Tag: Lok Sabha Elections

  • ಎಚ್‍ಡಿಕೆ ಒಬ್ಬ ಲಜ್ಜೆಗೆಟ್ಟ ಮಾಜಿ ಸಿಎಂ, ನನ್ನ ಫೋನ್ ಟ್ಯಾಪ್ ಆಗಿದೆ – ಕೆ.ಎನ್.ರಾಜಣ್ಣ

    ಎಚ್‍ಡಿಕೆ ಒಬ್ಬ ಲಜ್ಜೆಗೆಟ್ಟ ಮಾಜಿ ಸಿಎಂ, ನನ್ನ ಫೋನ್ ಟ್ಯಾಪ್ ಆಗಿದೆ – ಕೆ.ಎನ್.ರಾಜಣ್ಣ

    ತುಮಕೂರು: ನನ್ನದು ಮತ್ತು ನನ್ನ ಮಗ ರಾಜೇಂದ್ರನ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

    ಇಂದು ನಗದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ವೇಳೆ ನಮ್ಮ ಕುಟುಂಬದ ಫೋನ್ ಕೂಡ ಟ್ಯಾಪಿಂಗ್ ಆಗಿದೆ. ಟ್ಯಾಪಿಂಗ್ ವಿಚಾರ ನನಗೆ ಮೊದಲೇ ಗೊತ್ತಿತ್ತು. ಆದರೆ ಸೂಕ್ತ ದಾಖಲೆ ಇಲ್ಲದಿರುವ ಕಾರಣ ನಾನು ದೂರು ಕೊಟ್ಟಿರಲಿಲ್ಲ ಎಂದು ಹೇಳಿದ್ದಾರೆ.

    ಈ ಪ್ರಕರಣವನ್ನು ಸಿಬಿಐಗೆ ನೀಡಿರುವುದು ಸ್ವಾಗತಾರ್ಹ ನಡೆ. ಟೆಲಿಫೋನ್ ಕದ್ದಾಲಿಕೆ ಅಂತ್ಯ ಆಗಬೇಕಾದರೆ ಸಿಬಿಐ ತನಿಖೆ ಸೂಕ್ತವಾದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಟೆಲಿಫೋನ್ ಕದ್ದಾಲಿಕೆಯಿಂದ ಖಾಸಗಿತನಕ್ಕೆ ಧಕ್ಕೆ ಉಂಟಾಗುತ್ತದೆ. ಕುಮಾರಸ್ವಾಮಿ ಒಬ್ಬ ಲಜ್ಜೆಗೆಟ್ಟ ಮಾಜಿ ಮುಖ್ಯಮಂತ್ರಿ. ಅಂಥವರನ್ನು ಈ ದೇಶದಲ್ಲಿ ಮುಖ್ಯಮಂತ್ರಿಯಾಗಿ ಕಂಡಿದ್ದು ದುರ್ದೈವ. ಮೂರೂ ಬಿಟ್ಟವರು ಊರಿಗೆ ದೊಡ್ಡವರು ಆ ಮಟ್ಟದಲ್ಲಿ ಕುಮಾರಸ್ವಾಮಿ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

  • ತಲೆ ಬೋಳಿಸಿಕೊಳ್ಳುವ ಚಾಲೆಂಜ್ ಮಾಡಿದ್ದರು ಸುಷ್ಮಾ ಸ್ವರಾಜ್

    ತಲೆ ಬೋಳಿಸಿಕೊಳ್ಳುವ ಚಾಲೆಂಜ್ ಮಾಡಿದ್ದರು ಸುಷ್ಮಾ ಸ್ವರಾಜ್

    ಬೆಂಗಳೂರು: ಕೇಂದ್ರದ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದ್ದು, ದೇಶ ಕಂಡ ಅಪರೂಪದ ನಾಯಕಿಯನ್ನು ಕಳೆದುಕೊಂಡಿದ್ದೇವೆ ಎಂದು ರಾಷ್ಟ್ರ ನಾಯಕರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

    ಇದೇ ಸಂದರ್ಭದಲ್ಲಿ ಸುಷ್ಮಾ ಸ್ವರಾಜ್ ಅವರ ರಾಜಕೀಯ ಬೆಳವಣಿಗೆ ಸೇರಿದಂತೆ ಅವರು ನಾಯಕಿಯಾಗಿ ಕೈಗೊಂಡಿದ್ದ ಕೆಲ ನಡೆಗಳನ್ನು ನೆನಪಿಸಿಕೊಂಡಿದ್ದಾರೆ. ಅದರಲ್ಲಿ ಪ್ರಮುಖವಾಗಿ 2004 ರಲ್ಲಿ ಸೋನಿಯಾ ಗಾಂಧಿ ಅವರ ವಿರುದ್ಧವೇ ಸುಷ್ಮಾ ಅವರು ಸವಾಲು ಎಸೆದಿದ್ದರು.

    2004 ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟ ರಚನೆ ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಳ್ಳಲು ಸಿದ್ಧತೆ ನಡೆಸಿತ್ತು. ಈ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರನ್ನ ಪ್ರಧಾನಿಯಾಗಿ ಮಾಡುವ ನಿರ್ಣಯವೂ ಕೂಡ ಆಗಿತ್ತು. ಆದರೆ ಅಂದು ಸೋನಿಯಾ ಅವರು ವಿದೇಶಿ ಮೂಲದ ಮಹಿಳೆ ಆಗಿದ್ದರಿಂದ ಇದನ್ನು ಸುಷ್ಮಾ ಸ್ವರಾಜ್ ಅವರು ಬಲವಾಗಿ ವಿರೋಧಿಸಿದ್ದರು.

    ಸೋನಿಯಾ ಗಾಂಧಿ ಅವರು ಪ್ರಧಾನಿ ಆಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದಂತೆಯೇ ಅವರ ವಿರುದ್ಧವೇ ಸವಾಲು ಎಸೆದಿದ್ದ ಸುಷ್ಮಾ ಸ್ವರಾಜ್ ಅವರು, ಇಟಲಿ ಮೂಲದ ಸೋನಿಯಾ ಗಾಂಧಿ ಅವರು ಏನಾದರೂ ದೇಶದ ಪ್ರಧಾನಿ ಆದರೆ ತಲೆ ಬೋಳಿಸಿಕೊಂಡು, ಬಿಳಿ ಸೀರೆ ಉಟ್ಟು, ಧಾನ್ಯಗಳನ್ನು ತಿಂದು ಜೀವನ ನಡೆಸುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿದ್ದರು.

    ಸುಷ್ಮಾ ಸ್ವರಾಜ್ ಅವರ ಈ ಹೇಳಿಕೆ ದೇಶ್ಯಾದ್ಯಂತ ಭಾರೀ ಸಂಚಲವನ್ನೇ ಸೃಷ್ಟಿ ಮಾಡಿತ್ತು. ಆದರೆ ಆ ಬಳಿಕ ಸೋನಿಯಾ ಅವರು ಪ್ರಧಾನಿ ಹುದ್ದೆಯಿಂದ ದೂರ ಉಳಿದಿದ್ದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ಆದರೆ ಈ ಎಲ್ಲಾ ಬೆಳವಣಿಗೆಗಳ ನಡುವೆಯೂ ಮತ್ತೆ ಸೋನಿಯಾ ಅವರೊಂದಿಗೆ ಸುಷ್ಮಾ ಅವರು ಆತ್ಮೀಯರಾಗಿಯೇ ಇದ್ದರು. ಜನರ ಸಮಸ್ಯೆಗಳು, ದೇಶದ ಕೆಲಸಗಳನ್ನು ಮಾಡಲು ಸೌಮ್ಯವಾಗಿಯೇ ಇರುತ್ತಿದ್ದ ಅವರು, ದೇಶದ ಗೌರವದ ಪ್ರಶ್ನೆ ಎದುರಾದ ಸಂದರ್ಭದಲ್ಲಿ ಬೆಂಕಿಯ ಚೆಂಡಾಗುತ್ತಿದ್ದರು. ಈ ಘಟನೆಯ ಅವರ ಧೈರ್ಯಕ್ಕೆ ಸಾಕ್ಷಿಯಾಗಿದೆ.

  • ಚುನಾವಣೆ ವೇಳೆ ಬಿಎಲ್ ಸಂತೋಷ್ ಹೇಳಿದ್ದ ಮಾತು ನಿಜವಾಯ್ತು

    ಚುನಾವಣೆ ವೇಳೆ ಬಿಎಲ್ ಸಂತೋಷ್ ಹೇಳಿದ್ದ ಮಾತು ನಿಜವಾಯ್ತು

    ಬೆಂಗಳೂರು: ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ನೀಡಿದ್ದ ಹೇಳಿಕೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ.

    ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಾಗಲಕೋಟೆಯ ಜಮಖಂಡಿ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ಎರಡು ಸರ್ಕಾರ ಬರಲಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದರೆ, ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದಿದ್ದರು.

    ರಾಜ್ಯದಲ್ಲಿ 10 ರೂಪಾಯಿ ಹಾಕಿ 20 ರೂ. ಪಡೆಯುವ ಕಾಲ ಇದಾಗಿದ್ದು, ಯಾವಾಗಲೂ ಮತ ಹಾಕಿದರೆ ಒಂದು ಸರ್ಕಾರ ಬರುತಿತ್ತು. ಆದರೆ ಈ ಬಾರಿ ಒಂದು ಸೀರೆ ಕೊಂಡರೆ ಎರಡು ಖಚಿತ ಎಂಬಂತೆ ಎರಡು ಸರ್ಕಾರ ಬರಲಿದೆ ಎಂದಿದ್ದರು. ಅಲ್ಲದೇ ಈ ಮಾತನ್ನು ನಾನು ಮಾತ್ರ ಹೇಳುತ್ತಿಲ್ಲ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ವೀರಪ್ಪ ಮೊಯ್ಲಿ ಅವರು ಕೂಡ ಹೇಳಿದ್ದು, ಬಿಜೆಪಿ 20ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ಮೈತ್ರಿ ಸರ್ಕಾರ ಬೀಳಲಿದೆ ಎಂಬುದಾಗಿ ಹೇಳಿದ್ದಾರೆ. ಈ ಮಾತನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಹೇಳಬೇಕು. ಮೊದಲ ಬಾರಿಗೆ ಕರ್ನಾಟಕದಲ್ಲಿ ಇಂತಹ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ಭಾಷಣ ಮಾಡಿದ್ದರು.

    ಮೈತ್ರಿ ಸರ್ಕಾರದ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ವಿಶ್ವಾತ ಮತ ಸಾಬೀತು ಪಡಿಸಲು ವಿಫಲರಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತ ಬಿಎಸ್ ಯಡಿಯೂರಪ್ಪ ಅವರು ಸರ್ಕಾರ ರಚನೆ ಮಾಡಲು ಸಿದ್ಧತೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಎಲ್ ಸಂತೋಷ್ ಅವರ ಅಂದು ಹೇಳಿದ ಮಾತು ನಿಜವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ರಾಮಲಾಲ್ ಅವರ ರಾಜೀನಾಮೆಯಿಂದ ತೆರವಾದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಕೆಲ ದಿನಗಳ ಹಿಂದೆ ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿ.ಎಲ್.ಸಂತೋಷ್ ಅವರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಈ ನೇಮಕವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ತಿಳಿಸಿದ್ದರು.

    ರಾಮಲಾಲ್ ಅಡಿಯಲ್ಲಿ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿ.ಸತೀಶ್ ಈಗ ಅವರ ಸ್ಥಾನ ತುಂಬಲಿದ್ದಾರೆ ಎನ್ನಲಾಗಿತ್ತು. ಆದರೆ ಈಗ ಬಿಜೆಪಿ ಹೈಕಮಾಂಡ್ ಬಿ.ಎಲ್.ಸಂತೋಷ್ ಅವರಿಗೆ ಮಣೆ ಹಾಕಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಸಂಘಟಿಸುವ ಉದ್ದೇಶದಿಂದ ಬಿ.ಎಲ್.ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ.

  • ಎಸ್‍ಪಿ ಜೊತೆ ಮೈತ್ರಿ ರಚಿಸಿದ್ದು ದೊಡ್ಡ ತಪ್ಪು: ಮಾಯಾವತಿ

    ಎಸ್‍ಪಿ ಜೊತೆ ಮೈತ್ರಿ ರಚಿಸಿದ್ದು ದೊಡ್ಡ ತಪ್ಪು: ಮಾಯಾವತಿ

    – ಅಖಿಲೇಶ್ ಯಾದವ್ ಅಪಕ್ವತೆಯಿಂದಾಗಿ ಸೋಲು
    – ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ
    – ಮುಲಾಯಂ ಪರ ಮತ ಕೇಳಬಾರದಿತ್ತು

    ಲಕ್ನೋ: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸಮಾಜವಾದಿ ಪಾರ್ಟಿ(ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‍ಪಿ) ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಚುನಾವಣಾ ಪೂರ್ವ ಮೈತ್ರಿ ರಚಿಸಿಕೊಂಡು ಕಣಕ್ಕಿಳಿದಿದ್ದ ಎರಡೂ ಪಕ್ಷಗಳು ಭಾರೀ ಹಿನ್ನಡೆಯನ್ನು ಅನುಭವಿಸಿದೆ. ಹೀಗಾಗಿ ಎರಡೂ ಪಕ್ಷಗಳ ನಾಯಕರು ಇಷ್ಟು ದಿನ ಬಹಿರಂಗವಾಗಿ ಸೋಲಿಗೆ ಮೈತ್ರಿಯೇ ಕಾರಣ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿಕೊಂಡು ಬಂದಿದ್ದರು. ಇದೀಗ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಎಸ್‍ಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು ದೊಡ್ಡ ತಪ್ಪೆಂದು ನೇರವಾಗಿ ಅಸಮಾಧಾನವನ್ನು ಹೊರ ಹಾಕಿದ್ದಾರೆ.

    ಮುಂದಿನ ವಿಧಾನಸಭೆಯ ಉಪ ಚುನಾವಣೆಯಲ್ಲಿ ಬಿಎಸ್‍ಪಿ ಏಕಾಂಗಿ ಸ್ಪರ್ಧಿಸಲಿದೆ ಎಂಬ ಅಂಶವನ್ನು ಮಾಯಾವತಿ ರಿವೀಲ್ ಮಾಡಿದ್ದಾರೆ. ಇದೇ ವೇಳೆ ಎಸ್‍ಪಿ ಮತ್ತು ನಾಯಕ ಮುಲಾಯಂ ಸಿಂಗ್ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಲೋಕಸಮರದ ಫಲಿತಾಂಶದ ಬಳಿಕ ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಒಂದು ಬಾರಿ ಕರೆ ಮಾತನಾಡಿಲ್ಲ ಎಂದು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

    ಭಾನುವಾರ ಪಕ್ಷದ ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಪಕ್ಷದ ಮುಖ್ಯಸ್ಥೆಯಾಗಿರುವ ಮಾಯಾವತಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಬಾರದಿತ್ತು. ಚುನಾವಣೆ ಸಂಬಂಧಿಸಿದ ನಿರ್ಣಯ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದೇವೆ ಎಂದು ಸಭೆಯಲ್ಲಿ ಹೇಳಿದ್ದಾರೆಂದು ಮಾಧ್ಯಮಗಳು ಬಿತ್ತರಿಸಿವೆ.

     

    ಅಖಿಲೇಶ್ ಅಪರಿಪಕ್ವತೆಯ ನಾಯಕತ್ವ:
    ಅಖಿಲೇಶ್ ಯಾವದ್ ಅವರ ಅಪರಿಪಕ್ವತೆಯ ನಾಯಕತ್ವದಿಂದಲೇ ಸ್ಪರ್ಧಿಸಿದ್ದ ಬಹು ಕ್ಷೇತ್ರಗಳಲ್ಲಿ ಸೋಲು ಕಾಣಬೇಕಾಯ್ತು. ಹಾಗಾಗಿ ಮುಂದಿನ ದಿನಗಳಲ್ಲಿ ಎಸ್‍ಪಿ ಜೊತೆ ಮೈತ್ರಿ ಉಳಿಸಿಕೊಳ್ಳುವ ಅಗತ್ಯ ಇಲ್ಲ. ಎಸ್‍ಪಿ ಸಹಯೋಗದಿಂದಲೇ ಬಿಎಸ್‍ಪಿ 10 ಸಂಸದರು ಗೆಲುವು ಕಂಡಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ರಾಜ್ಯದಲ್ಲಿ ಹರಡಲಾಗುತ್ತಿದೆ. ಹಾಗಾದರೆ ಯಾದವ್ ಕುಟುಂಬಸ್ಥರು ಚುಬನಾವಣೆಯಲ್ಲಿ ಸೋತಿದ್ದು ಯಾಕೆ ಎಂದು ಮಾಯಾವತಿ ಪ್ರಶ್ನೆ ಮಾಡಿದ್ದಾರೆ.

    ತಾಜ್ ಕಾರಿಡಾರ್ ಹಗರಣದಲ್ಲಿ ನನ್ನನ್ನು ಸಿಲುಕಿಸಲು ಕೇವಲ ಬಿಜೆಪಿ ಪ್ರಯತ್ನ ಮಾಡಿರಲಿಲ್ಲ. ಅದರಲ್ಲಿ ಮುಲಾಯಂ ಸಿಂಗ್ ಯಾದವ್ ಸಹ ಒಬ್ಬರಾಗಿದ್ದರು. ಇಂತಹ ಘಟನೆಗಳನ್ನು ಮರೆತು ಚುನಾವಣೆಯಲ್ಲಿ ಮುಲಾಯಂ ಸಿಂಗ್ ಪರ ಮತ ಯಾಚನೆ ಮಾಡಿದ್ದನ್ನು ಅಖಿಲೇಶ್ ಯಾವದ್ ಪರಿಗಣಿಸಲಿಲ್ಲ. ಲೋಕಸಮರದ ಫಲಿತಾಂಶದ ಬಳಿಕ ಅಖಿಲೇಶ್ ಯಾದವ್ ಒಂದು ಬಾರಿಯೂ ಕರೆ ಮಾಡಿ ಮಾತನಾಡಲಿಲ್ಲ. ಕೊನೆಗೆ ನಾನೇ ಕರೆ ಮಾಡಿ ಕುಟುಂಬಸ್ಥರೊಂದಿಗೆ ಮಾತನಾಡಿದೆ ಎಂದರು.

    ಎಸ್‍ಪಿ ಮತ ನಮ್ಗೆ ಬಂದಿಲ್ಲ:
    ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದರೂ ಸಮಾಜವಾದಿ ಪಕ್ಷದ ಮತಗಳು ನಮ್ಮ ಅಭ್ಯರ್ಥಿಗಳಿಗೆ ಬಂದಿಲ್ಲ. ಹಾಗಾಗಿ ಈ ಮಹಾಮೈತ್ರಿ ಮೊದಲಿನಂತೆ ಮುಂದುವರಿಯುವುದು ಅನುಮಾನ. ಆದ್ರೆ ಬಿಎಸ್‍ಪಿಯ ಬಹುತೇಕ ಮತಗಳು ಎಸ್‍ಪಿ ಅಭ್ಯರ್ಥಿಗಳು ಪಾಲಾಗುವಂತೆ ನಮ್ಮ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ವಿಷಯಗಳ ಬಗ್ಗೆ ಅಖಿಲೇಶ್ ಗೆ ತಿಳಿದಿದ್ದರೂ ಮೌನವಾಗಿದ್ದಾರೆ. ಉಪಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ನಾವು ಗೆಲುವು ಕಾಣಬೇಕಿದೆ ಎಂದು ಹೇಳಿದ್ದಾರೆ.

  • ರಾಹುಲ್ ಗಾಂಧಿ ಯೋಗ ಮಾಡದೇ ಇರುವುದಕ್ಕೆ ಕಾಂಗ್ರೆಸ್ ಸೋತಿದೆ: ಬಾಬಾ ರಾಮ್‍ದೇವ್

    ರಾಹುಲ್ ಗಾಂಧಿ ಯೋಗ ಮಾಡದೇ ಇರುವುದಕ್ಕೆ ಕಾಂಗ್ರೆಸ್ ಸೋತಿದೆ: ಬಾಬಾ ರಾಮ್‍ದೇವ್

    ನವದೆಹಲಿ: ಕಾಂಗ್ರೆಸ್‍ನ ಅಧ್ಯಕ್ಷ ರಾಹುಲ್ ಗಾಂಧಿ ಯೋಗ ಮಾಡದೇ ಇರುವುದಕ್ಕೆ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋತಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅವರು ಹೇಳಿದ್ದಾರೆ.

    ಇದೇ ತಿಂಗಳು ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನ ನಡೆಯಲಿದ್ದು, ಇದಕ್ಕೆ ಬೇಕಾದ ತಯಾರಿಯನ್ನು ಬಾಬಾ ರಾಮ್‍ದೇವ್ ಅವರು ಮಾಡಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಅವರು ಯೋಗ ಮಾಡುವವರಿಗೆ ಅಚ್ಛೇ ದಿನ್ ಬರುತ್ತದೆ ಎಂದು ಹೇಳಿದ್ದಾರೆ.

    ಯೋಗವನ್ನು ಜನಪ್ರಿಯಗೊಳಿಸಿದ್ದಕ್ಕಾಗಿ ಅವರು ಮೋದಿ ಅವರನ್ನು ಶ್ಲಾಘಿಸಿದ್ದಾರೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲು ಕಾರಣ ಅ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಯೋಗಾಭ್ಯಾಸ ಮಾಡದೆ ಇರುವುದು ಎಂದು ಹೇಳಿದ್ದಾರೆ.

    “ಮೋದಿ ಜೀ ಅವರು ಸಾರ್ವಜನಿಕವಾಗಿ ಯೋಗ ಮಾಡುತ್ತಾರೆ. ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರೂ ಅವರು ಮತ್ತು ಇಂದಿರಾ ಗಾಂಧಿ ಅವರು ರಹಸ್ಯವಾಗಿ ಯೋಗ ಮಾಡುತ್ತಿದ್ದರು. ಆದರೆ ಅವರ ಉತ್ತರಾಧಿಕಾರಿಯಾದ ರಾಹುಲ್ ಗಾಂಧಿ ಅವರು ಯೋಗ ಮಾಡುವುದಿಲ್ಲ. ಈ ಕಾರಣದಿಂದ ಅವರ ರಾಜಕೀಯ ಜೀವನ ಉಲ್ಬಣವಾಗುತ್ತಿದೆ. ಯಾರು ಯೋಗ ಮಾಡುತ್ತಾರೆ ಅವರಿಗೆ ಅಚ್ಛೇ ದಿನ್ ಬರುತ್ತದೆ” ಎಂದು ರಾಮ್‍ದೇವ್ ಹೇಳಿದ್ದಾರೆ.

    ಈ ಹಿಂದೆ ಯೋಗ ಆಚರಿಸುವ ಸಲುವಾಗಿ ಖಾಸಗಿ ಚಾನೆಲ್‍ನಲ್ಲಿ ಮಾತನಾಡಿದ್ದ ರಾಮ್‍ದೇವ್, ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರು ನಿಯಮಿತವಾಗಿ ಯೋಗಾಭ್ಯಾಸ ಮಾಡುತ್ತಾರೆ ಎಂದು ಹೇಳಿದ್ದರು. ಈಗ ಇದಕ್ಕೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ.

    ಮೋದಿ ಅವರು ಯೋಗವನ್ನು ಬಹಳ ಇಷ್ಟಪಡುತ್ತಾರೆ. ಕಳೆದ ವರ್ಷ ಅವರು ತಮ್ಮ ಲೋಕ್ ಕಲ್ಯಾಣ್ ಮಾರ್ಗ್ ಮನೆಯ ಹುಲ್ಲುಹಾಸಿನ ಮೇಲೆ ಯೋಗ ಮಾಡುತ್ತಿರುವ 2 ನಿಮಿಷದ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬ ವೈರಲ್ ಆಗಿತ್ತು.

    https://twitter.com/narendramodi/status/1006739708670455810

    ಈ ವಿಡಿಯೋ ನೋಡಿದ ಕೆಲ ಜನರು ಮೋದಿ ಅವರನ್ನು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಹೋಲಿಕೆ ಮಾಡಿ ನೆಹರು ಅವರು ಶಿರಾಶಾಸನ ಮಾಡಿದ ಫೋಟೋವನ್ನು ಹಾಕಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಎಲೆಕ್ಷನ್ ಸಮೀಕ್ಷೆಗೆ ರಾಹುಲ್ ಗಾಂಧಿಯಿಂದ 24 ಕೋಟಿ ವಸೂಲಿ?

    ಎಲೆಕ್ಷನ್ ಸಮೀಕ್ಷೆಗೆ ರಾಹುಲ್ ಗಾಂಧಿಯಿಂದ 24 ಕೋಟಿ ವಸೂಲಿ?

    – ರಮ್ಯಾ ಕೂಡ 8 ಕೋಟಿ ಪಡೆದುಕೊಂಡ್ರಾ?

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಮೀಕ್ಷೆ ಮಾಡುವ ನೆಪದಲ್ಲಿ ರಾಹುಲ್ ಗಾಂಧಿ ಅವರಿಂದ ಸುಮಾರು 24 ಕೋಟಿ ರೂ. ಹಣ ಪಡೆಯಲಾಗಿದೆ ಎಂದು ದಿ ಸಂಡೇ ಗಾರ್ಡಿಯನ್ ವರದಿ ಪ್ರಕಟಿಸಿದೆ.

    ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆ ಜವಾಬ್ದಾರಿ ವಹಿಸಿದ್ದ ಪ್ರವೀಣ್ ಚಕ್ರವರ್ತಿ ಅವರಿಗೆ 24 ಕೋಟಿ ರೂ. ಸಂದಾಯ ಆಗಿದೆ ಎಂದು ವಿವರಿಸಲಾಗಿದೆ. ಈ ಹಣದಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ಜವಾಬ್ದಾರಿ ವಹಿಸಿಕೊಂಡಿದ್ದ ರಮ್ಯಾ ಅವರಿಗೆ 8 ಕೋಟಿ ರೂ. ನೀಡಲಾಗಿದೆ. ಈ ಬಗ್ಗೆ ಅವರು ಯಾವುದೇ ರೀತಿಯ ಲೆಕ್ಕ ಕೊಟ್ಟಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಿಂದ ದೂರವಾಗಿದ್ದ ರಮ್ಯಾ ಅವರು ಇದೇ ಕಾರಣಕ್ಕೆ ಟ್ವಿಟ್ಟರ್ ತೊರೆದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ. ಅಲ್ಲದೆ ಹಣದ ಬಗ್ಗೆ ಸರಿಯಾದ ಲೆಕ್ಕ ನೀಡದ ಕಾರಣದಿಂದಲೇ ಎಐಸಿಸಿ ಅವರನ್ನು ಸಾಮಾಜಿಕ ಜಾಲತಾಣದಿಂದ ದೂರ ಇಟ್ಟಿದೆಯಾ ಎಂಬ ಪ್ರಶ್ನೆಯೂ ದೆಹಲಿ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

    ಚುನಾವಣಾ ಸಮಯದಲ್ಲಿ ರಾಹುಲ್ ಗಾಂಧಿ ಅವರಿಗೆ ಆತ್ಮೀಯವಾಗಿದ್ದ ತಂಡವೇ ಫಲಿತಾಂಶದ ವಿಚಾರದಲ್ಲಿ ಅವರಿಗೆ ತಪ್ಪು ಮಾಡಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 164 ರಿಂದ 184 ಸ್ಥಾನ ಗಳಿಸಲಿದೆ ಎಂದು ಕಾಂಗ್ರೆಸ್ ಆಂತರಿಕ ಸಮೀಕ್ಷೆಗಳಲ್ಲಿ ತಿಳಿಸಲಾಗಿತ್ತು ಎಂಬ ಮಾಹಿತಿ ಲಭಿಸಿದೆ.

    ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯನ್ನು ಹೆಣೆಯುತ್ತಿದ್ದ ರಾಹುಲ್ ಆಪ್ತರು, ಅಖಿಲೇಶ್ ಯಾದವ್, ಎಂಕೆ ಸ್ಟ್ಯಾಲಿನ್, ಓಮರ್ ಅಬ್ದುಲ್ಲ ಸೇರಿದಂತೆ ಹಲವು ನಾಯಕರೊಂದಿಗೆ ಯುಪಿಎ ಮೈತ್ರಿ ರಚಿಸಲು ಸಿದ್ಧತೆ ನಡೆಸಿದ್ದರು. ಕಾಂಗ್ರೆಸ್ ಪಕ್ಷದ ಸಮೀಕ್ಷೆಗಳು ನೀಡುವ ಮಾಹಿತಿಯಂತೆ ಕಾಂಗ್ರೆಸ್ 164ಕ್ಕೂ ಹೆಚ್ಚು ಸ್ಥಾನ ಪಡೆದು ಮೈತ್ರಿ ಮೂಲಕ ಅಧಿಕಾರ ರಚಿಸಲು ಸಿದ್ಧತೆ ನಡೆಸಿತ್ತು ಎಂದು ವರದಿಯಲ್ಲಿ ವಿವರಿಸಲಾಗಿದೆ. ಅಲ್ಲದೆ ಚುನಾವಣೆಯಲ್ಲಿ ಗೆಲುವು ಪಡೆದರೆ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ ನಡೆಸುವ ಪ್ಲಾನ್ ಕೂಡ ಮಾಡಿದ್ದರು.

    ಚುನಾವಣೆಯ ಫಲಿತಾಂಶದ ಬಳಿಕ ಪ್ರವೀಣ್ ಚಕ್ರವರ್ತಿ ಹಾಗೂ ಕಾಂಗ್ರೆಸ್ ಪಕ್ಷದ ಶಕ್ತಿ ಆ್ಯಪ್ ಸೇರಿದಂತೆ ವಿವಿಧ ಉಸ್ತುವಾರಿಗಳಿಂದ ದೂರವಾಗಿದ್ದಾರೆ. ಅಲ್ಲದೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಸಂಗ್ರಹಿಸಿದ್ದ ಮಾಹಿತಿಯನ್ನು ಕೂಡ ಸಲ್ಲಿಕೆ ಮಾಡಿಲ್ಲ. ಇದಕ್ಕಾಗಿ ಸುಮಾರು 24 ಕೋಟಿ ರೂ. ವೆಚ್ಚ ಮಾಡಿದ್ದರು. ಇದರೊಂದಿಗೆ ರಮ್ಯಾ ಅವರು ಕೂಡ 8 ರೂ. ಪಡೆದಿದ್ದರು ಎನ್ನಲಾಗಿದೆ.

    ರಾಹುಲ್ ಆಪ್ತರಾಗಿದ್ದ ಈ ತಂಡ ರಾಹುಲ್ ಅವರಿಗೆ ಮಾತ್ರವಲ್ಲದೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೂ ಇಂತಹದ್ದೇ ತಪ್ಪು ಮಾಹಿತಿ ನೀಡಿತ್ತು ಎಂದು ವರದಿ ತಿಳಿಸಿದೆ. ಚುನಾವಣೆ ಬಳಿಕ ಪಕ್ಷದ ನಾಯಕತ್ವವನ್ನು ಬೇರೆಯವರಿಗೆ ವಹಿಸಲು ರಾಹುಲ್ ಗಾಂಧಿ ರಾಜೀನಾಮೆ ಮುಂದಿಟ್ಟಿದ್ದರು. ಆದರೆ ಪಕ್ಷದ ಹಿರಿಯ ನಾಯಕರು ರಾಹುಲ್ ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆಯ ಸಿದ್ಧತೆ, ಪಕ್ಷದ ಮರು ಸಂಘಟನೆಗೆ ಒತ್ತಾಯ ಮಾಡಿದ್ದರು. ಚುನಾವಣೆ ಸಮಯದಲ್ಲಿ ತಮ್ಮ ಆಪ್ತರ ವರದಿಗಳನ್ನು ಹೆಚ್ಚು ನಂಬಿರುವುದೇ ಚುನಾವಣೆಯ ನೈಜತೆ ತಿಳಿಯಲು ರಾಹುಲ್ ಗಾಂಧಿ ಅವರಿಗೆ ಮುಳುವಾಯಿತಾ ಎಂಬ ಚರ್ಚೆ ಸದ್ಯ ಪಕ್ಷದ ವಲಯದಲ್ಲಿ ಜೋರಾಗಿದೆ.

  • ಚುನಾವಣೆಯಲ್ಲಿ ದಿಗ್ವಿಜಯ್ ಸಿಂಗ್‍ಗೆ ಸೋಲು – ಸಮಾಧಿಗೆ ಅವಕಾಶ ನೀಡಿ ಎಂದ ‘ಮಿರ್ಚಿ ಬಾಬಾ’

    ಚುನಾವಣೆಯಲ್ಲಿ ದಿಗ್ವಿಜಯ್ ಸಿಂಗ್‍ಗೆ ಸೋಲು – ಸಮಾಧಿಗೆ ಅವಕಾಶ ನೀಡಿ ಎಂದ ‘ಮಿರ್ಚಿ ಬಾಬಾ’

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಗೆಲ್ಲದಿದ್ದರೆ ಸಮಾಧಿ ಆಗುವುದಾಗಿ ಹೇಳಿದ್ದ ವೈರಗಾನಂದ್ ಬಾಬಾ ಅಲಿಯಾಸ್ ಮಿರ್ಚಿ ಬಾಬಾ ಮತ್ತೆ ಸುದ್ದಿಯಲ್ಲಿದ್ದಾರೆ.

    ಚುನಾವಣೆಯಲ್ಲಿ ದಿಗ್ವಿಜಯ್ ಸಿಂಗ್ ಅವರು ಸಾಧ್ವಿ ಪ್ರಗ್ಯಾ ಸಿಂಗ್ ವಿರುದ್ಧ ಗೆಲುವು ಪಡೆಯುತ್ತಾರೆ. ಇಲ್ಲವಾದರೆ ತಾವು ಸಮಾಧಿ ತೆಗೆದುಕೊಳ್ಳುವುದಾಗಿ ಬಾಬಾ ತಿಳಿಸಿದ್ದರು. ಸದ್ಯ ಸಾಧ್ವಿ ಪ್ರಗ್ಯಾ ಸಿಂಗ್ ಪ್ರಚಂಡ ಗೆಲುವು ಪಡೆದ ಕಾರಣ ತಾನು ಸಾಯೋದಕ್ಕೆ ಸಮಾಧಿ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಬಾಬಾರ ಈ ಮನವಿಯನ್ನು ಜಿಲ್ಲಾಧಿಕಾರಿಗಳು ತಳ್ಳಿ ಹಾಕಿದ್ದಾರೆ.

    ಲೋಕಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಮಿರ್ಚಿ ಬಾಬಾ ದಿಗ್ವಿಜಯ್ ಸಿಂಗ್ ಗೆಲುವಿಗಾಗಿ ಭಾರೀ ಪ್ರಮಾಣದಲ್ಲಿ ಹೋಮ ಹವನ ನಡೆಸಿದ್ದರು. ಆ ವೇಳೆ ಹವನ ಮಾಡಿಸಿದ್ದರೆ ದಿಗ್ವಿಜಯ್ ಸಿಂಗ್ ಗೆಲುವು ಖಚಿತ ಎಂದು ಹೇಳಿದ್ದರು. ಮಿರ್ಚಿ ಬಾಬಾ ಸಲ್ಲಿಸಿರುವ ಮನವಿ ಅನ್ವಯ ಜೂನ್ 16 ರ ಮಧ್ಯಾಹ್ನ 2 ಗಂಟೆ 11 ನಿಮಿಷಕ್ಕೆ ಬಾಬಾ ಸಮಾಧಿ ತೆಗೆದುಕೊಳ್ಳಲು ಅನುಮತಿ ನೀಡುವಂತೆ ಕೋರಿದ್ದರು.

  • ಮಾಧ್ಯಮಗಳಿಗೆ ಜೆಡಿಎಸ್‍ನಿಂದ ಬಹಿಷ್ಕಾರ!

    ಮಾಧ್ಯಮಗಳಿಗೆ ಜೆಡಿಎಸ್‍ನಿಂದ ಬಹಿಷ್ಕಾರ!

    ಬೆಂಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಗುರುತಿಸಿಕೊಂಡಿರುವ ಮಾಧ್ಯಮಗಳಿಗೆ ಜೆಡಿಎಸ್ ಬಹಿಷ್ಕಾರ ಹಾಕಿದೆ.

    ಇನ್ನು ಮುಂದೆ ಯಾರು ಮಾಧ್ಯಮಗಳ ಚರ್ಚೆಗೆ ಹೋಗಬಾರದು, ಯಾವುದೇ ಮಾಹಿತಿಯನ್ನು ನೀಡಬಾರದು ಅಂತ ಜೆಡಿಎಸ್ ಅಧಿಕೃತ ಆದೇಶ ಹೊರಡಿಸಿದೆ. ಹೀಗಾಗಿ ಪಕ್ಷದ ನಾಯಕರು, ವಕ್ತಾರರು ಹಾಗೂ ಶಾಸಕರು ಮಾಧ್ಯಮಗಳಿಂದ ದೂರ ಉಳಿಯುತ್ತಿದ್ದಾರೆ ಎಂದು ಜೆಡಿಎಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ನಗರದಲ್ಲಿ ಶುಕ್ರವಾರ ನಡೆದಿದ್ದ ಜೆಡಿಎಸ್ ಶಾಸಕಾಂಗ ಸಭೆಯ ಬಳಿಕ ಮಾತನಾಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು, ಮಾಧ್ಯಮಗಳ ಚರ್ಚೆಗೆ ಜೆಡಿಎಸ್ ನಾಯಕರು ಬರುವುದಿಲ್ಲ. ನಮ್ಮ ನಾಯಕರು ಈ ಬಗ್ಗೆ ನಮಗೆ ತಿಳಿಸಿದ್ದಾರೆ. ಮಾಧ್ಯಮಗಳ ನಡೆಯುವ ಚರ್ಚೆಗಳಿಗೆ ಜೆಡಿಎಸ್‍ನಿಂದ ಹಲವರು ಹೋಗುತ್ತಿದ್ದಾರೆ. ಹೀಗಾಗಿ ಪಕ್ಷದಿಂದ ವಕ್ತಾರರ ಪಟ್ಟಿ ಸಿದ್ಧ ಪಡಿಸಲಾಗುತ್ತದೆ. ಅಲ್ಲಿಯವರೆಗೆ ಮಾಧ್ಯಮಗಳ ಚರ್ಚೆಗೆ ಹೋಗದಂತೆ ಪಕ್ಷದ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

    ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ವಿರುದ್ಧ ಗುಡುಗಿದ್ದರು. ಅಷ್ಟೇ ಪುತ್ರ ನಿಖಿಲ್ ಸೋಲಿನ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಸರಿಯಾಗಿ ಪ್ರತಿಕ್ರಿಯೆ ನೀಡದೇ ದೂರ ಉಳಿಯುತ್ತಿದ್ದಾರೆ.

  • ಒಬ್ಬ ಶಾಸಕನಿಂದ ರಾಜೀನಾಮೆ ಕೊಡಿಸೋದು ಹುಡುಗಾಟಿಕೆ ಅಲ್ಲ: ಉಮೇಶ್ ಕತ್ತಿ

    ಒಬ್ಬ ಶಾಸಕನಿಂದ ರಾಜೀನಾಮೆ ಕೊಡಿಸೋದು ಹುಡುಗಾಟಿಕೆ ಅಲ್ಲ: ಉಮೇಶ್ ಕತ್ತಿ

    – ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ
    – ರಮೇಶ್ ಜಾರಕಿಹೊಳಿಯಿಂದ ಕಾಂಗ್ರೆಸ್‍ಗೆ ಆಪರೇಷನ್

    ಬೆಳಗಾವಿ: ಒಬ್ಬ ಶಾಸಕನಿಂದ ರಾಜೀನಾಮೆ ಕೊಡಿಸುವುದು ಹುಡುಗಾಟಿಕೆ ಮಾತಲ್ಲ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಶಾಸಕರು, ನಾವು ಆಪರೇಷನ್ ಕಮಲ ನಡೆಸುತ್ತಿಲ್ಲ. ಲೋಕಸಭಾ ಚುನಾವಣೆ ಹೀನಾಯ ಸೋಲಿನಿಂದಾಗಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಮ್ಮ ಸಂಪರ್ಕದಲ್ಲಿ ಯಾವುದೇ ಶಾಸಕರು ಇಲ್ಲ. ಆಪರೇಷನ್ ಮಾಡಲು ನಾವು ವೈದ್ಯರಲ್ಲ. ಕಾಂಗ್ರೆಸ್‍ನವರೇ ಬಿಜೆಪಿ ಶಾಸಕರನ್ನು ಸೇಳೆಯುವ ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಿದರು.

    ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್‍ಗೆ ಆಪರೇಷನ್ ಮಾಡುತ್ತಿದ್ದಾರೆ. ಬಿಜೆಪಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಬಂದರೂ ಸ್ವಾಗತ ಮಾಡುತ್ತೇವೆ. ಒಂದು ವಾರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬೇಡ. ಅದನ್ನು ನಿಭಾಯಿಸುವ ತಾಕತ್ತು ನನಗಿಲ್ಲ. ಮುಖ್ಯಮಂತ್ರಿಯಾಗುವ ಪವರ್ ಕೂಡ ನನಗಿಲ್ಲ. ಕೇವಲ ಮಂತ್ರಿಯಾಗಿ ಕೆಲಸ ಮಾಡುತ್ತೇನೆ. ನಮಗೆ ಯಾವುದೇ ಆಸೆ ಇಲ್ಲ. ರೈತರ ಪರವಾಗಿ ಇರುವ ಸರ್ಕಾರದಲ್ಲಿದ್ದು ಕೆಲಸ ಮಾಡುತ್ತೇನೆ ಎಂದರು.

    ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದರೂ ನಾನು ಹೋಗಲ್ಲ. ಎಚ್.ಡಿ.ದೇವೇಗೌಡ, ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಎಲ್ಲರೂ ನನ್ನ ಸಂಪರ್ಕದಲ್ಲಿ ಇದ್ದಾರೆ. ಅವರು ದಿನನಿತ್ಯ ಕರೆಯುತ್ತಾರೆ ಅದನ್ನು ಹೇಳಲಿಕ್ಕೆ ಆಗಲ್ಲ ಎಂದು ಹೇಳಿದರು.

    ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಡಬೇಕು. ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಬೇಕು. ಅವರಿಗೆ ಎಲ್ಲ ರೀತಿಯ ಯೋಗ್ಯತೆ ಇದೆ. ಆದಷ್ಟು ಬೇಗ ಯತ್ನಾಳ್ ಅವರು ರಾಜ್ಯಾಧ್ಯಕ್ಷರಾಗಲಿ ಅಂತ ಆಗ್ರಹಿಸುವೆ ಎಂದು ಶಾಸಕ ಯತ್ನಾಳ್ ಅವರ ಪರ ಬ್ಯಾಟ್ ಬೀರಿದರು.

  • ಸೋಲಿನಿಂದ ಯಾರೂ ಕೆಂಗೆಟ್ಟಿಲ್ಲ, ಎಚ್‍ಡಿಡಿ ಫಿನಿಕ್ಸ್‌ನಂತೆ ಎದ್ದು ಬರ್ತಾರೆ: ಜಿಟಿಡಿ

    ಸೋಲಿನಿಂದ ಯಾರೂ ಕೆಂಗೆಟ್ಟಿಲ್ಲ, ಎಚ್‍ಡಿಡಿ ಫಿನಿಕ್ಸ್‌ನಂತೆ ಎದ್ದು ಬರ್ತಾರೆ: ಜಿಟಿಡಿ

    ಬೆಂಗಳೂರು: ಲೋಕಸಭಾ ಚುನಾವಣಾ ಸೋಲಿನಿಂದ ಯಾರೂ ಕೆಂಗೆಟ್ಟಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಫಿನಿಕ್ಸ್‌ನಂತೆ ಎದ್ದು ಬರುತ್ತಾರೆ ಎಂದು ಅಂತ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಚುನಾವಣೆಯಲ್ಲಿ ಸೋತವನು ನಾನು. ಮತ್ತೆ ಪಕ್ಷ ಕಟ್ಟುತ್ತೇನೆ ಎಂದು ಎಚ್.ಡಿ.ದೇವೇಗೌಡ ಅವರು ಚಾಲೆಂಜ್ ಮಾಡಿದ್ದಾರೆ. ಅವರು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತಾರೆ. ನಿನ್ನೆಯ ಸಭೆಯಲ್ಲಿ ದೇವೇಗೌಡರು ಇದನ್ನೇ ಹೇಳಿದ್ದಾರೆ ಎಂದು ಹೇಳಿದರು.

    ಪ್ರಜ್ವಲ್ ರೇವಣ್ಣ ಕೂಡಾ ರಾಜೀನಾಮೆ ಕೊಡಲ್ಲ. ಈ ಸಂಬಂಧ ದೇವೇಗೌಡರು ಪ್ರಜ್ವಲ್ ಅವರ ಜೊತೆ ಮಾತನಾಡಿದ್ದಾರೆ. ನನ್ನ ಆಶೀರ್ವಾದದಿಂದ ಗೆದ್ದಿದ್ದೀಯ. ನೀನು ಕ್ಷೇತ್ರ ಅಭಿವೃದ್ಧಿ ಮಾಡಬೇಕು ಅಂತ ಸಲಹೆ ನೀಡಿದ್ದಾರೆ. ಹೀಗಾಗಿ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು.

    ನಿಖಿಲ್ ಕುಮಾರಸ್ವಾಮಿ ಅವರು ಕೂಡ ಯಾವುದೇ ನೋವಿನಲ್ಲಿ ಇಲ್ಲ. ಸೋತರೂ ಉತ್ಸಾಹದಿಂದ ನಮ್ಮ ಜೊತೆ ಮಾತಾಡುತ್ತಿದ್ದಾರೆ. ಸೋಲೇ ಗೆಲುವಿನ ಮೆಟ್ಟಿಲು ಅಂತ ತಿಳಿದು ಉತ್ಸಾಹದಿಂದ ಇದ್ದಾರೆ ಎಂದು ಹೇಳಿದರು.

    ಪ್ರಜಾಪ್ರಭುತ್ವದಲ್ಲಿ ಜನರೇ ತೀರ್ಪೇ ಅಂತಿಮ. ಸೋಲು ನಾವು ಒಪ್ಪಿಕೊಂಡಿದ್ದೇವೆ. ಪ್ರಧಾನಿ ಮೋದಿ ಅವರಿಗೆ ಶುಭಾಶಯ ಕೋರಿದ್ದೇವೆ. ಸೋಲಿನಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಸರ್ಕಾರ ಶೇ. 100 ಸೇಫ್ ಆಗಿದೆ. ಸರ್ಕಾರಕ್ಕೆ ಏನು ತೊಂದರೆ ಇಲ್ಲ. ಈ ಸೋಲು ಎಲ್ಲರಿಗೂ ಒಂದು ದೊಡ್ಡ ಪಾಠವಾಗಿದೆ. ಜನರು ಉತ್ತಮ ಸರ್ಕಾರ ನಡೆಸಲು ನಮಗೆ ಚಾಟಿ ಏಟು ನೀಡಿದ್ದಾರೆ. ಇದನ್ನು ನಾವು ಅರ್ಥ ಮಾಡಿಕೊಂಡು ನಾಲ್ಕು ವರ್ಷ ಕೆಲಸ ಮಾಡಬೇಕು ಎಂದು ಮೈತ್ರಿ ನಾಯಕರಿಗೆ ಕಿವಿ ಮಾತು ಹೇಳಿದರು.