Tag: Lok Sabha Election 2018

  • ಚಿಹ್ನೆ ಆಯ್ಕೆಯಲ್ಲಿ ದಳಪತಿಗಳಿಗೆ ರೆಬೆಲ್ ಸುಮಲತಾ ಸೆಡ್ಡು!

    ಚಿಹ್ನೆ ಆಯ್ಕೆಯಲ್ಲಿ ದಳಪತಿಗಳಿಗೆ ರೆಬೆಲ್ ಸುಮಲತಾ ಸೆಡ್ಡು!

    ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಚಿಹ್ನೆ ಆಯ್ಕೆಯಲ್ಲಿ ದಳಪತಿಗಳಿಗೆ ಶಾಕ್ ನೀಡಿದ್ದಾರೆ. ರೈತರು ಇರುವ ಮೂರು ಚಿಹ್ನೆಗಳಲ್ಲಿ ಒಂದನ್ನು ನೀಡುತ್ತೇವೆ ಆಯೋಗಕ್ಕೆ ಸುಮಲತಾ ಅಂಬರೀಶ್ ಮನವಿ ಮಾಡಿಕೊಂಡಿದ್ದಾರೆ.

    ಈಗಾಗಲೇ ನಾಲ್ಕು ನಾಮಪತ್ರ ಸಲ್ಲಿಸಿರುವ ಸುಮಲತಾ ಅಂಬರೀಶ್ ರೈತ ಪರವಾದ ಮೂರು ಚಿಹ್ನೆಗಳಿಗೆ ಬೇಡಿಕೆ ಇಟ್ಟಿದ್ದಾರೆ. ಕಬ್ಬಿನ ಗದ್ದೆ ಮುಂದೆ ರೈತ, ತೆಂಗಿನ ತೋಟ, ಕಹಳೆ ಊದುತ್ತಿರುವ ರೈತ ಚಿಹ್ನೆಗಳನ್ನು ಸುಮಲತಾ ಅವರು ಆಯ್ಕೆ ಮಾಡಿಕೊಂಡಿದ್ದಾರೆ.

    ರಾಜ್ಯದಲ್ಲಿ ಪ್ರತಿದಿನ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರ ಒಂದೇ ಹೆಸರಿನ ನಾಲ್ಕು ಅಭ್ಯರ್ಥಿಗಳ ಹೆಸರಿನಿಂದ ಸುದ್ದಿ ಆಗುತ್ತಿದೆ. ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಸುಮಲತಾ ಹೆಸರಿನ 4 ಮಂದಿ ಸ್ಪರ್ಧೆ ಮಾಡುತ್ತಿದ್ದಾರೆ. ಸುಮಲತಾ ಅಂಬರೀಶ್, ಕೆಆರ್ ಪೇಟೆ ತಾಲೂಕಿನ ಗೊರವಿ ಗ್ರಾಮದ ಎಂ.ಸುಮಲತಾ, ರಾಮನಗರ ಜಿಲ್ಲೆಯ ಕನಕಪುರದ ಪಿ.ಸುಮಲತಾ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು ಗ್ರಾಮದ ಸುಮಲತಾ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ.

    ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡೋಕೆ ಸುಮಲತಾ ಎಂಬ ಹೆಸರಿನ ಮೂರು ಮಂದಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಮಾತುಗಳು ಮಂಡ್ಯದಲ್ಲಿ ಕೇಳಬರತೊಡಗಿವೆ. ಇದರಿಂದ ಸುಮಲತಾ ಅಂಬರೀಶ್ ಅವರಿಗೆ ಬೀಳುವ ಮತಗಳನ್ನು ವಿಭಜನೆಯಾಗಿ, ಅವರನ್ನು ಚುನಾವಣೆಯಲ್ಲಿ ಸೋಲಿಸಲು ಈ ತಂತ್ರ ಮಾಡಲಾಗಿದೆ ಎನ್ನಲಾಗುತ್ತಿದೆ.

  • ಸಿದ್ದರಾಮಯ್ಯ ಹೆಗಲಿಗೆ ಹೊಸ ಜವಾಬ್ದಾರಿ ಹೊರಿಸಿದ ರಾಹುಲ್ ಗಾಂಧಿ!

    ಸಿದ್ದರಾಮಯ್ಯ ಹೆಗಲಿಗೆ ಹೊಸ ಜವಾಬ್ದಾರಿ ಹೊರಿಸಿದ ರಾಹುಲ್ ಗಾಂಧಿ!

    ಬೆಂಗಳೂರು: ಸೋಮವಾರ ರಾಜ್ಯಕ್ಕೆ ಭೇಟಿ ನೀಡಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮ ಮುಗಿಸಿಕೊಂಡು ಹೊರಡುವ ಮುನ್ನ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಮೈತ್ರಿಯಲ್ಲಿ ಅಪಸ್ವರ ಬರದಂತೆ ನೋಡಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ತುಮಕೂರು ವಿಚಾರವಾಗಿ ಹೆಚ್ಚಿನ ಚರ್ಚೆ ಮಾಡೋದು ಬೇಡ. ಅಭ್ಯರ್ಥಿಗಳ ಘೋಷಣೆ ಬಳಿಕ ಅಸಮಾಧಾನಿತರನ್ನು ನೀವೇ ಸಂಭಾಳಿಸಬೇಕು. ಮೈತ್ರಿ ಅಭ್ಯರ್ಥಿಗಳ ಪರವಾಗಿ ಒಗ್ಗೂಡಿ ಕೆಲಸ ಮಾಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿಯೇ ರಾಹುಲ್ ಗಾಂಧಿ, ಸಿದ್ದರಾಮಯ್ಯರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರೇ ಪವರ್ ಫುಲ್ ಅನ್ನೋದು ಮತ್ತೆ ಸಾಬೀತಾಗುತ್ತಿದೆ.

  • ಕಲಬುರಗಿಯಲ್ಲಿ ಬಿಜೆಪಿಗೆ ಕೌಂಟರ್ – ಸದ್ದಿಲ್ಲದೇ ‘ಆಪರೇಷನ್ ಹಸ್ತ’ ನಡೆಸಿದ ಕಾಂಗ್ರೆಸ್!

    ಕಲಬುರಗಿಯಲ್ಲಿ ಬಿಜೆಪಿಗೆ ಕೌಂಟರ್ – ಸದ್ದಿಲ್ಲದೇ ‘ಆಪರೇಷನ್ ಹಸ್ತ’ ನಡೆಸಿದ ಕಾಂಗ್ರೆಸ್!

    ಕಲಬುರಗಿ: ಬಿಜೆಪಿಗೆ ಉಮೇಶ್ ಜಾಧವ್ ಸೆಳೆದಿದ್ದಕ್ಕೆ ಪ್ರತಿಯಾಗಿ ಆಪರೇಷನ್ ಹಸ್ತ ನಡೆದಿದೆ. ಖರ್ಗೆ ಆ್ಯಂಡ್ ಟೀಂ ಕಲಬುರಗಿಯಲ್ಲಿ ಸದ್ದಿಲ್ಲದೇ ಆಪರೇಷನ್ ಹಸ್ತ ಮುಗಿಸಿದೆ.

    ಬಿಜೆಪಿಯ ಮೂವರು ಪ್ರಮುಖರನ್ನು ರಾಜ್ಯ ಕಾಂಗ್ರೆಸ್ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿಗೆ ಕೆಬಿ ಶಾಣಪ್ಪ, ಬಾಬುರಾವ್ ಚೌಹಾಣ್ ಮತ್ತು ಶ್ಯಾಮರಾವ್ ಪ್ಯಾಟಿ ಗುಡ್‍ಬೈ ಹೇಳಿದ್ದಾರೆ. ಮೂವರು ನಾಯಕರು ಉಮೇಶ್ ಜಾಧವ್ ಅವರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೆಬಿ ಶಾಣಪ್ಪ ಕಣ್ಣೀರು ಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶ್ಯಾಮರಾವ್ ಪ್ಯಾಟಿ, ಕಳೆದ ಎಂಟು ದಿನಗಳಿಂದ ನಾವು ಸಭೆಗಳನ್ನು ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ ಸ್ಥಳೀಯ ನಾಯಕರೊಂದಿಗೆ ಚರ್ಚಿಸದೆ ಉಮೇಶ್ ಜಾಧವ್ ಕಲಬುರಗಿಯ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಜಿಲ್ಲೆಯ ಚುನಾವಣಾ ರೂಪುರೇಷಗಳ ಬಗ್ಗೆಯೂ ನಮಗೆ ಯಾರು ಮಾಹಿತಿ ನೀಡುತ್ತಿಲ್ಲ. ಸಹಜವಾಗಿಯೇ ಈ ಎಲ್ಲ ಬೆಳವಣಿಗೆಗಳಿಂದ ಮನಸ್ಸಿಗೆ ಬೇಸರವಾಗಿದೆ ಎಂದರು.

    ಕೆ.ಬಿ.ಶಾಣಪ್ಪ ಮಾತನಾಡಿ, ಬಿಜೆಪಿ ತೊರೆಯಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದೇನೆ. ಆದ್ರೆ ಯಾರಿಗೆ ಬೆಂಬಲ ನೀಡಬೇಕೆಂಬುದರ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿ, ಎರಡ್ಮೂರು ದಿನಗಳಲ್ಲಿ ತಿಳಿಸುತ್ತೇನೆ. ನಾನೋರ್ವ ರಾಜಕೀಯ ಪ್ರಾಣಿಯಾಗಿದ್ದು, ಸುಮ್ಮನೆ ಕುಳಿತುಕೊಳ್ಳಲ್ಲ. ಬೇರೆ ವ್ಯಕ್ತಿಯನ್ನು ತಂದು ಚುನಾವಣೆಗೆ ನಿಲ್ಲಿಸಿ ಬೆಂಬಲ ನೀಡಬೇಕು ಎಂದ್ರೆ ಸಾಧ್ಯವಾಗಲ್ಲ. ಸಮರ್ಥ ಅಭ್ಯರ್ಥಿಯಾಗಿದ್ದರೆ, ಪಕ್ಷಕ್ಕೆ ಬರಮಾಡಿಕೊಳ್ಳುವ ಮುನ್ನ ನಮ್ಮೊಂದಿಗೆ ಚರ್ಚಿಸಬೇಕಿತ್ತು. ಇದ್ಯಾವುದೇ ಆಗದೇ ಉಮೇಶ್ ಜಾಧವ್ ಅವರನ್ನು ತಂದು ನಿಲ್ಲಿಸಿದ್ದು ಬೇಸರ ತರಿಸಿದೆ ಎಂದರು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಲಿತರ ಮನೆಯಲ್ಲಿ ಊಟ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರೆ ನಾಯಕರು ಹೇಳಿಕೊಂಡು ಓಡಾಡಿದ್ದರು. ಅಂದೇ ನನಗೆ ಬಿಜೆಪಿ ಬಗ್ಗೆ ಅಸಮಾಧಾನ ಉಂಟಾಗಿತ್ತು. ಕೇವಲ ದಲಿತರ ಮನೆಯಲ್ಲಿ ಊಟ ಮಾಡಿದ್ರೆ ಜಾತಿ ನಿರ್ಮೂಲನೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಕೆ.ಬಿ.ಶಾಣಪ್ಪ ಆಕ್ರೋಶ ಹೊರಹಾಕಿದರು.

    ಮಾರ್ಚ್ 18 ರಂದು ಕಲಬುರಗಿಯಲ್ಲಿ ನಡೆಯುವ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಯ ಅನೇಕರು ಕಾಂಗ್ರೆಸ್ ಸೇರ್ತಾರೆ ಅಂತ ಗುರುವಾರ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಈ ನಡುವೆ ಕೆಬಿ ಶಾಣಪ್ಪ ಪಕ್ಷ ಬಿಡಬಾರದು. ಅವರ ಮಾರ್ಗದರ್ಶನ ನಮಗೆ ಅಗತ್ಯ ಎಂದು ಉಮೇಶ್ ಜಾಧವ್ ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಮೇಥಿಯಲ್ಲಿ 10 ಸಾವಿರ ಸೀರೆ ಹಂಚಿದ್ರು ಸ್ಮೃತಿ ಇರಾನಿ!

    ಅಮೇಥಿಯಲ್ಲಿ 10 ಸಾವಿರ ಸೀರೆ ಹಂಚಿದ್ರು ಸ್ಮೃತಿ ಇರಾನಿ!

    ಲಕ್ನೋ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬರೋಬ್ಬರಿ 10 ಸಾವಿರ ಸೀರೆಗಳನ್ನು ಹಂಚಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸಚಿವೆ ಸೀರೆ ಹಂಚಲು ಮುಂದಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸುತ್ತಿದ್ದಾರೆ.

    ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಕ್ಷೇತ್ರ ಇದಾಗಿದ್ದು, ಈ ಬಾರಿ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅಮೇಥಿ ಕ್ಷೇತ್ರದಿಂದಲೇ ಕಣಕ್ಕಿಳಿಯಲ್ಲಿದ್ದಾರೆ. ಅಮೇಥಿ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯರಾಗಿರುವ ಸ್ಮೃತಿ ಇರಾನಿ ಅಲ್ಲಿನ ಜನತೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

    ಸ್ಮೃತಿ ಇರಾನಿ ಅವರು ತಮ್ಮ ಆಪ್ತ ವಿಜಯ್ ಗುಪ್ತಾರ ಮುಖಾಂತರ ಶನಿವಾರ ಕಾರ್ಯಕ್ರಮದಲ್ಲಿ ಸೀರೆಗಳನ್ನು ವಿತರಣೆ ಮಾಡಲಾಗಿದೆ. ಅಮೇಥಿಯ ಬೂತ್ ಮಟ್ಟದ ಕಾರ್ಯಕರ್ತೆಯರಿಗೂ ಸೀರೆಗಳನ್ನು ನೀಡಲಾಗಿದೆ.

    ಪ್ರತಿ ಹೋಳಿ ಹಬ್ಬ ಮತ್ತು ದೀಪಾವಳಿಗೆ ಸ್ಮೃತಿ ಇರಾನಿ ಅವರು ಕ್ಷೇತ್ರದ ಸೋದರಿಯರಿಗೆ ಸೀರೆಗಳನ್ನು ನೀಡುವ ಮೂಲಕ ಶುಭಾಶಯ ತಿಳಿಸುತ್ತಾರೆ. ಹಾಗೆಯೇ ಈ ವರ್ಷವೂ ಸೀರೆಗಳನ್ನು ವಿತರಣೆ ಮಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರಗಳಿಂದ ಸೋತ್ರೂ ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಕ್ಷೇತ್ರದ ಜನರು ಸ್ಮೃತಿ ಇರಾನಿ ಅವರನ್ನು ದೀದಿ (ಅಕ್ಕ) ಎಂದು ಕರೆಯುತ್ತಾರೆ ಎಂದು ಅಮೇಥಿಯ ಬಿಜೆಪಿ ಜಿಲ್ಲಾಧ್ಯಕ್ಷ ಉಮಾಶಂಕರ್ ಪಾಂಡೆ ತಿಳಿಸಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದರು. 2014ರಲ್ಲಿ ಅಮೇಥಿ ಕ್ಷೇತ್ರ ಇಡೀ ದೇಶದ ಗಮನವನ್ನ ಸೆಳೆದಿತ್ತು. 1998ರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಸಂಜಯ್ ಸಿಂಗ್ ಗೆಲುವು ಸಾಧಿಸಿದ್ದರು. ತದನಂತರ ಎದುರಾದ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಸ್ಮೃತಿ ಇರಾನಿ ಅವರು 2014ರ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರಿಗೆ ತೀವ್ರ ಪೈಪೋಟಿಯನ್ನು ನೀಡಿದ್ದರು. ರಾಹುಲ್ ಗಾಂಧಿ 4,08,651 ಮತಗಳನ್ನು ಪಡೆದ್ರೆ ಸ್ಮೃತಿ ಇರಾನಿ 3,00,748 ಮತ ಪಡೆಯುವ ಮೂಲಕ ಸೋಲು ಕಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv