Tag: loan clearance

  • 100 ವರ್ಷವಾದ್ರೂ ಜೆಡಿಎಸ್‍ಗೆ ಪೂರ್ಣ ಬಹುಮತ ಬರಲ್ಲ, ಬರೆದಿಟ್ಟುಕೊಳ್ಳಿ – ಶ್ರೀರಾಮುಲು

    100 ವರ್ಷವಾದ್ರೂ ಜೆಡಿಎಸ್‍ಗೆ ಪೂರ್ಣ ಬಹುಮತ ಬರಲ್ಲ, ಬರೆದಿಟ್ಟುಕೊಳ್ಳಿ – ಶ್ರೀರಾಮುಲು

    ಕೊಪ್ಪಳ: ಸೂರ್ಯ-ಚಂದ್ರರು ಇರೋವರೆಗೂ ಜೆಡಿಎಸ್ ಪೂರ್ಣ ಬಹಮತದೊಂದಿಗೆ ಅಧಿಕಾರಕ್ಕೆ ಬರೋದಿಲ್ಲ ಎಂದು ಶಾಸಕ ಶ್ರೀರಾಮುಲು ವ್ಯಂಗ್ಯವಾಡಿದರು.

    ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳಕ್ಕೆ ಆಗಮಿಸಿದ್ದ ಬಿ.ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು 100 ವರ್ಷವಾದರೂ ಜೆಡಿಎಸ್ ಗೆ ಪೂರ್ಣ ಬಹುಮತ ಬರಲ್ಲ. ನೀವು ಇದನ್ನ ಬರೆದಿಟ್ಟುಗೊಳ್ಳಿ ಎಂದ ಶ್ರೀರಾಮಲು ಪರ್ತಕರ್ತರಿಗೆ ಹೇಳಿದ್ದಾರೆ.

    ಸಿದ್ದರಾಮಯ್ಯನ ಬಗ್ಗೆ ನಮಗೆ ಸಾಫ್ಟ್ ಕಾರ್ನರ್ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಆದ ಅನ್ಯಾಯ ನಮ್ಮ ನಾಯಕರು ಎತ್ತಿ ಹಿಡಿಯುತ್ತಿದ್ದಾರೆ. ಸೋಮವಾರ ನಡೆದ ಬಂದ್ 30 ಜಿಲ್ಲೆಗಳಲ್ಲಿ ಯಶಸ್ವಿಯಾಗಿದೆ. ಕುಮಾರಸ್ವಾಮಿ ಸಿಎಂ ಆದ ನಂತರ ಕಾಂಗ್ರೆಸ್ ಬಾಲ ಬಡಿಯುತ್ತಿದ್ದಾರೆ. ಮುಖ್ಯಮಂತ್ರಿ ಆಗೋ ಮುನ್ನ ಒಂದು ಇವಾಗ ಮತ್ತೊಂದು ಮಾತು ಹೇಳುತ್ತಿದ್ದಾರೆ ಅಂತಾ ಕಿಡಿಕಾರಿದ್ರು.

    ಎಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ಮುಲಾಜಿಲ್ಲಿದೀನಿ ಎಂದರೆ ನಾವು ಕೇಳುವುದಿಲ್ಲ. ನಾವು ವಿರೋಧ ಪಕ್ಷದಲ್ಲಿದ್ದೀವಿ ಕೈಕಟ್ಟಿ ಕೂರೋಕ್ಕಾಗಲ್ಲ. ಕುಮಾರಸ್ವಾಮಿ ಸಾಲ ಮನ್ನಾ ಮಾಡದಿದ್ದರೆ ಖುರ್ಚಿ ಖಾಲಿ ಮಾಡಬೇಕು. ಸರ್ಕಾರ ಬಹಳ ದಿನ ಉಳಿಯೋದಿಲ್ಲ, ಮತ್ತೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಶ್ರೀರಾಮುಲು ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ರು.

    ಸೋಮವಾರ ನಡೆದ ಬಂದ್ ನಲ್ಲಿ ಕೊಪ್ಪಳದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಿಟ್ಟ ದೌರ್ಜನ್ಯ ಮಾಡಿಸುತ್ತಿದ್ದಾರೆ. ಪೊಲೀಸರು ಸರ್ಕಾರದ ಮಾತು ಕೇಳಿದರೆ ನೌಕರಿ ಕಳೆದುಕೊಳ್ಳಬೇಕಾಗುತ್ತೆ. ಮುಖ್ಯಮಂತ್ರಿ ಕುಮಾರಸ್ವಾಮಿ ಕೊಟ್ಟ ಮಾತು ತಪ್ಪಿದ್ದಾರೆ. ಅದಕ್ಕಾಗಿ ನಾವು ಬೀದಿಗಿಳಿದು ಹೋರಾಟ ಮಾಡುತ್ತೀವಿ ಎಂದು ಶಾಸಕ ಬಿ. ಶ್ರೀರಾಮಲು ಹೇಳಿದ್ದಾರೆ. ಇದನ್ನೂ ಓದಿ: ಕೊಪ್ಪಳ ಪೊಲೀಸ್ ಠಾಣೆಯಲ್ಲಿ ಹೈಡ್ರಾಮ – ಡಿವೈಎಸ್‍ಪಿ ಮೇಲೆ ಕೈ ಮಾಡಿದ ಸಂಸದ ಸಂಗಣ್ಣ ಕರಡಿ

  • ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಸಿ: ಪ್ರಧಾನಿಗೆ ಎಚ್‍ಡಿಕೆ ಮನವಿ

    ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಸಿ: ಪ್ರಧಾನಿಗೆ ಎಚ್‍ಡಿಕೆ ಮನವಿ

    ನವದೆಹಲಿ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಶಾಖೋತ್ಪನ್ನ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಮಾಡಲು ಕಲ್ಲಿದ್ದಲು ಪೂರೈಸುವಂತೆ ಮನವಿ ಮಾಡಿದ್ದಾರೆ.

    ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಡಿನ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸರ್ಕಾರದ ಸಹಕಾರ ಕೇಳಿದ್ದೇನೆ. ಶಾಖೋತ್ಪನ್ನ ಘಟಕದಲ್ಲಿ ಎರಡು ದಿನಕ್ಕೆ ಆಗುವಷ್ಟು ಸ್ಟಾಕ್ ಇದೆ. ಹೀಗಾಗಿ ಕಲ್ಲಿದ್ದಲು ಪೂರೈಕೆಗಾಗಿ ಮನವಿ ಮಾಡಿದ್ದೇನೆ ಎಂದರು.

    ರಾಜಕೀಯದ ಅನುಭವದ ಹಿನ್ನೆಲೆಯಲ್ಲಿ ಮೋದಿಯವರು ಸಲಹೆ ನೀಡಿದ್ದಾರೆ. ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದು ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

     

    ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಯುಟರ್ನ್ ಇಲ್ಲ. ಮಾಧ್ಯಮಗಳು ಹಾಗೇ ಬಿಂಬಿಸಿಸುತ್ತಿವೆ. ಸಾಲಮನ್ನಾಕ್ಕೆ ಕಾಂಗ್ರೆಸ್ ಬೆಂಬಲ ಬೇಕು. ಮೈತ್ರಿ ಸರ್ಕಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡರು ಬೆಂಬಲ ಅವಶ್ಯಕವಾಗಿದ್ದು, ರೈತರ ಸಾಲಮನ್ನಾ ಮಾಡುತ್ತೇನೆ ಎಂದರು.

    ಚುನಾವಣಾ ಪ್ರಚಾರದ ವೇಳೆ 24 ಗಂಟೆಯ ಒಳಗಡೆ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ. ನನಗೆ ನನ್ನದೆಯಾದ ಇತಿಮಿತಿ ಇದೆ. ಕೊಂಚ ಉಸಿರಾಟಕ್ಕೆ ಸಮಯಬೇಕು. ಬುಧವಾರ ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಮಾಡುತ್ತೇವೆ. ನಾನು ಸುಮ್ಮನೆ ಕುಳಿತುಕೊಂಡಿಲ್ಲ. ಸಾಲಮನ್ನಾಗೆ ಸಂಬಂಧಿಸಿದಂತೆ ಎಲ್ಲ ತಯಾರಿ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿದರು.

    ಬಿಜೆಪಿ ನಾಯಕರ ಕುತಂತ್ರದ ರಾಜಕಾರಣಕ್ಕೆ ಜನರು ಬಲಿಯಾಗಬಾರದು. ನಮ್ಮದು ಜನ ಸ್ನೇಹಿ ಸರ್ಕಾರವಾಗಿದ್ದು, ಯಾರು ಆತಂಕ ಅನುಮಾನಕ್ಕೆ ಒಳಗಾಗಬಾರದು. ಪರಿಣಾಮಕಾರಿಯಾಗಿ ನಾನು ಕೆಲಸ ಮಾಡುತ್ತೇನೆ ಎಂದರು.

    ನೋವಿನಿಂದ ಕೆಲವು ಹೇಳಿಕೆ ನೀಡಿದ್ದೇನೆ. ಜನರ ಹೆಸರಿನಲ್ಲಿ ಪ್ರಮಾಣ ವಚನ ಸ್ವಿಕರಿಸಿದ್ದೇನೆ. ನನ್ನ ಬದ್ಧತೆ ಉಳಿಸಿಕೊಳ್ಳುತ್ತೇನೆ. ಮಾತು ನಡೆಸಿಕೊಳ್ಳಲು ಆಗಲಿಲ್ಲ ಅಂದರೆ ನಾನು ಸರ್ಕಾರದಲ್ಲಿ ಇರುವುದಿಲ್ಲ ಎಂದು ತಿಳಿಸಿದರು.

  • ಬಸ್ ತಡೆದು ಪ್ರತಿಭಟನೆ: ಪ್ರತಾಪ್ ಸಿಂಹ ವಶಕ್ಕೆ

    ಬಸ್ ತಡೆದು ಪ್ರತಿಭಟನೆ: ಪ್ರತಾಪ್ ಸಿಂಹ ವಶಕ್ಕೆ

    ಮೈಸೂರು: ಸಾಲಮನ್ನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಬಸ್‍ಗಳನ್ನು ತಡೆಯಲು ಮುಂದಾಗಿದ್ದ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಕರ್ನಾಟಕ ಬಂದ್ ಹಿನ್ನೆಲೆ ಮೈಸೂರು ಬನ್ನಿಮಂಟಪ ಡಿಪೋ ಬಳಿ ಪ್ರತಿಭಟನೆ ನಡೆಸಲಾಗುತಿತ್ತು. ಆಗ ಸಂಸದ ಪ್ರತಾಪ್ ಸಿಂಹ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರು. ತಕ್ಷಣ ಪೊಲೀಸರು ಬಂದು ಪ್ರತಾಪ್ ಸಿಂಹ ಹಾಗೂ ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದಿದ್ದಾರೆ.

    ಮುಖ್ಯಮಂತ್ರಿ ಹುದ್ದೆಯಲ್ಲಿ ಇದ್ದುಕೊಂಡು ಜನರ ಮುಲಾಜಿನಲ್ಲಿ ಇಲ್ಲ ಎಂದರೆ ಏನರ್ಥ? ಜನರ ಮುಲಾಜಿನಲ್ಲಿ ಇಲ್ಲದಿದ್ದರೆ ಅಧಿಕಾರ ಬಿಟ್ಟು ಕೆಳಗಿಳಿಯಲಿ. ಕುಮಾರಸ್ವಾಮಿಯವರು ಪ್ರಣಾಳಿಕೆಯಲ್ಲಿ ಸಾಲಮನ್ನ ಭರವಸೆ ನೀಡಿದ್ದರು. ಅವರು ಭರವಸೆಯಂತೆ ಸಾಲಮನ್ನ ಮಾಡಲಿ. ಯಡಿಯೂರಪ್ಪ ಒಂದು ಲಕ್ಷದವರೆಗೆ ಸಾಲಮನ್ನ ಮಾಡಲು ಮುಂದಾಗಿದ್ದರು. ಅದೇ ರೀತಿ ನೀವು ಸಾಲಮನ್ನಾ ಮಾಡುವುದಾಗಿ ನೀಡಿದ್ದ ಹೇಳಿಕೆಯನ್ನು ಉಳಿಸಿಕೊಳ್ಳಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

    ಸಾಲಮನ್ನಕ್ಕೆ ಆಗ್ರಹಿಸಿ ಬಿಜೆಪಿಯಿಂದ ಕರ್ನಾಟಕ ಬಂದ್ ಕರೆಗೆ ಮೈಸೂರಿನಲ್ಲಿ ಕನ್ನಡ ಪರ ಸಂಘಟನೆ ಹಾಗೂ ರೈತಪರ ಸಂಘಟನೆಗಳು ಬೆಂಬಲ ಸೂಚಿಸಲಿಲ್ಲ. ಇನ್ನೂ ಕರ್ನಾಟಕ ಬಂದ್ ಗೆ ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ ಇಲ್ಲ. ಅಲ್ಲದೇ ಮೈಸೂರು ಲಾರಿ ಮಾಲೀಕರ ಸಂಘದಿಂದಲೂ ನೈತಿಕ ಬೆಂಬಲ ಮಾತ್ರ ನೀಡುತ್ತಿದ್ದು, ಮೈಸೂರು ಥಿಯೇಟರ್ ಮಾಲೀಕರಿಂದ ಬಂದ್‍ಗೆ ಬೆಂಬಲ ಸೂಚಿಸಿದ್ದು, ಥಿಯೇಟರ್ ಮಾಲೀಕರು ಬೆಳಗಿನ ಪ್ರದರ್ಶನ ಮಾತ್ರ ರದ್ದು ಮಾಡುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ರಿಂದ ಮಾಹಿತಿ ನೀಡಿದ್ದಾರೆ.

    ಸಾಂಸ್ಕೃತಿಕ ನಗರಿಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ಇದ್ದು, ಜನಜೀವನ ಎಂದಿನಂತೆ ಸಾಗತ್ತಿದೆ. ಸಾರಿಗೆ ಬಸ್‍ಗಳು ರಸ್ತೆಗಿಳಿದು ಸೇವೆ ಆರಂಭಿಸಿದ್ದು, ನಗರ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್ ಸಂಚರಿಸುತ್ತಿದೆ. ಆಟೋ ಹಾಗೂ ಇತರೆ ಸಾರಿಗೆ ಕೂಡ ಇಂದು ಲಭ್ಯವಿದೆ. ಹಾಲು, ದಿನಪತ್ರಿಕೆಗಳು ಎಂದಿನಂತೆ ಲಭ್ಯವಿದ್ದು, ರಸ್ತೆಯಲ್ಲಿ ವಾಹನಗಳು ದಿನ ನಿತ್ಯದಂತೆ ಸಂಚರಿಸುತ್ತಿದೆ. ಸದ್ಯದವರೆಗೆ ಮೈಸೂರಿಗೆ ಬಂದ್ ಬಿಸಿ ತಟ್ಟಿಲ್ಲ.

    ಕೆಎಸ್ ಆರ್ ಟಿ ಸಿ ಬಸ್ ತಡೆದ ಹಿನ್ನೆಲೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ನಾಗೇಂದ್ರ ಅವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸುತ್ತಿದ್ದಾರೆ.

  • ಕರ್ನಾಟಕ ಬಂದ್ ಕರೆ ನೀಡಿರೋದು ಬಿಜೆಪಿಗೆ ಶೋಭೆ ತರುವಂತದ್ದಲ್ಲ: ಯು.ಟಿ.ಖಾದರ್

    ಕರ್ನಾಟಕ ಬಂದ್ ಕರೆ ನೀಡಿರೋದು ಬಿಜೆಪಿಗೆ ಶೋಭೆ ತರುವಂತದ್ದಲ್ಲ: ಯು.ಟಿ.ಖಾದರ್

    ಮಂಗಳೂರು: ಮೇ28 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವುದು ಬಿಜೆಪಿ ಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಸಚಿವ ಸಂಪುಟ ರಚನೆ ಆದ ನಂತರವೇ ಸಾಲ ಮನ್ನಾ ಕುರಿತು ನಿರ್ಧರಿಸಲು ಸಾಧ್ಯವಾಗುವುದು. ಇದು ರಾಜಕೀಯ ಪ್ರೇರಿತ ಬಂದ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರುತ್ತದೆ. ಯಾವುದೇ ಭಿನ್ನಾಭಿಪ್ರಾಯಗಳು ಎರಡೂ ಪಕ್ಷದಲ್ಲಿ ಇಲ್ಲ ಅಂತಾ ಸ್ಪಷ್ಟಪಡಿಸಿದ್ರು.

    ಜೆಡಿಎಸ್ ಜನತೆಗೆ ನೀಡಿದ ಆಶ್ವಾಸನೆಯಂತೆ ಮುಂದಿನ 24 ಗಂಟೆಯೊಳಗೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲವನ್ನು ಮನ್ನಾ ಮಾಡಬೇಕು ಇಲ್ಲದಿದ್ದಲ್ಲಿ ಮೇ 28, ಸೋಮವಾರದಂದು ಕರ್ನಾಟಕ ಬಂದ್ ಗೆ ಕರೆ ಕೊಡಲಾಗುವುದು ಎಂದು ಬಿಜೆಪಿ ಪ್ರಕಟಿಸಿದೆ.

    ಶುಕ್ರವಾರ ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರ ಕರ್ನಾಟಕ ಬಂದ್ ಕರೆ ನೀಡಿ ಹೊರ ಬಂದಿದ್ದರು. ವಿಧಾನಸೌಧದ ಹೊರಗೆ ಬಂದ ನಂತರವೂ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಅಂತಾ ತಿಳಿಸಿದ್ದರು. ಆದ್ರೆ ಇಂದು ಬೆಳಗ್ಗೆ ಬಂದ್ ಗೆ ಕರೆ ನೀಡಿರೋದು ಬಿಜೆಪಿ ಅಲ್ಲ, ರೈತರು. ನಾಡಿನ ರೈತರಿಗೆ ನಾವೆಲ್ಲ ಬೆಂಬಲ ನೀಡುತ್ತಿದ್ದೇವೆ ಅಂತಾ ಮಾತು ಬದಲಿಸಿದ್ದಾರೆ.