Tag: Liquor Bottle

  • ಶಾಲೆಯೊಳಗೆ ಬಿಯರ್ ಬಾಟ್ಲಿ ತೂರಿದ ಕಿಡಿಗೇಡಿಗಳು – ವಿದ್ಯಾಮಂದಿರಕ್ಕೆ ಅಪಮಾನ

    ಶಾಲೆಯೊಳಗೆ ಬಿಯರ್ ಬಾಟ್ಲಿ ತೂರಿದ ಕಿಡಿಗೇಡಿಗಳು – ವಿದ್ಯಾಮಂದಿರಕ್ಕೆ ಅಪಮಾನ

    ಚಿಕ್ಕಬಳ್ಳಾಪುರ: ತಡರಾತ್ರಿ ಮದ್ಯಪಾನ ಮಾಡಿ ಕಿಡಿಗೇಡಿಗಳು ಖಾಸಗಿ ಶಾಲೆಯೊಳಗೆ ಬಿಯರ್ ಬಾಟಲಿ ತೂರಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

    ನಗರದ ಕೋಟೆ ವೃತ್ತದಲ್ಲಿರುವ ಆಕಾಶ್ ಗ್ಲೋಬಲ್ ಶಾಲೆಯ ಕಿಟಕಿಗೆ ಬಿಯರ್ ಬಾಟಲಿಯನ್ನು ತೂರಿದ್ದು, ಕಿಟಕಿ ಗಾಜು ಪುಡಿ, ಪುಡಿಯಾಗಿದೆ. ಈ ಪರಿಣಾಮ ಶಾಲೆಯ ಪ್ರವೇಶ ದ್ವಾರದ ಮುಂಭಾಗ ಹಾಗೂ ಆಡಳಿತ ಕಚೇರಿ ತುಂಬಾ ಬಿಯರ್ ಬಾಟಲಿಯ ಚೂರು ಹಾಗೂ ಕಿಟಕಿ ಗಾಜಿನ ಚೂರುಗಳು ತುಂಬಿಕೊಂಡಿವೆ. ಅಂದಹಾಗೇ ಮಧ್ಯರಾತ್ರಿ ಕುಡಿದ ಅಮಲಿನಲ್ಲಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದು, ಈ ಹಿಂದೆ ಸಹ ಇದೇ ಶಾಲೆಯ ಮತ್ತೊಂದು ಕಿಟಕಿ ಗಾಜಿಗೆ ಕಲ್ಲು ತೂರಾಟ ಮಾಡಿ ಹೊಡೆದು ಹಾಕಿದ್ದಾರೆ. ಹೀಗೆ ಪದೇ ಪದೇ ಶಾಲೆಯ ಕಿಟಿಕಿಗಳನ್ನು ಕಲ್ಲು ಹಾಗೂ ಮದ್ಯದ ಬಾಟಲಿಯಿಂದ ಹೊಡೆದು ಹಾಕುತ್ತಿರುವುದು ಶಾಲೆಯ ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ:ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

    ಈ ವಿಚಾರವಾಗಿ ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರರವರು, ಶಾಲೆ ಮುಖ್ಯ ರಸ್ತೆಯಲ್ಲಿದ್ದು, ಶಾಲೆಯ ಮುಂಭಾಗ, ಅಕ್ಕ-ಪಕ್ಕ ರಾತ್ರಿ ವೇಳೆ ಕೆಲ ಪುಂಡ ಪೋಕರಿಗಳು ಕೂರುತ್ತಾರೆ. ಸಿಗರೇಟ್ ಹಾಗೂ ಮದ್ಯ ಸೇವನೆ ಮಾಡಿ ಬಾಟಲಿ ಬಿಸಾಡುವುದನ್ನು ಮಾಡುತ್ತಿದ್ದರು. ಆಗ ನಾವೇ ಕ್ಲೀನ್ ಮಾಡಿಕೊಂಡು ಸುಮ್ಮನಾಗುತ್ತಿದ್ವಿ. ಈ ಹಿಂದೆ ಸಹ ಶಾಲೆಯ ಮತ್ತೊಂದು ಕಿಟಕಿಯ ಗಾಜಿಗೆ ಕಲ್ಲು ತೂರಿ ಪುಡಿ ಪುಡಿ ಮಾಡಿದ್ದರು. ಆಗಲೂ ಸುಮ್ಮನಿದ್ವಿ. ಈಗ ತಡರಾತ್ರಿ ಶಾಲೆಯ ಮುಂಭಾಗದ ಕಿಟಕಿಗೆ ಬಿಯರ್ ಸಮೇತ ಬಾಟಲಿ ತೂರಿದ್ದು, ಕಿಟಕಿ ಗಾಜು ಹೊಡೆದು ಬಿಯರ್ ಬಾಟಲಿ ಒಳಗೆ ಬಂದಿದೆ. ಚೂರುಗಳೆಲ್ಲವೂ ಶಾಲೆ ಹಾಗೂ ಆಡಳಿತ ಕಚೇರಿಯಲ್ಲಿ ಹರಡಿವೆ. ಶಾಲೆ ಅಂದರೆ ದೇವಾಲಯ ಅಂತಾರೆ. ಅವರ ಮನೆ ಮಕ್ಕಳು ಸಹ ಯಾವುದೋ ಶಾಲೆಯಲ್ಲಿ ಓದುತ್ತಿರುತ್ತಾರೆ. ಆ ಶಾಲೆಯಲ್ಲಿ ಇಂತಹ ಘಟನೆ ಆದರೆ ಅವರಿಗೆಷ್ಟು ನೋವಾಗುತ್ತೆ? ಇದು ಶಾಲೆ ಅಲ್ವಾ. ಇಲ್ಲಿಗೂ ಮಕ್ಕಳು ಬರುತ್ತಾರೆ ಅಲ್ವಾ. ಯಾಕೆ ಹೀಗೆ ಮಾಡಿದ್ರು ಅಂತ ತಮ್ಮ ಆಕ್ರೋಶ ಮತ್ತು ಅಸಮಾಧಾನವನ್ನು ಹೊರಹಾಕಿದ್ದಾರೆ. ಇದನ್ನೂ ಓದಿ:ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಕೋಟೆ ಪ್ರಮುಖ ವೃತ್ತವಾಗಿದ್ದು, ನಗರದ ಮುಖ್ಯ ಭಾಗದಲ್ಲಿ ಈ ಶಾಲೆಯಿದೆ. ಇಂತಹ ಸ್ಥಳದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಚಿಕ್ಕಬಳ್ಳಾಪುರ ನಗರ ಪೊಲೀಸರು ಎಚ್ಚೆತ್ತುಕೊಳ್ಳಬೇಕಿದೆ. ಬೀಟ್ ವ್ಯವಸ್ಥೆ ಹೆಚ್ಚು ಮಾಡಬೇಕಿದೆ ಅಂತ ಶಾಲೆಯ ಶಿಕ್ಷಕರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯ ಪೇದೆಗಳು ಆಗಮಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ವಾಟ್ಸಪ್ ಮೂಲಕ ದುಬಾರಿ ಬೆಲೆಗೆ ಮದ್ಯ ಮಾರಾಟ – ಓರ್ವನ ಬಂಧನ

    ವಾಟ್ಸಪ್ ಮೂಲಕ ದುಬಾರಿ ಬೆಲೆಗೆ ಮದ್ಯ ಮಾರಾಟ – ಓರ್ವನ ಬಂಧನ

    – ಗ್ರಾಹಕನ ಸೋಗಿನಲ್ಲಿ ಹೋಗಿ ಬಂಧಿಸಿದ ಪೊಲೀಸರು
    – 100 ರೂ. ಮೌಲ್ಯದ ಮದ್ಯ 400 ರೂ. ಗೆ ಮಾರಾಟ

    ಚೆನ್ನೈ: ಲಾಕ್‍ಡೌನ್ ಮಧ್ಯೆಯೂ ವಾಟ್ಸಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಚೆನ್ನೈನ ಹಮ್ಸಾ ಪಾರ್ಕ್ ನಿವಾಸಿ ಅಯ್ಯಪ್ಪನ್ ಎಂದು ಗುರುತಿಸಲಾಗಿದೆ. ಈತ ಲಾಕ್‍ಡೌನ್ ಆಗಿರುವುದನ್ನೇ ಬಂಡವಾಳ ಮಾಡಿಕೊಂಡು ಮದ್ಯವನ್ನು ಸಂಗ್ರಹಿಸಿ ಅದನ್ನು ವಾಟ್ಸಪ್ ಮೂಲಕ ಗ್ರಾಹಕರಿಗೆ ದುಬಾರಿ ಬೆಲೆಯಲ್ಲಿ ಮಾರುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಗ್ರಾಹಕರ ಸೋಗಿನಲ್ಲಿ ಹೋಗಿ ಆತನನ್ನು ಬಂಧಿಸಿದ್ದಾರೆ.

    ಕೊರೊನಾ ಭಯದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಅಗತ್ಯವಸ್ತುಗಳ ಸರಬರಾಜು ಬಿಟ್ಟು ಬೇರೆಲ್ಲ ವಸ್ತುಗಳು ಮತ್ತು ಅಂಗಡಿಗಳು ಬಂದ್ ಆಗಿವೆ. ಇದರ ನಡುವೆ ಮದ್ಯದಂಗಡಿಗಳು ಕೂಡ ಮುಚ್ಚಿದ್ದು, ಮದ್ಯಪ್ರಿಯರಿಗೆ ತೊಂದರೆಯಾಗಿದೆ. ಇನ್ನೂ ಮದ್ಯಸಿಗದೆ ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲವರು ಎಣ್ಣೆಯನ್ನು ದುಬಾರಿ ಬೆಲೆಗೆ ಮಾರುತ್ತಿದ್ದಾರೆ.

    ಈ ರೀತಿಯಲ್ಲೇ ಅಯ್ಯಪ್ಪನ್ ಕೂಡ ಲಾಕ್‍ಡೌನ್‍ಗೂ ಮುಂಚೆಯೇ ಮದ್ಯದ ಬಾಟಲಿಗಳನ್ನು ಶೇಖರಣೆ ಮಾಡಿಕೊಂಡಿದ್ದು, ಈಗ ಅವುಗಳನ್ನು ದುಬಾರಿ ಬೆಲೆಗೆ ಮಾರುತ್ತಿದ್ದ. ಈ ವಿಚಾರ ತಿಳಿದ ಪೊಲೀಸರು ಗ್ರಾಹಕರಂತೆ ವಾಟ್ಸಪ್ ಮೂಲಕ ಮದ್ಯವನ್ನು ಆರ್ಡರ್ ಮಾಡಿದ್ದಾರೆ. ಆಗ ಅಯ್ಯಪ್ಪನ್ ಅವರಿಗೆ ತನ್ನ ಬೈಕಿನಲ್ಲಿ 12 ಬಾಟಲಿಗಳನ್ನು ತೆಗೆದುಕೊಂಡು ಕೊಡಲು ಬಂದಾಗ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.

    ಅಯ್ಯಪ್ಪನ್ ಅವರನ್ನು ಅರೆಸ್ಟ್ ಮಾಡಿದ ಪೊಲೀಸರು ಆತನ ಮನೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಹೋಗಿ ಚೆಕ್ ಮಾಡಿದಾಗ ಅವರ ಮನೆಯಲ್ಲಿ ನಿಂತಿದ್ದ ಕಾರಿನಲ್ಲಿ ಸುಮಾರು 870 ಮದ್ಯದ ಬಾಟಲಿಗಳು ಸಿಕ್ಕಿವೆ. ನಂತರ ಆತನನ್ನು ತನಿಖೆ ಮಾಡಿದಾಗ ನಾನು ಲಾಕ್‍ಡೌನ್ ಮುಂಚೆಯೇ ಈ ಮದ್ಯದ ಬಾಟಲಿಗಳನ್ನು ಖರೀದಿಸಿದ್ದೆ. ನಂತರ ನನ್ನ ನಂಬರ್ ಅನ್ನು ವಿವಿಧ ವಾಟ್ಸಪ್ ಗ್ರೂಪ್‍ಗಳಿಗೆ ಶೇರ್ ಮಾಡಿ ಆ ಮೂಲಕ 100 ರೂ. ಮೌಲ್ಯದ ಮದ್ಯವನ್ನು 400 ರೂ. ಬೆಲೆಗೆ ಮಾರುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾನೆ.