Tag: Liquor Store

  • ಮತ್ತೆ ಅಧಿಕಾರಕ್ಕೆ ಬರೋದು ಮರೆತುಬಿಡಿ: ತಮಿಳುನಾಡು ಸರ್ಕಾರದ ಮೇಲೆ ರಜನಿ ಗರಂ

    ಮತ್ತೆ ಅಧಿಕಾರಕ್ಕೆ ಬರೋದು ಮರೆತುಬಿಡಿ: ತಮಿಳುನಾಡು ಸರ್ಕಾರದ ಮೇಲೆ ರಜನಿ ಗರಂ

    ಚೆನ್ನೈ: ಮತ್ತೆ ಅಧಿಕಾರಕ್ಕೆ ಬರುವುದನ್ನು ಮರೆತುಬಿಡಿ ಎಂದು ನಟ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

    ಕೊರೊನಾ ಸಮಯದಲ್ಲಿ ಮದ್ಯ ಮಾರಬಾರದು ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ ಹೈಕೋರ್ಟಿನ ಈ ಅಜ್ಞೆಗೆ ತಡೆಯಾಜ್ಞೆ ನೀಡುವಂತೆ ತಮಿಳುನಾಡು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ. ಈ ವಿಚಾರಕ್ಕೆ ರಜನಿಕಾಂತ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ರಜನಿಕಾಂತ್ ಅವರು, ಈ ಸಮಯದಲ್ಲಿ ರಾಜ್ಯ ಸರ್ಕಾರ ಮದ್ಯದಂಗಡಿಗಳನ್ನು ತೆರೆದರೆ ಮತ್ತೆ ಅವರು ಮುಂದಿನ ಬಾರಿ ಅಧಿಕಾರಕ್ಕೆ ಬರುವ ಕನಸನ್ನು ಮರೆತುಬಿಡಬೇಕು. ಈ ರೀತಿಯ ಕಠಿಣ ಪರಿಸ್ಥಿತಿಯಲ್ಲಿ ಮದ್ಯದಂಗಡಿಯನ್ನು ಓಪನ್ ಮಾಡುವುದರ ಬದಲು ಬೊಕ್ಕಸ ತುಂಬಿಸಲು ಬೇರೆ ಉತ್ತಮ ಮಾರ್ಗಗಳನ್ನು ದಯವಿಟ್ಟು ಹುಡುಕಿ ಎಂದು ಟ್ವೀಟ್ ಮಾಡಿದ್ದಾರೆ.

    ಕೊರೊನಾ ಹಿಡಿತಕ್ಕೆ ಸಿಗದ ಸಮಯದಲ್ಲಿ ತಮಿಳುನಾಡಿ ಎಡಪ್ಪಾಡಿ ಕೆ.ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಸರ್ಕಾರ ಮದ್ಯದಂಗಡಿಗಳನ್ನು ಮತ್ತೆ ಓಪನ್ ಮಾಡಲು ತೀರ್ಮಾನಿಸಿತ್ತು. ಇದಕ್ಕೆ ಮದ್ರಾಸ್ ಹೈಕೋಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ರಜನಿಕಾಂತ್ ರೀತಿಯಲ್ಲೇ ನಟ ಕಮಲ್ ಹಾಸನ್ ಡಿಎಂಕೆಯ ಎಂಕೆ ಸ್ಟಾಲಿನ್ ಅವರು ಕೂಡ ವಿರೋಧ ವ್ಯಕ್ತಪಸಿದ್ದಾರೆ.

    ರಾಜ್ಯ ಸರ್ಕಾರದ ವಿರುದ್ಧ ರಜನಿಕಾಂತ್ ಟ್ವೀಟ್ ಮಾಡುತ್ತಿದ್ದಂತೆ ತಮ್ಮ ನೆಚ್ಚಿನ ನಟನ ಪರವಾಗಿ ನಿಂತಿರುವ ಥಲೈವಾ ಫ್ಯಾನ್ಸ್, ರಜನಿಕಾಂತ್ ಅವರದ್ದು ನೇರಮಾತು. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಜೊತಗೆ ಇನ್ನೂ ಕೆಲವರು ರಜನಿ ಅವರು ಜನರ ಮನಸ್ಸುನ್ನು ಅರ್ಥಮಾಡಿಕೊಂಡ ಅದರ ಪರವಾಗಿ ಮಾತನಾಡುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಶುಕ್ರವಾರ ಮದ್ರಾಸ್ ಹೈಕೋರ್ಟ್, ಮದ್ಯದಂಗಡಿಗಳ ಮುಂದೆ ಸರಿಯಾದ ಸಾಮಾಜಿಕ ಅಂತರ ಕಾಯ್ದು ಕೊಳ್ಳುತ್ತಿಲ್ಲ. ಜೊತೆಗೆ ಸರ್ಕಾರ ವಿಧಿಸಿರುವ ನಿಯಮಗಳನ್ನು ಪಾಲಿಸುತ್ತಿಲ್ಲ. ಇದು ಹೀಗೆ ಮುಂದುವರೆದರೆ ಅಪಾಯಕ್ಕೆ ಎಡೆಮಾಡಿಕೊಡುತ್ತದೆ ಎಂದು ಹೇಳಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಸೂಚಿಸಿತ್ತು. ಇದಾದ ನಂತರ ಶನಿವಾರ ತಮಿಳುನಾಡು ರಾಜ್ಯ ಸರ್ಕಾರ ಹೈಕೋರ್ಟಿನ ಅಜ್ಞೆಯನ್ನ ತಡೆ ಹಿಡಿಯುವಂತೆ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.

    ಕೊರೊನಾದಿಂದ ದೇಶ ಲಾಕ್‍ಡೌನ್ ಆದ ಬಳಿಕ ಮಾರ್ಚ್ 25ರಿಂದ ಮದ್ಯದಂಗಡಿಗಳನ್ನು ಮುಚ್ಚಲಾಗಿತ್ತು. ಆದರೆ ಮೇ 4ರಂದು ಸ್ವಲ್ಪ ಪ್ರಮಾಣದಲ್ಲಿ ಲಾಕ್‍ಡೌನ್ ಅನ್ನು ಸಡಿಲಿಕೆ ಮಾಡಿದ ಕಾರಣ ಕೆಲ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಆದರೆ ಕೆಲ ಷರತ್ತುಗಳನ್ನು ವಿಧಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿತ್ತು. ಆದರೆ ಕೆಲ ಕಡೆ ಈ ನಿಯಮಗಳು ಪಾಲನೆ ಆಗಿಲ್ಲ.

  • ಕಲ್ಲೆಸೆದು ಮದ್ಯದ ಅಂಗಡಿ ಬಂದ್ ಮಾಡಿಸಿದ ಮಹಿಳೆಯರು

    ಕಲ್ಲೆಸೆದು ಮದ್ಯದ ಅಂಗಡಿ ಬಂದ್ ಮಾಡಿಸಿದ ಮಹಿಳೆಯರು

    ಹಾವೇರಿ: ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮದ್ಯದ ಅಂಗಡಿಗಳ ಆರಂಭದ ದಿನವೇ ಮಹಿಳೆಯರು ಕಲ್ಲೆಸೆದು ಮದ್ಯದ ಅಂಗಡಿಗಳನ್ನ ಬಂದ್ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಮೇ 4ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಒಂದು ಎಂಎಸ್‍ಐಎಲ್ ಮತ್ತು ಎರಡು ಎಂಆರ್‌ಪಿ ಮದ್ಯದ ಅಂಗಡಿಗಳಿಗೆ ಮಹಿಳೆಯರು ಕಲ್ಲೆಸೆದು ಕೆಲಕಾಲ ಅಂಗಡಿಗಳನ್ನ ಬಂದ್ ಮಾಡಿಸಿದರು. ಲಾಕ್‍ಡೌನ್ ವೇಳೆಯಲ್ಲಿ ಮದ್ಯದ ಅಂಗಡಿಗಳು ಬಂದ್ ಆಗಿದ್ದರಿಂದ ಪುರುಷರು ಮನೆಯಲ್ಲಿ ಸುಮ್ಮನಿದ್ದರು. ಆದರೆ ಈಗ ಮದ್ಯದ ಅಂಗಡಿಗಳು ಆರಂಭ ಆಗಿದ್ದರಿಂದ ಮತ್ತೆ ಕುಟುಂಬಗಳು ಹಾಳಾಗುತ್ತವೆ ಎಂದು ಗರಂ ಆಗಿದ್ದ ಮಹಿಳೆಯರು ಮದ್ಯದಂಗಡಿಗಳ ಮೇಲೆ ಕಲ್ಲೆಸೆದು, ಅಂಗಡಿಗಳನ್ನ ಬಂದ್ ಮಾಡಿಸಿ ತಮ್ಮ ಆಕ್ರೋಶ ಹೊರಹಾಕಿದರು.

    ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ಇದ್ದರೂ ಕ್ಯಾರೇ ಮಾಡದೆ ಮದ್ಯದ ಅಂಗಡಿಗಳ ಮೇಲೆ ಕಲ್ಲೆಸೆದು ಅಂಗಡಿಗಳನ್ನ ಮಹಿಳೆಯರು ಬಂದ್ ಮಾಡಿಸಿದರು. ಅಂಗಡಿಗಳ ಮೇಲೆ ಮಹಿಳಾ ಮಣಿಗಳು ಕಲ್ಲೆಸೆದು ಮದ್ಯದಂಗಡಿ ಬಂದ್ ಮಾಡಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

  • ರಾಜ್ಯದಲ್ಲಿ ಇಂದು 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ

    ರಾಜ್ಯದಲ್ಲಿ ಇಂದು 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ

    – 3.9 ಲಕ್ಷ ಲೀಟರ್ ಬಿಯರ್, 8.5 ಲಕ್ಷ ಲೀಟರ್ ಭಾರತೀಯ ಮದ್ಯ ಮಾರಾಟ

    ಬೆಂಗಳೂರು: ಬರೋಬ್ಬರಿ 41 ದಿನಗಳಿಂದ ಮದ್ಯ ಸಿಗದೆ ಕಂಗಾಲಾಗಿದ್ದ ಮದ್ಯ ಪ್ರಿಯರಿಗೆ ಲಾಕ್‍ಡಾನ್ ಸಡಿಲಿಕೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮದ್ಯ ಲಭ್ಯವಾಗಿದೆ. ರಾಜ್ಯಾದ್ಯಂತ ಒಂದೇ ದಿನ ಇಂದು 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ.

    ನಿರ್ಬಂಧಿತ ವಲಯ ಹೊರತು ಪಡಿಸಿ ರಾಜ್ಯದ ಎಲ್ಲ ಕಡೆ ಮದ್ಯದಂಗಡಿಗಳು ತೆರೆದಿದ್ದವು. ಪರಿಣಾಮ ಬಹುತೇಕ ಮದ್ಯದಂಗಡಿಗಳಲ್ಲಿದ್ದ ಸ್ಟಾಕ್ ಖಾಲಿಯಾಗಿದೆ. ಸಾಮಾನ್ಯ ದಿನಗಳಲ್ಲಿ ನಿತ್ಯ 60 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಆಗುತ್ತಿತ್ತು. ಬಹು ದಿನಗಳ ಬಳಿಕ ಮತ್ತೆ ವಹಿವಾಟು ಆರಂಭವಾದ ಕಾರಣ ನಿರೀಕ್ಷೆಯಂತೆಯೇ ಇಂದು ಮದ್ಯ ಮಾರಾಟ ಜೋರಾಗಿದೆ. ಇದನ್ನು ಓದಿ: ರಾಯಚೂರಿನಲ್ಲಿ ಹೈ ಬ್ರಾಂಡ್ ಮದ್ಯ ಖಾಲಿ- ಕ್ಯೂ ನಿಂತವರಿಗೆ ನಿರಾಸೆ

    ಇಂದು ಒಟ್ಟಾರೆ 3.9 ಲಕ್ಷ ಲೀಟರ್ ಬಿಯರ್ ಹಾಗೂ 8.5 ಲಕ್ಷ ಲೀಟರ್ ಭಾರತೀಯ ಮದ್ಯ ಮಾರಾಟವಾಗಿದೆ. ಸರ್ಕಾರ ಹಲವು ಷರತ್ತುಗಳ ಅನ್ವಯ ಇಂದು ಮದ್ಯದಂಗಡಿ ತೆರಯಲು ಅನುಮತಿ ನೀಡಿತ್ತು. ಮೊದಲ ದಿನವಾದ ಕಾರಣ ಬಹುತೇಕ ಭಾಗಗಳಲ್ಲಿ ಮದ್ಯದಂಗಡಿಗಳ ಎದುರು ದೂರದವರೆಗೆ ಸಾಲು ಕಂಡು ಬಂದಿತ್ತು.

    ಉಳಿದಂತೆ ಮದ್ಯದ ದಾಸ್ತಾನಿನ ಬಗ್ಗೆ ಸ್ಪಷ್ಟನೆ ನೀಡಿರುವ ಅಬಕಾರಿ ಇಲಾಖೆ, ಈಗಾಗಲೇ ಕೆ.ಎಸ್.ಬಿ.ಸಿ.ಎಲ್ ಡಿಪೋಗಳಲ್ಲಿ ಸಾಕಷ್ಟು ಮದ್ಯ ದಾಸ್ತಾನು ಮಾಡಲಾಗಿದೆ. ಡಿಸ್ಟಿಲರಿ ಮತ್ತು ಬ್ರೀವರಿಗಳನ್ನು ನಡೆಸಲು ಅನುಮತಿಯನ್ನು ನೀಡಲಾಗಿರುತ್ತದೆ. ಅಬಕಾರಿ ಆಯುಕ್ತರ ಸೂಚನೆಯ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಅಬಕಾರಿ ಅಧಿಕಾರಿಗಳು ಸಿಎಲ್-2 ಮತ್ತು ಸಿಎಲ್-11(ಸಿ) ಸನ್ನದುದಾರರ ಸಭೆಯನ್ನು ಕರೆದು ಈಗಾಗಲೇ ತಿಳುವಳಿಕೆಯನ್ನು ನೀಡಿದ್ದಾರೆ ಎಂದು ತಿಳಿಸಿದೆ. ಇದನ್ನು ಓದಿ: ಮದ್ಯದಂಗಡಿ ಎದುರು ಕಾದು ಕುಳಿತವರಿಗೆ ನಿರಾಸೆ!

    ಹಲವು ಸ್ಥಳಗಳಲ್ಲಿ ಸಾಮಾಜಿಕ ಅಂತರ ಮರೆತು ಮದ್ಯದಂಗಡಿಗಳ ಎದುರು ಜನರು ಸೇರಿದ್ದರು. ಈ ಕುರಿತು ಕ್ರಮಕೈಗೊಳ್ಳುವ ಕುರಿತು ಇಲಾಖೆ ತಿಳಿಸಿದೆ. ಅಲ್ಲದೇ ಎಂ.ಆರ್.ಪಿ ಬೆಲೆಯನ್ನು ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಕೆಲವು ದೂರುಗಳು ಬಂದರೆ ಪರಿಶೀಲನೆ ನಡೆಸಿ ಕಾನೂನಿ ಅನ್ವಯ ಅಮಾನತು ಮಾಡುವ ಕುರಿತು ಕ್ರಮಕೈಗೊಳ್ಳಲಾಗಿದೆ. ಅಬಕಾರಿ ಆಯುಕ್ತರು ಆಗಿಂದಾಗೆ ಬೇಕಾದ ಕ್ರಮಗಳ ಬಗ್ಗೆ ವಿಮರ್ಶೆ ಮಾಡುತ್ತಾರೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಇದನ್ನು ಓದಿ: ಅಂಗಡಿ ಓಪನ್ ಮಾಡಿ ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸರ್ಕಾರ

  • ಮದ್ಯದಂಗಡಿ ಕಳವು ಪ್ರಕರಣದಲ್ಲಿ ಮಾಲೀಕನೇ ಕಳ್ಳ!

    ಮದ್ಯದಂಗಡಿ ಕಳವು ಪ್ರಕರಣದಲ್ಲಿ ಮಾಲೀಕನೇ ಕಳ್ಳ!

    -ನಗರಸಭೆ ಸದಸ್ಯ ಸೇರಿ 4 ಮಂದಿ ಬಂಧನ

    ಚಿಕ್ಕಬಳ್ಳಾಪುರ: ನಗರ ಹೊರವಲಯದ ಗೋಲ್ಡನ್ ಬಾರಿನಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

    ಏಪ್ರಿಲ್ 30ರ ರಾತ್ರಿ ನಗರ ಹೊರವಲಯದ ಗೋಲ್ಡನ್ ಬಾರಿನ ಸಿಸಿಟಿವಿ ಒಡೆದು ಹಾಕಿ, ಬಾರಿನ ಹಿಂಭಾಗದ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಲಾಗಿತ್ತು. ಈ ಸಂಬಂಧ ಮೇ 1ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಬಾರ್ ಮಾಲೀಕ, ನಗರಸಭೆ ಸದಸ್ಯ ದೀಪಕ್ ಹಾಗೂ ಆತನ ಸಹಚರರೇ ಕಳ್ಳತನದ ರೂವಾರಿಗಳು ಎಂಬ ಅಂಶ ಬೆಳಕಿಗೆ ಬಂದಿದೆ.

    ಲಾಕ್‍ಡೌನ್ ಸಮಯದಲ್ಲಿ ಮೂಲ ಬೆಲೆಗಿಂತ ಹತ್ತು ಪಟ್ಟು ಹೆಚ್ಚಳಕ್ಕೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿ ಹಣ ಗಳಿಸಲು ಮಾಲೀಕ, ಆತನ ಸಹಚರರು ಸಂಚು ರೂಪಿಸಿದ್ದರು. ಇದರಂತೆ ಬಾರ್ ಗೋಡೆಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಿದ್ದರು. ತದನಂತರ ತಮ್ಮ ಬಾರ್ ಕಳ್ಳತನ ಆಗಿದೆ ಎಂದು ಕಥೆ ಕಟ್ಟಿ ಪೊಲೀಸರಿಗೆ ದೂರು ನೀಡಿದ್ದರು.

    ಪೊಲೀಸರು ಹಾಗೂ ಅಬಕಾರಿ ಇಲಾಖಾಧಿಕಾರಿಗಳಿಗೆ ಮಂಕು ಬೂದಿ ಎರಚಲು ಹೋದ ಮಾಲೀಕ ಈಗ ಜೈಲು ಸೇರುವಂತಾಗಿದೆ. ಲಾಕ್‍ಡೌನ್ ವೇಳೆ ಜಿಲ್ಲೆಯ 4 ಕಡೆ ಸಹ ಮದ್ಯದಂಗಡಿಗಳ ಕಳವು ಪ್ರಕರಣಗಳು ನಡೆದಿದೆ. ಈ ಪ್ರಕರಣ ಇದೀಗ ಬಾರ್ ಮಾಲೀಕರ ಮೇಲೆಯೇ ಅನುಮಾನ ಪಡುವಂತೆ ಮಾಡಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ಬಂಧಿತರಿಂದ 07 ಕ್ರೇಟ್ ಮದ್ಯ, ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದೆ.

  • ಮದ್ಯದಂಗಡಿ ಎದುರು ಕಾದು ಕುಳಿತವರಿಗೆ ನಿರಾಸೆ!

    ಮದ್ಯದಂಗಡಿ ಎದುರು ಕಾದು ಕುಳಿತವರಿಗೆ ನಿರಾಸೆ!

    – ಕಂಟೈನ್ಮೆಂಟ್ ಝೋನ್‍ನಲ್ಲಿ ಇಲ್ಲ ಎಣ್ಣೆ ಮಾರಾಟ

    ಬಳ್ಳಾರಿ: ಕಳೆದ 41 ದಿನಗಳಿಂದ ಮದ್ಯಕ್ಕಾಗಿ ಕಾದು ಕುಳಿತಿದ್ದ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಗಳಿಗೆ ನಿರಾಶೆ ಎದುರಾಗಿದೆ. ಕೊರೊನಾ ಹರಡುವಿಕೆಯ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡಿದ್ದ ಸರ್ಕಾರ ಸದ್ಯ ಕೆಲ ಸಡಿಲಿಕೆಯನ್ನು ಜಾರಿ ಮಾಡಿದೆ. ಲಾಕ್‍ಡೌನ್ ಜಾರಿ ಇದ್ದರೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಜಿಲ್ಲೆಯ ಹೊಸಪೇಟೆ ನಗರವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿರುವುದರಿಂದ ಮದ್ಯ ಪ್ರಿಯಯರು ನಿರಾಸೆ ಅನುಭವಿಸಿದ್ದಾರೆ.

    ಹಳದಿ ವಲಯದಲ್ಲಿರುವ ಜಿಲ್ಲೆಯ ಹೊಸಪೇಟೆ ನಗರ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮದ್ಯ ಮಾರಾಟ ಜೋರಾಗಿದೆ. ಆದರೆ ಹೊಸಪೇಟೆ ನಗರದಲ್ಲಿ ಮಾತ್ರ ಎಣ್ಣೆ ಮಾರಾಟಕ್ಕೆ ಅವಕಾಶ ನೀಡಿಲ್ಲ. ನಗರವನ್ನು ಸಂಪೂರ್ಣವಾಗಿ ಕಂಟೈನ್ಮೆಂಟ್ ಝೋನ್ ಮಾಡಿಲಾಗಿರುವ ಕಾರಣ ಮದ್ಯ ಮಾರಾಟ ಮಾಡಲು ನಿರಾಕರಿಸಲಾಗಿದೆ.

    ಇತ್ತ ಮದ್ಯ ದಂಗಡಿ ತೆರೆಯಲಿದೆ ಎಂದು ಭಾವಿಸಿದ್ದ ಹಲವರು ಬೆಳಿಗ್ಗೆ ಇಂದಲೇ ಹೊಸಪೇಟೆ ನಗರದಲ್ಲಿರುವ ಮದ್ಯದಂಗಡಿ ಎದುರು ಕಾದು ಕುಳಿತ್ತಿದ್ದರು. ಆದರೆ ಶಾಪ್ ಮಾತ್ರ ಓಪನ್ ಆಗಲೇ ಇಲ್ಲಾ. ಪರಿಣಾಮ ಅಂಗಡಿಯ ಎದುರು ಕಾದು ಕಾದು ಸುಸ್ತಾದ ಜನ ಸರ್ಕಾರದ ವಿರುದ್ಧ ಹಿಡಿಶಾಪ ಹಾಕಿ ಬೇಸರದಿಂದಲೇ ಮನೆಗಳತ್ತ ತೆರಳಿದರು.

  • ಮದ್ಯದಂಗಡಿ ತೆರೆದಿದ್ದಕ್ಕೆ ವಿಡಿಯೋ ಕಾಲ್ ಮಾಡಿ ಸಂತಸ ಹಂಚಿಕೊಂಡ ಯುವಕ

    ಮದ್ಯದಂಗಡಿ ತೆರೆದಿದ್ದಕ್ಕೆ ವಿಡಿಯೋ ಕಾಲ್ ಮಾಡಿ ಸಂತಸ ಹಂಚಿಕೊಂಡ ಯುವಕ

    ಕೋಲಾರ: ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಮದ್ಯದಂಗಡಿಗಳು ಪುನರಾರಂಭಗೊಂಡಿದ್ದು, ಮದ್ಯಪ್ರಿಯರು ಬೆಳಗಿನಿಂದ ಕಾದು ಮದ್ಯ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಬೆಳಗಿನಿಂದ ಸಾಲುಗಟ್ಟಿ ನಿಂತಿದ್ದ ಮದ್ಯ ವ್ಯಸನಿಗಳು ಅಂಗಡಿ ತೆರೆಯುವುದನ್ನು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದರು. ಜಿಲ್ಲೆಯಲ್ಲಿ 74 ಮದ್ಯದಂಗಡಿಗಳಿದ್ದು, ಬಹುತೇಕ ಎಲ್ಲ ಮದ್ಯದಂಗಡಿಗಳ ಮುಂದೆ ಬೆಳಗ್ಗೆ ಆರು ಗಂಟೆಯಿಂದಲೇ ಎಣ್ಣೆ ಪ್ರಿಯರು ಸಾಲುಗಟ್ಟಿ ನಿಂತಿದ್ದರು. ಕೆಲವರು ಮದ್ಯದಂಗಡಿ ಮುಂದೆ ಗಂಧದಕಡ್ಡಿ ಹಚ್ಚಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು.

    ಇನ್ನೂ ವಿಶೇಷ ಎಂಬಂತೆ ಕೆಲವರು ವಿಡಿಯೋ ಕಾಲ್ ಮಾಡಿ ಮದ್ಯದಂಗಡಿ ತೆರೆದಿರುವ ಬಗ್ಗೆ ಸ್ನೇಹಿತರಿಗೆ ತೋರಿಸಿ ಸಂತಸ ಹಂಚಿಕೊಂಡರು. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಮದ್ಯದಂಗಡಿಗಳು ತೆರೆಯಬೇಕು, ಒಬ್ಬರಿಗೆ 750 ಎಂ.ಎಲ್. ಗಿಂತ ಹೆಚ್ಚು ಮದ್ಯ ಮಾರಾಟಮಾಡಬಾರದು, ಮಾಸ್ಕ್ ಧರಿಸದಿದ್ದವರಿಗೆ ಮದ್ಯ ಇಲ್ಲ ಎಂಬ ನಿಯಮ ಪಾಲಿಸಲಾಗುತ್ತಿದೆ. ಅಲ್ಲದೆ ಸಿಸಿ ಟಿವಿ ಅಳವಡಿಕೆ ಕಡ್ಡಾಯ, ಸಾಮಾಜಿಕ ಅಂತರ ಪಾಲಿಸಬೇಕು ಎಂಬ ಷರತ್ತುಗಳನ್ನು ಜಿಲ್ಲಾಡಳಿತ ವಿಧಿಸಿದೆ.

  • ಮದ್ಯದಂಗಡಿ ಮುಂದೆ ಪುರುಷರು, ರೇಷನ್ ಅಂಗಡಿ ಎದುರು ಮಹಿಳೆಯರು ಫುಲ್ ಕ್ಯೂ

    ಮದ್ಯದಂಗಡಿ ಮುಂದೆ ಪುರುಷರು, ರೇಷನ್ ಅಂಗಡಿ ಎದುರು ಮಹಿಳೆಯರು ಫುಲ್ ಕ್ಯೂ

    – ಮದ್ಯದಂಗಡಿ ಪಕ್ಕದಲ್ಲೇ ರೇಷನ್ ಅಂಗಡಿ
    – ರಾಯಚೂರಲ್ಲಿ ಸಿಕ್ಕಸಿಕ್ಕಲ್ಲೇ ಮದ್ಯಪಾನ

    ಧಾರವಾಡ/ರಾಯಚೂರು: ಇಂದು ಎಣ್ಣೆ ಅಂಗಡಿ ಮುಂದೆ ಎಲ್ಲಿ ನೋಡಿದರೂ ಉದ್ದದ್ದೂ ಕ್ಯೂ ಕಂಡುಬರುತ್ತಿದೆ. ಆದ್ರೆ ಧಾರವಾಡದಲ್ಲಿ ಒಂದೆಡೆ ಮದ್ಯದಂಗಡಿ ಇನ್ನೊಂದೆಡೆ ರೇಷನ್ ಅಂಗಡಿಗೆ ಕ್ಯೂ ಹಚ್ಚಿದ ಅಪರೂಪದ ದೃಶ್ಯಗಳು ಕಂಡುಬಂದಿವೆ.

    ಧಾರವಾಡದ ತೇಜಸ್ವಿ ನಗರದಲ್ಲಿರುವ ಖಾಸಗಿ ವೈನ್ ಶಾಪ್ ಪಕ್ಕವೇ ರೇಷನ್ ಅಂಗಡಿ ಸಹ ಇರುವುದರಿಂದ ಎಣ್ಣೆ ಅಂಗಡಿ ಮುಂದೆ ಪುರುಷರು ಕ್ಯೂ ನಿಂತಿದ್ದರೆ, ರೇಷನ್ ಅಂಗಡಿ ಮುಂದೆ ಮಹಿಳೆಯರು ಕ್ಯೂ ಹಚ್ಚಿದ್ದಾರೆ. ಎರಡು ಅಂಗಡಿಗಳು ಅಕ್ಕಪಕ್ಕದಲ್ಲಿರುವುದರಿಂದ ಈ ಅಪರೂಪ ದೃಶ್ಯ ಕಂಡು ಬಂದಿದೆ. ಒಂದು ಕಡೆ ಮಹಿಳೆಯರು ರೇಷನ್‍ಗೆ ಕ್ಯೂ ನಿಂತರೆ, ಮತ್ತೊಂದು ಕಡೆ ಮದ್ಯ ಖರೀದಿಗೆ ಪುರುಷರು ಕ್ಯೂ ನಿಂತಿದ್ದಾರೆ.

    ಇತ್ತ ರಾಯಚೂರಿನಲ್ಲಿ ಲಾಕ್‍ಡೌನ್ ಹಿನ್ನೆಲೆ ಕಂಗೆಟ್ಟಿದ್ದ ಮದ್ಯ ವ್ಯಸನಿಗಳು ಮದ್ಯದಂಗಡಿಗಳು ಆರಂಭಿಸುತ್ತಿದ್ದಂತೆ ಸಿಕ್ಕ ಸಿಕ್ಕಲ್ಲೇ ಮದ್ಯಪಾನ ಮಾಡುತ್ತಿದ್ದಾರೆ. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮದ್ಯವ್ಯಸನಿಗಳು ಎಣ್ಣೆ ಪಾರ್ಟಿ ನಡೆಸಿದ್ದಾರೆ. ಕಟ್ಟಡದ ಹಿಂಭಾಗ, ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿ ಕೆಳಗೆ ಮದ್ಯ ಸೇವನೆ ಮಾಡುತ್ತಿದ್ದಾರೆ.

    ಕ್ರೀಡಾಂಗಣದಲ್ಲಿ ನೆರಳಿರುವ ಜಾಗದಲ್ಲಿ ಅಲ್ಲಲ್ಲೇ ಕುಳಿತು ಮದ್ಯ ಸೇವನೆ ಮಾಡುತ್ತಿದ್ದಾರೆ. ಮದ್ಯ ಕೇವಲ ಪಾರ್ಸಲ್ ಸಿಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯಲು ಸ್ಥಳವಿಲ್ಲದೆ ಸಿಕ್ಕಸಿಕ್ಕಲ್ಲೇ ಸೇವನೆ ಮಾಡಲು ಮುಂದಾಗಿದ್ದಾರೆ. ಸಿಎಲ್ 2 ಹಾಗೂ ಎಂಎಸ್‍ಐಎಲ್ ಮದ್ಯದಂಗಡಿಗಳಿಗೆ ಮಾತ್ರ ಅನುಮತಿಯನ್ನು ನೀಡಿರುವುದಿರಿಂದ ಮದ್ಯಸೇವನೆಗೆ ಸ್ಥಳದ ತೊಂದರೆಯಾಗಿದೆ. ಹೀಗಾಗಿ ನಿರ್ಜನ ಪ್ರದೇಶಗಳಲ್ಲಿ ಮದ್ಯಪಾನ ಜೋರಾಗಿ ನಡೆದಿದೆ.

    ಗ್ರೀನ್ ಝೋನಿನಲ್ಲಿ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ರಾಯಚೂರು ನಗರದಲ್ಲಿ ಎಲ್ಲಿ ನೋಡಿದರೂ ಜನರ ಓಡಾಟ ಜೋರಾಗಿದೆ. ಸಂಪೂರ್ಣ ಲಾಕ್‍ಡೌನ್ ತೆಗೆದಿರುವಂತೆ ವರ್ತಿಸುತ್ತಿರುವ ಜನ ಗುಂಪುಗುಂಪಾಗಿ ಓಡಾಡುತ್ತಿದ್ದಾರೆ. ಬೇರೆ ಬೇರೆ ಊರುಗಳಿಗೆ ತೆರಳಲು ಜನ ಪಾಸ್‍ಗಾಗಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮುಗಿಬಿದ್ದಿದ್ದು, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು.

  • ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ – ಪೊಲೀಸರಿಂದ ಮದ್ಯದಂಗಡಿ ಕ್ಲೋಸ್

    ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ – ಪೊಲೀಸರಿಂದ ಮದ್ಯದಂಗಡಿ ಕ್ಲೋಸ್

    ಮೈಸೂರು: ಜಿಲ್ಲೆಯಲ್ಲಿ ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ ಆಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ.

    ಮೈಸೂರಿನ ದೇವರಾಜ ಠಾಣಾ ವ್ಯಾಪ್ತಿಯಲ್ಲಿರುವ ಟ್ರೂ ಸ್ಪಿರೀಟ್ಸ್ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಾಲ್ಕೈದು ಬಾರಿ ಮಾಲೀಕನಿಗೆ ವಾರ್ನ್ ಮಾಡಿದ್ದರು. ಇನ್ಸ್‌ಪೆಕ್ಟರ್ ಮಾತಿಗೂ ಲೆಕ್ಕಿಸದೆ ಮಾಲೀಕ ಮದ್ಯ ಮಾರಾಟ ಮಾಡುತ್ತಿದ್ದನು. ಹೀಗಾಗಿ ಪೊಲೀಸರು ಮದ್ಯದಂಗಡಿಯನ್ನು ಮುಚ್ಚಿಸಿದ್ದಾರೆ.

    ಮದ್ಯದಂಗಡಿಯಲ್ಲಿ ಸಿಬ್ಬಂದಿಯಿಲ್ಲದೆ ಕೇವಲ ಇಬ್ಬರಿಂದ ಮಾತ್ರ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಮುಗಿಬಿದ್ದಿದ್ದರು. ಆಗ ಪೊಲೀಸರು ಸಿಬ್ಬಂದಿಯನ್ನ ಕರೆಸಿಕೊಳ್ಳುವಂತೆ ಮಾಲೀಕನಿಗೆ ಹೇಳಿದ್ದರು. ಮಾಲೀಕ ಟೀಗೆ ಹೋಗಿದ್ದಾರೆ ಬರುತ್ತಾರೆ ಎಂದು ಸುಳ್ಳು ನೆಪ ಹೇಳಿದ್ದನು. ಈ ವೇಳೆ ಪೊಲೀಸರು ಖಡಕ್ ವಾರ್ನ್ ಮಾಡಿ ಮದ್ಯದಂಗಡಿಯನ್ನು ಮುಚ್ಚಿಸಿದ್ದಾರೆ.

    ಇವತ್ತಿಗೆ ವ್ಯಾಪಾರ ಸಾಕು, ಲೆಕ್ಕ ಹಾಕಿಕೊಂಡು ಮನೆಗೆ ಹೋಗಿ ಎಂದು ವಾರ್ನ್ ಮಾಡಿ ಕಳುಹಿಸಿದ್ದಾರೆ. ಅಲ್ಲದೇ ಮಳಿಗೆ ಮಾಲೀಕನಿಗೆ ಠಾಣೆಗೆ ಬಂದು ಅನುಮತಿ ಪಡೆಯುವಂತೆ ಎಚ್ಚರಿಸಿ ಹೋಗಿದ್ದಾರೆ. ಪದೇ ಪದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.

  • ಬೊಕ್ಕಸ ತುಂಬಿಸಿಕೊಳ್ಳಲು ಸರ್ಕಾರ ಮದ್ಯದಂಗಡಿ ತೆರೆದದ್ದು ತಪ್ಪು: ಚೌಕಿಮಠ ಸ್ವಾಮೀಜಿ ಕಿಡಿ

    ಬೊಕ್ಕಸ ತುಂಬಿಸಿಕೊಳ್ಳಲು ಸರ್ಕಾರ ಮದ್ಯದಂಗಡಿ ತೆರೆದದ್ದು ತಪ್ಪು: ಚೌಕಿಮಠ ಸ್ವಾಮೀಜಿ ಕಿಡಿ

    ರಾಯಚೂರು: ತನ್ನ ಬೊಕ್ಕಸ ತುಂಬಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರ ಮದ್ಯದಂಗಡಿ ತೆರೆದಿರುವುದು ಸರಿಯಲ್ಲ ಎಂದು ರಾಯಚೂರಿನ ಚಿಕ್ಕಸೂಗುರಿನ ಚೌಕಿಮಠದ ಸಿದ್ದಲಿಂಗ ಮಹಾಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ಮದ್ಯಪಾನ ನಿಷೇಧಕ್ಕೆ ಕೆಲ ಸಂಘ ಸಂಸ್ಥೆಗಳು ನಿರಂತರ ಹೋರಾಟ ನಡೆಸಿದ್ದರೂ ಸಾಧ್ಯವಾಗದ್ದನ್ನ ಕೊರೊನಾ ವೈರಸ್ ಮಾಡಿತ್ತು. ಲಾಕ್‍ಡೌನ್ ವೇಳೆ ಶೇ. 90ರಷ್ಟು ಜನ ಸಂಪೂರ್ಣವಾಗಿ ಮದ್ಯಪಾನ ತ್ಯಜಿಸಿದ್ದರು. ಇನ್ನಷ್ಟು ದಿನ ಮುಂದುವರೆದಿದ್ದರೆ ಉಳಿದ ಜನರು ಮದ್ಯಪಾನ ಬಿಡುತ್ತಿದ್ದರು. ಆದ್ರೆ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳುವ ಆಸೆಗೆ ಮದ್ಯದಂಗಡಿಗಳನ್ನ ತೆರೆದಿದೆ ಎಂದು ಕಿಡಿಕಾರಿದರು.

    ಕೂಲಿಕಾರರನ್ನ ಅವರ ಊರುಗಳಿಗೆ ಕರೆದುಕೊಂಡು ಬರಲಾಗುತ್ತಿದೆ. ಆದರೆ ಯಾರೂ ನಿಯಮಗಳನ್ನ ಪಾಲಿಸುತ್ತಿಲ್ಲ. ಸ್ವತಃ ಮಂತ್ರಿಗಳೇ ಕ್ವಾರಂಟೈನ್‍ಗೆ ಹೋಗುತ್ತಿರುವಾಗ ಸರ್ಕಾರ ಉತ್ತಮ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದರು.

    ಮಠ ಹಾಗೂ ಮಠಾಧೀಶರನ್ನ ಸರ್ಕಾರ ನಿರ್ಲಕ್ಷಿಸದೇ ನಮ್ಮ ಸಲಹೆಗಳನ್ನ ಪರಿಗಣಿಸಬೇಕು. ಉತ್ತರ ಕರ್ನಾಟಕದ ಮಠಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು. ಶ್ರೀಮಂತ ಮಠಗಳಿಗೆ ಸರ್ಕಾರಗಳು 10 ಕೋಟಿ, 20 ಕೋಟಿ ರೂ. ಅನುದಾನ ನೀಡಿದೆ. ಅಂತೆಯೆ ನಮ್ಮ ಮಠಗಳಿಗೂ ಅನುದಾನ ನೀಡಬೇಕು ಎಂದು ಸ್ವಾಮಿಜಿ ಮನವಿ ಮಾಡಿದರು.

  • ಚಿಕ್ಕಬಳ್ಳಾಪುರ, ಗೌರಿಬಿದನೂರುನಲ್ಲಿ ಸದ್ಯಕ್ಕಿಲ್ಲ ಎಣ್ಣೆ ಭಾಗ್ಯ – ಮದ್ಯಪ್ರಿಯರಿಗೆ ನಿರಾಸೆ

    ಚಿಕ್ಕಬಳ್ಳಾಪುರ, ಗೌರಿಬಿದನೂರುನಲ್ಲಿ ಸದ್ಯಕ್ಕಿಲ್ಲ ಎಣ್ಣೆ ಭಾಗ್ಯ – ಮದ್ಯಪ್ರಿಯರಿಗೆ ನಿರಾಸೆ

    ಚಿಕ್ಕಬಳ್ಳಾಪುರ: ಇಂದು ಬೆಳಗ್ಗೆ 9 ಗಂಟೆಗೆ ಮದ್ಯದಂಗಡಿ ಬಾಗಿಲು ತೆರೆಯುತ್ತೆ ಅಂತ ಕಾಯುತ್ತಿದ್ದ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರದ ಮದ್ಯಪಾನ ಪ್ರಿಯರಿಗೆ ನಿರಾಸೆಯಾಗಿದೆ.

    ಚಿಕ್ಕಬಳ್ಳಾಪುರ ನಗರದ 10 ಹಾಗೂ ಗೌರಿಬಿದನೂರು ನಗರದ 6 ಮದ್ಯದಂಗಡಿಗಳನ್ನ ಸದ್ಯಕ್ಕೆ ತೆರೆಯದಂತೆ ಅಬಕಾರಿ ಇಲಾಖೆ ಮೌಖಿಕ ಆದೇಶ ನೀಡಿದೆ. ಅಂದಹಾಗೆ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರದಲ್ಲಿ ಕೊರೊನಾ ವೈರಸ್ ಕಂಟೈನ್‍ಮೆಂಟ್ ಝೋನ್‍ಗಳಿದ್ದು, ಈ ಎರಡು ನಗರಗಳು ಸಹ ಬಫರ್ ಝೋನ್ ವ್ಯಾಪ್ತಿಯಲ್ಲಿವೆ. ಹೀಗಾಗಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರದಲ್ಲಿ ಮದ್ಯದಂಗಡಿಗಳನ್ನ ತೆರೆಯುವುದಾ ಅಥವಾ ಬೇಡವಾ ಎಂಬುದನ್ನ ನಿರ್ಧರಿಸುವುದಾಗಿ ಅಬಕಾರಿ ಡಿ ಸಿ ನರೇಂದ್ರ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಇತ್ತ ಇಂದಿನಿಂದ ಮದ್ಯದಂಗಡಿ ಆರಂಭ ಮಾಡಬಹುದು ಅಂತ ತಡೆಗೋಡೆಗಳನ್ನ ಕಟ್ಟಿ, ಬಾಕ್ಸ್ ಹಾಕಿ ಸಕಲ ಸಿದ್ಧತೆಗಳನ್ನ ಮದ್ಯದಂಗಡಿ ಮಾಲೀಕರು ಮಾಡಿಕೊಂಡಿದ್ದರು. ಆದ್ರೆ ಸದ್ಯ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದ ಹಿನ್ನೆಲೆ ಮದ್ಯ ಸಿಗುತ್ತೆ ಅಂತ ಬಂದಿದ್ದ ಮದ್ಯಪ್ರಿಯರು ಗ್ರಾಮೀಣ ಭಾಗಗಳ ಮದ್ಯದಂಗಡಿಗಳತ್ತ ಮುಖ ಮಾಡಿದ್ದಾರೆ.