Tag: locust

  • ಮಿಡತೆ ತಿಂದರೆ ಕೊರೊನಾ ಗುಣವಾಗುತ್ತೆ: ಪಾಕ್ ಸಂಸದ

    ಮಿಡತೆ ತಿಂದರೆ ಕೊರೊನಾ ಗುಣವಾಗುತ್ತೆ: ಪಾಕ್ ಸಂಸದ

    – ಮಿಡತೆ ತಿಂದ್ರೆ ಪಾಕ್‍ಗೆ 2 ಉಪಯೋಗವಿದೆ

    ಇಸ್ಲಾಮಾಬಾದ್: ಮಿಡತೆ ತಿಂದರೆ ಕೊರೊನಾ ಗುಣವಾಗುತ್ತೆ ಎಂದು ಪಾಕಿಸ್ತಾನದ ಸಂಸದರೊಬ್ಬರು ಹೇಳಿಕೆ ನೀಡಿರುವುದು ಈಗ ಬಹಳ ಚರ್ಚೆಗೆ ಗ್ರಾಸವಾಗಿದೆ.

    ಈ ಹಿಂದೆ ಕೊರೊನಾ ಲಾಕ್‍ಡೌನ್ ವೇಳೆ ಅಲ್ಕೋಹಾಲ್ ಸೇವನೆ ಮಾಡಿದರೆ ಕೊರೊನಾ ವಾಸಿಯಾಗುತ್ತದೆ ಎಂಬ ವದಂತಿ ಹರಡಿತ್ತು. ಈಗ ಪಾಕಿಸ್ತಾನ ಸಂಸದ ರಿಯಾಜ್ ಫತ್ಯಾನ, ಮಿಡತೆ ತಿಂದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಕೊರೊನಾ ವೈರಸ್ ಅನ್ನು ತಡೆಗಟ್ಟಬಹುದು ಎಂದು ಹೇಳಿದ್ದಾರೆ.

    ಈ ವಿಚಾರವನ್ನು ಸಂಸತ್ತಿನ ಕಲಾಪದ ವೇಳೆ ಪ್ರಸ್ತಾಪ ಮಾಡಿರುವ ರಿಯಾಜ್, ಮಿಡತೆಯನ್ನು ತಿನ್ನುವುದರಿಂದ ಮಾನವನ ದೇಹದಲ್ಲಿ ರೋಗನಿರೋಧಕ ಶಕ್ತಿ ನೀಡಬಲ್ಲ ಪ್ರತಿಕಾಯಗಳು ಸೃಷ್ಟಿಯಾಗುತ್ತವೆ. ಆ ಸಮಯದಲ್ಲಿ ಮನುಷ್ಯನ ದೇಹದಲ್ಲಿ ಶಕ್ತಿ ಜಾಸ್ತಿಯಾಗುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಗೆ ಇದ್ದರೆ, ಕೊರೊನಾ ಸೋಂಕು ನಮಗೆ ಬರುವುದಿಲ್ಲ ಎಂದು ತನ್ನ ವಾದವನ್ನು ಮಂಡಿಸಿದ್ದಾರೆ.

    ಇದರ ಜೊತೆಗೆ ಸಂಸತ್ತಿನಲ್ಲಿ ಪ್ರಧಾನಿ ಇಮ್ರಾನ್ ಖಾನ್‍ಗೆ ಸಲಹೆಯೊಂದನ್ನು ನೀಡಿರುವ ರಿಯಾಜ್ ಫತ್ಯಾನ, ಮಿಡತೆ ವಿಚಾರವನ್ನು ಗಂಭೀರವಾಗಿ ತಗೆದುಕೊಂಡು ಇದರ ಬಗ್ಗೆ ಸಂಶೋಧನೆ ಮಾಡಬೇಕು ಎಂದು ಹೇಳಿದ್ದಾರೆ. ಜೊತೆಗೆ ಮಿಡತೆ ತಿನ್ನುವುದರಿಂದ ಪಾಕಿಸ್ತಾನಕ್ಕೆ ಎರಡು ಲಾಭವಿದ್ದು, ಒಂದು ಕೊರೊನಾ ವಿರುದ್ಧ ಹೋರಾಟ ನಡೆಸಬಹುದು. ಎರಡನೇಯದು ಪ್ರತಿ ವರ್ಷ ಮಿಡತೆ ದಾಳಿ ನಮಗೆ ತೊಂದರೆ ಕೊಡುತ್ತಿದೆ. ಇದಕ್ಕೂ ಪರಿಹಾರ ಸಿಗುತ್ತದೆ ಎಂದು ತಿಳಿಸಿದ್ದಾರೆ.

    ಸಂಸತ್ತಿನಲ್ಲಿ ನಿಂತು ಮಿಡತೆ ತಿನ್ನುವ ವಾದವನ್ನು ಮಂಡಿಸಿರುವ ಸಂಸದ ಫತ್ಯಾನ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಭಾರತದಲ್ಲಿ ಬಹಳ ಟ್ರೋಲ್ ಆಗುತ್ತಿದೆ. ಕೆಲವರು ಕಮೆಂಟ್ ಕೂಡ ಮಾಡುತ್ತಿದ್ದು, ಪಾಕಿಸ್ತಾನದ ಮತ್ತೊರ್ವ ಸಂಸದ ಮಿಡತೆಯನ್ನು ನಮ್ಮ ರಾಷ್ಟ್ರ ಆಹಾರವಾಗಿ ಘೋಷಿಸುವುದನ್ನು ಕಾಯುತ್ತಿದ್ದೇವೆ ಎಂದು ಫನ್ನಿಯಾಗಿ ಕಮೆಂಟ್ ಮಾಡಿ ಕಾಲೆಳೆದಿದ್ದಾರೆ.

  • 2 ದಿನದಲ್ಲಿ ಬೀದರ್‌ಗೆ ಮಿಡತೆ ಸೈನ್ಯ ಎಂಟ್ರಿ – ದಾಳಿ ತಡೆಯಲು ಏನೆಲ್ಲ ಕ್ರಮಕೈಗೊಳ್ಳಲಾಗಿದೆ?

    2 ದಿನದಲ್ಲಿ ಬೀದರ್‌ಗೆ ಮಿಡತೆ ಸೈನ್ಯ ಎಂಟ್ರಿ – ದಾಳಿ ತಡೆಯಲು ಏನೆಲ್ಲ ಕ್ರಮಕೈಗೊಳ್ಳಲಾಗಿದೆ?

    ಬೀದರ್: ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಾಳಿ ಮಾಡಿರುವ ಮಿಡತೆಗಳ ದಂಡು ಈಗ ರಾಜ್ಯದ ಬೀದರ್ ಜಿಲ್ಲೆಗೂ ದಾಳಿ ಮಾಡುವ ಸಾಧ್ಯತೆಯಿದೆ.

    ರೈತರ ತೋಟದ ಮೇಲೆ ದಾಳಿ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮಿಡತೆ ಸೈನ್ಯ ಎದುರಿಸಲು ಬೀದರ್ ಕೃಷಿ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ವಿದ್ಯಾನಂದ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ.

    ಜಿಲ್ಲೆಯಲ್ಲಿ ಒಟ್ಟು 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, ಇದರಲ್ಲಿ ಕಬ್ಬು, ತರಕಾರಿ ಹಾಗೂ ಹಣ್ಣುಗಳನ್ನು ರೈತರು ಬೆಳೆದಿದ್ದಾರೆ. ಈಗಾಗಲೇ ರೈತರಿಗೆ ಕ್ರಿಮಿನಾಶಕ ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಲಾಗಿದೆ. ಒಂದು ಬಾರಿ ಕ್ರಿಮಿನಾಶಕ ಸಿಂಪಡಿಸಿದರೆ ನಾಲ್ಕು ಐದು ದಿನಗಳವರೆಗೆ ಕೀಟಗಳಿಂದ ತಡೆಯಬಹುದಾಗಿದೆ. ಒಂದು ವೇಳೆ ಮಿಡತೆ ದಾಳಿ ಮಾಡಿದರೆ ಎಲ್ಲಾ ರೀತಿ ಕ್ರಿಮಿನಾಶಕಗಳು ರೈತ ಸಂಪರ್ಕ ಕೇಂದ್ರದಲ್ಲಿ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವಿದ್ಯಾನಂದ್ ಮಾಹಿತಿ ನೀಡಿದರು.

    ಪ್ರಮುಖವಾಗಿ ಜಿಲ್ಲೆಯ ಗಡಿ ಭಾಗದ ತಾಲೂಕುಗಳಾದ ಬಸವಕಲ್ಯಾಣ, ಭಾಲ್ಕಿ ಹಾಗೂ ಔರಾದ್ ತಾಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಮಟೆ ಹಾಗೂ ಭಿತ್ತಿ ಪತ್ರ ಹಂಚಲು ಕೃಷಿ ಇಲಾಖೆ ನಿರ್ಧಾರ ಮಾಡಿದೆ. ಈ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    ಸದ್ಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಮಿಡತೆ ಸೈನ್ಯ ದಾಳಿ ಮಾಡಿದ್ದು, ಸೊಲ್ಲಾಪುರ ಕಡೆಯಿಂದ ಬೀದರಿಗೆ ಮಿಡತೆಗಳ ದಂಡು ಎರಡು ದಿನಗಳಲ್ಲಿ ಪ್ರವೇಶಿಸುವ ಸಾಧ್ಯತೆ ಇದೆ.

    ಗಾಳಿ ಯಾವ ಭಾಗಕ್ಕೆ ಹೆಚ್ಚು ಬೀಸುತ್ತದೆಯೋ ಆ ಭಾಗಕ್ಕೆ ಹಿಂಡುಹಿಂಡಾಗಿ ವಲಸೆ ಹೋಗುತ್ತವೆ. ದಿನಕ್ಕೆ 200 ಕಿ.ಮೀಗೂ ಹೆಚ್ಚು ದೂರ ಸಾಗುವ ಸಾಮರ್ಥ್ಯ ಈ ಮಿಡತೆಗಳಿಗಿದೆ. ಮಧ್ಯಪ್ರದೇಶ, ರಾಜಸ್ಥಾನ ಮಿಡತೆ ಹಾವಳಿ ಹೆಚ್ಚಿರುವ ಕಾರಣ ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ಮುಂಜಾಗೃತ ಕ್ರಮಕೈಗೊಳ್ಳಲಾಗಿದೆ.

    https://twitter.com/She_Vaani/status/1264782021253005313

    ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸಿರುವ ಮಿಡತೆಗಳು ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶ, ಹರ್ಯಾಣ, ಗುಜರಾತ್ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೃಷಿ ತೋಟಕ್ಕೆ ನುಗ್ಗಿ ಬೆಳೆಯನ್ನು ಹಾನಿ ಮಾಡುತ್ತಿವೆ. ಈಗ ಮಹಾರಾಷ್ಟ್ರದ ವಿದರ್ಭ, ಅಮರಾವತಿ, ವರ್ಧಾ, ನಾಗಪುರ ಜಿಲ್ಲೆಗಳಲ್ಲಿ ದಾಳಿ ಮಾಡಿದೆ. ಈಗಾಗಲೇ ರೈತರಿಗೆ ಈ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಬೆಳೆಗಳ ಮೇಲೆ ಕೀಟನಾಶಕ ಸಿಂಪಡಿಸಲು ಸೂಚನೆ ನೀಡಲಾಗಿದೆ.

    ಪ್ರತಿವರ್ಷ ಮಿಡತೆಗಳು ಪಾಕಿಸ್ತಾನ, ಇರಾನ್ ದಾಳಿ ಮಾಡುತ್ತಿರುತ್ತವೆ. ಮಿಡತೆ ಕಾಟ ತಡೆಯಲು ಪಾಕಿಸ್ತಾನ ತುರ್ತು ಪರಿಸ್ಥಿತಿಯನ್ನು ಪ್ರಕಟಿಸಿದೆ. ಮಿಡತೆಗಳಲ್ಲಿ ಹಲವು ಉಪಜಾತಿಗಳಿವೆ. ಅದರಲ್ಲೂ ಮರುಭೂಮಿ ಮಿಡತೆ ಭಾರೀ ಅಪಾಯಕಾರಿಯಾಗಿದ್ದು ಬೆಳೆಗಳನ್ನು ತಿನ್ನುತ್ತಾ ವಲಸೆ ಹೋಗುತ್ತವೆ.

    https://twitter.com/Hidderkaran/status/1265961458959110146

    ಪೂರಕ ವಾತವಾರಣ ಸಿಕ್ಕಿದಾಗ ಈ ಮರಭೂಮಿ ಮಿಡತೆಗಳು ಸಿಕ್ಕಾಪಟ್ಟೆ ಮೊಟ್ಟೆ ಇಡುತ್ತವೆ. ಕೇವಲ 1 ಚದರ ಮೀಟರ್‍ನಲ್ಲಿ 5000 ಮೊಟ್ಟೆಗಳ ಕ್ಲಸ್ಟರ್ ಇಡುತ್ತದೆ. ಮರಿಯಾದ ನಂತರ ಆಹಾರ ಅರಸುತ್ತಾ ಹೋಗುವ ಮಿಡತೆಗಳು ಕೃಷಿ ಭೂಮಿಯಲ್ಲಿ ಪೈರುಗಳನ್ನು ನೋಡಿದ ಕೂಡಲೇ ಇಳಿಯುತ್ತವೆ. ಕೋಟಿ ಸಂಖ್ಯೆಯ ಮಿಡತೆಗಳು ಒಂದೇ ಬಾರಿ ಬೆಳೆಯನ್ನು ತಿಂದು ತೇಗಿ ಮುಂದಕ್ಕೆ ಹೋಗುತ್ತವೆ.

    ಜಾಗತಿಕ ತಾಪಮಾನ ಏರಿಕೆ ಅಥವಾ ಬಹಳ ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆಯಾಗಿ ವಾತಾವರಣದಲ್ಲಿ ಬದಲಾವಣೆಗಳಾದಾಗ ಈ ರೀತಿ ಮಿಡತೆಗಳ ದಾಳಿಯಾಗುತ್ತದೆ.

  • ಉತ್ತರ ಭಾರತ, ಮಹಾರಾಷ್ಟ್ರ ಆಯ್ತು, ಈಗ ಕರ್ನಾಟಕಕ್ಕೂ ಮಿಡತೆ ಆತಂಕ

    ಉತ್ತರ ಭಾರತ, ಮಹಾರಾಷ್ಟ್ರ ಆಯ್ತು, ಈಗ ಕರ್ನಾಟಕಕ್ಕೂ ಮಿಡತೆ ಆತಂಕ

    ನವದೆಹಲಿ: ಉತ್ತರ ಭಾರತದ 5 ರಾಜ್ಯಗಳಲ್ಲಿ ತಲೆನೋವಾಗಿರುವ ಮಿಡತೆಗಳು ಮಹಾರಾಷ್ಟ್ರದ ಮೂಲಕ ಕರ್ನಾಟಕಕ್ಕೂ ಕಾಡುವ ಆತಂಕ ಎದುರಾಗಿದೆ.

    ರಾಜ್ಯದ ದಕ್ಷಿಣ ಭಾಗಕ್ಕೆ ಗಾಳಿ ಬೀಸಿದರೆ ಬೀದರ್ ಮೂಲಕ ರಾಜ್ಯಕ್ಕೆ ಪ್ರವೇಶಿಸಿ ವಿಜಯಪುರ, ಬೆಳಗಾವಿ ಸೇರಿದಂತೆ ಗಡಿ ಜಿಲ್ಲೆಗಳಿಗೂ ಮಿಡತೆಗಳು ವ್ಯಾಪಿಸುವ ಸಾಧ್ಯತೆಯಿದೆ.

    ಈ ಮಿಡತೆಗಳು ಬೆಳೆದು ನಿಂತಿರುವ ಪೈರುಗಳನ್ನು ತಿನ್ನುತ್ತವೆ. ಗಾಳಿ ಯಾವ ಭಾಗಕ್ಕೆ ಹೆಚ್ಚು ಬೀಸುತ್ತದೆಯೋ ಆ ಭಾಗಕ್ಕೆ ಹಿಂಡುಹಿಂಡಾಗಿ ವಲಸೆ ಹೋಗುತ್ತವೆ. ದಿನಕ್ಕೆ 200ಕಿ.ಮೀಗೂ ಹೆಚ್ಚು ದೂರ ಸಾಗುವ ಸಾಮರ್ಥ್ಯ ಈ ಮಿಡತೆಗಳಿಗಿದೆ. ಮಧ್ಯಪ್ರದೇಶ, ರಾಜಸ್ಥಾನ ಮಿಡತೆ ಹಾವಳಿ ಹೆಚ್ಚಿರುವ ಕಾರಣ ಉತ್ತರ ಪ್ರದೇಶದ 10 ಜಿಲ್ಲೆಗಳಲ್ಲಿ ಮುಂಜಾಗೃತ ಕ್ರಮಕೈಗೊಳ್ಳಲಾಗಿದೆ.

    https://twitter.com/Atlantide4world/status/1265024122930835456

    ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸಿರುವ ಮಿಡತೆಗಳು ರಾಜಸ್ಥಾನ, ಪಂಜಾಬ್, ಮಧ್ಯಪ್ರದೇಶ, ಹರ್ಯಾಣ, ಗುಜರಾತ್ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೃಷಿ ತೋಟಕ್ಕೆ ನುಗ್ಗಿ ಬೆಳೆಯನ್ನು ಹಾನಿ ಮಾಡುತ್ತಿವೆ. ಈಗ ಮಹರಾಷ್ಟ್ರದ ವಿದರ್ಭ, ಅಮರಾವತಿ, ವರ್ಧಾ, ನಾಗಪುರ ಜಿಲ್ಲೆಗಳಲ್ಲಿ ದಾಳಿ ಮಾಡಿದೆ. ಈಗಾಗಲೇ ರೈತರಿಗೆ ಈ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಬೆಳೆಗಳ ಮೇಲೆ ಕೀಟನಾಶಕ ಸಿಂಪಡಿಸಲು ಸೂಚನೆ ನೀಡಲಾಗಿದೆ.

    ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ:
    ಪ್ರತಿವರ್ಷ ಮಿಡತೆಗಳು ಪಾಕಿಸ್ತಾನ, ಇರಾನ್ ದಾಳಿ ಮಾಡುತ್ತಿರುತ್ತವೆ. ಮಿಡತೆ ಕಾಟ ತಡೆಯಲು ಪಾಕಿಸ್ತಾನ ತುರ್ತು ಪರಿಸ್ಥಿತಿಯನ್ನು ಪ್ರಕಟಿಸಿದೆ. ಮಿಡತೆಗಳಲ್ಲಿ ಹಲವು ಉಪಜಾತಿಗಳಿವೆ. ಅದರಲ್ಲೂ ಮರುಭೂಮಿ ಮಿಡತೆ ಭಾರೀ ಅಪಾಯಕಾರಿಯಾಗಿದ್ದು ಬೆಳೆಗಳನ್ನು ತಿನ್ನುತ್ತಾ ವಲಸೆ ಹೋಗುತ್ತವೆ.

    ಪೂರಕ ವಾತವಾರಣ ಸಿಕ್ಕಿದಾಗ ಈ ಮರಭೂಮಿ ಮಿಡತೆಗಳು ಸಿಕ್ಕಾಪಟ್ಟೆ ಮೊಟ್ಟೆ ಇಡುತ್ತವೆ. ಕೇವಲ 1 ಚದರ ಮೀಟರ್ ನಲ್ಲಿ 5000 ಮೊಟ್ಟೆಗಳ ಕ್ಲಸ್ಟರ್ ಇಡುತ್ತದೆ. ಮರಿಯಾದ ನಂತರ ಆಹಾರ ಅರಸುತ್ತಾ ಹೋಗುವ ಮಿಡತೆಗಳು ಕೃಷಿ ಭೂಮಿಯಲ್ಲಿ ಪೈರುಗಳನ್ನು ನೋಡಿದ ಕೂಡಲೇ ಇಳಿಯುತ್ತವೆ. ಕೋಟಿ ಸಂಖ್ಯೆಯ ಮಿಡತೆಗಳು ಒಂದೇ ಬಾರಿ ಬೆಳೆಯನ್ನು ತಿಂದು ಮುಂದಕ್ಕೆ ಹೋಗುತ್ತವೆ.

    ಜಾಗತಿಕ ತಾಪಮಾನ ಏರಿಕೆ ಅಥವಾ ಬಹಳ ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆಯಾಗಿ ವಾತಾವರಣದಲ್ಲಿ ಬದಲಾವಣೆಗಳಾದಾಗ ಈ ರೀತಿ ಮಿಡತೆಗಳ ದಾಳಿಯಾಗುತ್ತದೆ.