುಲಿ ಬಗ್ಗೆ ಸಾಕಷ್ಟು ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಜೊತೆಗೆ ಹುಲಿ ಚಲನವಲನ ಬಗ್ಗೆ ಮತ್ತು ಎಷ್ಟು ಆಹಾರ ಸೇವಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ನಮಗೆ ಮಾಹಿತಿ ಕೊಟ್ಟಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅರ್ಚನಾ ಎಂಬವರು ಹಿಮ ಎಂಬ ಹುಲಿಯನ್ನು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ.
ಕೇಪ್ಟೌನ್: 4 ಸಿಂಹಗಳು ರಾಜಗಾಂಭೀರ್ಯದಿಂದ ರಸ್ತೆಯಲ್ಲಿ ನಡೆದಾಡುತ್ತಿರೋ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ನೋಡುಗರನ್ನು ಬೆರಗಾಗಿಸುತ್ತಿದೆ.
ದಕ್ಷಿಣ ಆಫ್ರೀಕಾದ ಕ್ರುಗರ್ ರಾಷ್ಟ್ರೀಯ ಉದ್ಯಾನವನದ ರೋಡ್ನಲ್ಲಿ ಈ ರೋಚಕ ದೃಶ್ಯ ಕಂಡುಬಂದಿದೆ. ರಸ್ತೆಯಲ್ಲಿ 4 ಸಿಂಹಗಳು ಯಾರ ಭಯವಿಲ್ಲದೆ ವಾಹನಗಳ ಮಧ್ಯೆ ರಾಜಾರೋಷವಾಗಿ ನಡೆದಾಡುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಈ ವಿಡಿಯೋವನ್ನು `ಲಯನ್ಸ್ ಆಫ್ ಕ್ರುಗರ್ ನ್ಯಾಷನಲ್ ಪರ್ಕ್’ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವಿಡಿಯೋವನ್ನು ಕಳೆದ 2 ವಾರದ ಹಿಂದೆ ಅಷ್ಟೆ ಪೋಸ್ಟ್ ಮಾಡಲಾಗಿದ್ದು, ಇಲ್ಲಿಯವರೆಗೆ ಸರಿ ಸುಮಾರು 2 ಮಿಲಿಯನ್ ಜನರು ವೀಕ್ಷಿಸಿದ್ದಾರೆ. ಅಲ್ಲದೆ ಸಾವಿರಾರು ಜನರು ಕಮೆಂಟ್ ಮಾಡಿದ್ದು, 38 ಸಾವಿರಕ್ಕೂ ಹೆಚ್ಚು ಮಂದಿ ಶೇರ್ ಮಾಡಿದ್ದಾರೆ.
ಕೇವಲ 33 ಸೆಕೆಂಡ್ ಇರುವ ಈ ರೋಚಕ ವಿಡಿಯೋ ನೋಡಿದ ಜನರು ಅಬ್ಬಾ ಎಂತಹ ಸಿಂಹ ನಡಿಗೆ ಅಂತ ಆಶ್ಚರ್ಯಗೊಂಡಿದ್ದಾರೆ. ಕಾಡನ್ನು ನಾಶ ಮಾಡಿ ರಸ್ತೆಗಳನ್ನು ನಿರ್ಮಿಸಿ, ಅದರ ಮೇಲೆ ತಮ್ಮದೆ ರಾಜ್ಯಭಾರ ಮಾಡುವ ವಾಹನಗಳೆಗೆ ಸಿಂಹಗಳು ತಮ್ಮ ಗತ್ತನ್ನು ತೋರಿಸಿವೆ. ಕಾಡಿನ ರಾಜ ಅಂದ್ರೆ ಯಾರಿಗೂ ಜಗ್ಗಲ್ಲ, ಯಾರಿಗೂ ಹೆದರಲ್ಲ ಅನ್ನೋ ರೀತಿ ಈ 4 ಸಿಂಹಗಳು ರಸ್ತೆಯಲ್ಲಿ ಆರಾಮಾಗಿ ಓಡಾಡಿದೆ.