Tag: lokpal

  • ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

    ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

    ನವದೆಹಲಿ: ಷೇರು ಮಾರುಕಟ್ಟೆ ವಂಚನೆ ಪ್ರಕರಣದಲ್ಲಿ ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್‌ ಕ್ಲೀನ್ ಚಿಟ್ ನೀಡಿದೆ.

    ಮಾಧವಿ ಪುರಿ ಬುಚ್ ಅವರ ವಿರುದ್ಧ ಹಿಂಡೆನ್‌ಬರ್ಗ್-ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರುಗಳನ್ನು ಭಾರತೀಯ ಲೋಕಪಾಲ್ ವಜಾಗೊಳಿಸಿದೆ. ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಆರೋಪಗಳಲ್ಲಿ ಯಾವುದೇ ಅರ್ಹತೆ ಇಲ್ಲ. ಊಹೆಯಿಂದ ಕೂಡಿದಂತಿದೆ. ಯಾವುದೇ ಪರಿಶೀಲಿಸಬಹುದಾದ ಪುರಾವೆಗಳ ಕೊರತೆಯಿದೆ ಎಂದು ಲೋಕಪಾಲ್‌ ಹೇಳಿದೆ.

    ಬುಧವಾರ ಹೊರಡಿಸಿದ ಆದೇಶದಲ್ಲಿ, ದೂರುಗಳು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ತನಿಖೆಗೆ ಅಗತ್ಯವಾದ ಕಾನೂನು ಅವಶ್ಯಕತೆಗಳನ್ನು ಪೂರೈಸಿಲ್ಲ ಎಂದು ಹೇಳಲಾಗಿದೆ. ಆರೋಪಗಳು ಹೆಚ್ಚಾಗಿ ಊಹೆಗಳಿಂದ ಕೂಡಿವೆ. ಹೀಗಾಗಿ, ದೂರುಗಳನ್ನು ವಿಲೇವಾರಿ ಮಾಡಲಾಗುತ್ತದೆ ಎಂದು ಲೋಕಪಾಲ್‌ ತಿಳಿಸಿದೆ.

    ಹಿಂಡೆನ್‌ಬರ್ಗ್‌ ವರದಿ ಆಧರಿಸಿ ಮಾಧವಿ ವಿರುದ್ಧ ಪ್ರತ್ಯೇಕವಾಗಿ ಎರಡು ದೂರುಗಳು ದಾಖಲಾಗಿದ್ದವು. ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಮಾಧವಿ ಮತ್ತು ಅವರ ಪತಿ ಪಾಲುದಾರಿಕೆ ಹೊಂದಿದ್ದಾರೆಂದು ಹಂಡೆನ್‌ಬರ್ಗ್‌ ರಿಸರ್ಚ್‌ ಆರೋಪಿಸಿತ್ತು. ಇದನ್ನು ಮಾಧವಿ ಅವರು ಅಲ್ಲಗಳೆದಿದ್ದರು.

  • ಭಾರತದ ಮೊದಲ ಲೋಕಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿ.ಸಿ.ಘೋಷ್

    ಭಾರತದ ಮೊದಲ ಲೋಕಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿ.ಸಿ.ಘೋಷ್

    ನವದೆಹಲಿ: ಭಾರತ ಮೊದಲ ಲೋಕಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಪಿಣಕಿ ಚಂದ್ರ ಘೋಷ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

    ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಿ.ಸಿ.ಘೋಷ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣ ವಚನ ಕಾರ್ಯಕ್ರಮವು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸಮ್ಮುಖದಲ್ಲಿ ನಡೆಯಿತು.

    ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ಮಾರ್ಚ್ 19ರಂದು ಪಿ.ಸಿ.ಘೋಷ್ ಅವರನ್ನು ಲೋಕಪಾಲರಾಗಿ ಆಯ್ಕೆ ಮಾಡಿ ಘೋಷನೆ ಮಾಡಿದ್ದರು.

    ನ್ಯಾ.ಪಿ.ಸಿ.ಘೋಷ್ ಅವರು ನಾಲ್ಕು ವರ್ಷಗಳ ಕಾಲ ಸುಪ್ರೀಂಕೋರ್ಟ್ ನ್ಯಾಯಧೀಶರಾಗಿ ಸೇವೆ ಸಲ್ಲಿಸಿ ಮೇ 2017ರಂದು ನಿವೃತ್ತರಾಗಿದ್ದರು. ಲೋಕಪಾಲರಾಗಿ ಆಯ್ಕೆಯಾಗುವುದಕ್ಕೂ ಮುನ್ನ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎಂಎಚ್‍ಆರ್‍ಡಿ) ಸದಸ್ಯರಾಗಿದ್ದರು.

    ಲೋಕಪಾಲ ಕಾರ್ಯವ್ಯಾಪ್ತಿ ಏನು?:
    ಲೋಕಪಾಲರು ಹಾಲಿ ಮತ್ತು ಮಾಜಿ ಪ್ರಧಾನಿಗಳು, ಸಂಸದರು, ಕೇಂದ್ರ ಮಂತ್ರಿಗಳು, ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಸಿಬ್ಬಂದಿ ಹಾಗೂ 10 ಲಕ್ಷ ರೂ.ಗಿಂತ ಹೆಚ್ಚಿನ ವಿದೇಶಿ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಗಳ(ಎನ್‍ಜಿಒ) ಮೇಲೆ ಕೇಳಿಬರುವ ದೂರುಗಳ ತನಿಖೆಯನ್ನು ನಡೆಸುವ ಅಧಿಕಾರವನ್ನು ಹೊಂದಿದ್ದಾರೆ.

  • ನಿವೃತ್ತ ನ್ಯಾ.ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ್

    ನಿವೃತ್ತ ನ್ಯಾ.ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ್

    ನವದೆಹಲಿ: ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ದೇಶದ ಮೊದಲ ಲೋಕಪಾಲ್ ಆಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕಕ್ಕೆ ಅಂಕಿತ ಹಾಕಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಹಿರಿಯ ವಕೀಲ ಮುಕುಲ್ ರೋಹತ್ಗಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ನಿವೃತ್ತ ನ್ಯಾ.ಪಿ.ಸಿ.ಘೋಷ್ ಅವರ ಹೆಸರನ್ನು ಅಂತಿಮಗೊಳಿಸಿತ್ತು. ಆಯ್ಕೆ ಸಮಿತಿಯ ಮುಂದೆ ಪಿ.ಸಿ.ಘೋಷ್ ಅವರ ಹೆಸರು ಮುಂಚೂಣಿಯಲ್ಲಿತ್ತು. ಹೀಗಾಗಿ ನೇಮಕ ಮಂಡಳಿ ಅವರನ್ನೇ ಅಂತಿಮಗೊಳಿಸಿ ನೇಮಕ ಮಾಡಿದೆ. ಇದನ್ನು ಓದಿ:  ಲೋಕಪಾಲ್ ಆಯ್ಕೆ ಸಮಿತಿ ಸಭೆಯ ವಿಶೇಷ ಆಹ್ವಾನವನ್ನು ತಿರಸ್ಕರಿಸಿದ ಖರ್ಗೆ

    ಪಿ.ಸಿ.ಘೋಷ್ ಅವರ ನೇಮಕಾತಿ ಬೆನ್ನಲ್ಲೇ ಲೋಕಪಾಲ್‍ನ 8 ಜನ ಸದಸ್ಯರ ಆಯ್ಕೆಯು ಕೆಲವೇ ದಿನಗಳ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ. ಟೀಮ್‍ನಲ್ಲಿ ಲೋಕಪಾಲ ಅವರಲ್ಲದೆ, ನಾಲ್ವರು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಗಳು(ಇವರಲ್ಲಿ ಒಬ್ಬರು ಮಹಿಳೆ), ನಾಲ್ವರು ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಇರುತ್ತಾರೆ.

    ನ್ಯಾ.ಪಿ.ಸಿ.ಘೋಷ್ ಅವರು ನಾಲ್ಕು ವರ್ಷಗಳ ಕಾಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಸೇವೆ ಸಲ್ಲಿಸಿ ಮೇ 2017ರಂದು ನಿವೃತ್ತರಾದರು. ಸದ್ಯ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎಂಎಚ್‌ಆರ್‌ಡಿ) ಸದಸ್ಯರಾಗಿದ್ದಾರೆ.

    ಲೋಕಪಾಲ ಕಾರ್ಯವ್ಯಾಪ್ತಿ ಏನು?:
    ಲೋಕಪಾಲರು ಹಾಲಿ ಮತ್ತು ಮಾಜಿ ಪ್ರಧಾನಿಗಳು, ಸಂಸದರು, ಕೇಂದ್ರ ಮಂತ್ರಿಗಳು, ಸರ್ಕಾರಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಸಿಬ್ಬಂದಿ ಹಾಗೂ 10 ಲಕ್ಷ ರೂ.ಗಿಂತ ಹೆಚ್ಚಿನ ವಿದೇಶಿ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಗಳ(ಎನ್‍ಜಿಒ) ಮೇಲೆ ಕೇಳಿಬರುವ ದೂರುಗಳ ತನಿಖೆಯನ್ನು ನಡೆಸುವ ಅಧಿಕಾರವನ್ನು ಹೊಂದಿದ್ದಾರೆ.

  • ಲೋಕಾಯುಕ್ತ ಮುಗಿಸಿದಂತೆ ಲೋಕಪಾಲ್ ಮುಗಿಸ್ತೀರಾ: ಖರ್ಗೆಗೆ ಶ್ರೀನಿವಾಸ ಪೂಜಾರಿ ಪ್ರಶ್ನೆ

    ಲೋಕಾಯುಕ್ತ ಮುಗಿಸಿದಂತೆ ಲೋಕಪಾಲ್ ಮುಗಿಸ್ತೀರಾ: ಖರ್ಗೆಗೆ ಶ್ರೀನಿವಾಸ ಪೂಜಾರಿ ಪ್ರಶ್ನೆ

    ಉಡುಪಿ: ಕರ್ನಾಟಕದಲ್ಲಿ ಲೋಕಾಯುಕ್ತ ಮುಗಿಸಿದಂತೆ ದೇಶದಲ್ಲಿ ಕಾಂಗ್ರೆಸ್ ಲೋಕಪಾಲನ್ನು ಮುಗಿಸ್ತೀರಾ ಅಂತ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ ಮಾಡಿದ್ದಾರೆ. ಲೋಕಪಾಲ್ ಆಯ್ಕೆ ಸಂಬಂಧ ಐದು ವರ್ಷದಲ್ಲಿ ಒಂದೇ ಒಂದು ಸಭೆಯಲ್ಲಿ ಪಾಲ್ಗೊಳ್ಳದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೋಟ ಗರಂ ಆಗಿದ್ದಾರೆ.

    ಉಡುಪಿಯಲ್ಲಿ ಮಾತಮಾಡಿದ ಕೋಟ, ಲೋಕಪಾಲ್ ಬಗ್ಗೆ ಅಣ್ಣಾ ಹಜಾರೆ ಧರಣಿ ಕುಳಿತು ದೊಡ್ಡ ಹೋರಾಟ ಕೊಟ್ಟಿದ್ದರು. ದೇಶದ ಜನರ ಕನಸು ಈಗ ನೆರವೇರಿದೆ. ಆದ್ರೆ ಲೋಕಪಾಲ್ ಬಿಲ್ ವಿಚಾರದಲ್ಲಿ ಕಾಂಗ್ರೆಸ್ ನಿಲುವೇನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಅಂತ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ ಮಾಡಿದ್ದಾರೆ. ಮಸೂದೆ ಅನುಷ್ಠಾನ ಕುರಿತು 5 ವರ್ಷದಲ್ಲಿ 7 ಮೀಟಿಂಗ್ ಆಗಿದೆ. ಮಲ್ಲಿಕಾರ್ಜುನ ಖರ್ಗೆ ವಿಪಕ್ಷ ನಾಯಕ ಅಲ್ಲದಿದ್ದರೂ ಅವರನ್ನು ಸಭೆಗೆ ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ಸಂಸದೀಯ ನಾಯಕನ ನೆಲೆಯಲ್ಲಿ ಖರ್ಗೆಗೆ ಮೋದಿ ಆಹ್ವಾನ ನೀಡಿದ್ದರು. ಆದರೆ ಒಂದು ಸಭೆಗೆ ಖರ್ಗೆ ಹಾಜರಾಗಲಿಲ್ಲ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಲೋಕಪಾಲ್ ಬಿಲ್ ಪರವೋ ವಿರುದ್ಧವೋ? ಗೊತ್ತಾಗುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಇದನ್ನು ಕೂಡಲೇ ಸ್ಪಷ್ಟಪಡಿಸಬೇಕು. ಅವರು ಏಳು ಬಾರಿಯೂ ಸಭೆಯನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಈಗ ಅವರು ಉತ್ತರಿಸಬೇಕು. ಲೋಕಪಾಲ್ ಮಸೂದೆಯನ್ನು ನಿರ್ಲಕ್ಷ್ಯ ಮಾಡುತ್ತೀರಾ ಎಂದು ಕೋಟ ಪ್ರಶ್ನೆ ಹಾಕಿದ್ದಾರೆ. ಕರ್ನಾಟಕದಲ್ಲಿ ಲೋಕಾಯುಕ್ತವನ್ನು ಮುಗಿಸಿದ್ದೀರಿ. ದೇಶದಲ್ಲಿ ಲೋಕಪಾಲ್ ಮುಗಿಸುವ ಆಲೋಚನೆಯಲ್ಲಿದ್ದೀರಾ ಅಂತ ಖರ್ಗೆ ಮತ್ತು ಕಾಂಗ್ರೆಸ್ ವಿರುದ್ಧ ಕೋಟ ಕುಟುಕಿದ್ದಾರೆ.

    ಖರ್ಗೆ ಗೈರಾಗಿದ್ದು ಯಾಕೆ?
    ಲೋಕಪಾಲರ ನೇಮಕ ಸಂಬಂಧ ಇರುವ ಸಮಿತಿಯಲ್ಲಿ ವಿರೋಧ ಪಕ್ಷ ನಾಯಕರು ಸದಸ್ಯರಾಗಿರುತ್ತಾರೆ. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕೆ ಬೇಕಾಗುವಷ್ಟು ಸ್ಥಾನಗಳನ್ನು ಯಾರು ಪಡೆಯದ ಕಾರಣ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಪಕ್ಷ ನಾಯಕನ ಸ್ಥಾನವನ್ನು ನೀಡಿರಲಿಲ್ಲ. ಖರ್ಗೆ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. ಲೋಕಪಾಲ್ ನೇಮಕ ಸಂಬಂಧ ಖರ್ಗೆ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಲಾಗಿತ್ತು. ವಿಶೇಷ ಆಹ್ವಾನಿತರಾಗಿ ನಾನು ತೆರಳುವುದಿಲ್ಲ ಎಂದು ಹೇಳಿ ಖರ್ಗೆ ಲೋಕಪಾಲ್ ಆಯ್ಕೆ ಸಂಬಂಧ ಕರೆದಿದ್ದ ಸಭೆಗೆ ಗೈರು ಹಾಜರಿ ಹಾಕಿದ್ದರು.

  • ನಿವೃತ್ತ ನ್ಯಾ.ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ್ – ಘೋಷಣೆ ಮಾತ್ರ ಬಾಕಿ

    ನಿವೃತ್ತ ನ್ಯಾ.ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ್ – ಘೋಷಣೆ ಮಾತ್ರ ಬಾಕಿ

    ನವದೆಹಲಿ: ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ದೇಶದ ಮೊದಲ ಲೋಕಪಾಲ್ ಆಗಿ ನೇಮಕವಾಗಲಿದ್ದಾರೆ. ಮುಂದಿನ ವಾರ ಅಧಿಕೃತವಾಗಿ ಆದೇಶ ಪ್ರಕಟವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

    ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಹಿರಿಯ ವಕೀಲ ಮುಕುಲ್ ರೋಹತ್ಗಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯು ನಿವೃತ್ತ ನ್ಯಾ.ಪಿ.ಸಿ.ಘೋಷ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಆಯ್ಕೆ ಸಮಿತಿಯ ಮುಂದೆ ಪಿ.ಸಿ.ಘೋಷ್ ಅವರ ಹೆಸರು ಮುಂಚೂಣಿಯಲ್ಲಿತ್ತು ಎನ್ನಲಾಗಿದೆ. ಇದನ್ನು ಓದಿ:  ಲೋಕಪಾಲ್ ಆಯ್ಕೆ ಸಮಿತಿ ಸಭೆಯ ವಿಶೇಷ ಆಹ್ವಾನವನ್ನು ತಿರಸ್ಕರಿಸಿದ ಖರ್ಗೆ

    ಈ ನಿಟ್ಟಿನಲ್ಲಿ ಘೋಷ್ ಅವರ ನೇಮಕಾತಿ ಸ್ಪಷ್ಟನೆ ಹಾಗೂ ಲೋಕಪಾಲ್‍ನ 8 ಜನ ಸದಸ್ಯರ ಆಯ್ಕೆಯ ಕುರಿತು ಮುಂದಿನ ವಾರ ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ.

    ನ್ಯಾ.ಪಿ.ಸಿ.ಘೋಷ್ ಅವರು ನಾಲ್ಕು ವರ್ಷಗಳ ಕಾಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಸೇವೆ ಸಲ್ಲಿಸಿ ಮೇ 2017ರಂದು ನಿವೃತ್ತರಾದರು. ಸದ್ಯ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎಂಎಚ್‌ಆರ್‌ಡಿ) ಸದಸ್ಯರಾಗಿದ್ದಾರೆ.

  • ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಅಣ್ಣಾ ಹಜಾರೆ

    ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಅಣ್ಣಾ ಹಜಾರೆ

    – ಲೋಕಪಾಲ್ ಜಾರಿಗೆ ಒತ್ತಾಯಿಸಿ ಮತ್ತೆ ಹೋರಾಟ ಆರಂಭ

    ಮುಂಬೈ: ಲೋಕಪಾಲ್ ಜಾರಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

    ಮಹಾತ್ಮಗಾಂಧಿ ಹುತ್ಮಾತಗೊಂಡ ದಿನವಾದ ಇಂದು ಅಣ್ಣಾ ಹಜಾರೆ ಅವರು, ಸ್ವಗ್ರಾಮ ಮಹಾರಾಷ್ಟ್ರದ ರಾಲೆಗನ್ ಸಿದ್ಧಿಯಲ್ಲಿ ಹೋರಾಟ ಆರಂಭಿಸಿದ್ದಾರೆ. ಕೇಂದ್ರದಲ್ಲಿ ಲೋಕಪಾಲ್ ಮತ್ತು ರಾಜ್ಯದಲ್ಲಿ ಲೋಕಾಯುಕ್ತ ಜಾರಿಗೆ ತರಬೇಕು ಎಂದು ಅಣ್ಣಾ ಹಜಾರೆ ಒತ್ತಾಯಿಸಿದ್ದಾರೆ.

    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಭರವಸೆ ಮೇಲೆ ಡಿಸೆಂಬರ್ 2018ರಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರವನ್ನು ಹಿಂಪಡೆದಿದ್ದೆ. ಆದರೆ ಇಲ್ಲಿಯವರೆಗೂ ಲೋಕಪಾಲ್ ಜಾರಿಗೆ ಬಂದಿಲ್ಲ. ಹೀಗಾಗಿ ಜನವರಿ 28ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಲೋಕಪಾಲ್ ಜಾರಿಗೆ ಒತ್ತಾಯಿಸಿ 9 ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸ್ವಗ್ರಾಮ ರಾಲೆಗನ್ ಸಿದ್ಧಿಯಲ್ಲಿ ಹೋರಾಟಕ್ಕೆ ಮುಂದಾಗಿರುವೆ ಅಂತ ತಿಳಿಸಿರುವೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

    ನಮ್ಮ ಹೋರಾಟ ಆರಂಭವಾಗಿ 5 ವರ್ಷ ಕಳೆದರೂ ಕೇಂದ್ರದಲ್ಲಿ ಲೋಕಪಾಲ್ ಜಾರಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಲೋಕಪಾಲರನ್ನು ನೇಮಕ ಮಾಡಿಲ್ಲ. ಅಷ್ಟೇ ಅಲ್ಲದೆ ಮಹಾರಾಷ್ಟ್ರದಲ್ಲಿ ಲೋಕಾಯುಕ್ತ ಕಾಯ್ದೆ ಜಾರಿಯಾಗಿಲ್ಲ ಎಂದು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

    ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

    ನವದೆಹಲಿ: ಲೋಕಪಾಲ ನೇಮಕ ಮಾಡುವಂತೆ ಒತ್ತಾಯಿಸಿ 81 ವರ್ಷದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಜನವರಿ 30 ರಿಂದ ಉಪವಾಸ ಸತ್ಯಾಗ್ರಹ ಆರಂಭ ಮಾಡುವುದಾಗಿ ಹೇಳಿದ್ದಾರೆ.

    ಭ್ರಷ್ಟಚಾರ ವಿರುದ್ಧ ಹೋರಾಟ ಮಾಡಲು ಲೋಕಪಾಲ ಸಂಸ್ಥೆ ಅನಿವಾರ್ಯವಾಗಿದ್ದು, ಕೂಡಲೇ ಸಂಸ್ಥೆಗೆ ಮುಖ್ಯಸ್ಥರನ್ನು ನೇಮಕ ಮಾಡಬೇಕು. 2013ರಲ್ಲಿ ಲೋಕಪಾಲ ಮಸೂದೆ ರಚನೆ ಆಗಿದ್ದು, 2014ರಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಆಡಳಿತವಹಿಸಿಕೊಂಡಿತ್ತು. ಆಗ ಉತ್ತಮ ಆಡಳಿತ ನಿರೀಕ್ಷೆಯಲ್ಲಿದ್ದೇವೂ. ಆದರೆ ಕಳೆದ 5 ವರ್ಷಗಳಲ್ಲಿ ಅವರು ಏನು ಮಾಡಲಿಲ್ಲ. ಆದ್ದರಿಂದ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದೇನೆ. ಮಹಾರಾಷ್ಟ್ರದ ರಾಲೇಗಾವ್ ಸಿದ್ದಿಯಲ್ಲಿ ಸತ್ಯಾಗ್ರಹ ಮಾಡುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    ಲೋಕಪಾಲ ನೇಮಕ ಮಾಡುವಂತೆ ಈ ಹಿಂದೆ ಅಣ್ಣಾ ಹಜಾರೆ ಪ್ರಧಾನಿ ಅವರಿಗೆ ಪತ್ರವನ್ನು ಬರೆದಿದ್ದರು. ಅಲ್ಲದೇ ಈ ಹಿಂದೆಯೇ ಉಪವಾಸ ಸತ್ಯಾಗ್ರಹ ಮಾಡಲು ತೀರ್ಮಾನಿಸಿದ್ದ ಹಜಾರೆ ಅವರು ಕೇಂದ್ರ ಸರ್ಕಾರ ಭರವಸೆಯ ಮೇರೆಗೆ ಹಿಂದೆ ಸರಿದ್ದರು. ಆದರೆ ಇನ್ನು ಅವರ ಸುಳ್ಳು ಆಶ್ವಾಸನೆಗಳನ್ನು ನಂಬಲು ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೊಮ್ಮೆ ಮೋದಿ ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜನ ಖರ್ಗೆ

    ಮತ್ತೊಮ್ಮೆ ಮೋದಿ ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜನ ಖರ್ಗೆ

    ನವದೆಹಲಿ: ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಪಾಲ ರಚನೆಯ ಚರ್ಚೆ ಕುರಿತ ಸಭೆಗೆ ಪ್ರಧಾನಿ ಮೋದಿ ಆಹ್ವಾನವನ್ನು ತಿರಸ್ಕರಿಸಿದ್ದು, ಸಭೆಗೆ ಗೈರು ಹಾಜರಾಗುವ ಕುರಿತು ಪತ್ರ ಬರೆದಿದ್ದಾರೆ.

    ತಮ್ಮ ಗೈರು ಹಾಜರಿಗೆ ಕಾರಣವನ್ನು ತಿಳಿಸಿರುವ ಖರ್ಗೆ ಪೂರ್ಣ ಪ್ರಮಾಣದಲ್ಲಿ ಲೋಕಪಾಲ ಆಯ್ಕೆ ಸಮಿತಿ ನೇಮಕವಾಗುವರೆಗೂ, ಕಾಂಗ್ರೆಸ್ ವಿರೋಧಿ ಪಕ್ಷವಾಗಿ ಯಾವುದೇ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ತಮಗೆ ನೀಡಿದ ವಿಶೇಷ ಆಹ್ವಾನದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಅವರು, ತಮಗೆ ವಿಶೇಷ ಆಹ್ವಾನಿತ ಎಂಬ ಮನ್ನಣೆ ಬೇಡ, ಅತಿ ದೊಡ್ಡ ವಿರೋಧಿ ಪಕ್ಷದ ನಾಯಕನಿಗೆ ಸಮಿತಿಯಲ್ಲಿ ಸ್ಥಾನ ನೀಡಬೇಕು. ವಿಶೇಷ ಆಹ್ವಾನದ ಮೇರೆಗೆ ಯಾವುದೇ ಅಧಿಕಾರವಿರುವುದಿಲ್ಲ. 2013 ರ ಲೋಕಪಾಲ ಕಾಯ್ದೆಯ ಸಮಿತಿ ರಚನೆಯಾಗಬೇಕು ಎಂದು ತಿಳಿಸಿದ್ದಾರೆ.

    ಒಂದೊಮ್ಮೆ ಸರ್ಕಾರಕ್ಕೆ ಲೋಕಪಾಲ ರಚನೆ ಕುರಿತು ನಿಜವಾದ ಇಚ್ಛಾಶಕ್ತಿ ಹೊಂದಿದ್ದರೆ, ವಿರೋಧ ಪಕ್ಷದ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕಾಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಅಧಿಕಾರಿದಲ್ಲಿದ್ದು, ಲೋಕಪಾಲ ರಚನೆ ಮಾಡುವ ಯಾವುದೇ ಆಸಕ್ತಿಯನ್ನು ಬಿಜೆಪಿ ಹೊಂದಿಲ್ಲ ಎಂದು ಆರೋಪಿಸಿದರು.

    ಪ್ರಧಾನಿ ಮೋದಿ ನೇತೃತ್ವದ ಸಭೆ ಗುರುವಾರ ನಿಗದಿಯಾಗಿತ್ತು. ಈ ಹಿಂದೆಯೂ ಇದೇ ಕಾರಣ ನೀಡಿ ಮಾರ್ಚ್ 1 ಹಾಗೂ ಏಪ್ರಿಲ್ 10 ರಂದು ನಿಗದಿಯಾಗಿದ್ದ ಸಭೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದರು.

  • ಮೋದಿ ಭಾಷಣದಿಂದ ದೇಶ ಅಭಿವೃದ್ಧಿ ಆಗುತ್ತಾ: ಸೋನಿಯಾ ಗಾಂಧಿ

    ಮೋದಿ ಭಾಷಣದಿಂದ ದೇಶ ಅಭಿವೃದ್ಧಿ ಆಗುತ್ತಾ: ಸೋನಿಯಾ ಗಾಂಧಿ

    ವಿಜಯಪುರ:ಎಲ್ಲ ಜಾತಿ ವರ್ಗವನ್ನ ಒಗ್ಗೂಡಿಸಿಕೊಂಡು ಹೋಗುವುದು ಕಾಂಗ್ರೆಸ್ ಪಕ್ಷ. ಅದಕ್ಕಾಗಿ ಈ ಬಾರಿ ಮತ್ತೆ ಕಾಂಗ್ರೆಸ್ ಗೆ ಮತ ನೀಡಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

    ನಿಮ್ಮಲ್ಲಿಗೆ ಬಂದಿರುವುದು ತೀವ್ರ ಸಂತೋಷವಾಗಿದೆ. ಇದು ಬಸವಣ್ಣನ ಭೂಮಿ ಇಂತಹ ಮಹಾನ್ ಭೂಮಿಗೆ ನಮನ ಮಾಡುತ್ತೇನೆ. ಸಾಂಸ್ಕೃತಿಕ ಸಮ್ಮಿಲನ ಇಲ್ಲಿದೆ. ಸಿದ್ಧರಾಮಯ್ಯ ಸರಕಾರ ಎಲ್ಲ ಜಾತಿ ವರ್ಗದವರಿಗಾಗಿ ಕೆಲಸವನ್ನು ಮಾಡಿದೆ ಇದು ಶ್ಲಾಘನೀಯ. ದೇಶದಲ್ಲಿ ನಂ.1 ರಾಜ್ಯ ಮಾಡುವಲ್ಲಿ ಸಿದ್ದರಾಮಯ್ಯ ಕೆಲಸ ಮಾಡಿದ್ದಾರೆ. ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸಿದ್ಧರಾಮಯ್ಯ ಸರಕಾರ ಇಂದಿರಾ ಕ್ಯಾಂಟೀನ್ ಮೂಲಕ ಬಡ ಜನರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಆದರೆ ವಿರೋಧ ಪಕ್ಷಗಳು ಮಾತ್ರ ಕರ್ನಾಟಕದಲ್ಲಿ ನರೇಗಾ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಾಗ ಮೋದಿ ಸೇರಿದಂತೆ ಎಲ್ಲರು ವಿರೋಧ ಮಾಡಿದರು. ಕರ್ನಾಟಕ ರಾಜ್ಯದಲ್ಲಿ ಸತತ ಬರಗಾಲವನ್ನು ರೈತರು ಎದುರಿಸುತ್ತಿದ್ದಾರೆ. ಸಿದ್ಧರಾಮಯ್ಯ ನವರು ಕಷ್ಟ ನೋಡಲಾಗದೆ ಮೋದಿಯವರಿಗೆ ಭೇಟಿ ಮಾಡಿ ಸಹಾಯದ ಹಸ್ತ ಚಾಚಿದರು. ಆದರೆ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಮೋದಿ ಮುಂದಾಗಲಿಲ್ಲ. ಇದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಬೇಸರ ವ್ಯಕ್ತಪಡಿಸಿದರು.

    ಬಿಜೆಪಿ ಸರಕಾರ ಇರುವ ರಾಜ್ಯಗಳಿಗೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಆದರೆ ಕರ್ನಾಟಕಕ್ಕೆ ಮೋದಿ ತಾರತಮ್ಯ ಮಾಡಿದ್ದಾರೆ. ಇದೆನಾ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಇಲ್ಲಿನ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತಿದೆ. ಆದರೆ ಮೋದಿ ಅವರು ಅವುಗಳನ್ನ ವಿರೋಧಿಸುತ್ತಿದ್ದಾರೆ. ಮೋದಿಯವರು ಕಾಂಗ್ರೆಸ್ ಮುಕ್ತ ಮಾಡುತ್ತೇನೆ ಅಂತಾರೆ. ಮೋದಿ ಒಳ್ಳೆ ಭಾಷಣ ಮಾಡುತ್ತೆನೆಂದು ಗರ್ವ ಇದೆ. ಅವರು ಒಳ್ಳೆ ಭಾಷಣಕಾರರು ನಾನು ಒಪ್ಪುತ್ತೇನೆ. ಆದರೆ ಮಾತುಗಳಿಂದ ದೇಶದ ಅಭಿವೃದ್ಧಿ ಆಗುತ್ತಾ ಎಂದು ಪ್ರಶ್ನೆ ಮಾಡಿದರು.

    ಬೆಲೆ ಏರಿಕೆ ಗಗನಕ್ಕೇರಿದೆ. ಹಿಂದೆಂದು ಈ ರೀತಿ ಆಗಿರಲಿಲ್ಲ. ಇವತ್ತು ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಜಾಗತಿಕ ಮಟ್ಟದಲ್ಲಿ ಕುಸಿದಿದ್ದರೂ ಬೆಲೆ ಏರಿಸಿಕೊಂಡು ಹೋಗುತ್ತಿದ್ದಾರೆ. ಪ್ರಧಾನ ಮಂತ್ರಿ ಎಲ್ಲಿಗೆ ಹೋದರು ಸುಳ್ಳು ಹೇಳುತ್ತಾರೆ. ಇತಿಹಾಸವನ್ನ ತಿರುಚುತ್ತಾರೆ. ದೇಶದ ಮಹಾನ್ ನಾಯಕರನ್ನು ಅವಮಾನಿಸುತ್ತಿದ್ದಾರೆ. ದೇಶದ ನೈಜ ಸ್ಥಿತಿ ಬಗ್ಗೆ ಮಾತನಾಡುವುದಿಲ್ಲ ಎಂದು ಆರೋಪಿಸಿದರು.

    ಭ್ರ್ರಷ್ಟಾಚಾರ ನಿರ್ಮೂಲ ಮಾಡುವ ಮಾತು ಎಲ್ಲಿ ಹೋಯಿತು. ಲೋಕಪಾಲ್ ಮಸೂದೆ ಏನಾಯ್ತು. ಎಲ್ಲ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅವರನ್ನ ಪಕ್ಕದಲ್ಲಿ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರಿ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

  • ಮಹಾ ಸಿಎಂ ಭೇಟಿ ಬಳಿಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಣ್ಣಾ ಹಜಾರೆ

    ಮಹಾ ಸಿಎಂ ಭೇಟಿ ಬಳಿಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಣ್ಣಾ ಹಜಾರೆ

    ನವದೆಹಲಿ: ಲೋಕಪಾಲ ರಚನೆ, ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ನೇಮಕ ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಸತ್ಯಾಗ್ರಹ ಆರಂಭಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.

    ಇಂದು ದೆಹಲಿಯ ರಾಮಲೀಲಾ ಮೈದಾನಕ್ಕೆ ಭೇಟಿ ನೀಡಿದ್ದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಜೊತೆ ಚರ್ಚೆ ನಡೆಸಿದ ಬಳಿಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದರು.

    ಈ ವೇಳೆ ಮಾತನಾಡಿದ ಅಣ್ಣಾ ಹಜಾರೆ ಅವರು, ಲೋಕಪಾಲ ರಚನೆ ವಿವಾದ ಇನ್ನೂ ಬಾಕಿ ಉಳಿದಿದೆ. ಸಿಎಂ ಫಡ್ನವೀಸ್ ಅವರು ವಿವಾದವನ್ನು ಇನ್ನೂ 6 ತಿಂಗಳಲ್ಲಿ ಪರಿಹಾರ ನೀಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಸರ್ಕಾರದ ಮತ್ತು ಪ್ರಜೆಗಳು ಬೇರೆ ಅಲ್ಲ. ಜನರಿಗೆ ಒಳ್ಳೆಯದು ಮಾಡುವುದು ಸರ್ಕಾರ ಕರ್ತವ್ಯ ಎಂದು ಹೇಳಿದರು.

    ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವ ಗಜೇಂದ್ರ ಸಿಂಗ್ ಶೆಖಾವಾತ್ ಅವರು ಸಾಥ್ ನೀಡಿದ್ದರು.