Tag: LokSabha election

  • ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ, ಎಂಪಿ ಸೀಟ್‍ಗೆ ಇದೆ: ಪ್ರತಾಪ್ ಸಿಂಹ

    ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ, ಎಂಪಿ ಸೀಟ್‍ಗೆ ಇದೆ: ಪ್ರತಾಪ್ ಸಿಂಹ

    ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬೇರೆ ಪಕ್ಷಗಳಲ್ಲಿ ಸಿನಿಮಾ ಟಿಕೆಟ್‍ಗೆ ಗೊಂದಲ ಇಲ್ಲ. ಆದರೆ ಚುನಾವಣೆ ಟಿಕೆಟ್‍ಗೆ ಗೊಂದಲ ಇದೆ ಎಂದು ಮೈತ್ರಿ ಪಕ್ಷದ ಟಿಕೆಟ್ ಹಂಚಿಕೆ ವಿಚಾರವನ್ನ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೈತ್ರಿ ಪಕ್ಷದ ಟಿಕೆಟ್ ಹಂಚಿಕೆ ವಿಚಾರ ಪ್ರತಿಕ್ರಿಯಿಸಿದ್ದಾರೆ. ಬೇರೆ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಬಗ್ಗೆ ಗೊಂದಲ ಇರಬಹುದು. ಆದರೆ ಬಿಜೆಪಿಯಲ್ಲಿ ಟಿಕೆಟ್ ವಿಚಾರದಲ್ಲಿ ಗೊಂದಲ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮ. ಅವರು ಈಗಾಗಲೇ ಹಾಲಿ ಸಂಸದರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಅವರಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿದ್ದಾರೆ.

    ಬಳಿಕ ಚುನಾವಣೆಗೆ ನಿಲ್ಲಬೇಕೆಂದು ಎಲ್ಲರಿಗೂ ಆಸೆ ಇರುತ್ತೆ ಅದು ಸಹಜ ಬಿಡಿ. ಹಾಗಂತ ಎಲ್ಲರಿಗೂ ಟೀಕೆಟ್ ನೀಡಲು ಆಗಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಮ್ಮ ಪಕ್ಷದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೋದಿ ನಿಂತ ನೆಲದಲ್ಲೇ ಅಬ್ಬರಿಸೋಕೆ ಮುಂದಾದ ರಾಹುಲ್ ಗಾಂಧಿ

    ಮೋದಿ ನಿಂತ ನೆಲದಲ್ಲೇ ಅಬ್ಬರಿಸೋಕೆ ಮುಂದಾದ ರಾಹುಲ್ ಗಾಂಧಿ

    ಕಲಬುರಗಿ: ಮೋದಿ ನಿಂತ ನೆಲದಲ್ಲೆ ರಾಹುಲ್ ಗಾಂಧಿ ಅಬ್ಬರಿಸೋಕೆ ಮುಂದಾಗಿದ್ದಾರೆ. ಮಾರ್ಚ್ 18ರಂದು ಲೋಕಸಭಾ ಚುನಾವಣೆಯ ಪ್ರಚಾರ ನಿಮಿತ್ತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಲಬುರಗಿಯ ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

    ಮಾರ್ಚ್ 18ರಂದು ಕಲಬುರಗಿಯ ಎನ್.ವಿ ಕಾಲೇಜು ಮೈದಾನದಲ್ಲಿ ಸಂಜೆ ನಾಲ್ಕು ಗಂಟೆಗೆ ಕಾಂಗ್ರೆಸ್ ಸಮಾವೇಶ ನಡೆಸಲಿದ್ದಾರೆ. ಕಲಬುರಗಿ ಮತ್ತು ಬೀದರ್ ಲೋಕಸಭಾ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಮತ ಬೇಟೆಯಾಡೋದಕ್ಕೆ ಸಜ್ಜಾಗಿದ್ದಾರೆ.

    ರಾಹುಲ್ ಗಾಂಧಿ ಸಮಾವೇಶ ಫೈನಲ್ ಆಗುತ್ತಿದ್ದಂತೆಯೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕೂಡ ನಡೆಸಿದರು. ರಾಹುಲ್ ಗಾಂಧಿ ಸಮಾವೇಶದ ಬಗ್ಗೆ ಪೂರ್ವಾಪರ ಚರ್ಚೆ ನಡೆಸಿ ಸಮಾವೇಶ ಯಶಸ್ವಿಯಾಗುವಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ರಾಹುಲ್ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಟಾಸ್ಕ್ ಕೂಡ ಪ್ರಿಯಾಂಕ್ ಖರ್ಗೆ ಪಡೆದಿದ್ದಾರೆ. ಮೋದಿ ವಿರುದ್ಧ ಸದನದಲ್ಲಿ ಮಾತಾಡುವಂತಹ ಏಕೈಕ ವ್ಯಕ್ತಿ ಮಲ್ಲಿಕಾರ್ಜುನ ಖರ್ಗೆ ಆಗಿರುವದ್ರಿಂದ ಈ ಬಾರಿಯ ಚುನಾವಣೆ ಸಾಕಷ್ಟು ರಂಗೇರಲಿದೆ. ಮೋದಿ ನಡೆಸಿದ ಸಮಾವೇಶದಲ್ಲಿ ರಾಹುಲ್ ಗಾಂಧಿ ಸಮಾವೇಶ ನಡೆಸುತ್ತಿರುವುದಕ್ಕೆ ಮೋದಿಗೆ ಟಕ್ಕರ್ ಕೊಡ್ತಾರಾ ಎನ್ನುವ ಸಾಕಷ್ಟು ನೀರಿಕ್ಷೆಗಳು ಕೂಡ ಜನರಲ್ಲಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನಿಮ್ಮ ಮನವಿ ಲೇಟ್ ಆಗಿಲ್ವಾ ಮೋದಿಜೀ: ರಮ್ಯಾ ಟಾಂಗ್

    ನಿಮ್ಮ ಮನವಿ ಲೇಟ್ ಆಗಿಲ್ವಾ ಮೋದಿಜೀ: ರಮ್ಯಾ ಟಾಂಗ್

    ಬೆಂಗಳೂರು: ಮತದಾನ ಜಾಗೃತಿಯ ಬಗ್ಗೆ ನೀವು ಮಾಡಿದ ಮನವಿ ಲೇಟ್ ಆಗಿಲ್ವಾ ಎಂದು ಪ್ರಶ್ನಿಸಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷೆ ರಮ್ಯಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಇಂದು ಮೋದಿ ಅವರು ಸಿನಿಮಾ ತಾರೆಯರು, ಕ್ರೀಡಾಪಟುಗಳು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಹೆಸರು ಗಳಿಸಿರುವ ಸಾಧಕರಿಗೆ ಟ್ವೀಟ್ ಮಾಡಿ, ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದಿದ್ದರು. ಅಷ್ಟೇ ಅಲ್ಲದೆ ತಮ್ಮ ವಿರುದ್ಧ ಸದಾ ಕಿಡಿಕಾರುವ ಪ್ರತಿಪಕ್ಷ ನಾಯಕರನ್ನು ಕೂಡ ಟ್ಯಾಗ್ ಮಾಡಿ ಮನದಾನದ ಬಗ್ಗೆ ಜಾಗೃತಿ ಮೂಡಿಸಿ ಎಂದು ಮನವಿ ಮಾಡಿದ್ದರು.

    ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ಯಾಗ್ ಆಗಿರುವ ಮೋದಿ ಅವರ ಟ್ವೀಟ್ ಅನ್ನು ರಮ್ಯ ರೀ-ಟ್ವೀಟ್ ಮಾಡಿದ್ದಾರೆ. ನೀವು ಈಗ ಮಾಡುತ್ತಿರುವ ಕೆಲಸವನ್ನು ನಾವು ಮೊದಲೇ ಮಾಡಿದ್ದೇವೆ. ಮತದಾನಕ್ಕೆ ಮನವಿ ಮಾಡ್ತಿರೋದು ತಡವಾಗಿದೆ ಅನಿಸುತ್ತಿಲ್ವಾ ಎಂದು ಪ್ರಶ್ನಿಸಿ ಮೋದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ನೀವು ಈಗ ಮಾಡುತ್ತಿರುವ ಕೆಲಸವನ್ನು ನಾವು ಮೊದಲೇ ಮಾಡಿದ್ದೇವೆ, ಇದನ್ನ ನಾವು ಚುನಾವಣೆಯ ದಿನಾಂಕ ಘೋಷಣೆಯಾದ ದಿನದಿಂದಲೇ ಮಾಡುತ್ತಿದ್ದೇವೆ #RegisterToVote. ಇದನ್ನೊಮ್ಮೆ ನೋಡಿ, ಮತದಾನಕ್ಕೆ ಮನವಿ ಮಾಡುತ್ತಿರೋದು ತಡವಾಯ್ತು ಅಂತ ನಿಮಗೆ ಅನಿಸುತ್ತಿಲ್ವಾ. ಹಾಗೆಯೇ ರಾಹುಲ್ ಗಾಂಧಿ ಅವರು ಸ್ಟೆಲ್ಲಾ ಮೇರಿಸ್ ವಿದ್ಯಾರ್ಥಿಗಳ ಜೊತೆ ಮಾಡಿರುವ ಸಂವಾದ ಕಾರ್ಯಕ್ರಮ ಕೂಡ ಯಶಸ್ವಿಯಾಗಿದೆ. #VanakkamRahulGandhi ಎಂದು ಬರೆದು ಮೋದಿ ಅವರ ಟ್ವೀಟ್‍ಗೆ ರಮ್ಯಾ ರೀ-ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕಾಫಿನಾಡಲ್ಲಿ ಕೇಳಿ ಬಂತು ಚುನಾವಣೆ ಬಹಿಷ್ಕಾರದ ಕೂಗು

    ಕಾಫಿನಾಡಲ್ಲಿ ಕೇಳಿ ಬಂತು ಚುನಾವಣೆ ಬಹಿಷ್ಕಾರದ ಕೂಗು

    ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಫಿನಾಡಲ್ಲಿ ಬಹಿಷ್ಕಾರದ ಕೂಗು ಕೇಳಿಬಂದಿದೆ. ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಸಾರ್ವಜನಿಕರು ಈ ಬಾರಿ ಮತ ಹಾಕಲ್ಲ ಎಂದು ಚುನಾವಣೆಯನ್ನು ಬಹಿಷ್ಕಾರಿಸಿದ್ದಾರೆ.

    ಹೌದು, ಚಿಕ್ಕಮಗಳೂರಿನ ಕಳಸ, ಮೊದಲಮನೆ ಹಾಗೂ ಬಾಳೆಹೊಳೆ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸಿದ್ದಾರೆ. ಅಲ್ಲದೆ ಈ ಬಾರಿ ಮತದಾನ ಮಾಡಲ್ಲ ಎಂಬ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಚುನಾವಣಾ ಬಹಿಷ್ಕಾರದ ಫೋಟೋ ಫುಲ್ ವೈರಲ್ ಆಗಿದೆ.

    ನಮಗಾಗಿ ಕೆಲಸ ಮಾಡದವರಿಗೆ ನಾವು ಯಾಕೆ ಮತದಾನ ಮಾಡಬೇಕು? ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳಿಗೆ ಮತದಾರರ ಮೇಲೆ ಪ್ರೀತಿ ಬರುತ್ತೆ. ಬಳಿಕ ಅಧಿಕಾರ ಬಂದಮೇಲೆ ಜನರನ್ನು ಮರೆತು ಬಿಡುತ್ತಾರೆ. ಆದರಿಂದ ಈ ಬಾರಿ ಮತ ಹಾಕಲ್ಲ ಎಂದು ಗ್ರಾಮಸ್ಥರು ಸಿಡಿದೆದ್ದಿದ್ದಾರೆ.

    ಈ ಗ್ರಾಮಗಳಲ್ಲಿ ಸರಿಯಾದ ರಸ್ತೆ ವ್ಯವಸ್ಥೆಯಿಲ್ಲ. ಕೆಲವು ಕಡೆ ಹೊಳೆಗಳು ಇರುವ ಸ್ಥಳಗಳಲ್ಲಿ ಸೇತುವೆಗಳಿಲ್ಲ. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ ಜನರು ಪರದಾಡುತ್ತಿದ್ದಾರೆ. ಆದರಿಂದ ಚುನಾವಣೆ ನಡೆಯುವ ಒಳಗೆ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿದರೆ ಮತ ಹಾಕುತ್ತೇವೆ. ಎಲ್ಲವಾದರೆ ಮತ ಹಾಕಲ್ಲ ಎಂದು ಜನಪ್ರತಿನಿಧಿಗಳಿಗೆ ಜನರು ಎಚ್ಚರಿಗೆ ನೀಡಿದ್ದಾರೆ.

    ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾದ 2 ದಿನದಲ್ಲಿ ಮತ ಬಹಿಷ್ಕಾರಕ್ಕೆ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಾರಿ ಮತದಾನದಿಂದ ದೂರ ಉಳಿಯಲು ಜನರು ತೀರ್ಮಾನಿಸಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮದ ಮುಂಭಾಗದಲ್ಲಿ ಬಹಿಷ್ಕಾರದ ಬ್ಯಾನರ್ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ಬಹಿಷ್ಕರಿಸಿದ ಗ್ರಾಮಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ಮತದಾರರು ಇದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೆಸರೆರಚಾಟ ಬಿಟ್ಟು ದೇಶಕ್ಕೆ ತಮ್ಮಿಂದಾದ ಒಳಿತಿನ ಬಗ್ಗೆ ಮಾತನಾಡಿ: ರಾಜಕಾರಣಿಗಳಿಗೆ ಮಂತ್ರಾಲಯ ಶ್ರೀಗಳ ಕಿವಿಮಾತು

    ಕೆಸರೆರಚಾಟ ಬಿಟ್ಟು ದೇಶಕ್ಕೆ ತಮ್ಮಿಂದಾದ ಒಳಿತಿನ ಬಗ್ಗೆ ಮಾತನಾಡಿ: ರಾಜಕಾರಣಿಗಳಿಗೆ ಮಂತ್ರಾಲಯ ಶ್ರೀಗಳ ಕಿವಿಮಾತು

    ರಾಯಚೂರು: ರಾಜಕಾರಣಿಗಳು ವೈಯಕ್ತಿಕ ತೇಜೋವಧೆ ಬಿಡಬೇಕು. ಒಬ್ಬರ ಮೇಲೋಬ್ಬರು ಕೆಸರೆರಚಾಟ ಮಾಡುವುದನ್ನು ಬಿಟ್ಟು ದೇಶಕ್ಕೆ ತಮ್ಮಿಂದಾದ ಒಳಿತಿನ ಬಗ್ಗೆ ಮಾತನಾಡಬೇಕು ಎಂದು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ರಾಜಕಾರಣಿಗಳಿಗೆ ಕೀವಿಮಾತನ್ನು ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾರಣಿಗಳು, ಪಕ್ಷದ ಮುಖಂಡರು ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದು. ಚುನಾವಣೆಯಲ್ಲಿ ತಮ್ಮ ಪಕ್ಷದ ಸಿದ್ಧಾಂತಗಳ ನೆಲೆಯಲ್ಲಿ ಪ್ರಚಾರ ಮಾಡಬೇಕು. ಕೆಸರೆರಚಾಟ ಬಿಟ್ಟು ದೇಶಕ್ಕೆ ತಮ್ಮಿಂದಾದ ಒಳಿತಿನ ಬಗ್ಗೆ ಮಾತನಾಡಬೇಕು. ಸುಳ್ಳು ಭರವಸೆ, ವೈಯಕ್ತಿಕ ಆರೋಪಗಳನ್ನು ಹೇಳಿ ಮತದಾರರನ್ನ ಕೆರಳಿಸಬಾರದು ಎಂದು ಚುನಾವಣಾ ಅಭ್ಯರ್ಥಿಗಳಿಗೆ ಹಾಗೂ ರಾಜಕೀಯ ನಾಯಕರಿಗೆ ತಿಳಿ ಹೇಳಿದ್ದಾರೆ.

    ಹಾಗೆಯೇ, ಮತದಾನವನ್ನು ಎಲ್ಲರೂ ಕಡ್ಡಾಯವಾಗಿ ಮಾಡಬೇಕು. ಸೂಕ್ತವಾದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಮತದಾನ ಹಕ್ಕನ್ನು ಚಲಾಯಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚುನಾವಣಾ ಪ್ರಚಾರದಲ್ಲಿ ಸಚಿವ ರೇವಣ್ಣ, ಬಾಲಕೃಷ್ಣ ಕಣ್ಣೀರು

    ಚುನಾವಣಾ ಪ್ರಚಾರದಲ್ಲಿ ಸಚಿವ ರೇವಣ್ಣ, ಬಾಲಕೃಷ್ಣ ಕಣ್ಣೀರು

    ಹಾಸನ: ಚುನಾವಣಾ ಪ್ರಚಾರದ ಭಾಷಣದ ವೇಳೆ ಶಾಸಕ ಬಾಲಕೃಷ್ಣ ಹಾಗೂ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಕಣ್ಣೀರು ಹಾಕಿದ್ದಾರೆ.

    ಹೊಳೆನರಸೀಪುರದ ಮೂಡಲ ಹಿಪ್ಪೆಯಲ್ಲಿ ನಡೆಯುತ್ತಿದ್ದ ಚುನಾವಣಾ ಪ್ರಚಾರದದಲ್ಲಿ ಬಾಲಕೃಷ್ಣ ಮಾತನಾಡಿ, ದೇವೇಗೌಡರು ಸಂಸತ್ ನಲ್ಲಿ ಕೊನೆ ಭಾಷಣ ಎಂದು ಹೇಳುತ್ತಾ ಕಣ್ಣೀರು ಹಾಕಿದ್ರು. ತವರು ಕ್ಷೇತ್ರ ಹಾಸನವನ್ನು ತಮ್ಮ ಮೊಮ್ಮಗನಿಗಾಗಿ ಬಿಟ್ಟು ಕೊಟ್ಟಿದ್ದಾರೆ. ನಮ್ಮ ತಂದೆಯವರ ತ್ಯಾಗ ದೊಡ್ಡದು, ಮೊಮ್ಮಗನ ಭವಿಷ್ಯದ ದೃಷ್ಟಿಯಿಂದ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದಾರೆ ಹೇಳಿ ಕಣ್ಣೀರು ಹಾಕಿದರು.

    ಬಾಲಕೃಷ್ಣ ಅವರು ಭಾಷಣದಲ್ಲಿ ತಂದೆಯ ತ್ಯಾಗದ ಬಗ್ಗೆ ಹೇಳುತ್ತಿದ್ದಂತೆ ವೇದಿಕೆಯಲ್ಲಿ ಉಪಸ್ಥಿತರಿದ್ದ ರೇವಣ್ಣ ಸಹ ಭಾವುಕರಾಗಿ ಕಣ್ಣೀರು ಹಾಕಿದರು.

    ಮೊಮ್ಮಗನನ್ನು ರಾಜಕೀಯದಲ್ಲಿ ಮುಂದಕ್ಕೆ ತರಬೇಕು ಅನ್ನೋ ಭಾವನೆ ವರ ಮನದಾಳದಲ್ಲಿ ಇದೆ. ಅದನ್ನು ನಾವು ಸ್ವಾಗತ ಮಾಡೋಣ. ಇಂತಹ ರಾಜಕಾರಣಿ ನಮಗೆ ಮತ್ತೆ ಸಿಗುತ್ತಾರೇನ್ರೀ ಎಂದು ಪ್ರಶ್ನಿಸಿ ಬೇಸರಗೊಂಡರು. ಬಾಲಕೃಷ್ಣ ಕಣ್ಣೀರು ಹಾಕುತ್ತಿದ್ದಂತೆ ವೇದಿಕೆಯಲ್ಲೆ ರೇವಣ್ಣ ಕೂಡ ಭಾವುಕರಾದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ವಿರೋಧ ಪಕ್ಷಗಳ ನಾಯಕ, ನಾಯಕಿಯರಲ್ಲಿ ಮೋದಿ ವಿಶೇಷ ಮನವಿ

    ವಿರೋಧ ಪಕ್ಷಗಳ ನಾಯಕ, ನಾಯಕಿಯರಲ್ಲಿ ಮೋದಿ ವಿಶೇಷ ಮನವಿ

    ನವದೆಹಲಿ: 2019ರ ಲೋಕಸಭೆ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯದ ಸಿಎಂಗಳು, ನಟ-ನಟಿಯರು, ಕ್ರೀಡಾಪಟುಗಳಲ್ಲಿ ಮರೆಯದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಕರ್ನಾಟಕ ಸಿಎಂ ಎಚ್.ಡಿ ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಶರದ್ ಪವಾರ್ ಸೇರಿದಂತೆ ಅನೇಕ ಪ್ರತಿಪಕ್ಷ ನಾಯಕರಲ್ಲಿ ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದ ಮತದಾನ ನಡೆಯಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಕೇವಲ ರಾಜಕೀಯ ಗಣ್ಯರು ಮಾತ್ರವಲ್ಲದೆ ಸಿನಿಮಾ ತಾರೆಯರು, ಕ್ರೀಡಾಪಟುಗಳು ಸೇರಿದಂತೆ ಇತರೇ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರಿಗೂ ತಪ್ಪದೆ ಮತದಾನ ಮಾಡಿ ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಎಂದು ಕರೆಕೊಟ್ಟಿದ್ದಾರೆ.

    ಟ್ವೀಟ್‍ಗಳಲ್ಲಿ ಏನಿದೆ?

    ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ಮತ ಚಲಾಯಿಸುವಂತೆ ಅವರ ಗಮನ ಸೆಳೆಯುವುದರ ಬಗ್ಗೆ ಗಮನಹರಿಸೋಣ. ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಭಾರತವನ್ನು ಬಲಪಡಿಸೋಣ ಎಂದು ಬರೆದು, ಕರ್ನಾಟಕ ಸಿಎಂ ಕುಮಾರಸ್ವಾಮಿ, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ವೈಎಸ್‍ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮೂಲಕ ಮೋದಿ ಕರೆ ನೀಡಿದ್ದಾರೆ.

    ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಮಾಯಾವತಿ, ಅಖಿಲೇಶ್ ಯಾದವ್, ಸೇರಿದಂತೆ ಇನ್ನೂ ಅನೇಕ ಪ್ರತಿಪಕ್ಷ ನಾಯರನ್ನು ಟ್ಯಾಗ್ ಮಾಡಿ ಲೋಕಸಭೆ ಚುನಾವಣೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸೋಣ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾದರೆ ನಮ್ಮ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

    ಸಿನಿಮಾ ತಾರೆಯರಾದ ದೀಪಿಕಾ ಪಡುಕೋಣೆ, ರಣ್‍ವೀರ್ ಸಿಂಗ್, ನಾಗಾರ್ಜುನ್, ಮೋಹನ್‍ಲಾಲ್, ಆಲಿಯಾ ಭಟ್, ಶಾರೂಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಹಲವು ಮಂದಿಗೆ ಟ್ವೀಟ್ ಮಾಡಿ ಮತದಾನವನ್ನು ತಪ್ಪದೇ ಮಾಡಿ, ಮತದಾನದ ಬಗ್ಗೆ ಜಾಗೃತಿ ಮೂಡಿಸಿ. “ಅಪನಾ ಟೈಮ್ ಆ ಗಯಾ ಹೇ, ಹೈ ಜೋಶ್‍ನಿಂದ ಮತದಾರರನ್ನು ಮತ ಕೇಂದ್ರಗಳತ್ತ ಬರುವಂತೆ ಮಾಡಬೇಕು ಎಂದು ಮೋದಿ ಸಿನಿಮಾ ಶೈಲಿಯಲ್ಲೇ ಕರೆ ಕೊಟ್ಟಿದ್ದಾರೆ.

    ಜೊತೆಗೆ ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ ಹೆಮ್ಮೆಯ ಕ್ರೀಡಾಪಟುಗಳಾದ ಭಜರಂಗ್ ಪುನಿಯಾ, ಗೀತಾ ಪೋಗಟ್, ಬಬಿತಾ ಪೋಗಟ್ ಸೇರಿದಂತೆ ಇನ್ನೂ ಹಲವು ಸಾಧಕರಿಗೆ ಟ್ವೀಟ್ ಮಾಡಿ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ. ನೀವು ಯುವ ಪೀಳಿಗೆಗೆ ಸ್ಪೂರ್ತಿ ಎಂದಿದ್ದಾರೆ.

    ಅಷ್ಟೇ ಅಲ್ಲದೆ ಟೀಂ ಇಂಡಿಯಾ ಕ್ರಿಕೆಟ್ ಆಟಗಾರರಾದ ಎಂ.ಎಸ್ ಧೋನಿ, ವಿರಾಟ್ ಕೋಹ್ಲಿ. ಮಾಝಿ ಕ್ರಿಕೆಟಿಗರಾದ ವಿರೇಂದ್ರ ಸೆಹ್ವಾಗ್, ಅನಿಲ್ ಕುಂಬ್ಳೆ ಸೇರಿದಂತೆ ಅನೇಕರಿಗೆ ಟ್ವೀಟ್ ಮಾಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಭಾರತ ಬದಲಾಗಲು ಮೋದಿ ಕಾರಣ, ಮಾ.16ಕ್ಕೆ ಮೊದಲ ಪಟ್ಟಿ ರಿಲೀಸ್: ಬಿಎಸ್‍ವೈ

    ಭಾರತ ಬದಲಾಗಲು ಮೋದಿ ಕಾರಣ, ಮಾ.16ಕ್ಕೆ ಮೊದಲ ಪಟ್ಟಿ ರಿಲೀಸ್: ಬಿಎಸ್‍ವೈ

    – ಸಿಎಂ ಎಚ್‍ಡಿಕೆ ವಿರುದ್ಧ ವಾಗ್ದಾಳಿ
    – ಪ್ರಣಾಳಿಕೆಯಲ್ಲಿ ಮಹಾದಾಯಿ ವಿಚಾರ ಸೇರಿಸ್ತೀವಿ

    ಬೆಂಗಳೂರು: ಪ್ರಧಾನಿಯವರ ಸಾಧನೆಯೇ ರಾಜ್ಯದಲ್ಲಿ ನನಗೆ ರಕ್ಷಾ ಕವಚವಾಗಿದೆ. ಅವರ ನಾಯಕತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಬೇರೆ ಬೇರೆ ದೇಶಗಳಿಂದ ಮೋದಿಯವರಿಗೆ ಪ್ರಶಸ್ತಿಗಳು ಬಂದಿವೆ. ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಭಾರತದ ಆರ್ಥಿಕ ನೀತಿ ಎಲ್ಲರನ್ನು ಬೆಚ್ಚಿ ಬೆರಗಾಗುವಂತೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ಯೋಜನೆಗಳು ಹಾಗೂ ವ್ಯಕ್ತಿತ್ವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಡಿ ಹೊಗಳಿದ್ದಾರೆ.

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ 15 ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಮರುದಿನ ಅಂದ್ರೆ ಮಾರ್ಚ್ 16ಕ್ಕೆ ದೆಹಲಿಗೆ ಹೋಗ್ತೀನಿ. ಅಂದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡ್ತೀವಿ. 20 ರಿಂದ 22 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡುತ್ತೇವೆ. ಬಹುತೇಕ ಎಲ್ಲ 16 ಹಾಲಿ ಸಂಸದರಿಗೂ ಟಿಕೆಟ್ ಸಿಗುತ್ತದೆ. ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲರಿಗೆ ಟಿಕೆಟ್ ಕೊಡಲಾಗುತ್ತಿದೆ. ಉಳಿದ ಕಡೆಗಳಲ್ಲಿ ಬಿಜೆಪಿ ಅಭ್ಯರ್ಥಿ ಪಟ್ಟಿ ಸಿದ್ಧಪಡಿಸ್ತಾ ಇದ್ದೀವಿ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್ ಸ್ಪರ್ಧೆ ಮಾಡ್ತಾರೆ. ಇನ್ನಷ್ಟು ಅನ್ಯ ಪಕ್ಷದ ಮುಖಂಡರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಇನ್ನೆರಡು ದಿನ ಕಾಯಿರಿ ಎಂದು ಹೇಳಿದ್ರು.

    ಭಾರತ ಬದಲಾಗಲು ಮೋದಿ ಕಾರಣ:
    5 ವರ್ಷದ ಹಿಂದೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರ್ಕಾರ ಜನರಿಗೆ ಕೊಟ್ಟ ಭರವಸೆಗಳನ್ನ ಈಡೇರಿಸುವತ್ತ ದಾಪುಗಾಲು ಇಟ್ಟಿದೆ. ಕಳೆದ ಚುನಾವಣೆಯ ವೇಳೆ ನಾಲ್ಕು ಯೋಜನೆಗಳನ್ನ ರೂಪಿಸಲಾಗಿತ್ತು. ಅವುಗಳೆಂದರೆ ಭ್ರಷ್ಟಾಚಾರ ನಿರ್ಮೂಲನೆ, ಜನ ಸಾಮಾನ್ಯರಿಗೆ ಯೋಜನೆಗಳನ್ನ ತಲುಪಿಸೋದು, ಗಡಿಗಳ ರಕ್ಷಣೆ, ವಿದೇಶಗಳಲ್ಲಿ ಭಾರತದ ಸಂಬಂಧ ಗಟ್ಟಿಗೊಳಿಸುವುದಾಗಿತ್ತು. ಈ ನಾಲ್ಕು ಮುಕ್ಕಾಲು ವರ್ಷದಲ್ಲಿ ಮೋದಿಯವರು ಭ್ರಷ್ಟಾಚಾರ ಮುಕ್ತವಾದ ಸರ್ಕಾರವನ್ನು ಕೊಟ್ಟಿದ್ದಾರೆ. ಇಂದಿನ ಭಾರತ ಬೆನ್ನು ಬಾಗಿಸುವ ಭಾರತವಾಗಿಲ್ಲ. ಬದಲಾಗಿ ಸೆಟೆದು ನಿಂತು ಹೋರಾಡುವ ಭಾರತವಾಗಿ ಬದಲಾಗಿದೆ ಎಂದು ಹೇಳಿದ್ರು.

    ಪುಲ್ವಾಮಾ ಘಟನೆ ಬಳಿಕ ಭಾರತವನ್ನು ಜಗತ್ತಿನ ಹಲವು ರಾಷ್ಟ್ರಗಳು ಬೆಂಬಲಿಸಿವೆ. ಪಾಕಿಸ್ತಾನವನ್ನು ಎಲ್ಲಾ ದೇಶಗಳು ಖಂಡಿಸಿವೆ. ಅಲ್ಲದೇ ಭಾರತದ ನಿಲುವಿಗೆ ಬೆಂಬಲ ಕೊಟ್ಟಿವೆ. ಇದು ಒಂದು ರೀತಿಯಲ್ಲಿ ಮೋದಿಜೀಯವರಿಗೆ ರಾಜತಾಂತ್ರಿಕ ಗೆಲುವಾಗಿದೆ. ಇಂದಿನ ಭಾರತ ಬೆನ್ನು ಬಾಗಿಸುವ ಭಾರತವಲ್ಲ, ಸೆಟೆದು ನಿಂತು ಪ್ರತ್ಯುತ್ತರ ಕೊಡುವ ಭಾರತವಾಗಿ ನಿರ್ಮಾಣವಾಗಿದೆ. ಭಾರತ ಬದಲಾಗಿದೆ. ಇದಕ್ಕೆ ಕಾರಣ ಮೋದಿಯವರ ದಿಟ್ಟ ನಿಲುವು ಎಂದು ಅವರು ಹೇಳಿದ್ರು.

    ಆರ್ಥಿಕ ವಿಚಾರದಲ್ಲಿ ಮುಂದಿದ್ದೇವೆ:
    ಮಂತ್ರಿ ಮಂಡಲದ ಯಾವುದೇ ಒಬ್ಬ ಸದಸ್ಯನ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ. ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದ್ದೇವೆ. ಮುಂದುವರಿದ ದೇಶಗಳಿಗೆ ಸವಾಲು ಹಾಕುವ ಹಂತಕ್ಕೆ ನಾವು ಬೆಳೆದಿದ್ದೇವೆ. ಆರ್ಥಿಕ ಸದೃಢತೆ ಮತ್ತು ಬೆಳೆಯುತ್ತಿರುವ ದೇಶವಾದ ಫ್ರಾನ್ಸ್ ಹಿಂದೆ ಹಾಕಿ ಅದೇ ಜಾಗಕ್ಕೆ ನಾವು ಬಂದಿದ್ದೇವೆ. ಆರ್ಥಿಕ ಪ್ರಗತಿಯಲ್ಲಿ ನಾವು ಅಮೆರಿಕ ಹಾಗೂ ಫ್ರಾನ್ಸ್ ಗೆ ಸಮವಾಗಿದ್ದೇವೆ ಅಂದ್ರು.

    ಸಿಎಂ ವಿರುದ್ಧ ವಾಗ್ದಾಳಿ:
    ರೈತರ ಸಾಲಮನ್ನಾ ಮಾಡ್ತೀವಿ ಎಂದು ಹೇಳಿ 9 ತಿಂಗಳಾಯ್ತು. ನೀವು ಸಾಲಮನ್ನಾ ಮಾಡಿರೋದು ಬರೀ 4500 ಕೋಟಿ ಮಾತ್ರ. ಈ ಸುಳ್ಳು ಭರವಸೆಯನ್ನು ಕೊಡದಿದ್ದರೆ 37 ಸೀಟು ಅಲ್ಲ, 20 ಸೀಟು ಗೆಲ್ತಿರಲಿಲ್ಲ. 37 ಸೀಟು ಇಟ್ಕೊಂಡು ಅಧಿಕಾರ ನಡೆಸ್ತಿದ್ದಾರೆ. ಹೋಗ್ಲಿ ಅವರ ನಡುವೆ ಹೊಂದಾಣಿಕೆ ಇದೆಯಾ..? ಅಭಿವೃದ್ಧಿ ಬಗ್ಗೆ ಏನ್ ಕಾರ್ಯಕ್ರಮ ರೂಪಿಸಿದ್ದಾರೆ ಎಂದು ಪ್ರಶ್ನೆಗಳ ಮೂಲಕ ನೇರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ರು.


    ಕುಮಾರಸ್ವಾಮಿ ಅವರ ಮೇಲೆ ಕಾಂಗ್ರೆಸ್ ನ 20 ಶಾಸಕರು ಅಸಮಾಧಾನ ಹೊಂದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಏನಾಗುತ್ತೆ ಕಾದುನೋಡಿ. ಸರ್ಕಾರ ರಚನೆ ಬಗ್ಗೆ ಈಗ ಮಾತನಾಡುವುದಿಲ್ಲ. ಈಗ ಲೋಕಸಭಾ ಚುನಾವಣೆ ಕಡೆ ಮಾತ್ರ ನಮ್ಮ ಗಮನವಿದೆ. ಉಮೇಶ್ ಜಾಧವ್ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತವಾಗಿದೆ. ಕಾನೂನು ತಜ್ಞರ ಜೊತೆ ಚರ್ಚೆ ಮಾಡಿಯೇ ಜಾಧವ್ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದ್ರು.

    ಅಂಬರೀಶ್ ಬಗ್ಗೆ ಹಗುರ ಮಾತು:
    ಸುಮಲತಾ ಅಂಬರೀಶ್ ಅವರ ನಡೆ ಏನು ಅನ್ನೋದನ್ನ ಕಾದು ನೋಡುತ್ತೇವೆ. ಆ ಬಳಿಕ ನಮ್ಮ ಅಭ್ಯರ್ಥಿ ಹಾಕಬೇಕೇ? ಬೇಡವೇ? ಅನ್ನೋದ್ರ ಬಗ್ಗೆ ತೀರ್ಮಾನ ಮಾಡುತ್ತೇವೆ. ನಾನು ಮಾಧ್ಯಮದ ಮುಂದೆ ಎಲ್ಲವನ್ನೂ ಹೇಳಲಾಗುವುದಿಲ್ಲ. ಅಂಬರೀಶ್ ಬದುಕಿದ್ದಾಗ ಹಾಡಿಹೊಗಳಿ ಅವರು ತೀರಿಕೊಂಡ ಬಳಿಕ ಅವರ ಬಗ್ಗೆ ಕುಮಾರಸ್ವಾಮಿ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗಿದ್ದರು. ಈಗ ಅವರ ಸಾಧನೆ ಏನು ಎಂದು ಕೇಳುತ್ತಾರೆ. ಇದು ಕುಮಾರಸ್ವಾಮಿ, ರೇವಣ್ಣ ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಗರಂ ಆದ್ರು.

    ಪ್ರಣಾಳಿಕೆಯಲ್ಲಿ ಮಹಾದಾಯಿ ವಿಚಾರ ಸೇರಿಸ್ತೀವಿ:
    ಮಹಾದಾಯಿ ವಿಚಾರವನ್ನ ನಮ್ಮ ಪ್ರಣಾಳಿಕೆಯಲ್ಲಿ ಸೇರಿಕೊಳ್ಳುತ್ತೇವೆ. ಆ ವಿಚಾರವನ್ನು ನಿರಾಕರಿಸುವಂತಿಲ್ಲ. ರಾಜ್ಯ ಸರ್ಕಾರದ ಜವಾಬ್ದಾರಿ ಬಹಳ ಮುಖ್ಯವಾಗಿತ್ತು. ಆದ್ರೆ ಮಹಾದಾಯಿ ಕುಡಿಯುವ ನೀರಿನ ವಿಚಾರವನ್ನ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ನಿಶ್ಚಿತವಾಗಿ ಈ ಬಾರಿ ಮಹಾದಾಯಿ ವಿಚಾರವನ್ನು ಪ್ರಣಾಳಿಕೆಯಲ್ಲಿ ಸೇರಿಸ್ತೀವಿ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ನನ್ನ ಜನರಿಗಾಗಿ ನನ್ನ ಹೆಜ್ಜೆ’- ಅಮ್ಮನ ಜೊತೆ ಪ್ರಚಾರಕ್ಕಿಳಿದ ಅಭಿಷೇಕ್

    `ನನ್ನ ಜನರಿಗಾಗಿ ನನ್ನ ಹೆಜ್ಜೆ’- ಅಮ್ಮನ ಜೊತೆ ಪ್ರಚಾರಕ್ಕಿಳಿದ ಅಭಿಷೇಕ್

    ಮಂಡ್ಯ: ಲೋಕಸಭಾ ಚುನಾವಣೆಗೆ ಈಗಾಗಲೇ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದಲ್ಲಿ ತೊಡಗಿದ್ದಾರೆ. ಈಗ ಅವರ ಮಗ, ನಟ ಅಭಿಷೇಕ್ ಅಂಬರೀಶ್ ಅವರ ಸರದಿಯಾಗಿದ್ದು, ಅಭಿಷೇಕ್ ಕೂಡ ಪ್ರಚಾರದಲ್ಲಿ ತಮ್ಮ ತಾಯಿ ಜೊತೆ ಭಾಗವಹಿಸಲಿದ್ದಾರೆ.

    ಅಭಿಷೇಕ್ ತಮ್ಮ ಫೇಸ್‍ಬುಕ್‍ನಲ್ಲಿ ತಮ್ಮ ತಾಯಿಯೊಂದಿಗೆ ಚುನಾವಣಾ ಪ್ರಚಾರಕ್ಕಾಗಿ ಮಳವಳ್ಳಿಗೆ ಬರುವುದಾಗಿ ಪೋಸ್ಟ್ ಮಾಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    `ನನ್ನ ಜನರಿಗಾಗಿ ನನ್ನ ಹೆಜ್ಜೆ. ನಾಳೆ ನಾನು ಮಳವಳ್ಳಿಗೆ ಬರುತ್ತಿದ್ದೇನೆ. ನನ್ನ ಅಮ್ಮನೊಂದಿಗೆ ಅದು ಚುನಾವಣಾ ಪ್ರಚಾರಕ್ಕಾಗಿ. ನನ್ನ ಅಪ್ಪ ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದ ಊರು ಮಳವಳ್ಳಿ. ನನ್ನ ತಾತ ಸಾಕಷ್ಟು ವರ್ಷಗಳ ಕಾಲ ಜೀವನ ನಡೆಸಿದ ಮಳವಳ್ಳಿಗೆ ನಾನು ಅಮ್ಮನೊಂದಿಗೆ ಬರುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

    ಅಭಿಷೇಕ್ ಇಷ್ಟು ದಿನ ತಮ್ಮ ಮೊದಲ ‘ಅಮರ್’ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಈಗ ಅವರು ತಮ್ಮ ತಾಯಿ ಸುಮಲತಾ ಅವರ ಜೊತೆ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬಲವಂತವಿಲ್ಲ, ಪಕ್ಷಕ್ಕೆ ಬಂದ್ರೆ ಸ್ವಾಗತ- ಸುಮಲತಾ ಜೊತೆ ಅಶೋಕ್ ಮತ್ತೊಮ್ಮೆ ಮಾತುಕತೆ

    ಬಲವಂತವಿಲ್ಲ, ಪಕ್ಷಕ್ಕೆ ಬಂದ್ರೆ ಸ್ವಾಗತ- ಸುಮಲತಾ ಜೊತೆ ಅಶೋಕ್ ಮತ್ತೊಮ್ಮೆ ಮಾತುಕತೆ

    ಮಂಡ್ಯ: ನಟಿ ಸುಮಲತಾ ಅಂಬರೀಶ್ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದ ಬಿಜೆಪಿ ಮುಖಂಡ ಆರ್. ಅಶೋಕ್ ಇಂದು ಮಂಡ್ಯದಲ್ಲಿ ಸುಮಲತಾರ ನಿಲುವು ತಿಳಿಯಲು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ನಮ್ಮ ಪಕ್ಷಕ್ಕೆ ಬರುವುದಾದರೆ ನಾವು ಸ್ವಾಗತ ಮಾಡುತ್ತೇವೆ. ಯಾರನ್ನೂ ನಾವು ಬಲವಂತ ಮಾಡಲ್ಲ. ಅವರು ನಮ್ಮ ಪಾರ್ಟಿಯಿಂದ ನಿಲ್ಲುತ್ತಾರಾ ಅಥವಾ ಪಕ್ಷೇತರವಾಗಿ ನಿಲ್ಲುತ್ತಾರೆಯಾ ಎಂಬ ಗೊಂದಲ ಇದೆ. ಇದು ತೀರ್ಮಾನವಾದ ಮೇಲೆ ನಮ್ಮ ಪಾರ್ಟಿಯ ನಿಲುವನ್ನು ಹೇಳುತ್ತೇವೆ ಎಂದರು.

    ಈಗಾಗಲೇ ನಮ್ಮ ನಾಯಕರು ಅವರ ಜೊತೆ ಮಾತನಾಡಲು ಹೇಳಿದ್ದಾರೆ. ಹೀಗಾಗಿ ನಾನು ಅವರ ಜೊತೆ ಮಾತನಾಡುತ್ತಿದ್ದೇನೆ. ನಮ್ಮದು ರಾಷ್ಟ್ರೀಯ ಪಾರ್ಟಿ. ಆದ್ದರಿಂದ ನನಗೆ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಇಲ್ಲ. ಈಗಾಗಲೇ ನಡೆದಿರುವ ಮಾತುಕತೆಯ ಬಗ್ಗೆ ನಮ್ಮ ನಾಯಕರಿಗೆ ತಿಳಿಸಿದ್ದೇನೆ. ಇಂದು ಮತ್ತೊಮ್ಮೆ ಮಾತುಕತೆ ಮಾಡಿ ಅವರಿಗೆ ಹೇಳುತ್ತೇನೆ. ನಂತರ ಅವರು ಏನು ತೀರ್ಮಾನ ಮಾಡುತ್ತಾರೆ ಅದು ಅಂತಿಮವಾಗುತ್ತದೆ ಎಂದು ಅಶೋಕ್ ಹೇಳಿದ್ದಾರೆ.

    ಸುಮಲತಾ ಅವರು ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದರೂ ಜೆಡಿಎಸ್ ನಾಯಕರು ಸುಮ್ಮನಿರೋದು ಯಾಕೆ ಎಂಬ ಪ್ರಶ್ನೆ ಮಂಡ್ಯ ಜಿಲ್ಲೆಯಾದ್ಯಂತ ಹುಟ್ಟಿಕೊಂಡಿದೆ. ಕಳೆದ ಒಂದು ತಿಂಗಳಿಂದಲೂ ಸುಮಲತಾ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ನಿಖಿಲ್ ಕೆಲವು ದಿನಗಳ ಅಂತರದಲ್ಲಿ ಕೇವಲ ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಇದನ್ನ ನೋಡಿದರೆ ಸುಮಲತಾಗೆ ಟಾಂಗ್ ಕೊಡಲು ದಳಪತಿಗಳು ಸ್ಪರ್ಧೆಯ ಬಗ್ಗೆ ರೂಪಿಸುತ್ತಿದ್ದಾರೆ ಎಂಬ ಮಾತು ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ.

    ಮಂಗಳವಾರ ಮದ್ದೂರಿಗೆ ಭೇಟಿ ನೀಡಿದ್ದ ನಿಖಿಲ್ ತಾಯಿ ಅನಿತಾ ಕುಮಾರಸ್ವಾಮಿ ಸಹ ಮಾಧ್ಯಮಗಳಿಗೆ ಹೇಳಿಕೆ ನೀಡದೆ ವಾಪಸ್ಸಾಗಿದ್ದರು. ಸುಮಲತಾ ಪ್ರಚಾರದ ಶೈಲಿ ಮತ್ತು ಹೇಳಿಕೆಗಳನ್ನ ಜೆಡಿಎಸ್ ನಾಯಕರು ಗಮನಿಸುತ್ತಿದ್ದು, ನಿಧಾನವಾಗಿ ಟಾಂಗ್ ಕೊಡಲು ಅಣಿಯಾಗುತ್ತಿದ್ದಾರೆ ಎಂದು ಜನ ಮಾತನಾಡಿಕೊಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv