Tag: loan

  • ಖಾಸಗಿ ಫೈನಾನ್ಸ್ ಸಂಸ್ಥೆಯ ಒತ್ತಡ ತಾಳಲಾರದೇ ಸಿದ್ಧಾರ್ಥ್ ಆತ್ಮಹತ್ಯೆ?

    ಖಾಸಗಿ ಫೈನಾನ್ಸ್ ಸಂಸ್ಥೆಯ ಒತ್ತಡ ತಾಳಲಾರದೇ ಸಿದ್ಧಾರ್ಥ್ ಆತ್ಮಹತ್ಯೆ?

    ಮುಂಬೈ: ಖಾಸಗಿ ಫೈನಾನ್ಸ್ ಸಂಸ್ಥೆಯ ಒತ್ತಡ ತಾಳಲಾರದೇ ಕೆಫೆ ಕಾಫಿ ಡೇ(ಸಿಸಿಡಿ) ಸಂಸ್ಥಾಪಕ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡರೇ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ.

    ಹೌದು, ಸಿದ್ದಾರ್ಥ್ ಅವರು ತಮ್ಮ ವ್ಯವಹಾರವನ್ನು ವಿಸ್ತರಿಸಲು ಹಲವು ಕಡೆ ಸಾಲವನ್ನು ಪಡೆದುಕೊಂಡಿದ್ದರು. ಸದ್ಯ ವೈರಲ್ ಆಗಿರುವ ಸಿದ್ಧಾರ್ಥ್ ಅವರು ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಖಾಸಗಿ ಸಂಸ್ಥೆಯೊಂದು ಒತ್ತಡ ಹಾಕುತ್ತಿದೆ ಇದರ ಜೊತೆಗೆ ಖಾಸಗಿ ಇಕ್ವಿಟಿ ಪಾಲುದಾರರು ಷೇರುಗಳನ್ನು ವಾಪಸ್ ಪಡೆಯಬೇಕೆಂದು ಒತ್ತಡ ಹಾಕುತ್ತಿದ್ದಾರೆ ಎನ್ನುವ ಅಂಶ ಪ್ರಸ್ತಾಪವಾಗಿತ್ತು.

    ಸಿಸಿಡಿ ಮೂಲಗಳನ್ನು ಆಧಾರಿಸಿ ವರದಿ ಮಾಡಿದ ಡಿಎನ್‍ಎ, ಸಿಸಿಡಿಯಲ್ಲಿ ಹೂಡಿಕೆ ಮಾಡಿದ ಖಾಸಗಿ ಇಕ್ವಿಟಿ ಸಂಸ್ಥೆ ಕೆಕೆಆರ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಶೇ.8 ರಷ್ಟು ಬಡ್ಡಿ ದರದಲ್ಲಿ ಸಾಲ ಪಡೆದಿತ್ತು. ಈ ಕೆಕೆಆರ್ ಸಿದ್ದಾರ್ಥ್ ಅವರ ಬಳಿ ಶೇ.25 ರಷ್ಟು ಬಡ್ಡಿ ಬೇಡಿಕೆಯನ್ನು ಇಟ್ಟಿತ್ತು ಎಂದು ವರದಿ ಮಾಡಿದೆ.

    ಕಾಫಿ ಡೇ ಕಂಪನಿಯಲ್ಲಿ 4 ವಿದೇಶಿ ಕಾರ್ಪೋರೇಟ್ ಸಂಸ್ಥೆಗಳು ಶೇ.22.35 ರಷ್ಟು ಪಾಲನ್ನು ಹೊಂದಿವೆ. ಎನ್‍ಎಲ್‍ಎಸ್ ಮಾರಿಷಸ್ ಶೇ.10.61 ಪಾಲನ್ನು ಹೊಂದಿದ್ದರೆ, ಕೆಕೆಆರ್ ಮಾರಿಷಸ್ ಪ್ರೈವೆಟ್ ಈಕ್ವಿಟಿ ಲಿಮಿಟೆಡ್ ಶೇ.6.07 ರಷ್ಟು (1.28 ಕೋಟಿ ಷೇರು) ಪಾಲನ್ನು ಹೊಂದಿದೆ.

    ವಿದೇಶಿ ಬ್ಯಾಂಕಿಂಗ್‍ಯೇತರ ಹಣಕಾಸು ಸಂಸ್ಥೆಗಳು (ಎನ್‍ಬಿಎಫ್‍ಸಿ) ಕಡಿಮೆ ದರದಲ್ಲಿ ಸಾಲವನ್ನು ಪಡೆದು ಹೆಚ್ಚಿನ ಬಡ್ಡಿಗೆ ಸಾಲವನ್ನು ನೀಡುತ್ತದೆ. ಭಾರತದ ಬ್ಯಾಂಕ್ ಗಳಿಂದ ಶೇ.8-9 ರ ಬಡ್ಡಿ ದರದಲ್ಲಿ ಸಾಲವನ್ನು ಪಡೆದು ಆ ಹಣವನ್ನು ಭಾರತದ ಉದ್ಯಮಿಗಳಿಗೆ ಶೇ.22.25 ಬಡ್ಡಿ ದರದಲ್ಲಿ ಎನ್‍ಬಿಎಫ್‍ಸಿಗಳು ಸಾಲವನ್ನು ನೀಡುತ್ತವೆ. ಸಂಸ್ಥೆ ಲಾಭದಲ್ಲಿದ್ದರೆ ಈ ಬಡ್ಡಿ ದರದಲ್ಲಿ ಹಣವನ್ನು ತೀರಿಸುತ್ತದೆ. ಆದರೆ ನಷ್ಟದಲ್ಲಿದ್ದರೆ ಇಷ್ಟೊಂದು ಮೊತ್ತವನ್ನು ತೀರಿಸುವುದು ಅಸಾಧ್ಯವಾಗುತ್ತದೆ. ಎನ್‍ಬಿಎಫ್‍ಸಿಯ ಈ ಮೊಡಸ್ ಅಪರೆಂಡಿಗೆ ಈಗ ಸಿದ್ದಾರ್ಥ್ ಬಲಿಯಾಗಿರಬಹುದೇ ಎನ್ನುವ ಅನುಮಾನ ಹುಟ್ಟಿದೆ.

    ಹೂಡಿಕೆದಾರರೊಬ್ಬರು ಪ್ರತಿಕ್ರಿಯಿಸಿ, ಸಾಲ ನೀಡಿದ ಖಾಸಗಿ ಇಕ್ವಿಟಿಗಳು ಮಾಲೀಕರಿಂದ ಹೆಚ್ಚಿನ ಲಾಭವವನ್ನು ನಿರೀಕ್ಷಿಸುತ್ತವೆ. ಈ ಕಾರಣಕ್ಕೆ ಉದ್ಯಮಿಗಳ ಮೇಲೆ ಒತ್ತಡವನ್ನು ಹಾಕುತ್ತಲೇ ಇರುತ್ತದೆ. ಸಾಲ ತೀರಿಸಲು ಸಾಧ್ಯವಾಗದೇ ಇದ್ದಾಗ ಅನಿವಾರ್ಯವಾಗಿ ಸಂಸ್ಥೆಯನ್ನು ಮಾರಾಟ ಮಾಡಬೇಕಾಗುತ್ತದೆ. ಒತ್ತಡ ಹಾಕುವ ಮೂಲಕ ವಿದೇಶಿ ಬ್ರ್ಯಾಂಡ್ ಗಳಿಗೆ ಪ್ರತಿ ಸ್ಪರ್ಧಿಯಾಗಿ ಬೆಳೆಯುತ್ತಿರುವ ದೇಶದ ಉದ್ಯಮಗಳನ್ನು ನಿರ್ನಾಮ ಮಾಡುತ್ತವೆ ಎಂದು ಹೇಳಿದ್ದಾರೆ.

    ಭಾರತದ ಬ್ಯಾಂಕ್ ಮತ್ತು ಖಾಸಗಿ ಸಂಸ್ಥೆಗಳಿಂದ ಪಡೆದ ಸಾಲವನ್ನು ತೀರಿಸಲು ಮೈಂಡ್ ಟ್ರೀ ಕಂಪನಿಯಲ್ಲಿದ್ದ ಷೇರನ್ನು ಸಿದ್ದಾರ್ಥ್ ಲಾರ್ಸನ್ ಆಂಡ್ ಟ್ಯಾಬ್ರೋ ಕಂಪನಿಗೆ ಮಾರಾಟ ಮಾಡಿದ್ದರು. ತನ್ನ ಬಳಿಯಿದ್ದ ಒಟ್ಟು ಶೇ.20.32 ಷೇರನ್ನು 3,200 ಕೋಟಿ ರೂ.ಗೆ ಮಾರಾಟ ಮಾಡಿ ಕೆಲ ಸಾಲವನ್ನು ತೀರಿಸಿದ್ದರು.

    ಮತ್ತಷ್ಟು ಸಾಲ ಬಾಕಿ ಇದ್ದ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಅವರು ತಮ್ಮ ಕನಸಿನ `ಕೆಫೆ ಕಾಫಿ ಡೇ’ಯನ್ನು ಬಹು ರಾಷ್ಟ್ರೀಯ ಕೋಕಾ ಕೋಲಾ ಕಂಪನಿಗೆ ಮಾರಾಟ ಮಾಡಲು ಮುಂದಾಗಿದ್ದರು. ಈಗಾಗಲೇ ಅಮೆರಿಕದಿಂದ ಕೋಕಾ ಕೋಲಾ ಅಧಿಕಾರಿಗಳು ಸಿದ್ಧಾರ್ಥ ಒಡೆತನದ ಕಂಪನಿಗೆ ಭೇಟಿ ನೀಡಿ ಖರೀದಿ ಸಂಬಂಧ ಮಾತುಕತೆ ನಡೆಸಿದ್ದರು.

    ಅಂದಾಜು 10 ಸಾವಿರ ಕೋಟಿ ರೂ.ಗೆ ತನ್ನ ಕಂಪನಿಯನ್ನು ಮಾರಾಟ ಮಾಡುವ ಸಂಬಂಧ ಮಾತುಕತೆ ನಡೆದಿದ್ದರೂ ಇಲ್ಲಿಯವರೆಗೆ ಯಾವುದೂ ಅಂತಿಮವಾಗಿರಲಿಲ್ಲ. ಕಂಪನಿಯನ್ನು ಮಾರಾಟ ಮಾಡಿದರೂ, ಅದರಲ್ಲಿ ಒಂದಷ್ಟು ಪ್ರಮಾಣದ ಷೇರು ಉಳಿಸಿಕೊಳ್ಳಲು ಸಿದ್ಧಾರ್ಥ್ ಅವರು ಮುಂದಾಗಿದ್ದರು. ಇದು ಕೋಕಾ ಕೋಲಾಗೆ ತೊಡಕಾಗಿತ್ತು ಎಂದು ವರದಿಯಾಗಿತ್ತು.

    ಮೈಂಡ್ ಟ್ರೀ ಷೇರು ಎಷ್ಟಿತ್ತು?
    2011ರಲ್ಲಿ ಒಂದು ಷೇರಿಗೆ 87 ರೂ. ನೀಡಿ ಶೇ.6.95 ಅಥವಾ 28 ಲಕ್ಷ ಮೈಂಡ್ ಟ್ರೀ ಷೇರುಗಳನ್ನು 24.36 ಕೋಟಿ ರೂ. ನೀಡಿ ಸಿದ್ಧಾರ್ಥ್ ಖರೀದಿ ಮಾಡಿದ್ದರು. ಇದಾದ ನಂತರ 2012 ರಲ್ಲಿ ಒಂದು ಷೇರಿಗೆ 122.3 ರೂ. ನೀಡಿ ಶೇ.3.27 ಅಥವಾ 13.47 ಲಕ್ಷ ಷೇರುಗಳನ್ನು 122.33 ಕೋಟಿ ರೂ. ನೀಡಿ ಖರೀದಿಸಿದ್ದರು. 2017 ರಲ್ಲಿ ಶೇ. 0.23 ಅಥವಾ 4.41 ಷೇರುಗಳನ್ನು ಖರೀದಿಸಿದ್ದರು. ಒಂದು ಷೇರನ್ನು 529 ರೂ. ನೀಡಿ ಖರೀದಿಸಿದ್ದ ಪರಿಣಾಮ ಸಿದ್ಧಾರ್ಥ್ ಅವರು ಒಟ್ಟು ಮೈಂಡ್ ಟ್ರೀಯಲ್ಲಿ ಶೇ.19.94 ಪಾಲು ಷೇರನ್ನು ಹೊಂದಿದ್ದರು. ಈ ಮಧ್ಯೆ ಮೈಂಡ್ ಟ್ರೀ ಕಂಪನಿ ಬೋನಸ್ ರೂಪದಲ್ಲಿ ಸಿದ್ಧಾರ್ಥ್ ಅವರಿಗೆ ಷೇರುಗಳನ್ನು ನೀಡಿತ್ತು.

    2018ರಲ್ಲಿ ಸಿದ್ಧಾರ್ಥ್ ಅವರು ಮೈಂಡ್ ಟ್ರೀ ಕಂಪನಿಯಲ್ಲಿ ಒಟ್ಟು ಶೇ.20.41 ರಷ್ಟು ಷೇರುಗಳನ್ನು ಹೊಂದಿದ್ದರು. ಇದರಲ್ಲಿ ಶೇ.3.33 ಅಥವಾ 54.69 ಲಕ್ಷ ಷೇರುಗಳು ನೇರವಾಗಿ ಸಿದ್ಧಾರ್ಥ್ ಅವರ ಹೆಸರಿನಲ್ಲಿದ್ದರೆ ಶೇ.10.63 ಅಥವಾ 1.74 ಷೇರುಗಳು ಕಾಫಿ ಡೇ ಎಂಟರ್ಪ್ರೈಸ್ ಹೆಸರಿನಲ್ಲಿತ್ತು. ಉಳಿದ ಶೇ.6.45 ಷೇರುಗಳು ಅಥವಾ 1.05 ಕೋಟಿ ಷೇರುಗಳು ಕಾಫಿ ಡೇ ಟ್ರೇಡಿಂಗ್ ಲಿಮಿಟೆಡ್ ಕಂಪನಿಯ ಹೆಸರಿನಲ್ಲಿತ್ತು.

    https://www.youtube.com/watch?v=-V5nfhPjxb8

    ಕೆಫೆ ಕಾಫಿ ಡೇ 2018ರ ಹಣಕಾಸು ವರ್ಷದಲ್ಲಿ 1,777 ಕೋಟಿ ರೂ. ಆದಾಯ ಗಳಿಸಿದ್ದರೆ, 2019ರ 1,814 ಕೋಟಿ ರೂ. ಆದಾಯ ಗಳಿಸಿತ್ತು. 2020ರ ಮಾರ್ಚ್ ವೇಳೆಗೆ 2,250 ಕೋಟಿ ರೂ. ಆದಾಯ ಗಳಿಸುವ ಗುರಿಯನ್ನು ಹಾಕಿಕೊಂಡಿತ್ತು.

    ದೇಶದೆಲ್ಲೆಡೆ ಒಟ್ಟು 1,752 ಕೆಫೆಗಳನ್ನು ಹೊಂದಿದ್ದ ಕಂಪನಿ ಒಟ್ಟು 60 ಸಾವಿರಕ್ಕೂ ಅಧಿಕ ಕಾಫಿ ವೆಂಡಿಂಗ್ ಮಷೀನ್‍ಗಳನ್ನು ಹೊಂದಿದೆ. ಭಾರತ ಅಲ್ಲದೆ ವಿಯೆನ್ನಾ, ಝೆಕ್ ರಿಪಬ್ಲಿಕ್, ಮಲೇಷ್ಯಾ, ನೇಪಾಳ ಮತ್ತು ಈಜಿಪ್ಟ್ ನಲ್ಲೂ ಕಂಪನಿ ವ್ಯವಹಾರ ನಡೆಸುತಿತ್ತು.

  • 8 ಸಾವಿರ ಕೋಟಿ ಸಾಲ ಮಾಡಿದ್ದ ಸಿದ್ಧಾರ್ಥ್ -ಯಾವ ಬ್ಯಾಂಕಿನಲ್ಲಿ ಎಷ್ಟು?

    8 ಸಾವಿರ ಕೋಟಿ ಸಾಲ ಮಾಡಿದ್ದ ಸಿದ್ಧಾರ್ಥ್ -ಯಾವ ಬ್ಯಾಂಕಿನಲ್ಲಿ ಎಷ್ಟು?

    – ಸಾಲಕ್ಕಿಂತ ಮೂರು ಪಟ್ಟು ಆಸ್ತಿ ಮೌಲ್ಯ

    ಬೆಂಗಳೂರು: ನಾಪತ್ತೆಯಾಗಿರುವ ಎಸ್.ಎಂ.ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರು ವಿವಿಧ ಬ್ಯಾಂಕ್‍ಗಳಲ್ಲಿ ಬರೋಬ್ಬರಿ ಸುಮಾರು 8 ಸಾವಿರ ಸಾಲ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಸಿದ್ಧಾರ್ಥ್ ಅವರು ಮಾಡಿರುವ 8 ಸಾವಿರ ಸಾಲಕ್ಕಿಂತ ಮೂರು ಪಟ್ಟು ಅವರ ಆಸ್ತಿ ಮೌಲ್ಯವಿದೆ. ಯಾವ ಯಾವ ಬ್ಯಾಂಕಿನಲ್ಲಿ ಎಷ್ಟೆಷ್ಟು ಸಾಲ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    1. ಐಡಿಬಿಐ ಬ್ಯಾಂಕ್ – 4,475 ಕೋಟಿ ರೂ.
    2. ಆಕ್ಸಿಸ್ ಟ್ರಸ್ಟಿ ಸರ್ವೀಸ್ ಲಿಮಿಟೆಡ್ – 915 ಕೋಟಿ ರೂ.
    3. ಆಕ್ಸಿಸ್ ಬ್ಯಾಂಕ್ – 315 ಕೋಟಿ ರೂ.
    4. ಆದಿತ್ಯ ಬಿರ್ಲಾ ಫೈನಾನ್ಸ್ ಲಿಮಿಟೆಡ್ – 278 ಕೋಟಿ ರೂ.
    5. ಎಸ್ ಬ್ಯಾಂಕ್- 273 ಕೋಟಿ ರೂ.
    6. ಪಿರಮಾಲ್ ಟ್ರಸ್ಟ್ ಶಿಪ್ ಸರ್ವೀಸ್ ಲಿಮಿಟೆಡ್ – 175 ಕೋಟಿ ರೂ.
    7. ಆರ್‍ಬಿಎಲ್ ಬ್ಯಾಂಕ್ – 174 ಕೋಟಿ ರೂ.
    8. ಈಸಿಎಲ್ ಫೈನಾನ್ಸ್ – 150 ಕೋಟಿ ರೂ.
    9. ಸ್ಯಾಂಡರ್ಡ್ ಚಾರ್ಟೆಡ್ ಲೋನ್ಸ್ ಮತ್ತು ಇನ್ವೆಸ್ಟ್ ಮೆಂಟ್ – 150 ಕೋಟಿ ರೂ.
    10. ಕ್ಲಿಕ್ಸ್ ಕ್ಯಾಪಿಟಲ್ -150 ಕೋಟಿ ರೂ.
    11. ಆಕ್ಸಿಸ್ ಫೈನಾನ್ಸ್ ಲಿಮಿಟೆಡ್- 125 ಕೋಟಿ
    12. ಕೋಟಕ್ ಮಹಿಂದ್ರ ಇನ್ವೆಸ್ಟ್ ಮೆಂಟ್ ಲಿಮಿಟೆಡ್ – 125 ಕೋಟಿ ರೂ.
    13. ಎಕೆ ಕ್ಯಾಪಿಟಲ್ ಫೈನಾನ್ಸ್ 121 ಕೋಟಿ ರೂ.
    14. ಎಸ್‍ಟಿಸಿಐ ಫೈನಾನ್ಸ್ – 100 ಕೋಟಿ ರೂ.
    15. ರೋಬೋ ಇಂಡಿಯಾ ಫೈನಾನ್ಸ್ ಲಿಮಿಟೆಡ್ – 80 ಕೋಟಿ
    16. ಸಪ್ರೋಜಿ ಪಲ್ಲೋಂಜಿ ಫೈನಾನ್ಸ್ ಲಿಮಿಟೆಡ್ – 80 ಕೋಟಿ ರೂ.
    17. ವಿಸ್ತ್ರ ಐಟಿಸಿಎಲ್ ಲಿಮಿಟೆಡ್ – 75 ಕೋಟಿ
    18. ಶ್ರೀರಾಮ್ ಫೈನಾನ್ಸ್ – 50 ಕೋಟಿ ರೂ.
    19. ಬಜಾಜ್ ಫೈನಾನ್ಸ್ – 45 ಕೋಟಿ

    ಹೀಗೆ ಒಟ್ಟು 24 ಬ್ಯಾಂಕ್‍ಗಳಿಂದ 8 ಸಾವಿರ ಕೋಟಿ ಸಾಲ ಮಾಡಿದ್ದರು. ಈ ಬಗ್ಗೆ ತಮ್ಮ ಆಪ್ತ ಸ್ನೇಹಿತರ ಬಳಿ ಸಿದ್ಧಾರ್ಥ್ ತಮ್ಮ ನೋವು, ಸಾಲ, ಮತ್ತು ಕಿರುಕುಳದ ಬಗ್ಗೆ ಹೇಳಿಕೊಂಡಿದ್ದರು.

    ಒಟ್ಟು 12 ಸಾವಿರ ಎಕ್ರೆ ಜಾಗದಲ್ಲಿ ಕಾಫಿ ಎಸ್ಟೇಟ್ ಹೊಂದಿದ್ದ ಸಿದ್ಧಾರ್ಥ್ ಅವರು ಒಟ್ಟು 8,200 ಕೋಟಿ ರೂ. ಆದಾಯ ಹೊಂದುವ ಮೂಲಕ 2015ರ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.

  • 2 ದಿನಗಳ ಹಿಂದೆಯಷ್ಟೇ ಪತ್ರ ಬರೆದಿದ್ದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡ್ರಾ?

    2 ದಿನಗಳ ಹಿಂದೆಯಷ್ಟೇ ಪತ್ರ ಬರೆದಿದ್ದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡ್ರಾ?

    ಬೆಂಗಳೂರು: ದಿಢೀರ್ ನಾಪತ್ತೆಯಾಗಿರುವ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರು ತಮ್ಮ ಕಂಪನಿಯ ಸಿಬ್ಬಂದಿ ಹಾಗೂ ನಿರ್ದೇಶಕರಿಗೆ ಪತ್ರವನ್ನು ಬರೆದಿದ್ದಾರೆ. ಈ ಪತ್ರ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಎರಡು ದಿನಗಳಷ್ಟೇ ಸಿದ್ಧಾರ್ಥ್ ಅವರು ಕಂಪನಿ ಸಿಬ್ಬಂದಿ ಹಾಗೂ ನಿರ್ದೇಶಕರಿಗೆ ತುಂಬಾ ನೋವಿನಿಂದ ಪತ್ರವನ್ನು ಬರೆದಿದ್ದಾರೆ.

    ಸಿದ್ಧಾರ್ಥ್ ಪತ್ರ:
    ನಾನು ಕಳೆದ 37 ವರ್ಷದಲ್ಲಿ ಕಠಿಣ ಪರಿಶ್ರಮದಿಂದ ಕೆಲಸ ಮಾಡಿದ್ದೇನೆ. ಕಾಫಿ ಡೇ ಮೂಲಕ 30 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಅಷ್ಟೇ ಅಲ್ಲದೆ ನನ್ನ ಐಟಿ ಕಂಪನಿ ಮೂಲಕ 20 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಆದರೆ ನನ್ನ ಪರಿಶ್ರಮದ ಹೊರತಾಗಿಯೂ ಆ ಎರಡೂ ಕಂಪನಿಗಳು ಲಾಭದಲ್ಲಿ ನಡೆಯಲಿಲ್ಲ. ನನಗೆ ಅನೇಕ ಕಡೆಯಿಂದ ಒತ್ತಡ ಹೆಚ್ಚಾಗಿದ್ದು, ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಬರೆದಿದ್ದಾರೆ.

    ಕಂಪನಿಯಲ್ಲಿ ಷೇರು ಹೂಡಿದ್ದ ಖಾಸಗಿ ಪಾಟ್ನರ್ ಗಳು ತಮ್ಮ ಷೇರನ್ನು ವಾಪಸ್ ಕೊಡುವಂತೆ ಒತ್ತಾಯ ಹಾಕುತ್ತಿದ್ದಾರೆ. ಸ್ನೇಹಿತರೊಬ್ಬರ ಬಳಿ ನಾನು ದೊಡ್ಡ ಮಟ್ಟದಲ್ಲಿ ಸಾಲ ಮಾಡಿದ್ದೇನೆ. ಇತರೆ ಸಾಲಗಾರರ ಒತ್ತಡದಿಂದ ಇಂದು ನನಗೆ ಈ ಪರಿಸ್ಥಿತಿ ಬಂದಿದೆ. 6 ತಿಂಗಳ ಹಿಂದೆಯಷ್ಟೇ ಅಪಾರ ಪ್ರಮಾಣದಲ್ಲಿ ಸಾಲ ಪಡೆದಿದ್ದೇನೆ. ಸಾಲಗಾರರು ತುಂಬಾ ಕಿರುಕುಳ ಕೊಡುತ್ತಿದ್ದಾರೆ.

    ಇನ್ನೊಂದೆಡೆ ಆದಾಯ ತೆರಿಗೆ ಇಲಾಖೆ ಅವರು ಕಿರುಕುಳ ನೀಡುತ್ತಿದ್ದಾರೆ. ಪತ್ರದಲ್ಲಿ ಈ ಹಿಂದಿನ ಐಟಿಯ ಡಿಜಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ. ಎರಡು ಬಾರಿ ನನ್ನ ಕಂಪನಿಯ ಷೇರುಗಳನ್ನು ಜಪ್ತಿ ಮಾಡಿದ್ದರು. ಈ ಮೂಲಕ ಮೈಂಡ್ ಟ್ರೀ ಮಾರಾಟದ ಡೀಲ್‍ಗೆ ಅಡ್ಡಿಯಾದರು. ಅದಾದ ಬಳಿಕ ಕಾಫಿ ಡೇ ಷೇರಿಗೂ ಐಟಿ ಕಣ್ಣು ಹಾಕಿತ್ತು. ನನಗೆ ಖಾಸಗಿ ಕಂಪನಿ ಕಿರುಕುಳ ನೀಡುತ್ತಿದೆ. ನಾನು ಸಾಕಷ್ಟು ಹೋರಾಟ ಮಾಡಿದೆ. ಆದರೆ ಅವರ ಕಿರುಕುಳವನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

    ನಾನು ಮೋಸ ಹೋದೆ. ನಮಗೆ ಕೆಲವರು ನಂಬಿಕೆ ದ್ರೋಹ ಮಾಡಿದ್ದಾರೆ. ನಾನು ಸಿಬ್ಬಂದಿಯ ನಂಬಿಕೆ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಷೇರುಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದ ನಾನು ಖಾಸಗಿಯಿಂದ ಸಾಲ ತೆಗೆದುಕೊಂಡಿದ್ದೆ. ನಾನು ಯಾರಿಗೂ ಮೋಸ ಮಾಡಬೇಕೆಂದು ಈ ಪತ್ರ ಬರೆಯುತ್ತಿಲ್ಲ. ಓರ್ವ ಉದ್ದಿಮೆದಾರನಾಗಿ ನಾನು ಸೋತಿದ್ದೇನೆ ಎಂದಿದ್ದಾರೆ.

    ನಾನು ನಿಮ್ಮ ಎಲ್ಲರಲ್ಲೂ ಕೇಳಿಕೊಳ್ಳುತ್ತೇನೆ, ಈ ಎಲ್ಲ ಉದ್ಯಮಗಳನ್ನು ನೀವು ಹೊಸ ಆಡಳಿತ ಮಂಡಳಿಯೊಂದಿಗೆ ಮುಂದುವರೆಸಿ. ಈಗ ಆಗಿರುವ ಎಲ್ಲ ತಪ್ಪುಗಳಿಗೂ ನಾನೇ ಹೊಣೆಯಾಗಿದ್ದು, ಪ್ರತಿಯೊಂದು ಹಣಕಾಸು ವ್ಯವಹಾರಕ್ಕೂ ನಾನೇ ಹೊಣೆ. ನನ್ನ ತಂಡ ಆಡಿಟರ್ಸ್ ಹಾಗೂ ಹಿರಿಯ ಆಡಳಿತ ಮಂಡಳಿಗೂ ಹಣಕಾಸು ವ್ಯವಹಾರಕ್ಕೂ ಸಂಬಂಧವಿಲ್ಲ ಎಂದು ಬರೆದಿದ್ದಾರೆ.

    ನನ್ನ ಉದ್ದಿಮೆಯನ್ನು ಲಾಭದಾಯಕವಾಗಿ ಮಾಡಲು ಎಲ್ಲಾ ಬಾಗಿಲುಗಳು ಮುಚ್ಚಿವೆ. ಹೀಗಾಗಿ ನಾನು ಕಂಪನಿ ನಡೆಸುವುದರಲ್ಲಿ ವಿಫಲನಾದೆ. ಇದು ನನ್ನ ಪರಿಸ್ಥಿತಿಯಾಗಿದೆ. ಕೆಲವರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ಭರವಸೆ ಇದೆ. ಎಲ್ಲರೂ ನನ್ನನ್ನು ಕ್ಷಮಿಸಿ ಬಿಡಿ ಎಂದು ಬರೆದಿದ್ದು, ಇದೀಗ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ವಿದಾಯ ಪತ್ರ ಬರೆದಿದ್ದಾರೆಯೋ ಎಂಬ ಅನುಮಾನ ಮೂಡಿದೆ.

    https://www.youtube.com/watch?v=uz6xiFzo-_Q

  • ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

    ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

    ವಿಜಯಪುರ: ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ನಡೆದಿದೆ.

    ಮೃತ ರೈತನನ್ನು 45 ವರ್ಷದ ಶಿವಯೋಗಿ ಬಿರಾದಾರ್ ಎಂದು ಗುರುತಿಸಲಾಗಿದೆ. 5.29 ಎಕರೆ ಜಮೀನು ಹೊಂದಿರುವ ಶಿವಯೋಗಿ, ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಶಿವಯೋಗಿ ಗ್ರಾಮೀಣ ಬ್ಯಾಂಕ್‍ನಲ್ಲಿ 2 ಲಕ್ಷ ಮತ್ತು 5 ಲಕ್ಷ ಕೈಸಾಲ ಮಾಡಿದ್ದರು. ಮಳೆ ಇಲ್ಲದೆ ಬೆಳೆಗಳು ಕೈಕೊಟ್ಟಿದ್ದು, ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

    ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

    ಕೋಲಾರ: ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದಲ್ಲಿ ನಡೆದಿದೆ.

    ಅರಿಕೆರೆ ಗ್ರಾಮದ ನಿವಾಸಿ 26 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡ ಯುವ ರೈತ. ಟೊಮೆಟೋ ಬೆಳೆ ಕೈಕೊಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಸುಮಾರು 10 ಲಕ್ಷ ಕೈ ಸಾಲ ಮಾಡಿ, ಜಮೀನು ಗುತ್ತಿಗೆ ಪಡೆದು ಟೊಮೆಟೋ ಬೆಳೆ ಬೆಳೆದಿದ್ದ ರಾಜೇಶ್, ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಘಟನೆ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಬೈಕ್ ಪಂಕ್ಚರ್ ಮಾಡಿ, ಮಗನ ಮದ್ವೆ ಸಾಲ ತೀರಿಸಲು ತಂದ 3 ಲಕ್ಷ ರೂ. ಎಗರಿಸಿದ್ರು

    ಬೈಕ್ ಪಂಕ್ಚರ್ ಮಾಡಿ, ಮಗನ ಮದ್ವೆ ಸಾಲ ತೀರಿಸಲು ತಂದ 3 ಲಕ್ಷ ರೂ. ಎಗರಿಸಿದ್ರು

    ಮಡಿಕೇರಿ: ಮಗನ ಸಾಲ ತೀರಿಸಲು ತನ್ನ ಪಿಂಚಣಿ ಹಣವನ್ನು ಡ್ರಾ ಮಾಡಿ ಬರುತ್ತಿದ್ದ ವೇಳೆ ಖತರ್ನಾಕ್ ಕಳ್ಳರು 3 ಲಕ್ಷ ರೂ. ಹಣವನ್ನು ಎಗರಿಸಿದ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ.

    ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮಳ್ಳುಸೋಗೆ ಶಿವಕುಮಾರ್ ನಾಯಕ್ ಹಣ ಕಳೆದು ಕೊಂಡವರಾಗಿದ್ದಾರೆ. ಕಳ್ಳರು ಹಣ ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಮಡಿಕೇರಿಯ ಉದ್ಯೋಗ ವಿನಿಮಯ ಕಚೇರಿ ನೌಕರನಾಗಿದ್ದು ಶಿವಕುಮಾರ್ ನಾಯಕ್ ಅವರು ನಾಲ್ಕು ತಿಂಗಳ ಹಿಂದೆಯಷ್ಟೇ ನಿವೃತ್ತಿ ಹೊಂದಿದ್ದರು. ಬಳಿಕ ಮಗನ ಮದುವೆ ಮಾಡಿದ್ದು, ಸಾಲ ಮಾಡಿದ್ದರು. ಈ ಸಾಲ ತೀರಿಸಲೆಂದು ಶಿವಕುಮಾರ್ ಅವರು ಕೊಡಗಿನ ಕುಶಾಲನಗರ ಎಸ್‍ಬಿಐ ಬ್ಯಾಂಕ್‍ನಿಂದ ತನ್ನ ಪಿಂಚಣಿ ಹಣವನ್ನು ಡ್ರಾ ಮಾಡಿದ್ದಾರೆ. ಈ ವೇಳೆ ಶಿವಕುಮಾರ್ ಅವರನ್ನು ಮೂವರು ಕಳ್ಳರು ಹಿಂಬಾಲಿಸಿದ್ದಾರೆ. ಅಲ್ಲದೆ ಕಳ್ಳರು ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಶಿವಕುಮಾರ್ ಅವರ ಬೈಕ್ ಟಯರ್ ಗಾಳಿ ತೆಗೆದಿದ್ದಾರೆ.

    ಇತ್ತ ಕಳ್ಳರು, ಹಣ ಡ್ರಾ ಮಾಡಿಕೊಂಡ ಬಂದ ಶಿವಕುಮಾರ್ ಅವರೊಂದಿಗೆ ನಿಮ್ಮ ಬೈಕ್ ಪಂಚರ್ ಆಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಶಿವಕುಮಾರ್ ಪಂಚರ್ ಅಂಗಡಿಗೆ ಬೈಕ್ ತಳ್ಳಿಕೊಂಡು ಬಂದಿದ್ದಾರೆ. ಇದೇ ವೇಳೆ ಪಂಚರ್ ಅಂಗಡಿಯ ಮುಂದೆ ಶಿವಕುಮಾರ್ ಗಮನವನ್ನು ಬೇರೆಡೆ ಸೆಳೆದ ಕಳ್ಳರು ಹಣ ಎಗರಿಸಿದ್ದಾರೆ.

    ಬೈಕ್ ಚೀಲದಲ್ಲಿ ಹಣ ಇಟ್ಟು ಅಂಗಡಿ ಒಳಗೆ ಹೋಗಿದ್ದ ಶಿವಕುಮಾರ್, ಹೊರಗೆ ಬರುವಷ್ಟರಲ್ಲಿ ಮೂರು ಲಕ್ಷ ಹಣ ನಾಪತ್ತೆಯಾಗಿದೆ. ಕೂಡಲೇ ಅವರು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

  • ಸತ್ತವರ ಹೆಸ್ರಲ್ಲಿ ಲಕ್ಷಾಂತರ ರೂ. ಸಾಲ ನೀಡಿ ಬ್ಯಾಂಕ್ ಮ್ಯಾನೇಜರ್ ಎಸ್ಕೇಪ್

    ಸತ್ತವರ ಹೆಸ್ರಲ್ಲಿ ಲಕ್ಷಾಂತರ ರೂ. ಸಾಲ ನೀಡಿ ಬ್ಯಾಂಕ್ ಮ್ಯಾನೇಜರ್ ಎಸ್ಕೇಪ್

    ಕೊಪ್ಪಳ: ಬ್ಯಾಂಕ್ ಅಲ್ಲಿ ಯಾವುದಾದರು ಸಾಲ ಪಡೆಯಬೇಕು ಎಂದರೆ ನೂರಾರು ಸಹಿಗಳು, ಆಧಾರ್ ಕಾರ್ಡ್, ವೋಟರ್ ಕಾರ್ಡ್, ಪ್ಯಾನ್ ಕಾರ್ಡ್, ಶ್ಯೂರಿಟಿ ಎಂದು ನೂರೆಂಟು ದಾಖಲೆಗಳನ್ನು ಕೊಟ್ಟರೂ ಒಂದು ಲಕ್ಷ ಸಾಲ ಸಿಗೋದು ಕಷ್ಟ. ಆದರೆ ಇಲ್ಲೊಬ್ಬ ಬ್ಯಾಂಕ್ ಮ್ಯಾನೇಜರ್ ಸತ್ತವರ ಹೆಸರಿನಲ್ಲಿ ಲಕ್ಷಾಂತರ ರೂ. ಸಾಲ ನೀಡಿ ಪರಾರಿಯಾಗಿದ್ದಾನೆ.

    ಇಬ್ಬರು ರೈತರ ಹೆಸರಿನಲ್ಲಿ ಬರೋಬ್ಬರಿ 15,54,000 ರೂ. ವಂಚಿಸಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ವಂಚನೆ ಪ್ರಕರಣ ಕೊಂಚ ಭಿನ್ನವಾಗಿದೆ. ಸಣ್ಣ ಲಕ್ಷಮಪ್ಪ ಈರಪ್ಪ ಎಂಬವರ ಮೇಲೆ 8 ಲಕ್ಷ ರೂ. ಸಾಲ ಪಡೆದಿದ್ದಾರೆ. ಕಾರಟಗಿ ತಾಲೂಕಿನ ಕೆರೆ ಕಾಟಾಪುರ ಗ್ರಾಮದ ಪರಸಪ್ಪ ಎಂಬವರ ಹೆಸರಲ್ಲಿ 7.54 ಸಾವಿರ ರೂ. ಸಾಲ ತೆಗೆದುಕೊಳ್ಳಲಾಗಿದೆ. ಆದರೆ ಪರಸಪ್ಪ ಸತ್ತು ವರ್ಷಗಳೇ ಕಳೆದಿವೆ. ಆದರೂ ಸಹ ಕಾರಟಗಿಯಲ್ಲಿರುವ ಆಂಧ್ರ ಬ್ಯಾಂಕ್ ಪರಸಪ್ಪನ ಹೆಸರಿನಲ್ಲಿ ಸಾಲವನ್ನು ಕೊಟ್ಟಿದೆ.

    ರಂಗಪ್ಪನ ತಂದೆ ಪರಸಪ್ಪ ಸಾವನ್ನಪ್ಪಿ ಹಲವು ವರ್ಷಗಳೇ ಕಳೆದಿವೆ. ಆದರೆ ರಂಗಪ್ಪ ಅವರಿಗೆ ತಿಳೀಯದಂತೆ 7 ಲಕ್ಷ ಹಣವನ್ನು ಸಾಲ ಕೊಟ್ಟಿದೆ. ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದ ಶಿವನಗೌಡ ಮತ್ತು ಬ್ಯಾಂಕ್ ಮ್ಯಾನೇಜರ್ ಸೇರಿಕೊಂಡು ಪರಸಪ್ಪನ ಹೊಲದ ಮೇಲೆ 7 ಲಕ್ಷ ರೂ. ಸಾಲವನ್ನು ತೆಗೆದುಕೊಂಡಿದ್ದಾರೆ. ಸಾಲ ತೆಗೆದುಕೊಂಡು ಎರಡು ವರ್ಷವಾದ್ರೂ ಇದು ರಂಗಪ್ಪ ಅವರಿಗೆ ಗೊತ್ತಿರಲಿಲ್ಲ. ಇತ್ತೀಚೆಗೆ ಹೊಲದ ಪಹಣಿ ತೆಗೆಸಿಕೊಂಡು ಹೋಗಲು ಬಂದಾಗ ತಮ್ಮ ಹೋಲದ ಮೇಲೆ ಸಾಲ ಇರುವುದು ಗೊತ್ತಾಗಿದೆ. ಪಹಣಿಯಲ್ಲಿನ ಸಾಲದ ಮಾಹಿತಿ ನೋಡಿ ಗಾಬರಿಗೊಂಡ ರಂಗಪ್ಪ ನೇರವಾಗಿ ಕಾರಟಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

    ವಂಚನೆ ಪ್ರಕರಣ ದಾಖಲಿಸಿಕೊಂಡ ಕಾರಟಗಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರಟಗಿ ತಾಲೂಕಿನ ಉಳೆನೂರು ಗ್ರಾಮದ ಶಿವನಗೌಡ ಮತ್ತು ಇನ್ನೊಬ್ಬ ಕಾರಟಗಿಯ ವಿರೇಶ್ ಮಹಾದೇವ ಎಂಬ ಇಬ್ಬರು ವಂಚಕರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

    1992ರಲ್ಲಿ ಸಣ್ಣ ಲಕ್ಷಮಪ್ಪ ಈರಪ್ಪ ಮತ್ತು 2002ರಲ್ಲಿ ಪರಸಪ್ಪ ಬಾಲಗಂಡಪ್ಪ ಎಂಬವರು ಮೃತ ಪಟ್ಟಿದ್ದಾರೆ. ಮೃತಪಟ್ಟ ಇವರಿಬ್ಬರ ಹೆಸರಿನಲ್ಲಿ ಜಮಿನಿದ್ದು ಅನಾಮಿಕ ವ್ಯಕ್ತಿಗಳಿಬ್ಬರನ್ನು ಕರೆತಂದು ಇವರೇ ಹೊಲದ ಮಾಲೀಕರು ಎಂದು ತೋರಿಸಿ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಕೈಜೋಡಿಸಿ ಅಕ್ರಮವಾಗಿ ವಾಮ ಮಾರ್ಗದ ಮುಖಾಂತರ ಸಾಲ ಪಡೆದು ವಂಚನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇತ್ತ ಬ್ಯಾಂಕ್‍ನಿಂದ ಒಂದು ರೂ. ಕೂಡ ಪಡೆಯದ ರಂಗಪ್ಪ ಮತ್ತು ಮಕ್ಕಳು ಆಂಧ್ರ ಬ್ಯಾಂಕ್ ಮಂದೆ ದಿಕ್ಕುತೋಚದೆ ನಿಂತಿದ್ದಾರೆ. ಈ ಬಗ್ಗೆ ಸ್ಥಳೀಯರು ಬ್ಯಾಂಕ್ ಮ್ಯಾನೇಜರ್ ನಡವಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಜೆಡಿಎಸ್ ಬೆಂಬಲಿಸಿದವರಿಗೆ ಡಿಸಿಸಿ ಬ್ಯಾಂಕ್‍ನಲ್ಲಿ ಸಿಗಲ್ಲ ಲೋನ್

    ಜೆಡಿಎಸ್ ಬೆಂಬಲಿಸಿದವರಿಗೆ ಡಿಸಿಸಿ ಬ್ಯಾಂಕ್‍ನಲ್ಲಿ ಸಿಗಲ್ಲ ಲೋನ್

    ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕು ಕೊಡಿಗೇನಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಆರಂಭವಾದ ನಂತರ ಹೊಸ ವರಸೆ ಶುರುವಾಗಿದೆ. ಇಲ್ಲಿನ ಜನರು ಜೆಡಿಎಸ್‍ಗೆ ವೋಟ್ ಹಾಕಿದವರಾದರೆ ಅಂತಹವರಿಗೆ ಲೋನ್ ಕ್ಯಾನ್ಸಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

    ಮಧುಗಿರಿ ತಾಲೂಕಿನ ಡಿಸಿಸಿ ಬ್ಯಾಂಕ್‍ನಲ್ಲಿ ಲೋನ್ ಬೇಕು ಎಂದು ಯಾರಾದರೂ ಹೋದರೆ ಅವರ ಪೂರ್ವಾಪರ ವಿಚಾರಿಸಲಾಗುತ್ತಿದೆಯಂತೆ. ಒಂದು ವೇಳೆ ಅವರು ಜೆಡಿಎಸ್‍ಗೆ ವೋಟ್ ಹಾಕಿದವರಾದರೆ ಅಂತಹವರಿಗೆ ಲೋನ್ ನೀಡಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

    ಕಳೆದ ವಿಧಾಸಭಾ ಚುನಾವಣೆಯಲ್ಲಿ ತುಮಕೂರಿನ ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದ ಮಾಜಿ ಶಾಸಕ ಕೆ.ಎನ್. ರಾಜಣ್ಣ ಸೋಲಿನ ಪ್ರತಿಕಾರವನ್ನು ಮತದಾರರ ಮೇಲೆ ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಮಧುಗಿರಿಯ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾಗಿರೋ ಕೆ.ಎನ್.ರಾಜಣ್ಣ ಜೆಡಿಎಸ್ ಬೆಂಬಲಿಸಿದವರಿಗೆ ಡಿಸಿಸಿ ಬ್ಯಾಂಕಲ್ಲಿ ಸಾಲ ಕೊಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

    ಮಧುಗಿರಿ ತಾಲೂಕು ಗುಟ್ಟೆ ಗ್ರಾಮದ ಮಹಿಳಾ ಸಂಘದ ಸದಸ್ಯೆಯರಿಗೆ ಕೊಡಿಗೇನಹಳ್ಳಿಯ ಡಿಸಿಸಿ ಬ್ಯಾಂಕ್‍ನಲ್ಲಿ ಸಾಲ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಬಳಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ರಾಜಣ್ಣ ಪತ್ನಿ ಶಾಂತಲಾ ಕೂಡ ನೀವು ನಮಗೆ ಬೆಂಬಲಿಸಿಲ್ಲ, ಜೆಡಿಎಸ್‍ಗೆ ಬೆಂಬಲಿಸಿದ್ದೀರಿ ಹೀಗಾಗಿ ನಿಮಗೆ ಸಾಲ ಕೊಡಲು ಸಾಧ್ಯವಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ ಎಂದು ಮಹಿಳಾ ಸಂಘದ ಸದಸ್ಯೆಯರು ಆರೋಪಿಸಿದ್ದಾರೆ.

    ಮಧುಗಿರಿ ಕ್ಷೇತ್ರದಲ್ಲಿ ಯಾರೇ ಡಿಸಿಸಿ ಬ್ಯಾಂಕಲ್ಲಿ ಲೋನ್ ಕೇಳಲು ಹೋದರೂ ಮೊದಲು ಆ ವ್ಯಕ್ತಿಯ ಫೋಟೋವನ್ನು ವಾಟ್ಸಾಪ್ ಮೂಲಕ ಅಧ್ಯಕ್ಷ ರಾಜಣ್ಣ ಅವರಿಗೆ ಕಳುಹಿಸಬೇಕಂತೆ. ಆಗ ರಾಜಣ್ಣ ಆ ವ್ಯಕ್ತಿಯ ಪೂರ್ವಾಪರ ವಿಚಾರಿಸಿ, ಯಾವ ಬೂತ್ ಹಾಗೂ ಆ ಬೂತಲ್ಲಿ ಎಷ್ಟು ಮತ ತಮಗೆ ಬಂದಿದೆ ಎಂಬುದನ್ನು ತಾಳೆ ಹಾಕುತ್ತಾರೆ. ಬಳಿಕ ಆ ಊರಿನ ತಮ್ಮ ಮುಖಂಡರ ಬಳಿ ಚರ್ಚಿಸಿ ಬಳಿಕ ಲೋನ್ ಮಂಜೂರು ಮಾಡುತ್ತಿದ್ದಾರೆ. ಜೆಡಿಎಸ್‍ಗೆ ಮತ ಹಾಕಿದ್ದಾರೆ ಅನ್ನೋದು ಗೊತ್ತಾದರೆ ಅವರಿಗೆ ಲೋನ್ ಸಿಗಲ್ಲ. ಬಳಿಕ ಮನೆಗೆ ಕರೆಯಿಸಿಕೊಂಡು ನೀವು ಜೆಡಿಎಸ್ ಪರ ಕೆಲಸ ಮಾಡಿದ್ದೀರಾ? ಲೋನ್ ಕೋಡೊಕೆ ಮಾತ್ರ ನಾವು ಬೇಕಾ ಎಂದು ಅವಮಾನಿಸುತ್ತಾರೆ ಎನ್ನುವ ದೂರುಗಳು ಕೇಳಿ ಬಂದಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮನ್ಸೂರ್ ಖಾನ್‍ಗೆ ಬ್ಯಾಂಕಿಂದ ಲೋನ್ ಕೊಡಿಸಲು ಯತ್ನ – ಎನ್‍ಒಸಿ ಕೊಡಿಸಲು ಸಚಿವರ ದುಸ್ಸಾಹಸ

    ಮನ್ಸೂರ್ ಖಾನ್‍ಗೆ ಬ್ಯಾಂಕಿಂದ ಲೋನ್ ಕೊಡಿಸಲು ಯತ್ನ – ಎನ್‍ಒಸಿ ಕೊಡಿಸಲು ಸಚಿವರ ದುಸ್ಸಾಹಸ

    – ಐಎಎಸ್ ಅಧಿಕಾರಿ ದಿಟ್ಟತನಕ್ಕೆ ಉಳೀತು ಬ್ಯಾಂಕ್ ಕಾಸು

    ಬೆಂಗಳೂರು: ಐಎಂಎ ಮಾಲೀಕ ಮನ್ಸೂರ್ ಖಾನ್ ಸಚಿವರನ್ನೇ ಮರಳು ಮಾಡಿ ಕೋಟಿ ಕೋಟಿ ಹಣ ಕೊಳ್ಳೆ ಹೊಡೆಯಲು ಮುಂದಾಗಿದ್ದನು ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಮನ್ಸೂರ್ ಖಾನ್ ತನ್ನ ಕಂಪನಿಯನ್ನು ಅಭಿವೃದ್ಧಿಗೊಳಿಸಲು 600 ಕೋಟಿ ಸಾಲ ಪಡೆಯುವುದಕ್ಕೆ ಪ್ಲಾನ್ ಮಾಡಿಕೊಂಡಿದ್ದನು. 600 ಕೋಟಿ ಸಾಲಕ್ಕಾಗಿ ಮನ್ಸೂರ್ ಬ್ಯಾಂಕ್‍ಗಳ ಮೊರೆ ಹೋಗಿದ್ದನು. ಆದರೆ ಬ್ಯಾಂಕ್ ಗಳು ಮಾತ್ರ ನಿನ್ನ ಕಂಪನಿಯ ಮೇಲೆ ನಮಗೆ ನಂಬಿಕೆ ಇಲ್ಲ. ನಿನ್ನದು ದೋಖಾ ಕಂಪನಿ ಎಂದು ಈಗಾಗಲೇ ಆರ್ ಬಿಐ ನೋಟಿಸ್ ನೀಡಿದೆ. ನಿನ್ನ ಕಂಪನಿಗೆ ಸಾಲ ಕೊಡುವುದಕ್ಕೆ ಆಗುವುದಿಲ್ಲ. ಸಾಲ ಕೊಡಬೇಕೆಂದರೆ ರಾಜ್ಯ ಸರ್ಕಾರದಿಂದ ಎನ್‍ಓಸಿ ತರಬೇಕು ಎಂದು ಹೇಳಿದ್ದರು.

    ತಕ್ಷಣ ಮನ್ಸೂರ್ ಮುಸ್ಲಿಂ ಸಮುದಾಯದ ಸಚಿವರೊಬ್ಬರ ಮುಖಾಂತರ ಫೀಲ್ಡ್ ಗೆ ಇಳಿದಿದ್ದನು. ಹೇಗಾದರೂ ಮಾಡಿ 600 ಕೋಟಿ ಪಡೆಯಲೇಬೇಕು ಎನ್ನುವುದು ಆತನ ಹೆಬ್ಬಯಕೆ ಆಗಿತ್ತು. ಮುಸ್ಲಿಂ ಸಚಿವರು ಮನ್ಸೂರ್ ಪರ ಲಾಭಿ ನಡೆಸಿ ಹಿರಿಯ ಸಚಿವರಿಗೆ ದುಂಬಾಲು ಬಿದ್ದಿದ್ದರು. ಪ್ರತಿ ಬಾರಿಯೂ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಭರವಸೆಯಲ್ಲಿದ್ದ ಸಚಿವರೇ ಮನ್ಸೂರ್ ಗೆ ಮರುಳಾಗಿದ್ದರು. ಮನ್ಸೂರ್ ಕಂಪನಿಗೆ ಸಾಲ ಕೊಡಿಸೋಣ, ಸಾಲ ಕೊಡೋದಕ್ಕೆ ಎನ್‍ಓಸಿ(ನಿರಾಕ್ಷೇಪಣಾ ಪತ್ರ) ಕೊಡಿ ಎಂದು ಐಎಎಸ್ ಅಧಿಕಾರಿಗೆ ಸೂಚನೆ ನೀಡಿದ್ದರು.


    ಸಚಿವರು ಸೂಚನೆಯನ್ನೇ ಧಿಕ್ಕರಿಸಿದ ಅಧಿಕಾರಿ, ಇಲ್ಲ ಸಾರ್ ಎನ್‍ಓಸಿ ಕೊಡುವುದಕ್ಕೆ ಆಗೋದಿಲ್ಲ. ಮನ್ಸೂರ್ ಮೇಲೆ ಸಾಕಷ್ಟು ಆರೋಪ ಇದೆ. ಈಗ ಎನ್‍ಓಸಿ ಕೊಟ್ಟರೆ ಮುಂದೆ ನಾನು ಜೈಲಿಗೆ ಹೋಗುತ್ತೇನೆ. ಏನೇ ಆದರೂ ನಾನು ಎನ್‍ಓಸಿ ನೀಡೋದಿಲ್ಲ ಎಂದು ಖಡಕ್ ಅಧಿಕಾರಿ ಧಿಕ್ಕರಿಸಿ ನಿಂತಿದ್ದರು. ಅಧಿಕಾರಿಯ ಧಿಕ್ಕಾರದಿಂದ ಬ್ಯಾಂಕ್ ಗಳ 600 ಕೋಟಿ ಹಣ ಉಳಿಯಿತು. ಇಲ್ಲದೇ ಇದ್ದಿದ್ರೆ ಈತ ಕೂಡ ಮಲ್ಯನ ರೀತಿ ಬ್ಯಾಂಕ್‍ಗೆ ದೋಖಾ ಮಾಡಿ ಎಸ್ಕೇಪ್ ಆಗುತ್ತಿದ್ದನು ಎಂಬುದಾಗಿ ತಿಳಿದುಬಂದಿದೆ.

  • 2100 ರೈತರ ಸಾಲ ತೀರಿಸಿದ  ಬಿಗ್-ಬಿ

    2100 ರೈತರ ಸಾಲ ತೀರಿಸಿದ ಬಿಗ್-ಬಿ

    ಮುಂಬೈ: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಸುಮಾರು 2,100 ಬಡ ರೈತರ ಸಾಲ ತೀರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಬಿಗ್-ಬಿ ಅಮಿತಾಬ್ ಬಚ್ಚನ್ ಬಿಹಾರ ರಾಜ್ಯದ ಸುಮಾರು 2,100 ಬಡ ರೈತರ ಸಾಲ ತೀರಿಸಿದ್ದಾರೆ. ಈ ಬಗ್ಗೆ ಅಮಿತಾಬ್ ತಮ್ಮ ಬ್ಲಾಗ್‍ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಜೊತೆಗೆ ಮಗ ಅಭಿಷೇಕ್ ಹಾಗೂ ಮಗಳು ಶ್ವೇತಾ ಜೊತೆಯಿರುವ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

    ಅಮಿತಾಬ್ ತಮ್ಮ ಬ್ಲಾಗ್‍ನಲ್ಲಿ, ಮಾತು ನೀಡಿದ್ದನ್ನು ಪೂರ್ಣಗೊಳಿಸಿದ್ದೇನೆ. ಸಾಲ ಹೊಂದಿದ 2,100 ರೈತರ ಸಾಲವನ್ನು ಮರು ಪಾವತಿಸಲಾಗಿದೆ. ಇನ್ನು ಕೆಲವರಿಗೆ ವೈಯಕ್ತಿಕವಾಗಿ ಕರೆದು ಶ್ವೇತಾ ಹಾಗೂ ಅಭಿಷೇಕ್ ಅವರ ಮೂಲಕ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

    ಈ ಹಿಂದೆ ಅಂದರೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಅಮಿತಾಬ್ ಬಚ್ಚನ್ ಉತ್ತರ ಪ್ರದೇಶದ 1,398 ರೈತರ 3.99 ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಿದ್ದರು. ಅದಕ್ಕೂ ಮೊದಲು 350 ರೈತರ ಸಾಲವನ್ನು ಪಾವತಿಸಿದ್ದರು.

    ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಅಮಿತಾಬ್ ರೈತರ ಹೊರೆ ತಗ್ಗಿಸುವ ಆಸೆಯಿಂದ ಈ ಕೆಲಸಕ್ಕೆ ಮುಂದಾದೆ. ಕೆಲಸ ಪೂರ್ಣವಾದಾಗ ತುಂಬ ನೆಮ್ಮದಿ ಸಿಕ್ಕಿತು ಎಂದು ಅವರು ಬರೆದುಕೊಂಡಿದ್ದರು.