Tag: Location Verification

  • ಕೊಡಗಿನಲ್ಲಿ ಮಿನಿ ಏರ್‌ಪೋರ್ಟ್‌ಗೆ  ಸರ್ಕಾರ ಚಿಂತನೆ – ಸ್ಥಳ ಪರಿಶೀಲನೆ

    ಕೊಡಗಿನಲ್ಲಿ ಮಿನಿ ಏರ್‌ಪೋರ್ಟ್‌ಗೆ  ಸರ್ಕಾರ ಚಿಂತನೆ – ಸ್ಥಳ ಪರಿಶೀಲನೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿಲು ರಾಜ್ಯ ಸರ್ಕಾರ ಮಿನಿ ವಿಮಾನ ನಿಲ್ದಾಣ ಅಥವಾ ಹೆಲಿಪೋರ್ಟ್ ನಿರ್ಮಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೊಡಗಿನ ಸ್ಥಳವನ್ನು ಗುರುತು ಮಾಡಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಪರಿಶೀಲನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆ ಸ್ಥಳದಲ್ಲೇ ಮಿನಿ ವಿಮಾನ ನಿಲ್ದಾಣ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತಷ್ಟು ಚೇತರಿಕೆ ಕಾಣುವ ಎಲ್ಲಾ ಅಂಶಗಳು ಕಂಡು ಬರುತ್ತಿದೆ.

    ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸೈನಿಕ ಶಾಲೆಯ ಪಕ್ಕದಲ್ಲಿರುವ 49.5 ಎಕರೆ ಕೃಷಿ ಇಲಾಖೆಯ ಜಾಗದಲ್ಲಿ ಮಿನಿ ವಿಮಾನ ನಿಲ್ದಾಣ ಅಥವಾ ಹೆಲಿಪೋರ್ಟ್ ನಿರ್ಮಿಸಲಾಗುವುದು ಎಂದು ಕೆಲವು ದಿನಗಳ ಹಿಂದೆ ಪ್ರಸ್ತಾಪಿಸಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಅಧಿಕಾರಿಗಳು ಮತ್ತು ತಾಂತ್ರಿಕ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ(ಕೆಎಸ್‌ಐಐಡಿಸಿ) ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಎಂಆರ್ ರವಿ, ಡಿ.ಎಂ. ಪೂರ್ವಿಮಠ್(ವಿಎಸ್‌ಎಂ), ಕೆಎಸ್‌ಐಐಡಿಸಿ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ್, ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪ್ರಾಜೆಕ್ಟ್ ತಾಂತ್ರಿಕ ಸಲಹೆಗಾರ ಬ್ರಿಗ್ ಹೀಗೆ ಮತ್ತಿತರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟದಲ್ಲಿದ್ದಿದ್ದರೆ ನಿಮ್ಮ ಸಂತೋಷದಲ್ಲಿ ನಾನೂ ಭಾಗಿಯಾಗ್ತಿದ್ದೆ: ಮೋದಿ

    ಪರಿಶೀಲನೆ ನಡೆಸಿರುವ ಭೂಮಿ ಚಿಕ್ಕತ್ತೂರು ಗ್ರಾಮದಲ್ಲಿದ್ದು, 20 ಆಸನಗಳ ವಿಮಾನಗಳು ಇಳಿಯಬಹುದಾದ ಮಿನಿ ವಿಮಾನ ನಿಲ್ದಾಣ ಅಥವಾ ಮೈಸೂರು, ಹಂಪಿ ಹಾಗೂ ಚಿಕ್ಕಮಗಳೂರಿನ ಯೋಜಿತ ಹೆಲಿ-ಪೋರ್ಟ್‌ಗಳನ್ನು ಸಂಪರ್ಕಿಸುವ ಹೆಲಿ-ಪೋರ್ಟ್ ಅನ್ನು ನಿರ್ಮಿಸಲು ಯೋಜಿಸಲಾಗಿದೆ. ಈ ಎರಡೂ ಯೋಜನೆಗಳು ಕೊಡಗು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲಿವೆ.

    ಭಾರತದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಸರ್ಕ್ಯೂಟ್ ಪ್ರವಾಸಕ್ಕೆ ಬರುವ ವಿದೇಶಿ ಪ್ರವಾಸಿಗರನ್ನು ಒಳಗೊಂಡಿರುತ್ತದೆ ಅಲ್ಲದೆ ಕೆಎಸ್‌ಐಐಡಿಸಿ ಕರ್ನಾಟಕದಾದ್ಯಂತ ಏರ್‌ಸ್ಟ್ರಿಪ್‌ಗಳ ಅಭಿವೃದ್ಧಿಗೆ ನೋಡಲ್ ಏಜೆನ್ಸಿಯಾಗಿದೆ. 950 ಮೀಟರ್ ಅಥವಾ 1.5 ಕಿಮೀ ಪಟ್ಟಿಯು ಏರ್‌ಸ್ಟ್ರಿಪ್, ಭದ್ರತಾ ಪೋಸ್ಟ್ನೊಂದಿಗೆ ಟರ್ಮಿನಲ್, ಫೆನ್ಸಿಂಗ್ ಮತ್ತು ಸ್ಥಳೀಯ ಪೋಲೀಸ್‌ನಿಂದ ಭದ್ರತೆಯಂತಹ ಮೂಲಭೂತ ಕನಿಷ್ಠ ಸೌಲಭ್ಯಗಳನ್ನು ಹೊಂದಿರುತ್ತದೆ. ಇದೀಗ ವಿಮಾನ ಸಂಪರ್ಕವನ್ನು ಖಾತ್ರಿಪಡಿಸಿದರೆ, ಪ್ರತಿ ವಾರಾಂತ್ಯದಲ್ಲಿ 20,000 ರಿಂದ 50,000 ಪ್ರವಾಸಿಗರಿಗೆ ಅವಕಾಶವಿರುತ್ತದೆ. ಇದನ್ನೂ ಓದಿ: ರಾಜ್ಯದಲ್ಲೂ ಶುರುವಾಯ್ತು ಡೀಸೆಲ್‌ ಅಭಾವ – ಬಂಕ್‌ಗಳಲ್ಲಿ ನೋ ಸ್ಟಾಕ್ ಬೋರ್ಡ್

    ಕೊಡಗಿನಲ್ಲಿ ಪೂರ್ಣ ಪ್ರಮಾಣದ ಏರ್‌ಸ್ಟ್ರಿಪ್ ಅಥವಾ ಹೆಲಿ-ಪೋರ್ಟ್ ಅನ್ನು ಅಭಿವೃದ್ಧಿಪಡಿಸಲು 120 ಕೋಟಿ ರೂ. ಅಗತ್ಯವಿದೆ ಎಂದು ಡಾ. ರವಿ ತಿಳಿಸಿದ್ದಾರೆ. ಭೂಮಿಯನ್ನು ಸಮತಟ್ಟು ಮಾಡಲು ಮುಂದಿನ ತಿಂಗಳುಗಳಲ್ಲಿ ಹಾರಂಗಿ ಅಣೆಕಟ್ಟಿನಿಂದ ತೆಗೆಯಲಾಗುವ ಹೂಳನ್ನು ಏರ್‌ಸ್ಟ್ರಿಪ್‌ನಲ್ಲಿ ಸುರಿಯಲಾಗುವುದು. ಇಡೀ ಪ್ರದೇಶವನ್ನು ಹೂಳು ಹಾಗೂ ಮಣ್ಣಿನಿಂದ ನೆಲಸಮಗೊಳಿಸಲಾಗುತ್ತದೆ. ಕೊಡಗಿನ ಪ್ರವಾಸೋದ್ಯಮಕ್ಕೆ ಈ ವಿಮಾನ ನಿಲ್ದಾಣ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಶಾಸಕ ರಂಜನ್ ತಂಡಕ್ಕೆ ತಿಳಿಸಿದರು.

    ಒಟ್ಟಿನಲ್ಲಿ ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣವಾದರೆ ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯುವುದರಲ್ಲಿ ಎರಡು ಮಾತಿಲ್ಲ. ಪ್ರವಾಸೋದ್ಯಮವನ್ನೇ ಅವಲಂಬಿಸಿಕೊಂಡು ಬದುಕು ನಡೆಸುತ್ತಿರುವ ಇಲ್ಲಿನ ಜನರಿಗೆ ಮತ್ತಷ್ಟು ಪ್ರಯೋಜನಕಾರಿಯಾಗಲಿದೆ ಹಾಗೂ ಇದು ಜಿಲ್ಲೆಯ ಜನರ ಆಶಯವಾಗಿದೆ.

  • ದೇಶದ ಮೊದಲ ಅಂತರಾಷ್ಟ್ರೀಯ ಯೋಗ ವಿವಿ ನಿರ್ಮಾಣಕ್ಕೆ ಕೊಪ್ಪಳದಲ್ಲಿ ಸ್ಥಳ ಪರಿಶೀಲನೆ

    ದೇಶದ ಮೊದಲ ಅಂತರಾಷ್ಟ್ರೀಯ ಯೋಗ ವಿವಿ ನಿರ್ಮಾಣಕ್ಕೆ ಕೊಪ್ಪಳದಲ್ಲಿ ಸ್ಥಳ ಪರಿಶೀಲನೆ

    ಕೊಪ್ಪಳ: ಐತಿಹಾಸಿಕ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದಲ್ಲಿ ದೇಶದ ಮೊದಲ ಅಂತರಾಷ್ಟ್ರೀಯ ಯೋಗ ವಿಶ್ವವಿದ್ಯಾನಿಲಯ ನಿರ್ಮಿಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ.

    ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ, ರಂಗಾಪುರ, ಹನುಮನಹಳ್ಳಿ, ಸಣಾಪುರ ಪ್ರದೇಶದಲ್ಲಿ ಅಧಿಕಾರಿಗಳೊಂದಿಗೆ ಆಗಮಿಸಿದ ಕೊಪ್ಪಳ ಸಂಸದ ಸಂಗಣ್ಣ ಕರಡಿ ಮತ್ತು ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಸೂಕ್ತ ಸ್ಥಳಕ್ಕಾಗಿ ಪರಿಶೀಲನೆ ನೆಡಸಿದ್ದಾರೆ. ಈಗಾಗಲೇ ಕೇಂದ್ರ ಸಚಿವರಾದ ಶ್ರೀಪಾದ ಯಸ್ಸೊ ಅವರ ಜೊತೆ ಒಂದು ಸುತ್ತಿನ ಚರ್ಚೆ ನಡೆಸಲಾಗಿದ್ದು, ಸ್ಥಳ ಪರಿಶೀಲನೆ ನಂತರ ಇನ್ನೊಂದು ಬಾರಿ ಕೇಂದ್ರ ತಂಡದ ಜೊತೆ ಆಗಮಿಸಿ ಸ್ಥಳವನ್ನು ಅಂತಿಮಗೊಳಿಸಲಾಗುತ್ತದೆ ಎನ್ನಲಾಗಿದೆ.

    ಯೋಗ ವಿವಿ ನಿರ್ಮಿಸಲು ರಾಜ್ಯವನ್ನು ಆಯ್ಕೆ ಮಾಡುವುದಕ್ಕೆ ಕಾರಣವಿದೆ. ವಿವಿ ನಿರ್ಮಾಣಕ್ಕೆ ಪರಿಶೀಲಿಸಿರುವ ಸ್ಥಳವು ವಿಶ್ವ ವಿಖ್ಯಾತ ಹಂಪಿಗೆ ಹತ್ತಿರವಿದೆ. ಇದರ ಜೊತೆಗೆ ಇಲ್ಲಿ ದಟ್ಟವಾದ ಗುಡ್ಡಗಾಡು ಪ್ರದೇಶ ಮತ್ತು ತುಂಗಭದ್ರಾ ನದಿಯೂ ಸಹ ಹರಿಯುತ್ತೆ. ಆದ್ದರಿಂದ ಯೋಗ ಮಾಡುವುದಕ್ಕೆ ಇಂತಹ ಪ್ರಕೃತಿ ಸೌಂದರ್ಯ ಇರುವಂತ ಸ್ಥಳಗಳು ಸೂಕ್ತ ಎನ್ನುವ ಕಾರಣಕ್ಕೆ ಕೊಪ್ಪಳದಲ್ಲಿ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ.

    ಇಲ್ಲಿ 340 ಎಕ್ರೆ ಸರ್ಕಾರಿ ಭೂಮಿ ಮತ್ತು 200 ಎಕ್ರೆ ಅರಣ್ಯ ಪ್ರದೇಶವಿದೆ. ಯೋಗ ವಿವಿಗೆ 200 ಎಕ್ರೆ ಪ್ರದೇಶ ಬೇಕಾಗಿದ್ದು, ಮೊದಲ ಹಂತದಲ್ಲಿ 100 ಎಕ್ರೆ ಪ್ರದೇಶವನ್ನು ಗುರುತಿಸಲು ತೀರ್ಮಾನಿಸಲಾಗಿದೆ. ಎಲ್ಲಾ ಅಂದುಕೊಂಡತೆ ಆದರೆ ಶೀಘ್ರದಲ್ಲೇ ಹನುಮ ಹುಟ್ಟಿದ ನಾಡಿನಲ್ಲಿ ದೇಶದ ಮೊದಲ ಅಂತರಾಷ್ಟ್ರೀಯ ಯೋಗ ವಿಶ್ವವಿದ್ಯಾನಿಲಯ ತಲೆ ಎತ್ತಲಿದೆ.