Tag: loksabha elctions2019

  • ಮೊದಲ ಬಾರಿ ಮತದಾನ ಮಾಡಿ ಸಂದೇಶ ರವಾನಿಸಿದ್ರು ಹನುಮಂತ!

    ಮೊದಲ ಬಾರಿ ಮತದಾನ ಮಾಡಿ ಸಂದೇಶ ರವಾನಿಸಿದ್ರು ಹನುಮಂತ!

    ಹಾವೇರಿ: ಸರಿಗಮಪ ಮೂಲಕ ಮನೆಮತಾದ ಕುರಿಗಾಹಿ ಹನುಮಂತ ಸದೃಢ ದೇಶದ ನಿರ್ಮಾಣಕ್ಕಾಗಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

    ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಮೊದಲ ಬಾರಿಗೆ ಮತದಾನ ಮಾಡಿದ್ದೇನೆ. ನೀವು ಕೂಡ ತಪ್ಪದೇ ಮತದಾನ ಮಾಡಿ. ಮತದಾನ ನಿಮ್ಮ ಹಕ್ಕಾಗಿದ್ದು, ನೀವೇ ಮತ ಚಲಾಯಿಸಿ. ಅಲ್ಲದೆ ಸೂಕ್ತವಾದ ಜನಪ್ರತಿನಿಧಿ ಆಯ್ಕೆ ಮಾಡಿ ಎಂದು ಇದೇ ವೇಳೆ ಜನರಿಗೆ ಸಂದೇಶ ರವಾನಿಸಿದ್ರು.


    ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.116 ರಲ್ಲಿ ಸಿಂಗರ್ ಹನುಮಂತ ಲಮಾಣಿ ತಮ್ಮ ಮತ ಚಲಾಯಿಸಿದ್ದಾರೆ. ಹನುಮಂತ ಹಾವೇರಿ ಎಲೆಕ್ಷನ್ ಐಕಾನ್ ಆಗಿದ್ದಾರೆ.

    ಕರ್ನಾಟಕ ಸೇರಿದಂತೆ 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 116 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಈಗಾಗಲೇ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ತಪ್ಪದೇ ಮತ ಹಾಕಿ. ದೇಶದ ಭವಿಷ್ಯಕ್ಕಾಗಿ ನಿಮ್ಮ ಹಕ್ಕು ಚಲಾಯಿಸಿ.

  • ಕಾಂಗ್ರೆಸ್‍ಗೆ ನಟ ಜಗ್ಗೇಶ್ ಸವಾಲು

    ಕಾಂಗ್ರೆಸ್‍ಗೆ ನಟ ಜಗ್ಗೇಶ್ ಸವಾಲು

    ಶಿವಮೊಗ್ಗ: ಕಾಂಗ್ರೆಸ್ ನಾಯಕರಿಗೆ ನಟ, ಬಿಜೆಪಿ ನಾಯಕ ಜಗ್ಗೇಶ್ ಸವಾಲೆಸೆದಿದ್ದಾರೆ.

    ಶಿವಮೊಗ್ಗ ಗ್ರಾಮಾಂತರ ಹಾಗೂ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಜಗ್ಗೇಶ್ ಬುಧವಾರ ಸಂಜೆ ಭದ್ರಾವತಿಯಲ್ಲಿ ಬಹಿರಂಗ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಜೆಡಿಎಸ್‍ನಿಂದ ಕರೆದುಕೊಂಡು ಬಂದು ಕಾಂಗ್ರೆಸ್ ನವರು ಯಾಕೆ ನಮ್ಮ ನಾಯಕರು ಅಂದ್ರು ಎಂದು ಉತ್ತರ ಕೊಟ್ಟರೆ, ನಾನು ಯಾಕೆ ಕಾಂಗ್ರೆಸ್ ಬಿಟ್ಟೆ ಎಂದು ಉತ್ತರ ಕೊಡ್ತೀನಿ ಎಂದು ಜಗ್ಗೇಶ್ ಚಾಲೆಂಜ್ ಹಾಕಿದ್ದಾರೆ.

    ಇದೇ ವೇಳೆ ಸಿನಿಮೀಯ ಶೈಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜ್ಯದಲ್ಲಿನ ಮೈತ್ರಿ ಬಗ್ಗೆ ಟೀಕೆ ಮಾಡಿದ್ರು. ಯಾವ ಘಟಬಂಧನೂ ಇಲ್ಲ. ಮೋದಿನ ಮನೆಗೂ ಕಳಿಸೋಕೆ ಆಗೋಲ್ಲ. ಇವತ್ತು ರಾಜ್ಯದಲ್ಲಿ ಎರಡೆರಡು ಪಕ್ಷ ಸೇರಿಕೊಂಡು ಏನೋ ಮಾಡ್ತಿವಿ ಅಂತಿದ್ದಾರೆ. ಏನೂ ಮಾಡಕ್ಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ರು.

    ರಾಹುಲ್ ಗಾಂಧಿಗೆ ಎಬಿಸಿಡಿ ಗೊತ್ತಿಲ್ಲ. ವೇದಿಕೆ ಮೇಲೆ ಹೆಂಗೆ ಮಾತಾಡಬೇಕು ಎಂದು ಮೊದಲು ಟ್ರೈನಿಂಗ್ ಕೊಟ್ಟು ಕರ್ಕಂಡ್ ಬರ್ರಪ್ಪ ಎಂದು ಸಲಹೆ ನೀಡಿದರು. ಯಾಕೆ ಎಸ್ ಎಂ ಕೃಷ್ಣ ಬಿಜೆಪಿಗೆ ಬಂದ್ರೂ ಎಂದು ಕಾಂಗ್ರೆಸ್ ನವರು ಉತ್ತರ ಕೊಡಿ ಎಂದು ಹೇಳಿದರು.


    ಶಿವಮೊಗ್ಗ ಲೋಕಸಭಾ ಕಣದಲ್ಲಿ ಸಿನಿಮಾ ಮಂದಿಯ ಪ್ರಚಾರ ಆರಂಭವಾಗಿದೆ. ಕಳೆದ ನಾಲ್ಕು ದಿನಗಳಿಂದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಬೆನ್ನಲ್ಲೇ ಬುಧವಾರ ಜಗ್ಗೇಶ್ ಬಿಜೆಪಿ ಪರ ಬ್ಯಾಟಿಂಗ್ ಮಾಡಿದ್ದಾರೆ.

    ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಸ್ ಮಧು ಬಂಗಾರಪ್ಪ ಹಾಗೂ ಬಿಜೆಪಿಯಿಂದ ಬಿ.ವೈ ರಾಘವೇಂದ್ರ ಚುನಾವಣಾ ಕಣದಲ್ಲಿದ್ದಾರೆ.