Tag: lock

  • ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪತ್ನಿಯ ಗುಪ್ತಾಂಗದಲ್ಲಿ ರಂಧ್ರ ಮಾಡಿ ಬೀಗ ಜಡಿದು ವಿಕೃತಿ ಮೆರೆದ ಪತಿ!

    ಪುಣೆ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಗುಪ್ತಾಂಗವನ್ನು ಡ್ರಿಲ್‌ ಮಾಡಿ ಬಳಿಕ ಬೀಗ ಹಾಕಿದ ವಿಚಿತ್ರ ಪ್ರಸಂಗವೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಅಚ್ಚರಿ ಎನಿಸಿದರೂ ಸತ್ಯವಾಗಿರುವ ಈ ಘಟನೆ ಮಹಾರಾಷ್ಟ್ರದ (Maharastra) ಪಿಂಪ್ರಿ ಚಿಂಚ್ವಾಡದಲ್ಲಿ ನಡೆದಿದೆ. ವ್ಯಕ್ತಿಯನ್ನು ಉಪೇಂದ್ರ ಹುಡಕೆ ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈತ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಮನೆಯಲ್ಲಿಯೇ ಇರುತ್ತಿದ್ದಳು. ಸದ್ಯ ಪ್ರಕರಣ ಸಂಬಂಧ ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

    ಪತ್ನಿಗೆ ಬೇರೊಬ್ಬನ ಜೊತೆ ಸಂಬಂಧ ಇರುವ ಬಗ್ಗೆ ಉಪೇಂದ್ರ ಅನುಮಾನಗೊಂಡಿದ್ದನು. ಹೀಗಾಗಿ ಮೇ 11 ರಂದು ಕಂಠಪೂರ್ತಿ ಕುಡಿದು ಬಂದಿದ್ದ ಉಪೇಂದ್ರ, ಪತ್ನಿಗೆ ಮನಬಂದಂತೆ ಥಳಿಸಿ, ಒದ್ದಿದ್ದಾನೆ. ಬಳಿಕ ಆಕೆಯನ್ನು ಚೂಡಿದಾರದ ಶಾಲಿನಿಂದ ಕಟ್ಟಿಹಾಕಿ ಹೇಯ ಕೃತ್ಯ ಎಸಗಿದ್ದಾನೆ.

    ಹರಿತವಾದ ಬ್ಲೇಡ್‌ನಿಂದ ಗುಪ್ತಾಂಗದ ಎರಡೂ ಕಡೆ ರಂಧ್ರಗಳನ್ನು ಮಾಡಿದ್ದಾನೆ. ಕಬ್ಬಿಣದ ಸ್ಕ್ರೂಗಳನ್ನು ಹಾಕಿ ನಂತರ ಆಕೆಯ ಜನನಾಂಗದ ಪ್ರದೇಶಕ್ಕೆ ಬೀಗ ಹಾಕಿದ್ದಾನೆ. ಇತ್ತ ಪತಿಯ ನೀಚ ಕೃತ್ಯದಿಂದ ನೋವು ತಾಳಲಾರದೆ 28 ವರ್ಷದ ಪತ್ನಿ ಜೋರಾಗಿ ಕಿರುಚಾಡಿದ್ದಾಳೆ. ಆದರೂ ಪತಿ ಆಕೆಯ ಮೇಲೆ ಕಿಂಚಿತ್ತೂ ಅನುಕಂಪ ತೋರಿಸಲಿಲ್ಲ. ಇದನ್ನೂ ಓದಿ: ಅಕ್ರಮ ಮರಳು ಅಡ್ಡಾದ ಮೇಲೆ ಅಧಿಕಾರಿಗಳ ದಾಳಿ – 1.58 ಕೋಟಿ ರೂ. ಮೌಲ್ಯದ ಮರಳು ಜಪ್ತಿ

    ಮಹಿಳೆಯ ಕಿರುಚಾಟ ಕೇಳಿಸಿಕೊಂಡ ಅಕ್ಕಪಕ್ಕದ ನಿವಾಸಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದ ಒದ್ದಾಡುತ್ತಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಅಲ್ಲದೇ ಕೂಡಲೇ ಆಕೆಯನ್ನು ಹತ್ತಿರದಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ವೈದ್ಯರು ತುರ್ತು ಸರ್ಜರಿ ಮೂಲಕ ಸ್ಕ್ರೂ ಹಾಗೂ ಲಾಕ್‌ ಅನ್ನು ತೆಗೆಯುವಲ್ಲಿ ಯಶಸ್ವಿಯಾದರು.

    ಪ್ರಕರಣ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

  • ಸಿಬ್ಬಂದಿ ನಿರ್ಲಕ್ಷ್ಯ – 18 ಗಂಟೆಗಳ ಕಾಲ 7 ವರ್ಷದ ಬಾಲಕಿ ಕ್ಲಾಸ್‍ರೂಂನಲ್ಲೇ ಲಾಕ್

    ಸಿಬ್ಬಂದಿ ನಿರ್ಲಕ್ಷ್ಯ – 18 ಗಂಟೆಗಳ ಕಾಲ 7 ವರ್ಷದ ಬಾಲಕಿ ಕ್ಲಾಸ್‍ರೂಂನಲ್ಲೇ ಲಾಕ್

    ಲಕ್ನೋ: ಯಾವುದಾದರೂ ಮಕ್ಕಳನ್ನು ಬಿಟ್ಟು ಹೋಗಿದ್ದೇನೆಯೇ ಎಂದು ಪರಿಶೀಲನೆ ನಡೆಸದೇ 1ನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಯ ತರಗತಿಯೊಳಗೆ 18 ಗಂಟೆಗಳ ಕಾಲ ಸಿಬ್ಬಂದಿ ಲಾಕ್ ಮಾಡಿ ಮನೆಗೆ ಹೋಗಿರುವ ಘಟನೆ ಉತ್ತರಪ್ರದೇಶದ (UttarPradesh) ಸಂಭಾಲ್‍ನಲ್ಲಿ (Sambhal) ನಡೆದಿದೆ.

    ಬುಧವಾರ ಬೆಳಗ್ಗೆ ಶಾಲೆ ತೆರೆದಾಗ ಘಟನೆ ಬೆಳಕಿಗೆ ಬಂದಿದ್ದು, ಗುನ್ನೌರ್ ತಾಹಸಿಲ್‍ (Gunnaur tehsil) ಪ್ರಾಥಮಿಕ ಶಾಲೆಯ 1 ನೇ ತರಗತಿಯಲ್ಲಿ ಓದುತ್ತಿದ್ದ 7 ವರ್ಷದ ಬಾಲಕಿ ಶಾಲಾ ಅವಧಿ ಮುಗಿದ ಬಳಿಕ ತರಗತಿಯ ಒಳಗೆಯೇ ಇದ್ದಳು. ಆದರೆ ಇಂದು ಬೆಳಗ್ಗೆ ಶಾಲೆ ತೆರೆದಾಗ ಆಕೆ ತರಗತಿಯಲ್ಲಿ ಪತ್ತೆಯಾಗಿದ್ದಾಳೆ ಮತ್ತು ಆರೋಗ್ಯವಾಗಿದ್ದಾಳೆ ಎಂದು ಶಿಕ್ಷಣಾಧಿಕಾರಿ ಪೋಪ್ ಸಿಂಗ್ (Block Education Officer Pope Singh) ತಿಳಿಸಿದ್ದಾರೆ. ಇದನ್ನೂ ಓದಿ: SDPI ಕಚೇರಿಯ ಬಾಗಿಲು ಧ್ವಂಸ ಮಾಡಿ ನುಗ್ಗಿದ ಎನ್‍ಐಎ ಅಧಿಕಾರಿಗಳು

    ಮಂಗಳವಾರ ಶಾಲೆ ಮುಗಿದ ಬಳಿಕ ಮನೆಗೆ ಬಾಲಕಿ ಹಿಂತಿರುಗದೇ ಇದ್ದಾಗ, ಆಕೆಯ ಅಜ್ಜಿ ಶಾಲೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲಿ ಯಾವುದೇ ಮಕ್ಕಳಿಲ್ಲ ಎಂದು ಸಿಬ್ಬಂದಿ ಹೇಳಿದಾ ಆಕೆಯ ಚಿಕ್ಕಪ್ಪನಿಗೆ ವಿಷಯ ಮುಟ್ಟಿಸಿದ್ದಾರೆ. ನಂತರ ಮನೆಯವರೆಲ್ಲರೂ ಅರಣ್ಯ ಪ್ರದೇಶದಲ್ಲೆಡೆ ಹುಡುಕಾಟ ನಡೆಸಿದರೂ ಎಲ್ಲಿಯೂ ಬಾಲಕಿ ಪತ್ತೆಯಾಗಲಿಲ್ಲ. ಆದರೆ ಬುಧವಾರ ಬೆಳಗ್ಗೆ 8 ಗಂಟೆಗೆ ಶಾಲೆ ತೆರೆದಾಗ ಬಾಲಕಿ ರಾತ್ರಿಯಿಡೀ ಶಾಲಾ ಕೊಠಡಿಯಲ್ಲಿ ಬೀಗ ಹಾಕಿದ್ದರಿಂದ ತರಗತಿಯಲ್ಲಿಯೇ ಇದ್ದ ವಿಚಾರ ಬೆಳಕಿಗೆ ಬಂದಿದೆ.

    ಶಾಲಾ ಅವಧಿ ಮುಗಿದರೂ ಶಿಕ್ಷಕರು ಹಾಗೂ ಇತರೆ ಸಿಬ್ಬಂದಿ ಕೊಠಡಿಗಳನ್ನು ಪರಿಶೀಲಿಸಿಲ್ಲ ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಸಿಂಗ್ ತಿಳಿಸಿದ್ದಾರೆ. ಇದು ನಿರ್ಲಕ್ಷ್ಯದ ಪ್ರಕರಣವಾಗಿದ್ದು, ಎಲ್ಲಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀ ಮಲೆಮಹದೇಶ್ವರ ಸ್ವಾಮಿ ಹೆಸರಿನ ಫೇಸ್‍ಬುಕ್ ಪೇಜ್ ಹ್ಯಾಕ್ – ಅಶ್ಲೀಲ ವೀಡಿಯೋ ಅಪ್ಲೋಡ್

    Live Tv
    [brid partner=56869869 player=32851 video=960834 autoplay=true]

  • ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!

    ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!

    ಲಕ್ನೋ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರೊಬ್ಬರು 400 ಕೆಜಿಯ ಬೀಗವನ್ನು ದೇಣಿಗೆಯಾಗಿ ಕೊಡಲು ಮುಂದಾಗಿದ್ದಾರೆ.

    ಅಲಿಗಢ ಜಿಲ್ಲೆಯ ಕಮ್ಮಾರರೊಬ್ಬರು ಬರೋಬ್ಬರಿ 400 ಕೇಜಿ ತೂಕದ ಬೀಗವನ್ನು ದೇಣಿಗೆಯಾಗಿ ನೀಡಲು ಸಿದ್ಧತೆ ನಡೆಸಿದ್ದಾರೆ. ಸತ್ಯಪ್ರಕಾಶ್ ಶರ್ಮಾ ಮತ್ತು ಅವರ ಪತ್ನಿ ಕಳೆದ 6 ತಿಂಗಳಿಂದ ಈ ಬೀಗ ತಯಾರಿಕೆ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಹಿತ್ತಾಳೆಯಿಂದ ತಯಾರಾಗುತ್ತಿರುವ ಬೀಗಕ್ಕೆ ಮೇಲ್ಮೈಗೆ ಸ್ಟೀಲ್ ಲೇಪ ಮಾಡಲಾಗಿದೆ. ಇದನ್ನೂ ಓದಿ: ಸ್ಲಂ ಬೋರ್ಡ್‍ನಿಂದ ಕೈಗೆತ್ತಿಕೊಂಡಿರುವ 50 ಮನೆಗಳನ್ನು ಜ.30 ರೊಳಗೆ ಪೂರ್ಣಗೊಳಿಸಬೇಕು: ಗೋಪಾಲಯ್ಯ

    10 ಅಡಿ ಎತ್ತರ ಹಾಗೂ ನಾಲ್ಕೂವರೆ ಅಡಿ ಅಗಲದ ಕೀ ಇದಾಗಿದೆ. ಕೀ 30 ಕೆಜಿ ತೂಕವಿದೆ. 2,00,000 ರೂಪಾಯಿ ವೆಚ್ಚದ ಈ ಬೀಗದ ಮೇಲೆ ಭಗವಾನ್ ರಾಮನ ಚಿತ್ರವನ್ನು ಕೆತ್ತಲಾಗಿದೆ. ಇದನ್ನು ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮಮಂದಿರಕ್ಕೆ ಈ ಬೀಗವನ್ನು ಸಮರ್ಪಿಸಲಾಗುವುದು. ಹಿತ್ತಾಳೆ ಕೆಲಸ ಮುಗಿದ ನಂತರ ರಾಮಮಂದಿರಕ್ಕೆ ಬೀಗವನ್ನು ಕಳುಹಿಸಲಾಗುವುದು. ಈ ಕಲೆಯನ್ನು ಉತ್ತೇಜಿಸಲು ಸರ್ಕಾರದ ಬೆಂಬಲ ಅಗತ್ಯವಿದೆ. ಬಡ್ಡಿಗೆ ಹಣ ಪಡೆದು ಈ ಬೀಗದ ಕೆಲಸ ಮಾಡುತ್ತಿದ್ದೇನೆ ಎಂದು ಸತ್ಯಪ್ರಕಾಶ್ ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

    ಅವರ ಪತ್ನಿ ರುಕ್ಮಣಿ ಶರ್ಮಾ ಮಾತನಾಡಿ, ಸತ್ಯಪ್ರಕಾಶ್ ಬೀಗ ಹಾಕುವ ವ್ಯವಹಾರದಲ್ಲಿ ಸಾಕಷ್ಟು ಮೆಚ್ಚುಗೆ ಗಳಿಸಿದ್ದಾರೆ. ಮುಂದಿನ ಪೀಳಿಗೆಗೆ ವಿಷಯಗಳನ್ನು ಮುಂದಕ್ಕೆ ಕೊಂಡೊಯ್ಯಬೇಕು. ಮುಂಬರುವ ಗಣರಾಜ್ಯೋತ್ಸವದ ಪರೇಡ್‍ಗಾಗಿ ಹೊಸದಿಲ್ಲಿಯಲ್ಲಿ ದೈತ್ಯ ಬೀಗದ ಕೋಷ್ಟಕವನ್ನು ಮಾಡಲು ಯೋಜಿಸಿದ್ದಾರೆ. 20 ಇಂಚು ದಪ್ಪದ ಜೊತೆಗೆ 15 ಅಡಿ ಎತ್ತರ, 8 ಅಡಿ ಅಗಲದ ಬೀಗವನ್ನು ಮಾಡಲು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಸತ್ಯಪ್ರಕಾಶ್ ಅವರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೇಕಾಡ್ಸ್‌ನಲ್ಲಿ ತಮ್ಮ ಸಾಧನೆಯನ್ನು ದಾಖಲಿಸಲು ಬಯಸುತ್ತಾರೆ ಎಂದು ಪತ್ನಿಯ ಕೆಲಸದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

  • ರಾತ್ರೋರಾತ್ರಿ ವಸತಿ ಸಂಕೀರ್ಣಕ್ಕೆ ಬೀಗ – ಬೀದಿಗೆ ಬಿದ್ದ 32 ಕುಟುಂಬಗಳು

    ರಾತ್ರೋರಾತ್ರಿ ವಸತಿ ಸಂಕೀರ್ಣಕ್ಕೆ ಬೀಗ – ಬೀದಿಗೆ ಬಿದ್ದ 32 ಕುಟುಂಬಗಳು

    ತುಮಕೂರು: ಸಾಲ ಕಟ್ಟಿಲ್ಲ ಎಂಬ ಕಾರಣಕ್ಕೆ ರಾತ್ರೋ ರಾತ್ರಿ ವಸತಿ ಸಂರ್ಕೀಣದಲ್ಲಿದ್ದ 32 ಮನೆಗಳಿಗೂ ಕೆನರಾ ಬ್ಯಾಂಕ್ ಮತ್ತು ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಅಧಿಕಾರಿಗಳು ಬೀಗ ಹಾಕಿದ್ದಾರೆ.

    ಈ ಘಟನೆ ತುಮಕೂರು ನಗರದ ಬನಶಂಕರಿಯಲ್ಲಿ ನಡೆದಿದೆ. ಮಂಜುನಾಥ್ ಅನ್ನೋರಿಗೆ ಸೇರಿದ ವಸತಿ ಸಂಕೀರ್ಣ ಇದಾಗಿದ್ದು, ಮನೆಗಳಿಗೆ ಬೀಗ ಹಾಕಿದ್ದರ ಪರಿಣಾಮ ಮನೆ ಮಾಲೀಕರು ಮತ್ತು ಬಾಡಿಗೆದಾರರು ರಾತ್ರೋರಾತ್ರಿ ಬೀದಿಗೆ ಬಿದ್ದಿದ್ದಾರೆ.  ಇದನ್ನೂ ಓದಿ: ರಾತ್ರಿಯಿಂದ ಬೆಂಗಳೂರಲ್ಲಿ ಜಿಟಿಜಿಟಿ ಮಳೆ – ಮಲೆನಾಡು, ಗದಗ, ಕಲಬುರಗಿ, ಕೋಲಾರ, ಚಿತ್ರದುರ್ಗದಲ್ಲೂ ವರ್ಷಧಾರೆ

    ಸಾಲದ ಕಂತು ಕಟ್ಟಿಸಿಕೊಳ್ಳದೇ ಬ್ಯಾಂಕ್ ಅಧಿಕಾರಿಗಳು ಬೇಕಂತಾನೇ ಹೀಗೆ ಮಾಡ್ತಿದ್ದಾರೆ ಎಂದು ವಸತಿ ಸಂಕೀರ್ಣದ ಮಾಲೀಕ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಲಖೀಂಪುರದಲ್ಲಿ ನಾಲ್ವರು ರೈತರನ್ನು ಕೊಂದ ಪ್ರಕರಣ – ಇನ್ನೂ ಅರೆಸ್ಟ್ ಆಗಿಲ್ಲ ಮಂತ್ರಿ ಮಗ

  • ಎಸ್.ಆರ್.ಎಸ್.ಐ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ!

    ಎಸ್.ಆರ್.ಎಸ್.ಐ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ!

    ಹಾವೇರಿ: ಮನೆಯ ಹಿಂಬಾಗಿಲ ಬೀಗ ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಹಾವೇರಿ ನಗರದ ಹೊರವಲಯದಲ್ಲಿರುವ ಶ್ರೀಕಂಠಪ್ಪ ಬಡಾವಣೆಯಲ್ಲಿ ನಡೆದಿದೆ.

    ನಗರದ ಅಂಥೋನಿ ಡಿಸೋಜಾ ಹಾವೇರಿ ಸಶಸ್ತ್ರ ಮೀಸಲು ಪಡೆಯ ಎಸ್.ಆರ್.ಎಸ್.ಐ ಕೆಲಸ ಮಾಡುತ್ತಿದ್ದ ಪೊಲೀಸ್ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

    ಹಿಂಬಾಗಿಲ ಬೀಗ ಮುರಿದು ಟ್ರಜರಿಯಲ್ಲಿ ಎರಡು ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 20 ಸಾವಿರ ರೂಪಾಯಿ ಕಳ್ಳತನ ಮಾಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

  • ಪತಿಯನ್ನು ಮನೆಯೊಳಗಡೆ ಲಾಕ್ ಮಾಡಿ ಹೆಣ್ಣು ಮಗುವಿನೊಂದಿಗೆ ಕಟ್ಟಡದಿಂದ ಜಿಗಿದ್ಳು!

    ಪತಿಯನ್ನು ಮನೆಯೊಳಗಡೆ ಲಾಕ್ ಮಾಡಿ ಹೆಣ್ಣು ಮಗುವಿನೊಂದಿಗೆ ಕಟ್ಟಡದಿಂದ ಜಿಗಿದ್ಳು!

    ಹೈದರಾಬಾದ್: ಪತಿಯನ್ನು ಮನೆಯೊಳಗಡೆ ಲಾಕ್ ಮಾಡಿ ತನ್ನ 8 ತಿಂಗಳ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬರು ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

    ಮಹಿಳೆಯನ್ನು ಅನಿತಾ(24) ಎಂದು ಗುರುತಿಸಲಾಗಿದೆ. ಬಿಹಾರ ಮೂಲದವರಾಗಿರುವ ಅನಿತಾ, ಬಿಸ್ಮಲ್ ಸಿಂಗ್ ಎಂಬವರನ್ನು ವರಿಸಿದ್ದು, ಈ ದಂಪತಿಗೆ 8 ತಿಂಗಳ ಹೆಣ್ಣು ಮಗುವೊಂದಿದೆ. ಈ ಕುಟುಂಬ ಹೈದರಾಬಾದ್ ನ ಬಂಜಾರಾ ಹಿಲ್ಸ್ ಶ್ರೀರಾಮ್ ನಗರ ಕಾಲೋನಿಯಲ್ಲಿ ಕಳೆದ ಮೂರು ತಿಂಗಳಿನಿಂದ ವಾಸವಾಗಿದೆ.

    ಕುಟುಂಬದಲ್ಲಾಗುತ್ತಿರುವ ಪ್ರತಿನಿತ್ಯದ ಸಮಸ್ಯೆಗಳಿಂದ ಬೇಸತ್ತು ಮಹಿಳೆ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಂಪತಿ ದಿನನಿತ್ಯ ಜಗಳವಾಡುತ್ತಿದ್ದರು. ಈ ಮಧ್ಯೆ ಸಂಬಂಧಿಕರು ಇಬ್ಬರಲ್ಲಿರುವ ವೈಮನಸ್ಸನ್ನು ಸರಿದೂಗಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ.

    ಅಂತೆಯೇ ಸೋಮವಾರ ಪತಿ ಹಾಗೂ ಪತ್ನಿಯ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿದ್ದು, ಅನಿತಾ ತನ್ನ ಪತಿಯನ್ನು ಮನೆಯೊಳಗಡೆ ಲಾಕ್ ಮಾಡಿ ಮಗುವಿನೊಂದಿಗೆ ಕಟ್ಟಡದ ಎರಡನೇ ಮಹಡಿಯ ಬಾಲ್ಕನಿಯಿಂದ ಕೆಳಕ್ಕೆ ಜಿಗಿದಿದ್ದಾಳೆ. ಪರಿಣಾಮ ಅನಿತಾ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಪುಟ್ಟ ಕಂದಮ್ಮನ ಸ್ಥಿತಿ ಗಂಭೀರವಾಗಿದೆ.

    ಅನಿತಾ ಹಾರಿದ್ದನ್ನು ಕಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ದೌಡಾಯಿಸಿ, ಇಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅನಿತಾ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ಬಂಜಾರಾ ಹಿಲ್ಸ್ ಸಬ್-ಇನ್ಸ್ ಪೆಕ್ಟರ್ ಕೆ. ಉದಯ್ ಹೇಳಿದ್ದಾರೆ.

  • ಕಾಫಿನಾಡ ಏಕೈಕ ಕಾರ್ಖಾನೆಗೆ ಬೀಗ- ಕಾರ್ಮಿಕರು ಅತಂತ್ರ

    ಕಾಫಿನಾಡ ಏಕೈಕ ಕಾರ್ಖಾನೆಗೆ ಬೀಗ- ಕಾರ್ಮಿಕರು ಅತಂತ್ರ

    ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿದ್ದ ಕಾಫಿನಾಡ ಏಕೈಕ ಕಾರ್ಖಾನೆ ವಿಜ್ಞಾನ್ ಇಂಡಸ್ಟ್ರೀಸ್ ಲಿಮಿಟೆಡ್‍ಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದ್ದು, ಕಾರ್ಖಾನೆಯನ್ನು ನೆಚ್ಚಿಕೊಂಡು ನಾಲ್ಕೈದು ದಶಕಗಳಿಂದ ಬದುಕು ಕಟ್ಟಿಕೊಂಡಿದ್ದ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದೆ.

    ಪ್ರಸ್ತುತ ಕಾರ್ಖಾನೆಯಲ್ಲಿ 60 ಜನ ಪರ್ಮೆಂಟ್ ಉದ್ಯೋಗಿಗಳು, 12 ಜನ ಟ್ರೈನಿಸ್, 10 ಆಫೀಸರ್ಸ್ ಸೇರಿದಂತೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ 180 ಕಾರ್ಮಿಕರು ಕಾರ್ಖಾನೆಯಿಂದ ಬದುಕು ಕಟ್ಟಿಕೊಂಡಿದ್ದರು. ಆದರೀಗ ಕಾರ್ಖಾನೆಗೆ ಬೀಗ ಬೀಳುತ್ತೆಂದು ನೌಕರರು ಕಂಗಾಲಾಗಿದ್ದಾರೆ. ಕಂಪನಿಯನ್ನು ಅವಲಂಬಿಸಿ 20ಕ್ಕೂ ಹೆಚ್ಚು ಫೆಲ್ಟಿಂಗ್ ಅಂಗಡಿಗಳೂ ಇವೆ. ಈಗ ಕಂಪನಿಗೆ ಬೀಗ ಬೀಳುತ್ತೆಂದು ಎಲ್ಲರೂ ಅತಂತ್ರರಾಗಿದ್ದಾರೆ.

    1984ನೇ ಇಸವಿಯಿಂದಲೂ ಕೂಡ ನೌಕರರು ಈ ಕಾರ್ಖಾನೆಯನ್ನು ಬೆಮೆಲ್ ಕಂಪನಿ ಜೊತೆ ವೀಲಿನ ಮಾಡಿಕೊಳ್ಳುವಂತೆ ನೌಕರರು ಮನವಿ ಹಾಗೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ದಿ.ಸಂಸದ ಡಿ.ಸಿ.ಶ್ರೀಕಂಠಪ್ಪ ಕೂಡ ಕಾರ್ಖಾನೆಯನ್ನ ಬೆಮೆಲ್‍ಗೆ ಸೇರಿಸಲು ಸಾಕಷ್ಟು ಪ್ರಯತ್ನ ನಡೆಸಿದ್ದರು. 1992ರಿಂದ ಕಾರ್ಖಾನೆ ಸಾಕಷ್ಟು ಲಾಭ ಕಂಡಿತ್ತು. ಟ್ಯಾಕ್ಸ್ ಪೇ ಮಾಡ್ತಿದ್ದ ಸಂಸ್ಥೆ 2003ರಲ್ಲಿ ಬಿ.ಎಫ್.ಆರ್ ನಿಂದ ಹೊರಕ್ಕೆ ಬಂದಿತ್ತು. 2017-18ನೇ ಇಸವಿಯಲ್ಲೂ ಕಾರ್ಖಾನೆಗೆ ಸಾಕಷ್ಟು ಲಾಭ ಬಂದಿತ್ತು. ಈ ಕಾರ್ಖಾನೆಯನ್ನ ಸಬ್ಸಿಟ್ಯೂಟ್ ಆಗಿ ಇಟ್ಟುಕೊಂಡಿದ್ದ ಬೆಮೆಲ್‍ಗೆ ಕೇಂದ್ರ ಸರ್ಕಾರದ ನೀತಿ ಆಯೋಗ ಬೆಮೆಲ್‍ಗೆ ವಿಜ್ಞಾನ ಇಂಡಸ್ಟ್ರೀಸ್‍ನ ಮರ್ಜ್ ಮಾಡಿಕೊಳ್ಳುವಂತೆ ಸೂಚಿಸಿತ್ತು.

    ಆದರೆ ಬೆಮಲ್ ಅದಕ್ಕೆ ಒಪ್ಪಿಕೊಳ್ಳಲಿಲ್ಲ. ಈ ಕಾರ್ಖಾನೆಯನ್ನು ಮರ್ಜ್ ಮಾಡಿಕೊಳ್ಳದ ಬೆಮೆಲ್, ಪ್ರೈವೈಟೈಸ್ ಮಾಡಲು ಟೆಂಡರ್ ಕೂಡ ಕರೆದಿತ್ತು. ಆದರೆ ಟೆಂಡರ್ ಪಡೆಯಲು ಯಾರೂ ಮುಂದೆ ಬಾರದ ಹಿನ್ನೆಲೆ ಇದೀಗ ಈ ಕಾರ್ಖಾನೆಗೆ ಬೀಗ ಬೀಳುವ ಕಾಲ ಸನ್ನಿತವಾಗಿದ್ದು ನೌಕರರು ಅತಂತ್ರಕ್ಕೀಡಾಗಿದ್ದಾರೆ. ಕೂಡಲೇ ಸರ್ಕಾರ ಮಧ್ಯೆ ಪ್ರವೇಶಿಸಿ, ನೌಕರರ ನೋವನ್ನ ಅರಿತು, ಕಾರ್ಖಾನೆಯನ್ನ ಬೆಮೆಲ್‍ಗೆ ಮರ್ಜ್ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಕಾಫಿನಾಡಿಗರು ಕೂಡ ಜಿಲ್ಲೆಯಲ್ಲಿರೋ ಏಕೈಕ ಕಾರ್ಖಾನೆಯನ್ನ ಉಳಿಸಿಬೇಕೆಂದು ಆಗ್ರಹಿಸಿದ್ದಾರೆ.

  • ಲಾಕ್‍ಡೌನ್ ಸಮಯದಲ್ಲಿ ಲೀಲಾವತಿ ಆಸ್ಪತ್ರೆಗೆ ಬೀಗ – ಬಡ ಜನರಿಗೆ ಆತಂಕ

    ಲಾಕ್‍ಡೌನ್ ಸಮಯದಲ್ಲಿ ಲೀಲಾವತಿ ಆಸ್ಪತ್ರೆಗೆ ಬೀಗ – ಬಡ ಜನರಿಗೆ ಆತಂಕ

    ನೆಲಮಂಗಲ: ಕೊರೊನಾ ವೈರಸ್ ಲಾಕ್‍ಡೌನ್ ಸಮಯದ ತುರ್ತು ಪರಿಸ್ಥಿತಿಯಲ್ಲಿ ಡಾ.ಎಂ.ಲೀಲಾವತಿ ಆಸ್ಪತ್ರೆಗೆ ಬೀಗ ಹಾಕಲಾಗಿದೆ. ಬಡವರಿಗಾಗಿ ಇದ್ದ ಆಸ್ಪತ್ರೆಗೆ ವೈದ್ಯರು ಇಲ್ಲದೆ ಬೀಗ ಹಾಕಿದ್ದು ಜನರು ಆತಂಕದಲ್ಲಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಕಳೆದ 10 ವರ್ಷದ ಹಿಂದೆ ಸ್ವತಃ ಹಿರಿಯ ನಟಿ ಡಾ.ಲೀಲಾವತಿಯವರು ಆಸ್ಪತ್ರೆ ನಿರ್ಮಾಣ ಮಾಡಿ ಸರ್ಕಾರಕ್ಕೆ ಹಸ್ತಾಂತರ ಮಾಡಿದ್ದರು. ಈ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಹಳ್ಳಿಗಾಡಿನ ನೂರಾರು ಜನರು ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ವೈದ್ಯರು ಬರದೆ ಆಸ್ಪತ್ರೆಗೆ ಬೀಗ ಹಾಕಲಾಗಿದೆ ಎನ್ನಲಾಗಿದ್ದು, ನೆಲಮಂಗಲ ತಾಲೂಕು ವೈದ್ಯಾಧಿಕಾರಿ ಡಾ.ಹರೀಶ್ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.

    ಇತ್ತ ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ನಗರ ಹಾಗೂ ಪಟ್ಟಣದ ಆಸ್ಪತ್ರೆಗೆ ಬರದ ಪರಿಸ್ಥಿತಿಯಲ್ಲಿ ಜನರಿದ್ದಾರೆ. ಇಂದು ಈ ಆಸ್ಪತ್ರೆಯ ಮುಂದೆ ಜಮಾಯಿಸಿದ ನೂರಾರು ವೃದ್ಧರು ಅಧಿಕಾರಿಗಳ ನಡೆಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

    ಆಸ್ಪತ್ರೆಗೆ ಬೀಗ ನೋಡಿ ಆಘಾತಕ್ಕೆ ಒಳಗಾದ ಲೀಲಾವತಿ ಹಾಗೂ ವಿನೋದ್ ರಾಜ್, ಯಾಕೆ ನಮ್ಮ ಹಾಗೂ ನಮ್ಮ ಹಳ್ಳಿ ಜನರ ಮೇಲೆ ಈ ರೀತಿಯ ದ್ವೇಷ. ನಾಲ್ಕು ವರ್ಷದ ಹಿಂದೆ ಇದೇ ಸಮಸ್ಯೆಯಾಗಿತ್ತು, ಆಗ ನಿಮ್ಮ ಪಬ್ಲಿಕ್ ಟಿವಿಯ ವರದಿ ಬಳಿಕ ಆಗಿನ ಆರೋಗ್ಯ ಸಚಿವ ಯು.ಟಿ ಖಾದರ್ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ್ದರು. ಆದರೆ ಈಗ ಇದೆ ಸಮಸ್ಯೆ ಮತ್ತೆ ಮತ್ತೆ ಮರುಕಳಿಸಿರುವುದು ವಿಪರ್ಯಾಸವೇ ಸರಿ ಎಂದು ಹಿರಿಯ ನಟಿ ಲೀಲಾವತಿಯವರು ಕಳವಳ ವ್ಯಕ್ತಪಡಿಸಿದ್ದಾರೆ.

  • ಸರ್ಕಾರಿ ವೈದ್ಯೆಗೆ ಕೊರೊನಾ ಸೋಂಕು – ದೆಹಲಿ ಆಸ್ಪತ್ರೆ ಲಾಕ್

    ಸರ್ಕಾರಿ ವೈದ್ಯೆಗೆ ಕೊರೊನಾ ಸೋಂಕು – ದೆಹಲಿ ಆಸ್ಪತ್ರೆ ಲಾಕ್

    ನವದೆಹಲಿ: ಸರ್ಕಾರಿ ವೈದ್ಯೆಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಕಾರಣ ದೆಹಲಿ ಸರ್ಕಾರ ಸರ್ಕಾರಿ ಆಸ್ಪತ್ರೆಯೊಂದನ್ನು ಸಂಪೂರ್ಣವಾಗಿ ಲಾಕ್ ಮಾಡಿದೆ.

    ಕೊರೊನಾ ಸೋಂಕು ತಗುಲಿರುವ ವೈದ್ಯೆ ದೆಹಲಿ ರಾಜ್ಯ ಕ್ಯಾನ್ಸರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಹಾಗಾಗಿ ಆಸ್ಪತ್ರೆಯ ಕಟ್ಟಡದ ಒಪಿಡಿ, ಕಚೇರಿಗಳು ಮತ್ತು ಪ್ರಯೋಗಾಲಯಗಳನ್ನು ಮುಚ್ಚಲಾಗಿದ್ದು, ರಾಸಾಯನಿಕ ಬಳಸಿ ಸ್ವಚ್ಛಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೊತೆಗೆ ವೈದ್ಯರೊಂದಿಗೆ ಸಂಪರ್ಕದಲ್ಲಿ ಇದ್ದರವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಈ ವಿಚಾರವಾಗಿ ಮಾಹಿತಿ ನೀಡಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್, ಇತ್ತೀಚೆಗಷ್ಟೇ ಯುಕೆಯಿಂದ ವಾಪಸ್ ಆಗಿದ್ದ ವೈದ್ಯರ ಸಹೋದರ ಮತ್ತು ಅತ್ತಿಗೆಯಿಂದ ಅವರಿಗೆ ಸೋಂಕು ತಗುಲಿದೆ ಎಂದು ಶಂಕಿಸಲಾಗಿದೆ. ಅಲ್ಲದೇ ವೈದ್ಯೆ ಅಣ್ಣ ಅತ್ತಿಗೆ ಯುಕೆಯಿಂದ ವಾಪಸ್ ಬಂದ ನಂತರ ಇತ್ತೀಚೆಗೆ ಅವರ ಮನೆಗೆ ಭೇಟಿ ನೀಡಿದ್ದರು ಎಂದು ತಿಳಿದು ಬಂದಿದೆ. ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷೆ ಮಾಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ಈ ಹಿಂದೆ ಕೂಡ ದೆಹಲಿ ಸರ್ಕಾರದ ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ದಂಪತಿಗೆ ಕೊರೊನಾ ವೈರಸ್‍ಗೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಸೌದಿ ಅರೇಬಿಯಾದಿಂದ ವಾಪಸ್ ಆಗಿದ್ದ ರೋಗಿಯನ್ನು ಚಿಕಿತ್ಸೆ ಮಾಡಿದ್ದರಿಂದ ಅವರು ಸೋಂಕಿಗೆ ಒಳಗಾಗಿದ್ದಾರೆಂದು ಶಂಕಿಸಲಾಗಿತ್ತು. ಇದಾದ ನಂತರ ಮತ್ತೆ ದೆಹಲಿಯಲ್ಲಿ ಸರ್ಕಾರಿ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ.

    ಕೊರೊನಾ ವೈರಸ್ ಮಹಾಮಾರಿ ದೇಶದಲ್ಲಿ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇಲ್ಲಿವರೆಗೆ ದೆಹಲಿಯಲ್ಲಿ 121 ಕೊರೊನಾ ವೈರಸ್ ಪ್ರಕರಣಗಳು ಕಂಡು ಬಂದಿವೆ. ಕೊರೊನಾ ವೈರಸ್ ನಿಂದ ಎರಡು ಜನ ಸಾವನ್ನಪ್ಪಿದ್ದಾರೆ. ದೆಹಲಿ ಸೋಂಕಿತರಲ್ಲಿ 24 ಜನರು ಮಾರ್ಚ್ 1ರಿಂದ 15ರವರೆಗೆ ನಡೆದಿದ್ದ ತಬ್ಲಿಘಿ ಜಮಾತ್‍ನಲ್ಲಿ ಸಭೆಯಲ್ಲಿ ಭಾಗವಹಿಸಿದ್ದವರು ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 146 ಹೊಸ ಪ್ರಕರಣಗಳು ವರದಿಯಾದ ನಂತರ ಭಾರತದಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ 1,719ಕ್ಕೆ ಏರಿದೆ.

  • ಕೊರೊನಾ ಎಫೆಕ್ಟ್- ಪತ್ನಿಯನ್ನ ಬಾತ್‍ರೂಮಿನಲ್ಲಿ ಲಾಕ್ ಮಾಡಿದ ಪತಿ

    ಕೊರೊನಾ ಎಫೆಕ್ಟ್- ಪತ್ನಿಯನ್ನ ಬಾತ್‍ರೂಮಿನಲ್ಲಿ ಲಾಕ್ ಮಾಡಿದ ಪತಿ

    – ಪೊಲೀಸರಿಗೆ ಫೋನ್ ಮಾಡಿದ ಹೆಂಡ್ತಿ

    ವಿಲ್ನಿಯಸ್: ದೇಶಾದ್ಯಂತ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಇದೇ ಭಯದಿಂದ ಪತಿಯೊಬ್ಬ ತನ್ನ ಪತ್ನಿಗೆ ಕೊರೊನಾ ವೈರಸ್ ಬಂದಿರಬಹುದು ಎಂಬ ಅನುಮಾನದಿಂದ ಬಾತ್‍ರೂಮಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದ ಘಟನೆ ಯೂರೋಪ್‍ನ ಲಿಥುವೇನಿಯದಲ್ಲಿ ನಡೆದಿದೆ.

    ಪತ್ನಿ ಚೀನಾದ ಮಹಿಳೆಯೊಬ್ಬರನ್ನು ಭೇಟಿಯಾಗಿ ಇಟಲಿಯಿಂದ ಆಗಮಿಸಿದ್ದಳು. ಹೀಗಾಗಿ ಪತ್ನಿಗೆ ಕೊರೊನಾ ವೈರಸ್ ಬಂದಿರಬಹುದು ಎಂದು ಆಕೆಯನ್ನು ಬಾತ್‍ರೂಮಿನಲ್ಲಿ ಕೂಡಿ ಹಾಕಿದ್ದನು. ಇತ್ತ ಪತ್ನಿ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾಳೆ. ಮಾಹಿತಿ ತಿಳಿದು ಪೊಲೀಸರು ಅವರಿದ್ದ ಅಪಾರ್ಟ್ ಮೆಂಟ್‍ಗೆ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ.

    ಕೊರೊನಾ ವೈರಸ್ ಸೋಂಕನ್ನು ಹೇಗೆ ತಪ್ಪಿಸಬೇಕು ಎಂಬ ಬಗ್ಗೆ ವೈದ್ಯರೊಂದಿಗೆ ಫೋನ್‍ನಲ್ಲಿ ಮಾತನಾಡಿದ ನಂತರ ಪತ್ನಿಯನ್ನು ಬಾತ್‍ರೂಮಿನಲ್ಲಿ ಕೂಡಿಹಾಕಿದ್ದಾನೆ. ಬಾತ್‍ರೂಮಿನಲ್ಲಿ ಕೂಡಿ ಹಾಕಿದ್ದರೂ ಪತ್ನಿ ದೂರು ನೀಡಲಿಲ್ಲ. ಹೀಗಾಗಿ ಆತನನ್ನು ಬಂಧಿಸಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

    ಮಹಿಳೆಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ ಕೊರೊನಾ ವೈರಸ್ ಇಲ್ಲ ಎಂಬುದು ತಿಳಿದುಬಂದಿದೆ. ಚೀನಾದ ನಗರವಾದ ವುಹಾನ್‍ನಲ್ಲಿ ಜನವರಿಯಲ್ಲಿ ಈ ವೈರಸ್ ಪತ್ತೆಯಾಗಿತ್ತು. ಇದರಿಂದ ಚೀನಾದಲ್ಲಿ ಸಾವಿರಾರು ಬಂದಿ ಮೃತಪಟ್ಟಿದ್ದಾರೆ. ನಂತರ ಚೀನಾದಿಂದ ಬೇರೆ ಬೇರೆ ದೇಶಗಳಿಗೂ ಕೊರೊನಾ ವೈರಸ್ ಹಬ್ಬಿದೆ. ಈ ಭಯಂಕರ ವೈರಸ್ ನಿಂದ ದೇಶಾದ್ಯಂತ ಜನರು ಭಯಭೀತರಾಗಿದ್ದಾರೆ.