Tag: Local Body Election

  • ತಮಿಳುನಾಡು ಸ್ಥಳೀಯ ಸಂಸ್ಥೆಗಳ ಚುನಾವಣೆ – ಡಿಎಂಕೆ ಜಯಭೇರಿ, ಬಿಜೆಪಿ 3ನೇ ಅತಿದೊಡ್ಡ ಪಕ್ಷ

    ತಮಿಳುನಾಡು ಸ್ಥಳೀಯ ಸಂಸ್ಥೆಗಳ ಚುನಾವಣೆ – ಡಿಎಂಕೆ ಜಯಭೇರಿ, ಬಿಜೆಪಿ 3ನೇ ಅತಿದೊಡ್ಡ ಪಕ್ಷ

    ಚೆನ್ನೈ: ತಮಿಳುನಾಡಿನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯಲ್ಲಿ 200 ಕ್ಷೇತ್ರಗಳ ಪೈಕಿ 146 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಆಡಳಿತ ರೂಢ ಡಿಎಂಕೆ ಮೈತ್ರಿಕೂಟ ಅಧಿಪತ್ಯ ಸಾಧಿಸಿದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದ ಬಿಜೆಪಿ ಇದೇ ಮೊದಲ ಬಾರಿಗೆ ಹಲವು ಕಡೆ ಖಾತೆಗಳನ್ನು ತೆರೆದಿದ್ದು ಮೂರನೇ ಅತಿ ದೊಡ್ಡಪಕ್ಷವಾಗಿ ಹೊರಹೊಮ್ಮಿ ಡಿಎಂಕೆ, ಎಡಿಎಂಕೆ, ಕಾಂಗ್ರೆಸ್‍ಗೆ ಶಾಕ್ ನೀಡಿದೆ.

    ಫೆಬ್ರವರಿ 19 ರಂದು ಮುನ್ಸಿಪಲ್ ಕಾರ್ಪೋರೇಷನ್ ವಾರ್ಡ್, ಪುರ ಸಭೆ ಮತ್ತು ಪಟ್ಟಣ ಪಂಚಾಯತ್‍ಗಳಿಗೆ ಚುನಾವಣೆ ನಡೆದಿತ್ತು. ಇಂದು ನಡೆದ ಮತ ಎಣಿಕೆಯಲ್ಲಿ ಮುನ್ಸಿಪಲ್ ಕಾರ್ಪೋರೇಷನ್ ವಾರ್ಡ್‍ಗಳ ಪೈಕಿ 200 ವಾರ್ಡ್‍ಗಳಲ್ಲಿ ಡಿಎಂಕೆ 146 ಸ್ಥಾನಗಳನ್ನು ಗೆದ್ದುಗೊಂಡಿದೆ. ಇನ್ನುಳಿದಂತೆ ಎಐಡಿಎಂಕೆ 15, ಕಾಂಗ್ರೆಸ್ 13, 5 ಪಕ್ಷೇತರ ಅಭ್ಯರ್ಥಿಗಳು, ಸಿಪಿಐ ಪಕ್ಷ 4, ವಿಸಿಕೆ 3, ಎಮ್‍ಡಿಎಮ್‍ಕೆ 2 ಮತ್ತು ಸಿಪಿಐ, ಐಯುಎಮ್‍ಎಲ್, ಎಎಮ್‍ಎಮ್‍ಕೆ, ಬಿಜೆಪಿ ತಲಾ 1 ಸ್ಥಾನ ಗೆದ್ದುಕೊಂಡಿದೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್‌

    ಒಟ್ಟು 138 ಮುನ್ಸಿಪಲ್ ಕಾರ್ಪೋರೇಷನ್ ವಾರ್ಡ್, 21 ಪುರ ಸಭೆ ವಾರ್ಡ್‍ಗಳು ಮತ್ತು 490 ಪಟ್ಟಣ ಪಂಚಾಯತ್‍ಗಳಿಗೆ ಚುನಾವಣೆ ನಡೆದು ಒಟ್ಟು 57,778 ಅಭ್ಯರ್ಥಿಗಳು 12,607 ಸ್ಥಾನಕ್ಕೆ ಸ್ಪರ್ಧಿಸಿದ್ದರು. ಇದನ್ನೂ ಓದಿ: ಉಕ್ರೇನ್ ತೊರೆಯಿರಿ – ವಿದ್ಯಾರ್ಥಿಗಳಿಗೆ ಭಾರತ ಸಲಹೆ

    ಯಾರಿಗೆ ಎಷ್ಟು ಸ್ಥಾನ?
    ಕಾರ್ಪೋರೇಷನ್ ವಾರ್ಡ್ ಅಭ್ಯರ್ಥಿಗಳು
    ಫಲಿತಾಂಶಗಳು: 1128/1374
    ಡಿಎಂಕೆ+ : 879
    ಎಐಎಡಿಎಂಕೆ: 140
    ಬಿಜೆಪಿ: 16
    ಇತರೆ: 93

    ಪುರಸಭೆಗಳು
    ಫಲಿತಾಂಶಗಳು: 3761/3842
    ಡಿಎಂಕೆ+ : 2519
    ಎಐಎಡಿಎಂಕೆ: 621
    ಬಿಜೆಪಿ: 56
    ಡಿಎಂಡಿಕೆ: 12
    ಇತರೆ: 553

    ಪಟ್ಟಣ ಪಂಚಾಯಿತಿಗಳು:
    ಫಲಿತಾಂಶಗಳು: 7601/7621
    ಡಿಎಂಕೆ+ : 4882
    ಎಐಎಡಿಎಂಕೆ: 1207
    ಬಿಜೆಪಿ: 230
    ಡಿಎಂಡಿಕೆ: 23
    ಇತರೆ: 1259

    ಸ್ಥಳೀಯ ಚುನಾವಣಾ ಫಲಿತಾಂಶದ ಬಗ್ಗೆ ಟ್ವಿಟ್ಟರ್ ಮೂಲಕ ಹರ್ಷವ್ಯಕ್ತ ಪಡಿಸಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ಬಿಜೆಪಿಗೆ ಇದು ಅಭೂತಪೂರ್ವ ಗೆಲುವು. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಇರುವ ಅಭಿಮಾನವನ್ನು ಇಂದು ತಮಿಳುನಾಡಿನ ಮಕ್ಕಳು ತೋರಿಸಿದ್ದಾರೆ. ಜನರ ಪ್ರೀತಿಗೆ ನಾವು ಅಭಾರಿಯಾಗಿದ್ದೇವೆ ಎಂದು ಧನ್ಯವಾದ ಹೇಳಿದ್ದಾರೆ.

  • ಮತಗಟ್ಟೆಯಲ್ಲಿ ತೊಂದರೆಯಾಗಿದ್ದಕ್ಕೆ ಕ್ಷಮೆ ಕೇಳಿದ ತಮಿಳು ನಟ ವಿಜಯ್

    ಮತಗಟ್ಟೆಯಲ್ಲಿ ತೊಂದರೆಯಾಗಿದ್ದಕ್ಕೆ ಕ್ಷಮೆ ಕೇಳಿದ ತಮಿಳು ನಟ ವಿಜಯ್

    ಚೆನ್ನೈ: ಕಾಲಿವುಡ್ ನಟ ದಳಪತಿ ವಿಜಯ್ ಇಂದು ಚೆನ್ನೈನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಚಲಾಯಿಸಿದರು.

    ಈ ವೇಳೆ ವಿಜಯ್ ನೋಡಲು ಕೆಲ ಜನರ ಗುಂಪು ಹಾಗೂ ಮಾಧ್ಯಮದವರು ನೂಕುನುಗ್ಗಲು ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆಯಾಯಿತು. ಇದನ್ನು ಗಮನಿಸಿದ ವಿಜಯ್ ಮತಗಟ್ಟೆಯಲ್ಲಿ ಆಗಿರುವ ಅನಾನುಕೂಲಕ್ಕೆ ಅಲ್ಲಿಯೇ ಕ್ಷಮೆಯಾಚಿಸಿದ್ದಾರೆ. ಇದನ್ನು ಓದಿ: ಮತ್ತೊಂದು ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಮೇಘನಾ ರಾಜ್

    ತಮಿಳುನಾಡಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಶನಿವಾರ ಮತದಾನ ಆರಂಭವಾಗಿದೆ. 10 ವರ್ಷಗಳ ನಂತರ ನಡೆಯುತ್ತಿರುವ ಈ ಚುನಾವಣೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ನಡುವಿನ ಜಿದ್ದಾಜಿದ್ದಿ ಹೋರಾಟವಾಗಿದೆ. ಆದರೆ ಬಿಜೆಪಿ ಕೂಡ ರಾಜ್ಯದಲ್ಲಿ ನೆಲೆಯೂರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದನ್ನು ಓದಿ: ಡಾ.ವಿಷ್ಣು ಪುತ್ಥಳಿ ಅನಾವರಣಕ್ಕೆ ಹಿಜಬ್ -ಕೇಸರಿ ವಿವಾದ ಅಡ್ಡಿ

    648 ನಗರ ಸ್ಥಳೀಯ ಸಂಸ್ಥೆಗಳು ಮತ್ತು 12,607 ವಾರ್ಡ್ ಸದಸ್ಯರಿಗೆ ಚುನಾವಣೆ ನಡೆಯುತ್ತಿದೆ. ಒಂಬತ್ತು ತಿಂಗಳಿನಿಂದ ಆಡಳಿತ ನಡೆಸುತ್ತಿರುವ ಡಿಎಂಕೆ ತಮ್ಮ ಉತ್ತಮ ಕೆಲಸದ ಬಗ್ಗೆ ಪ್ರಚಾರ ನಡೆಸಿದರೆ, ಎಐಎಡಿಎಂಕೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿದೆ ಎಂದು ಆರೋಪಿಸುತ್ತಾ ಪ್ರಚಾರ ನಡೆಸಿತು. ಅಲ್ಲದೇ ತಮಿಳುನಾಡಿನ ಹಲವಾರು ಭಾಗಗಳಲ್ಲಿ ಮತಗಾಗಿ ನಗದು ಮತ್ತು ಉಡುಗೊರೆಗಳ ಹಾವಳಿ ಭಾರೀ ಸದ್ದು ಮಾಡಿತ್ತು.

  • ಟೈಲ್ಸ್ ಫಿಕ್ಸ್ ಮಾಡುವ ಪುನೀತ್ 1 ಮತದಲ್ಲಿ ಪಟ್ಟಣ ಪಂಚಾಯಿತಿಗೆ ಫಿಕ್ಸ್!

    ಟೈಲ್ಸ್ ಫಿಕ್ಸ್ ಮಾಡುವ ಪುನೀತ್ 1 ಮತದಲ್ಲಿ ಪಟ್ಟಣ ಪಂಚಾಯಿತಿಗೆ ಫಿಕ್ಸ್!

    ಉಡುಪಿ: ಒಂದೊಂದು ವೋಟ್ ಕೂಡಾ ಬಹಳ ಪ್ರಾಮುಖ್ಯತೆ ಹೊಂದಿರುತ್ತದೆ ಅನ್ನೋದು ಒಂದು ವೋಟಿನಲ್ಲಿ ಗೆದ್ದವರಿಗೆ ಮತ್ತು ಒಂದು ವೋಟಲ್ಲಿ ಸೋತವರಿಗೆ ಗೊತ್ತಿರುತ್ತದೆ. ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತಿಯ ವಾರ್ಡ್ ನಂಬರ್ 4 ರಲ್ಲಿ ಒಂದು ಓಟಿನಿಂದ ಒಬ್ಬರು ಗೆದ್ದರೆ ಎದುರಾಳಿ ಒಂದು ಓಟಿನ ಅಂತರದಲ್ಲಿ ಸೋತಿದ್ದಾರೆ.

    ಸಾಲಿಗ್ರಾಮದ ವಾರ್ಡ್ ನಂಬರ್ 4 ರಲ್ಲಿ ಬಿಜೆಪಿಯಿಂದ ಈ ಹಿಂದೆ ಎರಡು ಬಾರಿ ಸ್ಪರ್ಧಿಸಿದ್ದ ಕರುಣಾಕರ್ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಎದುರಾಳಿ ಕಾಂಗ್ರೆಸ್ ನಿಂದ ಪುನೀತ್ ಪೂಜಾರಿ ಎಂಬ ಯುವಕ ಮೊದಲ ಬಾರಿ ಸ್ಪರ್ಧೆ ಮಾಡಿದ್ದರು. ಮೂರು ಮೂರು ಬಾರಿ ಮತ ಎಣಿಕೆ ಮಾಡಿದರೂ ಇವರಿಬ್ಬರ ನಡುವೆ ಮ್ಯಾಚ್ ಟೈ ಆಗಿತ್ತು.

    ಕಾಂಗ್ರೆಸ್ ನ ಪುನೀತ್ ಪೂಜಾರಿಗೆ 254 ಮತ ಹಾಗೂ ಬಿಜೆಪಿಯ ಕರುಣಾಕರ ಅವರಿಗೂ 254 ವೋಟ್ ಬಿದ್ದಿತ್ತು. ಆಗ ಚುನಾವಣೆ ಎಂಬ ಪಂದ್ಯದ ದಿಕ್ಕು ಬದಲಿಸಿದ್ದು, ಆ ಒಂದು ಅಂಚೆ ಮತ. ಸಾಲಿಗ್ರಾಮ ಪಟ್ಟಣ ಪಂಚಾಯತ್ ನ ವಾರ್ಡ್ ಸಂಖ್ಯೆ 4 ರಲ್ಲಿ ಒಬ್ಬರು ಅಂಚೆ ಮೂಲಕ ಕಾಂಗ್ರೆಸ್ ಗೆ ವೋಟ್ ಮಾಡಿದ್ದರು. ಆ ಒಂದು ಮತ ಟೈಲ್ಸ್ ಫಿಟ್ಟಿಂಗ್ ಮಾಡುವ ಪುನೀತ್ ಪೂಜಾರಿಯನ್ನು ಸಾಲಿಗ್ರಾಮ ಪಟ್ಟಣ ಪಂಚಾಯತಿಯ 16 ಬಳಗದೊಳಗೆ ಫಿಕ್ಸ್ ಮಾಡಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪುನೀತ್, ಕಾಂಗ್ರೆಸ್ ಪಕ್ಷ ಮತ್ತು ನನ್ನ ಆತ್ಮೀಯ ಸ್ನೇಹಿತರ ಹಗಲಿರುಳಿನ ಪ್ರಯತ್ನದಲ್ಲಿ ಈ ಗೆಲುವು ಸಾಧ್ಯವಾಗಿದೆ. ಬಿಜೆಪಿಯ ಕರುಣಾಕರ್ ಅವರಿಗೆ ನನಗಿಂತ ಒಂದು ಮತ ಕಡಿಮೆ ಬಂದಿದೆ. ಮುಂದಿನ 5 ವರ್ಷ ಅವರ ಅನುಭವ ಮತ್ತು ಸಹಕಾರವನ್ನು ಪಡೆದು ಕೆಲಸ ಮಾಡುತ್ತೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯಾವ ಪಕ್ಷಕ್ಕೆ ಒಟ್ಟು ಎಷ್ಟು ಸ್ಥಾನ? ಯಾವ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸ್ಥಾನ ಇಲ್ಲಿದೆ ಮಾಹಿತಿ

    ಯಾವ ಪಕ್ಷಕ್ಕೆ ಒಟ್ಟು ಎಷ್ಟು ಸ್ಥಾನ? ಯಾವ ಜಿಲ್ಲೆಯಲ್ಲಿ ಯಾರಿಗೆ ಎಷ್ಟು ಸ್ಥಾನ ಇಲ್ಲಿದೆ ಮಾಹಿತಿ

    ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ನಡೆದಿದೆ. ಕಾಂಗ್ರೆಸ್ ಒಟ್ಟು 33, ಬಿಜೆಪಿ 32, ಜೆಡಿಎಸ್ 12 ಕಡೆ ಅಧಿಕಾರ ಹಿಡಿಯಲಿದೆ. 25 ಕಡೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೂರು ಕಡೆ ಪಕ್ಷೇತರರು ಅಧಿಕಾರದ ಗದ್ದುಗೆ ಏರಲಿದ್ದಾರೆ.

    7 ನಗರಸಭೆ, 19 ಪುರಸಭೆ ಹಾಗೂ 7 ಪಟ್ಟಣ ಪಂಚಾಯತ್ ಗೆಲ್ಲುವ ಮೂಲಕ ಕಾಂಗ್ರೆಸ್ 33 ಕಡೆ ಅಧಿಕಾರ ಹಿಡಿಯಲಿದೆ. 10 ನಗರಸಭೆ, 14 ಪುರಸಭೆ, 7 ಪಟ್ಟಣ ಪಂಚಾಯಿತಿ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಗೆಲ್ಲುವುದರೊಂದಿಗೆ ಒಟ್ಟು 32 ಕಡೆ ಜಯ ಸಾಧಿಸಿದೆ. 2 ನಗರಸಭೆ, 8 ಪುರಸಭೆ ಹಾಗೂ 2 ಪಟ್ಟಣ ಪಂಚಾಯತ್ ಗಳನ್ನು ಗೆಲ್ಲುವ ಮೂಲಕ ಜೆಡಿಎಸ್ 25 ಕಡೆ ಆಡಳಿತ ನಡೆಸಲಿದೆ.

    9 ನಗರಸಭೆ, 11 ಪುರಸಭೆ, 3 ಪಟ್ಟಣ ಪಂಚಾಯ್ ಹಾಗೂ 2 ಮಹಾನಗರ ಪಾಲಿಕೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. 1 ನಗರಸಭೆ, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತ್ ನಲ್ಲಿ ಪಕ್ಷೇತರ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಸ್‍ಡಿಪಿಐ ಕಾರ್ಯಕರ್ತನ ಮುಖಕ್ಕೆ ಚಾಕುವಿನಿಂದ ಇರಿದ ಕೈ ಕಾರ್ಯಕರ್ತರು!

    ಎಸ್‍ಡಿಪಿಐ ಕಾರ್ಯಕರ್ತನ ಮುಖಕ್ಕೆ ಚಾಕುವಿನಿಂದ ಇರಿದ ಕೈ ಕಾರ್ಯಕರ್ತರು!

    ಮೈಸೂರು: ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದನೆಂದು ಆರೋಪಿಸಿ ಎಸ್‍ಡಿಪಿಐ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಇಂದು ನಡೆದಿದೆ.

    ಮೈಸೂರಿನ ಶಾಂತಿನಗರದ ರಮ್ಜಾ ಮಸೀದಿ ಬಳಿ ಈ ಘಟನೆ ನಡೆದಿದ್ದು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆಯ ಆರೋಪ ಮಾಡಲಾಗುತ್ತಿದೆ. ಘಟನೆಯಲ್ಲಿ ಓರ್ವ ಎಸ್‍ಡಿಪಿಐ ಕಾರ್ಯಕರ್ತನ ಮುಖ ರಕ್ತಸಿಕ್ತವಾಗಿದ್ದು, ಕೂಡಲೇ ಗಾಯಾಳುವನ್ನು ನಗರದ ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ನೂತನ ಪಾಲಿಕೆ ಸದಸ್ಯ ಅಯಾಜ್ ಪಾಷಾ ಬೆಂಬಲಿಗರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ ಅಭ್ಯರ್ಥಿಯ ಮೆರವಣಿಗೆ ವೇಳೆ ರಾಸಾಯನಿಕ ದಾಳಿ!

    ಕಾಂಗ್ರೆಸ್ ಅಭ್ಯರ್ಥಿಯ ಮೆರವಣಿಗೆ ವೇಳೆ ರಾಸಾಯನಿಕ ದಾಳಿ!

    ತುಮಕೂರು: ನಗರ ಸ್ಥಳೀಯ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಯ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ರಾಸಾಯನಿಕ ದಾಳಿ ನಡೆಸಿದ್ದಾರೆ.

    ತುಮಕೂರಿನ ವಾರ್ಡ್ ನಂಬರ್ 16 ರ ಬಾರ್ ಲೈನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಸದಸ್ಯ ಇನಾಯತುಲ್ಲಾ ಖಾನ್ ಮೆರವಣಿಗೆ ವೇಳೆ ಆ್ಯಸಿಡ್ ರೂಪದ ರಾಸಾಯನಿಕ ದಾಳಿ ನಡೆದಿದೆ. ಘಟನೆಯಿಂದ ಸುಮಾರು ಜನರಿಗೆ ಗಾಯಗಳಾಗಿವೆ. ಈ ಘಟನೆ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿದೆ.

    ಸುಮಾರು 30 ವರ್ಷದಿಂದ ಇಲ್ಲಿ ಕಾಂಗ್ರೆಸ್ ಗೆದ್ದಿರಲಿಲ್ಲ. ಈ ಬಾರಿ ಗೆದ್ದಿದೆ. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕರನ್ನು ಭೇಟಿಯಾಗಲು ಅವರ ಮನೆ ಬಳಿ ಹೋಗಿದ್ದೆ. ಈ ವೇಳೆ ನಮ್ಮ ಹುಡುಗರು ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ರಾಸಾಯನಿಕ ನಮ್ಮ ಹುಡುಗರ ಮೇಲೆ ಎಸೆದಿದ್ದಾರೆ. ಸುಮಾರು 30-35 ಜನರ ಮೇಲೆ ಆ್ಯಸಿಡ್ ದಾಳಿಯಾಗಿದೆ. ದಾಳಿ ಮಾಡಿದವರು ಯಾರು ಅಂತ ಗೊತ್ತಿಲ್ಲ. ಹೀಗಾಗಿ ದಯವಿಟ್ಟು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಹಿಡಿದು ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆ ನೀಡಬೇಕು ಅಂತ ಇನಾಯತುಲ್ಲಾ ಆಗ್ರಹಿಸಿದ್ದಾರೆ.

    ಮಾಜಿ ಶಾಸಕರ ಮುಂದೆ ನಾವು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದೆವು. ಸಂತೋಷದಿಂದ ಕುಣಿಯುತ್ತಾ ಇದ್ದೆವು. ಈ ವೇಳೆ ನಮ್ಮ ಮೇಲೆ ಸುರಿದಿದ್ದಾರೆ. ದಾಳಿಯಾಗುತ್ತಿದ್ದಂತೆಯೇ ನಮಗೆ ಉಸಿರು ಕಟ್ಟಿತ್ತು. ಒಟ್ಟಿನಲ್ಲಿ ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡಿದ್ದಾರೆ ಅಂತ ದಾಳಿಗೊಳಗಾದವರು ನಡೆದ ಘಟನೆಯನ್ನು ವಿವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=LOJwlQXEAds

  • ಕುಡತಿನಿಯಲ್ಲಿ ಕಾಂಗ್ರೆಸ್ ಗೆದ್ದರೂ ಬಿಜೆಪಿ ಅಭ್ಯರ್ಥಿಗೆ ಅಧಿಕಾರ!

    ಕುಡತಿನಿಯಲ್ಲಿ ಕಾಂಗ್ರೆಸ್ ಗೆದ್ದರೂ ಬಿಜೆಪಿ ಅಭ್ಯರ್ಥಿಗೆ ಅಧಿಕಾರ!

    ಬಳ್ಳಾರಿ: ಜಿಲ್ಲೆಯ ಕುಡತಿನಿ ಪಟ್ಟಣ ಪಂಚಾಯತ್ ನಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆದ್ದರೆ, ಕೊಟ್ಟೂರು ಪಟ್ಟಣ ಪಂಚಾಯಿತಿಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

    ಸಂಡೂರಿನ ತಾಲೂಕಿನ ಕುಡತಿನಿ ಪಟ್ಟಣ ಪಂಚಾಯತಿಗೆ ನಡೆದ 19 ವಾರ್ಡ್ ಗಳ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗಳಿಸಿದ್ರೆ ಬಿಜೆಪಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದ್ರೆ ಕಾಂಗ್ರೆಸ್ ಬಹುಮತ ಗಳಿಸಿದ್ರೂ ಅಧಿಕಾರದ ಗದ್ದುಗೆ ಮಾತ್ರ ಬಿಜೆಪಿಗೆ ದಕ್ಕಿದೆ.

    ಮೊದಲ ಬಾರಿಗೆ ನಡೆದ ಕುಡತಿನಿ ಪಟ್ಟಣ ಪಂಚಾಯತಿಯ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಎಸ್ ಟಿ ಪಂಗಡಕ್ಕೆ ಮೀಸಲಾದ್ರೆ, ಉಪಾಧ್ಯಕ್ಷ ಸ್ಥಾನ ಎಸ್‍ಸಿ ಮಹಿಳೆಗೆ ಮೀಸಲಾಗಿದೆ. ಕಾಂಗ್ರೆಸ್ 19 ವಾರ್ಡಗಳ ಪೈಕಿ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ರೂ ಎಸ್ ಟಿ/ ಎಸ್‍ಸಿ ಪಂಗಡದ ಅಭ್ಯರ್ಥಿಗಳು ಗೆಲುವು ಸಾಧಿಸಿಲ್ಲ. ಹೀಗಾಗಿ ಬಿಜೆಪಿಯಿಂದ ಗೆದ್ದಿರುವ ಎಸ್ ಸಿ/ ಎಸ್ ಟಿ ಪಂಗಡದ ಅಭ್ಯರ್ಥಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಲಭಿಸುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಬಹುಮತ ಗಳಿಸಿದ್ರೂ ಅಧಿಕಾರದ ಗದ್ದುಗೆ ಹಿಡಿಯಲಾಗದೇ ಕೈ ಕೈ ಹಿಸುಕಿಕೊಳ್ಳುವಂತಾಗಿದೆ.

    ಕೊಟ್ಟೂರು ಪಟ್ಟಣ ಪಂಚಾಯತಿಯ 20 ವಾರ್ಡ್ ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 9, ಬಿಜೆಪಿ 8, ಹಾಗೂ 3 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅಧಿಕಾರಕ್ಕೆ ಏರಲು 11 ಸ್ಥಾನಗಳು ಬೇಕಾದ ಹಿನ್ನೆಲೆಯಲ್ಲಿ ಪಕ್ಷೇತರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕುಡತಿನಿ ಹಾಗೂ ಕೊಟ್ಟೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಗೆದ್ದ ಅಭ್ಯರ್ಥಿಗಳು ಪಟಾಕಿ ಸಿಡಿಸಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಪ್ಪಳ, ಗಂಗಾವತಿ, ಕುಷ್ಟಗಿಯಲ್ಲಿ ಕಾಂಗ್ರೆಸ್ ಗೆಲುವು – ರಾಯರೆಡ್ಡಿಗೆ ಮತ್ತೆ ಹಿನ್ನಡೆ

    ಕೊಪ್ಪಳ, ಗಂಗಾವತಿ, ಕುಷ್ಟಗಿಯಲ್ಲಿ ಕಾಂಗ್ರೆಸ್ ಗೆಲುವು – ರಾಯರೆಡ್ಡಿಗೆ ಮತ್ತೆ ಹಿನ್ನಡೆ

    ಕೊಪ್ಪಳ: ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಪತ್ಯ ಸಾಧಿಸಿದೆ. ಒಟ್ಟು 104 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.

    ಕೊಪ್ಪಳ ನಗರಸಭೆ:

    ಕೊಪ್ಪಳ ನಗರಸಭೆಯಲ್ಲಿ 31 ಸ್ಥಾನಗಳಲ್ಲಿ 15 ಕಾಂಗ್ರೆಸ್, 10 ಬಿಜೆಪಿ, 4 ಪಕ್ಷೇತರ ಹಾಗೂ 2 ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲವು ಕಂಡಿದ್ದಾರೆ. ಮ್ಯಾಜಿಕ್ ನಂಬರ್ 16 ಆಗಿದ್ದು, ಸದ್ಯ ಕೊಪ್ಪಳ ನಗರಸಭೆ ಅತಂತ್ರವಾಗಿದೆ. ಚುನಾವಣೆಗೂ ಮುನ್ನ 4 ಜನ ಪಕ್ಷೇತರರು ಕಾಂಗ್ರೆಸ್ಸಿನಿಂದ ಬಂಡಾಯವೆದ್ದು ಸ್ಪರ್ಧೆ ಮಾಡಿದ್ದರು. ಈಗ ಅವರೆಲ್ಲರೂ ಕಾಂಗ್ರೆಸ್ ಜೊತೆ ಕೈಜೋಡಿಸುವ ನೀರಿಕ್ಷೆಯಿದೆ. ಹೀಗಾಗಿ ಕೊಪ್ಪಳ ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎನ್ನಲಾಗುತ್ತಿದೆ.

    ಗಂಗಾವತಿ ನಗರಸಭೆ:

    ಗಂಗಾವತಿಯ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಹಾಲಿ ಶಾಸಕ ಪರಣ್ಣ ಮುನವಳ್ಳಿ ಭಾರೀ ಮುಖಭಂಗ ಅನುಭವಿಸಿದ್ದಾರೆ. ಒಟ್ಟು 35 ಸ್ಥಾನಗಳ ಪೈಕಿ 17 ರಲ್ಲಿ ಕಾಂಗ್ರೆಸ್ ವಿಜಯ ಸಾಧಿಸಿದೆ. ಬಿಜೆಪಿ 14, ಜೆಡಿಎಸ್ 2 ಹಾಗೂ ಪಕ್ಷೇತರ ಅಭ್ಯರ್ಥಿ 2 ಸ್ಥಾನಗಳಲ್ಲಿ ವಿಜಯ ಸಾಧಿಸಿದ್ದಾರೆ. ಇಲ್ಲಿನ ಮ್ಯಾಜಿಕ್ ನಂಬರ್ 18 ಆಗಿದ್ದು, ಕಾಂಗ್ರೆಸ್ ಪಕ್ಷೇತರರೊಂದಿಗೆ ಕೈಜೋಡಿಸಿ ಗಂಗಾವತಿ ನಗರಸಭೆಯಲ್ಲೂ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಯಿದೆ.

    ಕುಷ್ಟಗಿ ಪುರಸಭೆ:

    ಕುಷ್ಟಗಿ ಪುರಸಭೆ ಕಾಂಗ್ರೆಸ್ ವಶವಾಗಿದ್ದು, 23 ಸ್ಥಾನಗಳಿಲ್ಲಿ ಕಾಂಗ್ರೆಸ್ 12 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನುಳಿದಂತೆ ಬಿಜೆಪಿ 8, 2 ಪಕ್ಷೇತರ ಹಾಗೂ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮ್ಯಾಜಿಕ್ ನಂಬರ್ 12 ಆಗಿದ್ದು, ಕಾಂಗ್ರೆಸ್ ಸರಳ ಬಹುಮತದೊಂದಿಗೆ ಕುಷ್ಟಗಿ ಪುರಸಭೆಯಲ್ಲಿ ಅಧಿಕಾರದ ಗುದ್ದುಗೆ ಪಡೆದಿದೆ.

    ಯಲಬುರ್ಗಾ ಪಟ್ಟಣ ಪಂಚಾಯತ್:

    ಯಲಬುರ್ಗಾ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿಗೆ ಭಾರೀ ಮುಖಭಂಗವಾಗಿದೆ. 15 ಸ್ಥಾನಗಳ ಪೈಕಿ ಕಾಂಗ್ರೆಸ್ ಕೇವಲ 3 ಸ್ಥಾನಗಳನ್ನು ಗಳಿಸಿದ್ದು, 11 ಬಿಜೆಪಿ ಹಾಗೂ 1 ಪಕ್ಷೇತರ ಅಭ್ಯರ್ಥಿ ವಿಜಯಸಾಧಿಸಿದ್ದಾರೆ. ಬಹುಮತ ಪಡೆದ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಯಚೂರು: 4 ಕಡೆ ಕಾಂಗ್ರೆಸ್ ಗೆಲುವು – 3 ರಲ್ಲಿ ಅತಂತ್ರ

    ರಾಯಚೂರು: 4 ಕಡೆ ಕಾಂಗ್ರೆಸ್ ಗೆಲುವು – 3 ರಲ್ಲಿ ಅತಂತ್ರ

    ರಾಯಚೂರು: ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಧಿಪತ್ಯ ಸಾಧಿಸಿದೆ. ಜಿಲ್ಲೆಯ ಒಟ್ಟು 7 ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ 4 ಕಡೆ ಅಧಿಕಾರವನ್ನು ಪಡೆದುಕೊಂಡಿದ್ದರೆ 3 ರಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

    ಜೆಡಿಎಸ್ ಸಚಿವ ವೆಂಕಟರಾವ್ ನಾಡಗೌಡ ಕ್ಷೇತ್ರದ ಸಿಂಧನೂರು ನಗರಸಭೆಯ ಒಟ್ಟು 31 ಸ್ಥಾನಗಳಲ್ಲಿ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಜಯಭೇರಿ ಬಾರಿಸಿದೆ. ಇನ್ನುಳಿದ 11 ಸ್ಥಾನಗಳಗೆ ಜೆಡಿಎಸ್ ತೃಪ್ತಿಪಟ್ಟಿದೆ.

    ಇದಲ್ಲದೇ ಸಿಂಧನೂರು ನಗರಸಭೆ, ಲಿಂಗಸುಗೂರು ಪುರಸಭೆ, ಮುದಗಲ್ ಪುರಸಭೆ, ಹಟ್ಟಿ ಪಟ್ಟಣ ಪಂಚಾಯಿತಿಗಳು ಕಾಂಗ್ರೆಸ್ ಪಾಲಾಗಿದೆ. ಸಿಂಧನೂರು ನಗರಸಭೆ, ಮಾನ್ವಿ ಪುರಸಭೆ, ಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಒಂದೂ ಸ್ಥಾನವನ್ನೂ ಗೆಲ್ಲದೆ ಸೊನ್ನೆ ಸಾಧನೆ ಮಾಡಿದೆ. ಉಳಿದಂತೆ ರಾಯಚೂರು ನಗರಸಭೆ, ಮಾನ್ವಿ ಪುರಸಭೆ, ದೇವದುರ್ಗದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿವೆ.

    ಒಟ್ಟು 175 ವಾರ್ಡ್ ಗಳಲ್ಲಿ ಕಾಂಗ್ರೆಸ್ 90, ಬಿಜೆಪಿ 23, ಜೆಡಿಎಸ್ 40 ಹಾಗೂ 22 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

    ಸ್ಪಷ್ಟ ಬಹುಮತ ಪಡೆದ ಕ್ಷೇತ್ರಗಳು:

    ಸಿಂಧನೂರು ನಗರಸಭೆ:
    ಸಿಂಧನೂರು ನಗರಸಭೆಯಲ್ಲಿ ಒಟ್ಟು 32 ವಾರ್ಡುಗಳ ಪೈಕಿ, ಕಾಂಗ್ರೆಸ್ 20, ಜೆಡಿಎಸ್ 11 ಹಾಗೂ ಬಿಜೆಪಿ ಶೂನ್ಯ ಸಂಪಾದಿಸಿದೆ. ಬಹುಮತ ಪಡೆದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದೆ.

    ಲಿಂಗಸುಗೂರು ಪುರಸಭೆ:
    ಲಿಂಗಸುಗೂರು ಪುರಸಭೆಯಲ್ಲಿ ಒಟ್ಟು 23 ವಾರ್ಡುಗಳ ಪೈಕಿ, ಕಾಂಗ್ರೆಸ್ 13, ಜೆಡಿಎಸ್ 4, ಬಿಜೆಪಿ 2 ಹಾಗೂ ಪಕ್ಷೇತರ ಅಭ್ಯರ್ಥಿ 4 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಬಹುಮತ ಪಡೆದ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

    ಮುದಗಲ್ ಪುರಸಭೆ:
    ಮುದಗಲ್ ಪುರಸಭೆಯಲ್ಲಿ ಒಟ್ಟು 23 ವಾರ್ಡುಗಳ ಪೈಕಿ, ಕಾಂಗ್ರೆಸ್ 15, ಜೆಡಿಎಸ್ 7 ಹಾಗೂ ಬಿಜೆಪಿ 1 ಸ್ಥಾನಗಳನ್ನು ಪಡೆದಿವೆ. ಬಹುಮತ ಪಡೆದ ಕಾಂಗ್ರೆಸ್ ಅಧಿಕಾರವನ್ನು ಏರಿದೆ.

    ಹಟ್ಟಿ ಪಟ್ಟಣ ಪಂಚಾಯಿತಿ:
    ಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 13 ವಾರ್ಡುಗಳ ಪೈಕಿ, ಕಾಂಗ್ರೆಸ್ 8, ಜೆಡಿಎಸ್ 3, ಪಕ್ಷೇತರ 2 ಅಭ್ಯರ್ಥಿಗಳು ವಿಜಯವನ್ನು ಸಾಧಿಸಿದ್ದಾರೆ. ಇಲ್ಲಿಯೂ ಸಹ ಬಿಜೆಪಿ ಶೂನ್ಯ ಸಾಧನೆಗೈದಿದೆ. ಬಹುಮತ ಪಡೆದ ಕಾಂಗ್ರೆಸ್ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

    ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಕ್ಷೇತ್ರಗಳು:

    ರಾಯಚೂರು ನಗರಸಭೆ:
    ರಾಯಚೂರು ನಗರಸಭೆಯಲ್ಲಿ ಒಟ್ಟು 35 ವಾರ್ಡುಗಳಿದ್ದು, ಬಿಜೆಪಿ 12, ಕಾಂಗ್ರೆಸ್ 11, ಜೆಡಿಎಸ್ 3 ಹಾಗೂ ಪಕ್ಷೇತರ ಅಭ್ಯರ್ಥಿಗಳು 9 ಸ್ಥಾನಗಳನ್ನು ಗಳಿಸಿದ್ದಾರೆ. ಮ್ಯಾಜಿಕ್ ಸಂಖ್ಯೆ 18 ಆಗಿದ್ದು, ಯಾವುದೇ ಪಕ್ಷಗಳು ಮ್ಯಾಜಿಕ್ ನಂಬರ್ ಪಡೆಯುವುಲ್ಲಿ ವಿಫಲವಾಗಿದೆ.

    ದೇವದುರ್ಗ ಪುರಸಭೆ:
    ದೇವದುರ್ಗ ಪುರಸಭೆಯಲ್ಲಿ ಒಟ್ಟು 23 ವಾರ್ಡುಗಳ ಪೈಕಿ, ಕಾಂಗ್ರೆಸ್ 11, ಬಿಜೆಪಿ 8, ಜೆಡಿಎಸ್ 3 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಿಸಿದ್ದಾರೆ. ಮ್ಯಾಜಿಕ್ ನಂಬರ್ 12 ಆಗಿದ್ದು, ಯಾವುದೇ ಪಕ್ಷಗಳು ಬಹುಮತ ಪಡೆದಿಲ್ಲ.

    ಮಾನ್ವಿ ಪುರಸಭೆ:
    ಮಾನ್ವಿ ಪುರಸಭೆಯಲ್ಲಿ ಒಟ್ಟು 27 ವಾರ್ಡುಗಳ ಪೈಕಿ, ಕಾಂಗ್ರೆಸ್ 13, ಜೆಡಿಎಸ್ 8, ಎಸ್ಪಿ 4, ಡಬ್ಲೂಪಿಎಲ್ 1 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನವನ್ನು ಗಳಿಸಿದ್ದಾರೆ. ಈ ಪುರಸಭೆಯಲ್ಲಿ ಬಿಜೆಪಿ ಶೂನ್ಯ ಸಾಧನೆಗೈದಿದೆ. ಮ್ಯಾಜಿಕ್ ನಂಬರ್ 14 ಆಗಿದ್ದು, ಯಾವುದೇ ಪಕ್ಷಗಳು ಬಹುಮತ ಪಡೆದಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮತ ಎಣಿಕಾ ಕೇಂದ್ರದಿಂದ ಕಿವಿಮುಚ್ಚಿಕೊಂಡು ಓಟಕ್ಕಿತ್ತ ಗೆದ್ದ ಕೈ ಸದಸ್ಯೆ! – ವಿಡಿಯೋ ನೋಡಿ

    ಮತ ಎಣಿಕಾ ಕೇಂದ್ರದಿಂದ ಕಿವಿಮುಚ್ಚಿಕೊಂಡು ಓಟಕ್ಕಿತ್ತ ಗೆದ್ದ ಕೈ ಸದಸ್ಯೆ! – ವಿಡಿಯೋ ನೋಡಿ

    ಉಡುಪಿ: ರಾಜ್ಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದ್ದು, ಉಡುಪಿಯಲ್ಲಿ ವಿಜಯದ ಪತಾಕೆ ಹಾರಿಸಿದ್ದ ಕಾಂಗ್ರೆಸ್ ಮಹಿಳಾ ಅಭ್ಯರ್ಥಿ ಕಿವಿ ಮುಚ್ಚಿಕೊಂಡು ಓಡಿದ ಘಟನೆ ನಡೆದಿದೆ.

    ಉಡುಪಿ ನಗರಸಭೆಗೆ ಆಯ್ಕೆಯಾದ ಕಾಂಗ್ರೆಸ್ ನ ಸೆಲಿನಾ ಕರ್ಕಡ ಅವರು ಗೆಲುವನ್ನು ಘೋಷಿಸುತ್ತಿದ್ದಂತೆಯೇ ಮತ ಎಣಿಕಾ ಕೇಂದ್ರದಲ್ಲಿ ಮೋದಿಗೆ ಜೈಕಾರ ಹಾಕಲಾಯಿತು. ಬಿಜೆಪಿ ಕಾರ್ಯಕರ್ತರ ಮೋದಿ ಮೋದಿ ಕೂಗಿನ ಮಧ್ಯೆಯೇ ಸಾಗುತ್ತಿದ್ದ ಸದಸ್ಯೆಗೆ ಇರಿಸುಮುರಿಸು ಉಂಟಾಗಿದ್ದು, ಹೀಗಾಗಿ ಕಿವಿ ಮುಚ್ಚಿಕೊಂಡು ಅಲ್ಲಿಂದ ಓಟಕ್ಕಿತ್ತರು. ಇದನ್ನೂ ಓದಿ: ಉಡುಪಿಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್- ಮಧ್ವರಾಜ್ ವಾರ್ಡ್ ನಲ್ಲೇ ಕಾಂಗ್ರೆಸ್ಸಿಗೆ ಸೋಲು

    ಉಡುಪಿಯ ಮೂಡುಪೆರಂಪಳ್ಳಿ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಸೆಲಿನಾ ಗೆಲುವಿನ ಬಳಿಕ ಅವರನ್ನು ಅಭಿನಂದಿಸಲು ಕಾರ್ಯಕರ್ತರ ಕೊರತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸೆಲಿನಾ ಅವರೇ ಹಾರ ಹಾಕಿಕೊಂಡು ಏಕಾಂಗಿಯಾಗಿ ತೆರಳಿದ್ದಾರೆ. ಇದನ್ನೂ ಓದಿ: ಶಾಸಕರ ಮುಂದೆ ಕಣ್ಣೀರು ಹಾಕಿದ ಜೆಡಿಎಸ್ ಕಾರ್ಯಕರ್ತ!

    ಒಟ್ಟಿನಲ್ಲಿ ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ವಿಶೇಷ ಏನೆಂದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ.

    ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸೇರಿದಂತೆ 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆದಿತ್ತು. ಶೇಕಡಾ 67.51ರಷ್ಟು ಮತದಾನವಾಗಿತ್ತು. ಒಟ್ಟು 2634 ವಾರ್ಡ್ ಗಳಲ್ಲಿ ಚುನಾವಣೆ ನಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv