Tag: lokayuktha

  • ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

    ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

    ಬೆಂಗಳೂರು: ಸಚಿವ ಜಮೀರ್ ಅಹ್ಮದ್ (Zameer Ahmed) ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ (Dinesh Gundurao) ಲೋಕಾಯುಕ್ತ ಪೊಲೀಸರು (Lokayuktha Police) ನೋಟಿಸ್ ನೀಡಿದ್ದಾರೆ.

    ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿದ್ದ ದಿನೇಶ್ ಗುಂಡೂರಾವ್‌ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.ಇದನ್ನೂ ಓದಿ: ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

    ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.

    ಏನಿದು ಪ್ರಕರಣ?
    2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್ ಅಹಮದ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು.

    ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.

    ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು.

    ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌

  • ಮುಡಾ ಕೇಸ್ | ಅಕ್ರಮ ಸೈಟ್ ಹಂಚಿಕೆ ಆರೋಪ – ಮಾಜಿ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಅಸ್ತು

    ಮುಡಾ ಕೇಸ್ | ಅಕ್ರಮ ಸೈಟ್ ಹಂಚಿಕೆ ಆರೋಪ – ಮಾಜಿ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಅಸ್ತು

    ಮೈಸೂರು: ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮುಡಾದ (MUDA case) ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ.

    ಮುಡಾದ (Mysure Urban Development Authority) ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇ.ಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದನ್ನೂ ಓದಿ: ಮುಡಾ ಹಗರಣ : ಇಡಿಯಿಂದ 100 ಕೋಟಿ ಮೌಲ್ಯದ 92 ಆಸ್ತಿ ಮುಟ್ಟುಗೋಲು

    ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮುಡಾ ಹಗರಣ ಕೇಸ್ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ಅಸಮಾಧಾನ ಹೊರಹಾಕಿದೆ. 6 ತಿಂಗಳಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಪ್ರಾಸಿಕ್ಯೂಷನ್ ಅನುಮತಿ ಎಂದು ತಡವಾಗುತ್ತಿದೆ ಎಂದು ಚಾಟಿ ಬೀಸಿದೆ.

    ಇದೆಲ್ಲದರ ನಡುವೆ ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶಿಸಿ ಎಂದು ಸ್ನೇಹಮಯಿ ಕೃಷ್ಣ ಅವರು ಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಹೆಚ್.ವಿ ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದಾರೆ. ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.29ಕ್ಕೆ ಮುಂದೂಡಿದೆ. ಇದನ್ನೂ ಓದಿ: ಮುಡಾ ಹಗರಣ ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ಆಯೋಗದ ವರದಿ ಸಲ್ಲಿಕೆ

  • ಬಾಣಂತಿಯರ ಸಾವು ಪ್ರಕರಣ – ವೈದ್ಯರ ವಿರುದ್ಧ ಕುಟುಂಬಸ್ಥರಿಂದ ಲೋಕಾಯುಕ್ತಕ್ಕೆ ದೂರು

    ಬಾಣಂತಿಯರ ಸಾವು ಪ್ರಕರಣ – ವೈದ್ಯರ ವಿರುದ್ಧ ಕುಟುಂಬಸ್ಥರಿಂದ ಲೋಕಾಯುಕ್ತಕ್ಕೆ ದೂರು

    ರಾಯಚೂರು: ಜಿಲ್ಲೆಯ ದೇವದುರ್ಗ (Devadruga) ತಾಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮದ ಬಾಣಂತಿ ಸಾವು ಪ್ರಕರಣದ ಹಿನ್ನೆಲೆ ಬಾಣಂತಿ ಸಾವಿಗೆ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಬಾಣಂತಿಯ ತಾಯಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

    ದೇವದುರ್ಗ ತಾಲೂಕಾಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಶಿವಾನಂದ, ವೈದ್ಯ ಡಾ.ಗಂಗಾಧರ, ನರ್ಸ್‌ಗಳಾದ ಜ್ಯೋತಿ, ಲಕ್ಷ್ಮೀ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು, ದೇವದುರ್ಗ ಪೊಲೀಸ್ ಠಾಣೆಯಲ್ಲಿಯೂ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.ಇದನ್ನೂ ಓದಿ: ಬಸ್ ಬಾರದಕ್ಕೆ ಸಾರಿಗೆ ಅಧಿಕಾರಿಗೆ ವಿದ್ಯಾರ್ಥಿಗಳ ತರಾಟೆ

    ನ.20 ರಂದು 30 ವರ್ಷದ ರೇಖಾ ದೇವದುರ್ಗ ತಾಲ್ಲೂಕು ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶುಸಹಿತ ಸಾವನ್ನಪ್ಪಿದ್ದರು. ಸರಿಯಾದ ಸಮಯಕ್ಕೆ ಹೆರಿಗೆ ಮಾಡದೆ, ಚಿಕಿತ್ಸೆ ನೀಡದೆ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯಿಸಿದ್ದಕ್ಕೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತ ಬಾಣಂತಿಯ ತಾಯಿ ಬಸಮ್ಮ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

    ಮೃತಳ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ದೇವದುರ್ಗ ತಾಲೂಕಾಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಮೃತಳ ಕುಟುಂಬಸ್ಥರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಪ್ರಭಾಸ್ ಸಿನಿಮಾದಲ್ಲಿ ನಯನತಾರಾ ಐಟಂ ಡ್ಯಾನ್ಸ್?

  • ಸಿಎಂ ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ: ಡಿಕೆಶಿ

    ಸಿಎಂ ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ: ಡಿಕೆಶಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಏನು ತಪ್ಪು ಮಾಡಿಲ್ಲ, ಕಾನೂನಿಗೆ ಗೌರವ ಕೊಟ್ಟು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಡಿಸಿಎಂ ಡಿಕೆಶಿವಕುಮಾರ್ (DCM DK Shivakumar) ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.ಇದನ್ನೂ ಓದಿ: 132 ವರ್ಷ ದಾಖಲೆ ಸರಿಗಟ್ಟಿದ ಟ್ರಂಪ್‌ – ಗೆದ್ದಿದ್ದು ಹೇಗೆ?

    ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ (Lokayuktha) ವಿಚಾರಣೆಗೆ ಹಾಜರಾದ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಅವರು ಕಾನೂನಿಗೆ ಗೌರವ ಕೊಟ್ಟಿದ್ದಾರೆ. ಸಿಎಂಗೆ ನೋಟಿಸ್ ಕೊಟ್ಟಿದ್ರು, ಚುನಾವಣೆ ಪ್ರಚಾರ ಇದ್ದರೂ ಕೂಡ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಕಾನೂನಿಗೆ ಗೌರವ ಕೊಡಬೇಕು ಎಂದು ಪ್ರಚಾರವನ್ನು ಕೈಬಿಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಸಿಎಂ ಅವರು ಒಂದು ವಾರ ವಿನಾಯಿತಿ ಕೇಳಬಹುದಿತ್ತು. ಆದರೆ ಅಧಿಕಾರದಲ್ಲಿ ಇದ್ದುಕೊಂಡು ಅಧಿಕಾರ ದುರುಪಯೋಗ ಮಾಡಬಾರದು ಎಂದು ಹೇಳಿ ಕಾನೂನಿಗೆ ಗೌರವ ಕೊಟ್ಟು ಹೋಗಿದ್ದಾರೆ. ಸಿಎಂ ಏನು ತಪ್ಪು ಮಾಡಿಲ್ಲ. ಲೋಕಾಯುಕ್ತ ಏನು ಕೇಳುತ್ತಾರೋ ಅದಕ್ಕೆ ಉತ್ತರ ಕೊಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದರು.

    ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಲೋಕಾಯುಕ್ತ ಕೇಳಿರುವ ಪ್ರಶ್ನೆಗಳ ಕುರಿತು ಮುಡಾದಲ್ಲಿ ಹಗರಣದಲ್ಲಿ ಏನಿದೆ? ಏನು ಇಲ್ಲ? ಮಂಜೂರು ಮಾಡಿಲ್ಲ, ಸಹಿಯೂ ಹಾಕಿಲ್ಲ ಎಂದು ನೀವು ಲೋಕಾಯುಕ್ತ ಅಧಿಕಾರಿಗಳಿಗೆ ಕೇಳಬೇಕು. ಲೋಕಾಯುಕ್ತದವರು ಕರೆದಿದ್ದರು. ಸಿಎಂ ಹೋಗಿದ್ದಾರೆ ಅಷ್ಟೇ ಎಂದು ತಿಳಿಸಿದರು.ಇದನ್ನೂ ಓದಿ: ‘ಜೈ ಹನುಮಾನ್’ ಸಿನಿಮಾದಲ್ಲಿ ರಾಮನಾಗಿ ರಾಣಾ ದಗ್ಗುಬಾಟಿ?

  • ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡೋಕೆ ಆಗುತ್ತೆ – ಶೋಭಾ

    ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡೋಕೆ ಆಗುತ್ತೆ – ಶೋಭಾ

    ವಿಜಯಪುರ: ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನು ಹೇಗೆ ಅಪರಾಧಿ ಮಾಡಲು ಸಾಧ್ಯ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಪ್ರಶ್ನಿಸಿದರು.

    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಲೋಕಾಯುಕ್ತದಿಂದ ಸಿಎಂ ವಿಚಾರಣೆ ವಿಚಾರವಾಗಿ ಮಾತನಾಡಿದ ಅವರು, 2013ರಲ್ಲಿ ಲೋಕಾಯುಕ್ತ ಬಂದ್ ಮಾಡಿದ್ಯಾಕೆ? ನಿಮ್ಮ ಮೇಲಿನ ಕೇಸ್ ಮುಚ್ಚಿ ಹಾಕುವ ಸಲುವಾಗಿ ಲೋಕಾಯುಕ್ತವನ್ನು ಮುಚ್ಚಿ ಹಾಕಿದ್ದೀರಿ. ಲೋಕಾಯುಕ್ತದಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ವಿಚಾರಣೆ ಮಾಡುವವರು, ಮಾಹಿತಿ ಪಡೆಯುವವರು ಎಲ್ಲರೂ ನಿಮ್ಮವರೆ. ಕೆಲ ಫೈಲ್‌ಗಳನ್ನು ಸುಡಲಾಗಿದೆ. ಕೆಲ ಫೈಲ್ ತಿದ್ದುಪಡಿಯಾಗಿವೆ. ಮುಡಾದಲ್ಲಿ ಸಾವಿರ ಕೋಟಿ ರೂ. ಅವ್ಯವಹಾರ ಎಂದು ಮಾಹಿತಿ ಇದೆ. ನಿಮ್ಮದೇ ಲೋಕಾಯುಕ್ತ, ನಿಮ್ಮ ಅಧಿಕಾರಿಗಳು ನಿಮ್ಮನ್ನ ಹೇಗೆ ಅಪರಾಧಿ ಮಾಡೋಕಾಗುತ್ತದೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

    ಸಿಎಂ ಸಿದ್ದರಾಮಯ್ಯನವರೇ (CM Siddaramaiah) ಮೊದಲು ರಾಜೀನಾಮೆ ನೀಡಿ, ರಾಜೀನಾಮೆ ಕೊಟ್ಟು ನೀವು ವಿಚಾರಣೆಯನ್ನು ಎದುರಿಸಿ, ಇಡಿ ಎದುರು ಫೈಲ್ ಕಳೆದು ಹೋಗಿದೆ ಎಂದಿದ್ದಾರೆ. ಇನ್ನೂ ಬೈರತಿ ಮೇಲೆ, ಸಿಎಂ, ಸಿಎಂ ಪತ್ನಿ ಮೇಲೆ ಕ್ರಮವಾಗಬೇಕು. ನೀವು ನಿರಪರಾಧಿ ಅಲ್ಲ. ರಾಜೀನಾಮೆ ಕೊಡಿ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಪ್ರಧಾನಿ ಮೋದಿ, ಅವರ ಶಿಷ್ಯಂದಿರಿಗೆ ಅಭಿವೃದ್ದಿ ಬೇಕಿಲ್ಲ: ಬೋಸರಾಜು

    ಮುಡಾ ಕೇಸ್ ಸಿಬಿಐಗೆ ಕೊಡಬೇಕು. ಅಪರಾಧಿ ಅಲ್ಲ ಎಂದರೆ ಸತ್ಯ ಹೊರಗೆ ಬರುತ್ತದೆ. ಸಿಬಿಐ ಎದುರು ವಿಚಾರಣೆ ಎದುರಿಸಿ, ಅದು ವಕ್ಫ್ ನೋಟಿಸ್ ಕೊಟ್ಟಂತೆ ಅಲ್ಲಾ. ಡಿಜಿಟಲೀಕರಣಕ್ಕೆ 300 ಕೋಟಿ ರೂ. ಕೊಟ್ಟಿದ್ದು ಸರಿ ಇದೆ. ಆದರೆ ಆ ಹಣವನ್ನು ವಕ್ಫ್ ಆಸ್ತಿ ಮಾರಾಟ ಮಾಡಿ ಪಡೆದುಕೊಂಡಿದ್ದಾರೆ. ವಕ್ಫ್ ಆಸ್ತಿ ಮುಸ್ಲಿಂ ಮುಖಂಡರ ಪಾಲಾಗಿದೆ. ಖರ್ಗೆ ಕುಟುಂಬ, ಹ್ಯಾರಿಸ್, ಜಮೀರ್ ಕುಟುಂಬದ ಹೆಸರಿದೆ. ಇದೆ ಕಾರಣಕ್ಕೆ ಈ ವಿಚಾರಗಳು ಬರುತ್ತಿವೆ. ವಿಜಯಪುರದಲ್ಲಿ (Vijayapura) ರೈತರಿಗೆ ನೋಟಿಸ್ ಕೊಟ್ಟಂತೆ ದೇಶದೆಲ್ಲೆಡೆ ಕೊಟ್ಟಿದ್ದೀರಿ. ನಿಮ್ಮ ಟ್ರಿಬ್ಯುನಲ್ ಎದುರು ನಾವು ಕೈಕಟ್ಟಿ ನಿಲ್ಲಬೇಕು. 5 ಲಕ್ಷ ಎಕರೆ ಇದ್ದದ್ದು, 9.5 ಲಕ್ಷ ಎಕರೆ ಆಗಿದೆ, ಅದು ಹೇಗೆ? ಯಾವ ಅಲ್ಲಾನ ಭಕ್ತ ದಾನ ಕೊಟ್ಟ ಹೇಳಿ ಎಂದು ಪ್ರಶ್ನಿಸಿದ್ದಾರೆ.

    ಇದೇ ವೇಳೆ ಬೆಳಗಾವಿಯಲ್ಲಿ ತಹಶೀಲ್ದಾರ್ ಕಚೇರಿ ಅಧಿಕಾರಿ ಆತ್ಮಹತ್ಯೆ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‌ನಲ್ಲಿ ಪದೇ ಪದೇ ಅಧಿಕಾರಿಗಳ ಆತ್ಮಹತ್ಯೆ ನಡೆಯುತ್ತಿವೆ. ತಮ್ಮ ಸುತ್ತಮುತ್ತ ಕಮೀಷನ್ ಏಜೆಂಟರನ್ನು ಇಟ್ಟುಕೊಂಡಿದ್ದಾರೆ. ಬಹಳ ಜನ ಅಧಿಕಾರಿಗಳು ಬಲಿಯಾಗಿದ್ದಾರೆ. ಕೆಲವರು ಸಹವಾಸವೇ ಬೇಡ ಎಂದು ಕೆಲಸವನ್ನೇ ಬಿಟ್ಟು ಹೋಗ್ತಿದ್ದಾರೆ. ರಾಜ್ಯದಲ್ಲಿ ತಹಶೀಲ್ದಾರ್ ಕಚೇರಿಗಳು, ಕಮೀಷನ್ ಏಜೆಂಟರ್ ಕಚೇರಿಯಾಗಿವೆ. ನೀವೇ ಕಚೇರಿಗಳನ್ನ ಕಮೀಷನ್ ಕಚೇರಿ ಮಾಡಿದ್ದೀರಿ. ಹೆಬ್ಬಾಳ್ಕರ್ ತಪ್ಪು ಮಾಡಿ ಹೀಗೆ ಹೇಳಿಕೊಳ್ಳುತ್ತಿದ್ದಾರೆ. ಈಗ ನನಗೆ ಸಂಬAಧ ಇಲ್ಲ ಎನ್ನುತ್ತಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಪಿಎ ಮಂಪರು ಪರೀಕ್ಷೆ ಆಗಬೇಕು ಎಂದು ಹೇಳಿದರು.ಇದನ್ನೂ ಓದಿ: ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಜಯ ನಿಶ್ಚಿತ: ಎಂಡಿ ಲಕ್ಷ್ಮೀನಾರಾಯಣ

  • ಭ್ರಷ್ಟಾಚಾರ ಕೇಸ್ – ಶಿರಸಿ ಬಿಜೆಪಿ ನಾಯಕಿಗೆ 1 ವರ್ಷ ಜೈಲು, 5 ಸಾವಿರ ರೂ. ದಂಡ

    ಭ್ರಷ್ಟಾಚಾರ ಕೇಸ್ – ಶಿರಸಿ ಬಿಜೆಪಿ ನಾಯಕಿಗೆ 1 ವರ್ಷ ಜೈಲು, 5 ಸಾವಿರ ರೂ. ದಂಡ

    ಕಾರವಾರ: ಭ್ರಷ್ಟಾಚಾರದ ಪ್ರಕರಣದಲ್ಲಿ ಶಿರಸಿ (Sirsi) ಗ್ರಾಮೀಣ ಬಿಜೆಪಿ (BJP) ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ (Uttara Kannada) ಜಿಲ್ಲಾ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆಗೆ (Usha Hegde) ಕಾರವಾರದ ಲೋಕಾಯುಕ್ತ ನ್ಯಾಯಾಲಯ (Lokayuktha Court) ಒಂದು ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಅಂಗನವಾಡಿ ಕಾರ್ಯಕರ್ತೆಯಾಗಿ ಹಾಜರಾಗಿದ್ದರು.ಇದನ್ನೂ ಓದಿ: ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ

    ಜಿ.ಪಂ.ಸದಸ್ಯತ್ವದ ಅಧಿಕಾರದಲ್ಲಿದ್ದಾಗ ಜ.2011 ರಿಂದ ನ.2012 ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ಸರ್ಕಾರದಿಂದ ಗೌರವಧನ 88,630 ರೂ. ಪಡೆದುಕೊಂಡಿದ್ದಾರೆ. ಒಟ್ಟು ಎರಡು ಹುದ್ದೆಗಳನ್ನು ಹೊಂದಿದ್ದು, ಜನಪ್ರತಿನಿಧಿಯಾದ ನಂತರವೂ ಅಂಗನವಾಡಿ ಕಾರ್ಯಕರ್ತೆಯೆಂದು ಗೌರವಧನ ಪಡೆದು, ಸರ್ಕಾರಕ್ಕೆ ಮೋಸ ಮಾಡಿದ್ದಾಗಿ ಆರೋಪಿಸಲಾಗಿತ್ತು.

    ಉಷಾ ರವೀಂದ್ರ ಹೆಗಡೆ ಏಕಕಾಲದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ಪಂಚಾಯತ್ ಬದನಗೋಡ ಕ್ಷೇತ್ರದ ಸದಸ್ಯತ್ವ ಹುದ್ದೆಯನ್ನು ಸರಿಯಾಗಿ ನಿಭಾಯಿಸದೇ ಹಾಗೂ ಅಂಗನವಾಡಿ ಕರ್ತವ್ಯದಲ್ಲಿಯೂ ಸರಿಯಾಗಿ ಹಾಜರಿರದೇ, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಜರಾತಿ ಪುಸ್ತಕದಲ್ಲಿ ಹಾಜರಿರುವುದಾಗಿ ಸುಳ್ಳು ಸಹಿ ಮಾಡಿದ್ದಾರೆ ಮತ್ತು ಈ ಮೂಲಕ ಭಾರತೀಯ ದಂಡ ಸಹಿತ ಕಲಂ 468ರ ಮೇರೆಗೆ ದಂಡನೀಯವಾದ ಅಪರಾಧವನ್ನು ಎಸಗಿದ್ದಾಗಿ ಆರೋಪಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಇಬ್ರಾಹಿಂ ನಬಿಸಾಬ್ ದೂರು ನೀಡಿದ್ದು, ಲೋಕಾಯುಕ್ತ ಪರ ಕಾರವಾರದ ಎಲ್.ಎಂ.ಪ್ರಭು ವಾದಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಎರಡು ಹುದ್ದೆ ಮಾಡಲು ಬರುವುದಿಲ್ಲ. ಸರ್ಕಾರದ ಆದೇಶದಂತೆ ಒಂದು ಹುದ್ದೆಗೆ ರಾಜೀನಾಮೆ ನೀಡಿ ಎಂದು ಮೌಖಿಕವಾಗಿ ಹಾಗೂ ಲಿಖಿತವಾಗಿ ಸೂಚಿಸಲಾಗಿತ್ತು. ಆದರೂ ಉಷಾ ಹೆಗಡೆ ಇಲಾಖೆಯ ಆದೇಶ ಹಾಗೂ ಧಾರವಾಡ ಹೈಕೋರ್ಟ್ ಸಂಚಾರಿ ಪೀಠ ನೀಡಿದ ಆದೇಶವನ್ನು ಧಿಕ್ಕರಿಸಿದ್ದರು. ಈ ಅಂಶಗಳನ್ನು ಜಿಲ್ಲಾ ಪ್ರಧಾನ ಸೆಷನ್ಸ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.ಇದನ್ನೂ ಓದಿ: ಮಲಾಗೆ ಗೂಗಲ್‌, ಮೈಕ್ರೋಸಾಫ್ಟ್‌ ಭಾರೀ ದೇಣಿಗೆ – ಟ್ರಂಪ್‌ಗೆ ಅಮೆರಿಕನ್‌ ಏರ್‌ಲೈನ್ಸ್‌, ವಾಲ್‌ಮಾರ್ಟ್‌ ಸಹಾಯ

  • ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಬೆಂಗಳೂರು: ಮುರಘಾ ಮಠದ ಶ್ರೀಗಳಿಗೆ ಚಿಕಿತ್ಸೆ ನಿಡಿದ್ದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

    ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಂಗನಾಥ್, ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್, ಕಾರಾಗೃಹ ಅಧಿಕಾರಿ ಎಂ.ಎಂ ಮರಕಟ್ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಈ ಮೂವರು ಜಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಕರ್ತವ್ಯಲೋಪ ಎಸಗಿದ್ದಾರೆ, ಪ್ರಭಾವಿ ಆರೋಪಿಯ ರಕ್ಷಣೆ ಮಾಡುವ ಹುನ್ನಾರವನ್ನೂ ನಡೆಸಿದ್ದಾರೆ. ಹಾಗಾಗಿ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅರ್ಶ್‌ದೀಪ್‌ ಟೀಕಿಸುವ ಬದಲು ಧೈರ್ಯ ತುಂಬಿ – ಮುಂದಿನ ಭಾನುವಾರಕ್ಕೆ ಸಜ್ಜಾಗಿ: ಮಾಜಿ ಆಟಗಾರರ ಸಲಹೆ

    ದೂರಿನಲ್ಲಿ ಏನಿದೆ?
    ಚಿತ್ರದುರ್ಗ ಜಿಲ್ಲೆಯ ಮುರಘಾ ಮಠದಲ್ಲಿನ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೊದಲನೇ ಆರೋಪಿ ನ್ಯಾಯಾಂಗ ಬಂಧನಲ್ಲಿದ್ದರು. ಈ ವೇಳೆ ತುಂಬಾ ಎದೆ ನೋವಿದೆ ಎಂದ ತಕ್ಷಣ ನ್ಯಾಯಾಲಯದ ಗಮನಕ್ಕೂ ತರದೆ ಚಿತ್ರದುರ್ಗ ಜಿಲ್ಲಾಸತ್ರೆಗೆ ಮುಂಜಾನೆ ದಾಖಲಿಸಿ ಚಿಕಿತ್ಸೆ ನಿಡಲು ಮುಂದಾಗಿದ್ದರು. ಚಿಕಿತ್ಸೆ ನೀಡುವ ಹಂತದಲ್ಲಿ ಅಲ್ಲಿನ ವೈದ್ಯಾಧಿಕಾರಿ ಇವರಿಗೆ ತೀವ್ರ ತರವಾದ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಸುಳ್ಳು ಹೇಳಿ, ದಾಖಲೆಗಳನ್ನೂ ಸೃಷ್ಟಿಸಿ ದಾವಣಗೆರೆಯ ಖಾಸಗಿ ಹೃದಯ ತಜ್ಞರನ್ನು ಕರೆಸಿ ಆರೋಪಿಗೆ ತೀವ್ರತರವಾದ ಎದೆ ನೋವಿದೆ, ಹೃದಯಕ್ಕೆ ಘಾಸಿಯಾಗಿದೆ. ಈ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯಕೀಯ ಸೌಲಭ್ಯವಿಲ್ಲ, ಇವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆ ನೀಡಬೇಕೆಂದು ಹೇಳಿದ್ದಾರೆ. ತಕ್ಷಣ ಆರೋಪಿಯನ್ನು ಐಸಿಯುನಲ್ಲಿ ದಾಖಲಿಸಿ, ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹುನ್ನಾರವನ್ನೂ ನಡೆಸಿದ್ದರು.

    ಪ್ರಭಾವಿ ಸ್ಥಾನದಲ್ಲಿರುವ ಆರೋಪಿಯ ರಕ್ಷಣೆಗೆ ನಿಂತ ಈ ಸರ್ಕಾರದ ಅಧಿಕಾರಿಗಳಾದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಂ.ಎಂ ಮರಕಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಂಗನಾಥ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್ ಕರ್ತವ್ಯ ಲೋಪವೆಸಗಿ ಆರೋಪಿಯ ಜೊತೆ ಶಾಮೀಲಾಗಿ ಬೃಹತ್ ನಾಟಕ ಆಡಿರುತ್ತಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಯಾರನ್ನೂ ವಿಚಾರಣೆ ಮಾಡ್ಬೇಡಿ: ಮಡಿವಾಳೇಶ್ವರ ಸ್ವಾಮೀಜಿ ಡೆತ್‍ನೋಟ್

    ಮುರುಘಾ ಶ್ರೀ ಜೈಲಿಗೆ:
    ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭಾನುವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್‌ಸಿ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾ ಕೋಮಲಾ ವಿಚಾರಣೆ ಮುಗಿತಾ ಎಂದು ಪ್ರಶ್ನಿಸಿದರು. ಈ ವೇಳೆ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳದ ಕಾರಣ ನ್ಯಾಯಾಧೀಶರು ಸೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸಿಎಂ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಬಿಎಸ್‍ವೈ: ಚರ್ಚೆಗೆ ಟಾಪಿಕ್ ಟ್ವೀಟ್ ಮಾಡಿ ತಿರುಗೇಟು

    ಸಿಎಂ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಬಿಎಸ್‍ವೈ: ಚರ್ಚೆಗೆ ಟಾಪಿಕ್ ಟ್ವೀಟ್ ಮಾಡಿ ತಿರುಗೇಟು

    ಬೆಂಗಳೂರು: ಬಹಿರಂಗ ಚರ್ಚೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಎಸೆದಿದ್ದ ಸವಾಲನ್ನು ಬಿಎಸ್ ಯಡಿಯೂರಪ್ಪ ಸ್ವೀಕರಿಸಿದ್ದಾರೆ.

    ಪ್ರಧಾನಿ ಮೋದಿಯವರು ತಮ್ಮ ಆಧಾರ ರಹಿತ ಹೇಳಿಕೆಗಳ ಮೂಲಕ ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರತಿಸ್ಪರ್ಧಿ ಯಡಿಯೂರಪ್ಪ.ರಾಜ್ಯದ ಅಭಿವೃದ್ಧಿಗಾಗಿ ನಾವುಗಳು ಮಾಡಿರುವ ಕೆಲಸಗಳ ಬಗ್ಗೆ ಜನರ ಸಮ್ಮುಖದಲ್ಲಿ ಬಹಿರಂಗ ಚರ್ಚೆ ಮಾಡೋಣ. ಯಾರು ಉತ್ತಮ ಕೆಲಸ ಮಾಡಿದ್ದೇವೆ ಎನ್ನುವುದನ್ನು ಜನರು ನಿರ್ಧರಿಸಲಿ ಸಿಎಂ ಇಂದು ಟ್ವೀಟ್ ಮಾಡಿ ಸವಾಲು ಎಸೆದಿದ್ದರು.

    ಚರ್ಚೆಗಾಗಿ ನೀವು ತಿಳಿಸಿದ ದಿನ, ಸಮಯ ಮತ್ತು ಸ್ಥಳಕ್ಕೆ ಬರಲು ನಾನು ಸಿದ್ಧ. ಮೋದಿಯವರನ್ನು ಸ್ವಾಗತಿಸುತ್ತೇನೆ. ನಿಮ್ಮ ಕರೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

    ಈ ಸವಾಲಿಗೆ ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪನವರು ಹ್ಯೂಬ್ಲೊಟ್ ವಾಚ್ ಚರ್ಚೆಗೆ ಒಳ್ಳೆಯ ಸಮಯವನ್ನು ಆಯ್ಕೆ ಮಾಡಿದ್ದೀರಿ. ನಿಮ್ಮ ದೇಶಭ್ರಷ್ಟ ಸ್ನೇಹಿತ ವಿಜಯ್ ಈಶ್ವರನ್ ಅನ್ನು ಕರೆದುಕೊಂಡು ಬನ್ನಿ, ಜೊತೆಗೆ ಎಲ್ ಗೋವಿಂದರಾಜು ಅವರ ಡೈರಿಯನ್ನು ತೆಗೆದುಕೊಂಡು ಬನ್ನಿ ಎಂದು ಬರೆದು ಸವಾಲು ಸ್ವೀಕರಿಸಿದ್ದಾರೆ.

    ಲೋಕಾಯುಕ್ತ ಸಂಸ್ಥೆಯನ್ನು ಹಲ್ಲು ಕಿತ್ತ ಹಾವಿನಂತೆ ಮಾಡಿರುವುದು. ರೈತರ ಆತ್ಮಹತ್ಯೆ, ಮರಳು ಮಾಫಿಯಾ, ನಿಷ್ಠಾವಂತ ಅಧಿಕಾರಿಗಳ ವರ್ಗಾವಣೆ ಬಗ್ಗೆ ಚರ್ಚಿಸಲು ಆಸಕ್ತನಾಗಿದ್ದೇನೆ ಎಂದು ಬಿಎಸ್‍ವೈ ಟ್ವೀಟ್ ಮಾಡಿದ್ದಾರೆ.

    ಸಮುದಾಯಗಳನ್ನು ಒಡೆಯುವ ಮತ್ತು ಓಲೈಕೆ ರಾಜಕಾರಣ. ಸರ್ಕಾರದಲ್ಲಿ ಕೆಂಪಯ್ಯನವರ ಹಸ್ತಕ್ಷೇಪ, ಬೆಂಗಳೂರು ಅಭಿವೃದ್ಧಿ ಕುಂಠಿತಗೊಂಡಿರುವುದು, ಕಸದ ಸಮಸ್ಯೆ, ಮಹಿಳೆಯರ ಸುರಕ್ಷತೆ, ಕೆರೆಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದು. ಆಯ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವುದು. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು, ಐದು ವರ್ಷದ ಆಡಳಿತದಲ್ಲಿ ಅಭಿವೃದ್ಧಿಗೆ ಮಾರಕವಾದ ಸಾಲ, ಭ್ರಷ್ಟಾಚಾರ, ಕ್ರೈಂ ಹೆಚ್ಚಿರುವುದರ ಕುರಿತು ನಿಮ್ಮಿಂದ ತಿಳಿಯಲು ಕಾದಿರುವುದಾಗಿ ಟ್ವೀಟ್ ಮಾಡಿದ್ದಾರೆ.

     

     

     

  • ಚಾಕು ಇಟ್ಟುಕೊಂಡು ಲೋಕಾಯುಕ್ತ ಕಚೇರಿಗೆ ಬಂದಿದ್ದ ಮಹಿಳೆ ಪೊಲೀಸರ ವಶಕ್ಕೆ

    ಚಾಕು ಇಟ್ಟುಕೊಂಡು ಲೋಕಾಯುಕ್ತ ಕಚೇರಿಗೆ ಬಂದಿದ್ದ ಮಹಿಳೆ ಪೊಲೀಸರ ವಶಕ್ಕೆ

    ಬೆಂಗಳೂರು: ಚಾಕು ಇಟ್ಟುಕೊಂಡು ಎ ಆರ್ ಓ ಭೇಟಿ ಮಾಡಲು ಲೋಕಾಯುಕ್ತ ಕಚೇರಿಗೆ ಬಂದಿದ್ದ ಮಹಿಳೆ ಮೆಟಲ್ ಡಿಟೆಕ್ಟರ್ ನಲ್ಲಿ ಸಿಕ್ಕಿಬಿದ್ದಿದ್ದಾಳೆ.

    ಲೋಕಾಯುಕ್ತ ಕಚೇರಿಗೆ ಐದು ದೂರುಗಳನ್ನು ಕೊಟ್ಟಿದ್ದ ಸೋನಿಯಾ ರಾಣಿ ಎಂಬ ಮಹಿಳೆ ಎ ಆರ್ ಓ ಭೇಟಿ ಮಾಡಲು ಬಂದಿದ್ದಳು. ಫೈಲ್ ಒಳಗೆ ಚಾಕು ಇಟ್ಟುಕೊಂಡಿದ್ದಳು. ಕಚೇರಿಯ ಪ್ರವೇಶ ದ್ವಾರದಲ್ಲಿರುವ ಡಿಟೆಕ್ಟರ್ ನಲ್ಲಿ ಚಾಕುವಿರುವುದು ಪತ್ತೆಯಾಗಿಲ್ಲ. ಎರಡನೇ ಮಹಡಿಯಲ್ಲಿ ಕೊಟ್ಟಿದ್ದ ದೂರು ಪರಿಶೀಲನೆ ಮಾಡಲು ಬಂದಾಗ ಮೆಟಲ್ ಡಿಟೆಕ್ಟರ್ ನಲ್ಲಿ ಚಾಕುವಿರುವುದು ಪತ್ತೆಯಾಗಿದೆ.

    ಇಂದು ಮಧ್ಯಾಹ್ನ 12:30ರ ಸುಮಾರಿಗೆ ಲೊಕಾಯುಕ್ತ ಕಚೇರಿಗೆ ಮಹಿಳೆ ಬಂದಿದ್ದಾರೆ. ಪರಿಶೀಲನೆ ಸಮಯದಲ್ಲಿ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    ಲೋಕಾಯುಕ್ತದಲ್ಲಿ ದಾಖಲಿಸಿದ್ದ ಕೇಸ್ ಬಗ್ಗೆ ಮಾಹಿತಿ ಪಡೆಯಲು ಮೈಸೂರಿನಿಂದ ಬಂದಿರುವುದಾಗಿ ಆಕೆ ಹೇಳಿಕೆ ನೀಡಿದ್ದಾಳೆ. ಆಕೆ ನೀಡಿದ ಕೇಸ್ ಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಯಾವ ಕಾರಣಕ್ಕಾಗಿ ಬ್ಯಾಗ್ ನಲ್ಲಿ ಚಾಕು ಇಟ್ಟುಕೊಂಡಿದ್ದಳು ಎನ್ನುವುದರ ಬಗ್ಗೆ ವಿಚಾರಣೆ ಮುಂದುವರೆದಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತ ತಿಳಿಸಿದ್ದಾರೆ.

  • ಲೋಕಾಯುಕ್ತದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ತೇಜಸ್ ಶರ್ಮಾ

    ಲೋಕಾಯುಕ್ತದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದ ತೇಜಸ್ ಶರ್ಮಾ

    ಬೆಂಗಳೂರು: ಲೋಕಾಯಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಇರಿದ ತುಮಕೂರು ಮೂಲದ ತೇಜಸ್ ಶರ್ಮಾ ಈ ಹಿಂದೆ ಅಧಿಕಾರಿಗಳು ಭ್ರಷ್ಟಚಾರ ಎಸಗಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತದಲ್ಲಿ ದೂರು ನೀಡಿದ್ದ. ಇದನ್ನೂ ಓದಿ: ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು?

    ಅಧಿಕಾರಿಗಳಾದ ಗಿರಿಜಾ ಮತ್ತು ಉಮೇಶ್ ಎಂಬವರ ವಿರುದ್ಧ 17-05-2017ರಂದು ಲೋಕಾಯುಕ್ತಕ್ಕೆ ಈತ ದೂರು ನೀಡಿದ್ದ. ಗಿರಿಜಾ ಶಿಕ್ಷಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಹಾಗೂ ಉಮೇಶ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ತಂದೆ ಮೇಲಿನ ಇರಿತ ಸುದ್ದಿ ಕೇಳಿದ್ರೂ ಹಾರ್ಟ್ ಆಪರೇಷನ್ ಪೂರ್ಣಗೊಳಿಸಿದ ಮಗ ರವಿಶಂಕರ್

    ತೇಜರಾಜ್ ಶರ್ಮಾ ಅವರು ದಾಖಲಿಸಿದ್ದ ಕಂಪ್ಲೆಂಟ್ ನಂಬರ್ UPLOK/BD/1238/2017 ಇದಾಗಿದ್ದು, ಇವರು 27-3-2017ರಂದು ರೆವೆನ್ಯೂ ಡಿಪಾರ್ಟಮೆಂಟ್ ಮೇಲೂ ಕೂಡ ದೂರು ದಾಖಲಿಸಿದ್ದರು. ಕಳೆದ ವರ್ಷ 1238/17, 1196/17, 719/17, 720/17 ಹಾಗೂ 904/17 ನಂಬರ್‍ನ ಒಟ್ಟು ಐದು ದೂರುಗಳು ಲೋಕಾಯುಕ್ತದಲ್ಲಿ ತೇಜಸ್ ಶರ್ಮ ದಾಖಲಿಸಿದ್ದ. ಇದನ್ನೂ ಓದಿ: ಕೊಲೆ ಮಾಡಲೆಂದೇ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿದ್ದಾನೆ, ತನಿಖೆಗೆ ಸೂಚಿಸಿದ್ದೇನೆ- ಸಿಎಂ

    ಯಾರ ವಿರುದ್ಧ ದೂರು?
    ಮಂಜುನಾಥ್ – ಉಪ ನಿರ್ದೇಶಕ, ಸಾರ್ವಜನಿಕ ಶೀಕ್ಷಣ ಇಲಾಖೆ, ತುಮಕೂರು
    ಶಿವಕುಮಾರ್ – ಎಸ್‍ಡಿಎ, ಸಾರ್ವಜನಿಕ ಶೀಕ್ಷಣ ಇಲಾಖೆ
    ದೇವರಾಜ್ – ಸಹಾಯಕ ನಿರ್ದೇಶಕ, ರೇಷ್ಮೆ ಗೂಡಿನ ಮಾರುಕಟ್ಟೆ, ಕೋಲಾರ
    ಮಹಲಿಂಗಪ್ಪ– ಕ್ಲರ್ಕ್, ಪರ್ಚೆಸ್ ಸಕ್ಷೆನ್, ಟಿಯುಎಂಪಿ ಲಿ., ತುಮಕೂರು
    ಡಾ.ಚಂದ್ರಪ್ಪ– ಮ್ಯಾನೇಜರ್, ಟಿಯುಎಂಪಿ ಲಿ., ತುಮಕೂರು
    ಎಆರ್ ಚಂದ್ರಶೇಖರ್ – ವ್ಯವಸ್ಥಾಪಕ ನಿರ್ದೇಶಕ, ತುಮಕೂರು
    ಪ್ರಭಾಕರ್ – ಜಂಟಿ ನಿರ್ದೇಶಕ , ರೇಷ್ಮೆ ವಿನಿಮಯ ಕೇಂದ್ರ, ಬೆಂಗಳೂರು
    ಕುಮಾರ್ – ಎಸ್‍ಡಿಸಿ, ವಾಣಿಜ್ಯ ಮತ್ತು ಕೈಗಾರಿಕ ಇಲಾಖೆ, ತುಮಕೂರು

    https://www.youtube.com/watch?v=5fwBei0ft2Q

    https://www.youtube.com/watch?v=p9D7_SbY8aQ