Tag: Liquior

  • ಅಬಕಾರಿ ಪೊಲೀಸರ ಭರ್ಜರಿ ಬೇಟೆ – 40,000ಕ್ಕೂ ಅಧಿಕ ಕಲಬೆರಕೆ ಮದ್ಯ ಜಪ್ತಿ

    ಅಬಕಾರಿ ಪೊಲೀಸರ ಭರ್ಜರಿ ಬೇಟೆ – 40,000ಕ್ಕೂ ಅಧಿಕ ಕಲಬೆರಕೆ ಮದ್ಯ ಜಪ್ತಿ

    ಬೀದರ್: ಅಕ್ರಮವಾಗಿ ವಿವಿಧ ಪ್ರತಿಷ್ಠಿತ ಬ್ರ್ಯಾಂಡ್‌ನ ಖಾಲಿ ಬಾಟಲ್‌ಗಳಲ್ಲಿ ಕಲಬೆರಕೆ ಮದ್ಯ ತುಂಬಿ ಮಾರಾಟ ಮಾಡುತ್ತಿದ್ದ ದಂಧೆಗೆ ಬೀದರ್ (Bidar) ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬ್ರೇಕ್ ಹಾಕಿದ್ದಾರೆ.ಇದನ್ನೂ ಓದಿ: ಸರ್ಕಾರಿ ಶಾಲೆಗೆ 25 ಎಕರೆ ದಾನ ಮಾಡಲು ಮಹಾರಾಜರ ವಂಶಸ್ಥರಾ? – ಡಿಕೆಶಿ ವಿರುದ್ಧ ಹೆಚ್‌ಡಿಕೆ ಕೆಂಡ

    ಅಬಕಾರಿ ಉಪ ಅಧೀಕ್ಷಕರಾದ ಆನಂದ್ ಉಕ್ಕಲಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಡಿಫೆನ್ಸ್ ಸರ್ವಿಸ್ ಎಂದು ಇರುವ ಪ್ರತಿಷ್ಠಿತ ಬ್ರಾಂಡ್‌ನ ಖಾಲಿ ಬಾಟಲ್‌ಗಳಲ್ಲಿ ಕಲಬೆರಕೆ ಮದ್ಯ ತುಂಬಿ ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿ, ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಬೀದರ್ ನಗರದ ಲೇಬರ್ ಕಾಲೋನಿಯಲ್ಲಿರುವ ಅಂಬದಾಸ್ ಇಸ್ಮಾಯಿಲ್ ಮನೆ ಮೇಲೆ ದಾಳಿ ಮಾಡಿ 40 ಸಾವಿರ ರೂ.ಗೂ ಅಧಿಕ ಕಲಬೆರಕೆ ಮದ್ಯ ಜಪ್ತಿ ಮಾಡಿದ್ದಾರೆ. ಕಲಬೆರಕೆ ಹಾಗೂ ಪ್ರತಿಷ್ಠಿತ ಬ್ರಾಂಡ್‌ನ ಖಾಲಿ ಬಾಟಲ್‌ಗಳ ಜಪ್ತಿಯ ಜೊತೆಗೆ ಅಕ್ರಮ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಇದನ್ನೂ ಓದಿ: ಮೇಲೂರು ಕೆರೆಯಲ್ಲಿ ತಾಯಿ-ಮಗನ ಶವ ಪತ್ತೆ; ಆತ್ಮಹತ್ಯೆ ಶಂಕೆ

  • Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    ಪಾಟ್ನಾ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರ (Bihar) ರಾಜ್ಯದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.

    ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿ (Liquior) ಸೇವನೆಯಿಂದ 6 ಜನ ಸಾವನ್ನಪ್ಪಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತರ ಹಾಗೂ ಚಿಕಿತ್ಸೆಗೆ ಒಳಪಟ್ಟವರ ಯಾವುದೇ ಗುರುತನ್ನು ಬಹಿರಂಗಪಡಿಸಿಲ್ಲ.ಇದನ್ನೂ ಓದಿ: ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

    ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಬೆಳಗ್ಗೆ 7:30 ಸುಮಾರಿಗೆ ಮಾಹಿತಿ ಲಭಿಸಿದೆ. ತಕ್ಷಣವೇ ಸ್ಥಳಕ್ಕೆ ಅಧಿಕಾರಗಳ ತಂಡವನ್ನು ಕಳುಹಿಸಲಾಗಿದ್ದು, 12 ಜನರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಇನ್ನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

    ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ಏನು ಎಂಬುವುದನ್ನು ತಿಳಿಸಲಾಗುವುದು ಎಂದರು. ಸದ್ಯ ಎರಡು ಜಿಲ್ಲೆಯಲ್ಲಿ ಆಡಳಿತ ಮಂಡಳಿಯು ತನಿಖೆ ನಡೆಸುತ್ತಿದೆ. ಜೊತೆಗೆ ಮಘಾರ್ ಮತ್ತು ಔರಿಯಾ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಚೌಕಿದಾರ್‌ರನ್ನು ಇಲಾಖೆಯು ಅಮಾನತುಗೊಳಿಸಿದೆ.

    ಮತ್ತೊಂದು ಪ್ರಕರಣದಲ್ಲಿ, ಅ.16ರಂದು ಕಳ್ಳಭಟ್ಟಿ ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರ ರಾಜ್ಯದ ಇಬ್ರಾಹಿಂಪುರ ಪ್ರದೇಶದಲ್ಲಿ ನಡೆದಿದೆ.

    ಸರನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಮಾತನಾಡಿ, ಮೂವರು ಚಿಕಿತ್ಸೆ ಪಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿನ ನಿಖರವಾದ ಕಾರಣ ತಿಳಿಸಲಾಗುವುದು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಚ್ ಸೇವಿಸಿರುವ ಮಾಹಿತಿ ಲಭಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    2016ರ ಏಪ್ರಿಲ್‌ನಲ್ಲಿ ಬಿಹಾರ ಸರ್ಕಾರವು ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ. ನಿಷೇಧಿಸಿದ ನಂತರ ಅಕ್ರಮ ಮದ್ಯ ಸೇವನೆಯಿಂದ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ತಿಳಿಸಿದೆ.ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

  • ಡ್ರೈ ರಾಜ್ಯ ಬಿಹಾರದಲ್ಲಿ ಕಳ್ಳಭಟ್ಟಿ ಸೇವಿಸಿ ಮೂವರ ಸಾವು – ಇಬ್ಬರು ಆಸ್ಪತ್ರೆಗೆ ದಾಖಲು

    ಡ್ರೈ ರಾಜ್ಯ ಬಿಹಾರದಲ್ಲಿ ಕಳ್ಳಭಟ್ಟಿ ಸೇವಿಸಿ ಮೂವರ ಸಾವು – ಇಬ್ಬರು ಆಸ್ಪತ್ರೆಗೆ ದಾಖಲು

    ಪಾಟ್ನಾ: ಬಿಹಾರದ ಸಿತಾಮಾರ್ಹಿ (Sitamarhi) ಜಿಲ್ಲೆಯಲ್ಲಿ ಕಳ್ಳಬಟ್ಟಿ ಸೇವಿಸಿ ಮೂವರು ಸಾವಿಗೀಡಾಗಿದ್ದು, ಇಬ್ಬರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಭಾರತ ಮತ್ತು ನೇಪಾಳ ಗಡಿಯ ಬಳಿ ಜಯನಗರ ಹಾಗೂ ಅರಾರಿಯಾ ಗ್ರಾಮದ ಸೋನ್‌ಬಸ್ರಾ ಹಾಗೂ ಕನ್ಹೌಲಿ ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ. ಸಂತ್ರಸ್ತರು ಸದ್ಯ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಲಾಗಿದೆ.ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    ಜಯನಗರದ ನಿವಾಸಿಗಳಾದ ಲಾಲ್ ಬಾಬು ರೈ(50), ಗೌರಿಶಂಕರ್ ರಾವ್ (45), ಅರಾರಿಯಾ ನಿವಾಸಿ ಉಮಾ ಶಾ (55) ಮೃತಪಟ್ಟವರು.

    ಶನಿವಾರ ಸಂಜೆ ಐದು ಸಂತ್ರಸ್ತರು ಸ್ಥಳೀಯ ಮಾರುಕಟ್ಟೆಯಲ್ಲಿ ಖರೀದಿಸಿದ್ದ ಕಳ್ಳಬಟ್ಟಿಯನ್ನು ಸೇವಿಸಿದ್ದಾರೆ. ಭಾನುವಾರದಿಂದಲೇ ಇವರ ಸ್ಥಿತಿ ಹದಗೆಡಲು ಪ್ರಾರಂಭಿಸಿದೆ. ತಕ್ಷಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ ಸ್ವಲ್ಪ ಹೊತ್ತಿನಲ್ಲಿ ಲಾಲ್ ಬಾಬು ರೈ ಮೃತಪಟ್ಟಿದ್ದಾರೆ. ತ್ರೀವವಾದ ಹೊಟ್ಟೆ ನೋವು, ವಾಕರಿಕೆ, ತಲೆನೋವು ಹಾಗೂ ದೃಷ್ಟಿ ಕಳೆದುಕೊಳ್ಳುತ್ತಾ ಸಾವನ್ನಪ್ಪಿದರು.

    ಅದೇ ದಿನ, ಚಿಕಿತ್ಸೆಯ ಸಮಯದಲ್ಲಿ ಉಮಾ ಶಾ ಮೃತಪಟ್ಟಿದ್ದಾನೆ. ಬಳಿಕ ಮಂಗಳವಾರದಂದು ಗೌರಿ ಶಂಕರ್ ರಾವ್ ಸಾವಿಗೀಡಾಗಿದ್ದಾರೆ. ಸದ್ಯ ಜಗತ್ ಮಹತೋ (33) ಹಾಗೂ ಛೋಟಾನ್ ಮಹತೋ (20) ಎಂಬವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಯುಪಿಯಲ್ಲಿ 7 ಮಕ್ಕಳನ್ನು ಕೊಂದ ತೋಳ – ಆಪರೇಷನ್ ಭೇಡಿಯಾ ನಡೆಸಿ ಸೆರೆ