Tag: LokSabha election

  • ನಾವು ಕೂಡ ಊಟ ಮಾಡಿಲ್ಲ, ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ ಕೂತ್ಕೋ: ಕಾರ್ಯಕರ್ತರಿಗೆ ಗದರಿದ ಮಾಜಿ ಸಿಎಂ

    ನಾವು ಕೂಡ ಊಟ ಮಾಡಿಲ್ಲ, ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ ಕೂತ್ಕೋ: ಕಾರ್ಯಕರ್ತರಿಗೆ ಗದರಿದ ಮಾಜಿ ಸಿಎಂ

    ಚಾಮರಾಜನಗರ: “ಏ ಕೂತ್ಕೋ, ನಾವು ಕೂಡ ಊಟ ಮಾಡಿಲ್ಲ. ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ” ಎಂದು ಸಮಾವೇಶದಿಂದ ಎದ್ದು ಹೊಗುತ್ತಿದ್ದವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಗದರಿದ್ದಾರೆ.

    ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಜನರು ಸಮಾವೇಶದಿಂದ ಎದ್ದು ಹೋಗುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ “ಏ ಕೂತ್ಕೋ, ನಾವು ಕೂಡ ಊಟ ಮಾಡಿಲ್ಲ. ಏ ಪಂಚೆ ಎಲ್ಲಿಗೆ ಹೋಗ್ತಾ ಇದ್ಯಾ ಕೂತ್ಕೋ. ಮುಗಿತು ಕೂತ್ಕೋ” ಎಂದು ಗದರಿದ್ದಾರೆ.

    ಇದೇ ವೇಳೆ ಮಾತನಾಡಿದ ಅವರು, “ರಾಮ ಮಂದಿರ ಕಟ್ಟುವುದಕ್ಕೆ ನನ್ನ ವಿರೋಧವಿಲ್ಲ. ನನ್ನ ಹೆಸರಲ್ಲೂ ಕೂಡ ರಾಮ ಇದೆ. ಸಿದ್ದ – ರಾಮ ಸಿದ್ದರಾಮಯ್ಯ. ಸಿದ್ದ ಅಂದರೆ ರೆಡಿ ಅಂತಾ, ನಾನು ಯಾಕೆ ವಿರೋಧ ಮಾಡಲಿ. ಇವರು ಬಾಬ್ರಿ ಮಸೀದಿ ಕೆಡವಿ ರಾಮ ಮಂದಿರ ಕಟ್ಟಲು ಹೋಗಿ 27 ವರ್ಷ ಆಯ್ತು. ಇನ್ನೂ ಯಾಕೆ ಇವರು ರಾಮ ಮಂದಿರ ಕಟ್ಟಿಲ್ಲ. ಚುನಾವಣೆ ಬಂದಾಗ ಮಾತ್ರ ರಾಮ ಮಂದಿರ ಕಟ್ಟುತ್ತೇವೆ ಎಂದು ಹೇಳುತ್ತಾರೆ. ಇಟ್ಟಿಗೆ ದುಡ್ಡು ಎಲ್ಲವನ್ನೂ ತಗೊಂಡು ರಾಮ ಮಂದಿರ ಕಟ್ಟುತ್ತೇವೆ ಎಂದು ಹೋಗಿದ್ದರು. ಬಳಿಕ ಇಟ್ಟಿಗೆನಾ ರಸ್ತೆಗೆ ಎಸೆದು ದುಡ್ಡನ್ನು ಜೇಬಿಗೆ ಹಾಕೊಂಡು ಹೋದ್ರು. ಜನರಿಂದ ಸಂಗ್ರಹ ಮಾಡಿದ ದುಡ್ಡಿನ ಲೆಕ್ಕಾ ಎಲ್ಲಿ” ಎಂದು ಸಿದ್ದರಾಮಯ್ಯ ಪ್ರಶ್ನಿಸದರು.

    ತಮ್ಮ ಭಾಷಣದ ಉದ್ದಕ್ಕೂ ಮೋದಿ ಅವರನ್ನು ಸಿದ್ದರಾಮಯ್ಯ ಅನುಕರಣೆ ಮಾಡಿದ್ದು ವಿಶೇಷವಾಗಿತ್ತು. ಡಿಸೆಂಬರ್ 30, 2009ರಲ್ಲಿ ವಿಧಾನಸಭೆಯಲ್ಲಿ ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಿಸ್ಟರ್ ಯಡಿಯೂರಪ್ಪ ಸಾಲಮನ್ನಾ ಮಾಡಿ ಎಂದು ಹೇಳೋದಕ್ಕೆ ನಿಮಗೆ ಯಾವ ನೈತಿಕತೆ ಇದೆ? ಸಮ್ಮಿಶ್ರ ಸರ್ಕಾರದಿಂದ 36 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡುತ್ತಿದ್ದೇವೆ. ರೈತರಿಗೆ ನೀವೇನು ಮಾಡಿದ್ದೀರಿ ಮೋದಿಯವರೇ? ಸಿಲಿಂಡರ್ ಗ್ಯಾಸ್ ಬೆಲೆ 450 ರೂ. ಯಿಂದ 1 ಸಾವಿರಕ್ಕೆ ಏರಿಕೆಯಾಗಿದ್ದೆ ಅಚ್ಚೇದಿನ್ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದೆ. ಆದರೆ ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆಯಾಗಲಿಲ್ಲ. ಲಕ್ಷಾಂತರ ಕೋಟಿ ಉಳಿತಾಯವಾಗಿದೆ. ಎಲ್ಲಿ ಹೋಯ್ತು ಈ ಹಣ ರಾಷ್ಟ್ರದ ಜನತೆಗೆ ಲೆಕ್ಕ ಕೊಡಿ ಮೋದಿಯವರೇ. ಪ್ರತಿಯೊಬ್ಬರ ಅಕೌಂಟ್‍ಗೆ 15 ಲಕ್ಷ ಹಣ ಹಾಕ್ತೀವಿ ಎಂದು ಹೇಳಿದ್ರಿ. ಆದರೆ 15 ಲಕ್ಷ ಇರಲಿ 15 ಪೈಸೆನೂ ಹಾಕಲಿಲ್ಲ. ನಿಮಗೆ ಯಾರೋಬ್ಬರಿಗೆ 15 ರೂ. ಬಂದಿದ್ದರೆ ನಾನು ಮೋದಿ ಬಗ್ಗ ಟೀಕೆ ಮಾಡುವುದನ್ನು ಬಿಡುತ್ತೇನೆ ಎಂದ ಅವರು ಪಾಕಿಸ್ತಾನದ ವಿರುದ್ಧ ಕಾಂಗ್ರೆಸ್ ಅವಧಿಯಲ್ಲಿ 12 ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವು. ಎರಡು ಬಾರಿ ಪಾಕಿಸ್ತಾನವನ್ನು ಸೋಲಿಸಿದ್ದೇವು. ಆದರೆ ಈಗ ಪದೇ ಪದೇ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಹೇಳುವ ಮೂಲಕ ರಾಜಕೀಯ ಲಾಭ ಪಡೆಯಲು ಹೊರಟ್ಟಿದ್ದಾರೆ ಎಂದು ದೂರಿದರು.

    ಸ್ವಾರ್ಥಕ್ಕಾಗಿ ಬಿಜೆಪಿಗೆ ಹೋದರೆ ಅವರು ಅಂಬೇಡ್ಕರ್ ವಿರೋಧಿಗಳು. ಏಕೆಂದರೆ ಬಿಜೆಪಿಗೆ ಮತ ಹಾಕಿದರೆ ನಾವೇ ಆತ್ಮಹತ್ಯೆ ಮಾಡಿಕೊಂಡಂತೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಬಿಜೆಪಿಗೆ ಒಂದೇ ಒಂದು ಮತ ಕೊಡಬಾರದು. ಪರ ಧರ್ಮ ಸಹಿಷ್ಣುತೆ, ಸಹಬಾಳ್ವೆ ನಮ್ಮ ಮಂತ್ರ ಆಗಬೇಕು. ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಕಳೆದ ಬಾರಿ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ಸಿದ್ದರಾಮಯ್ಯ ಹಿಂದೂ ವಿರೋಧಿ, ಮುಸ್ಲಿಮರ ಪರ ಎಂದರು. ಆದರೆ ನಾನು ಬಡವರ ಪರ ಇರುವುದು ನಿಜ, ಮುಸ್ಲಿಂರ ಪರ ಇರುವುದು ನಿಜ. ದಲಿತರ ಪರ ಇರುವುದು ನಿಜ, ಹಿಂದುಳಿದವರ ಪರ ಇರುವುದು ನಿಜ. ನಾನು ಎಲ್ಲ ಜಾತಿಯವರ ಪರ ಇದ್ದೇನೆ. ಅಕ್ಕಿ ಕೊಟ್ಟಿದ್ದು, ಹಾಲಿಗೆ ಸಬ್ಸಿಡಿ ನೀಡಿದ್ದು, ಇಂದಿರಾ ಕ್ಯಾಂಟೀನ್ ಮಾಡಿದ್ದು, ಸಾಲಮನ್ನಾ ಮಾಡಿದ್ದು ಎಲ್ಲ ವರ್ಗದವರಿಗಾಗಿ. ಯಡಿಯೂರಪ್ಪ ಅವರ ಅವಧಿಯಲ್ಲಿ ಏನು ಮಾಡಿದರು? ಜೈಲಿಗೆ ಹೋಗಿದ್ದನ್ನು ಬಿಟ್ಟರೆ ಬೇರೇನು ಮಾಡಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ: ದಿನೇಶ್ ಗುಂಡೂರಾವ್

    ರಾಹುಲ್ ಗಾಂಧಿ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ: ದಿನೇಶ್ ಗುಂಡೂರಾವ್

    ಚಾಮರಾಜನಗರ: ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಹ್ವಾನ ಕೊಟ್ಟಿದ್ದಾರೆ.

    ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ. ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ ಎಂದು ಹೇಳಿ ಆಹ್ವಾನ ನೀಡಿದರು.

    ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ನಾವು ಆಯ್ಕೆ ಮಾಡಿದ್ದೇವು. ಈಗ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಿ ಪ್ರಧಾನ ಮಂತ್ರಿಯನ್ನಾಗಿ ಮಾಡೋಣ ಎಂದು ಹೇಳಿದರು.

    ಐದು ವರ್ಷಗಳ ನಂತರ ಮೋದಿ ರಿಪೋರ್ಟ್ ಕಾರ್ಡ್ ಶೂನ್ಯವಾಗಿದೆ. ಮೋದಿಯವರು ಕೇವಲ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಶೇ. 7ರಷ್ಟು ತಾಂಡವಾಡುತ್ತಿದೆ. ಕಪ್ಪು ಹಣ ತರುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದಾರೆ. ಮೋದಿಯನ್ನು ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವಂತಿಲ್ಲ. ಏಕೆಂದರೆ ಪ್ರಶ್ನೆ ಮಾಡಿದರೆ ದೇಶ ದ್ರೋಹಿಗಳು ಎಂದು ಹೇಳುತ್ತಿದ್ದಾರೆ ಎಂದರು.

    ಮೋದಿಯವರಿಂದ ಸಾಧನೆ ಏನೂ ಇಲ್ಲ ಬರೀ ಭಾವನೆ. ಉಜ್ವಲ ಯೋಜನೆ ಒಂದು ಬೋಗಸ್. ಯಾವ ಮಹಿಳೆಗೂ ಉಚಿತವಾಗಿ ಕೊಟ್ಟಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಳವಾಗಿದೆ. ಪಾಕಿಸ್ತಾನದ ಮೇಲೆ ದಾಳಿ ಮಾಡಿ ಗೆಲ್ಲಲು ಹೊರಟಿದ್ದಾರೆ. ದೇಶದ ರಕ್ಷಣೆಗಾಗಿ ಚೆಲ್ಲಿದ ರಕ್ತದ ಮೇಲೆ ಬಿಜೆಪಿ ಇಂದು ಗೆಲ್ಲಲು ಹೊರಟಿದೆ. 2014ರಲ್ಲಿ ಜಮ್ಮು ಕಾಶ್ಮೀರ ಶಾಂತಯುತವಾಗಿ ಇತ್ತು ಹಾಗೂ ಎಂಎಲ್‍ಎ ಮತ್ತು ಎಂಪಿ ಚುನಾವಣೆ ನಡೆದಿತ್ತು. ಆದರೆ ಇಂದು ಕಾಶ್ಮೀರದಲ್ಲಿ ಚುನಾವಣೆ ಮಾಡಲು ಆಗುತ್ತಿಲ್ಲ. ಐದು ವರ್ಷದಲ್ಲಿ ಒಂದು ಸರ್ಕಾರ ಕೊಡಲು ಸಾಧ್ಯವಾಗದೇ ಅಶಾಂತಿ ನೆಲೆಸುವಂತೆ ಮಾಡಿದ್ದಾರೆ. ಸದ್ಯ ಮೈತ್ರಿ ಕರ್ನಾಟಕದಲ್ಲಿ 22ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಂಗ್ಲಾ ಯುದ್ಧದಲ್ಲಿ ಪಾಕ್ ಶರಣಾಗಿದ್ದು ಗೊತ್ತಿಲ್ವ, ಅದಕ್ಕಿಂತ್ಲೂ ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್: ಮಾಜಿ ಸಿಎಂ

    ಬಾಂಗ್ಲಾ ಯುದ್ಧದಲ್ಲಿ ಪಾಕ್ ಶರಣಾಗಿದ್ದು ಗೊತ್ತಿಲ್ವ, ಅದಕ್ಕಿಂತ್ಲೂ ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್: ಮಾಜಿ ಸಿಎಂ

    – ಕಾಂಗ್ರೆಸ್ ಅವಧಿಯಲ್ಲಿ 10-15 ಸರ್ಜಿಕಲ್ ಸ್ಟ್ರೈಕ್
    – ಭಾವನಾತ್ಮಕ ವಿಚಾರ ಮುಂದಿಟ್ಟು ಬಿಜೆಪಿಯಿಂದ ರಾಜಕೀಯ

    ಮೈಸೂರು: ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ. ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟ್ರೈಕ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಈ ಬಗ್ಗೆ ಮಾತನಾಡಿದ ಅವರು, “ಬಿಜೆಪಿ ಅವರು ರಾಜಕೀಯ ಲಾಭಕ್ಕೆ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಯಾರೂ ಕೂಡ ರಾಷ್ಟ್ರೀಯ ಭದ್ರತೆ ಬಗ್ಗೆ ಯಾರೂ ರಾಜಕೀಯ ಲಾಭ ಪಡೆದುಕೊಳ್ಳಬಾರದು. ಹಾಗೇ ಲೆಕ್ಕ ಹಾಕಿದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 11-12 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು” ಎಂದು ಹೇಳಿದ್ದಾರೆ.

    ಇಂದಿರಾ ಗಾಂಧಿ ಸರ್ಕಾರದ ಅವಧಿಯಲ್ಲಿ ಬಾಂಗ್ಲಾ ಯುದ್ಧದಲ್ಲಿ ಪಾಕಿಸ್ತಾನ ಶರಣಾಗಿದ್ದು ಗೊತ್ತಿಲ್ಲವಾ. ಅದಕ್ಕಿಂತಲು ದೊಡ್ಡದಾ ಈ ಸರ್ಜಿಕಲ್ ಸ್ಟೈಕ್. ನಾವು ದೇಶದ ರಕ್ಷಣೆ ವಿಚಾರದಲ್ಲಿ ಕಾಂಗ್ರೆಸ್ ಯಾವತ್ತು ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಬಿಜೆಪಿ ಅವರಿಗೆ ಬುದ್ಧಿ ಇಲ್ಲ. ಏಕೆಂದರೆ ಅವರು ಇದರಲ್ಲಿ ಲಾಭ ಪಡೆಯುತ್ತಿದ್ದಾರೆ ಎಂದು ದೂರಿದರು.

    ಬಿಜೆಪಿಯವರು ಯಾವತ್ತು ಅಭಿವೃದ್ಧಿ ವಿಚಾರದಲ್ಲಿ ರೈತರ ವಿಚಾರಲ್ಲಿ ಮತ ಕೇಳಿದ್ದಾರೆ?. ಭಾವನಾತ್ಮಕ ವಿಚಾರ ಇಟ್ಟುಕೊಂಡು ಅವರು ರಾಜಕಾರಣ ಮಾಡುತ್ತಾರೆ. ಈ ಬಾರಿ ಅವರು ಯಾವ ಅಭಿವೃದ್ಧಿಯನ್ನು ಮಾಡಿಲ್ಲ. ಹೀಗಾಗಿ ಈ ವಿಚಾರ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ.

    ಸರ್ಜಿಕಲ್ ಸ್ಟ್ರೈಕ್ ನಿಂದ ತಮಗೆ ಲಾಭವಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ. ಆದರೆ ಸರ್ಜಿಕಲ್ ಸ್ಟ್ರೈಕ್ ಮೊದಲು ಮೋದಿ ಹವಾ ಬಿದ್ದು ಹೋಗಿತ್ತಾ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಖರ್ಗೆ ಆಯ್ತು, ಈಗ ದೇವೇಗೌಡರೇ ಮೋದಿಯ ನೇರ ಟಾರ್ಗೆಟ್

    ಖರ್ಗೆ ಆಯ್ತು, ಈಗ ದೇವೇಗೌಡರೇ ಮೋದಿಯ ನೇರ ಟಾರ್ಗೆಟ್

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರಿಗೆ ಚಕ್ರವ್ಯೂಹ ರಚನೆಗೆ ಪ್ರಧಾನಿ ನರೇಂದ್ರ ಮೋದಿ ಪ್ಲಾನ್ ಮಾಡಿದ್ದಾರೆ. ದೇವೇಗೌಡರು ಎಲ್ಲಿ ಸ್ಪರ್ಧೆ ಮಾಡ್ತಾರೆಯೋ ಅಲ್ಲಿಯೇ ಮೋದಿ ಇರುತ್ತಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭಿಸಿದೆ.

    ಇಷ್ಟು ದಿನ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯ ಮೇಲಿದ್ದ ರಾಜ್ಯ ಬಿಜೆಪಿಯ ಕಣ್ಣು ಇದೀಗ ದೇವೇಗೌಡರತ್ತ ನೆಟ್ಟಿದೆ. ಕಲಬುರಗಿಯಲ್ಲಿ ಖರ್ಗೆಗೆ ಖೆಡ್ಡಾ ತೋಡಲು ಮೋದಿ ಸಮಾವೇಶ ಮಾಡಿದ್ದರು. ಈಗ ಮಾಜಿ ಪ್ರಧಾನಿ ದೇವೇಗೌಡರಿಗೆ ಖೆಡ್ಡಾ ತೋಡಲು ಮಹಾಪ್ಲಾನ್ ನಡೆಯುತ್ತಿದೆ ಎನ್ನಲಾಗಿದೆ.

    ರಾಷ್ಟ್ರಮಟ್ಟದಲ್ಲಿ ಮಹಾಘಟಬಂಧನ್ ನಲ್ಲಿ ಗುರುತಿಸಿಕೊಂಡ ಗೌಡರ ಕಟ್ಟಿ ಹಾಕಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ದೇವೇಗೌಡರು ಎಲ್ಲಿ ನಿಲ್ತಾರೆಯೋ ಅಲ್ಲಿಯೇ ಮೋದಿ ರ‍್ಯಾಲಿ ನಡೆಸಲು ಸಿದ್ಧತೆ ಮಾಡಲಾಗಿದೆ. ಈ ಮೂಲಕ ದೇವೇಗೌಡರನ್ನ ಕಟ್ಟಿ ಹಾಕಲು ಮೋದಿ ಸಮಾವೇಶಕ್ಕೆ ಬಿಎಸ್‍ವೈ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಬೆಂಗಳೂರು ಉತ್ತರದಲ್ಲಿ ದೇವೇಗೌಡರು ಸ್ಪರ್ಧೆ ಮಾಡಿದ್ರೆ ಅಲ್ಲಿ ಮೋದಿ ಜಾಥಾ ಅಥವಾ ತುಮಕೂರಿನಲ್ಲಿ ಸ್ಪರ್ಧೆ ಮಾಡಿದ್ರೆ ಅಲ್ಲಿಯೇ ಮೋದಿ ರ‍್ಯಾಲಿ ನಡೆಸಲು ಬಿಎಸ್‍ವೈ ಚಿಂತನೆ ನಡೆಸಿದ್ದಾರೆ. ಈ ಮೂಲಕ ಮೋದಿಯನ್ನು ಅಸ್ತ್ರವನ್ನಾಗಿ ಬಳಸಿಕೊಂಡು ದೇವೇಗೌಡರನ್ನು ಮಣಿಸಲು ಬಿಜೆಪಿ ಮಹಾ ಪ್ಲಾನ್ ಮಾಡಿಕೊಂಡಿದೆ. ಹೀಗಾಗಿ ಬಿಜೆಪಿ ನಾಯಕರು ದೇವೇಗೌಡರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತಾರೆ ಅನ್ನೋದನ್ನ ಕಾಯುತ್ತಿದ್ದಾರೆ. ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಫಿಕ್ಸ್ ಮಾಡಲು ತಯಾರಿ ನಡೆಸಲಾಗುತ್ತದೆ ಎನ್ನಲಾಗಿದೆ.

    ಒಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ಇಬ್ಬರು ನಾಯಕರ ಟಾರ್ಗೆಟ್ ಸಕ್ಸಸ್ ಆಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿಖಿಲ್ ಸ್ಪರ್ಧೆ ಬೆನ್ನಲ್ಲೇ ಮಂಡ್ಯದಲ್ಲಿ ಬೆಟ್ಟಿಂಗ್ ವಾರ್..!

    ನಿಖಿಲ್ ಸ್ಪರ್ಧೆ ಬೆನ್ನಲ್ಲೇ ಮಂಡ್ಯದಲ್ಲಿ ಬೆಟ್ಟಿಂಗ್ ವಾರ್..!

    – ನಿಖಿಲ್ ಗೆಲ್ತಾರೆ 5 ಲಕ್ಷ ಬೆಟ್

    ಮಂಡ್ಯ; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಯಾರು ಗೆಲ್ತಾರೆ..? ಯಾರು ಸೋಲ್ತಾರೆ..? ಅನ್ನೋ ಲೆಕ್ಕಾಚಾರದ ಸಮರ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

    ಹೌದು. ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಫೈನಲ್ ಆಗಿದೆ. ಈ ಬೆನ್ನಲ್ಲೇ ಚೇತನ್ ಗೌಡ ಹಾಗೂ ನಟೇಶ್ ಗೌಡ ಎಂಬಿಬ್ಬರ ಮಧ್ಯೆ 5 ಲಕ್ಷದ ಬೆಟ್ಟಿಂಗ್ ವಾರ್ ಆರಂಭವಾಗಿದೆ.

    ಪೇಸ್ ಬುಕ್ ನಲ್ಲಿ ಚೇತನ್ ಆರ್ .ಗೌಡ, ನಿಖಿಲ್ ಸೋಲ್ತಾರೆ ಎಂದು ಪೋಸ್ಟ್ ಶೇರ್ ಮಾಡಿದ್ದರು. ಈ ಪೋಸ್ಟ್ ಗೆ 5 ಲಕ್ಷ ಬೆಟ್ ಕಟ್ತೀನಿ.. ನಿಖಿಲ್ ಗೆದ್ದೇ ಗೆಲ್ತಾರೆ. ಧಮ್ ಇದ್ದರೆ ಕಳಿಸು ಎಂದು ನಟೇಶ್ ಗೌಡ ಸವಾಲ್ ಹಾಕಿದ್ದಾರೆ.

    ಇತ್ತ ಸುಮಲತಾ ಅಂಬರೀಶ್ ಕೂಡ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. “ಅಂಬರೀಶ್‍ರನ್ನು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ಮಂಡ್ಯದ ಪ್ರತಿಯೊಬ್ಬರು ಅಂಬರೀಶ್ ಬಂಧುಗಳು. ಏಕೆಂದರೆ ಅಂಬರೀಶ್‍ ಅವರಲ್ಲಿ ಇರುವ ಗುಣವೇ ಮಂಡ್ಯದ ಜನರಲ್ಲಿ ಇದೆ. ಮಂಡ್ಯದ ಮಣ್ಣಿನ ಗುಣದಲ್ಲಿ ಕಪಟವೇ ಇಲ್ಲ. ಸುಳ್ಳುಗಳಿಲ್ಲ. ಸಮಯಕ್ಕೆ ತಕ್ಕ ಹಾಗೆ ಮಾತನಾಡುವ ಜಾಯಮಾನ ಮಂಡ್ಯದ ಮಣ್ಣಿನಲ್ಲಿ ಇಲ್ಲ. ಮಂಡ್ಯದ ಮಣ್ಣು ಬರಿ ಮುಗ್ಧತೆಯಿಂದ ಕೂಡಿಲ್ಲ. ಅದು ಪ್ರಾಮಾಣಿಕತೆಯಿಂದಲೂ ಕೂಡಿದೆ. ಆ ಪ್ರಾಮಾಣಿಕತೆಗೆ ಮೋಸವೆಸಗುವ ರಾಜಕೀಯ ನನಗೆ ಬೇಕಾಗಿಲ್ಲ. ನನ್ನದು ಪ್ರಾಮಾಣಿಕವಾದ, ಅಂಬರೀಶ್ ಪಾಲಿಸುತ್ತಿದ್ದ ರಾಜಕೀಯ ಮಂಡ್ಯದ ಜನರ ರಾಜಕೀಯ” ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    ಮತ್ತೊಂದು ಪೋಸ್ಟ್ ನಲ್ಲಿ ಸುಮಲತಾ ಅವರು, “ಅಂಬರೀಶ್ ರಾಜಕೀಯ ನಾಟಕವಿಲ್ಲದ, ಸುಳ್ಳು ಭರವಸೆಗಳಿಲ್ಲದ, ಒಳಗೊಂದು ಹೊರಗೊಂದು ಮಾತುಗಳಿಲ್ಲದ, ಜನರಿಂದ ಕೆಲಸವಾಗಬೇಕು ಎಂದಾಗ ಜನರೆದುರು ಕಪಟ ನಾಟಕವಾಡಿ ಮೋಸಗೊಳಿಸದ, ನೇರಾನೇರ ಇದ್ದದ್ದು ಇದ್ದ ಹಾಗೆ ಹೇಳುವ ದಿಟ್ಟ ನಡೆಯ ರಾಜಕೀಯ ಅಂಬರೀಶ್ ರಾಜಕೀಯ. ಆ ರಾಜಕೀಯವೇ ಅತ್ಯುತ್ತಮ. ಅಂಬರೀಶ್ ರಾಜಕೀಯವೇ ನಮ್ಮದಾಗಲಿ ಎಂದು ಸುಮಲತಾ ಜೆಡಿಎಸ್ ವರಿಷ್ಠರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

    ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

    ಬೆಂಗಳೂರು: ಎಲೆಕ್ಷನ್ ಹವಾ ದೇಶಾದ್ಯಂತ ಧೂಳೆಬ್ಬಿಸಿದೆ. ಅತ್ತ ಚುನಾವಣಾ ಆಯೋಗ ಎಣ್ಣೆ ಕಿಕ್ ಇಳಿಸಲು ಮೇಜರ್ ಸರ್ಜರಿ ಮಾಡಿದೆ. ಚುನಾವಣೆ ಮುಗಿಯೋವರೆಗೆ ಎಣ್ಣೆ ಬೇಕು ಅಣ್ಣಾ ಎಂದು ಕೆಮ್ಮಂಗಿಲ್ಲ. ಬಾರ್ ಮಾಲೀಕರನ್ನು ಗಿರ ಗಿರ ಸುತ್ತಿಸೋ, ಎಣ್ಣೆ ಪ್ರಿಯರ ನಶೆ ಇಳಿಸೋ ಸುದ್ದಿ ಇಲ್ಲಿದೆ.

    ಈ ಎಲೆಕ್ಷನ್ ಟೈಂನಲ್ಲಿ ಎಣ್ಣೆ ಕೊಟ್ಟೇ ವೋಟು ಹಾಕಿಸಿಕೊಳ್ಳುವ ಜನಪ್ರತಿನಿಧಿಗಳು ಇರುವುದರಿಂದ ಚುನಾವಣಾ ಆಯೋಗ ಎಣ್ಣೆ ವ್ಯಾಪಾರಕ್ಕೆ ಭರ್ಜರಿ ಕತ್ತರಿ ಹಾಕಿದೆ. ಡೈಲಿ ಬಾರ್ ಗಳಿಗೆ ನೂರೆಂಟು ರೂಲ್ಸ್ ತಂದು ಎಣ್ಣೆ ವ್ಯಾಪಾರದ ಮೇಲೆ ಹದ್ದಿನ ಕಣ್ಣು ಇಟ್ಟಿದೆ ಎಂದು ಹೇಳಲಾಗುತ್ತಿದೆ.

    ನನ್ ದುಡ್ಡು ನನ್ನಿಷ್ಟ ಅನ್ಕೊಂಡು ಬಾರ್ ಗೆ ಹೋಗಿ ನಿಮ್ಗೆ ಬೇಕಾದಷ್ಟು ಎಣ್ಣೆ ವ್ಯಾಪಾರ ಮಾಡುವ ಆಗಿಲ್ಲ. ಅಷ್ಟೆ ಅಲ್ಲ ಬಾರ್ ಮಾಲೀಕರಿಗೆ ಈ ಬಾರಿ ಲೋಕಸಭಾ ಎಲೆಕ್ಷನ್‍ಗೆ ಹೊಸ ರೂಲ್ಸ್ ತಂದಿದ್ದಾರೆ.

    ಎಣ್ಣೆಗೂ ನೀತಿ ಸಂಹಿತೆ!
    * ಬಾರನ್ನು ಬೆಳಗ್ಗೆ 10.30ಕ್ಕೆ ತೆರೆಯಬೇಕು. ರಾತ್ರಿ ನಿಗಧಿತ ಅವಧಿಗೆ ಮುಚ್ಚಬೇಕು. ಬೇಗ ತೆರೆಯೋದು, ಲೇಟಾಗಿ ಮುಚ್ಚೋದು ಮಾಡಿದರೆ ಅಂತಹ ಬಾರ್‍ಗಳ ಮೇಲೆ ದಂಡ ಪ್ರಯೋಗ
    * ಪ್ರತಿ ಬಾರ್ ಮೇಲೆ ಕಣ್ಣಿಡಲು ಸ್ಪೆಷಲ್ ಟೀಮ್ ರಚನೆ
    * ಒಬ್ಬ ವ್ಯಕ್ತಿ 2.3 ಲೀಟರ್‍ನಷ್ಟು ಮದ್ಯ ಖರೀದಿ ಮಾಡಬಹುದು. ಹೆಚ್ಚು ಖರೀದಿಸಿದರೆ ಬಾರ್‍ಗಳ ಲೈಸೆನ್ಸ್‍ಗೆ ಕುತ್ತು.
    * ನಿತ್ಯ ಬೆಳಗ್ಗೆ ಎಂಟು ಗಂಟೆಯೊಳಗೆ ಮದ್ಯ ಮಾರಾಟ, ವ್ಯಾಪಾರದ ಸಂಪೂರ್ಣ ವಿವರ ನೀಡಬೇಕು. ಡೈಲಿ ವ್ಯಾಪಾರದ ದಾಖಲೆಯನ್ನು ಅಬಕಾರಿಗೆ ಕಳಿಸಬೇಕು.
    * ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದರೆ ಸ್ಪೆಷಲ್ ವಿಂಗ್ಸ್ ಕೈಯಲ್ಲಿ ತಗ್ಲಾಕ್ಕೊಂಡ್ರೆ ಕ್ರಮ

    ಒಟ್ಟಿನಲ್ಲಿ ಈ ಬಾರಿ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಅಬಕಾರಿ ಇಲಾಖೆ ಕೊಂಚ ಕಠಿಣವಾಗಿಯೇ ಕ್ರಮ ಕೈಗೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೀಟು ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಭುಗಿಲೆದ್ದ ಅಸಮಾಧಾನ

    ಸೀಟು ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಭುಗಿಲೆದ್ದ ಅಸಮಾಧಾನ

    – ತಡರಾತ್ರಿಯೇ ದೇವೇಗೌಡ್ರ ಮನೆಗೆ ಭೇಟಿ

    ಬೆಂಗಳೂರು: ಲೊಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೋಸ್ತಿ ಸರ್ಕಾರದ ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

    ತುಮಕೂರು ಲೋಕಸಭಾ ಕ್ಷೇತ್ರ ಕೈ ತಪ್ಪಿದ್ದಕ್ಕೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರಿಗೆ ಅಸಮಾಧಾನ ಉಂಟಾಗಿದೆ. ಹೀಗಾಗಿ ತಮ್ಮ ಕ್ಷೇತ್ರ ಉಳಿಸಿಕೊಳ್ಳಲು ಪರಮೇಶ್ವರ್ ಅಂತಿಮ ಕಸರತ್ತು ನಡೆಸುತ್ತಿದ್ದಾರೆ.

    ಗುರುವಾರ ತಡರಾತ್ರಿಯೇ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಪರಮೇಶ್ವರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಮಾತುಕತೆಯ ವೇಳೆ ತುಮಕೂರು ಕ್ಷೇತ್ರ ಬಿಟ್ಟುಕೊಡಿ ಎಂದು ದೇವೇಗೌಡರಿಗೆ ಮನವಿ ಮಾಡಿದ್ದಾರೆ. ಎನ್ನಲಾಗಿದೆ.

    ಪರಮೇಶ್ವರ್ ಬಳಿಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಭೇಟಿ ನೀಡಿದ್ದು, 20 ನಿಮಿಷಗಳ ಕಾಲ ದೇವೇಗೌಡರ ಜೊತೆ ದಿನೇಶ್ ಗುಂಡೂರಾವ್ ಮಾತುಕತೆ ನಡೆಸಿದ್ದಾರೆ ಎಂಬವುದಾಗಿ ತಿಳಿದುಬಂದಿದೆ.

    ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಗೊಂದಲ ಬಹುತೇಕ ಬಗೆ ಹರಿದಿದ್ದು, ಸೀಟು ಹಂಚಿಕೆ ಅಂತಿಮವಾಗಿದೆ. ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೆ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು- ಉಡುಪಿ, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಜೆಡಿಎಸ್‍ಗೆ ಸಿಕ್ಕಿದೆ. ಇಬ್ಬರ ಮಧ್ಯೆ ಚರ್ಚೆಗೆ ಕಾರಣವಾಗಿದ್ದ ಮೈಸೂರು ಕ್ಷೇತ್ರ ಕಾಂಗ್ರೆಸ್ಸಿಗೆ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಜನ್ರು ಕಷ್ಟದಲ್ಲಿದ್ದಾಗ ಬಾರದ ಕಣ್ಣೀರು ಈಗ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಬಂದಿದೆ: ಸಿ.ಟಿ ರವಿ ಟಾಂಗ್

    ಜನ್ರು ಕಷ್ಟದಲ್ಲಿದ್ದಾಗ ಬಾರದ ಕಣ್ಣೀರು ಈಗ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಬಂದಿದೆ: ಸಿ.ಟಿ ರವಿ ಟಾಂಗ್

    ಶಿವಮೊಗ್ಗ: ಮಾಜಿ ಪ್ರಧಾನಿ ದೇವೇಗೌಡರು ಮಣ್ಣಿನ ಮಗ, ರೈತ ನಾಯಕ ಎಂದು ಟ್ಯಾಗ್ ಲೈನ್ ಇಟ್ಟುಕೊಂಡವರು. ಅವರಿಗೆ ಜನರು ಸಂಕಷ್ಟದಲ್ಲಿದ್ದಾಗ ಕಣ್ಣೀರು ಬಾರದೇ, ಈಗ ತಮ್ಮ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಕಣ್ಣೀರು ಬಂದಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಟಿ ರವಿ ಟೀಕಿಸಿದ್ದಾರೆ.

    ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಅಪಹಾಸ್ಯವಾಗಿದೆ. ಮಣ್ಣಿನ ಮಗ, ರೈತ ನಾಯಕ ಎಂದು ಟ್ಯಾಗ್ ಲೈನ್ ಇಟ್ಟುಕೊಂಡಿರುವ ದೇವೇಗೌಡರು, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಥವಾ ಯೋಧರು ವೀರ ಮರಣ ಹೊಂದಿದಾಗ ಅತ್ತಿರಲಿಲ್ಲ. ಜನರು ಸಂಕಷ್ಟದಲ್ಲಿದ್ದಾಗ ಕಣ್ಣೀರು ಬಾರದೇ, ಈಗ ತಮ್ಮ ಮೊಮ್ಮಕ್ಕಳು ಚುನಾವಣೆಗೆ ನಿಂತಾಗ ಕಣ್ಣೀರು ಬಂದಿದೆ. ಇದೊಂದು ಅಪಹಾಸ್ಯಕ್ಕೆ ಒಳಗಾದ ಹೈಡ್ರಾಮ ಎಂದು ದೇವೇಗೌಡರ ಕುಟುಂಬದ ಕಣ್ಣೀರಿಗೆ ಲೇವಡಿ ಮಾಡಿದ್ದಾರೆ. ಈ ರೀತಿ ನಟನೆ, ಮೊಮ್ಮಕ್ಕಳ ಭವಿಷ್ಯಕ್ಕೋ, ಜನರ ಬಗ್ಗೆ ಚಿಂತನೆಗೋ ಎಂದು ದೇವೇಗೌಡರೇ ಸ್ಪಷ್ಟಪಡಿಸಲಿ ಎಂದು ಟಾಂಗ್ ನೀಡಿದ್ದಾರೆ.

    ಬಿಜೆಪಿ ಕೋರ್ ಕಮಿಟಿ ಸಭೆ ಈ ತಿಂಗಳ 18 ಮತ್ತು 19ಕ್ಕೆ ನಡೆಯಲಿದೆ. ಅಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ಚಿಕ್ಕಮಗಳೂರು ಹಾಗೂ ಉಡುಪಿ ಬಿಜೆಪಿಯ ಭದ್ರಕೋಟೆ. ಇಲ್ಲಿ ಆಕಾಂಕ್ಷಿಗಳು ಬಹಳ ಜನ ಇದ್ದಾರೆ. ನಮ್ಮ ಹೈಕಮಾಂಡ್ ತೀರ್ಮಾನವೇ ಅಂತಿಮ. ದೇಶದ ಹಾಗೂ ರಾಜ್ಯದ ಜನ ಬಿಜೆಪಿ ಜೊತೆಗಿದ್ದಾರೆ. ನಮಗೆ ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕೆಂಬುದು ದೇಶದ ಜನರ ಬಯಸುತ್ತಿದ್ದಾರೆ ಎಂದು ತಿಳಿಸಿದರು.

    ರಾಜ್ಯದಲ್ಲೂ 1998 ರಿಂದಲೂ ನಂ.1 ಸ್ಥಾನದಲ್ಲಿ ಬಿಜೆಪಿಯೇ ಗೆಲ್ಲುತ್ತಾ ಬಂದಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅತಿರಥ ಮಹಾರಥರನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. 28ಕ್ಕೆ 28 ಸ್ಥಾನಗಳನ್ನು ಕೂಡ ಬಿಜೆಪಿಯೇ ಗೆಲ್ಲಲಿದೆ. ಜಾತಿ, ಕುಟುಂಬದ ಬಗ್ಗೆ ಚರ್ಚೆ ನಡೆಯದೇ, ಈಗ ದೇಶದ ಬಗ್ಗೆ ಚರ್ಚೆ ನಡೆಯುತ್ತಿದೆ. ಎಂಥಹ ನಾಯಕ ಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ದೇಶ ಗೆಲ್ಲಬೇಕು ಎಂದರೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಸಿ.ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಜ್ಯೋತಿಷ್ಯ ಪ್ರಕಾರ ಸಮಯ ನೋಡಿಕೊಂಡು ನಿಖಿಲ್ ಹೆಸರು ಪ್ರಕಟಿಸಿದ ಪುಟ್ಟರಾಜು!

    ಜ್ಯೋತಿಷ್ಯ ಪ್ರಕಾರ ಸಮಯ ನೋಡಿಕೊಂಡು ನಿಖಿಲ್ ಹೆಸರು ಪ್ರಕಟಿಸಿದ ಪುಟ್ಟರಾಜು!

    ಮಂಡ್ಯ: ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.

    ನಿಖಿಲ್ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲು ಸಿಲ್ವರ್ ಜ್ಯುಬಿಲಿ ಪಾರ್ಕಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಾಧಾರಣವಾಗಿ ವೇದಿಕೆಯ ಮೇಲೆ ಅಭ್ಯರ್ಥಿ ಇರುವಾಗಲೇ ನಾಯಕರು ಹೆಸರನ್ನು ಘೋಷಿಸುತ್ತಾರೆ. ಆದರೆ ಮಂಡ್ಯ ಸಮಾವೇಶ ಆರಂಭಕ್ಕೂ ಮೊದಲೇ ಸಚಿವ ಪುಟ್ಟರಾಜು ಅವರು ನಿಖಿಲ್ ಹೆಸರನ್ನು ಪ್ರಕಟಿಸಿದ್ದರು. ಸಿ.ಎಸ್ ಪುಟ್ಟರಾಜು ಅವರು ನಿಖಿಲ್ ವೇದಿಕೆಗೆ ಆಗಮಿಸುವ ಮುನ್ನವೇ ಅಂದರೆ ಮಧ್ಯಾಹ್ನ 12 ಗಂಟೆಯ ಒಳಗಡೆ ಹೆಸರನ್ನು ಘೋಷಿಸಿದ್ದರು.

    ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ 12 ಗಂಟೆಗೆ ಅಭಿಜಿತ್ ಲಗ್ನದಲ್ಲಿ ರೇವಣ್ಣ ಸೂಚನೆ ಮೇರೆಗೆ ಪುಟ್ಟರಾಜು ನಿಖಿಲ್ ಹೆಸರನ್ನು ಘೋಷಿಸಿದ್ದಾರೆ ಎನ್ನಲಾಗುತ್ತದೆ.

    ಈ ಬಗ್ಗೆ ಆಧ್ಯಾತ್ಮಕ ಚಿಂತಕ ಕಮಾಲಕರ ಭಟ್ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ಇಂದು ಫಾಲ್ಗುಣ ಮಾಸ, ಶುಕ್ಲ ಪಕ್ಷದ ಅಷ್ಟಮಿಯ ಶುಭತಿಥಿ. ಒಬ್ಬ ವ್ಯಕ್ತಿ ರಾಜಕೀಯದಲ್ಲಿ ಪ್ರವೇಶಿಸಿ ಬೆಳೆಯಬೇಕೆಂದರೆ ಅವರು ಅದಕ್ಕೆಂದೇ ನಿರ್ಧಾರಗಳನ್ನು ತೆಗೆದುಕೊಂಡಿರುತ್ತಾರೆ. ಅವರು ತೆಗೆದುಕೊಂಡ ನಿರ್ಧಾರಗಳಂತೆ ಈ ಸಮಯ ಈ ದಿನದಲ್ಲಿ ವಿಶೇಷ ಆಗಿರುವುದರಿಂದ ನಿಖಿಲ್ ಅವರಿಗೆ ಅನುಕೂಲ ಆಗಿರುವುದರಿಂದ ಆ ಲಗ್ನದ ಆಧಾರವನ್ನು ಅವಲೋಕನ ಮಾಡಿ ಈ ಸಮಯ ನಿಗದಿಪಡಿಸಿದ್ದಾರೆ. ನಿಖಿಲ್ ಅವರ ಕುಟುಂಬ ಜ್ಯೋತಿಷಿಗಳ ಮಾಹಿತಿ ಪಡೆದು ಈ ತೀರ್ಮಾನ ತೆಗೆದುಕೊಂಡಿರಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 5 ವರ್ಷ ಕೆಲ್ಸ ಮಾಡದೇ ಯೋಧರನ್ನು ಬಳಸಿಕೊಂಡು ಚುನಾವಣೆಗೆ ಹೋಗ್ತಿದ್ದಾರೆ: ಶಿವರಾಜ್ ತಂಗಡಗಿ

    5 ವರ್ಷ ಕೆಲ್ಸ ಮಾಡದೇ ಯೋಧರನ್ನು ಬಳಸಿಕೊಂಡು ಚುನಾವಣೆಗೆ ಹೋಗ್ತಿದ್ದಾರೆ: ಶಿವರಾಜ್ ತಂಗಡಗಿ

    ಕೊಪ್ಪಳ: ಹಿರಿಯಕ್ಕನ ಚಾಳಿ ಮನೆ ಮಂದಿಗೆ ಎಂಬಂತೆ ನರೇಂದ್ರ ಮೋದಿ ಅವರಂತೆ ಬಿಜೆಪಿಯ ರಾಜ್ಯ ನಾಯಕರೂ ಸುಳ್ಳು ಹೇಳುತ್ತಿದ್ದಾರೆ. 5 ವರ್ಷ ಸರಿಯಾಗಿ ಕೆಲಸ ಮಾಡದ ಅವರು ಯೋಧರನ್ನು ಬಳಸಿಕೊಳ್ಳುವ ಮೂಲಕ ಚುನಾವಣೆಗೆ ಹೋಗುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ.

    ಜಿಲ್ಲೆಯ ಗಂಗಾವತಿಯಲ್ಲಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು 5 ವರ್ಷ ಬರೀ ಸುಳ್ಳು ಹೇಳಿಕೊಂಡು ಬಂದಿದ್ದಾರೆ.ಕೆಲಸ ಮಾಡಿ ಚುನಾವಣೆಗೆ ಅವರು ಹೋಗದೆ ಯೋಧರ ಮೂಲಕ ಚುನಾವಣೆಗೆ ಹೋಗುತ್ತಿದ್ದಾರೆ. ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಾರೆ. ಹಿಂದೂ-ಮುಸ್ಲಿಮರ ನಡುವೆ ಜಗಳ ಹಚ್ಚುತ್ತಾರೆ ಎಂದು ಆರೋಪಿಸಿದರು.

    ಭಾರತ ಮಾತಾಕೀ ಜೈ ಎಂಬ ಸ್ಲೋಗನ್, ಜೈ ಜವಾನ್, ಜೈ ಕಿಸಾನ್ ಸ್ಲೋಗನ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ, ಬಿಜೆಪಿಯವರು ಆ ಸ್ಲೋಗನ್‍ಗಳನ್ನು ಗುತ್ತಿಗೆ ಪಡೆದವರ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಭಾರತ ಮಾತಾಕಿ ಜೈ ಎಂಬುದು ಯಾವುದೇ ಪಕ್ಷಕ್ಕೆ ಸೀಮಿತವಲ್ಲ. ನಾವೂ ಭಾರತ ಮಾತಾ ಕೀ ಜೈ ಎನ್ನುತ್ತೇವೆ. ಸಂಸದ ಅನಂತ್‍ಕುಮಾರ್ ಹೆಗ್ಡೆಗೆ ತಿಳುವಳಿಕೆ ಇಲ್ಲ. ಹೇಗೆ ಸಂಸದರಾದರೋ ಗೊತ್ತಿಲ್ಲ ಎಂದು ಟೀಕಿಸಿದರು.

    ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಲ್ಲಿ 8 ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಾರ್ಚ್ 16 ರಂದು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗುತ್ತದೆ. ಈಗಾಗಲೇ ಜಿಲ್ಲೆಯ ಎಲ್ಲ ನಾಯಕರನ್ನ ಕರೆದು ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ನಾವೆಲ್ಲರೂ ಒತ್ತಾಯ ಮಾಡಿದ್ದೆವು. ಆದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಅಂತ ಹೇಳಿದ್ದಾರೆ. ರಾಜ್ಯ ರಾಜ್ಯಕಾರಣದಲ್ಲಿಯೇ ನಾನು ಇರುತ್ತೇನೆ. ಇದೇ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಶಿವರಾಜ್ ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv