Tag: Lok Adalat

  • ರಾಜ್ಯಾದ್ಯಂತ ಮಾ.8 ರಂದು ರಾಷ್ಟ್ರೀಯ ಲೋಕ-ಅದಾಲತ್

    ರಾಜ್ಯಾದ್ಯಂತ ಮಾ.8 ರಂದು ರಾಷ್ಟ್ರೀಯ ಲೋಕ-ಅದಾಲತ್

    ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಜ್ಯಾದ್ಯಂತ ಮಾ. 08ರಂದು ರಾಷ್ಟ್ರೀಯ ಲೋಕ-ಅದಾಲತ್ (Lok Adalat) ನಡೆಯಲಿದೆ.

    ಈ ಹಿನ್ನೆಲೆಯಲ್ಲಿ ಮಂಡ್ಯ (Mandya) ಜಿಲ್ಲೆಯ 7 ತಾಲೂಕುಗಳಲ್ಲಿಯೂ ಸಹ ಲೋಕ-ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಪೂರ್ವಭಾವಿ ಬೈಠಕ್‌ಗಳನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗೋದಲ್ಲಿ ನಿಗೂಢ `ಅಳುವ ರೋಗ’ಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ – 400 ಮಂದಿಗೆ ಸೋಂಕು

    ರಾಷ್ಟ್ರೀಯ ಲೋಕ-ಅದಾಲತ್‌ನಲ್ಲಿ ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ವಿಭಾಗ ದಾವೆಗಳು, ಹಣ ವಸೂಲಾತಿ ದಾವೆಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು ಮೋಟಾರ್ ವಾಹನಗಳ ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾತಂತಹ ಕ್ರಿಮಿನಲ್ ಪ್ರಕರಣಗಳು ಮತ್ತು ಚೇಕ್ ಬೌನ್ಸ್ ಪ್ರಕರಣಗಳು ಎಲ್ಲವನ್ನೂ ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಲಯಗಳಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುವುದು. ಇದನ್ನೂ ಓದಿ: ಉಡುಪಿ| ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ಯತ್ನ ಕೇಸ್ – ಇಬ್ಬರ ಬಂಧನ

    ಲೋಕ-ಅದಾಲತ್ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷದವರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ತಾವೇ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿ ಮಾಡಿಕೊಳ್ಳಬಹುದು. ಇದನ್ನೂ ಓದಿ:  ದಾಖಲೆಯ ಮಹಾ ಕುಂಭಮೇಳಕ್ಕೆ ವಿದ್ಯುಕ್ತ ತೆರೆ – ತ್ರಿವೇಣಿ ಸಂಗಮದಲ್ಲಿ ಶುರುವಾಯ್ತು ಸ್ವಚ್ಛತಾ ಕಾರ್ಯ

    ಜನಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ-ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ-ಅದಾಲತನ್ನು ಯಶಸ್ವಿಗೊಳಿಸಿಕೊಳ್ಳುವಂತೆ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಕೋರಿದ್ದಾರೆ.

  • ಲೋಕ್ ಅದಾಲತ್‌ನಲ್ಲಿ 73,628 ಪ್ರಕರಣ ಇತ್ಯರ್ಥ – ನ್ಯಾ.ಪ್ರಕಾಶ ಬನಸೋಡೆ

    ಲೋಕ್ ಅದಾಲತ್‌ನಲ್ಲಿ 73,628 ಪ್ರಕರಣ ಇತ್ಯರ್ಥ – ನ್ಯಾ.ಪ್ರಕಾಶ ಬನಸೋಡೆ

    ಬೀದರ್: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ (National Lok Adalat) ಒಟ್ಟು 73,628 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಬೀದರ್ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಮಾಹಿತಿ ನೀಡಿದರು.ಇದನ್ನೂ ಓದಿ:ಗೋಕರ್ಣ ಸಮುದ್ರದಲ್ಲಿ ಮುಳುಗಿ ಅಪಾಯಕ್ಕೆ ಸಿಲುಕಿದ್ದ ವಿದೇಶಿಗನ ರಕ್ಷಣೆ

    ಜಿಲ್ಲೆಯಲ್ಲಿ ಇಂದು (ಡಿ.18) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 73,628 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಹಾಗೂ ಒಟ್ಟು 23,43,28,647 ರೂ.ಗಳ ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು.

    ಸದರಿ ಲೋಕ್ ಅದಾಲತ್‌ನಲ್ಲಿ 10,191 ಬಾಕಿಯಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, 13,16,69,342 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 63,437 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, 10,26,59,305 ರೂ. ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. ಅದೇ ರೀತಿ ವೈವಾಹಿಕ ವ್ಯಾಜ್ಯವನ್ನು ಇತ್ಯರ್ಥಪಡಿಸಿ, 3 ಜೋಡಿ ದಂಪತಿಯನ್ನು ರಾಜೀ ಸಂಧಾನದ ಮೂಲಕ ಒಂದು ಮಾಡಲಾಗಿದೆ ಎಂದರು.ಇದನ್ನೂ ಓದಿ: ಚಿಕಿತ್ಸೆಗಾಗಿ ಅಮೆರಿಕಗೆ ತೆರಳುವ ಮುನ್ನ ಶಿವಣ್ಣ ಭಾವುಕ

  • ಲೋಕ ಅದಾಲತ್‌ನಲ್ಲಿ 520 ಪ್ರಕರಣ ಇತ್ಯರ್ಥ – 14 ಕೋಟಿ ಪರಿಹಾರಕ್ಕೆ ಜನತಾ ನ್ಯಾಯಾಲಯ ಆದೇಶ!

    ಲೋಕ ಅದಾಲತ್‌ನಲ್ಲಿ 520 ಪ್ರಕರಣ ಇತ್ಯರ್ಥ – 14 ಕೋಟಿ ಪರಿಹಾರಕ್ಕೆ ಜನತಾ ನ್ಯಾಯಾಲಯ ಆದೇಶ!

    ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಇಲ್ಲಿನ ಕಲಬುರಗಿ ಹೈಕೋರ್ಟ್ (Kalaburagi Highcourt) ಪೀಠದಲ್ಲಿ ಜರುಗಿದ ಲೋಕ ಅದಾಲತ್‌ನಲ್ಲಿ (Lok Adalat) ಪರಸ್ಪರ ರಾಜಿ ಸಂಧಾನದ ಮೂಲಕ 520 ಪ್ರಕರಣ ವಿಲೇವಾರಿ ಮಾಡಿ 14,00,71,305 ರೂ. ಪರಿಹಾರ ವಿತರಣೆಗೆ ಜನತಾ ನ್ಯಾಯಾಲಯ ಆದೇಶಿಸಿದೆ.

    ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ವಿಮೆ ಮತ್ತು ಸಿವಿಲ್ ಪ್ರಕರಣಗಳನ್ನು ಅರ್ಜಿದಾರ, ಪ್ರತಿವಾದಗಳು ಹಾಗೂ ವಕೀಲರ ಸಮಕ್ಷಮ ರಾಜಿ-ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಯಿತು. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?

    ಲೋಕ ಅದಾಲತ್‌ನಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಅಶೋಕ್ ಎಸ್ ಕಿಣಗಿ, ನ್ಯಾ.ಉಮೇಶ್ ಎಂ ಅಡಿಗ ಹಾಗೂ ನ್ಯಾ.ರಾಜೇಶ್ ರೈಕೆ ಅವರು ಭಾಗವಹಿಸಿದ್ದರು. ಇದನ್ನೂ ಓದಿ: Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    ಉಚ್ಚನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ, ಅಪರ ಮಹಾ ವಿಲೇಖನಾಧಿಕಾರಿ ಬಸವರಾಜ ಚೇಂಗಟಿ ಸೇರಿದಂತೆ ನ್ಯಾಯಾವಾದಿಗಳು, ಕಕ್ಷಿದಾರರು ಭಾಗವಹಿಸಿದ್ದರು. ಇದನ್ನೂ ಓದಿ: ರಾಮನಗರ ಅನ್ನೋದಕ್ಕಿಂತ ಬೇರೊಂದು ಒಳ್ಳೆಯ ಪದ ಸಿಗಲ್ಲ: ಡಾ.ಮಂಜುನಾಥ್

  • ಬಾರೋ ಅಂದಿದ್ದಕ್ಕೆ ಪತ್ನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪತಿ – 17 ಜೋಡಿಗಳನ್ನು ಒಂದುಗೂಡಿಸಿದ ಕೋರ್ಟ್

    ಬಾರೋ ಅಂದಿದ್ದಕ್ಕೆ ಪತ್ನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪತಿ – 17 ಜೋಡಿಗಳನ್ನು ಒಂದುಗೂಡಿಸಿದ ಕೋರ್ಟ್

    ಧಾರವಾಡ: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಇದೆ. ಆದರೆ ಧಾರವಾಡದ ನ್ಯಾಯಾಲಯದಲ್ಲಿ ಇಂದು ವಿಚ್ಛೇದನಕ್ಕೆ ಬಂದಿದ್ದ ಕೇಸ್ ನೋಡಿದರೆನೇ ವಿಚಿತ್ರ ಎನಿಸುತ್ತದೆ. ಏಕೆಂದರೆ ಪತ್ನಿ ತನ್ನ ಪತಿಗೆ ಬಾರೋ ಎಂದಿದ್ದಕ್ಕೆ ಪತಿರಾಯ ನ್ಯಾಯಾಲಯದ ಮೇಟ್ಟಿಲು ಏರಿದರೆ, ಮತ್ತೊಂದು ಪ್ರಕರಣದಲ್ಲಿ ಪತ್ನಿ ಪತಿಯ ಪೆನ್ ಡ್ರೈವ್ ತೆಗೆದುಕೊಂಡಿದ್ದಕ್ಕೆ ವಿಚ್ಛೇದನಕ್ಕೆ ಅರ್ಜಿ ಬಂದಿತ್ತು. ಇದೀಗ ಈ ಪ್ರಕರಣಗಳನ್ನು ನ್ಯಾಯಾಲಯ ಲೋಕ್ ಅದಾಲತ್‍ನಲ್ಲಿ (Lok Adalat) ತೆಗೆದುಕೊಂಡು ಇತ್ಯರ್ಥ ಮಾಡಿದೆ.

    ಧಾರವಾಡ (Dharwad) ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ಇಂದು ವಿಚ್ಛೇದನಕ್ಕೆ ಬಂದಿದ್ದ ಪ್ರಕರಣಗಳನ್ನು ತೆಗೆದುಕೊಂಡಿದ್ದರು. ಈ ವೇಳೆ ಕೆಲ ಗಂಡ ಹೆಂಡತಿಯರು ವಿಚ್ಛೇದನ ಬೇಡ ಎಂದು ಒಪ್ಪಿಕೊಂಡರೆ, ಕೆಲವರು ನ್ಯಾಯಾಲಯದ ಮುಂದೆ ತಮ್ಮ ಒಪ್ಪಿಗೆ ಸೂಚಿಸಲೇ ಇಲ್ಲ. ಅದರಲ್ಲೂ ಒಂದು ಜೋಡಿಯಂತೂ ಪೆನ್ ಡ್ರೈವ್ ವಿಚಾರಕ್ಕೆ ವಿಚ್ಛೇದನ ಹಾಕಿಕೊಂಡಿದ್ದರು. ಪತ್ನಿ ತನ್ನ ಪತಿಯ ಪೆನ್ ಡ್ರೈವ್ ತೆಗೆದುಕೊಂಡಿದ್ದಾಳಂತೆ. ಅದಕ್ಕೆ ಪತಿ ಅದನ್ನು ಕೊಟ್ಟರೆ ಮಾತ್ರ ನಾನು ರಾಜಿಯಾಗುತ್ತೇನೆ ಅಂತ ನಿಂತಿದ್ದ. ಇದನ್ನೂ ಓದಿ: ಮೃತ ತಂದೆಯನ್ನು ಬದುಕಿಸಲು ಮಗುವನ್ನು ಅಪಹರಿಸಿ ನರ ಬಲಿ ಕೊಡಲು ಸಿದ್ಧವಾದ್ಲು

    ಮತ್ತೊಂದು ಜೋಡಿ ಪ್ರಕರಣದಲ್ಲಿ ಪತ್ನಿ ತನ್ನ ಪತಿಗೆ ಬಾರೋ ಎಂದು ಕರೆದ್ದಾಳಂತೆ. ಅದಕ್ಕೆ ಇಬ್ಬರೂ ವಿಚ್ಛೇದನಕ್ಕೆ ಬಂದಿದ್ದರು. ನ್ಯಾಯಾಧೀಶರು ಇವತ್ತು ಇಂತಹ 37 ಕೇಸ್‍ಗಳನ್ನು ಲೋಕ ಅದಾಲತ್‍ನಲ್ಲಿ ತೆಗೆದುಕೊಂಡು 17 ಕೇಸ್ ಇತ್ಯರ್ಥ ಮಾಡಿದೆ. ಇನ್ನು ಕೆಲ ಪತಿ ಹಾಗೂ ಪತ್ನಿ ನ್ಯಾಯಾಲಯದ ಮಾತು ಕೇಳದೇ ಇರುವುದರಿಂದ ಅವರಿಗೆ ಮತ್ತೆ ಮುಂದಿನ ದಿನಾಂಕಕ್ಕೆ ಹಾಜರಾಗಲು ಹೇಳಲಾಗಿದೆ. ಮತ್ತೆ ಕೆಲವರಿಗೆ ಸ್ವಲ್ಪ ದಿನ ಒಂದೇ ಕಡೆ ಇರುವಂತೆ ಸೂಚನೆ ಕೊಟ್ಟು ಕಳುಹಿಸಲಾಗಿದೆ. ಇದನ್ನೂ ಓದಿ: ಬೆಳಗಾವಿ ಲಾಕಪ್‌ಡೆತ್ ಕೇಸ್: ಪೊಲೀಸರಿಂದ್ಲೇ ಚಿತ್ರಹಿಂಸೆ – ಮೃತನ ಪುತ್ರಿ ಆರೋಪ

    ಇಬ್ಬರು ಸ್ವಲ್ಪ ದಿನಗಳಲ್ಲಿ ಒಂದಾಗಿ ಬಾಳಿದರೆ ಮುಂದೆ ನ್ಯಾಯಾಲಯ ಇವರ ಮದ್ಯದಲ್ಲಿ ಪ್ರವೇಶ ಮಾಡಲ್ಲ. ಹೊಂದಾಣಿಕೆ ಆಗದೇ ಇದ್ದರೆ ಮಾತ್ರ ನ್ಯಾಯಾಲಯ ಮತ್ತೊಂದು ಚಾನ್ಸ್ ಕೊಡಲಿದೆ. ಸದ್ಯ ಒಂದಾದ ಗಂಡ ಹೆಂಡತಿ ಕೂಡ ನ್ಯಾಯಾಲಯದ ಈ ಅದಾಲತ್‍ದಿಂದ ಒಂದಾಗಿ ಸಂತಸ ವ್ಯಕ್ತಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ವಿಚ್ಛೇದನ ಪಡೆದಿದ್ದ ದಂಪತಿಗಳನ್ನು ಒಂದು ಮಾಡಿದ ಲೋಕ ಅದಾಲತ್

    ವಿಚ್ಛೇದನ ಪಡೆದಿದ್ದ ದಂಪತಿಗಳನ್ನು ಒಂದು ಮಾಡಿದ ಲೋಕ ಅದಾಲತ್

    ದಾವಣಗೆರೆ: ನ್ಯಾಯಾಲಯದ ಮೆಟ್ಟಿಲೇರಿ ವಿಚ್ಛೇದನ ಪಡೆದಿದ್ದ ಜೋಡಿಗಳಿಗೆ ದಾವಣಗೆರೆಯ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ನ್ಯಾಯಾಧೀಶರು ಮತ್ತೆ ಒಂದಾಗಿ ಬದುಕು ನಡೆಸುವ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

    court order law

    ನಗರದ ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‍ನಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಸಂಧಾನ ಪ್ರಕ್ರಿಯೆ ನಡೆಸಿ ಜೋಡಿಯು ಮತ್ತೆ ಒಂದಾಗಿ ದಾಂಪತ್ಯ ಜೀವನ ನಡೆಸುವ ಭಾಗ್ಯ ಕಲ್ಪಿಸಿದ್ದಾರೆ. ದಾವಣಗೆರೆ ವಾಸಿಗಳಾದ ದಂಪತಿಗೆ 2007ರಲ್ಲಿ ವಿವಾಹ ನಡೆದಿತ್ತು. 2007 ರಿಂದ 2014 ರವರೆಗೆ ಸಣ್ಣಪುಟ್ಟ ಕೌಟುಂಬಿಕ ಕಲಹ ನಡೆದಿತ್ತು. ಇದರಿಂದ ಬೇಸತ್ತ ಪತ್ನಿಯು 2014ರಲ್ಲಿ ಪತಿ ಸೇರಿದಂತೆ ಕುಟುಂಬದ ಕೆಲ ಸದಸ್ಯರ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು ಪ್ರಕರಣದ ವಿಚಾರಣೆ ಮುಂದುವರಿದಿತ್ತು. ಇದನ್ನೂ ಓದಿ: ಬ್ರಾ ಧರಿಸದೇ ಸಾರ್ವಜನಿಕವಾಗಿ ಕಾಣಿಸಿಕೊಂಡ ಪೂನಂ ಪಾಂಡೆ: ನೆಟ್ಟಿಗರು ಗರಂ

    ಈ ಸಂದರ್ಭದಲ್ಲಿ ಪತಿ ವಿಚ್ಛೇದನಕ್ಕೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯ ವಿಚಾರಣೆ ನಡೆಸಿ 2022ರಲ್ಲಿ ಈ ಇಬ್ಬರಿಗೆ ವಿಚ್ಛೇದನಕ್ಕೆ ಅವಕಾಶ ಕೊಟ್ಟಿತ್ತು. ಜೊತೆಗೆ ಜೀವನಾಂಶವಾಗಿ ಪತಿಗೆ ಸೇರಿದ ಅರ್ಧ ಎಕರೆ ನೀರಾವರಿ ಜಮೀನು ನೀಡುವಂತೆ ಸೂಚಿಸಿತ್ತು. ಆದರೆ ಮಗಳ ತಂದೆ ಮೇಲಿನ ಪ್ರೀತಿ, ತಾಯಿಯನ್ನು ಮತ್ತೆ ಒಂದಾಗುವ ಹಾಗೇ ಪ್ರೇರಿಪಿಸಿತು. ಆಗ ಪತ್ನಿ ವಿಚ್ಛೇದನದ ಬಳಿಕವೂ ಪತಿಯೊಂದಿಗೆ ಒಂದಾಗಿ ಜೀವನ ನಡೆಸಲು ಇಚ್ಛಿಸಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

    ಈ ಪ್ರಕರಣವನ್ನು ಜನತಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಅವರು, ಇಬ್ಬರ ಮನವೊಲಿಸಿ ವಿಚ್ಛೇದನ ಪಡೆದ ದಂಪತಿಗೆ ಮತ್ತೆ ಒಂದಾಗಿ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೆ ಇನ್ನೊಂದು ಪ್ರಕರಣದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ ದಾವಣಗೆರೆ ನಿವಾಸಿ ದಂಪತಿಗೆ ಜನತಾ ನ್ಯಾಯಾಲಯ ಇಬ್ಬರು ಒಟ್ಟುಗೂಡಿ ಜೀವನ ಸಾಗಿಸುವ ಅವಕಾಶ ಕಲ್ಪಿಸಿದೆ. 2011ರಲ್ಲಿ ವಿವಾಹದ ದಂಪತಿ 2020ರಲ್ಲಿ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿ ವಿಚಾರಣೆ ಮುಂದುವರಿದಿತ್ತು. ಈ ಇಬ್ಬರ ದಂಪತಿಯ ಮನವೊಲಿಸಿದ ನ್ಯಾಯಾಧೀಶರು ಲೋಕ ಅದಾಲತ್‍ನಲ್ಲಿ ಮತ್ತೆ ಒಂದಾಗಿಸುವ ಭಾಗ್ಯ ಕಲ್ಪಿಸಿದೆ. ಈ ದಂಪತಿಗೆ ಮೂರು ಜನ ಹೆಣ್ಣು ಮಕ್ಕಳಿದ್ದು, ಅವರ ಭವಿಷ್ಯದ ದೃಷ್ಟಿಯಿಂದ ಇಬ್ಬರು ಒಂದಾಗಿದ್ದಾರೆ. ಇದನ್ನೂ ಓದಿ: ಬೈದವರನ್ನು ಅಟ್ಟಾಡಿಸಿಕೊಂಡು ಸೇಡು ತೀರಿಸಿಕೊಳ್ಳುತ್ತಿರುವ ಕೋಣ – ಕಂಟೆಮ್ಮ ದೇವಿಯ ಪಾವಡಕ್ಕೆ ಹೈರಾಣಾದ ಗ್ರಾಮಸ್ಥ

    ವಿಚ್ಛೇದನ ಪಡೆದ ಈ ಎರಡು ಜೋಡಿಗಳು ಮತ್ತೆ ಒಂದಾಗಿ ಜೀವನ ನಡೆಸಲು ಮುಂದಾಗಿರುವುದು ಸಂತಸ ತರಿಸಿದೆ. ಪತಿ ಮತ್ತು ಪತ್ನಿ ನಡುವೆ ಏನೇ ವೈಮನಸ್ಸು ಉಂಟಾದರೆ ಅದನ್ನು ಸರಿದೂಗಿಸಿಕೊಂಡು ಹೋಗುವ ಜಾಣ್ಮೆಯನ್ನು ಪ್ರತಿಯೊಂದು ದಂಪತಿ ಅಳವಡಿಸಿಕೊಂಡು ಹೋದರೆ ವೈವಾಹಿಕ ಜೀವನದಲ್ಲಿ ಯಾವುದೇ ವಿರಹ ಅಥವಾ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಕಿವಿಮಾತು ಹೇಳಿದರು.

    Live Tv

  • ಗಡಿ ಜಿಲ್ಲಾದ್ಯಂತ ಲೋಕ್ ಅದಾಲತ್

    ಗಡಿ ಜಿಲ್ಲಾದ್ಯಂತ ಲೋಕ್ ಅದಾಲತ್

    ಚಾಮರಾಜನಗರ: ರಾಷ್ಟ್ರೀಯ ಸೇವಾ ಪ್ರಾಧಿಕಾರ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಲೋಕ್ ಅದಾಲತ್ ನಡೆದಿದ್ದು, ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೆಗಾಲದಲ್ಲಿ ಒಟ್ಟು 14 ಬೈಠಕ್‍ಗಳಲ್ಲಿ ಸಂಧಾನ ಕಾರ್ಯ ನಡೆದಿದೆ.

    ಜಿಲ್ಲೆಯ ನ್ಯಾಯಾಲಯಗಳಲ್ಲಿದ್ದ ಒಟ್ಟು 8,568 ಮೂಕದ್ದಮೆಗಳ ಪೈಕಿ ನಾನ್ ಕಾಂಪೌಂಡಬಲ್ 4,413 ಮೊಕದ್ದಮೆಗಳಾಗಿದ್ದವು. 4,155 ಬಾಕಿಯಿರುವ ಮೊಕದ್ದಮೆಗಳಲ್ಲಿ 1,964 ಮೊಕದ್ದಮೆಗಳನ್ನು ಲೋಕ್ ಅದಾಲತ್‍ಗೆ ಒಳಪಟ್ಟಂತೆ ತೆಗೆಯಲಾಯಿತು. ಶನಿವಾರ ಲೋಕ್ ಅದಾಲತ್ ಮೂಲಕ 401 ಮೊಕದ್ದಮೆಗಳಲ್ಲಿ ಉಭಯ ಪಕ್ಷದವರ ಮನವೊಲಿಸಿ ನ್ಯಾಯಾಧೀಶರ ಸಮಕ್ಷಮದಲ್ಲಿ ಇತ್ಯರ್ಥ ಪಡಿಸಿದರು.

    ಚಾಮರಾಜನಗರ ತಾಲೂಕಿನ ನ್ಯಾಯಾಲಯದಲ್ಲಿ 179, ಯಳಂದೂರು ತಾಲೂಕಿನ ನ್ಯಾಯಾಲಯದಲ್ಲಿ 62, ಗುಂಡ್ಲುಪೇಟೆ ತಾಲೂಕಿನ ನ್ಯಾಯಾಲಯದಲ್ಲಿ 77, ಕೊಳ್ಳಗಾಲ ತಾಲೂಕಿನ ನ್ಯಾಯಾಲಯದಲ್ಲಿ 83 ಮೊಕದ್ದಮೆಗಳನ್ನು ಇತ್ಯರ್ಥ ಪಡಿಸಲಾಯಿತು ಹಾಗೂ ವ್ಯಾಜ್ಯ ಪೂರ್ವದ 99 ಪ್ರಕರಣಗಳು ಇತ್ಯರ್ಥಗೊಳಿಸಲಾಯಿತು.

    ಅಸಲುದಾವೆ ಸಂಖ್ಯೆ(ಓ.ಎಸ್) 217/1993 ಆಸ್ತಿ ವಿಭಾಗಕ್ಕಾಗಿ ಹೂಡಿರುವ ಇರ್ಸವಾಡಿ ಗ್ರಾಮದ ದಾವೆಯನ್ನು ನ್ಯಾಯಾಲಯದಲ್ಲಿ 2011ರಂದು ಎಫ್ ಗಡಿ ಪಿ ಯಾಗಿ ಪರಿವರ್ತಿಸಿ, ಈಗ ಲೋಕ್ ಅದಾಲತ್‍ನಲ್ಲಿ 26 ವರ್ಷಗಳ ಬಳಿಕ ಉಭಯ ಪಕ್ಷದವರಿಗೆ ರಾಜಿಯ ಮೂಲಕ ಸಂಧಾನ ಮಾಡಲಾಯಿತು.

    ಹಾಗೆಯೇ ಇನ್ನೊಂದು ಅಸಲು ದಾವೆ ಸಂಖ್ಯೆ 157/2009, ಮಲ್ಕಯನ ಪುರ ಗ್ರಾಮದ ದಾವೆಯನ್ನು ಕೂಡ 10 ವರ್ಷ ಬಳಿಕ ಉಭಯ ಪಕ್ಷಗಳ ರಾಜಿಯ ಮೂಲಕ ಇತ್ಯರ್ಥ ಪಡಿಸಲಾಯಿತು ಎಂದು ನ್ಯಾಯಾಂಗ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

    ಸತ್ರ ನ್ಯಾಯಾಧೀಶರಾದ ಡಿ.ವಿ ಪಾಟಿಲ್, ಅಪರ ಸತ್ರ ನ್ಯಾಯಾಧೀಶರಾದ ಡಿ. ವಿನಯ್, ಸಿ.ಜೆ.ಎಮ್ ನ್ಯಾಯಾಧೀಶರಾದ ಎಂ. ರಮೇಶ್, ಎ.ಸಿ.ಜೆ ಹಿರಿಯ ಶ್ರೇಣಿ ನ್ಯಾಯಾಧೀಶರು, ಬಾದಾಮಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ರೋಷನ್ ಶಾಹ್, ಎಸಿಜೆ ನ್ಯಾಯಾಧೀಶರಾದ ವಿ. ಸ್ಮೀತಾ, ಸದಸ್ಯ ಕಾರ್ಯದರ್ಶಿ ಸಿ.ವಿ ವಿಶಾಲಾಕ್ಷಿ ಲೊಕ್ ಅದಾಲತ್ ಕಾರ್ಯದಲ್ಲಿ ಹಾಜರಿದ್ದರು.

  • ಒಂದೇ ದಿನದಲ್ಲಿ 1793 ಪ್ರಕರಣಗಳ ರಾಜಿ ಸಂಧಾನ: ಮೆಚ್ಚುಗೆಗೆ ಪಾತ್ರವಾಯಿತು ಧಾರವಾಡ ನ್ಯಾಯಾಲಯ

    ಒಂದೇ ದಿನದಲ್ಲಿ 1793 ಪ್ರಕರಣಗಳ ರಾಜಿ ಸಂಧಾನ: ಮೆಚ್ಚುಗೆಗೆ ಪಾತ್ರವಾಯಿತು ಧಾರವಾಡ ನ್ಯಾಯಾಲಯ

    – ಮೂರು ತಲೆಮಾರಿನ ವ್ಯಾಜ್ಯವೊಂದು ಇತ್ಯರ್ಥ

    ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯದ ಲೋಕ ಅದಾಲತ್‍ನಲ್ಲಿ ಒಂದೇ ದಿನಕ್ಕೆ 1793 ಪ್ರಕರಣದ ರಾಜಿ ಸಂಧಾನ ಮಾಡಿಸುವ ಮೂಲಕ ಜಿಲ್ಲೆಯಲ್ಲಿ ಇತಿಹಾಸ ನಿರ್ಮಿಸಲಾಗಿದೆ.

    ಹಲವು ವರ್ಷಗಳಿಂದ ಜಿಲ್ಲೆಯ ಇತರ ನ್ಯಾಯಾಲಯಗಳಲ್ಲಿ ನಡೆದಿದ್ದ ಕೌಟುಂಬಿಕ, ಜಾಮೀನು ವ್ಯಾಜ್ಯ ಸೇರಿದಂತೆ ಹಲವು ಪ್ರಕರಣಗಳನ್ನು ಒಂದೇ ದಿನದಲ್ಲಿ ಇತ್ಯರ್ಥಪಡಿಸಲಾಗಿದೆ. ಒಟ್ಟು 38 ನ್ಯಾಯಾಧೀಶರು ಆಯಾ ನ್ಯಾಯಾಲಯದ ಆವರಣದಲ್ಲಿ 1793 ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

    ವಾಹನಗಳ ವ್ಯಾಜ್ಯ, ಬಾಕಿ ಕೊಡಬೇಕಾದ ಎಲ್ಲ ಪ್ರಕರಣಗಳನ್ನು ಸಹ ವಿಚಾರಣೆ ಮಾಡಿದ ನ್ಯಾಯಾಧೀಶರು, ರಾಜಿ ಮಾಡಿಸುವ ಮೂಲಕ 10 ಕೋಟಿ 33 ಲಕ್ಷದ ಚೆಕ್‍ಗಳನ್ನು ವಿತರಣೆ ಮಾಡಿದ್ದಾರೆ. ಈ ವ್ಯಾಜ್ಯಗಳು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಇತ್ಯರ್ಥವಾಗದೇ ಇದ್ದವು. ಇಂದು ಕಕ್ಷಿದಾರರನ್ನು ಕರೆಸಿ ರಾಜಿ ಮಾಡಿಸಲಾಯಿತು.

    ಇದೇ ಲೋಕ ಅದಾಲತ್‍ನಲ್ಲಿ ಕಳೆದ ಮೂರು ತಲೇಮಾರಿನಿಂದ ಆಸ್ತಿಗಾಗಿ ಉಳಿದಿದ್ದ ವ್ಯಾಜ್ಯವೊಂದನ್ನು ಇತ್ಯರ್ಥಪಡಿಸಲಾಯಿತು. ಜಿಲ್ಲೆಯ ಮನಗುಂಡಿ ಗ್ರಾಮದ ಶಾಂತವ್ವ ಅಂಗಡಿ ಅವರ ಜಮೀನಿನ ವಾಟ್ನಿ ಪ್ರಕರಣ ರಾಜಿ ಸಂಧಾನದಲ್ಲಿ ಮುಕ್ತಾಯಗೊಂಡಿದ್ದು ವಿಶೇಷವಾಗಿತ್ತು. ಪ್ರಕರಣದ ಕಕ್ಷಿದಾರರಾದ ಅಜ್ಜಿ, ಅಣ್ಣ-ತಮ್ಮಂದಿರು, ಮಕ್ಕಳು ಮತ್ತು ಮೊಮ್ಮಕ್ಕಳು ಇಂದಿನ ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ ಹಾಜರಾಗಿ ರಾಜಿ ಮಾಡಿಕೊಂಡರು.