Tag: Lokesh Kanagaraju

  • ರಜನಿ ನಟನೆಯ ‘ಕೂಲಿ’ ಚಿತ್ರದ ದೃಶ್ಯ ಲೀಕ್ : ಗರಂ ಆದ ಡೈರೆಕ್ಟರ್

    ರಜನಿ ನಟನೆಯ ‘ಕೂಲಿ’ ಚಿತ್ರದ ದೃಶ್ಯ ಲೀಕ್ : ಗರಂ ಆದ ಡೈರೆಕ್ಟರ್

    ಜನಿಕಾಂತ್‍ ಮತ್ತು ಉಪೇಂದ್ರ ಕಾಂಬಿನೇಷನ್ ನ ಕೂಲಿ ಸಿನಿಮಾದ ಶೂಟಿಂಗ್‍ ನೆಡೀತಾ ಇದೆ. ಈ ನಡುವೆ ಶಾಕ್ ನೀಡುವಂತಹ ಸುದ್ದಿ ಹೊರ ಬಿದ್ದಿದೆ. ಚಿತ್ರದ ಪ್ರಮುಖ ದೃಶ್ಯವನ್ನೇ ಕಿಡಿಗೇಡಿಗಳು ಲೀಕ್ ಮಾಡಿದ್ದಾರೆ. ಈ ನಡೆಗೆ ನಿರ್ದೇಶಕ ಲೋಕೇಶ್ ಕನಗರಾಜು (Lokesh Kanagaraju) ಬೇಸರ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ. ತಂಡದ ಶ್ರಮ ಮತ್ತು ಹಣವನ್ನು ಹೀಗೆ ಹಾಳು ಮಾಡಬೇಡಿ ಎಂದಿದ್ದಾರೆ.

    ಕೂಲಿ ಸ್ಪೆಷಲ್ ಏನು?

    ಹುನಿರೀಕ್ಷಿತಕೂಲಿ‘ (Coolie) ಸಿನಿಮಾ ಬಗ್ಗೆ ದಿನದಿಂದ ದಿನಕ್ಕೆ ಹೈಪ್ ಕ್ರಿಯೆಟ್ ಮಾಡ್ತಿದೆ. ರಜನಿಕಾಂತ್ (Rajanikanth) ಜೊತೆ ಉಪೇಂದ್ರ ನಟಿಸುವ ಬಗ್ಗೆ ಅಫಿಷಿಯಲ್ ಅನೌನ್ಸ್ಮೆಂಟ್ಸಿಕ್ಕ ಬೆನ್ನಲ್ಲೇ ಈಗ ಮತ್ತೊಂದು ಕ್ರೆಜಿ ಅಪ್ಡೇಟ್ ಹೊರಬಿದ್ದಿದೆ. 30 ವರ್ಷಗಳ ನಂತರ ತಲೈವಾ ಮತ್ತು ಆಮೀರ್ ಖಾನ್ (Aamir Khan) ಕೂಲಿ ಚಿತ್ರಕ್ಕಾಗಿ ಒಂದಾಗ್ತಿದ್ದಾರೆ ಎಂಬ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    1995ರಲ್ಲಿಆತಂಕ್ ಹಿ ಆತಂಕ್ಎಂಬ ಸಿನಿಮಾದಲ್ಲಿ ರಜನಿಕಾಂತ್ ಮತ್ತು ಆಮೀರ್ ಜೊತೆಯಾಗಿ ನಟಿಸಿದ್ದರು. ಈಗ ಹೊಸ ಪ್ರಾಜೆಕ್ಟ್ ಕೂಲಿ ಚಿತ್ರಕ್ಕಾಗಿ ತಲೈವಾ ಜೊತೆ ಬಾಲಿವುಡ್ ನಟ ಆಮೀರ್ ಖಾನ್ ಸ್ಪೆಷಲ್ ರೋಲ್ನಲ್ಲಿ ನಟಿಸ್ತಾರೆ ಎನ್ನಲಾಗಿದೆ. ಇದು ಜಸ್ಟ್ ಗಾಳಿ ಸುದ್ದಿನಾ ಅಥವಾ ರಿಯಲ್ ಸುದ್ದಿನಾ ಎಂಬುದರ ಕುರಿತು ಚಿತ್ರತಂಡವೇ ತಿಳಿಸಬೇಕಿದೆ.

    ಆದರೆ ಆಮೀರ್ ಖಾನ್ರನ್ನು ಡೈರೆಕ್ಟರ್ ಲೋಕೇಶ್ ಕನಕರಾಜ್ ಟೀಮ್ ಸಂಪರ್ಕಿಸಿದೆ ಎನ್ನಲಾಗಿದೆ. ಪಾತ್ರದ ಬಗ್ಗೆ ಕೇಳಿ ನಟ ಕೂಡ ಒಪ್ಪಿಗೆ ಕೊಟ್ಟಿದ್ದಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ. ಇನ್ನೂ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ‌ ಸುದ್ದಿ ನಿಜವಾಗಲಿ ಮತ್ತೊಮ್ಮೆ ಇಬ್ಬರೂ ಒಟ್ಟಿಗೆ ನೋಡುವ ಭಾಗ್ಯ ನಮಗೆ ಸಿಗಲಿ ಎಂದು ಫ್ಯಾನ್ಸ್ಆಶಿಸುತ್ತಿದ್ದಾರೆ.

     

    ಕೂಲಿಸಿನಿಮಾದ ಶೂಟಿಂಗ್ ಈಗಾಗಲೇ ಆರಂಭವಾಗಿದೆ. ರಜನಿಕಾಂತ್ ಜೊತೆ ಶ್ರುತಿ ಹಾಸನ್ (Shruti Haasan), ಉಪೇಂದ್ರ (Upendra) ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗಲಿದೆ.

  • ಜೈ ಭೀಮ್ ಖ್ಯಾತಿಯ ನಿರ್ದೇಶಕನಿಗೆ ಒಲಿದ ಅದೃಷ್ಟ : ರಜನಿ 170ನೇ ಚಿತ್ರಕ್ಕೆ ಡೈರೆಕ್ಟರ್

    ಜೈ ಭೀಮ್ ಖ್ಯಾತಿಯ ನಿರ್ದೇಶಕನಿಗೆ ಒಲಿದ ಅದೃಷ್ಟ : ರಜನಿ 170ನೇ ಚಿತ್ರಕ್ಕೆ ಡೈರೆಕ್ಟರ್

    ಜನಿಕಾಂತ್ (Rajinikanth) ನಟನೆಯ ಜೈಲರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡುತ್ತಿದ್ದಂತೆಯೇ ಅವರ ಮುಂದಿನ ಚಿತ್ರಗಳ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಅದರಲ್ಲೂ ಅವರ 170ನೇ ಸಿನಿಮಾ ನಾನಾ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಈ ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಪ್ರಶ್ನೆ ಕೂಡ ಮೂಡಿದಿದೆ. ಮೂಲಗಳ ಪ್ರಕಾರ ಈ ಸಿನಿಮಾವನ್ನು ಜೈ ಭೀಮ್ ಖ್ಯಾತಿಯ ನಿರ್ದೇಶಕ ಟಿ.ಎಸ್. ಜ್ಞಾನವೇಲ್ (TS Gnanavel) ಡೈರೆಕ್ಷನ್ ಮಾಡಲಿದ್ದಾರೆ ಎನ್ನಲಾಗುತ್ತಿದೆ.

    ಅಂದುಕೊಂಡಂತೆ ಆಗಿದ್ದರೆ ರಜನಿಕಾಂತ್ ಅವರ 170ನೇ ಸಿನಿಮಾವನ್ನು ಲೋಕೇಶ್ ಕನಗರಾಜು (Lokesh Kanagaraju) ನಿರ್ದೇಶನ ಮಾಡಬೇಕಿತ್ತು. ಆದರೆ, ಅವರು ದಳಪತಿ ವಿಜಯ್ ಅವರ ಲಿಯೋ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಕಾರಣದಿಂದಾಗಿಯೇ ಜ್ಞಾನವೇಲ್‍ ಗೆ ಈ ಅದೃಷ್ಟ ಒಲಿದು ಬಂದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ವಿಡಿಯೋ ಲೀಕ್ ಬಗ್ಗೆ ಭಯಾನಕ ಸತ್ಯ ಬಿಚ್ಚಿಟ್ಟ ಕೃತಿ ಕರಬಂಧ

    ಜೈ ಭೀಮ್ ಸಿನಿಮಾದ ಮೂಲಕ ಭಾರೀ ಸಂಚಲವನ್ನು ಉಂಟು ಮಾಡಿದವರು ಜ್ಞಾನವೇಲ್. ನೂರಾರು ಕೋಟಿ ರೂಪಾಯಿಯನ್ನು ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಬಾಚಿತು. ಒಂದೊಳ್ಳೆ ಸಿನಿಮಾ ಎನ್ನುವ ಹೆಸರನ್ನೂ ಮಾಡಿತು. ಜಾಗತಿಕ ಮಟ್ಟದಲ್ಲಿ ಈ ಚಿತ್ರಕ್ಕೆ ವಿಶೇಷ ಮನ್ನಣೆ ಕೂಡ ಸಿಕ್ಕಿದೆ. ಹೀಗಾಗಿ ರಜನಿ ಸಿನಿಮಾ ಕೂಡ ಹೊಸ ರೀತಿಯಲ್ಲೇ ಇರಲಿದೆ ಎಂದು ಹೇಳಲಾಗುತ್ತದೆ.

     

    ಜೈಲರ್ ಸಿನಿಮಾ ನಂತರ ರಜನಿ ಅಧ್ಯಾತ್ಮವನ್ನು ಅರಸಿಕೊಂಡು ಹೋಗಿದ್ದರು. ಇದೀಗ ಮತ್ತೆ ವಾಪಸ್ಸು ಚೆನ್ನೈಗೆ ವಾಪಸ್ಸಾಗಿದ್ದಾರೆ. ಇನ್ನೂ ಕೆಲವು ದಿನಗಳ ಬಳಿಕ ಹೊಸ ಸಿನಿಮಾದ ಕೆಲಸದಲ್ಲಿ ಅವರು ನಿರತರಾಗುತ್ತಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]