Tag: Liquor Store

  • ಮಾನ್ವಿಯಲ್ಲಿ ಮದ್ಯದಂಗಡಿಗಳಿಗೆ ಸೀಲ್ ಇಲ್ಲ: 4 ಪಟ್ಟು ದುಬಾರಿ ಬೆಲೆಗೆ ಮಾರಾಟ

    ಮಾನ್ವಿಯಲ್ಲಿ ಮದ್ಯದಂಗಡಿಗಳಿಗೆ ಸೀಲ್ ಇಲ್ಲ: 4 ಪಟ್ಟು ದುಬಾರಿ ಬೆಲೆಗೆ ಮಾರಾಟ

    – ಮಾಜಿ ಸಂಸದರ ಸಂಬಂಧಿಯ ಕಾರಿನಲ್ಲಿ ಮದ್ಯ ಸಾಗಾಟ

    ರಾಯಚೂರು: ಮಾನ್ವಿಯಿಂದ ರಾಯಚೂರು ನಗರಕ್ಕೆ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಕಾರೊಂದನ್ನು ರಾಯಚೂರು ಅಬಕಾರಿ ಪೊಲೀಸರು ಜಪ್ತಿಮಾಡಿ ಆರೋಪಿಗಳನ್ನ ಬಂಧಿಸಿದ್ದಾರೆ.

    ಮಾಜಿ ಸಂಸದ ಬಿ.ವಿ.ನಾಯಕ್ ಸಂಬಂಧಿ ಶ್ರೀನಿವಾಸ್ ನಾಯಕ್‍ಗೆ ಸೇರಿದ ಫೋರ್ಡ್ ಎಂಡಿವಿಯರ್ ಕಾರ್ (ಸಂಖ್ಯೆ ಕೆ.ಎ36 ಎಂಸಿ 0005) ನಲ್ಲಿ 750 ಎಂ.ಎಲ್‍ನ 10 ಬಾಟಲ್ ವಿಸ್ಕಿ, 650 ಎಂ.ಎಲ್‍ನ 24 ಬಾಟಲ್ ಬಿಯರ್ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ತಾಲೂಕಿನ ಕಲ್ಲೂರು ಬಳಿ ಪರಿಶೀಲನೆ ಮಾಡಿದ ಅಬಕಾರಿ ಪೊಲೀಸರು ಮದ್ಯದ ಬಾಟಲಿಗಳನ್ನ ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಕೇಶ್ ಹಾಗೂ ಅಜಯ್‍ಕುಮಾರ್ ಬಂಧಿತ ಆರೋಪಿಗಳು.

    ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದೆಯಾದರೂ ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಮಾತ್ರ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ಯಾಕೆಂದರೆ ಇಲ್ಲಿನ ಮದ್ಯದ ಅಂಗಡಿಗಳಿಗೆ ಅಬಕಾರಿ ಅಧಿಕಾರಿಗಳು ಇದುವರೆಗೂ ಸೀಲ್ ಹಾಕಿಲ್ಲ. ಮಾನ್ವಿಯ ಬಸ್ ನಿಲ್ದಾಣ ಹಾಗೂ ಸಿಂಧನೂರು ರಸ್ತೆಯಲ್ಲಿರುವ ಬಾರ್ ಗಳಿಗೆ ಕೇವಲ ಬೀಗ ಮಾತ್ರ ಹಾಕಲಾಗಿದೆ.

    ಕೇವಲ ಬೀಗ ಹಾಕಿರುವುದರಿಂದ ರಾತ್ರಿ ವೇಳೆ ಮದ್ಯದಂಗಡಿಯಿಂದ ಮದ್ಯ ರಾಜಾರೋಷವಾಗಿ ಹೊರಹೋಗುತ್ತಿದೆ. ಇದರಿಂದ ಬೇಸತ್ತಿರುವ ಸ್ಥಳೀಯರು ಕೂಡಲೇ ಬಾರ್ ಗಳನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ. ತಾಲೂಕು ಅಬಕಾರಿ ಇನ್ಸ್ ಪೆಕ್ಟರ್ ಸಹಕಾರದಿಂದಲೇ ಅಗ್ಗದ ಮದ್ಯವನ್ನು ನಾಲ್ಕು ಪಟ್ಟು ದುಬಾರಿಗೆ ಮಾರಾಟ ಮಾಡಲಾಗುತ್ತಿದೆ ಅಂತ ಆರೋಪಿಸಿದ್ದಾರೆ. ಮಾನ್ವಿಯ ಮಲ್ಲಯ್ಯ ಹಾಗೂ ಸೋಮು ಎಂಬುವವರಿಗೆ ಸೇರಿದ 11 ಮದ್ಯದ ಅಂಗಡಿಗಳಿಗೆ ಮಾತ್ರ ಸೀಲ್ ಹಾಕಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಈ ಮಧ್ಯೆ ಕಳಭಟ್ಟಿ ಹಾಗೂ ಸಿಎಚ್ ಪೌಡರ್ ಸೇಂದಿ ಮಾರಾಟ ಕೂಡ ಜೋರಾಗಿದ್ದು ಅಬಕಾರಿ ಇಲಾಖೆ ಅಧಿಕಾರಿಗಳು ಲಿಂಗಸುಗೂರು ತಾಲೂಕಿನ ಬಗಾಡಿ ತಾಂಡದಲ್ಲಿ 250 ಕೊಡಗಳಲ್ಲಿದ್ದ 1500 ಲೀಟರ್ ಕಳ್ಳಭಟ್ಟಿ ಜಪ್ತಿ ಮಾಡಿದ್ದಾರೆ. ಮಾನ್ವಿ ತಾಲೂಕಿನ ಕುರಡಿ ಗ್ರಾಮದ ಬಳಿ 10 ಲೀಟರ್ ಕಳ್ಳಭಟ್ಟಿ ಹಾಗೂ ಒಂದು ಬೈಕ್ ಜಪ್ತಿಮಾಡಲಾಗದ್ದು ಆರೋಪಿಗಳು ಪರಾರಿಯಾಗಿದ್ದಾರೆ.

  • ಲಾಕ್‍ಡೌನ್ ವಿಸ್ತರಣೆಯ ಎಫೆಕ್ಟ್ – ಮದ್ಯದಂಗಡಿ ಕಳ್ಳತನ

    ಲಾಕ್‍ಡೌನ್ ವಿಸ್ತರಣೆಯ ಎಫೆಕ್ಟ್ – ಮದ್ಯದಂಗಡಿ ಕಳ್ಳತನ

    – ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

    ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟಕ್ಕೆ ನಿಷೇಧವಿದೆ. ಹೀಗಾಗಿ ಎಲ್ಲಾ ಬಾರ್‍ಗಳು ಬಂದ್ ಆಗಿವೆ. ಆದರೆ ರಾಯಚೂರಿನಲ್ಲಿ ಮದ್ಯ ಸಿಗದ ಹಿನ್ನೆಲೆಯಲ್ಲಿ ಕೆಲವರು ಬಾರ್‍ಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮದ್ಯ ಕದ್ದಿದ್ದು, ಅಂಗಡಿಯಲ್ಲಿನ ಉಳಿದ ವಸ್ತುಗಳು ಹಾಗೇ ಬಿಟ್ಟಿದ್ದಾರೆ. ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ನಗರದ ಅಸ್ಕಿಹಾಳ ಬಳಿಯ ಶ್ರೀರೇಣುಕಾ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಳ್ಳತನವಾಗಿದೆ. ಕಳೆದ 20 ದಿನಗಳಿಂದ ಮದ್ಯ ಸಿಗದೇ ಕಂಗೆಟ್ಟ ಮದ್ಯ ಪ್ರಿಯರಿಂದ ಮದ್ಯದಂಗಡಿ ಕಳ್ಳತನವಾಗಿರುವ ಶಂಕೆಯಿದೆ. ವೆಂಕಟೇಶ್‍ಗೌಡ ಅವರಿಗೆ ಸೇರಿದ ರೇಣುಕಾ ಬಾರ್ ಅಂಡ್ ರೆಸ್ಟೋರೆಂಟ್‍ನ ಹಿಂದಿನ ಬಾಗಿಲು ಮುರಿದು ಮದ್ಯದ ಬಾಕ್ಸ್ ಗಳನ್ನು ಕಳ್ಳತನ ಮಾಡಲಾಗಿದೆ.

    ಹಿಂದಿನ ಬಾಗಿಲನ್ನು ಮುರಿದು ಒಳಬಂದ ಇಬ್ಬರು ಕಳ್ಳರು, ಮದ್ಯದ ಕೌಂಟರ್‍ಗೆ ತೆರಳು ಚಾವಣಿಯ ಸಿಮೆಂಟ್ ಸೀಟ್ ಗಳನ್ನ ಹೊಡೆದು ಲಕ್ಷಾಂತರ ರೂ. ಬೆಲೆ ಬಾಳುವ ಮದ್ಯ ಕಳ್ಳತನ ಮಾಡಿದ್ದಾರೆ. ಕಳ್ಳತನ ದೃಶ್ಯ ಸೆರೆಯಾಗಬಾರದು ಎಂದು ಮದ್ಯದಂಗಡಿಯ ಸಿಸಿ ಕ್ಯಾಮೆರಾಗಳ ಒಂದು ಮಾನಿಟರ್ ಅನ್ನು ಜಖಂಗೊಳಿಸಿ ಕೃತ್ಯ ಎಸಗಿದ್ದಾರೆ. ಪಶ್ಚಿಮ ಠಾಣೆ ಹಾಗೂ ಅಬಕಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಘಟನೆ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಮದ್ಯಪ್ರಿಯರಿಗೆ ಗುಡ್‍ನ್ಯೂಸ್ – ಇಂದಿನಿಂದ ಬಾರ್‌ಗಳು ಓಪನ್

    ಮದ್ಯಪ್ರಿಯರಿಗೆ ಗುಡ್‍ನ್ಯೂಸ್ – ಇಂದಿನಿಂದ ಬಾರ್‌ಗಳು ಓಪನ್

    – ಐದು ದಿನಗಳ ಕಾಲ ಎಣ್ಣೆ ಮಾರಾಟಕ್ಕೆ ಅವಕಾಶ

    ದಿಸ್ಪುರ್: ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ನಡುವೆ ಮದ್ಯ ಪ್ರಿಯರು ಅಂಗಡಿ ಓವನ್ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದರು. ಇದೀಗ ಲಾಕ್‍ಡೌನ್ ನಡುವೆಯೇ ಅಸ್ಸಾಂ ಮತ್ತು ಮೇಘಾಲಯದ ಮದ್ಯದಂಗಡಿಗಳು ಇಂದಿನಿಂದ ಮತ್ತೆ ತೆರೆಯಲು ನಿರ್ಧರಿಸಿವೆ ಎಂದು ಉಭಯ ರಾಜ್ಯಗಳ ಅಬಕಾರಿ ಇಲಾಖೆಗಳು ತಿಳಿಸಿವೆ.

    ಅಸ್ಸಾಂನಲ್ಲಿ, ಮದ್ಯದಂಗಡಿಗಳು, ಸಗಟು ಗೋದಾಮುಗಳು ಮತ್ತು ಸಾರಾಯಿ ಮಳಿಗೆಗಳು ಸೇರಿದಂತೆ ಲಿಕ್ಕರ್ ಶಾಪ್ ಇಂದಿನಿಂದ ಪ್ರತಿದಿನ 7 ಗಂಟೆಗಳ ಕಾಲ ತೆರೆಯಲ್ಪಡುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೇ ಇಂದಿನಿಂದ ಏಪ್ರಿಲ್ 17 ವರೆಗೆ ಅಂದರೆ ಶುಕ್ರವಾರದವರೆಗೆ ಮದ್ಯದಂಗಡಿ ತೆರೆದಿರುತ್ತವೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಶಾಪ್ ಓಪನ್ ಆಗಿರುತ್ತವೆ. ಇದನ್ನೂ ಓದಿ: ಏಪ್ರಿಲ್ 14ರ ಬಳಿಕ ಸಿಗುತ್ತಾ ಮದ್ಯ? – 2 ದಿನದಲ್ಲಿ ಸ್ಪಷ್ಟ ನಿರ್ಧಾರ

    ಮೇಘಾಲಯದಲ್ಲಿ ಮದ್ಯದಂಗಡಿಗಳು ಮತ್ತು ಗೋದಾಮುಗಳು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ತೆರೆದಿರುತ್ತವೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮತ್ತು ಕೈ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಘಾಲಯದಲ್ಲೂ ಏಪ್ರಿಲ್ 17ವರೆಗೆ ಮಾತ್ರ ಮದ್ಯದಂಗಡಿ ತೆರೆದಿರುತ್ತವೆ.

    ಅನುಮತಿ ನೀಡಲಾಗಿರುವ ದಿನಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮದ್ಯದಂಗಡಿಗಳು ತೆರೆದಿರುತ್ತವೆ. ಅಂಗಡಿಯಲ್ಲಿ ಕನಿಷ್ಟ ಸಿಬ್ಬಂದಿ ಕೆಲಸ ಮಾಡಬಹುದು. ಅಲ್ಲದೇ ಬಾಟಲ್ ಕೊಡುವಾಗ ಮತ್ತು ಹಣ ಪಡೆಯುವಾಗ ಗ್ರಾಹಕರು ಮತ್ತು ಸಿಬ್ಬಂದಿ ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು. ಅಲ್ಲದೇ ಶಾಪ್‍ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಹೊರಗೆ ಹೋಗದಂತೆ ನೋಡಿಕೊಳ್ಳಬೇಕು. ಅವರಿಗೆ ತಿಂಡಿ, ಊಟದ ವ್ಯವಸ್ಥೆಯನ್ನು ಮಾಲೀಕರೇ ಮಾಡಬೇಕು ಎಂದು ಅಸ್ಸಾಂ ಅಬಕಾರಿ ಇಲಾಖೆ ತಿಳಿಸಿದೆ.

    ಮೇಘಾಲಯ ಅಬಕಾರಿ ಆಯುಕ್ತ ಪ್ರವೀಣ್ ಬಕ್ಷಿ ಅವರು, ಮದ್ಯದಂಗಡಿಗಳನ್ನು ಮತ್ತೆ ತೆರೆಯಲು ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ತಿಳಿಸಿದ್ದಾರೆ. ಜೊತೆಗೆ ಪ್ರತಿ ಮನೆಗೆ ಒಬ್ಬ ವ್ಯಕ್ತಿ ಮಾತ್ರ ಅಂಗಡಿಗೆ ಬಂದು ಮದ್ಯ ಖರೀದಿ ಮಾಡಬೇಕು. ಅಲ್ಲದೇ ಒಂದು ಪ್ರದೇಶ ಅಥವಾ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಹೋಗುವುದನ್ನು ನಿಷೇಧಿಸಲಾಗಿದೆ. ಗ್ರಾಹಕರು ಮತ್ತು ಶಾಪ್‍ನಲ್ಲಿ ಕೆಲಸ ಮಾಡುವವರಿಗೆ ಸ್ಯಾನಿಟೈಸರ್ ನೀಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

    ಕೋವಿಡ್ 19 ವೈರಸ್‍ನಿಂದ ಸರ್ಕಾರ ಮದ್ಯದಂಗಡಿಗಳನ್ನು ಮುಚ್ಚಿತ್ತು. ಆದರೆ ಜನರು ಮತ್ತೆ ಮದ್ಯದಂಗಡಿ ತೆರೆಯುವಂತೆ ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದರು. ಬಿಜೆಪಿ ಸೇರಿದಂತೆ ಮೇಘಾಲಯ ಮೈತ್ರಿ ಪಾಲುದಾರರು ಮದ್ಯದಂಗಡಿಗಳನ್ನು ಮುಚ್ಚುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯಕ್ಕೆ ಇದುವರೆಗೂ ಯಾವುದೇ ಕೊರೊನಾ ಪ್ರಕರಣ ಮೇಘಾಲಯದಲ್ಲಿ ವರದಿಯಾಗಿಲ್ಲ.

  • ಕೆಲಸ ಮಾಡ್ತಿದ್ದ ಅಂಗಡಿಯಲ್ಲಿ ಮದ್ಯ ಕದ್ದು ಸಿಕ್ಕಿಬಿದ್ದ

    ಕೆಲಸ ಮಾಡ್ತಿದ್ದ ಅಂಗಡಿಯಲ್ಲಿ ಮದ್ಯ ಕದ್ದು ಸಿಕ್ಕಿಬಿದ್ದ

    – ವಿವಿಧ ಬ್ರ್ಯಾಂಡ್‍ನ 25 ಬಾಕ್ಸ್ ಮದ್ಯ ವಶಕ್ಕೆ

    ಶಿವಮೊಗ್ಗ: ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ಮದ್ಯ ಕದ್ದು ಪರಾರಿಯಾಗುತ್ತಿದ್ದವನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದಲ್ಲಿನ ವಿನಯ್ ವೈನ್ಸ್‍ನ ಬೀಗ ಮುರಿದು ಅದೇ ಮದ್ಯದಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ದೇವರಾಜ್ ಈ ಕೃತ್ಯ ಎಸಗಿದ್ದಾನೆ. ಅಬಕಾರಿ ಇಲಾಖೆಯಿಂದ ಸೀಜ್ ಮಾಡಲಾಗಿದ್ದ ಮದ್ಯದಂಗಡಿಯ ಬೀಗ ಮುರಿದು ಮದ್ಯ ಸಾಗಿಸಲು ಯತ್ನಿಸಿದ್ದ ಎಂದು ಹೇಳಲಾಗಿದೆ.

    ವಿವಿಧ ಬ್ರ್ಯಾಂಡ್‍ನ 25 ಬಾಕ್ಸ್ ಮದ್ಯವನ್ನು ಈ ವೇಳೆ ವಶಪಡಿಸಿಕೊಳ್ಳಲಾಗಿದ್ದು, ಮದ್ಯ ಸಾಗಿಸುತ್ತಿದ್ದ ಆಲ್ಟೋ ಕಾರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ. ಅಂಗಡಿಯಲ್ಲಿ ಇನ್ನಿಬ್ಬರು ಇದ್ದು ಅವರಿಬ್ಬರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಅಬಕಾರಿ ಉಪ ಆಯುಕ್ತ ಕ್ಯಾ.ಅಜಿತ್ ನೇತೃತ್ವದಲ್ಲಿ ದಾಳಿ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮದ್ಯ, ಆಲ್ಟೋ ಕಾರು ಸೇರಿದಂತೆ ಸುಮಾರು 2 ಲಕ್ಷದ 25 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ತಪ್ಪು ತಿಳ್ಕೋಬೇಡಿ, ಮದ್ಯದಂಗಡಿ ತೆಗೆಯಿರಿ: ರಿಷಿ ಕಪೂರ್

    ತಪ್ಪು ತಿಳ್ಕೋಬೇಡಿ, ಮದ್ಯದಂಗಡಿ ತೆಗೆಯಿರಿ: ರಿಷಿ ಕಪೂರ್

    ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್, ಲೈಸನ್ಸ್ ಹೊಂದಿರುವ ಮದ್ಯದಂಗಡಿಗಳನ್ನು ತೆಗೆಯಬೇಕೆಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.

    ಕೊರೊನಾ ತಡೆಗೆ ಪ್ರಧಾನಿಗಳು ದೇಶವನ್ನು ಲಾಕ್‍ಡೌನ್ ಮಾಡಿದಾಗಿನಿಂದಲೂ ರಿಷಿ ಕಪೂರ್ ಈ ವಿಷಯವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂದು ಟ್ವೀಟ್ ಮಾಡಿರುವ ರಿಷಿ ಕಪೂರ್, ಒಂದು ಕಾರಣಕ್ಕಾಗಿ ಪರವಾನಿಗೆ ಪಡೆದ ಮದ್ಯದಂಗಡಿಗಳನ್ನು ತೆರೆದರೆ ಸೂಕ್ತ ಎಂದಿದ್ದಾರೆ.

    ರಿಷಿ ಕಪೂರ್ ಟ್ವೀಟ್: ಸರ್ಕಾರ ಪ್ರತಿಸಂಜೆ ಲೈಸನ್ಸ್ ಹೊಂದಿರುವ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬೇಕು. ನೀವು ನನ್ನನ್ನು ತಪ್ಪು ತಿಳಿದುಕೊಳ್ಳಬೇಡಿ. ಜನರು ಮನೆಯಲ್ಲಿ ಡಿಪ್ರೆಶನ್ ಮತ್ತು ಗೊಂದಲಗಳ ನಡುವೆ ಬಂಧಿಯಾಗಿದ್ದಾರೆ. ಪೊಲೀಸ್, ವೈದ್ಯರು ಮತ್ತು ಜನರನ್ನು ಡಿಪ್ರೆಶನ್ ನಿಂದ ಮುಕ್ತಿಗೊಳಿಸಲು ಮದ್ಯದ ಅವಶ್ಯಕತೆ ಇದೆ. ನೀವು ಎಷ್ಟೇ ಬಂದ್ ಮಾಡಿದ್ರೂ ಬ್ಲಾಕ್ ನಲ್ಲಿ ಮದ್ಯ ಮಾರಾಟವಾಗುತ್ತಿದೆ. ಹಾಗಾಗಿ ಸರ್ಕಾರವೇ ಪ್ರತಿದಿನ ಸಂಜೆ ಮದ್ಯದಂಗಗಡಿಗಳಿಗೆ ವ್ಯಾಪಾರ ನಡೆಸಲು ಅನುಮತಿ ನೀಡಬೇಕು.

    ಮದ್ಯದಂಗಡಿಗಳ ತೆರೆಯುವದಿಂದ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಚೇತರಿಕೆ ಕಾಣುವ ಸಾಧ್ಯತೆಗಳು ಹೆಚ್ಚಿವೆ. ಜನರು ಫ್ರೆಸ್ಟ್ರೆಶನ್ ನಿಂದ ಡಿಪ್ರೆಶನ್ ಗೆ ಒಳಗಾಗುವುದನ್ನು ತಡೆಯಬೇಕಿದೆ. ಬಂದ್ ನಡುವೆ ಜನ ಕಷ್ಟಪಟ್ಟು ಮದ್ಯ ಖರೀದಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ತನ್ನ ಮಳಿಗೆಗಳಲ್ಲಿ ಮದ್ಯದ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕೆಂದು ಹೇಳಿದ್ದಾರೆ.

  • ರೀಓಪನ್ ಆದಾಗ ಸ್ಟಾಕ್ ಹೋಲಿಕೆ ಆಗದಿದ್ರೆ ಮದ್ಯದಂಗಡಿ ಲೈಸೆನ್ಸ್ ರದ್ದು: ಮಾಧುಸ್ವಾಮಿ

    ರೀಓಪನ್ ಆದಾಗ ಸ್ಟಾಕ್ ಹೋಲಿಕೆ ಆಗದಿದ್ರೆ ಮದ್ಯದಂಗಡಿ ಲೈಸೆನ್ಸ್ ರದ್ದು: ಮಾಧುಸ್ವಾಮಿ

    ಹಾಸನ: ಹಾಸನ ಸುತ್ತಲಿನ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಇರುವುದರಿಂದ, ಹಾಸನದ ಸುತ್ತ ಎಲ್ಲ ಕಡೆ ಸಂಪರ್ಕ ಕಡಿತ ಮಾಡಲು ಕಟ್ಟುನಿಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಾಸನದಲ್ಲಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು, ಜನ ಎಷ್ಟು ಹೇಳಿದರೂ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ಶಾಪ್‍ಗಳನ್ನು ಓಪನ್ ನಂತರ ಕ್ಲೋಸ್ ಮಾಡಿಸಲಾಗುವುದು. ಮೆಡಿಕಲ್ ಸ್ಟೋರ್ ಮತ್ತು ಅಗತ್ಯ ವಸ್ತು ಬಿಟ್ಟು ಎಲ್ಲವನ್ನೂ ಕಡ್ಡಾಯವಾಗಿ ಕ್ಲೋಸ್ ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಸನ ಮಾರುಕಟ್ಟೆಯನ್ನು ಮೈದಾನಗಳಿಗೆ ಶಿಫ್ಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    ಜೊತೆಗೆ ಯಾವುದೇ ವೈದ್ಯರು ರಜೆ ತೆಗೆದುಕೊಳ್ಳಬಾರದು. ಯಾವ ವೈದ್ಯರೂ ರೋಗಿಗಳನ್ನು ರಿಜೆಕ್ಟ್ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮದ್ಯದಂಗಡಿಗಳ ಸ್ಟಾಕ್ ಮೇಲೆ ನಿಗಾ ಇಡಲಾಗಿದ್ದು, ರೀ ಓಪನ್ ಆದಾಗ ಸ್ಟಾಕ್ ಪ್ರಮಾಣ ಈಗ ಇರುವ ಸ್ಟಾಕ್‍ಗೆ ಹೋಲಿಕೆ ಆಗಬೇಕು. ಇಲ್ಲದಿದ್ದರೆ ಮದ್ಯದಂಗಡಿಗಳ ಲೈಸೆನ್ಸ್ ರದ್ದುಪಡಿಸುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

    ರಸ್ತೆ ಮೇಲೆ ಬರೀ ಟೂ ವ್ಹೀಲರ್ ಕಾಣುತ್ತಿವೆ. ಹೀಗಾಗಿ ಪೆಟ್ರೋಲ್ ಬಂಕ್ ಕಾರ್ಯನಿರ್ವಹಣೆಯಲ್ಲಿ ಬದಲಾವಣೆ ಮಾಡಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.

  • ಗೂಗಲ್ ಪೇ ಇಲ್ಲ ಎಂದಿದ್ದಕ್ಕೆ ಕ್ಯಾಶಿಯರ್‌ಗೆ ಚಾಕು ಇರಿದ ಕುಡುಕರು

    ಗೂಗಲ್ ಪೇ ಇಲ್ಲ ಎಂದಿದ್ದಕ್ಕೆ ಕ್ಯಾಶಿಯರ್‌ಗೆ ಚಾಕು ಇರಿದ ಕುಡುಕರು

    ಬೆಂಗಳೂರು: ಮದ್ಯ ಖರೀದಿ ಮಾಡಿದ ಕುಡುಕರು ಹಣವನ್ನು ಗೂಗಲ್ ಪೇ ಮೂಲಕ ಪಾವತಿ ಮಾಡಲು ಹೋಗಿದ್ದಾರೆ. ಆದರೆ ಔಟ್‍ಲೇಟ್‍ನಲ್ಲಿದ್ದ ಕ್ಯಾಶಿಯರ್ ನಮ್ಮ ಬಳಿ ಗೂಗಲ್ ಪೇ ಇಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹುಳಿಮಾವುವಿನಲ್ಲಿ ನಡೆದಿದೆ.

    ಭರತ್ ಮತ್ತು ಆತನ ಗ್ಯಾಂಗ್ ಭಾನುವಾರ ಬಿಳೇಕಳ್ಳಿಯ ಬಳಿ ಇರುವ ಎಸ್‍ಎಲ್‍ಆರ್ ಔಟ್‍ಲೇಟ್ ಅಲ್ಲಿ ಮದ್ಯವನ್ನು ಖರೀದಿ ಮಾಡಿದ್ದರು. ಖರೀದಿ ಮಾಡಿದ ಬಳಿಕ ಗೂಗಲ್ ಪೇನಲ್ಲಿ ಹಣ ಪಾವತಿ ಮಾಡಲು ಮುಂದಾಗಿದ್ದಾರೆ. ಆದರೆ ಕ್ಯಾಶಿಯರ್ ನಮ್ಮ ಬಳಿ ಗೂಗಲ್ ಪೇ ಇಲ್ಲ ನಗದು ಹಣವನ್ನು ಪಾವತಿ ಮಾಡಿ ಎಂದು ಸೂಚಿಸಿದ್ದಾನೆ. ಈ ವೇಳೆ ನಮ್ಮ ಬಳಿ ಗೂಗಲ್ ಪೇ ಮಾತ್ರ ಇದೆ. ಬೇಕಾದರೆ ಹಣವನ್ನು ಪಡೆ ಇಲ್ಲವೇ ಬಿಡು ಎಂದು ಭರತ್ ಹಾಗೂ ಆತನ ಗ್ಯಾಂಗ್ ಗಲಾಟೆ ಮಾಡಿದ್ದಾರೆ.

    ಹೀಗೆ ಗಲಾಟೆ ಮಾಡಿಕೊಂಡು ಭರತ್ ಹಾಗೂ ಆತನ ಗ್ಯಾಂಗ್ ಮದ್ಯದಂಗಡಿಯಿಂದ ಹೋಗಿದ್ದರು. ಆದರೆ ಬಳಿಕ ಕುಡಿದು ಬಂದ ಈ ಗ್ಯಾಂಗ್ ಏಕಾಏಕಿ ಕ್ಯಾಶಿಯರ್‍ನ ಬಳಿ ಹೋಗಿ ಆತನಿಗೆ ಚಾಕುವಿನಿಂದ ಇರಿದಿದ್ದಾರೆ. ಅಷ್ಟೇ ಅಲ್ಲದೇ ಔಟ್‍ಲೇಟ್‍ನಲ್ಲಿ ಇದ್ದ ಮದ್ಯದ ಬಾಟಲ್‍ಗಳನ್ನೆಲ್ಲಾ ಒಡೆದು ಹಾಕಿದ್ದಾರೆ.

    ಸದ್ಯ ಮದ್ಯದಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಈ ಹಲ್ಲೆಯ ದೃಶ್ಯ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಗ್ಯಾಂಗ್ ಲೀಡರ್ ಭರತ್‍ನನ್ನು ಬಂಧಿಸಿದ್ದಾರೆ. ಅಲ್ಲದೆ ಆತನ ಜೊತೆಗಿದ್ದ ಉಳಿದ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಹಣದಾಸೆಗೆ ಹಾಲಿಗಿಂತ ಆಲ್ಕೋಹಾಲ್ ಮಾರಾಟಕ್ಕೆ ಉತ್ತೇಜನ ನೀಡಿದ ಜಿಲ್ಲಾಡಳಿತ

    ಹಣದಾಸೆಗೆ ಹಾಲಿಗಿಂತ ಆಲ್ಕೋಹಾಲ್ ಮಾರಾಟಕ್ಕೆ ಉತ್ತೇಜನ ನೀಡಿದ ಜಿಲ್ಲಾಡಳಿತ

    ಕಲಬುರಗಿ: ಸೂಫಿ ನಾಡು ಕಲಬುರಗಿ ಜಿಲ್ಲೆಯಲ್ಲಿ ಹಾಲಿಗಿಂತ ಆಲ್ಕೋಹಾಲ್ ಮಾರಾಟಕ್ಕೆ ಅಲ್ಲಿನ ಜಿಲ್ಲಾಡಳಿತ ಒತ್ತು ನೀಡಿದೆ. ಯಾಕೆಂದರೆ ಕೆಎಂಎಫ್‍ನ ಒಂದು ಮಳಿಗೆ ನೀಡಿ ಅಂದರೆ 1 ವರ್ಷ ಸತಾಯಿಸಿದ ಅಲ್ಲಿನ ಜಿಲ್ಲಾಡಳಿತ, ಅದೇ ವರ್ಷದಲ್ಲಿ 25 ಕ್ಕೂ ಹೆಚ್ಚು ಮದ್ಯದಂಗಡಿಗಳಿಗೆ ಅನುಮತಿ ನೀಡಿದೆ.

    ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಹಲವು ಗ್ರಾಮಗಳಲ್ಲಿ ಮದ್ಯಮುಕ್ತ ಗ್ರಾಮ ಮಾಡಬೇಕು ಎಂದು ಹಳ್ಳಿಗಳು ಸಿದ್ಧವಾಗುತ್ತಿವೆ. ಆದರೆ ಲಿಕ್ಕರ್ ಮಾಫಿಯಾಕ್ಕೆ ಒಳಗಾದ ಇಲ್ಲಿನ ಅಬಕಾರಿ ಇಲಾಖೆ ಅಧಿಕಾರಿಗಳು, 2018-19ರಲ್ಲಿಯೇ ಜಿಲ್ಲೆಯಲ್ಲಿ ಒಟ್ಟು 25 ಬಾರ್ ಆ್ಯಂಡ್ ರೆಸ್ಟೋರೆಂಟ್ (ಸಿಎಲ್-7) ಹಾಗೂ ನಾಲ್ಕು ರಿಕ್ರಿಯೇಶನ್ ಕ್ಲಬ್ (ಸಿಎಲ್-4) ಅಂಗಡಿಗಳಿಗೆ ಅನುಮತಿ ನೀಡಿದೆ.

    ಹೀಗೆ ಅನುಮತಿ ಪಡೆದ ಬಹುತೇಕ ಮದ್ಯದಂಗಡಿಗಳು ಅಬಕಾರಿ ಇಲಾಖೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿವೆ. ಇದನ್ನು ಪರಿಶೀಲಿಸಬೇಕಾದ ಅಂದಿನ ಜಿಲ್ಲಾಧಿಕಾರಿ ಮತ್ತು ಇಲ್ಲಿನ ಅಬಕಾರಿ ಅಧಿಕಾರಿಗಳು ಹಣದಾಸೆಗೆ ಬೇಕಾಬಿಟ್ಟಿ ಲೈಸೆನ್ಸ್ ನೀಡಿದ್ದಾರೆ. ಈ ಕುರಿತು ನೂತನವಾಗಿ ಆಗಮಿಸಿದ ಜಿಲ್ಲಾಧಿಕಾರಿಯನ್ನು ಕೇಳಿದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

    ಒಂದೆಡೆ ಬೇಕಾಬಿಟ್ಟಿಯಾಗಿ ಮದ್ಯದಂಗಡಿಗಳಿಗೆ ಅನುಮತಿ ನೀಡುವ ಕಲಬುರಗಿಯ ಜಿಲ್ಲಾಡಳಿತ, ಅದೇ ಕೆಎಂಎಫ್ ಹಾಲು ಮಾರಾಟ ಮಾಡಲು ಉತ್ಸಾಹ ತೋರಿಸುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆಯಂದರೆ ಚಂದ್ರಕಾಂತ ಎಂಬವರು ಕಳೆದ ಒಂದು ವರ್ಷದಿಂದ ಕಲಬುರಗಿ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಕೆಎಂಎಫ್ ಮಳಿಗೆಗೆ ಅನುಮತಿಗಾಗಿ ಅಲೆದರೂ ಜಿಲ್ಲಾಡಳಿತ ಅನುಮತಿ ನೀಡಿಲ್ಲ.

    ವರ್ಷದಲ್ಲಿ 30 ಮದ್ಯಂದಗಡಿಗಳಿಗೆ ಅನುಮತಿ ನೀಡುವ ಇಲ್ಲಿನ ಜಿಲ್ಲಾಡಳಿತ ಒಂದು ಕೆಎಂಎಫ್ ಮಳಿಗೆ ಅನುಮತಿ ನೀಡುತ್ತಿಲ್ಲ. ಈ ಮೂಲಕ ಇಲ್ಲಿನ ಜಿಲ್ಲಾಡಳಿತ ಹಾಲಿಗಿಂತ ಆಲ್ಕೋಹಾಲ್ ಮೇಲೆ ಹೆಚ್ಚು ಪ್ರೀತಿಯನ್ನು ತೋರಿಸುತ್ತಿದೆ ಎಂದು ಜನಸಾಮಾನ್ಯರು ಆಕ್ರೋಶ ಹೊರಹಾಕಿದ್ದಾರೆ.

  • ಆದಾಯಕ್ಕಾಗಿ ಹೊಸ ಮದ್ಯದ ಅಂಗಡಿಯ ಮೇಲೆ ಸರ್ಕಾರದ ಕಣ್ಣು!- ಚಿಲ್ಲರೆ ಅಂಗಡಿಯೇ ಯಾಕೆ?

    ಆದಾಯಕ್ಕಾಗಿ ಹೊಸ ಮದ್ಯದ ಅಂಗಡಿಯ ಮೇಲೆ ಸರ್ಕಾರದ ಕಣ್ಣು!- ಚಿಲ್ಲರೆ ಅಂಗಡಿಯೇ ಯಾಕೆ?

    ಬೆಂಗಳೂರು: ರೈತರ ಸಾಲ ಮನ್ನಾ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಂತಿರುವ ರಾಜ್ಯ ಸರ್ಕಾರ, ತಮ್ಮ ಜನಪ್ರಿಯ ಯೋಜನೆಗಳಿಗೆ ಹಣ ಹೊಂದಿಸಲು ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದು ಈಗ ಮದ್ಯದ ಅಂಗಡಿಯ ಮೇಲೆ ಕಣ್ಣು ಹಾಕಿದೆ.

    ಹೌದು. ಹೊಸ ಚಿಲ್ಲರೆ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಮೂಲಕ ಖಜಾನೆ ತುಂಬಿಸಲು ಸಿದ್ಧತೆ ನಡೆಸಿದೆ. ಜನಸಂಖ್ಯೆಗೆ ಅನುಗುಣವಾಗಿ ಹೊಸ ಮದ್ಯದ ಅಂಗಡಿಗಳನ್ನು ಆರಂಭಿಸಲು ಪ್ಲಾನ್ ಮಾಡಿದೆ.

    ಈ ಪ್ಲಾನ್ ಜಾರಿಗಾಗಿ ಪ್ರತಿ ತಾಲೂಕಿಗೆ ಎಷ್ಟು ಚಿಲ್ಲರೆ ಮದ್ಯದಂಡಿಗಳು ಬೇಕಿವೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ, ಪ್ರಸ್ತಾವನೆ ಸಲ್ಲಿಸುವಂತೆ ಅಬಕಾರಿ ಆಯುಕ್ತರು ಕೆಳ ಹಂತದ ಅಧಿಕಾರಿಗಳಿಗೆ ಸೆ.22ರಂದು ಪತ್ರ ಬರೆದಿದ್ದಾರೆ. ಈಗಾಗಲೇ ಅಬಕಾರಿ ಇಲಾಖೆ ಸಮೀಕ್ಷೆ ಶುರು ಮಾಡಿದೆ. ಆದರೆ ಈ ಬಗ್ಗೆ ಏನು ಗೊತ್ತೇ ಇಲ್ಲ ಎನ್ನುವಂತೆ ಸಿಎಂ ಕುಮಾರಸ್ವಾಮಿ, ಅಬಕಾರಿ ಇಲಾಖೆ ನನ್ನ ಬಳಿಯೇ ಇದೆ. ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಕೊನೆಯದಾಗಿ ಹೊಸ ಮದ್ಯದಂಗಡಿಗಳಿಗೆ 1992ರಲ್ಲಿ ಪರವನಾಗಿ ನೀಡಿದ್ದು, 1991ರ ಜನಗಣತಿ ಆಧಾರದ ಮೇಲೆ ರಾಜ್ಯದಲ್ಲಿ 3901 ಚಿಲ್ಲರೆ ಮದ್ಯದಂಗಡಿ ಇದೆ. 2011ರ ಜನಗಣತಿ ಪ್ರಕಾರ ರಾಜ್ಯಕ್ಕೆ ಇನ್ನೂ ಸುಮಾರು 1750ಕ್ಕೂ ಹೆಚ್ಚು ಮದ್ಯದಂಗಡಿ ಅಗತ್ಯವಿದ್ದು ಹಿಂದಿನ ಕಾಂಗ್ರೆಸ್ ಸರ್ಕಾರ ಹೊಸ ಅಬಕಾರಿ ಲೈಸೆನ್ಸ್ ನೀಡಲು ಚಿಂತನೆ ನಡೆಸಿತ್ತು. ಈ ಸಂದರ್ಭದಲ್ಲಿ ಸಮಾಜದ ನಾನಾ ವರ್ಗದಿಂದ ಪ್ರಬಲ ವಿರೋಧ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಮದ್ಯ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತವಾಗುತ್ತಿದ್ದು, ಬಿಯರ್ ಮಾರಾಟ ಪ್ರಮಾಣದಲ್ಲಿ ಮಾತ್ರ ಏರಿಕೆಯಾಗುತ್ತಿದೆ.

    ಚಿಲ್ಲರೆ ಅಂಗಡಿಯೇ ಯಾಕೆ?
    ಅಬಕಾರಿ ವಲಯದಲ್ಲಿ ಚಿಲ್ಲರೆ ಅಂಗಡಿಗಳಿಗೆ (ಸಿಎಲ್-2) ಜನ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಕ್ಲಬ್‍ಗಳು (ಸಿಎಲ್ 4), ಸ್ಟಾರ್ ಹೋಟೆಲ್ (ಸಿಎಲ್ 6ಎ), ಹೋಟೆಲ್-ವಸತಿ ಗೃಹಗಳು (ಸಿಎಲ್ 7), ಮಿಲಿಟರಿ ಕ್ಯಾಂಟೀನ್ (ಸಿಎಲ್ 8), ಬಾರ್ ಮತ್ತು ರೆಸ್ಟೋರೆಂಟ್ (ಸಿಎಲ್ 9), ಎಂಎಸ್‍ಐಎಲ್ ಮಳಿಗೆಗಳು (ಸಿಎಲ್ 11ಸಿ) ಪೈಕಿ ಜನರನ್ನು ಹೆಚ್ಚು ಆಕರ್ಷಿಸುವುದು ಚಿಲ್ಲರೆ ಅಂಗಡಿ. ಈ ಕಾರಣಕ್ಕೆ ಸರ್ಕಾರ ಚಿಲ್ಲರೆ ಅಂಗಡಿಗಳನ್ನು ಹೆಚ್ಚಳ ಮಾಡಿ ಖಜಾನೆ ತುಂಬಿಸುವ ಪ್ಲಾನ್ ಮಾಡಿದೆ.

    ಹೊಸ ಮದ್ಯದ ಅಂಗಡಿ ಆರಂಭಿಸಲು ಸರ್ಕಾರ ಮುಂದಾಗಿರುವುದು ಸರಿಯೇ? ನಿಮ್ಮ ಅಭಿಪ್ರಾಯವನ್ನು ತಿಳಿಸಿ..

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಎಣ್ಣೆ ಕೊಳ್ಳಲು ವೈನ್ ಶಾಪ್‍ ಗಳ ಮುಂದೆ ಮುಗಿಬಿದ್ದ ಜನ!

    ಎಣ್ಣೆ ಕೊಳ್ಳಲು ವೈನ್ ಶಾಪ್‍ ಗಳ ಮುಂದೆ ಮುಗಿಬಿದ್ದ ಜನ!

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನು 2 ಗಂಟೆಗಳಲ್ಲಿ ಬ್ರೇಕ್ ಬೀಳಲಿದ್ದು, ಚುನಾವಣಾ ನೀತಿ ಸಂಹಿತೆ ಪರಿಣಾಮದಿಂದ ಮದ್ಯ ಖರೀದಿಸಲು ವೈನ್ ಶಾಪ್‍ ಗಳ ಮುಂದೆ ನೂಕುನುಗ್ಗಲು ಶುರುವಾಗಿದೆ.

    ಶನಿವಾರ ರಾಜ್ಯಾದ್ಯಂತ ಮತದಾನ ನಡೆಯಲಿದ್ದು, ಇಂದು ಸಂಜೆ 5 ಗಂಟೆಯಿಂದ ಮದ್ಯದಂಗಡಿಗಳು ಬಂದ್ ಆಗಲಿವೆ. ಇಂದು ಸಂಜೆ 5 ಗಂಟೆಯಿಂದ ಮೇ 12ರ ಮಧ್ಯರಾತ್ರಿವರೆಗೆ ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಚುನಾವಣಾ ಅಧಿಕಾರಿಗಳು ಸೂಚನೆ ನೀಡಿದ್ದರು. ಇದನ್ನೂ ಓದಿ:  ಇಂದು ಸಂಜೆಯಿಂದ ಎರಡು ದಿನ ರಾಜ್ಯಾದ್ಯಂತ ಮದ್ಯದಂಗಡಿ ಬಂದ್

    ಚುನಾವಣಾ ಆಯೋಗದ ಸೂಚನೆಯಂತೆ ಇಂದು ಸಂಜೆ 5 ಗಂಟೆಗೆ ವೈನ್ ಶಾಪ್‍ ಗಳ ಮುಚ್ಚುವುದರಿಂದ ವೈನ್ ಶಾಪ್ ಗಳ ಮುಂದೆ ನೂಕುನುಗ್ಗಲು ಶುರುವಾಗಿದೆ. ಮದ್ಯ ಪ್ರಿಯರು ಇನ್ನು ಮತ್ತೆ ಚುನಾವಣೆ ಮುಗಿಯುವವರೆಗೂ ಮದ್ಯೆ ಸಿಗುವುದಿಲ್ಲ ಎಂದು ಎಲ್ಲರೂ ಬಾರ್, ವೈನ್ ಶಾಪ್ ಗಳಿಗೆ ಹೋಗಿ  ಮದ್ಯ ಖರೀದಿಸುತ್ತಿದ್ದಾರೆ.

    ತಿಂಗಳ ಆರಂಭ ಮತ್ತು ವೀಕೆಂಡ್ ಅಂತಾ ಪಾರ್ಟಿ ಮೂಡ್‍ನಲ್ಲಿರುವ ಮದ್ಯಪ್ರಿಯರಿಗೆ ಚುನಾವಣಾ ಆಯೋಗ ಶಾಕ್ ನೀಡಿದ್ದು, ವಿಧಾನಸಬಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಚುನಾವಣಾ ಆಯೋಗ ಎಲ್ಲ ರೀತಿಯಿಂದಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುತ್ತಿದೆ.