Tag: LokSabha election

  • `ದುರಹಂಕಾರಿ ಕುಮಾರಸ್ವಾಮಿ’- ಎಚ್‍ಡಿಕೆ ವಿರುದ್ಧ ಅಂಬಿ ಅಭಿಮಾನಿಗಳ ಆಕ್ರೋಶ

    `ದುರಹಂಕಾರಿ ಕುಮಾರಸ್ವಾಮಿ’- ಎಚ್‍ಡಿಕೆ ವಿರುದ್ಧ ಅಂಬಿ ಅಭಿಮಾನಿಗಳ ಆಕ್ರೋಶ

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಅಂಬಿ ಎದುರು ಎಚ್ ಡಿಕೆ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಫೋಟೋದೊಂದಿಗೆ `ಅಂಬರೀಶ್ ಕೊಡುಗೆ ಏನೂ ಅನ್ನೋ ದುರಹಂಕಾರಿ ಕುಮಾರಸ್ವಾಮಿಯವರು ಅವತ್ತು ಅಂಬರೀಶ್ ಎದುರು ಕೈ ಕಟ್ಟಿ ನಿಲ್ಲುತ್ತಿದ್ದರು ಎಂದು ಕಿಡಿಕಾರಿದ್ದಾರೆ.

    ಸಿನಿಮಾವೊಂದರ ಶೂಟಿಂಗ್ ವೇಳೆ ಅಂಬರೀಶ್ ಜೊತೆ ಕುಮಾರಸ್ವಾಮಿ, ನಿಖಿಲ್, ತಮ್ಮಣ್ಣ ತೆಗೆಸಿಕೊಂಡಿದ್ದರು. ಇದರಲ್ಲಿ ಅಂಬಿ ಎದುರು ಎಚ್‍ಡಿಕೆ ಕೈ ಕಟ್ಕೊಂಡು ನಿಂತಿದ್ದು, ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಹುಲಿ ಇದ್ದಾಗ ಉಪಯೋಗಿಸಿಕೊಂಡ ಇಲಿಗಳು, ಇವತ್ತು ತಾವೇ ಹುಲಿಗಳು ಅಂದುಕೊಂಡಿವೆ. ಈ ಹಿಂದೆ ಸಚಿವ ಡಿ ಸಿ ತಮ್ಮಣ್ಣ ಪೋಸ್ಟರ್ ಗಳಲ್ಲಿ ಅಂಬರೀಶ್ ಫೋಟೋ ಮಿಂಚುತಿತ್ತು. ಸಂಸದ ಎಲ್ ಆರ್ ಶಿವರಾಮೇಗೌಡ ಅವರು ಅಂಬರೀಶ್‍ರಿಂದ ಆಶೀರ್ವಾದ ಪಡೆದಿದ್ದರು ಎಂದು ಅಭಿಮಾನಿಗಳು ಗರಂ ಆಗಿದ್ದಾರೆ.  ಇದನ್ನೂ ಓದಿ: ಎಷ್ಟು ಜನಕ್ಕೆ ಒಂದು ಲೋಟ ಕುಡಿಯಲು ನೀರು ಕೊಟ್ಟಿದ್ದಾರೆ – ಸುಮಲತಾ ವಿರುದ್ಧ ತಮ್ಮಣ್ಣ ವಾಗ್ದಾಳಿ

    ಡಿನ್ನರ್ ಸಭೆ: ಇತ್ತ ಇಂದು ಸಿಎಂ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪ್ರಮುಖರ ಡಿನ್ನರ್ ಸಭೆ ಕಳೆದ ರಾತ್ರಿ ಬೆಂಗಳೂರಿನ ತಾಜ್‍ವೆಸ್ಟೆಂಡ್ ಹೋಟೆಲ್‍ನಲ್ಲಿ ನಡೆದಿದೆ. ಈ ವೇಳೆ ನಿಖಿಲ್ ಕುಮಾರಸ್ವಾಮಿಯೇ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿದ್ದು, ನಿಖಿಲ್‍ರನ್ನ ಗೆಲ್ಲಿಸಿಕೊಂಡು ಬನ್ನಿ  ಎಂದು ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸಭೆಯಲ್ಲಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ ಸಿ ತಮ್ಮಣ್ಣ, ಸಂಸದ ಶಿವರಾಮೇಗೌಡ, ಎಂಎಲ್‍ಸಿ ಶ್ರೀಕಂಠೇಗೌಡ ಭಾಗಿಯಾಗಿದ್ದರು. ನಿಖಿಲ್ ಕುಮಾರಸ್ವಾಮಿಯನ್ನೇ ಪಕ್ಷದ ಅಭ್ಯರ್ಥಿ ಮಾಡಬೇಕು. ಎಲ್ಲರೂ ಒಟ್ಟಾಗಿ ಕೆಲಸ ಮಾಡ್ತೀವಿ ಎಂದು ಜೆಡಿಎಸ್ ಮುಖಂಡರು ಸಿಎಂ ಕುಮಾರಸ್ವಾಮಿಗೆ ಮಾತು ಕೊಟ್ಟಿದ್ದಾರೆ. ನಿಖಿಲ್ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ, ಹೀಗಾಗಿ ಕಾಂಗ್ರೆಸ್‍ನಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.

    https://www.youtube.com/watch?v=2n1usFT7t6E

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದರ್ಶನ್ ನನ್ನ ದೊಡ್ಡ ಮಗ ಇದ್ದಂಗೆ- ನಾನು ಏನೂ ಕೇಳಿದ್ರು ನನ್ನ ಜೊತೆ ಇರ್ತಾರೆ: ಸುಮಲತಾ

    ದರ್ಶನ್ ನನ್ನ ದೊಡ್ಡ ಮಗ ಇದ್ದಂಗೆ- ನಾನು ಏನೂ ಕೇಳಿದ್ರು ನನ್ನ ಜೊತೆ ಇರ್ತಾರೆ: ಸುಮಲತಾ

    ಮಂಡ್ಯ: ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

    ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ. ದರ್ಶನ್ ನನ್ನ ಪರ ನಿಲ್ಲುತ್ತಾರೆ ಎನ್ನುವ ನಂಬಿಕೆ ನನಗೆ ಇದೆ ಎಂದರು.

    ಯಾರಿಗೂ ತೊಂದರೆ ಕೊಡಬಾರದು ಎನ್ನುವುದು ನನ್ನ ಉದ್ದೇಶ. ಅಲ್ಲದೇ ಯಾರಿಗೂ ತೊಂದರೆಯಾಗದಂತಹ ಸಮಯದಲ್ಲಿ ನಾನು ಅವರನ್ನು ಕರೆಯುತ್ತೇನೆ. ಎಲ್ಲರ ಜೊತೆಯೂ ಚರ್ಚೆ ಮಾಡುತ್ತೇನೆ. ಶೂಟಿಂಗ್ ಟೈಂ ಫ್ರೀ ಆಗಿದ್ದಾಗ ಕರೆಸಿಕೊಳ್ಳುತ್ತೇನೆ. ನನ್ನ ಹಿಂದೆ ಪಕ್ಷ, ಅಧಿಕಾರ ಇಲ್ಲ. ಕೇವಲ ಜನರ ಬೆಂಬಲ ಇಟ್ಟುಕೊಂಡು ಮುಂದೆ ಹೋಗುತ್ತಿದ್ದೇನೆ. ಚಿತ್ರರಂಗದಲ್ಲಿ ಅಂಬರೀಶ್ ಅವರ ಮೇಲೆ ಅಪಾರ ಗೌರವ ಇದೆ. ಆ ಗೌರವವನ್ನು ಯಾರು ಬೀಳಿಸಲು ಆಗಲ್ಲ ಎಂದು ಮಳವಳ್ಳಿಯಲ್ಲಿ ಸುಮಲತಾ ಹೇಳಿದರು.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಈ ಬಗ್ಗೆ ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ‘ಯಜಮಾನ’ ಚಿತ್ರದ ಸಕ್ಸಸ್ ಪ್ರೆಸ್‍ಮೀಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಅಂಬರೀಶ್ ಅವರು ಚುನಾವಣೆಗೆ ನಿಂತಾಗಲೂ ಪ್ರಚಾರಕ್ಕೆ ಹೋಗಿದ್ದೇನೆ. ಈಗಲೂ ಹೋಗುತ್ತೇನೆ. ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ. ಅಲ್ಲದೇ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸಿ, ಚುನಾವಣಾ ಪ್ರಚಾರಕ್ಕೆ ಕರೆದರೆ ನಾನು ಹೋಗುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸಿದ ಸ್ನೇಹಿತರು ಯಾರೇ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ ಎಂದು ಇದೇ ವೇಳೆ ದರ್ಶನ್ ತಿಳಿಸಿದ್ದಾರೆ.

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೋ ಬ್ಯಾಕ್ ನಿಖಿಲ್ ಅಭಿಯಾನಕ್ಕೆ ಮಹತ್ವ ಕೊಡಬೇಕಿಲ್ಲ- ಕುಮಾರಸ್ವಾಮಿ

    ಗೋ ಬ್ಯಾಕ್ ನಿಖಿಲ್ ಅಭಿಯಾನಕ್ಕೆ ಮಹತ್ವ ಕೊಡಬೇಕಿಲ್ಲ- ಕುಮಾರಸ್ವಾಮಿ

    – ಜನರ ನಾಡಿಮಿಡಿತ ಅರ್ಥಮಾಡ್ಕೊಂಡಿದ್ದೇನೆ ಅಂದ್ರು ನಿಖಿಲ್

    ಚಿಕ್ಕಮಗಳೂರು: ನಟ ನಿಖಿಲ್ ಕುಮಾರಸ್ವಾಮಿಯವರು ಬರಬೇಕು ಅನ್ನೋರು ಇರ್ತಾರೆ. ಹೋಗ್ಬೇಕು ಅನ್ನೋರು ಇರ್ತಾರೆ. ಇದಕ್ಕೆಲ್ಲ ದೊಡ್ಡ ಮಹತ್ವ ಕೊಡಬೇಕಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.

    ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ ಎಂದು ದೇವಾಲಯಕ್ಕೆ ಬಂದಿದ್ದೇನೆ. ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ನಿಖಿಲ್ ಬರಬೇಕು ಹಾಗೂ ಹೋಗ್ಬೇಕು ಅನ್ನೋರು ಇರುತ್ತಾರೆ. ಇದಕ್ಕೆಲ್ಲ ದೊಡ್ಡ ಮಹತ್ವ ಕೊಡಬೇಕಿಲ್ಲ. ಪೂರ್ವಸಿದ್ಧತೆ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಇಂತಹ ಕೆಲಸ ಮಾಡುತ್ತಾರೆ ಎಂದು ನಿಖಿಲ್ ಸ್ಪರ್ಧೆ ವಿರೋಧಿಸುವವರಿಗೆ ಟಾಂಗ್ ನೀಡಿದ್ದಾರೆ.

    ವೋಟು ಹಾಕುವವರು ಎಲ್ಲೋ ಇರುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡುವ ವಿಂಗ್ ಇದೆ. ನಿಜವಾದ ಪ್ರೀತಿ ವಿಶ್ವಾಸ ಇಟ್ಟವರು ವೋಟು ಮಾಡುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಗೆಲುತ್ತೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ರು.

    ಇದೇ ವೇಳೆ ತಮ್ಮ ಸ್ವ ಕ್ಷೇತ್ರ ರಾಮನಗರದಲ್ಲಿ ಗನ್ ಹಿಡಿದು ರೌಡಿಸಂ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕ ಸ್ಥಳದಲ್ಲಿ ಬಂದೂಕು ಹಿಡಿದು ಯಾರಾದರೂ ಓಡಾಡುತ್ತಿದ್ದರೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಜನರನ್ನ ಭಯ ಬೀಳಿಸುವಂತಹ ಪ್ರಯತ್ನ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡುತ್ತಿದ್ದೇನೆ ಅಂದ್ರು.

    ಇದೇ ಸಂದರ್ಭದಲ್ಲಿ ಮಾತನಾಡಿದ ನಿಖಿಲ್, ಇದು ನಾವು ನಂಬಿಕೊಂಡಿರುವ ದೇವಸ್ಥಾನವಾಗಿದೆ. ಶಾರದಾಂಬೆ ಹಾಗೂ ಜಗದ್ಗುರುಗಳ ಆಶೀರ್ವಾದಕ್ಕೆ ಬಂದಿದ್ದೇವೆ. ಶ್ರೀಗಳ ಜೊತೆ ದೊಡ್ಡವರ ನಂಟು ಹಿಂದಿನಿಂದಲೂ ಇದೆ. ಗುರುಗಳು ಹಾಗೂ ತಾಯಿಯ ಆಶೀರ್ವಾದ ತಂದೆಯನ್ನ ಇಂದು ಈ ಸ್ಥಾನದಲ್ಲಿ ಕೂರಿಸಿದೆ. ಪಕ್ಷದ ವರಿಷ್ಠರು, ಕಾರ್ಯಕರ್ತರು ಹಾಗೂ ಶಾಸಕರ ಜೊತೆ ಚರ್ಚಿಸಿ ತಿರ್ಮಾನಿಸಿದ್ದಾರೆ. ಮಂಡ್ಯ ಜನರ ನಾಡಿ ಮಿಡಿತವನ್ನ ಅರ್ಥಮಾಡಿಕೊಂಡಿದ್ದೇನೆ. ಹಾಗಾಗಿ ಪಕ್ಷ ಟಿಕೆಟ್ ಕೊಡಲು ಮುಂದಾಗಿದೆ. ಮಂಡ್ಯ ಜನತೆಯ ಸೇವೆ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ: ದರ್ಶನ್

    ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ: ದರ್ಶನ್

    ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ.

    ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ‘ಯಜಮಾನ’ ಚಿತ್ರದ ಸಕ್ಸಸ್ ಪ್ರೆಸ್‍ಮೀಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದರ್ಶನ್, ಅಂಬರೀಶ್ ಅವರು ಚುನಾವಣೆಗೆ ನಿಂತಾಗಲೂ ಪ್ರಚಾರಕ್ಕೆ ಹೋಗಿದ್ದೇನೆ. ಈಗಲೂ ಹೋಗುತ್ತೀನಿ. ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

    ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸಿ, ಚುನಾವಣಾ ಪ್ರಚಾರಕ್ಕೆ ಕರೆದರೆ ನಾನು ಹೋಗುತ್ತೇನೆ. ಅಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಿದ ಸ್ನೇಹಿತರು ಯಾರೇ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ ಎಂದು ಇದೇ ವೇಳೆ ದರ್ಶನ್ ತಿಳಿಸಿದ್ದಾರೆ.

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೇರಾ ಪಾಸ್ ಮೋದಿ ಹೇ, ಯಾರೇ ಬಂದ್ರು ಕೂಡ ನಾನು ಎದುರಿಸುತ್ತೇನೆ: ಪ್ರತಾಪ್ ಸಿಂಹ

    ಮೇರಾ ಪಾಸ್ ಮೋದಿ ಹೇ, ಯಾರೇ ಬಂದ್ರು ಕೂಡ ನಾನು ಎದುರಿಸುತ್ತೇನೆ: ಪ್ರತಾಪ್ ಸಿಂಹ

    ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯಾರೇ ಎದುರಾಳಿ ಬರಲಿ. ಯಾರೇ ಬಂದರೂ ಕೂಡ ನಾನು ಅವರನ್ನು ಎದುರಿಸುತ್ತೇನೆ. ಅಲ್ಲದೇ ದೇವೇಗೌಡರನ್ನು ಎದುರಿಸಲು ನಾನು ಸಿದ್ಧವಾಗಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಸವಾಲ್ ಹಾಕಿದ್ದಾರೆ.

    ಮೈಸೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪ್ರತಾಪ್ ಸಿಂಹ ಪರೋಕ್ಷವಾಗಿ ದೇವೇಗೌಡರಿಗೆ ಸವಾಲು ಹಾಕಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೆ ನಮ್ಮ ಜನ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಕಳೆದ ಬಾರಿ ನಾನು ಗೆದ್ದಾಗ ಈ ಭಾಗದಲ್ಲಿ ಬಿಜೆಪಿಯ ಅಸ್ತಿತ್ವ ಇರಲಿಲ್ಲ. ಒಂದು ಗ್ರಾಮ ಪಂಚಾಯ್ತಿಯನ್ನು ಸಹ ನಾವು ಗೆದ್ದಿರಲಿಲ್ಲ. ಆದರೆ ಈ ಬಾರಿ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಾಲ್ವರು ಎಂಎಲ್‍ಎಗಳು ಇದ್ದಾರೆ ಎಂದರು.

    ಬಳಿಕ ಅಮಿತಾಬ್ ಬಚ್ಚನ್ ಸಿನಿಮಾ ಒಂದರಲ್ಲಿ “ಮೇರಾ ಪಾಸ್ ಮಾ ಹೇ” ಎಂದು ಹೇಳಿದ್ದಾರೆ. ಅದೇ ರೀತಿ ನಾವು ಮೇರಾ ಪಾಸ್ ಮೋದಿ ಎಂದು ಹೇಳೋಣ. ಈ ಬಾರಿ ಜನ ಮೋದಿ ಹಾಗೂ ನಮ್ಮ ಪರವಾಗಿ ಇರೋದ್ರಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಟೀಕಿಸಿದ ಬಿಜೆಪಿ ಕಾರ್ಯಕರ್ತರು

    ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಟೀಕಿಸಿದ ಬಿಜೆಪಿ ಕಾರ್ಯಕರ್ತರು

    ಮಂಡ್ಯ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್‍ನಿಂದ ಕುಟುಂಬ ರಾಜಕಾರಣ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರು ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಅಲ್ಲದೆ ದೇವೇಗೌಡರ ಕುಟುಂಬವನ್ನು ಮನಬಂದಂತೆ ಟೀಕಿಸುತ್ತಿದ್ದಾರೆ. ದೇವೇಗೌಡರ ಕುಟುಂಬದ ವಿರುದ್ಧ ಹಲವು ಪ್ರಶ್ನೆಗಳನ್ನು ಕೇಳಿ, ಲೇವಡಿ ಮಾಡಿ ಪೋಸ್ಟ್ ಗಳನ್ನು ಕೂಡ ಹಾಕುತ್ತಿದ್ದಾರೆ.

    ಕಳೆದ 25 ವರ್ಷಗಳಿಂದ ಪಕ್ಷಕ್ಕೋಸ್ಕರ ದುಡಿದು, ಬೆವರು, ರಕ್ತ ಸುರಿಸಿ ಹೋರಾಡಿದ ನನ್ನ ಜೆಡಿಎಸ್ ಅಣ್ತಮ್ಮಂದಿರ ಆತ್ಮಕ್ಕೆ ಶಾಂತಿ ಸಿಗಲಿ. ಮಂಡ್ಯ ಜಿಲ್ಲೆ ಸ್ವಾಭಿಮಾನ ಅಡವಿಟ್ಟ ನಿಮ್ಮ ಜನ್ಮಕ್ಕೆ ಧಿಕ್ಕಾರವಿರಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದು ಪೋಸ್ಟ್ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರು ಹಾಗೂ ಮಂಡ್ಯದ ಜನರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ಲೋಕಸಭಾ ಚುನಾವನೆಯಲ್ಲಿ ಆಕಸ್ಮಾತ್ ವಲಸಿಗ ಗೆದ್ದರೆ ನಿಮ್ಮನ್ನ ಮಂಡ್ಯ ಇತಿಹಾಸ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಕೆಲವರು ಬರೆದಿದ್ದರೆ, ಇನ್ನೂ ಕೆಲವರು ಸದ್ಯ ನಮ್ ಪುಣ್ಯ, ನಮ್ ಗೌಡ್ರು ಕ್ರಿಕೆಟ್ ಆಡಕ್ಕೆ ಕಲಿತು ಇಂಡಿಯಾ ಕ್ರಿಕೆಟ್ ಟೀಂ ಸೇರಿಲ್ಲ. ಇಲ್ಲಾಂದಿದ್ದರೆ ಇಷ್ಟೊತ್ತಿಗೆ ಫುಲ್ ಟೀಮ್ ಅಲ್ಲಿ ಅವರ ಕುಟುಂಬದವರೇ ಇರುತ್ತಿದ್ದರು ಎಂದು ಟೀಕಿಸಿದ್ದಾರೆ.

    ಕೆಲವರು ಮೊದಲೆಲ್ಲ ಮಂಡ್ಯ ಬಸ್ ನಿಲ್ದಾಣದಲ್ಲಿ ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರ ಎಂದು ಕೂಗುತ್ತಿದ್ದರು. ಈಗ ಜೆಡಿಎಸ್ ಅಂದಾಭಿಮಾನಿಗಳು ಮಂಡ್ಯಕ್ಕೆ ನಿಖಿಲ್, ಮದ್ದೂರು ಡಿಸಿ ತಮ್ಮಣ್ಣ, ಚೆನ್ನಪಟ್ಟಣ ಕುಮಾರಸ್ವಾಮಿ, ರಾಮನಗರ ಅನಿತಾ ಕುಮಾರಸ್ವಾಮಿ, ಬೆಂಗಳೂರು ದೇವೇಗೌಡ್ರು ಎಂದು ಕೂಗುತ್ತಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ. ಹೀಗೆ ಟೀಕೆ ಮಾಡಿದವರಲ್ಲಿ ಬಿಜೆಪಿ ಕಾರ್ಯಕರ್ತರೇ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಜೆಡಿಎಸ್‍ಗೆ ಬಿಜೆಪಿ ಟೀಕಿಸುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು ಮಂಡ್ಯದಲ್ಲಿ ತಮ್ಮ ನಿರ್ಧಾರ ಪ್ರಕಟಿಸ್ತಾರಾ ಸುಮಲತಾ..?

    ಇಂದು ಮಂಡ್ಯದಲ್ಲಿ ತಮ್ಮ ನಿರ್ಧಾರ ಪ್ರಕಟಿಸ್ತಾರಾ ಸುಮಲತಾ..?

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಶ್ ಅವರು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

    ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಲತಾ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಹೀಗಾಗಿ ಸುಮಲತಾ ಅವರು ಇಂದು ಸ್ವತಂತ್ರವಾಗಿ ಸ್ಪರ್ಧೆ ಮಾಡೋ ಬಗೆಗೆ ಅಧಿಕೃತವಾಗಿ ಪ್ರಕಟ ಮಾಡೋ ಸಾಧ್ಯತೆಗಳಿವೆ ಎಂಬುದಾಗಿ ಮೂಲಗಳು ತಿಳಿಸಿವೆ.

    ಆರಂಭದಿಂದಲೂ ಕಾಂಗ್ರೆಸ್ ಪಕ್ಷ ನನ್ನ ಆದ್ಯತೆ. ಹೀಗಾಗಿ ಟಿಕೆಟ್ ಕೇಳಿದ್ದೀನಿ ಮೊದಲು ಪಕ್ಷದ ನಿರ್ಧಾರ ಏನೆಂದು ಹೇಳಲಿ ನಂತರ ನನ್ನ ನಿರ್ಧಾರ ಏನೆಂದು ಹೇಳ್ತಿನಿ ಎಂದು ಸುಮಲತಾ ಹೇಳಿದ್ದರು. ಆದ್ರೆ ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಜೆಡಿಎಸ್ ಗೆ ಬಿಟ್ಟುಕೊಡಬೇಕಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಸುಮಲತಾ ಅವರಿಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಸ್ವತಂತ್ರವಾಗಿ ನಿಲ್ಲೋದು ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದರು. ಇದನ್ನೂ ಓದಿ: ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?

    ಹೀಗಾಗಿ ಇಂದು ಮಂಡ್ಯ ತಾಲೂಕಿನ ಶ್ರೀರಂಗಪಟ್ಟಣ ವಿಧಾನಸಭೆಗೆ ಸೇರಿರುವ ವಿವಿಧ ಹಳ್ಳಿಗಳಲ್ಲಿ ಸುಮಲತಾ ಅವರು ಪ್ರವಾಸ ನಡೆಸಲಿದ್ದಾರೆ. ಈ ವೇಳೆ ಸ್ವತಂತ್ರವಾಗಿ ಸ್ಪರ್ಧೆ ಮಾಡೋ ಬಗೆಗೆ ಅಧಿಕೃತವಾಗಿ ಪ್ರಕಟ ಮಾಡೋ ಸಾಧ್ಯತೆಗಳಿವೆ. ಈಗಾಗಲೇ ಸಮಲತಾ ಅವರು ಹಲವು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುವ ನೆಪದಲ್ಲಿ ಕಾಂಗ್ರೆಸ್ ಮುಖಂಡರ ಅಭಿಪ್ರಾಯ ಪಡೆದಿದ್ದರು. ಈ ನಡುವೆ ಸುಮಲತಾಗೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಬೆಂಬಲ ಸಿಗುತ್ತಾ ಎನ್ನುವ ಚರ್ಚೆ ಕೂಡ ಎದ್ದಿದೆ.

    ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವುದಕ್ಕೆ ಕೆಲವು ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಚುನಾವಣೆಯಲ್ಲಿ ಸುಮಲತಾರನ್ನ ಎಷ್ಟರ ಮಟ್ಟಿಗೆ ಬೆಂಬಲಿಸುತ್ತಾರೆ ಅನ್ನೋದು ಮಾತ್ರ ನಿಗೂಢವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಕ್ಷ್ಮಿ ಅಶ್ವಿನ್ ಗೌಡರಿಗಿಂತ ನಿಖಿಲ್ ಅರ್ಹ ಅಭ್ಯರ್ಥಿ – ಸಚಿವ ಡಿ.ಸಿ ತಮ್ಮಣ್ಣ

    ಲಕ್ಷ್ಮಿ ಅಶ್ವಿನ್ ಗೌಡರಿಗಿಂತ ನಿಖಿಲ್ ಅರ್ಹ ಅಭ್ಯರ್ಥಿ – ಸಚಿವ ಡಿ.ಸಿ ತಮ್ಮಣ್ಣ

    ಬೆಂಗಳೂರು: ಮಂಡ್ಯಕ್ಕೆ ಹಾಲಿ ಸಂಸದ ಶಿವರಾಮೇಗೌಡ, ಟಿಕೆಟ್ ಆಕಾಂಕ್ಷಿ ಲಕ್ಷ್ಮಿ ಅಶ್ವಿನ್ ಗೌಡರಿಗಿಂತ ನಿಖಿಲ್ ಅರ್ಹ ಅಭ್ಯರ್ಥಿ. ನಮ್ಮ ಮನೆಯವರು ನಿಂತುಕೊಳ್ಳೋದು ತಪ್ಪಲ್ಲ ಅಂತ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ನಿಖಿಲ್ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ.

    ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ನಿಖಿಲ್ ಅಭ್ಯರ್ಥಿ ಎಂದು ದೇವೇಗೌಡರೇ ಘೋಷಣೆ ಮಾಡಿದ್ದಾರೆ. ಸೂಕ್ತ ಅಭ್ಯರ್ಥಿ ಇದ್ದರೆ ಕುಟುಂಬದಲ್ಲೇ ಯಾಕೆ ಟಿಕೆಟ್ ಕೊಡಬಾರದು ಎಂದು ಪ್ರಶ್ನಿಸಿದ ಅವರು, ನಮ್ಮ ರಾಜ್ಯದಲ್ಲಿ ಬೇರೆ ಅವರನ್ನು ಕರೆದುಕೊಂಡು ಬಂದು ಗೆಲ್ಲಿಸಿಲ್ವಾ, ಸುಷ್ಮಾ ಸ್ವರಾಜ್, ಸೋನಿಯಾ ಗಾಂಧಿ ಹೀಗೆ ಬೇರೆ ರಾಜ್ಯದವರನ್ನ ಗೆಲ್ಲಿಸಿಲ್ವಾ ಅಂತ ಪ್ರಶ್ನೆ ಮಾಡಿದ್ರು.

    ಹಾಲಿ ಸಂಸದ ಶಿವರಾಮೇಗೌಡ, ಆಶ್ವಿನಿಗೌಡ ಗಿಂತ ನಿಖಿಲ್ ಅವರೇ ಅರ್ಹ ಅಭ್ಯರ್ಥಿ. ನಿಖಿಲ್ ನಿಲ್ಲೋದು ತಪ್ಪಲ್ಲ. ಹಾಸನ, ಮಂಡ್ಯ, ಮೈಸೂರು ನಮ್ಮ ಮನೆ ಇದ್ದ ಹಾಗೆ. ನಮ್ಮ ಮನೆಯಲ್ಲಿ ನಾವು ಅಭ್ಯರ್ಥಿ ಹಾಕಿಕೊಳ್ತೀವಿ. ಉತ್ತರ ಕರ್ನಾಟಕಕ್ಕೆ ನಾವು ಹೋದ್ರೆ ಪ್ರಶ್ನೆ ಮಾಡಬೇಕು. ನಮ್ಮ ಮನೆಯಲ್ಲಿ ನಿಂತ್ರೆ ಏನು ಸಮಸ್ಯೆ ಅಂತ ನಿಖಿಲ್ ಸ್ಪರ್ಧೆಯನ್ನ ಸಮರ್ಥನೆ ಮಾಡಿಕೊಂಡರು

    ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದ್ರೂ ಸ್ಪರ್ಧೆ ಮಾಡಬಹುದು. ಅರ್ಹತೆ ಇರೋರು ಸ್ಪರ್ಧೆ ಮಾಡಬಹುದು. ಬೇಡ ಅನ್ನೋಕೆ ಆಗುತ್ತಾ ಎಂದು ಪ್ರಶ್ನಿಸಿ ಸುಮಲತಾಗೆ ಟಾಂಗ್ ಕೊಟ್ರು.

    ನಮ್ಮದು ಆರಂಭದಿಂದಲೂ ಕುಟುಂಬ ರಾಜಕಾರಣ ಇದೆ. ಅನೇಕರು ವಿರೋಧ ಮಾಡ್ತಾನೆ ಇದ್ದಾರೆ. ಇಷ್ಟೆಲ್ಲ ಆದ್ರೂ ನಾವು ಗೆದ್ದು ಬರುತ್ತಿಲ್ವಾ ಎಂದು ಕುಟುಂಬ ರಾಜಕಾರಣವನ್ನು ಸಮರ್ಥನೆ ಮಾಡಿಕೊಂಡ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿಖಿಲ್‍ಗಾಗಿ ಒಂದು ಕಾಲು ರೂ. ಹರಕೆ ಹೊತ್ತ ಅನಿತಾ ಕುಮಾರಸ್ವಾಮಿ

    ನಿಖಿಲ್‍ಗಾಗಿ ಒಂದು ಕಾಲು ರೂ. ಹರಕೆ ಹೊತ್ತ ಅನಿತಾ ಕುಮಾರಸ್ವಾಮಿ

    ಮಂಡ್ಯ: ಲೋಕಸಭೆ ಚುನಾವಣೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಸಿಕ್ಕಿ ಆತ ಎಲೆಕ್ಷನ್‍ನಲ್ಲಿ ಗೆಲವು ಸಾಧಿಸಲಿ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಒಂದೂ ಕಾಲು ರೂ. ಹರಕೆ ಕಟ್ಟಿಕೊಂಡಿದ್ದಾರೆ.

    ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರವಲಯದಲ್ಲಿರುವ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಅನಿತಾ ಕುಮಾರಸ್ವಾಮಿ ಅವರು ಹರಕೆ ಹೊತ್ತು ಪೂಜೆ ಸಲ್ಲಿಸಲಿದ್ದಾರೆ. ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಎನ್ನುವ ನಂಬಿಕೆಯಿದೆ.

    ಅನಿತಾ ಕುಮಾರಸ್ವಾಮಿ ಪೂಜೆಯ ನಂತರ ನಿಖಿಲ್‍ಗೆ ಎಲ್ಲಾ ರೀತಿಯಲ್ಲೂ ಒಳಿತಾಗಲಿ ಎಂದು ಹರಕೆ ಹೊತ್ತು ಪೂಜೆ ಸಲ್ಲಿಸುತ್ತಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ದೇವಾಲಯಕ್ಕೆ ಒಟ್ಟು ಐದು ಮಂಗಳವಾರ ಸತತವಾಗಿ ಬಂದು ಪೂಜೆ ಸಲ್ಲಿಸಲಿದ್ದಾರೆ.

    ಕಳೆದ ಮಂಗಳವಾರವೂ ಕೂಡ ಅನಿತಾ ಅವರು ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಬಂದು ಒಂದು ಕಾಲು ರೂ. ಹರಕೆ ಸಮರ್ಪಿಸಿ ಪೂಜೆ ಸಲ್ಲಿಸಿದ್ದರು. ಇಂದು ಎರಡನೇ ಬಾರಿಗೆ ಪೂಜೆ ಸಲ್ಲಿಸಲಿದ್ದಾರೆ. ಇನ್ನೂ ಮೂರು ಮಂಗಳವಾರ ಅನಿತಾ ಕುಮಾರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸಿಕ್ತು ಹೊಸ ಬಾಡಿಗೆ ಮನೆ!

    ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸಿಕ್ತು ಹೊಸ ಬಾಡಿಗೆ ಮನೆ!

    ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸಂಭಾವ್ಯ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಮಂಡ್ಯದಲ್ಲೇ ಮನೆ ಮಾಡಲು ಯೋಚಿಸಿರುವ ಅವರು, ಜಿಲ್ಲೆಯ ಮರೀಗೌಡ ಬಡಾವನೆಯಲ್ಲಿ ಬಂಗಲೆಯೊಂದನ್ನು ಬಾಡಿಗೆಗೆ ಪಡೆಯಲು ನಿರ್ಧರಿಸಿದ್ದಾರೆ.

    ಮಂಡ್ಯ ಕ್ಷೇತ್ರದಿಂದ ನಿಖಿಲ್ ಅವರೇ ಜೆಡಿಎಸ್‍ನಿಂದ ಚುನಾವಣಾ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಆದರಿಂದ ಜಿಲ್ಲೆಯ ಪ್ರತಿಷ್ಠಿತ ಬಡಾವಣೆಗಳಾದ ಬಂದೀಗೌಡ ಬಡಾವಣೆ, ಚಾಮುಂಡೇಶ್ವರಿ ನಗರ, ಮರೀಗೌಡ ಬಡಾವಣೆ ಹಾಗೂ ಅಶೋಕ ನಗರದಲ್ಲಿ ನಿಖಿಲ್ ಮನೆ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಮರೀಗೌಡ ಬಡಾವಣೆಯಲ್ಲಿ ಪ್ರತಿಷ್ಠಿತ ಬಂಗಲೆಯೊಂದು ಬಾಡಿಗೆಗೆ ಪಡೆಯಲು ನಿಖಿಲ್ ನಿರ್ಧರಿಸಿದ್ದಾರೆ. ಮಂಡ್ಯ ನಗರಸಭೆ ಮಾಜಿ ಉಪಾಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಚಿಕ್ಕಣ್ಣ ಎಂಬುವವರಿಗೆ ಸೇರಿದ ಮನೆಯನ್ನು ಸದ್ಯಕ್ಕೆ ಬಾಡಿಗೆ ಪಡೆಯಲು ನಿಖಿಲ್ ಚಿಂತಿಸಿದ್ದಾರೆ. ಇದನ್ನೂ ಓದಿ:ಅಂಬಿ ಅದೃಷ್ಟದ ಮನೆಗೆ ಶೀಘ್ರವೇ ಸುಮಲತಾ ಶಿಫ್ಟ್!

    ನಾಲ್ಕು ಬೆಡ್ ರೂಂ, ವಿಶಾಲವಾದ ದೇವರಮನೆ ಹಾಗೂ ವಾಸ್ತು ಪ್ರಕಾರ ಮನೆ ನಿರ್ಮಾಣವಾಗಿದ್ದು, ನಿಖಿಲ್ ರಾಜಕೀಯ ಚುಟುವಟಿಕೆಗೆ ಅನುಕೂಲವಾಗಲೆಂದು ಮನೆ ಬಾಡಿಗೆ ಪಡೆಯಲು ನಿರ್ಧರಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸ್ವಂತ ಮನೆ ಕಟ್ಟಲು ಕೂಡ ನಿಖಿಲ್ ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರಕಿದೆ. ಇದನ್ನೂ ಓದಿ:ಮಂಡ್ಯದಿಂದ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

    ಐದು ಎಕರೆ ಜಮೀನು ಖರೀದಿಸಿ ಅಲ್ಲಿಯೂ ತೋಟ, ಮನೆ ನಿರ್ಮಿಸಲು ಈಗಾಗಲೇ ನಿಖಿಲ್ ಪ್ಲಾನ್ ಮಾಡಿದ್ದಾರೆ. ರಾಜಕೀಯ, ಸಿನಿಮಾ ಜೊತೆಗೆ ಕೃಷಿಯಲ್ಲೂ ತೊಡಗಿಸಿಕೊಳ್ಳಲು ನಿಖಿಲ್ ಚಿಂತನೆ ನಡೆಸಿದ್ದಾರೆ. ಮಂಡ್ಯದಲ್ಲಿ ಸ್ವಂತ ಜಮೀನು, ಮನೆ ಮಾಡದಿದ್ದರೆ ಚುನಾವಣೆ ನಂತರ ನಿಖಿಲ್ ಮಂಡ್ಯಕ್ಕೆ ಬರಲ್ಲ ಎಂಬ ತಪ್ಪು ಸಂದೇಶ ರವಾನೆಯಾಗುತ್ತದೆ. ಇದು ಮತಗಳಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ. ಹೀಗಾಗಿ ಸ್ವಂತ ಕೃಷಿ ಜಮೀನು, ಮನೆ ನಿರ್ಮಿಸಿ ಮಂಡ್ಯ ಜನರನ್ನು ಭಾವನಾತ್ಮಕವಾಗಿ ಸೆಳೆಯಲು ನಿಖಿಲ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

    ನಿಖಿಲ್‍ಗೆ ಎದುರಾಳಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗಿದ್ದು, ಈಗಾಗಲೇ ಸುಮಲತಾ ಅವರು ಕೂಡ ಮಂಡ್ಯದ ಮಂಜುನಾಥ ನಗರದಲ್ಲಿರುವ ಸೈಟ್‍ನಲ್ಲಿ ಸ್ವಂತ ಮನೆ ಕಟ್ಟುವುದಾಗಿ ತಿಳಿಸಿದ್ದಾರೆ. ಇದರಿಂದ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ದಿನದಿಂದ ದಿನಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರ ರಂಗೇರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv