Tag: liquor shop

  • ರಾಯಚೂರಿನಲ್ಲಿ ಬೆಳ್ಳಂಬೆಳಿಗ್ಗೆ 5 ಗಂಟೆಗೆ ಮದ್ಯದಂಗಡಿ ಓಪನ್ – ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    ರಾಯಚೂರಿನಲ್ಲಿ ಬೆಳ್ಳಂಬೆಳಿಗ್ಗೆ 5 ಗಂಟೆಗೆ ಮದ್ಯದಂಗಡಿ ಓಪನ್ – ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    ರಾಯಚೂರು: ಜಿಲ್ಲೆಯಲ್ಲಿ ಸೂರ್ಯೋದಯಕ್ಕೂ ಮುನ್ನ ಬಾರ್ ಗಳ ಬಾಗಿಲು ತೆರೆದಿರುತ್ತವೆ. ಮದ್ಯವ್ಯಸನಿಗಳಂತೂ ಈ ಮದ್ಯದಂಗಡಿಗಳ ಮುಂದೆ ಬೆಳಿಗ್ಗೆ ಐದು ಗಂಟೆಯಿಂದಲೇ ಕಾಯುತ್ತ ಕುಳಿತಿರುತ್ತಾರೆ.

    ಹೌದು. ರಾಯಚೂರು ನಗರದ ಶ್ರೀ ನಂದಿ ಬಾರ್ ಆ್ಯಂಡ್ ಗಾರ್ಡನ್ ರೆಸ್ಟೋರೆಂಟ್ ಹಾಗೂ ಮಂಜು ವೈನ್ಸ್ ಸೇರಿದಂತೆ ಹಲವು ಮದ್ಯದಂಗಡಿಗಳು ಎಗ್ಗಿಲ್ಲದೆ ಬೆಳ್ಳಂಬೆಳಿಗ್ಗೆ ವ್ಯಾಪಾರ ಶುರು ಮಾಡುತ್ತಿವೆ.

    ಬೆಳಿಗ್ಗೆ 10:30ರ ನಂತರ ಮದ್ಯದ ಅಂಗಡಿಗಳನ್ನ ತೆರೆಯಬೇಕು ಎನ್ನುವ ನಿಯಮವಿದ್ದರೂ ಅದನ್ನ ಗಾಳಿಗೆ ತೂರಿ ಬೆಳಿಗ್ಗೆ ಐದು ಗಂಟೆಗೆ ಮದ್ಯ ಮಾರಾಟ ನಡೆಯುತ್ತಿದೆ. ಈ ವಿಚಾರ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತಿಳಿದಿದ್ದರೂ ಕೂಡ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಸಾರ್ವಜನಿಕರು ಇದುವರೆಗೂ ನೀಡಿದ ದೂರಿಗೆ ಬೆಲೆಯೇ ಇಲ್ಲದಂತಾಗಿದೆ.

    ಬೆಳ್ಳಂಬೆಳಿಗ್ಗೆ ಮದ್ಯದಂಗಡಿ ತೆರೆಯುವುದರಿಂದ ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗದೆ ಮದ್ಯದ ಅಮಲಿನಲ್ಲೇ ಕಾಲಕಳೆಯುತ್ತಿದ್ದಾರೆ. ಇದರಿಂದ ಬಡಕುಟುಂಬಗಳು ಬೀದಿಗೆ ಬರುವಂತಾಗಿದೆ ಎಂದು ಸ್ಥಳೀಯ ಹೋರಾಟಗಾರರು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ನಿಯಮ ಬಾಹಿರವಾಗಿ ಬೇಗನೆ ತೆರೆಯುವ ಬಾರ್ ಗಳ ಅನುಮತಿ ರದ್ದುಗೊಳಿಸಬೇಕು ಅಂತ ಆಗ್ರಹಿಸಿದ್ದಾರೆ. ಇತ್ತ ಅಬಕಾರಿ ಅಧಿಕಾರಿಗಳು ಮಾತ್ರ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಜಾಣ ಉತ್ತರ ಹೇಳಿ ಜಾರಿಕೊಳ್ಳುತ್ತಲೇ ಇದ್ದಾರೆ.

  • ಅತ್ಯಾಚಾರ ಯತ್ನಕ್ಕೆ ಕಾರಣವಾಯ್ತು ಮದ್ಯದಂಗಡಿ

    ಅತ್ಯಾಚಾರ ಯತ್ನಕ್ಕೆ ಕಾರಣವಾಯ್ತು ಮದ್ಯದಂಗಡಿ

    ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿ ಮೇಲೆ ಮದ್ಯ ಕುಡಿದ ಅಮಲಿನಲ್ಲಿ ಯುವಕನೊರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಇದಕ್ಕೆ ಎಂಎಸ್‍ಐಎಲ್ ಮದ್ಯದಂಗಡಿಯೇ ಕಾರಣ ಅಂತ ಮಹಿಳೆಯರು ಪ್ರತಿಭಟನೆಗಿಳಿದಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದ ಹೊರವಲಯದಲ್ಲಿ ನೂತನವಾಗಿ ಎಂಎಸ್‍ಐಎಲ್ ಮದ್ಯದಂಗಡಿ ಆರಂಭವಾಗಿದ್ದು, ಇಲ್ಲಿ ಮದ್ಯ ಖರೀದಿಸಿದ್ದ ಯುವಕನೊರ್ವ ಅಪ್ರಾಪ್ತ ಬಾಲಕಿಯನ್ನ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

    ವಿಷಯ ತಿಳಿದ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದು, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಆರೋಪಿ ಯುವಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಇದಕ್ಕೆಲ್ಲಾ ಸುಲಭವಾಗಿ ಎಂಎಸ್‍ಐಎಲ್ ಮದ್ಯದಂಗಡಿಯಲ್ಲಿ ಮದ್ಯ ಸಿಗುತ್ತಿರುವುದೇ ಇಂತಹ ಅತ್ಯಾಚಾರ ಪ್ರಕರಣಗಳಿಗೆ ಕಾರಣ ಅಂತ ಸ್ಥಳೀಯ ಮಹಿಳೆಯರು ಸಿಟ್ಟಿಗೆದ್ದು, ಮದ್ಯದಂಗಡಿ ಎತ್ತಂಗಡಿ ಮಾಡುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದಿದ್ದು, ಪ್ರತಿಭಟನಾನಿರತರ ಮನವೊಲಿಕೆಗೆ ಮುಂದಾಗಿದ್ದಾರೆ. ಆದರೆ ಮಹಿಳೆಯರು ಅವರ ಮನವೊಲಿಕೆಗೆ ಜಗ್ಗದೆ ಎಂಎಸ್‍ಐಎಲ್ ಅಧಿಕಾರಿಯನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆದ್ದಾರಿ ಪಕ್ಕದ ಬಾರ್‍ಗಳ ಮೇಲೆ ಸರ್ಕಾರಕ್ಕೆ ಪ್ರೀತಿ – ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

    ಹೆದ್ದಾರಿ ಪಕ್ಕದ ಬಾರ್‍ಗಳ ಮೇಲೆ ಸರ್ಕಾರಕ್ಕೆ ಪ್ರೀತಿ – ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

    ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಇರುವ ಮದ್ಯದಂಗಡಿಗಳನ್ನ ಶನಿವಾರ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇವತ್ತು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ.

    ಲೋಕೋಪಯೋಗಿ ಇಲಾಖೆ, ಅಬಕಾರಿ ಇಲಾಖೆ, ಕಾನೂನು ಇಲಾಖೆಯ ಅಧಿಕಾರಿಗಳ ಸಭೆ ಕರೆದಿದ್ದು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ 3500 ಮದ್ಯದಂಗಡಿಗಳನ್ನ ಮುಚ್ಚಲಾಗಿದ್ದು, ಬೆಂಗಳೂರಲ್ಲೇ 850 ಮದ್ಯದಂಗಡಿಗಳನ್ನ ಬಂದ್ ಮಾಡಲಾಗಿದೆ.

    ಸುಪ್ರೀಂ ಕೋರ್ಟ್ ಆದೇಶದನ್ವಯ ಮದ್ಯದಂಗಡಿಗಳನ್ನ ಮುಚ್ಚಿದ್ದು, ಹೆದ್ದಾರಿ ಡಿನೋಟಿಫೈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಹಾಗಾಗಿ ಮುಂದಿನ ನಿರ್ಧಾರಗಳ ಬಗ್ಗೆ ಇವತ್ತು ಸಿಎಂ ಸಭೆಯಲ್ಲಿ ಚರ್ಚೆ ನಡೆಯಲಿದೆ.